Tag: Rishabh Pant

  • ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ತತ್ತರ – ಭಾರತಕ್ಕೆ 68 ರನ್‌ಗಳ ಭರ್ಜರಿ ಜಯ

    ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರಕ್ಕೆ ವೆಸ್ಟ್‌ಇಂಡೀಸ್‌ ತತ್ತರ – ಭಾರತಕ್ಕೆ 68 ರನ್‌ಗಳ ಭರ್ಜರಿ ಜಯ

    ಟ್ರಿನಿನಾಡ್: ನಾಯಕ ರೋಹಿತ್‌ ಶರ್ಮಾರ ಆಕರ್ಷಕ ಅರ್ಧಶತಕ ಹಾಗೂ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು ಟಿ20 ಸರಣಿಯ ಮೊದಲ ಪಂದ್ಯದಲ್ಲೇ ವೆಸ್ಟ್‌ ಇಂಡೀಸ್‌ ವಿರುದ್ಧ 68 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಏಕದಿನ ಕ್ರಿಕೆಟ್‌ ಸರಣಿಯಲ್ಲಿ ಆಥಿತೇಯ ವೆಸ್ಟ್‌ಇಂಡೀಸ್‌ಗೆ ತವರಿನಲ್ಲೇ ವೈಟ್‌ವಾಶ್‌ ಮಾಡಿದ ಟೀಂ ಇಂಡಿಯಾ, ಜಯದ ಅಬ್ಬರ ಮುಂದುವರಿಸಿದೆ.

    ಇಲ್ಲಿನ ಬ್ರಯಾನ್‌ ಲಾರಾ ಅಕಾಡೆಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವಿಂಡೀಸ್‌ ತಂಡದ ನಾಯಕ ನಿಕೋಲಸ್‌ ಪೂರನ್‌ ಬೌಲಿಂಗ್‌ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ 190 ರನ್‌ಗಳಿಸಿ ಆಥಿತೇಯರಿಗೆ 191 ರನ್‌ಗಳ ಬೃಹತ್‌ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವೆಸ್ಟ್‌ ಇಂಡೀಸ್‌ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ  122 ರನ್‌ಗಳನ್ನಷ್ಟೇ ಗಳಿಸಲು ಸಾಧ್ಯವಾಗಿ ಭಾರತದ ಎದುರು ಮಂಡಿಯೂರಿತು.

    ಟಾಸ್‌ ಸೋತು ನಂತರ ಬ್ಯಾಟಿಂಗ್‌ ಮಾಡಿದ ವಿಂಡೀಸ್‌ ತಂಡವು ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿತು. ಪವರ್‌ ಪ್ಲೇ ಮುಗಿಯುವ ಹೊತ್ತಿಗೆ ಟೀಂ ಇಂಡಿಯಾ ನಾಲ್ಕು ವಿಕೆಟ್‌ಗಳನ್ನು ಕಸಿದುಕೊಂಡಿತ್ತು. ಆರಂಭಿಕರಾಗಿ ಕಣಕ್ಕಿಳಿದ ಕೈಲ್ ಮೇಯರ್ಸ್ ಹಾಗೂ ಶಮರ್ ಬ್ರೂಕ್ಸ್ ಸ್ಥಿರವಾಗಿ ನಿಲ್ಲಲಿಲ್ಲ. ಕೈಲ್‌ ಮೇಯರ್ಸ್‌ 6 ಎಸೆತಗಳಲ್ಲಿ 15 ರನ್‌ ಗಳಿಸಿದರೆ, ಬ್ರೂಕ್ಸ್‌ 15 ಎಸೆತಗಳಲ್ಲಿ 20 ರನ್‌ಗಳನ್ನು ಗಳಿಸಿ ಪೆವಿಲಿಯನ್‌ ಸೇರಿದರು.

    2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಭರವಸೆಯ ಆಟಗಾರ ಜೇಸನ್ ಹೋಲ್ಡರ್ 4 ಎಸೆತಗಳನ್ನು ಎದುರಿಸಿ ಶೂನ್ಯಕ್ಕೆ ನಿರ್ಗಮಿಸಿದರು. ಉತ್ತಮ ಬ್ಯಾಟಿಂಗ್‌ ನಿರೀಕ್ಷೆಯಲ್ಲಿದ್ದ ನಾಯಕ ನಿಕೋಲಸ್ ಪೂರನ್ 18ರನ್‌ ಗಳಿಸಿದರೆ, ರೋವ್ಮನ್ ಪೊವೆಲ್ ಹಾಗೂ ಶಿಮ್ರಾನ್ ಹೆಟ್ಮೆಯರ್ ತಲಾ 14 ರನ್‌ ಗಳಿಸಿ ಔಟಾದರು. 11 ಓವರ್‌ ಪೂರೈಸುವ ಹೊತ್ತಿಗೆ 82 ರನ್‌ಗಳನ್ನು ಗಳಿಸಿದ್ದ ವೆಸ್ಟ್‌ ಇಂಡೀಸ್‌ 5 ವಿಕೆಟ್‌ಗಳನ್ನು ಕಳೆದುಕೊಂಡು ಬಹುತೇಕ ಸೋಲಿನ ಹಾದಿಯನ್ನು ಕಂಡಿತ್ತು. ಪ್ರಮುಖ ಬ್ಯಾಟರ್‌ಗಳ ಬ್ಯಾಟಿಂಗ್‌ ವೈಫಲ್ಯದಿಂದ ವೆಸ್ಟ್‌ ಇಂಡೀಸ್‌ ಟಿ20 ಸರಣಿಯ ಮೊದಲ ಪಂದ್ಯದಲ್ಲೂ ಸೋಲಿನ ರುಚಿ ಕಂಡಿತು.

    ವಿಂಡೀಸ್‌ ಪರ ಅಲ್ಜಾರಿ ಜೋಸೆಫ್‌ 2 ವಿಕೆಟ್‌ ಪಡೆದರೆ, ಒಬೆಡ್ ಮೆಕಾಯ್‌, ಜೇಸನ್‌ ಹೋಲ್ಡರ್‌, ಅಕೀಲ್‌ ಹೊಸೈನ್‌, ಕೀಮೋ ಪೌಲ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಟೀಂ ಇಂಡಿಯಾ ಅಬ್ಬರ: ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾದ ರೋಹಿತ್‌ ಶರ್ಮಾ ಹಾಗೂ ಸೂರ್ಯಕುಮಾರ್ ಯಾದವ್‌ ಉತ್ತಮ ಆರಂಭ ನೀಡಿದರು. ಇವರಿಬ್ಬರು ಮೊದಲ ವಿಕೆಟ್‌ಗೆ ಕೇವಲ 4.4 ಓವರ್‌ಗಳಲ್ಲೇ 44 ರನ್‌ ಕಲೆಹಾಕಿದರು. ಇದೇ ವೇಳೆ 24 ರನ್‌ಗಳಿಸಿದ್ದ ಸೂರ್ಯಕುಮಾರ್‌ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ ಸೇರಿದರು. ನಂತರದಲ್ಲಿ ಕ್ರೀಸ್‌ಗಿಳಿದ ಶ್ರೇಯಸ್‌ ಅಯ್ಯರ್‌ ಶೂನ್ಯಕ್ಕೆ ನಿರ್ಗಮಿಸಿದರೆ, ರಿಷಭ್‌ ಪಂತ್‌ 14 ರನ್‌, ಹಾರ್ದಿಕ್‌ ಪಾಂಡ್ಯ 1 ರನ್‌ ಹಾಗೂ ರವೀಂದ್ರ ಜಡೇಜಾ 16 ರನ್‌ಗಳಿಸಿದರು. ಭರವಸೆಯ ಆಟಗಾರರು ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು. ಕೊನೆಯಲ್ಲಿ ಬಂದ ದಿನೇಶ್‌ ಕಾರ್ತಿಕ್‌ ನಾಯಕ ರೋಹಿತ್‌ ಶರ್ಮಾಗೆ ಜೊತೆಯಾದರು.

    ಹಿಟ್‌ ಮ್ಯಾನ್‌ ರೋಹಿತ್‌, ಡಿಕೆ ಬ್ಯಾಟಿಂಗ್‌ ಅಬ್ಬರ: ನಾಯಕನ ಆಟವಾಡಿದ ರೋಹಿತ್‌ ಶರ್ಮಾ 44 ಎಸೆತಗಳಲ್ಲಿ 64 ರನ್‌ (7 ಬೌಂಡರಿ, 2 ಸಿಕ್ಸರ್‌) ಬಾರಿಸಿದರೆ, ದಿನೇಶ್‌ ಕಾರ್ತಿಕ್‌ ಕೇವಲ 19 ಎಸೆತಗಳಲ್ಲಿ 41 ರನ್‌(4 ಬೌಂಡರಿ, 2 ಸಿಕ್ಸರ್)‌ ಸಿಡಿಸಿ ವೆಸ್ಟ್‌ ಇಂಡೀಸ್‌ ಬೌಲರ್‌ಗಳ ಬೆವರಿಳಿಸಿದರು.

    ಕೊನೆಯಲ್ಲಿ ದಿನೇಶ್‌ ಕಾರ್ತಿಕ್‌ ಹಾಗೂ ರವಿಚಂದ್ರನ್‌ ಅಶ್ಚಿನ್‌ ಅವರ ಬಿರುಸಿನ ಆಟದಿಂದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 190 ರನ್‌ ಚಚ್ಚಿತ್ತು. ಇವರಿಬ್ಬರು 7ನೇ ವಿಕೆಟ್‌ಗೆ 24 ಎಸೆತಗಳಲ್ಲಿ 52 ರನ್‌ ಕಲೆಹಾಕಿದರು. ದಿನೇಶ್‌ 19 ಎಸೆತಗಳಲ್ಲಿ 41 ರನ್‌ ಬಾರಿಸಿದರೆ, ಅವರಿಗೆ ಅಶ್ವಿನ್‌ 13 ರನ್ ಗಳಿಸಿ, ಅಜೇರಾಗುಳಿದರು.

    ಟೀಂ ಇಂಡಿಯಾ ಪರ ರವಿಚಂದ್ರನ್‌ ಅಶ್ವಿನ್‌, ರವಿ ಬಿಷ್ನೋಯ್‌, ಅರ್ಶ್‌ದೀಪ್‌ ಸಿಂಗ್‌ ತಲಾ 2 ವಿಕೆಟ್‌ ಪಡೆದರೆ, ಭುವನೇಶ್ವರ್‌ ಕುಮಾರ್‌, ರವಿಂದ್ರ ಜಡೇಜಾ, ಹಾರ್ದಿಕ್‌ ಪಾಂಡ್ಯ, ತಲಾ ಒಂದೊಂದು ವಿಕೆಟ್‌ ಪಡೆದು ಟೀಂ ಇಂಡಿಯಾ ಗೆಲುವಿಗೆ ನೆರವಾದರು.

    ರನ್‌ ಏರಿದ್ದು ಹೇಗೆ?
    42 ಎಸೆತ, 50 ರನ್‌
    69 ಎಸೆತ, 100 ರನ್‌
    105 ಎಸೆತ, 150 ಎನ್‌
    120 ಎಸೆತ, 190 ರನ್‌

    Live Tv
    [brid partner=56869869 player=32851 video=960834 autoplay=true]

  • ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್‍ಗೆ ತವರಿನಲ್ಲಿ ಮುಖಭಂಗ

    ಪಂತ್, ಪಾಂಡ್ಯ ಪರಾಕ್ರಮ ಭಾರತಕ್ಕೆ ಏಕದಿನ ಸರಣಿ – ಇಂಗ್ಲೆಂಡ್‍ಗೆ ತವರಿನಲ್ಲಿ ಮುಖಭಂಗ

    ಲಂಡನ್: ರಿಷಭ್ ಪಂತ್ ಶತಕದಾಟ ಮತ್ತು ಹಾರ್ದಿಕ್ ಪಾಂಡ್ಯ ಆಲ್‍ರೌಂಡರ್ ಪ್ರದರ್ಶನದಿಂದಾಗಿ ಇಂಗ್ಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಅಂತರದ ಜಯ ಗಳಿಸಿ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

    ಇಂಗ್ಲೆಂಡ್ ನೀಡಿದ 260 ರನ್‍ಗಳ ಟಾರ್ಗೆಟ್ ಬೆನ್ನಟ್ಟಿದ ಭಾರತ ಪರ ಪಂತ್ ಆರ್ಭಟಿಸಿದರು. 38 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡ ವೇಳೆ ಕ್ರೀಸ್‌ಗೆ ಬಂದ ಪಂತ್ ಭಾರತದ ಗೆಲುವಿಗೆ ಟೊಂಕ ಕಟ್ಟಿ ನಿಂತರು. ಅಂತಿಮವಾಗಿ ಪಂತ್ ಅಜೇಯ 125 ರನ್ (113 ಎಸೆತ, 16 ಬೌಂಡರಿ, 1 ಸಿಕ್ಸ್) ಬಾರಿಸಿ 42.1 ಓವರ್‌ಗಳ ಅಂತ್ಯಕ್ಕೆ 261 ರನ್ ಚಚ್ಚಿ ಭಾರತಕ್ಕೆ 5 ವಿಕೆಟ್‍ಗಳ ಅಂತರದ ಜಯ ತಂದುಕೊಟ್ಟರು. ಈ ಮೂಲಕ ಇಂಗ್ಲೆಂಡ್ ತಂಡ ಟಿ20 ಹಾಗೂ ಏಕದಿನ ಸರಣಿ ಸೋತು ತವರಿನಲ್ಲಿ ಮುಖಭಂಗ ಅನುಭವಿಸಿದೆ.

    ಚೇಸಿಂಗ್‌ ವೇಳೆ ಪಂತ್‍ಗೆ ಹಾರ್ದಿಕ್ ಪಾಂಡ್ಯ ಸಾಥ್ ನೀಡಿದರು. ಈ ಜೋಡಿ ತಂಡದ ಗೆಲುವಿಗಾಗಿ 5ನೇ ವಿಕೆಟ್‍ಗೆ 133 ರನ್ (115 ಎಸೆತ)ಗಳ ಜೊತೆಯಾಟವಾಡಿ ಬೇರ್ಪಟ್ಟಿತು. ಪಾಂಡ್ಯ 71 ರನ್ (55 ಎಸೆತ, 10 ಬೌಂಡರಿ) ಸಿಡಿಸಿ ಔಟ್ ಆದರು. ಬಳಿಕ ಜಡೇಜಾ ಜೊತೆಗೂಡಿದ ಪಂತ್ 6ನೇ ವಿಕೆಟ್‍ಗೆ ಅಜೇಯ 56 ರನ್ (40 ಎಸೆತ) ಜೊತೆಯಾಟವಾಡಿ ಇನ್ನೂ 47 ಎಸೆತ ಬಾಕಿ ಇರುವಂತೆ 5 ವಿಕೆಟ್‍ಗಳ ಗೆಲುವು ತಂದುಕೊಟ್ಟರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಇಂಗ್ಲೆಂಡ್ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಮೊಹಮ್ಮದ್ ಸಿರಾಜ್ ದಾಳಿಗೆ ನಲುಗಿದ ಇಂಗ್ಲೆಂಡ್‍ನ ಟಾಪ್ ಆಡರ್ ಬ್ಯಾಟ್ಸ್‌ಮ್ಯಾನ್‌ಗಳಾದ ಬೈರ್‌ಸ್ಟೋವ್ ಮತ್ತು ಜೋ ರೂಟ್ ಶೂನ್ಯ ಸುತ್ತಿದರು. ಇತ್ತ ಜೇಸನ್ ರಾಯ್ ಕೆಲ ಕಾಲ ಉತ್ತಮ ಆಟ ಪ್ರದರ್ಶಿಸಿದರೂ ಅವರ ಆಟ 41 ರನ್ (31 ಎಸೆತ, 7 ಬೌಂಡರಿ)ಗೆ ಕೊನೆಗೊಂಡಿತು.

    ಪಾಂಡ್ಯ, ಚಹಲ್ ಚಮಕ್:
    ಆ ಬಳಿಕ ಬಂದ ನಾಯಕ ಜೋಸ್ ಬಟ್ಲರ್ ಏಕಾಂಗಿಯಾಗಿ ಇಂಗ್ಲೆಂಡ್ ರನ್ ಹೆಚ್ಚಿಸುವ ಜವಾಬ್ದಾರಿ ಹೊತ್ತರು ಇವರಿಗೆ ಮೊಯಿನ್ ಅಲಿ 34 ರನ್ (44 ಎಸೆತ, 2 ಸಿಕ್ಸ್), ಲಿವಿಂಗ್‍ಸ್ಟೋನ್ 27 ರನ್ (31 ಎಸೆತ, 2 ಬೌಂಡರಿ, 2 ಸಿಕ್ಸ್) ಸಿಡಿಸಿ ಉತ್ತಮ ಬೆಂಬಲ ನೀಡಿದರು. ಬಟ್ಲರ್ 60 ರನ್ (80 ಎಸೆತ, 3 ಬೌಂಡರಿ, 2 ಸಿಕ್ಸ್) ಚಚ್ಚಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಜಡೇಜಾ ಹಿಡಿದ ಸೂಪರ್ ಕ್ಯಾಚ್‍ಗೆ ಬಲಿಯಾದರು. ಇತ್ತ ಕೆಲ ಕ್ರಮಾಂಕದ ಬ್ಯಾಟ್ಸ್‌ಬ್ಯಾನ್‌ಗಳ ಅಬ್ಬರಕ್ಕೆ ಹಾರ್ದಿಕ್ ಪಾಂಡ್ಯ ಮತ್ತು ಯಜುವೇಂದ್ರ ಚಹಲ್ ಸೇರಿಕೊಂಡು ಕಡಿವಾಣ ಹಾಕಿದರು.

    ಅಂತಿಮವಾಗಿ ಕ್ರೇಗ್ ಓವರ್ಟನ್ 32 ರನ್ (33 ಎಸೆತ, 1 ಬೌಂಡರಿ, 1 ಸಿಕ್ಸ್) ನೆರವಿನಿಂದ ಇಂಗ್ಲೆಂಡ್ ತಂಡ 250ರ ಗಡಿದಾಟಿ 45.5 ಓವರ್‌ಗಳಲ್ಲಿ 259 ರನ್ ಸಿಡಿಸಿ ಆಲೌಟ್ ಆಯಿತು. ಭಾರತದ ಪರ ಪಾಂಡ್ಯ 4 ವಿಕೆಟ್ ಕಿತ್ತು ಮಿಂಚಿದರೆ, ಚಹಲ್ 3 ವಿಕೆಟ್ ಪಡೆದು ಶೈನ್ ಆದರು. ಉಳಿದಂತೆ ಸಿರಾಜ್ 2 ಮತ್ತು ಜಡೇಜಾ 1 ವಿಕೆಟ್ ಪಡೆದರು.

    Live Tv
    [brid partner=56869869 player=32851 video=960834 autoplay=true]

  • 17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ

    17 ವರ್ಷಗಳ ಬಳಿಕ ಧೋನಿ ದಾಖಲೆ ಸರಿಗಟ್ಟಿದ ಪಂತ್- ಅಂತಿಮ ಟೆಸ್ಟ್‌ನಲ್ಲಿ ಅಮೋಘ ಶತಕದಾಟ

    ಬರ್ಮಿಂಗ್‌ಹ್ಯಾಮ್‌: ಎಡ್ಜಾಬಸ್ಟನ್‌ ಕ್ರೀಡಾಂಗಣದಲ್ಲಿ ಇಂಗ್ಲೆಂಡ್ ವಿರುದ್ಧದ ಅಂತಿಮ ಟೆಸ್ಟ್‌ನ ಮೊದಲ ದಿನವೇ ಅಮೋಘ ಶತಕ ಸಿಡಿಸಿದ ವಿಕೆಟ್ ಕೀಪರ್ ರಿಷಭ್ ಪಂತ್ 17 ವರ್ಷಗಳ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

    ಟೆಸ್ಟ್ ಕ್ರಿಕೆಟ್‌ನಲ್ಲಿ 89 ಎಸೆತಗಳಲ್ಲಿ 5ನೇ ಬಾರಿಗೆ ಶತಕ ಸಿಡಿಸಿದ ಪಂತ್ ಅತಿ ವೇಗದ ಶತಕ ಬಾರಿಸಿದ ಕೀರ್ತಿಗೆ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು 2005ರಲ್ಲಿ ಫೈಸಲಾಬಾದ್‌ನಲ್ಲಿ ಪಾಕಿಸ್ತಾನದ ವಿರುದ್ಧ 93 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ಮಾಡಿದ್ದರು. ಪಂತ್ ಕೇವಲ 111 ಎಸೆತಗಳಲ್ಲಿ 146 ರನ್ ಗಳಿಸಿದರು. ಇದರಲ್ಲಿ 4 ಸಿಕ್ಸರ್ ಹಾಗೂ 19 ಬೌಂಡರಿಗಳೂ ಒಳಗೊಂಡಿವೆ.

    89 ಎಸೆತಗಳಲ್ಲಿ ದಾಖಲಾದ ಪಂತ್ ಶತಕವು ಅತ್ಯಂತ ವೇಗದ ಶತಕ ಎನಿಸಿಕೊಳ್ಳುವ ಜೊತೆಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅವರ ದಾಖಲೆಯನ್ನೂ ಸೋಲಿಸಿದ್ದಾರೆ. ಇದನ್ನೂ ಓದಿ: ಕಪಿಲ್ ದೇವ್ ನಂತರ 35 ವರ್ಷಗಳ ಬಳಿಕ ಭಾರತದ ನಾಯಕತ್ವ ಪಡೆದ ವೇಗಿ – ಬುಮ್ರಾ ಕ್ಯಾಪ್ಟನ್, ಪಂತ್ ವೈಸ್ ಕ್ಯಾಪ್ಟನ್

    ಪಂಥ್ ಅಮೋಘ ಶತಕ: ಇಂಗ್ಲೆಂಡ್ ವಿರುದ್ಧದ ಎಡ್ಜಾಬಸ್ಟನ್‌ ಕ್ರೀಡಾಂಗಣದಲ್ಲಿ ಅಂತಿಮ ಟೆಸ್ಟ್ನ ಮೊದಲ ದಿನವಾದ ಶುಕ್ರವಾರ ವಿಕೆಟ್ ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಅದ್ಭುತ ಶತಕ ಮತ್ತು ರವೀಂದ್ರ ಜಡೇಜಾ ಅವರ 222 ರನ್‌ಗಳ ಅಮೋಘ ಜೊತೆಯಾಟದ ನೆರವಿನಿಂದ ಭಾರತ 7 ವಿಕೆಟ್ ಕಳೆದುಕೊಂಡು 338 ರನ್ ಗಳಿಸಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 100 ರನ್‌ಗಳ ಗಡಿ ದಾಟುವ ಮೊದಲೇ ಅಗ್ರ ಕ್ರಮಾಂಕದ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಂಗ್ಲೆಂಡ್‌ನ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ಪ್ರಮುಖ 3 ವಿಕೆಟ್ ಕಿತ್ತು ಭಾರತಕ್ಕೆ ಆಘಾತ ನೀಡಿದ್ದರು. ಇದನ್ನೂ ಓದಿ: ಒಂದು ದಿನ ಮುಂಚಿತವಾಗಿ ಪ್ಲೇಯಿಂಗ್ 11 ಪ್ರಕಟಿಸಿದ ಇಂಗ್ಲೆಂಡ್ – ತಂಡದಲ್ಲಿ ಯಾರೆಲ್ಲಾ ಇದ್ದಾರೆ?

    ನಂತರ 6ನೇ ವಿಕೆಟ್‌ಗೆ ಜೊತೆಯಾದ ರಿಷಭ್ ಪಂತ್ ಮತ್ತು ರವೀಂದ್ರ ಜಡೇಜಾ ಪ್ರತಿ ಹೋರಾಟ ನಡೆಸಿ ಅರ್ಧಶತಕದ ಜೊತೆಯಾಟ ಕಟ್ಟಿದರು. ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ರಿಷಭ್ ಪಂತ್ ಇಂಗ್ಲೆಂಡ್ ನೆಲದಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ತಂಡಕ್ಕೆ ನೆರವಾದರು. ಸದ್ಯ ಎಚ್ಚರಿಕೆಯಿಂದ ಬ್ಯಾಟ್ ಮಾಡುತ್ತಿರುವ ರವೀಂದ್ರ ಜಡೇಜಾ 163 ಎಸೆತಗಳನ್ನು ಎದುರಿಸಿ 10 ಬೌಂಡರಿಗಳೊಂದಿಗೆ 83 ರನ್‌ಗಳನ್ನು ಕಲೆಹಾಕಿದ್ದಾರೆ. ಇವರಿಗೆ ಜೊತೆಯಾಗಿ ಮೊಹಮ್ಮದ್ ಶಮಿ ಕ್ರೀಸ್‌ನಲ್ಲಿ ಇದ್ದಾರೆ.

    5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 2-1ರ ಅಂತರದಲ್ಲಿ ಮೇಲುಗೈ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳಲು ಬುಮ್ರಾ ಪಡೆ ಸಜ್ಜಾಗಿದೆ.

    Live Tv

  • ಋತುರಾಜ್‌ – ಇಶಾನ್‌ ಶೈನ್‌, ಹರ್ಷಲ್‌ ಬೌಲಿಂಗ್‌ ಕಮಾಲ್‌ – ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ

    ಋತುರಾಜ್‌ – ಇಶಾನ್‌ ಶೈನ್‌, ಹರ್ಷಲ್‌ ಬೌಲಿಂಗ್‌ ಕಮಾಲ್‌ – ಭಾರತಕ್ಕೆ 48 ರನ್‌ಗಳ ಭರ್ಜರಿ ಜಯ

    ಮುಂಬೈ: ಋತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅಮೋಘ ಅರ್ಧ ಶತಕಗಳ ಅಬ್ಬರ ಹಾಗೂ ಯಜುವೇಂದ್ರ ಚಾಹಲ್‌, ಹರ್ಷಲ್‌ ಪಟೇಲ್‌ ಅವರ ಬೌಲಿಂಗ್‌ ಕಮಾಲ್‌ ನಿಂದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ 48 ರನ್‌ಗಳ ಭರ್ಜರಿ ಜಯ ಸಾಧಿಸಿತು.

    ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 3ನೇ T20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಭಾರತ ತಂಡ 5 ವಿಕೆಟ್ ಕಳೆದುಕೊಂಡು 179 ರನ್ ಗಳಿಸಿ, ಎದುರಾಳಿ ತಂಡಕ್ಕೆ 180 ರನ್‌ಗಳ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು 19.1 ಓವರ್‌ಗಳಲ್ಲೇ 131 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಭಾರತಕ್ಕೆ ಮಂಡಿಯೂರಿತು. ಇದನ್ನೂ ಓದಿ: ವಿಶ್ವದ ದುಬಾರಿ ಕ್ರೀಡೆಯಾಗಿ ಹೊರಹೊಮ್ಮಿದ IPL

    ಕಳೆದ ಎರಡು ಪಂದ್ಯಗಳಲ್ಲಿ ಹೋರಾಡಿ ಸೋತಿದ್ದ ಭಾರತ 3ನೇ ಪಂದ್ಯದಲ್ಲಿ ಎದುರಾಳಿ ತಂಡವನ್ನು ಮಣ್ಣುಮುಕ್ಕಿಸುವ ಮೂಲಕ ಸರಣಿ ಆಥಿತೇಯರ ಕೈವಶವಾಗುವುದನ್ನು ತಪ್ಪಿಸಿತು. ಇದನ್ನೂ ಓದಿ: ಕನ್ನಡ ಸಿನಿಮಾದಲ್ಲಿ ನಟಿಸಿದ್ರಾ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ?: ರಕ್ಷಿತ್ ಶೆಟ್ಟಿ ಸಿನಿಮಾದಲ್ಲಿ ಮಾಜಿ ಕ್ರಿಕೆಟ್ ನಾಯಕ

    ಟಾಸ್‌ ಸೋತು ನಂತರ ಬ್ಯಾಟಿಂಗ್‌ ಮಾಡಿದ ದಕ್ಷಿಣಾಫ್ರಿಕಾ ತಂಡ ಪವರ್‌ ಪ್ಲೇನಲ್ಲಿ ಒಂದು ವಿಕೆಟ್‌ ಕಳೆದುಕೊಂಡರೂ ಸಾಧಾರಣ ಮೊತ್ತ ದಾಖಲಿಸಿತ್ತು. 36 ಎಸೆತಗಳಲ್ಲಿ 37 ರನ್‌ಗಳನ್ನು ಕಲೆಹಾಕಿತ್ತು. ನಂತರ ತನ್ನ ಬೌಲಿಂಗ್‌ ಪರಾಕ್ರಮ ಮೆರೆದ ಟೀಂ ಇಂಡಿಯಾ ಬೌಲರ್‌ಗಳು ಪ್ರಮುಖ ಬ್ಯಾಟರ್‌ಗಳನ್ನು ಉರುಳಿಸಿದರು.

    ಎಸ್‌ಎ ಕ್ಯಾಪ್ಟನ್‌ ತೆಂಬಾ ಬವುಮಾ ಪವರ್‌ ಪ್ಲೇನಲ್ಲೇ ಕೇವಲ 8 ರನ್‌ಗಳಿಸಿ ವಿಕೆಟ್‌ ಒಪ್ಪಿಸಿದರು. ಮತ್ತೋರ್ವ ಆರಂಭಿಕ ಆಟಗಾರನಾಗಿ ಕಣಕ್ಕಿಳಿದಿದ್ದ ರೀಜಾ ಹೆನ್ರಿಕ್ಸ್ 20 ಎಸೆತಗಳಲ್ಲಿ 23 ರನ್‌ಗಳಿಸಿದರು. ಇದಕ್ಕೆ ಜೊತೆಯಾದ ಡ್ವೇನ್ ಪ್ರಿಟೊರಿಯಸ್ 16 ಎಸೆತಗಳಲ್ಲಿ 20 ರನ್‌ಗಳಿಸಿ ಪೆವಿಲಿಯನ್‌ ಸೇರಿದರು. ಇನ್ನು ಕಳೆದೆರಡು ಪಂದ್ಯಗಳಲ್ಲಿ ಟೀಂ ಇಂಡಿಯಾಗಿ ಕಂಠಕವಾಗಿದ್ದ ಸ್ಫೋಟಕ ಬ್ಯಾಟ್ಸ್‌ಮನ್‌ ಡೇವಿಡ್‌ ಮಿಲ್ಲರ್‌ ಹಾಗೂ ಡುಸ್ಸೆನ್‌ ಕ್ರಮವಾಗಿ 3 ಮತ್ತು 1 ರನ್‌ಗಳಿಸಿ ಹೊರನಡೆದರು. ಹೆನ್ರಿಚ್ ಕ್ಲಾಸೆನ್ 24 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿಯೊಂದಿಗೆ 29 ರನ್‌ಗಳಿಸಿದರೆ, ಕಗಿಸೊ ರಬಾಡ 9 ರನ್‌ ಹೊಡೆದರು.

    ಪ್ರಮುಖ ಬ್ಯಾಟರ್‌ಗಳ ವೈಫಲ್ಯ ತಂಡದ ಸೋಲಿಗೆ ಕಾರಣವಾಯ್ತು. ದಕ್ಷಿಣ ಆಫ್ರಿಕಾ ಪರ ಡ್ವೇನ್ ಪ್ರಿಟೊರಿಯಸ್ 2, ಕೇಶವ್ ಮಹಾರಾಜ್ 1, ತಬ್ರೆಜ್ ಶಮ್ಸಿ 1 ಹಾಗೂ ರಬಾಡ 1 ವಿಕೆಟ್ ಪಡೆದರು.  ಇದನ್ನೂ ಓದಿ: IPL: ಪ್ರತಿ ಪಂದ್ಯದ ಪ್ರಸಾರ ಹಕ್ಕು 100 ಕೋಟಿಗೂ ಅಧಿಕ – ಇಂದು ಮತ್ತಷ್ಟು ಏರಿಕೆ ಸಾಧ್ಯತೆ

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ಋತುರಾಜ್ ಗಾಯಕ್ವಾಡ್‌ ಹಾಗೂ ಇಶಾನ್ ಕಿಶನ್ ಅವರ ಅಬ್ಬರದ ಅರ್ಧಶತಕಗಳ ನೆರವಿನಿಂದ ದಕ್ಷಿಣ ಆಫ್ರಿಕಾಕ್ಕೆ 180 ರನ್ ಗುರಿ ನೀಡಿತು. ಇದನ್ನೂ ಓದಿ: T20 ಸರಣಿ: ದಕ್ಷಿಣ ಆಫ್ರಿಕಾಗೆ ಸತತ 2ನೇ ಗೆಲುವು – ಹೋರಾಡಿ ಸೋತ ಭಾರತ

    ಗಾಯಕ್ವಾಡ್‌ ಇಶಾನ್‌ ಶೈನ್‌:
    ಟೀಮ್ ಇಂಡಿಯಾಕ್ಕೆ ಆರಂಭಿಕರಾದ ಗಾಯಕವಾಡ್ ಹಾಗೂ ಇಶಾನ್ ಭದ್ರ ಬುನಾದಿ ಹಾಕಿಕೊಟ್ಟರು. ಕಳೆದ 2 ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಗಾಯಕ್ವಾಡ್‌ ಇಂದಿನ ಪಂದ್ಯದಲ್ಲಿ ಆರಂಭದಿಂದಲೇ ಅತಿಥೇಯ ತಂಡದ ಬೌಲರ್‌ಗಳ ಬೆವರಿಳಿಸಿದರು. ಗಾಯಕ್ವಾಡ್‌ 34 ಎಸೆತಗಳಲ್ಲಿ 57 ರನ್‌ ಚಚ್ಚಿ 57 ರನ್ (7 ಬೌಂಡರಿ, 2 ಸಿಕ್ಸರ್‌) ಗಳಿಸಿ ತಮ್ಮ 35ನೇ ಎಸೆತದಲ್ಲಿ ಮಹಾರಾಜ್‌ಗೆ ವಿಕೆಟ್ ಒಪ್ಪಿಸಿದರು.

    ಇದೇ ವೇಳೆ ಆರಂಭಿಕನಾಗಿ ಕಣಕ್ಕಿಳಿದಿದ್ದ ಇಶಾನ್‌ ಕಿಶನ್‌ ಸಹ 35 ಎಸೆತಗಳಲ್ಲಿ 54 ರನ್‌ (2 ಸಿಕ್ಸರ್‌, 5 ಬೌಂಡರಿ) ಪೇರಿಸಿದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರರ್ಶನದಿಂದ ಟೀಂ ಇಂಡಿಯಾ 180 ರನ್‌ ಗುರಿ ನೀಡಲು ಸಾಧ್ಯವಾಯಿತು.

    ನಿಗದಿತ 20 ಓವರ್‌ಗಳಲ್ಲಿ ಟೀಂ ಇಂಡಿಯಾ 200 ರನ್‌ಗಳ ಗುರಿ ತಲುಪುವ ನಿರೀಕ್ಷೆಯಿತ್ತು. ಆದರೆ ನಂತರ ಕ್ರಮಾಂಕದಲ್ಲಿ ಬಂದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಶ್ರೇಯಸ್‌ ಅಯ್ಯರ್‌ 14 ರನ್‌, ರಿಷಭ್‌ ಪಂತ್‌ 6 ರನ್‌ ದಿನೇಶ್‌ ಕಾರ್ತಿಕ್‌ 6 ರನ್‌ ಗಳಿಸಿದರೆ ಅಕ್ಷರ್‌ ಪಟೇಲ್‌ ಸಹ 6 ರನ್‌ಗಳಿಸಿ ಅಜೇಯರಾಗುಳಿದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್‌ ಪಾಂಡ್ಯ 21 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 31 ರನ್‌ ಸಿಡಿಸಿ ಅಜೇಯರಾಗುಳಿದರು.

    ಚಾಹಲ್‌, ಪಟೇಲ್‌ ಬೌಲಿಂಗ್‌ ಕಮಾಲ್‌: ತಮ್ಮ ಬೌಲಿಂಗ್‌ ದಾಳಿಯಿಂದ ದಕ್ಷಿಣ ಆಫ್ರಿಕಾದ ಪ್ರಮುಖ ಬ್ಯಾಟರ್‌ಗಳನ್ನು ಉರುಳಿಸುವಲ್ಲಿ ಯಜುವೇಂದ್ರ ಚಾಹಲ್‌ ಹಾಗೂ ಹರ್ಷಲ್‌ ಪಟೇಲ್‌ ಯಶಸ್ವಿಯಾದರು. ಚಾಹಲ್‌ 4 ಓವರ್‌ಗಳಲ್ಲಿ 20 ರನ್ ನೀಡಿ 3 ವಿಕೆಟ್‌ ಪಡೆದರೆ, ಹರ್ಷಲ್‌ ಪಟೇಲ್‌ 3.1 ಓವರ್‌ನಲ್ಲಿ 25 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದರು. ಇದು ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಯ್ತು. ಅಕ್ಷರ್‌ ಪಟೇಲ್‌ 1 ವಿಕೆಟ್‌ ಪಡೆದರು.

  • T20 ಸರಣಿ: ದಕ್ಷಿಣ ಆಫ್ರಿಕಾಗೆ ಸತತ 2ನೇ ಗೆಲುವು – ಹೋರಾಡಿ ಸೋತ ಭಾರತ

    T20 ಸರಣಿ: ದಕ್ಷಿಣ ಆಫ್ರಿಕಾಗೆ ಸತತ 2ನೇ ಗೆಲುವು – ಹೋರಾಡಿ ಸೋತ ಭಾರತ

    ಮುಂಬೈ: ನಾಯಕ ಟೆಂಬಾ ಬವುಮಾ, ಹೆನ್ರಿಚ್ ಕ್ಲಾಸೆನ್ ಅವರ ಬ್ಯಾಟಿಂಗ್‌ ಆಸರೆಯಿಂದ ದಕ್ಷಿಣ ಆಫ್ರಿಕಾ ಟೀಂ ಇಂಡಿಯಾ ವಿರುದ್ಧ ನಡೆದ T20 ಸರಣಿಯ 2ನೇ ಪಂದ್ಯದಲ್ಲಿ 4 ವಿಕೆಟ್‌ಗಳ ಜಯ ಸಾಧಿಸಿತು.

    ಒಡಿಶಾದ ಬಾರಾಬತಿ ಕ್ರೀಡಾಂಗಣದಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 148ರನ್‌ ಗಳಿಸಿ, ಎದುರಾಳಿ ದಕ್ಷಿಣ ಆಫ್ರಿಕಾಗೆ 149 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನಿಗದಿತ 18.2 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 149 ರನ್‌ಗಳಿಸುವ ಮೂಲಕ ಸತತ 2ನೇ ಗೆಲುವು ದಾಖಲಿಸಿತು.

    ಆರಂಭದಲ್ಲೇ ಆಘಾತ: ಹಿಂದಿನ ಪಂದ್ಯದಂತೆಯೇ ಆರಂಭದಲ್ಲೇ ಆಘಾತ ಎದುರಿಸಿದ ದಕ್ಷಿಣ ಆಫ್ರಿಕಾ ತಂಡವು ಪವರ್‌ ಪ್ಲೇ ನಲ್ಲೇ 3 ವಿಕೆಟ್‌ಗಳನ್ನು ಕಳೆದುಕೊಂಡಿತು. 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಬೌಲರ್‌ಗಳ ಪರಾಕ್ರಮಕ್ಕೆ ದಕ್ಷಿಣ ಆಫ್ರಿಕಾ ತಂಡ ಹೈರಾಣಾಗಿತ್ತು. ಇದರಿಂದ ಟೀಂ ಇಂಡಿಯಾ ಗೆಲುವಿನ ವಿಶ್ವಾಸವನ್ನೂ ಕಂಡಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹೆನ್ರಿಚ್ ಕ್ಲಾಸೆನ್ ನಿಧಾನಗತಿಯಲ್ಲೇ ಬ್ಯಾಟಿಂಗ್‌ ಆರಂಭಿಸಿ, ನಂತರ ಭಾರತದ ಬೌಲರ್‌ಗಳ ಬೆವರಿಳಿಸಿದರು. ಇದನ್ನೂ ಓದಿ: ಮಿಂಚಿದ ಮಿಲ್ಲರ್‌, ಡುಸ್ಸೆನ್‌ – ದಕ್ಷಿಣ ಆಫ್ರಿಕಾಗೆ 7 ವಿಕೆಟ್‌ಗಳ ಜಯ

    ಆರಂಭಿಕ ಆಟಗಾರ ತೆಂಬಾ 30 ಎಸೆತಗಳಲ್ಲಿ 1 ಸಿಕ್ಸರ್‌, 4 ಬೌಂಡರಿಯೊಂದಿಗೆ 35 ರನ್‌ಗಳಿಸಿದರೆ, ರೀಜಾ ಹೆಂಡ್ರಿಕ್ಸ್ ಹಾಗೂ ವೇಯ್ನ್ ಪಾರ್ನೆಲ್ ತಲಾ 4 ರನ್‌ಗಳಿಸಿ ಪೆವಿಲಿಯನ್‌ ಸೇರಿದರು. ಕಳೆದ ಬಾರಿ ಆಕರ್ಷಕ ಅರ್ಧ ಶತಕಗಳಿಸಿದ್ದ ಡುಸ್ಸೆನ್‌ ಕೇವಲ 1 ರನ್‌ಗಳಿಸಿ ಮಂಡಿಯೂರಿದರು.

    ನಂತರ ಹೆನ್ರಿಚ್ ಕ್ಲಾಸೆನ್ 46 ಎಸೆತಗಳಲ್ಲಿ 81 ರನ್‌ ( 5 ಸಿಕ್ಸರ್‌, 7 ಬೌಂಡರಿ) ಅಬ್ಬರಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. ಇದಕ್ಕೆ ಸಾತ್‌ ನೀಡಿದ ಡೇವಿಡ್‌ ಮಿಲ್ಲರ್‌ 15 ಎಸೆತಗಳಲ್ಲಿ 20 ರನ್‌ಗಳಿಸಿ ಅಜೇಯರಾಗುಳಿದರು. ವೇಯ್ನ್ ಪಾರ್ನೆಲ್ 1 ರನ್‌ಗಳಿಸಿ ಪೆವಿಲಿಯನ್‌ ಸೇರಿದರು.

    ಉತ್ತಮ ಬೌಲಿಂಗ್‌: 4 ಓವರ್‌ ಮಾಡಿದರೂ, ಕೇವಲ 15ರನ್‌ ನೀಡಿದ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ 1 ವಿಕೆಟ್‌ ಗಳಿಸಿದರು. 4 ಓವರ್‌ಗಳಲ್ಲಿ 36 ರನ್‌ ನೀಡಿದ ಅನ್ರಿಚ್ ನಾರ್ಕಿಯಾ 2 ವಿಕೆಟ್‌ ಗಳಿಸಿ ಸೈ ಎನಿಸಿಕೊಂಡರು.

    ಮೊದಲು ಬ್ಯಾಟ್‌ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾಗೆ 149 ರನ್‌ಗಳ ಗುರಿ ನೀಡಿತು. ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್‌ ಗಾಯಕ್ವಾಡ್‌ 4 ಎಸೆತಗಳಲ್ಲಿ 1 ರನ್‌ ಗಳಿಸಿ ವಿಕೆಟ್‌ ಒಪ್ಪಿಸುವ ಮೂಲಕ ನಿರಾಸೆ ಮೂಡಿಸಿದರು. ಮತ್ತೋರ್ವ ಆರಂಭಿಕನಾಗಿ ಕಣಕ್ಕಿಳಿದಿದ್ದ ಇಶಾನ್‌ ಕಿಶನ್‌ ಹಾಗೂ 2ನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಶ್ರೇಯಸ್‌ ಅಯ್ಯರ್‌ ಜೊತೆಯಾಟ ಟೀಂ ಇಂಡಿಯಾಗೆ ಆಸರೆಯಾಯಿತು.

    ಇಶಾನ್‌ ಕಿಶನ್‌ 21 ಎಸೆತಗಳಲ್ಲಿ 34 ರನ್‌ (3 ಸಿಕ್ಸರ್‌, 2 ಬೌಂಡರಿ) ಕಲೆಹಾಕಿದರೆ, ಶ್ರೇಯಸ್‌ ಅಯ್ಯರ್‌ 35 ಎಸೆತಗಳಲ್ಲಿ ಜವಾಬ್ದಾರಿಯುತ 40 ರನ್‌ (2 ಬೌಂಡರಿ, 2 ಸಿಕ್ಸರ್‌) ಗಳಿಸಿ ಇನ್ನಿಂಗ್ಸ್‌ ಕಟ್ಟಿದರು.

    ನಂತರದಲ್ಲಿ ಕ್ರೀಸ್‌ಗಿಳಿದ ರಿಷಭ್‌ ಪಂತ್‌ 5 ರನ್‌, ಹಾರ್ದಿಕ್‌ ಪಾಂಡ್ಯ 9 ರನ್‌, ಅಕ್ಷರ್‌ ಪಟೇಲ್‌ 10 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಆದರೆ ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ದಿನೇಶ್‌ ಕಾರ್ತಿಕ್‌ 21 ಎಸೆತಗಳಲ್ಲಿ 2 ಸಿಕ್ಸರ್‌ ಹಾಗೂ 2 ಬೌಂಡರಿಯೊಂದಿಗೆ 30 ರನ್‌ ಸಿಡಿಸಿ ಗಮನ ಸೆಳೆದರು.

    ಭುವನೇಶ್ವರ್ ಕುಮಾರ್ ಬೌಲಿಂಗ್‌ ಮಿಂಚು: ಟೀಂ ಇಂಡಿಯಾದಲ್ಲಿ ಮಿಂಚಿನ ಬೌಲಿಂಗ್‌ ದಾಳಿ  ನಡೆಸಿದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ ಕೇವಲ 13 ರನ್‌ ನೀಡಿ 4 ವಿಕೆಟ್‌ಗಳನ್ನು ಪಡೆದರು.

  • ಟಿ20 ಸರಣಿಯಿಂದ ಕೆ.ಎಲ್ ರಾಹುಲ್ ಔಟ್ – ಪಂತ್‍ಗೆ ಒಲಿದ ನಾಯಕತ್ವ

    ಟಿ20 ಸರಣಿಯಿಂದ ಕೆ.ಎಲ್ ರಾಹುಲ್ ಔಟ್ – ಪಂತ್‍ಗೆ ಒಲಿದ ನಾಯಕತ್ವ

    ಮುಂಬೈ: ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವೆ ನಾಳೆಯಿಂದ ಆರಂಭವಾಗಬೇಕಾಗಿದ್ದ ಟಿ20 ಸರಣಿ ಆರಂಭಕ್ಕೂ ಮುನ್ನ ಗಾಯಾಳುವಾಗಿ ನಾಯಕ ಕೆ.ಎಲ್ ರಾಹುಲ್ ಸರಣಿಯಿಂದ ಹೊರಬಿದ್ದಿದ್ದಾರೆ.

    ಟೀಂ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಿರುವುದರಿಂದ ತಂಡವನ್ನು ಮುನ್ನಡೆಸುವ ಹೊಣೆ ಕೆ.ಎಲ್ ರಾಹುಲ್‍ಗೆ ಹೊರಿಸಲಾಗಿತ್ತು. ಆದರೆ ಸರಣಿ ಆರಂಭಕ್ಕೂ ಮುನ್ನ ರಾಹುಲ್ ಗಾಯಾಳುವಾಗಿ ಸರಣಿಯಿಂದಲೇ ಹೊರ ನಡೆದಿದ್ದಾರೆ. ಇದನ್ನೂ ಓದಿ: ನೂತನ ದಾಖಲೆಯತ್ತ ಕಣ್ಣಿಟ್ಟ ಟೀಂ ಇಂಡಿಯಾ

    ರಾಹುಲ್ ಮತ್ತು ಕುಲ್‍ದೀಪ್ ಯಾದವ್ ಗಾಯಾಳುವಾಗಿರುವುದರಿಂದ ತಂಡದಿಂದ ಹೊರ ನಡೆದಿದ್ದು, ರಿಷಬ್ ಪಂತ್‍ಗೆ ನಾಯಕತ್ವ ನೀಡಲಾಗಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಿಸಿದ ಮಿಥಾಲಿ ರಾಜ್

    ಈಗಾಗಲೇ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಬುಮ್ರಾಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ರಾಹುಲ್ ಗಾಯಾಳುವಾಗಿರುವುದರಿಂದ ಪಂತ್ ನಾಯಕನಾದರೆ, ಹಾರ್ದಿಕ್ ಪಾಂಡ್ಯಗೆ ಉಪನಾಯಕನ ಪಟ್ಟ ಕಟ್ಟಲಾಗಿದೆ. ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ 5 ಪಂದ್ಯಗಳ ಟಿ20 ಸರಣಿ ಆರಂಭಗೊಳ್ಳಲಿದೆ.

  • ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ಪಂದ್ಯ ಗೆದ್ದು IPL ಸೀಸನ್‌ಗೆ ಗುಡ್‌ಬೈ ಹೇಳಿದ ಮುಂಬೈ- ಸೋಲಿಗೆ ಕಾರಣ ಬಿಚ್ಚಿಟ್ಟ ರಿಷಭ್ ಪಂತ್

    ನವದೆಹಲಿ: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ IPL ಟೂರ್ನಿಯ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರು ದೆಹಲಿ ಕ್ಯಾಪಿಟಲ್ಸ್ ಸೋಲು ಕಂಡಿತು. ಕಳಪೆ ಪ್ರದರ್ಶನ ನೀಡಿ ಟೂರ್ನಿಯಿಂದ ಹೊರಬಿದ್ದಿದ್ದ ಮುಂಬೈ ತನ್ನ ಜೊತೆಗೆ ದೆಹಲಿಯನ್ನೂ ಸೀಸನ್‌ನಿಂದ ಹೊರಗೆಳೆಯಿತು.

    ಐಪಿಎಲ್ 15ನೇ ಆವೃತ್ತಿಯಲ್ಲಿ ತನ್ನ 14ನೇ ಪಂದ್ಯವನ್ನಾಡಿದ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಆವೃತ್ತಿಗೆ ಗುಡ್‌ಬೈ ಹೇಳಿತು. 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ರೋಹಿತ್ ಶರ್ಮಾ ಪಡೆಯಿಂದ RCB ತಂಡವು ಪ್ಲೇ ಆಫ್ ಪ್ರವೇಶಿಸಲು ಸಹಕಾರಿಯಾಯಿತು. ಇದನ್ನೂ ಓದಿ: ಈಡೇರಿದ ಬೆಂಗ್ಳೂರು ಅಭಿಮಾನಿಗಳ ಬಯಕೆ – ಆರ್‌ಸಿಬಿ ಪ್ಲೇ ಆಫ್‍ಗೆ ಡೆಲ್ಲಿ ಮನೆಗೆ

    TIM DEVID

    ಕೊನೆಯ ಪಂದ್ಯವನ್ನು ಗೆದ್ದಿದ್ದರೆ ದೆಹಲಿಗೆ ಪ್ಲೇ ಆಫ್ ಪ್ರವೇಶಿಸುವ ಉತ್ತಮ ಅವಕಾಶವಿತ್ತು. ಮುಂಬೈ ವಿರುದ್ಧ ರಿಷಭ್ ಪಂತ್ ಪಡೆಯ ಗೆಲುವಿಗೆ ಉತ್ತಮ ಅವಕಾಶವಿತ್ತು. ಆದರೆ ಸುಲಭವಾಗಿ ಗೆಲ್ಲುವ ಪಂದ್ಯದಲ್ಲಿ ದೆಹಲಿ ಸೋಲಬೇಕಾಯಿತು. ಮ್ಯಾಚ್ ಮುಗಿದ ಬಳಿಕ ತಮ್ಮ ತಂಡದ ಸೋಲಿಗೆ ಕಾರಣವೇನೆಂಬುದನ್ನು ನಾಯಕ ರಿಷಭ್ ಪಂತ್ ಹೇಳಿದ್ದಾರೆ. ಇದನ್ನೂ ಓದಿ: ಡೆಲ್ಲಿ ವಿರುದ್ಧದ ಪಂದ್ಯದ ಮೂಲಕ ಅರ್ಜುನ್ ತೆಂಡೂಲ್ಕರ್ ಐಪಿಎಲ್‍ಗೆ ಪದಾರ್ಪಣೆ?

    ಈ ಕುರಿತು ಮಾತನಾಡಿದ ರಿಷಭ್ ಪಂತ್, ನಾವು ಉತ್ತಮವಾಗಿಯೇ ಆಡಿದ್ದೆವು. ಆದರೆ ಕೆಲವು ತಪ್ಪುಗಳಿಂದಾಗಿ ಸೋಲಬೇಕಾಯಿತು. ಬೌಲಿಂಗ್ ಮತ್ತು ಫೀಲ್ಡಿಂಗ್‌ನಲ್ಲಿ ಫೇಲ್ ಆಗಿದ್ದರಿಂದ ಸೋಲಾಗಿದೆ. ಟೂರ್ನಿಯುದ್ದಕ್ಕೂ ನಾವು ಇದೇ ತೊಂದರೆಯನ್ನು ಎದುರಿಸಿದ್ದೇವೆ. ನಾವು ನಮ್ಮ ತಪ್ಪುಗಳಿಂದ ಪಾಠ ಕಲಿತಿದ್ದೇವೆ. ಮುಂದಿನ ಸೀಸನ್‌ನಲ್ಲಿ ಬಲಿಷ್ಠ ತಂಡವಾಗಿ ಮರಳುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮುಂಬೈ ಇಂಡಿಯನ್ಸ್ ತಂಡದ ಈ ಗೆಲುವಿನಲ್ಲಿ ಟಿಮ್ ಡೇವಿಡ್ ಪಾತ್ರ ಬಹುಮುಖ್ಯವಾಗಿದೆ. ಕೇವಲ 11 ಎಸೆತಗಳಲ್ಲಿ ಅವರು 34 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿ ತಂಡಕ್ಕೆ ಗೆಲುವು ತಂದುಕೊಟ್ಟರು. ಒಂದು ಬಾರಿ ಟಿಮ್ ಡೇವಿಡ್ ಕ್ಲೀನ್ ಔಟ್ ಆಗಿದ್ದರು. ಆದರೆ ಅಂಪೈರ್ ಔಟ್ ನೀಡಲಿಲ್ಲ. ಈ ವೇಳೆ ರಿಷಭ್ ಪಂತ್ ಡಿಆರ್‌ಎಸ್ ರಿವ್ಯೂ ತೆಗೆದುಕೊಳ್ಳಲಿಲ್ಲ. ಆದರೆ ಟಿಮ್ ಡೇವಿಡ್ ಸ್ಪಷ್ಟವಾಗಿ ಔಟಾಗಿರುವುದು ಬಳಿಕ ಗೊತ್ತಾಯಿತು. ಇದರಿಂದಾಗಿ ದೆಹಲಿಗೆ ದೊಡ್ಡ ಹೊಡೆತ ಬಿದ್ದಂತಾಯಿತು. ಒಂದು ವೇಳೆ ರಿವ್ಯೂ ತೆಗೆದುಕೊಂಡಿದ್ದರೆ ಟಿಮ್ ಡೇವಿಡ್ ಸ್ಫೋಟಕ ಆಟಕ್ಕೆ ಬ್ರೇಕ್ ಬೀಳುತ್ತಿತ್ತು. ಡೆಲ್ಲಿ ಕ್ಯಾಪಿಟಲ್ಸ್ ಗೆಲುವು ಸಾಧ್ಯವೂ ಆಗುತ್ತಿತ್ತು.

    ಕ್ಯಾಚ್ ಕೈಚೆಲ್ಲಿದ್ದೇ ಎಡವಟ್ಟಾಯ್ತು: ರಿಷಭ್ ಪಂತ್ ಸೇರಿದಂತೆ ದೆಹಲಿಯ ಕೆಲ ಆಟಗಾರರು ಕೆಲವು ಸುಲಭ ಕ್ಯಾಚ್‌ಗಳನ್ನು ಕೈಚೆಲ್ಲಿದ್ದು ತಂಡಕ್ಕೆ ಭಾರೀ ಪೆಟ್ಟು ನೀಡಿತು. ಉತ್ತಮ ಫೀಲ್ಡಿಂಗ್ ಮಾಡಿದ್ದರೆ ಮುಂಬೈ ವಿರುದ್ಧ ದೆಹಲಿ ಗೆಲುವು ಸಾಧಿಸುವ ಎಲ್ಲ ಸಾಧ್ಯತೆಗಳು ಇದ್ದವು. ಆದರೆ ಕೈಚೆಲ್ಲಿದ ಕ್ಯಾಚ್‌ಗಳಿಂದ ದೆಹಲಿ ಸೋಲು ಕಾಣಬೇಕಾಯಿತು.

  • ಕಾನ್ವೆ ಬ್ಯಾಟಿಂಗ್ ಅಬ್ಬರ, ಮೊಯಿನ್ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ – ಚೆನ್ನೆಗೆ 91 ರನ್‌ಗಳ ಗೆಲುವು

    ಕಾನ್ವೆ ಬ್ಯಾಟಿಂಗ್ ಅಬ್ಬರ, ಮೊಯಿನ್ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ – ಚೆನ್ನೆಗೆ 91 ರನ್‌ಗಳ ಗೆಲುವು

    ಮುಂಬೈ: ಡಿವೈನ್ ಕಾನ್ವೆಯ ಸ್ಫೋಟಕ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಮಿಂಚಿನ ಬೌಲಿಂಗ್ ದಾಳಿಯಿಂದ ಚೆನ್ನೈ ಸೂಪರ್‌ಕಿಂಗ್ಸ್ 91 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

    ಮುಂಬೈನ ಡಾ.ಡಿ.ವೈ.ಸ್ಪೋರ್ಟ್ಸ್ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್‌ಕಿಂಗ್ಸ್ ತಂಡವು 20 ಓವರ್‌ಗಳಲ್ಲಿ ಭರ್ಜರಿ 208 ರನ್ ಪೇರಿಸಿ, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.4 ಓವರ್‌ಗಳಲ್ಲೇ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 117 ರನ್‌ಗಳಿಸಿ ಸಿಎಸ್‌ಕೆಗೆ ಮಂಡಿಯೂರಿತು.

    IPL 2022 CSK VS DC 06

    ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ರಿಷಭ್ ಪಂತ್ ಬೌಲಿಂಗ್ ಆಯ್ದುಕೊಂಡಿದ್ದು ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 208 ರನ್ ಕಲೆಹಾಕಿದ್ದು ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 209 ರನ್‌ಗಳ ಬೃಹತ್ ಗುರಿಯನ್ನು ನೀಡಿತು. ಇದನ್ನೂ ಓದಿ: ಹೈದ್ರಾಬಾದ್ ಹಾರಾಟಕ್ಕೆ ಬ್ರೇಕ್ ಹಾಕಿದ ‘ಗ್ರೀನ್‌ಬಾಯ್ಸ್’- RCBಗೆ 67 ರನ್‌ಗಳ ಭರ್ಜರಿ ಜಯ

    IPL 2022 CSK VS DC 5

    ಈ ಗುರಿ ಬೆನ್ನತ್ತಿದ ಡೆಲ್ಲಿ ತಂಡದಲ್ಲಿ ಪ್ರಮುಖ ಬ್ಯಾಟರ್‌ಗಳ ವೈಫಲ್ಯ ಕಂಡುಬಂದಿತು. ಆರಂಭಿಕ ಆಟಗಾರ ಶ್ರೀಕರ್ ಭರತ್ 8 ರನ್‌ಗಳಿಗೆ ಹಾಗೂ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ವಾರ್ನರ್ 19 ರನ್ (12 ಎಸೆತ) ಗಳಿಸಿ ವಿಕೆಟ್ ಒಪ್ಪಿಸಿದ್ದು, ಡೆಲ್ಲಿಗೆ ಆಘಾತ ನೀಡಿತು. ಈ ವೇಳೆ ರಿಷಭ್ ಪಂತ್ ಹಾಗೂ ಮಿಚೆಲ್ ಮಾರ್ಷ್ ಜೋಡಿ 19 ಎಸೆತಗಳಲ್ಲಿ 36 ರನ್‌ಗಳಿಸಿ, ತಂಡಕ್ಕೆ ಗೆಲುವಿನ ಕನಸು ಚಿಗುರುವಂತೆ ಮಾಡಿತ್ತು. ಆದರೆ ಪ್ರಮುಖ ಬ್ಯಾಟರ್‌ಗಳ ಸಾಂಗಿಕ ಪ್ರದರ್ಶನಕ್ಕೆ ಎಲ್ಲಿಯೂ ಅವಕಾಶ ಕೊಡದ ಸಿಎಸ್‌ಕೆ ಟೀಂ ಡೆಲ್ಲಿ ಬ್ಯಾಟರ್‌ಗಳನ್ನು ಕಟ್ಟಿ ಹಾಕಿತ್ತು.

    2 ವಿಕೆಟ್‌ಗಳನ್ನು ಕಳೆದುಕೊಂಡರೂ ಉತ್ತಮ ಪ್ರದರ್ಶನವನ್ನೇ ನೀಡಿದ್ದ ಡೆಲ್ಲಿ ತಂಡವು ಮೊದಲ 7 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 71 ರನ್‌ಗಳನ್ನು ಪೇರಿಸಿತ್ತು. ನಂತರ ಬಂದ ಪ್ರಮುಖ ಬ್ಯಾಟರ್‌ಗಳ ವೈಫಲ್ಯದ ಆಟ ತಂಡದ ಸೋಲನ್ನು ಒಪ್ಪಿಕೊಳ್ಳುವಂತೆ ಮಾಡಿತು.

    IPL 2022 CSK VS DC 5

    ಡೆಲ್ಲಿ ತಂಡದ ಪರ ಮಿಚೆಲ್ ಮಾರ್ಷ್ 25 ರನ್ (20 ಎಸೆತ, 3 ಬೌಂಡರಿ, 1 ಸಿಕ್ಸರ್), ರಿಷಭ್‌ಪಂತ್ 21 (11 ಎಸೆತ, 4 ಬೌಂಡರಿ), ಶಾರ್ದೂಲ್ ಠಾಕೂರ್ 24 ರನ್ (19 ಎಸೆತ, 1 ಸಿಕ್ಸರ್, 2 ಬೌಂಡರಿ), ರೋವ್ಮನ್ ಪೋವೆಲ್ 3, ಅಕ್ಸರ್ ಪಟೇಲ್ 6, ರಿಪಾಲ್ ಪಟೇಲ್ 1 ರನ್ ಗಳಿಸಿದರೆ, ಅನ್ರಿಚ್ ನಾರ್ಟ್ಜೆ 1 ರನ್‌ಗಳಿಸಿ ಅಜೇಯರಾಗುಳಿದರು. ಡೆಲ್ಲಿ ಪರ ಎನ್ರಿಚ್ ನಾಕಿಯಾ 3 ಹಾಗೂ ಖಲೀಲ್ ಅಹ್ಮದ್ 2 ವಿಕೆಟ್ ಗಳಿಸಿದರು.

    ಮೊಯಿನ್ ಬೌಲಿಂಗ್ ಮಿಂಚಿನ ದಾಳಿ: ಡೆಲ್ಲಿ ಬೌಲರ್‌ಗಳ ವಿರುದ್ಧ ಮಿಂಚಿನ ದಾಳಿ ನಡೆಸಿದ ಆಲ್‌ರೌಂಡರ್ ಮೊಯಿನ್ ಅಲಿ, ಡೆಲ್ಲಿ ಬ್ಯಾಟರ್‌ಗಳನ್ನು ಬಗ್ಗುಬಡಿದರು. 4 ಓವರ್‌ನಲ್ಲಿ ಕೇವಲ 13 ರನ್‌ಗಳನ್ನು ನೀಡಿ 3 ವಿಕೆಟ್ ಉರುಳಿಸಿದರು. ಇದಕ್ಕೆ ತಾವೇನು ಕಮ್ಮಿ ಇಲ್ಲವೆನ್ನುವಂತೆ ಮುಖೇಶ್ ಚೌಧರಿ, 2 ಸಿಮರ್ಜೀತ್ ಸಿಂಗ್ 2 ವಿಕೆಟ್ ಗಳಿಸಿದರು.

    IPL 2022 CSK VS DC 5

    ಕಾನ್ವೆ ಸ್ಫೋಟಕ ಬ್ಯಾಟಿಂಗ್: ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿದ ಸಿಎಸ್‌ಕೆ ತಂಡದ ಡಿವೋನ್ ಕಾನ್ವೆ ಹಾಗೂ ಋತುರಾಜ್ ಗಾಯಕವಾಡ್ ಮಗದೊಮ್ಮೆ ಅತ್ಯುತ್ತಮ ಪ್ರದರ್ಶನ ನೀಡಿದರು. ಆರಂಭದಲ್ಲಿ ಡೆಲ್ಲಿ ಬೌಲರ್‌ಗಳನ್ನು ಬೆಂಡಿತ್ತಿದ ಈ ಜೋಡಿ ಮೊದಲ ವಿಕೆಟ್ ಕಳೆದುಕೊಳ್ಳುವ ವೇಳೆಗೆ 11 ಓವರ್‌ಗಳಲ್ಲಿ 110 ರನ್‌ಗಳ ಜೊತೆಯಾಟ ಕಲೆಹಾಕಿತ್ತು. ಇಬ್ಬರ ಸಾಂಗಿಕ ಬ್ಯಾಟಿಂಗ್ ಪ್ರದರ್ಶನದಿಂದ ತಂಡವು 200 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು.  ಇದನ್ನೂ ಓದಿ: ಮುಂಬೈ ತಂಡಕ್ಕೆ ರೋಚಕ ಜಯ – 3ನೇ ಸೋಲಿನ ಕಹಿ ಅನುಭವಿಸಿದ ಗುಜರಾತ್‌

    IPL 2022 CSK VS DC 5

    ಕಾನ್ವೆ ಕೇವಲ 27 ಎಸೆತಗಳಲ್ಲಿ ಅಮೋಘ ಅರ್ಧಶತಕ ಸಿಡಿಸಿ, ಈ ಸೀಸನ್‌ನಲ್ಲೇ ಹ್ಯಾಟ್ರಿಕ್ ಅರ್ಧಶತಕಗಳ ಸಾಧನೆ ಮಾಡಿದರು. ಅತ್ತ ಕಲಾತ್ಮಕ ಇನ್ನಿಂಗ್ಸ್ ಕಟ್ಟಿದ ಗಾಯಕವಾಡ್ 41 ರನ್ (33 ಎಸೆತ, 4 ಬೌಂಡರಿ, 1 ಸಿಕ್ಸರ್) ಗಳಿಸಿ ಔಟ್ ಆದರು. ಇದೇ ವೇಳೆ ಶತಕದ ಸನಿಹದಲ್ಲಿ ಕಾನ್ವೆ ಎಡವಿದರು. ಅಲ್ಲದೆ ಕೇವಲ 13 ರನ್ ಅಂತರದಿಂದ ಶತಕ ವಂಚಿತರಾದರು. 49 ಎಸೆತಗಳನ್ನು ಎದುರಿಸಿದ ಕಾನ್ವೆ ಏಳು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 87 ರನ್ ಗಳಿಸಿದರು. ಇದಾದ ಬೆನ್ನಲ್ಲೇ ದುಬೆ 19 ಎಸೆತಗಳಲ್ಲಿ ಸ್ಪೋಟಕ 32 ರನ್ (2 ಬೌಂಡರಿ, 2 ಸಿಕ್ಸರ್) ಚಚ್ಚಿ ವಿಕೆಟ್ ಒಪ್ಪಿಸಿದರು.

    ಕೊನೆಯ ಹಂತದಲ್ಲಿ ನಾಯಕ ಮಹೇಂದ್ರ ಸಿಂಗ್ ಧೋನಿ 8 ಎಸೆತಗಳಲ್ಲಿ 21 ರನ್ ಗಳಿಸಿ (2 ಸಿಕ್ಸರ್, 1 ಬೌಂಡರಿ) ಅಜೇಯರಾಗುಳಿದರು. ಈ ಮೂಲಕ ಸಿಎಸ್‌ಕೆ 6 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.

    IPL 2022 CSK VS DC 5

    ಡೆಲ್ಲಿ ಪ್ಲೇ ಆಫ್ ಕನಸು ಭಗ್ನ: ಮೊದಲ 10 ಪಂದಗಳಲ್ಲಿ 5 ಪಂದ್ಯಗಳನ್ನು ಗೆದ್ದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಪ್ಲೇ ಆಫ್‌ಗೆ ಬರಲು ಇನ್ನೂ ಕನಿಷ್ಠ 3 ಪಂದ್ಯಗಳನ್ನು ಗೆಲ್ಲಬೇಕಿತ್ತು. ಆದರೆ ಚೆನ್ನೈಗೆ ಶರಾಣದ ಡೆಲ್ಲಿ ಉಳಿದ ನಾಲ್ಕು ಪಂದ್ಯಗಳಲ್ಲಿ ಕನಿಷ್ಠ ಮೂರು ಪಂದ್ಯಗಳನ್ನಾದರೂ ಗೆಲ್ಲಬೇಕಿದೆ. ನಂತರದ ರೇಸ್‌ನಲ್ಲಿ ಹೈದರಾಬಾದ್, ಕಿಂಗ್ಸ್ ಪಂಜಾಬ್ ತಂಡಗಳಿವೆ.

    ರನ್ ಏರಿದ್ದು ಹೇಗೆ?
    35 ಎಸೆತ 50 ರನ್
    61 ಎಸೆತ 100 ರನ್
    92 ಎಸೆತ 150 ರನ್
    120 ಎಸೆತ 208 ರನ್

  • ನೋ ಬಾಲ್ ವಿವಾದದ ನಡುವೆ ಕುಲ್ಚಾ ಜೋಡಿಯ ಕೀಟ್ಲೆ

    ನೋ ಬಾಲ್ ವಿವಾದದ ನಡುವೆ ಕುಲ್ಚಾ ಜೋಡಿಯ ಕೀಟ್ಲೆ

    ಮುಂಬೈ: ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಮತ್ತು ರಾಜಸ್ಥಾನ ನಡುವಿನ ಪಂದ್ಯದ ನಡುವೆ ನಡೆದ ನೋ ಬಾಲ್ ವಿವಾದ ಬಾರಿ ಚರ್ಚೆಯಾಗುತ್ತಿದೆ. ಈ ನಡುವೆ ಕುಲ್ಚಾ ಜೋಡಿ ಖ್ಯಾತಿಯ ಯಜುವೇಂದ್ರ ಚಹಲ್ ಮತ್ತು ಕುಲ್‍ದೀಪ್ ಯಾದವ್ ನಡುವಿನ ಮಾತುಕತೆ ವೈರಲ್ ಆಗುತ್ತಿದೆ.


    ರಾಜಾಸ್ಥಾನ್ ರಾಯಲ್ಸ್ ನೀಡಿದ 222 ರನ್‍ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಆರಂಭದಲ್ಲಿ ಉತ್ತಮ ಪ್ರದರ್ಶನವನ್ನೇ ನೀಡಿತ್ತಾದರೂ ನಂತರದಲ್ಲಿ ಪ್ರಮುಖ ವಿಕೆಟ್‍ಗಳನ್ನು ಕಳೆದುಕೊಂಡಿತು. ಕೊನೆಯಲ್ಲಿ ರೋವ್ಮನ್ ಪೋವೆಲ್ ಅವರ ಆಟ ತಂಡಕ್ಕೆ ಗೆಲುವಿನ ಆಸೆ ಚಿಗುರುವಂತೆ ಮಾಡಿತ್ತು. ಅಂತಿಮ ಓವರ್‌ನಲ್ಲಿ ಡೆಲ್ಲಿ ಗೆಲುವಿಗೆ 36 ರನ್‍ಗಳು ಬೇಕಾಗಿತ್ತು. ಆರು ಬಾಲ್‍ನಲ್ಲಿ 6 ಸಿಕ್ಸರ್ ಸಿಡಿಸುವ ಸವಾಲು ಎದುರಾಗಿತ್ತು. ಶೇ.90 ರಷ್ಟು ಗೆಲುವು ಅಸಾಧ್ಯ ಎಂಬುದೂ ಗೊತ್ತಿತ್ತು. ಈ ವೇಳೆ ಕ್ರೀಸ್‍ನಲ್ಲಿದ್ದ ಪೋವೆಲ್ ಸತತ 3 ಎಸೆತಗಳನ್ನೂ ಸಿಕ್ಸರ್‌ಗೆ ಅಟ್ಟಿದರು. ಇನ್ನೂ ಮೂರು ಎಸೆತಗಳು ಬಾಕಿ ಇರುವ ವೇಳೆ ದೊಡ್ಡ ಹೈಡ್ರಾಮವೇ ನಡೆದು ಹೋಯಿತು. ಇದನ್ನೂ ಓದಿ: ಅಂಪೈರ್ ವಿರುದ್ಧ ಸಿಟ್ಟಾಗಿ ಬ್ಯಾಟರ್‌ಗಳನ್ನು ಕರೆದ ಪಂತ್ – ನಿಜಕ್ಕೂ ನಡೆದಿದ್ದು ಏನು?

    Rishabh-Pant-1 ipl

    ಮೆಕಾಯ್ ಅವರ 3 ಎಸೆತಗಳನ್ನೂ ಸಿಕ್ಸ್ ಬಾರಿಸಿದ್ದರು. ಆದರೆ, 3ನೇ ಎಸೆತ ಫುಲ್‍ಟಾಸ್ ಆಗಿದ್ದು ಇದನ್ನು ಕೂಡ ಪೋವೆಲ್ ಸಿಕ್ಸರ್‌ಗಟ್ಟಿದರು. ಈ ಎಸೆತ ವಿವಾದಕ್ಕೆ ಎಡೆಮಾಡಿಕೊಟ್ಟಿತು. ಅಂಪೈರ್ ನೋಬಾಲ್ ಕೊಡದೇ ಇದ್ದರೂ ಡೆಲ್ಲಿ ಆಟಗಾರರು ಕುಳಿತಲ್ಲಿಂದಲೇ ನೋಬಾಲ್ ಸಿಗ್ನಲ್ ತೋರಿಸಿದರು. ಅಂಪೈರ್ ಇದು ನೋ ಬಾಲ್ ಅಲ್ಲ ಎಂದು ತಮ್ಮ ನಿರ್ಧಾರದಿಂದ ಹಿಂದೆ ಸರಿಯಲಿಲ್ಲ. ಇದರಿಂದ ಸಿಟ್ಟಾದ ಡೆಲ್ಲಿ ನಾಯಕ ರಿಷಭ್ ಪಂತ್ ಇದು ಅನ್ಯಾಯ ಎಂದು ಮೈದಾನದಲ್ಲಿದ್ದ ಪೋವೆಲ್ ಮತ್ತು ಕುಲ್‍ದೀಪ್ ಯಾದವ್ ಅವರನ್ನು ಉದ್ದೇಶಿಸಿ ಬೌಂಡರಿ ಗೆರೆ ಬಳಿ ನಿಂತು ಪೆವಿಲಿಯನ್‍ಗೆ ಬನ್ನಿ ಎಂದು ಕರೆದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಈ ವೇಳೆ ಕುಲ್‍ದೀಪ್ ಯಾದವ್ ಅಂಪೈರ್ ಜೊತೆ ನೋ ಬಾಲ್ ವಾಗ್ವಾದಕ್ಕೆ ಇಳಿದರು. ಈ ಸಂದರ್ಭ ಪಕ್ಕದಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಚಹಲ್ ಬಂದು ಕುಲ್‍ದೀಪ್ ಯಾದವ್‍ರನ್ನು ಸಮಾಧಾನ ಪಡಿಸಲು ಮುಂದಾದರು. ಈ ವೇಳೆ ಕುಲ್‍ದೀಪ್ ಮತ್ತೆ ಅಂಪೈರ್ ಕಡೆ ಮಾತನಾಡಲು ಯತ್ನಿಸುತ್ತಿದ್ದಂತೆ, ಚಹಲ್, ಕುಲ್‍ದೀಪ್‍ರನ್ನು ಹೋಗು ಬ್ಯಾಟಿಂಗ್ ಮಾಡು ಎನ್ನುವಂತೆ ಕೈ ಹಿಡಿದು ತಳ್ಳಿದರು. ಇವರಿಬ್ಬರೂ ಕೂಡ ಟೀಂ ಇಂಡಿಯಾದಲ್ಲಿ ಜೊತೆಯಾಗಿ ಆಡುತ್ತಿದ್ದಾಗ ಉತ್ತಮ ಸ್ನೇಹಿತರಾಗಿದ್ದರು. ಹಾಗಾಗಿ ಈ ಕಿರಿಕ್ ನಡುವೆ ಇವರಿಬ್ಬರು ತಮಾಷೆಗಿಳಿದು ಎಲ್ಲರನ್ನೂ ನಗಿಸಿದ್ದಾರೆ.

  • ಶತಕ ವಂಚಿತ ಪಂತ್ – ಬೃಹತ್ ಮೊತ್ತದತ್ತ ಭಾರತ

    ಶತಕ ವಂಚಿತ ಪಂತ್ – ಬೃಹತ್ ಮೊತ್ತದತ್ತ ಭಾರತ

    ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮುನ್ನಡೆಯತ್ತ ಸಾಗಿದೆ. ಬ್ಯಾಟಿಂಗ್‍ನಲ್ಲಿ ಮಿಂಚಿದ ವಿಕೆಟ್ ಕೀಪರ್ ರಿಷಬ್ ಪಂತ್ ಶತಕದಂಚಿನಲ್ಲಿ ಔಟ್ ಆಗಿ ನಿರಾಸೆ ಅನುಭವಿಸಿದ್ದಾರೆ.

    ಕೊಹ್ಲಿಯ ನೂರನೇ ಟೆಸ್ಟ್‌ನ ಸಂಭ್ರಮದೊಂದಿಗೆ ಆಡಿದ ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನದೊಂದಿಗೆ ಗಮನಸೆಳೆದರು. ದಿನದಾಟದ ಅಂತ್ಯಕ್ಕೆ ಭಾರತ 85 ಓವರ್‌ಗಳ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 375 ರನ್ ಪೇರಿಸಿ ಬೃಹತ್ ಮೊತ್ತದತ್ತ ದಾಪುಗಾಲಿಟ್ಟಿದೆ. ಇದನ್ನೂ ಓದಿ: ನೂರನೇ ಟೆಸ್ಟ್ ಪಂದ್ಯದಲ್ಲಿ ನೂತನ ಮೈಲಿಗಲ್ಲು ಬರೆದ ವಿರಾಟ್ ಕೊಹ್ಲಿ

    ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಮತ್ತು ಮಯಾಂಕ್ ಅಗರ್ವಾಲ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‍ಗೆ 51 ರನ್ (61 ಎಸೆತ) ಸೇರಿಸಿ ಬೇರ್ಪಟ್ಟಿತು. ರೋಹಿತ್ 29 ರನ್ (28 ಎಸೆತ, 6 ಬೌಂಡರಿ) ಮತ್ತು ಅಗರ್ವಾಲ್ 33 ರನ್ (49 ಎಸೆತ, 5 ಬೌಂಡರಿ) ಬಾರಿಸಿ ಔಟ್ ಆದರು. ಆ ಬಳಿಕ ಒಂದಾದ ಹನುಮ ವಿಹಾರಿ ಮತ್ತು ವಿರಾಟ್ ಕೊಹ್ಲಿ ಭರ್ಜರಿಯಾಗಿ ಬ್ಯಾಟ್‍ಬೀಸಿದರು. ಈ ಜೋಡಿ ಮೂರನೇ ವಿಕೆಟ್‍ಗೆ 90 ರನ್ (155 ಎಸೆತ) ಜೊತೆಯಾಟವಾಡಿ ಮಿಂಚಿತು.

    ವಿಹಾರಿ 58 ರನ್ (128 ಎಸೆತ, 5 ಬೌಂಡರಿ) ಅರ್ಧಶತಕ ಸಿಡಿಸಿ ಗಮನಸೆಳೆದರೆ, ಕೊಹ್ಲಿ 45 ರನ್ (76 ಎಸೆತ, 5 ಬೌಂಡರಿ) ಸಿಡಿಸಿ ಅರ್ಧಶತಕ ವಂಚಿತರಾದರು. ಇವರಿಬ್ಬರ ಬಳಿಕ ಭಾರತವನ್ನು ಆಧಾರಿಸಿದ್ದು, ರಿಷಬ್ ಪಂತ್, ತಮ್ಮ ಭರ್ಜರಿ ಹೊಡೆತಗಳ ಮೂಲಕ ಬೌಂಡರಿ, ಸಿಕ್ಸರ್‌ಗಳ ಮೂಲಕ ಲಂಕಾ ಬೌಲರ್‌ಗಳ ಬೆವರಿಳಿಸಿದರು. ಇವರಿಗೆ ಉತ್ತಮ ಸಾಥ್ ನೀಡಿದ ಶ್ರೇಯಸ್ ಅಯ್ಯರ್ 27 ರನ್ (48 ಎಸೆತ, 3 ಬೌಂಡರಿ) ಬಾರಿಸಿ ಎಲ್‍ಬಿಡಬ್ಲ್ಯೂ ಆಗಿ ಔಟ್ ಆದರು. ಇದನ್ನೂ ಓದಿ: ಅಕ್ಷಯ್ ಹುಕ್ ಸ್ಟೆಪ್‌ಗೆ ಫೇಮಸ್ ಕ್ರಿಕೆಟಿಗರು ಫಿದಾ

    ಆ ಬಳಿಕ ಒಂದಾದ ಪಂತ್, ರವೀಂದ್ರ ಜಡೇಜಾ ಜೋಡಿ ಇನ್ನೊಂದು ಉತ್ತಮ ಜೊತೆಯಾಟದ ಮೂಲಕ ತಂಡಕ್ಕೆ ನೆರವಾಯಿತು. 6 ನೇ ವಿಕೆಟ್‍ಗೆ 104 ರನ್ (118 ಎಸೆತ) ಕೊಳ್ಳೆ ಹೊಡೆದ ಈ ಜೋಡಿ ಲಂಕಾ ತಂಡಕ್ಕೆ ಕಾಟ ಕೊಟ್ಟಿತ್ತು. ಈ ವೇಳೆ ಇನ್ನೇನೂ ಶತಕದಂಚಿನಲ್ಲಿದ್ದ ಪಂತ್ 96 ರನ್ (97 ಎಸೆತ, 9 ಬೌಂಡರಿ, 4 ಸಿಕ್ಸ್) ಸಿಡಿಸಿ ವಿಕೆಟ್ ಕಳೆದುಕೊಂಡು ಶತಕ ವಂಚಿತರಾದರು. ಇದನ್ನೂ ಓದಿ: ಆಸ್ಟ್ರೇಲಿಯಾದ ಲೆಜೆಂಡರಿ ವಿಕೆಟ್ ಕೀಪರ್ ರಾಡ್ ಮಾರ್ಷ್ ವಿಧಿವಶ

    ಮೊದಲ ದಿನದಾಟದಂತ್ಯಕ್ಕೆ ರವೀಂದ್ರ ಜಡೇಜಾ ಅಜೇಯ 45 ರನ್ (82 ಎಸೆತ, 5 ಬೌಂಡರಿ) ಮತ್ತು ಆರ್ ಅಶ್ವಿನ್ 10 ರನ್ (11 ಎಸೆತ, 2 ಬೌಂಡರಿ) ಬಾರಿಸಿ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.