Tag: Rishabh Pant

  • IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    2025ರ ಐಪಿಎಲ್‌ ಭಾಗವಾಗಿ ನಡೆದ ಮಗಾ ಹರಾಜಿನಲ್ಲಿ (IPL Mega Auction) ಟೀಂ ಇಂಡಿಯಾದ ಸ್ಟಾರ್‌ ಆಟಗಾರ ಶ್ರೇಯಸ್‌ ಅಯ್ಯರ್‌ ಬರೋಬ್ಬರಿ 26.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಮೊದಲ ಭಾರತೀಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

    ತೀವ್ರ ಪೈಪೋಟಿಯಿಂದ ಕೂಡಿದ್ದ ಬಿಡ್ಡಿಂಗ್‌ನಲ್ಲಿ ಅಯ್ಯರ್‌ ಅವರನ್ನ ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ಜಿದ್ದಾ ಜಿದ್ದಿ ನಡೆದಿತ್ತು. ಅಲ್ಲದೇ ಪ್ರೇಕ್ಷರಕ ಎದೆ ಬಡಿತವೂ ಹೆಚ್ಚಾಗಿತ್ತು, ಹರಾಜು ನಡೆಸಿಕೊಡುತ್ತಿದ್ದ ಮಹಿಳೆ ಮಲ್ಲಿಕಾ ಸಾಗರ್‌ ಬಿಡ್‌ ಕೂಗಿ ಕೂಗಿ ಸುಸ್ತಾಗಿದ್ದರು. ಆದ್ರೆ ಪಟ್ಟು ಬಿಡದ ಪಂಜಾಬ್‌ 26.75 ಕೋಟಿ ರೂ.ಗೆ ಅಯ್ಯರ್‌ ಅವರನ್ನ ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಯಿತು. ಇದನ್ನೂ ಓದಿ: IPL ಇತಿಹಾಸದಲ್ಲೇ ದಾಖಲೆ – 26.75 ಕೋಟಿ ರೂ.ಗೆ ಬಿಕರಿಯಾದ ಶ್ರೇಯಸ್‌ ಅಯ್ಯರ್‌

    2024ರ ಐಪಿಎಲ್‌ಗೆ ನಡೆದ ಮಿನಿ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ವೇಗಿ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗಳಿಗೆ ಬಿಕರಿಯಾಗಿದ್ದರು. ಇದು ಈವರೆಗಿನ ದಾಖಲೆಯಾಗಿತ್ತು. ಇದನ್ನೂ ಓದಿ: 16 ತಿಂಗಳ ಬಳಿಕ ಟೆಸ್ಟ್‌ ಶತಕ ಸಿಡಿಸಿ ಮಿಂಚಿದ ಕೊಹ್ಲಿ – ಡೊನಾಲ್ಡ್‌ ಬ್ರಾಡ್ಮನ್‌ ದಾಖಲೆ ಉಡೀಸ್‌

    ಈವರೆಗೆ ಐಪಿಎಲ್‌ನಲ್ಲಿ 115 ಪಂದ್ಯಗಳನ್ನಾಡಿರುವ ಶ್ರೇಯಸ್‌ ಅಯ್ಯರ್‌ 3,127 ರನ್‌ ಗಳಿಸಿದ್ದಾರೆ. ಇದರಲ್ಲಿ 21 ಅರ್ಧಶತಕಗಳು ಸೇರಿವೆ. 2024ರ ಐಪಿಎಲ್‌ನಲ್ಲಿ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲೇ ಕೋಲ್ಕತ್ತಾ ನೈಟ್‌ರೈಡರ್ಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು.

    ಇಂದು ಬಿಡ್‌ ಆದ ಪ್ರಮುಖರು:
    * ಹರ್ಷ್‌ದೀಪ್‌ ಸಿಂಗ್‌ – 18 ಕೋಟಿ ರೂ.‌ – ಪಂಜಾಬ್‌ ಕಿಂಗ್ಸ್‌
    * ಕಾಗಿಸೋ ರಬಾಡ – 10.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಜೋಸ್‌ ಬಟ್ಲರ್‌ – 15.75 ಕೋಟಿ ರೂ. – ಗುಜರಾತ್‌ ಟೈಟಾನ್ಸ್‌
    * ಮಿಚೆಲ್‌ ಸ್ಟಾರ್ಕ್‌ – 11 ಕೋಟಿ ರೂ. – ಡೆಲ್ಲಿ ಕ್ಯಾಪಿಟಲ್ಸ್‌
    * ಡೇವಿಡ್‌ ಮಿಲ್ಲರ್‌ – 7.50 ಕೋಟಿ ರೂ. – ಲಕ್ನೋ ಸೂಪರ್‌ ಜೈಂಟ್ಸ್‌

  • ಇಂದು ಐಪಿಎಲ್‌ ಮೆಗಾ ಹರಾಜು – ಪಂತ್‌, ರಾಹುಲ್‌, ಅಯ್ಯರ್‌ಗೆ ಜಾಕ್‌ಪಾಟ್‌?

    ಇಂದು ಐಪಿಎಲ್‌ ಮೆಗಾ ಹರಾಜು – ಪಂತ್‌, ರಾಹುಲ್‌, ಅಯ್ಯರ್‌ಗೆ ಜಾಕ್‌ಪಾಟ್‌?

    ಜೆಡ್ಡಾ: 2025ರ ಐಪಿಎಲ್‌ ಆವೃತ್ತಿಯ ಆಟಗಾರರ ಮೆಗಾ ಹರಾಜು (IPL Mega Auction) ಪ್ರಕ್ರಿಯೆ ಭಾನುವಾರ ಪ್ರಾರಂಭಗೊಳ್ಳಲಿದೆ. ಸೌದಿ ಅರೇಬಿಯಾದ ಜೆಡ್ಡಾ ಮತ್ತು ಅಬಾಡಿ ಅಲ್-ಜೋಹರ್ ಅರೆನಾದಲ್ಲಿ ಇಂದು (ನ.24) ಮತ್ತು ನಾಳೆ (ನ.25) ಹರಾಜು ಪ್ರಕ್ರಿಯೆ ನಡೆಯಲಿದೆ.

    ಒಂದು ಫ್ರಾಂಚೈಸಿ ಕನಿಷ್ಠ 18 ರಿಂದ 25 ಆಟಗಾರರನ್ನು ಒಳಗೊಳ್ಳಬಹುದಾಗಿದ್ದು, ಒಟ್ಟು 577 ಆಟಗಾರರು ಕಣದಲ್ಲಿದ್ದಾರೆ. 10 ಐಪಿಎಲ್‌ ತಂಡಗಳು ಒಟ್ಟು 641.5 ಕೋಟಿ ರೂ. ಹಣವನ್ನು ಹರಾಜಿನಲ್ಲಿ ವಿನಿಯೋಗಿಸಲಿದೆ. ಸುಮಾರು 204 ಮಂದಿ ಆಟಗಾರರು ಆರಿಸಲ್ಪಡುವ ಸಾಧ್ಯತೆ ಇದೆ. ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ಗಳಾದ ರಿಷಬ್‌ ಪಂತ್‌ (Rishabh Pant), ಕೆ.ಎಲ್‌ ರಾಹುಲ್‌ (KL Rahul) ಮತ್ತು ಶ್ರೇಯಸ್‌ ಅಯ್ಯರ್‌ ಹೆಚ್ಚಿನ ಮೊತ್ತಕ್ಕೆ ಖರೀದಿಸಲ್ಪಡುವ ಆಟಗಾರರ ಪೈಕಿ ಮುಂಚೂಣಿಯಲ್ಲಿ ಇದ್ದಾರೆ. ಇದನ್ನೂ ಓದಿ: IND vs Aus Test| ವಿವಾದಾತ್ಮಕ ತೀರ್ಪಿಗೆ ರಾಹುಲ್‌ ಔಟ್‌

    ಅದರಲ್ಲಿಯೂ ಮುಖ್ಯವಾಗಿ ರಿಷಬ್‌ ಪಂತ್‌ ಅತ್ಯಧಿಕ ಮೊತ್ತವನ್ನು ಬುಟ್ಟಿಗೆ ಹಾಕಿಕೊಳ್ಳುವ ಸಾಧ್ಯತೆಯನ್ನು ಐಪಿಎಲ್‌ ಪರಿಣಿತರು ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ನ್ಯೂಜಿಲೆಂಡ್‌ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಪಂತ್‌ ಪ್ರದರ್ಶನವೂ ಈ ಜನಪ್ರಿಯತೆಗೆ ಕಾರಣವಾಗಿದೆ. ಶತಾಯ ಗತಾಯ ಪಂತ್‌ ಅವರನ್ನ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ಹಾಗೂ ಕೆ.ಎಲ್‌ ರಾಹುಲ್‌ರನ್ನ ಆರ್‌ಸಿಬಿ (RCB) ಖರೀದಿಸುವ ಪ್ರಯತ್ನ ನಡೆದಿದೆ. ಇದನ್ನೂ ಓದಿ: ರಾಹುಲ್‌-ಯಶಸ್ವಿ ದಾಖಲೆಯ ಶತಕದ ಜೊತೆಯಾಟ – ಭಾರತಕ್ಕೆ 218 ರನ್‌ಗಳ ಮುನ್ನಡೆ

    ಅದೃಷ್ಟ ಪರೀಕ್ಷೆಗಿಳಿದ ಕನ್ನಡಿಗರು:
    ಐಪಿಎಲ್‌ ಮೆಗಾ ಹರಾಜಿನಲ್ಲಿ ಕರ್ನಾಟಕದ 24 ಆಟಗಾರರು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕೆ.ಎಲ್ ರಾಹುಲ್, ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಮಯಾಂಕ್ ಅಗರ್‌ವಾಲ್, ಪ್ರಸಿದ್ಧ ಕೃಷ್ಣ, ಲುತ್ ಸಿಸೋಡಿಯಾ, ಆರ್.ಸ್ಮರಣ್, ಎಲ್.ಆರ್ ಚೇತನ್, ಮನೋಜ್ ಭಾಂಡಗೆ, ಅಭಿಲಾಶ್‌ ಶೆಟ್ಟಿ, ವೈಶಾಖ್ ವಿಜಯ್‌ ಕುಮಾರ್, ಪ್ರವೀಣ್ ದುಬೆ, ಮನ್ವಂತ್‌ ಕುಮಾರ್, ಕೆ.ಗೌತಮ್, ಶ್ರೇಯಸ್ ಗೋಪಾಲ್, ಹಾರ್ದಿಕ್ ರಾಜ್, ಅಭಿನವ್ ಮಹೋಹರ್, ಬಿ.ಆರ್ ಶರತ್, ಕೃಷ್ಣನ್ ಶ್ರೀಜಿತ್, ವಿದ್ವತ್‌ ಕಾವೇರಪ್ಪ, ದೀಪಕ್ ದೇವಾಡಿಗ, ವಿದ್ಯಾಧರ್ ಪಾಟೀಲ್, ಶುಭಾಂಗ್‌ ಹೆಗಡೆ, ಸಮರ್ಥ್ ನಾಗರಾಜ್‌ ಹರಾಜು ಪಟ್ಟಿಯಲ್ಲಿದ್ದಾರೆ. ಇದನ್ನೂ ಓದಿ: ICC Champions Trophy 2025 | ಈ ವಾರವೇ ವೇಳಾಪಟ್ಟಿ ಬಿಡುಗಡೆ ಸಾಧ್ಯತೆ

    25 ಕೋಟಿ ರೂ. ಮೈಲಿಗಲ್ಲು
    ಎಲ್ಲಕ್ಕಿಂತ ಹೆಚ್ಚಾಗಿ ಕ್ರೀಡಾಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿರುವುದು ಪಂತ್‌, ಕೆ.ಎಲ್‌ ರಾಹುಲ್‌ 25 ಕೋಟಿ ರೂ. ಮೈಲಿಗಲ್ಲನ್ನು ದಾಟುವರೇ ಎಂಬುದು. ಈವರೆಗೆ ಯಾಬೊಬ್ಬ ಭಾರತೀಯ ಆಟಗಾರನೂ ಈ ಸಾಧನೆಗೆ ಪಾತ್ರವಾಗಿಲ್ಲ. ಈ ಬಾರಿಯ ಐಪಿಎಲ್‌ ಹರಾಜಿನಲ್ಲಿ ಪಂತ್‌ 25 ಕೋಟಿ ರೂ. ಪಡೆದ ಮೊದಲ ಭಾರತೀಯ ಆಟಗಾರ ಖ್ಯಾತಿಗೆ ಯಾರು ಪಾತ್ರರಾಗುತ್ತಾರೆ ಪಾತ್ರರಾಗುವರೇ ಎಂಬುದು ಕುತೂಹಲ ಮೂಡಿಸಿದೆ. ಕಳೆದ ಆವೃತ್ತಿಯಲ್ಲಿ ಆಸ್ಟ್ರೇಲಿಯಾದ ಮಿಚೆಲ್‌ ಸ್ಟಾರ್ಕ್‌ 24.75 ಕೋಟಿ ರೂ.ಗೆ ಕೋಲ್ಕತ್ತಾ ನೈಟ್‌ರೈಡರ್ಸ್‌ಗೆ ಬಿಕರಿಯಾಗಿದ್ದರು, ಇದು ಈವರೆಗಿನ ದಾಖಲೆ ಬೆಲೆಯಾಗಿದೆ.

  • ICC Test Ranking | ಆರಕ್ಕೇರಿದ ಪಂತ್, ಟಾಪ್‌-20 ಪಟ್ಟಿಯಿಂದಲೂ ಕೊಹ್ಲಿ ಔಟ್‌

    ICC Test Ranking | ಆರಕ್ಕೇರಿದ ಪಂತ್, ಟಾಪ್‌-20 ಪಟ್ಟಿಯಿಂದಲೂ ಕೊಹ್ಲಿ ಔಟ್‌

    ಮುಂಬೈ: ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ ಆಟಗಾರ ರಿಷಬ್ ಪಂತ್ (Rishabh Pant) ಐಸಿಸಿ ಟೆಸ್ಟ್ ರ‍್ಯಾಕಿಂಗ್‌ನಲ್ಲಿ (ICC Test Ranking) 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

    ಇನ್ನೂ 3ನೇ ಸ್ಥಾನದಲ್ಲಿದ್ದ ಯಶಸ್ವಿ ಜೈಸ್ವಾಲ್ (Yashasvi Jaiswal) 4ನೇ ಸ್ಥಾನಕ್ಕೆ ಕುಸಿದು ನಿರಾಸೆ ಅನುಭವಿಸಿದರೆ, 8 ಸ್ಥಾನ ಕುಸಿತ ಕಂಡಿರುವ ವಿರಾಟ್‌ ಕೊಹ್ಲಿ (Virat Kohli) ಕಳೆದ 10 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಟಾಪ್‌-20 ರ‍್ಯಾಂಕ್‌ನಿಂದಲೇ ಹೊರಬಿದ್ದಿದ್ದಾರೆ. 750 ರೇಟಿಂಗ್ಸ್‌ ಪಡೆದಿರುವ ರಿಷಬ್‌ ಪಂತ್‌ 5 ಸ್ಥಾನಗಳಲ್ಲಿ ಏರಿಕೆ ಕಂಡು 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಇನ್ನೂ 3ನೇ ಸ್ಥಾನದಲ್ಲಿರುವ ಯಶಸ್ವಿ ಜೈಸ್ವಾಲ್‌ 777 ರೇಟಿಂಗ್ಸ್‌ನೊಂದಿಗೆ 4ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಆದ್ರೆ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ವಿರಾಟ್‌ 655 ರೇಟಿಂಗ್ಸ್‌ನೊಂದಿಗೆ 22ನೇ ಸ್ಥಾನಕ್ಕೆ ಕುಸಿದಿದ್ದಾರೆ. ಇದನ್ನೂ ಓದಿ: WTC Points Table | ಹೀನಾಯ ಸೋಲಿನ ಬೆನ್ನಲ್ಲೇ ನಂ.1 ಪಟ್ಟ ಕಳೆದುಕೊಂಡ ಭಾರತ – ಆಸೀಸ್‌ಗೆ ಅಗ್ರಸ್ಥಾನ

    ಬಿದ್ದು ಎದ್ದು ಗೆದ್ದ ಪಂತ್‌:
    2022 ಡಿಸೆಂಬರ್‌ 31ರ ರಾತ್ರಿ ನಡೆದ ಕಾರು ಅಪಘಾತದಲ್ಲಿ ಪಂಥ್‌ ಬದುಕುಳಿದಿದ್ದೇ ಪವಾಡವಾಗಿತ್ತು. ಅವರ ಸ್ಥಿತಿ ನೋಡಿ ಪಂತ್‌ಗೆ ಮುಂದೆ ನಡೆದಾಡಲು ಆಗಬಹುದೇ ಎಂಬ ಸಂದೇಹವೂ ಕೆಲವರಲ್ಲಿ ಮೂಡಿತ್ತು. ಛಲಬಿಡದ ಪಂತ್‌ ನಿರೀಕ್ಷೆ ಮೀರಿ ಚೇತರಿಸಿಕೊಂಡರು. ಒಂದೂವರೆ ವರ್ಷ ಆಗುವುದರೊಳಗೆ ಕ್ರೀಡಾಂಗಣಕ್ಕೆ ಮರಳಿದರು. 2024ರ ಐಪಿಎಲ್‌ ಟೂರ್ನಿಮೂಲಕ ಮತ್ತೆ ಕ್ರಿಕೆಟ್‌ ಅಂಗಳಕ್ಕೆ ಮರಳಿದ ಪಂತ್‌ ಬಳಿಕ ಟೀಂ ಇಂಡಿಯಾ ಪರವಾಗಿ ಪ್ರತಿನಿಧಿಸಿದ್ದು ಟಿ20 ವಿಶ್ವಕಪ್‌ನಲ್ಲಿ. ಆ ನಂತರ ಶ್ರೀಲಂಕಾ ವಿರುದ್ಧ ಏಕದಿನ ಸರಣಿ ಅಡಿದರು. ಪುನರಾಗಮನದ ಬಳಿಕ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಸರಣಿ ಆಡಿದರು. ಇದನ್ನೂ ಓದಿ: ಕೊಹ್ಲಿಗೆ ಕ್ಯಾಪ್ಟೆನ್ಸಿ ನೀಡುವ ಬಗ್ಗೆ ನಿರ್ಧಾರ ಆಗಿಲ್ಲ -‌ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು

    ನ್ಯೂಜಿಲೆಂಡ್‌ ವಿರುದ್ಧ ನಡೆದ 3ನೇ ಟೆಸ್ಟ್‌ನ 2ನೇ ದಿನ ಮೊದಲ ಇನಿಂಗ್ಸ್‌ನಲ್ಲಿ ಪಂತ್ ಆಡಲು ಕಣಕ್ಕಿಳಿದಾಗ, ಭಾರತ ಸಂಕಷ್ಟದಲ್ಲಿತ್ತು. ಆಗ ಎದುರಾಳಿಗಳ ಅಸ್ತ್ರ ಆಜಾಜ್ ಪಟೇಲ್ ಅವರನ್ನೂ ಲೆಕ್ಕಿಸಲಿಲ್ಲ. ಅವರ 60 ರನ್‌ಗಳ ನೆರವಿನಿಂದ ಭಾರತಕ್ಕೆ ಇನಿಂಗ್ಸ್‌ ಮುನ್ನಡೆ ತಂದುಕೊಟ್ಟರು. 2ನೇ ಇನಿಂಗ್ಸ್‌ನಲ್ಲಿ ಭಾರತದ ಗೆಲುವಿಗೆ ಕಿವೀಸ್‌ 147 ರನ್‌ಗಳ ಸಣ್ಣ ಗುರಿ ನೀಡಿತ್ತು. ಆದ್ರೆ ಭಾರತ 18 ರನ್‌ಗಳಾಗುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡಿತ್ತು. ಇಂಥ ಪರಿಸ್ಥಿತಿಯಲ್ಲೂ ಬೌಲರ್‌ಗಳನ್ನು ಬೆಂಡೆತ್ತಲು ಪಂತ್‌ ಮುಂದಾದರು. ಇದರಿಂದ ಭಾರತದ ಗೆಲುವು ಖಚಿತ ಎಂದೇ ಭಾವಿಸಲಾಗಿತ್ತು. ಆದ್ರೆ ಅರ್ಧಶತಕ ಗಳಿಸಿದ್ದ ಪಂತ್‌ ವಿವಾದಾತ್ಮಕ ಡಿಆರ್‌ಎಸ್‌ ತೀರ್ಪಿಗೆ ಔಟಾದರು. ಪಂತ್‌ ಔಟಾಗುತ್ತಿದ್ದಂತೆ ಟೀಂ ಇಂಡಿಯಾದ ಉಳಿದ ಆಟಗಾರರು ಬ್ಯಾಕ್‌ ಟು ಬ್ಯಾಕ್‌ ಪೆವಿಲಿಯನ್‌ ಸೇರಿಕೊಂಡರು.

  • 24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

    24 ವರ್ಷಗಳ ಬಳಿಕ ತವರಿನಲ್ಲಿ ಭಾರತ ವೈಟ್‌ವಾಶ್‌ – ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ಕಿವೀಸ್‌

    ಮುಂಬೈ: ನ್ಯೂಜಿಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಕಂಡಿದೆ. ಈ ಸೋಲಿನೊಂದಿಗೆ 24 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋತ ಅಪಖ್ಯಾತಿಯನ್ನು ಹೆಗಲಿಗೇರಿಸಿಕೊಂಡಿದೆ. ಕೊನೆಯದ್ದಾಗಿ ಭಾರತ 2000 ಇಸವಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ವೈಟ್‌ವಾಶ್‌ ಆಗಿತ್ತು.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್‌ ಪಂದ್ಯದಲ್ಲಿ ಕಿವೀಸ್‌ ಭಾರತದ ವಿರುದ್ಧ 26 ರನ್‌ಗಳ ಅಮೋಘ ಜಯ ಸಾಧಿಸಿ, ಮೂರು ಪಂದ್ಯಗಳ ಟೆಸ್ಟ್‌ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಈ ಮೂಲಕ ಭಾರತದಲ್ಲಿ 3 ಅಥವಾ ಅದಕ್ಕಿಂತ ಹೆಚ್ಚಿನ ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ತಂಡವನ್ನು ವೈಟ್‌ವಾಶ್‌ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    147 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಹಿನ್ನಡೆ ಅನುಭವಿಸಿತು. ನಾಯಕ ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗಿ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಲ್ಪಮೊತ್ತಕ್ಕೆ ಔಟಾಗಿದ್ದು ತಂಡಕ್ಕೆ ಭಾರಿ ಆಘಾತ ನೀಡಿತು.

    ಪಂತ್‌ ಬಳಿಕ ಟೀಂ ಇಂಡಿಯಾ ಪಥನ:
    ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ರಿಷಭ್‌ ಪಂತ್‌ ಆಸರೆಯಾದರು. ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಪಂತ್‌ 57 ಎಸೆತಗಳಲ್ಲಿ 64 ರನ್‌ (9 ಬೌಂಡರಿ, 1 ಸಿಕ್ಸರ್‌) ಗಳಿಸಿದ್ದರು. ಈ ವೇಳೆ ಸುಲಭವಾಗಿ ಕೀಪರ್‌ ಕ್ಯಾಚ್‌ಗೆ ತುತ್ತಾದರು. ಪಂತ್‌ ಔಟಾದ ಬೆನ್ನಲ್ಲೇ ಅಶ್ವಿನ್‌, ಆಕಾಶ್‌ ದೀಪ್‌, ವಾಷಿಂಗ್ಟನ್‌ ಸುಂದರ್‌ ಬ್ಯಾಕ್‌ ಟು ಬ್ಯಾಕ್‌ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಟೀಂ ಇಂಡಿಯಾ 121 ರನ್‌ಗಳಿಗೆ ಸರ್ವಪತನ ಕಂಡಿತು.

    ಆಜಾಜ್ ಪಟೇಲ್ ಸ್ಪಿನ್‌ ದಾಳಿಗೆ ತತ್ತರ:
    ಭಾರತೀಯ ಬ್ಯಾಟರ್‌ಗಳ ಎದುರು ಬಿಗಿ ಹಿಡಿತ ಸಾಧಿಸಿದ ಎಡಗೈ ಸ್ಪಿನ್ನರ್‌ ಆಜಾಜ್‌ ಪಟೇಲ್‌ 14.1 ಓವರ್‌ಗಳಲ್ಲಿ 57 ರನ್‌ ಬಿಟ್ಟುಕೊಟ್ಟು 6 ವಿಕೆಟ್‌ ಪಡೆದು ಮಿಂಚಿದರು. ಇದರೊಂದಿಗೆ ಗ್ಲೆನ್‌ ಫಿಲಿಪ್ಸ್‌ 3 ವಿಕೆಟ್‌ ಹಾಗೂ ಮ್ಯಾಟ್‌ ಹೆನ್ರಿ 1 ವಿಕೆಟ್‌ ಕಿತ್ತರು.

    147 ರನ್‌ ಗುರಿ ನೀಡಿದ್ದ ಕಿವೀಸ್‌:
    2ನೇ ದಿನದ ಅಂತ್ಯಕ್ಕೆ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕಿವೀಸ್‌ 9 ವಿಕೆಟ್‌ಗೆ 171 ರನ್‌ಗಳಿಸಿತ್ತು. 3ನೇ ದಿನ 143 ರನ್‌ಗಳ ಮುನ್ನಡೆಯೊಂದಿಗೆ ಕ್ರೀಸ್‌ ಆರಂಭಿಸಿದ್ದ ನ್ಯೂಜಿಲೆಂಡ್‌ 2ನೇ ಇನ್ನಿಂಗ್ಸ್‌ನಲ್ಲಿ 174 ರನ್‌ಗಳಿಗೆ ಆಲೌಟ್‌ ಆಯಿತು. ಈ ಮೂಲಕ ಭಾರತಕ್ಕೆ 147 ರನ್‌ಗಳ ಗುರಿ ನೀಡಿತ್ತು.

    2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 5 ವಿಕೆಟ್‌, ಅಶ್ವಿನ್‌ 3 ವಿಕೆಟ್‌, ಆಕಾಶ್‌ ದೀಪ್‌ ಮತ್ತು ವಾಷಿಂಗ್ಟನ್‌ ಸುಂದರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಸಂಕ್ಷಿಪ್ತ ಸ್ಕೋರ್‌:
    ಮೊದಲ ಇನ್ನಿಂಗ್ಸ್‌
    ನ್ಯೂಜಿಲೆಂಡ್‌ – 235/10, ಭಾರತ – 236/10

    2ನೇ ಇನ್ನಿಂಗ್ಸ್‌
    ನ್ಯೂಜಿಲೆಂಡ್‌ – 174/10, ಭಾರತ – 121/10 

  • IPL Retention | ರಿಷಬ್‌ ಪಂತ್‌ ಸೇರಿ ಸ್ಟಾರ್‌ ಆಟಗಾರರೇ ಔಟ್‌ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ

    IPL Retention | ರಿಷಬ್‌ ಪಂತ್‌ ಸೇರಿ ಸ್ಟಾರ್‌ ಆಟಗಾರರೇ ಔಟ್‌ – ಆಲ್‌ರೌಂಡರ್‌ಗೆ ಮಣೆ ಹಾಕಿದ ಡೆಲ್ಲಿ

    ಮುಂಬೈ: 2025ರ ಐಪಿಎಲ್‌ ಆವೃತ್ತಿಗಾಗಿ ಉಳಿಕೆ ಆಟಗಾರರ ಪಟ್ಟಿ ರಿಲೀಸ್‌ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ಫ್ರಾಂಚೈಸಿಯು ನಾಯಕ ರಿಷಭ್‌ ಪಂತ್‌ (Rishabh Pant) ಸೇರಿ ಹಲವು ಸ್ಟಾರ್‌ ಆಟಗಾರರನ್ನೇ ಹೊರಗಿಟ್ಟು, ಆಲ್‌ರೌಂಡರ್‌ ಹಾಗೂ ಬೌಲರ್‌ಗಳಿಗೆ ಮಣೆಹಾಕಿದೆ.

    ನಿರೀಕ್ಷೆಯಂತೆ ರಿಷಬ್‌ ಪಂತ್‌ ಅವರನ್ನು ಉಳಿಕೆ ಪಟ್ಟಿಯಿಂದ ಕೈಬಿಟ್ಟಿದ್ದು, ಓರ್ವ ವಿದೇಶಿ ಆಟಗಾರ ಸೇರಿದಂತೆ ನಾಲ್ವರನ್ನು ಧಾರಣೆ ಮಾಡಿಕೊಂಡಿದೆ. ಅಕ್ಟರ್‌ ಪಟೇಲ್‌ (Akshar Patel) ಅತಿ ಹೆಚ್ಚು ಸಂಭಾವನೆ ಗಳಿಸಿದ್ದು, ಮುಂದಿನ ಕ್ಯಾಪ್ಟನ್‌ ಆಗಲಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಇದನ್ನೂ ಓದಿ: IPL Retention | ಡುಪ್ಲೆಸಿ ಔಟ್‌, ಆರ್‌ಸಿಬಿಯಲ್ಲಿ ತ್ರಿಬಲ್‌ ಸ್ಟಾರ್‌; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್‌ 6 ಕೋಟಿ ಏರಿಕೆ

    ಯಾರಿಗೆ ಎಷ್ಟು ಮೊತ್ತ?
    * ಅಕ್ಷರ್‌ ಪಟೇಲ್‌ – 16.5 ಕೋಟಿ ರೂ.
    * ಕುಲ್ದೀಪ್‌ ಯಾದವ್‌ – 13.25 ಕೋಟಿ ರೂ.
    * ಟ್ರಿಸ್ಟನ್‌ ಸ್ಟಬ್ಸ್‌ – 10 ಕೋಟಿ ರೂ.
    * ಅಭಿಷೇಕ್‌ ಪೊರೆಲ್‌ – 4 ಕೋಟಿ ರೂ.

    ಸಿಎಸ್‌ಕೆಗೆ ಪಂತ್?‌
    ಹರಾಜು ಪ್ರಕ್ರಿಯೆ ಶುರುವಾದ ಆರಂಭದಿಂದಲೂ ರಿಷಭ್‌ ಪಂತ್‌ ಡೆಲ್ಲಿ ತಂಡವನ್ನು ತೊರೆಯುತ್ತಾರೆ ಎಂದು ಹೇಳಲಾಗುತ್ತಿತ್ತು. ಇದೀಗ ನಿರೀಕ್ಷೆಯಂತೆ ಫ್ರಾಂಚೈಸಿ ಅವರನ್ನು ಕೈಬಿಟ್ಟಿದೆ. ಸದ್ಯ ಅವರು ಸಿಎಸ್‌ಕೆ ತಂಡವನ್ನು ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಎಸ್‌ಕೆ ಫ್ರಾಂಚೈಸಿಯು ಒಂದು ಆರ್‌ಟಿಎಂ ಕಾರ್ಡ್‌ ಆಯ್ಕೆ ಬಾಕಿ ಉಳಿಸಿಕೊಂಡಿದ್ದು, ರಿಷಭ್‌ ಪಂತ್‌ ಅವರನ್ನ ಖರೀದಿ ಮಾಡಲಿದೆ. ಈಗಾಗಲೇ ಧೋನಿ ಫ್ರಾಂಚೈಸಿ ಮಾಲೀಕರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ. ಇದನ್ನೂ ಓದಿ: IPL Retention | 2025ರ ಐಪಿಎಲ್‌ಗೆ ಲೆಜೆಂಡ್‌ ಮಹಿ ಫಿಕ್ಸ್‌ – ರುತುರಾಜ್‌, ಜಡ್ಡುಗೆ ಬಂಪರ್‌

    ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ರಿಯಾದ್‌ನಲ್ಲಿ ಮೆಗಾ ಹರಾಜು ನಡೆಸಲು ಬಿಸಿಸಿಐ ತೀರ್ಮಾನಿಸಿದೆ. ಈ ಹಿನ್ನೆಲೆಯಲ್ಲಿ ಉಳಿಸಿಕೊಳ್ಳಬಹುದಾದ ಆಟಗಾರರ ಪಟ್ಟಿಯನ್ನು ಎಲ್ಲಾ ಫ್ರಾಂಚೈಸಿಗಳು ಬಿಡುಗಡೆ ಮಾಡಿವೆ. ಇದನ್ನೂ ಓದಿ: IPL Retention | ರೋಹಿತ್‌, ಪಾಂಡ್ಯಗಿಂತಲೂ ಬುಮ್ರಾ ದುಬಾರಿ – ಮುಂಬೈನಲ್ಲಿ ವಿದೇಶಿ ಆಟಗಾರರಿಗೆ ಕೊಕ್‌

  • IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    IPLನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡದ ಕ್ಯಾಪ್ಟನ್ ಆಗ್ತಾರಾ ರಿಷಬ್ ಪಂತ್?

    ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ನಾಯಕ ರಿಷಬ್ ಪಂತ್ (Rishabh Pant) ಭವಿಷ್ಯ ಸದ್ಯಕ್ಕೆ ತೂಗುಯ್ಯಾಲೆಯಲ್ಲಿದೆ. ಐಪಿಎಲ್‌ನಲ್ಲಿ ಡೆಲ್ಲಿ ಟೀಂ ಬಿಟ್ಟು ಬೇರೆ ತಂಡಕ್ಕೆ ರಿಷಬ್‌ ಪಂತ್‌ ಕ್ಯಾಪ್ಟನ್‌ ಆಗ್ತಾರಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

    2025 ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮೆಗಾ ಹರಾಜಿನ ಮೊದಲು ಪಂತ್ ತಂಡಕ್ಕೆ ಆದ್ಯತೆಯ ಧಾರಣ ಎಂದು DC ಸಹ-ಮಾಲೀಕ ಪಾರ್ಥ್ ಜಿಂದಾಲ್ ಈ ಹಿಂದೆ ಭರವಸೆ ನೀಡಿದ್ದರು. ತಮ್ಮ ಫ್ರಾಂಚೈಸಿ ಖಂಡಿತವಾಗಿಯೂ ಪಂತ್‌ ಅವರನ್ನು ಉಳಿಸಿಕೊಳ್ಳುತ್ತದೆ ಎಂದಿದ್ದರು. ಅದರೆ, ಈಗ ಅವರನ್ನು ಉಳಿಸಿಕೊಳ್ಳುವ ಬಗ್ಗೆ ಯಾವುದೇ ಖಚಿತತೆ ಇಲ್ಲ. ಇದನ್ನೂ ಓದಿ: ಲಕ್ನೋ ತಂಡದಿಂದ ಕೆ.ಎಲ್ ರಾಹುಲ್ ರಿಲೀಸ್ – ಆರ್‌ಸಿಬಿ ಸೇರ್ತಾರಾ ಕನ್ನಡಿಗ?

    DC ಫ್ರಾಂಚೈಸಿ, ಪಂತ್ ಅವರನ್ನು ಉಳಿಸಿಕೊಳ್ಳಲು ಉತ್ಸುಕವಾಗಿದೆ. ಆದರೆ, JSW ಮತ್ತು GMR ಐಪಿಎಲ್‌ಗಾಗಿ ಜವಾಬ್ದಾರಿಗಳನ್ನು ವಿಭಜಿಸುವುದರಿಂದ ಬದಲಾವಣೆ ಆಗಬಹುದು ಎನ್ನಲಾಗಿದೆ. GMR ಮತ್ತು JSW ತಲಾ ಎರಡು ವರ್ಷಗಳ ಕಾಲ ದೆಹಲಿ ಕ್ಯಾಪಿಟಲ್ಸ್ ಅನ್ನು ನಿರ್ವಹಿಸುತ್ತವೆ ಎಂದು ಘೋಷಿಸಿದ ನಂತರ ಈ ಚರ್ಚೆ ಹುಟ್ಟುಕೊಂಡಿದೆ.

    ಒಪ್ಪಂದದ ಪ್ರಕಾರ, GMR 2025 ಮತ್ತು 2026ರ ಐಪಿಎಲ್‌ ಋತುಗಳಿಗಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಅನ್ನು ನಿರ್ವಹಿಸುತ್ತದೆ. ಈ ಬದಲಾವಣೆಗಳಿಗೆ ಅನುಗುಣವಾಗಿ, ವೇಣುಗೋಪಾಲ್ ರಾವ್ ಮತ್ತು ಹೇಮಂಗ್ ಬದಾನಿ ಅವರನ್ನು ಕ್ರಮವಾಗಿ ಕ್ರಿಕೆಟ್ ನಿರ್ದೇಶಕ ಮತ್ತು ಡಿಸಿ ಮುಖ್ಯ ಕೋಚ್ ಆಗಿ ನೇಮಿಸಲಾಗಿದೆ. ಇದನ್ನೂ ಓದಿ: ನಾನು ಅವರ ಹಾಸಿಗೆಯ ಮೇಲೆ ಕುಳಿತಿದ್ದೆ – ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಮತ್ತೆ ಸಾಕ್ಷಿ ಮಲಿಕ್‌ ಆರೋಪ

    ಏತನ್ಮಧ್ಯೆ, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಸೇರಿದಂತೆ ಇತರ ಐಪಿಎಲ್ ತಂಡಗಳು ಪಂತ್ ಅವರನ್ನು ನಾಯಕನನ್ನಾಗಿ ಮಾಡಲು ಆಸಕ್ತಿ ತೋರಿಸಿವೆ. ಇದು ಅವರ ಧಾರಣೆಗೆ ಕರೆ ತೆಗೆದುಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್‌ ಮೇಲೆ ಮತ್ತಷ್ಟು ಒತ್ತಡವನ್ನು ಉಂಟುಮಾಡುತ್ತದೆ.

  • ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ಸ್ಪಿನ್‌ ಮಾಂತ್ರಿಕ ಅಶ್ವಿನ್‌ ಆಲ್‌ರೌಂಡ್‌ ಆಟ – ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ; 1-0 ಸರಣಿ ಮುನ್ನಡೆ

    ಚೆನ್ನೈ: ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ (Ravichandran Ashwin) ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್‌ ತಂಡವು ಬಾಂಗ್ಲಾದೇಶ (Bangladesh) ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಟೆಸ್ಟ್‌ ಸರಣಿಯನ್ನು 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ದಿನದಾಟದಲ್ಲಿ ಕಠಿಣ ಗುರಿ ಬೆನ್ನಟ್ಟಿದ ಬಾಂಗ್ಲಾ ಭಾರತದ ಸ್ಪಿನ್‌ ಮಾಂತ್ರಿಕರ ದಾಳಿಗೆ ಮಕಾಡೆ ಮಲಗಿದರು. 158 ರನ್‌ಗಳಿಗೆ 4 ವಿಕೆಟ್‌ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡ 357 ರನ್‌ಗಳ ಹಿನ್ನಡೆಯೊಂದಿಗೆ ನಾಲ್ಕನೇ ದಿನದಾಟ ಆರಂಭಿಸಿತು. 200 ರನ್‌ ದಾಟುತ್ತಿದ್ದಂತೆ ಪೆವಿಲಿಯನ್‌ ಪರೇಡ್‌ ನಡೆಸಿತು. ಪರಿಣಾಮ 234 ರನ್‌ಗಳಿಗೆ ಬಾಂಗ್ಲಾ ಸರ್ವಪತನ ಕಂಡಿತು.

    ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಬಾಂಗ್ಲಾ ಪರ 5ನೇ ವಿಕೆಟ್‌ಗೆ ಶಕೀಬ್‌ ಮತ್ತು ನಾಯಕ ನಜ್ಮುಲ್‌ ಹೊಸೈನ್‌ ಸ್ಯಾಂಟೋ (Najmul Hossain Shanto) ತಾಳ್ಮೆಯ ಇನ್ನಿಂಗ್ಸ್‌ ಕಟ್ಟಿದ್ದರು. 108 ಎಸೆತಗಳಲ್ಲಿ ಈ ಜೋಡಿ 48 ರನ್‌ ಗಳಿಸಿತ್ತು. ಶಕೀಬ್‌ (Shakib Al Hasan) ಔಟಾಗುತ್ತಿದ್ದಂತೆ ಬಾಂಗ್ಲಾ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಲು ಶುರು ಮಾಡಿದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬಾಂಗ್ಲಾ ಪರ‌ ಸ್ಯಾಂಟೋ 82 ರನ್‌, ಜಾಕಿರ್‌ ಹಸನ್‌ 33 ರನ್‌, ಶದಾಮನ್‌ ಇಸ್ಲಾಮ್‌ 35 ರನ್‌, ಮಮಿನ್ಮುಲ್‌ ಹಾಕಿ ಹಾಗೂ ರಹೀಂ ತಲಾ 13 ರನ್‌ ಗಳಿಸಿದ್ರೆ, ಶಕೀಬ್‌ 25 ರನ್‌ ಗಳಿಸಿದರು. ಉಳಿದ ಆಟಗಾರರು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ, ಭಾರತದ ಎದುರು ಮಂಡಿಯೂರಬೇಕಾಯಿತು.

    ಭಾರತ 287ಕ್ಕೆ ಡಿಕ್ಲೆರ್:
    ಇದರ ನಡುವೆ ಭಾರತ ತಂಡ 287/4 ಸ್ಕೋರ್‌ಗೆ ಎರಡನೇ ಇನಿಂಗ್ಸ್ ಅನ್ನು ಡಿಕ್ಲೇರ್ ಮಾಡಿಕೊಂಡಿತು. ಮೊದಲ ಇನಿಂಗ್ಸ್‌ನಲ್ಲಿ 227 ರನ್‌ಗಳ ಮುನ್ನಡೆ ಸೇರಿದಂತೆ ಬಾಂಗ್ಲಾದೇಶಕ್ಕೆ ಭಾರತ, 515 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ. ಪಂತ್ ಜೊತೆಗೆ ಶುಭಮನ್ ಗಿಲ್ (ಔಟಾಗದೆ 119; 176 ಎಸೆತ, 10 ಬೌಂಡರಿ, 4 ಸಿಕ್ಸರ್) ಕೂಡ ಶತಕ ಗಳಿಸಿದರು. ಕೆಎಲ್ ರಾಹುಲ್ (ಔಟಾಗದೆ 22; 19 ಎಸೆತ, 4 ಬೌಂಡರಿ) ಅಜೇಯರಾಗಿ ಉಳಿದರು.

    ಭಾರತ ಪ್ರಥಮ ಇನಿಂಗ್ಸ್‌ನಲ್ಲಿ 376 ರನ್:
    ಬಾಂಗ್ಲಾದೇಶ ಬೌಲರ್‌ಗಳಲ್ಲಿ ಮೆಹದಿ ಹಸನ್ ಮಿರಾಜ್ ತಲಾ ಎರಡು, ಟಾಸ್ಕಿನ್ ಅಹ್ಮದ್ ಮತ್ತು ನಹಿದ್ ತಲಾ ಒಂದೊಂದು ವಿಕೆಟ್ ಪಡೆದರು. ಇದರ ನಡುವೆ ಭಾರತ ಮೊದಲ ಇನಿಂಗ್ಸ್ನಲ್ಲಿ 376 ರನ್‌ಗಳ ಬೃಹತ್ ಸ್ಕೋರ್ ಮಾಡಿತು. ರವಿಚಂದ್ರನ್ ಅಶ್ವಿನ್ (113) ಮತ್ತು ರವೀಂದ್ರ ಜಡೇಜಾ (86) ಬ್ಯಾಟಿಂಗ್‌ನಲ್ಲಿ ಮಿಂಚಿದ್ದರು. ಹಸನ್ ಮಹ್ಮೂದ್ (5/83) ಐದು ವಿಕೆಟ್ ಪಡೆದಿದ್ದರು.

    ಬಾಂಗ್ಲಾ 149ಕ್ಕೆ ಆಲ್‌ಔಟ್
    ಜಸ್‌ಪ್ರೀತ್ ಬುಮ್ರಾ (4/50), ಆಕಾಶ ದೀಪ್ (2/19), ರವೀಂದ್ರ ಜಡೇಜಾ (2/19) ಮತ್ತು ಮೊಹಮ್ಮದ್ ಸಿರಾಜ್ (2/30) ನೆರವಿನಿಂದ ಭಾರತ ತಂಡ, ಪ್ರಥಮ ಇನಿಂಗ್ಸ್ನಲ್ಲಿ ಬಾಂಗ್ಲಾದೇಶ ತಂಡವನ್ನು 149 ರನ್‌ಗಳಿಗೆ ಆಲ್‌ಔಟ್ ಮಾಡಿತ್ತು. ಶಕಿಬ್ ಅಲ್ ಹಸನ್ (32) ಗರಿಷ್ಠ ಸ್ಕೋರರ್ ಆಗಿದ್ದರು.

  • ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​​ಗೆ 16 ಸದಸ್ಯರ ಭಾರತ ತಂಡ ರೆಡಿ – ಯುವ ಆಟಗಾರರಿಗೆ ಮಣೆ!

    ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​​ಗೆ 16 ಸದಸ್ಯರ ಭಾರತ ತಂಡ ರೆಡಿ – ಯುವ ಆಟಗಾರರಿಗೆ ಮಣೆ!

    – 21 ತಿಂಗಳ ಬಳಿಕ ರಿಷಭ್‌ ಪಂತ್‌ ಟೆಸ್ಟ್‌ ಕ್ರಿಕೆಟ್‌ಗೆ ಕಂಬ್ಯಾಕ್‌

    ಮುಂಬೈ: ಇದೇ ಸೆ.19ರಿಂದ ನಡೆಯಲಿರುವಚ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ನಾಯಕ ರೋಹಿತ್‌ ಶರ್ಮಾ ಅವರೇ ಸಾರಥ್ಯ ವಹಿಸಿದ್ದಾರೆ.

    ಟೀಂ ಇಂಡಿಯಾ ಬ್ಯಾಟರ್‌ ರಿಷಬ್ ಪಂತ್ 21 ತಿಂಗಳ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ಕಂಬ್ಯಾಕ್‌ ಮಾಡಿದ್ದಾರೆ. ಕನ್ನಡಿಗ ಕೆ.ಎಲ್‌ ರಾಹುಲ್ ಕೂಡ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: Duleep Trophy | ಕನ್ನಡಿಗ ರಾಹುಲ್‌ ಹೋರಾಟ ವ್ಯರ್ಥ – ಭಾರತ-ಬಿ ತಂಡಕ್ಕೆ 76 ರನ್‌ಗಳ ಭರ್ಜರಿ ಜಯ

    ಭಾನುವಾರ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿಯು ಬಾಂಗ್ಲಾದೇಶ ವಿರುದ್ಧದ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಬಲಿಷ್ಠ ತಂಡವನ್ನ ಪ್ರಕಟಿಸಿದೆ. ಹಿಂದೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.

    ಇದರೊಂದಿಗೆ ಧ್ರುವ್‌ ಜುರೆಲ್‌, ಆಕಾಶ್‌ ದೀಪ್‌, ಯಶ್‌ ದಯಾಳ್‌ ಅವರಂತಹ ಯುವ ಆಟಗಾರರಿಗೂ ಬಿಸಿಸಿಐ ಮಣೆ ಹಾಕಿದೆ. 2025ರ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಟೂರ್ನಿ ಉದ್ದೇಶದಿಂದಾಗಿ ಬಿಸಿಸಿಐ ಈ ಪ್ಲ್ಯಾನ್‌ ಮಾಡಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: Paralympics 2024 | ಐತಿಹಾಸಿಕ 29 ಪದಕಗಳ ಸಾಧನೆ – 18ನೇ ಸ್ಥಾನ ಪಡೆದ ಭಾರತ

    ಭಾರತ ತಂಡ ಹೀಗಿದೆ:
    ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್‌ ಕೀಪರ್‌), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕು‌ಲ್ದೀಪ್‌ ಯಾದವ್, ಮೊಹಮ್ಮದ್. ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

    ಭಾರತ vs ಬಾಂಗ್ಲಾ ಟೆಸ್ಟ್‌:
    ಮೊದಲ ಟೆಸ್ಟ್‌ ಪಂದ್ಯ – ಸೆ.19 ರಿಂದ ಸೆ.23 – ಸ್ಥಳ: ಚೆಪಾಕ್‌ ಸ್ಟೇಡಿಯಂ, ಚೆನ್ನೈ
    2ನೇ ಟೆಸ್ಟ್‌ ಪಂದ್ಯ – ಸೆ.27 ರಿಂದ ಅಕ್ಟೋಬರ್‌ 1, ಸ್ಥಳ: ಗ್ರೀನ್‌ ಪಾರ್ಕ್‌ ಸ್ಟೇರಿಯಂ, ಖಾನ್‌ಪುರ

  • Duleep Trophy | ಕನ್ನಡಿಗ ರಾಹುಲ್‌ ಹೋರಾಟ ವ್ಯರ್ಥ – ಭಾರತ-ಬಿ ತಂಡಕ್ಕೆ 76 ರನ್‌ಗಳ ಭರ್ಜರಿ ಜಯ

    Duleep Trophy | ಕನ್ನಡಿಗ ರಾಹುಲ್‌ ಹೋರಾಟ ವ್ಯರ್ಥ – ಭಾರತ-ಬಿ ತಂಡಕ್ಕೆ 76 ರನ್‌ಗಳ ಭರ್ಜರಿ ಜಯ

    – ಶುಭಮನ್‌ ಗಿಲ್‌ ಪಡೆಗೆ ಹೀನಾಯ ಸೋಲು

    ಬೆಂಗಳೂರು: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದೊಂದಿಗೆ ಭಾರತ-ಬಿ ತಂಡವು (India B), ಭಾರತ-ಎ ತಂಡದ ವಿರುದ್ಧ 76 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ ದುಲೀಪ್‌ ಟ್ರೋಫಿಯಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

    ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುಲೀಪ್‌ ಟ್ರೋಫಿ (Duleep Trophy) ಮೊದಲ ಪಂದ್ಯದಲ್ಲಿ ಅಭಿಮನ್ಯು ಈಶ್ವರನ್ ನಾಯಕತ್ವದ ʻಬಿʼ ತಂಡ ಅಮೋಘ ಜಯ ಸಾಧಿಸಿದೆ. ಆದ್ರೆ ಎರಡೂ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಶುಭಮನ್‌ ಗಿಲ್‌ ಪಡೆ ಆರಂಭಿಕ ಪಂದ್ಯದಲ್ಲಿ ಹೀನಾಯ ಸೋಲಿಗೆ ತುತ್ತಾಗಿದೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇಂಗ್ಲೆಂಡ್‌ ಆಲ್‌ರೌಂಡರ್‌ ಮೊಯಿಲ್‌ ಅಲಿ ಗುಡ್‌ಬೈ

    90 ರನ್‌ಗಳ ಮುನ್ನಡೆಯೊಂದಿಗೆ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ ಬಿ ತಂಡ, ರಿಷಭ್‌ ಪಂತ್‌ ಅವರ ಅಮೋಘ ಅರ್ಧಶತಕ ಹಾಗೂ ಸರ್ಫರಾಜ್‌ ಖಾನ್‌ ಬ್ಯಾಟಿಂಗ್‌ ನೆರವಿನೊಂದಿಗೆ 42 ಓವರ್‌ಗಳಲ್ಲಿ 184 ರನ್‌ ಗಳಿಸಿತ್ತು. ಈ ಮೂಲಕ ಒಟ್ಟು 274 ರನ್‌ ಗಳಿಸಿ, ಎದುರಾಳಿ ತಂಡಕ್ಕೆ 275 ರನ್‌ ಗುರಿ ನೀಡಿತ್ತು. ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನಟ್ಟಿದ ಎ ತಂಡ 2ನೇ ಇನ್ನಿಂಗ್ಸ್‌ನಲ್ಲಿ 198 ರನ್‌ಗಳಿಗೆ ಆಲೌಟ್‌ ಆಗುವ ಮೂಲಕ ಸೋಲು ಕಂಡಿತು.

    ಸ್ಪರ್ಧಾತ್ಮಕ ಗುರಿ ಪಡೆದಿದ್ದ ಎ ತಂಡ ಆರಂಭದಲ್ಲೇ ವಿಕೆಟ್‌ ಕಳೆದುಕೊಳ್ಳಲು ಶುರು ಮಾಡಿತು. ಆರಂಭಿಕ ಮಯಾಂಕ್‌ ಅಗರ್ವಾಲ್‌ 3 ರನ್‌ಗಳಿಗೆ ಪೆವಿಲಿಯನ್‌ಗೆ ಮರಳಿದರು. ಬಳಿಕ ಉತ್ತಮ ಪ್ರದರ್ಶನದ ಭರವಸೆ ಮೂಡಿಸಿದ್ದ ಶುಭಮನ್‌ ಗಿಲ್‌ ಕೇವಲ 21 ರನ್‌ಗಳಿಗೆ ಔಟಾದರು. ಈ ಬೆನ್ನಲೇ ಟಿ20 ಕ್ರಿಕೆಟ್‌ನಂತೆ ಸ್ಫೋಟಕ ಪ್ರದರ್ಶನಕ್ಕೆ ಮುಂದಾದ ರಿಯಾನ್‌ ಪರಾಗ್‌ 18 ಎಸೆತಗಳಲ್ಲಿ 31 ರನ್‌ ಬಾರಿಸಿ ಔಟಾದರು. ನಂತರದಲ್ಲಿ ಕೆ.ಎಲ್‌ ರಾಹುಲ್‌, ಆಕಾಶ್‌ ದೀಪ್‌ ಹೊರತುಪಡಿಸಿದ್ರೆ ಉಳಿದ ಆಟಗಾರರು ಅಲ್ಪಮೊತ್ತಕ್ಕೆ ನಿರ್ಗಮಿಸಿದ ಕಾರಣ ಭಾರತ ಎ ತಂಡ ಸೋಲಬೇಕಾಯಿತು.

    ಭಾರತ-ಎ ತಂಡದ ಪರ ಕೆ.ಎಲ್‌ ರಾಹುಲ್‌ 57 ರನ್‌ (121 ಎಸೆತ, 7 ಬೌಂಡರಿ), ಆಕಾಶ್‌ ದೀಪ್‌ 43 ರಮ್‌, ಶಿವಂ ದುಬೆ, ಕುಲ್ದೀಪ್‌ ಯಾದವ್‌ ತಲಾ 14 ರನ್‌ಗಳ ಕೊಡುಗೆ ನೀಡಿದರು. ಇದನ್ನೂ ಓದಿ: U-20 World Wrestling Championships – ಭಾರತಕ್ಕೆ 2 ಪದಕ; ನಿಕಿತಾಗೆ ಬೆಳ್ಳಿ, ನೇಹಾಗೆ ಕಂಚು!

    ಇದಕ್ಕೂ ಮುನ್ನ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಭಾರತ – ಬಿ ತಂಡದ ಪರ ರಿಷಭ್‌ ಪಂತ್‌ ಹಾಗೂ ಸರ್ಫರಾಜ್‌ ಖಾನ್‌ ಅವರ ಅಮೋಘ ಪ್ರದರ್ಶನ ತಂಡಕ್ಕೆ ನೆರವಾಯಿತು. ಪಂತ್‌ 47 ಎಸೆತಗಳಲ್ಲಿ 61 ರನ್‌ (9 ಬೌಂಡರಿ, 2 ಸಿಕ್ಸರ್)‌, ಸರ್ಫರಾಜ್‌ 46 ರನ್‌ (36 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಗಳಿಸಿದ್ರೆ, ನಿತಿಶ್‌ ಕುಮಾರ್‌ ರೆಡ್ಡಿ 19 ರನ್‌, ನವದೀಪ್‌ ಸೈನಿ 13 ರನ್‌, ಯಶ್‌ ದಯಾಳ್‌ 16 ರನ್‌ಗಳ ಕೊಡುಗೆ ನೀಡಿದರು.

    ಸಂಕ್ಷಿಪ್ತ ಸ್ಕೋರ್‌
    ಮೊದಲ ಇನ್ನಿಂಗ್ಸ್‌
    ಭಾರತ ಬಿ ತಂಡ – 321/10
    ಭಾರತ ಎ ತಂಡ – 231/10

    ದ್ವಿತೀಯ ಇನ್ನಿಂಗ್ಸ್‌
    ಭಾರತ ಬಿ ತಂಡ – 184/10
    ಭಾರತ ಎ ತಂಡ – 198/10

    ಇನ್ನೂ ಭಾರತ ಸಿ ಮತ್ತು ಭಾರತ ಡಿ ತಂಡಗಳ ನಡುವಿನ ಹಣಾಹಣಿಯಲ್ಲಿ ರುತುರಾಜ್‌ ಗಾಯಕ್ವಾಡ್‌ ನಾಯಕತ್ವದ ʻಸಿʼ ತಂಡ ಶ್ರೇಯಸ್‌ ಅಯ್ಯರ್‌ ನಾಯಕತ್ವದ ʻಡಿʼ ತಂಡದ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇದನ್ನೂ ಓದಿ: Duleep Trophy | ಮುಶೀರ್ ಕೈತಪ್ಪಿದ ದ್ವಿಶತಕ – ಕೊನೇ 3 ವಿಕೆಟ್‌ಗೆ 227 ರನ್‌ ಪೇರಿಸಿದ ಭಾರತ-ಬಿ ತಂಡ!

  • ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು; 1-0ರಲ್ಲಿ ಸರಣಿ ಮುನ್ನಡೆ

    ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ (Sri Lanka) ವಿರುದ್ಧ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ (Team India) 1-0 ಮುನ್ನಡೆ ಕಾಯ್ದುಕೊಂಡಿದೆ.

    ಟರ್ನಿಂಗ್‌ ಸಿಕ್ಕಿದ್ದೆಲ್ಲಿ?
    ಅಬ್ಬರಿಸುತ್ತಿದ್ದ ಲಂಕಾ ಬ್ಯಾಟರ್‌ಗಳನ್ನು ಕಟ್ಟಿಹಾಕುವುದು ಭಾರತ ತಂಡಕ್ಕೆ ಸವಾಲಾಗಿತು. ಲಂಕಾ 14 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 140 ರನ್‌ ಬಾರಿಸಿತ್ತು. 15ನೇ ಓವರ್‌ನಲ್ಲಿ ಬೌಲಿಂಗ್‌ಗೆ ಬಂದ ಅಕ್ಷರ್‌ ಪಟೇಲ್‌ 9 ರನ್‌ ಬಿಟ್ಟುಕೊಟ್ಟರೂ ಪ್ರಮುಖ 2 ವಿಕೆಟ್‌ ಉರುಳಿಸುವಲ್ಲಿ ಯಶಸ್ವಿಯಾದರು. ಇಲ್ಲಿಂದ ಲಂಕಾ ತಂಡದ ಪಥನ ಶುರುವಾಯಿತು.

    ಶ್ರೀಲಂಕಾದ ಪಲ್ಲೆಕೆಲೆ ಕ್ರೀಡಾಂಗಣದಲ್ಲಿಂದು ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ನಡೆಯಿತು. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 213 ರನ್‌ ಬಾರಿಸಿತ್ತು. ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ ಆರಂಭದಲ್ಲಿ ಅಬ್ಬರಿಸಿದರೂ 170 ರನ್‌ಗಳಿಗೆ ಆಲೌಟ್‌ ಆಗಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಶ್ರೀಲಂಕಾ ತಂಡ ಉತ್ತಮ ಜೊತೆಯಾಟ ನೀಡುವಲ್ಲಿ ಯಶಸ್ವಿಯಾಗಿತ್ತು. ಮೊದಲ ವಿಕೆಟ್‌ಗೆ ಕುಸಲ್‌ ಮೆಂಡಿಸ್‌ ಹಾಗೂ ಪಥುಮ್‌ ನಿಸ್ಸಾಂಕ ಜೋಡಿ 52 ಎಸೆತಗಳಲ್ಲಿ 84 ರನ್‌ಗಳ ಜೊತೆಯಾಟ ನೀಡಿತ್ತು. ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಕುಸಾಲ್ ಮೆಂಡಿಸ್ 27 ಎಸೆತಗಳಲ್ಲಿ 45 ರನ್‌ ಸಿಡಿಸಿದ್ದರು. ಈ ವೇಳೆ ಅರ್ಷ್‌ದೀಪ್‌ ಸಿಂಗ್‌ ಮೆಂಡಿಸ್‌ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ ದಾರಿ ತೋರಿದರು.

    ಇನ್ನೂ 2ನೇ ವಿಕೆಟ್‌ಗೆ ಜೊತೆಯಾಗಿದ್ದ ಕುಸಲ್‌ ಪೆರೇರಾ ಹಾಗೂ ನಿಸ್ಸಾಂಕ ಜೋಡಿ ಸಹ 33 ಎಸೆತಗಳಲ್ಲಿ 56 ರನ್‌ ಬಾರಿಸಿತ್ತು. ಒಂದಂಥದಲ್ಲಿ ಭಾರತ ಸೋತೇಬಿಡುತ್ತೆ ಎಂದು ಭಾವಿಸಲಾಗಿತ್ತು. ಆದ್ರೆ ಸಂಘಟಿತ ಪ್ರದರ್ಶನ ನೀಡಿದ ಭಾರತದ ಬೌಲರ್‌ಗಳು ಲಂಕಾ ಬ್ಯಾಟರ್‌ಗಳ ಆರ್ಭಟವನ್ನು ಅಡಗಿಸಿದರು. ನಿಸ್ಸಾಂಕ, ಪೆರೇರಾ ಜೋಡಿ ವಿಕೆಟ್‌ ಪತನದೊಂದಿಗೆ ಲಂಕಾ ಅವನತಿ ಶುರುವಾಯಿತು. ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿ ಪೆವಿಲಿಯನ್‌ ಪೆರೇಡ್‌ ನಡೆಸಲು ಲಂಕನ್ನರು ಶುರು ಮಾಡಿದರು. ಅಂತಿಮವಾಗಿ ಲಂಕಾ 170 ರನ್‌ಗಳಿಗೆ ಆಲೌಟ್‌ ಆಯಿತು.

    ಶ್ರೀಲಂಕಾ ಪರ ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಪಥುಮ್‌ ನಿಸ್ಸಾಂಕ 79 ರನ್‌ (48 ಎಸೆತ, 4 ಸಿಕ್ಸರ್‌, 7 ಬೌಂಡರಿ), ಮೆಂಡಿಸ್‌ 45 ರನ್‌ (27 ಎಸೆತ, 1 ಸಿಕ್ಸರ್‌, 7 ಬೌಂಡರಿ), ಕುಸಾಲ್‌ ಪೆರೇರಾ 20 ರನ್‌ ಹಾಗೂ ಕುಮುಂಡು ಮೆಂಡಿಸ್‌ 12 ರನ್‌ ಕೊಡುಗೆ ನೀಡಿದರು.

    ಟೀಂ ಇಂಡಿಯಾ ಪರ 1.5 ಓವರ್‌ಗಳಲ್ಲಿ ಕೇವಲ 5 ರನ್‌ ಬಿಟ್ಟುಕೊಟ್ಟ ರಿಯಾನ್‌ ಪರಾಗ್‌ 3 ವಿಕೆಟ್‌ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ಅಕ್ಷರ್‌ ಪಟೇಲ್‌ ತಲಾ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ ಪರ ಬ್ಯಾಟರ್‌ಗಳು ಅಬ್ಬರಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಶುಭಮನ್‌ ಗಿಲ್‌ ಹಾಗೂ ಯಶಸ್ವಿ ಜೈಸ್ವಾಲ್‌ ಜೋಡಿ ಮೊದಲ ವಿಕೆಟ್​ಗೆ 36 ಎಸೆತಗಳಲ್ಲಿ ಸ್ಫೋಟಕ 76 ರನ್‌ ಬಾರಿಸಿತ್ತು. ಶುಭಮನ್‌ ಗಿಲ್‌ 16 ಎಸೆತಗಳಲ್ಲಿ 34 ರನ್‌ ಚಚ್ಚಿ ಔಟಾಗುತ್ತಿದ್ದಂತೆ, ಯಶಸ್ವಿ ಜೈಸ್ವಾಲ್‌ 20 ಎಸೆತಗಳಲ್ಲಿ 40 ರನ್‌ ಸಿಡಿಸಿ ಪೆವಿಲಿಯನ್‌ಗೆ ಮರಳಿದರು. ಬಳಿಕ ಲಂಕನ್ನರನ್ನು ಚೆಂಡಾಡಿದ ಸೂರ್ಯಕುಮಾರ್‌ ಯಾದವ್‌ ಹಾಗೂ ರಿಷಭ್‌ ಪಂತ್‌ ಜೋಡಿ 3ನೇ ವಿಕೆಟ್‌ಗೆ 43 ಎಸೆತಗಳಲ್ಲಿ 76 ರನ್‌ ಪೇರಿಸಿತ್ತು. ಪರಿಣಾಮ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಟೀಂ ಇಂಡಿಯಾ ಪರ ನಾಯಕ ಸೂರ್ಯಕುಮಾರ್‌ ಯಾದವ್‌ 58 ರನ್‌ (26 ಎಸೆತ, 2 ಸಿಕ್ಸರ್‌, 8 ಬೌಂಡರಿ), ರಿಷಭ್‌ ಪಂತ್‌ 49 ರನ್‌ (33 ಎಸೆತ, 1 ಸಿಕ್ಸರ್‌, 6 ಬೌಂಡರಿ), ಯಶಸ್ವಿ ಜೈಸ್ವಾಲ್‌ 40 ರನ್‌ ಹಾಗೂ ಶುಭಮನ್‌ ಗಿಲ್‌ 34 ರನ್‌ ಬಾರಿಸಿದರು.