Tag: Rishabh Pant

  • ರಕ್ತದ ಮಡುವಿನಲ್ಲಿ ಕಾರಿನ ಗಾಜು ಹೊಡೆದು ಹೊರಬಂದ ಪಂತ್ – ಕಾರಿನಲ್ಲಿದ್ದ ಹಣ ದೋಚಿದ ಕಳ್ಳರು

    ರಕ್ತದ ಮಡುವಿನಲ್ಲಿ ಕಾರಿನ ಗಾಜು ಹೊಡೆದು ಹೊರಬಂದ ಪಂತ್ – ಕಾರಿನಲ್ಲಿದ್ದ ಹಣ ದೋಚಿದ ಕಳ್ಳರು

    ಡೆಹ್ರಾಡೂನ್: ಟೀಂ ಇಂಡಿಯಾದ (Team India) ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಸಂಚರಿಸುತ್ತಿದ್ದ ಕಾರು ಅಪಘಾತಗೊಂಡು ರಕ್ತದ ಮಡುವಿನಲ್ಲಿ ಪಂತ್ ಕಾರಿನ ಗಾಜು ಹೊಡೆದು ಹೊರಬಂದಿದ್ದಾರೆ. ಈ ವೇಳೆ ಅಲ್ಲಿದ್ದ ಸ್ಥಳೀಯ ಕೆಲ ವ್ಯಕ್ತಿಗಳು ಪಂತ್ ಕಾರಿನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಬಗ್ಗೆ ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ.

    ಉತ್ತರಾಖಂಡದಿಂದ (Uttarakhand) ದೆಹಲಿಗೆ ಪಂತ್‌ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‍ಪುರ ಝಾಲ್‍ನ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಪಂತ್ ತಲೆಯಲ್ಲಿ ರಕ್ತ ಸುರಿಯುತ್ತಿದ್ದರೆ, ಬೆನ್ನಿನಲ್ಲಿ ಬೆಂಕಿಯಿಂದ ಸುಟ್ಟ ಗಾಯಗಳಾಗಿದೆ. ಇದನ್ನೂ ಓದಿ: ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    ಇತ್ತ ಪಂತ್ ನೋವಿನಿಂದ ನರಳುತ್ತಿದ್ದರೆ, ಅತ್ತ ಕಿಡಿಗೇಡಿಗಳು ಪಂತ್ ಕಾರಿನಲ್ಲಿದ್ದ ಹಣವನ್ನು ದೋಚಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕಾರು ಗುದ್ದಿದ ರಭಸಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ರಿಷಭ್ ಪಂತ್ ತನ್ನ ತಾಯಿಗೆ ಸರ್ಪ್ರೈಸ್‌ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ (Mercedes-AMG GLE43 Coupe) ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿದ್ದೆಗೆ ಜಾರಿದಂತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕೀಡಾಗಿದೆ. ಬಳಿಕ ಕಾರಿನ ಕಿಟಕಿ ಗಾಜನ್ನು ಒಡೆದು ಪಂತ್ ಹೊರಗೆ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ

    https://twitter.com/_sillysoul/status/1608712913405235201

    ಕೂಡಲೇ ಪಂತ್‍ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಬೆನ್ನು ಹಾಗೂ ಕಾಲಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿದ್ದು ಸದ್ಯ ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ವೈದ್ಯರು ಮಾಹಿತಿ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    ಡೆಹ್ರಾಡೂನ್: ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ರಿಷಭ್ ಪಂತ್ (Rishabh Pant) ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಪಂತ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತನ್ನ ತಾಯಿಯೊಂದಿಗೆ ಹೊಸವರ್ಷ ಆಚರಿಸಲು ತೆರಳುತ್ತಿದ್ದ ವೇಳೆಯೇ ದುರಂತ ಸಂಭವಿಸಿದೆ.

    ಅತೀ ವೇಗವೇ ಅಪಘಾತಕ್ಕೆ ಕಾರಣ: ಉತ್ತರಾಖಂಡದಿಂದ (Uttarakhand) ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ (Car Accident) ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಆದ್ರೆ ರಾಕೆಟ್ ವೇಗದಲ್ಲಿ ಕಾರು ಚಲಿಸುತ್ತಿದ್ದದ್ದೇ ರಿಷಭ್ ಪಂತ್‌ಗೆ ಮುಳುವಾಯ್ತು ಎಂದು ಹೇಳಲಾಗ್ತಿದೆ. ಅಪಘಾತದ ಸಂದರ್ಭದಲ್ಲಿ ರಿಷಭ್ ಚಲಿಸುತ್ತಿದ್ದ `ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ’ (Mercedes-AMG GLE43 Coupe) ಕಾರು ರಾಕೆಟ್ ವೇಗದಲ್ಲಿತ್ತು ಎನ್ನಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ರಿಷಭ್ ಪಂತ್ ತನ್ನ ತಾಯಿಗೆ ಸರ್ಪ್ರೈಸ್‌ ಕೊಡಬೇಕು, ತಾಯಿಯೊಂದಿಗೆ ಹೊಸ ವರ್ಷದ ಸಂಭ್ರಮ ಕಳೆಯಬೇಕು ಎಂದು ಮರ್ಸಿಡೀಸ್ ಎಎಂಜಿ ಜಿಎಲ್‌ಇ-43 ಕೂಪೆ (Mercedes-AMG GLE43 Coupe) ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ನಿದ್ರೆ ಮಾಡುವಂತಾಗಿದೆ. ಇದರಿಂದ ನಿಯಂತ್ರಣ ಕಳೆದುಕೊಂಡ ಕಾರು ಅಪಘಾತಕ್ಕಿಡಾಗಿದೆ. ಬಳಿಕ ಕಾರಿನ ಕಿಟಕಿ ಗಾಜನ್ನು ಒಡೆದು ಪಂತ್ ಹೊರಗೆ ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಸದ್ಯ ಅವರನ್ನು ಡೆಹ್ರಾಡೂನ್ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆ, ಬೆನ್ನು ಹಾಗೂ ಕಾಲಿನ ಭಾಗಕ್ಕೆ ಗಾಯಗಳಾಗಿದ್ದು, ಪ್ರಜ್ಞೆ ಕಳೆದುಕೊಂಡಿದ್ದಾರೆ. ಗಂಭೀರ ಸ್ಥಿತಿ ಎದುರಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ

    ಅಭಿಮಾನಿಗಳ ಆಕ್ರಂದನ: ಕಾರು ಅಪಘಾತಕ್ಕೀಡಾಗಿರುವ ರಿಷಭ್ ಪಂತ್ ಶೀಘ್ರವೇ ಗುಣಮುಖರಾಗುವಂತೆ ಅಭಿಮಾನಿಗಳು ಅಲವತ್ತುಕೊಂಡಿದ್ದಾರೆ. ಜಾಲತಾಣದಲ್ಲಿ ಪಂತ್ ಅವರ ಭಾವಚಿತ್ರವನ್ನು ಹಂಚಿಕೊಂಡಿದ್ದು, ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಫುಟ್ಬಾಲ್ ಲೆಜೆಂಡ್ ಪೀಲೆ ಇನ್ನಿಲ್ಲ

    Live Tv
    [brid partner=56869869 player=32851 video=960834 autoplay=true]

  • ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ

    ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ

    ಡೆಹ್ರಾಡೂನ್: ಟೀಂ ಇಂಡಿಯಾ (Team India) ಆಟಗಾರ ರಿಷಭ್ ಪಂತ್ (Rishabh Pant) ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು (Car Accident) ಪಂತ್ ಸ್ಥಿತಿ ಗಂಭೀರವಾಗಿದೆ.

    ದೆಹಲಿಯಿಂದ ಉತ್ತರಾಖಂಡದಲ್ಲಿರುವ (Uttarakhand) ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದ ವೇಳೆ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ಲಾಸ್ಟಿಕ್ ಸರ್ಜರಿಯ (Plastic Surgery) ಅವಶ್ಯಕತೆ ಇರುವುದಾಗಿ ವರದಿಯಾಗಿದೆ.

    ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಬೆನ್ನು, ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಸಕ್ಷಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಸುಶೀಲ್ ನಗರ್ ತಿಳಿಸಿದ್ದಾರೆ. ಇದನ್ನೂ ಓದಿ: ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ

    ಪ್ರತ್ಯಕ್ಷದರ್ಶಿಗಳ ಪ್ರಕಾರ, ರಿಷಭ್ ಪ್ರಯಾಣಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿದೆ. ನಂತರ ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಇದನ್ನೂ ಓದಿ: ಆರ್‌ಎಸ್‍ಎಸ್ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತಿದೆ: ರವೀಂದ್ರ ಜಡೇಜಾ

    ಸತತ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಿಷಭ್ ಬಾಂಗ್ಲಾದೇಶದ (Bangladesh) ಟೆಸ್ಟ್ ಸರಣಿಯಲ್ಲಿ ಸಮಾಧಾನಕರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾಂಗ್ಲಾದೇಶಕ್ಕೆ ರಿಷಭ್ ಪಂಚ್ – ಭಾರತಕ್ಕೆ 80 ರನ್‌ಗಳ ಅಲ್ಪ ಮುನ್ನಡೆ

    ಬಾಂಗ್ಲಾದೇಶಕ್ಕೆ ರಿಷಭ್ ಪಂಚ್ – ಭಾರತಕ್ಕೆ 80 ರನ್‌ಗಳ ಅಲ್ಪ ಮುನ್ನಡೆ

    ಢಾಕಾ: ರಿಷಭ್ ಪಂತ್ (Rishabh Pant), ಶ್ರೇಯಸ್ ಅಯ್ಯರ್ (Shreyas Iyer) ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ 2ನೇ ಟೆಸ್ಟ್‌ನ ಎರಡನೇ ದಿನದ ಅಂತ್ಯಕ್ಕೆ 80 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

    ಬಾಂಗ್ಲಾದೇಶದ (Bangladesh) ವಿರುದ್ಧ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಜಯ ಸಾಧಿಸಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಭಾರತ (Team India), 2ನೇ ಟೆಸ್ಟ್‌ನಲ್ಲೂ ಬ್ಯಾಟಿಂಗ್, ಬೌಲಿಂಗ್ ಅಬ್ಬರ ಮುಂದುವರಿಸಿದೆ. 2ನೇ ದಿನದಾಟದಲ್ಲಿ 80 ರನ್‌ಗಳ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: 227 ರನ್‍ಗೆ ಬಾಂಗ್ಲಾ ಆಲೌಟ್ – ಡೆಬ್ಯೂ ಪಂದ್ಯವಾಡಿ 12 ವರ್ಷಗಳ ಬಳಿಕ ಮೊದಲ ವಿಕೆಟ್ ಪಡೆದ ಉನಾದ್ಕಟ್

    2ನೇ ಟೆಸ್ಟ್ ಮೊದಲ ದಿನ 73.5 ಓವರ್‌ಗಳಲ್ಲಿ ಭಾರತ 227 ರನ್‌ಗಳಿಗೆ ಬಾಂಗ್ಲಾದೇಶ (Bangladesh) ತಂಡವನ್ನು ಕಟ್ಟಿಹಾಕಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ ಭಾರತ 8 ಓವರ್‌ಗಳಲ್ಲಿ 19 ರನ್ ಬಾರಿಸಿ ಯಾವುದೇ ವಿಕೆಟ್ ನಷ್ಟವಿಲ್ಲದೇ 208 ರನ್‌ಗಳ ಹಿನ್ನಡೆ ಕಾಯ್ದುಕೊಂಡಿತ್ತು.

    ಇಂದು ಮತ್ತೆ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ ಎರಡನೇ ದಿನದ ಅಂತ್ಯಕ್ಕೆ 56.3 ಓವರ್‌ಗಳಲ್ಲಿ 314 ರನ್ ಗಳಿಸಿತು. ನಂತರ ಕ್ರೀಸ್‌ಗಿಳಿದ ಬಾಂಗ್ಲಾದೇಶ 6 ಓವರ್‌ಗಳಲ್ಲಿ 7 ರನ್‌ಗಳಿಸಿ, 8 ರನ್‌ಗಳ ಹಿನ್ನಡೆ ಕಾಯ್ದುಕೊಂಡಿದೆ. ಇದನ್ನೂ ಓದಿ: ರನ್‌ ಓಡಲು ಪಂತ್‌ ನಿರಾಕರಣೆ – ಗುರಾಯಿಸಿದ ಕೊಹ್ಲಿ

    2ನೇ ದಿನದ ಇನ್ನಿಂಗ್ಸ್ನಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಕೆ.ಎಲ್.ರಾಹುಲ್ (KL Rahul) ಹಾಗೂ ಶುಭಮನ್ ಗಿಲ್ ಬ್ಯಾಟಿಂಗ್ ವೈಫಲ್ಯ ಎದುರಿಸಿದರು. ರಾಹುಲ್ 45 ಎಸೆತಗಳಲ್ಲಿ ಕೇವಲ 10 ರನ್ ಗಳಿಸಿದರೆ, ಗಿಲ್ 39 ಎಸೆತಗಳಲ್ಲಿ 20 ರನ್ ಗಳಿಸಿದರು. ನಂತರದಲ್ಲಿ ಚೇತೇಶ್ವರ್ ಪೂಜಾರ (55 ಎಸೆತ) ಹಾಗೂ ವಿರಾಟ್ ಕೊಹ್ಲಿ (Virat Kohli) (73 ಎಸೆತ) ತಲಾ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

    ಈ ವೇಳೆ ಸತತ ಬ್ಯಾಟಿಂಗ್ ವೈಫಲ್ಯ ಎದುರಿಸಿದ್ದ ರಿಷಭ್ ಪಂತ್ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಆಸರೆಯಾದರು. ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಇಬ್ಬರು ಆಟಗಾರರು ಸಿಕ್ಸರ್, ಬೌಂಡರಿ ಬಾರಿಸುವ ಜೊತೆಗೆ ಉತ್ತಮ ಇನ್ನಿಂಗ್ಸ್ ಕಟ್ಟಿದರು.

    104 ಎಸೆತಗಳನ್ನು ಎದುರಿಸಿದ ರಿಷಭ್ ಪಂತ್ 94 ರನ್ (7 ಬೌಂಡರಿ, 5 ಸಿಕ್ಸರ್) ಚಚ್ಚಿ ಶತಕ ವಂಚಿತರಾದರೆ, 105 ಎಸೆತಗಳನ್ನು ಎದುರಿಸಿದ ಶ್ರೇಯಸ್ ಅಯ್ಯರ್ 87 ರನ್ (10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು.

    ನಂತರದಲ್ಲಿ ಕಣಕ್ಕಿಳಿದ ಅಕ್ಷರ್ ಪಟೇಲ್ 4 ರನ್, ಆರ್.ಅಶ್ವಿನ್ 12 ರನ್, ಉಮೇಶ್ ಯಾದವ್ 14 ರನ್, ಮೊಹಮ್ಮದ್ ಸಿರಾಜ್ 7 ರನ್ ಗಳಿಸಿದರೆ, ಜಯದೇವ್ ಉನಾದ್ಕಟ್ 14 ರನ್ ಗಳಿಸಿ ಅಜೇಯರಾಗುಳಿದರು.

    Live Tv
    [brid partner=56869869 player=32851 video=960834 autoplay=true]

  • ರನ್‌ ಓಡಲು ಪಂತ್‌ ನಿರಾಕರಣೆ – ಗುರಾಯಿಸಿದ ಕೊಹ್ಲಿ

    ರನ್‌ ಓಡಲು ಪಂತ್‌ ನಿರಾಕರಣೆ – ಗುರಾಯಿಸಿದ ಕೊಹ್ಲಿ

    ಢಾಕಾ: ಬಾಂಗ್ಲಾದೇಶ (Bangladesh) ವಿರುದ್ಧದ ಎರಡನೇ ಟೆಸ್ಟ್‌ನ (2nd Test) ಎರಡನೇ ದಿನದಾಟದಲ್ಲಿ ರನ್ ಓಡಲು ನಿರಾಕರಿಸಿದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್‍ರನ್ನು (Rishabh Pant) ಕಂಡು ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ (Virat Kohli) ಗುರಾಯಿಸಿದ ಪ್ರಸಂಗ ನಡೆದಿದೆ.

    ಊಟಕ್ಕೂ ಮೊದಲು ಕೊನೆಯ ಓವರ್‌ ಕೊನೆಯ ಎಸೆತವನ್ನು ಎದುರಿಸಿದ ಕೊಹ್ಲಿ ಮಿಡಾನ್ ನತ್ತ ಬಾರಿಸಿ ರನ್ ಓಡಲು ಮುಂದಾದರು ಆದರೆ ನಾನ್‍ಸ್ಟ್ರೈಕ್‍ನಲ್ಲಿದ್ದ ಪಂತ್ ನಿರಾಕರಿಸಿದರು. ಇದರಿಂದ ಮತ್ತೆ ಸ್ಟ್ರೈಕ್‌ಗೆ ಓಡಿದ ಕೊಹ್ಲಿ ಡೈವ್ ಮಾಡಿ ರನೌಟ್‍ನಿಂದ ಪಾರಾದರು. ಇದರಿಂದ ಸಿಟ್ಟಿಗೆದ್ದ ಕೊಹ್ಲಿ ಪಂತ್‍ರನ್ನು ಗುರಾಯಿಸಿ ನೋಡಿದರು. ಇದನ್ನೂ ಓದಿ: IPL Auction 2023: ಸ್ಯಾಮ್, ಗ್ರೀನ್, ಬೆನ್ ಮೇಲೆ ಫ್ರಾಂಚೈಸ್ ಕಣ್ಣು – ಕನ್ನಡಿಗರಿಗೂ ಹೆಚ್ಚಿದ ಡಿಮ್ಯಾಂಡ್

    https://twitter.com/Sudhakar0718/status/1606166477232537600

     ಕೊಹ್ಲಿ ಗುರಾಯಿಸುತ್ತಿದ್ದಂತೆ ಪಂತ್ ಕೂಡ ಕೊಹ್ಲಿಯತ್ತ ನೋಡುತ್ತ ನಿಂತರು. ಬಳಿಕ ಬ್ಯಾಟಿಂಗ್ ಮುಂದುವರಿಸಿದ ಕೊಹ್ಲಿ ಊಟದ ವಿರಾದ ಬಳಿಕ 24 ರನ್ (73 ಎಸೆತ, 3 ಬೌಂಡರಿ) ಸಿಡಿಸಿ ಔಟ್ ಆದರು. ಅತ್ತ ಪಂತ್ ಬ್ಯಾಟಿಂಗ್ ಮುಂದುವರಿಸಿ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. 55 ಓವರ್‌ಗಳ ಅಂತ್ಯಕ್ಕೆ ಭಾರತ 4 ವಿಕೆಟ್ ನಷ್ಟಕ್ಕೆ 190 ರನ್ ಸಿಡಿಸಿದ್ದು, 35 ಹಿನ್ನಡೆಯಲ್ಲಿದೆ. ಇದನ್ನೂ ಓದಿ: ಐಪಿಎಲ್ ಮಿನಿ ಹರಾಜು ಹೈಲೈಟ್ಸ್ – ಸುತ್ತಿಗೆಯ ಹೊಡೆತಕ್ಕೆ ಕಾಯುತ್ತಿದ್ದಾನೆ 15ರ ಬಾಲಕ

    Live Tv
    [brid partner=56869869 player=32851 video=960834 autoplay=true]

  • ಏಕದಿನ ಸರಣಿಯಿಂದ ಪಂತ್‍ಗೆ ಗೇಟ್‌ಪಾಸ್‌ – ರಾಹುಲ್‍ಗೆ ಹೆಚ್ಚುವರಿ ಜವಾಬ್ದಾರಿ

    ಏಕದಿನ ಸರಣಿಯಿಂದ ಪಂತ್‍ಗೆ ಗೇಟ್‌ಪಾಸ್‌ – ರಾಹುಲ್‍ಗೆ ಹೆಚ್ಚುವರಿ ಜವಾಬ್ದಾರಿ

    ಢಾಕಾ: ಭಾರತ (India) ಹಾಗೂ ಬಾಂಗ್ಲಾದೇಶ (Bangladesh) ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯ (ODI) ಆರಂಭದಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ.

    ಪಂತ್ ಗಾಯಗೊಂಡಿರುವುದರಿಂದ ಏಕದಿನ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಟೆಸ್ಟ್ ಸರಣಿಯ ವೇಳೆ ತಂಡ ಸೇರಿಕೊಳ್ಳುವ ಸಾಧ್ಯತೆ ಇದೆ ಎಂದು ತಂಡದ ಮ್ಯಾನೇಜ್‍ಮೆಂಟ್ ತಿಳಿಸಿದೆ. ಇತ್ತ ಪಂತ್ ಹೊರಬಿದ್ದೊಡನೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಕನ್ನಡಿಗ ಕೆ.ಎಲ್ ರಾಹುಲ್‍ಗೆ (Rishabh Pant) ವಹಿಸಲಾಗಿದೆ. ಇದನ್ನೂ ಓದಿ: ಬಾಂಗ್ಲಾದ ನಾಯಕ-ಭಾರತದ ಬೌಲರ್ – ಏಕದಿನ ಸರಣಿ ಆರಂಭಕ್ಕೂ ಮುನ್ನ ಔಟ್

    ಮೊದಲ ಏಕದಿನ ಪಂದ್ಯದಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಸಂಜು ಸ್ಯಾಮ್ಸನ್ ಬಾಂಗ್ಲಾ ಸರಣಿಗೆ ಆಯ್ಕೆ ಆಗಿಲ್ಲ. ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ಆಗಿ ಸ್ಥಾನ ಪಡೆದಿರುವ ಇನ್ನೋರ್ವ ಆಟಗಾರ ಇಶಾನ್ ಕಿಶನ್ ಇದ್ದರೂ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುತ್ತಿರುವ ಬಗ್ಗೆ ಈಗಾಗಲೇ ಟೀಕೆಗಳು ಕೇಳಿಬರುತ್ತಿದೆ. ಇದನ್ನೂ ಓದಿ:  ದೇವರ ನಾಡಲ್ಲಿ ಐಪಿಎಲ್ ಮಿನಿ ಹರಾಜು – ಭಾರತದ 714 ಸೇರಿ ಒಟ್ಟು 991 ಆಟಗಾರರು ನೋಂದಣಿ

    ನಿನ್ನೆ ವೇಗಿ ಮೊಹಮ್ಮದ್ ಶಮಿ ಗಾಯಗೊಂಡು ಸರಣಿಯಿಂದ ಹೊರಬಿದ್ದಿದ್ದರು. ಇಂದು ಪಂತ್ ಅವರ ದಾರಿ ಹಿಡಿದಿದ್ದಾರೆ. ಏಕದಿನ ಸರಣಿ (ODI) ಜೊತೆ ಟೆಸ್ಟ್ ಸರಣಿಯಿಂದಲು ಶಮಿ ಹೊರಬೀಳುವ ಸಾಧ್ಯತೆ ಇದೆ. ಈಗಾಗಲೇ ಪುನರ್‌ಶ್ಚೇತನ ಶಿಬಿರಕ್ಕಾಗಿ ಬೆಂಗಳೂರಿಗೆ ಎನ್‍ಸಿಎಗೆ (NCA) ಕಳುಹಿಸಲು ಟೀಂ ಮ್ಯಾನೇಜ್‍ಮೆಂಟ್ ಪ್ಲಾನ್ ಹಾಕಿಕೊಂಡಿದೆ ಎಂದು ವರದಿಯಾಗಿದೆ. ಶಮಿ ಬದಲು ಉಮ್ರಾನ್ ಮಲಿಕ್‍ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

    ಬಾಂಗ್ಲಾದೇಶ ಮತ್ತು ಭಾರತ ನಡುವೆ 3 ಏಕದಿನ ಪಂದ್ಯ ಮತ್ತು 2 ಟೆಸ್ಟ್ ಪಂದ್ಯಗಳ ಸರಣಿ ನಡೆಯಲಿದೆ. ಇಂದಿನಿಂದ ಏಕದಿನ ಸರಣಿ ಆರಂಭವಾಗಿದ್ದು ಡಿ.14 ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಪಂತ್‍ಗೂ ಕಾಡ್ತಿದ್ಯಾ ಗಾಯದ ಸಮಸ್ಯೆ?

    ಪಂತ್‍ಗೂ ಕಾಡ್ತಿದ್ಯಾ ಗಾಯದ ಸಮಸ್ಯೆ?

    ಬ್ರಿಸ್ಪೇನ್: ಟಿ20 ವಿಶ್ವಕಪ್‍ಗಾಗಿ (T20 World Cup) ಆಸ್ಟ್ರೇಲಿಯಾದಲ್ಲಿರುವ (Australia) ಭಾರತ (India) ತಂಡಕ್ಕೆ ಗಾಯದ ಸಮಸ್ಯೆ ಕಾಡುತ್ತಿದೆ. ಇದೀಗ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಗಾಯಗೊಂಡಿರುವ ಕುರಿತು ಗುಮಾನಿ ಎದ್ದಿದೆ.

    ಪಂತ್ ಡಗೌಟ್‍ನಲ್ಲಿ ಮಂಡಿಗೆ ಐಸ್ ಕ್ಯೂಬ್ ಕಟ್ಟಿಕೊಂಡು ಕುಳಿತಿರುವ ಫೋಟೋಗಳು ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಕಂಡು ಬಂತು. ಆ ಬಳಿಕ ಇದೀಗ ಪಂತ್ ಗಾಯಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದನ್ನೂ ಓದಿ: ಕೊಹ್ಲಿ ಮ್ಯಾಜಿಕ್‌ ಫೀಲ್ಡಿಂಗ್‌, ಶಮಿ ಮಾರಕ ಬೌಲಿಂಗ್‌ – ಭಾರತಕ್ಕೆ 6 ರನ್‌ಗಳ ರೋಚಕ ಜಯ

    ಪಂತ್ ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಿಂದ ಹೊರಗುಳಿದಿದ್ದರು. ಭಾರತ ಅ.23 ರಂದು ಪಾಕಿಸ್ತಾನ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ. ಈ ಪಂದ್ಯದಿಂದಲೂ ಪಂತ್ ಹೊರಗುಳಿಯುವ ಸಾಧ್ಯತೆ ಇದೆ. ಪಂತ್ ಗಾಯದ ಕುರಿತಾಗಿ ಬಿಸಿಸಿಐ (BCCI) ಹೆಚ್ಚಿನ ಮಾಹಿತಿ ನೀಡಬೇಕಾಗಿದೆ. ಇದನ್ನೂ ಓದಿ: ಕೊರೊನಾ ಇದ್ದರೂ T20 ವಿಶ್ವಕಪ್ ಆಡಲು ಆಟಗಾರರಿಗೆ ಅವಕಾಶ!

    ಇತ್ತ ಆಸ್ಟ್ರೇಲಿಯಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ 6 ರನ್‍ಗಳ ರೋಚಕ ಜಯ ಸಾಧಿಸಿದೆ. ಪಂದ್ಯದ ಕೊನೆಯಲ್ಲಿ ವಿರಾಟ್ ಕೊಹ್ಲಿ ಮ್ಯಾಜಿಕ್ ಫೀಲ್ಡಿಂಗ್ ಮತ್ತು ಮೊಹಮ್ಮದ್ ಶಮಿ ಅವರ ಅತ್ಯುತ್ತಮ ಬೌಲಿಂಗ್ ಪ್ರದರ್ಶನದಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 6 ರನ್‍ಗಳ ರೋಚಕ ಜಯ ಸಾಧಿಸಿತು. ಗೆಲ್ಲಲು 187 ರನ್‍ಗಳ ಗುರಿಯನ್ನು ಪಡೆದ ಆಸ್ಟ್ರೇಲಿಯಾ 18 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿ ಸುಭದ್ರ ಸ್ಥಿತಿಯಲ್ಲಿತ್ತು. ಆದರೆ ಕೊನೆಯಲ್ಲಿ ಡೇವಿಡ್ ರನೌಟ್ ಮತ್ತು ಪ್ಯಾಟ್ ಕಮ್ಮಿನ್ಸ್ ಅವರ ಕ್ಯಾಚನ್ನು ಕೊಹ್ಲಿ ಪಡೆದು ಪಂದ್ಯಕ್ಕೆ ರೋಚಕ ತಿರುವು ಕೊಟ್ಟರು. 9 ರನ್‍ಗಳ ಅಂತರದಲ್ಲಿ 6 ವಿಕೆಟ್ ಕಳೆದುಕೊಂಡಿದ್ದರಿಂದ ಭಾರತ ಪಂದ್ಯವನ್ನು ಗೆದ್ದುಕೊಂಡು ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಮಿಂಚಿದೆ.

    Live Tv
    [brid partner=56869869 player=32851 video=960834 autoplay=true]

  • T20 ವಿಶ್ವಕಪ್‍ನಲ್ಲೂ ಆರಂಭವಾಯಿತು ಸೂರ್ಯನ ಅಬ್ಬರ – ಪಂತ್ ಓಪನರ್

    T20 ವಿಶ್ವಕಪ್‍ನಲ್ಲೂ ಆರಂಭವಾಯಿತು ಸೂರ್ಯನ ಅಬ್ಬರ – ಪಂತ್ ಓಪನರ್

    ಸಿಡ್ನಿ: ಟಿ20 ವಿಶ್ವಕಪ್‍ನ (T20 World Cup) ಅಭ್ಯಾಸ ಪಂದ್ಯದ ಮೂಲಕ ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್‌ಮ್ಯಾನ್‌ ಸೂರ್ಯಕುಮಾರ್ ಯಾದವ್ (Suryakumar Yadav) ತನ್ನ ಅಬ್ಬರ ಆರಂಭಿಸಿದ್ದಾರೆ.

    ವಿಶ್ವಕಪ್ ಆರಂಭಕ್ಕೂ ಮುನ್ನ ಭಾರತ ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಇಂದು ಮೊದಲ ಅಭ್ಯಾಸ ಪಂದ್ಯ ನಡೆಯಿತು. ಪಶ್ಚಿಮ ಆಸ್ಟ್ರೇಲಿಯಾ (Western Australia) ವಿರುದ್ಧ ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಘರ್ಜನೆ ಮುಂದುವರಿಸಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ತನ್ನ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಈಗಾಗಲೇ ಸದ್ದು ಮಾಡಿರುವ ಸೂರ್ಯ, ಆಸ್ಟ್ರೇಲಿಯಾ ನೆಲದಲ್ಲೂ ತನ್ನ ಅಬ್ಬರ ಶುರುಮಾಡಿ ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಾರೆ. ಇದನ್ನೂ ಓದಿ: ಕ್ಯಾಚ್ ಹಿಡಿಯಲು ಬಂದ ಮಾರ್ಕ್‍ವುಡ್‍ರನ್ನು ತಳ್ಳಿದ ವೇಡ್ – ಆದರೂ ಗೆಲ್ಲಲಿಲ್ಲ ಆಸ್ಟ್ರೇಲಿಯಾ

    ಅಭ್ಯಾಸ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ 52 ರನ್ ಚಚ್ಚಿ ಮಿಂಚಿದರು. ಇದರ ಪರಿಣಾಮವಾಗಿ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಬಾರಿಸಿತು. ಟೀಂ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಆರಂಭಿಕರಾಗಿ ನಾಯಕ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದರು. ಆದರೆ ಪಂತ್ ಹೊಡೆದದ್ದು ಒಂಬತ್ತೆ ರನ್. ಈ ಮೂಲಕ ಮತ್ತೆ ವಿಫಲತೆ ಕಂಡಿದ್ದಾರೆ. ಇದನ್ನೂ ಓದಿ: ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಆಸ್ಟ್ರೇಲಿಯಾಗೆ ಹಾರಿದ ಊರ್ವಶಿ – ಟ್ರೋಲ್ ಆದ ಪಂತ್

    ಅಭ್ಯಾಸ ಪಂದ್ಯದಲ್ಲಿ ರೋಹಿತ್ 3, ದೀಪಕ್ ಹೂಡಾ 22, ಪಾಂಡ್ಯ 29 ರನ್ ಬಾರಿಸಿ ಕೊಡುಗೆ ನೀಡಿದರು. ಆ ಬಳಿಕ ಬೌಲಿಂಗ್‍ನಲ್ಲಿ ಅರ್ಷದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಮಿಂಚಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಆಸ್ಟ್ರೇಲಿಯಾಗೆ ಹಾರಿದ ಊರ್ವಶಿ – ಟ್ರೋಲ್ ಆದ ಪಂತ್

    ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಆಸ್ಟ್ರೇಲಿಯಾಗೆ ಹಾರಿದ ಊರ್ವಶಿ – ಟ್ರೋಲ್ ಆದ ಪಂತ್

    ಸಿಡ್ನಿ: ನಟಿ ಊರ್ವಶಿ ರೌಟೇಲಾ (Urvashi Rautela) ನನ್ನ ಪ್ರೀತಿಯನ್ನು ಹಿಂಬಾಲಿಸುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡು ಆಸ್ಟ್ರೇಲಿಯಾಗೆ (Australia) ಹಾರಿದ್ದಾರೆ.

    ಇತ್ತ ಊರ್ವಶಿ ರೌಟೇಲಾ ಪೋಸ್ಟ್ ನೋಡಿದ ಅಭಿಮಾನಿಗಳು ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ (Rishabh Pant) ಕಾಳೆಲೆಯುತ್ತಿದ್ದಾರೆ. ರಿಷಭ್ ಪಂತ್ ಮತ್ತು ಊರ್ವಶಿ ರೌಟೇಲಾ ಇಬ್ಬರೂ ಡೇಟಿಂಗ್‍ನಲ್ಲಿದ್ದಾರೆ ಎಂಬ ಗಾಸಿಪ್ ಇತ್ತು. ಕೆಲದಿನಗಳ ಹಿಂದೆ ಇವರಿಬ್ಬರ ನಡುವೆ ಬಿರುಕು ಕಾಣಿಸಿಕೊಂಡಿತ್ತು ಎಂದು ವರದಿಯಾಗಿತ್ತು. ಆ ಬಳಿಕ ಇದೀಗ ಟಿ20 ವಿಶ್ವಕಪ್‍ಗಾಗಿ (T20 World Cup)  ರಿಷಭ್ ಪಂತ್ ಆಸ್ಟ್ರೇಲಿಯಾದಲ್ಲಿದ್ದಾರೆ. ಈ ಹೊತ್ತಲ್ಲೇ ಈ ರೀತಿ ಪೋಸ್ಟ್ ಮಾಡಿಕೊಂಡು ಊರ್ವಶಿ ರೌಟೇಲಾ ಆಸ್ಟ್ರೇಲಿಯಾಗೆ ತೆರಳಿರುವುದು ನೆಟ್ಟಿಗರಿಗೆ ಆಹಾರವಾಗಿದೆ. ಇದನ್ನೂ ಓದಿ: ನನ್ನ ಪುಟ್ಟ ರಾಜಕುಮಾರಿ ಇನ್ನಿಲ್ಲ – ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ಮಿಲ್ಲರ್

    ಮೊದ ಮೊದಲು ಊರ್ವಶಿ ರೌಟೇಲಾ ಮತ್ತು ರಿಷಭ್ ಪಂತ್ ಡೇಟಿಂಗ್‍ನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಇಬ್ಬರೂ ಹಲವಾರು ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಗ್ಗೆಯೂ ಗಾಸಿಪ್ ಇದ್ದವು. ಆಗಾಗ್ಗೆ ಇಬ್ಬರೂ ಪಾರ್ಟಿಗಳಲ್ಲಿ ಜೊತೆಯಾಗಿ ಕಾಣಿಸಿಕೊಂಡ ಬಗ್ಗೆ ಸುದ್ದಿ ಹಬ್ಬಿತ್ತು. ಆ ಬಳಿಕ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ರಿಷಭ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು ಎಂದು ಊರ್ವಶಿ ಹೇಳಿಕೊಂಡಿದ್ದರು. ನನಗಾಗಿ ಸ್ಟಾರ್ ಕ್ರಿಕೆಟಿಗ ಒಬ್ಬ ಅಷ್ಟೊಂದು ಹೊತ್ತು ಕಾದಿದ್ದ ಎಂದು ಹೇಳಿದ್ದರು. ಇದರಿಂದ ಕೋಪಗೊಂಡ ರಿಷಭ್ ತಿರುಗೇಟು ಕೊಟ್ಟಿದ್ದರು. ಅಲ್ಲಿಂದ ಇಬ್ಬರ ಮಧ್ಯ ಕೋಲ್ಡ್ ವಾರ್ ಶುರುವಾಗಿತ್ತು. ಈ ನಡುವೆ ಇದೀಗ ಊರ್ವಶಿ ಮತ್ತೆ ಸುದ್ದಿಯಾಗಿದ್ದಾರೆ. ಇದನ್ನೂ ಓದಿ: ಕಳೆದ ಹತ್ತು ವರ್ಷಗಳಿಂದ ಭಾರತಕ್ಕೆ ಕಾಡುತ್ತಿರುವ ಪಾಕ್‍ನ ನಿದಾ ದಾರ್

    Live Tv
    [brid partner=56869869 player=32851 video=960834 autoplay=true]

  • ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಸರಣಿ ಗೆದ್ದರೂ ಮುಖದಲ್ಲಿ ನಗುವಿಲ್ಲ – ಕೊಹ್ಲಿಯನ್ನು ಗುರಾಯಿಸಿದ ಪಂತ್

    ಹೈದರಾಬಾದ್: ಇಲ್ಲಿನ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ಟಿ20 (T20) ಸರಣಿಯ 3ನೇ ಪಂದ್ಯ ನಡೆಯಿತು. ಪಂದ್ಯ ಗೆದ್ದು ಪ್ರಶಸ್ತಿ ಸ್ವೀಕರಿಸಿದ ವೇಳೆ ರಿಷಭ್ ಪಂತ್ (Rishabh Pant) ಒಂದೇಸಮನೆ ವಿರಾಟ್ ಕೊಹ್ಲಿಯನ್ನೇ ಗುರಾಯಿಸುತ್ತಿರುವ ವೀಡಿಯೋ (Virat Kohli) ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಿದೆ.

    ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿದು ಅಬ್ಬರಿಸಲಿಲ್ಲ ಎನ್ನುವ ಕೋಪವೇ ರಿಷಭ್ ಪಂತ್ (Rishabh Pant) ಅಸಮಾಧಾನಕ್ಕೆ ಕಾರಣವಾಗಿದೆ ಎನ್ನುವಂತಿದೆ. ರಿಷಭ್ ಪಂತ್‌ನ ಈ ನಡೆಗೆ ಕೊಹ್ಲಿ ಅಭಿಮಾನಿಗಳು ಪಂತ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಭಾರತ-ದ.ಆಫ್ರಿಕಾ ಟಿ-20 ಸರಣಿಗೆ ಪರಿವೀಕ್ಷಕರಾಗಿ ಬೆಳಗಾವಿ ಮೂಲದ ಅವಿನಾಶ್ ನೇಮಕ

    ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಇತ್ತಂಡಗಳ ನಡುವೆ 1-1 ರಲ್ಲಿ ಸಮಬಲ ಕಂಡಿತ್ತು. ಭಾನುವಾರದ ಪಂದ್ಯ ಫೈನಲ್‌ನಲ್ಲಿ ಸರಣಿ ಗೆಲ್ಲುವ ತವಕದಲ್ಲಿ ಎರಡು ತಂಡಗಳು ಕಣಕ್ಕಿಳಿದಿದ್ದವು. ಹಾಗಾಗಿ ರೋಚಕ ಕದನಕ್ಕೆ ಹೈದರಾಬಾದ್ ಸಾಕ್ಷಿಯಾಗಿತ್ತು. ಕ್ರೀಸ್‌ನಲ್ಲಿ ನಿಂತು ಅಬ್ಬರಿಸಿದ ವಿರಾಟ್ ಕೊಹ್ಲಿ (Virat Kohli) ಹಾಗೂ ಸೂರ್ಯಕುಮಾರ್ ಯಾದವ್ (Suryakumar Yadav) ಸಿಕ್ಸ್-ಫೋರ್‌ಗಳ ಭರ್ಜರಿ ಬ್ಯಾಟಿಂಗ್ ಮಾಡಿದರು.

    ಕೊನೆಯ 6 ಎತೆಗಳಲ್ಲಿ 11 ರನ್‌ಗಳು ಬೇಕಿದ್ದಾಗಲೇ ಮೊದಲ ಎಸೆತವನ್ನು ಕೊಹ್ಲಿ ಸಿಕ್ಸ್‌ಗೆ ಅಟ್ಟಿದರು. 2ನೇ ಎಸೆತವನ್ನು ಬೌಂಡರಿ ಬಾರಿಸುವ ಪ್ರಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಇನ್ನೂ ಕೊನೆಯಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ (Dinesh Karthik) 3ನೇ ಎಸೆತದಲ್ಲಿ ಒಂದು ರನ್ ಕಲೆಹಾಕಿದರು. 5ನೇ ಎಸೆತವನ್ನು ಬೌಂಡರಿಗೆ ತಳ್ಳುವ ಮೂಲಕ ಹಾರ್ದಿಕ್ ಪಾಂಡ್ಯ (Hardik Pandya) ಗೆಲುವಿನ ನಗೆ ಬೀರಿದರು. ಇದನ್ನೂ ಓದಿ: ಭಾರತ Vs ಆಸ್ಟ್ರೇಲಿಯಾ ಹೈವೋಲ್ಟೆಜ್ ಪಂದ್ಯದ ನಡುವೆ ಮೊಳಗಿತು ಜೈಶ್ರೀರಾಮ್ ಉದ್ಘೋಷ

    ಈ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಕೊನೆಯ ಓವರ್‌ವರೆಗೂ ನಿಂತು ಅಬ್ಬರಿಸಿದ ಕೊಹ್ಲಿ ಪಾತ್ರ ಪ್ರಮುಖವಾಗಿತ್ತು. ಆದರೆ ಹಾಲಿ ವಿಶ್ವಚಾಂಪಿಯನ್‌ಗಳನ್ನ ಸೋಲಿಸಿದರೂ ಟೀಂ ಇಂಡಿಯಾ ಕ್ರಿಕೆಟರ್ ರಿಷಭ್ ಪಂತ್‌ಗೆ ಪಂದ್ಯ ಗೆದ್ದಿದ್ದಕ್ಕಿಂತಲೂ ತಾನು ಕಣಕ್ಕಿಳಿಯಲಿಲ್ಲ ಎನ್ನುವ ಅಸಮಾಧಾನವೇ ಇದ್ದಂತೆ ಕಾಣುತ್ತಿದೆ ಎಂದು ನೆಟ್ಟಿಗರು ಸೂಚಿಸಿದ್ದಾರೆ. ಹಾಗಾಗಿ ರಿಷಭ್ ಮುಖದಲ್ಲಿ ಮಂದಹಾಸ ಮೂಡಲೇ ಇಲ್ಲ. ಕೊಹ್ಲಿಯನ್ನು ಗುರಾಯಿಸುತ್ತಲೇ ಇದ್ದರು. ಕೊನೆಯಲ್ಲಿ ಸಾಂಕೇತಿಕವಾಗಿ ನಕ್ಕು ಸುಮ್ಮನಾದರು.

    ಭಾನುವಾರ ನಡೆದ ಅಂತಿಮ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 186 ರನ್‌ಗಳನ್ನು ಗಳಿಸಿತು. ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 19.5 ಓವರ್‌ಗಳಲ್ಲೇ 4 ವಿಕೆಟ್ ನಷ್ಟಕ್ಕೆ 187 ರನ್‌ಗಳನ್ನು ಪೇರಿಸುವ ಮೂಲಕ ಗೆಲುವು ಸಾಧಿಸಿತ್ತು.

    Live Tv
    [brid partner=56869869 player=32851 video=960834 autoplay=true]