Tag: Rishabh Shetty

  • ‘ಕಾಂತಾರ’ ಒಟ್ಟು ಬಜೆಟ್ ಎಷ್ಟು?: ಪಕ್ಕಾ ಲೆಕ್ಕಕೊಟ್ಟ ರಿಷಬ್ ಶೆಟ್ಟಿ ತಂದೆ

    ‘ಕಾಂತಾರ’ ಒಟ್ಟು ಬಜೆಟ್ ಎಷ್ಟು?: ಪಕ್ಕಾ ಲೆಕ್ಕಕೊಟ್ಟ ರಿಷಬ್ ಶೆಟ್ಟಿ ತಂದೆ

    ಡಿಮೆ ದಿನಗಳಲ್ಲೇ ನೂರಾರು ಕೋಟಿ ಲಾಭ ತಂದುಕೊಟ್ಟ ಕಾಂತಾರ (Kantara) ಸಿನಿಮಾದ ಒಟ್ಟು ಬಜೆಟ್ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆದಿದೆ. ಈ ಸಿನಿಮಾಗೆ ಒಟ್ಟು ಎಷ್ಟು ಖರ್ಚಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ಒಬ್ಬೊಬ್ಬರದ್ದು ಒಂದು ಲೆಕ್ಕ. ಆದರೆ, ಈವರೆಗೂ ಹೊಂಬಾಳೆ ಫಿಲ್ಮ್ಸ್ ಆಗಲಿ, ನಿರ್ದೇಶಕ ರಿಷಬ್ ಶೆಟ್ಟಿ ಆಗಲಿ ಬಜೆಟ್ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಇದೇ ಮೊದಲ ಬಾರಿಗೆ ರಿಷಬ್ ಶೆಟ್ಟಿ (Rishabh Shetty) ಅವರ ತಂದೆ ಈ ಕುರಿತು ಮಾತನಾಡಿದ್ದಾರೆ.

    ರಿಷಬ್ ಅವರ ತಂದೆಯೇ (Father) ಹೇಳಿದಂತೆ, ಮೊದಲು ಈ ಸಿನಿಮಾಗೆ ಅಂದುಕೊಂಡ ಬಜೆಟ್ (Budget) 7 ಕೋಟಿ ರೂಪಾಯಿ. ಸಿನಿಮಾ ಮುಗಿದಾಗ ಆದ ಒಟ್ಟು ಬಜೆಟ್ 16 ಕೋಟಿ ರೂಪಾಯಿ. ಈ ಕುರಿತು ಖಾಸಗಿ ವಾಹಿನಿಯ ಜೊತೆ ಮಾತನಾಡುತ್ತಾ, ‘ಮೊದಲು ಈ ಸಿನಿಮಾಗೆ ಅಂದುಕೊಂಡಿದ್ದು ಏಳು ಕೋಟಿ ರೂಪಾಯಿ. ಆನಂತರ ಆಗಿದ್ದು 15 ರಿಂದ 16 ಕೋಟಿ. ಯಾಕೆಂದರೆ, ಮಳೆ ಬಂದು ಮಣ್ಣೇ ಕರಗಿ ಹೋಯಿತು. ರಸ್ತೆ ಕೆಸರಾಗಿ ರಸ್ತೆಯೇ ಮುಚ್ಚಿ ಹೋಯಿತು. ರಸ್ತೆ ನಿರ್ಮಾಣಕ್ಕೆ ಜಲ್ಲಿ ತರಬೇಕಾಯಿತು. ಐದಾರು ತಿಂಗಳು ಮಳೆ ಬಂತು. ಹೀಗೆ ನಾನಾ ರೀತಿಯ ತೊಂದರೆಗಳಿಂದಾಗಿ ಬಜೆಟ್ ಜಾಸ್ತಿ ಆಯಿತು’ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ಕೊಟ್ಟ ಮಾತಿನಂತೆ ದಾವಣಗೆರೆ ಬೆಣ್ಣೆದೋಸೆ ಸವಿದ ಸ್ಯಾಂಡಲ್ ವುಡ್ ಕ್ವೀನ್

    ಕಾಂತಾರ ಸಿನಿಮಾ ಇದೀಗ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡವೂ ಸೇರಿದಂತೆ ಬಹುತೇಕ ಕಡೆ ಬಾಕ್ಸ್ ಆಫೀಸ್ ಕಲೆಕ್ಷನ್ ಜೋರಾಗಿದೆ. ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ ಹೊಸದೊಂದು ಬಿರುದು ಕೊಡಲು ಮುಂದಾಗಿದ್ದಾರೆ.

    ರಿಯಲ್ ಸ್ಟಾರ್, ಪವರ್ ಸ್ಟಾರ್, ರಾಕಿಂಗ್ ಸ್ಟಾರ್, ಸೂಪರ್ ಸ್ಟಾರ್ ಹೀಗೆ ತಮ್ಮ ನೆಚ್ಚಿನ ಕಲಾವಿದರಿಗೆ ಅಭಿಮಾನಿಗಳು ಬಿರುದು ಕೊಟ್ಟು ಅಭಿಮಾನ ತೋರಿದ್ದಾರೆ. ರಿಷಬ್ ಶೆಟ್ಟಿ ಅವರಿಗೂ ಕೂಡ ಸದ್ಯ ‘ಡಿವೈನ್ ಸ್ಟಾರ್’ ಎಂದು ಬಿರುದು ಕೊಟ್ಟಿದ್ದು, ಅನೇಕರು ಇದೇ ಹೆಸರಿನಿಂದಲೇ ಕರೆಯುತ್ತಿದ್ದಾರೆ. ಈ ಹಿಂದೆ ಕಾಂತಾರ ಸಿನಿಮಾ ನೋಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ‘ಡಿವೈನ್’ ಶಬ್ದವನ್ನು ಬಳಸಿಯೇ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಅಭಿಮಾನಿಗಳು ಇನ್ಮುಂದೆ ‘ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ’ ಎಂದು ಕರೆಯಲು ನಿರ್ಧರಿಸಿರುವ ಕುರಿತು ಚರ್ಚೆ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್

    ‘ಕಾಂತಾರ’ ನಂತರ ರಿಷಬ್ ಶೆಟ್ಟಿಗೆ ಹೊಸ ಬಿರುದು: ಡಿವೈನ್ ಸ್ಟಾರ್ ಎಂದ ಫ್ಯಾನ್ಸ್

    ರಿಷಬ್ ಶೆಟ್ಟಿ (Rishabh Shetty) ನಟನೆಯ ಕಾಂತಾರ (Kantara) ಸಿನಿಮಾ ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಕನ್ನಡವೂ ಸೇರಿದಂತೆ ಬಹುತೇಕ ಕಡೆ ಬಾಕ್ಸ್ ಆಫೀಸ್ ಕಲೆಕ್ಷನ್ ಜೋರಾಗಿದೆ. ಕೇವಲ ಸ್ಯಾಂಡಲ್ ವುಡ್ ಗೆ ಮಾತ್ರ ಸೀಮಿತ ಆಗಿದ್ದ ರಿಷಬ್, ಇದೀಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬದಲಾಗಿದ್ದಾರೆ. ಹಾಗಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ, ನಿರ್ದೇಶಕನಿಗೆ ಹೊಸದೊಂದು ಬಿರುದು ಕೊಡಲು ಮುಂದಾಗಿದ್ದಾರೆ.

    ರಿಯಲ್ ಸ್ಟಾರ್, ಪವರ್ ಸ್ಟಾರ್, ರಾಕಿಂಗ್ ಸ್ಟಾರ್, ಸೂಪರ್ ಸ್ಟಾರ್ ಹೀಗೆ ತಮ್ಮ ನೆಚ್ಚಿನ ಕಲಾವಿದರಿಗೆ ಅಭಿಮಾನಿಗಳು ಬಿರುದು ಕೊಟ್ಟು ಅಭಿಮಾನ ತೋರಿದ್ದಾರೆ. ರಿಷಬ್ ಶೆಟ್ಟಿ ಅವರಿಗೂ ಕೂಡ ಸದ್ಯ ‘ಡಿವೈನ್ ಸ್ಟಾರ್’ (Divine Star) ಎಂದು ಬಿರುದು ಕೊಟ್ಟಿದ್ದು, ಅನೇಕರು ಇದೇ ಹೆಸರಿನಿಂದಲೇ ಕರೆಯುತ್ತಿದ್ದಾರೆ. ಈ ಹಿಂದೆ ಕಾಂತಾರ ಸಿನಿಮಾ ನೋಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ‘ಡಿವೈನ್’ ಶಬ್ದವನ್ನು ಬಳಸಿಯೇ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಹೀಗಾಗಿ ಅಭಿಮಾನಿಗಳು ಇನ್ಮುಂದೆ ‘ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ’ ಎಂದು ಕರೆಯಲು ನಿರ್ಧರಿಸಿರುವ ಕುರಿತು ಚರ್ಚೆ ಆಗುತ್ತಿದೆ.  ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಕಾಂತಾರ ಸಿನಿಮಾ ಬಗ್ಗೆ ಸಾಮಾನ್ಯ ನೋಡುಗರು ಮಾತ್ರವಲ್ಲ, ಸ್ಟಾರ್ ಕಲಾವಿದರು ಕೂಡ ನೋಡಿದ್ದಾರೆ. ನೋಡಲು ಕಾಯುತ್ತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ‘ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ನಾನೂ ಕಾಯುತ್ತಿದ್ದೇನೆ. ಶೀಘ್ರದಲ್ಲೇ ಸಿನಿಮಾ ನೋಡುವೆ’ ಎಂದು ಹೇಳಿದ್ದಾರೆ.

    ಬಾಲಿವುಡ್ (Bollywood) ಸಿನಿಮಾಗಳನ್ನು ತೆಗಳುತ್ತಲೇ ಬಂದಿರುವ ಕಂಗನಾ, ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾಗಳನ್ನು ಹೊಗಳುತ್ತಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಹೀರೋಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಬಾಲಿವುಡ್ ನಟರನ್ನು ಸದಾ ಕಾಲೆಳೆಯುವ ಕಂಗನಾ, ಈ ಹಿಂದೆ ಯಶ್ ಅವರನ್ನು ಹೊಗಳಿದ್ದರು. ಇದೀಗ ಕಾಂತಾರ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶೀಘ್ರದಲ್ಲೇ ಸಿನಿಮಾ ನೋಡುವುದಾಗಿಯೂ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನೋಡಲು ಕಾಯುತ್ತಿದ್ದೇನೆ, ಕುತೂಹಲ ಹೆಚ್ಚಾಗಿದೆ: ಕಂಗನಾ ರಣಾವತ್

    ‘ಕಾಂತಾರ’ ನೋಡಲು ಕಾಯುತ್ತಿದ್ದೇನೆ, ಕುತೂಹಲ ಹೆಚ್ಚಾಗಿದೆ: ಕಂಗನಾ ರಣಾವತ್

    ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಕಾಂತಾರ (Kantara) ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಅಲ್ಲದೇ ಇನ್ನೂ ಕೆಲವರು ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ (Kangana Ranaut) ಕೂಡ ಕಾಂತಾರ ಸಿನಿಮಾ ನೋಡುವುದಾಗಿ ಹೇಳಿದ್ದಾರೆ. ‘ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ನಾನೂ ಕಾಯುತ್ತಿದ್ದೇನೆ. ಶೀಘ್ರದಲ್ಲೇ ಸಿನಿಮಾ ನೋಡುವೆ’ ಎಂದು ಹೇಳಿದ್ದಾರೆ.

    ಬಾಲಿವುಡ್ ಸಿನಿಮಾಗಳನ್ನು ತೆಗಳುತ್ತಲೇ ಬಂದಿರುವ ಕಂಗನಾ, ಇತ್ತೀಚಿನ ದಿನಗಳಲ್ಲಿ ದಕ್ಷಿಣದ ಸಿನಿಮಾಗಳನ್ನು ಹೊಗಳುತ್ತಿದ್ದಾರೆ. ಅಲ್ಲದೇ, ದಕ್ಷಿಣ ಭಾರತದ ಹೀರೋಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಬಾಲಿವುಡ್ ನಟರನ್ನು ಸದಾ ಕಾಲೆಳೆಯುವ ಕಂಗನಾ, ಈ ಹಿಂದೆ ಯಶ್ ಅವರನ್ನು ಹೊಗಳಿದ್ದರು. ಇದೀಗ ಕಾಂತಾರ ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಶೀಘ್ರದಲ್ಲೇ ಸಿನಿಮಾ ನೋಡುವುದಾಗಿಯೂ ತಿಳಿಸಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಬಾಕ್ಸ್ ಆಫೀಸ್ (Box Office) ವಿಚಾರದಲ್ಲೂ ಸಿನಿಮಾ ಹಿಂದೆ ಉಳಿದಿಲ್ಲ. ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

    ‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ ನೋಡಿ ಗೂಸ್ ಬಂಪ್ಸ್ ಬಂತು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೊಗಳಿಕೆ

    ‘ಕಾಂತಾರ’ ನೋಡಿ ಗೂಸ್ ಬಂಪ್ಸ್ ಬಂತು : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೊಗಳಿಕೆ

    ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಕಾಂತಾರ (Kantara) ಸಿನಿಮಾ ಮೆಚ್ಚಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅನಿಸಿಕೆಯನ್ನು ಬರೆಯುತ್ತಿದ್ದಾರೆ. ಈಗಾಗಲೇ ಧನುಷ್, ಪ್ರಭಾಸ್, ಕಾರ್ತಿ, ಅನುಷ್ಕಾ ಶೆಟ್ಟಿ ಸೇರಿದಂತೆ ಸಾಕಷ್ಟು ಕಲಾವಿದರು ಚಿತ್ರದ ಬಗ್ಗೆ ಹೊಗಳಿದ್ದಾರೆ. ರಿಷಬ್ ನಟನೆಯನ್ನು ಕೊಂಡಾಡಿದ್ದರು. ಇದೀಗ ಶಿಲ್ಪಾ ಶೆಟ್ಟಿ ಅವರ ಸರದಿ. ಮೂಲತಃ ಕರಾವಳಿಯ ಹುಡುಗಿಯಾಗಿರುವ ಶಿಲ್ಪಾ (Shilpa Shetty) ಕಾಂತಾರ ಚಿತ್ರಕ್ಕೆ ತಮ್ಮದೇ ಆದ ರೀತಿಯಲ್ಲಿ ಬಣ್ಣಿಸಿದ್ದಾರೆ.

    ಓ ಮೈ ಗಾಡ್ ಎಂದು ಅಚ್ಚರಿಯ ಮೂಲಕವೇ ಸಿನಿಮಾದ ಬಗ್ಗೆ ಅನಿಸಿಕೆಗಳನ್ನು ಬರೆದಿರುವ ಶಿಲ್ಪಾ, ‘ಕಾಂತಾರ ಚಿತ್ರವನ್ನು ಇದೀಗ ಚಿತ್ರಮಂದಿರದಲ್ಲಿ ನೋಡಿದೆ. ನರೇಟಿವ್ ಅದ್ಭುತವಾಗಿದೆ. ಕ್ಲೈಮ್ಯಾಕ್ಸ್ ನೋಡಿದ ನಂತರ ಗೂಸ್ ಬಂಪ್ಸ್ ಬಂತು. ಈ ಸಿನಿಮಾ ಪ್ರೇಕ್ಷಕರನ್ನು ಬೇರೆ ಜಗತ್ತಿಗೆ ಕರೆದುಕೊಂಡು ಹೋಗುತ್ತದೆ. ನಾನು ಮೂಲತಃ ಅದೇ ನಾಡಿನವಳು ಆಗಿದ್ದರಿಂದ, ವಾಪಸ್ಸು ನನ್ನ ತಾಯಿ ನೆಲಕ್ಕೆ ನನ್ನನ್ನು ಸಿನಿಮಾ ಕರೆದುಕೊಂಡು ಹೋಯಿತು ಎಂದು ಬರೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ (Rishabh Shetty) ಪ್ರತಿಭೆಯನ್ನೂ ಕೊಂಡಾಡಿದ್ದಾರೆ.  ಇದನ್ನೂ ಓದಿ: ‘ಬಿಗ್ ಬಾಸ್ ಸೀಸನ್ 9’ರ ಮೊದಲ ಮಹಿಳಾ ಕ್ಯಾಪ್ಟನ್ ಆಗಿ ದೀಪಿಕಾ ದಾಸ್ ಆಯ್ಕೆ

    ಬಾಕ್ಸ್ ಆಫೀಸಿನಲ್ಲಿ ದಾಖಲೆ ಬರೆದ ಕಾಂತಾರ

    ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು.

    ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

    ‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಾಂತಾರ ದಾಖಲೆ : ಶನಿವಾರ ಒಂದೇ ದಿನ 15 ಕೋಟಿ ರೂ. ಗಳಿಕೆ

    ಕಾಂತಾರ ದಾಖಲೆ : ಶನಿವಾರ ಒಂದೇ ದಿನ 15 ಕೋಟಿ ರೂ. ಗಳಿಕೆ

    ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ (Kantara) ಶನಿವಾರ (ಅ. 15) ಹೊಸ ದಾಖಲೆ ಸೃಷ್ಟಿ ಮಾಡಿದೆ. ಬಿಡುಗಡೆಯಾದ 16ನೇ ದಿನಕ್ಕೆ 15 ಕೋಟಿ ರೂ. ಸಂಗ್ರಹಿಸುವ ಮೂಲಕ ಅತೀ ಹೆಚ್ಚು ಗಳಿಕೆ ಮಾಡಿದೆ. ಕನ್ನಡದ ಸಿನಿಮಾವೊಂದು ರಿಲೀಸ್ ಆಗಿ 16 ದಿನಗಳ ನಂತರವೂ ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು, ಇದೇ ಮೊದಲು ಎಂದು ಹೇಳಲಾಗುತ್ತಿದೆ. ಅಲ್ಲದೇ, ಇದೊಂದು ಕೇಳರಿಯದಂತಹ ದಾಖಲೆ ಎಂದು ಬಣ್ಣಿಸಲಾಗುತ್ತಿದೆ.

    ಇಡೀ ಜಗತ್ತೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ‘ಕೆಜಿಎಫ್’ ನಿರ್ಮಾಪಕರಾದ ವಿಜಯ್ ಕುಮಾರ್ ಕಿರಗಂದೂರು ನಿರ್ಮಾಣದ ‘ಕಾಂತಾರ’ ಚಿತ್ರದ ಕನ್ನಡ ಅವತರಣಿಕೆಯು ಸೆಪ್ಟೆಂಬರ್ 30ರಂದು ಕರ್ನಾಟಕ ಸೇರಿದಂತೆ ಬೇರೆ ರಾಜ್ಯಗಳಲ್ಲೂ ಬಿಡುಗಡೆಯಾಯಿತು. ಚಿತ್ರಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾದ ಹಿನ್ನೆಲೆಯಲ್ಲಿ ಅಕ್ಟೋಬರ್ 14,15 ಮತ್ತು 16ರಂದು ಕ್ರಮವಾಗಿ ತೆಲುಗು, ಹಿಂದಿ ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ:ನಯನತಾರಾ- ವಿಘ್ನೇಶ್ ಶಿವನ್ ಬಾಡಿಗೆ ತಾಯ್ತನದ ಕೇಸ್‌ಗೆ ಬಿಗ್ ಟ್ವಿಸ್ಟ್

    ಈ ಪೈಕಿ ಶನಿವಾರದಂದು ಚಿತ್ರದ ಹಿಂದಿ ಅವತರಣಿಕೆಯು ಉತ್ತರ ಭಾರತದಲ್ಲಿ 2.75 ಕೋಟಿ ರೂ. ಸಂಗ್ರಹಿಸಿದೆ. ಹಿಂದಿ ಅವತರಣಿಕೆಯು ಶುಕ್ರವಾರವಷ್ಟೇ (ಅ. 14) ಬಿಡುಗಡೆಯಾಗಿತ್ತು. ಮೊದಲ ದಿನದ ಕಲೆಕ್ಷನ್ಗೆ ಹೋಲಿಸಿದರೆ, ಎರಡನೆಯ ದಿನ ದ್ವಿಗುಣ ಕಲೆಕ್ಷನ್ ಆಗಿರುವುದು ವಿಶೇಷ. ಇನ್ನು, ಕನ್ನಡ, ತೆಲುಗು ಮತ್ತು ತಮಿಳು ಅವತರಣಿಕೆಯಿಂದ 12 ಕೋಟಿ ರೂ. ಗಳಿಕೆ ಆಗಿದೆ. ಒಟ್ಟಾರೆ, ಶನಿವಾರವೊಂದೇ ‘ಕಾಂತಾರ‘ ಚಿತ್ರವು ನಾಲ್ಕು ಭಾಷೆಗಳಿಂದ ಸೇರಿ 15 ಕೋಟಿ ರೂ. ಗಳಿಕೆ ಕಂಡಿದೆ. ‘ಕಾಂತಾರ’ ಚಿತ್ರದ ಕನ್ನಡ ಅವತರಿಣಿಕೆಯು ಸೆ. 30ರಂದು ಬಿಡುಗಡೆಯಾಗಿದ್ದು, ಶನಿವಾರಕ್ಕೆ 16 ದಿನಗಳಾಗಿವೆ. 16ನೇ ದಿನ ನಾಲ್ಕು ಭಾಷೆಗಳಿಂದ 15 ಕೋಟಿ ರೂ. ಗಳಿಕೆ ಮಾಡಿ ಹೊಸ ದಾಖಲೆ ಮಾಡಿದೆ.

    ‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ (Rishabh Shetty) ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರ ದಂಡಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.


    Live Tv

    [brid partner=56869869 player=32851 video=960834 autoplay=true]

  • ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ : ಎಲ್ಲೆಲ್ಲೂ ಕಾಂತಾರ

    ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ : ಎಲ್ಲೆಲ್ಲೂ ಕಾಂತಾರ

    ನ್ನಡದ ಕಾಂತಾರ (Kantara) ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈಗಾಗಲೇ ರಿಲೀಸ್ ಆಗಿರುವ ಕನ್ನಡ, ಹಿಂದಿ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಚಿತ್ರವನ್ನು ಮೆಚ್ಚಿದ್ದಾರೆ. ಆಯಾ ಭಾಷೆಯ ಬಹುತೇಕ ನಟರು ಸಿನಿಮಾ ಕುರಿತು ಮಾತನಾಡಿದ್ದಾರೆ. ಅದರಲ್ಲೂ ರಿಷಬ್ ಶೆಟ್ಟಿ (Rishabh Shetty) ನಟನೆಗೆ ಫಿದಾ ಆಗಿದ್ದಾರೆ. ಕನ್ನಡಕ್ಕೆ ಮಾತ್ರ ಸೀಮಿತರಾಗಿದ್ದ ರಿಷಬ್ ಇದೀಗ ಪ್ಯಾನ್ ಇಂಡಿಯಾ ಸ್ಟಾರ್ (Pan India Star) ಆಗಿ ಬದಲಾಗಿದ್ದಾರೆ.

    ಮತ್ತೊಂದಡೆ ನಟ ರಿಷಬ್ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದ್ದಾರೆ. ಒಂದು ಕಡೆ ಇವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮೂಡಿಸಿದ್ದರೆ, ಮತ್ತೊಂದು ಕಡೆ ಇವರ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ 27ನೇ ಬೂಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ಇದು ಜೈ ಶಂಕರ್ ನಿರ್ದೇಶನ ಮಾಡಿ, ರಿಷಬ್ ನಿರ್ಮಾಣ ಮಾಡಿರುವ ಸಿನಿಮಾ. ಇದನ್ನೂ ಓದಿ:ಬಿಗ್ ಬಾಸ್ ವಿರುದ್ಧ ಮ್ಯಾಚ್ ಫಿಕ್ಸಿಂಗ್ ಆರೋಪ: ಗುರೂಜಿ ಮೇಲೆ ಕಿಚ್ಚ ಕೆಂಡಾಮಂಡಲ

    ಬೂಸಾನ್ ನಲ್ಲಿ ನಡೆಯುತ್ತಿರುವ 27ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಶಿವಮ್ಮ’ (Shivamma) ಚಿತ್ರ ಆಯ್ಕೆಯಾಗಿತ್ತು. ಇದೀಗ ಸ್ಪರ್ಧೆಯಲ್ಲೂ ಅದು ಗೆದ್ದಿದ್ದು, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಹಳ್ಳಿಗಾಡಿನ ಮಹಿಳೆಯೊಬ್ಬರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನೆಟ್ ವರ್ಕ್ ವಹಿವಾಟಿನಲ್ಲಿ ಹೂಡಿಕೆ ಮಾಡಿ, ಅದರಿಂದ ಪಡುವ ಸಂಕಟವನ್ನು ಕುರಿತಾದ ಸಿನಿಮಾವಿದು.

    ಈ ಸಿನಿಮಾ ವೀಕ್ಷಿಸಿದ ತೀರ್ಪುಗಾರರು ನಿರ್ದೇಶಕ ಜೈ ಶಂಕರ್ (Jai Shankar) ಅವರ ಪ್ರಯತ್ನವನ್ನು ಶ್ಲ್ಯಾಘಿಸಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಕಥೆಯನ್ನು ಆಳವಾಗಿ ಮತ್ತು ಸೂಕ್ಷ್ಮವಾಗಿ ಕಟ್ಟಿಕೊಟ್ಟ ನಿರ್ದೇಶಕರ ಜಾಣ್ಮೆಯನ್ನು ಕೊಂಡಾಡಿದ್ದಾರೆ. ಇಂತಹ ಸಿನಿಮಾಗೆ ರಿಷಬ್ ಹಣ ಹೂಡುವ ಮೂಲಕ ಹೊಸ ಹುಡುಗನ ಚಿತ್ರಕ್ಕೆ ಉತ್ತೇಜನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಿಷಬ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ

    ರಿಷಬ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ಅಂತರರಾಷ್ಟ್ರೀಯ ಪ್ರಶಸ್ತಿ

    ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ತಮ್ಮ ಅಭಿಮಾನಿಗಳಿಗೆ ಡಬಲ್ ಖುಷಿ ಕೊಟ್ಟಿದ್ದಾರೆ. ಒಂದು ಕಡೆ ಇವರು ನಟಿಸಿ, ನಿರ್ದೇಶನ ಮಾಡಿರುವ ‘ಕಾಂತಾರ’ (Kantara) ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಾಖಲೆ ಮೂಡಿಸಿದ್ದರೆ, ಮತ್ತೊಂದು ಕಡೆ ಇವರ ನಿರ್ಮಾಣದ ‘ಶಿವಮ್ಮ’ ಚಿತ್ರಕ್ಕೆ 27ನೇ ಬೂಸಾನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ದೊರೆತಿದೆ. ಇದು ಜೈ ಶಂಕರ್ ನಿರ್ದೇಶನ ಮಾಡಿ, ರಿಷಬ್ ನಿರ್ಮಾಣ ಮಾಡಿರುವ ಸಿನಿಮಾ.

    ಬೂಸಾನ್ ನಲ್ಲಿ ನಡೆಯುತ್ತಿರುವ 27ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಶಿವಮ್ಮ’ (Shivamma) ಚಿತ್ರ ಆಯ್ಕೆಯಾಗಿತ್ತು. ಇದೀಗ ಸ್ಪರ್ಧೆಯಲ್ಲೂ ಅದು ಗೆದ್ದಿದ್ದು, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು (award) ತನ್ನದಾಗಿಸಿಕೊಂಡಿದೆ. ಹಳ್ಳಿಗಾಡಿನ ಮಹಿಳೆಯೊಬ್ಬರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನೆಟ್ ವರ್ಕ್ ವಹಿವಾಟಿನಲ್ಲಿ ಹೂಡಿಕೆ ಮಾಡಿ, ಅದರಿಂದ ಪಡುವ ಸಂಕಟವನ್ನು ಕುರಿತಾದ ಸಿನಿಮಾವಿದು. ಇದನ್ನೂ ಓದಿ:ತಂಡು ಬಟ್ಟೆ ಧರಿಸಿ, ನಡೆಯೋಕು ಕಷ್ಟಪಡ್ತಿದ್ದ ಉರ್ಫಿಗೆ ನೆಟ್ಟಿಗರಿಂದ ತರಾಟೆ

    ಈ ಸಿನಿಮಾ ವೀಕ್ಷಿಸಿದ ತೀರ್ಪುಗಾರರು ನಿರ್ದೇಶಕ ಜೈ ಶಂಕರ್ (Jai Shankar) ಅವರ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಹಳ್ಳಿಗಾಡಿನಲ್ಲಿ ನಡೆಯುವ ಕಥೆಯನ್ನು ಆಳವಾಗಿ ಮತ್ತು ಸೂಕ್ಷ್ಮವಾಗಿ ಕಟ್ಟಿಕೊಟ್ಟ ನಿರ್ದೇಶಕರ ಜಾಣ್ಮೆಯನ್ನು ಕೊಂಡಾಡಿದ್ದಾರೆ. ಇಂತಹ ಸಿನಿಮಾಗೆ ರಿಷಬ್ ಹಣ ಹೂಡುವ ಮೂಲಕ ಹೊಸ ಹುಡುಗನ ಚಿತ್ರಕ್ಕೆ ಉತ್ತೇಜನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ತಮಿಳು, ತೆಲುಗಿನಲ್ಲಿ ಇಂದು ‘ಕಾಂತಾರ’ದ ಅಬ್ಬರ: ಬಾಲಿವುಡ್ ಈಗಾಗಲೇ ಫಿದಾ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾ ಇಂದಿನಿಂದ ತಮಿಳು ಮತ್ತು ತೆಲುಗಿನಲ್ಲಿ ಪ್ರದರ್ಶನ ಕಾಣುತ್ತಿದೆ. ನೂರಾರು ಚಿತ್ರಮಂದಿರಗಳಲ್ಲಿ ರಿಲೀಸ್ (Release) ಆಗಿರುವ ಚಿತ್ರವನ್ನು ಕಣ್ತುಂಬಿಕೊಳ್ಳಲು ತೆಲುಗು ಹಾಗೂ ತಮಿಳು ಪ್ರೇಕ್ಷಕರು ತುದಿಗಾಲಲ್ಲಿ ಕಾಯುತ್ತಿದ್ದರು. ಎರಡೂ ಸಿನಿಮಾ ರಂಗದ ಅನೇಕ ಕಲಾವಿದರು ಚಿತ್ರದ ಬಗ್ಗೆ ಮೆಚ್ಚುಗೆ ಸೂಚಿಸಿದ್ದರಿಂದ ಸಹಜವಾಗಿಯೇ ಸಿನಿಮಾದ ಬಗ್ಗೆ ಕ್ರೇಜ್ ಕ್ರಿಯೇಟ್ ಆಗಿತ್ತು. ಇಂದು ಕುತೂಹಲಕ್ಕೆ ತೆರೆ ಬಿದ್ದಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ನಿನ್ನೆ ಹಿಂದಿಯಲ್ಲಿ (Hindi), ಇಂದು ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಾಜಣ್ಣ ಮೇಲೆ ಪ್ರಶಾಂತ್ ಸಂಬರ್ಗಿ ವಾಗ್ದಾಳಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ತುಳು ಭಾಷೆಯಲ್ಲೂ ಬರಲಿದೆ ‘ಕಾಂತಾರ’: ಶೆಟ್ರೇ ಉಡಲ್ ಗೆಂದಿಯರ್

    ನ್ನಡದಲ್ಲಿ ಸೂಪರ್ ಹಿಟ್ ಆಗಿ, ಸದ್ಯ ಹಿಂದಿಯಲ್ಲಿ (Hindi) ಬಿಡುಗಡೆ ಆಗಿರುವ, ನಾಳೆ ತಮಿಳು ಮತ್ತು ತೆಲುಗಿನಲ್ಲೂ ಅಬ್ಬರಿಸಲಿರುವ ಕಾಂತಾರ (Kantara) ಸಿನಿಮಾ ತುಳು ಭಾಷೆಗೂ ಡಬ್ ಆಗಲಿದೆ. ಇಂಥದ್ದೊಂದು ಖುಷಿ ಸಂಗತಿಯನ್ನು ಕೊಡಲು ಚಿತ್ರತಂಡ ನಿರ್ಧರಿಸಿದೆ. ಕರಾವಳಿಯ ಭಾಷೆ, ಆಚಾರ ವಿಚಾರ, ಅಲ್ಲಿನ ಸಂಸ್ಕೃತಿಯನ್ನು ಈ ಸಿನಿಮಾದ ಮೂಲಕ ಎಳೆ ಎಳೆಯಾಗಿ ಬಿಚ್ಚಿಡಲಾಗಿದೆ. ಅಲ್ಲದೇ ಕೆಲ ಕಡೆ ತುಳು (Tulu) ಭಾಷೆಯನ್ನೂ ಬಳಸಲಾಗಿದೆ. ಹೀಗಾಗಿ ಕಾಂತಾರ ಮುಂದಿನ ದಿನಗಳಲ್ಲಿ ತುಳು ಭಾಷೆಯಲ್ಲೇ ನೋಡಬಹುದಾಗಿದೆ.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ. ಇದನ್ನೂ ಓದಿ:ಮೊನ್ನೆ ತುಟಿ, ಈಗ ಮಚ್ಚೆ ನೋಡಿ ಭವಿಷ್ಯ ಹೇಳಿದ ಆರ್ಯವರ್ಧನ್ ಗುರೂಜಿ

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ (Rishabh Shetty) ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ‘ಕಾಂತಾರ’ದ ಮೂಗುತಿ ಸುಂದರಿಗೆ ಮೂಗು ಚುಚ್ಚಲು ಹೇಳಿದ್ದು ಅದೇ ಶೆಟ್ರು

    ‘ಕಾಂತಾರ’ದ ಮೂಗುತಿ ಸುಂದರಿಗೆ ಮೂಗು ಚುಚ್ಚಲು ಹೇಳಿದ್ದು ಅದೇ ಶೆಟ್ರು

    ಕಾಂತಾರ (Kantara) ಸಿನಿಮಾದ ಗೆಲುವು ಆ ಸಿನಿಮಾದ ತಂತ್ರಜ್ಞರಿಗೆ ಮತ್ತು ನಟರಿಗೆ ಕಂಡು ಕೇಳರಿಯದಷ್ಟು ಹೆಸರು ತಂದು ಕೊಡುತ್ತಿದೆ. ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕಿಯಾಗಿ ಪ್ರವೇಶ ಮಾಡಿರುವ ಸಪ್ತಮಿ ಗೌಡ (Sapthami Gowda) ಅಂತೂ ರಾತ್ರೋರಾತ್ರಿ ಸ್ಟಾರ್ ನಟಿಯಾಗಿ ಬದಲಾಗಿದ್ದಾರೆ. ಅದರಲ್ಲೂ ಅವರು ಎರಡು ಕಡೆ ಮೂಗು ಚುಚ್ಚಿಸಿಕೊಂಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

    ಕಾಂತಾರ ಸಿನಿಮಾದಲ್ಲಿ ಲೀಲಾ (Leela) ಪಾತ್ರ ಮಾಡಿರುವ ಸಪ್ತಮಿ ಗೌಡಗೆ ಇದು ಮೊದಲ ಸಿನಿಮಾ. ಈ ಸಿನಿಮಾಗೆ ಹೇಗೆ ಆಯ್ಕೆಯಾದರು ಎನ್ನುವ ಕುರಿತು ಅವರು ಮಾತನಾಡಿದ್ದಾರೆ. ಕಾಂತಾರ ಸಿನಿಮಾಗೆ ಸಪ್ತಮಿ ಗೌಡ ನಾಯಕಿ ಎಂದು ರಿಷಬ್ ಹೇಳಿದಾಗ, ಸಿನಿಮಾ ತಂಡವೇ ಮೊದ ಮೊದಲು ಒಪ್ಪಿಕೊಳ್ಳಲು ಸಿದ್ಧರಿರಲಿಲ್ಲವಂತೆ. ಆನಂತರ ಸಪ್ತಮಿ ಗೌಡಗೆ ತರಬೇತಿ ಕೊಟ್ಟು, ಕ್ಯಾಮೆರಾ ಮುಂದೆ ನಿಲ್ಲಿಸಿದಂತೆ ರಿಷಬ್. ಇದನ್ನೂ ಓದಿ:‘ಆದಿಪುರುಷ್’ ಸಿನಿಮಾ ಟೀಮ್ ಮೇಲೆ ಬಿತ್ತು ಕೇಸ್: ಅ.27ಕ್ಕೆ ವಿಚಾರಣೆ ನಿಗದಿ

    ಈ ಸಿನಿಮಾದಲ್ಲಿ ಸಪ್ತಮಿ ಗೌಡ ನಿರ್ವಹಿಸಿದ್ದು ಡಿಗ್ಲಾಮರ್ ಪಾತ್ರ. ಅದು ಫಾರಿಸ್ಟ್ ಆಫೀಸರ್ (Forest Officer) ರೋಲ್. ಈ ಪಾತ್ರದಲ್ಲಿ ಸಪ್ತಮಿ ಹೇಗೆ ಕಾಣುತ್ತಾರೆ ಎನ್ನುವುದು ಮೊದಲು ತಲೆಬಿಸಿ ಆಗಿತ್ತಂತೆ. ಆದರೆ, ರಿಷಬ್ ಅವರಿಗೆ ಈ ವಿಷಯದಲ್ಲಿ ತುಂಬಾ ಸ್ಪಷ್ಟತೆ ಇತ್ತು. ಹಾಗಾಗಿ ಅವರು ಹೇಗೆ ಹೇಳಿದರೋ ಹಾಗೆಯೇ ಕೇಳಿದೆ. ನಾನು ಎರಡು ಕಡೆ ಮೂಗು ಚುಚ್ಚಿಕೊಳ್ಳಲು ಕಾರಣ ರಿಷಬ್ ಎಂದಿದ್ದಾರೆ ಸಪ್ತಮಿ ಗೌಡ. ಈ ಸಿನಿಮಾದ ಪಾತ್ರಕ್ಕಾಗಿಯೇ ಅವರು ಮೂಗು ಚುಚ್ಚಿಸಿಕೊಂಡರಂತೆ.

    ಬರೋಬ್ಬರಿ ಒಂದು ತಿಂಗಳ ಕಾಲ ಸಪ್ತಮಿಗೆ ರಿಷಬ್ (Rishabh Shetty) ತರಬೇತಿ ನೀಡಿದ್ದಾರೆ. ಆ ಪಾತ್ರ ಹೇಗೆ ಬರುತ್ತದೆ, ಹೇಗೆ ಇರಲಿದೆ, ಮ್ಯಾನರಿಸಂ ಕೂಡ ಹೀಗಿಯೇ ಇರಬೇಕು ಎಂದು ಪಕ್ಕಾ ತಯಾರಿ ಮಾಡಿಯೇ ಸಪ್ತಮಿ ಅವರನ್ನು ಶೂಟಿಂಗ್ ಗೆ ಕರೆದುಕೊಂಡು ಹೋಗಿದ್ದಾರಂತೆ. ಹಾಗಾಗಿ ತಾವು ಅಂದುಕೊಂಡಂತೆಯೇ ಪಾತ್ರ ಮೂಡಿ ಬಂದಿದೆ ಎನ್ನುವುದು ರಿಷಬ್ ಮಾತು.

    ಕನ್ನಡದಲ್ಲಿ ಕಾಂತಾರ ನಿರೀಕ್ಷೆಗೂ ಮೀರಿ ಯಶಸ್ಸು ಗಳಿಸಿದೆ. ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆಯುತ್ತಿದ್ದರೂ, ಇವತ್ತಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಸದ್ಯದಲ್ಲೇ ನೂರು ಕೋಟಿ ಕ್ಲಬ್ ಸೇರುವ ಸಿನಿಮಾವಾಗಿಯೂ ಹೊರ ಹೊಮ್ಮಲಿದೆ. ಈ ಹೊತ್ತಿನಲ್ಲಿ ಇಂದು ಹಿಂದಿಯಲ್ಲಿ, ನಾಳೆ ತಮಿಳು ಮತ್ತು ತೆಲುಗಿನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದೆ. ತಮಿಳು ಮತ್ತು ತೆಲುಗಿಗಿಂತ ಹಿಂದಿಯಲ್ಲೇ ಅಧಿಕ ಸಂಖ್ಯೆಯಲ್ಲಿ ಚಿತ್ರಮಂದಿರಗಳು ಸಿಕ್ಕಿವೆ.

    ತನ್ನ ಇಡೀ ಟೀಮ್ ಕಟ್ಟಿಕೊಂಡು ರಿಷಬ್ ಶೆಟ್ಟಿ ಬಾಲಿವುಡ್ ಮತ್ತು ತೆಲುಗು ಸಿನಿಮಾ ರಂಗದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಈಗಾಗಲೇ ಭಾರತೀಯ ಸಿನಿಮಾ ರಂಗದ ಬಹುತೇಕ ನಟರು ಕಾಂತಾರದ ಬಗ್ಗೆ ಮಾತನಾಡುತ್ತಿರುವುದರಿಂದ ದಕ್ಷಿಣದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಗೆಲ್ಲಲಿದೆ ಎನ್ನುವುದು ಸದ್ಯಕ್ಕಿರುವ ಲೆಕ್ಕಾಚಾರ. ಅದರಲ್ಲೂ ಮಲಯಾಳಂನಲ್ಲಿ ದೈವಾರಾಧನೆ, ಭೂತಕೋಲ ಸೇರಿದಂತೆ ಇತರ ಆಚರಣೆಗಳು ಇರುವುದರಿಂದ ಅಲ್ಲಿಗೆ ಈ ಸಿನಿಮಾ ಇನ್ನೂ ಹತ್ತಿರವಾಗಲಿದೆ.

    ನಿರ್ಮಾಪಕ ವಿಜಯ್ ಕಿರಗಂದೂರು ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂನಲ್ಲಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಹಿಂದಿಯಲ್ಲೂ ಚಿತ್ರ ಮಾಡುವ ಇಂಗಿತವನ್ನು ವ್ಯಕ್ತ ಪಡಿಸಿದ್ದಾರೆ. ಈ ಎಲ್ಲ ಸಿನಿಮಾಗಳಿಗೆ ಕೆಜಿಎಫ್ ಯಶಸ್ಸು ಮುನ್ನುಡಿ ಬರೆದಿತ್ತು. ಕಾಂತಾರದ ಮೂಲಕ ಆ ನಂಬಿಕೆ ಇನ್ನಷ್ಟು ಗಟ್ಟಿಯಾಗಲಿದೆ.

    Live Tv
    [brid partner=56869869 player=32851 video=960834 autoplay=true]