Tag: Riya Chakraborty

  • ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್ – ನಟಿ ರಿಯಾ ಚಕ್ರವರ್ತಿಗೆ CBIನಿಂದ ಕ್ಲೀನ್‌ಚಿಟ್

    ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕೇಸ್ – ನಟಿ ರಿಯಾ ಚಕ್ರವರ್ತಿಗೆ CBIನಿಂದ ಕ್ಲೀನ್‌ಚಿಟ್

    – ಸುಶಾಂತ್ ಸಿಂಗ್ ಆತ್ಮಹತ್ಯೆಗೂ 6 ದಿನ ಮೊದಲು ಅಪಾರ್ಟ್ಮೆಂಟ್‌ನಿಂದ ಹೋಗಿದ್ದ ರಿಯಾ ಚಕ್ರವರ್ತಿ

    ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಆತ್ಮಹತ್ಯೆ ಕೇಸಲ್ಲಿ ಗೆಳತಿ-ನಟಿ ರಿಯಾ ಚಕ್ರವರ್ತಿಗೆ (Rhea Chakraborty) ಸಿಬಿಐ ಕ್ಲೀನ್‌ಚಿಟ್ ಕೊಟ್ಟಿದೆ.

    ಪಾಟ್ನಾದ ಕೋರ್ಟ್‌ಗೆ ಸಿಬಿಐ (CBI) ಸಲ್ಲಿಸಿದ್ದ ಕ್ಲೋಸರ್ ರಿಪೋರ್ಟ್‌ನ ಅಂಶಗಳು ಬೆಳಕಿಗೆ ಬಂದಿವೆ. 6 ದಿನಗಳ ಮೊದಲೇ ರಿಯಾ ಅಪಾರ್ಟ್ಮೆಂಟ್‌ನಿಂದ ಹೊರಟಿದ್ದರು. ಹಣಕಾಸಿನ ಯಾವುದೇ ಅವ್ಯವಹಾರ ನಡೆದಿಲ್ಲ ಅಂತ ಉಲ್ಲೇಖಿಸಿದೆ.ಇದನ್ನೂ ಓದಿ: ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆಗೆ ಯಾರೂ ಪ್ರಚೋದನೆ ಮಾಡಿಲ್ಲ: ಅಂತಿಮ ವರದಿ ಸಲ್ಲಿಸಿದ ಸಿಬಿಐ

    2020ರಲ್ಲಿ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಸುಶಾಂತ್ ಸಿಂಗ್ ತಂದೆ ಕೆ.ಕೆ. ಸಿಂಗ್ ಅವರು ರಿಯಾ ಚಕ್ರವರ್ತಿ ಮೇಲೆ ಆರೋಪ ಹೊರಿಸಿದ್ದರು. ಇದೀಗ ಸಿಬಿಐ ರಿಯಾ ಚಕ್ರವರ್ತಿಗೆ ಕ್ಲೀನ್‌ಚಿಟ್ ನೀಡಿದೆ. ಆದರೆ ಸಿಬಿಐ ರಿಪೋರ್ಟ್‌ಗೆ ಸುಶಾಂತ್ ಕುಟುಂಬಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಸಿಬಿಐ ಅಂತಿಮ ವರದಿಯ 5 ಪ್ರಮುಖ ಅಂಶಗಳೇನು?
    1. ಸುಶಾಂತ್ ಸಿಂಗ್ ಆತ್ಮಹತ್ಯೆಗೂ 6 ದಿನಗಳ ಮೊದಲೇ ಅಂದರೆ 2020ರ ಜೂ.8ರಂದು ರಿಯಾ ಚಕ್ರವರ್ತಿ ಹಾಗೂ ಅವರ ಸಹೋದರ ಶೋವಿಕ್ ಚಕ್ರವರ್ತಿ ಸುಶಾಂತ್ ಸಿಂಗ್ ಫ್ಲ್ಯಾಟ್‌ನಿಂದ ಹೊರಟಿದ್ದರು. ಅದಾದ ಬಳಿಕ ಅರ‍್ಯಾರು ಸುಶಾಂತ್‌ನ್ನು ಭೇಟಿಯಾಗಿಲ್ಲ. ಅದಲ್ಲದೇ ಜೂ.8ರಿಂದ ಜೂ.14ರ ಮಧ್ಯೆ ಆರೋಪಿಗಳ ಪೈಕಿ ಯಾರೂ ಕೂಡ ಸುಶಾಂತ್ ಜೊತೆ ಇರಲಿಲ್ಲ. ರಿಯಾ ಚಕ್ರವರ್ತಿ ಹೋದ ನಂತರ, ಜೂ.10ರಂದು ಶೋವಿಕ್ ಚಕ್ರವರ್ತಿ ಮತ್ತು ಸುಶಾಂತ್ ಸಿಂಗ್ ರಜಪೂತ್ ನಡುವೆ ಒಂದೇ ಒಂದು ವಾಟ್ಸಪ್ ಮೆಸೇಜ್ ಬಿಟ್ಟರೆ, ಅವರಿಬ್ಬರ ನಡುವೆ ಯಾವುದೇ ಮಾತುಕತೆ ನಡೆದಿಲ್ಲ.

    2 ಸುಶಾಂತ್ ಸಹೋದರಿ ಮೀತು ಸಿಂಗ್ ಜೂ.8ರಿಂದ ಜೂ.12ರವರೆಗೆ ಸುಶಾಂತ್ ಅವರೊಂದಿಗಿದ್ದರು. ಇನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ಮ್ಯಾನೇಜರ್ ಶ್ರುತಿ ಮೋದಿ 2020ರ ಫೆಬ್ರವರಿಯಿಂದ ಕಾಲಿಗೆ ಗಾಯವಾದ ಕಾರಣ ಸುಶಾಂತ್ ಅವರ ಮನೆಗೆ ಬಂದಿರಲಿಲ್ಲ.

    3. ರಿಯಾ ಚಕ್ರವರ್ತಿ ಅವರು ಸುಶಾಂತ್ ಸಿಂಗ್ ರಜಪೂತ್ ಅವರ ಕೆಲವು ವಸ್ತುಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪ ಕೇಳಿಬಂದಿತ್ತು. ಇದರ ಆಧಾರದ ಮೇಲೆ ತನಿಖೆ ಮಾಡಿದಾಗ ಸುಶಾಂತ್ ಅವರು ಉಡುಗೊರೆಯಾಗಿ ನೀಡಿದ್ದ ಆಪಲ್ ಲ್ಯಾಪ್‌ಟಾಪ್ ಮತ್ತು ವಾಚ್‌ನ್ನು ಮಾತ್ರ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ ಯಾವುದೇ ಹಣಕಾಸಿನ ಯಾವುದೇ ಅವ್ಯವಹಾರ ನಡೆದಿರುವುದಕ್ಕೆ ಪುರಾವೆಗಳಿಲ್ಲ.

    4. ವರದಿಗಳ ಪ್ರಕಾರ 2019ರ ಏಪ್ರಿಲ್‌ನಿಂದ ರಿಯಾ ಹಾಗೂ ಸುಶಾಂತ್ ಅವರು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಅದಾದ ಬಳಿಕ ಸುಶಾಂತ್ ಅವರೇ ರಿಯಾ ನಮ್ಮ ಕುಟುಂಬದ ಭಾಗ ಎಂದು ಹೇಳಿಕೊಂಡಿದ್ದರು. ಅದಲ್ಲದೇ ರಿಯಾ ಅವರಿಗೆ ಸಂಬಂಧಿಸಿದ ಖರ್ಚುಗಳನ್ನು ಸುಶಾಂತ್ ಸಿಂಗ್ ಅವರ ಅಕೌಂಟೆಂಟ್ ನೋಡಿಕೊಳ್ಳುತ್ತಿದ್ದರು. ಇದನ್ನು ವಂಚನೆ ಎಂದು ಪರಿಗಣಿಸಲು ಸಾಧ್ಯವಿಲ್ಲ.

    5. ರಿಯಾ ಚಕ್ರವರ್ತಿ ಅವರು ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪಗಳನ್ನು ಸಿಬಿಐ ತಳ್ಳಿಹಾಕಿದೆ. ಹೀಗಾಗಿ ಆತ್ಮಹತ್ಯೆಗೆ ಪ್ರಚೋದಿಸುವಂತದ್ದು ಏನೂ ನಡೆದಿಲ್ಲ ಎಂದು ಸಿಬಿಐ ವರದಿಯಲ್ಲಿ ತಿಳಿಸಿದೆ.ಇದನ್ನೂ ಓದಿ: ಮರಣೋತ್ತರ ಪರೀಕ್ಷೆ ಪೂರ್ಣ- ಮತ್ತೊಂದು ಆಸ್ಪತ್ರೆಗೆ ದೇಹದ ಭಾಗ ರವಾನೆ

  • ಸುಶಾಂತ್ ಸಿಂಗ್ ಸಾವಿನ ಪ್ರಕರಣ ಚಾರ್ಜ್ ಶೀಟ್ ಸಲ್ಲಿಸಿದ ಎನ್.ಸಿ.ಬಿ : ರಿಯಾ ಚಕ್ರವರ್ತಿಗೆ ಸಂಕಷ್ಟ?

    ಸುಶಾಂತ್ ಸಿಂಗ್ ಸಾವಿನ ಪ್ರಕರಣ ಚಾರ್ಜ್ ಶೀಟ್ ಸಲ್ಲಿಸಿದ ಎನ್.ಸಿ.ಬಿ : ರಿಯಾ ಚಕ್ರವರ್ತಿಗೆ ಸಂಕಷ್ಟ?

    ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ರಹಸ್ಯವನ್ನು ಇನ್ನೂ ಬೇಧಿಸಲು ಸಾಧ್ಯವಾಗಿಲ್ಲ. ಆ ಸಾವು ಅಭಿಮಾನಿಗಳ ಪಾಲಿಗೆ ಇನ್ನೂ ನಿಗೂಢವಾಗಿದೆ. ಅದು ಆತ್ಮಹತ್ಯೆಯೋ, ಕೊಲೆಯೋ ಈ ಹೊತ್ತಿಗೂ ಅದು ಚರ್ಚೆಯ ವಿಷಯವಾಗಿದೆ. ಈ ಮಧ್ಯ ಎನ್.ಸಿ.ಬಿಯು ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ.  ಹಾಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಜಾಮೀನು ಪಡೆದು, ಆಚೆ ಇರುವ ಸುಶಾಂತ್ ಸಿಂಗ್ ಪ್ರೇಯಸಿ ಮತ್ತು ಪ್ರಕರಣದ ಮುಖ್ಯ ಆರೋಪಿ ರಿಯಾ ಚಕ್ರವರ್ತಿಗೆ ಸಂಕಷ್ಟ ಎದುರಾಗಲಿದೆ ಎನ್ನಲಾಗುತ್ತಿದೆ.

    ಬಾಲಿವುಡ್ ನಲ್ಲಿ ಏರುಗತಿಯಲ್ಲಿದ್ದ ನಟ ಸುಶಾಂತ್ ಸಿಂಗ್, ಸ್ಟಾರ್ ನಟರಾಗಿ ಮುಂಚುತ್ತಿರುವ ಹೊತ್ತಿನಲ್ಲೇ ಅಕಾಲಿಕ ಮರಣ ಹೊಂದಿದರು. ಯಾರೂ ಊಹಿಸಿಕೊಳ್ಳದೇ ಇರುವಂತಹ ಕೆಲಸಕ್ಕೆ ಕೈ ಹಾಕಿದರು. ಅದೂ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಸಿಂಗ್ ಪತ್ತೆಯಾದಾಗ, ಅವರು ಆ ರೀತಿ ಮಾಡಿಕೊಳ್ಳುವವರು ಅಲ್ಲ ಎಂದೇ ಆಪ್ತರು ಹೇಳಿದ್ದರು. ಸುಶಾಂತ್ ಅವರ ಈ ಸ್ಥಿತಿಗೆ ಕಾರಣ ಅವರ ಪ್ರೇಯಸಿ ರಿಯಾ ಚಕ್ರವರ್ತಿ ಎಂದು ಆರೋಪಿಸಲಾಯಿತು. ಇದನ್ನೂ ಓದಿ:ಆರೋಗ್ಯದಲ್ಲಿ ಚೇತರಿಕೆ, ನಟ ದಿಗಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಸುಶಾಂತ್ ಸಿಂಗ್ ಸಾವು ಒಂದು ಕಡೆ ನೋವಾಗಿ ಕಾಡಿದರೆ, ಮತ್ತೊಂದು ಕಡೆ ಅದು ಡ್ರಗ್ಸ್ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ದಂಧೆಗೆ ತಳುಕು ಹಾಕಿಕೊಂಡಿತು. ಸುಶಾಂತ್ ಸಿಂಗ್ ಡ್ರಗ್ಸ್ ಸೇವಿಸುತ್ತಿದ್ದ, ಅದನ್ನು ಸ್ವತಃ ರಿಯಾ ಚಕ್ರವರ್ತಿ ಹಾಗೂ ಶೋವಿಕ್ ಚಕ್ರವರ್ತಿಯೇ ಸಪ್ಲೈ ಮಾಡುತ್ತಿದ್ದರು ಎಂದು ಹೇಳಲಾಯಿತು. ರಿಯಾ ಚಕ್ರವರ್ತಿಯನ್ನು ಬಂಧಿಸಿ ಜೈಲಿಗೂ ಕಳುಹಿಸಲಾಯಿತು. ಆನಂತರ ಅವರು ಜಾಮೀನು ಪಡೆದು ಆಚೆ ಬಂದರು. ಇದೀಗ ಈ ಪ್ರಕರಣದ ಕುರಿತಂತೆ ಜಾರ್ಜಶೀಟ್ ಸಲ್ಲಿಕೆಯಾಗಿದೆ. ಅದರಲ್ಲಿ ಏನೆಲ್ಲ ರಹಸ್ಯಗಳಿವೆಯೋ ಕಾದು ನೋಡಬೇಕು.

    Live Tv

  • ಶಾರುಖ್ ಪುತ್ರನಿಗೆ ಕ್ಲೀನ್ ಚೀಟ್ ನೀಡಿದ ಬಳಿಕ ರಿಯಾ ಚಕ್ರವರ್ತಿ ಡ್ರಗ್ ಕೇಸ್ ತನಿಖೆಗೆ ಮನವಿ

    ಶಾರುಖ್ ಪುತ್ರನಿಗೆ ಕ್ಲೀನ್ ಚೀಟ್ ನೀಡಿದ ಬಳಿಕ ರಿಯಾ ಚಕ್ರವರ್ತಿ ಡ್ರಗ್ ಕೇಸ್ ತನಿಖೆಗೆ ಮನವಿ

    ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ಗೆ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದ ಬೆನ್ನಲ್ಲೆ ರಿಯಾ ಚಕ್ರವರ್ತಿ ವಿರುದ್ಧ ದಾಖಲಾದ ಡ್ರಗ್ ಪ್ರಕರಣದ ಬಗ್ಗೆ ಹೊಸದಾಗಿ ತನಿಖೆ ನಡೆಸುವಂತೆ ನಟಿ ರಿಯಾ ಪರ ವಕೀಲ ಸತೀಶ್ ಮನೇಶಿಂಡೆ ಒತ್ತಾಯಿಸಿದ್ದಾರೆ.

    ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ ವಿಚಾರವಾಗಿ ಯಾವುದೇ ಸಾಕ್ಷಿ ಆಧಾರಯಿಲ್ಲದೇ ಇರುವ ಕಾರಣ ಎನ್‌ಸಿಬಿ ಕ್ಲೀನ್ ಚೀಟ್ ನೀಡಿದ್ದಾರೆ. ಇದರ ಬೆನ್ನಲ್ಲೇ ರಿಯಾ ಚಕ್ರವರ್ತಿ ಪರ ವಕೀಲ ಡ್ರಗ್ಸ್ ಪ್ರಕರಣ ಹೊಸದಾಗಿ ತನಿಖೆ ನಡೆಯಬೇಕು ಎಂದು ಮನವಿ ಮಾಡಿದ್ದಾರೆ. ೨೦೨೦ರಲ್ಲಿ ರಿಯಾ ಮತ್ತು ಶ್ಲೋಕ್ ಚಕ್ರವರ್ತಿ ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಬಳಿಕ ಕೆಲ ದಿನಗಳ ಬಳಿಕ ಇಬ್ಬರನ್ನು ರಿಲೀಸ್ ಮಾಡಲಾಯ್ತು. ಇದನ್ನೂ ಓದಿ:ಬೈಕಾಟ್ ಲಾಲ್ ಸಿಂಗ್ ಛಡ್ಡಾ: ಅಮೀರ್ ಖಾನ್ ಚಿತ್ರಕ್ಕೆ ಸಂಕಷ್ಟ

    ಈಗ ಡ್ರಗ್ಸ್ ಪ್ರಕರಣದಲ್ಲಿ ಮತ್ತೆ ಹೊಸದಾಗಿ ತನಿಖೆಯಾಗಬೇಕು. ಯಾವುದೇ ಮಾದಕ ದ್ರವ್ಯ ಪತ್ತೆಯಾಗಿಲ್ಲ, ಯಾವುದೇ ಪರೀಕ್ಷೆ ಕೂಡ ಮಾಡಲಾಗಿಲ್ಲ. ಕೇವಲ ವಾಟ್ಸಾಪ್ ಚಾಟ್‌ಗಳಷ್ಟೇ ಇದ್ದವು. ಹಾಗಾಗಿ ಈ ಕುರಿತು ಹೆಚ್ಚಿನ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಕಷ್ಟು ಜನರಿಗೆ ಎನ್‌ಸಿಬಿ ತೊಂದರೆ ಕೊಟ್ಟಿದೆ. ಅವರ ವಿರುದ್ಧವು ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿದ್ದಾರೆ.

  • ಸುಶಾಂತ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗಿಲ್ಲ- ರಿಯಾಗೆ ರಿಲೀಫ್?

    ಸುಶಾಂತ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆ ಆಗಿಲ್ಲ- ರಿಯಾಗೆ ರಿಲೀಫ್?

    – ಕುಟುಂಬಸ್ಥರ ತಪ್ಪು ಗ್ರಹಿಕೆಯಿಂದ ದೂರು ದಾಖಲು
    – ಸುಶಾಂತ್ ಗೆಳತಿ ರಿಯಾ ಮತ್ತಷ್ಟು ನಿರಾಳ

    ಮುಂಬೈ: ಮೃತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಬ್ಯಾಂಕ್ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂದು ಜಾರಿ ನಿರ್ದೇಶನಾಲಯ ಹೇಳಿರುವ ಬಗ್ಗೆ ಖಾಸಗಿ ಪತ್ರಿಕೆ ವರದಿ ಮಾಡಿದೆ.

    ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವು ಪ್ರಕರಣ ಅಕ್ರಮ ಹಣ ವರ್ಗಾವಣೆಯ ಆಯಾಮವನ್ನು ಪಡೆದುಕೊಂಡಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಜಾರಿ ನಿರ್ದೇಶನಾಲಯ ಸುಶಾಂತ್ ಗೆಳತಿ ರಿಯಾ ಚಕ್ರವರ್ತಿಯನ್ನ ಮೂರು ಬಾರಿ ವಿಚಾರಣೆಗೆ ಒಳಪಡಿಸಿತ್ತು. ರಿಯಾ ವಿಚಾರಣೆ ಬಳಿಕ ಇಡಿ ತನಿಖೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ಲಭ್ಯವಾಗಿರಲಿಲ್ಲ. ಇದೀಗ ಪತ್ರಿಕೆಯೊಂದರ ಪ್ರಕಾರ ಸುಶಾಂತ್ ಖಾತೆಯಿಂದ ಅಕ್ರಮ ಹಣ ವರ್ಗಾವಣೆಯಾಗಿಲ್ಲ ಎಂಬ ತೀರ್ಮಾನಕ್ಕೆ ಇಡಿ ಬಂದಿದೆ ಎನ್ನಲಾಗಿದೆ. ಸುಶಾಂತ್ ಕುಟುಂಬಸ್ಥರು ತಪ್ಪು ಗ್ರಹಿಕೆಯಿಂದಾಗಿ ದೂರು ದಾಖಲಿಸಿದ್ದಾರೆ. ಸುಶಾಂತ್ ಪರಿವಾರಕ್ಕೆ ನಟನ ಆರ್ಥಿಕ ವ್ಯವಹಾರಗಳ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ಇಡಿ ಹೇಳಿದೆ. ಇದನ್ನೂ ಓದಿ: 5 ವರ್ಷದಲ್ಲಿ ಸುಶಾಂತ್ ಗಳಿಸಿದ್ದು 70 ಕೋಟಿ-ರಿಯಾಗಾಗಿ ಖರ್ಚು ಮಾಡಿದೆಷ್ಟು?

    ತನಿಖೆ ಹಿನ್ನೆಲೆ ಜಾರಿ ನಿರ್ದೇಶನಾಲಯ ಸುಶಾಂತ್ ಬ್ಯಾಂಕ್ ಖಾತೆ ಮತ್ತು ಆರ್ಥಿಕ ವ್ಯವಹಾರಗಳನ್ನು ಆಡಿಟ್ ಮಾಡಿಸಲಾಗಿತ್ತು. ಆಡಿಟ್ ನಲ್ಲಿ ತಮ್ಮ ಆದಾಯಕ್ಕೆ 2.78 ಕೋಟಿ ತೆರಿಗೆ ಸಹ ಪಾವತಿಸಿದ್ದಾರೆ. ಚಿಕ್ಕ ಪುಟ್ಟ ವ್ಯವಹಾರಗಳ ತೆರಿಗೆ ಬಾಕಿ ಇರೋದು ಮಾತ್ರ ಇಡಿ ಗಮನಕ್ಕೆ ಬಂದಿದ್ದು, ಉಳಿದೆಲ್ಲ ಆರ್ಥಿಕ ಚಟುವಟಿಕೆಗಳು ಪಾರದರ್ಶಕವಾಗಿ ಎಂದ ಪತ್ರಿಕೆ ಬಿತ್ತರಿಸಿದೆ. ಇದನ್ನೂ ಓದಿ: ಜೈಲಿನಲ್ಲಿದ್ದ 28 ದಿನದ ರಿಯಾ ದಿನಚರಿ ಬಿಚ್ಚಿಟ್ಟ ವಕೀಲ

    ಕೆಲ ದಿನಗಳ ಹಿಂದೆ ಸುಶಾಂತ್ ಬಳಸುತ್ತಿದ್ದ ಬ್ಯಾಂಕ್ ಖಾತೆಯ ವ್ಯವಹಾರದ ಪ್ರತಿಯೊಂದನ್ನ ಮಾಧ್ಯಮ ರಿವೀಲ್ ಮಾಡಿತ್ತು. ಐದು ವರ್ಷದಲ್ಲಿ ಸುಶಾಂತ್ 70 ಕೋಟಿ ಹಣ ಗಳಿಸಿದ್ದು, ಪ್ರೇಯಸಿ ರಿಯಾಗಾಗಿ 55 ಲಕ್ಷ ರೂ. ಖರ್ಚು ಮಾಡಿರುವ ವಿಷಯ ತಿಳಿದು ಬಂದಿತ್ತು. ಇನ್ನುಳಿದಂತೆ ಸುಶಾಂತ್ ಹೆಚ್ಚಿನ ಹಣವನ್ನು ಪ್ರವಾಸ, ಗಿಫ್ಟ್ ಮತ್ತು ಸ್ಪಾಗಾಗಿ ಖರ್ಚು ಮಾಡಿರುವ ವಿಚಾರ ಹೊರ ಬಂದಿತ್ತು. ಇದನ್ನೂ ಓದಿ: ಸುಶಾಂತ್ ಸಾವಿಗೆ ಭೂಗತ ಲೋಕದ ಲಿಂಕ್: ಸುಬ್ರಮಣಿಯನ್ ಸ್ವಾಮಿ

    ಜುಲೈ 31ರಂದು ಸುಶಾಂತ್ ಸಿಂಗ್ ತಂದೆ ಕೆ.ಕೆ.ಸಿಂಗ್ ಅಕ್ರಮ ಹಣ ವರ್ಗಾವಣೆ ಬಗ್ಗೆ ಅನುಮಾನ ವ್ಯಕ್ತಪಡಿಸಿ ಬಿಹಾರ ಪಾಟ್ನಾದಲ್ಲಿ ದೂರು ದಾಖಲಿಸಿದ್ದರು. ಕೆ.ಕೆ.ಸಿಂಗ್ ನೀಡಿದ ದೂರನಿನ್ವಯ ಇಡಿ ತನಿಖೆಗೆ ಮುಂದಾಗಿತ್ತು. ಈ ಸಂಬಂಧ ನಟಿ ರಿಯಾ ಚಕ್ರವರ್ತಿ, ಸೋದರ ಶೌವಿಕ್ ಚಕ್ರವರ್ತಿ, ತಂದೆ ಇಂದ್ರಜಿತ್ ಚಕ್ರವರ್ತಿ, ಸುಶಾಂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಮತ್ತು ಮ್ಯಾನೇಜರ್ ಶೃತಿ ಮೋದಿ ವಿರುದ್ಧ ಅಕ್ರಮ ಹಣ ವರ್ಗಾವಣೆಯ ಪ್ರಕರಣ ದಾಖಲಾಗಿತ್ತು. ಇಡಿ ಈಗಾಗಲೇ 24ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದೆ.  ಇದನ್ನೂ ಓದಿ: ಸುಶಾಂತ್ ಕೇಸ್- ಅದು ಕೊಲೆಯಲ್ಲ, ಆತ್ಮಹತ್ಯೆ: ಏಮ್ಸ್ ವೈದ್ಯ

    ಎಲ್ಲ ಆರೋಪಿಗಳ ಮಗನ ಖಾತೆಯಿಂದ ಸುಮಾರು 15 ಕೋಟಿ ರೂ. ಹಣವನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾಗಿರುವ ಖಾತೆಗಳ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಆರೋಪಿಸಿದ್ದರು. ಇದೀಗ ಇಡಿಗೆ ಯಾವುದೇ ಅಕ್ರಮ ಕಂಡು ಬರದ ಹಿನ್ನೆಲೆ ರಿಯಾ ಚಕ್ರವರ್ತಿ ಮತ್ತಷ್ಟು ನಿರಾಳವಾಗುವ ಸಾಧ್ಯತೆಗಳಿವೆ. ಕೆಲ ದಿನಗಳ ಹಿಂದೆ ಸುಶಾಂತ್ ವೈದ್ಯಕೀಯ ವರದಿ ನೀಡಿದ್ದ ಏಮ್ಸ್ ವೈದ್ಯ ಸುಧೀರ್ ಗುಪ್ತಾ, ಇದೊಂದು ಆತ್ಮಹತ್ಯೆ. ಕೊಲೆಯಲ್ಲ ಎಂಬ ಸ್ಫೋಟಕ ಹೇಳಿಕೆ ನೀಡಿದ್ದರು. ಡ್ರಗ್ಸ್ ಪ್ರಕರಣದಲ್ಲಿ ಜೈಲಿನಲ್ಲಿದ್ದ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ದನ್ನೂ ಓದಿ: ಸುಶಾಂತ್ ರೀತಿಯಲ್ಲಿ ಮತ್ತೋರ್ವ ನಟನ ಅನುಮಾನಾಸ್ಪದ ಸಾವು

  • ರಿಯಾ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕೆ ಸೂಕ್ತ ಆಧಾರಗಳಿಲ್ಲ- ಮುಂಬೈ ಕೋರ್ಟ್

    ರಿಯಾ ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕೆ ಸೂಕ್ತ ಆಧಾರಗಳಿಲ್ಲ- ಮುಂಬೈ ಕೋರ್ಟ್

    – ಆಕೆ ತಪ್ಪಿತಸ್ಥಳಲ್ಲ ಎಂದು ಸಹ ಕೋರ್ಟ್ ಹೇಳುತ್ತಿಲ್ಲ

    ಮುಂಬೈ: ನಟ ಸುಶಾಂತ್ ಸಿಂಗ್ ಸಾವಿಗೆ ಸಂಬಂಧಿಸಿದಂತೆ ಡ್ರಗ್ಸ್ ಪ್ರಕರಣದಲ್ಲಿ ಅವರ ಪ್ರೇಯಸಿ, ನಟಿ ರಿಯಾ ಚಕ್ರವರ್ತಿ ಭಾಗಿಯಾಗಿದ್ದಾರೆ ಎಂಬ ಕುರಿತು ಯಾವುದೇ ಸೂಕ್ತ ಆಧಾರ ಕಂಡುಬರುತ್ತಿಲ್ಲ ಎಂದು ಮುಂಬೈ ವಿಶೇಷ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ಶುಕ್ರವಾರವಷ್ಟೇ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಸೋಮವಾರ ನ್ಯಾಯಾಲಯ ವಿವರವಾದ ಆದೇಶ ಪ್ರತಿಯನ್ನು ನೀಡಿದೆ. ಈ ವೇಳೆ ಆರೋಪಿಯು ಈ ಅಪರಾಧ ಪ್ರಕರಣದಲ್ಲಿ ತಪ್ಪಿತಸ್ಥಳಲ್ಲ ಎಂಬುದನ್ನು ನಂಬಲು ಸಮಂಜಸವಾದ ಆಧಾರಗಳಿರುವುದನ್ನು ದಾಖಲಿಸಬೇಕಿದೆ. ಆದರೆ ನ್ಯಾಯಾಲಯವು ಈ ಪ್ರಕರಣವನ್ನು ಖುಲಾಸೆಗೊಳಿಸುವ ತೀರ್ಪನ್ನು ಉಚ್ಚರಿಸುತ್ತಿದೆ ಅಥವಾ ತಪ್ಪಿತಸ್ಥಳಲ್ಲ ಎಂದು ದಾಖಲಿಸುವಂತೆ ಪರಿಗಣಿಸುವ ಉದ್ದೇಶವನ್ನು ಹೊಂದಿಲ್ಲ ಎಂಬುದನ್ನು ಸಹ ನೆನಪಿನಲ್ಲಿಡಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

    ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ನೀಡಿರುವ ಕುರಿತು ರಿಯಾ ಚಕ್ರವರ್ತಿ, ಇವರ ಸಹೋದರ ಶೋವಿಕ್ ಹಾಗೂ ಇತರರನ್ನು ಎನ್‍ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ವಿಶೇಷ ನ್ಯಾಯಾಧೀಶರಾದ ಜಿ.ಬಿ.ಗುರವ್ ಅವರು ಶೋವಿಕ್ ಸೇರಿದಂತೆ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿದೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ – ರಿಯಾ ಚಕ್ರವರ್ತಿಗೆ ಜೈಲೇ ಗತಿ

    ತನಿಖೆ ಪ್ರಾಥಮಿಕ ಹಂತದಲ್ಲಿದ್ದು, ಲಭ್ಯವಿರುವ ದಾಖಲೆಗಳನ್ನು ಗಮನಿಸಿದರೆ ಆರೋಪಿ ರಿಯಾ ಚಕ್ರವರ್ತಿಯವರನ್ನು ಪ್ರಕರಣಕ್ಕೆ ಕನೆಕ್ಟ್ ಮಾಡಲು ಸೂಕ್ತ ಆಧಾರಗಳಿಲ್ಲ. ಆದರೆ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಸಾಕ್ಷ್ಯ ನಾಶ ಮಾಡಬಹುದು ಎಂಬುದನ್ನು ಕೋರ್ಟ್ ಉಲ್ಲೇಖಿಸಿದೆ.

    ಸದ್ಯ ರಿಯಾ ಚಕ್ರವರ್ತಿಯವರನ್ನು ಮುಂಬೈನ ಬೈಕುಲ್ಲಾ ಜೈಲ್‍ನಲ್ಲಿ ಇಡಲಾಗಿದೆ. ಕಳೆದ ವಾರವಷ್ಟೇ ಎನ್‍ಸಿಬಿ ಅಧಿಕಾರಿಗಳು ತನಿಖೆ ನಡೆಸಿ, 28 ವರ್ಷದ ರಿಯಾ ಚಕ್ರವರ್ತಿಯನ್ನು ವಿಚಾರಣೆ ಸಹ ನಡೆಸಿದ್ದಾರೆ. ಈ ವೇಳೆ ನಟಿ ಡ್ರಗ್ಸ್ ಸಂಗ್ರಹಿಸಿದ್ದು ಮಾತ್ರವಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಅವರಿಗೆ ಡ್ರಗ್ಸ್ ನೀಡಿದ್ದಾರೆ ಎಂದು ಎನ್‍ಸಿಬಿ ಆರೋಪಿಸಿದೆ.

    ಸೆಪ್ಟೆಂಬರ್ 11ರಂದು ರಿಯಾ ಮತ್ತು ಆಕೆಯ ಸಹೋದರ ಶೌವಿಕ್ ಚಕ್ರವರ್ತಿ ಸೇರಿದಂತೆ ಇನ್ನು ಎಂಟು ಮಂದಿ ಆರೋಪಿಗಳ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಈ ಮೂಲಕ ಮತ್ತೆ ಸೆಪ್ಟಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈಗ ಆಕೆ ಬಾಂಬೆ ಹೈಕೋರ್ಟಿಗೆ ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ಸಾರಾ, ರಾಕುಲ್ ಡ್ರಗ್ ಸೇವಿಸ್ತಿದ್ದಾರೆ – ಬಾಲಿವುಡ್‍ನಲ್ಲಿ ಬಿರುಗಾಳಿ ಎಬ್ಬಿಸಿದ ರಿಯಾ

    ಜಾಮೀನು ಅರ್ಜಿಯಲ್ಲಿ ರಿಯಾ, ತನಿಖೆ ವೇಳೆ ಒಪ್ಪಿಕೊಂಡಿದ್ದನ್ನು ತಳ್ಳಿಹಾಕಿದ್ದು, ತನಿಖೆ ವೇಳೆ ನನ್ನನ್ನು ಹೆದರಿಸಿ ತಪ್ಪೊಪ್ಪಿಕೊಳ್ಳುವಂತೆ ಒತ್ತಾಯಿಸಲಾಯಿತು ಎಂದು ತಿಳಿಸಿದ್ದಾರೆ. ಜೊತೆಗೆ ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸುತ್ತಿದ್ದಾರೆ. ಈ ವೇಳೆ ಹೊರಗಿನಿಂದ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ. ಈ ಸಂದರ್ಭದಲ್ಲಿ ತನಿಖೆ ಮಾಡುತ್ತಿರುವುದು ನನ್ನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಜಾಮೀನಿಗೆ ಅರ್ಜಿ ಹಾಕಿದ್ದರು.

    ಈ ಅರ್ಜಿಯ ವಿರುದ್ಧ ವಾದ ಮಂಡಿಸಿದ್ದ ಎನ್‍ಸಿಬಿ ಪರ ವಕೀಲರು, ರಿಯಾ ತಾನು ತಪ್ಪು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಅಲ್ಲದೆ ಈಕೆಯನ್ನು ಹೊರಗೆ ಕಳುಹಿಸಿದರೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇದೆ. ಜೊತೆಗೆ ಈಕೆಗೆ ಇರುವ ಆರ್ಥಿಕ ಬಲದಿಂದ ಸಾಕ್ಷಿಗಳನ್ನು ಗೆಲ್ಲಬಹುದು. ಹೀಗಾಗಿ ತನಿಖೆ ಪೂರ್ತಿಯಾಗುವ ತನಕ ಆಕೆ ನ್ಯಾಯಾಂಗ ಬಂಧನದಲ್ಲಿರುವುದು ಸೂಕ್ತ ಎಂದು ವಾದ ಮಾಡಿದ್ದರು. ಇದನ್ನೂ ಓದಿ: ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ

    ಆಕೆ ಸುಶಾಂತ್ ಸಿಂಗ್ ಅವರಿಗೆ ಡ್ರಗ್ ನೀಡುತ್ತಿದ್ದಳು ಎಂಬುದು ತನಿಖೆ ವೇಳೆ ದೃಢಪಟ್ಟಿದೆ. ಇದಕ್ಕೆ ಸಾಕ್ಷಿ ಎಂಬಂತೆ ಆಕೆ ತನ್ನ ಸಹೋದರ ಜೊತೆ ನಡೆಸಿರುವ ವಾಟ್ಸಪ್ ಚಾಟ್ ಕೂಡ ಲಭ್ಯವಾಗಿದೆ. ರಿಯಾ ಡ್ರಗ್ಸ್ ತೆಗೆದುಕೊಳ್ಳುವುದಕ್ಕೆ ಸುಶಾಂತ್ ಅವರ ಡೆಬಿಟ್ ಕಾರ್ಡ್ ಅನ್ನು ಉಪಯೋಗಿಸುತ್ತಿದ್ದದ್ದು ಕೂಡ ತನಿಖೆ ವೇಳೆ ಗೊತ್ತಾಗಿದೆ. ಹೀಗಾಗಿ ಆಕೆಗೆ ಜಾಮಿನು ನೀಡಬಾರದು ಎಂದು ಎನ್‍ಸಿಬಿ ವಾದ ಮಂಡಿಸಿತ್ತು.

    ರಿಯಾ ಬಂಧನ ಬಳಿಕ ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ನಟಿ ಪರ ವಕೀಲ ಸತೀಶ್ ಮನೋಶಿಂಧೆ, ಓರ್ವ ಡ್ರಗ್ಸ್ ಅಡಿಕ್ಟ್ ಸುಶಾಂತ್ ಸಿಂಗ್ ರಜಪೂತ್ ನನ್ನು ಪ್ರೀತಿ ಮಾಡಿದ ತಪ್ಪಿಗೆ ರಿಯಾ ಈ ಶಿಕ್ಷೆ ಅನುಭವಿಸುತ್ತಿದ್ದಾರೆ. ವಿಚಾರಣೆಗೆ ಸಹಕಾರ ನೀಡಿದರೂ ಕಕ್ಷಿದಾರರ ಬಂಧನವಾಗಿದೆ. ಭಾನುವಾರ, ಸೋಮವಾರ ಸಹ ರಿಯಾ ಅವರನ್ನ ವಿಚಾರಣೆ ನಡೆಸಲಾಗಿದೆ. ಒಬ್ಬ ಮಹಿಳೆ ಹಿಂದೆ ಮೂರು ತನಿಖಾ ಏಜೆನ್ಸಿಗಳು ಬೆನ್ನು ಬಿದ್ದಿವೆ ಎಂದು ಆರೋಪ ಮಾಡಿದ್ದರು. ಇದನ್ನೂ ಓದಿ: ಡ್ರಗ್ಸ್ ಅಡಿಕ್ಟ್ ಸುಶಾಂತ್‍ನನ್ನು ಪ್ರೀತಿಸಿದ್ದಕ್ಕೆ ಈ ಶಿಕ್ಷೆ: ರಿಯಾ ಪರ ವಕೀಲ

  • ಜೈಲು ವಾಸ ಅನುಭವಿಸಿದ ಬಾಲಿವುಡ್ ಸ್ಟಾರ್​​​​ಗಳು

    ಜೈಲು ವಾಸ ಅನುಭವಿಸಿದ ಬಾಲಿವುಡ್ ಸ್ಟಾರ್​​​​ಗಳು

    ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತವಾಗಿರುವ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬೈಖಲಾ ಜೈಲಿನಲ್ಲಿದ್ದಾರೆ. ಬಂಧಿತರನ್ನು ಸೆಪ್ಟೆಂಬರ್ 22ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ನೀಡಿದೆ. ಇತ್ತ ಚಂದವನದ ಇತಿಹಾಸದಲ್ಲಿ ಮೊದಲ ಬಾರಿಗೆ ಡ್ರಗ್ಸ್ ಕೇಸ್‍ನಲ್ಲಿ ಇಬ್ಬರು ನಟಿಯರು ಅರೆಸ್ಟ್ ಆಗಿ, ವಿಚಾರಣೆ ಎದುರಿಸುತ್ತಿದ್ದಾರೆ. ಬಾಲಿವುಡ್ ನಲ್ಲಿ ಈ ಹಿಂದೆ ಹಲವು ನಟರು ಜೈಲುವಾಸ ಅನುಭವಿಸಿದ್ದಾರೆ.

    1. ಸಂಜಯ್ ದತ್: 90ರ ದಶಕದ ವೇಳೆ ಮುಂಬೈನಲ್ಲಿ ನಡೆದ ಸರಣಿ ಸ್ಫೋಟದ ಸಮಯದಲ್ಲಿ ಕಾನೂನು ಬಾಹಿರವಾಗಿ ಶಸ್ತಾಸ್ತ್ರ ಸಂಗ್ರಹಿಸಿದ ಆರೋಪ ಸಾಬೀತಾದ ಹಿನ್ನೆಲೆ ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಐದು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದಾರೆ. ಜೈಲು ಶಿಕ್ಷೆ ಅನುಭವಿಸಿದ ಸಂಜಯ್ ದತ್ ಫೆಬ್ರವರಿ 2016ರಂದು ರಿಲೀಸ್ ಆಗಿದ್ರು. ಜೈಲಿನಿಂದ ಬಳಿಕ ಸಾಲು ಸಾಲು ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಶಮ್‍ಶೇರ್, ಬ್ರಹ್ಮಾಸ್ತ್ರ, ಕೆಜಿಎಫ್-ಚಾಪ್ಟರ್ 2, ಪೃಥ್ವಿರಾಜ್, ಭುಜ್ ಮತ್ತು ತೋರ್‍ಬಾಜ್ ಸೇರಿದಂತೆ ಹಲವು ಸಿನಿಮಾಗಳು ಸಂಜು ಬಾಬಾ ಕೈಯಲ್ಲಿವೆ. ಇನ್ನು ಸಂಜಯ್ ದತ್ ಜೀವನಾಧರಿತ ಚಿತ್ರ ಬಾಕ್ಸ್ ಆಫಿಸ್ ನಲ್ಲಿ ದಾಖಲೆ ಬರೆದಿತ್ತು.

    2. ಫರ್ದಿನ್ ಖಾನ್: ಲೆಜೆಂಡರಿ ಆ್ಯಕ್ಟರ್ ಫಿರೋಜ್ ಖಾನ್ ಪುತ್ರ ಫರ್ದಿನ್ ಖಾನ್ 1998ರಲ್ಲಿ ‘ಪ್ರೇಮ್ ಅಗನ್’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಚಿತ್ರರಂಗಕ್ಕೆ ಬಂದ ಫರ್ದಿನ್ ಖಾನ್ ವಿರುದ್ಧ ಕೋಕೆನ್ ಸರಬರಾಜು ಮಾಡಿರೋ ಆರೋಪಗಳು ಕೇಳಿ ಬಂದಿದ್ದವು. ಆರೋಪ ಸಾಬೀತಾದ ಹಿನ್ನೆಲೆ ಜೈಲುವಾಸ ಅನುಭವಿಸಿದ್ದಾರೆ. ಜೈಲಿನಿಂದ ಬಂದ ಫರ್ದಿನ್ ಖಾನ್‍ನಿಂದ ಸಿನಿಮಾ ಲೋಕ ಅಂತರ ಕಾಯ್ದುಕೊಂಡಿದ್ದರಿಂದ ಬಣ್ಣದ ಬದುಕು ಅಂತ್ಯವಾಗಬೇಕಾಯ್ತು. 2010ರಲ್ಲಿ ಬಿಡುಗಡೆಗೊಂಡಿದ್ದ ‘ದುಲ್ಹಾ ಮಿಲ್ ಗಯಾ’ ಕೊನೆಯ ಚಿತ್ರವಾಗಿದ್ದು, ಅಂದಿನಿಂದ ರಂಗೀನ್ ದುನಿಯಾದಿಂದ ಫರ್ದಿನ್ ದೂರ ಉಳಿದುಕೊಂಡಿದ್ದಾರೆ.

    3. ಜಾನ್ ಅಬ್ರಾಹಂ: ಬಿಟೌನ್ ಲೋಕದ ಮೋಸ್ಟ್ ಹ್ಯಾಂಡ್‍ಸಮ್ ನಟ ಜಾನ್ ಅಬ್ರಾಹಂ ಸೆರೆಮನೆ ವಾಸದ ಅನುಭವ ಹೊಂದಿದ್ದಾರೆ. 2006ರಲ್ಲಿ ಜಾನ್ ಬೈಕ್ ನಲ್ಲಿ ಹೋಗ್ತಿರುವಾಗ ಸೈಕಲ್‍ಗೆ ಡಿಕ್ಕಿ ಹೊಡೆದಿದ್ರು. ಸೈಕಲ್ ಸವಾರರಿಬ್ಬರು ಗಾಯಗೊಂಡಿದ್ದರು. ಅಜಾಗರೂಕತೆ ಚಾಲನೆ ಹಿನ್ನೆಲೆ ಜಾನ್‍ಅಬ್ರಾಹಂ 15 ದಿನ ಜೈಲಿನಲ್ಲಿದ್ರು. ಈ ಘಟನೆ ಜಾನ್ ಅಬ್ರಾಹಂ ವೃತ್ತಿ ಬದುಕಿನ ಮೇಲೆ ಪರಿಣಾಮ ಬೀರಿಲ್ಲ. ಇಂದಿಗೂ ಸಿನಿಮಾ ಅಂಗಳದಲ್ಲಿ ಜಾನ್ ಅಬ್ರಾಹಂ ಆ್ಯಕ್ಟೀವ್ ಆಗಿದ್ದಾರೆ.

    4. ಸಲ್ಮಾನ್ ಖಾನ್: ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್ ಹಿಟ್ ಆ್ಯಂಡ್ ರನ್ ಮತ್ತು ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಕೆಲ ಸಮಯ ಜೈಲಿನಲ್ಲಿ ಕಳೆದಿದ್ದಾರೆ. ವೈಯಕ್ತಿಯ ಬದುಕಿನ ಅವಾಂತರಗಳು ಸಲ್ಮಾನ್ ಖಾನ್ ಪ್ರೊಫೆಷನ್ ಮೇಲೆ ಎಫೆಕ್ಟ್ ಆಗಿಲ್ಲ. ಸಲ್ಮಾನ್ ಖಾನ್ ಸಿನಿಮಾ ರಿಲೀಸ್ ಆದ್ರೆ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ.

    5. ಶಾಹಿನ್ ಅಹುಜಾ: 2005ರಲ್ಲಿ ‘ಹಜಾರೋ ಕ್ವಾಹಿಶ್’ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದ ಶಾಹಿನ್ ಅಹುಜಾ ಬಣ್ಣದ ಲೋಕದಲ್ಲಿ ಗುರುತಿಸಿಕೊಳ್ಳಲು ಸಾಧ್ಯವೇ ಆಗಲಿಲ್ಲ. 2009ರಲ್ಲಿ ಮನೆಯ ಕೆಲಸದಾಕೆಯ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಆಗಿದೆ. ಆರಂಭದಲ್ಲಿಯೇ ಜೈಲು ಸೇರಿದ ಪರಿಣಾಮ ಶಾಹಿನ್ ಸಿನಿಮಾ ಜೀವನ ಅಂತ್ಯವಾಗಿದೆ.

    6. ಸೂರಜ್ ಪಾಂಚೋಲಿ: ಹಿರಿಯ ನಟ ಆದಿತ್ಯಾ ಪಾಂಚೋಲಿ ಪುತ್ರ ಸೂರಜ್ ಪಾಂಚೋಲಿ ಸಿನಿಮಾಗಳಿಗಿಂದ ವಿವಾದಗಳಿಂದಲೇ ಸುದ್ದಿಯಾದ ನಟ. ಜಿಯಾ ಖಾನ್ ಸೂಸೈಡ್ ಕೇಸ್‍ನಲ್ಲಿ ಸೂರಜ್ ವಿರುದ್ಧ ಅನುಮಾನಗಳು ಹುಟ್ಟಿಕೊಂಡಿದ್ದವು. ಸೂರಜ್ 2015ರಲ್ಲಿ ಫಿಲಂ ಕೆರಿಯರ್ ಆರಂಭಿಸಿದ್ದು, ಸದ್ಯ ಕೆಲ ಚಿತ್ರಗಳನ್ನ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

    ಒಟ್ಟಿನಲ್ಲಿ ಕೆಲವರು ಜೈಲಿನಿಂದ ಬಂದ ಬಳಿಕವೂ ತಮ್ಮ ಫೇಮ್ ಉಳಿಸಿಕೊಂಡಿದ್ದು, ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಮತ್ತವರು ಬಣ್ಣದ ಲೋಕಕ್ಕೆ ಗುಡ್ ಬೈ ಹೇಳಿದ್ರೆ, ಉಳಿದವರು ಒಂದು ಕ್ಲಿಕ್ ಗಾಗಿ ಪ್ರಯತ್ನ ಪಡುತ್ತಿದ್ದಾರೆ. ಇನ್ನು 28 ವರ್ಷದ ರಿಯಾ ಚಕ್ರವರ್ತಿ ವೃತ್ತಿ ಬದುಕಿನಲ್ಲಿ ಸುಶಾಂತ್ ಸಿಂಗ್ ಮತ್ತು ಡ್ರಗ್ಸ್ ಕೇಸ್ ಕಪ್ಪು ಚುಕ್ಕೆಯಾಗಿ ಉಳಿಯದಂತೋ ಸತ್ಯ.

  • 43 ದಿನಗಳ ಬಳಿಕ ದೂರು ದಾಖಲಿಸಿದ್ದೇಕೆ? ಸುಶಾಂತ್ ತಂದೆ ಸ್ಪಷ್ಟನೆ

    43 ದಿನಗಳ ಬಳಿಕ ದೂರು ದಾಖಲಿಸಿದ್ದೇಕೆ? ಸುಶಾಂತ್ ತಂದೆ ಸ್ಪಷ್ಟನೆ

    ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ನಿಧನದ 43 ದಿನಗಳ ಬಳಿಕ ತಂದೆ ಕೆ.ಕೆ.ಸಿಂಗ್ ಪುತ್ರನ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಪಾಟ್ನಾದಲ್ಲಿ ದೂರು ದಾಖಲಿಸಿದ್ದಾರೆ. 43 ದಿನಗಳ ಬಳಿಕ ದೂರು ದಾಖಲಿಸಿದ್ದೇಕೆ ಎಂಬುದನ್ನು ಸ್ವತಃ ಕೆ.ಕೆ.ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

    ಆರಂಭದಲ್ಲಿ ನಟಿ ರಿಯಾ ಮೇಲೆ ಯಾವುದೇ ಅನುಮಾನಗಳಿರಲಿಲ್ಲ. ಕೆಲ ದಿನಗಳಲ್ಲಾದ ಬದಲಾವಣೆಗಳಿಂದ ರಿಯಾ ಮೇಲಿನ ಅನುಮಾನ ಬಲವಾಯ್ತು. ಹಾಗಾಗಿ ಪುತ್ರನ ಸಾವಿನಲ್ಲಿ ರಿಯಾ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತವಾಯ್ತು. ಹೀಗಾಗಿ ರಿಯಾ ಮತ್ತು ಆಕೆಯ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಕೆ.ಕೆ.ಸಿಂಗ್ ಆಪ್ತರು ಹೇಳಿದ್ದಾರೆ. ಇದನ್ನೂ ಓದಿ: ಬಾಲಿವುಡ್‍ಗೆ ಬೈ ಹೇಳಿ ಕೊಡಗಿನಲ್ಲಿ ಕೃಷಿ ಮಾಡೋಕೆ ಮುಂದಾಗಿದ್ದ ಸುಶಾಂತ್ ಸಿಂಗ್

    ಮುಂಬೈ ಪೊಲೀಸರು ಹೇಳಿಕೆ ದಾಖಲಿಸಿಕೊಂಡಾಗ ಸುಶಾಂತ್ ಕುಟುಂಬಸ್ಥರು ರಿಯಾ ಬಗ್ಗೆ ಏನೂ ಹೇಳಿರಲಿಲ್ಲ. ಇದೀಗ ರಿಯಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇತ್ತ ರಿಯಾ ನಿರೀಕ್ಷಣಾ ಜಾಮೀನು ಪಡೆಯಲು ಮುಂದಾಗಿದ್ದಾರೆ. ಇದನ್ನೂ ಓದಿ: ರಿಯಾಗೆ ನಾನೆಂದೂ ಸುಶಾಂತ್‍ನನ್ನು ಬಿಟ್ಟು ಬರೋಕೆ ಹೇಳಿರಲಿಲ್ಲ: ಮಹೇಶ್ ಭಟ್

    ಸುಶಾಂತ್ ಗೆ ಬರುತ್ತಿದ್ದ ಸಿನಿಮಾಗಳಿಗೆ ರಿಯಾ ಷರತ್ತು ವಿಧಿಸುತ್ತಿದ್ದಳು. ಸುಶಾಂತ್ ಸಿನಿಮಾದಲ್ಲಿ ತನ್ನನ್ನೇ ನಾಯಕಿಯನ್ನಾಗಿ ಕಾಸ್ಟ್ ಮಾಡಬೇಕು ಎಂದು ನಿರ್ದೇಶಕರ ಮುಂದೆ ಕಂಡೀಷನ್ ಹಾಕುತ್ತಿದ್ದಾರೆ. ಸುಶಾಂತ್ ಜೊತೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಲ್ಲ ಆಪ್ತರನ್ನು ರಿಯಾ ಬದಲಿಸಿದ್ದಳು. ತನಗೆ ಬೇಕಾದವರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದಳು. ಇತ್ತೀಚೆಗೆ ಸುಶಾಂತ್ ಫೋನ್ ನಂಬರ್ ಸಹ ರಿಯಾ ಬದಲಿಸಿರುವ ವಿಚಾರ ಬೆಳಕಿಗೆ ಬಂದಿದೆ.

    ಸುಶಾಂತ್ ನನಗೆ ಫೋನ್ ಮಾಡಿದ್ದಾಗ ನನ್ನನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಸಲಾಗ್ತಿದೆ ಎಂದು ಹೇಳಿಕೊಂಡಿದ್ದನು. ಕೆಲ ದಿನಗಳ ಬಳಿಕ ಸುಶಾಂತ್ ದೆಹಲಿಯಲ್ಲಿರು ಸೋದರಿಯ ಮನೆಗ ಹೋಗಿದ್ದನು. ಮೂರು ದಿನಗಳ ಬಳಿಕ ಪದೇ ಪದೇ ಫೋನ್ ಮಾಡಿದ್ದ ರಿಯಾ ಮಗನನ್ನು ಕರೆಸಿಕೊಂಡಿದ್ದಳು ಎಂದು ಕೆ.ಕೆ.ಸಿಂಗ್ ಹೇಳಿದ್ದಾರೆ.

  • ಬಣ್ಣದ ಲೋಕದ 3 ನಟಿಯರ ಜೊತೆ ಸುಶಾಂತ್ ಹೆಸ್ರು ಥಳಕು

    ಬಣ್ಣದ ಲೋಕದ 3 ನಟಿಯರ ಜೊತೆ ಸುಶಾಂತ್ ಹೆಸ್ರು ಥಳಕು

    -ಲವ್, ಬ್ರೇಕಪ್, ಗಾಸಿಪ್

    ಮುಂಬೈ: ಸಾವಿರಾರು ಜನರನ್ನು ಕೈ ಬೀಸಿ ಕರೆಯುವ ಬಣ್ಣದ ಲೋಕ ಅಪ್ಪಿ ಒಪ್ಪಿಕೊಳ್ಳುವುದು ಕೆಲವರನ್ನ ಮಾತ್ರ. ಅಂತರ ಅದೃಷ್ಟವಂತರಲ್ಲಿ ನಟ ಸುಶಾಂತ್ ಸಿಂಗ್ ರಜಪೂತ್ ಸಹ ಒರ್ವ ಅಂದ್ರೆ ತಪ್ಪಾಗಲಾರದು. ಯಾವುದೇ ಗಾಡ್ ಫಾದರ್ ಇಲ್ಲದೇ ಬಾಲಿವುಡ್ ನಲ್ಲಿ ಬೆಳೆದ ನಟರ ಪೈಕಿಯಲ್ಲಿ ಸುಶಾಂತ್ ಸಹ ಒಬ್ಬರು. ಸಣ್ಣ ಪಾತ್ರವಾದರೂ ಸರಿ ನಾನು ನಟಿಸುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದ ಸುಶಾಂತ್ ಬಾರದ ಲೋಕಕ್ಕೆ ಪಯಣ ಬೆಳೆಸುವ ಮೂಲಕ ಅಪಾರ ಅಭಿಮಾನಿಗಳು, ಬಂಧು ಮಿತ್ರರಿಗೆ ಶಾಕ್ ನೀಡಿ ಚಿರ ನಿದ್ರೆಗೆ ಜಾರಿದ್ದಾರೆ. 11 ವರ್ಷಗಳ ಸಿನಿ ಕೆರಿಯರ್ ನಲ್ಲೂ ಸುಶಾಂತ್ ಹೆಸರು ಥಳಕು ಹಾಕಿಕೊಂಡಿತ್ತು. ಸುಶಾಂತ್ ಬಹಿರಂಗವಾಗಿಯೇ ಓರ್ವ ನಟಿಗೆ ಪ್ರಪೋಸ್ ಮಾಡಿ ನಂತ್ರ ಬೇಕ್ರಪ್ ಮಾಡಿಕೊಂಡ ವಿಚಾರ ಎಲ್ಲರಿಗೂ ಗೊತ್ತಿರುವ ವಿಷಯ.

    1. ಅಂಕಿತಾ ಲೋಕಂಡೆ:
    ಖಾಸಗಿ ವಾಹಿನಿಯ ಪವಿತ್ರ ರಿಶ್ತಾ ಧಾರಾವಾಹಿ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಸುಶಾಂತ್‍ಗೆ ಜೊತೆಯಾಗಿದ್ದು ನಟಿ ಅಂಕಿತಾ ಲೋಕಂಡೆ. ಮಾನವ್ ಮತ್ತು ಅರ್ಚನಾ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಈ ಜೋಡಿ ಮಹಿಳಾ ಮಣಿಗಳ ಹಾಟ್ ಫೇವರೇಟ್ ಆಗಿತ್ತು. ಧಾರಾವಾಹಿಯಲ್ಲಿ ಮುಗ್ಧ ಮನಸ್ಸಿನ ಯುವಕನ ಪಾತ್ರ ನೋಡುಗರಿಗೆ ಅಯ್ಯೋ ಅನ್ನುವಂತೆ ಮಾಡುತ್ತಿತ್ತು. ತೆರೆಯ ಮೇಲೆ ಒಂದಾಗಿದ್ದ ಸುಶಾಂತ್ ಮತ್ತು ಅರ್ಚನಾ ರಿಯಲ್ ಲೈಫ್‍ನಲ್ಲಿ ನಾವು ಒಂದಾಗುತ್ತೇವೆ ಅಂತಾ ಹೇಳಿಕೊಂಡಿದ್ದರು. ರಿಯಾಲಿಟಿ ಶೋ ವೇದಿಕೆಯಲ್ಲಿ ಎಲ್ಲರೆದುರೇ ಅಂಕಿತಾಗೆ ಸುಶಾಂತ್ ಪ್ರಪೋಸ್ ಮಾಡಿದ್ದರು. ಧಾರಾವಾಹಿ ಆರಂಭವಾದ ಒಂದು ವರ್ಷದಲ್ಲಿ ಹಿರಿತೆರೆ ಸುಶಾಂತ್ ನನ್ನು ಕೈ ಬೀಸಿ ಕರೆದಿತ್ತು. ಧಾರಾವಾಹಿಯಿಂದ ಹೊರ ಬಂದ ಸುಶಾಂತ್ ಸಿನಿಮಾಗಳಲ್ಲಿ ಬ್ಯುಸಿ ಆದ್ರು. ಇತ್ತ ಅಂಕಿತಾ ಧಾರಾವಾಹಿಯಲ್ಲಿ ಉಳಿದ್ರು. ಹೀಗೆ ದೂರವಾದ ಇಬ್ಬರು ಕೆಲ ದಿನಗಳ ಬಳಿಕ ಬ್ರೇಕಪ್ ಮಾಡಿಕೊಂಡರು. ಕೆಲ ದಿನಗಳ ಬಳಿಕ ಅಂಕಿತಾ, ನನ್ನನ್ನು ಸುಶಾಂತ್‍ನ ಎಕ್ಸ್ ಗರ್ಲ್ ಫ್ರೆಂಡ್ ಅಂತಾ ಕರಿಬೇಡಿ ಅಂತ ಹೇಳಿದ್ದರು. ಇದನ್ನೂ ಓದಿ: ಸುಶಾಂತ್ ಸಿಂಗ್ ರಜಪೂತ್ ನಟನೆಯ ಟಾಪ್ 5 ಹಾಡುಗಳು

    2. ಕೃತಿ ಸನನ್:
    ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಆಧಾರಿತ ಸಿನಿಮಾದಲ್ಲಿ ನಟಿಸಿದ ಬಳಿಕ ಸುಶಾಂತ್ ಜೀವನ ಸಂಪೂರ್ಣ ಬದಲಾಗಿತ್ತು. ಧೋನಿ ಸಿನಿಮಾದ ನಂತರ ತೆರೆಕಂಡ ಚಿತ್ರ ರಾಬ್ತಾ. ಸಿನಿಮಾ ಸೂಪರ್ ಹಿಟ್ ಪಟ್ಟಿಗೆ ಸೇರದಿದ್ರೂ ಚಿತ್ರದಲ್ಲಿಯ ಕೃತಿ ಸನನ್ ಮತ್ತು ಸುಶಾಂತ್ ಕೆಮಿಸ್ಟ್ರಿ ನೋಡುಗರಿಗೆ ಇಷ್ಟವಾಗಿತ್ತು. ಸಿನಿಮಾ ಸೆಟ್ಟೇರಿದಾಗಿನಿಂದಲೂ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳುವುದು, ಪಾರ್ಟಿಯಲ್ಲಿ ಭಾಗಿಯಾಗುತ್ತಿದ್ದಾರೆ. ಅಂಕಿತಾ ಬ್ರೇಕಪ್ ಬಳಿಕ ಸುಶಾಂತ್ ಬಾಳಲ್ಲಿ ಕೃತಿ ಎಂಬ ಶೀರ್ಷಿಕೆಯಡಿ ಹಲವು ಲೇಖನಗಳು ಪ್ರಕಟವಾದವು. ಕೆಲವು ದಿನ ಇಬ್ಬರು ಪರಸ್ಪರ ಒಪ್ಪಿಗೆ ಬ್ರೇಕಪ್ ಮಾಡಿಕೊಂಡು ದೂರವಾದ್ರೂ ಎಂಬ ಸುದ್ದಿಗಳು ಬಾಲಿವುಡ್ ಅಂಗಳದಲ್ಲಿ ಹರಿದಾಡಿದವು. ಆದ್ರೆ ಇಬ್ಬರು ಎಲ್ಲಿಯೂ ತಮ್ಮ ಪ್ರೇಮದ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ.

    3. ರಿಯಾ ಚಕ್ರವರ್ತಿ:
    ಕೆಲವು ದಿನಗಳಿಂದ ಸುಶಾಂತ್ ಸಿಂಗ್ ಹೆಸರು ನಟಿ ರಿಯಾ ಚಕ್ರವರ್ತಿಯೊಂದಿಗೆ ಕೇಳಿ ಬಂದಿತ್ತು. ಖಾಸಗಿ ಕಾರ್ಯಕ್ರಮಗಳು ಸೇರಿದಂತೆ ಹಲವೆಡೆ ಇಬ್ಬರು ಜೊತೆಯಾಗಿ ಕಾಣಿಸಿಕೊಳ್ಳಲಾರಭಿಸಿದ್ದರು. ಸುಶಾಂತ್ ಮದುವೆ ಆಗ್ತಿದ್ದಾರೆ ಅಂತಾ ನ್ಯೂಸ್ ಹರಿದಾಡಿದ್ದುಂಟು. ಈಗತಾನೇ ಬಣ್ಣದ ಲೋಕಕ್ಕೆ ಕಾಲಿಟ್ಟಿರುವ ರಿಯಾ, ವೃತ್ತಿ ಜೀವನದಲ್ಲಿ ಸಾಧನೆ ಮಾಡಲು ಹೆಚ್ಚು ಆಸಕ್ತಿ ತೋರಿದ್ದರು. ಹಾಗಾಗಿ ಮದುವೆಗೆ ಹಿಂದೇಟು ಹಾಕಿದ್ದರಂತೆ. ಇಲ್ಲಿ ಸಹ ಸುಶಾಂತ್ ತಮ್ಮ ಪ್ರೀತಿಯನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ.