Tag: rishabshetty

  • ತಮಿಳು ನಟ ಕಾರ್ತಿ ನಟನೆಯ ‘ಜಪಾನ್’ ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್

    ತಮಿಳು ನಟ ಕಾರ್ತಿ ನಟನೆಯ ‘ಜಪಾನ್’ ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್

    ‘ಪೊನ್ನಿಯನ್ ಸೆಲ್ವನ್ 2′ (Ponniyin Selvan 2) ಸಿನಿಮಾದ ಸಕ್ಸಸ್ ನಂತರ ನಟ ಕಾರ್ತಿ ಅವರು ಇದೀಗ ‘ಜಪಾನ್’ ಸಿನಿಮಾ ಮೂಲಕ ಬರುತ್ತಿದ್ದಾರೆ. ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಟೀಸರ್ ಮೂಲಕ ಸದ್ದು ಮಾಡ್ತಿದ್ದಾರೆ. ಕಾರ್ತಿ ಚಿತ್ರಕ್ಕೆ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸಾಥ್ ನೀಡಿದ್ದಾರೆ.

    ಕಾಲಿವುಡ್ ನಟ ಕಾರ್ತಿ (Actor Karthi) ಅವರು ‘ಪೊನ್ನಿಯನ್ ಸೆಲ್ವನ್’ ಪಾರ್ಟ್ 1 ಮತ್ತು ಪಾರ್ಟ್ 2 ಸಕ್ಸಸ್ ಖುಷಿಯಲ್ಲಿದ್ದಾರೆ. ಜೊತೆಗೆ ತಮ್ಮ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ. ನಟ ಕಾರ್ತಿ, ಜಪಾನ್ ಮೇಡ್ ಇನ್ ಚೀನಾ ಅಂತಿದ್ದಾರೆ.

    ಕಾರ್ತಿ ನಟನೆಯ ಜಪಾನ್ ಚಿತ್ರದ ಲುಕ್, ಟೀಸರ್ ಹೊರಬಿದ್ದಿದೆ. ಕಾರ್ತಿ ಆಯ್ಕೆ ಮಾಡಿಕೊಳ್ಳುವ ಸಿನಿಮಾಗಳು ಒಂದಕ್ಕಿಂತ ಒಂದು ಡಿಫ್ರೆಂಟ್ ಆಗಿರುತ್ತೆ. ಕಂಟೆಂಟ್‌ಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಕಾರ್ತಿ ಮೇಲೆ ಸಿನಿಪ್ರಿಯ ನಿರೀಕ್ಷೆನೂ ಅಷ್ಟೇ ಸಹಜ. ಕಾರ್ತಿ ನಟನೆಯ 25ನೇ ಸಿನಿಮಾ ಪ್ಯಾನ್ ಇಂಡಿಯಾ ಆಗಿರುವುದರಿಂದ ‘ಜಪಾನ್’ಗೆ ಕನ್ನಡದ ನಟ ರಿಷಬ್ ಶೆಟ್ಟಿ ಸಾಥ್ ಕೊಟ್ಟಿದ್ದಾರೆ. ಇದನ್ನೂ ಓದಿ:ಭಾರತದ ಮಣ್ಣಿಗೆ ಘನತೆಯಿದೆ- G20 ಸಭೆಯಲ್ಲಿ ರಾಮ್ ಚರಣ್‌ ಮಾತು

    ‘ಜಪಾನ್’ (Japan) ಸಿನಿಮಾ ಕಾರ್ತಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಮ್ಮೆ ಹೀರೊ, ಮತ್ತೊಮ್ಮೆ ಕಾಮಿಡಿಯನ್, ಮಗದೊಮ್ಮೆ ವಿಲನ್ ಆಗಿ ಕಂಡಿದ್ದಾರೆ. ಸ್ಟೈಲಿಶ್ ಲುಕ್.. ಗುಂಗುರು ಕೂದಲಿನಲ್ಲಿ ಎಂಟ್ರಿ ಕೊಟ್ಟಿರೋ ಕಾರ್ತಿ ಹೆಸರು ಈ ಸಿನಿಮಾದಲ್ಲಿ ‘ಜಪಾನ್’ ಆದರೆ, ಮೇಡ್ ಇನ್ ಇಂಡಿಯಾ. ಹೀಗಾಗಿಯೇ ಸಿನಿಮಾ ಟೀಸರ್ ಕಿಕ್ ಕೊಡುತ್ತಿದೆ. ಈ ಚಿತ್ರದ ಟೀಸರ್ ರಿಷಬ್ ಶೆಟ್ಟಿ ರಿಲೀಸ್ ಮಾಡಿ, ಕಾರ್ತಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಸದ್ಯ ಪ್ಯಾನ್‌ ಇಂಡಿಯಾ ಚಿತ್ರ ಜಪಾನ್‌ ಟೀಸರ್‌ ವ್ಯಾಪಕ ಮೆಚ್ಚಿಗೆ ವ್ಯಕ್ತವಾಗಿದೆ.

  • ಹೊಸ ವರ್ಷಕ್ಕೆ ಹೊಸ ಸಂತಸದ ಸುದ್ದಿ ಹಂಚಿಕೊಂಡ ರಿಷಬ್ ಶೆಟ್ಟಿ

    ಹೊಸ ವರ್ಷಕ್ಕೆ ಹೊಸ ಸಂತಸದ ಸುದ್ದಿ ಹಂಚಿಕೊಂಡ ರಿಷಬ್ ಶೆಟ್ಟಿ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರು ಗರುಡ ಗಮನ ವೃಷಭವಾಹನ ಸಿನಿಮಾದ ಯಶಸ್ಸಿನ ಸಂತಸದಲ್ಲಿದ್ದಾರೆ. ಇದೀಗ ಹೊಸ ವರ್ಷದ ಆರಂಭದಲ್ಲಿ ಅಭಿಮಾನಿಗಳ ಜೊತೆಗೆ ಒಂದು ಸಂತಸದ ವಿಚಾರವನ್ನು ಹಂಚಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ಅವರು ಹೊಸ ವರ್ಷದ ಆರಂಭದಲ್ಲಿ ಹೊಸ ಸಿನಿಮಾ ಕುರಿತಾಗಿ ಅಪ್‍ಡೇಟ್ಸ್ ಕೊಡುತ್ತಾರೆ ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಅವರ ಜೀವನದಲ್ಲಿ ಹೊಸ ಅತಿಥಿ ಆಗಮನವಾಗುತ್ತಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.

    ಹೊಸ ವರ್ಷಕ್ಕೆ ಹೊಸ ಸಂತಸವೊಂದು ನಮ್ಮ ಕುಟುಂಬದ ಜೊತೆಯಾಗಲಿದೆ. ರಣ್ವಿತ್ ಶೆಟ್ಟಿ ಸದ್ಯದಲ್ಲೇ ಅಣ್ಣನಾಗಲಿದ್ದಾನೆ. ನಿಮ್ಮೆಲ್ಲರ ಪ್ರೀತಿ ಆಶೀರ್ವಾದವಿರಲಿ ಎಂದು ಬರೆದುಕೊಂಡು ಬೇಬಿ ಬಂಪ್ ಫೋಟೋವನ್ನು ಹಾಗೂ ಅವರ ಮುದ್ದಾದ ಕುಟುಂಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ನೋಡಿದ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕವಾಗಿ ಶುಭಕೋರುತ್ತಿದ್ದಾರೆ.

    2019 ಏಪ್ರಿಲ್ 7 ರಂದು ರಿಶಬ್ ಶೆಟ್ಟಿ ಅವರ ಪತ್ನಿ ಪ್ರಗತಿ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ರಣ್ವಿತ್ ಶೆಟ್ಟಿ ಎಂದು ನಾಮಕರಣವನ್ನು ಮಾಡಿದ್ದಾರೆ. ಇದೀಗ ಈ ಕುಟುಂಬ 2ನೇ ಸದಸ್ಯನ ಆಗಮನದಲ್ಲಿ ಇದ್ದಾರೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಯುಗಾದಿ ಹಬ್ಬದಂದೇ ರಿಷಬ್ ಶೆಟ್ಟಿ ಮನೆಗೆ ಪುಟಾಣಿ ಹೀರೋ ಎಂಟ್ರಿ

    ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು. ರಿಷಬ್ ಶೆಟ್ಟಿ ಅವರು ಹಿಟ್ ಸಿನಿಮಾಗಳನ್ನು ನೀಡಿತ್ತಾ ಸ್ಯಾಂಡಲ್‍ವುಡ್‍ನಲ್ಲಿ ತಮ್ಮದೇ ಆಗಿರುವ ಚಾಪನ್ನು ಮೂಡಿಸಿದ್ದಾರೆ. ಇದನ್ನೂ ಓದಿ: RRR ಸಿನಿಮಾ ದೇಹವಾದರೆ ಅಜಯ್ ಆತ್ಮ, ಆಲಿಯಾ ಶಕ್ತಿ: ರಾಜಮೌಳಿ

  • ಕಥಾ ಸಂಗಮದಲ್ಲಿದೆ ಕಾಡುವ ಕಥೆಗಳ ಗುಚ್ಛ!

    ಕಥಾ ಸಂಗಮದಲ್ಲಿದೆ ಕಾಡುವ ಕಥೆಗಳ ಗುಚ್ಛ!

    ಸಿದ್ಧ ಸೂತ್ರದ ಸಿನಿಮಾಗಳ ಸದ್ದಿನ ಸರಹದ್ದಿನೊಳಗೇ ಭಿನ್ನ ಪ್ರಯೋಗಗಳು ಅಬ್ಬರಿಸದಿದ್ದರೆ ಯಾವುದೇ ಭಾಷೆಯ ಚಿತ್ರರಂಗವಾದರೂ ನಿಂತ ನೀರಿನಂತಾಗಿ ಬಿಡುತ್ತದೆ. ಈ ಕಾರಣದಿಂದಲೇ ಹೊಸ ಅಲೆಯ ಚಿತ್ರಗಳು, ಹೊಸ ಪ್ರಯೋಗಗಳ ಮೂಸೆಯಲ್ಲರಳಿಕೊಂಡ ಸಿನಿಮಾಗಳು ಮುಖ್ಯವಾಗಿ ಪರಿಗಣಿಸಲ್ಪಡುತ್ತವೆ. ಈ ನಿಟ್ಟಿನಲ್ಲಿ ರಿಷಬ್ ಶೆಟ್ಟಿ ಸೂತ್ರದಾರಿಕೆಯ ಕಥಾ ಸಂಗಮ ಒಂದು ಪರಿಣಾಮಕಾರಿ ಪ್ರಯತ್ನ. ಈ ಕಾರಣದಿಂದಲೇ ಈ ಸಿನಿಮಾ ಬಗ್ಗೆ ಪ್ರೇಕ್ಷಕರೆಲ್ಲರೂ ತುದಿಗಾಲಲ್ಲಿ ಕಾಯಲಾರಂಭಿಸಿದ್ದರು. ಇದೀಗ ಕಥಾ ಸಂಗಮ ತೆರೆ ಕಂಡಿದೆ. ಒಂದಕ್ಕಿಂತ ಒಂದು ಭಿನ್ನವಾಗಿರುವ, ರುಚಿಕಟ್ಟಾಗಿರುವ ಏಳು ಕಥೆಗಳೊಂದಿಗೆ ತೆರೆಕಂಡಿರುವ ಈ ಚಿತ್ರ ನೋಡುಗರನ್ನೆಲ್ಲ ತೃಪ್ತವಾಗಿಸುವಲ್ಲಿ ಯಶ ಕಂಡಿದೆ.

    ಈ ಸಿನಿಮಾದಲ್ಲಿ ಮೊದಲೇ ಹೇಳಿದಂತೆ ಏಳು ಕಥೆಗಳಿವೆ. ಆ ಪ್ರತೀ ಕಥೆಯನ್ನೂ ಕೂಡಾ ಕಾಡುವಂತೆ, ನೋಡುಗರ ಮನಸುಗಳಿಗೆ ನಾಟುವಂತೆ ಕಟ್ಟಿ ಕೊಟ್ಟಿರೋದು ಈ ಸಿನಿಮಾದ ಪ್ರಧಾನ ಪ್ಲಸ್ ಪಾಯಿಂಟುಗಳು. ಈ ಸಿನಿಮಾ ಆರಂಭವಾಗುವುದು ರೈನ್‍ಬೋ ಲ್ಯಾಂಡ್ ಎಂಬ ಕಥಾನಕದ ಮೂಲಕ. ಅಪ್ಪ ಮಗಳ ಬಾಂಧವ್ಯದ ಹಿತವಾದ ಕಥೆಯೊಂದಿಗೆ ತೆರೆದುಕೊಳ್ಳುವ ಈ ಸಿನಿಮಾದಲ್ಲಿ   ಸತ್ಯಕಥಾ ಪ್ರಸಂಗ, ಗಿರ್‍ಗಿಟ್ಲೆ, ಉತ್ತರ, ಪಡುವಾರಹಳ್ಳಿ, ಸಾಗರ ಸಂಗಮ್ಮ ಮತ್ತು ಲಚ್ಚವ್ವ ಎಂಬ ಕಥೆಗೂ ಸೇರಿಕೊಳ್ಳುತ್ತವೆ. ವಿಶೇಷವೆಂದರೆ ಇವೆಲ್ಲವೂ ಒಂದಕ್ಕೊಂದು ಸೂತ್ರ ಸಂಬಂಧವಿಲ್ಲದ ಕಥೆಗಳು. ಅವೆಲ್ಲವೂ ಪರಿಪೂರ್ಣ ಅನುಭೂತಿ ನೀಡುವಂತೆ ತೆರೆದುಕೊಂಡಿರೋದೇ ಕಥಾ ಸಂಗಮದ ನಿಜವಾದ ಸ್ಪೆಷಾಲಿಟಿ.

    ಈ ಏಳು ಕಥೆಗಳನ್ನು ಏಳು ಮಂದಿ ನಿರ್ದೇಶಕರು ರೂಪಿಸಿದ್ದಾರೆ. ಇವೆಲ್ಲವೂ ಸಹ ಯಾವುದು ಹೆಚ್ಚು ಯಾವುದು ಕಡಿಮೆ ಎಂಬ ಅಂದಾಜೇ ಸಿಗದಷ್ಟು ಚೆಂದಗೆ ಮೂಡಿ ಬಂದಿವೆ. ಪ್ರೇಕ್ಷಕರ ಗಮನ ಆಚೀಚೆ ಚದುರದಂತೆ ಈ ಏಳು ಕಥೆಗಳನ್ನು ನಿರೂಪಿಸಿರುವ ರೀತಿಯೇ ಯಾರನ್ನಾದರೂ ಸೆಳೆಯುವಂತಿದೆ. ಈ ಏಳು ಕಥೆಗಳಲ್ಲಿನ ದೃಷ್ಯಾವಳಿಗಳು, ಪಾತ್ರಗಳು ಪ್ರೇಕ್ಷಕರ ಮನಸಲ್ಲುಳಿಯುವಂತೆ ಮೂಡಿ ಬಂದಿವೆ. ರಿಷಬ್ ಶೆಟ್ಟಿ, ಪ್ರಕಾಶ್ ಬೆಳವಾಡಿ, ಯಜ್ಞಾ ಶೆಟ್ಟಿ, ಹರಿ ಸಮಷ್ಠಿ, ಅವಿನಾಶ್, ಪ್ರಮೋದ್ ಶೆಟ್ಟಿ, ಬಾಲಾಜಿ ಮನೋಹರ್ ಅವರ ಅಭಿನಯವೇ ಕಥಾ ಸಂಗಮಕ್ಕೆ ಮತ್ತಷ್ಟು ಕಸುವು ತುಂಬುವಂತೆ ಮೂಡಿ ಬಂದಿದೆ. ಅವರೆಲ್ಲರೂ ತಂತಮ್ಮ ಪಾತ್ರಗಳನ್ನು ಒಳಗಿಳಿಸಿಕೊಂಡು ನಟಿಸಿದ್ದಾರೆ. ಇದರೊಂದಿಗೆ ಪ್ರತೀ ಸನ್ನಿವೇಶಗಳೂ ಶಕ್ತವಾಗುವಂತೆ ನೋಡಿಕೊಂಡಿದ್ದಾರೆ.

    ಇದು ಕನ್ನಡ ಚಿತ್ರರಂಗದ ಇತಿಹಾಸದ ಪುಟಗಳಲ್ಲಿ ದಾಖಲಾಗುವಂಥಾ ಪ್ರಯತ್ನ. ಅದು ನಿಜಕ್ಕೂ ಫಲ ಕೊಡುವಂತೆಯೇ ಮೂಡಿ ಬಂದಿದೆ. ಈಗ್ಗೆ ನಾಲಕ್ಕು ದಶಕಗಳ ಹಿಂದೆ ಪುಟ್ಟಣ್ಣ ಕಣಗಾಲ್ ಕಥಾ ಸಂಗಮ ಎಂಬ ಸಿನಿಮಾದ ಮೂಕಕ ನಾಲಕ್ಕು ಕಥೆಗಳನ್ನು ಹೇಳಿದ್ದರು. ಅದು ಕನ್ನಡ ಚಿತ್ರರಂಗದ ಹೆಮ್ಮೆಯಂಥಾ ಚಿತ್ರ. ಇದೀಗ ರಿಷಬ್ ಶೆಟ್ಟಿ ಸೂತ್ರಧಾರಿಕೆಯ ಈ ಚಿತ್ರದಲ್ಲಿ ಏಳು ಸಮೃದ್ಧವಾದ ಕಥೆಗಳನ್ನು ಹೇಳಲಾಗಿದೆ. ಈ ಚಿತ್ರವನ್ನು ರಿಷಬ್ ಮತ್ತು ಅವರ ತಂಡ ಪುಣ್ಣ ಕಣಗಾಲರಿಗೆ ಅರ್ಪಿಸಿದೆ. ಒಂದು ವೇಳೆ ಕಣಗಾಲರು ಈಗೇನಾದರೂ ಬದುಕಿದ್ದರೆ ಖಂಡಿತಾ ಈ ಚಿತ್ರವನ್ನು, ಅದರ ಸೂತ್ರಧಾರರನ್ನು ಮೆಚ್ಚಿ ಕೊಂಡಾಡುತ್ತಿದ್ದರು. ಅಷ್ಟೊಂದು ಚೆಂದಗೆ ಮೂಡಿ ಬಂದಿರೋ ಈ ಸಿನಿಮಾವನ್ನು ಸಾಕಾರಗೊಳಿಸಿದ ರಿಷಬ್ ಶೆಟ್ಟಿ ಮತ್ತವರ ತಂಡ ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿದೆ.

    ರೇಟಿಂಗ್: 4/5

  • ‘ಕಥಾ ಸಂಗಮ’ ಡಿಸೆಂಬರ್ 6ರಂದು ರಿಲೀಸ್

    ‘ಕಥಾ ಸಂಗಮ’ ಡಿಸೆಂಬರ್ 6ರಂದು ರಿಲೀಸ್

    ರಿಷಬ್ ಶೆಟ್ಟಿ ಫಿಲಂಸ್ ಹಾಗೂ ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ರಿಷಬ್ ಶೆಟ್ಟಿ, ಕೆ.ಹೆಚ್ ಪ್ರಕಾಶ್ ಹಾಗೂ ಪ್ರದೀಪ್ ಎನ್.ಆರ್ ಅವರು ನಿರ್ಮಿಸಿರುವ ‘ಕಥಾ ಸಂಗಮ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

    ಏಳು ಕಥೆಗಳ ಸಂಗಮವಾಗಿರುವ ಈ ಚಿತ್ರವನ್ನು ಏಳು ಜನ ನಿರ್ದೇಶಕರು ನಿರ್ದೇಶಿಸಿದ್ದಾರೆ. ಮೊದಲ ಕಥೆಯನ್ನು ಶಶಿಕುಮಾರ್ ನಿರ್ದೇಶಿಸಿದ್ದಾರೆ. ಜಯಂತ್ ಸೀಗೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆಯನ್ನು ರಾಜ್ ಬಿ ಶೆಟ್ಟಿ, ಅನಿರುದ್ಧ್ ಮಹೇಶ್ ಬರೆದಿದ್ದಾರೆ. ಗೊಮಟೇಶ್ ಉಪಾಧ್ಯೆ ಛಾಯಾಗ್ರಹಣ, ದಾಸ್ ಮೊಡ್ ಸಂಗೀತ ನಿರ್ದೇಶನ ಹಾಗೂ ಆರ್ಯ ಅವರ ಸಂಕಲನವಿದೆ. ರಾಜ್.ಬಿ.ಶೆಟ್ಟಿ, ಅಮೃತ ನಾಯಕ್, ಜೆ.ಪಿ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ.

    ಎರಡನೇ ಕಥೆಯನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶಿಸಿದ್ದಾರೆ. ಕಿಶೊರ್, ಯಜ್ಞ ಶೆಟ್ಟಿ, ಬಾಬು ಮೃದುನಿಕ ನಟಿಸಿರುವ ಈ ಕಥೆಗೆ ಗಗನ್ ಬಡೇರಿಯ ಸಂಗೀತ ನೀಡಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಹಾಗೂ ರಿತ್ವಿಕ್ ರಾವ್ ಸಂಕಲನ ಈ ಚಿತ್ರಕ್ಕಿದೆ.

    ಮೂರನೇ ಕಥೆಗೆ ಮಾಧುರಿ ಎನ್ ರಾವ್ ಹಾಗೂ ಕರಣ್ ಅನಂತ್ ಕಥೆ, ಚಿತ್ರಕಥೆ ಬರೆದಿದ್ದು, ಕರಣ್ ಅನಂತ್ ನಿರ್ದೇಶಿಸಿದ್ದಾರೆ. ಪ್ರಕಾಶ್ ಬೆಳವಾಡಿ, ಸೌಮ್ಯ, ಜಗನ್‍ಮೂರ್ತಿ, ವಸು ದೀಕ್ಷಿತ್ ಅಭಿನಯಿಸಿದ್ದಾರೆ. ದೀಪಕ್ ಛಾಯಾಗ್ರಹಣ, ವಸು ದೀಕ್ಷಿತ್ ಸಂಗೀತ ನಿರ್ದೇಶನ ಹಾಗೂ ಭರತ್ ಎಂ.ಸಿ ಅವರ ಸಂಕಲನ ಈ ಚಿತ್ರಕ್ಕಿದೆ.

    ನಾಲ್ಕನೇ ಕಥೆಯ ತಾರಾಬಳಗದಲ್ಲಿ ಪ್ರಮೋದ್ ಶೆಟ್ಟಿ ಹಾಗೂ ಬಾಲಾಜಿ ಮನೋಹರ್ ಇದ್ದಾರೆ. ರಾಹುಲ್ ಪಿ.ಕೆ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಸಂದೀಪ್ ಅವರ ಛಾಯಾಗ್ರಹಣ, ಅಜ್ಞಾತ್ ಅವರ ಸಂಗೀತ ನಿರ್ದೇಶನ, ವಿನಾಯಕ್ ಗುರುನಾರಾಯಣ್ ಅವರ ಸಂಕಲನವಿದೆ.

    ಐದನೇ ಕಥೆಯನ್ನು ಜಮದಗ್ನಿ ಮನೋಜ್ ನಿರ್ದೇಶಿಸಿದ್ದಾರೆ. ಅವಿನಾಶ್, ಹರಿ ಸಮಶ್ಟಿ ಅಭಿನಯಿಸಿದ್ದಾರೆ. ರಘುನಾಥ್ ಛಾಯಾಗ್ರಹಣ, ಅಭಿಷೇಕ್ ಅವರ ಸಂಕಲನ ಹಾಗೂ ಗಿರೀಶ್ ಹಾತೂರ್ ಅವರ ಸಂಗೀತ ನಿರ್ದೇಶನವಿದೆ.

    ರಿಷಬ್ ಶೆಟ್ಟಿ ಹಾಗೂ ಹರಿಪ್ರಿಯ ನಟನೆಯ ಆರನೇ ಕಥೆಯನ್ನು ಕಿರಣ್ ರಾಜ್ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ರೂಬಿ (ನಾಯಿ) ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ, ರಿತ್ವಿಕ್ ರಾವ್ ಅವರ ಸಂಕಲನ ಹಾಗೂ ನೊಬಿನ್ ಪಾಲ್ ಅವರ ಸಂಗೀತ ನಿರ್ದೇಶನವಿದೆ.

    ಏಳನೇ ಕಥೆಯಲ್ಲಿ ಪ್ರಣವ್, ರಾಘವೇಂದ್ರ, ಬೀರೇಶ್ ಪಿ ಬಂಡೆ, ನಿಧಿ ಹೆಗ್ಡೆ ಅಭಿನಯಿಸಿದ್ದು, ಜೈ ಶಂಕರ್ ಅವರ ರಚನೆ ಹಾಗೂ ನಿರ್ದೇಶನವಿದೆ. ಸೌರವ್ ಪ್ರತೀಕ್ ಸನ್ಯಾಲ್ ಛಾಯಾಗ್ರಹಣ, ಚಂದನ್ ಸಂಕಲನ ಹಾಗೂ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದೆ.

  • ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ಕಣಗಾಲರ ಹಾದಿಯಲ್ಲೊಂದು ಕನಸಿನಂಥಾ `ಕಥಾ ಸಂಗಮ’!

    ನ್ನಡ ಚಿತ್ರರಂಗವನ್ನು ತಮ್ಮ ವಿಭಿನ್ನ ಆಲೋಚನೆಗಳ ಮೂಲಕವೇ ಬೆಳಗಿದ ಮೇರು ನಿರ್ದೇಶಕ ಪುಟ್ಟಣ್ಣ ಕಣಗಾಲ್. ಚಿತ್ರರಂಗ ಒಂದೇ ಬಿಂದುವಿನ ಸುತ್ತ ಗಿರಕಿ ಹೊಡೆಯುತ್ತಿದ್ದ ಕಾಲದಲ್ಲಿಯೇ ಹೊಸ ಸಾಧ್ಯತೆಗಳ ಬ್ರಹ್ಮಾಂಡವನ್ನೇ ಬಿಚ್ಚಿಟ್ಟವರು ಪುಟ್ಟಣ್ಣ ಕಣಗಾಲ್. ಇದರೊಂದಿಗೆ ಪರಭಾಷಾ ಚಿತ್ರರಂಗದ ಮಂದಿಯೇ ಬೆರಗಾಗುವಂತಹ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಕಣಗಾಲರ ಪ್ರಯೋಗಶೀಲತೆಗೆ ಕಥಾ ಸಂಗಮ ಕಿರೀಟವಿದ್ದಂತೆ. ಇದೀಗ ಈಗಿನ ತಲೆಮಾರಿನ ಕ್ರಿಯಾಶೀಲ ನಿರ್ದೇಶಕ ರಿಷಬ್ ಶೆಟ್ಟಿ ಆ ಕಿರೀಟಕ್ಕೆ ಮತ್ತೊಂದು ಗರಿ ಮೂಡಿಸುವಂತಹ ಪ್ರಯತ್ನ ಮಾಡಿದ್ದಾರೆ. ಅದರ ಫಲವಾಗಿ ರೂಪುಗೊಂಡಂತಿರುವ ಹೊಸ `ಕಥಾ ಸಂಗಮ’ ಡಿಸೆಂಬರ್ 6ರಂದು ಬಿಡುಗಡೆಯಾಗುತ್ತಿದೆ.

    ಶ್ರೀದೇವಿ ಎಂಟರ್ ಪ್ರೈಸಸ್ ಬ್ಯಾನರಿನಡಿಯಲ್ಲಿ ಹೆಚ್.ಕೆ ಪ್ರಕಾಶ್, ಪ್ರದೀಪ್ ಎನ್ ಆರ್ ಮತ್ತು ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ ಕಥಾ ಸಂಗಮವೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಅಷ್ಟಕ್ಕೂ ರಿಷಬ್ ಶೆಟ್ಟಿ ಒಂದು ಸಿನಿಮಾ ನಿರ್ದೇಶನಕ್ಕಿಳಿದರೆಂದರೆ ಅಲ್ಲೇನೋ ಹೊಸತನ ಇದ್ದೇ ಇರುತ್ತದೆ ಎಂಬ ನಂಬಿಕೆ ಪ್ರೇಕ್ಷಕರಲ್ಲಿದೆ. ಸರ್ಕಾರಿ ಪ್ರಾಥಮಿಕ ಶಾಲೆ ಕಾಸರಗೋಡು ಎಂಬ ಚಿತ್ರವನ್ನವರು ರೂಪಿಸಿದ್ದ ರೀತಿಯೇ ಅವರೆಂತಹ ಭಿನ್ನ ನಿರ್ದೇಶಕ ಎಂಬುದಕ್ಕೆ ಸ್ಪಷ್ಟ ಸಾಕ್ಷಿ. ಈ ಕಥಾ ಸಂಗಮದಲ್ಲಂತೂ ಅವರು ಕನ್ನಡ ಚಿತ್ರರಂಗದ ಘನತೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವಂತಹ ಪ್ರಯತ್ನ ಮಾಡಿದ್ದಾರೆ. ಎಪ್ಪತ್ತರ ದಶಕದಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದ ಚಿತ್ರದಲ್ಲಿ ನಾಲ್ಕು ಕಥೆಗಳನ್ನು ಹೇಳಿದ್ದರು. ರಿಷಬ್ ಶೆಟ್ಟರು ಈ ಕಥಾ ಸಂಗಮದಲ್ಲಿ ಏಳು ಕಥೆಗಳನ್ನು ಹೇಳಿದ್ದಾರೆ. ಇಲ್ಲಿ ಏಳು ಜನ ನಿರ್ದೇಶಕರು, ಏಳು ಮಂದಿ ಛಾಯಾಗ್ರಾಹಕರು ಮತ್ತು ಏಳು ಜನ ಸಂಗೀತ ನಿರ್ದೇಶಕರು ಸೇರಿ ಈ ಸಿನಿಮಾವನ್ನು ನಿರ್ವಹಿಸಿದ್ದಾರೆ. ರಿಷಬ್ ಶೆಟ್ಟಿ ಅದರ ಸೂತ್ರ ಹಿಡಿದು ಮುನ್ನಡೆಸಿದ್ದಾರೆ. ಈ ಸಿನಿಮಾಗೀಗ ಸೆನ್ಸಾರ್ ಮಂಡಳಿ ಕಡೆಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

    ಈ ಮೂಲಕ ಒಂದೇ ಸಿನಿಮಾದಲ್ಲಿ ಏಳು ಸಿನಿಮಾ ನೋಡುವ ಸದಾವಕಾಶ ಪ್ರೇಕ್ಷಕರಿಗೆ ಸಿಕ್ಕಿದೆ. ಕ್ರೈಂ, ಸಸ್ಪೆನ್ಸ್ ಥ್ರಿಲ್ಲರ್ ಸೇರಿದಂತೆ ಹಲವು ಬಗೆಯ ಕಥೆಗಳನ್ನು ಒಂದೇ ಸಿನಿಮಾದಲ್ಲಿ ಕಣ್ತುಂಬಿಕೊಳ್ಳುವ ಅಪರೂಪದ ಕ್ಷಣಗಳು ಹತ್ತಿರವಾಗುತ್ತಿವೆ. ನಿರ್ದೇಶಕ ರಿಷಬ್ ಶೆಟ್ಟಿ ಸದಾ ಸಿನಿಮಾ ಧ್ಯಾನದಲ್ಲಿಯೇ ತಲ್ಲೀನರಾಗಿರುವವರು. ಕಥಾ ಸಂಗಮದಂತಹ ಗುಂಗೀಹುಳ ಅವರ ಮನಸ್ಸು ಹೊಕ್ಕು ಕೆಲಸ ಶುರುವಿಟ್ಟುಕೊಂಡಿದ್ದದ್ದು ವರ್ಷಗಳ ಹಿಂದೆ. ನಂತರ ಪಟ್ಟು ಬಿಡದೇ ಏಳು ಮಂದಿ ಪ್ರತಿಭಾವಂತರನ್ನು ಹುಡುಕಿ, ಚೆಂದದ ಕಥೆಗಳನ್ನು ಆಯ್ಕೆ ಮಾಡಿಕೊಂಡು ಈ ರಿಸ್ಕಿ ಸಾಹಸಕ್ಕೆ ಕೈ ಹಾಕಿದ್ದರು. ಪುಟ್ಟಣ್ಣ ಕಣಗಾಲರ ಸ್ಫೂರ್ತಿಯಿಂದಲೇ ತಯಾರಾದ ಈ ಸಿನಿಮಾವನ್ನು ಅವರಿಗೇ ಅರ್ಪಿಸುವ ಮೂಲಕ ಗೌರವ ತೋರಿಸಲಾಗಿದೆ. ಕಣಗಾಲರ ಕೀರ್ತಿಯನ್ನು ಮತ್ತಷ್ಟು ಮಿರುಗಿಸುವಂತೆಯೇ ಈ ಸಿನಿಮಾ ಮೂಡಿ ಬಂದಿದೆ ಅನ್ನೋದು ಈಗಾಗಲೇ ಸ್ಪಷ್ಟಗೊಂಡಿದೆ.

    ಕಥಾ ಸಂಗಮದ ಮೂಲಕ ಕಿರಣ್ ರಾಜ್ ಕೆ, ಶಶಿಕುಮಾರ್ ಪಿ, ಚಂದ್ರಜಿತ್ ಎಲಿಯಪ್ಪ, ರಾಹುಲ್ ಪಿ.ಕೆ, ಜೈ ಶಂಕರ್, ಕರಣ್ ಅನಂತ್, ಜಮದಗ್ನಿ ಮನೋಜ್ ಎಂಬ ಏಳು ಮಂದಿ ಪ್ರತಿಭಾವಂತ ನಿರ್ದೇಶಕರನ್ನು ರಿಷಬ್ ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ, ಹರಿಪ್ರಿಯಾ, ರಾಜ್ ಬಿ ಶೆಟ್ಟಿ, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ, ಯಜ್ಞಾ ಶೆಟ್ಟಿ, ಪ್ರಕಾಶ್ ಬೆಳವಾಡಿ, ಬಾಲಾಜಿ ಮನೋಹರ್ ಮುಂತಾದವರು ಈ ಏಳೂ ಕಥೆಗಳ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಏಳೂ ಕಥೆಗಳ ಪ್ರತೀ ಪಾತ್ರಗಳೂ ಅದೆಷ್ಟು ಭಿನ್ನವಾಗಿವೆ ಅನ್ನೋದಕ್ಕೆ ಮೊನ್ನೆ ಬಿಡುಗಡೆಗೊಂಡಿರೋ ಟ್ರೇಲರ್‍ನಲ್ಲಿ ಸಾಕ್ಷಿಗಳಿವೆ. ವಾರದೊಪ್ಪತ್ತಿನಲ್ಲಿಯೇ ಕಥಾ ಸಂಗಮ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.