Tag: Rishabh Pant

  • ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

    ರಿಷಭ್‌ ಪಂತ್‌ ಸೇರಿದಂತೆ ಇಡೀ ಡೆಲ್ಲಿ ತಂಡಕ್ಕೆ ಭಾರೀ ದಂಡ

    ವಿಶಾಖಪಟ್ಟಣಂ: ಸತತ ಎರಡು ಪಂದ್ಯಗಳಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿದ್ದಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ತಂಡದ ನಾಯಕ ರಿಷಭ್‌ ಪಂತ್‌ಗೆ ಬಿಸಿಸಿಐ (BCCI) 24 ಲಕ್ಷ ರೂ. ದಂಡ ವಿಧಿಸಿದೆ.

    ರಿಷಭ್‌ ಪಂತ್‌ (Rishabh Pant) ಅವರಿಗೆ 24 ಲಕ್ಷ ರೂ. ದಂಡ ವಿಧಿಸಿದರೆ ತಂಡದ ಇಂಪ್ಯಾಕ್ಟ್‌ ಆಟಗಾರ ಅಭಿಷೇಕ್‌ ಸೇರಿದಂತೆ ಉಳಿದ ಆಟಗಾರರಿಗೆ 6 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಬುಧವಾರ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ವಿರುದ್ಧ ನಿಧಾನಗತಿಯ ಬೌಲಿಂಗ್‌ ಮಾಡಿದ್ದರೆ, ಮಾರ್ಚ್‌ 21 ರಂದು ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ದದ ಪಂದ್ಯದಲ್ಲಿ ಡೆಲ್ಲಿ ನಿಧಾನಗತಿಯ ಬೌಲಿಂಗ್‌ ಮಾಡಿತ್ತು.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಕೋಲ್ಕತ್ತಾ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್ ಹೊಡೆದಿತ್ತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಡೆಲ್ಲಿ 17.2 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್‌ ಆಯ್ತು. ಇದನ್ನೂ ಓದಿ: 2ನೇ ಬಾರಿಗೆ ಆರ್‌ಸಿಬಿ ದಾಖಲೆ ನುಚ್ಚುನೂರು – ಐಪಿಎಲ್‌ ಇತಿಹಾಸದಲ್ಲಿ ಮತ್ತೊಂದು ವಿಶೇಷ ಸಾಧನೆ

    24 ಲಕ್ಷ ಯಾಕೆ?
    ಐಪಿಎಲ್‌ನಲ್ಲಿ ಮೊದಲ ಬಾರಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ. ಎರಡನೇ ಬಾರಿ ಈ ತಪ್ಪನ್ನು ಮಾಡಿದರೆ ನಾಯಕನಿಗೆ 24 ಲಕ್ಷ ರೂ. ದಂಡದ ಜೊತೆ ಆಟಗಾರರಿಗೂ ದಂಡ ವಿಧಿಸಲಾಗುತ್ತದೆ.

    ಐಪಿಎಲ್‌ ನಿಯಮದ ಪ್ರಕಾರ ಒಂದು ತಂಡ 20 ಓವರ್‌ಗಳನ್ನು 90 ನಿಮಿಷದ ಒಳಗಡೆ ಮುಗಿಸಬೇಕು. ಈ ಅವಧಿಯಲ್ಲಿ ಓವರ್‌ಗಳನ್ನು ಪೂರ್ಣ ಮಾಡದೇ ಇದ್ದರೂ 20ನೇ ಓವರ್‌ ಅನ್ನು 90ನೇ ನಿಮಿಷದಲ್ಲೇ ಆರಂಭಿಸಬೇಕು. ಈ ನಿಯಮವನ್ನು ಮೊದಲ ಬಾರಿ ಉಲ್ಲಂಘಿಸಿದರೆ 12 ಲಕ್ಷ ರೂ. ದಂಡವನ್ನು ವಿಧಿಸಲಾಗುತ್ತದೆ.

    ಪ್ರತಿ ಪಂದ್ಯದಲ್ಲಿ 2 ನಿಮಿಷ 30 ಸೆಕೆಂಡಿನ 4 ಸ್ಟ್ರಟೆಜಿಕ್‌ ಟೈಮ್‌ ಔಟ್‌ ಬ್ರೇಕ್‌ಗಳು ಇರುತ್ತದೆ. ಮೊದಲ ಇನ್ನಿಂಗ್ಸ್‌ನಲ್ಲಿ ಬೌಲಿಂಗ್‌ ತಂಡ 6-9 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು. ಎರಡನೇ ಸ್ಟ್ರಟೆಜಿಕ್‌ ಟೈಮ್‌ ಔಟ್‌ ಅನ್ನು ಬ್ಯಾಟಿಂಗ್ ತಂಡ 13-16 ಓವರ್‌ ಮಧ್ಯೆ ಯಾವಾಗ ಬೇಕಾದರೂ ಪಡೆದುಕೊಳ್ಳಬಹುದು.  ಇದನ್ನೂ ಓದಿ: ಮೂರು ದಿನಗಳಲ್ಲಿ ಕರ್ನಾಟಕದಲ್ಲಿ ಮಳೆ – ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆ?

    ದಂಡ ಯಾಕೆ?
    ಐಪಿಎಲ್‌ ಅಂದ್ರೆ ಬಿಸಿನೆಸ್‌. ಇಲ್ಲಿ ಹಣದ ಹೊಳೆಯೇ ಹರಿಯುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ.

    ಮಳೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಪಂದ್ಯಕ್ಕೆ ಅಡ್ಡಿಯಾದರೆ ಅದು ಬೇರೆ ವಿಷಯ. ಆದರೆ ಒಂದು ತಂಡ ನಿಧಾನಗತಿ ಬೌಲಿಂಗ್‌ ಮಾಡಿದರೆ ಅದು ಐಪಿಎಲ್‌ ದಿನದ ವಹಿವಾಟಿನ ಮೇಲೆ ಪರಿಣಾಮ ಬೀರುತ್ತದೆ. ವೆಚ್ಚಗಳು ಜಾಸ್ತಿಯಾಗುತ್ತದೆ.

    ಐಪಿಎಲ್‌ಗೆ ಹೆಚ್ಚಿನ ಆದಾಯ ಬರುತ್ತಿರುವುದು ಟಿವಿ ರೈಟ್ಸ್‌ನಿಂದ. ಟಿವಿಯಲ್ಲಿ ಪ್ರತಿ ಸೆಕೆಂಡ್‌ ಬಹಳ ಮುಖ್ಯ. ಅದರಲ್ಲೂ 2 ಪಂದ್ಯ ಒಂದೇ ದಿನ ನಿಗದಿಯಾದರೆ ಎರಡನ್ನು ನಿರ್ವಹಣೆ ಮಾಡುವುದು ಕಷ್ಟವಾಗುತ್ತದೆ. ಯಾಕೆಂದರೆ ಜಾಹೀರಾತುಗಳು ಮೊದಲೇ ಬುಕ್‌ ಆಗಿರುತ್ತದೆ.

    ಏನೇ ಮಾಡಿದರೂ ಶಿಸ್ತು ಇರಬೇಕು. ಹೀಗಾಗಿ ಯಾರಿಗೂ ಸಮಸ್ಯೆ ಆಗದೇ ಇರಲು ಮತ್ತು ಎಲ್ಲ ಸರಿಯಾದ ಸಮಯಕ್ಕೆ ಮುಕ್ತಾಯವಾಗಲು ಪಂದ್ಯ ಮುಗಿಯಲು ಸಮಯವನ್ನು ನಿಗದಿ ಮಾಡಲಾಗಿದೆ. ಹೆಚ್ಚು ಸಮಯ ತೆಗೆದುಕೊಂಡರೆ ದಂಡ ವಿಧಿಸಲಾಗುತ್ತದೆ. ಈ ಕಾರಣಕ್ಕೆ ಶಿಸ್ತುಬದ್ಧವಾಗಿ ನಡೆದುಕೊಂಡ ತಂಡಕ್ಕೆ ಫೇರ್‌ ಪ್ಲೇ ಅಂಕಗಳನ್ನು ನೀಡಲಾಗುತ್ತದೆ. ಇಬ್ಬರು ಫೀಲ್ಡ್‌ ಅಂಪೈರ್‌ ಮತ್ತು ಮೂರನೇ ಅಂಪೈರ್‌ ಈ ಅಂಕವನ್ನು ತಂಡಗಳಿಗೆ ನೀಡುತ್ತಾರೆ.

     

  • ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    ‌ಕೆಕೆಆರ್‌ ರನ್‌ ಹೊಳೆಯಲ್ಲಿ ಮುಳುಗಿದ ಡೆಲ್ಲಿ – ನೈಟ್‌ರೈಡರ್ಸ್‌ಗೆ 106 ರನ್‌ಗಳ ಭರ್ಜರಿ ಜಯ

    – ಸಿಕ್ಸರ್‌, ಬೌಂಡರಿ ಸುರಿಮಳೆ – ಪಂತ್‌ ಸ್ಪೋಟಕ ಅರ್ಧಶತಕ ವ್ಯರ್ಥ

    ವಿಶಾಖಪಟ್ಟಣಂ: ಸುನೀಲ್‌ ನರೇನ್‌, ರಘುವಂಶಿ, ರಿಂಕು, ರಸೆಲ್‌ ಸ್ಫೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಕೋಲ್ಕತ್ತಾ ನೈಟ್‌ರೈಡರ್ಸ್‌ (Kolkata Knight Riders) ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 106 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಅಲ್ಲದೇ ಅಧಿಕ ರನ್‌ರೇಟ್‌ನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

    ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಕೆಕೆಆರ್‌ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ ಬರೋಬ್ಬರಿ 272 ರನ್‌ ಸಿಡಿಸಿತ್ತು. ಈ ಗುರಿ ಡೆಲ್ಲಿ ಕ್ಯಾಪಿಟಲ್ಸ್‌ 17.2 ಓವರ್‌ಗಳಲ್ಲೇ 166 ರನ್‌ಗಳಿಗೆ ಸರ್ವಪತನ ಕಂಡು ಸೋಲೊಪ್ಪಿಕೊಂಡಿತು.

    273‌ ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್‌ ಆರಂಭದಲ್ಲೇ ಸ್ಫೋಟಕ ಪ್ರದರ್ಶನ ನೀಡಲು ಮುಂದಾಯಿತು. ಆದ್ರೆ ರನ್‌ ಕಲೆಹಾಕುವ ಅವಸರದಲ್ಲಿ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಮಧ್ಯಮ ಕ್ರಮಾಂಕದಲ್ಲಿ ನಾಯಕ ರಿಷಭ್‌ ಪಂತ್‌, ಟ್ರಿಸ್ಟಾನ್‌ ಸ್ಟಬ್ಸ್‌ ಸ್ಫೋಟಕ ಅರ್ಧಶತಕಗಳ ಹೋರಾಟವೂ ವ್ಯರ್ಥವಾಯಿತು.

    ಡೆಲ್ಲಿ ಪರ 220 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ರಿಷಭ್‌ ಪಂತ್‌ (Rishabh Pant) 55 ರನ್‌ (25 ಎಸೆತ, 5 ಸಿಕ್ಸರ್‌, 4 ಬೌಂಡರಿ), ಸ್ಟಬ್ಸ್‌ 54 ರನ್‌ (32 ಎಸೆತ, 4 ಸಿಕ್ಸರ್‌, 4 ಬೌಂಡರಿ), ಡೇವಿಡ್‌ ವಾರ್ನರ್‌ (David Warner) 18 ರನ್‌, ಪೃಥ್ವಿ ಶಾ 10 ರನ್‌ ಗಳಿಸಿದರೆ, ಮಿಚೆಲ್‌ ಮಾರ್ಷ್‌ ಹಾಗೂ ಅಭಿಷೇಕ್‌ ಪೋರೆಲ್‌ ಶೂನ್ಯ ಸುತ್ತಿದರು. ಉಳಿದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರದೇ ಪೆವಿಲಿಯನ್‌ ಪರೇಡ್‌ ನಡೆಸಿದರು. ಅಂತಿಮವಾಗಿ ಡೆಲ್ಲಿ 166 ರನ್‌ಗಳಿಗೆ ಆಲೌಟ್‌ ಆಯಿತು.

    ಡೆಲ್ಲಿ ಕ್ಯಾಪಿಟಲ್ಸ್‌ ಪರ ವೈಭವ್‌ ಅರೋರ ಮತ್ತು ವರುಣ್‌ ಚಕ್ರವರ್ತಿ ತಲಾ 3 ವಿಕೆಟ್‌ ಕಿತ್ತರೆ, ದುಬಾರಿ ಆಟಗಾರ ಮಿಚೆಲ್‌ ಸ್ಟಾರ್ಕ್‌ 2 ವಿಕೆಟ್‌ ಹಾಗೂ ಆಂಡ್ರೆ ರಸೆಲ್‌, ಸುನೀಲ್‌ ನರೇನ್‌ ತಲಾ ಒಂದೊಂದು ವಿಕೆಟ್‌ ಕಿತ್ತರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ಕೆಕೆಆರ್‌ 7 ವಿಕೆಟ್‌ ನಷ್ಟಕ್ಕೆ 20 ಓವರ್‌ಗಳಲ್ಲಿ 272 ರನ್‌ ಬಾರಿಸಿತ್ತು. ಪಿಲ್‌ ಸಾಲ್ಟ್‌ 18 ರನ್‌, ಸುನೀಲ್‌ ನರೇನ್‌ 85 ರನ್‌ (39 ಎಸೆತ, 7 ಸಿಕ್ಸರ್‌, 7 ಬೌಂಡರಿ), ರಘು ವಂಶಿ 54 ರನ್‌ (27 ಎಸೆತ, 3 ಸಿಕ್ಸರ್‌, 5 ಬೌಂಡರಿ), ರಸೆಲ್‌ 41 ರನ್‌ (19 ಎಸೆತ, 3 ಸಿಕ್ಸರ್‌, 4 ಬೌಂಡರಿ), ರಿಂಕು ಸಿಂಗ್‌ 26 ರನ್‌ (8 ಎಸೆತ, 3 ಸಿಕ್ಸರ್‌, 1 ಬೌಂಡರಿ), ಶ್ರೇಯಸ್‌ ಅಯ್ಯರ್‌ 18 ರನ್‌, ವೆಂಕಟೇಶ್‌ ಅಯ್ಯರ್‌ 5 ರನ್‌, ರಮಣದೀಪ್‌ ಸಿಂಗ್‌ 2 ರನ್‌, ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿದರು. ಅಲ್ಲದೇ ತಂಡಕ್ಕೆ ಹೆಚ್ಚುವರಿ 22 ರನ್‌ಗಳು ತಂಡಕ್ಕೆ ಸೇರ್ಪಡೆಯಾಯಿತು.

    ಬಲ ನೀಡಿದ ಶತಕ, ಅರ್ಧಶತಕಗಳ ಜೊತೆಯಾಟ:
    ಆರಂಭದಿಂದಲೇ ಡೆಲ್ಲಿ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದ ಕೆಕೆಆರ್‌ ಬ್ಯಾಟರ್‌ಗಳು ಕೊನೇವರೆಗೂ ಕ್ರೀಸ್‌ನಲ್ಲಿ ಅಬ್ಬರಿಸಿದರು. ಮೊದಲ ವಿಕೆಟ್‌ಗೆ ಪಿಲ್‌ ಸಾಲ್ಟ್‌ – ಸುನೀಲ್‌ ನರೇನ್‌ ಜೋಡಿ 27 ಎಸೆತಗಳಲ್ಲಿ 60 ರನ್‌ ಬಾರಿಸಿದರೆ, 2ನೇ ವಿಕೆಟ್‌ಗೆ ರಘುವಂಶಿ ಮತ್ತು ಸುನೀಲ್‌ ನರೇನ್‌ ಜೋಡಿ 48 ಎಸೆತಗಳಲ್ಲಿ ಬರೋಬ್ಬರಿ 104 ರನ್‌ ಕಲೆಹಾಕಿತು. ಈ ಬೆನ್ನಲ್ಲೇ ರಸೆಲ್‌-ಅಯ್ಯರ್‌ ಜೋಡಿ ಕೇವಲ 24 ಎಸೆತಗಳಲ್ಲಿ ಸ್ಫೋಟಕ 56 ರನ್‌ ಬಾರಿಸಿದರೆ, ರಿಂಕು-ರಸೆಲ್‌ ಜೋಡಿ ಕೇವಲ 11 ಎಸೆತಗಳಲ್ಲಿ 32 ರನ್‌ ಚಚ್ಚಿತು. ಪರಿಣಾಮ ತಂಡದ ಮೊತ್ತ 270 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ಡೆಲ್ಲಿ ಪರ ಅನ್ರಿಚ್ ನಾರ್ಟ್ಜೆ 3 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ 2 ವಿಕೆಟ್‌ ಹಾಗೂ ಖಲೀಲ್‌ ಅಹ್ಮದ್‌ ಮತ್ತು ಮಿಚೆಲ್‌ ಮಾರ್ಷ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಕೆಕೆಆರ್‌ ರನ್‌ ಏರಿದ್ದು ಹೇಗೆ?
    50 ರನ್‌ 23 ಎಸೆತ
    100 ರನ್‌ 45 ಎಸೆತ
    150 ರನ್‌ 66 ಎಸೆತ
    200 ರನ್‌ 92 ಎಸೆತ
    250 ರನ್‌ 111 ಎಸೆತ
    272 ರನ್‌ 120 ಎಸೆತ

  • ಕ್ರಿಕೆಟಿಗ ರಿಷಬ್ ಪಂತ್ ಕುರಿತು ಸ್ಪಷ್ಟನೆ ನೀಡಿದ ನಟಿ ಊರ್ವಶಿ

    ಕ್ರಿಕೆಟಿಗ ರಿಷಬ್ ಪಂತ್ ಕುರಿತು ಸ್ಪಷ್ಟನೆ ನೀಡಿದ ನಟಿ ಊರ್ವಶಿ

    ಟಿ ಊರ್ವಶಿ ರೌಟೇಲಾ (Uravashi Rautela) ಮತ್ತು ರಿಷಬ್ ಪಂತ್  (Rishab Pant) ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ ಎಂದಿದ್ದಾರೆ.

    ಜಾಹೀರಾತುವೊಂದರಲ್ಲಿ ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಊರ್ವಶಿಯನ್ನೂ ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

     

    ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು.

  • ಕ್ರಿಕೆಟಿಗ ರಿಷಬ್ ಪಂತ್ ಹೈಟ್ ಬಗ್ಗೆ ಕಾಮೆಂಟ್ ಮಾಡಿದ ನಟಿ ಊರ್ವಶಿ

    ಕ್ರಿಕೆಟಿಗ ರಿಷಬ್ ಪಂತ್ ಹೈಟ್ ಬಗ್ಗೆ ಕಾಮೆಂಟ್ ಮಾಡಿದ ನಟಿ ಊರ್ವಶಿ

    ಟಿ ಊರ್ವಶಿ ರೌಟೇಲಾ (Uravashi Rautela) ಮತ್ತೆ ರಿಷಬ್ ಪಂತ್  (Rishab Pant) ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದಾರೆ. ಊರ್ವಶಿ ವಿಚಾರವಾಗಿ ಪಂತ್ ಸುಮ್ಮನಿದ್ದರೂ, ಊರ್ವಶಿ ಮಾತ್ರ ಸುಮ್ಮನಿರುವಂತೆ ಕಾಣುತ್ತಿಲ್ಲ.

    ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

     

    ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು.

  • IPL 2024: ಮಹಿ ಬ್ಯಾಟಿಂಗ್‌ ಕಿಚ್ಚಿಗೂ ಬೆಚ್ಚದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 20 ರನ್‌ಗಳ ಜಯ

    IPL 2024: ಮಹಿ ಬ್ಯಾಟಿಂಗ್‌ ಕಿಚ್ಚಿಗೂ ಬೆಚ್ಚದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 20 ರನ್‌ಗಳ ಜಯ

    – ಕೊನೇ ಓವರ್‌ನಲ್ಲಿ  20 ರನ್‌ ಚಚ್ಚಿದ ಮಹಿ
    – ಪುಟಿದೆದ್ದ ಪಂತ್‌ – ವಾರ್ನರ್‌, ಶಾ ಬ್ಯಾಟಿಂಗ್‌ಗೆ ಕಂಗಾಲಾದ ಸಿಎಸ್‌ಕೆ

    ವಿಶಾಖಪಟ್ಟಣಂ: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ನಾಯಕ ಎಂ.ಎಸ್‌ ಧೋನಿ ಅವರ ಮಿಂಚಿನ ಬ್ಯಾಟಿಂಗ್‌ ಹೊರತಾಗಿಯೂ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2024ರ ಐಪಿಎಲ್‌ ಆವೃತ್ತಿಯಲ್ಲಿ ರಿಷಬ್‌ ಪಂತ್‌ ನಾಯಕತ್ವದ ಡೆಲ್ಲಿ ತಂಡ ಗೆಲುವಿನ ಖಾತೆ ತೆರೆದಿದೆ.

    ಇಲ್ಲಿನ ಡಾ.ವೈ.ಎಸ್. ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿತ್ತು. 192 ರನ್‌ಗಳ ಗುರಿ ಪಡೆ ಸಿಎಸ್‌ಕೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 171 ರನ್‌ ಬಾರಿಸಿ ಸೋಲೊಪ್ಪಿಕೊಂಡಿತು.

    ಡೆಲ್ಲಿ ಕ್ಯಾಪಿಟಲ್ಸ್‌, ಸಿಎಸ್‌ಕೆ ನಡುವಿನ ಪಂದ್ಯ ಹಲವು ಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಯಿತು. ಡೆವಿಡ್ ವಾರ್ನರ್ , ಪೃಥ್ವಿ ಶಾ ಹಾಗೂ ರಿಷಬ್ ಪಂತ್ ಅಬ್ಬರ, ಪತಿರಾಣ ಅದ್ಬುತ ಕ್ಯಾಚ್‌, 42ನೇ ವಯಸ್ಸಿನಲ್ಲೂ ಚಿರಯುವಕನಂತೆ ಮಹಿ ಸಿಕ್ಸರ್‌ ಬೌಂಡರಿ ಆಟ ಇವೆಲ್ಲವೂ ಅಭಿಮಾನಿಗಳ ಕಣ್ಣಿಗೆ ಹಬ್ಬವನ್ನುಂಟುಮಾಡಿತು. ಕೊನೇ ಓವರ್‌ನಲ್ಲಿ ಸಿಕ್ಸರ್‌-ಬೌಂಡರಿ ಚಚ್ಚಿದ ಮಹಿ ಒಂದೇ ಓವರ್‌ನಲ್ಲಿ 20 ರನ್‌ ಸಿಡಿಸಿದರು.

    ಆರಂಭದಲ್ಲೇ ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ್ದು ಸಿಎಸ್‌ಕೆ ತಂಡದ ಸೋಲಿಗೆ ಕಾರಣವಾಯಿತು. ಮೊದಲ 2.5 ಓವರ್‌ಗಳಲ್ಲೇ ಕೇವಲ 7 ರನ್‌ಗಳಿಗೆ 2 ಪ್ರಮುಖ ವಿಕೆಟ್‌ ಕಳೆದುಕೊಂಡಿತ್ತು. ಬಳಿಕ ಡೇರಿಲ್‌ ಮಿಚೆಲ್‌, ಅಜಿಂಕ್ಯಾ ರಹಾನೆ ಸ್ಫೋಟಕ ಬ್ಯಾಟಿಂಗ್‌ನಿಂದ ಇನ್ನಿಂಗ್ಸ್‌ ಕಟ್ಟಲು ಪ್ರಯತ್ನಿಸಿದರೂ ವಿಫಲವಾಯಿತು.

    ಸಿಎಸ್‌ಕೆ ಪರ‌ ನಾಯಕ ರುತುರಾಜ್‌ 1 ರನ್‌, ರಚಿನ್‌ ರವಿಂದ್ರ 12 ಎಸೆತಗಳಲ್ಲಿ 2 ರನ್‌, ಅಜಿಂಕ್ಯಾ ರಹಾನ್‌ 45 ರನ್‌, ಡೇರಿಲ್‌ ಮಿಚೆಲ್‌ 34 ರನ್‌, ಶಿವಂ ದುಬೆ 18 ರನ್‌, ರವೀಂದ್ರ ಜಡೇಜಾ 21 ರನ್‌ ಗಳಿಸಿದರೆ, 231 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಎಂ,ಎಸ್‌ ಧೋನಿ 16 ಎಸೆತಗಳಲ್ಲಿ 37 ರನ್‌ ಬಾರಿಸಿದರು.

    ಟಾಸ್‌ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು, ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಡೆಲ್ಲಿ ತಂಡಕ್ಕೆ ಬಿಟ್ಟುಕೊಟ್ಟಿತು. ಆರಂಭದಿಂದಲೇ ಸ್ಫೋಟಕ ಇನ್ನಿಂಗ್ಸ್‌ ಶುರು ಮಾಡಿದ ಡೆಲ್ಲಿ ತಂಡ ಸಿಎಸ್‌ಕೆ ಬೌಲರ್‌ಗಳನ್ನು ಬೆಂಡೆತ್ತಲು ಶುರು ಮಾಡಿದರು. ಮೊದಲ ವಿಕೆಟ್‌ಗೆ ಪೃಥ್ವಿ ಶಾ ಹಾಗೂ ಡೇವಿಡ್‌ ವಾರ್ನರ್‌ ಜೋಡಿ 9.3 ಓವರ್‌ಗಳಲ್ಲಿ 93 ರನ್‌ಗಳ ಜೊತೆಯಾಟ ನೀಡಿತ್ತು. ಇದು ಡೆಲ್ಲಿ ತಂಡದ ಆತ್ಮವಿಶ್ವಾಸ ಹೆಚ್ಚಿಸಿತು. ಸ್ಫೋಟಕ ಬ್ಯಾಟಿಂಗ್‌ ಮೂಲಕ ಅರ್ಧಶತಕ ಸಿಡಿಸಿದ್ದ ವಾರ್ನರ್‌ ಮತ್ತೊಂದು ಸ್ಫೋಟಕ ಹೊಡೆತಕ್ಕೆ ಮುಂದಾಗಿ ಮಥೀಶ ಪತಿರಾಣಗೆ ಕ್ಯಾಚ್ ನೀಡಿದರು.

    ಡೇವಿಡ್ ವಾರ್ನರ್ 35 ಎಸೆತದಲ್ಲಿ 52 ರನ್ ಸಿಡಿಸಿ ಔಟಾದರು. ಇದರ ಬೆನ್ನಲ್ಲೇ ಪೃಥ್ವಿ ಶಾ ವಿಕೆಟ್ ಪತನಗೊಂಡಿತು ಕೇವಲ 27 ಎಸೆತದಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಮೂಲಕ 43 ರನ್ ಸಿಡಿಸಿ ಶಾ ಔಟಾದರು. ಬಳಿಕ ಕಣಕ್ಕಿಳಿದ ನಾಯಕ ರಿಷಬ್ ಪಂತ್ ಬ್ಯಾಟಿಂಗ್ ಸಹ ಡೆಲ್ಲಿ ತಂಡದ ಕೈಹಿಡಿಯಿತು. 14 ದಿನಗಳ ಬಳಿಕ ಐಪಿಎಲ್‌ ಅಂಗಳದಲ್ಲಿ ಆಡುತ್ತಿರುವ ಪಂತ್‌ ಆಕರ್ಷಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಪಂತ್ 31 ಎಸೆತದಲ್ಲಿ 51 ರನ್ (3 ಸಿಕ್ಸರ್‌, 4 ಬೌಂಡರಿ) ಸಿಡಿಸಿದರು.

    ಆರಂಭಿಕರು ಹಾಗೂ ಪಂತ್‌ ವಿಕೆಟ್‌ ಕಳೆದುಕೊಂಡ ಬಳಿಕ ಡೆಲ್ಲಿ ತಂಡದ ರನ್‌ ವೇಗದ ಗತಿಯೂ ಕಡಿಮೆಯಾಯಿತು. ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ಅಬ್ಬರದಿಂದ ಡೆಲ್ಲಿ 191 ರನ್‌ಗಳ ಬೃಹತ್‌ ಮೊತ್ತ ಪೇರಿಸುವಲ್ಲಿ ಯಶಸ್ವಿಯಾಯಿತು.

    ಸಿಎಸ್‌ಕೆ ಪರ ಅದ್ಭುತ ಕ್ಯಾಚ್ ಹಿಡಿದ ಮಥೀಶ ಪತಿರಾಣ 3 ವಿಕೆಟ್ ಕಬಳಿಸಿ ಮಿಂಚಿದರು. ರವೀಂದ್ರ ಜಡೇಜಾ ಹಾಗೂ ಮುಸ್ತಫಿಜೂರ್‌ ತಲಾ ಒಂದೊಂದು ವಿಕೆಟ್‌ಗೆ ತೃಪ್ತಿಪಟ್ಟುಕೊಂಡರು.

  • ಫಲಿಸದ ಪಂತ್‌ ಮ್ಯಾಜಿಕ್‌; ಕರ್ರನ್‌ ಅಮೋಘ ಅರ್ಧಶತಕ – ಪಂಜಾಬ್‌ ಕಿಂಗ್ಸ್‌ಗೆ 4 ವಿಕೆಟ್‌ ಜಯ

    ಫಲಿಸದ ಪಂತ್‌ ಮ್ಯಾಜಿಕ್‌; ಕರ್ರನ್‌ ಅಮೋಘ ಅರ್ಧಶತಕ – ಪಂಜಾಬ್‌ ಕಿಂಗ್ಸ್‌ಗೆ 4 ವಿಕೆಟ್‌ ಜಯ

    – ಲಿಯಾಮ್‌ ಲಿವಿಂಗ್‌ಸ್ಟೋನ್‌ ಬ್ಯಾಟಿಂಗ್‌ ಬಲ

    ಚಂಡೀಗಢ: ಸ್ಯಾಮ್‌ ಕರ್ರನ್‌ (Sam Curran) ಅಮೋಘ ಅರ್ಧಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಪಂಜಾಬ್‌ ಕಿಂಗ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ.

    ಪಂಜಾಬ್‌ ಗೆಲುವಿಗೆ ಕೊನೇ ಓವರ್‌ನಲ್ಲಿ 6 ರನ್‌ಗಳ ಅಗತ್ಯವಿತ್ತು. ಆದ್ರೆ ಬೌಲಿಂಗ್‌ನಲ್ಲಿದ್ದ ಸುಮಿತ್ ಕುಮಾರ್ ಆರಂಭದಲ್ಲೇ 2 ವೈಡ್‌ ಎಸೆದರು. ಮೊದಲ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲವಾದರೂ ಕ್ರೀಸ್‌ನಲ್ಲಿದ್ದ ಲಿಯಾಮ್‌ ಲಿವಿಂಗ್‌ಸ್ಟೋನ್‌ (Liam Livingstone) 2ನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿ ಗೆಲುವು ತಂದುಕೊಟ್ಟರು.

    ಪಂಜಾಬ್‌ನ ಮುಲ್ಲನ್ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಡೆಲ್ಲಿ ಕ್ಯಾಪಿಟಲ್ಸ್‌ಗೆ ಬಿಟ್ಟುಕೊಟ್ಟಿತು.

    ಮೊದಲು ಬ್ಯಾಟಿಂಗ್‌ ಮಾಡಿದ ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತ್ತು. 175 ರನ್‌ ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ (Punjab Kings) 19.2 ಓವರ್‌ಗಳಲ್ಲೇ 6 ವಿಕೆಟ್‌ಗೆ 177 ರನ್‌ ಗಳಿಸಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆರಂಭಿಸಿದ ಕಿಂಗ್ಸ್‌ ಪಂಜಾಬ್‌ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಪವರ್‌ಪ್ಲೇನಲ್ಲೇ ಎರಡು ಪ್ರಮುಖ ವಿಕೆಟ್‌ ಕಳೆದುಕೊಂಡಿತು. ಆದ್ರೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಸ್ಯಾಮ್‌ ಕರ್ರನ್‌ 63 ರನ್‌ ಬಾರಿಸುವ ಮೂಲಕ ತಂಡಕ್ಕೆ ನೆರವಾದರು. ಕರ್ರನ್‌ ಜೊತೆಗೂಡಿದ ಲಿವಿಂಗ್‌ಸ್ಟೋನ್‌ ಸಹ ಇದಕ್ಕೆ ಸಾಥ್‌ ನೀಡಿದರು.

    ಕಿಂಗ್ಸ್‌ ಪಂಜಾಬ್‌ ಪರ ಸ್ಯಾಮ್‌ ಕರ್ರನ್‌ 63 ರನ್‌ (47 ಎಸೆತ, 6 ಬೌಂಡರಿ, 1 ಸಿಕ್ಸರ್‌), ಲಿವಿಂಗ್‌ಸ್ಟೋನ್‌ 38 ರನ್‌, ಶಿಖರ್‌ ಧವನ್‌ 22 ರನ್‌, ಜಾನಿ ಬೈರ್‌ಸ್ಟೋವ್‌ 9 ರನ್‌, ಪ್ರಭ್‌ಸಿಮ್ರನ್‌ ಸಿಂಗ್‌ 26 ರನ್‌, ಜಿತೇಶ್‌ ಶರ್ಮಾ 9 ರನ್‌, ಹರ್ಪ್ರೀರ್‌ ಬ್ರಾರ್‌ 2 ರನ್‌ ಗಳಿಸಿದರು.

    ಡೆಲ್ಲಿ ಪರ ಖಲೀಲ್‌ ಅಹ್ಮದ್‌, ಕುಲ್ದೀಪ್‌ ಯಾದವ್‌ 2 ವಿಕೆಟ್‌ ಕಿತ್ತರೆ, ಇಶಾಂತ್‌ ಶರ್ಮಾ ಒಂದು ವಿಕೆಟ್‌ ಕಿತ್ತರು.

    ಕೊನೇ ಓವರ್‌ನಲ್ಲಿ 25 ರನ್‌ ಚಚ್ಚಿದ ಅಭಿಷೇಕ್‌:
    ಮೊದಲು ಬ್ಯಾಟಿಂಗ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ಸ್ಫೋಟಕ ಆರಂಭದ ಹೊರತಾಗಿಯೂ ಅಗ್ರಕ ಕ್ರಮಾಂಕದ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. 19 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 149 ರನ್‌ ಗಳಿಸಿತ್ತು. ಡೆಲ್ಲಿ ತಂಡ 160 ರನ್‌ ತಲುಪುವುದೂ ಕಷ್ಟವಾಗಿತ್ತು. ಆದ್ರೆ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದ ಪಶ್ಚಿಮ ಬಂಗಾಳದ ಅಭಿಷೇಕ್‌ ಪೋರೆಲ್‌ ಒಂದೇ ಓವರ್‌ನಲ್ಲಿ 25 ರನ್‌ ಚಚ್ಚಿದರು. ಇದರಿಂದ ತಂಡದ ಮೊತ್ತ 170 ರನ್‌ಗಳ ಗಡಿ ದಾಟಿತು.

    ಪಂತ್‌ ಕಂಬ್ಯಾಕ್‌ – ಅಭಿಮಾನಿಗಳಿಂದ ವೆಲ್‌ಕಮ್‌:
    ಕಾರು ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಭ್‌ ಪಂತ್‌ 14 ತಿಂಗಳ ಬಳಿಕ ಮತ್ತೆ ಕ್ರೀಸ್‌ಗಿಳಿದು ಬ್ಯಾಟಿಂಗ್‌ ಮಾಡಿದರು. ರಿಷಭ್‌ ಕ್ರೀಸ್‌ಗೆ ಬರುತ್ತಿದ್ದಂತೆ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆಯೊಂದಿಗೆ ಸ್ವಾಗತಿಸಿದರು.

    ಡೆಲ್ಲಿ ಪರ ಡೇವಿಡ್‌ ವಾರ್ನರ್‌ 29 ರನ್‌, ಮಿಚೆಲ್‌ ಮಾರ್ಷ್‌ 20 ರನ್‌, ಶಾಯಿ ಹೋಪ್‌ 33 ರನ್‌, ರಿಷಭ್‌ ಪಂತ್‌ 18 ರನ್‌, ರಿಕಿ ಭುಯಿ 3 ರನ್‌, ಟ್ರಿಸ್ಟಾನ್ ಸ್ಟಬ್ಸ್ 5 ರನ್‌, ಅಕ್ಷರ್‌ ಪಟೇಲ್‌ 21 ರನ್‌, ಸುಮಿತ್‌ ಕುಮಾರ್‌ 2 ರನ್‌, ಕುಲ್ದೀಪ್‌ 1 ರನ್‌ ಗಳಿಸಿದ್ರೆ, ಅಭಿಷೇಕ್‌ 10 ಎಸೆತಗಳಲ್ಲಿ 32 ರನ್‌ ಬಾರಿಸಿ ಕ್ರೀಸ್‌ನಲ್ಲಿ ಉಳಿದರು.

    ಪಂಜಾಬ್‌ ಪರ ಅರ್ಷ್‌ದೀಪ್‌ ಸಿಂಗ್‌, ಹರ್ಷಲ್‌ ಪಟೇಲ್‌ ತಲಾ 2 ವಿಕೆಟ್‌ ಕಿತ್ತರೆ, ಕಗಿಸೋ ರಬಾಡ, ಹರ್ಪ್ರೀತ್‌ ಬ್ರಾರ್‌, ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • IPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್‌ ಪಂತ್ ನಾಯಕ

    IPL 2024: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ರಿಷಭ್‌ ಪಂತ್ ನಾಯಕ

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2024) ಮುಂಬರುವ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ನ ನಾಯಕರಾಗಿ ರಿಷಬ್ ಪಂತ್ (Rishabh Pant) ಅವರ ಹೆಸರನ್ನು ಮಂಗಳವಾರ ಫ್ರಾಂಚೈಸಿ ಘೋಷಿಸಲಾಗಿದೆ. ವಿಕೆಟ್‌ಕೀಪರ್-ಬ್ಯಾಟರ್ 14 ತಿಂಗಳ ನಂತರ ವೃತ್ತಿಪರ ಕ್ರಿಕೆಟ್‌ಗೆ ಮರಳಿದ್ದಾರೆ.

    ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಅಧ್ಯಕ್ಷ ಮತ್ತು ಸಹ-ಮಾಲೀಕ ಪಾರ್ಥ್ ಜಿಂದಾಲ್, ‘ರಿಷಭ್ ಅವರನ್ನು ಮತ್ತೆ ನಮ್ಮ ನಾಯಕನಾಗಿ ಸ್ವಾಗತಿಸಲು ನಾವು ಸಂತೋಷ ಪಡುತ್ತೇವೆ. ಉತ್ಸಾಹ, ಚೈತನ್ಯದೊಂದಿಗೆ ನಾವು ಹೊಸ ಋತುವಿಗಾಗಿ ಎದುರು ನೋಡುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಆರ್‌ಸಿಬಿಯ ಹೊಸ ಅಧ್ಯಾಯ – ಕನ್ನಡದಲ್ಲೇ ಕೊಹ್ಲಿ ಮಾತು

    ತಂಡದ ಸಹ-ಮಾಲೀಕ ಕಿರಣ್ ಕುಮಾರ್ ಗ್ರಾಂಧಿ, ‘ರಿಷಭ್ ತಮ್ಮ ಜೀವನದ ಅತ್ಯಂತ ಸವಾಲಿನ ಹಂತಗಳಲ್ಲಿ ನಂಬಲಾಗದಷ್ಟು ಶ್ರಮಿಸಿದ್ದಾರೆ. ಅವರು ಹೊಸ ಋತುವನ್ನು ಪ್ರಾರಂಭಿಸಿದಾಗ ಅವರ ತಂಡದ ಸಹ ಆಟಗಾರರು ಅದರಿಂದ ಅಪಾರವಾದ ಸ್ಫೂರ್ತಿ ಪಡೆದುಕೊಳ್ಳಲಿದ್ದಾರೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ. ನಾಯಕ ರಿಷಭ್ ಮತ್ತು ತಂಡಕ್ಕೆ ನಮ್ಮ ಶುಭ ಹಾರೈಕೆಗಳಿವೆ ಎಂದಿದ್ದಾರೆ.

    ಮಾರ್ಚ್ 23 ರಂದು ಚಂಡೀಗಢದಲ್ಲಿ ನಡೆಯಲಿರುವ IPL 2024 ರ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪಂಜಾಬ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಇದನ್ನೂ ಓದಿ: RCB Unbox: ‘ಬೆಂಗಳೂರ್‌’ ಅಲ್ಲ ಇನ್ಮುಂದೆ ಹೇಳಿ ‘ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು’

  • IPL 2024: ರಿಷಭ್ ಪಂತ್ ಸಂಪೂರ್ಣ ಫಿಟ್‌ – ಐಎಪಿಎಲ್‌ಗೆ ಬಿಸಿಸಿಐನಿಂದ ಗ್ರೀನ್‌ ಸಿಗ್ನಲ್‌

    IPL 2024: ರಿಷಭ್ ಪಂತ್ ಸಂಪೂರ್ಣ ಫಿಟ್‌ – ಐಎಪಿಎಲ್‌ಗೆ ಬಿಸಿಸಿಐನಿಂದ ಗ್ರೀನ್‌ ಸಿಗ್ನಲ್‌

    – ಕನ್ನಡಿಗ ಪ್ರಸಿದ್ಧ್‌ ಕೃಷ್ಣ, ಶಮಿ ಐಪಿಎಲ್‌ನಿಂದ ಔಟ್‌

    ಮುಂಬೈ: ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕ್ರಿಕೆಟಿಗ ರಿಷಭ್ ಪಂತ್‌ಗೆ (Rishabh Pant) ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಿದ ಬೆನ್ನಲ್ಲೇ ಐಪಿಎಲ್‌ನಲ್ಲಿ ಪಾಲ್ಗೊಳ್ಳುವುದಕ್ಕೆ ಬಿಸಿಸಿಐ (BCCI) ಗ್ರೀನ್‌ ಸಿಗ್ನಲ್‌ ನೀಡಿದೆ. ರಿಷಭ್‌ ಸಂಪೂರ್ಣ ಫಿಟ್‌ ಆಗಿದ್ದು, ಅವರು ಡೆಲ್ಲಿ ಕ್ಯಾಪಿಟಲ್ಸ್‌ ತಂಡ ಸೇರಬಹುದಾಗಿದೆ ಎಂದು ಅನುಮತಿ ನೀಡಿದೆ. ಆದ್ರೆ ಕನ್ನಡಿಗ ಪ್ರಸಿದ್ಧ್‌ ಕೃಷ್ಣ ಮತ್ತು ವೇಗಿ ಮೊಹಮ್ಮದ್‌ ಶಮಿ ಅವರು ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದೆ.

    2022ರ ಡಿಸೆಂಬರ್ 30ರಂದು ತಡರಾತ್ರಿ ಪಂತ್‌ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಪಂತ್‌ ಕಳೆದ 2-3 ತಿಂಗಳ ಹಿಂದೆ ಮತ್ತೆ ಬ್ಯಾಟ್‌ ಹಿಡಿಯಲು ಪ್ರಾರಂಭಿಸಿದ್ದರು. ನಂತರ ಅವರು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿ ಪುನರ್ವಸತಿ ಕೇಂದ್ರದಲ್ಲಿ ಅಭ್ಯಾಸ ನಡೆಸುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆಯಷ್ಟೇ ಎನ್‌ಸಿಎ ಪಂತ್‌ ಅವರಿಗೆ ಫಿಟ್‌ನೆಸ್‌ ಕ್ಲೆಯರೆನ್ಸ್‌ ನೀಡಿದ್ದು, ಈ ಬೆನ್ನಲ್ಲೇ ಬಿಸಿಸಿಐ ಸಹ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ (Delhi Capitals) ಪರವಾಗಿ ಪ್ರತಿನಿಧಿಸಲು ಗ್ರೀನ್‌ ಸಿಗ್ನಲ್‌ ಕೊಟ್ಟಿದೆ.

    ರಿಷಬ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ (Car Accident) ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

    ಬಿಸಿಸಿಐ ಪ್ರಕಟಣೆಯಲ್ಲಿ ಏನಿದೆ?
    ರಿಷಭ್ ಪಂತ್ ಮುಂದಿನ 2024ರ ಟಾಟಾ ಐಪಿಎಲ್‌ 17ನೇ ಆವೃತ್ತಿಯಲ್ಲಿ ವಿಕೆಟ್‌ ಕೀಪರ್‌, ಬ್ಯಾಟರ್‌ ಆಗಿ ಆಡಲು ಫಿಟ್‌ ಆಗಿದಾರೆ. ಇದನ್ನೂ ಓದಿ: ಮಾ.22 ರಿಂದ IPL ಶುರು; ಉದ್ಘಾಟನಾ ಪಂದ್ಯದಲ್ಲೇ ಚೆನ್ನೈ-ಆರ್‌ಸಿಬಿ ನಡುವೆ ಹೈವೋಲ್ಟೇಜ್‌ ಕದನ!

    ಪ್ರಸಿದ್ಧ್ ಕೃಷ್ಣ:
    ಕನ್ನಡಿಗ ಪ್ರಸಿದ್ಧ್‌ ಕೃಷ್ಣ (Prasidh Krishna) ಕಳೆದ ಫೆಬ್ರವರಿ 23 ರಂದು ಪ್ರಾಕ್ಸಿಮಲ್ ಕ್ವಾಡ್ರೈಸ್ಪ್ ಸ್ನಾಯುರಜ್ಜು (ಎಡಗಾಲಿನ ಮಂಡಿಮೂಳೆ) ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಅವರನ್ನು ಬಿಸಿಸಿಐ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸುತ್ತಿದೆ. ಶೀಘ್ರದಲ್ಲೇ ಅವರು ಎನ್‌ಸಿಎನಲ್ಲಿ ಅಭ್ಯಾಸ ಆರಂಭಿಸಲಿದ್ದಾರೆ. ಆದ್ರೆ ಸದ್ಯಕ್ಕೆ 2024 ಐಪಿಎಲ್‌ ಟೂರ್ನಿಯಲ್ಲಿ ಭಾಗವಹಿಸಲು ಆಗುವುದಿಲ್ಲ.

    ಮೊಹಮ್ಮದ್ ಶಮಿ:
    2023ರ ಏಕದಿನ ವಿಶ್ವಕಪ್‌ ಟೂರ್ನಿ ವೇಳೆ ಎಡಪಾದದ ಗಾಯಕ್ಕೆ ತುತ್ತಾಗಿದ್ದ ಶಮಿ (Mohammed Shami) ಕಳೆದ ಫೆಬ್ರವರಿ 26ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಸದ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಸದ್ಯ ಬಿಸಿಸಿಐ ವೈದ್ಯಕೀಯ ತಂಡ ಅವರನ್ನ ಮೇಲ್ವಿಚಾರಣೆ ನಡೆಸುತ್ತಿದ್ದು, ಅವರೂ 2024ರ ಐಪಿಎಲ್‌ ಆವೃತ್ತಿಯಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಐಪಿಎಲ್‍ನಿಂದ ಶಮಿ ಔಟ್ – ಟಿ20ಗೆ ಕಣಕ್ಕಿಳಿಸಲು ಬಿಸಿಸಿಐ ಚಿಂತನೆ

    ಟೈಟಾನ್ಸ್‌ಗೆ ಆಘಾತ:
    ಗುಜರಾತ್‌ ಟೈಟಾನ್ಸ್‌ (Gujarat Titans) ತಂಡದ ಬೌಲಿಂಗ್‌ ಸಾರಥಿ ಮೊಹಮ್ಮದ್‌ ಶಮಿ (Mohammed Shami) 2024ರ ಐಪಿಎಲ್‌ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ. ಈಗಾಗಲೇ ಹಾರ್ದಿಕ್‌ ಪಾಂಡ್ಯ ಅವರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದ ಗುಜರಾತ್‌ ತಂಡಕ್ಕೆ ಮೊಹಮ್ಮದ್‌ ಶಮಿ ಅವರ ಗೈರು ಮತ್ತಷ್ಟು ಆಘಾತ ನೀಡಿದೆ.

  • ಐಪಿಎಲ್‍ಗೆ ರಿಷಬ್ ಪಂತ್ ಫಿಟ್ – ಡೆಲ್ಲಿ ಕ್ಯಾಪಿಟಲ್ಸ್ ಅಭಿಮಾನಿಗಳಲ್ಲಿ ಸಂಭ್ರಮ

    ಐಪಿಎಲ್‍ಗೆ ರಿಷಬ್ ಪಂತ್ ಫಿಟ್ – ಡೆಲ್ಲಿ ಕ್ಯಾಪಿಟಲ್ಸ್ ಅಭಿಮಾನಿಗಳಲ್ಲಿ ಸಂಭ್ರಮ

    ನವದೆಹಲಿ: ಟೀಂ ಇಂಡಿಯಾದ (Team India) ವಿಕೆಟ್ ಕೀಪರ್ ರಿಷಬ್ ಪಂತ್‍ಗೆ (Rishabh Pant) 2024ರ ಐಪಿಎಲ್‍ಗೂ ಮುನ್ನವೇ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (National Cricket Academy) ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ನೀಡಿದೆ. ಈ ಮೂಲಕ ಐಪಿಎಲ್ 2024ರಲ್ಲಿ (IPL 2024) ಆಡಲು ಅವರು ಅರ್ಹರಾಗಿದ್ದಾರೆ.

    ಈ ವರ್ಷದ ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals), ಈ ಬಾರಿಯ ಐಪಿಎಲ್‍ನಲ್ಲಿ ಆಡಲಿದ್ದಾರೆ ಎಂದು ಹೇಳಿಕೊಂಡಿತ್ತು. ಬಳಿಕ ಪಂತ್ ಅವರ ಫಿಟ್‍ನೆಸ್ ಕ್ಲಿಯರೆನ್ಸ್ ಸಿಗದ ಕಾರಣ ಐಪಿಎಲ್ 2024ರ ತಂಡದಲ್ಲಿ ಪಂತ್ ಅವರನ್ನು ಹೆಸರಿಸಲಾಗಿರಲಿಲ್ಲ. ಇದೀಗ ಪಂತ್ ಅವರ ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ಸಿಕ್ಕಿದ್ದು ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬ ಪ್ರಶ್ನೆ ಅವರ ಅಭಿಮಾನಿಗಳಲ್ಲಿ ಮೂಡಿದೆ. ಇದನ್ನೂ ಓದಿ: ಐತಿಹಾಸಿಕ ಸಾಧನೆ ಬೆನ್ನಲ್ಲೇ ಬಿಸಿಸಿಐನಿಂದ ಗುಡ್‌ನ್ಯೂಸ್‌ – ವಾರ್ಷಿಕ ಸಂಬಳ ಹೊರತುಪಡಿಸಿ ವಿಶೇಷ ವೇತನ ಘೋಷಣೆ

    ಕಳೆದ ವರ್ಷ ಜ.1ರ ನಸುಕಿನ ವೇಳೆಯಲ್ಲಿ ಭೀಕರ ಕಾರು ಅಪಘಾತದಲ್ಲಿ ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‍ನೆಸ್ ಕ್ಲಿಯರೆನ್ಸ್ ಸರ್ಟಿಫಿಕೆಟ್ ಪಡೆದುಕೊಂಡಿದ್ದಾರೆ.

    ಪಂತ್ 2023 ರಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ವಂಚಿತರಾದರು. ಅವರ ಕಠಿಣ ಪರಿಶ್ರಮದಿಂದ ಕ್ರಿಕೆಟ್‍ಗೆ ಮರಳಲು ಇದೀಗ ಸಮರ್ಥರಾಗಿದ್ದಾರೆ. ಇದನ್ನೂ ಓದಿ: ಕೊನೇ 30 ಎಸೆತಗಳಲ್ಲಿ 72 ರನ್‌; ಹರ್ಮನ್‌ಪ್ರೀತ್‌ ಬೆಂಕಿ ಬ್ಯಾಟಿಂಗ್‌ – ಮುಂಬೈಗೆ 7 ವಿಕೆಟ್‌ಗಳ ಜಯ

  • IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

    IPL 2024 Retention: ‌ಪಂತ್ ಮತ್ತೆ ಅಖಾಡಕ್ಕೆ – ಕನ್ನಡಿಗನನ್ನು ಕೈಬಿಟ್ಟು ಮಿಚೆಲ್‌ ಮಾರ್ಷ್‌ ಉಳಿಸಿಕೊಂಡ ಕ್ಯಾಪಿಟಲ್ಸ್‌

    ಮುಂಬೈ: ಡಿಸೆಂಬರ್‌ನಲ್ಲಿ ನಡೆಯಲಿರುವ ಐಪಿಎಲ್‌ ಮಿನಿ ಹರಾಜಿಗೂ (IPL 2024 Auction) ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಬರೋಬ್ಬರಿ 11 ಆಟಗಾರರನ್ನ ಬಿಡುಗಡೆ ಮಾಡಿದ್ದು, 16 ಆಟಗಾರರನ್ನ ಉಳಿಸಿಕೊಂಡಿದೆ.

    ವಿಶೇಷವೆಂದರೆ ಕಳೆದ ಡಿಸೆಂಬರ್‌ 30 ರಂದು ಕಾರು ಅಪಘಾತದಲ್ಲಿ ಗಾಯಗೊಂಡು 2022ರ ಐಪಿಎಲ್‌ನಿಂದ (IPL 2022) ಹೊರಗುಳಿದಿದ್ದ ರಿಷಬ್‌ ಪಂತ್‌ 2024ರ ಐಪಿಎಲ್‌ನಲ್ಲಿ (IPL 2024) ಮತ್ತೆ ಪ್ಯಾಡ್‌ ಕಟ್ಟಲಿದ್ದಾರೆ. ರಿಷಬ್‌ ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡದ ಕ್ಯಾಂಪನ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿದ್ದು, 17ನೇ ಆವೃತ್ತಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

    ಇನ್ನೂ ಕನ್ನಡಿಗ ಮನಿಷ್‌ ಪಾಂಡೆ ಅವರನ್ನು ತಂಡದಿಂದ ಬಿಡುಗಡೆ ಮಾಡಿರುವ ಡೆಲ್ಲಿ ಕ್ಯಾಪಿಟಲ್ಸ್‌ ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ವಿವಾದಕ್ಕೆ ಗುರಿಯಾಗಿದ್ದ ಮಿಚೆಲ್‌ ಮಾರ್ಷ್‌ ಅವರನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇದನ್ನೂ ಓದಿ: IPL 2024 Retention: ಮುಂಬೈ ಫ್ಯಾನ್ಸ್‌ಗೆ ಬಿಗ್ ಶಾಕ್ – ಟೈಟಾನ್ಸ್‌ನಲ್ಲೇ ಉಳಿದ ಪಾಂಡ್ಯ

    2023ರ ಐಪಿಎಲ್‌ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಡೆಲ್ಲಿ ಕ್ಯಾಪಿಟಲ್ಸ್‌ 14ರಲ್ಲಿ ಕೇವಲ 5 ಪಂದ್ಯಗಳಲ್ಲಿ ಮಾತ್ರವೇ ಗೆಲುವು ಸಾಧಿಸಿತ್ತು. -0.808 ರನ್‌ರೇಟ್‌ ಹಾಗೂ 10 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಉಳಿದುಕೊಂಡಿತ್ತು.

    ಡೆಲ್ಲಿ ಕ್ಯಾಪಿಟಲ್ಸ್ ಉಳಿಸಿಕೊಂಡ ಆಟಗಾರರು:
    ರಿಷಬ್ ಪಂತ್, ಡೇವಿಡ್ ವಾರ್ನರ್, ಪೃಥ್ವಿ ಶಾ, ಅಕ್ಷರ್ ಪಟೇಲ್, ಮಿಚೆಲ್ ಮಾರ್ಷ್, ಅಭಿಷೇಕ್‌ ಪೊರೆಲ್‌, ಅಕ್ಷರ್‌ ಪಟೇಲ್‌, ಲಲಿತ್‌ ಯಾದವ್‌, ಯಶ್‌ ಧುಲ್‌, ಪ್ರವೀಣ್ ದುಬೆ, ವಿಕ್ಕಿ, ಅನ್ರಿಚ್ ನಾರ್ಟ್ಜೆ, ಕುಲ್ದೀಪ್‌ ಯಾದವ್‌, ಲುಂಗಿ ಎನ್‌ಗಿಡಿ, ಖಲೀಲ್ ಅಹಮದ್, ಇಶಾತ್‌ ಶರ್ಮಾ, ಮುಕೇಶ್‌ ಕುಮಾರ್‌. ಇದನ್ನೂ ಓದಿ: IPL 2024 Auction: ಹ್ಯಾಜಲ್‌ವುಡ್, ಹಸರಂಗ ಸೇರಿ 11 ಆಟಗಾರರಿಗೆ RCB ಕೊಕ್‌

    ಡೆಲ್ಲಿ ಕ್ಯಾಪಿಟಲ್ಸ್‌ ಬಿಡುಗಡೆ ಮಾಡಿದ ಆಟಗಾರರು:
    ರಿಲೀ ರೊಸ್ಸೌ, ಚೇತನ್ ಸಕರಿಯಾ, ರೋವ್ಮನ್ ಪೊವೆಲ್, ಮನೀಷ್ ಪಾಂಡೆ, ಫಿಲ್ ಸಾಲ್ಟ್, ಮುಸ್ತಾಫಿಜುರ್ ರೆಹಮಾನ್, ಕಮಲೇಶ್ ನಾಗರಕೋಟಿ, ರಿಪಾಲ್ ಪಟೇಲ್, ಸರ್ಫರಾಜ್ ಖಾನ್, ಅಮನ್ ಖಾನ್, ಪ್ರಿಯಮ್ ಗಾರ್ಗ್.

    ಪಂತ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ಹೊಸ ವರ್ಷಕ್ಕೆ ತನ್ನ ತಾಯಿಗೆ ಸರ್ಪ್ರೈಸ್ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿತ್ತು. ಇದರಿಂದ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.