Tag: Rishabh Pant

  • T20 WorldCupಗೆ ಡಿಕೆ ಓಕೆ, ರಿಷಭ್ ಯಾಕೆ – ಪಂತ್ ಕೈಬಿಡೋದು ಸೂಕ್ತ ಅಂದ ಮಾಜಿ ಕ್ರಿಕೆಟಿಗ

    T20 WorldCupಗೆ ಡಿಕೆ ಓಕೆ, ರಿಷಭ್ ಯಾಕೆ – ಪಂತ್ ಕೈಬಿಡೋದು ಸೂಕ್ತ ಅಂದ ಮಾಜಿ ಕ್ರಿಕೆಟಿಗ

    ಮುಂಬೈ: ಟೀಂ ಇಂಡಿಯಾ (Team India) ಆಯ್ಕೆ ಮಾಡಿರುವ T20 ವಿಶ್ವಕಪ್ (T20 World Cup) ತಂಡದಿಂದ ರಿಷಭ್ ಪಂತ್  (Rishabh Pant) ಅವರನ್ನ ಕೈಬಿಡುವಂತೆ ಭಾರತೀಯ ಮಾಜಿ ಕ್ರಿಕೆಟಿಗ ಸಲಹೆ ನೀಡಿದ್ದಾರೆ.

    ಇಂದಿನಿಂದ ಭಾರತ (India) – ಆಸ್ಟ್ರೇಲಿಯಾ (Australia) ಟಿ20 ಸರಣಿ ಆರಂಭವಾಗುತ್ತಿದ್ದು, ತವರಿನಲ್ಲೇ ಆಸಿಸ್ ತಂಡವನ್ನು ಬಗ್ಗು ಬಡಿಯಲು ಟೀಂ ಇಂಡಿಯಾ ಸಜ್ಜಾಗಿದೆ.

    ಏಷ್ಯಾಕಪ್ (Aisa Cup) ಸೂಪರ್ ಫೋರ್ ಲೀಗ್ ಹಂತದಲ್ಲಿ ಪಾಕಿಸ್ತಾನ (Pakistan) ಹಾಗೂ ಶ್ರೀಲಂಕಾದ (SriLanka) ವಿರುದ್ಧ ಸೆಣಸಿದರೂ ಫೈನಲ್ ತಲುಪಲು ಭಾರತ ವಿಫಲವಾಯಿತು. ಈ ಸೋಲಿನ ರುಚಿ ಕಂಡ ಭಾರತ ಹಲವು ಬದಲಾವಣೆಯೊಂದಿಗೆ ಎದುರಾಳಿಗಳನ್ನು ಬಗ್ಗು ಬಡಿಯಲು ಸಜ್ಜಾಗುತ್ತಿದೆ. ಅಲ್ಲದೇ ಐಸಿಸಿ (ICC) ಟಿ20 ವಿಶ್ವಕಪ್‌ಗೂ ಮುನ್ನವೇ ಟೀಂ ಇಂಡಿಯಾ ಆಟಗಾರರ ಸಾಮರ್ಥ್ಯವನ್ನೂ ಮೌಲ್ಯಮಾಪನ ಮಾಡುವ ಪಂದ್ಯವೂ ಇದಾಗಿದೆ. ಆಸ್ಟ್ರೇಲಿಯಾ ಟಿ20 ಸರಣಿ ಮುಗಿಯುತ್ತಿದ್ದಂತೆ ಸೆಪ್ಟೆಂಬರ್ 28 ರಿಂದ ದಕ್ಷಿಣ ಆಫ್ರಿಕಾದೊಂದಿಗೆ ಟಿ20 ಸರಣಿ ಆರಂಭವಾಗಲಿದೆ.

    ಈ ಹೊತ್ತಿನಲ್ಲೇ ರಿಷಭ್ ಪಂತ್ ಅವರನ್ನು ವಿಶ್ವಕಪ್ ತಂಡದಿಂದ ಕೈ ಬಿಡುವುದು ಉತ್ತಮ ಎಂದು ಭಾರತೀಯ ಮಾಜಿ ಕ್ರಿಕೆಟರ್ ವಾಸಿಮ್ ಜಾಫರ್ (Wasim Jaffer) ಹೇಳಿದ್ದಾರೆ.

    ಈ ವರ್ಷದಲ್ಲಿ ಪಂತ್ ಅವರ ಪ್ರದರ್ಶನ ಉತ್ತಮವಾಗಿಲ್ಲ. ವಿಶ್ವಕಪ್‌ನಲ್ಲೂ ಅವರು ಸರಿಯಾಗಿ ಆಡುತ್ತಾರೋ ಇಲ್ಲವೋ ಎಂಬುದು ಗೊತ್ತಿಲ್ಲ. ಆದರೆ ದಿನೇಶ್ ಕಾರ್ತಿಕ್ (Dinesh Karthik) ಅವರು ಇನ್ನಿಂಗ್ಸ್ ಹೇಗೆ ಕೊನೆಗೊಳಿಸಬೇಕು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಆದ್ದರಿಂದ ದಿನೇಶ್ ಕಾರ್ತಿಕ್ ಅವರು ಟೀಂ ಇಂಡಿಯಾದಲ್ಲಿ ಇರಬಹುದು. ಆದರೆ ಪಂತ್ ಅವರ ಆಯ್ಕೆಯನ್ನು ಟೀಂ ಇಂಡಿಯಾ (Team India) ಪರಾಮರ್ಶಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಇತ್ತೀಚೆಗೆ ನಡೆದ ಏಷ್ಯಾಕಪ್ (AisaCup) ಟೂರ್ನಿಯ ಸೂಪರ್ ಫೋರ್ ಲೀಗ್‌ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾದ ವಿರುದ್ಧ ಕಳಪೆ ಪ್ರದರ್ಶನ ನೀಡಿದ ರಿಷಭ್ ಪಂತ್ 4 ಪಂದ್ಯಗಳಲ್ಲಿ ಕೇವಲ 54 ರನ್‌ಗಳನ್ನಷ್ಟೇ ಗಳಿಸಿದ್ದಾರೆ. ಆದರೆ ಇದಕ್ಕೂ ಮುನ್ನ ಭಾರತ ಹಾಗೂ ಇಂಗ್ಲೆAಡ್ ನಡುವೆ ನಡೆದ ಏಕದಿನ ಹಾಗೂ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಪಂತ್ ಮಿಂಚಿದ್ದರು. ಇಂಗ್ಲೆAಡ್ ವಿರುದ್ಧದ ಏಕದಿನ ಪಂದ್ಯದಲ್ಲಿ 113 ಎಸೆತಗಳಲ್ಲಿ 125 ರನ್ ಸಿಡಿಸಿ ಅಜೇಯರಾಗಿ ಟೀಂ ಇಂಡಿಯಾಕ್ಕೆ ಗೆಲುವು ತಂದುಕೊಟ್ಟಿದ್ದರು. ಹಾಗಾಗಿ ಪಂತ್ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಿಗೆ ಸೂಕ್ತವಾಗಿದ್ದಾರೆಯೇ ಹೊರತು ಟಿ20ಗೆ ಸೂಕ್ತವಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿವೆ.

    Live Tv
    [brid partner=56869869 player=32851 video=960834 autoplay=true]

  • ಕ್ರಿಕೆಟಿಗ ರಿಷಭ್ ಪಂತ್ ಗೆ ನಾನು ಕ್ಷಮೆ ಕೇಳಿಲ್ಲ, ಕೇಳೋದು ಇಲ್ಲ: ನಟಿ ಊರ್ವಶಿ ರೌಟೇಲಾ

    ಕ್ರಿಕೆಟಿಗ ರಿಷಭ್ ಪಂತ್ ಗೆ ನಾನು ಕ್ಷಮೆ ಕೇಳಿಲ್ಲ, ಕೇಳೋದು ಇಲ್ಲ: ನಟಿ ಊರ್ವಶಿ ರೌಟೇಲಾ

    ಟೀಮ್ ಇಂಡಿಯಾ ಆಟಗಾರ (Cricket) ರಿಷಭ್ ಪಂತ್ ಮತ್ತು ನಟಿ ಊರ್ವಶಿ ರೌಟೇಲಾ (Urvashi Rautela) ನಡುವಿನ ಕೋಳಿ ಜಗಳ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಸೋಷಿಯಲ್ ಮೀಡಿಯಾ ಮೂಲಕವೇ ಇಬ್ಬರೂ ತಿಕ್ಕಾಟ ಶುರು ಮಾಡಿದ್ದಾರೆ. ಅವರೊಂದು ಬರೆದರೆ, ಇವರೊಂದು ಕೌಂಟರ್ ಕೊಡುತ್ತಾ ಅಭಿಮಾನಿಗಳಿಗಿಂತೂ ಸಖತ್ ಮಜಾ ನೀಡುತ್ತಿದ್ದಾರೆ.

    ಮೊದ ಮೊದಲು ಊರ್ವಶಿ ರೌಟೇಲಾ ಮತ್ತು ರಿಷಭ್ ಪಂತ್ (Rishabh Pant) ಡೇಟಿಂಗ್ ನಲ್ಲಿ ಇದ್ದಾರೆ ಎಂದು ಹೇಳಲಾಗಿತ್ತು. ಇಬ್ಬರೂ ಹಲವಾರು ಪಾರ್ಟಿಗಳಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಗ್ಗೆಯೂ ಗಾಸಿಪ್ ಇದ್ದವು. ಆಗಾಗ್ಗೆ ಇಬ್ಬರೂ ಪಾರ್ಟಿ ಮಾಡುತ್ತಾರೆ ಎಂದು ಹೇಳಲಾಗಿತ್ತು. ಸಡನ್ನಾಗಿ ಸಂದರ್ಶನವೊಂದರಲ್ಲಿ ಊರ್ವಶಿ ಸತ್ಯವೊಂದನ್ನು ಹೇಳಿದ್ದರು. ಅದು ರಿಷಭ್ ಕೋಪಕ್ಕೆ ಕಾರಣವಾಗಿತ್ತು. ಇದನ್ನೂ ಓದಿ:ವಿಚಾರಣೆ ವೇಳೆ ‘ಬೆತ್ತಲೆ ಫೋಟೋ’ ನಂದಲ್ಲ ಎಂದ ಬಾಲಿವುಡ್ ನಟ ರಣವೀರ್ ಸಿಂಗ್

    ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ರಿಷಭ್ ಪಂತ್ ನನ್ನನ್ನು ಭೇಟಿ ಮಾಡಲು 10 ಗಂಟೆ ಕಾದಿದ್ದರು’ ಎಂದು ಊರ್ವಶಿ ಹೇಳಿಕೊಂಡಿದ್ದರು. ನನಗಾಗಿ ಸ್ಟಾರ್ ಕ್ರಿಕೆಟಿಗ ಒಬ್ಬ ಅಷ್ಟೊಂದು ಹೊತ್ತು ಕಾದಿದ್ದ ಎಂದು ಹೇಳಿದ್ದರು.  ಅದಕ್ಕೆ ರಿಷಭ್ ಸಖತ್ ತಿರುಗೇಟು ಕೊಟ್ಟಿದ್ದರು. ಅಲ್ಲಿಂದ ಇಬ್ಬರ ಮಧ್ಯ ಕೋಲ್ಡ್ ವಾರ್ ಶುರುವಾಗಿತ್ತು. ಮೊನ್ನೆಯಷ್ಟೇ ತನ್ನ ಹೇಳಿಕೆಗಾಗಿ ಪಂತ್ ಅವರಲ್ಲಿ ಕ್ಷಮೆ (Kshame) ಕೇಳುತ್ತೇನೆ ಎನ್ನುವ ಸುದ್ದಿ ಕೂಡ ಆಗಿತ್ತು.

    ಆದರೆ, ಈ ಸುದ್ದಿಯನ್ನು ಊರ್ವಶಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕ್ಷಮೆ ಕೇಳಿಲ್ಲ. ಕೇಳಿರುವ ಕ್ಷಮೆ ರಿಷಭ್ ಪಂತ್ ಗೆ ಅಲ್ಲ. ನನ್ನ ಫ್ಯಾನ್ಸ್ ಗೆ (Fans) ಮತ್ತು ನನ್ನ ಆಪ್ತರಿಗೆ ಎಂದು ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ ಊರ್ವಶಿ. ಅಲ್ಲಿಗೆ ಈ ಜಗಳ ಮತ್ತೆ ಮುಂದುವರೆದಿದೆ. ಯಾವ ಹಂತ ಪಡೆದುಕೊಳ್ಳತ್ತೋ ಅವರಿಬ್ಬರಿಗೆ ಗೊತ್ತು.

    Live Tv
    [brid partner=56869869 player=32851 video=960834 autoplay=true]

  • ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಭಾರತ-ಪಾಕಿಸ್ತಾನ ಪಂದ್ಯದ ವೇಳೆ ನನ್ನ ಮಗಳು ಭಾರತದ ಧ್ವಜವನ್ನೇ ಹಿಡಿದಿದ್ದಳು – ಶಾಹಿದ್ ಅಫ್ರಿದಿ

    ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ (Cricket) ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ (Shahid Afridi) ಭಾರತೀಯ ಕ್ರಿಕೆಟ್ ತಂಡದೊಂದಿಗೆ ವಿವಾದಗಳ ಸುದೀರ್ಘ ಇತಿಹಾಸ ಹೊಂದಿದ್ದಾರೆ. ಗೌತಮ್ ಗಂಭೀರ್ ಮತ್ತು ಇತರ ಭಾರತೀಯ ಕ್ರಿಕೆಟಿಗರೊಂದಿಗೆ ಅನೇಕ ಬಾರಿ ಮುಖಾಮುಖಿಯಾಗಿದ್ದಾರೆ. ಆದರೆ ಅವರು ಮಾಧ್ಯಮದಲ್ಲಿ ನೀಡಿದ ಹೇಳಿಕೆಯೊಂದು ಭಾರತೀಯ ಕ್ರಿಕೆಟಿಗರಿಗೆ (Team India) ವಿಶ್ವದೆಲ್ಲೆಡೆ ಅಭಿಮಾನಿಗಳಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.

    ಏಷ್ಯಾಕಪ್ ಟಿ20 (Aisa Cup T20) ಟೂರ್ನಿಯ ಕುರಿತು ಮಾತನಾಡಿರುವ ಅಫ್ರಿದಿ, ಭಾರತ ಮತ್ತು ಪಾಕಿಸ್ತಾನ (India Pakistan) ನಡುವಿನ ಏಷ್ಯಾ ಕಪ್ 2022ರ ಪಂದ್ಯದ ವೇಳೆ ನನ್ನ ಮಗಳು ಪಾಕಿಸ್ತಾನ ಧ್ವಜಕ್ಕಿಂತ ಭಾರತ ಧ್ವಜವನ್ನೇ ಹಿಡಿದು ಬೀಸುತ್ತಿದ್ದಳು ಎಂದು ಅವರು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಪಾಕ್ ಕೈ ಹಿಡಿದ ರಿಜ್ವಾನ್ – ರೋಚಕ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನಕ್ಕೆ ಜಯ

    ಸ್ಟೇಡಿಯಂನಲ್ಲಿ ಕೇವಲ ಪಾಕಿಸ್ತಾನಿ ಅಭಿಮಾನಿಗಳು ಶೇ.10 ರಷ್ಟು ಇದ್ದರೆ, ಶೇ.90 ರಷ್ಟು ಭಾರತದ ಅಭಿಮಾನಿಗಳೇ ತುಂಬಿದ್ದರು. ಭಾರತೀಯ ಅಭಿಮಾನಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಈ ವಿಷಯವನ್ನು ನನ್ನ ಹೆಂಡತಿ ನನಗೆ ಹೇಳಿದಳು ಎಂದು ಹೇಳಿಕೊಂಡಿದ್ದಾರೆ.

    ಪಾಕಿಸ್ತಾನದ ಧ್ವಜಗಳು ಅಲ್ಲಿ ಲಭ್ಯವಿರಲಿಲ್ಲ. ಆದ್ದರಿಂದ ನನ್ನ ಕಿರಿಯ ಮಗಳು ಭಾರತದ ಧ್ವಜವನ್ನು ಹಿಡಿದು ಬೀಸುತ್ತಿದ್ದಳು. ನಾನು ವೀಡಿಯೊವನ್ನು ಸ್ವೀಕರಿಸಿದ್ದೇನೆ. ಆದರೆ ಅದನ್ನು ಜಾಲತಾಣದಲ್ಲಿ ಹಂಚಿಕೊಳ್ಳಲು ಆಗಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

    ಮೊದಲ ಪಂದ್ಯದಲ್ಲಿ 147 ರನ್‌ಗಳಿಸಿ ಭಾರತದ ಎದುರು ಸೋತ ಪಾಕಿಸ್ತಾನ, ಸೂಪರ್ ಫೋರ್ ಲೀಗ್‌ನಲ್ಲಿ 182 ರನ್‌ಗಳಿಸಿ ಭಾರತದ ವಿರುದ್ಧ ಗೆಲುವು ದಾಖಲಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ಭಾರತದ ಖೇಲ್ ಖತಂ: ಏಷ್ಯಾ ಕಪ್‌ನಿಂದ ಬಹುತೇಕ ಔಟ್‌

    ದುಬೈ: ಶ್ರೀಲಂಕಾ ರೋಚಕ 6 ವಿಕೆಟ್ ಗಳ ಜಯ ಸಾಧಿಸಿದ್ದು, ಏಷ್ಯಾ ಕಪ್ ನಿಂದ ಭಾರತ ಬಹುತೇಕ ಹೊರಬಿದ್ದಿದೆ‌. ಬಾಕಿ ಇರುವ ಇತರ ತಂಡಗಳ ಫಲಿತಾಂಶ ತನ್ನ ಪರವಾಗಿ ಬಂದರೆ ಮಾತ್ರ ಭಾರತ ಫೈನಲ್‌ಗೆ ಏರುವ ಸಾಧ್ಯತೆಯಿದೆ.

    ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿ, 174 ರನ್‌ಗಳ ಗುರಿ ನೀಡಿತು. ಸಾಧಾರಣ ಮೊತ್ತದ ರನ್‌ ಗುರಿ ಬೆನ್ನತ್ತಿದ ಶ್ರೀಲಂಕಾ 19.5 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ174 ರನ್‌ಗಳಿಸಿ ರೋಚಕ ಜಯ ಸಾಧಿಸಿದೆ

    ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಲಂಕಾ ಮೊದಲ 4 ಓವರ್‌ಗಳಿಗೆ 22 ರನ್‌ಗಳನ್ನಷ್ಟೇ ಗಳಿಸಿತ್ತು. ನಂತರದಲ್ಲಿ ಬಿರುಸಿನ ಬ್ಯಾಟಿಂಗ್‌ನಿಂದ ಪವರ್‌ ಪ್ಲೇ ಮುಗಿಯುವ ವೇಳೆಗೆ 50 ರನ್‌ಗಳ ಗಡಿದಾಟಿತು. ಆರಂಭಿಕರಾಗಿ ಕಣಕ್ಕಿಳಿದ ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ 67 ಎಸೆತೆಗಳಲ್ಲಿ 97 ರನ್‌ ಸಿಡಿಸಿ ಉತ್ತಮ ಇನ್ನಿಂಗ್ಸ್‌ ಕಟ್ಟಿದರು. ಪಾತುಂ ನಿಸ್ಸಾಂಕ ಹಾಗೂ ಕುಸಲ್ ಮೆಂಡಿಸ್ ಭಾರತದ ಬೌಲರ್‌ಗಳ ಬೆವರಿಳಿಸಿದರು. ಪಾತುಂ ನಿಸ್ಸಾಂಕ 37 ಎಸೆತಗಳಲ್ಲಿ 2 ಸಿಕ್ಸರ್‌ 4 ಬೌಂಡರಿಯೊಂದಿಗೆ 52 ರನ್‌ ಸಿಡಿಸಿದರೆ, ಕುಸಾಲ್ ಮೆಂಡಿಸ್ 37 ಎಸೆತಗಳಲ್ಲಿ 57 ರನ್‌ (4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಪೆವಿಲಿಯನ್‌ ಸೇರಿದರು.

    ಇದಾದ ಬಳಿಕ ಲಂಕಾ ಸತತ ನಾಲ್ಕು ವಿಕೆಟ್‌ ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಮೆಂಡಿಸ್‌ ನಂತರ ಕಣಕ್ಕಿಳಿದ ಚರಿತ್ ಅಸಲಂಕಾ ಡಕೌಟ್‌ ಆದರು. ಈ ಬೆನ್ನಲ್ಲೇ 7 ಎಸೆತಗಳನ್ನು ಎದುರಿಸಿದ ದನುಷ್ಕ ಗುಣತಿಲಕ 1 ರನ್‌ಗಳಿಸಿ ಔಟಾದರು.

    ನಂತರ ಬಂದ ಭಾನುಕಾ ರಾಜಪಕ್ಸೆ ಹಾಗೂ ದಾಸುನ್ ಶನಕ ಉತ್ತಮ ಜೊತೆಯಾಟವಾಡಿದರು. 18 ಓವರ್‌ಗಳಲ್ಲಿ 153 ರನ್‌ಗಳಿಸಿದ ಲಂಕಾ ತಂಡಕ್ಕೆ ಕೊನೆಯ 2 ಓವರ್‌ಗಳಲ್ಲಿ 21 ರನ್‌ಗಳ ಅವಶ್ಯಕತೆಯಿತ್ತು. 19ನೇ ಓವರ್‌ನಲ್ಲಿ ಬೌಲಿಂಗ್‌ ಮಾಡಿದ ಭುವನೇಶ್ವರ್‌ ಕುಮಾರ್‌ ಮೊದಲ 2 ಎಸೆತಗಳಲ್ಲಿ ಒಂದೊಂದೇ ರನ್‌ ನೀಡಿ, ಸತತ 2 ವೈಡ್‌ ಎಸೆದು, 3ನೇ ಎಸೆತದಲ್ಲಿ 4 ರನ್‌ ಚಚ್ಚಿಸಿಕೊಂಡರು. ತಮ್ಮ ಕೊನೆಯ ಓವರ್‌ನಲ್ಲಿ 14 ರನ್‌ ನೀಡಿದ್ದು, ಟೀಂ ಇಂಡಿಯಾ ಸೋಲಿಗೆ ಪ್ರಮುಖ ಕಾರಣವಾಯಿತು.

    ಕೊನೆಯ ಓವರ್‌ನಲ್ಲಿ ಅರ್ಶ್‌ದೀಪ್‌ ಸಿಂಗ್‌ಗೆ 6 ಎಸೆತಗಳಲ್ಲಿ 7 ರನ್‌ಗಳನ್ನು ಕಂಟ್ರೋಲ್‌ ಮಾಡುವ ಸವಾಲು ಎದುರಾಗಿತ್ತು. ಮೊದಲ 2 ಎಸೆತಗಳಲ್ಲಿ ಒಂದೊಂದು ರನ್‌ ನೀಡಿದ ಅರ್ಶ್‌ದೀಪ್‌, 3ನೇ ಎಸೆತದಲ್ಲಿ 2 ರನ್‌ ನೀಡಿ ಉತ್ತಮ ಹಿಡಿದ ಸಾಧಿಸಿದ್ದರು.  ಕೊನೆಯ 2 ಎಸೆತಗಳಲ್ಲಿ 2 ರನ್‌ ಬೇಕಿದ್ದ ಲಂಕಾಗೆ 5ನೇ ಎಸೆತವನ್ನು ಬೀಟ್ ಮಾಡಿದರೂ, ರನೌಟ್‌ ಮಾಡುವ ಪ್ರಯತ್ನದಲ್ಲಿ ರಿಷಣ್‌ ಪಂತ್‌ 2 ರನ್‌ ಉಚಿತವಾಗಿಯೇ ನೀಡಿದ್ದರಿಂದ ಜಯ ಭಾರತದ ಕೈಚೆಲ್ಲಿತು. ಉತ್ತಮ ಜೊತೆಯಾಟವಾಡಿದ ಭಾನುಕಾ ರಾಜಪಕ್ಸೆ 17 ಎಸೆತಗಳಲ್ಲಿ 25 ರನ್‌ ಗಳಿಸಿದರೆ ಹಾಗೂ ದಾಸುನ್ ಶನಕ  18 ಎಸೆತಗಳಲ್ಲಿ 33 ರನ್‌ ಪೇರಿಸಿ ಲಂಕಾ ತಂಡಕ್ಕೆ ಜಯ ತಂದುಕೊಟ್ಟರು.

    ಚಾಹಲ್‌ ಕಮಾಲ್‌: ಮೊದಲ 10 ಓವರ್‌ಗಳ ವರೆಗೂ ಟೀಂ ಇಂಡಿಯಾ ಯಾವುದೇ ವಿಕೆಟ್‌ ಪಡೆದಿರಲಿಲ್ಲ. ನಂತರ ತಮ್ಮ ಬೌಲಿಂಗ್‌ ಕಮಾಲ್‌ ಮಾಡಿದ ಯಜುವೇಂದ್ರ ಚಾಹಲ್‌ 4 ಓವರ್‌ಗಳಲ್ಲಿ 34 ರನ್‌ ನೀಡಿ 3 ವಿಕೆಟ್‌ ಕಬಳಿಸಿದರು. ಈ ಬೆನ್ನಲ್ಲೇ ರವಿಚಂದ್ರನ್‌ ಅಶ್ವಿನ್‌ 1 ವಿಕೆಟ್‌ ಪಡೆದರು. ಇದರಿಂದ ಟೀಂ ಇಂಡಿಯಾ ಮತ್ತೆ ಗೆಲುವಿನ ಭರವಸೆ ಕಂಡುಕೊಂಡಿತ್ತು.

    ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ನಿಧಾನಗತಿಯಲ್ಲಿ ಬ್ಯಾಟಿಂಗ್‌ ಆರಂಭಿಸಿದ ಟೀಂ ಇಂಡಿಯಾ ಪವರ್‌ ಪ್ಲೇ ಮುಗಿಯುವಷ್ಟರಲ್ಲೇ 2 ವಿಕೆಟ್‌ಗಳನ್ನು ಕಳೆದುಕೊಂಡಿತು. 3ನೇ ಓವರ್‌ನಲ್ಲಿ 11 ರನ್‌ಗಳಾಗಿದ್ದಾಗಲೇ 6 ರನ್ ಗಳಿಸಿ ಆಡುತ್ತಿದ್ದ ಕೆ.ಎಲ್.ರಾಹುಲ್ ಎಲ್‌ಬಿ ಬಲೆಗೆ ಬಿದ್ದರು. ನಂತರ ಬಂದ ಕಿಂಗ್‌ ಕೊಹ್ಲಿ ಯಾವುದೇ ರನ್‌ಗಳಿಸದೇ ಶೂನ್ಯಕ್ಕೆ ಔಟಾದರು.

    ಈ ವೇಳೆ ಭಾರತ 13 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ನಾಯಕ ರೋಹಿತ್ ಶರ್ಮಾ 41 ಎಸೆತಗಳಲ್ಲಿ 70 ರನ್ ಕಲೆಹಾಕಿ ಉತ್ತಮ ಇನ್ನಿಗ್ಸ್‌ ಕಟ್ಟಿದ್ದರು. ಇದಕ್ಕೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ಇಬ್ಬರ ಸಾಂಘಿಕ ಬ್ಯಾಟಿಂಗ್‌ ಪ್ರದರ್ಶನದಿಂದ 97 ರನ್‌ಗಳು ಟೀಂ ಇಂಡಿಯಾ ಬತ್ತಳಿಕೆ ಸೇರಿತು. ಈ ವೇಳೆ ರೋಹಿತ್‌ ಶರ್ಮಾ 41 ಎಸೆತಗಳಲ್ಲಿ 72 ರನ್‌ (5 ಬೌಂಡರಿ, 4 ಸಿಕ್ಸರ್‌) ಸಿಡಿಸಿದರೆ, ಸೂರ್ಯಕುಮಾರ್‌ ಯಾದವ್‌ 29 ಎಸೆತಗಳಲ್ಲಿ 34 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಮಧ್ಯಮ ಕ್ರಮಾಂಕದ ನಂತರ ಕ್ರೀಸ್‌ಗಿಳಿದ ಯಾರೊಬ್ಬರು ಸ್ಥಿರವಾಗಿ ನಿಲ್ಲಲಿಲ್ಲ. ಹಾರ್ದಿಕ್ ಪಾಂಡ್ಯ 17 ರನ್, ರಿಷಭ್ ಪಂತ್ 17 ರನ್‌, ದೀಪಕ್‌ ಹೂಡಾ 3 ರನ್‌ ಗಳಿಸಿದರು. ಕೊನೆಯಲ್ಲಿ ಬಂದ ಅಶ್ವಿನ್‌ 7 ಎಸೆತಗಳಲ್ಲಿ 15 ರನ್‌ ಗಳಿಸಿದರು. ಇದು ಟೀಂ ಇಂಡಿಯಾ 170 ರನ್‌ಗಳ ಗಡಿ ದಾಟಲು ನೆರವಾಯಿತು.

    ಬೌಲಿಂಗ್‌ನಲ್ಲಿ ಶ್ರೀಲಂಕಾ ತಂಡದ ಪರ ದಿಲ್ಶನ್ ಮಧುಶಂಕ 4 ಓವರ್‌ಗಳಲ್ಲಿ 24 ರನ್ ನೀಡಿ 3 ವಿಕೆಟ್ ಗಳಿಸಿದರು. ಚಮಿಕಾ ಕರುಣಾರತ್ನೆ 4 ಓವರ್‌ಗಳಲ್ಲಿ 27 ರನ್ ನೀಡಿ 2 ವಿಕೆಟ್ ಪಡೆದರು. ನಾಯಕ ದಸುನ್ ಶನಕ 2 ಓವರ್‌ಗಳಲ್ಲಿ 26 ನೀಡಿ 2 ವಿಕೆಟ್ ಪಡೆದರು. ಮಹೀಶ್ ತೀಕ್ಷಣ ಒಂದು ವಿಕೆಟ್ ಪಡೆದುಕೊಂಡರು.

    Live Tv
    [brid partner=56869869 player=32851 video=960834 autoplay=true]

  • ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ಅರ್ಶ್‌ದೀಪ್‌ ಸಿಂಗ್ ಬೆಂಬಲಿಸಿದ ಪಾಕಿಸ್ತಾನದ ಮಾಜಿ ಕ್ರಿಕೆಟಿಗ

    ದುಬೈ: ಟೀಂ ಇಂಡಿಯಾ ಆಟಗಾರ ಅರ್ಶ್‌ದೀಪ್‌ ಸಿಂಗ್ ಅವರನ್ನು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಬೆಂಬಲಿಸಿದ್ದಾರೆ.

    ಏಷ್ಯಾಕಪ್‌ನ ಸೂಪರ್ ಫೋರ್ ಲೀಗ್ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಭಾನುವಾರ ಹಣಾಹಣಿ ನಡೆಯಿತು. ಈ ಪಂದ್ಯದ 18ನೇ ಓವರ್‌ನಲ್ಲಿ ಎಡಗೈ ವೇಗಿ ಬೌಲರ್ ಅರ್ಶ್‌ದೀಪ್‌ ಸಿಂಗ್ ಒತ್ತಡದ ಸಮಯದಲ್ಲಿ ಸುಲಭ ಕ್ಯಾಚ್ ಅನ್ನು ಕೈಚೆಲ್ಲಿದರು.

    ಇದರಿಂದ ಭಾರೀ ಟಿಕೆಗಳು ವ್ಯಕ್ತವಾಯಿತು. ಅಲ್ಲದೇ ಅರ್ಶ್‌ದೀಪ್‌ ಅವರ ಪುಟದಲ್ಲಿ ಖಲಿಸ್ತಾನ ಆಟಗಾರ ಎಂದು ಎಡಿಟ್ ಮಾಡಲಾಗಿತ್ತು. ಇದರಿಂದ ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಮಾಹಿತಿ ಮತ್ತು ತಂತ್ರಜ್ಞಾನ ಖಾತೆಯ ಸಚಿವಾಲಯ ವಿಕಿಪೀಡಿಯಾದ ಭಾರತದ ಪ್ರತಿನಿಧಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

    ಅನೇಕ ಕಡೆ ಟೀಕೆಗಳು ವ್ಯಕ್ತವಾಗುತ್ತಿದ್ದಂತೆ ಭಾರತೀಯ ಹಿರಿಯ ಹಾಗೂ ಮಾಜಿ ಕ್ರಿಕೆಟಿಗರು ಅರ್ಶ್‌ದೀಪ್‌ ಸಿಂಗ್ ಬೆಂಬಲಕ್ಕೆ ನಿಂತರು. ಈ ಬೆನ್ನಲ್ಲೇ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಸಹ ಅರ್ಶ್‌ದೀಪ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅವರನ್ನು ಅವಮಾನಿಸದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ಈ ಕುರಿತು ಟ್ವೀಟ್ ಮಾಡಿರುವ ಮೊಹಮ್ಮದ್ ಹಫೀಜ್, ಎಲ್ಲಾ ಭಾರತೀಯ ಕ್ರಿಕೆಟ್ ತಂಡದ ಅಭಿಮಾನಿಗಳಿಗೆ ನನ್ನ ವಿನಂತಿ ಏನೆಂದರೆ ನಾವು ಕ್ರೀಡೆಯಲ್ಲಿ ಮನುಷ್ಯರಾಗಿ ಸಹಜ ತಪ್ಪುಗಳನ್ನು ಮಾಡುತ್ತೇವೆ. ಆದರೆ ದಯವಿಟ್ಟು ಈ ತಪ್ಪುಗಳಿಂದ ಯಾರನ್ನೂ ಅವಮಾನಿಸಬೇಡಿ ಎಂದು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಡೇಜಾ ಅನುಪಸ್ಥಿತಿಯಲ್ಲಿ ಪಂತ್, ಹೂಡಾ, ಅಕ್ಷರ್ ಪಟೇಲ್ ನಡುವೆ ಪ್ಲೇಯಿಂಗ್ 11 ಪೈಪೋಟಿ

    ಜಡೇಜಾ ಅನುಪಸ್ಥಿತಿಯಲ್ಲಿ ಪಂತ್, ಹೂಡಾ, ಅಕ್ಷರ್ ಪಟೇಲ್ ನಡುವೆ ಪ್ಲೇಯಿಂಗ್ 11 ಪೈಪೋಟಿ

    ದುಬೈ: ಏಷ್ಯಾ ಕಪ್‍ನ ಸೂಪರ್ ಫೋರ್ ಹಂತದ ಎರಡನೇ ಪಂದ್ಯ ಇಂದು ಭಾರತ ಹಾಗೂ ಪಾಕಿಸ್ತಾನ ನಡುವೆ ನಡೆಯಲಿದೆ. ಭಾರತದ ಆಲ್‍ರೌಂಡರ್ ರವೀಂದ್ರ ಜಡೇಜಾ ಗಾಯಳುವಾಗಿ ತಂಡದಿಂದ ಹೊರಗುಳಿದಿದ್ದಾರೆ. ಇವರ ಸ್ಥಾನದಲ್ಲಿ ಆಡಲು ರಿಷಭ್ ಪಂತ್, ದೀಪಕ್ ಹೂಡಾ ಮತ್ತು ಅಕ್ಷರ್ ಪಟೇಲ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

    ಭಾರತ ಹಾಗೂ ಪಾಕಿಸ್ತಾನ ನಡುವಿನ ಸೂಪರ್ ಫೋರ್ ಹಂತದ ಪಂದ್ಯ ಮಹತ್ವ ಪಡೆದುಕೊಂಡಿದ್ದು, ಈಗಾಗಲೇ ಎರಡು ತಂಡಗಳು ಗೆಲ್ಲಲೇ ಬೇಕೆಂಬ ಹುಮ್ಮಸ್ಸಿನಲ್ಲಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದೆ. ಎರಡು ತಂಡದಲ್ಲೂ ಕೂಡ ಗಾಯದ ಸಮಸ್ಯೆ ಕಾಡುತ್ತಿದೆ. ಭಾರತದ ಪರ ಜಡೇಜಾ ಗಾಯದಿಂದಾಗಿ ಟೂರ್ನಿಯಿಂದಲೇ ಹೊರನಡೆದಿದ್ದಾರೆ. ಇದು ಟೀಂ ಇಂಡಿಯಾಗೆ ಹೊಡೆತ ನೀಡಿದೆ. ಇದನ್ನೂ ಓದಿ: ಮುಂದಿನ ಐಪಿಎಲ್‌ಗೂ ಧೋನಿ ಚೆನ್ನೈ ತಂಡ ನಾಯಕ

    ಈ ನಡುವೆ ಜಡೇಜಾ ಸ್ಥಾನ ತುಂಬಲು ಆಲ್‍ರೌಂಡರ್ ಮತ್ತು ಬ್ಯಾಟ್ಸ್‌ಮ್ಯಾನ್‌ಗಳ ನಡುವೆ ಪೈಪೋಟಿ ಏರ್ಪಟ್ಟಿದ್ದು, ಜಡೇಜಾರಂತೆ ಸ್ಪಿನ್ ಆಲ್‍ರೌಂಡರ್‌ಗಳಾಗಿ ಅಕ್ಷರ್ ಪಟೇಲ್ ಮತ್ತು ಅಶ್ವಿನ್ ತಂಡದಲ್ಲಿದ್ದಾರೆ. ಜೊತೆಗೆ ದೀಪಕ್ ಹೂಡಾ ಕೂಡ ಬೌಲಿಂಗ್ ಮಾಡುವ ಸಾಮರ್ಥ್ಯ ಹೊಂದಿರುವುದರಿಂದಾಗಿ ಪ್ಲೇಯಿಂಗ್ 11ನಲ್ಲಿ ಆಡಲು ಈ ಮೂವರ ನಡುವೆ ಪೈಪೋಟಿ ಜೋರಾಗಿದೆ. ಇವರೊಂದಿಗೆ ಪಂತ್ ಕೂಡ ಸೆಣಸಾಡಬೇಕಾದ ಸ್ಥಿತಿ ಇದ್ದು, ನಾಯಕ ಹಾಗೂ ಕೋಚ್‍ಗೆ ತಂಡದ ಆಯ್ಕೆ ತಲೆನೋವು ಶುರುವಾಗಿದೆ. ಇದನ್ನೂ ಓದಿ: T20 ವಿಶ್ವಕಪ್‍ನಿಂದಲೂ ಜಡೇಜಾ ಔಟ್?

    ಜಡೇಜಾ ಗಾಯದಿಂದಾಗಿ ಹೊರ ನಡೆದಾಗ ಅವರ ಸ್ಥಾನಕ್ಕೆ ಬಂದ ಅಕ್ಷರ್ ಪಟೇಲ್ ಪ್ಲೇಯಿಂಗ್ 11ನಲ್ಲಿ ಕಾಣಿಸಿಕೊಳ್ಳುವ ಮುಂಚೂಣಿ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಆದರೆ ಪಂದ್ಯ ಆರಂಭಕ್ಕೂ ಮುನ್ನ ಯಾರಿಗೆ ನಾಯಕ ಹಾಗೂ ಕೋಚ್ ಅವಕಾಶ ಕಲ್ಪಿಸಿಕೊಡುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಈ ಹಿಂದಿನ ಕಾಲ ಬದಲಾಯಿತು – ಪಾಂಡ್ಯ, ಪಂತ್, ಸೂರ್ಯ, ಧೋನಿಯನ್ನು ಹಿಂಬಾಲಿಸುತ್ತಿದ್ದಾರೆ: ರಶೀದ್ ಲತೀಫ್

    ಈ ಹಿಂದಿನ ಕಾಲ ಬದಲಾಯಿತು – ಪಾಂಡ್ಯ, ಪಂತ್, ಸೂರ್ಯ, ಧೋನಿಯನ್ನು ಹಿಂಬಾಲಿಸುತ್ತಿದ್ದಾರೆ: ರಶೀದ್ ಲತೀಫ್

    ಇಸ್ಲಾಮಾಬಾದ್: ಪ್ರಸ್ತುತ ನಡೆಯುತ್ತಿರುವ ಏಷ್ಯಾಕಪ್‍ನಲ್ಲಿ ಭಾರತದ ಆಟಗಾರರಾದ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ ಸೇರಿದಂತೆ ಬಹುತೇಕ ಆಟಗಾರರು ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಹಿಂಬಾಲಿಸುತ್ತಿದ್ದಾರೆ. ಹಾಗಾಗಿ ಅವರ ಆಟದ ಶೈಲಿ ಬದಲಾಗಿದೆ ಎಂದು ಪಾಕಿಸ್ತಾನದ ಮಾಜಿ ಆಟಗಾರ ರಶೀದ್ ಲತೀಫ್ ಅಭಿಪ್ರಾಯಪಟ್ಟಿದ್ದಾರೆ.
    ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಲತೀಫ್, ಭಾರತ ತಂಡದಲ್ಲಿರುವ ಬಹುತೇಕ ಆಟಗಾರರು ಈ ಹಿಂದೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಮತ್ತು ಕೊಹ್ಲಿಯನ್ನು ಹಿಂಬಾಲಿಸುತ್ತಿದ್ದರು. ಆದರೆ ಇದೀಗ ಕಾಲ ಬದಲಾಗಿದೆ. ಪಂತ್, ಸೂರ್ಯಕುಮಾರ್ ಯಾದವ್, ಪಾಂಡ್ಯ ಸೇರಿದಂತೆ ಬಹುತೇಕ ಆಟಗಾರರು ಧೋನಿಯನ್ನು ಹಿಂಬಾಲಿಸುತ್ತಿದ್ದಾರೆ ಎಂದಿದ್ದಾರೆ.  ಇದನ್ನೂ ಓದಿ: 6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕೊಹ್ಲಿ – 1 ಓವರ್ 6 ರನ್
    ಈ ಹಿಂದಿನಂತೆ ಸಚಿನ್, ಸೆಹ್ವಾಗ್ ಮತ್ತು ಕೊಹ್ಲಿಯ ಬಗ್ಗೆ ಆಟಗಾರರಿಗೆ ಗೌರವ ಇದೆ ಆದರೆ ಧೋನಿಯಂತೆ ಆಡಬೇಕೆಂಬ ಬಯಕೆಯೊಂದಿಗೆ ಅವರನ್ನು ಹಿಂಬಾಲಿಸುತ್ತಿದ್ದಾರೆ ಹಾಗಾಗಿ ತಂಡದಲ್ಲಿ ಶ್ರೇಷ್ಠ ಪ್ರದರ್ಶನ ನೀಡುತ್ತಿದ್ದಾರೆ. ಇದು ತಂಡದ ಪ್ರದರ್ಶನದ ಮೇಲೆ ಪಾಸಿಟಿವ್ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಲಯಕ್ಕೆ ಮರಳಿದ ರನ್ ಮಿಷಿನ್ ಕೊಹ್ಲಿಯಿಂದ ಮತ್ತೊಂದು ಸಾಧನೆ
    ಏಷ್ಯಾಕಪ್‍ನಲ್ಲಿ ಭಾರತ ತಂಡ ಉತ್ತಮ ಪ್ರದರ್ಶನ ನೀಡುತ್ತಿದೆ. ಪ್ರಮುಖ ಆಟಗಾರರ ಭರ್ಜರಿ ಪ್ರದರ್ಶನದಿಂದ ಭಾರತ ಸೂಪರ್ ಫೋರ್ ಹಂತಕ್ಕೆ ಲಗ್ಗೆ ಇಟ್ಟಿದೆ. ಕೂಟದ ಮೊದಲೆರಡು ಪಂದ್ಯಗಳನ್ನು ಭಾರತ ಗೆದ್ದುಬೀಗಿದೆ. ಪಾಕಿಸ್ತಾನ ವಿರುದ್ಧ ಪಾಂಡ್ಯ ಪವರ್ ಫುಲ್ ಹಿಟ್‍ಗಳಿಂದ ಗಮನಸೆಳೆದರೆ, ಹಾಕಾಂಗ್ ವಿರುದ್ಧ ಸೂರ್ಯಕುಮಾರ್ ಯಾದವ್ ಮತ್ತು ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಇದು ಯಾವ್ ಶಾಟ್ ಗುರು – ಪಂತ್ ಕಾಲೆಳೆದ ನೆಟ್ಟಿಗರು

    ಇದು ಯಾವ್ ಶಾಟ್ ಗುರು – ಪಂತ್ ಕಾಲೆಳೆದ ನೆಟ್ಟಿಗರು

    ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮ್ಯಾನ್‌ ರಿಷಭ್ ಪಂತ್ ಬಾರಿಸಿದ ಬೌಂಡರಿ ಶಾಟ್ ಒಂದು ಗಮನ ಸೆಳೆಯುತ್ತಿದೆ.

    ಪಂತ್ ಹೊಡಿಬಡಿ ದಾಂಡಿಗ. ಕ್ರೀಸ್‌ಗೆ ಬಂದ ನಂತರ ಅಬ್ಬರ ಬ್ಯಾಟಿಂಗ್ ಮೂಲಕ ರನ್ ಹೆಚ್ಚಿಸುವ ಆಕ್ರಮಣ ಶೈಲಿಯ ಆಟಕ್ಕೆ ಪಂತ್ ಫೇಮಸ್. ವಿಂಡೀಸ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ 61 ರನ್‍ಗಳಿಗೆ 2 ವಿಕೆಟ್ ಕಳೆದುಕೊಂಡ ಬಳಿಕ ಕ್ರೀಸ್‌ಗೆ ಆಗಮಿಸಿದ ಪಂತ್ ಆರಂಭದಿಂದಲೇ ಅಬ್ಬರದಾಟ ಆರಂಭಿಸಿದರು. ವಿಂಡೀಸ್ ಬೌಲರ್‌ಗಳಿಗೆ ಬೌಂಡರಿಗಳ ರುಚಿ ತೋರಿಸುತ್ತ ಸಾಗಿದ ಪಂತ್, ಮೆಕಾಯ್ ಎಸೆದ ಎಸೆತ ಒಂದಕ್ಕೆ ಎಕ್ಸ್ಟ್ರ ಕವರ್ ಶಾಟ್ ಬೌಂಡರಿ ಪ್ರೇಕ್ಷಕರ ಮನಗೆದ್ದಿತ್ತು. ಪಂತ್ ಒಂದು ಕಾಲೆತ್ತಿ ಒಂಟಿ ಕಾಲಿನಲ್ಲಿ ನಿಂತು ಬೌಂಡರಿ ಬಾರಿಸಿದ ಭಂಗಿ ಕಂಡು ಪ್ರೇಕ್ಷಕರು ಬೆರಗಾದರು. ಇತ್ತ ನೆಟ್ಟಿಗರು ಇದು ಯಾವ್ ಶಾಟ್ ಗುರು, ಬ್ಯಾಟಿಂಗ್‍ನಲ್ಲಿ ಯೋಗ ಮಾಡಿದ ಪಂತ್ ಹೀಗೆ ಬಗೆ ಬಗೆಯ ಕಾಮೆಂಟ್ ಮೂಲಕ ಕಾಲೆಳೆದಿದ್ದಾರೆ. ಇದನ್ನೂ ಓದಿ: ಸಿಕ್ಸ್‌ ಸಿಡಿಸಿ ಅಫ್ರಿದಿಯನ್ನು ಹಿಂದಿಕ್ಕಿದ ಹಿಟ್‌ಮ್ಯಾನ್‌ – ಭಾರತಕ್ಕೆ ಸರಣಿ ಜಯ

    https://twitter.com/__memeheist__/status/1556123248256897024

    ಇತ್ತ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‍ಗಳಿಸಿತು. 192 ರನ್‍ಗಳ ಗುರಿಯನ್ನು ಪಡೆದ ವಿಂಡೀಸ್ 19.1 ಓವರ್‌ಗಳಲ್ಲಿ 132 ರನ್‍ಗಳಿಗೆ ಆಲೌಟ್ ಆಯ್ತು. ಈ ಮೂಲಕ ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ವಿಂಡೀಸ್ ವಿರುದ್ಧ 59 ರನ್‍ಗಳ ಜಯ ಸಾಧಿಸಿ 5 ಪಂದ್ಯಗಳ ಟಿ20 ಸರಣಿಯನ್ನು 3-1 ಅಂತರದಿಂದ ಗೆದ್ದುಕೊಂಡಿದೆ. ಇದನ್ನೂ ಓದಿ: CWG 2022: ಚಿನ್ನಕ್ಕೆ ಮುತ್ತಿಟ್ಟ ರವಿ ಕುಮಾರ್ ದಹಿಯಾ, ವಿನೇಶ್ ಫೋಗಟ್ – ಪೂಜಾ ಗೆಹ್ಲೋಟ್‍ಗೆ ಕಂಚು

    Live Tv
    [brid partner=56869869 player=32851 video=960834 autoplay=true]

  • `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    `ಸೂರ್ಯ’ನ ಶಾಖಕ್ಕೆ ಕರಗಿದ ವಿಂಡೀಸ್ – ಭಾರತಕ್ಕೆ 7 ವಿಕೆಟ್‌ಗಳ ಭರ್ಜರಿ ಜಯ

    ಟ್ರೆನಿನಾಡ್: ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಅಬ್ಬರ ಹಾಗೂ ಭುವನೇಶ್ವರ್ ಕುಮಾರ್ ಅವರ ಬೌಲಿಂಗ್ ಬಲದಿಂದ ಭಾರತ ತಂಡ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಎದುರು 7 ವಿಕೆಟ್ ಭರ್ಜರಿ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆತಿಥೇಯ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿ, ಭಾರತಕ್ಕೆ 165 ರನ್‌ಗಳ ಗುರಿ ನೀಡಿತು. ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ಭಾರತ 19 ಓವರ್‌ಗಳಲ್ಲೇ 3 ವಿಕೆಟ್ ನಷ್ಟಕ್ಕೆ 165 ರನ್‌ಗಳಿಸಿ ಮುನ್ನಡೆ ಸಾಧಿಸಿತು. ರೋಹಿತ್ ಶರ್ಮಾ ಬಳಗ ಈ ಗೆಲುವಿನ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1ರ ಮುನ್ನಡೆ ಸಾಧಿಸಿದೆ.

    https://twitter.com/Abdullah__Neaz/status/1554541514750959616

    165 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಅವರು ಬೆನ್ನಿನ ಸ್ನಾಯು ಸೆಳೆತಕ್ಕೆ ಒಳಗಾಗಿ 11 ರನ್‌ಗಳಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಈ ವೇಳೆ ಮತ್ತೊಬ್ಬ ಆರಂಭಿಕನಾಗಿದ್ದ ಸೂರ್ಯಕುಮಾರ್ ಯಾದವ್‌ಗೆ 2ನೇ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಸಾಥ್ ನೀಡಿದರು. ಸೂರ್ಯಕುಮಾರ್ ಮತ್ತು ಶ್ರೇಯಸ್ ಅಯ್ಯರ್ 86 ರನ್ ಜೊತೆಯಾಟ ಆಡಿದರು.

    ವಿಂಡೀಸ್ ಬೌಲಿಂಗ್ ದಾಳಿಯನ್ನು ದಿಟ್ಟವಾಗಿ ಎದುರಿಸಿದ ಸೂರ್ಯಕುಮಾರ್ 8 ಬೌಂಡರಿ ಮತ್ತು 4 ಸಿಕ್ಸರ್ ಚಚ್ಚಿದರು. ಡೊಮಿನಿಕ್ ಡ್ರೇಕ್ಸ್ ಎಸೆತದಲ್ಲಿ ಔಟಾಗುವ ಮುನ್ನ ಅವರು ತಂಡವನ್ನು ಉತ್ತಮ ಸ್ಥಿತಿಗೆ ತಂದು ನಿಲ್ಲಿಸಿದ್ದರು. ಇದನ್ನೂ ಓದಿ: ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮಧ್ಯಮ ಕ್ರಮಾಂಕದಲ್ಲಿ ಟೀಂ ಇಂಡಿಯಾಕ್ಕೆ ಆಸರೆಯಾದ ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ನೊಂದಿಗೆ ಅಜೇಯ 33 ರನ್‌ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ದೀಪಕ್ ಹೂಡಾ ಅಜೇಯ 10 ಹಾಗೂ ಹಾರ್ದಿಕ್ ಪಾಂಡ್ಯ 4 ರನ್ ಗಳಿಸಿದರು. ಟೀಂ ಇಂಡಿಯಾ ಬೌಲರ್‌ಗಳಾದ ಭುವನೇಶ್ವರ್ ಕುಮಾರ್ 4 ಓವರ್‌ಗಳಲ್ಲಿ 35 ರನ್ ನೀಡಿ 2 ವಿಕೆಟ್ ಉರುಳಿಸಿದರು. ಹಾರ್ದಿಕ್ ಪಾಂಡ್ಯ, ಅರ್ಶ್ದೀಪ್ ಸಿಂಗ್ ತಲಾ ಒದೊಂದು ವಿಕೆಟ್ ಪಡೆದರು.

    ಮೇಯರ್ಸ್ ಆಸರೆ: ಮೊದಲು ಬ್ಯಾಟ್ ಮಾಡಿದ್ದ ವೆಸ್ಟ್ ಇಂಡೀಸ್ ಕೈಲ್ ಮೇಯರ್ಸ್ ಅವರ ಅರ್ಧಶತಕದ ನೆರವಿನಿಂದ ಉತ್ತಮ ಮೊತ್ತ ಕಲೆಹಾಕಿತ್ತು. 50 ಎಸೆತಗಳನ್ನು ಎದುರಿಸಿದ ಮೇಯರ್ಸ್ 8 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 73 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಬ್ರೆಂಡನ್ ಕಿಂಗ್ 20 ರನ್, ನಾಯಕ ನಿಕೊಲಸ್ ಪೂರನ್ 22 ರನ್ ಸೇರಿಸಿ ತಂಡಕ್ಕೆ ಆಸರೆಯಾದರು.

    ಒಟ್ಟಿನಲ್ಲಿ ಟೀಂ ಇಂಡಿಯಾವನ್ನು ಕಟ್ಟಿಹಾಕುವಲ್ಲಿ ವೆಸ್ಟ್ ಇಂಡೀಸ್ ಬೌಲರ್‌ಗಳು ವಿಫಲವಾದ್ದರಿಂದ ಗೆಲುವು ಟೀಂ ಇಂಡಿಯಾ ಪಾಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಮೆಕಾಯ್ ಮ್ಯಾಜಿಕ್, 2ನೇ T20ಯಲ್ಲಿ ವಿಂಡೀಸ್‌ಗೆ ರೋಚಕ ಜಯ – ಹೋರಾಡಿ ಸೋತ ಭಾರತ

    ಟ್ರೆನಿನಾಡ್: ಬ್ರಾಂಡನ್ ಕಿಂಗ್ ಅವರ ಆಕರ್ಷಕ ಅರ್ಧ ಶತಕ ಹಾಗೂ ಒಬೆಡ್ ಮೆಕಾಯ್ ಅವರ ಮಾರಕ ಬೌಲಿಂಗ್ ನೆರವಿನಿಂದ ಭಾರತ ಹಾಗೂ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ವಿಂಡೀಸ್ ರೋಚಕ ಜಯ ಸಾಧಿಸಿದೆ.

    ಇಲ್ಲಿನ ವಾರ್ನರ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ 2ನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿದ ವೆಸ್ಟ್ ಇಂಡೀಸ್, ಬ್ಯಾಟಿಂಗ್ ಮಾಡುವ ಅವಕಾಶವನ್ನು ಟೀಂ ಇಂಡಿಯಾಕ್ಕೆ ನೀಡಿತು. ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾ 19.4 ಓವರ್‌ಗಳಲ್ಲಿ 138 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡಿತು. ಈ ರನ್‌ಗಳ ಗುರಿ ಬೆನ್ನತ್ತಿದ ವಿಂಡೀಸ್ ತಂಡ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 141 ರನ್‌ಗಳಿಸಿ ರೋಚಕ ಜಯ ಸಾಧಿಸಿತು. ಇದನ್ನೂ ಓದಿ: Commonwealth Games: ಹರ್ಜಿಂದರ್ ಹವಾ – ಭಾರತಕ್ಕೆ ಮತ್ತೊಂದು ಕಂಚು

    ಅರಂಭದಿಂದಲೇ ಮಾರಕ ಬೌಲಿಂಗ್ ದಾಳಿ ಮಾಡಿದ ವಿಂಡೀಸ್ ತಂಡದ ಬೌಲರ್‌ಗಳು ಟೀಂ ಇಂಡಿಯಾದ ಯಾವೊಬ್ಬ ಆಟಗಾರರೂ ಸ್ಥಿರವಾಗಿ ಕ್ರೀಸ್‌ನಲ್ಲಿ ನಿಲ್ಲದಂತೆ ಕಟ್ಟಿಹಾಕಿದರು. ಪರಿಣಾಮವಾಗಿ 138 ರನ್‌ಗಳ ಸಾಧಾರಣ ಮೊತ್ತವನ್ನಷ್ಟೇ ಭಾರತ ಪೇರಿಸಲು ಸಾಧ್ಯವಾಯಿತು. ಈ ಮೊತ್ತವನ್ನು ರಕ್ಷಣೆ ಮಾಡಲು ಭಾರತೀಯ ಬೌಲರ್‌ಗಳು ಕೂಡ ಅಂತಿಮ ಹಂತದವರೆಗೂ ಹೋರಾಡಿದರಾದರೂ ಕೊನೆಯ ಹಂತದಲ್ಲಿ ವಿಂಡೀಸ್ ಗೆದ್ದು ಬೀಗಿದೆ. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಮೆಕಾಯ್ ಮ್ಯಾಜಿಕ್: ಇನ್ನೂ ಭಾರತೀಯ ಬ್ಯಾಟಿಂಗ್ ವಿಭಾಗಕ್ಕೆ ದೊಡ್ಡ ಆಘಾತ ನೀಡಿದ್ದು ವೆಸ್ಟ್ ಇಂಡೀಸ್ ತಂಡದ ವೇಗಿ ಒಬೆದ್ ಮೆಕಾಯ್. ಪಂದ್ಯದ ಮೊದಲ ಎಸೆತವೇ ಭಾರತ ತಂಡಕ್ಕೆ ಆಘಾತ ನೀಡಿತು. ಪಂದ್ಯದ ಮೊದಲ ಎಸೆತದಲ್ಲಿಯೇ ಆರಂಭಿಕ ಆಟಗಾರ ರೋಹಿತ್ ಶರ್ಮಾ ವಿಕೆಟ್ ಉರುಳಿಸಿದರು. ತಮ್ಮ ಮುಂದಿನ ಓವರ್‌ನ ಮೊದಲ ಎಸೆತದಲ್ಲಿ ಸೂರ್ಯಕುಮಾರ್ ಯಾದವ್ ವಿಕೆಟ್ ಪಡೆದರು. ಅದಾದ ಬಳಿಕ ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆರ್.ಅಶ್ವಿನ್ ಹಾಗೂ ಭುವನೇಶ್ವರ್ ಕುಮಾರ್ ವಿಕೆಟ್ ಕಬಳಿಸಿ ಟೀಂ ಇಂಡಿಯಾವನ್ನು ಅಲ್ಪ ಮೊತ್ತದಲ್ಲೇ ಕಟ್ಟಿಹಾಕಿದರು. 4 ಓವರ್‌ಗಳಲ್ಲಿ ಕೇವಲ 17 ರನ್ ನೀಡಿದ ಮೆಕಾಯ್ 6 ವಿಕೆಟ್ ಗಳಿಸಿ ತಂಡದ ಗೆಲುವಿಗೆ ಕಾರಣರಾದರು.

    ಬ್ರೆಂಡನ್ ಕಿಂಗ್ ಅರ್ಧ ಶತಕ: ಅದರಂತೆ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದ ಆರಂಭಿಕ ಆಟಗಾರ ಬ್ರೆಂಡನ್ ಕಿಂಗ್ ಜವಾಬ್ದಾರಿಯುತ ಅರ್ಧ ಶತಕ ಸಿಡಿಸಿ ತಂಡಕ್ಕೆ ನೆರವಾಗಿದ್ದಾರೆ. 52 ಎಸೆತಗಳನ್ನು ಎದುರಿಸಿದ ಬ್ರೆಂಡನ್ 68 ರನ್ (8 ಬೌಂಡರಿ, 2 ಸಿಕ್ಸರ್) ಗಳಿಸಿದರು. ಬಳಿಕ ಅಂತಿಮ ಹಂತದಲ್ಲಿ ಡೆವೋನ್ ಥೋಮಸ್ ಸ್ಪೋಟಕ ಪ್ರದರ್ಶನ ನೀಡಿ ಭಾರತದಿಂದ ಗೆಲುವನ್ನು ಕಸಿದರು. ಥೋಮರ್ 19 ಎಸೆತಗಳಲ್ಲಿ ಸ್ಪೋಟಕ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು.

    ರೋಹಿತ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದ ನಂತರ ಸೂರ್ಯಕುಮಾರ್ ಯಾದವ್ 11, ಶ್ರೇಯಸ್ ಅಯ್ಯರ್ 10 ಗಳಿಸಿ ಪೆವಿಲಿಯನ್ ಸೇರಿದರು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್‌ಪಂತ್ ಹಾಗೂ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ ಅಬ್ಬರಿಸಿದರು. ಸ್ಫೋಟಕ ಬ್ಯಾಟಿಂಗ್ ಆರಂಭಿಸಿದ ರಿಷಭ್ ಪಂತ್ 12 ಎಸೆಗಳಲ್ಲಿ 2 ಸಿಕ್ಸರ್ ಹಾಗೂ 1 ಬೌಂಡರಿಯೊಂದಿಗೆ 24 ರನ್ ಸಿಡಿಸಿದರೆ, ಹಾರ್ದಿಕ್ ಪಾಂಡ್ಯ 31 ಎಸೆತಗಳಲ್ಲಿ 31 ರನ್ (1 ಬೌಂಡರಿ, 2 ಸಿಕ್ಸರ್) ಸಿಡಿಸಿದರು. ಇವರಿಬ್ಬೆ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 55 ರನ್‌ಗಳನ್ನು ಗಳಿಸಿತ್ತು. ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು.

    ಬೌಲಿಂಗ್‌ನಲ್ಲಿ ಅರ್ಶ್‌ದೀಪ್‌ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಹಾರ್ದಿಕ್ ಪಾಂಡ್ಯ, ಅವೇಶ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು. ಇದನ್ನೂ ಓದಿ: IND vs WI 2nd T20: ಎರಡು ಗಂಟೆ ತಡವಾಗಿ ಪಂದ್ಯ ಆರಂಭ – ಕಾರಣ ಮಾತ್ರ ಸಿಂಪಲ್

    ಸರಣಿ ಸಮಬಲ: ಇನ್ನು ಈ ಫಲಿತಾಂಶದಿಂದಾಗಿ 5 ಟಿ20 ಪಂದ್ಯಗಳ ಟಿ20 ಸರಣಿ ಈಗ 1-1ರಲ್ಲಿ ಸಮಬಲಗೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 2ನೇ ಓವರ್‌ನಿಂದಲೇ ಸ್ಫೋಟಕ ಬ್ಯಾಟಿಂಗ್ ಆರಂಭಿಸಿದರೂ ಅತಿ ವೇಗವಾಗಿಯೇ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಾ ಸಾಗಿತು. ಐದು ಓವರ್‌ಗಳಲ್ಲಿ 48 ರನ್ ಗಳಿಸಿದ್ದ ಟೀಂ ಇಂಡಿಯಾ 4 ವಿಕೆಟ್‌ಗಳನ್ನು ಕಳೆದುಕೊಂಡಿತ್ತು.

    Live Tv
    [brid partner=56869869 player=32851 video=960834 autoplay=true]