Tag: Rishabh Pant

  • ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್

    ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್

    ಜೋಹನ್ಸ್‌ಬರ್ಗ್‌: ದಕ್ಷಿಣ ಆಫ್ರಿಕಾ ವಿರುದ್ಧ ನಿನ್ನೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ರಿಷಭ್ ಪಂತ್ ಬಿಗ್ ಸಿಕ್ಸ್ ಸಿಡಿಸುತ್ತಿದ್ದಂತೆ, ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಡ್ಯಾನ್ ಮಾಡಿದ ವೀಡಿಯೋ ವೈರಲ್ ಆಗುತ್ತಿದೆ.

    ನಿನ್ನೆ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಐದು ಬಾಲ್‍ಗಳನ್ನು ಎದುರಿಸಿ ಡಕ್ ಔಟ್ ಆಗಿ ನಿರಾಸೆ ಮೂಡಿಸಿದ್ದರು. ಬಳಿಕ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಸರೆಯಾಗಿದ್ದರು. ಪಂತ್ 85 ರನ್ (71 ಎಸೆತ, 10 ಬೌಂಡರಿ, 2 ಸಿಕ್ಸ್) ಬಾರಿಸಿ ಬ್ಯಾಟಿಂಗ್‍ನಲ್ಲಿ ಮಿಂಚಿದ್ದರು, ಅದರಲ್ಲೂ ಪಂತ್ ಸಿಡಿಸಿದ ಬಿಗ್ ಸಿಕ್ಸ್‌ನ್ನು ಕಂಡು ಡ್ರೆಸ್ಸಿಂಗ್ ರೂಮ್‍ನಲ್ಲಿ ಶಿಖರ್ ಧವನ್ ಜೊತೆ ಕೂತಿದ್ದ ಕೊಹ್ಲಿ ಕೂತಲ್ಲೆ ಕೈಗಳನ್ನು ಮೇಲೆತ್ತಿ ಸ್ಟೆಪ್ ಹಾಕಿ ಎಂಜಾಯ್ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ ತೊಡಗಿದೆ. ಇದನ್ನೂ ಓದಿ: ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಿಲ್ಲ: ಗಂಗೂಲಿ

    https://twitter.com/iYashMall/status/1484483348311396356

    ಮೊದಲ ಏಕದಿನ ಪಂದ್ಯ ಸೋತಿದ್ದ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲೂ ಸೋಲು ಕಂಡಿದೆ. ಎರಡನೇ ಏಕದಿನ ಪಂದ್ಯದಲ್ಲಿ 7 ವಿಕೆಟ್‍ಗಳ ಜಯ ಸಾಧಿಸಿದ ದಕ್ಷಿಣ ಆಫ್ರಿಕಾ 3 ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದಕೊಂಡಿದೆ. ಇನ್ನೊಂದು ಪಂದ್ಯ ಬಾಕಿ ಉಳಿದಿದ್ದು, ನಾಳೆ ಕೇಪ್‍ಟೌನ್‍ನಲ್ಲಿ ಮೂರನೇ ಏಕದಿನ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಐಪಿಎಲ್‌ನಲ್ಲೇ ದುಬಾರಿ ಆಟಗಾರನಾಗಿ ಹೊರಹೊಮ್ಮಿದ ರಾಹುಲ್‌ಗೆ ಕ್ಯಾಪ್ಟನ್‌ ಪಟ್ಟ ಕಟ್ಟಿದ ಲಕ್ನೋ

  • ಪಂತ್ ನೂತನ ಮೈಲಿಗಲ್ಲು – ಧೋನಿ ಜೊತೆ Elite ಪಟ್ಟಿಗೆ ಸೇರ್ಪಡೆ

    ಪಂತ್ ನೂತನ ಮೈಲಿಗಲ್ಲು – ಧೋನಿ ಜೊತೆ Elite ಪಟ್ಟಿಗೆ ಸೇರ್ಪಡೆ

    ಮುಂಬೈ: ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ ಟೆಸ್ಟ್ ಕ್ರಿಕೆಟ್‍ನಲ್ಲಿ 100 ಕ್ಯಾಚ್ ಹಿಡಿದ ಭಾರತದ ನಾಲ್ಕನೇ ಆಟಗಾರ ಎಂಬ ನೂತನ ಮೈಲಿಗಲ್ಲು ನೆಟ್ಟಿದ್ದಾರೆ.

    ಜೋಹನ್ಸ್‌ಬರ್ಗ್‌ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನ ಶಾರ್ದೂಲ್ ಠಾಕೂರ್ ಎಸೆತದಲ್ಲಿ ಲುಂಗಿ ಎನ್‍ಗಿಡಿ ಅವರ ಕ್ಯಾಚ್ ಪಡೆಯುವ ಮೂಲಕ ಪಂತ್ ಈ ಸಾಧನೆ ಮಾಡಿ ಧೋನಿ ಜೊತೆ ಸಾಧಕರ ಪಟ್ಟಿಗೆ ಸೇರ್ಪಡೆಗೊಂಡರು. ಧೋನಿ 256 ಕ್ಯಾಚ್ ಪಡೆದು ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದರೆ, ಅವರ ಬಳಿಕ 160 ಕ್ಯಾಚ್ ಪಡೆದಿರುವ ಸಯ್ಯದ್ ಕಿರ್ಮಾನಿ ಎರಡನೇ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಆಫ್ರಿಕಾಗೆ ಶಾರ್ದೂಲ್ ಶಾಕ್ – ಭಾರತಕ್ಕೆ ಅಲ್ಪ ಮುನ್ನಡೆ

    ಕಿರಣ್ ಮೋರೆ 110 ಕ್ಯಾಚ್ ಪಡೆದು ಮೂರನೇ ಸ್ಥಾನದಲ್ಲಿದ್ದರೆ, ಇದೀಗ ಪಂತ್ 100 ಕ್ಯಾಚ್ ಪಡೆದು ಈ ಸಾಧಕರ ಪಟ್ಟಿಗೆ ಎಂಟ್ರಿಕೊಟ್ಟಿದ್ದಾರೆ. ಪಂತ್ ಸೆಂಚುರಿಯನ್ ಟೆಸ್ಟ್‌ನಲ್ಲಿ ಅತೀ ವೇಗವಾಗಿ 100 ಬಲಿ ಪಡೆದ ಭಾರತದ ವಿಕೆಟ್ ಕೀಪರ್ ಎಂಬ ದಾಖಲೆ ಬರೆದಿದ್ದರು. ಪಂತ್ 26 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಧೋನಿ 100 ಬಲಿ ಪಡೆಯಲು 36 ಪಂದ್ಯಗಳನ್ನು ಆಡಿದ್ದರು.  ಇದನ್ನೂ ಓದಿ: ಪಂತ್ ವಿವಾದಾತ್ಮಕ ಕ್ಯಾಚ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಜೋಹನ್ಸ್‌ಬರ್ಗ್‌ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಎರಡನೇ ದಿನದಾಟದ ಅಂತ್ಯಕ್ಕೆ 20 ಓವರ್‌ಗಳಲ್ಲಿ 85 ರನ್‍ಗಳಿಗೆ 2 ವಿಕೆಟ್ ಕಳೆದುಕೊಂಡು 58 ರನ್‍ಗಳ ಮುನ್ನಡೆಯಲ್ಲಿದೆ. ಟೆಸ್ಟ್ ಸ್ಪೆಷಲಿಸ್ಟ್‌ಗಳಾದ ಚೇತೇಶ್ವರ ಪೂಜಾರ ಅಜೇಯ 35 ರನ್ (42 ಎಸೆತ, 7 ಬೌಂಡರಿ) ಮತ್ತು ಅಜಿಂಕ್ಯಾ ರಹಾನೆ 11 ರನ್ (22 ಎಸೆತ, 1 ಬೌಂಡರಿ) ಸಿಡಿಸಿ 3ನೇ ವಿಕೆಟ್‍ಗೆ 41 ರನ್ (52 ಎಸೆತ) ಜೊತೆಯಾಟವಾಡಿ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ಆರ್​ಸಿಬಿ ಆಟಗಾರ ಗ್ಲೇನ್ ಮ್ಯಾಕ್ಸ್‌ವೆಲ್‌ಗೆ ಕೊರೊನಾ ಪಾಸಿಟಿವ್

  • ಪಂತ್ ವಿವಾದಾತ್ಮಕ ಕ್ಯಾಚ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಪಂತ್ ವಿವಾದಾತ್ಮಕ ಕ್ಯಾಚ್ – ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

    ಜೋಹನ್ಸ್‌ಬರ್ಗ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ದಿನ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಭ್ ಪಂತ್ ಹಿಡಿದ ಕ್ಯಾಚ್ ಒಂದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

    ದಕ್ಷಿಣ ಆಫ್ರಿಕಾ ಎರಡನೇ ದಿನ ಬ್ಯಾಟಿಂಗ್ ಬರುತ್ತಿದ್ದಂತೆ ಶಾರ್ದೂಲ್ ಠಾಕೂರ್ ವಿಕೆಟ್ ಬೇಟೆಯಾಡಲು ಆರಂಭಿಸಿದರು. ರಾಸ್ಸಿ ವ್ಯಾನ್‍ಡೆರ್ ಡಸೆನ್ಸ್ ಬ್ಯಾಟಿಂಗ್ ಮಾಡುತ್ತಿದ್ದಂತೆ ಠಾಕೂರ್ ಎಸೆದ ಬ್ಯಾಕ್ ಆಫ್ ಲೆಂಥ್ ಎಸೆತವನ್ನು ಬ್ಯಾಟ್‌ನಿಂದ ಟಚ್ ಮಾಡಿ ಕೀಪರ್ ಪಂತ್‍ಗೆ ಕ್ಯಾಚ್ ನೀಡಿದರು. ಆದರೆ ಪಂತ್ ಹಿಡಿದ ಕ್ಯಾಚ್ ನೆಲಕ್ಕೆ ಬಿದ್ದು ಪಿಚ್ ಆಗಿ ಕೈಗೆ ಬಂದಂತೆ ಕಾಣಿಸಿತು. ಆದರೆ ಅಂಪೈರ್ ಕ್ಯಾಚ್ ಔಟ್ ಎಂದು ನಿರ್ಧರಿಸಿದರು. ಇದನ್ನೂ ಓದಿ: ಟೀಂ ಇಂಡಿಯಾದಲ್ಲಿ ಕನ್ನಡಿಗ ರಾಹುಲ್ ನಾಯಕ, ದ್ರಾವಿಡ್ ಕೋಚ್

    ಪಂತ್ ಹಿಡಿದ ಕ್ಯಾಚ್‍ನಲ್ಲಿ ಚೆಂಡು ನೆಲಕ್ಕೆ ಬಡಿದಂತೆ ಕಾಣಿಸುತ್ತಿದೆ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ಇದು ನಾಟ್ ಔಟ್ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಅರಂಭಿಸಿದ್ದಾರೆ. ಈ ನಡುವೆ ಕೆಲ ನೆಟ್ಟಿಗರು ರಾಹುಲ್ ಕ್ಯಾಪ್ಟನ್ ಆಗಿ ರಾಸ್ಸಿ ವ್ಯಾನ್‍ಡೆರ್ ಡಸೆನ್ಸ್ ಅವರನ್ನು ಮತ್ತೆ ಬ್ಯಾಟಿಂಗ್ ಆಹ್ವಾನಿಸಬೇಕಿತ್ತು. ಈ ಹಿಂದೆ ಭಾರತ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ವಿವಾದಾತ್ಮಕವಾಗಿ ಔಟ್ ಆಗಿದ್ದ ಇಯಾನ್ ಬೆಲ್ ಅವರನ್ನು ಕರೆದು ಮತ್ತೆ ಬ್ಯಾಟಿಂಗ್ ಮುಂದುವರಿಸುವಂತೆ ಸೂಚಿಸಿದ್ದರು. ಇದೇ ರೀತಿ ರಾಹುಲ್ ಮಾಡಬಹುದಿತ್ತು. ಆದರೆ ರಾಹುಲ್ ಏನು ಮಾತನಾಡಲಿಲ್ಲ ಹಾಗಾಗಿ ಅಂಪೈರ್ ಅಸಹಾಯಕರಾದರು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಟೀಂ ಇಂಡಿಯಾ ಪರ ನೂತನ ಮೈಲಿಗಲ್ಲು ನೆಟ್ಟ ಶಮಿ, ಪಂತ್ ಸಂಭ್ರಮ

  • ಟೀಂ ಇಂಡಿಯಾ ಪರ ನೂತನ ಮೈಲಿಗಲ್ಲು ನೆಟ್ಟ ಶಮಿ, ಪಂತ್ ಸಂಭ್ರಮ

    ಟೀಂ ಇಂಡಿಯಾ ಪರ ನೂತನ ಮೈಲಿಗಲ್ಲು ನೆಟ್ಟ ಶಮಿ, ಪಂತ್ ಸಂಭ್ರಮ

    ಸೆಂಚುರಿಯನ್: ಬಾಂಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಅವರ ತವರು ನೆಲದಲ್ಲೇ ಟೀಂ ಇಂಡಿಯಾ ಬಗ್ಗು ಬಡಿದಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಪರ ಮೊಹಮ್ಮದ್ ಶಮಿ ಮತ್ತು ರಿಷಭ್ ಪಂತ್ ನೂತನ ಮೈಲಿಗಲ್ಲು ನೆಟ್ಟಿದ್ದರು ಇದನ್ನು ಭಾರತೀಯ ಆಟಗಾರರು ಸಂಭ್ರಮಿಸಿದ್ದಾರೆ.

    ಮೊಹಮ್ಮದ್ ಶಮಿ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ 200 ವಿಕೆಟ್ ಕಿತ್ತ ಸಾಧನೆ ಮಾಡಿದರೆ, ಪಂತ್ ವಿಕೆಟ್ ಕೀಪಿಂಗ್‍ನಲ್ಲಿ ವೇಗವಾಗಿ 100 ಬಲಿ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದರು. ಈ ಇಬ್ಬರೂ ಆಟಗಾರರು ಡ್ರೆಸ್ಸಿಂಗ್ ರೂಂನಲ್ಲಿ ಸಹ ಆಟಗಾರೊಂದಿಗೆ ಕೇಕ್ ಕತ್ತರಿಸುವ ಮೂಲಕ ಈ ನೂತನ ಮೈಲಿಗಲ್ಲನ್ನು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ನಾಗಾಲೋಟ ಮುಂದುವರಿಸಿದ ಬುಲ್ಸ್ – ಹರ್ಯಾಣ ವಿರುದ್ಧ 14 ಅಂಕಗಳ ಭರ್ಜರಿ ಜಯ

    ಶಮಿ ಆಫ್ರಿಕಾ ವಿರುದ್ಧ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಗೊಂಚಲು ಪಡೆದಿದ್ದರು. ಈ ಮೂಲಕ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ 200 ವಿಕೆಟ್ ಪಡೆದ ಟೀಂ ಇಂಡಿಯಾದ 11 ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಅಲ್ಲದೇ ಕಪಿಲ್ ದೇವ್ ಮತ್ತು ಶ್ರೀನಾಥ್ ಬಳಿಕ ವೇಗವಾಗಿ 200 ವಿಕೆಟ್ ಸಾಧನೆ ಮಾಡಿದ ಆಟಗಾರ ಎಂಬ ಮೈಲಿಗಲ್ಲು ನೆಟ್ಟರು. ಇದನ್ನೂ ಓದಿ: ಬಾಕ್ಸಿಂಗ್ ಡೇ ಟೆಸ್ಟ್ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

    ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್ ಪಂತ್ 26 ಟೆಸ್ಟ್ ಪಂದ್ಯಗಳಿಂದ 100 ವಿಕೆಟ್ ಬಲಿ ಪಡೆದು ಟೀಂ ಇಂಡಿಯಾ ಪರ ವೇಗವಾಗಿ 100 ವಿಕೆಟ್ ಬಲಿ ಪಡೆದ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ಈ ಹಿಂದೆ ಧೋನಿ ಮತ್ತು ವೃದ್ಧಿಮಾನ್ ಸಾಹಾ 36 ಪಂದ್ಯಗಳಿಂದ 100 ವಿಕೆಟ್ ಬಲಿ ಪಡೆದಿದ್ದರು.

  • ರಿಷಭ್ ಪಂತ್ ಈಗ ಉತ್ತರಾಖಂಡ್ ಬ್ರಾಂಡ್ ಅಂಬಾಸಿಡರ್

    ರಿಷಭ್ ಪಂತ್ ಈಗ ಉತ್ತರಾಖಂಡ್ ಬ್ರಾಂಡ್ ಅಂಬಾಸಿಡರ್

    ಡೆಹ್ರಾಡೂನ್: ಭಾರತದ ವಿಕೆಟ್ ಕೀಪರ್ ಹಾಗೂ ಎಡಗೈ ಬ್ಯಾಟ್ಸ್‌ಮ್ಯಾನ್ ರಿಷಭ್ ಪಂತ್ ಉತ್ತರಾಖಂಡದ ಜನರಲ್ಲಿ ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಉತ್ತೇಜಿಸಲು ತಮ್ಮಿಂದಾಗುವ ಪ್ರೋತ್ಸಾಹವನ್ನು ನೀಡುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

    ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಪಂತ್ ಅವರನ್ನು ರಾಜ್ಯದ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ್ದಾರೆ. ಇದನ್ನೂ ಓದಿ: 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಬೆಂಗಳೂರು ಸಜ್ಜು

    ಉತ್ತರಾಖಂಡದ ಜನರು, ಜೀವನದ ವಿವಿಧ ಕ್ಷೇತ್ರಗಳಲ್ಲಿ ದೇಶವನ್ನು ಹೆಮ್ಮೆ ಪಡಿಸುವಂತಹ ಸಾಮರ್ಥ್ಯವನ್ನು ಹೊಂದಿದ್ದಾರೆ. ಕ್ರೀಡೆ ಮತ್ತು ಸಾಮಾನ್ಯ ಆರೋಗ್ಯವನ್ನು ಪ್ರೋತ್ಸಾಹಿಸಲು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದ ಪುಷ್ಕರ್ ಧಾಮಿ ಸರ್‌ಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಕ್ನೋ ತಂಡದ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ

    ಪ್ರಸ್ತುತ ರಿಷಭ್ ಪಂತ್ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್ನಲ್ಲಿದ್ದಾರೆ. ಡಿಸೆಂಬರ್ 26ರಂದು ಆರಂಭವಾಗಲಿರುವ ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯಕ್ಕೆ ತಯಾರಿ ನಡೆಸುತ್ತಿದ್ದಾರೆ.

  • ಡೆಲ್ಲಿ ಮಣಿಸಿದ ಕೋಲ್ಕತ್ತಾ – 3 ವಿಕೆಟ್‍ಗಳ ಜಯ

    ಡೆಲ್ಲಿ ಮಣಿಸಿದ ಕೋಲ್ಕತ್ತಾ – 3 ವಿಕೆಟ್‍ಗಳ ಜಯ

    ಶಾರ್ಜಾ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಕೆಆರ್ 3 ವಿಕೆಟ್‍ಗಳ ಜಯ ದಾಖಲಿಸುವ ಮೂಲಕ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರಿದೆ.

    ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 128 ರನ್‍ಗಳ ಗುರಿಯನ್ನು ಕೆಕೆಆರ್ 18.2 ಓವರ್‍ಗಳಲ್ಲಿ ಹೊಡೆದು ಜಯವನ್ನು ತನ್ನದಾಗಿಸಿಕೊಂಡಿದೆ. ಸೋತರೂ ಡೆಲ್ಲಿ, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಮುಂದುವರಿದಿದೆ. ಇದನ್ನೂ ಓದಿ: ಕೋಲ್ಕತ್ತಾಗೆ 7 ವಿಕೆಟ್‍ಗಳ ಭರ್ಜರಿ ಜಯ – 4ನೇ ಸ್ಥಾನಕ್ಕೆ ಜಿಗಿತ

    ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಬಹೃತ್ ಮೊತ್ತ ದಾಖಲಿಸುವ ಸೂಚನೆ ನೀಡಿತು. ಸ್ಮಿತ್ 39 ರನ್ (34 ಎಸೆತ 4 ಬೌಂಡರಿ) ಸಿಡಿಸಿ ವಿಕೆಟ್ ಒಪ್ಪಿಸಿದರು. ಶಿಖರ್ ಧವನ್ 24ರನ್ (20 ಎಸೆತ 5 ಬೌಂಡರಿ) ಗಳಿಸಿದರು. ಕೆಕೆಆರ್ ಬೌಲರ್‍ಗಳ ದಾಳಿಗೆ ನಲುಗಿದ ಡೆಲ್ಲಿ ರನ್ ಗಳಿಸಲು ಪರಾದಡಿತು. ನಾಯಕ ರಿಷಭ್ ಪಂತ್ 39 ರನ್ (36 ಎಸೆತ 3 ಬೌಂಡರಿ) ಸಿಡಿಸಿ ರನ್ ಔಟ್‍ಗೆ ಬಲಿಯಾದರು. ಇನ್ನುಳಿದ ಯಾವೊಬ್ಬ ಡೆಲ್ಲಿ ಬ್ಯಾಟ್ಸ್‍ಮನ್ ಕೂಡ ಕೆಕೆಆರ್ ಬೌಲಿಂಗ್ ದಾಳಿಯನ್ನು ಎದುರಿಸಲಾಗದೆ ಪೆವಿಲಿಯನ್ ಪರೆಡ್ ನಡೆಸಿದರು. ನಿಗದಿತ 20 ಓವರ್‍ಗಳಲ್ಲಿ ಡೆಲ್ಲಿ ತಂಡ 9 ವಿಕೆಟ್ ನಷ್ಟಕ್ಕೆ 127 ರನ್ ಗಳಿಸಲಷ್ಟೆ ಶಕ್ತವಾಯಿತು. ಕೆಕೆಆರ್ ಪರ ನರೈನ್ ಹಾಗೂ ಫರ್ಗುಸನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಇದನ್ನೂ ಓದಿ: ಜೇಸನ್ ರಾಯ್ ಅಬ್ಬರಕ್ಕೆ ಮಕಾಡೆ ಮಲಗಿದ ರಾಜಸ್ಥಾನ್ ರಾಯಲ್ಸ್: ಹೈದರಾಬಾದ್‍ಗೆ ಜಯ

    ಡೆಲ್ಲಿ ನೀಡಿದ್ದ ಸಾಧಾರಣ ಗುರಿ ಬೆನ್ನತ್ತಿದ ಕೋಲ್ಕತ್ತಾ ಉತ್ತಮ ಆರಂಭ ಪಡೆಯಿತು. ಶುಬ್‍ಮನ್ ಗಿಲ್ 30ರನ್ (33 ಎಸೆತ 1 ಬೌಂಡರಿ 2 ಸಿಕ್ಸರ್) ಸಿಡಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು. ಡ್ಯಾಸಿಂಗ್ ಓಪನರ್ ವೆಂಕಟೇಶ್ ಅಯ್ಯರ್ 14ರನ್ (15 ಎಸೆತ 2 ಬೌಂಡರಿ) ಗಳಿಸಿ ಯಾದವ್‍ಗೆ ವಿಕೆಟ್ ಕೊಟ್ಟು ಹೊರ ನಡೆದರು. ಅಲ್ಪ ಮೊತ್ತವನ್ನು ಬೆನ್ನತ್ತಲು ತಿಣುಕಾಡಿದ ಕೆಕೆಆರ್‍ಗೆ ನಿತೀಶ್ ರಾಣಾ ಅಜೇಯ 36ರನ್ (27 ಎಸೆತ 2 ಬೌಂಡರಿ 2 ಸಿಕ್ಸರ್) ಸಿಡಿಸುವ ಮೂಲಕ ಜಯ ದೊರಕಿಸಿಕೊಟ್ಟರು. ಡೆಲ್ಲಿ ಪರ ಅವೇಶ್ ಖಾನ್ 3 ವಿಕೆಟ್ ಪಡೆದರೆ ಅಶ್ವಿನ್ 1 ಹಾಗೂ ಲಲಿತ್ ಯಾದವ್ 1 ವಿಕೆಟ್ ಪಡೆದರು.

  • ರಾಜಸ್ತಾನ್ ರಾಯಲ್ಸ್ ಬಗ್ಗು ಬಡಿದ ಡೆಲ್ಲಿ ಪ್ಲೇ ಆಫ್‍ಗೆ ಎಂಟ್ರಿ

    ರಾಜಸ್ತಾನ್ ರಾಯಲ್ಸ್ ಬಗ್ಗು ಬಡಿದ ಡೆಲ್ಲಿ ಪ್ಲೇ ಆಫ್‍ಗೆ ಎಂಟ್ರಿ

    – ಡೆಲ್ಲಿ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ತಾನ್
    – ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆರಿದ ಡೆಲ್ಲಿ ಕ್ಯಾಪಿಟಲ್ಸ್

    ಅಬುಧಾಬಿ: ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ತಾನ್ ರಾಯಲ್ಸ್ ತಂಡವನ್ನು 33 ರನ್‍ಗಳ ಅಂತರದಲ್ಲಿ ಸೋಲಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದೊಂದಿಗೆ ಪ್ಲೇ ಆಫ್ ಪ್ರವೇಶಿಸಿದೆ.

    ಟಾಸ್ ಸೋತು ಬ್ಯಾಟಿಂಗ್ ಮಾಡಿದ ಡೆಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು. 155 ರನ್‍ಗಳ ಸವಾಲು ಪಡೆದ ರಾಜಸ್ಥಾನ 6 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು. ಇದನ್ನೂ ಓದಿ: ಸಿಎಸ್‍ಕೆ vs ಆರ್​ಸಿಬಿ ಅಭಿಮಾನಿಗಳ ವಾರ್- ಧೋನಿ, ಕೊಹ್ಲಿ ತುಂಟಾಟ

    ಡೆಲ್ಲಿ ತಂಡದ ಆರಂಭಿಕರಾದ ಪೃಥ್ವಿ ಶಾ ಹಾಗೂ ಧವನ್‍ರನ್ನು ಬೇಗ ಔಟ್ ಮಾಡುವ ಮೂಲಕ ಆರಂಭಿಕ ಅಘಾತ ನೀಡಿತು. ಶಾ 12 ಎಸೆತಗಳಲ್ಲಿ 10 ರನ್, ಧವನ್ 8 ಎಸೆತಗಳಲ್ಲಿ 8 ರನ್‍ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದರು. ನಂತರ ಜೊತೆಯಾದ ನಾಯಕ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ಮೂರನೇ ವಿಕೆಟ್‍ಗೆ 62 ರನ್‍ಗಳ ಜೊತೆಯಾಟವಾಡಿದರು.

    ಡೆಲ್ಲಿ ಕ್ಯಾಪಿಡಲ್ಸ್ ಪರ ಪಂತ್ 24, ಹಾಗೂ ಅಯ್ಯರ್ 43, ಹೆಟ್ಮಿಯರ್ 16 ಎಸೆತಗಳಲ್ಲಿ 5 ಬೌಂಡರಿ ಸಹಿತ ಬಿರುಸಿನ 28 ರನ್‍ಗಳಿಸಿದರು. ನಿಗದಿತ 20 ಓವರ್‍ಗಳಲ್ಲಿ ಡೆಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್‍ಗಳಿಸಿತು. ರಾಜಸ್ತಾನ್ ಪರ ಮುಸ್ತಫಜುರ್ ರೆಹಮಾನ್ ಹಾಗೂ ಚೇತನ್ ಸಕಾರಿಯಾ ತಲಾ ಎರಡು ವಿಕೆಟ್ ಪಡೆದರು. ಇದನ್ನೂ ಓದಿ: ಆರ್​ಸಿಬಿ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್‌ಗೆ ಭರ್ಜರಿ ಜಯ

    157 ರನ್ ಟಾರ್ಗೆಟ್ ಬೆನ್ನತ್ತಿದ ರಾಜಸ್ತಾನ್ ರಾಯಲ್ಸ್, ಆರಂಭದಲ್ಲೇ ಡೆಲ್ಲಿ ಬೌಲರ್‍ಗಳನ್ನು ಎದುರಿಸಲಾಗದೆ ವಿಕೆಟ್‍ಗಳನ್ನು ಕಳೆದುಕೊಂಡಿತು. ಡೆಲ್ಲಿ ಪರ ಲಿವಿಂಗ್‍ಸ್ಟೊನ್ 1 ರನ್, ಜೈಸ್ವಾಲ್ 4 ಎಸೆತಗಳಲ್ಲಿ 5 ರನ್, ಮಿಲ್ಲರ್ 10 ಎಸೆತಗಳಲ್ಲಿ 7 ರನ್‍ಗಳಿಸಿದರು. ಮಹಿಪಾಲ್ ಲೊಮರ್ 24 ಎಸೆತಗಳಲ್ಲಿ 19 ರನ್‍ಗಳಿಸಿ ರಬಾಡಗೆ ವಿಕೆಟ್ ಒಪ್ಪಿಸಿದರು.

    ಆರಂಭದಿಂದಲೂ ಶಿಸ್ತಿನ ದಾಳಿ ನಡೆಸಿದ ಡೆಲ್ಲಿ ಬೌಲರ್ಸ್, ರಾಜಸ್ತಾನವನ್ನು ರನ್‍ಗಳಿಸಲು ಪರಾದಡುವಂತೆ ಮಾಡಿದರು. ರಾಜಸ್ತಾನ್ ಪರ ನಾಯಕ ಸಂಜು ಸ್ಯಾಮ್ಸನ್ ಏಕಾಂಗಿಯಾಗಿ ಹೊರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲಾಗಲಿಲ್ಲ. ಸಂಜು 53 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 70 ರನ್‍ಗಳಿಸಿದರು. ಡೆಲ್ಲಿ ಪರ ಅನ್ರಿಚ್ ನಾಟ್ರ್ಜೆ 2 ವಿಕೆಟ್ ಅಶ್ವಿನ್ 1, ರಬಾಡ ಹಾಗೂ ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಕಬಳಿಸಿದರು.

  • ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈನಲ್ಲಿಂದು ಡೆಲ್ಲಿ ಕ್ಯಾಪಿಟಲ್ಸ್ – ಸನ್ ರೈಸರ್ಸ್ ನಡುವೆ ಕಾದಾಟ

    ದುಬೈ: ಐಪಿಎಲ್ ದ್ವಿತೀಯಾರ್ಧದ 4ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಹೈದರಾಬಾದ್ ಸನ್ ರೈಸರ್ಸ್ ತಂಡಗಳು ಸೆಣಸಾಡಲಿವೆ.

    ಈವರೆಗೂ ನಡೆದಿರುವ ಒಟ್ಟು 8 ಪಂದ್ಯಗಳಲ್ಲಿ, 6 ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಏಳು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಗೆದ್ದಿರುವ ಸನ್ ರೈಸರ್ಸ್ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಇದನ್ನೂ ಓದಿ: ಕೊನೆಯ ಓವರಿನಲ್ಲಿ ತ್ಯಾಗಿ ಜಾದೂ – ರಾಜಸ್ಥಾನಕ್ಕೆ 2 ರನ್‍ಗಳ ರೋಚಕ ಜಯ

    ಭಾರತದಲ್ಲಿ ನಡೆದ ಮೊದಲಾರ್ಧದ ಐಪಿಎಲ್ ಪಂದ್ಯಗಳಲ್ಲಿ ಸಾಲು ಸಾಲು ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಸನ್ ರೈಸರ್ಸ್, ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಲು ಸಿದ್ಧತೆ ನಡೆಸಿದೆ. ಟೂರ್ನಿಯಲ್ಲಿ ಸತತ ಗೆಲುವಿನೊಂದಿಗೆ ಅಬ್ಬರಿಸುತ್ತಿರುವ ಡೆಲ್ಲಿ ಚೊಚ್ಚಲ ಐಪಿಎಲ್ ಕಿರೀಟ ಗೆಲ್ಲುವ ತವಕದಲ್ಲಿದೆ. ಉಭಯ ತಂಡದಲ್ಲೂ ಸ್ಟಾರ್ ಆಟಗಾರರ ಪಡೆಯೇ ಇದೆ. ಇದನ್ನೂ ಓದಿ: ಸ್ಟೇಡಿಯಂನಲ್ಲಿ ಮಹಿಳಾ ಪ್ರೇಕ್ಷಕರು ಇದ್ದಾರೆ, ಪ್ರಸಾರ ಮಾಡಬೇಡಿ – ಅಫ್ಘಾನಿಸ್ಥಾನದಲ್ಲಿ ಐಪಿಎಲ್ ಬ್ಯಾನ್

    ಉಭಯ ತಂಡಗಳ ಬಲಾಬಲ ನೋಡುವುದಾದರೆ ಹೈದರಾಬಾದ್‍ಗಿಂತ, ಡೆಲ್ಲಿ ತಂಡ ಸಮತೋಲನದಿಂದ ಕೂಡಿದೆ. ಡೆಲ್ಲಿ ತಂಡದ ಬ್ಯಾಟಿಂಗ್ ಬಳಗದಲ್ಲಿ ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಶಿಮ್ರಾನ್ ಹೆಟ್ಮಿಯರ್ ರಂತ ಹೊಡಿಬಡಿ ಆಟಗಾರರಿದ್ದಾರೆ. ಪ್ರಸ್ತುತ ಈ ಆಟಗಾರರೆಲ್ಲ ಫಾರ್ಮ್‍ನಲ್ಲಿರುವುದು ಡೆಲ್ಲಿ ತಂಡಕ್ಕೆ ಪ್ಲಸ್ ಆಗಲಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಆರ್, ಅಶ್ವಿನ್, ಅಮಿತ್ ಮಿಶ್ರಾ, ಕಗಿಸೊ ರಬಾಡ, ಎದುರಾಳಿ ತಂಡದ ಆಟಗಾರರನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿದ್ದಾರೆ.

    ಹೈದರಾಬಾದ್ ತಂಡದಲ್ಲಿ ನಾಯಕ ಕೇನ್ ವಿಲಿಯಮ್‍ಸನ್, ಡೇವಿಡ್ ವಾರ್ನರ್, ಮನೀಶ್ ಪಾಂಡೆ, ವಿಜಯ್ ಶಂಕರ್ ಬ್ಯಾಟಿಂಗ್ ವಿಭಾಗದಲ್ಲಿ ತಂಡಕ್ಕೆ ಬಲ ತುಂಬಾಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಚಾಂಪಿಯನ್ ಬೌಲರ್ ರಶೀದ್ ಖಾನ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಸಂದೀಪ್ ಶರ್ಮಾ ಎದುರಾಳಿಗಳನ್ನು ಕಟ್ಟಿಹಾಕಬಲ್ಲರು. ಆದರೆ ಭಾರತದಲ್ಲಿ ಸನ್ ರೈಸರ್ಸ್ ತಂಡದ ಆಟಗಾರರು ಹೇಳಿಕೊಳ್ಳುವಂತ ಪ್ರದರ್ಶನ ನೀಡದಿಲ್ಲದಿರುವು ತಂಡಕ್ಕೆ ಕೊಂಚ ಹಿನ್ನಡೆಯಾಗಬಲ್ಲದು. ಅಲ್ಲದೆ ಸ್ಟಾರ್ ಆಟಗಾರ ಜಾನಿ ಬೈರ್ ಸ್ಟೊ ಈ ಬಾರಿ ಐಪಿಎಲ್‍ನಲ್ಲಿ ಆಡದಿರಲು ನಿರ್ಧಾರಿಸಿದ್ದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

    ಡೆಲ್ಲಿ ತಂಡದಲ್ಲಿ ನಾಯಕ ರಿಷಭ್ ಪಂತ್ ಉತ್ತಮ ಫಾರ್ಮ್‍ನಲ್ಲಿದ್ದು, ಇಂದು ಕೂಡ ಉತ್ತಮ ಪ್ರದರ್ಶನ ನೀಡುವ ಹಂಬಲದಲ್ಲಿದ್ದಾರೆ. ಇನ್ನು ಸೋತು ಸುಣ್ಣವಾಗಿರುವ ಹೈದಾರಬಾದ್ ತಂಡ ಗೆಲುವಿನ ಟ್ರ್ಯಾಕ್‍ಗೆ ಮರಳುವ ತವಕದಲ್ಲಿದೆ. ರಾತ್ರಿ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದ್ದು ಗೆಲುವಿಗಾಗಿ ಉಭಯ ತಂಡಗಳು ಕಾದಾಟ ನಡೆಸಲಿವೆ.

  • ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ

    ಡೆಲ್ಲಿ ನಾಯಕನಾಗಿ ಪಂತ್ ಮುಂದುವರಿಕೆ

    ದುಬೈ: ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕನಾಗಿ ರಿಷಭ್ ಮುಂದುವರಿಯಲ್ಲಿದ್ದಾರೆ ಎಂದು ಡೆಲ್ಲಿ ಫ್ರಾಂಚೈಸಿ ಸಹ ಮಾಲೀಕ ಪಾರ್ಥ್ ಜಿಂದಲ್ ಹೇಳಿದ್ದಾರೆ.

    ಈ ಬಾರಿಯ ಐಪಿಎಲ್ ಮೊದಲಾರ್ಧ ಶುರುವಿಗೂ ಮುನ್ನ ಇಂಗ್ಲೆಂಡ್ ತಂಡದ ವಿರುದ್ಧದ ಏಕದಿನ ಪಂದ್ಯದ ವೇಳೆ ಅಯ್ಯರ್ ಗಾಯಗೊಂಡು ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದರು. ವೈದ್ಯರು ಮೂರು ತಿಂಗಳ ವಿಶ್ರಾಂತಿಯನ್ನು ಸೂಚಿಸಿದರು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯನಾಗಿ ರಿಷಭ್ ಪಂತ್ ಆಯ್ಕೆಯಾಗಿದ್ದರು.

    ನಾಯಕನಾಗಿ ಡೆಲ್ಲಿ ತಂಡವನ್ನು ಉತ್ತಮವಾಗಿ ಮುನ್ನಡೆಸಿರುವ ಪಂತ್, ಐಪಿಎಲ್ ನ ಮೊದಲಾರ್ಧದಲ್ಲಿ ತಂಡ ಅಗ್ರಸ್ಥಾನದಲ್ಲಿ ಇರುವಂತೆ ನೋಡಿಕೊಂಡಿದ್ದಾರೆ. ನಾಯಕನಾಗಿ ಬಡ್ತಿ ಪಡೆದ ಮೇಲೆ ತಂಡಕ್ಕಾಗಿ ಗೆಲುವಿನ ಮೇಲೆ ಗೆಲುವು ಸಿಗುವಂತೆ ಉತ್ತಮ ಆಟವಾಡಿದ್ದರು. ಅಲ್ಲದೆ ಉತ್ತಮ ನಾಯಕನಾಗುವ ಲಕ್ಷಣವಿದೆ ಎಂದು ಹಿರಿಯ ಆಟಗಾರರ ಮೆಚ್ಚುಗೆಗೆ ಪಾತ್ರವಾಗಿದ್ದರು.

    ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡು ಫಿಟ್ ಆಗಿ ತಂಡಕ್ಕೆ ಮರಳಿರುವ ಅಯ್ಯರ್‍ಗೆ ಡೆಲ್ಲಿ ತಂಡದ ಮ್ಯಾನೆಜ್‍ಮೆಂಟ್ ಶಾಕ್ ನೀಡಿ ನಾಯಕನ ಬದಲಾವಣೆಯಿಲ್ಲ ಎಂದು ಹೇಳಿದೆ. ತಂಡದ ಆಟಗಾರರಾಗಿ ಮಾತ್ರ ಶ್ರೇಯಸ್ ಅಯ್ಯರ್ ಆಡಬೇಕಿದೆ.

  • ಪಂತ್, ಇಶಾಂತ್ ಮೇಲೆ ಕೋಪಗೊಂಡ ಕೊಹ್ಲಿ: ವೀಡಿಯೋ ವೈರಲ್

    ಪಂತ್, ಇಶಾಂತ್ ಮೇಲೆ ಕೋಪಗೊಂಡ ಕೊಹ್ಲಿ: ವೀಡಿಯೋ ವೈರಲ್

    ಲಂಡನ್: ಟೀಂ ಇಂಡಿಯಾದ ಆಟಗಾರರಾದ ರಿಷಬ್ ಪಂತ್ ಮತ್ತು ಇಶಾಂತ್ ಶರ್ಮಾ ಮೇಲೆ ನಾಯಕ ವಿರಾಟ್ ಕೊಹ್ಲಿ ಕೋಪಗೊಂಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನದ ಅಂತ್ಯದಲ್ಲಿ ಲಾರ್ಡ್ಸ್ ಅಂಗಳ ವಿಚಿತ್ರ ಘಟನೆಗೆ ಸಾಕ್ಷಿಯಾಯ್ತು. ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬಾಲ್ಕನಿಯಲ್ಲಿ ನಿಂತು ಮೈದಾನದಲ್ಲಿದ್ದ ರಿಷಬ್ ಪಂತ್ ಮತ್ತು ಇಶಾಂತ್ ಶರ್ಮಾಗೆ ಕೋಪದಿಂದ ಸಂದೇಶ ನೀಡುತ್ತಿರುವುದನ್ನು ವೀಡಿಯೋದಲ್ಲಿ ನೋಡಬಹುದಾಗಿದೆ.

    ಇಬ್ಬರ ಮೇಲೆ ಕೋಪಗೊಂಡಿದ್ಯಾಕೆ?:
    ಪಂದ್ಯದ ಅಂತಿಮದಲ್ಲಿ ಬೆಳಕಿನ ಪ್ರಖರತೆ ಕಡಿಮೆಯಾದ ಪರಿಣಾಮ ಚೆಂಡು ಕಾಣಿಸುತ್ತಿರಲಿಲ್ಲ. ಆದ್ರೂ ರಿಷಬ್ ಪಂತ್ ಮತ್ತು ಇಶಾಂತ್ ಶರ್ಮಾ ಅಂಪೈರ್ ಗೆ ದೂರು ನೀಡದೇ ಆಟ ಮುಂದುವರಿಸಿದ್ದರು. ಇತ್ತ ಇದೇ ವೇಳೆ ಬೌಲರ್ ಹೊಸ ಬಾಲ್ ಕೇಳಿ ಪಡೆದುಕೊಳ್ಳುತ್ತಿದ್ದರು. ಹಾಗಾಗಿ ಲಾರ್ಡ್ಸ್ ಮೈದಾನದ ಬಾಲ್ಕನಿಯಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಕೋಪಗೊಂಡು ಇಬ್ಬರು ಆಟಗಾರರಿಗೆ ಇಷ್ಟು ಮಂದ ಬೆಳಕಿನಲ್ಲಿಯೇ ಹೇಗೆ ಅಡುತ್ತೀದೀರಾ? ಎಂದು ಸನ್ನೆ ಮೂಲಕ ಸಂದೇಶ ರವಾನಿಸಿದರು. ಇದಾದ ಬಳಿಕ ನಾಲ್ಕನೇ ದಿನದ ಆಟ ಅಂತ್ಯವಾಯ್ತು. ಇದನ್ನೂ ಓದಿ: ಸಿರಾಜ್ ವಿಕೆಟ್ ಪಡೆದ ಬಳಿಕ ವಿಶೇಷ ಸಂಭ್ರಮಾಚರಣೆಯ ಕಹಾನಿ ರಿವೀಲ್

    https://twitter.com/vijayrulesonly/status/1426963080248840192

    ಬಾಲ್ ಟ್ಯಾಂಪರಿಂಗ್ ಆರೋಪ:
    ಭಾರತ ಹಾಗೂ ಇಂಗ್ಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆಟಗಾರರು ಶೂನಿಂದ ಚೆಂಡನ್ನು ತುಳಿದು ವಿರೂಪಗೊಳಿದ್ದಾರೆ ಎಂಬ ಕುರಿತು ಆರೋಪ ಕೇಳಿಬಂದಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ. ಇಂಗ್ಲೆಂಡ್‍ನ ಇಬ್ಬರು ಆಟಗಾರರು ಶೂನಲ್ಲಿ ಚೆಂಡನ್ನು ತುಳಿದಿರುವ ಫೋಟೋಗಳನ್ನು ಹಾಕಿ ಆಂಗ್ಲ ಆಟಗಾರರು ಕಳ್ಳಾಟದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಮಾಜಿ ಆಟಗಾರರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಚೆಂಡು ವಿರೂಪಗೊಳಿಸಿ ಸಿಕ್ಕಿಬಿದ್ದ ಆಸೀಸ್ ಆಟಗಾರ – ಸ್ಮಿತ್ ನಾಯಕತ್ವ ತಲೆದಂಡ?