Tag: Rinku Singh

  • ಅದ್ಧೂರಿ ನಿಶ್ಚಿತಾರ್ಥ – ರಿಂಕುಗೆ ರಿಂಗು ಹಾಕಿದ ಸಂಸದೆ ಪ್ರಿಯಾ ಸರೋಜ್

    ಅದ್ಧೂರಿ ನಿಶ್ಚಿತಾರ್ಥ – ರಿಂಕುಗೆ ರಿಂಗು ಹಾಕಿದ ಸಂಸದೆ ಪ್ರಿಯಾ ಸರೋಜ್

    ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್‌ (Rinku Singh) ಅವರಿಂದು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜಾ (Priya Saroj) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಿನ್ನ ಕ್ಷೇತ್ರದ ಜನಪ್ರಿಯ ವ್ಯಕ್ತಿಗಳು, ಮದುವೆ ಎಂಬ ಪವಿತ್ರ ಬಂಧನದಲ್ಲಿ ಒಂದಾಗುತ್ತಿರುವುದು ವಿಶೇಷ.

    ಲಕ್ನೋದಲ್ಲಿ (Lucknow) ನಡೆದ ಅದ್ಧೂರಿ ಸಮಾರಂಭದಲ್ಲಿ ರಿಂಕು ಸಿಂಗ್, ಮಚ್ಲಿಶಹರ್ ಕ್ಷೇತ್ರ ಪ್ರತಿನಿಧಿಸುವ ಕಿರಿಯ ಸಂಸದರಲ್ಲಿ ಒಬ್ಬರಾದ ಪ್ರಿಯಾ ಸರೋಜ್‌ ಅವರೊಂದಿಗೆ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದು, ಸೋಷಿಯಲ್‌ ಮೀಡಿಯಾದಲ್ಲೂ ಫೋಟೋಗಳು ಹರಿದಾಡುತ್ತಿವೆ. ಅದ್ಧೂರಿ ಸಮಾರಂಭದಲ್ಲಿ ಕುಟುಂಬಸ್ಥರು ಮಾತ್ರವಲ್ಲದೇ ಖ್ಯಾತ ಕ್ರಿಕೆಟ್‌ ತಾರೆಯರು, ಕೆಕೆಆರ್‌ ಫ್ರಾಂಚೈಸಿಯ ಸಹ ಆಟಗಾರರು ಹಾಗೂ ಹಿರಿಯ ರಾಜಕೀಯ ನಾಯಕರೂ ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್‌ ಕೊಹ್ಲಿಗೆ ಕನ್ನಡದ ಬಾವುಟ ನೀಡಿದ ಡಿಕೆಶಿ – ಧ್ವಜ ಹಾರಿಸಿ ಸಂಭ್ರಮಿಸಿದ ವಿರಾಟ್‌

    ಇತ್ತೀಚೆಗಷ್ಟೇ ಪ್ರಿಯಾ ಅವರ ತಂದೆ ಇಬ್ಬರ ಸಂಬಂಧದ ಕುರಿತು ಸ್ಪಷ್ಟನೆ ನೀಡಿದ್ದರು. ಸಮಾಜವಾದಿ ಪಕ್ಷದ ಹಾಲಿ ಶಾಸಕರೂ ಆಗಿರುವ ತುಫಾನಿ, ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಇಬ್ಬರೂ ತಮ್ಮ ಮದುವೆಗಾಗಿ ಅನುಮತಿ ಕೋರಿದ್ದಾರೆ ಎಂದು ತಿಳಿಸಿದ್ದರು. ಆ ಬಳಿಕ ಇಬ್ಬರು ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎನ್ನುವ ಬಗ್ಗೆ ಸೋಷಿಯಲ್‌ ಮೀಡಿಯಾಗಳಲ್ಲೂ ಚರ್ಚೆಗಳು ನಡೆದಿತ್ತು. ಇದೀಗ ಅಧಿಕೃತವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ವದಂತಿಗಳಿಗೆ ತೆರೆ ಎಳೆದಿದ್ದಾರೆ.

    ಪ್ರಿಯಾ ಸರೋಜ್ ಯಾರು?
    ಉತ್ತರ ಪ್ರದೇಶದ ವಾರಣಾಸಿಯ ಕಾರ್ಖಿಯಾನ್ ಗ್ರಾಮದ ಪ್ರಿಯಾ ಸರೋಜ್, 2024ರಲ್ಲಿ ಮಚ್ಲಿಶಹರ್‌ನ ಸಂಸದೆಯಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶಿಸಿದರು. ಬಿಜೆಪಿಯ ಅನುಭವಿ ಬಿಪಿ ಸರೋಜ್ ಅವರನ್ನು 35,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದ ಪ್ರಿಯಾ, ದೇಶದ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದನ್ನೂ ಓದಿ: UnSold ಪ್ಲೇಯರ್‌, ಟೂರ್ನಿ ಅರ್ಧದಲ್ಲೇ ಸೇರ್ಪಡೆ, ಸ್ಫೋಟಕ ಶತಕ ಸಿಡಿಸಿ ದಾಖಲೆ – ಈಗ ಆರ್‌ಸಿಬಿಯ ಯಶಸ್ವಿ ನಾಯಕ 

    ಪ್ರಿಯಾ ರಾಜಕೀಯ ಕುಟುಂಬದ ಹಿನ್ನಲೆ ಹೊಂದಿದ್ದರೂ, ತಮ್ಮ ಕಾನೂನು ವೃತ್ತಿ ಮುಂದುವರಿಸಿದ್ದರು. ನವದೆಹಲಿಯ ವಾಯುಪಡೆಯ ಸುವರ್ಣ ಮಹೋತ್ಸವ ಸಂಸ್ಥೆಯಲ್ಲಿ ತಮ್ಮ ಶಿಕ್ಷಣ ಪೂರ್ಣಗೊಳಿಸಿದ ಪ್ರಿಯಾ ಸರೋಜ್‌, ನೋಯ್ಡಾದ ಅಮಿಟಿ ವಿಶ್ವವಿದ್ಯಾಲಯದಿಂದ ಎಲ್‌ಎಲ್‌ಬಿ ಪದವಿಯನ್ನು ಪಡೆದುಕೊಂಡಿದ್ದಾರೆ. ಕಾನೂನು ಪದವಿಯ ನಂತರ, ಸರೋಜ್ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. ಆರಂಭದಲ್ಲಿ ರಾಜಕೀಯವು ಅವರ ವೃತ್ತಿಜೀವನದ ಯೋಜನೆಗಳ ಭಾಗವಾಗಿರಲಿಲ್ಲ. ಪ್ರಿಯಾ ಅವರ ತಂದೆ ತುಫಾನಿ ಸರೋಜ್ ಮೂರು ಬಾರಿ ಸಂಸದರಾಗಿದ್ದು, ಪ್ರಸ್ತುತ ಉತ್ತರ ಪ್ರದೇಶದ ಕೆರಕತ್‌ನಿಂದ ಶಾಸಕರಾಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಿಯಾ ಸರೋಜ್ ರಾಜಕೀಯ ಪ್ರವೇಶದ ಮೂಲಕ ತಮ್ಮ ತಂದೆಯ ರಾಜಕೀಯ ಪರಂಪರೆಯನ್ನ ಮುಂದುವರಿಸಿದ್ದಾರೆ. ‌

    ರಿಂಕು ಬಗ್ಗೆ ಹೇಳೋದಾದ್ರೆ…
    ಪ್ರಿಯಾ ಸರೋಜ್‌ ಅವರ ಭಾವಿ ಪತಿಯಾಗಲಿರುವ ರಿಂಕು ಸಿಂಗ್, ಉತ್ತರ ಪ್ರದೇಶದ ಅಲಿಗಢದವರು. ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್‌ (ಕೆಕೆಆರ್‌)ನ ಪ್ರಮುಖ ಆಟಗಾರನಾಗಿ ಹಾಗೂ ಟೀಂ ಇಂಡಿಯಾದ ಟಿ20 ತಂಡದಲ್ಲೂ ರಿಂಕು ಸಿಂಗ್‌ ಪ್ರಾಮುಖ್ಯತೆ ಪಡೆದುಕೊಂಡಿದ್ದಾರೆ. 2023ರಲ್ಲಿ ಐಪಿಎಲ್ ಪಂದ್ಯದ ಕೊನೆಯ ಓವರ್‌ನಲ್ಲಿ, ಸತತ 5 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ರಿಂಕು ಸಿಂಗ್ ಜನಪ್ರಿಯತೆ ಪಡೆದುಕೊಂಡಿದ್ದರು. ಇದನ್ನೂ ಓದಿ: IPL Champions | ಚುಟುಕು ಕದನದಲ್ಲಿ ಈವರೆಗೆ ಚಾಂಪಿಯನ್ಸ್‌ ಪಟ್ಟ ಗೆದ್ದವರ ಕಂಪ್ಲೀಟ್‌ ಲಿಸ್ಟ್‌ ಇಲ್ಲಿದೆ…

    ಇನ್ನೂ ಟೀ ಇಂಡಿಯಾ ಪರ 30 ಟಿ20ಐ ಪಂದ್ಯಗಳು ಮತ್ತು 22 ಇನ್ನಿಂಗ್ಸ್‌ಗಳಲ್ಲಿ ರಿಂಕು 507 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳಿವೆ. ಅವರು ಇನ್ನೂ ತಮ್ಮ ಚೊಚ್ಚಲ ಟಿ20ಐ ಶತಕವನ್ನು ಬಾರಿಸಿಲ್ಲ. 27 ವರ್ಷದ ಅವರು 2023 ರಲ್ಲಿ ಐರ್ಲೆಂಡ್ ವಿರುದ್ಧ ಟಿ20ಐಗೆ ಪಾದಾರ್ಪಣೆ ಮಾಡಿದರು. ರಿಂಕು ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಲಿಸ್ಟ್-ಎ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 52 ಇನ್ನಿಂಗ್ಸ್‌ಗಳಲ್ಲಿ 1,899 ರನ್ ಗಳಿಸಿದ್ದಾರೆ.

  • ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

    ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

    ಮುಂಬೈ: ಭಾರತೀಯ ಕ್ರಿಕೆಟಿಗ ರಿಂಕು ಸಿಂಗ್‌ (Rinku Singh) ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜಾ (Priya Saroj) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳಲು ಸಜ್ಜಾಗಿದ್ದಾರೆ.

    ಕೋಲ್ಕತ್ತಾ ನೈಟ್ ರೈಡರ್ಸ್ (KKR) ಜೊತೆಗಿನ ರಿಂಕು ಅವರ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2025 ಅಭಿಯಾನ ಈಗಾಗಲೇ ಮುಗಿದಿದೆ. ಬ್ಯಾಟ್ಸ್‌ಮನ್ ತಮ್ಮ ವೈಯಕ್ತಿಕ ಜೀವನದ ಕೆಲವು ಪ್ರಮುಖ ಬೆಳವಣಿಗೆಗಳತ್ತ ಗಮನ ಹರಿಸಿದ್ದಾರೆ. ಇದನ್ನೂ ಓದಿ: ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

     

    View this post on Instagram

     

    A post shared by PRIYA SAROJ (@ipriyasarojmp)

    ಜೂನ್ 8 ರಂದು ಲಕ್ನೋದ ಹೋಟೆಲ್‌ನಲ್ಲಿ ರಿಂಕು ಮತ್ತು ಸಂಸದೆ ಪ್ರಿಯಾ ನಿಶ್ಚಿತಾರ್ಥ ಆಗಲಿದ್ದಾರೆ ಎಂದು ತಿಳಿದುಬಂದಿದೆ. ರಿಂಕು ಮತ್ತು ಪ್ರಿಯಾ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದವು. ಆಗಲೇ ಅವರು ಪರಸ್ಪರ ಮದುವೆಯಾಗಲು ಬಯಸುತ್ತಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಅಧಿಕೃತ ನಿಶ್ಚಿತಾರ್ಥ ಸಮಾರಂಭವು ಈ ತಿಂಗಳು ನಡೆಯಲಿದೆ ಎಂದು ಈಗ ತಿಳಿದುಬಂದಿದೆ.

    ಕೆಲವು ತಿಂಗಳ ಹಿಂದೆ ಪ್ರಿಯಾಳ ತಂದೆ ತುಫಾನಿ ಸರೋಜ್ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಸಮಾಜವಾದಿ ಪಕ್ಷದ ಹಾಲಿ ಶಾಸಕರೂ ಆಗಿರುವ ತುಫಾನಿ, ರಿಂಕು ಸಿಂಗ್ ಮತ್ತು ಪ್ರಿಯಾ ಸರೋಜ್ ಇಬ್ಬರೂ ಮದುವೆಯಾಗಲು ನಮ್ಮ ಅನುಮತಿ ಕೋರಿದರು. ನಿಶ್ಚಿತಾರ್ಥ ಇನ್ನೂ ನಡೆದಿಲ್ಲ. ಆರಂಭಿಕ ಮಾತುಕತೆಗಳು ಮಾತ್ರ ನಡೆದಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    2025ರ ಐಪಿಎಲ್‌ನಲ್ಲಿ ಕೆಕೆಆರ್‌ ತಂಡದ ರಿಂಕು ಸಿಂಗ್‌ ಅಷ್ಟಾಗಿ ಗಮನ ಸೆಳೆಯಲಿಲ್ಲ. 29.42 ರ ಸರಾಸರಿಯಲ್ಲಿ 206 ರನ್ ಗಳಿಸಿದ್ದಾರೆ. 153.73 ರ ಸ್ಟ್ರೈಕ್-ರೇಟ್ ಹೊಂದಿದ್ದಾರೆ.

    ಭಾರತದ ಟಿ20ಐ ತಂಡದ ಪ್ರಮುಖ ಆಟಗಾರನಾಗಿ ರಿಂಕು ಹೊರಹೊಮ್ಮಿದ್ದಾರೆ. 30 ಟಿ20ಐ ಪಂದ್ಯಗಳು ಮತ್ತು 22 ಇನ್ನಿಂಗ್ಸ್‌ಗಳಲ್ಲಿ ರಿಂಕು 507 ರನ್ ಗಳಿಸಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳಿವೆ. ಅವರು ಇನ್ನೂ ತಮ್ಮ ಚೊಚ್ಚಲ ಟಿ20ಐ ಶತಕವನ್ನು ಬಾರಿಸಿಲ್ಲ. 27 ವರ್ಷದ ಅವರು 2023 ರಲ್ಲಿ ಐರ್ಲೆಂಡ್ ವಿರುದ್ಧ ಟಿ20ಐಗೆ ಪಾದಾರ್ಪಣೆ ಮಾಡಿದರು. ರಿಂಕು ಭಾರತ ಪರ ಎರಡು ಏಕದಿನ ಪಂದ್ಯಗಳಲ್ಲಿ ಆಡಿದ್ದಾರೆ. ಲಿಸ್ಟ್-ಎ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 52 ಇನ್ನಿಂಗ್ಸ್‌ಗಳಲ್ಲಿ 1,899 ರನ್ ಗಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

  • ರನ್‌ ಹೊಳೆ ಹರಿಸಿ ಈಡನ್‌ ಗಾರ್ಡನ್‌ನಲ್ಲಿ ದಾಖಲೆ ಬರೆದ ಲಕ್ನೋ

    ರನ್‌ ಹೊಳೆ ಹರಿಸಿ ಈಡನ್‌ ಗಾರ್ಡನ್‌ನಲ್ಲಿ ದಾಖಲೆ ಬರೆದ ಲಕ್ನೋ

    ಕೋಲ್ಕತ್ತಾ: ಈಡನ್‌ ಗಾರ್ಡನ್‌ ಮೈದಾನದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ವಿರುದ್ಧ 4 ರನ್‌ಗಳ ಗೆಲುವು ಸಾಧಿಸಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) ತಂಡ ಹೊಸ ದಾಖಲೆಯೊಂದನ್ನು ಸೃಷ್ಟಿಸಿದೆ.

    ಐಪಿಎಲ್‌ (IPL 2025) ಇತಿಹಾಸದಲ್ಲಿ ಈಡನ್‌ ಗಾರ್ಡನ್‌ ಮೈದಾನದಲ್ಲಿ ಅತಿಹೆಚ್ಚು ರನ್‌ ಗಳಿಸಿದ 3ನೇ ತಂಡ ಎಂಬ ವಿಶೇಷ ಸಾಧನೆಗೆ ಪಾತ್ರವಾಗಿದೆ. 2024ರ ಆವೃತ್ತಿಯಲ್ಲಿ‌ ಒಂದೇ ಇನ್ನಿಂಗ್ಸ್‌ನಲ್ಲಿ 262 ರನ್‌ ಗಳಿಸಿದ ಪಂಬಾಜ್‌ ಕಿಂಗ್ಸ್‌ (PBKS) ತಂಡ ಮೊದಲ ಅಗ್ರ ಸ್ಥಾನದಲ್ಲಿದೆ.

    ಈಡನ್‌ ಗಾರ್ಡನ್‌ನಲ್ಲಿ ಅತಿಹೆಚ್ಚು ರನ್‌ ಸಿಸಿಡಿದ ಟಾಪ್‌-5 ತಂಡಗಳು
    ಪಂಜಾಬ್‌ ಕಿಂಗ್ಸ್‌ 262ಕ್ಕೆ 2 – ಕೆಕೆಆರ್‌ ವಿರುದ್ಧ – 2024
    ಕೆಕೆಆರ್‌ – 261ಕ್ಕೆ 6 – ಪಂಬಾಬ್‌ ವಿರುದ್ಧ – 2024
    ಎಲ್‌ಎಸ್‌ಜಿ – 238ಕ್ಕೆ 3 – ಕೆಕೆಆರ್‌ ವಿರುದ್ಧ – 2025
    ಸಿಎಸ್‌ಕೆ – 235ಕ್ಕೆ 4 – ಕೆಕೆಆರ್‌ ವಿರುದ್ಧ – 2023
    ಕೆಕೆಆರ್‌ – 234ಕ್ಕೆ 7 – ಲಕ್ನೂ ವಿರುದ್ಧ – 2025

    ಸಿಕ್ಸರ್‌-ಬೌಂಡರಿ ಸುರಿಮಳೆ
    ಸಿಕ್ಸರ್‌ ಬೌಂಡರಿಗಳ ಈ ಭರ್ಜರಿ ಆಟದಲ್ಲಿ ಉಭಯ ತಂಡಗಳಿಂದ ಒಟ್ಟು 25 ಸಿಕ್ಸರ್‌, 45 ಬೌಂಡರಿಗಳು ಸಿಡಿದವು. ಲಕ್ನೋ ಪರ 15 ಸಿಕ್ಸರ್‌, 18 ಬೌಂಡರಿ, ಕೆಕೆಆರ್‌ ಪರ 10 ಸಿಕ್ಸರ್‌, 27 ಬೌಂಡರಿ ದಾಖಲಾಯಿತು.

    ಕೊನೇ ಓವರ್‌ನಲ್ಲಿ ಸೋತ ಕೆಕೆಆರ್‌
    ಕೊನೆಯ ಓವರ್‌ನಲ್ಲಿ ಕೆಕೆಆರ್‌ ಗೆಲುವಿಗೆ 24 ರನ್‌ಗಳ ಅಗತ್ಯವಿತ್ತು. ರವಿ ಬಿಷ್ಣೋಯ್‌ ಬೌಲಿಂಗ್‌ನಲ್ಲಿದ್ದರೆ, ಹರ್ಷಿತ್‌ ರಾಣಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತವನ್ನೇ ರಾಣ ಬೌಂಡರಿ ಚಚ್ಚಿದರು, ಆದ್ರೆ 2ನೇ ಎಸೆತದಲ್ಲಿ ರನ್‌ ಕದಿಯುಲ್ಲಿ ವಿಫಲರಾದ ರಾಣಾ 3ನೇ ಎಸೆತದಲ್ಲಿ 1ರನ್‌ ಕದ್ದರು. ಮುಂದಿನ ಮೂರು ಎಸೆತಗಳಲ್ಲಿ ರಿಂಕು ಸಿಂಗ್‌ ಕ್ರಮವಾಗಿ 4, 4, 6 ಬಾರಿಸಿದರು. ಆದಾಗ್ಯೂ ಕೆಕೆಆರ್‌ 4 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಯಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ ಪೇರಿಸಿತು. 239 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 234 ರನ್‌ ಗಳಿಸಿ 4 ರನ್‌ಗಳಿಂದ ವಿರೋಚಿತ ಸೋಲು ಕಂಡಿತು.

  • ಕೊನೆಯಲ್ಲಿ ರಿಂಕು, ರಾಣಾ ಹೋರಾಟ ವ್ಯರ್ಥ – ಲಕ್ನೋಗೆ 4 ರನ್‌ ರೋಚಕ ಜಯ, ಕೆಕೆಆರ್‌ಗೆ ವಿರೋಚಿತ ಸೋಲು

    ಕೊನೆಯಲ್ಲಿ ರಿಂಕು, ರಾಣಾ ಹೋರಾಟ ವ್ಯರ್ಥ – ಲಕ್ನೋಗೆ 4 ರನ್‌ ರೋಚಕ ಜಯ, ಕೆಕೆಆರ್‌ಗೆ ವಿರೋಚಿತ ಸೋಲು

    ಕೋಲ್ಕತ್ತಾ: ಕೊನೆಯ ಓವರ್‌ನಲ್ಲಿ ರಿಂಕು ಸಿಂಗ್‌ (Rinku Singh), ಹರ್ಷಿತ್‌ ರಾಣಾ ಸಿಕ್ಸರ್‌ ಬೌಂಡರಿಗಳ ಹೊಡಿ ಬಡಿ ಆಟದ ಹೊರತಾಗಿಯೂ‌ ಕೋಲ್ಕತ್ತಾ ನೈಟ್‌ರೈಡರ್ಸ್‌ (KKR) ತಂಡವು ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ವಿರುದ್ಧ 4 ರನ್‌ಗಳಿಂದ ವಿರೋಚಿತ ಸೋಲು ಕಂಡಿದೆ.

    ಕೊನೇ ಓವರ್‌ ಥ್ರಿಲ್ಲರ್‌
    ಕೊನೆಯ ಓವರ್‌ನಲ್ಲಿ ಕೆಕೆಆರ್‌ ಗೆಲುವಿಗೆ 24 ರನ್‌ಗಳ ಅಗತ್ಯವಿತ್ತು. ರವಿ ಬಿಷ್ಣೋಯಿ (Ravi Bishnoi) ಬೌಲಿಂಗ್‌ನಲ್ಲಿದ್ದರೆ, ಹರ್ಷಿತ್‌ ರಾಣಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತವನ್ನೇ ರಾಣ ಬೌಂಡರಿ ಚಚ್ಚಿದರು, ಆದ್ರೆ 2ನೇ ಎಸೆತದಲ್ಲಿ ರನ್‌ ಕದಿಯುವಲ್ಲಿ ವಿಫಲರಾದ ರಾಣಾ 3ನೇ ಎಸೆತದಲ್ಲಿ 1 ರನ್‌ ಕದ್ದರು. ಮುಂದಿನ ಮೂರು ಎಸೆತಗಳಲ್ಲಿ ರಿಂಕು ಸಿಂಗ್‌ ಕ್ರಮವಾಗಿ 4, 4, 6 ಬಾರಿಸಿದರು. ಆದಾಗ್ಯೂ ಕೆಕೆಆರ್‌ 4 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಯಿತು.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ 20 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 238 ರನ್‌ ಪೇರಿಸಿತು. 239 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್‌ ರೈಡರ್ಸ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 234 ರನ್‌ ಗಳಿಸಿ 4 ರನ್‌ಗಳಿಂದ ವಿರೋಚಿತ ಸೋಲು ಕಂಡಿತು.

    ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಕೆಕೆಆರ್‌ ಭರ್ಜರಿ ಇನ್ನಿಂಗ್ಸ್‌ ಕಟ್ಟಿತ್ತು. ಪವರ್‌ ಪ್ಲೇನಲ್ಲಿ ಒಂದು ವಿಕೆಟ್‌ ಕಳೆದುಕೊಂಡರೂ ಸ್ಫೋಟಕ 90 ರನ್‌ ಕಲೆಹಾಕಿತ್ತು. ಅಜಿಂಕ್ಯಾ ರಹಾನೆ (Ajinkya Rahane), ಸುನೀಲ್‌ ನರೇನ್‌, ವೆಂಕಟೇಶ್‌ ಅಯ್ಯರ್‌ ಅವರ ಸ್ಫೋಟಕ ಬ್ಯಾಟಿಂಗ್‌ ತಂಡದ ಮೊತ್ತ ಹೆಚ್ಚಿಸುತ್ತಲೇ ಸಾಗಿತು. ಇದರಿಂದ ಕೆಕೆಆರ್‌ ಸುಲಭ ಜಯ ಸಾಧಿಸುತ್ತದೆ ಎಂದೇ ಭಾವಿಸಲಾಗಿತ್ತು. ಆದ್ರೆ 15, 16, 17ನೇ ಓವರ್‌ನಲ್ಲಿ ಒಂದೊಂದು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡ ಕೆಕೆಆರ್‌ ಸಂಕಷ್ಟಕ್ಕೀಡಾಯಿತು.

    ಕೆಕೆಆರ್‌ ಪರ ಅಜಿಂಕ್ಯಾ ರಹಾನೆ 35 ಎಸೆತಗಳಲ್ಲಿ 61 ರನ್‌ (2 ಸಿಕ್ಸರ್‌, 8 ಬೌಂಡರಿ) ಚಚ್ಚಿದ್ರೆ, ಸುನೀಲ್‌ ನರೇನ್‌ 13 ಎಸೆತಗಳಲ್ಲಿ 30 ರನ್‌ (2 ಸಿಕ್ಸರ್‌, 4 ಬೌಂಡರಿ), ವೆಂಕಟೇಶ್‌ ಅಯ್ಯರ್‌ 45 ರನ್‌ (29 ಎಸೆತ, 6 ಬೌಂಡರಿ 1 ಸಿಕ್ಸರ್‌) ಬಾರಿಸಿದ್ರು. ಕೊನೆಯಲ್ಲಿ ರಿಂಕು ಸಿಂಗ್‌ 15 ಎಸೆತಗಳಲ್ಲಿ 38 ರನ್‌ ಬಾರಿಸಿದ್ರೆ, ಹರ್ಷಿತ್‌ ರಾಣಾ 9 ಎಸೆತಗಳಲ್ಲಿ 10 ರನ್‌ ಕೊಡುಗೆ ನೀಡಿದರು.

    ಲಕ್ನೋ ಪರ ಆಕಾಶ್‌ ದೀಪ್‌, ಶಾರ್ದೂಲ್‌ ಠಾಕೂರ್‌ ತಲಾ 2 ವಿಕೆಟ್‌ ಕಿತ್ತರೆ, ಅವೇಶ್‌ ಖಾನ್‌, ದಿಗ್ವೇಷ್‌ ರಾಥಿ, ರವಿ ಬಿಷ್ಣೋಯಿ, ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವು ನಿಕೋಲಸ್‌ ಪೂರನ್‌ (Nicholas Pooran) ಸಿಡಿಲಬ್ಬರದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ ಕೇವಲ 3 ವಿಕೆಟ್‌ ನಷ್ಟಕ್ಕೆ 238 ರನ್‌ ಕಲೆಹಾಕಿತು. ಬ್ಯಾಟಿಂಗ್‌ ಸ್ನೇಹಿ ಪಿಚ್‌ ಲಾಭ ಪಡೆದ ಲಕ್ನೋ ತಂಡ ಆರಂಭದಿಂದಲೇ ಅಬ್ಬರಿಸಲು ಶುರು ಮಾಡಿತು.

    ಆರಂಭಿಕರಾದ ಏಡನ್‌ ಮಾರ್ಕ್ರಮ್‌, ಮಿಚೆಲ್‌ ಮಾರ್ಷ್‌ (Mitchell Mar) ಜೋಡಿ ಮೊದಲ ವಿಕೆಟ್‌ಗೆ 62 ಎಸೆತಗಳಲ್ಲಿ 99 ರನ್‌ಗಳ ಭರ್ಜರಿ ಜೊತೆಯಾಟ ನೀಡಿತು. ಏಡನ್‌ ಮಾರ್ಕ್ರಮ್‌ ಪೆವಿಲಿಯನ್‌ಗೆ ಮರಳುತ್ತಿದ್ದಂತೆ ಮಾರ್ಷ್‌ ಜೊತೆಗೂಡಿ ಪೂರನ್‌ ಸಹ ಅಬ್ಬರಿಸಲು ಶುರು ಮಾಡಿದರು. 2ನೇ ವಿಕೆಟಿಗೆ ಈ ಜೋಡಿ 30 ಎಸೆತಗಳಲ್ಲಿ 71 ರನ್‌ ಜೊತೆಯಾಟ ನೀಡಿದ್ರೆ 3ನೇ ವಿಕೆಟ್‌ಗೆ ಅಬ್ದುಲ್‌ ಸಮದ್‌ ಹಾಗೂ ಪೂರನ್‌ ಜೋಡಿ ಕೇವಲ 18 ಎಸೆತಗಳಲ್ಲಿ ಸ್ಫೋಟಕ 51 ರನ್‌ ಗಳ ಜೊತೆಯಾಟ ಪೇರಿಸಿತು. ಇದು ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ಬೃಹತ್‌ ಮೊತ್ತಕ್ಕೆ ಕಾರಣವಾಯಿತು.

    ನಿಕೋಲಸ್‌ ಸಿಡಿಲಬ್ಬರದ ಬ್ಯಾಟಿಂಗ್‌:
    ಪ್ರಸಕ್ತ ಆವೃತ್ತಿಯಲ್ಲಿ ಆರೆಂಜ್‌ ಕ್ಯಾಪ್‌ ರೇಸ್‌ನಲ್ಲಿರುವ ನಿಕೋಲಸ್‌ ಪೂರನ್‌ ಪ್ರಸಕ್ತ ಆವೃತ್ತಿಯಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಪರ 3ನೇ ಅರ್ಧಶತಕ ಸಿಡಿಸಿ ಮಿಂಚಿದರು. 10 ಓವರ್‌ಗಳ ಬಳಿಕ ಕಣಕ್ಕಿಳಿದ ಪೂರನ್‌ ‌8 ಭರ್ಜರಿ ಸಿಕ್ಸರ್‌, 7 ಬೌಂಡರಿಗಳೊಂದಿಗೆ 36 ಎಸೆತಗಳಲ್ಲಿ 87 ರನ್‌ (241.66 ಸ್ಟ್ರೈಕ್‌ರೇಟ್‌) ಸಿಡಿಸಿ ಅಜೇಯರಾಗುಳಿದರು. ಇದರೊಂದಿಗೆ ಮಿಚೆಲ್‌ ಮಾರ್ಷ್‌ ಸಹ 48 ಎಸೆತಗಳಲ್ಲಿ 81 ರನ್‌ (5 ಸಿಕ್ಸರ್‌, 6 ಬೌಂಡರಿ), ಏಡನ್‌ ಮಾರ್ಕ್ರಮ್‌ 47 ರನ್‌ (28 ಎಸೆತ, 2 ಸಿಕ್ಸರ್‌, 4 ಬೌಂಡರಿ), ಅಬ್ದುಲ್‌ ಸಮದ್‌ 6 ರನ್‌, ಡೇವಿಡ್‌ ಮಿಲ್ಲರ್‌ ಅಜೇಯ 4 ರನ್‌ ಕೊಡುಗೆ ನೀಡಿದರು.

    ಕೆಕೆಆರ್ ಪರ ಹರ್ಷಿತ್ ರಾಣಾ 4 ಓವರ್‌ಗಳಲ್ಲಿ 51 ರನ್‌ ಬಿಟ್ಟುಕೊಟ್ಟು 2 ವಿಕೆಟ್ ಕಿತ್ತರೆ, ಆ್ಯಂಡ್ರೆ ರಸೆಲ್ 2 ಓವರ್‌ಗಳಲ್ಲಿ 32 ರನ್‌ ಬಿಟ್ಟುಕೊಟ್ಟು 1 ವಿಕೆಟ್‌ ಪಡೆದರು.

  • ಕೆಕೆಆರ್‌ನಿಂದ 13 ಕೋಟಿಗೆ ರಿಟೇನ್‌ ಬೆನ್ನಲ್ಲೇ ಐಷಾರಾಮಿ ಬಂಗಲೆ ಖರೀದಿಸಿದ ರಿಂಕು ಸಿಂಗ್‌

    ಕೆಕೆಆರ್‌ನಿಂದ 13 ಕೋಟಿಗೆ ರಿಟೇನ್‌ ಬೆನ್ನಲ್ಲೇ ಐಷಾರಾಮಿ ಬಂಗಲೆ ಖರೀದಿಸಿದ ರಿಂಕು ಸಿಂಗ್‌

    ನವದೆಹಲಿ: ಸ್ಟಾರ್‌ ಇಂಡಿಯಾ ಬ್ಯಾಟರ್‌ ರಿಂಕು ಸಿಂಗ್‌ ಅವರನ್ನು ಇತ್ತೀಚೆಗೆ ಕೋಲ್ಕತ್ತಾ ನೈಟ್‌ ರೈಡರ್ಸ್‌ 13 ಕೋಟಿಗೆ ಉಳಿಸಿಕೊಂಡಿದೆ. ಇದರ ಬೆನ್ನಲ್ಲೇ ಐಷಾರಾಮಿ ಬಂಗಲೆಯನ್ನು ಕ್ರಿಕೆಟರ್‌ ಖರೀಸಿದ್ದಾರೆಂದು ಸೋಷಿಯಲ್‌ ಮೀಡಿಯಾದಲ್ಲಿ ಸುದ್ದಿ ವೈರಲ್‌ ಆಗಿದೆ.

    ಐಪಿಎಲ್ 2023 ರಲ್ಲಿ ಯಶ್ ದಯಾಳ್ ಬೌಲಿಂಗ್‌ಗೆ ಐದು ಸಿಕ್ಸರ್‌ಗಳನ್ನು ಚಚ್ಚಿದ ರಿಂಕು ಪವರ್-ಹಿಟ್ಟರ್ ಎಂದು ಖ್ಯಾತಿ ಗಳಿಸಿದರು. ರಿಂಕು ಸಿಂಗ್‌ ಈಗ ತಂಡದ ಅಗ್ರ ರೀಟೈನ್ ಆಗಿದ್ದಾರೆ. ಐಪಿಎಲ್ ಧಾರಣೆಯನ್ನು ಘೋಷಿಸಿದ ನಂತರ, ಅಲಿಘರ್‌ನ ಓಝೋನ್ ಸಿಟಿಯಲ್ಲಿರುವ ದಿ ಗೋಲ್ಡನ್ ಎಸ್ಟೇಟ್‌ನಲ್ಲಿ ಐಷಾರಾಮಿ ಬಂಗಲೆಯನ್ನು ಖರೀದಿಸಿದ್ದಾರೆ ಎನ್ನಲಾಗಿದೆ. ಇದು 500 ಚದರ ಗಜದ ಮನೆ ಮತ್ತು 3.5 ಕೋಟಿ ರೂ. ಮೌಲ್ಯದ್ದು ಎಂಬ ಸುದ್ದಿ ಹರಿದಾಡಿದೆ.

    IPL ವಿಜೇತ ನಾಯಕ ಶ್ರೇಯಸ್ ಅಯ್ಯರ್‌ನನ್ನು ಈ ವರ್ಷ ತನ್ನ ಫ್ರಾಂಚೈಸಿ KKR ಗೆ ಪ್ರಶಸ್ತಿಯನ್ನು ಗೆದ್ದ ನಂತರವೂ ಕೈ ಬಿಡಲಾಗಿದೆ. 14 ಇನ್ನಿಂಗ್ಸ್‌ಗಳಲ್ಲಿ 146.86 ಸ್ಟ್ರೈಕ್ ರೇಟ್‌ನಲ್ಲಿ ಎರಡು ಅರ್ಧಶತಕಗಳೊಂದಿಗೆ 351 ರನ್ ಗಳಿಸಿದ ಅವರ ಬ್ಯಾಟಿಂಗ್ ಅಂಕಿಅಂಶಗಳು ಅಯ್ಯರ್‌ ಬಿಡುಗಡೆಯ ಹಿಂದಿನ ಕಾರಣವಾಗಿರಬಹುದು ಎಂಬ ವಾದವಿದೆ.

    ಎಲ್ಲಾ ಫ್ರಾಂಚೈಸಿಗಳಲ್ಲಿ ಉಳಿಸಿಕೊಂಡಿರುವ ಒಟ್ಟು 46 ಆಟಗಾರರ ಪೈಕಿ 36 ಆಟಗಾರರು ಭಾರತೀಯರಾಗಿದ್ದಾರೆ. ಈ ಪೈಕಿ 10 ಆಟಗಾರರು ಅನ್‌ಕ್ಯಾಪ್ಡ್ ಇಂಡಿಯನ್ಸ್ ಸ್ಟಾರ್‌ಗಳು. ಅವರೆಂದರೆ, ಅಭಿಷೇಕ್ ಪೊರೆಲ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ಮೊಹ್ಸಿನ್ ಖಾನ್, ಆಯುಷ್ ಬಡೋನಿ, ಶಶಾಂಕ್ ಸಿಂಗ್, ಪ್ರಭ್‌ಸಿಮ್ರಾನ್ ಸಿಂಗ್, ಯಶ್ ದಯಾಲ್.

  • IPL Retention | ಕೆಕೆಆರ್‌ನಿಂದ ಸ್ಟಾರ್ಕ್‌, ಶ್ರೇಯಸ್‌ ಔಟ್‌ – ರಿಂಕು ಸಂಭಾವನೆ ಕೋಟಿ ಕೋಟಿ ಏರಿಕೆ!

    IPL Retention | ಕೆಕೆಆರ್‌ನಿಂದ ಸ್ಟಾರ್ಕ್‌, ಶ್ರೇಯಸ್‌ ಔಟ್‌ – ರಿಂಕು ಸಂಭಾವನೆ ಕೋಟಿ ಕೋಟಿ ಏರಿಕೆ!

    ಮುಂಬೈ: 2025ರ ಮೆಗಾ ಹರಾಜಿಗೂ ಮುನ್ನವೇ ಹಾಲಿ ಚಾಂಪಿಯನ್ಸ್‌ ಕೆಕೆಆರ್‌ (KKR) ಸ್ಟಾರ್‌ ಆಟಗಾರರನ್ನ ಹೊರದಬ್ಬಿದೆ. ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಮೊತ್ತಕ್ಕೆ ಬಿಕರಿಯಾಗಿದ್ದ ಮಿಚೆಲ್‌ ಸ್ಟಾರ್ಕ್‌ (Mitchell starc), ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರನ್ನು ತಂಡದಿಂದ ಬಿಡುಗಡೆ ಮಾಡಿದೆ.

    ರಿಂಕು, ರಸ್ಸೆಲ್‌, ರಾಣಾ ಸೇರಿಂದಂತೆ ಆಲ್‌ರೌಂಡರ್‌, ಬೌಲರ್‌ಗಳಿಗೆ ಮಣೆಹಾಕಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ ಇಬ್ಬರು ವಿದೇಶಿ ಆಟಗಾರರು ಸೇರಿದಂತೆ 6 ಆಟಗಾರರನ್ನು ಉಳಿಸಿಕೊಂಡಿದೆ. ಈ ಪೈಕಿ ಕಳೆದ ಆವೃತ್ತಿಯಲ್ಲಿ 55 ಲಕ್ಷ ರೂ. ಸಂಭಾವನೆ ಪಡೆದಿದ್ದ ರಿಂಕು ಸಿಂಗ್‌ಗೆ 13 ಕೋಟಿ ರೂ. ಕೊಟ್ಟು ಖರೀದಿ ಮಾಡಿರುವುದು ವಿಶೇಷ. ಇದನ್ನೂ ಓದಿ: IPL Retention | ರಿಷಬ್‌ ಪಂತ್‌ ಸೇರಿ ಸ್ಟಾರ್‌ ಆಟಗಾರರೇ ಔಟ್‌ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ

    ಬಿಸಿಸಿಐ ನಿಮಯದ ಪ್ರಕಾರ ಐವರು ಆಟಗಾರರು ಮತ್ತು ಒಂದು ಆರ್‌ಟಿಎಂ ಬಳಕೆಗೆ ಅವಕಾಶ ನೀಡಿತ್ತು. ಆದ್ರೆ ಕೆಕೆಆರ್‌ 6 ಆಟಗಾರರನ್ನು ಉಳಿಸಿಕೊಂಡಿದ್ದು, ಆರ್‌ಟಿಎಂ ಕಾರ್ಡ್‌ ಬಳಕೆಗೆ ಅವಕಾಶ ಇಲ್ಲದಂತಾಗಿದೆ. ಇದನ್ನೂ ಓದಿ: IPL Retention | ಲಕ್ನೋದಿಂದ ರಾಹುಲ್‌ ಔಟ್‌ – ಪೂರನ್‌, ರಾಕೆಟ್‌ ವೇಗಿ ಮಯಾಂಕ್‌ಗೆ ಬಂಪರ್‌ ಗಿಫ್ಟ್‌

    ಕೆಕೆಆರ್‌ನಲ್ಲಿ ಯಾರಿಗೆ ಎಷ ಉಳಿಕೆ?
    * ರಿಂಕು ಸಿಂಗ್‌ – 13 ಕೋಟಿ ರೂ.
    * ವರುಣ್‌ ಚಕ್ರವರ್ತಿ – 12 ಕೋಟಿ ರೂ.
    * ಸುನೀಲ್‌ ನರೇನ್‌ – 12 ಕೋಟಿ ರೂ.
    * ಆಂಡ್ರೆ ರಸ್ಸೆಲ್‌ – 12 ಕೋಟಿ ರೂ.
    * ಹರ್ಷಿತ್‌ ರಾಣಾ – 4 ಕೋಟಿ ರೂ.
    * ರಮಣದೀಪ್‌ ಸಿಂಗ್‌ – 4 ಕೋಟಿ ರೂ.

    2025 ರಿಂದ 2027ರ ಐಪಿಎಲ್‌ ಆವೃತ್ತಿಗಳಿಗೆ ಹೊಸ ನಿಯಮ ಘೋಷಣೆ ಮಾಡಿರುವ ಬಿಸಿಸಿಐ, ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ತೀರ್ಮಾನಿಸಿದೆ.

  • 134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್‌ – ಭಾರತಕ್ಕೆ ಜಯದ ʻಅಭಿಷೇಕʼ

    134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್‌ – ಭಾರತಕ್ಕೆ ಜಯದ ʻಅಭಿಷೇಕʼ

    ಹರಾರೆ: ಅಭಿಷೇಕ್‌ ಶರ್ಮಾ (Abhishek Sharma) ಸ್ಫೋಟಕ ಶತಕ, ರುತುರಾಜ್‌ ಗಾಯಕ್ವಾಡ್‌ , ರಿಂಕು ಸಿಂಗ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು (Team India) ಜಿಂಬಾಬ್ವೆ ವಿರುದ್ಧ 100 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

    ಇಲ್ಲಿನ ಹರಾರೆ ಸ್ಫೋರ್ಟ್‌ ಕ್ಲಬ್‌ ಮೈದಾನದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಸಿಡಿಸಿತ್ತು. 235 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಜಿಂಬಾಬ್ವೆ 18.4 ಓವರ್‌ಗಳಲ್ಲಿ 134 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಚೇಸಿಂಗ್‌ ಆರಂಭಿಸಿದ ಜಿಂಬಾಬ್ವೆ ಮೊದಲ ಓವರ್‌ನಿಂದಲೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. 2ನೇ ವಿಕೆಟ್‌ಗೆ 15 ಎಸೆತಗಳಲ್ಲಿ 36 ರನ್‌ಗಳ ಸ್ಫೋಟಕ ಜೊತೆಯಾಟ ನಂತರ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಲು ವಿಫಲರಾದರು. ಅವೇಶ್‌ ಖಾನ್‌, ಮುಕೇಶ್‌ ಕುಮಾರ್‌ (Mukesh Kumar) ಬೌಲಿಂಗ್‌ ಪ್ರಹಾರಕ್ಕೆ ಜಿಂಬಾಬ್ವೆ ಬ್ಯಾಟರ್‌ಗಳು ಮಕಾಡೆ ಮಲಗಿದರು. ಅಂತಿಮವಾಗಿ ಭಾರತ 100 ರನ್‌ಗಳ ಗೆಲುವು ಸಾಧಿಸಿತು.

    ಜಿಂಬಾಬ್ವೆ ಪರ ವೆಸ್ಲಿ ಮಾಧೆವೆರೆ 43 ರನ್‌, ಬ್ರಿಯಾನ್ ಬೆನೆಟ್ (Brian Bennett) 26 ರನ್‌, ಲ್ಯೂಕ್ ಜೊಂಗ್ವೆ 33 ರನ್‌ ಗಳಿಸಿದರು. ಇನ್ನೂ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮುಕೇಶ್‌ ಕುಮಾರ್‌ ಮತ್ತು ಅವೇಶ್‌ ಖಾನ್‌ ತಲಾ 3 ವಿಕೆಟ್‌ ಕಿತ್ತರೆ, ರವಿ ಬಿಷ್ಣೋಯಿ 2 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ಚೊಚ್ಚಲ ಸರಣಿಯಲ್ಲೇ ಬೆಂಕಿ ಶತಕ:
    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ, 234 ರನ್‌ ಬಾರಿಸಿತ್ತು. ಐಪಿಎಲ್‌ ಬಳಿಕ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯನ್ನಾಡುತ್ತಿರುವ ಪಂಜಾಬ್‌ ಮೂಲದ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಮೊದಲ 33 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಅಭಿ, ಮುಂದಿನ 13 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಸಿಕ್ಸರ್‌, 7 ಬೌಂಡರಿಗಳೂ ಸೇರಿವೆ.

    ಮಿಂಚಿದ ರಿಂಕು, ರುತು:
    ಇತ್ತ ಅಭಿಷೇಕ್‌ ಶರ್ಮಾ ಶತಕ ಸಿಡಿಸಿ ಪೆವಿಲಿಯನ್‌ ಹಾದಿ ಹಿಡಿಯುತ್ತಿದ್ದಂತೆ ಜೊತೆಗೂಡಿದ ರುತುರಾಜ್‌ ಗಾಯಕ್ವಾಡ್‌, ರಿಂಕು ಸಿಂಗ್‌ ಜೋಡಿ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 87 ರನ್‌ ಚಚ್ಚಿತು. ಇದರಿಂದ ಭಾರತ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರುತುರಾಜ್‌ 47 ಎಸೆತಗಳಲ್ಲಿ 77 ರನ್‌ (1 ಸಿಕ್ಸರ್‌, 11 ಬೌಂಡರಿ) ಚಚ್ಚಿದರೆ, ರಿಂಕು ಸಿಂಗ್‌ ಸ್ಫೋಟಕ 48 ರನ್‌ (22 ಎಸೆತ, 5 ಸಿಕ್ಸರ್‌, 2 ಬೌಂಡರಿ) ಬಾರಿಸಿ ಅಜೇಯರಾಗುಳಿದರು. ನಾಯಕ ಶುಭಮನ್‌ ಗಿಲ್‌ 2 ರನ್‌ ಗಳಿಸಿದರು.

  • ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    – ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದ ಭಾರತ

    ಹರಾರೆ: ಟೀಂ ಇಂಡಿಯಾದ ಯುವ ಬ್ಯಾಟರ್‌ ಅಭಿಷೇಕ್‌ ಶರ್ಮಾ (Abhishek Sharma) ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಜಿಂಬಾಬ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಗೋಲ್ಡನ್‌ ಡಕ್‌ ಆಗಿ ಭಾರೀ ಟೀಕೆಗೆ ಗುರಿಯಾಗಿದ್ದ ಅಭಿ, ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಇಲ್ಲಿನ ಹರಾರೆ ಸ್ಫೋರ್ಟ್‌ ಕ್ಲಬ್‌ ಮೈದಾನದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (Team India) 10 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರೂ ಬಳಿಕ ಅಭಿಷೇಕ್‌ ಶರ್ಮಾ ಅವರ ಸ್ಪೋಟಕ ಶತಕ ಹಾಗೂ ರುತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಸಿಡಿಸಿದೆ.

    ಚೊಚ್ಚಲ ಸರಣಿಯಲ್ಲೇ ಬೆಂಕಿ ಶತಕ:
    ಐಪಿಎಲ್‌ ಬಳಿಕ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯನ್ನಾಡುತ್ತಿರುವ ಪಂಜಾಬ್‌ ಮೂಲದ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ 33 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಅಭಿ, ಮುಂದಿನ 13 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಸಿಕ್ಸರ್‌, 7 ಬೌಂಡರಿಗಳೂ ಸೇರಿವೆ.

    ಶತಕ ವೀರರ ಎಲೈಟ್‌ ಪಟ್ಟಿಗೆ ಅಭಿ:
    ಚೊಚ್ಚಲ ಅಂತಾರಾಷ್ಟ್ರೀಯ ಸರಣಿಯಲ್ಲೇ ಸ್ಫೋಟಕ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ದಿಗ್ಗರ ಎಲೈಟ್‌ ಪಟ್ಟಿ ಸೇರಿದ್ದಾರೆ. ಆರನ್‌ ಫಿಂಚ್‌, ಕ್ರಿಸ್‌ಗೇಲ್‌, ಕೊಲಿನ್‌ ಮನ್ರೋ, ರವೀಂದರ್‌ಪಾಲ್‌ ಸಿಂಗ್‌, ಜೋಶ್‌ ಇಂಗ್ಲಿಸ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಈವರೆಗೆ 47 ಎಸೆತಗಳಲ್ಲಿ ಶತಕ ಸಿಡಿಸಿದ ಆಟಗಾರರಾಗಿದ್ದರು. ಇದೀಗ ಈ ದಿಗ್ಗಜರ ಪಟ್ಟಿಗೆ ಅಭಿಷೇಕ್‌ ಶರ್ಮಾ ಸೇರ್ಪಡೆಗೊಂಡಿದ್ದಾರೆ.

    ಜಿಂಬಾಬ್ವೆಗೆ 235 ರನ್‌ ಗುರಿ:
    ಜಿಂಬಾಬ್ವೆ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ನಷ್ಟಕ್ಕೆ 234 ರನ್‌ ಬಾರಿಸಿದ್ದು, ಎದುರಾಳಿ ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದೆ.

    ಮಿಂಚಿದ ರಿಂಕು, ರುತು:
    ಇತ್ತ ಅಭಿಷೇಕ್‌ ಶರ್ಮಾ ಶತಕ ಸಿಡಿಸಿ ಪೆವಿಲಿಯನ್‌ ಹಾದಿ ಹಿಡಿಯುತ್ತಿದ್ದಂತೆ ಜೊತೆಗೂಡಿದ ರುತುರಾಜ್‌ ಗಾಯಕ್ವಾಡ್‌, ರಿಂಕು ಸಿಂಗ್‌ ಜೋಡಿ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 87 ರನ್‌ ಚಚ್ಚಿತು. ಇದರಿಂದ ಭಾರತ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರುತುರಾಜ್‌ 47 ಎಸೆತಗಳಲ್ಲಿ 77 ರನ್‌ (1 ಸಿಕ್ಸರ್‌, 11 ಬೌಂಡರಿ) ಚಚ್ಚಿದರೆ, ರಿಂಕು ಸಿಂಗ್‌ ಸ್ಫೋಟಕ 48 ರನ್‌ (22 ಎಸೆತ, 5 ಸಿಕ್ಸರ್‌, 2 ಬೌಂಡರಿ) ಬಾರಿಸಿ ಅಜೇಯರಾಗುಳಿದರು. ನಾಯಕ ಶುಭಮನ್‌ ಗಿಲ್‌ 2 ರನ್‌ ಗಳಿಸಿದರು.

  • ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    – ಮೀಸಲು ಆಟಗಾರನಾಗಿ ರಿಂಕು ಆಯ್ಕೆ ಬಗ್ಗೆ ರೋಹಿತ್‌, ಅಗರ್ಕರ್‌ ನೀಡಿದ ಸ್ಪಷ್ಟನೆ ಏನು?

    ಮುಂಬೈ: ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡದ ಆಯ್ಕೆ ಕುರಿತು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಹಾಗೂ ರೋಹಿತ್‌ ಶರ್ಮಾ (Rohit Sharma) ಸ್ಪಷ್ಟನೆ ನೀಡಿದ್ದಾರೆ. ಕೊಹ್ಲಿ ಸ್ಟ್ರೈಕ್‌ರೇಟ್‌? ಮೀಸಲು ಆಟಗಾರನಾಗಿ ರಿಂಕು ಆಯ್ಕೆ, ತಂಡದಿಂದ ಕೆ.ಎಲ್‌ ರಾಹುಲ್‌ (KL Rahul) ಅವರನ್ನು ಕೈಬಿಟ್ಟಿದ್ದೇಕೆ? ಈ ಎಲ್ಲ ವಿಚಾರಗಳ ಬಗ್ಗೆಯೂ ಅವರು ಸ್ಪಷ್ಟನೆ ನೀಡಿದ್ದಾರೆ. ಇದೇ ವೇಳೆ ಮ್ಯಾಚ್‌ ಫಿನಿಷರ್‌ ರಿಂಕು ಸಿಂಗ್‌ಗೆ ಏಕೆ ಅವಕಾಶ ನೀಡಲಾಗಿಲ್ಲ ಎಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.

    ಕೆ.ಎಲ್‌ ರಾಹುಲ್‌ ಕೈಬಿಟ್ಟಿದ್ದೇಕೆ?
    ಸದ್ಯ ಐಪಿಎಲ್‌ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಕೆ.ಎಲ್‌ ರಾಹುಲ್‌ ಉತ್ತಮ ಪ್ರದರ್ಶನವನ್ನೇ ನೀಡುತ್ತಿದ್ದಾರೆ. ಆದರೆ ನಮಗೆ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಅಗತ್ಯತ್ತು. ಆದ್ದರಿಂದ ರಿಷಭ್‌ ಪಂತ್‌, ಸಂಜು ಸ್ಯಾಮ್ಸನ್‌ ಅವರನ್ನು ತಂಡಕ್ಕೆ ಆಯ್ಕೆ ಮಾಡಿದ್ದೇವೆ. ರಾಹುಲ್‌ಗೆ ಮುಂದೆ ಉತ್ತಮ ಅವಕಾಶಗಳಿವೆ ಎಂದು ರೋಹಿತ್‌, ಅಗರ್ಕರ್‌ ತಿಳಿಸಿದ್ದಾರೆ.

    ರಿಂಕು ಸಿಂಗ್‌ ಅವರನ್ನು ಕಡೆಗಣಿಸಿದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಚೀಫ್‌ ಸೆಲೆಕ್ಟರ್‌ ಅಜಿತ್‌ ಅಗರ್ಕರ್ ಮಾತನಾಡಿ, ರಿಂಕು ಸಿಂಗ್‌ ಅವರನ್ನು ಕೈ ಬಿಟ್ಟ ನಿರ್ಧಾರ ಕಠಿಣವಾಗಿತ್ತು. ಏಕೆಂದರೆ, ವೆಸ್ಟ್ ಇಂಡೀಸ್‌ ಹಾಗೂ ಅಮೆರಿಕ ಕಂಡೀಷನ್ಸ್ ಬಗ್ಗೆ ನಮಗೆ ಗೊತ್ತಿಲ್ಲ. ಈ ಕಾರಣದಿಂದ ನಾವು ಹೆಚ್ಚಿನ ಬೌಲಿಂಗ್‌ ಆಯ್ಕೆಗಳನ್ನು ಉಳಿಸಿಕೊಂಡಿದ್ದೇವೆ ಎಂದಿದ್ದಾರೆ.

    ರಿಂಕು ತಪ್ಪು ಮಾಡಿಲ್ಲ:
    ಆಯ್ಕೆಯ ಸಂಧರ್ಭದಲ್ಲಿ ನಾವು ಕೆಲ ಕಠಿಣ ಸಂಗತಿಗಳನ್ನು ಎದುರಿಸಿದ್ದೇವೆ. ರಿಂಕು ಸಿಂಗ್‌ (Rinku Singh) ಯಾವುದೇ ತಪ್ಪು ಮಾಡಿಲ್ಲ ಹಾಗೂ ಶುಭಮನ್ ಗಿಲ್‌ ಕೂಡ ಅಷ್ಟೇ. ಇಲ್ಲಿ ಸಂಯೋಜನೆ ಪ್ರಮುಖ ಸಂಗತಿಯಾಗಿದೆ. ಅಲ್ಲಿನ ಕಂಡೀಷನ್ಸ್ ಹೇಗಿದೆ? ಎಂದು ನಮಗೆ ಇನ್ನೂ ಗೊತ್ತಿಲ್ಲ ಎಂದು ರೋಹಿತ್‌ ಶರ್ಮಾ ಹೇಳಿದ್ದಾರೆ. ಟಿ20 ವಿಶ್ವಕಪ್‌ ಭಾರತ ತಂಡದಿಂದ ರಿಂಕು ಸಿಂಗ್‌ ಅವರನ್ನು ಕೈ ಬಿಟ್ಟಿರುವುದು ಅನಿರೀಕ್ಷಿತ ಕರೆ. ಏಕೆಂದರೆ, ಹೆಚ್ಚುವರಿ ಬೌಲರ್ ಇದ್ದರೆ, ನಮಗೆ ಟೂರ್ನಿಯಲ್ಲಿ ನೆರವಾಗಬಹುದು ಎಂಬುದು ನಮ್ಮ ತಂತ್ರವಾಗಿದೆ ಹಾಗಾಗಿ ನಾಲ್ವರು ಸ್ಪಿನ್ನರ್‌ಗಳನ್ನು ಉಳಿಸಿಕೊಂಡಿದ್ದೇವೆ ಎಂದು ಅಗರ್ಕರ್‌ ಹೇಳಿದ್ದಾರೆ.

    ರಿಂಕು ಸಿಂಗ್ ರೀತಿ ಬ್ಯಾಕೆಂಡ್‌ನಲ್ಲಿ ಸ್ಪೋಟಕ ಬ್ಯಾಟ್‌ ಮಾಡುವ ಆಟಗಾರ ಇಲ್ಲವೆಂದು ನಾನು ನಂಬುತ್ತೇನೆ. ರಿಂಕು ಆಯ್ಕೆಯಾಗದೇ ಇರಲು ಅವರದು ಯಾವುದೇ ತಪ್ಪಿಲ್ಲ. ಗರಿಷ್ಠ 15 ಆಟಗಾರರಲ್ಲಿ ಇಬ್ಬರು ವಿಕೆಟ್‌ ಕೀಪರ್‌ಗಳೇ ಭಯಾನಕ ಬ್ಯಾಟ್ಸ್‌ಮನ್‌ಗಳಾಗಿದ್ದಾರೆ. ಈ ಕಾರಣದಿಂದಾಗಿಯೇ ಹಚ್ಚುವರಿ ಬೌಲರ್‌ಗಳನ್ನು ತೆಗೆದುಕೊಂಡಿದ್ದೇವೆ. ಆದರೆ, ಮೀಸಲು ಆಟಗಾರನಾಗಿ ಅವರು ತಂಡದ ಜೊತೆ ಪ್ರಯಾಣ ಬೆಳೆಸಲಿದ್ದಾರೆ. ಆದರೆ, ದಿನದಾಂತ್ಯಕ್ಕೆ ತಂಡಕ್ಕೆ ಕೇವಲ 15 ಆಟಗಾರರನ್ನು ಮಾತ್ರ ಆಯ್ಕೆ ಮಾಡಬೇಕಾಗುತ್ತದೆ ಎಂದು ಅಜಿತ್‌ ಅಗರ್ಕರ್‌ (Ajit Agarkar) ತಿಳಿಸಿದ್ದಾರೆ.

    ಕೊಹ್ಲಿ ಸಮರ್ಥಿಸಿಕೊಂಡ ಅಗರ್ಕರ್‌:
    ವಿರಾಟ್ ಕೊಹ್ಲಿ ಎಲ್ಲಾ ಸ್ವರೂಪಗಳಲ್ಲಿ ದೊಡ್ಡ ಮಟ್ಟದ ಸ್ಕೋರ್ ಮಾಡುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಅವರ ಸ್ಟ್ರೈಕ್ ರೇಟ್​ ಕಾರಣಕ್ಕೆ ಟೀಕೆಗಳನ್ನು ಎದುರಿಸುತ್ತಿದ್ದಾರೆ. ವರದಿಗಳ ಪ್ರಕಾರ ಆಯ್ಕೆದಾರರು ಈ ವರ್ಷದ ಆರಂಭದಲ್ಲಿ ಅವರನ್ನು ಟಿ20ಐ ತಂಡಕ್ಕೆ ಮರಳಿ ಕರೆಸಿಕೊಳ್ಳುವ ಮೊದಲು ತಂಡದ ಬೇಡಿಕೆಗಳಿಗೆ ಅನುಗುಣವಾಗಿ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಲು ಹೇಳಲಾಗಿತ್ತು. ಅದೇ ಷರತ್ತಿನ ಮೇರೆಗೆ ಅವರಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ರೋಹಿತ್‌ ಅವರನ್ನೂ ಕೇಳಲಾಗಿತ್ತು. ಆದರೆ, ಅವರು ಜೋರಾಗಿ ನಕ್ಕು ಇದೊಂದು ಚರ್ಚೆಯ ವಿಷಯವೇ ಅಲ್ಲ ಎಂಬುದಾಗಿ ಹೇಳಿದ್ದಾರೆ.

  • ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    – ಸಿಕ್ಸರ್‌, ಬೌಂಡರಿ ಸುರಿಮಳೆ – ಪಂತ್‌ ಸ್ಪೋಟಕ ಅರ್ಧಶತಕ ವ್ಯರ್ಥ

    ವಿಶಾಖಪಟ್ಟಣಂ: ಸುನೀಲ್‌ ನರೇನ್‌, ರಘುವಂಶಿ, ರಿಂಕು, ರಸೆಲ್‌ ಸ್ಫೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೇ ಅಧಿಕ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

    ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್‌ ಸಿಡಿಸಿತ್ತು. ಈ ಗುರಿ ಡೆಲ್ಲಿ ಕ್ಯಾಪಿಟಲ್ಸ್‌ 17.2 ಓವರ್‌ಗಳಲ್ಲೇ 166 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು.

    273‌ ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ಆರಂಭದಲ್ಲೇ ಸ್ಫೋಟಕ ಪ್ರದರ್ಶನ ನೀಡಲು ಮುಂದಾಯಿತು. ಆದ್ರೆ ರನ್‌ ಕಲೆಹಾಕುವ ಅವಸರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌, ಟ್ರಿಸ್ಟಾನ್‌ ಸ್ಟಬ್ಸ್‌ ಸ್ಫೋಟಕ ಅರ್ಧಶತಕಗಳ ಹೋರಾಟವೂ ವ್ಯರ್ಥವಾಯಿತು.

    ಡೆಲ್ಲಿ ಪರ 220 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಷಭ್‌ ಪಂತ್‌ (Rishabh Pant) 55 ರನ್‌ (25 ಎಸೆತ, 5 ಸಿಕ್ಸರ್‌, 4 ಬೌಂಡರಿ), ಸ್ಟಬ್ಸ್‌ 54 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಡೇವಿಡ್‌ ವಾರ್ನರ್‌ (David Warner) 18 ರನ್‌, ಪೃಥ್ವಿ ಶಾ 10 ರನ್‌ ಗಳಿಸಿದರೆ, ಮಿಚೆಲ್‌ ಮಾರ್ಷ್‌ ಹಾಗೂ ಅಭಿಷೇಕ್‌ ಪೋರೆಲ್‌ ಶೂನ್ಯ ಸುತ್ತಿದರು. ಉಳಿದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರದೇ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಂತಿಮವಾಗಿ ಡೆಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ವೈಭವ್‌ ಅರೋರ ಮತ್ತು ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌ ಕಿತ್ತರೆ, ದುಬಾರಿ ಆಟಗಾರ ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌ ಹಾಗೂ ಆಂಡ್ರೆ ರಸೆಲ್‌, ಸುನೀಲ್‌ ನರೇನ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಕೆಕೆಆರ್‌ 7 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 272 ರನ್‌ ಬಾರಿಸಿತ್ತು. ಪಿಲ್‌ ಸಾಲ್ಟ್‌ 18 ರನ್‌, ಸುನೀಲ್‌ ನರೇನ್‌ 85 ರನ್‌ (39 ಎಸೆತ, 7 ಸಿಕ್ಸರ್‌, 7 ಬೌಂಡರಿ), ರಘು ವಂಶಿ 54 ರನ್‌ (27 ಎಸೆತ, 3 ಸಿಕ್ಸರ್‌, 5 ಬೌಂಡರಿ), ರಸೆಲ್‌ 41 ರನ್‌ (19 ಎಸೆತ, 3 ಸಿಕ್ಸರ್‌, 4 ಬೌಂಡರಿ), ರಿಂಕು ಸಿಂಗ್‌ 26 ರನ್‌ (8 ಎಸೆತ, 3 ಸಿಕ್ಸರ್‌, 1 ಬೌಂಡರಿ), ಶ್ರೇಯಸ್‌ ಅಯ್ಯರ್‌ 18 ರನ್‌, ವೆಂಕಟೇಶ್‌ ಅಯ್ಯರ್‌ 5 ರನ್‌, ರಮಣದೀಪ್‌ ಸಿಂಗ್‌ 2 ರನ್‌, ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿದರು. ಅಲ್ಲದೇ ತಂಡಕ್ಕೆ ಹೆಚ್ಚುವರಿ 22 ರನ್‌ಗಳು ತಂಡಕ್ಕೆ ಸೇರ್ಪಡೆಯಾಯಿತು.

    ಬಲ ನೀಡಿದ ಶತಕ, ಅರ್ಧಶತಕಗಳ ಜೊತೆಯಾಟ:
    ಆರಂಭದಿಂದಲೇ ಡೆಲ್ಲಿ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ ಕೆಕೆಆರ್‌ ಬ್ಯಾಟರ್‌ಗಳು ಕೊನೇವರೆಗೂ ಕ್ರೀಸ್‌ನಲ್ಲಿ ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಪಿಲ್‌ ಸಾಲ್ಟ್‌ – ಸುನೀಲ್‌ ನರೇನ್‌ ಜೋಡಿ 27 ಎಸೆತಗಳಲ್ಲಿ 60 ರನ್‌ ಬಾರಿಸಿದರೆ, 2ನೇ ವಿಕೆಟ್‌ಗೆ ರಘುವಂಶಿ ಮತ್ತು ಸುನೀಲ್‌ ನರೇನ್‌ ಜೋಡಿ 48 ಎಸೆತಗಳಲ್ಲಿ ಬರೋಬ್ಬರಿ 104 ರನ್‌ ಕಲೆಹಾಕಿತು. ಈ ಬೆನ್ನಲ್ಲೇ ರಸೆಲ್‌-ಅಯ್ಯರ್‌ ಜೋಡಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ 56 ರನ್‌ ಬಾರಿಸಿದರೆ, ರಿಂಕು-ರಸೆಲ್‌ ಜೋಡಿ ಕೇವಲ 11 ಎಸೆತಗಳಲ್ಲಿ 32 ರನ್‌ ಚಚ್ಚಿತು. ಪರಿಣಾಮ ತಂಡದ ಮೊತ್ತ 270 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಪರ ಅನ್ರಿಚ್ ನಾರ್ಟ್ಜೆ 3 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ 2 ವಿಕೆಟ್‌ ಹಾಗೂ ಖಲೀಲ್‌ ಅಹ್ಮದ್‌ ಮತ್ತು ಮಿಚೆಲ್‌ ಮಾರ್ಷ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಕೆಕೆಆರ್‌ ರನ್‌ ಏರಿದ್ದು ಹೇಗೆ?
    50 ರನ್‌ 23 ಎಸೆತ
    100 ರನ್‌ 45 ಎಸೆತ
    150 ರನ್‌ 66 ಎಸೆತ
    200 ರನ್‌ 92 ಎಸೆತ
    250 ರನ್‌ 111 ಎಸೆತ
    272 ರನ್‌ 120 ಎಸೆತ