Tag: River Ganga

  • ಗಂಗಾ ನದಿ ಕೊಳಕು ಅಂತ ತಿಳಿದಿದ್ದಕ್ಕೆ ಯೋಗಿ ಸ್ನಾನ ಮಾಡಲಿಲ್ಲ: ಅಖಿಲೇಶ್ ಯಾದವ್

    ಗಂಗಾ ನದಿ ಕೊಳಕು ಅಂತ ತಿಳಿದಿದ್ದಕ್ಕೆ ಯೋಗಿ ಸ್ನಾನ ಮಾಡಲಿಲ್ಲ: ಅಖಿಲೇಶ್ ಯಾದವ್

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಗಂಗಾ ನದಿ ಕೊಳಕು ಎಂದು ತಿಳಿದಿತ್ತು. ಹೀಗಾಗಿ ಅವರು ಸ್ನಾನ ಮಾಡಲಿಲ್ಲ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.

    ಗಂಗಾ ನದಿ ಶುದ್ಧಿಕರಣಕ್ಕೆ ಬಿಜೆಪಿ ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡಿದೆಯಂತೆ ಆದರೆ ಗಂಗಾ ನದಿ ಕೊಳಕು ಎಂದು ಆದಿತ್ಯನಾಥ್ ಸ್ನಾನ ಮಾಡಲು ಹಿಂಜರಿದರು. ನನ್ನ ಪ್ರಶ್ನೆ ಏನೆಂದರೆ ಗಂಗಾ ಮಾತೆ ಎಂದಾದರೂ ಸ್ವಚ್ಛವಾಗಿದ್ದಾಳೆಯೇ? ಫಂಡ್‍ಗಳು ಹರಿದು ಬಂದರೂ ನದಿಯನ್ನು ಇನ್ನೂ ಸ್ವಚ್ಛಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ಎರಡು ದಿನಗಳ ಕಾಲ ವಾರಣಾಸಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯನ್ನು ಉದ್ಘಾಟಿಸುವ ಮುನ್ನ ಸೋಮವಾರ ಲಲಿತಾ ಘಾಟ್‍ನಲ್ಲಿ ಪ್ರಾರ್ಥನೆ ಸಲ್ಲಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದರು. ಇದನ್ನೂ ಓದಿ: ಹಣ ಬಲದ ಎದುರು ಜನ ಬಲಕ್ಕೆ ಸೋಲು: ಎಚ್‌ಡಿಕೆ

    ಇತ್ತೀಚೆಗಷ್ಟೇ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‍ಪಿ ಮತ್ತು ಬಿಜೆಪಿ ನಡುವಿನ ಇಬ್ಬರು ಸ್ಪರ್ಧಿಗಳ ನಡುವೆ ರಾಜಕೀಯ ಜಿದ್ದಾ, ಜಿದ್ದಿ ಸಿರೀಸ್ ಅನ್ನು ಅಖಿಲೇಶ್ ಯಾದವ್ ಅವರು ನೋಡಿ ಮಂಗಳವಾರ ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ಒಂದೇ ದಿನ 34 ಮಂದಿ ಮೇಲೆ ದಾಳಿ ಮಾಡಿದ ಶ್ವಾನ

    ವಾರಣಾಸಿಗೆ ಪ್ರಧಾನಿ ಮೋದಿ ಭೇಟಿ ನೀಡಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಜನರು ತಮ್ಮ ಅಂತಿಮ ದಿನಗಳನ್ನು ವಾರಣಾಸಿಯಲ್ಲಿ ಕಳೆಯುತ್ತಾರೆ ಎಂದು ಟಾಂಗ್ ನೀಡಿದ್ದಾರೆ.

  • ಸಂಬಂಧಿ ಪೊಲೀಸ್ ಕಾನ್‍ಸ್ಟೇಬಲ್‍ನಿಂದಲೇ 2 ವರ್ಷ ನಿರಂತರ ಅತ್ಯಾಚಾರ- ನದಿಗೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ

    ಸಂಬಂಧಿ ಪೊಲೀಸ್ ಕಾನ್‍ಸ್ಟೇಬಲ್‍ನಿಂದಲೇ 2 ವರ್ಷ ನಿರಂತರ ಅತ್ಯಾಚಾರ- ನದಿಗೆ ಹಾರಿ ಯುವತಿ ಆತ್ಮಹತ್ಯೆಗೆ ಯತ್ನ

    ಲಕ್ನೋ: ಸಂಬಂಧಿ ಪೊಲೀಸ್ ಹೆಡ್ ಕಾನ್‍ಸ್ಟೇಬಲ್ ನಿರಂತರವಾಗಿ 2 ವರ್ಷಗಳ ಕಾಲ ಅತ್ಯಾಚಾರ ಹಾಗೂ ಚಿತ್ರಹಿಂಸೆಯನ್ನು ಸಹಿಸಲಾಗದೆ 25 ವರ್ಷದ ಯುವತಿ ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರು ಹಾಗೂ ಸಾರ್ವಜನಿಕರು ರಕ್ಷಿಸಿದ್ದಾರೆ.

    ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಘಟನೆ ನಡೆದಿದ್ದು, ಯುವತಿ ಗಂಗಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ಪೊಲೀಸರು ಹಾಗೂ ಸಾರ್ವಜನಿಕರು ರಕ್ಷಿಸಿದ್ದಾರೆ ಎಂದು ಡಿಸಿಪಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಕೇಸ್ ಸಹ ದಾಖಲಾಗಿದೆ.

    ಜನವರಿ 2019ರಲ್ಲಿ ನಡೆದ ಕುಂಭ ಮೇಳಕ್ಕೆ ನಮ್ಮ ಚಿಕ್ಕಪ್ಪ ಅಲಹಬಾದ್‍ಗೆ ಆಹ್ವಾನಿಸಿದ್ದರು. ಈ ವೇಳೆ ಹೋಟೆಲ್‍ಗೆ ಕರೆದೊಯ್ದು ಮತ್ತು ಬರುವ ಔಷಧಿ ಬೆರೆಸಿದ ಕೂಲ್ ಡ್ರಿಂಕ್ಸ್ ನೀಡಿದ್ದರು. ಪ್ರಜ್ಞಾಹೀನಳಾದ ಬಳಿಕ ಅತ್ಯಾಚಾರ ಎಸಗಿ, ವೀಡಿಯೋ ರೆಕಾರ್ಡ್ ಮಾಡಿ, ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಇದನ್ನೂ ಓದಿ: ಎರಡೂವರೆ ತಿಂಗಳಿಂದ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ- ಆರೋಪಿ ಬಂಧನ

    ವೀಡಿಯೋ ಮಾಡಿಕೊಂಡ ಬಳಿಕ ಅವರ ಚಿಕ್ಕಪ್ಪ ಬೆದರಿಸಿ ಅಲಹಬಾದ್ ಹಾಗೂ ಖಾನ್‍ಪುರದಲ್ಲಿ ಕಳೆದ ಎರಡು ವರ್ಷಗಳಿಂದ ಹಲವು ಬಾರಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ಮಾತ್ರೆ ನೀಡಿ ಮಗುವನ್ನು ತೆಗೆಯಲು ಹೇಳಿದ್ದಾರೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ.

    ಭಾನುವಾರ ಸಹ ಆರೋಪಿ ಹಾಗೂ ಆತನ ಮಗ ಖಾನ್‍ಪುರದ ಚಕೇರಿ ಪ್ರದೇಶಕ್ಕೆ ಯುವತಿಯನ್ನು ಕರೆದೊಯ್ದು ಮತ್ತೆ ವೀಡಿಯೋ ಚಿತ್ರೀಕರಿಸಿ, ಬ್ಲ್ಯಾಕ್‍ಮೇಲ್ ಮಾಡಿದ್ದಾರೆ. ಅಲ್ಲದೆ ಯುವತಿ ಇದಕ್ಕೆ ವಿರೋಧಿಸಿದ್ದಕ್ಕೆ ಹೊಡೆದು ಚಿತ್ರಹಿಂಸೆ ನೀಡಿ, ಕೊಲೆ ಬೆದರಿಕೆ ಹಾಕಿದ್ದಾರೆ. ಇಲ್ಲಿಂದ ತಪ್ಪಿಸಿಕೊಂಡು ಬಂದ ಯುವತಿ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿ, ನದಿಗೆ ಹಾರಿದ್ದಾಳೆ. ಆದರೆ ಪಿಆರ್‍ವಿ ಸಿಬ್ಬಂದಿ ಯುವತಿ ರಕ್ಷಿಸಿದ್ದಾರೆ.

    ಟ್ರಾಫಿಕ್ ಪೊಲೀಸ್ ಕಾನ್‍ಸ್ಟೇಬಲ್ ಹಾಗೂ ಮಗನ ವಿರುದ್ಧ ಸಂಬಂಧಿಸಿದ ಸೆಕ್ಷನ್‍ಗಳಡಿ ಪ್ರಕರಣ ದಾಖಲಿಸಲಾಗಿದೆ. ಆದರೆ ಇಬ್ಬರನ್ನೂ ಇನ್ನೂ ಬಂಧಿಸಲಾಗಿಲ್ಲ. ಈ ಕುರಿತು ಟ್ರಾಫಿಕ್ ವಿಭಾಗದ ಡಿಸಿಪಿ ಮಾಹಿತಿ ನೀಡಿ, ಮಾಜಿಸ್ಟ್ರೇಟ್ ಎದುರು ಮಹಿಳೆ ಹೇಳಿಕೆ ದಾಖಲಿಸುತ್ತಿದ್ದಂತೆ ಆರೋಪಿ ಕಾನ್‍ಸ್ಟೇಬಲ್‍ನನ್ನು ಸಸ್ಪೆಂಡ್ ಮಾಡಲಾಗಿದೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಸಹ ಒಳಪಡಿಸಲಾಗಿದೆ ಎಂದು ಅವರು ಹೇಳಿದರು.

  • ಗಂಗಾನದಿ ನೀರನ್ನು ಕ್ಲಿನಿಕಲ್ ಟೆಸ್ಟ್ ನಡೆಸಲು ಸಾಧ್ಯವಿಲ್ಲ: ಐಸಿಎಂಆರ್

    ಗಂಗಾನದಿ ನೀರನ್ನು ಕ್ಲಿನಿಕಲ್ ಟೆಸ್ಟ್ ನಡೆಸಲು ಸಾಧ್ಯವಿಲ್ಲ: ಐಸಿಎಂಆರ್

    ನವದೆಹಲಿ: ಗಂಗಾ ನದಿ ನೀರನ್ನು ಕ್ಲಿನಿಕಲ್ ಟೆಸ್ಟ್ ನಡೆಸಲು ಸಾಧ್ಯವಿಲ್ಲ ಎಂದು ಐಸಿಎಂಆರ್ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಸ್ಪಷ್ಟಪಡಿಸಿದೆ. ಕೇಂದ್ರ ಜಲ ಶಕ್ತಿ ಸಚಿವಾಲಯದ ಮನವಿಗೆ ಪ್ರತಿಕ್ರಿಯೆ ನೀಡಿರುವ ಐಸಿಎಂಆರ್ ಮತ್ತಷ್ಟು ವೈಜ್ಞಾನಿಕ ಕಾರಣಗಳನ್ನು ನೀಡುವಂತೆ ಸೂಚಿಸಿದೆ.

    ಗಂಗಾ ನದಿ ನೀರು ಕೊರೊನಾ ವೈರಸ್ ಸೋಂಕಿಗೆ ಔಷಧಿಯಾಗಿ ಬಳಕೆ ಮಾಡಬಹುದು. ರುದ್ರಪ್ರಯಾಗ್ ಮತ್ತು ಮಧ್ಯಪ್ರದೇಶ ತೆಹ್ರಿ ಭಾಗದಲ್ಲಿ ಹರಿಯುವ ಗಂಗಾ ನದಿ ನೀರಲ್ಲಿ ಬ್ಯಾಕ್ಟೀರಿಯಾಫೇಜ್ ಎನ್ನುವ ಸೂಕ್ಷ್ಮಾಣು ಪ್ರಬೇಧಗಳಿದ್ದು ಇದು ಮನುಷ್ಯ ಪ್ರಾಣಿ ಮತ್ತು ನೀರಿನ ಕೊಳವೆಯಲ್ಲಿರುವ ವೈರಸ್ ಗಳನ್ನು ತಿನ್ನುತ್ತದೆ. ಕೊರೊನಾ ವೈರಸ್ ಅನ್ನು ತಿನ್ನುವ ಸಾಧ್ಯತೆಗಳಿದೆ ಹೀಗಾಗಿ ಈ ಬಗ್ಗೆ ಕ್ಲಿನಿಕಲ್ ಟೆಸ್ಟ್ ನಡೆಸುವಂತೆ ಕೇಂದ್ರ ಜಲ ಶಕ್ತಿ ಸಚಿವಾಲಯ ಮನವಿ ಮಾಡಿಕೊಂಡಿತ್ತು.

    ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಐಸಿಎಂಆರ್, ಗಂಗಾನದಿಯಲ್ಲಿ ಸೂಕ್ಷ್ಮ ವೈರಸ್‍ಗಳ ವಿರುದ್ಧ ಹೋರಾಡುವ ಬ್ಯಾಕ್ಟೀರಿಯಾಫೇಜ್ ಎನ್ನುವ ಸೂಕ್ಷ್ಮಾಣು ಪ್ರಬೇಧಗಳು ಮತ್ತು ವೈರಸ್ ಗಳನ್ನು ತಿನ್ನುವ ಬಗ್ಗೆ ಇನ್ನಷ್ಟು ವೈಜ್ಞಾನಿಕ ಸಾಕ್ಷ್ಯಗಳನ್ನು ನೀಡುವಂತೆ ಕೋರಿದ್ದು, ಸದ್ಯ ಇದನ್ನು ಕ್ಲಿನಿಕಲ್ ಟೆಸ್ಟ್ ನಡೆಸಲು ಸಾಧ್ಯವಿಲ್ಲ ಎಂದಿದೆ.

  • ಪವಿತ್ರ ಗಂಗೆಯಲ್ಲಿ ಮಿಂದೆದ್ದ ರೋಡ್ಸ್‌ಗೆ ಹರ್ಭಜನ್ ವಿಶೇಷ ಮನವಿ

    ಪವಿತ್ರ ಗಂಗೆಯಲ್ಲಿ ಮಿಂದೆದ್ದ ರೋಡ್ಸ್‌ಗೆ ಹರ್ಭಜನ್ ವಿಶೇಷ ಮನವಿ

    – ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಆಗುವ ಪ್ರಯೋಜನ ತಿಳಿಸಿದ ಜಾಂಟಿ

    ನವದೆಹಲಿ: ಗಂಗಾ ನದಿಯಲ್ಲಿ ಮಿಂದೆದ್ದ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಜಾಂಟಿ ರೋಡ್ಸ್‌ಗೆ ಭಾರತದ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರು, ವಿಶೇಷ ಮನವಿಯನ್ನು ಸಲ್ಲಿಸಿದ್ದಾರೆ.

    ಸಧ್ಯ ಭಾರತದಲ್ಲಿರುವ ಜಾಂಟಿ ರೋಡ್ಸ್ ಅವರು, ಬುಧವಾರ ಋಷಿಕೇಶಕ್ಕೆ ಹೋಗಿ ಅಲ್ಲಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದಾರೆ. ಗಂಗೆಯಲ್ಲಿ ಮುಳಗಿರುವ ಫೋಟೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಹಾಕಿಕೊಂಡಿರುವ ಜಾಂಟಿ, ಪವಿತ್ರ ಗಂಗೆಯ ತಣ್ಣೀರಿನಲ್ಲಿ ಮುಳುಗುವುದರಿಂದ ದೈಹಿಕ ಮತ್ತು ಆಧ್ಯಾತ್ಮಿಕ ಮೋಕ್ಷ ಸಿಗುತ್ತದೆ ಎಂದು ಬರೆದುಕೊಂಡಿದ್ದರು.

    ಈ ಟ್ವೀಟ್‍ಗೆ ರೀಟ್ವೀಟ್ ಮಾಡಿರುವ ಹರ್ಭಜನ್ ಅವರು, ನೀವು ನನಗಿಂತ ಹೆಚ್ಚು ಭಾರತೀಯರನ್ನು ನೋಡಿದ್ದೀರಾ. ನೀವು ಪವಿತ್ರವಾದ ಗಂಗೆಯಲ್ಲಿ ಮುಳುಗಿ ಆನಂದಿಸುತ್ತಿರುವುದನ್ನು ನೋಡಲು ಬಹಳ ಸಂತೋಷವಾಗುತ್ತದೆ. ಮುಂದಿನ ಬಾರಿ ನೀವು ಅಲ್ಲಿಗೆ ಹೋಗುವಾಗ ನನ್ನನ್ನು ಕರೆದುಕೊಂಡು ಹೋಗಿ ಎಂದು ಹರ್ಭಜನ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ರೋಡ್ಸ್‌ಗೆ ಮನವಿ ಸಲ್ಲಿಸಿದ್ದಾರೆ.

    ಈ ತಿಂಗಳ ಕೊನೆಯಲ್ಲಿ ಆರಂಭವಾಗುವ ಐಪಿಎಲ್ 2020ಯಲ್ಲಿ ಭಾಗವಹಿಸಲು ಜಾಂಟಿ ರೋಡ್ಸ್ ಇಂಡಿಯಾಗೆ ಬಂದಿದ್ದಾರೆ. ಈ ಆವೃತ್ತಿಯಲ್ಲಿ ಅವರು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಜಾಂಟಿ ಅವರು 2009 ರಿಂದ 2017ರ ವರೆಗೆ ಮುಂಬೈ ಇಂಡಿಯನ್ಸ್ ತಂಡಕ್ಕೆ ಫೀಲ್ಡಿಂಗ್ ಕೋಚ್ ಆಗಿ ಕಾರ್ಯನಿರ್ವವಹಿಸಿದ್ದರು. ಈ ತಂಡ ಇವರ ಅವದಿಯಲ್ಲಿ ಮೂರು ಬಾರಿ ಕಪ್ ಗೆದ್ದಿತ್ತು.

    2019 ರ ಡಿಸೆಂಬರ್ ನಲ್ಲಿ ಪಂಜಾಬ್ ತಂಡದ ಫೀಲ್ಡಿಂಗ್ ಕೋಚ್ ಆಗಿ ಆಯ್ಕೆಯಾದ ರೋಡ್ಸ್, ಮುಂಬರುವ ಐಪಿಎಲ್ 2020ರಲ್ಲಿ ಅನಿಲ್ ಕುಂಬ್ಳೆ, ವೆಸ್ಟ್ ಇಂಡೀಸ್‍ನ ಕರ್ಟ್ನಿ ವಾಲ್ಷ್, ಭಾರತದ ಮಾಜಿ ಸ್ಪಿನ್ನರ್ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಸುನಿಲ್ ಜೋಶಿ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ಜಾರ್ಜ್ ಬೈಲಿಯವರನ್ನು ಸೇರಿಕೊಳ್ಳಲಿದ್ದಾರೆ.

    ಭಾರತದ ಮೇಲೆ ವಿಶೇಷ ಪ್ರೀತಿ ಇಟ್ಟಿಕೊಂಡಿರುವ ಜಾಂಟಿ ರೋಡ್ಸ್, 2016ರಲ್ಲಿ ಜನಿಸಿದ ಅವರ ಮಗಳಿಗೆ ಇಂಡಿಯಾ ಎಂದು ನಾಮಕಾರಣ ಮಾಡಿದ್ದರು. ಜೊತೆಗೆ ನಾನು ಬಹುಕಾಲ ಇಂಡಿಯಾದಲ್ಲೇ ಸಮಯ ಕಳೆದಿದ್ದಾನೆ. ಇಲ್ಲಿನ ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ನನಗೆ ಬಹಳ ಇಷ್ಟ. ಇಂಡಿಯಾ ಒಂದು ಆಧ್ಯಾತ್ಮಿಕ ದೇಶ, ಬಹಳ ಮುಂದಾಲೋಚನೆಯ ರಾಷ್ಟ್ರ ಎಂದು ಹೇಳಿದ್ದರು.

  • ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ

    ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ರಕ್ಷಿಸಿದ ಪೊಲೀಸ್ – ವಿಡಿಯೋ

    ಡೆಹ್ರಾಡೂನ್: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ್ನು ಪೊಲೀಸ್ ಅಧಿಕಾರಿಯೊಬ್ಬರು ಕಾಪಾಡಿರುವ ಘಟನೆ ಉತ್ತರಾಖಂಡ್‍ನಲ್ಲಿ ನಡೆದಿದೆ.

    ಈ ಘಟನೆ ಉತ್ತರಾಖಂಡ್‍ನ ಹರಿದ್ವಾರದಲ್ಲಿ ನಡೆದಿದ್ದು, ಗಂಗಾ ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನನ್ನು ಕಾಪಾಡಲು ಪೊಲೀಸ್ ಅಧಿಕಾರಿಯೊಬ್ಬರು ಲೈಫ್ ಜಾಕೆಟ್ ಧರಿಸಿ ನದಿಗೆ ಹಾರಿದ್ದಾರೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋವನ್ನು ಉತ್ತರಾಖಂಡ್ ಪೊಲೀಸರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ನದಿಗೆ ಹಾರಿದ ಪೊಲೀಸ್ ಅಧಿಕಾರಯನ್ನು ಸನ್ನಿ ಎಂದು ಗುರುತಿಸಲಾಗಿದೆ. ಇನ್ನು ಹರಿಯಾಣದ ನಿವಾಸಿಯಾದ ವಿಶಾಲ್ ಕಾಂಗ್ರಾ ಘಾಟ್‍ನಲ್ಲಿ ಸ್ನಾನ ಮಾಡಲು ಹೋಗಿ ಸಮತೋಲನ ಕಳೆದುಕೊಂಡು ನದಿಯಲ್ಲಿ ಬಿದ್ದಿದ್ದಾನೆ. ವೇಗದಿಂದ ಹರಿಯುತ್ತಿದ್ದ ಕಾರಣ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.

    https://twitter.com/subodhh9879/status/1152999979054768131

    ಈ ಸಮಯದಲ್ಲಿ ಅಲ್ಲೇ ಇದ್ದ ಸನ್ನಿಯವರು ಯುವಕನನ್ನು ಕಾಪಾಡಿದ್ದಾರೆ. ಈಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ವೀಡಿಯೊವನ್ನು 55,000 ಕ್ಕೂ ಹೆಚ್ಚು ಜನ ವೀಕ್ಷಿಸಿದ್ದಾರೆ ಮತ್ತು ಪೊಲೀಸ್ ಅಧಿಕಾರಿಯ ಧೈರ್ಯವನ್ನು ಶ್ಲಾಘಿಸಿ ತುಂಬಾ ಜನ ಕಮೆಂಟ್ ಮಾಡಿದ್ದಾರೆ.

    ಈ ಬಾರಿ ಮುಂಗಾರು ಮಳೆ ಚೆನ್ನಾಗಿ ಆಗಿದ್ದು, ಗಂಗಾ ನದಿಯ ನೀರಿನ ಮಟ್ಟವನ್ನು ಹೆಚ್ಚಾಗಿದೆ. ಈಗ ಅಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಯಲ್ಲಿ ಜನರು ನೀರಿಗೆ ಇಳಿಯದಂತೆ ನೋಡಿಕೊಳ್ಳಲು ಜಲ ಪೊಲೀಸ್ ಮತ್ತು ರಾಜ್ಯ ವಿಪತ್ತು ಪ್ರತಿಕ್ರಿಯೆ ನಿಧಿ (ಎಸ್‍ಡಿಆರ್‍ಎಫ್) ತಂಡಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.