Tag: Rishikumar Swamiji

  • ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಒಡೆಯಬೇಕು ಎಂದಿದ್ದ ಕಾಳಿಸ್ವಾಮಿ ಅರೆಸ್ಟ್

    ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಒಡೆಯಬೇಕು ಎಂದಿದ್ದ ಕಾಳಿಸ್ವಾಮಿ ಅರೆಸ್ಟ್

    ಮಂಡ್ಯ: ಶ್ರೀರಂಗಪಟ್ಟಣದ ಜಾಮೀಯಾ ಮಸೀದಿಯನ್ನು ಒಡೆಯಬೇಕು ಎಂಬ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಕಾಳಿ ಮಠದ ಋಷಿಕುಮಾರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕಾಳಿ ಮಠದ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣಕ್ಕೆ ಕರೆತಂದಿದ್ದು, ತಾಲೂಕು ಆಸ್ಪತ್ರೆಯಲ್ಲಿ ಸ್ವಾಮೀಜಿಯ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ. ಸಾಮಾಜಿಕ ಜಾಲಾತಾಣದಲ್ಲಿ ಹಾಕಿರುವ ವಿವಾದಾತ್ಮಕ ಹೇಳಿಕೆಗೆ ಪೊಲೀಸರು ಋಷಿಕುಮಾರ್‌ರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ.ಕೆ. ಹರಿಪ್ರಸಾದ್

    ನಾನು ಹೇಳಿರುವ ಮಾತಿಗೆ ಇಂದು ಬದ್ಧನಿದ್ದೇನೆ. ಅದು ಹಿಂದೂ ದೇವಸ್ಥಾನ, ಅಲ್ಲಿರುವುದು ಹಿಂದೂ ಕಲಾಕೃತಿಗಳು. ಆ ಮಸೀದಿಯನ್ನು ಒಡೆದೇ ಒಡೆಯುತ್ತೇವೆ. ಅಲ್ಲಿ ಹನುಮನ ದೇವಸ್ಥಾನ ಕಟ್ಟುತ್ತೇವೆ. ಅಯೋಧ್ಯೆಯಲ್ಲಿ ರಾಮ ಮಂದಿರ, ಶ್ರೀರಂಗಪಟ್ಟಣದಲ್ಲಿ ಹನುಮಮಂದಿರ ಕಟ್ಟಿಸುತ್ತೇವೆ. ಇದಕ್ಕಾಗಿ ಹಿಂದೂ ಸಂಘಟನೆಗಳು ಒಂದಾಗಬೇಕು ಎಂದು ಋಷಿಕುಮಾರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಮಗಳ ಸಾವಿನ ಬಗ್ಗೆ ಕಣ್ಣೀರುಡುತ್ತಲೇ ಎಳೆಎಳೆಯಾಗಿ ಬಿಚ್ಚಿಟ್ಟ ಅಮೃತಾ ನಾಯ್ಡು!

  • ಕಾಕಾಸುರನನ್ನು ಸಂಹರಿಸಿದ ಧರ್ಮಕ್ಕೆ ಕಾಗೆಗಳು ದೊಡ್ಡ ವಿಷಯವಲ್ಲ: ಡಿಕೆಶಿ ವಿರುದ್ಧ ಸ್ವಾಮೀಜಿ ಕಿಡಿ

    ಕಾಕಾಸುರನನ್ನು ಸಂಹರಿಸಿದ ಧರ್ಮಕ್ಕೆ ಕಾಗೆಗಳು ದೊಡ್ಡ ವಿಷಯವಲ್ಲ: ಡಿಕೆಶಿ ವಿರುದ್ಧ ಸ್ವಾಮೀಜಿ ಕಿಡಿ

    ರಾಮನಗರ: ರಾಮನ ನೆಲೆಯಿರುವ, ದೈವವಿರುವ ರಾಮನಗರವನ್ನು ಯೇಸು ನಗರವನ್ನಾಗಿಸಲು ಬಿಡುವುದಿಲ್ಲ. ಕಾಕಾಸುರನನ್ನು ಸಂಹಾರ ಮಾಡಿದ ಧರ್ಮಕ್ಕೆ ಕಾಗೆಗಳನ್ನು ಸಂಹರಿಸುವುದು ದೊಡ್ಡ ವಿಷಯವಲ್ಲ ಎಂದು ಕಾಳಿಮಠದ ರಿಷಿ ಕುಮಾರ ಸ್ವಾಮೀಜಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನೂ ಸಹ ರಾಮನಗರದ ಮೊಮ್ಮಗ ಎಂಬುದನ್ನು ಡಿ.ಕೆ ಸಹೋದರರು ನೆನಪಿನಲ್ಲಿಟ್ಟುಕೊಳ್ಳಬೇಕು. ಅವರು ಕೆಂಪೇಗೌಡರ ಮಕ್ಕಳು ಎನ್ನುವಂತೆ, ನಾನು ಸಹ ರಾಮನಗರ ಜಿಲ್ಲೆಯ ಕಾಳೇಗೌಡರ ಮೊಮ್ಮಗ ಎಂದರು. ಇದನ್ನೂ ಓದಿ: ಕೆಂಪೇಗೌಡ್ರ ಮಗ ಅಂತೀರಲ್ಲ, ಹಾಗೇ ನಾನು ಕಾಳೇಗೌಡ್ರ ಮೊಮ್ಮಗ- ಡಿಕೆಶಿಗೆ ಸ್ವಾಮೀಜಿ ಟಾಂಗ್ 

    ಹಾರೋಬೆಲೆಯ ಕಪಾಲ ಬೆಟ್ಟಕ್ಕೆ ಈ ಹಿಂದೆ ಜನವರಿ 20ರಂದು ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಘೋಷಣೆ ಮಾಡಿದ್ದೆ. ಆದರೆ ಹಿಂದೂ ಧರ್ಮದ ಅಭಿವೃದ್ಧಿಗೆ ಕೊಡುಗೆ ನೀಡಿರುವ ಕಲ್ಕಡ್ ಪ್ರಭಾಕರ ಭಟ್ ಅವರು ಕನಕಪುರ ಚಲೋ ವೇಳೆ ಪ್ರತಿಮೆ ನಿರ್ಮಾಣದ ಸಲುವಾಗಿ ತಂದಿರುವ ಕಲ್ಲುಗಳನ್ನು ತೆರವುಗೊಳಿಸಲು ಜಿಲ್ಲಾಡಳಿತಕ್ಕೆ ಜನವರಿ 25ರ ವರೆಗೆ ಗಡವು ನೀಡಿದ್ದಾರೆ. ಹಿರಿಯರ ಮಾತಿಗೆ ಬೆಲೆ ನೀಡಿ ನಮ್ಮ ಪಾದಾಯಾತ್ರೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದೇವೆ. ಒಂದು ವೇಳೆ ಗಡವು ಮುಗಿದರೂ ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳದಿದ್ದರೇ ಧರ್ಮದ ಮುಖಂಡರನ್ನು ಸೇರಿಸಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದರು.

    ಕಂದಾಯ ಸಚಿವ ಆರ್.ಅಶೋಕ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ನಡುವಿನ ಸ್ನೇಹಿವಿದ್ದರೇ, ನಮ್ಮ ಆಕ್ಷೇಪಗಳೇನು ಇಲ್ಲ. ಆದರೆ ಇವರ ಸ್ನೇಹದಿಂದಾಗಿ ಧರ್ಮಕ್ಕೆ ದ್ರೋಹವಾಗಬಾರದು. ಸಚಿವ ಅಶೋಕ್ ಅವರು ಮನಸ್ಸು ಮಾಡಿದರೆ ಗಂಟೆಗಳಲ್ಲೇ ಹಾರೋಬೆಲೆಯ ಮಾಹಿತಿಯನ್ನು ತರಿಸಿಕೊಳ್ಳಬಹುದು. ಆದರೆ ನಾಟಕವಾಡುತ್ತಿದ್ದಾರೆ ಎಂದು ಆರೋಪಿಸಿದರು.

    ರಾಕ್ಷಸರ ವಿರುದ್ಧವಾಗಿ ಏಕಾಂಗಿಯಾಗಿ ಹೋರಾಟ ಮಾಡಲು ಸಾಧ್ಯವಿಲ್ಲ. ಧರ್ಮ ವಿರೋಧಿಗಳ ನಡುವೆ, ಗುಂಪಾಗಿ ಹೋರಾಟ ಮಾಡಬೇಕು. ಕಪಾಲ ಬೆಟ್ಟದ ಸುತ್ತಮುತ್ತಲಿನಲ್ಲಿ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಹೆಸರಿಗೆ ಮಾಡಿಸಿಕೊಳ್ಳಲಾಗುತ್ತಿದೆ. ಇವುಗಳನ್ನು ತಡೆಯಬೇಕಿದೆ ಎಂದು ತಿಳಿಸಿದರು.

    ಹಿಂದೂ ಧರ್ಮದವರು ಜಾಗೃತರಾಗಬೇಕಾಗಿದೆ. ಜತೆಗೆ ಬೇರೆ ಧರ್ಮದವರಿಗೆ ಅವರದ್ದೇ ಆದಾ ರಾಷ್ಟ್ರಗಳಿಗಿವೆ. ಆದರೆ, ಹಿಂದೂಗಳಿಗೆ ಇರುವುದೊಂದೇ ರಾಷ್ಟ್ರ ಇದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

  • ಕೆಂಪೇಗೌಡ್ರ ಮಗ ಅಂತೀರಲ್ಲ, ಹಾಗೇ ನಾನು ಕಾಳೇಗೌಡ್ರ ಮೊಮ್ಮಗ- ಡಿಕೆಶಿಗೆ ಸ್ವಾಮೀಜಿ ಟಾಂಗ್

    ಕೆಂಪೇಗೌಡ್ರ ಮಗ ಅಂತೀರಲ್ಲ, ಹಾಗೇ ನಾನು ಕಾಳೇಗೌಡ್ರ ಮೊಮ್ಮಗ- ಡಿಕೆಶಿಗೆ ಸ್ವಾಮೀಜಿ ಟಾಂಗ್

    ರಾಮನಗರ: ಕನಕಪುರಕ್ಕೂ ಕಾಳಿಗೂ ಏನ್ ಸಂಬಂಧ ಅಂತೀರಾ, ನಾನು ಕನಕಪುರದ ಮೊಮ್ಮಗ. ಮಾಜಿ ಮಂತ್ರಿಗಳೇ ನಾನು ಕನಕಪುರದ ಕೆಂಪೇಗೌಡರ ಮಗ ಅಂತೀರಲ್ಲ, ಹಾಗೇ ಕಾಳೇಗೌಡರ ಮೊಮ್ಮಗ ನಾನು. ಹೆದರಿಸಬೇಡಿ ಇಲ್ಲಿ ಹೆದರಿಕೊಳ್ಳುವವರು ಯಾರೂ ಇಲ್ಲ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ರಾಮನಗರದಲ್ಲಿ ಕಾಳಿಮಠದ ರಿಷಿ ಕುಮಾರ ಸ್ವಾಮೀಜಿ ಟಾಂಗ್ ನೀಡಿದ್ದಾರೆ.

    ಕನಕಪುರ ತಾಲೂಕಿನ ಹಾರೋಬೆಲೆಯ ಕಪಾಲ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಏಸು ಪ್ರತಿಮೆ ವಿರೋಧಿಸಿದ್ದಾರೆ. ಹಾಗೆಯೇ ಪ್ರತಿಮೆಗಾಗಿ ಕೆತ್ತನೆಯಾಗುತ್ತಿರುವ ಕಪಾಲ ಬೆಟ್ಟದ ಮೇಲಿರುವ ಕಲ್ಲುಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಹಿಂದೂ ಜಾಗೃತಿ ಸೇನೆ ಕಾರ್ಯಕರ್ತರ ಜೊತೆ ಅವರು ರಾಮನಗರ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

    ಇದೇ ವೇಳೆ ಮಾತನಾಡಿದ ಸ್ವಾಮೀಜಿ, ಕನಕಪುರ ನಿಮ್ಮದಲ್ಲ, ರಾಮನಗರ ನಿಮ್ಮದಲ್ಲ, ಕರ್ನಾಟಕ ನಿಮ್ಮದಲ್ಲ. ನಮ್ಮದೂ ರಾಮನಗರನೇ, ನಾವು ಕೂಡ ಕರ್ನಾಟಕದವರೇ. ತಪ್ಪು ನಮ್ಮಿಂದ ಆಗಿಲ್ಲ. ಇಂತಹ ಎಷ್ಟೋ ಬೆಟ್ಟಗಳನ್ನು ಹೊಡೆದಿರುವಂತವರೆಲ್ಲ ಬೆಟ್ಟದ ಮೇಲೆ ಇನ್ನೊಂದು ಇಡುವುದಕ್ಕೆ ಹೋಗ್ತಾ ಇದ್ದೀರಾ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಚಿವ ಡಿಕೆ ಶಿವಕುಮಾರ್‍ರವರು ಬೆಟ್ಟವನ್ನೇ ಕರಗಿಸಿ ಗಣಿಗಾರಿಕೆ ನಡೆಸಿದ್ದಾರೆ. ಇದೀಗ ಮತ್ತೊಂದು ಬೆಟ್ಟದ ಮೇಲೆ ಏಸುವಿನ ಪ್ರತಿಮೆ ಕೂರಿಸಲು ಹೋಗ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕಳೆದ ಡಿಸೆಂಬರ್ 31 ರಂದು ಕಪಾಲ ಬೆಟ್ಟಕ್ಕೆ ಭೇಟಿ ನೀಡಿದ ಬಳಿಕ ಅಪಪ್ರಚಾರ ಹಾಗೂ ದೂರುಗಳನ್ನು ನೀಡುವ ಮೂಲಕ ಹೆದರಿಸಲು ಪ್ರಯತ್ನಿಸ್ತಿದ್ದೀರಿ. ಸೋಷಿಯಲ್ ಮೀಡಿಯಾಗಳಲ್ಲಿ ಮೋದಿ ವಿರುದ್ಧ ಯಡಿಯೂರಪ್ಪ ವಿರುದ್ಧ ಮಾತನಾಡಿದ್ದಾರೆ ಎಂದು ಅಪಪ್ರಚಾರ ಮಾಡ್ತಿದ್ದೀರಿ. ಆದರೆ ರಿಷಿಕುಮಾರ ಸ್ವಾಮೀಜಿ ಮೊದಲಿನಂತಿಲ್ಲ ಹೆದರಿಸಬೇಡಿ, ಹೆದರುವವರು ಯಾರೂ ಇಲ್ಲ ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದರು.

    ಕಪಾಲ ಬೆಟ್ಟದಲ್ಲಿ ಅಕ್ರಮವಾಗಿ ಈಗಾಗಲೇ ರಸ್ತೆ, ವಿದ್ಯುತ್, ಕೊಳವೆ ಬಾವಿ ಸಂಪರ್ಕ ನೀಡಲಾಗಿದೆ. ಸದ್ಯಕ್ಕೆ ಕಪಾಲ ಬೆಟ್ಟದ ಮೇಲೆ ನಡೆಯುತ್ತಿರುವ ಕಲ್ಲು ಕೆತ್ತನೆಯ ಕಾರ್ಯದ ಕಲ್ಲುಗಳನ್ನು ಹಾಗೂ ಬೆಟ್ಟದ ಮೇಲಿರಿಸಿರುವ ಕಲ್ಲು ಕೊರೆಯುವ ಮಷಿನ್‍ಗಳನ್ನು 19 ನೇ ತಾರೀಕಿನ ಒಳಗಾಗಿ ತೆರವುಗೊಳಿಸಬೇಕು. ಇಲ್ಲದಿದ್ರೆ ರಾಮನಗರ ತಾಲೂಕಿನ ಬಿಡದಿ ಸಮೀಪವಿರುವ ಕೋತಿ ಆಂಜನೇಯ ದೇವಾಲಯದಿಂದ ಕಪಾಲ ಬೆಟ್ಟಕ್ಕೆ ಪಾದಯಾತ್ರೆ ನಡೆಸುತ್ತೇವೆ. ಪಾದಯಾತ್ರೆಯಲ್ಲಿ ಅನೇಕ ಸಾಧು-ಸಂತರು, ಉತ್ತರ ಕರ್ನಾಟಕದ ಸಾಧು-ಸಂತರು ಅನೇಕ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಭಾಗವಹಿಸ್ತಾರೆ. ಆ ದಿನ ಏನಾದ್ರೂ ಕಪಾಲ ಬೆಟ್ಟದಲ್ಲಿ ಹೆಚ್ಚು ಕಡಿಮೆಯಾದ್ರೆ ಅದಕ್ಕೆ ಜಿಲ್ಲಾಡಳಿತವೇ ನೇರ ಹೊಣೆಯಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು.