Tag: Rishabh Shetty

  • ‘ಕಾಂತಾರ’ ಶೂಟಿಂಗ್ ಮುನ್ನ ದೈವಗಳ ದರ್ಶನ ಪಡೆದ ರಿಷಬ್

    ‘ಕಾಂತಾರ’ ಶೂಟಿಂಗ್ ಮುನ್ನ ದೈವಗಳ ದರ್ಶನ ಪಡೆದ ರಿಷಬ್

    ರಿಷಬ್ ಶೆಟ್ಟಿ ಅಂಡ್ ಟೀಮ್ ಕಾಂತಾರ ಸಿನಿಮಾದ ಚಿತ್ರೀಕರಣಕ್ಕೆ ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ರಿಷಬ್ ದೈವಗಳ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಕಾಂತಾರ ಸಿನಿಮಾದ ಚಿತ್ರೀಕರಣ ನಿರ್ವಿಘ್ನವಾಗಿ ನಡೆಯಲು ಮತ್ತೆ ದೈವಗಳ (Daiva) ದರ್ಶನ ಪಡೆಯುತ್ತಿರುವ ರಿಷಬ್ ಶೆಟ್ಟಿ. ಮಂಗಳೂರಿನ ಗುರುಪುರ ವಜ್ರದೇಹಿ ಮಠದ ದೈವ ಕೋಲಕ್ಕೆ ರಿಷಬ್ ಭೇಟಿ ನೀಡಿದ್ದು, ವಜ್ರದೇಹಿ ಮಠದ ಮೈಸಂದಾಯ ಕೋಲದಲ್ಲಿ ರಿಷಬ್ ಭಾಗಿಯಾಗಿದ್ದಾರೆ.

    ಸ್ವಯಂಪ್ರೇರಿತವಾಗಿ ದೈವದ ಅಭಯ ಪಡೆಯಲು ಆಗಮಿಸಿದ ರಿಷಬ್ ಶೆಟ್ಟಿಗೆ, ಧೈರ್ಯ ಕಳೆದುಕೊಳ್ಳದಂತೆ ದೈವದ ಸೂಚನೆ ಸಿಕ್ಕಿದೆ. ಏನೇ ಸಮಸ್ಯೆ ಎದುರಾದರೂ ಕುಗ್ಗಬೇಡ ಎಂದು ದೈವ ಸೂಚನೆ ನೀಡಿದೆ. ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ ಎಂದು ಸನ್ನೆ ಮಾಡಿ ದೈವ ಆಶೀರ್ವದಿಸಿದೆ.

    ಈಗಾಗಲೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವೀವ್ಸ್‌ ಪಡೆದಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದರು. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದರು.

    ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

     

    ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್ ನ ವೈಷಿಷ್ಟ್ಯವೆಂದರೆ, ಚಿತ್ರವು ಏಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.

  • ‘ಕಾಂತಾರ 1’ರಲ್ಲಿ ನಟಿಸೋಕೆ ಅರ್ಜಿ ಹಾಕಿಕೊಂಡವರು 25 ಸಾವಿರ

    ‘ಕಾಂತಾರ 1’ರಲ್ಲಿ ನಟಿಸೋಕೆ ಅರ್ಜಿ ಹಾಕಿಕೊಂಡವರು 25 ಸಾವಿರ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಲಿರುವ ಕಾಂತಾರ ಚಾಪ್ಟರ್ 1 (Kantara 1) ಸಿನಿಮಾಗೆ ಕಲಾವಿದರು (Artists) ಬೇಕಾಗಿದ್ದಾರೆ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿತ್ತು. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬಂದಿದೆ. ಚಿತ್ರತಂಡವೇ ಹೇಳಿಕೊಂಡಂತೆ 25 ಸಾವಿರಕ್ಕೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ.

    ಕಿರಿಕ್ ಪಾರ್ಟಿ ಮಾಡಿದಾಗಲೂ ಆಡಿಷನ್ ಗೆ ಚಿತ್ರತಂಡ ಕಾಲ್ ಮಾಡಿತ್ತು. ಆಗ ಎರಡು ಸಾವಿರಕ್ಕೂ ಹೆಚ್ಚು ಕಲಾವಿದರು ಅರ್ಜಿ ಸಲ್ಲಿಸಿದ್ದರು. ಕಾಂತಾರ 1 ಚಿತ್ರಕ್ಕೆ ನಿರೀಕ್ಷೆಗೂ ಮೀರಿ ಜನರು ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಚಿತ್ರತಂಡವು ಅದನ್ನು ಪರಿಶೀಲಿಸುವ ಕೆಲಸವನ್ನು ನಡೆಸಿದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅವಕಾಶ ಕೇಳಿದ್ದಾರೆ ಎನ್ನವುದು ವಿಶೇಷ.

    ಕಾಂತಾರ ಸಿನಿಮಾದಲ್ಲಿ ನಟಿಸೋಕೆ ಆಸೆ ಇರುವುದಾಗಿ ಪಾಯಲ್ ರಜಪೂತ್ (Payal Rajput) ಮತ್ತು ಕನ್ನಡದ ನಟಿ ಕಾರುಣ್ಯ ರಾಮ್ (Karunya Ram) ಕೂಡ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಆಸೆಯನ್ನು ವ್ಯಕ್ತಪಡಿಸಿರುವ ಕಾರುಣ್ಯ ರಾಮ್, ನನಗೂ ಕಾಂತಾರ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿ ಎಂದು ಅವರು ಕೇಳಿಕೊಂಡಿದ್ದರು.

     

    ಕಾಂತಾರ್ ಚಾಪ್ಟರ್ 1ರ ಚಿತ್ರೀಕರಣದ ಸಿದ್ಧತೆ ಭರ್ಜರಿಯಾಗಿಯೇ ನಡೆಯುತ್ತಿದೆ. ಮೊನ್ನೆಯಷ್ಟೇ ಟೀಸರ್ ವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಬ್ ಕೈಯಲ್ಲಿ ಒಂದು ಕಡೆ ತ್ರಿಶೂಲ ಮತ್ತೊಂದು ಕಡೆ ಪರಶುರಾಮನ ಕೊಡಲಿ (Kodali) ಇತ್ತು. ಈ ಕೊಡಲಿ ಕುತೂಹಲಕ್ಕೂ ಕಾರಣವಾಗಿತ್ತು.

  • ಓದಿದ ಕೆರಾಡಿ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

    ಓದಿದ ಕೆರಾಡಿ ಶಾಲೆ ದತ್ತು ಪಡೆದ ರಿಷಬ್ ಶೆಟ್ಟಿ

    ರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಮೂಡಿಸಿ ಹಲವಾರು ಕನ್ನಡ ಶಾಲೆಗಳ ಉಳಿವಿಗೆ ಕಾರಣನಾಗಿರುವ ನಟ ನಿರ್ದೇಶಕ ರಿಷಬ್ ಶೆಟ್ಟಿ ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ರಿಷಭ್ ಶೆಟ್ಟಿ ಫೌಂಡೇಶನ್ ಮೂಲಕ ಅಳಿವಿನಂಚಿನಲ್ಲಿದ್ದ ತಾನು ಓದಿದ ಕೆರಾಡಿ (Keradi) ಸರ್ಕಾರಿ ಕನ್ನಡ ಶಾಲೆಯನ್ನು (School) ದತ್ತು ಪಡೆದಿದ್ದಾರೆ

    ಕೆರಾಡಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗೆ ಭೇಟಿನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ತನ್ನ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು,ಹಿರಿಯರು ಉಪಸ್ಥಿತರಿದ್ದು ಹುಟ್ಟೂರಿನ ಶಾಲೆಯ ದತ್ತು ರಿಷಬ್ ಶೆಟ್ಟಿಯವರನ್ನು ಅಭಿನಂದಿಸಿದರು.

    ಕಾಂತರದಲ್ಲಿ ಬ್ಯುಸಿ

    ರಿಷಬ್ ಸದ್ಯ ಕಾಂತಾರ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದ್ದು, ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.

    ಕಳೆದ ವರ್ಷ ಬಿಡುಗಡೆಯಾಗಿ  ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರ ವೀಕ್ಷಣೆಗೆ ಸಾಕ್ಷಿಯಾಗಿತ್ತು.

    ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

  • ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ

    ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿಗೆ ಆಹ್ವಾನ

    ಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ ಸೇರಿದಂತೆ ಕೆಲವೇ ಕೆಲವು ನಟರಿಗೆ ಇಂಥದ್ದೊಂದು ಆಹ್ವಾನ ಸಿಕ್ಕಿದೆ.

    ಕರ್ನಾಟಕದಿಂದ ಸೇವೆ

    ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ayodhya Ram Mandir) ಲೋಕಾರ್ಪಣೆಯಾಗುತ್ತಿದ್ದು, ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ಪೂಜೆ ಪುನಸ್ಕಾರ ಆಯೋಜನೆಗೊಂಡಿದೆ. ಇದರ ಭಾಗವಾಗಿ ಬೆಂಗಳೂರಿನ (Bengaluru) ಬನಶಂಕರಿ ಒಂದನೇ ಹಂತದಲ್ಲಿ ಅಯೋಧ್ಯೆಯ ರಾಮ ಮಂದಿರಕ್ಕೆ ಘಂಟಾದಾನ ಸಮರ್ಪಣೆ ಮಾಡಿದ್ದಾರೆ.

    2.5 ಟನ್ ತೂಕದ ಘಂಟೆಗಳು, 30 ಸಣ್ಣ ಗಂಟೆಗಳು, 38 ಕೆಜಿ ತೂಕದ ಬೆಳ್ಳಿಯ ಸಾಮಾನುಗಳನ್ನು ಸಮರ್ಪಣೆ ಮಾಡಲಾಗಿದೆ. ಈ ಘಂಟಾದಾನ ಕಾರ್ಯಕ್ರಮದಲ್ಲಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಭಾಗಿಯಾಗಿದ್ದಾರೆ.

     

    ಘಂಟಾದಾನ ಮತ್ತು ಪೂಜಾ ಸಾಮಾಗ್ರಿಯನ್ನು ಇಂದು ಅಯೋಧ್ಯೆಗೆ ಕೊಂಡೊಯ್ಯಲಿದ್ದಾರೆ. ತಮಿಳುನಾಡಿನ ನಾಮಕ್ಕಲ್‌ನಲ್ಲಿ ಈ ಘಂಟೆಗಳನ್ನು ತಯಾರು ಮಾಡಲಾಗಿದ್ದು, 2.5 ಟನ್ ತೂಕದ ಘಂಟೆಗಳನ್ನು ದೇವಸ್ಥಾನದ ಒಳಗಡೆ ಬಳಸಲಾಗುತ್ತದೆ. ಈ ಘಂಟೆಗಳನ್ನು ಬನಶಂಕರಿಯ ರಾಜೇಂದ್ರ ನಾಯ್ಡು ಎಂಬುವವರು ಅಯೋಧ್ಯೆಯ ರಾಮಮಂದಿರಕ್ಕೆ ಸಮರ್ಪಣೆ ಮಾಡಿದ್ದಾರೆ.

  • ‘ಕಾಂತಾರ’ದಲ್ಲಿ ನಟಿಸೋಕೆ ಅವಕಾಶ ಕೇಳಿದ ನಟಿಯರು

    ‘ಕಾಂತಾರ’ದಲ್ಲಿ ನಟಿಸೋಕೆ ಅವಕಾಶ ಕೇಳಿದ ನಟಿಯರು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಲಿರುವ ಕಾಂತಾರ ಚಾಪ್ಟರ್ 1 ಸಿನಿಮಾಗೆ ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿತ್ತು. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬರುತ್ತದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅವಕಾಶ ಕೇಳಿದ್ದಾರೆ.

    ಕಾಂತಾರ ಸಿನಿಮಾದಲ್ಲಿ ನಟಿಸೋಕೆ ಆಸೆ ಇರುವುದಾಗಿ ಪಾಯಲ್ ರಜಪೂತ್ (Payal Rajput) ಮತ್ತು ಕನ್ನಡದ ನಟಿ ಕಾರುಣ್ಯ ರಾಮ್ (Karunya Ram) ಕೂಡ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಆಸೆಯನ್ನು ವ್ಯಕ್ತಪಡಿಸಿರುವ ಕಾರುಣ್ಯ ರಾಮ್, ನನಗೂ ಕಾಂತಾರ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿ ಎಂದು ಅವರು ಕೇಳಿಕೊಂಡಿದ್ದಾರೆ.

    ಕಾಂತಾರ್ ಚಾಪ್ಟರ್ 1ರ ಚಿತ್ರೀಕರಣದ ಸಿದ್ಧತೆ ಭರ್ಜರಿಯಾಗಿಯೇ ನಡೆಯುತ್ತಿದೆ. ಮೊನ್ನೆಯಷ್ಟೇ ಟೀಸರ್ ವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಬ್ ಕೈಯಲ್ಲಿ ಒಂದು ಕಡೆ ತ್ರಿಶೂಲ ಮತ್ತೊಂದು ಕಡೆ ಪರಶುರಾಮನ ಕೊಡಲಿ (Kodali) ಇತ್ತು. ಈ ಕೊಡಲಿ ಕುತೂಹಲಕ್ಕೂ ಕಾರಣವಾಗಿತ್ತು. ಇದರ ಕುರಿತಾಗಿಯೇ ಇದೀಗ ಹೊಸದೊಂದು ಸುದ್ದಿ ಸಿಕ್ಕಿದೆ.

    ಕೇರಳದ ಕಾಸರಗೋಡು ಜಿಲ್ಲೆಯ ಚಿಪ್ಪಾರುವಿನಲ್ಲಿ ರಾಜರ ಮನೆತನವೊಂದು ಇದ್ದು, ಇಲ್ಲಿಯೇ ಪರಶುರಾಮ (Parasurama) ಅವರು ಬಳಸಿರುವ 450 ವರ್ಷಗಳ ಇತಿಹಾಸವಿರುವ ಕೊಡಲಿ ಇದೆಯಂತೆ. ಈ ಕೊಡಲಿಯನ್ನು ರಿಷಬ್ ಬಯಸಿದರೆ ಶೂಟಿಂಗ್ ಗೆ ಕೊಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ಕೊಡಲಿಗೆ ಸಾಕಷ್ಟು ಮಹತ್ವವಿದ್ದು, ಅದನ್ನು ಪಡೆದುಕೊಂಡು ರಿಷಬ್ ಶೂಟ್ ಮಾಡ್ತಾರಾ ಕಾದು ನೋಡಬೇಕು.

     

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವೀವ್ಸ್‌ ಪಡೆದಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.

  • ಕಾಂತಾರ ಚಾಪ್ಟರ್ 1: ಟೀಸರ್ ಮೆಚ್ಚಿ ಹೊಗಳಿದ ದಕ್ಷಿಣದ ಸ್ಟಾರ್ಸ್

    ಕಾಂತಾರ ಚಾಪ್ಟರ್ 1: ಟೀಸರ್ ಮೆಚ್ಚಿ ಹೊಗಳಿದ ದಕ್ಷಿಣದ ಸ್ಟಾರ್ಸ್

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.

    ಳೆದ ವರ್ಷ ಬಿಡುಗಡೆಯಾಗಿ  ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರ ವೀಕ್ಷಣೆಗೆ ಸಾಕ್ಷಿಯಾಗಿತ್ತು.

    ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತಿದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

    ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್ ನ ವೈಷಿಷ್ಟ್ಯವೆಂದರೆ, ಚಿತ್ರವು ಏಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.

     

    ‘ಕಾಂತಾರ’ ಚಿತ್ರವು ಕಳೆದ ವರ್ಷ ಜಗತ್ತಿನಾದ್ಯಂತ ಬಿಡುಗಡೆಯಾಗಿ ಅತ್ಯಂತ ಯಶಸ್ವಿಯಾಗಿತ್ತು. ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು, ಜನಪದ ಅಂಶಗಳನ್ನು ಬೆರೆಸಿ ಹೇಳಿದ ರೀತಿ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಪ್ರತಿ ಕಥೆಯನ್ನೂ ವಿಶಿಷ್ಟ ರೀತಿಯಲ್ಲಿ ಕಟ್ಟಿಕೊಡಬೇಕು ಎಂಬ ಹೊಂಬಾಳೆ ಫಿಲಂಸ್ ನ ಬದ್ಧತೆ ‘ಕಾಂತಾರ – ಅಧ್ಯಾಯ 1’ ರಲ್ಲೂ ಮುಂದುವರೆದಿದ್ದು, ದೈವತ್ವದ ಹೊಸ ವ್ಯಾಖ್ಯಾನ ಈ ಚಿತ್ರದಲ್ಲಾಗಲಿದೆ

  • ನಟ ಶಂಕರ್ ನಾಗ್ ಅವರಿಗೆ ಪ್ರಶಸ್ತಿ ಅರ್ಪಿಸಿದ ರಿಷಬ್ ಶೆಟ್ಟಿ

    ನಟ ಶಂಕರ್ ನಾಗ್ ಅವರಿಗೆ ಪ್ರಶಸ್ತಿ ಅರ್ಪಿಸಿದ ರಿಷಬ್ ಶೆಟ್ಟಿ

    ಹೊಂಬಾಳೆ ಫಿಲಂಸ್‍ ನಿರ್ಮಾಣದ, ರಿಷಭ್‍ ಶೆಟ್ಟಿ (Rishabh Shetty) ನಿರ್ದೇಶಿಸಿ ನಟಿಸಿರುವ  ‘ಕಾಂತಾರ’ (Kantara) ಚಿತ್ರದ ಪೂರ್ವ ಭಾಗವಾದ ‘ಕಾಂತಾರ – ಅಧ್ಯಾಯ 1’, ಸೋಮವಾರವಷ್ಟೇ ಅದ್ಧೂರಿಯಾಗಿ ಪ್ರಾರಂಭವಾಗಿತ್ತು. ಇಂದು ಚಿತ್ರವು ಇನ್ನೊಂದು ಹೆಗ್ಗಳಿಕೆಗೆ ಪಾತ್ರವಾಗಿದೆ.

    ಮಂಗಳವಾರ, ಗೋವಾದಲ್ಲಿ ಮುಕ್ತಾಯವಾದ 54ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಹೊಂಬಾಳೆ ಫಿಲಂಸ್ ನಿರ್ಮಾಣದ, ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಇಂಥದ್ದೊಂದು ಪ್ರಶಸ್ತಿಗೆ ಭಾಜನವಾಗಿದೆ. ಈ ಪ್ರಶಸ್ತಿಯನ್ನು (Award) ರಿಷಬ್ ಶೆಟ್ಟಿ, ತಮ್ಮ ನೆಚ್ಚಿನ ನಟ, ನಿರ್ದೇಶಕ ಶಂಕರ್ ನಾಗ್ (Shankar Nag) ಅವರಿಗೆ ಅರ್ಪಿಸಿದ್ದಾರೆ. ಈ ಪ್ರಶಸ್ತಿಯು ಹಿಂದೆ ಶಂಕರ್ ನಾಗ್ ಅವರಿಗೆ ಸಂದಿತ್ತು.

    ಈ ಬಾರಿ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ವಿಭಾಗದಲ್ಲಿ “ಕಾಂತಾರ” ಚಿತ್ರಕ್ಕೆ ತೀರ್ಪುಗಾರರ ವಿಶೇಷ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು 15 ಲಕ್ಷ ರೂ. ನಗದನ್ನು ಒಳಗೊಂಡಿದೆ.

    ಈ ಸಂದರ್ಭದಲ್ಲಿ ಮಾತನಾಡಿರುವ ರಿಷಭ್‍ ಶೆಟ್ಟಿ, ‘ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಚಿತ್ರ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ, ತೀರ್ಪುಗಾರರ ವಿಶೇಷ ಪ್ರಶಸ್ತಿಯನ್ನು ಗೆದ್ದಿದೆ. ಇದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ’ ಎಂದು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

    ‘ಕಾಂತಾರ’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ಅಭೂತಪೂರ್ವ ಯಶಸ್ಸು ಪಡೆಯುವುದರ ಜೊತೆಗೆ, ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿ ಹಲವು ಭಾಷೆಗಳಿಗೆ ಡಬ್‍ ಆಗಿತ್ತು. ರಿಷಭ್‍ ಶೆಟ್ಟಿ, ಸಪ್ತಮಿ ಗೌಡ, ಅಚ್ಯುತ್‍ ಕುಮಾರ್, ಕಿಶೋರ್ ಮುಂತಾದವರು ಅಭಿನಯಿಸಿರುವ ಈ ಚಿತ್ರಕ್ಕೆ ಅಜನೀಶ್‍ ಲೋಕನಾಥ್‍ ಅವರ ಸಂಗೀತ ಮತ್ತು ಅರವಿಂದ್‍ ಕಶ್ಯಪ್‍ ಛಾಯಾಗ್ರಹಣವಿದೆ.

  • ‘ಕಾಂತಾರ ಚಾಪ್ಟರ್ 1’ರ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ

    ‘ಕಾಂತಾರ ಚಾಪ್ಟರ್ 1’ರ ಟೀಸರ್ ಗೆ ಅದ್ಭುತ ಪ್ರತಿಕ್ರಿಯೆ

    ಳೆದ ವರ್ಷ ಬಿಡುಗಡೆಯಾಗಿ  ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ನೋಟ ಬಿಡುಗಡೆಯಾಗಿದ್ದು, ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದೆ.  ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವಿಶ್ಲೇಷಿಸಿದ್ದಾರೆ.

    ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ ಸೆಳೆಯುತ್ತದೆ. ಮೊದಲ ಭಾಗದ ಆ ಆರ್ಭಟ ಇಲ್ಲೂ ಮರುಕಳಿಸಿದ್ದು, ಈ ಮೂಲಕ ಹೊಸದೊಂದು ದಂತಕಥೆಯ ಸೃಷ್ಟಿಗೆ ಮುನ್ನುಡಿ ಬರೆದಿದೆ. ಅಷ್ಟೇ ಅಲ್ಲ, ರಿಷಭ್ ಶೆಟ್ಟಿ ಅವರ ಪಾತ್ರ ವೀಕ್ಷಕರಲ್ಲಿ ಹೊಸದೊಂದು ಕೌತುಕವನ್ನು ಹುಟ್ಟುಹಾಕಿದೆ.

    ಮೊದಲ ಭಾಗದ ಯಶಸ್ಸಿಗೆ ಕಾರಣವಾಗಿದ್ದ ಮತ್ತು ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿರುವ ಸಂಗೀತವು ಈ ಟೀಸರ್ ಮೂಲಕ ವಾಪಸ್ಸಾಗಿದೆ. ಈ ಟೀಸರ್ ನ ವೈಷಿಷ್ಟ್ಯವೆಂದರೆ, ಚಿತ್ರವು ಏಳು ಭಾಷೆಗಳಲ್ಲಿ ಮೂಡಿಬರುತ್ತಿದ್ದು, ಪ್ರತಿಯೊಂದು ಭಾಷೆಯ ಟೀಸರ್ ಒಂದೊಂದು ರಾಗದ ಮೂಲಕ ಅಂತ್ಯವಾಗಲಿದೆ.

    ‘ಕಾಂತಾರ’ ಚಿತ್ರವು ಕಳೆದ ವರ್ಷ ಜಗತ್ತಿನಾದ್ಯಂತ ಬಿಡುಗಡೆಯಾಗಿ ಅತ್ಯಂತ ಯಶಸ್ವಿಯಾಗಿತ್ತು. ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು, ಜನಪದ ಅಂಶಗಳನ್ನು ಬೆರೆಸಿ ಹೇಳಿದ ರೀತಿ ಪ್ರೇಕ್ಷಕರನ್ನು ಆಕರ್ಷಿಸಿತ್ತು. ಪ್ರತಿ ಕಥೆಯನ್ನೂ ವಿಶಿಷ್ಟ ರೀತಿಯಲ್ಲಿ ಕಟ್ಟಿಕೊಡಬೇಕು ಎಂಬ ಹೊಂಬಾಳೆ ಫಿಲಂಸ್ ನ ಬದ್ಧತೆ ‘ಕಾಂತಾರ – ಅಧ್ಯಾಯ 1’ ರಲ್ಲೂ ಮುಂದುವರೆದಿದ್ದು, ದೈವತ್ವದ ಹೊಸ ವ್ಯಾಖ್ಯಾನ ಈ ಚಿತ್ರದಲ್ಲಾಗಲಿದೆ.

    ಕಳೆದ ವರ್ಷ ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕೆಜಿಎಫ್ 2’ ಮತ್ತು ‘ಕಾಂತಾರ’ ಚಿತ್ರಗಳು ಜಾಗತಿಕವಾಗಿ 1600 ಕೋಟಿ ರೂ ಸಂಗ್ರಹಿಸಿತ್ತು. ಹೊಂಬಾಳೆಯ ಮುಂದಿನ ಬಿಡುಗಡೆಯಾದ ‘ಸಲಾರ್’ ಈ ವರ್ಷದ ಬ್ಲಾಕ್‌ಬಸ್ಟರ್ ಆಗುವ ಲಕ್ಷಣಗಳು ಈಗಾಗಲೇ ಗೋಚರಿಸಿವೆ. ಈ ಬಹುನಿರೀಕ್ಷಿತ ಚಿತ್ರದ ಟ್ರೇಲರ್ ಡಿ. 1ರಂದು ಬಿಡುಗಡೆಯಾಗಲಿದೆ.

    ‘ಕಾಂತಾರ -ಅಧ್ಯಾಯ 1’ ಚಿತ್ರವು ಬಹುನಿರೀಕ್ಷಿತ ಚಿತ್ರವಾಗಿದ್ದು ಮುಂದಿನ ವರ್ಷ ೭ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಡಿಸೆಂಬರ್ ಅಂತ್ಯಕ್ಕೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ತಾರಾಬಳಗದ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಮಾಹಿತಿ ಹೊರಬೀಳಲಿದೆ.

    ಕುಂದಾಪುರ ಸಮೀಪದ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಈ ಚಿತ್ರದ  ಸರಳಪೂಜಾ ಸಮಾರಂಭ ನಡೆಯಿತು. ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಅಣ್ಣ ಮಂಜುನಾಥ್ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ರಿಷಭ್ ಶೆಟ್ಟಿ ಪುತ್ರಿ ರಾಧ್ಯ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

  • ‘ಕಾಂತಾರ’ ಟೀಸರ್ ಕಲ್ಪನೆ: ಪೋಸ್ಟರ್ ನಲ್ಲಿವೆ ಕೌತುಕದ ಸಂಗತಿಗಳು

    ‘ಕಾಂತಾರ’ ಟೀಸರ್ ಕಲ್ಪನೆ: ಪೋಸ್ಟರ್ ನಲ್ಲಿವೆ ಕೌತುಕದ ಸಂಗತಿಗಳು

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ‘ಕಾಂತಾರ ಚಾಪ್ಟರ್ 1’ರ (Kantara Chapter 1) ಟೀಸರ್ (Teaser) ಭಾರೀ ಸದ್ದು ಮಾಡುತ್ತಿದೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಮಿಲಿಯನ್ ಗಟ್ಟಲು ವ್ಯೂಸ್ ಪಡೆದುಕೊಳ್ಳುತ್ತಿದೆ. ಈ ಟೀಸರ್ ಅನ್ನು ಹಲವರು ಹಲವು ರೀತಿಯಲ್ಲಿ ವ್ಯಾಖ್ಯಾನಿಸಿದ್ದಾರೆ. ತಮ್ಮದೇ ಆದ ಕಲ್ಪನೆಯಲ್ಲಿ ಅದನ್ನು ವಿಶ್ಲೇಷಿಸಿದ್ದಾರೆ.

    ಮೇಲ್ನೋಟಕ್ಕೆ ರಿಷಬ್ (Rishabh Shetty) ಪಾತ್ರದ ಒಂದು ಕೈಯಲ್ಲಿ ಆಯುಧ ಹಿಡಿದುಕೊಂಡಿದ್ದರೆ ಮತ್ತೊಂದು ಕೈಯಲ್ಲಿ ತ್ರಿಶೂಲವಿದೆ. ಒಂದು ಫ್ರೇಮ್ ನ ಬೆಳಕಿನಲ್ಲಿ ಶಿವಲಿಂಗದ ಚಿತ್ರಣವನ್ನೂ ತೋರಿಸಲಾಗಿದೆ. ಪಂಜುರ್ಲಿ ದೈವ ಶಿವನ ಜೊತೆ ಇರುವಂಥದ್ದು. ಹಾಗಾಗಿ ಪಂಜುರ್ಲಿ ದೈವದ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲು ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ.

    ಸಿನಿಮಾ ಸಂಸ್ಥೆಯೇ ಹೇಳಿಕೊಂಡಂತೆ, ‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನೂ ಅನುಭವಿಸುವ ಜೊತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸುವ ಪ್ರಯತ್ನವಿದು. ಹಿಂದೆಂದೂ ನೋಡದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ನಿರೀಕ್ಷಿಸಿ, ಇದು ಬರಿ ಬೆಳಕಲ್ಲ, ದರ್ಶನ ಎಂದು ಬರೆದುಕೊಂಡಿತ್ತು. ಈ ಎಲ್ಲವನ್ನೂ ಗಮನಿಸಿ ಮತ್ತೊಂದು ದೃಷ್ಟಿ ಕೋನದಲ್ಲೂ ಈ ಟೀಸರ್ ಅನ್ನು ಬಣ್ಣಿಲಸಾಗುತ್ತಿದೆ.

    ಡೆಕ್ಸಟರ್ ಮಾರ್ಗನ್ ಎನ್ನುವವರು ತಮ್ಮ ಎಕ್ಸ್ ಖಾತೆಯಲ್ಲಿ ‘ಬೆಂಕಿಯು ಕಾನನ ಬೆಳಗಿಸಲಿಲ್ಲ. ಬದಲಾಗಿ ಬೆಂಕಿ ಮತ್ತಷ್ಟು ಕತ್ತಲೆ ತಂದಿಟ್ಟಿತ್ತು’ ಎನ್ನುತ್ತಲೇ ಬೆಂಕಿಯ ಉಂಗುರ ಕಪ್ಪು ಕುಳಿಯನ್ನು ಹೋಲುತ್ತದೆ. ಕಪ್ಪು ಕುಳಿ ಬೆಳಕನ್ನು ಒಳಗೊಂಡಂತೆ ಹೀರಿಕೊಳ್ಳುತ್ತದೆ. ಈ ವಿವರಣೆಯು ಜಗತ್ತಿನ ಮತ್ತೊಂದು ಹೆಬ್ಬಾಗಿಲು ಆಗಲಿದೆ ಎಂದು ವಿಶ್ಲೇಷಿಸಿದ್ದಾರೆ. ಇವರೇ ಮತ್ತೊಂದು ಕಡೆ ಬರೆದುಕೊಂಡಂತೆ ‘ನಾವು ರಿಂಗ್ ಆಫ್ ಫಯರ್ ಉನ್ನತ ಮಟ್ಟವನ್ನು ಕಂಡಿದ್ದೇವೆ. ಆದರೆ, ಕೆಳಗಿರುವ ಶಕ್ತಿಗಳಿಗೆ ಇನ್ನೂ ನಾವು ಸಾಕ್ಷಿಯಾಗಬೇಕಿದೆ’ ಎಂದು ಹೇಳುವ  ಮೂಲಕ ಹೊಸ ಚಿಂತನೆಗೆ ಹಚ್ಚಿದ್ದಾರೆ.

    ಪೋಸ್ಟರ್ (Poster) ಕೂಡ ಹತ್ತು ಹಲವು ಸಂಗತಿಯೊಂದಿಗೆ ಮಿಶ್ರಣಗೊಂಡಿದೆ. ಪೋಸ್ಟರ್ ನಲ್ಲಿ ಕಾಂತಾರದ ಉರಿಯುತ್ತಿರುವ ಬೆಂಕಿ ರಿಂಗ್ ಕಾಣಿಸಿಕೊಂಡಿದೆ. ಲಿಂಗವನ್ನು ಸುತ್ತಿಕೊಂಡ ಹಾವು, ದಾಳಿ ಕೋರರು, ತುಂಡರಿಸಿದ ಕಾಲು, ವರಹಾ, ಕೋಣ, ಸಾರಂಗ, ಹುಲಿ, ಕಾಳಿಂಗ ಸರ್ಪ ಹೀಗೆ ಹತ್ತಾರು ಸಂಗತಿಗಳಿವೆ.

  • ಮುಂದಿನ ತಿಂಗಳಿಂದ ‘ಕಾಂತಾರ’ ಶೂಟಿಂಗ್ : ರಿಷಬ್ ಶೆಟ್ಟಿ

    ಮುಂದಿನ ತಿಂಗಳಿಂದ ‘ಕಾಂತಾರ’ ಶೂಟಿಂಗ್ : ರಿಷಬ್ ಶೆಟ್ಟಿ

    ಇಂದು ಕಾಂತಾರ (Kantara Chapter 2) ಸಿನಿಮಾದ ಮುಹೂರ್ತ ಅತ್ಯಂತ ಸರಳವಾಗಿ ನಡೆದಿದೆ. ಜೊತೆಗೆ ಸಿನಿಮಾದ ಫಸ್ಟ್ ಲುಕ್ ಮತ್ತು ಟೀಸರ್ ಕೂಡ ಚಿತ್ರತಂಡ ಬಿಡುಗಡೆ ಮಾಡಿದೆ. ಎರಡಕ್ಕೂ ನೋಡುಗರಿಂದ ಸಖತ್ ರೆಸ್ಪಾನ್ಸ್ ಸಿಕ್ಕಿದೆ. ಟೀಸರ್ (Teaser) ರಿಲೀಸ್ ಆದ ಕೆಲವೇ ಕೆಲವು ನಿಮಿಷಗಳಲ್ಲಿ ಲಕ್ಷ ಲಕ್ಷ ವಿವ್ಯೂ ಸಿಕ್ಕಿವೆ.

    ಉಡುಪಿಯ ಕುಂಭಾಸಿಯಲ್ಲಿ ಚಿತ್ರದ ಮುಹೂರ್ತ (Muhurta) ನಡೆದಿದ್ದು, ಈ ಸಂದರ್ಭದಲ್ಲಿ ರಿಷಬ್ (Rishabh Shetty) ಮಾತನಾಡಿದ್ದಾರೆ. ‘ನಿರ್ಮಾಪಕ ವಿಜಯ್ ಕಿರಗೊಂದೂರು ದೊಡ್ಡ ಶಕ್ತಿ. ಇಡೀ ದೇಶದಲ್ಲಿ ಅವರು ಒಂದು ಪವರ್ ಹೌಸ್. ಕಾಂತರಾ ಈ ಮಟ್ಟಕ್ಕೆ ಹೋಗಲು ಅವರ ಬೆಂಬಲ ಬಹಳ ದೊಡ್ಡದು. ಕಾಂತಾರ ಚಿತ್ರಕ್ಕೆ ಅವರು ಸಂಪೂರ್ಣವಾಗಿ ಬೆಂಬಲ ಕೊಟ್ಟಿದ್ದಾರೆ. ಇಡೀ ಚಿತ್ರಕ್ಕೆ ಅವರು ದೊಡ್ಡ ಕಾನ್ಫಿಡೆನ್ಸ್ ಅನ್ನು ತುಂಬಿದ್ದಾರೆ. ಒಂದು ಚಿತ್ರಕ್ಕೆ ನಾವು ಇಂತಿಷ್ಟು ಬಜೆಟ್ ನಿರ್ಧಾರ ಮಾಡಿರುತ್ತೇವೆ. ಅದು ಮುಂದೆ ಎಲ್ಲೋ ಹೋಗಿ ತಲುಪುತ್ತದೆ. ಕಾಂತಾರ ಮೊದಲ ಅಧ್ಯಾಯ ಕಥೆ ಅಪೇಕ್ಷೆ ಮಾಡುತ್ತದೆ ಅದಕ್ಕೆ ನಿರ್ಮಾಪಕರು ಪೂರ್ಣ ಸಹಕಾರ ಕೊಟ್ಟಿದ್ದಾರೆ ಎಂದು ಮಾತನಾಡಿದ್ದಾರೆ.

    ಎಂದಿನಂತೆ ಕಾಂತಾರ ಸಿನಿಮಾದಲ್ಲಿ ಕೆಲಸ ಮಾಡಿದ ಬಹುತೇಕ ತಾಂತ್ರಿಕ ವರ್ಗವೇ ಕಾಂತಾರ ಅಧ್ಯಾಯ 1ರಲ್ಲಿ ಮುಂದುವರೆಯಲಿದೆ. ಅಜನೀಶ್ ಲೋಕನಾಥ್ ಅವರೇ ಈ ಚಿತ್ರಕ್ಕೂ ಸಂಗೀತ ನೀಡಲಿದ್ದಾರೆ. ‘ತಾಂತ್ರಿಕವಾಗಿ ಯಾವುದೇ ಬದಲಾವಣೆಗಳನ್ನು ನಾವು ಮಾಡಿಕೊಂಡಿಲ್ಲ. ಕೆಲ ಹೊಸ ಕಲಾವಿದರು ಬರುತ್ತಾರೆ. ಮುಂದಿನ ತಿಂಗಳು ಶೂಟಿಂಗ್ ಮಾಡುವ ಆಲೋಚನೆ ಇದೆ. ಚಿತ್ರದ ಸ್ಕ್ರಿಪ್ಟ್ ವರ್ಕ್ ಕಂಪ್ಲೀಟ್ ಆಗಿದೆ’ ಎಂದಿದ್ದಾರೆ ರಿಷಬ್.

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ.

     

    ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೋಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ.