Tag: Rishabh Pant

  • IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    IPL 2025: ಮರಳಿ ಆರ್‌ಸಿಬಿಗೆ ರಾಹುಲ್‌? – ಡೆಲ್ಲಿ ತೊರೆದು ಸಿಎಸ್‌ಕೆ ಸೇರಲಿದ್ದಾರೆ ರಿಷಭ್‌ ಪಂತ್‌?

    ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೆ ಸದ್ಯದಲ್ಲೇ ಬಿಸಿಸಿಐ ದಿನಾಂಕ ನಿಗದಿ ಪಡಿಸಲಿದೆ. ಇದೇ ಜುಲೈ ತಿಂಗಳಾಂತ್ಯದ ವೇಳೆಗೆ ಬಿಸಿಸಿಐ (BCCI) ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಈ ನಡುವೆ ಫ್ರಾಂಚೈಸಿಗಳಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬರುತ್ತಿವೆ.

    3 ವರ್ಷಗಳಿಗೊಮ್ಮೆ ನಡೆಯುವ ಮೆಗಾ ಹರಾಜಿನಲ್ಲಿ ಯಾವ ಯಾವ ದಿಗ್ಗಜ ಆಟಗಾರರು ಯಾವ ತಂಡವನ್ನು ಸೇರಲಿದ್ದಾರೆ ಅನ್ನೋ ಬಗ್ಗೆ ಕ್ರಿಕೆಟ್‌ ಪ್ರಿಯರ ಚಿತ್ತ ಹರಿದಿದೆ. ಸಿಎಸ್‌ಕೆ ತಂಡದ ಲೆಜೆಂಡ್‌ ಎಂ.ಎಸ್‌ ಧೋನಿ (MS Dhoni) ಅವರು ಐಪಿಎಲ್‌ಗೆ ನಿವೃತ್ತಿ ಹೇಳುವ ಸಾಧ್ಯತೆಗಳಿವೆ ಎಂಬ ಸುದ್ದಿಗಳ ನಡುವೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals0 ತಂಡದ ನಾಯಕ ರಿಷಭ್‌ ಪಂತ್‌, ಮುಂದಿನ ಆವೃತ್ತಿಗೆ ಸಿಎಸ್‌ಕೆ (CSK) ತಂಡ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: IPL 2025: ಮೆಗಾ ಹರಾಜು ಪ್ರಕ್ರಿಯೆ ಶುರು; ರಿಟೇನ್‌ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ!

    2016ರಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಪ್ರತಿನಿಧಿಸುತ್ತಿರುವ ವಿಕೆಟ್‌ ಕೀಪರ್‌ ಬ್ಯಾಟರ್‌ ರಿಷಭ್‌ ಪಂತ್‌ ಮುಂದಿನ ವರ್ಷದ ಐಪಿಎಲ್‌ಗೆ ನಡೆಯಲಿರುವ ಮೆಗಾ ಹರಾಜಿಗೂ ಮುನ್ನವೇ ಡೆಲ್ಲಿ ಫ್ರಾಂಚೈಸಿ ತೊರೆದು 5 ಬಾರಿ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿವೆ. ಇದನ್ನೂ ಓದಿ: Women’s Asia Cup 2024: ಸಿಂಹಿಣಿಯರ ಅಬ್ಬರಕ್ಕೆ ಪಾಕ್ ಧೂಳಿಪಟ – ಭಾರತಕ್ಕೆ ಗೆಲುವಿನ ಶುಭಾರಂಭ!

    2024ರ ಐಪಿಎಲ್‌ ಟೂರ್ನಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 14 ಪಂದ್ಯಗಳಲ್ಲಿ 7ರಲ್ಲಿ ಗೆಲುವು ಸಾಧಿಸಿ ಪ್ಲೇ ಆಫ್‌ ಪ್ರವೇಶಿಸುವಲ್ಲಿ ವಿಫಲವಾಯಿತು. ಟ್ರೋಫಿ ತಂದುಕೊಡುವಲ್ಲಿ ವಿಫಲರಾದ ಡೆಲ್ಲಿ ತಂಡದ ಮುಖ್ಯಕೋಚ್‌ ಆಗಿದ್ದ ರಿಕಿ ಪಾಂಟಿಂಗ್‌ಗೆ ಫ್ರಾಂಚೈಸಿ ಈಗಾಗಲೇ ಕೊಕ್‌ ನೀಡಿದೆ. ರಿಷಭ್‌ ಪಂತ್‌ ಅವರನ್ನೂ ಉಳಿಸಿಕೊಳ್ಳುವ ಬಗ್ಗೆ ಯಾವುದೇ ನಿರ್ಧಾರ ಪ್ರಕಟಿಸಿಲ್ಲ. ಮುಂದಿನ ಕೋಚ್‌ ಎನ್ನಲಾಗುತ್ತಿರುವ ಗಂಗೂಲಿ ಅವರು ರಿಷಭ್‌ ಪರವಾಗಿದ್ದಾರೆ ಎನ್ನಲಾದರೂ ಫ್ರಾಂಚೈಸಿ ತೀರ್ಮಾನ ಅಂತಿಮವಾಗಲಿದೆ. ಹೀಗಾಗಿ ಪಂತ್‌ ಮೆಗಾ ಹರಾಜಿಗೂ ಮುನ್ನವೇ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವನ್ನು ಸೇರಲಿದ್ದಾರೆ ಎಂದು ಫ್ರಾಂಚೈಸಿ ಮೂಲಗಳು ತಿಳಿಸಿವೆ.

    ಕನ್ನಡಿಗನಿಗೆ ಮಣೆಹಾಕಲಿದೆಯೇ ಆರ್‌ಸಿಬಿ?
    2022ರಲ್ಲಿ ಆರಂಭವಾದ ಲಕ್ನೋ ಸೂಪರ್‌ ಜೈಂಟ್ಸ್‌ (LSG) ತಂಡದ ನಾಯಕನಾಗಿರುವ ಕನ್ನಡಿಗ ಕೆ.ಎಲ್‌ ರಾಹುಲ್‌ (KL Rahul) ಈ ಬಾರಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿವೆ. 2024ರ ಐಪಿಎಲ್‌ ಆವೃತ್ತಿಯಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿ ಲಕ್ನೋ ಹೀನಾಯವಾಗಿ ಸೋತಿತ್ತು. ಈ ವೇಳೆ ಲಕ್ನೋ ಫ್ರಾಂಚೈಸಿ ಮಾಲೀಕರಾದ ಸಂಜೀವ್‌ ಗೋಯೆಂಕಾ ರಾಹುಲ್‌ ವಿರುದ್ಧ ಮೈದಾನದಲ್ಲೇ ರೇಗಾಡಿದ್ದರು. ಈ ವೀಡಿಯೋ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಘಟನೆಯಿಂದ ರಾಹುಲ್‌, ಲಕ್ನೋ ತಂಡದಲ್ಲಿ ಮುಂದುವರಿಯುವ ಆಸಕ್ತಿ ಕಳೆದುಕೊಂಡಿದ್ದಾರೆ. ಮುಂಬರುವ ಮೆಗಾ ಹರಾಜಿಗೂ ಮುನ್ನ ಅವರು ಆರ್‌ಸಿಬಿ (RCB) ಪಾಲಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭದ್ರತಾ ಕಾರಣಕ್ಕಾಗಿ ಭಾರತ ಸರ್ಕಾರ ಅನುಮತಿ ನಿರಾಕರಿಸಿದ್ರೆ ಬಿಸಿಸಿಐ ಬರೆದುಕೊಡಲಿ – ಪಾಕ್‌ ಪಟ್ಟು!

    ಐಪಿಎಲ್‌ ವೃತ್ತಿ ಆರಂಭಿಸಿದ್ದು ಆರ್‌ಸಿಬಿಯಿಂದಲೇ:
    2013ರಿಂದ ಐಪಿಎಲ್‌ ವೃತ್ತಿ ಬದುಕು ಆರಂಭಿಸಿದ ಕೆ.ಎಲ್‌ ರಾಹುಲ್‌ ಮೊದಲು ಸೇರಿದ್ದು ಆರ್‌ಸಿಬಿ ತಂಡವನ್ನೇ. 2013 ರಿಂದ 2016ರ ಆವೃತ್ತಿಗಳಲ್ಲಿ ರಾಹುಲ್‌ ಆರ್‌ಸಿಬಿ ತಂಡದಲ್ಲಿಯೇ ಇದ್ದರು. ಆ ನಂತರ 2014 ಮತ್ತು 2015ರಲ್ಲಿ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾದರು. 2018 ರಿಂದ 2021ರ ವರೆಗೆ ಪಂಜಾಬ್‌ ಕಿಂಗ್ಸ್‌ ತಂಡದಲ್ಲಿದ್ದ ಕೆ.ಎಲ್‌ ರಾಹುಲ್‌ 2022ರಿಂದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಸೇರಿಕೊಂಡರು. ಇದನ್ನೂ ಓದಿ: Wimbledon Champion: ಸತತ 2ನೇ ಬಾರಿಗೆ ಅಲ್ಕರಾಜ್‌ಗೆ ವಿಂಬಲ್ಡನ್‌ ಕಿರೀಟ – ಜೊಕೊವಿಕ್‌ಗೆ ಮತ್ತೆ ಸೋಲು!

  • ಲಕ್ನೋ ವಿರುದ್ಧ ಡೆಲ್ಲಿಗೆ 19 ರನ್‌ಗಳ ಜಯ – ರಾಹುಲ್‌ ಪಡೆಗೆ ಪ್ಲೇ-ಆಫ್‌ ಹಾದಿ ಕಠಿಣ

    ಲಕ್ನೋ ವಿರುದ್ಧ ಡೆಲ್ಲಿಗೆ 19 ರನ್‌ಗಳ ಜಯ – ರಾಹುಲ್‌ ಪಡೆಗೆ ಪ್ಲೇ-ಆಫ್‌ ಹಾದಿ ಕಠಿಣ

    – ಪೊರೆಲ್‌ ಹಾಗೂ ಟ್ರಿಸ್ಟನ್ ಫಿಫ್ಟಿಗೆ ಒಲಿದ ಜಯ
    – 3 ವಿಕೆಟ್‌ ಕಿತ್ತು ಮಿಂಚಿದ ಇಶಾಂತ್‌ ಶರ್ಮಾ
    – ನಿಕೋಲಸ್ ಪೂರನ್ ಮತ್ತು ಅರ್ಷದ್‌ ಖಾನ್‌ ಫಿಫ್ಟಿ ಆಟ ವ್ಯರ್ಥ

    ನವದೆಹಲಿ: ಅಭಿಷೇಕ್‌ ಪೊರೆಲ್‌ ಹಾಗೂ ಟ್ರಿಸ್ಟನ್‌ ಸ್ಟಬ್ಸ್‌ ಆಕರ್ಷಕ ಫಿಫ್ಟಿ ಹಾಗೂ ಇಶಾಂತ್‌ ಶರ್ಮಾ ಅಬ್ಬರದ ಬೌಲಿಂಗ್‌ ನೆರವಿನಿಂದ ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ 19 ರನ್‌ಗಳ ಜಯ ಸಾಧಿಸಿತು. ಪ್ಲೇ-ಆಫ್‌ ಕನಸು ಕಂಡಿದ್ದ ರಾಹುಲ್‌ ಪಡೆಗೆ ಸೋಲಿನ ಹಾದಿ ಮತ್ತಷ್ಟು ಕಠಿಣವಾಗಿದೆ.

    ಇಲ್ಲಿ ನಡೆದ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಡೆಲ್ಲಿ 20 ಓವರ್‌ಗಳಿಗೆ 4 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿತು. 209 ರನ್‌ ಗುರಿ ಬೆನ್ನತ್ತಿದ ಲಕ್ನೋ 20 ಓವರ್‌ಗೆ 9 ವಿಕೆಟ್‌ ನಷ್ಟಕ್ಕೆ 189 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಟಾಸ್‌ ಸೋತು ಬ್ಯಾಟಿಂಗ್‌ ಮಾಡಿದ ಡೆಲ್ಲಿಗೆ ಆರಂಭಿಕ ಆಘಾತ ಎದುರಾಯಿತು. ಸ್ಫೋಟಕ ಬ್ಯಾಟರ್‌ ಜೇಕ್‌ ಫ್ರೇಸರ್‌ ಮೆಕ್‌ಗುರ್ಕ್‌ ಡಕೌಟ್‌ ಆಗಿ ಪೆವಿಲಿಯನ್‌ ಸೇರಿದರು. ಆದರೂ ವಿಚಲಿತರಾಗದ ಡೆಲ್ಲಿ ಬ್ಯಾಟರ್‌ಗಳು ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿದರು.

    ಮತ್ತೊಬ್ಬ ಓಪನರ್‌ ಅಭಿಷೇಕ್‌ ಪೊರೆಲ್‌ ಅರ್ಧಶತಕ (58 ರನ್‌, 33 ಎಸೆತ, 5 ಬೌಂಡರಿ, 4 ಸಿಕ್ಸರ್‌) ಸಿಡಿಸಿ ಮಿಂಚಿದರು. ಶಾಯ್‌ ಹೋಪ್‌ 38 ಹಾಗೂ ನಾಯಕ ರಿಷಭ್‌ ಪಂತ್‌ 33 ರನ್‌ ಗಳಿಸಿ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು. ಕೊನೆಯ ಓವರ್‌ಗಳಲ್ಲಿ ಅಬ್ಬರಿಸಿದ ಟ್ರಿಸ್ಟನ್‌ ಸ್ಟಬ್ಸ್‌ 57 ರನ್‌ ಬಾರಿಸಿ (25 ಬಾಲ್‌, 3 ಫೋರ್‌, 4 ಸಿಕ್ಸರ್‌) ಉತ್ತಮ ಮೊತ್ತಕ್ಕೆ ನೆರವಾದರು.

    ಲಕ್ನೋ ಪರ ನವೀನ್-ಉಲ್-ಹಕ್ 2 ವಿಕೆಟ್‌ ಕಿತ್ತರು. ಅರ್ಷದ್ ಖಾನ್ ಹಾಗೂ ರವಿ ಬಿಷ್ಣೋಯ್ ತಲಾ ಒಂದು ವಿಕೆಟ್‌ ಪಡೆದರು.

    ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ 209 ರನ್‌ಗಳ ಬೃಹತ್‌ ಗುರಿ ಬೆನ್ನತ್ತಿದ ಲಕ್ನೋ ಬ್ಯಾಟಿಂಗ್‌ ವೈಫಲ್ಯ ಎದುರಿಸಿತು. ತಂಡದ ಮೊತ್ತ ಕೇವಲ 7 ರನ್‌ ಇದ್ದಾಗಲೇ ಲಕ್ನೋ ತಂಡದ ನಾಯಕ ಕೆ.ಎಲ್‌.ರಾಹುಲ್‌ ಕ್ಯಾಚ್‌ ನೀಡಿ ಪೆವಿಲಿಯನ್‌ಗೆ ಮರಳಿದರು. ಮೊದಲ ಪವರ್‌ ಪ್ಲೇ ಮುಕ್ತಾಯಕ್ಕೆ 59 ರನ್‌ ಗಳಿಸಿದ್ದ ಲಕ್ನೋ ಪ್ರಮುಖ 4 ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

    ನಿಕೋಲಸ್ ಪೂರನ್ ಮತ್ತು ಅರ್ಷದ್‌ ಖಾನ್‌ ಫಿಫ್ಟಿ ಆಟ ವ್ಯರ್ಥವಾಯಿತು. ಪೂರನ್‌ 27 ಬಾಲ್‌ಗೆ 61 ರನ್‌ (6 ಫೋರ್‌, 4 ಸಿಕ್ಸರ್‌) ಹಾಗೂ ಖಾನ್‌ ಔಟಾಗದೇ 58 ರನ್‌ (33 ಬಾಲ್‌, 3 ಫೋರ್‌, 5 ಸಿಕ್ಸರ್‌) ಸಿಡಿಸಿ ಮಿಂಚಿದರೂ ಪ್ರಯೋಜನವಾಗಲಿಲ್ಲ. ಉಳಿದ ಬ್ಯಾಟರ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲದ ಕಾರಣ ತಂಡದ ಸೋಲನುಭವಿಸಿತು.

    ಕೃನಾಲ್ ಪಾಂಡ್ಯ 18, ಯುದ್ಧವೀರ್ ಸಿಂಗ್ 14 ಗಳಿಸಿದರು. ಡೆಲ್ಲಿ ಪರ 3 ವಿಕೆಟ್‌ ಕಬಳಿಸಿ ಇಶಾಂತ್ ಶರ್ಮಾ ಮಿಂಚಿದರು. ಖಲೀಲ್ ಅಹಮದ್, ಅಕ್ಷರ್ ಪಟೇಲ್, ಮುಖೇಶ್ ಕುಮಾರ್, ಕುಲದೀಪ್ ಯಾದವ್, ಟ್ರಿಸ್ಟಾನ್ ಸ್ಟಬ್ಸ್ ತಲಾ 1 ವಿಕೆಟ್‌ ಕಿತ್ತರು.

  • ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ನಾವಿಕನಿಲ್ಲದ ದೋಣಿಯಲ್ಲಿ ಮುಳುಗಿದ ಡೆಲ್ಲಿ – ಆರ್‌ಸಿಬಿಗೆ 47 ರನ್‌ಗಳ ಜಯ; ಪ್ಲೇ ಆಫ್‌ ಕನಸು ಜೀವಂತ!

    ಬೆಂಗಳೂರು: ರಿಷಭ್‌ ಪಂತ್‌ ಅವರ ಅನುಪಸ್ಥಿತಿಯಲ್ಲಿ ಆರ್‌ಸಿಬಿ ವಿರುದ್ಧ ಅಖಾಡಕ್ಕಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಹೀನಾಯ ಸೋಲಿಗೆ ತುತ್ತಾಗಿದೆ. ಆದ್ರೆ ತವರಿನಲ್ಲೇ 47 ರನ್‌ಗಳ ಭರ್ಜರಿ ಜಯ ಸಾಧಿಸಿದ ಆರ್‌ಸಿಬಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 9 ವಿಕೆಟ್‌ ನಷ್ಟಕ್ಕೆ 187 ರನ್‌ ಗಳಿಸಿತ್ತು. ಹೊಸ ನಾಯಕನ ನೇತೃತ್ವದಲ್ಲಿ ಸ್ಪರ್ಧಾತ್ಮಕ ರನ್‌ಗಳ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 19.1 ಓವರ್‌ಗಳಲ್ಲಿ 140 ರನ್‌ಗಳಿಗೆ ಸರ್ವಪತನ ಕಂಡಿತು.

    188 ರನ್‌ಗಳ ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಆರಂಭದಲ್ಲೇ ಆಘಾತ ಎದುರಿಸಿತು. ಸ್ಫೋಟಕ ಪ್ರದರ್ಶನ ನೀಡಲು ಮುಂದಾದ ಆರಂಭಿಕ ಆಟಗಾರ ಡೇವಿಡ್‌ ವಾರ್ನರ್‌ 1 ರನ್‌ಗಳಿಗೆ ಔಟಾದರು. ಈ ಬೆನ್ನಲ್ಲೇ ಅಭಿಷೇಕ್‌ ಪೋರೆಲ್‌ 2 ರನ್‌ಗಳಿಗೆ ವಿಕೆಟ್‌ ಒಪ್ಪಿಸಿ ಹೊರನಡೆದರು. ಇನ್ನೂ 8 ಎಸೆತಗಳಲ್ಲಿ 21 ರನ್‌ (2 ಸಿಕ್ಸರ್‌, 2 ಬೌಂಡರಿ) ಬಾರಿಸಿದ್ದ ಫ್ರೆಸರ್‌ ಮೆಕ್‌ಗಾರ್ಕ್‌ ಸಹ ವಿಕೆಟ್‌ ಒಪ್ಪಿಸಿದರು. ಮೊದಲ 6 ಓವರ್‌ಗಳಲ್ಲಿ 54 ರನ್‌ ಗಳಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ಪ್ರಮುಖ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಡೆಲ್ಲಿ ತಂಡಕ್ಕೆ ಟ್ರಿಸ್ಟಾನ್ಸ್‌ ಸ್ಟಬ್ಸ್‌ ಬೂಸ್ಟ್‌ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿ ತಂಡ ಇತ್ತು. ಆದ್ರೆ ಅನಗತ್ಯವಾಗಿ ಒಂದು ರನ್‌ ಕದಿಯಲು ಯತ್ನಿಸಿ ರನೌಟ್‌ಗೆ ತುತ್ತಾದರು. ಇದು ಡೆಲ್ಲಿ ತಂಡಕ್ಕೆ ತುಂಬಲಾರದ ನಷ್ಟವಾಯಿತು. ಅಲ್ಲದೇ ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌ ಅವರ ಅನುಪಸ್ಥಿತಿ ಸಹ ಡೆಲ್ಲಿ ತಂಡವನ್ನು ಕಾಡಿತು.

    ಇನ್ನೂ ಏಕಾಂಗಿ ಹೋರಾಟ ನಡೆಸಿದ ನಾಯಕ ಅಕ್ಷರ್‌ ಪಟೇಲ್‌ 39 ಎಸೆತಗಳಲ್ಲಿ 57 ರನ್‌ (3 ಸಿಕ್ಸರ್‌, 5 ಬೌಂಡರಿ) ಗಳಿಸಿದ್ದು ಬಿಟ್ಟರೆ ಉಳಿದ ಯಾರೊಬ್ಬರು ಕ್ರೀಸ್‌ನಲ್ಲಿ ಉಳಿಯದ ಕಾರಣ ಆರ್‌ಸಿಬಿ ಸುಲಭ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಇನ್ನುಳಿದಂತೆ ಶಾಯ್‌ ಹೋಪ್‌ 29 ರನ್‌, ಕುಮಾರ್‌ ಕುಮಾರ್‌ ಕುಶಾರ್ಗ 2 ರನ್‌, ಸ್ಟಬ್ಸ್‌ 3 ರನ್‌, ರಸಿಕ್‌ ಸಲಾಮ್‌ 10 ರನ್‌, ಮುಕೇಶ್‌ ಕುಮಾರ್‌ 3 ರನ್‌, ಕುಲ್ದೀಪ್‌ ಯಾದವ್‌ 3 ರನ್‌ ಗಳಿಸಿ ಔಟಾದರು.

    ಇದಕ್ಕೂ ಮುನ್ನ ಸಂಘಟಿತ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆರ್‌ಸಿಬಿ ಆಟಗಾರರು 200 ರನ್‌ಗಳನ್ನು ತಲುಪುವಲ್ಲಿ ವಿಫಲರಾದರು. ರಜತ್ ಪಾಟೀದಾರ್ ಸ್ಫೋಟಕ ಅರ್ಧಶತಕ, ವಿಲ್ ಜ್ಯಾಕ್ಸ್, ವಿರಾಟ್ ಕೊಹ್ಲಿ ಸ್ಫೋಟಲ ಪ್ರದರ್ಶನದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 9 ವಿಕೆಟ್ ಕಳೆದುಕೊಂಡು 187 ರನ್ ಬಾರಿಸಿತ್ತು. ಈ ಮೂಲಕ ಡೆಲ್ಲಿ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿತ್ತು.

    ಮೊದಲಿಗೆ ಆರ್‌ಸಿಬಿ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ನಾಯಕ ಫಾಫ್ ಡು ಪ್ಲೆಸಿಸ್ ಕೇವಲ 6 ರನ್ ಗಳಿಸಿ ಮುಕೇಶ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ಕೇವಲ 13 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸಿದ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು.

    ಅಬ್ಬರಿಸಿದ ಪಾಟೀದಾರ್-ಜ್ಯಾಕ್ಸ್:
    ಕೇವಲ 36 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ಆರ್‌ಸಿಬಿ ತಂಡಕ್ಕೆ 3ನೇ ವಿಕೆಟ್‌ಗೆ ರಜತ್ ಪಾಟೀದಾರ್ ಹಾಗೂ ವಿಲ್ ಜ್ಯಾಕ್ಸ್ ಕೇವಲ 53 ಎಸೆತಗಳಲ್ಲಿ 88 ರನ್‌ಗಳ ಜೊತೆಯಾಟ ನೀಡುವ ಮೂಲಕ ಬಲ ತುಂಬಿದರು. ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಪಾಟೀದಾರ್ ಕೇವಲ 29 ಎಸೆತಗಳಲ್ಲೇ 5ನೇ ಅರ್ಧಶತಕ ಸಿಡಿಸಿದರು. ಅಂತಿಮವಾಗಿ ಪಾಟೀದಾರ್ 32 ಎಸೆತಗಳಲ್ಲಿ 52 ರನ್ (3 ಸಿಕ್ಸರ್‌, 3 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ವಿಲ್ ಜ್ಯಾಕ್ಸ್‌ 41 ರನ್ (29 ಎಸೆತ, 3 ಬೌಂಡರಿ, 2 ಸಿಕ್ಸರ್) ಬಾರಿಸಿ ಪೆವಿಲಿಯನ್‌ ಹಾದಿ ಹಿಡಿದರು. ಬಳಿಕ ಕ್ರೀಸ್‌ಗಿಳಿದ ಕ್ಯಾಮರೂನ್‌ ಗ್ರೀನ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. 24 ಎಸೆತ ಎದುರಿಸಿದ ಗ್ರೀನ್‌ ಅಜೇಯ 32 ರನ್ (1 ಬೌಂಡರಿ, 2 ಸಿಕ್ಸರ್) ಬಾರಿಸಿದರು.

    ಇನ್ನು ಮಧ್ಯಮ ಕ್ರಮಾಂಕದಲ್ಲಿ ಆರ್‌ಸಿಬಿ ಭರ್ಜರಿಯಾಗಿ ರನ್ ಗಳಿಸಿತಾದರೂ ಉತ್ತಮವಾಗಿ ಫಿನೀಶ್ ಮಾಡಲು ಸಾಧ್ಯವಾಗಲಿಲ್ಲ. ಮಹಿಪಾಲ್ ಲೋಮ್ರಾರ್ ಕೇವಲ 13 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ನಿರ್ಣಾಯಕ ಘಟ್ಟದಲ್ಲಿ ದಿನೇಶ್ ಕಾರ್ತಿಕ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದು ಆರ್‌ಸಿಬಿ ರನ್ ವೇಗಕ್ಕೆ ಕಡಿವಾಣ ಬೀಳುವಂತೆ ಮಾಡಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಖಲೀಲ್‌ ಅಹ್ಮದ್‌, ರಸಿಕ್‌ ಸಲಾಮ್‌ ತಲಾ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ, ಮುಕೇಶ್‌ ಕುಮಾರ್‌, ಕುಲ್ದೀಪ್‌ ಯಾದವ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಆರ್​ಸಿಬಿ ವಿರುದ್ಧದ ಪಂದ್ಯಕ್ಕೆ ಪಂತ್‌ ಔಟ್‌; ಡೆಲ್ಲಿ ತಂಡಕ್ಕೆ ಹೊಸ ನಾಯಕ – ಬೆಂಗಳೂರು ಬಾಯ್ಸ್‌ ಕೈಹಿಡಿಯುತ್ತಾ ಲಕ್‌?

    ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಐಪಿಎಲ್‌ ಪಂದ್ಯಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ (Rishabh Pant) ಸೇವೆ ಅಲಭ್ಯವಾಗುವ ಹಿನ್ನೆಲೆಯಲ್ಲಿ ಬದಲಿ ನಾಯಕನನ್ನು ಫ್ರಾಂಚೈಸಿ ಘೋಷಿಸಿದೆ.

    ಮೂರುಬಾರಿ ನಿಧಾನಗತಿಯ ಓವರ್ ರೇಟ್ ನಿಂದ ಐಪಿಎಲ್‌ ನಿಯಮ (Slow Over Rate) ಉಲ್ಲಂಘಿಸಿದ್ದಕ್ಕಾಗಿ ರಿಷಭ್‌ ಪಂತ್‌ಗೆ ಬಿಸಿಸಿಐ 30 ಲಕ್ಷ ರೂ. ದಂಡ ವಿಧಿಸಿದೆ. ಇದರೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಭಾನುವಾರದ ಪಂದ್ಯಕ್ಕೆ ಬದಲಿ ನಾಯಕನನ್ನು ಘೋಷಿಸಲಾಗಿದೆ.

    ಸೂಪರ್‌ ಸಂಡೇ (ಮೇ 12) ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಿಂದ ರಿಷಭ್ ಪಂತ್ ಹೊರಗುಳಿಯಲಿದ್ದಾರೆ. ಹಾಗಾಗಿ ಅಕ್ಷರ್ ಪಟೇಲ್ (Axar Patel) ಅವರಿಗೆ ತಂಡವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗುವುದು ಎಂದು ಕೋಚ್‌ ರಿಕಿ ಪಾಂಟಿಂಗ್ ಖಚಿತಪಡಿಸಿದ್ದಾರೆ. ಭಾನುವಾರ ಸಂಜೆ 7:30ರ ವೇಳೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತಂಡಗಳು ಸೆಣಸಲಿವೆ.

    ಬ್ಯಾಟಿಂಗ್‌ ಬಲದ ಚಿಂತೆ:
    ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಅಗ್ರ ಕ್ರಮಾಂಕದಲ್ಲಿ ಫ್ರೆಸರ್‌ ಮೆಕ್‌ಗಾರ್ಕ್‌, ಪೃಥ್ವಿ ಶಾ, ಅಭಿಷೇಕ್‌ ಪೋರೆಲ್‌ ಬ್ಯಾಟಿಂಗ್‌ ಬಲ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಶಾಯ್‌ ಹೋಪ್‌, ರಿಷಭ್‌ ಪಂತ್‌, ಅಕ್ಷರ್‌ ಪಟೇಲ್‌ ಫಾರ್ಮ್‌ನಲ್ಲಿದ್ದರು. ಆದ್ರೆ ರಿಷಭ್‌ ಪಂತ್‌ ಅವರ ಅಲಭ್ಯತೆಯು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಬಲದ ಚಿಂತೆ ತಂದೊಡ್ಡಿದೆ. ಅಲ್ಲದೇ ಪ್ಲೇ ಆಫ್‌ ರೇಸ್‌ನಲ್ಲಿರುವ ಡೆಲ್ಲಿ ತಂಡಕ್ಕೆ ಗೆಲುವು ಕೈ ಹಿಡಿಯುತ್ತಾ ಎಂಬುದನ್ನ ಕಾದು ನೋಡಬೇಕಿದೆ.

    ದಂಡ ವಿಧಿಸಿದ್ದು ಏಕೆ?
    ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley Stadium) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಧಾನಗತಿಯ ಬೌಲಿಂಗ್‌ ನಡೆಸಿತ್ತು. ಇದಕ್ಕಾಗಿ ಪಂತ್‌ ಅವರಿಗೆ 30 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದ 11 ಸದಸ್ಯರಿಗೆ ತಲಾ 12 ಲಕ್ಷ ರೂ. ಅಥವಾ ಆಯಾ ಪಂದ್ಯ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ.

    30 ಲಕ್ಷ ದಂಡ ಯಾಕೆ?
    ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. 3ನೇ ಬಾರಿಗೆ ದಂಡ ವಿಧಿಸಿದರೆ 30 ಲಕ್ಷ ದಂಡದೊಂದಿಗೆ ಒಂದು ಪಂದ್ಯದಿಂದ ನಾಯಕನನ್ನು ಅಮಾನತುಗೊಳಿಸಲಾಗುತ್ತದೆ.

    ಪಂದ್ಯಕ್ಕೆ ಮೀಸಲಾದ ಸಮಯ ಎಷ್ಟು?
    ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. 2ನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.

  • ರಿಷಭ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ – ಪಂತ್‌ ಒಂದು ಪಂದ್ಯದಿಂದ ಅಮಾನತು!

    ರಿಷಭ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ – ಪಂತ್‌ ಒಂದು ಪಂದ್ಯದಿಂದ ಅಮಾನತು!

    – ಪ್ಲೇ ಆಫ್‌ ಸಮೀಪದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್‌ಗೆ ಭಾರೀ ಆಘಾತ

    ನವದೆಹಲಿ: ಮೂರು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್‌ನಿಂದ (Slow Over Rate) ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ನಾಯಕ ರಿಷಭ್‌ ಪಂತ್‌ಗೆ (Rishabh Pant) ಐಪಿಎಲ್‌ ಮಂಡಳಿ ಬರೋಬ್ಬರಿ 30 ಲಕ್ಷ ರೂ. ದಂಡ ವಿಧಿಸಿದೆ. ಇದರೊಂದಿಗೆ ಒಂದು ಪಂದ್ಯದಿಂದ ರಿಷಭ್‌ ಪಂತ್‌ ಅವರನ್ನ ಅಮಾನತು ಮಾಡಲಾಗಿದೆ.

    ಸದ್ಯ 12 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡ ಪ್ಲೇ ಆಫ್‌ ಪ್ರವೇಶಿಸುವ ಸಮೀಪದಲ್ಲಿದೆ. ಮುಂದಿನ ಎರಡೂ ಪಂದ್ಯಗಳೂ ಡೆಲ್ಲಿ ತಂಡಕ್ಕೆ ನಿರ್ಣಾಯಕವಾಗಿದೆ. ಇಂತಹ ಹೊತ್ತಿನಲ್ಲೇ ನಾಯಕ ರಿಷಭ್‌ ಪಂತ್‌ ಅವರನ್ನ ಅಮಾನತುಗೊಳಿಸಿರುವುದು ಡೆಲ್ಲಿ ತಂಡಕ್ಕೆ ಭಾರೀ ಆಘಾತ ನೀಡಿದೆ. ಸೂಪರ್‌ ಸಂಡೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಆರ್‌ಸಿಬಿ ವಿರುದ್ಧ ಸೆಣಸಲಿದೆ. ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಒಂದು ವೇಳೆ ಈ ಪಂದ್ಯಕ್ಕೆ ಪಂತ್‌ ಗೈರಾದರೆ, ಆರ್‌ಸಿಬಿಗೆ (RCB) ಇದು ವರವಾಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ. ಇದನ್ನೂ ಓದಿ: IPL 2024: ಗೆದ್ದರೂ ಖುಷಿಯಿಲ್ಲ – ಶತಕ ಸಿಡಿಸಿ ಮೆರೆದಾಡಿದ ಗಿಲ್‌ಗೆ 24 ಲಕ್ಷ ರೂ. ದಂಡ!

    ದಂಡ ವಿಧಿಸಿದ್ದು ಏಕೆ?
    ಮೇ 7 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ (Arun Jaitley Stadium) ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಿಧಾನಗತಿಯ ಬೌಲಿಂಗ್‌ ನಡೆಸಿತ್ತು. ಇದಕ್ಕಾಗಿ ಪಂತ್‌ ಅವರಿಗೆ 30 ಲಕ್ಷ ರೂ. ದಂಡದೊಂದಿಗೆ ಒಂದು ಪಂದ್ಯದಿಂದ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ಇಂಪ್ಯಾಕ್ಟ್ ಪ್ಲೇಯರ್ ಸೇರಿದಂತೆ ಉಳಿದ 11 ಸದಸ್ಯರಿಗೆ ತಲಾ 12 ಲಕ್ಷ ರೂ. ಅಥವಾ ಆಯಾ ಪಂದ್ಯ ಶುಲ್ಕದ 50 ಪ್ರತಿಶತದಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್‌ ಮಂಡಳಿ ತಿಳಿಸಿದೆ.

    30 ಲಕ್ಷ ದಂಡ ಯಾಕೆ?
    ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. 2ನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ. 3ನೇ ಬಾರಿಗೆ ದಂಡ ವಿಧಿಸಿದರೆ 30 ಲಕ್ಷ ದಂಡದೊಂದಿಗೆ ಒಂದು ಪಂದ್ಯದಿಂದ ನಾಯಕನನ್ನು ಅಮಾನತುಗೊಳಿಸಲಾಗುತ್ತದೆ. ಇದನ್ನೂ ಓದಿ: ಮೈದಾನಕ್ಕೆ ನುಗ್ಗಿ ಪಾದ ಮುಟ್ಟಿ ನಮಸ್ಕರಿಸಿದ ಅಭಿಮಾನಿ; ಹೃದಯ ಶ್ರೀಮಂತಿಕೆ ಮೆರೆದ ಧೋನಿ – ವೀಡಿಯೋ ವೈರಲ್‌!

    ಪಂದ್ಯಕ್ಕೆ ಮೀಸಲಾದ ಸಮಯ ಎಷ್ಟು?
    ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. 2ನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.

    ದಂಡ ಯಾಕೆ?
    ಐಪಿಎಲ್‌ ಅಂದ್ರೆ ಬಿಸಿನೆಸ್‌. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ. ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್‌ ಮಾಡಿದರೆ ಅದು ಐಪಿಎಲ್‌ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.

    ಐಪಿಎಲ್‌ಗೆ ಹೆಚ್ಚಿನ ಆದಾಯ ಬರುತ್ತಿರುವುದು ಟಿವಿ ರೈಟ್ಸ್‌ನಿಂದ. ಟಿವಿಯಲ್ಲಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ. ಅದರಲ್ಲೂ 2 ಪಂದ್ಯ ಒಂದೇ ದಿನ ನಿಗದಿಯಾದರೆ ಎರಡನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಯಾಕೆಂದರೆ ಜಾಹೀರಾತುಗಳು ಮೊದಲೇ ಬುಕ್‌ ಆಗಿರುತ್ತದೆ. ಏನೇ ಮಾಡಿದರೂ ಶಿಸ್ತು ಇರಬೇಕು. ಹೀಗಾಗಿ ಯಾರಿಗೂ ಸಮಸ್ಯೆ ಆಗದೇ ಇರಲು ಮತ್ತು ಎಲ್ಲ ಸರಿಯಾದ ಸಮಯಕ್ಕೆ ಮುಕ್ತಾಯವಾಗಲು ಪಂದ್ಯ ಮುಗಿಯಲು ಸಮಯವನ್ನು ನಿಗದಿ ಮಾಡಲಾಗಿದೆ. ಇದನ್ನೂ ಓದಿ: ಕಿರಿಯ ವಯಸ್ಸಿನಲ್ಲೇ ಕ್ರಿಕೆಟ್ ದೇವರ ದಾಖಲೆ ಮುರಿದ ಸಾಯಿ ಸುದರ್ಶನ್!

  • ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಇದೀಗ ರಿಷಭ್‌ ಪಂತ್‌ ವಿಚಾರಕ್ಕೆ‌ ಮತ್ತೆ ಸುದ್ದಿಯಲ್ಲಿದ್ದಾರೆ. ಪಂತ್‌ ಅವರೊಂದಿಗೆ ಮದುವೆ ವಿಚಾರಕ್ಕೆ ನಟಿ ಕೊಟ್ಟ ಪ್ರತಿಕ್ರಿಯೆ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಕಾಲೆಳೆಯುವಂತೆ ಮಾಡಿದೆ.

    ಹೌದು. ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಕೇಳಲಾದ ಪ್ರಶ್ನೆಗಳಿಗೆ ರೌಟೆಲಾ ಉತ್ತರ ನೀಡುತ್ತಿದ್ದರು. ಇದೇ ವೇಳೆ ಆಂಕರ್‌, ʻರಿಷಭ್‌ ಪಂತ್ (Rishabh Pant) ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಯೊಂದನ್ನು ಪ್ರಸ್ತಾಪಿಸಿದರು. ಆದ್ರೆ ಊರ್ವಶಿ ಇದಕ್ಕೆ ನೋ ಕಾಮೆಂಟ್ಸ್‌ ಎನ್ನುತ ಮುಂದಿನ ಪ್ರಶ್ನೆಗೆ ಸಾಗಿದರು.

    ಇದೇ ವೇಳೆ ಪಾಕಿಸ್ತಾನ ತಂಡದ ಸ್ಟಾರ್‌ ಬೌಲರ್‌ ನಸೀಮ್‌ ಶಾ (Naseem Shah) ಬಗ್ಗೆ ಕೇಳಿದಾಗ, ಖುಷಿಯಿಂದಲೇ ಉತ್ತರಿಸಿದ ಊರ್ವಶಿ ಹ್ಯಾಶ್‌ಟ್ಯಾಗ್ (ಟ್ರೆಂಡಿಂಗ್‌) ಬೌಲರ್‌ ಎಂದು ಹೇಳಿದರು. ಮುಂದುವರಿದು, ನಸೀಮ್‌ ಒಳ್ಳೆಯ ಬೌಲರ್‌ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಲ್ಲಂತೂ ಹೆಚ್ಚು ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ನಟಿ ನೀಡಿರುವ ಪ್ರತಿಕ್ರಿಯೆಗೆ ಸೋಶಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ನಟಿಯ ಕಾಲೆಳೆದಿದ್ದಾರೆ. ಇದನ್ನೂ ಓದಿ: ಕಿಚ್ಚನಿಗೆ ವಿಶೇಷ ಉಡುಗೊರೆ ಕೊಟ್ಟ ರಾಜಸ್ಥಾನ್‌ ರಾಯಲ್ಸ್‌ – ಧನ್ಯವಾದ ಹೇಳಿದ ಸುದೀಪ್‌

    ಹಿಂದೆಯೂ ಹಿಗ್ಗಾಮುಗ್ಗಾ ಟ್ರೋಲ್‌:
    2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬೌಲಿಂಗ್‌ ಮಾಡುತ್ತಿದ್ದ ವೇಳೆ ನಸೀಮ್‌ ಶಾ, ಸಣ್ಣ ನಗೆ ಬೀರಿದ್ದ ವೀಡಿಯೋವನ್ನ ಊರ್ವಶಿ ರೌಟೇಲಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು ಟ್ರೋಲ್‌ಗೆ ಗುರಿಯಾಗಿದ್ದರು. ಸಂದರ್ಶನದ ವೇಳೆ ಆಕೆ ಯಾರೂ ಅಂತಾನೇ ನನಗೆ ಗೊತ್ತಿಲ್ಲ ಎಂದು ನಸೀಮ್‌ ಶಾ ಊಹಾಪೋಹಗಳಿಗೆ ಬ್ರೇಕ್‌ ಹಾಕಿದ್ದರು. ಇದನ್ನೂ ಓದಿ:  ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಊರ್ವಶಿಗೆ ಪಂತ್‌ ಜೊತೆ ಪ್ರೀತಿಯಿತ್ತಾ?
    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎಂಬ ಸುದ್ದಿ ಹರಿದಾಡುತ್ತಲೇ ಇತ್ತು. ಆದ್ರೆ ಇಬ್ಬರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದ್ರೆ ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್‌ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಭ್‌ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

    14 ತಿಂಗಳ ಹಿಂದೆ ರಿಷಭ್‌ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಭ್‌ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ಪಂತ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು.

  • ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿಗೆ 10 ರನ್‌ಗಳ ಜಯ – ಮುಂಬೈ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

    ನವದೆಹಲಿ: ಕೊನೆಯವರೆಗೂ ಜಿದ್ದಾ-ಜಿದ್ದಿಯಿಂದ ಕೂಡಿದ್ದ ಅಖಾಡದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಮುಂಬೈ ಇಂಡಿಯನ್ಸ್‌ ವಿರುದ್ಧ 10 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ವಾಂಖೆಡೆ ಮೈದಾನದಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಂಡಿದೆ.

    ಇಲ್ಲಿನ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ 20 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ ನಷ್ಟಕ್ಕೆ 257 ರನ್‌ ಬಾರಿಸಿತ್ತು. 258 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್‌ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ 10 ರನ್‌ಗಳ ವಿರೋಚಿತ ಸೋಲಿಗೆ ತುತ್ತಾಗಿದೆ.

    ಕೊನೇ ಓವರ್‌ನಲ್ಲಿ ಕೈತಪ್ಪಿದ ಗೆಲುವು:
    ಕೊನೇ ಓವರ್‌ನಲ್ಲಿ ಮುಂಬೈ ಗೆಲುವಿಗೆ 25 ರನ್‌ಗಳ ಅಗತ್ಯವಿತ್ತು. ಮುಕೇಶ್‌ ಕುಮಾರ್‌ ಬೌಲಿಂಗ್‌ ವೇಳೆ ತಿಲಕ್‌ ವರ್ಮಾ ಸ್ಟ್ರೈಕ್‌ನಲ್ಲಿದ್ದರು. ಮೊದಲ ಎಸೆತದಲ್ಲಿ 2 ರನ್‌ ಕದಿಯಲು ಯತ್ನಿಸಿ ತಿಲಕ್‌ ರನೌಟ್‌ಗೆ ತುತ್ತಾದರು. ಇದರೊಂದಿಗೆ ಮುಂಬೈ ತಂಡದ ಗೆಲುವಿನ ಕನಸೂ ಭಗ್ನವಾಯಿತು. ಕೊನೆಯವರೆಗೂ ಹೋರಾಡಿದ ಮುಂಬೈ 247 ರನ್‌ ಗಳಿಸಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಮುಂಬೈ ಇಂಡಿಯನ್ಸ್‌ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿತು. ಮಾಜಿ ನಾಯಕ ರೋಹಿತ್‌ ಶರ್ಮಾ 8 ರನ್‌ಗಳಿಗೆ ವಿಕೆಟ್‌ ಕೈಚೆಲ್ಲಿದರು, ಈ ಬೆನ್ನಲ್ಲೇ 20 ರನ್‌ ಗಳಿಸಿ ಇಶಾನ್‌ ಕಿಶನ್‌ ಸಹ ಪೆವಿಲಿಯನ್‌ಗೆ ಮರಳಿದರು. ನಂತರ ಸ್ಪೋಟಕ ಬ್ಯಾಟಿಂಗ್‌ ಆರಂಭಿಸಿದ್ದ ಸೂರ್ಯಕುಮಾರ್‌ ಯಾದವ್‌ 13 ಎಸೆತಗಳಲ್ಲಿ 26 ರನ್‌ ಬಾರಿಸಿ ಔಟಾದರು. ಇದು ಮುಂಬೈ ತಂಡಕ್ಕೆ ಸೋಲಿನ ಭೀತಿ ಉಂಟುಮಾಡಿತ್ತು.

    ಮುಂಬೈ ಪರ ತಿಲಕ್‌ ವರ್ಮಾ 63 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಹಾರ್ದಿಕ್‌ ಪಾಂಡ್ಯ 46 ರನ್‌ (24 ಎಸೆತ, 3 ಸಿಕ್ಸರ್‌, 4 ಬೌಂಡರಿ), ಟಿಮ್‌ ಡೇವಿಡ್‌ 37 ರನ್‌ (17 ಎಸೆತ, 3 ಸಿಕ್ಸರ್‌, 4 ಬೌಂಡರಿ), ಸೂರ್ಯಕುಮಾರ್‌ 26 ರನ್‌, ಇಶಾನ್‌ ಕಿಶನ್‌ 20 ರನ್‌, ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯದ ಕಾರಣ ಮುಂಬೈ ವಿರೋಚಿತ ಸೋಲಿಗೆ ತುತ್ತಾಯಿತು. ಡೆಲ್ಲಿ ಕ್ಯಾಪಿಟಲ್ಸ್‌ ಪರ ಮುಕೇಶ್‌ ಕುಮಾರ್‌, ರಸಿಖ್‌ ಸಲಾಮ್‌ ತಲಾ 3 ವಿಕೆಟ್‌ ಕಿತ್ತರೆ, ಖಲೀಲ್‌ ಅಹ್ಮದ್‌ 2 ವಿಕೆಟ್‌ ಪಡೆದು ಮಿಂಚಿದರು.

    ಮೊದಲು ಬ್ಯಾಟಿಂಗ್‌ ಮಾಡಲಿಳಿದ ಡೆಲ್ಲಿ ಕ್ಯಾಪಿಟಲ್ಸ್‌ ಪರ ಆರಂಭಿಕರಾದ ಫ್ರೇಸರ್‌ ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಪೋರೆಲ್ ಆರಂಭದಿಂದಲೇ ಸ್ಪೋಟಕ ಇನ್ನಿಂಗ್ಸ್‌ ಕಟ್ಟಲು ಶುರು ಮಾಡಿದರು. ಮೊದಲ 2.4 ಓವರ್‌ಗಳಲ್ಲೇ ಡೆಲ್ಲಿ ತಂಡ 50 ರನ್‌ ಬಾರಿಸಿತ್ತು. ಆಸ್ಟ್ರೇಲಿಯಾ ಮೂಲದ ಯುವ ಸ್ಪೋಟಕ ಬ್ಯಾಟರ್ ಫ್ರೇಸರ್‌ ಮೆಗಾರ್ಕ್‌ ಮುಟ್ಟಿದ್ದೆಲ್ಲ ಚಿನ್ನ ಎನ್ನುವಂತಾಗಿದ್ದು. ಒಂದಾದಮೇಲೊಂದು ಎಸೆತಗಳು ಸಿಕ್ಸರ್‌, ಬೌಂಡರಿಯ ಹಾದಿಯನ್ನೇ ಹಿಡಿಯುತ್ತಿದ್ದವು. ಇದರೊಂದಿಗೆ ಮೆಕ್‌ಗಾರ್ಕ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದರು. ಇದರೊಂದಿಗೆ ಡೆಲ್ಲಿ ಪವರ್‌ ಪ್ಲೇ ನಲ್ಲಿ 92 ರನ್ ಕಲೆಹಾಕಿತ್ತು. ಇದು ಐಪಿಎಲ್‌ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಪವರ್‌ ಪ್ಲೇನಲ್ಲಿ ಸಿಡಿಸಿದ ಗರಿಷ್ಠ ಸ್ಕೋರರ್‌ ಆಗಿತ್ತು.

    ಮೆಕ್‌ಗಾರ್ಕ್‌ ಹಾಗೂ ಅಭಿಷೇಕ್ ಮೊದಲ ವಿಕೆಟ್‌ಗೆ 7.3 ಓವರ್‌ಗಳಲ್ಲಿ ಬರೋಬ್ಬರಿ 114 ರನ್‌ ಸಿಡಿಸಿತ್ತು. ಮೆಕ್‌ಗಾರ್ಕ್‌ ಬಳಿಕ ಶಾಯ್‌ ಹೋಪ್‌, ರಿಷಭ್‌ ಪಂತ್‌, ಟ್ರಿಸ್ಟನ್‌ ಸ್ಟಬ್ಸ್‌ ಸಹ ಮುಂಬೈ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ಜಾಡಿಸಿದರು. ಅಂತಿಮವಾಗಿ ಡೆಲ್ಲಿ ತಂಡ 20 ಓವರ್‌ಗಳಲ್ಲಿ 257 ರನ್‌ ಸಿಡಿಸಿತ್ತು.

    ಡೆಲ್ಲಿ ಪರ ಮೆಕ್‌ಗಾರ್ಕ್‌ 84 ರನ್‌ (27 ಎಸೆತ, 11 ಬೌಂಡರಿ, 6 ಸಿಕ್ಸರ್‌), ಟ್ರಿಸ್ಟನ್‌ ಸ್ಟಬ್ಸ್‌ 48 ರನ್‌ (25 ಎಸೆತ, 6 ಬೌಂಡರಿ, 2 ಸಿಕ್ಸರ್‌), ಶಾಯ್‌ಹೋಪ್‌ 41 ರನ್‌ (17 ಎಸೆತ, 5 ಸಿಕ್ಸರ್‌), ರಿಷಭ್‌ ಪಂತ್‌ 29 ರನ್‌, ಅಕ್ಷರ್‌ ಪಟೇಲ್‌ 11 ರನ್‌ ಗಳಿಸಿದರು.

    ಮುಂಬೈ ಇಂಡಿಯನ್ಸ್‌ ಪರ ಲ್ಯೂಕ್ ವುಡ್, ಜಸ್ಪ್ರೀತ್‌ ಬುಮ್ರಾ, ಪಿಯೂಷ್‌ ಚಾವ್ಲಾ, ಮೊಹಮ್ಮದ್‌ ನಬಿ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ರನ್‌ ಏರಿದ್ದು ಹೇಗೆ?
    17 ಎಸೆತ – 50 ರನ್‌
    41 ಎಸೆತ – 100 ರನ್‌
    73 ಎಸೆತ – 150 ರನ್‌
    98 ಎಸೆತ – 200 ರನ್‌
    120 ಎಸೆತ – 257 ರನ್‌

  • IPL 2024: ಕೊನೇ ಓವರ್ ಥ್ರಿಲ್ಲರ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 4 ರನ್‌ಗಳ ಜಯ; ಹೋರಾಡಿ ಸೋತ ಟೈಟಾನ್ಸ್!

    IPL 2024: ಕೊನೇ ಓವರ್ ಥ್ರಿಲ್ಲರ್ – ರೋಚಕ ಪಂದ್ಯದಲ್ಲಿ ಡೆಲ್ಲಿಗೆ 4 ರನ್‌ಗಳ ಜಯ; ಹೋರಾಡಿ ಸೋತ ಟೈಟಾನ್ಸ್!

    ನವದೆಹಲಿ: ರಶೀದ್ ಖಾನ್ ಅವರ ಸಿಕ್ಸರ್, ಬೌಂಡರಿ ಆಟದ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗುಜರಾತ್ ಟೈಟಾನ್ಸ್ ವಿರುದ್ಧ 4 ರನ್‌ಗಳ ರೋಚಕ ಗೆಲುವು ಸಾಧಿಸಿದೆ.

    ಕೊನೇ ಓವರ್ ಥ್ರಿಲ್ಲಿಂಗ್?
    ಕೊನೇ ಓವರ್‌ನಲ್ಲಿ ಗುಜರಾತ್ ಗೆಲುವಿಗೆ 19 ರನ್‌ಗಳ ಅಗತ್ಯವಿತ್ತು. ಕ್ರೀಸ್‌ನಲ್ಲಿದ್ದ ರಶೀದ್ ಖಾನ್ ಮೊದಲ 2 ಎಸೆತಗಳಲ್ಲಿ ಭರ್ಜರಿ ಬೌಂಡರಿ ಬಾರಿಸಿದ್ದರು. 3-4ನೇ ಎಸೆತದಲ್ಲಿ ರನ್ ಕದಿಯುವಲ್ಲಿ ವಿಫಲರಾದರು. 2 ಎಸೆತಗಳಲ್ಲಿ 11 ರನ್ ಬೇಕಿದ್ದಾಗಲೇ 5ನೇ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿದ್ದರು, ಇದರಿಂದ ಕೊನೇ ಕ್ಷಣದವರೆಗೂ ಗುಜರಾತ್‌ಗೆ ಗೆಲುವಿನ ಆಸೆ ಜೀವಂತವಾಗಿತ್ತು. ಆದ್ರೆ ಕೊನೇ ಎಸೆತದಲ್ಲಿ ಬೌಂಡರಿಗೆ ಯತ್ನಿಸಿದ ರಶೀದ್ ಖಾನ್ ಒಂದು ರನ್ ಕದಿಯುವಲ್ಲಿ ಮಾತ್ರ ಸಫಲರಾದರು. ಪರಿಣಾಮ ಡೆಲ್ಲಿ ಕ್ಯಾಪಿಟಲ್ಸ್‌ಗೆ 4 ರನ್‌ಗಳ ರೋಚಕ ಗೆಲುವು ಸಿಕ್ಕಿತು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಬಾರಿಸಿತ್ತು. ಈ ಗುರಿ ಬೆನ್ನತ್ತಿದ ಗುಜರಾತ್ ಟೈಟಾನ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಚೇಸಿಂಗ್ ಆರಂಭಿಸಿದ ಗುಜರಾತ್ ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಉತ್ತಮ ರನ್ ಕಲೆಹಾಕಿತ್ತು. ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ತಂಡಕ್ಕೆ ನೆರವಾಗಿತ್ತು. ಇವರಿಬ್ಬರ ವಿಕೆಟ್ ಉರುಳುತ್ತಿದ್ದಂತೆ ರನ್ ವೇಗವೂ ಕಡಿಮೆಯಾಯಿತು.

    ಟೈಟಾನ್ಸ್ ಪರ ಸಾಯಿ ಸುದರ್ಶನ್ 65 ರನ್ (39 ಎಸೆತ, 2 ಸಿಕ್ಸರ್, 7 ಬೌಂಡರಿ), ಡೇವಿಡ್ ಮಿಲ್ಲರ್ 55 ರನ್ (23 ಎಸೆತ, 3 ಸಿಕ್ಸರ್, 6 ಬೌಂಡರಿ), ವೃದ್ಧಿಮಾನ್ ಸಾಹಾ 39 ರನ್, ಶುಭಮನ್ ಗಿಲ್ 6 ರನ್, ಅಜ್ಮತುಲ್ಲಾ ಒಮರ್ಜಾಯ್ 1 ರನ್, ಎಂ. ಶಾರೂಖ್ ಖಾನ್ 8 ರನ್, ರಾಹುಲ್ ತೆವಾಟಿಯಾ 8 ರನ್, ಸಾಯಿ ಕಿಶೋರ್ 13 ರನ್, ರಶೀದ್ ಖಾನ್ 21 ರನ್ ಗಳಿಸಿದರು.

    ಟಾಸ್ ಸೋತು ಮೊದಲು ಕ್ರೀಸ್‌ಗಿಳಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸ್ಫೋಟಕ ಆರಂಭ ಪಡೆದರೂ ಮಧ್ಯಮ ಕ್ರಮಾಂಕದಲ್ಲಿ ನಿಧಾನಗತಿಯ ಬ್ಯಾಟಿಂಗ್‌ನಿಂದ 200 ರನ್‌ಗಳ ಗಡಿ ತಲುಪುವುದೂ ಕಷ್ಟವಾಗಿತ್ತು. ಆದ್ರೆ ಕೊನೇ 2 ಓವರ್‌ಗಳಲ್ಲಿ ರಿಷಭ್ ಪಂತ್ ಹಾಗೂ ಟ್ರಿಸ್ಟಾನ್ ಸ್ಟಬ್ಸ್ ಅವರ ಸ್ಫೋಟಕ ಇನ್ನಿಂಗ್ಸ್‌ನಿಂದಾಗಿ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಅದರಲ್ಲೂ ಕೊನೇ 10 ಎಸೆತಗಳಲ್ಲಿ ಸ್ಟಬ್ಸ್ ಮತ್ತು ಪಂತ್ ಜೋಡಿ ಬರೋಬ್ಬರಿ 51 ರನ್ ಚಚ್ಚಿತ್ತು. ಇದರಲ್ಲಿ ಬರೋಬ್ಬರಿ 6 ಸಿಕ್ಸರ್ ಹಾಗೂ 3 ಬೌಂಡರಿಗಳೂ ಸೇರಿದ್ದವು.

    ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ 88 ರನ್ (43 ಎಸೆತ, 8 ಸಿಕ್ಸರ್, 5 ಬೌಂಡರಿ), ಅಕ್ಷರ್ ಪಟೇಲ್ 66 ರನ್ (43 ಎಸೆತ, 4 ಸಿಕ್ಸರ್. 5 ಬೌಂಡರಿ), ಟ್ರಿಸ್ಟಾನ್ ಸ್ಟಬ್ಸ್ 26 ರನ್ (2 ಸಿಕ್ಸರ್, 3 ಬೌಂಡರಿ), ಜೇಕ್ ಫ್ರೇಸರ್-ಮ್ಯಾಕ್‌ಗಾರ್ಕ್ 23 ರನ್, ಪೃಥ್ವಿ ಶಾ 11 ರನ್, ಶಾಯ್ ಹೋಪ್ 5 ರನ್ ಗಳಿಸಿದರು. ಗುಜರಾತ್ ಟೈಟಾನ್ಸ್ ಪರ ಮಾರಕ ದಾಳಿ ನಡೆಸಿದ ಸಂದೀಪ್ ವಾರಿಯರ್ಸ್ 3 ವಿಕೆಟ್ ಕಿತ್ತರೆ, ನೂರ್ ಅಹ್ಮದ್ ಒಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಸುಲಭ ತುತ್ತಾದ ಗುಜರಾತ್ – ಡೆಲ್ಲಿ ಕ್ಯಾಪಿಟಲ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ; ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಏರಿಕೆ!

    ಸುಲಭ ತುತ್ತಾದ ಗುಜರಾತ್ – ಡೆಲ್ಲಿ ಕ್ಯಾಪಿಟಲ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ; ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಏರಿಕೆ!

    – ತವರಿನಲ್ಲೇ ಗುಜರಾತ್‌ ಟೈಟಾನ್ಸ್‌ಗೆ ಹೀನಾಯ ಸೋಲು

    ಅಹಮದಾಬಾದ್: ಸಂಘಟಿತ ಬ್ಯಾಟಿಂಗ್, ಬೌಲಿಂಗ್ ಪ್ರದರ್ಶನದಿಂದ ರಿಷಭ್ ಪಂತ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 6 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ 9ನೇ ಸ್ಥಾನದಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ -0.074 ನೆಟ್‌ ರನ್‌ರೇಟ್‌ ಮತ್ತು 6 ಅಂಕಗಳೊಂದಿಗೆ 6ನೇ ಸ್ಥಾನಕ್ಕೆ ಜಿಗಿದಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ (Gujarat Titans) ತಂಡ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 17.3 ಓವರ್‌ಗಳಲ್ಲಿ 89 ರನ್‌ಗಳಿಗೆ ಆಲೌಟ್ ಆಯಿತು. 90 ರನ್‌ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೇವಲ 8.5 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 92 ರನ್ ಸಿಡಿಸಿ ಗೆಲುವು ಸಾಧಿಸಿತು.

    90 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಬ್ಯಾಟರ್‌ಗಳು ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾದರು. ಒಂದೆಡೆ ವಿಕೆಟ್ ಕಳೆದುಕೊಳ್ಳುತ್ತಿದ್ದರೂ ಅಬ್ಬರಿಸಿದ ಬ್ಯಾಟರ್‌ಗಳು ಪವರ್ ಪ್ಲೇ ಮುಗಿಯುವ ವೇಳೆಗೆ 67 ರನ್ ಬಾರಿಸಿದ್ದರು.

    ಆರಂಭಿಕ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಮೊದಲ 10 ಎಸೆತಗಳಲ್ಲೇ 20 ರನ್ ಚಚ್ಚಿ ಪೆವಿಲಿಯನ್‌ಗೆ ಮರಳಿದರು. ಈ ಬೆನ್ನಲ್ಲೇ ಪೃಥ್ವಿ ಶಾ ಸಹ 7 ರನ್‌ಗಳಿಗೆ ಔಟಾದರು. ಇದರಿಂದ ಗುಜರಾತ್ ಸಹ ಡೆಲ್ಲಿ ಕ್ಯಾಪಿಟಲ್ಸ್‌ಗೆ ಕಠಿಣ ಪೈಪೋಟಿ ನೀಡಲಿದೆ ಎಂದು ಭಾವಿಸಲಾಗಿತ್ತು. ಆದ್ರೆ ಅಭಿಷೇಕ್ ಪೋರೆಲ್, ಶಾಯ್ ಹೋಪ್, ರಿಷಭ್ ಪಂತ್ (Rishabh Pant) ಅವರ ಸ್ಫೋಟಕ ಪ್ರದರ್ಶನ ಡೆಲ್ಲಿ ತಂಡ ಸುಲಭ ಜಯ ಸಾಧಿಸುವಂತೆ ಮಾಡಿತು. ಡೆಲ್ಲಿ ಪರ ಅಭಿಷೇಕ್ ಪೋರೆಲ್ 7 ಎಸೆತಗಳಲ್ಲಿ 15 ರನ್, ಶಾಯ್ ಹೋಪ್ 19 ರನ್ ಗಳಿಸಿ ಔಟಾದರೆ, ರಿಷಭ್ ಪಂತ್ 16 ರನ್, ಸುಮಿತ್ ಕುಮಾರ್ 9 ರನ್ ಗಳಸಿ ಅಜೇಯರಾಗುಳಿದರು. ಗುಜರಾತ್‌ಟೈಟಾನ್ಸ್ ಪರ ಸಂದೀಪ್ ವಾರಿಯರ್ 2 ವಿಕೆಟ್ ಕಿತ್ತರೆ, ಸ್ಪೆನ್ಸರ್ ಜಾನ್ಸನ್, ರಶೀದ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು ಆರಂಭದಲ್ಲೇ ಆಘಾತ ಅನುಭವಿಸಿತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳ ಕಳಪೆ ಪ್ರದರ್ಶನದಿಂದಾಗಿ ಮೊದಲ 5 ಓವರ್‌ಗಳಲ್ಲೇ 30 ರನ್‌ಗಳಿಗೆ ಪ್ರಮುಖ 4 ವಿಕೆಟ್ ಕಳೆದುಕೊಂಡಿತ್ತು. ಆ ನಂತರ ಕ್ರೀಸ್‌ಗೆ ಬಂದ ಬ್ಯಾಟರ್‌ಗಳು ಭದ್ರವಾಗಿ ನೆಲೆಯೂರದೇ ಪೆವಿಲಿಯನ್ ಪರೇಡ್ ನಡೆಸಿದರು. ಈ ನಡುವೆ ರಶೀದ್ ಖಾನ್ ಅವರ ಸಾಧಾರಣ ಮೊತ್ತದ ಕೊಡುಗೆಯು ತಂಡವನ್ನು 90 ರನ್‌ಗಳ ಗಡಿ ತಲುಪುವಂತೆ ಮಾಡಿತು.

    ಗುಜರಾತ್ ಪರ ಏಕಾಂಗಿ ಹೋರಾಟ ನಡೆಸಿದ ರಶೀದ್ ಖಾನ್ 31 ರನ್ (24 ಎಸೆತ, 1 ಸಿಕ್ಸರ್, 2 ಬೌಂಡರಿ) ಗಳಿಸಿದರು. ಉಳಿದಂತೆ ವೃದ್ಧಿಮಾನ್ ಸಾಹಾ 2 ರನ್, ಶುಭಮನ್ ಗಿಲ್ 8 ರನ್, ಸಾಯಿ ಸುದರ್ಶನ್ 12 ರನ್, ಡೇವಿಡ್ ಮಿಲ್ಲರ್ 2 ರನ್, ಅಭಿನವ್ ಮನೋಹರ್ 8 ರನ್, ರಾಹುಲ್ ತೆವಾಟಿಯಾ 10 ರನ್, ಮೋಹಿತ್ ಶರ್ಮಾ 2 ರನ್, ನೂರ್ ಅಹ್ಮದ್ 1 ರನ್, ಸ್ಪೆನ್ಸರ್ ಜಾನ್ಸನ್ 1 ರನ್ ಗಳಿಸಿದರೆ, ಶಾರೂಖ್‌ಖಾನ್ ಶೂನ್ಯಕ್ಕೆ ನಿರ್ಗಮಿಸಿದರು.

    ಡೆಲ್ಲಿ ಕ್ಯಾಪಿಟಲ್ಸ್ ಪರ ಮುಕೇಶ್ ಕುಮಾರ್ 2.3 ಓವರ್‌ಗಳಲ್ಲಿ ಕೇವಲ 14 ರನ್ ಬಿಟ್ಟುಕೊಟ್ಟು 3 ವಿಕೆಟ್ ಕಿತ್ತರೆ, ಇಶಾಂತ್ ಶರ್ಮಾ ಮತ್ತು ಟ್ರಿಸ್ಟಾನ್ ಸ್ಟಬ್ಸ್ ತಲಾ ಎರಡು ವಿಕೆಟ್ ಹಾಗೂ ಖಲೀಲ್ ಅಹ್ಮದ್ ಮತ್ತು ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

  • IPL 2024: ಕೊನೆಗೂ ಗೆಲುವಿನ ಖಾತೆ ತೆರೆದ ಮುಂಬೈ – ಜಿದ್ದಾಜಿದ್ದಿ ಕಣದಲ್ಲಿ ಹೋರಾಡಿ ಸೋತ ಡೆಲ್ಲಿ

    IPL 2024: ಕೊನೆಗೂ ಗೆಲುವಿನ ಖಾತೆ ತೆರೆದ ಮುಂಬೈ – ಜಿದ್ದಾಜಿದ್ದಿ ಕಣದಲ್ಲಿ ಹೋರಾಡಿ ಸೋತ ಡೆಲ್ಲಿ

    – ಪಾಂಡ್ಯ ಫುಲ್‌ ಖುಷ್‌, ಟ್ರಿಸ್ಟಾನ್‌ ಸ್ಟಬ್ಸ್‌ ಸ್ಫೋಟಕ ಅರ್ಧಶತಕ ವ್ಯರ್ಥ

    ಮುಂಬೈ: ಕೊನೇ ಓವರ್‌ವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 29 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 17ನೇ ಆವೃತ್ತಿಯ ಐಪಿಎಲ್‌ನಲ್ಲಿ ಮುಂಬೈ ಗೆಲುವಿನ ಖಾತೆ ತೆರೆದಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್‌ ತಂಡವು 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 234 ರನ್‌ ಗಳಿಸಿತ್ತು. 235 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಚೇಸಿಂಗ್‌ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 3.4 ಓವರ್‌ಗಳಲ್ಲೇ ಡೇವಿಡ್‌ ವಾರ್ನರ್‌ (10 ರನ್‌) ಅವರ ವಿಕೆಟ್‌ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 22 ಆಗಿತ್ತು. ಬಳಿಕ ಜೊತೆಗೂಡಿದ ಅಭಿಷೇಕ್‌ ಪೋರೆಲ್‌ ಹಾಗೂ ಪೃಥ್ವಿ ಶಾ ಜೋಡಿ ತಂಡಕ್ಕೆ ಚೇತರಿಕೆ ನೀಡಿತ್ತು. ಅಲ್ಲದೇ ಟ್ರಿಸ್ಟಾನ್ಸ್‌ ಸಬ್ಟ್‌ ಅವರ ಸ್ಫೋಟಕ ಪ್ರದರ್ಶನ ತಂಡದಲ್ಲಿ ಗೆಲುವಿನ ಕನಸು ಚಿಗುರಿಸಿತ್ತು. ಆದ್ರೆ ಇತರೆ ಬ್ಯಾಟರ್‌ಗಳ ಸಾಥ್‌ ನೀಡದೇ ತಂಡ ಸೋಲನುಭವಿಸಿತು.

    ಡೆಲ್ಲಿ ಪರ ಕೊನೇವರೆಗೂ ಹೋರಾಡಿದ ಸ್ಟಬ್ಸ್‌ 71 ರನ್‌ (25 ಎಸೆತ, 7 ಸಿಕ್ಸರ್‌, 3 ಬೌಂಡರಿ), ಪೃಥ್ವಿ ಶಾ 40 ಎಸೆತಗಳಲ್ಲಿ 66 ರನ್‌ (3 ಸಿಕ್ಸರ್‌, 8 ಬೌಂಡರಿ), ಅಭಿಷೇಕ್‌ 31 ಎಸೆತಗಳಲ್ಲಿ 41 ರನ್‌, ಡೇವಿಡ್‌ ವಾರ್ನರ್‌ 10 ರನ್‌, ರಿಷಭ್‌ ಪಂತ್‌ 1 ರನ್‌, ಅಕ್ಷರ್‌ ಪಟೇಲ್‌ 8 ರನ್‌, ಲಲಿತ್‌ ಯಾದವ್‌ 3 ರನ್‌, ಜೇ ರಿಚ್ಚರ್ಡ್‌ಸನ್‌ 2 ರನ್‌ ಗಳಿಸಿದರು. ಮುಂಬೈ ಪರ ಜೆರಾಲ್ಡ್ ಕೋಟ್ಜಿ 4 ವಿಕೆಟ್‌ ಕಿತ್ತರೆ, ಜಸ್ಪ್ರೀತ್‌ ಬುಮ್ರಾ 2 ವಿಕೆಟ್‌ ಹಾಗೂ ಶೆಫರ್ಡ್‌ 1 ವಿಕೆಟ್‌ ಪಡೆದು ಮಿಂಚಿದರು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಮುಂಬೈ ಇಂಡಿಯನ್ಸ್‌ ಪರ ಬ್ಯಾಟರ್‌ಗಳು ಸಂಘಟಿತ ಪ್ರದರ್ಶನ ನೀಡಿದರು. ಯಾರೊಬ್ಬರೂ ಅರ್ಧಶತಕ ಗಳಿಸದಿದ್ದರೂ 200 ರನ್‌ಗಳ ಗಡಿ ದಾಟುವಲ್ಲಿ ಮುಂಬೈ ಯಶಸ್ವಿಯಾಯಿತು.

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಹಾಗೂ ಇಶಾನ್‌ ಕಿಶನ್‌ ಜೋಡಿ ಮೊದಲ 7 ಓವರ್‌ಗಳಲ್ಲಿ 80 ರನ್‌ ಬಾರಿಸಿತ್ತು. ನಂತರ ಕ್ರೀಸ್‌ಗಿಳಿದವರಲ್ಲಿ ಸೂರ್ಯಕುಮಾರ್‌ ಯಾದವ್‌, ತಿಲಕ್‌ ವರ್ಮಾ ಹೊರತುಪಡಿಸಿದ್ರೆ ಉಳಿದ ಆಟಗಾರರು ಸಾಮರ್ಥ್ಯ ಪ್ರದರ್ಶಿಸುವಲ್ಲಿ ಯಶಸ್ವಿಯಾದರು.

    ಮುಂಬೈ ಪರ ರೋಹಿತ್‌ ಶರ್ಮಾ 49 ರನ್‌ (27 ಎಸೆತ, 3 ಸಿಕ್ಸರ್‌, 6 ಬೌಂಡರಿ), ಇಶಾನ್‌ ಕಿಶನ್‌ 42 ರನ್‌ (23 ಎಸೆತ, 4 ಬೌಂಡರಿ, 2 ಸಿಕ್ಸರ್‌), ಟಿಮ್‌ ಡೇವಿಡ್‌ 45 ರನ್‌ (21 ಎಸೆತ, 4 ಸಿಕ್ಸರ್‌, 2 ಬೌಂಡರಿ), ರೊಮಾರಿಯೋ ಶೆಫರ್ಡ್ ಸ್ಫೋಟಕ 39 ರನ್‌ (10 ಎಸೆತ, 4 ಸಿಕ್ಸರ್‌, 3 ಬೌಂಡರಿ), ಹಾರ್ದಿಕ್‌ ಪಾಂಡ್ಯ 39 ರನ್‌ ಚಚ್ಚಿದರೆ, ತಿಲಕ್‌ ವರ್ಮಾ 6 ರನ್‌, ಸೂರ್ಯಕುಮಾರ್‌ ಯಾದವ್‌ ಶೂನ್ಯ ಸುತ್ತಿದರು. ಹೆಚ್ಚುವರಿ 14 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ಅಕ್ಷರ್‌ ಪಟೇಲ್‌ ಮತ್ತು ಅನ್ರಿಚ್ ನಾರ್ಟ್ಜೆ ತಲಾ ಎರಡು ವಿಕೆಟ್‌ ಕಿತ್ತರು, ಖಲೀಲ್‌ ಅಹ್ಮದ್‌ ಒಂದು ವಿಕೆಟ್‌ ಪಡೆದರು.