Tag: Rishabh Shetty

  • ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಧರ್ಮಸ್ಥಳದ ಧರ್ಮಾಧಿಕಾರಿಗಳ ಭೇಟಿ ಮಾಡಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ ದಂಪತಿ

    ಕಾಂತಾರ ಸಿನಿಮಾದ ಯಶಸ್ಸಿನ ಬೆನ್ನಲ್ಲೇ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಧರ್ಮಸ್ಥಳಕ್ಕೆ (Dharmasthala,) ಭೇಟಿ ನೀಡಿ ಮಂಜುನಾಥ ದರ್ಶನ ಪಡೆದಿದ್ದಾರೆ. ನಂತರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ರಿಷಬ್ ದಂಪತಿ, ಕೆಲ ಕಾಲ ಸಿನಿಮಾ ಬಗ್ಗೆ ಅವರೊಂದಿಗೆ ಚರ್ಚೆ ಮಾಡಿದ್ದಾರೆ. ಈ ಸಿನಿಮಾ ಮಾಡುವ ಮುನ್ನವೂ ರಿಷಬ್ ಇಲ್ಲಿಗೆ ಭೇಟಿ ನೀಡಿ ವೀರೇಂದ್ರ ಹೆಗ್ಗಡೆಯವರನ್ನು ಸಿನಿಮಾ ಕುರಿತು ಸಲಹೆ ಪಡೆದಿದ್ದರು. ಇದೀಗ ಮತ್ತೆ ಅವರನ್ನು ಭೇಟಿ ಮಾಡಿ, ಸಿನಿಮಾದ ಯಶಸ್ಸಿನ ಕುರಿತು ಖುಷಿಯನ್ನು ಹಂಚಿಕೊಂಡಿದ್ದಾರೆ.

    ಕಾಂತಾರ (Kantara) ಸಿನಿಮಾ ಆಗಲು ಪರೋಕ್ಷವಾಗಿ ವೀರೇಂದ್ರ ಹೆಗ್ಗಡೆಯವರೂ (Virendra Heggade) ಕಾರಣ ಎಂದು ಈ ಹಿಂದೆಯೇ ರಿಷಬ್ ಹೇಳಿದ್ದರು. ಈ ಚಿತ್ರಕ್ಕಾಗಿ ಹೆಗ್ಗಡೆ ಅವರು ಕೆಲವು ಸಲಹೆಗಳನ್ನೂ ನೀಡಿದ್ದರು ಎಂದೂ ತಿಳಿಸಿದ್ದರು. ಸಿನಿಮಾದ ಟ್ರೇಲರ್ ಬಿಡುಗಡೆ ಸೇರಿದಂತೆ ಹಲವು ಬಾರಿ ಈ ಕ್ಷೇತ್ರಕ್ಕೆ ರಿಷಬ್ ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ವೀರೇಂದ್ರ ಹೆಗ್ಗಡೆ ಅವರು ಕೂಡ ಕುಟುಂಬ ಸಮೇತ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದರು. ಮತ್ತು ಚಿತ್ರದ ಕುರಿತು ಮೆಚ್ಚುಗೆಯನ್ನೂ ಸೂಚಿಸಿದ್ದರು. ಹಾಗಾಗಿ ರಿಷಬ್ ಮತ್ತೆ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಇದನ್ನೂ ಓದಿ:ಅನುಪಮಾ ಗೌಡ ವಿರುದ್ಧ ಸಿಡಿದೆದ್ದ ರೂಪೇಶ್‌ ರಾಜಣ್ಣ

    ಕಾಂತಾರ ಸಿನಿಮಾ ರಿಲೀಸ್ ಆದ ಬಹುತೇಕ ಕಡೆ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅನೇಕ ಗಣ್ಯರು ಈ ಸಿನಿಮಾವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು. ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

    ‘ಕಾಂತಾರ’ ಸಿನಿಮಾ ನೋಡಿ ಮೆಚ್ಚಿಕೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

    ದೇಶದ ನಾನಾ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಮಠಾಧೀಶರು ಮತ್ತು ರಾಜಕೀಯ ಮುಖಂಡರು ಚಿತ್ರವನ್ನು ನೋಡಿ ಪ್ರಶಂಸಿಸುತ್ತಿದ್ದಾರೆ. ಮೊನ್ನೆಯಷ್ಟೇ ಸದ್ಗುರು ಜಗ್ಗಿವಾಸುದೇವ್, ಶ್ರೀ ರವಿಶಂಕರ್ ಗುರೂಜಿ ತಮ್ಮ ಆಶ್ರಮದಲ್ಲೇ ಭಕ್ತರೊಟ್ಟಿಗೆ ಸಿನಿಮಾ ನೋಡಿದ್ದರು, ಈ ಸಿನಿಮಾದ ವಿಶೇಷತೆ ಬಗ್ಗೆ ಮಾತನಾಡಿದ್ದರು. ನಿನ್ನೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಿನಿಮಾ ನೋಡಿದ್ದಾರೆ.

    ಬೆಂಗಳೂರಿನಲ್ಲಿ ತಮ್ಮ ಆಪ್ತರು ಮತ್ತು ಸ್ವಯಂ ಸೇವಕರ ಜೊತೆ ಸಿನಿಮಾ ನೋಡಿರುವ ನಿರ್ಮಲಾ ಸೀತಾರಾಮನ್ (Nirmala Sitharaman) ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಬಿಂಬಿಸುವಂತಹ ಚಿತ್ರ ಇದಾಗಿದೆ ಎಂದು ಬಣ್ಣಿಸಿದ್ದಾರೆ. ಇಂತಹ ಚಿತ್ರಗಳು ಹೆಚ್ಚೆಚ್ಚು ತೆರೆಯ ಮೇಲೆ ಬರಬೇಕು ಎನ್ನುವ ಆಶಯವನ್ನೂ ಅವರು ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರೂ ನೋಡಲೇಬೇಕಾದ ಸಿನಿಮಾವಿದು ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿ ಕಾರ್ಯಕ್ರಮ ಅವ್ಯವಸ್ಥೆ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ

    ನಿರ್ಮಲಾ ಸೀತಾರಾಮನ್ ಮಾಡಿರುವ ಟ್ವೀಟ್‌ಗೆ ರಿಷಬ್ ಶೆಟ್ಟಿ (Rishabh Shetty) ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಹಣಕಾಸು ಸಚಿವರಿಗೆ ಧನ್ಯವಾದಗಳನ್ನೂ ಅವರು ತಿಳಿಸಿದ್ದಾರೆ. ಕಾಂತಾರ ಸಿನಿಮಾ ಈಗಾಗಲೇ ನಾನಾ ಭಾಷೆಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಹದಿನೈದು ಕೋಟಿಯಲ್ಲಿ ತಯಾರಾದ ಈ ಸಿನಿಮಾ ಅಂದಾಜು 300 ಕೋಟಿ ಗಳಿಸಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಹಿಂದಿಯಲ್ಲೂ ಅದು ಹೌಸ್ ಫುಲ್ ಕಾಣುವ ಮೂಲಕ ದಾಖಲೆ ಕೂಡ ಬರೆದಿದೆ.

    Live Tv
    [brid partner=56869869 player=32851 video=960834 autoplay=true]

  • ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಬಗ್ಗೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತ ಪಡಿಸಿದ್ದು ವಿಶೇಷವಾದರೂ, ಅದಕ್ಕಿಂತ ವಿಶೇಷ ಅನಿಸಿದ್ದು ಕೇಂದ್ರ ಸಚಿವ ಪಿಯೂಶ್ ಗೋಯಲ್ (Piyush Goyal) ಮೆಚ್ಚಿಕೊಂಡ ರೀತಿಗೆ. ಜೊತೆಗೆ ಅದನ್ನು ಸ್ಪೂರ್ತಿಯಾಗಿ ತಗೆದುಕೊಳ್ಳುವಂತೆ ಹೂಡಿಕೆದಾರರಿಗೆ ಹೇಳಿದ್ದು. ಬೆಂಗಳೂರಿನಲ್ಲಿ (Bangalore) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಸಚಿವರು ಚಿತ್ರವನ್ನು ಉದಾಹರಣೆಯಾಗಿ ನೀಡಿದ್ದಾರೆ.

    ಜಾಗತಿಕ ಬಂಡವಾಳ ಹೂಡಿಕೆದಾರರ (Investors Conference) ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್, ‘ಕಾಂತಾರ ಸಿನಿಮಾವನ್ನು ಉಲ್ಲೇಖ ಮಾಡಿದ್ದಲ್ಲದೇ, ಚಿತ್ರವನ್ನು ಹೊಗಳಿದರು. ಇದೊಂದು ಸಣ್ಣ ಬಂಡವಾಳದಲ್ಲಿ ನಿರ್ಮಿಸಿದ ಚಿತ್ರ. ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಚಿತ್ರ ಎನಿಸಿಕೊಂಡಿದೆ. ನೂರಾರು ಕೋಟಿ ಬಿಸ್ನೆಸ್ ಮಾಡಿದೆ’ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ:ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ

    ಹೂಡಿಕೆದಾರರ ಜೊತೆ ಮಾತನಾಡಿದ ಸಚಿವರು, ‘ಸ್ಥಳೀಯ ಸಂಸ್ಕೃತಿ, ಆಚರಣೆಯ ಕಥಾಹಂದರ ಇರುವ ಚಿತ್ರ ಈ ಚಿತ್ರದ ತಯಾರಿಕೆಗೆ ಸಣ್ಣ ಬಂಡವಾಳವನ್ನೇ ಹೂಡಲಾಗಿದೆ. ಆದರೆ, ಈಗ ಆ ಚಿತ್ರ 300 ಕೋಟಿಗೂ ಹೆಚ್ಚು ಗಳಿಸಿದೆ. ಕಾಂತಾರ ಚಿತ್ರವನ್ನು ನಾನೂ ವೀಕ್ಷಿಸಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸ್ಥಳಿಯ ಕಥೆಯನ್ನೇ ಜಾಗತಿಕ ಮಟ್ಟದಲ್ಲಿ ಹೇಳುವಂತೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ’ ಎಂದು ವಿವರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಭಕ್ತರೊಂದಿಗೆ ಆಶ್ರಮದಲ್ಲಿ ‘ಕಾಂತಾರ’ ವೀಕ್ಷಿಸಿದ ಶ್ರೀ ಶ್ರೀ ರವಿಶಂಕರ ಗುರೂಜಿ

    ಭಕ್ತರೊಂದಿಗೆ ಆಶ್ರಮದಲ್ಲಿ ‘ಕಾಂತಾರ’ ವೀಕ್ಷಿಸಿದ ಶ್ರೀ ಶ್ರೀ ರವಿಶಂಕರ ಗುರೂಜಿ

    ಮೊನ್ನೆಯಷ್ಟೇ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮದಲ್ಲಿ ಮುನ್ನೂರಕ್ಕೂ ಹೆಚ್ಚು ಭಕ್ತರು ಕಾಂತಾರ (Kantara) ಸಿನಿಮಾ ವೀಕ್ಷಿಸಿದ್ದರು. ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನೂ ಆಡಿದ್ದರು. ಇದೀಗ ಬೆಂಗಳೂರಿನಲ್ಲಿ ಶ್ರೀ ರವಿಶಂಕರ್ ಆಶ್ರಮದಲ್ಲೂ ಈ ಸಿನಿಮಾವನ್ನು ತೋರಿಸಲಾಗಿದ್ದು, ಸ್ವತಃ ರವಿಶಂಕರ್ ಗುರೂಜಿ (Ravi Shankar Guruji) ಅವರೇ ಚಿತ್ರವನ್ನು ವೀಕ್ಷಿಸಿದ್ದಾರೆ. ಸಿನಿಮಾ ನೋಡಿದ ನಂತರ ಮಾತನಾಡಿರುವ ಅವರು, ‘ದಂಥಕಥೆಯನ್ನು ಮನರಂಜನಾತ್ಮಕವಾಗಿ ಹೇಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ ಭರ್ಜರಿಯಾಗಿ ಗೆಲ್ಲುತ್ತಿದ್ದಂತೆಯೇ ಒಂದೊಂದೇ ವಿಘ್ನಗಳು ಕೂಡ ಹಿಂದೆ ಸರಿಯುತ್ತಿವೆ.  ಈ ಹಿಂದೆ ಕಾಂತಾರ ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ.

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ‘ಕಾಂತಾರ’ ತಂಡದ ವಿರುದ್ಧ ಹಣಕ್ಕಾಗಿ ನಾವು ಕದ್ದಿರುವ ಆರೋಪ ಮಾಡಿಲ್ಲ: ವಿಯಾನ್

    ಕಾಂತಾರ (Kantara) ಸಿನಿಮಾದ ‘ವರಾಹ ರೂಪಂ’ ಹಾಡಿಗೆ ಕದ್ದಿರುವ ಆರೋಪ ಕೇಳಿ ಬಂದಿತ್ತು. ಈ ಹಾಡನ್ನು ತಮ್ಮ ನವರಸಂ (Navarasam) ಗೀತೆಯಿಂದ ಕದ್ದಿರುವುದಾಗಿ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿತ್ತು. ಸೋಷಿಯಲ್ ಮೀಡಿಯಾದಲ್ಲಿ ಇದು ಭಾರೀ ಚರ್ಚೆಗೂ ಕಾರಣವಾಗಿತ್ತು. ದುಡ್ಡಿಗಾಗಿ ಅವರು ಆ ರೀತಿ ಮಾಡುತ್ತಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿತ್ತು. ಇದೀಗ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸದಸ್ಯರು ಉತ್ತರಿಸಿದ್ದು, ನಮಗೆ ಯಾವುದೇ ಹಣ ಬೇಕಿಲ್ಲ. ಕ್ರೆಡಿಟ್ ಕೊಟ್ಟು ಉಚಿತವಾಗಿ ಬಳಸಿಕೊಳ್ಳಬಹುದು ಎಂದು ತಂಡದ ಸದಸ್ಯ ವಿಯಾನ್ ಹೇಳಿಕೆ ನೀಡಿದ್ದಾರೆ.

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾದ ಹಾಡೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಸಿನಿಮಾದ ಕ್ಲೈಮ್ಯಾಕ್ಸ್ ನಲ್ಲಿ ಬರುವ ‘ವರಾಹ ರೂಪಂ’ (Varaha Rupam) ಹಾಡನ್ನು ಸಿನಿಮಾದಲ್ಲಿ ಬಳಸದಂತೆ ಕೋರ್ಟ್ ತಡೆಯಾಜ್ಞೆ ನೀಡಿತ್ತು, ಇದರಿಂದಾಗಿ ಚಿತ್ರಕ್ಕೆ ಕಾನೂನು ತೊಡಕು ಎದುರಾಗಿತ್ತು. ಈ ಹಾಡನ್ನು ನಾನು ಯಾವುದರಿಂದಲೂ ಕದ್ದಿಲ್ಲ ಎಂದು ಈಗಾಗಲೇ ನಿರ್ದೇಶಕ ರಿಷಬ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದರೂ, ಕೇರಳದ ಕೋಝಿಕ್ಕೋಡ್ ಕೋರ್ಟ್ ಈ ಹಾಡಿನ ಬಳಕೆಗೆ ತಡೆಯಾಜ್ಞೆ ನೀಡಿದೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಕೇರಳದ ತೈಕುಡಂ ಬಿಡ್ಜ್ ಬ್ಯಾಂಡ್ (Thaikudam Bidge Band) ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ತಮ್ಮ ಬ್ಯಾಂಡ್ ನ ಹಾಡಿನಿಂದ ಕದಿಯಲಾಗಿದೆ ಎಂದು ಈ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿತ್ತು. ಕಾನೂನು ರೀತಿಯಲ್ಲಿ ಹೋರಾಟ ಮಾಡುವುದಾಗಿಯೂ ತಿಳಿಸಿತ್ತು. ಹಾಗಾಗಿ ತಂಡವು ಕೋಝಿಕೋಡ್ ಕೋರ್ಟ್ ಗೆ ಮೊರೆ ಹೋಗಿತ್ತು. ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೈಕ್ಕುಡಂ ಬ್ರಿಡ್ಜ್ ನ ಅನುಮತಿ ಇಲ್ಲದೇ ಈ ಹಾಡನ್ನು ಬಳಸುವಂತಿಲ್ಲ ಎಂದು ತಡೆಯಾಜ್ಞೆ ನೀಡಿದೆ.

    ಈ ಕುರಿತು ಸ್ವತಃ ತೈಕುಡಂ ಬ್ರಿಡ್ಜ್ ಬ್ಯಾಂಡ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ‘ನಮ್ಮ ನವರಸಂ ಮತ್ತು ವರಾಹ ರೂಪಂ ಹಾಡು ಅದೊಂದು ಹೋಲಿಕೆಯಲ್ಲಿ ನಮ್ಮ ಸಂಗೀತವನ್ನು ಕದಿಯಲಾಗಿದೆ’ ಎಂದು ಈ ಹಿಂದೆ ಬ್ಯಾಂಡ್ ಆರೋಪ ಮಾಡಿತ್ತು. ಕಾಂತಾರ ಟೀಮ್ ಹಾಡನ್ನು ಪ್ರೇರಿತವಾಗಿ ತಗೆದುಕೊಂಡಿಲ್ಲ, ಕೃತಿಚೌರ್ಯ ಮಾಡಿದೆ ಎಂದೂ ಹೇಳಿದ್ದರು. ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ‘ಸಾಧನೆಯ ಬೆನ್ನೆಲುಬು’ ಎಂದು ಹೆಂಡತಿ ಜೊತೆಗಿನ ಫೋಟೋ ಹಂಚಿಕೊಂಡ ರಿಷಬ್ ಶೆಟ್ಟಿ

    ಕಾಂತಾರ (Kantara) ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ರಿಷಬ್ ಶೆಟ್ಟಿ ನಿರ್ದೇಶನ ಮಾಡಿ, ನಟಿಸಿದ್ದರೆ ಅವರ ಪತ್ನಿ ಪ್ರಗತಿ ಶೆಟ್ಟಿ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಾರೆ. ಹಾಗಾಗಿ ಈ ಗೆಲುವನ್ನು ಮತ್ತು ತಮ್ಮ ಸಾಧನೆಯನ್ನು ಪತ್ನಿಗೆ ಅರ್ಪಿಸಿದ್ದಾರೆ ರಿಷಬ್. ತಮ್ಮ ಸಾಧನೆಯ ಬೆನ್ನೆಲುಬಾಗಿ ನಿಂತಿರುವ ಪತ್ನಿಯ ಜೊತೆಗಿನ ಫೋಟೋ ಕೂಡ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಪ್ರಗತಿ ಶೆಟ್ಟಿ (Pragati Shetty) ಅವರನ್ನು ಮೊದಲ ಬಾರಿಗೆ ಭೇಟಿಯಾದ ಫೋಟೋ ಮತ್ತು ಇಂದು ಕಾಂತಾರ ಸಕ್ಸಸ್ ವೇಳೆಯಲ್ಲಿ ವಿಮಾನದಲ್ಲಿ ಹಾರಾಟ ಮಾಡುತ್ತಿರುವ ಫೋಟೋ ಎರಡನ್ನೂ ಹಂಚಿಕೊಂಡಿರುವ ರಿಷಬ್, ತಮ್ಮ ಗೆಲುವಿಗೆ ಪ್ರಗತಿ ಕೂಡ ಕಾರಣವೆಂದು ಹೆಂಡತಿಯನ್ನು ಹಾಡಿ ಹೊಗಳಿದ್ದಾರೆ. ಪತ್ನಿಯ ಸಹಾಯವನ್ನು ಕೊಂಡಾಡಿದ್ದಾರೆ. ಇದನ್ನೂ ಓದಿ:ದಆಮೀರ್‌ ಖಾನ್‌ ತಾಯಿಗೆ ಹೃದಯಾಘಾತ

    ಬಾಲಿವುಡ್ ನಲ್ಲಿ ಕಾಂತಾರ ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸಿನಲ್ಲೂ (Box Office) ಕೂಡ ಅದು ಹಿಂದೆ ಬಿದ್ದಿಲ್ಲ. ಈವರೆಗೂ ಚಿತ್ರದಿಂದ ಅಂದಾಜು 50 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಲ್ಲೂ 45 ರಿಂದ 50 ಕೋಟಿ ಬಂದಿರಬಹುದು ಎನ್ನಲಾಗುತ್ತಿದೆ. ಆದರೆ, ನಿರ್ಮಾಪಕರಾಗಲಿ ಅಥವಾ ವಿತರಕರಾಗಲಿ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

    ಕನ್ನಡದಲ್ಲೂ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ (Hombale Films) ಹಂಚಿಕೊಂಡಿದೆ.

    ಇತ್ತೀಚೆಗಷ್ಟೇ ರಿಷಬ್ (Rishabh Shetty) ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ಎಫೆಕ್ಟ್ : ರಿಯಲ್ ಕಾಂತಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    ಕಾಂತಾರ ಎಫೆಕ್ಟ್ : ರಿಯಲ್ ಕಾಂತಾರಗೆ ಇಂದು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಭಾರತಾದ್ಯಂತ ಭರ್ಜರಿ ಪ್ರದರ್ಶನ ನಡೆಯುತ್ತಿದೆ. ಬಾಕ್ಸ್ ಆಫೀಸ್ ಕೂಡ ಭರ್ತಿಯಾಗಿದೆ. ಈಗಾಗಲೇ ಅಂದಾಜು 300 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ. ಈ ಸಿನಿಮಾ ಕೇವಲ ನಿರ್ದೇಶಕರಿಗೆ ಮತ್ತು ನಿರ್ಮಾಪಕರಿಗೆ ಮಾತ್ರವಲ್ಲ, ದೈವನರ್ತಕರ ಬಾಳಲ್ಲೂ ನಗೆ ಮೂಡಿಸಿದೆ. ಈ ಸಿನಿಮಾದ ನೋಡಿದ ನಂತರ ದೈವ ನರ್ತಕರಿಗೆ ಹಲವು ಸೌಲಭ್ಯಗಳು ಒಲಿದು ಬಂದಿವೆ.

    ಇತ್ತೀಚೆಗಷ್ಟೇ ಕರ್ನಾಟಕ ಸರಕಾರವು ದೈವನರ್ತಕರಿಗೆ ಮಾಸಾಶನವನ್ನು ಘೋಷಣೆ ಮಾಡಿದ್ದರು. ಸರಕಾರದ ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು, ಇದೀಗ ಮೊದಲ ಬಾರಿಗೆ ದೈವನರ್ತಕರಿಗೂ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava Award) ಘೋಷಣೆ ಮಾಡಿದ್ದಾರೆ. ಈ ಬಾರಿ ದೈವನರ್ತಕ ಗುಡ್ಡಪಾಣಾರಗೆ (Guddapana) ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ. ಉಡುಪಿ ಜಿಲ್ಲೆಯ ಕಾಪುವಿನ ಗುಡ್ಡ ಪಾಣಾರು ಇಂಥದ್ದೊಂದು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಉಡುಪಿ (Udupi) ಜಿಲ್ಲೆಯ ಕಾಪು ಹಳೆ ಮಾರಿಗುಡಿಯಲ್ಲಿ ಎರಡು ವರ್ಷಕೊಮ್ಮೆ ನಡೆಯುವ ಪಿಲಿಕೋಲದಲ್ಲಿ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಿರುವ ಗುಡ್ಡ ಪಾಣರಿಗೆ ಜಾನಪದ ವಿಭಾಗದಲ್ಲಿ ಈ ಬಾರಿ ಪ್ರಶಸ್ತಿ ಘೋಷಣೆ ಆಗಿದ್ದು, ಇಂದು ಬೆಂಗಳೂರಿನಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ. 68ರ ವಯಸ್ಸಿನ ಗುಡ್ಡ ಪಾಣಾರು 25ನೇ ವಯಸ್ಸಿನಿಂದಲೇ ದೈವ ನರ್ತಕರಾಗಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದಾರೆ.

    ಅಷ್ಟೇ ಅಲ್ಲದೇ, ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ದೈವಾರಾಧಕ ನಾಗರಾಜ ಪಾಣ ಅವರಿಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿದೆ. ಯಾವುದೇ ಅರ್ಜಿ ಹಾಕದೇ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ ಎನ್ನುವುದು ಮತ್ತೊಂದು ವಿಶೇಷ. ಕಾಂತಾರ ಸಿನಿಮಾದಿಂದಾಗಿ ದೈವ ನರ್ತಕರು ಕೂಡ ಇದೀಗ ಮುನ್ನೆಲೆಗೆ ಬಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು

    ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾವನ್ನು ಜಗತ್ತೇ ಹಾಡಿ ಹೊಗಳುತ್ತಿರುವ ಸಂದರ್ಭದಲ್ಲಿ ಬಂಗಾಲಿ (Bengali) ಸಿನಿಮಾ ನಿರ್ದೇಶಕ ಅಭಿರೂಪ್ ಬಸು (Abhiroop Basu) ಹಾಸ್ಯಾಸ್ಪದವಾಗಿ ಟೀಕೆ ಮಾಡಿದ್ದಾರೆ. ಇದೊಂದು ಹಾಸ್ಯಾಸ್ಪದ ಸಿನಿಮಾವಾಗಿದ್ದು, ಅತ್ಯಂತ ಕಳಪೆ ರೀತಿಯ ಕಥೆಯನ್ನು ಹೊಂದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೇ, ಅಪ್ರಮಾಣಿಕವಾಗಿ ಕಥೆಯನ್ನು ಹೆಣೆಯಲಾಗಿದೆ ಎಂದೂ ಅವರು ಬರೆದಿದ್ದಾರೆ.

    ಜಗತ್ತಿನ ಜನರು ಬುದ್ದಿವಂತರು. ಅವರ ಬುದ್ದಿವಂತಿಕೆಯನ್ನೇ ಈ ಸಿನಿಮಾ ಅನುಮಾನಿಸುತ್ತದೆ ಮತ್ತು ಅಣಕಿಸುತ್ತದೆ ಎಂದಿರುವ ಅವರು, ಕಥೆಯಲ್ಲಿ ಪ್ರಾಮಾಣಿಕತೆಗಿಂತ ಗಿಮಿಕ್ ಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಲ್ಲೂ ಎಲ್ಲರೂ ಸಿನಿಮಾದ ಕ್ಲೈಮ್ಯಾಕ್ಸ್ ಬಗ್ಗೆ ಮಾತನಾಡುತ್ತಾರೆ. ನನಗೆ ಕ್ಲೈಮ್ಯಾಕ್ಸ್ ಬಗ್ಗೆ ಕುತೂಹಲ ಅಥವಾ ಆಸಕ್ತಿ ಉಳಿಯಲೇ ಇಲ್ಲವೆಂದು ಅವರು ದೀರ್ಘವಾಗಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಅಭಿರೂಪ್ ಬಸು ಅವರ ಪೋಸ್ಟ್ ಗೆ ಅನೇಕರು ಪ್ರತಿಕ್ರಿಯೆ ನೀಡಿದ್ದು, ಸಾಕಷ್ಟು ಜನರು ವಿರೋಧ ವ್ಯಕ್ತ ಪಡಿಸಿದ್ದಾರೆ. ಅತ್ಯಂತ ಪ್ರತಿಭಾವಂತ ಹಿರಿಯ ನಟರು, ನಿರ್ದೇಶಕರು ಸಿನಿಮಾದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿರುವಾಗ ನಿಮ್ಮ ಕೊಳಕು ಮನಸ್ಸಿನಿಂದ ಆಚೆ ಬನ್ನಿ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಅಲ್ಲದೇ ಸಿನಿಮಾ ಗೆಲುವನ್ನು ನಿಮ್ಮಿಂದ ಅರಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲವೆಂದು ಕಾಮೆಂಟ್ ಮಾಡಿದ್ದಾರೆ.

    ರಜನಿಕಾಂತ್, ಕಂಗನಾ ರಣಾವತ್ ಸೇರಿದಂತೆ ಭಾರತೀಯ ಸಿನಿಮಾ ರಂಗದ ಅನೇಕರು ಕಾಂತಾರ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಇದೊಂದು ಅದ್ಭುತ ಸಿನಿಮಾ ಎಂದು ಬಣ್ಣಿಸಿದ್ದಾರೆ. ಅಲ್ಲದೇ, ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡು ಗೌರವಿಸಿದ್ದಾರೆ ರಜನಿಕಾಂತ್ ಈ ಹೊತ್ತಿನಲ್ಲಿ ಬಂಗಾಲದ ಸಿನಿಮಾ ನಿರ್ದೇಶಕ ಅಭಿರೂಪ್ ಬಸು, ನೆಗೆಟಿವ್ ಕಾಮೆಂಟ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಹಿಂದಿಯಲ್ಲಿ 50 ಕೋಟಿ ಗಳಿಸಿದ ‘ಕಾಂತಾರ’ ಸಿನಿಮಾ

    ಬಾಲಿವುಡ್ ನಲ್ಲಿ ಕಾಂತಾರ (Kantara) ಹವಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸಿನಲ್ಲೂ ಕೂಡ ಅದು ಹಿಂದೆ ಬಿದ್ದಿಲ್ಲ. ಈವರೆಗೂ ಚಿತ್ರದಿಂದ ಅಂದಾಜು 50 ಕೋಟಿ ಬಂದಿದೆ ಎಂದು ಹೇಳಲಾಗುತ್ತಿದೆ. ಸಿನಿ ಪಂಡಿತರ ಲೆಕ್ಕಾಚಾರದಲ್ಲೂ 45 ರಿಂದ 50 ಕೋಟಿ ಬಂದಿರಬಹುದು ಎನ್ನಲಾಗುತ್ತಿದೆ. ಆದರೆ, ನಿರ್ಮಾಪಕರಾಗಲಿ ಅಥವಾ ವಿತರಕರಾಗಲಿ ಈ ಕುರಿತು ಅಧಿಕೃತ ಹೇಳಿಕೆ ನೀಡಿಲ್ಲ.

    ಕನ್ನಡದಲ್ಲೂ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ  (Rishabh Shetty) ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಇದನ್ನೂ ಓದಿ:ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಇತ್ತೀಚೆಗಷ್ಟೇ ರಿಷಬ್ ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ (Hombale Films) ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್. ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]

  • ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಕಾಂತಾರ (Kantara) ಸಿನಿಮಾ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡುತ್ತಿದೆ. ಕನ್ನಡದಲ್ಲಿ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ.

    ಇತ್ತೀಚೆಗಷ್ಟೇ ರಿಷಬ್ (Rishabh Shetty) ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಧನಂಜಯ್ ಹಾಗೂ ಹೆಡ್ ಬುಷ್ ತಂಡ ಒಪ್ಪಿಗೆ

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ (Yash) ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್ (Hombale Films) . ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]