Tag: Riyan Parag

  • ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ಕೋಲ್ಕತ್ತಾ: ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 1 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿರುವ ಕೆಕೆಆರ್‌ 11 ಅಂಕಗಳೊಂದಿಗೆ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ರಾಜಸ್ಥಾನ್​​ ರಾಯಲ್ಸ್‌ಗೆ 207 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಆರ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ರಾಜಸ್ಥಾನದ ಪರ ರಿಯಾನ್ ಪರಾಗ್ 45 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್‌ ಸಿಡಿಸಿ 95 ರನ್‌ ಕಲೆ ಹಾಕಿದರು. ಯಶಸ್ವಿ ಜೈಸ್ವಾಲ್‌ 21 ಎಸೆತಗಳಲ್ಲಿ 1 ಸಿಕ್ಸರ್‌ 5 ಬೌಂಡರಿ ನೆರವಿನಿಂದ 34 ರನ್‌, ಶಿಮ್ರಾನ್ ಹೆಟ್ಮೆಯರ್ 23 ಎಸೆತಗಲ್ಲಿ 29 ರನ್‌, ಶುಭಂ ದುಬೆ 14 ಎಸೆತಗಳಲ್ಲಿ 25 ರನ್‌ ಕಲೆ ಹಾಕಿದರು.

    ಕೆಕೆಆರ್‌ ಪರ ವರುಣ್ ಚಕ್ರವರ್ತಿ 2, ಹರ್ಷಿತ್ ರಾಣಾ 2, ಮೊಯಿನ್ ಅಲಿ 2, ವೈಭವ್ ಅರೋರಾ 1 ವಿಕೆಟ್‌ ಕಬಳಿಸಿದರು.

    ಕೆಕೆಆರ್ ಪರ ಆ್ಯಂಡ್ರೆ ರಸೆಲ್ 25 ಎಸೆತಗಳಲ್ಲಿ ಅಜೇಯ 57 ರನ್​ ಗಳಿಸಿ ಬೃಹತ್ ಮೊತ್ತಕ್ಕೆ ನೆರವಾದರು. ಅಜಿಂಕ್ಯ ರಹಾನೆ 30,ಅಂಗ್​​ಕ್ರಿಸ್​ ರಘುವಂಶಿ 44, ರಹ್ಮನುಲ್ಹಾ ಗುರ್ಬಜ್​ 35 ರನ್​ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು.

    ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಕೇವಲ 13 ರನ್​ಗಳಾಗುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಸುನಿಲ್ ನರೈನ್ ಕೇವಲ ಯುಧ್ವೀರ್ ಸಿಂಗ್ ಬೌಲಿಂಗ್​​ನಲ್ಲಿ ಕ್ಲೀನ್ ಬೌಲ್ಡ್ ಆದರು. 2ನೇ ವಿಕೆಟ್​ಗೆ ರೆಹ್ಮನುಲ್ಲಾ ಗುರ್ಬಜ್ ಹಾಗೂ ಅಜಿಂಕ್ಯ ರಹಾನೆ 56 ರನ್​ಗಳಿಸಿದರು. ಗುರ್ಬಜ್ 25 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 35 ರನ್​ಗಳಿಸಿ ತೀಕ್ಷಣ ಬೌಲಿಂಗ್​​ನಲ್ಲಿ ಹೆಟ್ಮೇಯರ್​ಗೆ ಕ್ಯಾಚ್ ನೀಡಿದರು. ನಂತರ ರಹಾನೆ ಜೊತೆಗೂಡಿದ ರಘವಂಶಿ ನಿಧಾನವಾಗಿ ವಿಕೆಟ್ ಉಳಿಸಿಕೊಂಡು 31 ಎಸೆತಗಳಲ್ಲಿ 42 ರನ್​ಗಳ ಜೊತೆಯಾಟ ಆಡಿದರು.

    ರಹಾನೆ 24 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 30 ರನ್​ಗಳಿಸಿದರೆ, ರಘವಂಶಿ 31 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳಿಸಿದರು. ರಘುವಂಶಿ ರಸೆಲ್ ಜೊತೆಗೆ 61 ರನ್​ಗಳ ಜೊತೆಯಾಟ ಆಡಿದರು.

    ಆರ್‌ಆರ್‌ ಪರ ಜೋಫ್ರಾ ಆರ್ಚರ್, ಯುದ್ವೀರ್ ಸಿಂಗ್, ಮಹೇಶ್ ತೀಕ್ಷಣ, ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

  • ತವರಿನಲ್ಲಿ RCBಗೆ ʻಜೋಶ್‌ʼ ತಂದ ಜಯ – ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಬೆಂಗಳೂರು

    ತವರಿನಲ್ಲಿ RCBಗೆ ʻಜೋಶ್‌ʼ ತಂದ ಜಯ – ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದ ಬೆಂಗಳೂರು

    – ರೋಚಕ ಹಣಾಹಣಿಯಲ್ಲಿ ರಾಜಸ್ಥಾನ್‌ಗೆ ವಿರೋಚಿತ ಸೋಲು

    ಬೆಂಗಳೂರು: ಕಳೆದ ಮೂರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ತನ್ನ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಆವೃತ್ತಿಯಲ್ಲಿ ಮೊದಲ ಗೆಲುವು ದಾಖಲಿಸಿದೆ. ಸೋಲಿನ ಮುಖವಾಡ ಕಳಚುವುದರ ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

    ಗುರುವಾರ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರೋಚಕ 11 ರನ್ ಗಳ ಗೆಲುವು ಸಾಧಿಸಿದೆ. ಈ ಮೂಲಕ ಆಡಿರುವ ಒಂಬತ್ತು ಪಂದ್ಯಗಳಲ್ಲಿ 6 ಗೆಲುವಿನೊಂದಿಗೆ 12 ಅಂಕಗಳನ್ನು ಕಲೆ ಹಾಕಿ ಅಂಕಪಟ್ಟಿಯಲ್ಲಿ ಮತ್ತೆ 3ನೇ ಸ್ಥಾನಕ್ಕೇರಿದೆ.

    ಗೆಲುವಿಗೆ 206 ರನ್ ಗಳ ಕಠಿಣ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳು ಮುಗಿದಾಗ 9 ವಿಕೆಟ್ ನಷ್ಟಕ್ಕೆ ಕೇವಲ 194 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು. ರಾಜಸ್ಥಾನಕ್ಕೆ ಯಶಸ್ವಿ ಜೈಸ್ವಾಲ್ 49 ರನ್‌ ಗಳಿಸುವ ಮೂಲಕ ಸ್ಫೋಟಕ ಆರಂಭ ಒದಗಿಸಿದರೂ ಅದನ್ನು ಕೊನೇವರೆಗೂ ಬೆಳೆಸಿಕೊಂಡು ಹೋಗುವಲ್ಲಿ ರಾಜಸ್ಥಾನ ರಾಯಲ್ಸ್ ಸಂಪೂರ್ಣವಾಗಿ ಎಡವಿತು.

    ಹೇಜಲ್ವುಡ್ 4 ವಿಕೆಟ್
    ಜೋಶ್‌ ಹೇಜಲ್ವುಡ್‌ ತನ್ನ ಪಾಲಿನ ಅಂತಿಮ ಓವರ್‌ನಲ್ಲಿ ಸ್ಫೋಟಕವಾಗಿ ಆಡುತ್ತಿದ್ದ ಧ್ರುವ್ ಜುರೆಲ್ (47) ಅವರು ಆರ್ ಸಿಬಿ ಪಾಳೆಯದಿಂದ ಪಂದ್ಯ ಕಿತ್ತುಕೊಳ್ಳುವ ಸೂಚನೆ ನೀಡಿದರಾದರೂ ಹೇಜಲ್ವುಡ್ ಅದಕ್ಕೆ ಅವಕಾಶ ನೀಡಲಿಲ್ಲ. ಹೇಟ್ಮೇಯರ್ (11), ಶುಭಂ ದುಬೆ (12) ಸೇರಿದಂತೆ ಯಾವ ಬ್ಯಾಟರ್ ಸಹ ಅಗತ್ಯ ಸಂದರ್ಭದಲ್ಲಿ ಆಟವಾಡಲು ವಿಫಲವಾಗಿದ್ದರಿಂದ ಆರ್‌ಸಿಬಿ ಜಯಭೇರಿ ಬಾರಿಸಿತು. ಆರ್ ಸಿಬಿ ಪರ ಹೇಜಲ್ವುಡ್ ಅವರು 33 ರನ್ ಗಳಿಗೆ 4 ವಿಕೆಟ್ ಕಬಳಿಸಿದರು. ಕೃನಾಲ್ ಪಾಂಡ್ಯ 2 ವಿಕೆಟ್, ಭುವನೇಶ್ವರ್ ಕುಮಾರ್, ಯಶ್ ದಯಾಳ್ ತಲಾ 1 ವಿಕೆಟ್ ಗಳಿಸಿದರು.

    ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ರಜತ್ ಪಾಟೀದಾರ್ ಬಳಗ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು.

    ಕೊಹ್ಲಿ- ಪಡಿಕ್ಕಲ್ ಮಿಂಚಿನಾಟ:
    ಆರ್‌ಸಿಬಿ ಪವರ್‌ ಪ್ಲೇನಲ್ಲಿ ಸ್ಫೋಟಕ ಆರಂಭ ಪಡೆದಿತ್ತು. ಆ ಬಳಿಕ ವಿರಾಟ್ ಕೊಹ್ಲಿ ಜೊತೆಗೂಡಿದ ದೇವದತ್ ಪಡಿಕ್ಕಲ್ ಅವರು 95 ರನ್‌ಗಳ ಮಹತ್ವದ ಜೊತೆಯಾಟವಾಡಿದರು. ತಂಡದ ಮೊತ್ತವನ್ನು 15 ಓವರ್ ಗಳಲ್ಲಿ 150ರ ಗಡಿದಾಟಿಸಿದರು. 16ನೇ ಓವರ್ ನಲ್ಲೇ ಆರ್ಚರ್ ಅವರು ವಿರಾಟ್ ಕೊಹ್ಲಿ ಅವರನ್ನು ಜೋಫ್ರಾ ಆರ್ಚರ್ ಅವರು ಔಟ್ ಮಾಡಿದರು. ವಿರಾಟ್ ಕೊಹ್ಲಿ ಅವರು 42 ಎಸೆತಗಳಲ್ಲಿ 70 ರನ್ ಗಳನ್ನು ಗಳಿಸಿದರು. ಅದರಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್ ಗಳಿದ್ದವು. ಮುಂದಿನ ಓವರ್ ನಲ್ಲೇ ಸಂದೀಪ್ ಶರ್ಮಾ ಅವರು ದೇವದತ್ ಪಡಿಕ್ಕಲ್ ಅವರನ್ನು ಪೆವಿಲಿಯನ್ ಗೆ ಅಟ್ಟಿದರು.

    27 ಎಸೆತಗಳಿಂದ 50 ರನ್ ಗಳಿಸಿದ ಅವರ ಇನ್ನಿಂಗ್ಸ್ ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಗಳಿದ್ದವು. ಇದು ದೇವದತ್ ಪಡಿಕ್ಕಲ್ ಅವರ ನಿರಂತರ ಎರಡನೇ ಅರ್ಧಶತಕವಾಗಿದೆ. ಅಂತಿಮ ಹಂತದಲ್ಲಿ ಟಿಂ ಡೇವಿಡ್ (23) ಮತ್ತು ಜಿತೇಶ್ ಶರ್ಮಾ(20) ಬಿರುಸಿನ ಆಟವಾಡಿ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು. ರಾಜಸ್ಥಾನ ರಾಯಲ್ಸ್ ಪರ ಸಂದೀಪ್ ಶರ್ಮಾ 2 ವಿಕೆಟ್ ಗಳಿಸಿದರೆ, ಜೋಫ್ರಾ ಆರ್ಚರ್ ಮತ್ತು ಹಸರಂಗ ತಲಾ ಒಂದು ವಿಕೆಟ್ ಉರುಳಿಸಿದರು. ಮತ್ತೊಂದು ವಿಕೆಟ್ ರನೌಟ್ ರೂಪದಲ್ಲಿ ಬಂತು.

  • ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌

    ಐಪಿಎಲ್‌ನಿಂದ ಬ್ಯಾನ್‌ ಮಾಡಿ – ರಿಯಾನ್‌ ಪರಾಗ್‌ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್‌

    ಗುವಾಹಟಿ: ಐಪಿಎಲ್‌ನಿಂದ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡದ ನಾಯಕ ರಿಯಾನ್‌ ಪರಾಗ್‌ (Riyan Parag) ಅವರನ್ನು ಬ್ಯಾನ್‌ ಮಾಡಬೇಕೆಂದು ಕ್ರಿಕೆಟ್‌ ಅಭಿಮಾನಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

    ಕ್ರಿಕೆಟ್‌ ಅಭಿಮಾನಿಗಳು ರಿಯಾನ್‌ ಪರಾಗ್‌ ವಿರುದ್ಧ ಕಿಡಿಕಾರಲು ಕಾರಣವಾಗಿದ್ದು ಒಂದು ವಿಡಿಯೋ. ಅಭಿಮಾನಿಗಳ ಜೊತೆ ಸೆಲ್ಫಿ (Selfie) ತೆಗೆಯುವ ವೇಳೆ ಪರಾಗ್‌ ತೋರಿದ ವರ್ತನೆ ನೆಟ್ಟಿಗರ ಪಿತ್ತ ನೆತ್ತಿಗೆರುವಂತೆ ಮಾಡಿದೆ. ಇದನ್ನೂ ಓದಿ: ಸಿಎಸ್‌ಕೆ ವಿರುದ್ಧ ಆರ್‌ಸಿಬಿ ಗೆದ್ದ ಬಳಿಕ ಕೊಹ್ಲಿ ಟ್ರೋಲ್‌ ಮಾಡಿದವರಿಗೆ ಚಳಿ ಬಿಡಿಸಿದ ನಟಿ

    ಆಗಿದ್ದು ಏನು?
    ಚೆನ್ನೈ ಸೂಪರ್‌ ಕಿಂಗ್ಸ್‌ (CSK) ವಿರುದ್ಧ 6 ರನ್‌ಗಳಿಂದ ತಂಡ ಗೆದ್ದ ಬಳಿಕ ಅಭಿಮಾನಿಗಳು ಪರಾಗ್‌ ಜೊತೆ ಸೆಲ್ಫಿ ಕ್ಲಿಕ್ಕಿಸಲು ಮುಂದೆ ಬಂದಿದ್ದಾರೆ. ಈ ವೇಳೆ ಪರಾಗ್‌ ಸೆಲ್ಫಿ ಕ್ಲಿಕ್ಕಿಸಿ ಮೊಬೈಲ್‌ ಅನ್ನು ನೇರವಾಗಿ ಕೈಯಲ್ಲಿ ನೀಡದೇ ಎಸೆದಿದ್ದಾರೆ. ಇದನ್ನೂ ಓದಿ: ಬೌಂಡರಿ ಬಳಿ ಮೇಲಕ್ಕೆ ಜಿಗಿದು ಕ್ಯಾಚ್‌ – ಮೆಕ್‌ಗುರ್ಕ್ ಮ್ಯಾಜಿಕ್‌ಗೆ ಅನಿಕೇತ್‌ ಔಟ್‌

    ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗುತ್ತಿದೆ. ಮೊಬೈಲ್‌ ಕೈಯಲ್ಲಿ ಕೊಡಬಹುದಿತ್ತು. ಅದನ್ನು ಯಾಕೆ ಎಸೆಯಬೇಕಿತ್ತು? ಇಷ್ಟೊಂದು ಅಹಂಕಾರ ತೋರಿಸುವ ಅಗತ್ಯ ಏನು? ಇಷ್ಟೊಂದು ಧಿಮಾಕು ಇರುವ ರಿಯಾನ್‌ ಪರಾಗ್‌ ಅವರನ್ನು ಐಪಿಎಲ್‌ನಿಂದಲೇ ಬ್ಯಾನ್‌ ಮಾಡಬೇಕು ಎಂದು ಅಭಿಮಾನಿಗಳು ಸಿಟ್ಟು ಹೊರ ಹಾಕುತ್ತಿದ್ದಾರೆ.

    ಗುವಾಹಟಿಯಲ್ಲಿ ಮೊದಲು ಬ್ಯಾಟ್‌ ಮಾಡಿದ್ದ ರಾಜಸ್ಥಾನ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 182 ರನ್‌ ಹೊಡೆದಿತ್ತು. ಕಠಿಣ ಸವಾಲನ್ನು ಬೆನ್ನಟ್ಟಿದ ಚೆನ್ನೈ 20 ಓವರ್‌ಗಳಲಲಿ 8 ವಿಕೆಟ್‌ ನಷ್ಟಕ್ಕೆ 176 ರನ್‌ ಹೊಡೆದು ಸೋಲನ್ನು ಒಪ್ಪಿಕೊಂಡಿತು. ಈ ಪಂದ್ಯದಲ್ಲಿ ಪರಾಗ್‌ 37 ರನ್‌(28 ಎಸೆತ, 2 ಬೌಂಡರಿ, 2 ಸಿಕ್ಸ್‌) ಹೊಡೆದಿದ್ದರು.

    ಈ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್‌ ನಿಧಾನಗತಿಯ ಓವರ್‌ ಎಸೆದಿದ್ದಕ್ಕೆ ನಾಯಕ ರಿಯಾನ್‌ ಪರಾಗ್‌ಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.

     

  • ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್

    ಐಪಿಎಲ್ 2025: ಮೊದಲ 3 ಪಂದ್ಯಗಳಿಗೆ ರಾಜಸ್ಥಾನ ರಾಯಲ್ಸ್‌ಗೆ ರಿಯಾನ್ ಪರಾಗ್ ಕ್ಯಾಪ್ಟನ್

    ಮುಂಬೈ: ಇನ್ನೆರಡು ದಿನಗಳಲ್ಲಿ 2025ರ ಐಪಿಎಲ್ (IPL 2025) ಟೂರ್ನಿ ಆರಂಭವಾಗಲಿದೆ. ಈ ಬಾರಿ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ಮೊದಲ 3 ಪಂದ್ಯಗಳನ್ನು ರಿಯಾನ್ ಪರಾಗ್ (Riyan Parag) ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.

    ಸದ್ಯ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕತ್ವ ವಹಿಸಿರುವ ಸಂಜು ಸ್ಯಾಮ್ಸನ್ (Sanju Samson) ಅವರು ಫಿಟ್‌ನೆಟ್ ಸಮಸ್ಯೆ ಎದುರಿಸುತ್ತಿರುವ ಕಾರಣ ಬಿಸಿಸಿಐ ವಿಕೆಟ್ ಕೀಪಿಂಗ್ ಮಾಡಲು ಅನುಮತಿ ನೀಡಿಲ್ಲ. ಈ ಕಾರಣದಿಂದ ತಂಡಕ್ಕೆ ಹೊಸ ನಾಯಕನನ್ನು ನೇಮಿಸುವ ನಿರ್ಧಾರ ಫ್ರಾಂಚೈಸಿ ಕೈಗೊಂಡಿತ್ತು. ಇದೀಗ ರಿಯಾನ್ ಪರಾಗ್‌ನನ್ನು ಮೊದಲ ಮೂರು ಪಂದ್ಯಗಳಿಗೆ ನಾಯಕನನ್ನಾಗಿ ಘೋಷಿಸಿದೆ. ಇನ್ನೂ ಸಂಜು ಸ್ಯಾಮ್ಸನ್ ಈ ಟೂರ್ನಿಯಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ ಎಂದು ಫ್ರಾಂಚೈಸಿ ತಿಳಿಸಿದೆ.ಇದನ್ನೂ ಓದಿ: ಸಚಿವರ ಮೇಲೆ 2 ಸಲ ಹನಿಟ್ರ್ಯಾಪ್ ಯತ್ನ – ಸತೀಶ್ ಜಾರಕಿಹೊಳಿ ಬಾಂಬ್

    ನಾಯಕತ್ವ ವಹಿಸಲಿರುವ ರಿಯಾನ್ ಪರಾಗ್ ಅವರು, ವಿರಾಟ್ ಕೊಹ್ಲಿ (Virat Kohli) ಬಳಿಕ ಐಪಿಎಲ್‌ನ ಅತ್ಯಂತ ಕಿರಿಯ ನಾಯಕರಲ್ಲಿ ಒಬ್ಬರಾಗಲಿದ್ದಾರೆ.

    2025ರ ಐಪಿಎಲ್ ಟೂರ್ನಿ ಮಾ.22 ರಂದು ಆರಂಭವಾಗಲಿದೆ. ಮಾ.23 ರಂದು ಹೈದರಾಬಾದ್‌ನ (Hyderabad) ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ (Rajiv Gandhi International Cricket Stadium) ಸನ್ ರೈಸರ್ಸ್ ಹೈದರಾಬಾದ್ (Sun Risers Hyderabad) ವಿರುದ್ಧ ರಾಜಸ್ಥಾನ ರಾಯಲ್ಸ್ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಈ ಪಂದ್ಯ ಸೇರಿದಂತೆ ಮಾ.26 ರಂದು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಮಾ.30 ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳನ್ನು ರಿಯಾನ್ ಮುನ್ನಡೆಸಲಿದ್ದಾರೆ.

    ಸಂಜು ಸ್ಯಾಮ್ಸನ್‌ಗೆ ಏನಾಗಿತ್ತು?
    ಫೆಬ್ರವರಿಯಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಅವರ ಬೆರಳಿಗೆ ಪೆಟ್ಟಾಗಿತ್ತು. ಸದ್ಯ ವಿಕೆಟ್‌ಕೀಪರ್-ಬ್ಯಾಟ್ಸ್ಮನ್ ಆಗಿ ಫಿಟ್ ಆಗಲು ಬೆಂಗಳೂರಿನಲ್ಲಿರುವ ಬಿಸಿಸಿಐನ ಸೆಂಟರ್ ಆಫ್ ಎಕ್ಸ್‌ಲೆನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ರಾಜಸ್ಥಾನ್ ರಾಯಲ್ಸ್ ತಂಡ: ಸಂಜು ಸ್ಯಾಮ್ಸನ್, ಶುಭಂ ದುಬೆ, ವೈಭವ್ ಸೂರ್ಯವಂಶಿ, ಕುನಾಲ್ ರಾಥೋರ್, ಶಿಮ್ರೋನ್ ಹೆಟ್ಮೆಯರ್, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್, ರಿಯಾನ್ ಪರಾಗ್, ನಿತೀಶ್ ರಾಣಾ, ಯುಧ್ವೀರ್ ಸಿಂಗ್, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಮದ್ ಸಿಂಗ್ ತೀಕ್ಷಣಾ, ಮದ್ ಕುಮಾರ, ವಾನ್, ವಾನ್ ತುಷಾರ್ ದೇಶಪಾಂಡೆ, ಫಜಲ್ಹಕ್ ಫಾರೂಕಿ, ಕ್ವೇನಾ ಮಫಕಾ, ಅಶೋಕ್ ಶರ್ಮಾ, ಸಂದೀಪ್ ಶರ್ಮಾ.ಇದನ್ನೂ ಓದಿ: ಸೂರ್ಯ ನಟನೆಯ ‘ರೆಟ್ರೋ’ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್

     

  • IPL 2024: ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಗೆದ್ದು ಬೀಗಿದ ಪಂಜಾಬ್‌ – ಕಿಂಗ್ಸ್‌ಗೆ 5 ವಿಕೆಟ್‌ಗಳ ಜಯ!

    IPL 2024: ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಗೆದ್ದು ಬೀಗಿದ ಪಂಜಾಬ್‌ – ಕಿಂಗ್ಸ್‌ಗೆ 5 ವಿಕೆಟ್‌ಗಳ ಜಯ!

    ಗುವಾಹಟಿ: ಸ್ಯಾಮ್‌ ಕರ್ರನ್‌ (Sam Curran) ಆಲ್‌ರೌಂಡ್‌ ಆಟ, ಸಂಘಟಿತ ಬೌಲಿಂಗ್‌ ದಾಳಿ ನೆರವಿನಿಂದ ಪಂಜಾಬ್‌ ಕಿಂಗ್ಸ್‌ ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 5 ವಿಕೆಟ್‌ಗಳ ಜಯ ಸಾಧಿಸಿದೆ. ಈಗಾಗಲೇ ಪ್ಲೇ ಆಫ್‌ನಿಂದ ಹೊರಬಿದ್ದಿರುವ ಪಂಜಾಬ್‌ ಕಿಂಗ್ಸ್‌ (PBKS) ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ರೋಷಾವೇಶ ಮೆರೆದಿದೆ.

    ಇಲ್ಲಿನ ಬರ್ಸಪರ ಕ್ರೀಡಾಂಗಣದಲ್ಲಿ ಇದೀಗ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ (Rajasthan Royals) 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ ಕೇವಲ 144 ರನ್‌ ಗಳನ್ನ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಪಂಜಾಬ್‌ ಕಿಂಗ್ಸ್‌ 18.5 ಓವರ್‌ಗಳಲ್ಲೇ 5 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಿ ಗೆಲುವು ಸಾಧಿಸಿತು.

    ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌ ಸಹ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ತೀವ್ರ ಸಂಕಷ್ಟಕ್ಕೀಡಾಯಿತು. ಹಿಂದಿನ ಪಂದ್ಯಗಳಲ್ಲಿ ಅಬ್ಬರಿಸಿದ್ದ ಜಾನಿ ಬೈರ್‌ಸ್ಟೋವ್‌, ಪ್ರಭ್‌ಸಿಮ್ರನ್‌ ಸಿಂಗ್‌, ರೀಲಿ ರುಸ್ಸೋ, ಶಶಾಂಕ್‌ ಸಿಂಗ್‌ ಬ್ಯಾಟಿಂಗ್‌ನಲ್ಲಿ ಕೈಕೊಟ್ಟರು. ಇದನ್ನೂ ಓದಿ: ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಕರ್ರನ್‌ ಆಲ್‌ರೌಂಡ್‌ ಆಟ:
    ಮಾರಕ ಬೌಲಿಂಗ್‌ ದಾಳಿಯಲ್ಲಿ 2 ವಿಕೆಟ್‌ ಕಿತ್ತಿದ್ದ ನಾಯಕ ಸ್ಯಾಮ್‌ ಕರ್ರನ್‌ ಬ್ಯಾಟಿಂಗ್‌ನಲ್ಲೂ ಅಬ್ಬರಿಸಿದರು. 41 ಎಸೆತಗಳಲ್ಲಿ 63 ರನ್‌ (3 ಸಿಕ್ಸರ್‌, 5 ಬೌಂಡರಿ) ಬಾರಿಸುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟರು. ಇದರೊಂದಿಗೆ ಜಿತೇಶ್‌ ಶರ್ಮಾ 22 ರನ್‌, ಅಶುತೋಷ್‌ ಶರ್ಮಾ 17 ರನ್‌, ಪ್ರಭ್‌ಸಿಮ್ರನ್‌ ಸಿಂಗ್‌ 6, ಜಾನಿ ಬೈರ್‌ಸ್ಟೋವ್‌ 14 ರನ್‌, ರೀಲಿ ರೊಸ್ಸೊ 22 ರನ್‌ ಗಳಿಸಿದರೆ, ಶಶಾಂಕ್‌ ಸಿಂಗ್‌ ಶೂನ್ಯ ಸುತ್ತಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ರಾಜಸ್ಥಾನ್‌ ಕಳಪೆ ಪ್ರದರ್ಶನವನ್ನೇ ನೀಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಅಧಿಕ ರನ್‌ ಗಳಿಸದೇ ಕೈಕೊಟ್ಟರು. ರಾಜಸ್ಥಾನ್‌ ರಾಯಲ್ಸ್ ಪರ ರಿಯಾನ್‌ ಪರಾಗ್‌ 48 ರನ್‌ (34 ಎಸೆತ, 6 ಬೌಂಡರಿ), ಆರ್‌. ಅಶ್ವಿನ್‌ 28 ರನ್‌ ಗಳಿಸಿದ್ದು ಬಿಟ್ಟರೆ ಇನ್ನುಳಿದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ಉಳಿಯಲೇ ಇಲ್ಲ. ಇದನ್ನೂ ಓದಿ: ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಿಸಿಸಿಐ ಅರ್ಜಿ ಆಹ್ವಾನ- ಅರ್ಹತೆಗಳೇನು?

    ಯಶಸ್ವಿ ಜೈಸ್ವಾಲ್‌ ಮೊದಲ ಓವರ್‌ನಲ್ಲೇ 4 ರನ್‌ ಗಳಿಸಿ ಪೆವಿಲಿಯನ್‌ ಸೇರಿಕೊಂಡರು. ಟಾಮ್ ಕೊಹ್ಲರ್-ಕ್ಯಾಡ್ಮೋರ್ ಮತ್ತು ಸಂಜು ಸ್ಯಾಮ್ಸನ್‌ ತಲಾ 18 ರನ್‌, ಟ್ರೆಂಟ್‌ ಬೋಲ್ಟ್‌ 12 ರನ್‌ ಗಳಿಸಿದರು. ಪಂಜಾಬ್‌ ಪರ ಸ್ಯಾಮ್‌ ಕರ್ರನ್‌, ಹರ್ಷಲ್‌ ಪಟೇಲ್‌, ರಾಹುಲ್‌ ಚಹಾರ್‌ ತಲಾ ಎರಡು ವಿಕೆಟ್‌ ಕಿತ್ತರೆ, ಅರ್ಷ್‌ದೀಪ್‌ ಸಿಂಗ್‌, ನಥಾನ್‌ ಎಲ್ಲಿಸ್‌ ತಲಾ ಒಂದೊಂದು ವಿಕೆಟ್‌ ಪಡೆದರು.

  • ರಾಯಲ್ಸ್‌ ಮೇಲೆ ಕಿಂಗ್ಸ್‌ ಸವಾರಿ – ಚೆನ್ನೈಗೆ 5 ವಿಕೆಟ್‌ಗಳ ಜಯ; ಪ್ಲೇ ಆಫ್‌ಗೆ ಸಿಎಸ್‌ಕೆ ಇನ್ನೂ ಹತ್ತಿರ!

    ರಾಯಲ್ಸ್‌ ಮೇಲೆ ಕಿಂಗ್ಸ್‌ ಸವಾರಿ – ಚೆನ್ನೈಗೆ 5 ವಿಕೆಟ್‌ಗಳ ಜಯ; ಪ್ಲೇ ಆಫ್‌ಗೆ ಸಿಎಸ್‌ಕೆ ಇನ್ನೂ ಹತ್ತಿರ!

    ಚೆನ್ನೈ: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶನದಿಂದ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡವು ರಾಜಸ್ಥಾನ್‌ ರಾಯಲ್ಸ್‌ (Rajasthan Royals) ವಿರುದ್ಧ 5 ವಿಕೆಟ್‌ಗಳ ಅಮೋಘ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್‌ ಹಾದಿಗೆ ಮತ್ತಷ್ಟು ಹತ್ತಿರವಾಗಿದೆ.

    ಇಲ್ಲಿನ ಚೆಪಾಕ್‌ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ರಾಜಸ್ಥಾನ್‌ ರಾಯಲ್ಸ್‌ ಫೀಲ್ಡಿಂಗ್‌ ಮಾಡುವ ಅವಕಾಶವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ತಂಡಕ್ಕೆ ಬಿಟ್ಟುಕೊಟ್ಟಿತು. ನಿಧಾನಗತಿಯ ಬ್ಯಾಟಿಂಗ್‌ ನಡೆಸಿದ ರಾಜಸ್ಥಾನ್‌ ತಂಡಕ್ಕೆ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಕೈಕೊಟ್ಟ ಪರಿಣಾಮ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 141 ರನ್‌ ಗಳಿಸಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ 18.2 ಓವರ್‌ಗಳಲ್ಲೇ 5 ವಿಕೆಟ್‌ ನಷ್ಟಕ್ಕೆ 145 ರನ್‌ ಗಳಿಸಿ ಗೆಲುವು ಸಾಧಿಸಿತು.

    ಅಲ್ಪ ಮೊತ್ತದ ಚೇಸಿಂಗ್‌ ಗುರಿ ಬೆನ್ನಟ್ಟಿದ ಚೆನ್ನೈ ಪವರ್‌ಪ್ಲೇನಲ್ಲಿ ಸ್ಪೋಟಕ ಆರಂಭ ಪಡೆದರೂ ಬಳಿಕ ರನ್‌ ವೇಗ ಕಳೆದುಕೊಂಡಿತ್ತು. ಆದ್ರೆ ನಾಯಕ ರುತುರಾಜ್‌ ಗಾಯಕ್ವಾಡ್‌ (Ruturaj Gaikwad) ಅವರ ಜವಾಬ್ದಾರಿಯುತ ಬ್ಯಾಟಿಂಗ್‌ ತಂಡವನ್ನು ಗೆಲ್ಲುವಿತನ್ನ ಕೊಂಡೊಯ್ದಿತು. ಚೆನ್ನೈ ಪರ ಕೊನೇವರೆಗೂ ಹೋರಾಡಿದ ರುತುರಾಜ್‌ ಗಾಯಕ್ವಾಡ್‌ 41 ಎಸೆತಗಳಲ್ಲಿ 42 ರನ್‌ (2 ಸಿಕ್ಸರ್‌, 1 ಬೌಂಡರಿ) ಗಳಿಸಿದರು. ರಚಿನ್‌ ರವಿಂದ್ರ 27 ರನ್‌, ಡೇರಿಲ್‌ ಮಿಚೆಲ್‌ 22 ರನ್‌, ಮೊಯಿನ್‌ ಅಲಿ 10 ರನ್‌, ಶಿವಂ ದುಬೆ 18 ರನ್‌, ರವೀಂದ್ರ ಜಡೇಜಾ 5 ರನ್‌, ಸಮೀರ್‌ ರಿಝ್ವಿ 15 ರನ್‌ ಗಳಿಸಿದರು.

    ಅಪರೂಪದ ಔಟ್‌ಗೆ ತುತ್ತಾದ ಜಡ್ಡು:
    ರಾಜಸ್ಥಾನ್‌ ವಿರುದ್ಧದ ಪಂದ್ಯದಲ್ಲಿ ಆಲ್‌ರೌಂಡರ್‌ ಜಡೇಜಾ ಅಪರೂಪದ ಔಟ್‌ಗೆ ತುತ್ತಾಗಿರುವ ಪ್ರಸಂಗವೂ ಕಂಡುಬಂದಿತು. 16ನೇ ಓವರ್‌ನ 5ನೇ ಎಸೆತ ಎದುರಿಸಿದ ಜಡೇಜಾ 2 ರನ್‌ ಕದಿಯುವ ಪ್ರಯತ್ನ ಮಾಡಿದ್ದರು. ಈ ವೇಳೆ ರನೌಟ್‌ ಆಗುವ ಸಾಧ್ಯತೆಯಿತ್ತು. ಸಂಜು ಸ್ಯಾಮ್ಸನ್‌ ಅವರು ಡೈರೆಕ್ಟ್‌ ವಿಕೆಟ್‌ಗೆ ಚೆಂಡನ್ನು ಎಸೆದರು, ಆದ್ರೆ ವಿಕೆಟ್‌ಗೆ ಅಡ್ಡಲಾಗಿ ಓಡುತ್ತಿದ್ದ ಜಡೇಜಾ ಚೆಂಡನ್ನು ಬೆನ್ನಿಗೆ ತಾಗಿಸಿಕೊಂಡರು.‌ ಇದರಿಂದ ಸಿಟ್ಟಾದ ಸಂಜು ಸ್ಯಾಮ್ಸನ್‌ ಅಂಪೈರ್‌ ಮೊರೆ ಹೋದರು. ಕೊನೆಗೆ ಟಿವಿ ಅಂಪೈರ್‌ ಕ್ಷೇತ್ರರಕ್ಷಣೆ ತಡೆಯುವ ಪ್ರಯತ್ನ ಮಾಡಿದ ಆಧಾರದ ಮೇಲೆ ಔಟ್‌ ಎಂದು ತೀರ್ಪು ನೀಡಿದರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ರಾಜಸ್ಥಾನ್‌ ರಾಯಲ್ಸ್‌ 5 ವಿಕೆಟ್‌ ನಷ್ಟಕ್ಕೆ 141 ರನ್‌ಗಳನ್ನಷ್ಟೇ ಗಳಿಸಿತ್ತು. ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ ಆರಂಭಿಕ ಜೋಡಿ ಮೊದಲ ವಿಕೆಟ್‌ಗೆ 6.2 ಓವರ್‌ಗಳಲ್ಲಿ 43 ರನ್‌ ಗಳಿಸಿತ್ತು. ಯಶಸ್ವಿ ಜೈಸ್ವಾಲ್‌ (Yashasvi Jaiswal) 21 ಎಸೆತಗಳಲ್ಲಿ 24 ರನ್‌ ಗಳಿಸಿ ಔಟಾಗುತ್ತಿದ್ದಂತೆ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಚೆನ್ನೈ ಬೌಲಿಂಗ್‌ ದಾಳಿ ಎದುರಿಸುವಲ್ಲಿ ವಿಫಲರಾದರು. ಜೋಸ್‌ ಬಟ್ಲರ್‌, ಸಂಜಯ ಸ್ಯಾಮ್ಸನ್‌ ಅಲ್ಪ ಮೊತ್ತಕ್ಕೆ ನಿರ್ಮಿಸಿದರು.

    ಕೊನೆಗೆ ಡೆತ್‌ ಓವರ್‌ನಲ್ಲಿ ರಿಯಾನ್‌ ಪರಾಗ್‌,‌ ಧ್ರುವ್‌ ಜುರೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌ನಿಂದ ರಾಜಸ್ಥಾನ್‌ 140 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರಾಜಸ್ಥಾನ್‌ ಪರ ಜೋಸ್‌ ಬಟ್ಲರ್‌ 21 ರನ್‌, ಸಂಜು ಸ್ಯಾಮ್ಸನ್‌ (Sanju Samson) 15 ರನ್‌ ಧ್ರುವ್‌ ಜುರೆಲ್‌ 18 ಎಸೆತಗಳಲ್ಲಿ 28 ರನ್‌ ಗಳಿಸಿದ್ರೆ ಕೊನೆಯವರೆಗೂ ಹೋರಾಡಿದ ರಿಯಾನ್‌ ಪರಾಗ್‌ 47 ರನ್‌ (35 ಎಸೆತ, 3 ಸಿಕ್ಸರ್‌, 1 ಬೌಂಡರಿ) ಗಳಿಸಿ ಕ್ರೀಸ್‌ನಲ್ಲಿ ಉಳಿದರು. ಅಶ್ವಿನ್‌ ಅಜೇಯ 1 ರನ್‌ ಗಳಿಸಿದರು. ಚೆನ್ನೈ ಪರ ಸಿಮರ್ಜಿತ್‌ ಸಿಂಗ್‌ 3 ವಿಕೆಟ್‌ ಕಿತ್ತರೆ, ತುಷಾರ್‌ ದೇಶ್‌ಪಾಂಡೆ 2 ವಿಕೆಟ್‌ ಪಡೆದು ಮಿಂಚಿದರು.

  • ತವರಿನಲ್ಲೇ ಪಾಂಡ್ಯ ಪಡೆಗೆ ಹೀನಾಯ ಸೋಲು – ರಾಜಸ್ಥಾನ್‌ ರಾಯಲ್ಸ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

    ತವರಿನಲ್ಲೇ ಪಾಂಡ್ಯ ಪಡೆಗೆ ಹೀನಾಯ ಸೋಲು – ರಾಜಸ್ಥಾನ್‌ ರಾಯಲ್ಸ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

    ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2024) ಟೂರ್ನಿಯ 14ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ಹ್ಯಾಟ್ರಿಕ್‌ ಸೋಲನುಭವಿಸಿದೆ. ತವರಿನಲ್ಲೇ ಮುಂಬೈ (Mumbai Indians) ತಂಡದ ಹೀನಾಯ ಸೋಲು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಇತ್ತ ರಾಜಸ್ಥಾನ್‌ ರಾಯನ್ಸ್‌ (Rajasthan Royals) 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 125 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು. 126 ರನ್‌ ಗುರಿ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ 15.3 ಓವರ್‌ ಇರುವಾಗಲೇ 4 ವಿಕೆಟ್‌ ನಷ್ಟಕ್ಕೆ 127 ರನ್‌ ಗಳಿಸಿ ಸುಲಭ ಜಯ ಸಾಧಿಸಿತು. ಇದನ್ನೂ ಓದಿ: IPL 2024: ಮಹಿ ಬ್ಯಾಟಿಂಗ್‌ ಕಿಚ್ಚಿಗೂ ಬೆಚ್ಚದ ಡೆಲ್ಲಿ – ಕ್ಯಾಪಿಟಲ್ಸ್‌ಗೆ 20 ರನ್‌ಗಳ ಜಯ

    ಟಾಸ್‌ ಗೆದ್ದ ಸ್ಯಾಮ್ಸನ್‌ ಪಡೆ ಮೊದಲು ಫೀಲ್ಡಿಂಗ್‌ ಆಯ್ದುಕೊಂಡಿತು. ಬ್ಯಾಟಿಂಗ್‌ ಆರಂಭಿಸಿದ ಮುಂಬೈ ತಂಡ ಕಳಪೆ ಪ್ರದರ್ಶನ ನೀಡಿತು. ಮುಂಬೈ ತಂಡದ ಆರಂಭಿಕ ಆಟಗಾರರು ನ್ಯೂಜಿಲೆಂಡ್‌ ವೇಗಿ ಟ್ರೆಂಟ್‌ ಬೌಲ್ಟ್‌ ದಾಳಿಗೆ ಧೂಳಿಪಟವಾದರು. ರೋಹಿತ್‌ ಶರ್ಮಾ, ನಮನ್‌ ಧೀರ್‌, ಡೆವಾಲ್ಡ್‌ ಬ್ರೆವಿಸ್‌ ಬ್ಯಾಟರ್‌ಗಳು ಶೂನ್ಯ ಸುತ್ತಿ ಪೆವಿಲಿಯನ್‌ ಸೇರಿದ್ದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತು.

    ಮುಂಬೈ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ 21 ಎಸೆತಕ್ಕೆ 34 ರನ್‌ (6 ಬೌಂಡರಿ) ಗಳಿಸಿದರು. ತಿಲಕ್‌ ವರ್ಮಾ 32, ಟಿಮ್‌ ಡೇವಿಡ್‌ 17, ಇಶಾನ್‌ ಕಿಶನ್‌ 16 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಇದನ್ನೂ ಓದಿ: ಕಳಪೆ ಪ್ರದರ್ಶನದಿಂದ ಶಾಹೀನ್‌ ಶಾಗೆ ತಲೆದಂಡ – ಮತ್ತೆ ನಾಯಕನ ಪಟ್ಟಕ್ಕೇರಿದ ಬಾಬರ್‌ ಆಜಂ

    ರಾಜಸ್ಥಾನ್‌ ರಾಯಲ್ಸ್‌ ಪರ ಟ್ರೆಂಟ್‌ ಬೌಲ್ಟ್‌ ಹಾಗೂ ಯಜುವೇಂದ್ರ ಚಾಹಲ್‌ ತಲಾ 3 ವಿಕೆಟ್‌ ಗಳಿಸಿ ಅಬ್ಬರಿಸಿದರು. ನಾಂದ್ರೆ ಬರ್ಗರ್‌ 2, ಆವೇಶ್‌ ಖಾನ್‌ ಒಂದು ವಿಕೆಟ್‌ ಪಡೆದರು.

    ಪರಾಗ್‌ ಮಿಂಚು
    ಮುಂಬೈ ತಂಡ ನೀಡಿದ 126 ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ರಾಜಸ್ಥಾನ್‌ ರಾಯಲ್ಸ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನದೊಂದಿಗೆ ಸುಲಭ ಜಯ ಸಾಧಿಸಿತು. ರಿಯಾನ್‌ ಪರಾಗ್‌ ಅರ್ಥಶತಕ (54 ರನ್‌, 39 ಬಾಲ್‌, 5 ಫೋರ್‌, 3 ಸಿಕ್ಸರ್‌) ಬಾರಿಸಿ ಗಮನ ಸೆಳೆದರು. ಇದನ್ನೂ ಓದಿ: ಹೈದರಾಬಾದ್‌ ಪಾಲಿಗೆ ಕಿಲ್ಲರ್‌ ಆದ ಮಿಲ್ಲರ್‌ – ಗುಜರಾತ್‌ ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ

    ಆರಂಭಿಕರಾಗಿ ಕಣಕ್ಕಿಳಿದಿದ್ದ ಜೈಶ್ವಾಲ್‌ ಲಯ ಕಾಯ್ದುಕೊಳ್ಳುವಲ್ಲಿ ಎಡವಿದರು. ಮೊದಲ ಓವರ್‌ನಲ್ಲೇ ಬ್ಯಾಕ್‌ ಟು ಬ್ಯಾಕ್‌ 2 ಫೋರ್‌ ಬಾರಿಸಿ ಭರವಸೆ ಮೂಡಿಸಿದ್ದ ಹೊತ್ತಲ್ಲೇ ಜೈಶ್ವಾಲ್ ಮೊದಲ ಓವರ್‌ ಮುಕ್ತಾಯಕ್ಕೆ ವಿಕೆಟ್‌ ಕೈಚೆಲ್ಲಿ ಪೆವಿಲಿಯನ್‌ ಸೇರಿದರು. ಜೋಶ್‌ ಬಟ್ಲರ್‌ 13, ನಾಯಕ ಸಂಜು ಸ್ಯಾಮ್ಸನ್‌ 12 ರನ್‌ ಗಳಿಸಿ ಔಟಾಗಿದ್ದು ತಂಡಕ್ಕೆ ಆಘಾತ ನೀಡಿತ್ತು. ಈ ಸಂದರ್ಭದಲ್ಲಿ ಎಂಟ್ರಿ ಕೊಟ್ಟ ರಿಯಾನ್‌ ಪರಾಗ್‌ ಅಬ್ಬರದ ಬ್ಯಾಟಿಂಗ್‌ ಪ್ರದರ್ಶನ ನೀಡಿ ತಂಡದ ಸುಲಭ ಜಯಕ್ಕೆ ಕಾರಣರಾದರು. ಆರ್‌.ಅಶ್ವಿನ್‌ 16, ಶುಭಂ ದುಬೆ ಔಟಾಗದೇ 8 ರನ್‌ ಗಳಿಸಿದರು. ಮುಂಬೈ ತಂಡದ ಪರ ಆಕಾಶ್ ಮಧ್ವಲ್ ವಿಕೆಟ್‌ ಕಿತ್ತು ಗಮನ ಸೆಳೆದರು.

  • IPL 2024: ಸಂಜು-ಪರಾಗ್‌ ಬಹುಪರಾಕ್‌ -‌ ರಾಜಸ್ಥಾನ್‌ ರಾಯಲ್ಸ್‌ಗೆ 20 ರನ್‌ಗಳ ಅಮೋಘ ಜಯ

    IPL 2024: ಸಂಜು-ಪರಾಗ್‌ ಬಹುಪರಾಕ್‌ -‌ ರಾಜಸ್ಥಾನ್‌ ರಾಯಲ್ಸ್‌ಗೆ 20 ರನ್‌ಗಳ ಅಮೋಘ ಜಯ

    – ನಿಕೋಲಸ್‌ ಪೂರನ್‌, ಕೆ.ಎಲ್‌ ರಾಹುಲ್‌ ಅರ್ಧಶತಕಗಳ ಹೋರಾಟ ವ್ಯರ್ಥ

    ಜೈಪುರ: ನಿಕೋಲಸ್‌ ಪೂರನ್‌, ಕೆ.ಎಲ್‌ ರಾಹುಲ್‌ (KL Rahul and Nicholas Pooran) ಅವರ ಅರ್ಧಶತಕಗಳ ಹೋರಾಟದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ ತಂಡ (Rajasthan Royals), ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧ 20 ರನ್‌ಗಳ ಅಮೋಘ ಜಯ ಸಾಧಿಸಿದೆ.

    ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್‌ ತಂಡ 20 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 193 ರನ್‌ ಗಳಿಸಿತ್ತು. 194 ರನ್‌ಗಳ ಗುರಿ ಬೆನ್ನತ್ತಿದ ಲಕ್ನೋ ಸೂಪರ್‌ ಜೈಂಟ್ಸ್‌ (Lucknow Super Giants) 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 173 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಕೊನೇ ಓವರ್‌ನಲ್ಲಿ ಲಕ್ನೋ ತಂಡದ ಗೆಲುವಿಗೆ 27 ರನ್‌ ಅಗತ್ಯವಿತ್ತು. ಬೌಲಿಂಗ್‌ನಲ್ಲಿದ್ದ ಅವೇಶ್‌ ಖಾನ್‌ ಮೊದಲೇ 2 ವೈಟ್‌ ಬಿಟ್ಟುಕೊಟ್ಟರು. ಉಳಿದ ನಾಲ್ಕು ಎಸೆತಗಳಲ್ಲಿ ಕ್ರೀಸ್‌ನಲ್ಲಿದ್ದ ಕೃನಾಲ್‌ ಪಾಂಡ್ಯ ಹಾಗೂ ನಿಕೋಲಸ್‌ ಪೂರನ್‌ ಕೇವಲ ಒಂದೊಂದು ರನ್‌ ಗಳಿಸುವಲ್ಲಿ ಸಮರ್ಥರಾದರು. ಇದರಿಂದ ಗೆಲುವು ರಾಜಸ್ಥಾನ್‌ ಪಾಲಾಯಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಲಕ್ನೋ ತಂಡ ಮೊದಲ ಮೂರು ಓವರ್‌ಗಳಲ್ಲೇ 11 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಕಂಗಾಲಾಗಿತ್ತು. ಇದರಿಂದ ತಂಡ ಅಲ್ಪ ಮೊತ್ತಕ್ಕೆ ಆಲೌಟ್‌ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ದೀಪಕ್‌ ಹೂಡಾ ಮತ್ತು ಕೆ.ಎಲ್‌ ರಾಹುಲ್‌ ನಡುವಿನ 49 ರನ್‌ಗಳ ಸಣ್ಣ ಜೊತೆಯಾಟ ತಂಡಕ್ಕೆ ಚೇತರಿಕೆ ನೀಡಿತ್ತು. ಆದ್ರೆ ಹೂಡಾ 26 ರನ್‌ ಗಳಿಸುತ್ತಿದ್ದಂತೆ ವಿಕೆಟ್‌ ಒಪ್ಪಿಸಿದರು.

    ಬಳಿಕ 5ನೇ ವಿಕೆಟ್‌ಗೆ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌ ಹಾಗೂ ನಿಕೋಲಸ್‌ ಪೂರನ್‌ ಜೋಡಿ 52 ಎಸೆತಗಳಲ್ಲಿ 85 ರನ್‌ಗಳ ಜೊತೆಯಾಟ ನೀಡಿತ್ತು. ಇದರಿಂದ ತಂಡ ಗೆಲುವಿನ ಸನಿಹ ತಲುಪಿತ್ತು. ಕೊನೇ ಕ್ಷಣದಲ್ಲಿ ನಿಧಾನಗತಿಯ ಬ್ಯಾಟಿಂಗ್‌ ತಂಡದ ದಿಕ್ಕನ್ನೇ ಬದಲಿಸಿತು.

    ಲಕ್ನೋ ಪರ ನಿಕೋಲಸ್‌ ಪೂರನ್‌ 64 ರನ್‌ (41 ಎಸೆತ, 4 ಸಿಕ್ಸರ್‌, 4 ಬೌಂಡರಿ), ಕೆ.ಎಲ್‌ ರಾಹುಲ್‌ 58 ರನ್‌ (44 ಎಸೆತ, 4 ಬೌಂಡರಿ, 2 ಸಿಕ್ಸರ್‌), ಕ್ವಿಂಟನ್‌ ಡಿ ಕಾಕ್‌ 4 ರನ್‌, ಆಯುಷ್‌ ಬದೋನಿ 1 ರನ್‌, ದೀಪಕ್‌ ಹೂಡಾ 26 ರನ್‌, ಮಾರ್ಕಸ್‌ ಸ್ಟೋಯ್ನಿಸ್‌ 3 ರನ್‌ ಗಳಿಸಿದ್ರೆ, ಕೃನಾಲ್‌ ಪಾಂಡ್ಯ 3 ರನ್‌ ಗಳಿಸಿ ಕ್ರೀಸ್‌ನಲ್ಲಿ ಉಳಿದರು. ದೇವದತ್‌ ಪಡಿಕಲ್‌ ಶೂನ್ಯ ಸುತ್ತಿದರು.

    ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಆರಂಭಿಕ ಬ್ಯಾಟರ್ ಜೋಸ್ ಬಟ್ಲರ್ ಕೇವಲ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಈ ಬೆನ್ನಲ್ಲೇ ಸ್ಫೋಟಕ ಪ್ರದರ್ಶನಕ್ಕಿಳಿದಿದ್ದ ಯಶಸ್ವಿ ಜೈಸ್ವಾಲ್‌ ಸಹ 12 ಎಸೆತಗಳಲ್ಲಿ 24 ರನ್‌ ಬಾರಿಸಿ ಔಟಾದರು.

    ಸಂಜು-ಪರಾಗ್‌ ಬಹುಪರಾಕ್‌:
    5 ಓವರ್‌ಗಳಲ್ಲಿ 49 ರನ್‌ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಕಂಗಾಲಾಗಿದ್ದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ನಾಯಕ ಸಂಜು ಸ್ಯಾಮ್ಸನ್ (Sanju Samson) ಹಾಗೂ ರಿಯಾನ್ ಪರಾಗ್ (Riyan Parag)  ಬ್ಯಾಟಿಂಗ್‌ ಬಲ ತುಂಬಿದರು. 59 ಎಸೆತಗಳಲ್ಲಿ ಈ ಜೋಡಿ 93 ರನ್‌ಗಳ ಜತೆಯಾಟ ನೀಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಸ್ಫೋಟಕ ಬ್ಯಾಟಿಂಗ್‌ ಮಾಡಿದ ರಿಯಾನ್ ಪರಾಗ್ 29 ಎಸೆತಗಳಲ್ಲಿ 43 ರನ್ (3 ಸಿಕ್ಸರ್‌, 1 ಬೌಂಡರಿ) ಬಾರಿಸಿ ವಿಕೆಟ್ ಒಪ್ಪಿಸಿದರು.

    ಕೊನೆಯವರೆಗೂ ಹೋರಾಡಿದ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಸಂಜು ಸ್ಯಾಮ್ಸನ್ ಕೇವಲ 33 ಎಸೆತಗಳನ್ನು ಎದುರಿಸಿ 21ನೇ ಐಪಿಎಲ್ ಶತಕ ಸಿಡಿಸಿದರು. ಅಂತಿಮವಾಗಿ ಸಂಜು ಸ್ಯಾಮ್ಸನ್ 52 ಎಸೆತಗಳಲ್ಲಿ ಅಜೇಯ 82 ರನ್ (3 ಬೌಂಡರಿ, 6 ಸಿಕ್ಸರ್) ಸಿಡಿಸಿದರು. ಕೊನೆಯಲ್ಲಿ ಧ್ರುವ್‌ ಜುರೆಲ್‌ ಕೇವಲ 12 ಎಸೆತಗಳಲ್ಲಿ ತಲಾ 1 ಸಿಕ್ಸರ್, ಬೌಂಡರಿ ಸಹಿತ 20 ರನ್ ಬಾರಿಸಿದರು.

    ಲಖನೌ ಸೂಪರ್ ಜೈಂಟ್ಸ್ ಪರ ನವೀನ್ ಉಲ್ ಹಕ್ ಎರಡು ವಿಕೆಟ್ ಪಡೆದರೆ, ರವಿ ಬಿಷ್ಣೋಯಿ ಹಾಗೂ ಮೊಯ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

     

  • ರಿಯಾನ್ ಪರಾಗ್ ವಿಶಿಷ್ಟ ಸಂಭ್ರಮಾಚರಣೆಗೆ ಫ್ಯಾನ್ಸ್ ಫಿದಾ

    ರಿಯಾನ್ ಪರಾಗ್ ವಿಶಿಷ್ಟ ಸಂಭ್ರಮಾಚರಣೆಗೆ ಫ್ಯಾನ್ಸ್ ಫಿದಾ

    ಮುಂಬೈ: ಐಪಿಎಲ್‍ನಲ್ಲಿ ಬೌಂಡರಿ, ಸಿಕ್ಸರ್‍ ಗಳ ಹಬ್ಬ ಒಂದು ಕಡೆ ಅಭಿಮಾನಿಗಳಿಗೆ ಕಿಕ್ ಕೊಟ್ಟರೆ ಇನ್ನೊಂದೆಡೆ ಕ್ರಿಕೆಟಿಗರು ಕ್ಯಾಚ್ ಹಿಡಿದಾಗ ಮಾಡುವ ಸಂಭ್ರಮಾಚರಣೆ ಇನ್ನಷ್ಟು ಮನರಂಜನೆ ನೀಡುತ್ತದೆ. ಇದೀಗ ಐಪಿಎಲ್‍ನಲ್ಲಿ ಆಡುತ್ತಿರುವ ರಾಜಸ್ಥಾನ ತಂಡದ ಯುವ ಆಟಗಾರ ಆಲ್‍ರೌಂಡರ್ ರಿಯಾನ್ ಪರಾಗ್ ಕೋಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಕ್ಯಾಚ್ ಹಿಡಿದು ವಿಶಿಷ್ಟವಾಗಿ ಸಂಭ್ರಮಾಚರಣೆ ಮಾಡುವ ಮೂಲಕ ನೋಡುಗರಿಗೆ ಐಪಿಎಲ್‍ನ ಕಿಕ್ ಹೆಚ್ಚಿಸಿದ್ದಾರೆ.

    14ನೇ ಆವೃತ್ತಿಯ 18ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಪರಸ್ಪರ ಎದುರುಬದುರಾಗಿದ್ದವು. ಈ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ ಅವರ ಅದ್ಭುತ ಕ್ಯಾಚ್ ಒಂದನ್ನು ಹಿಡಿದ ರಿಯಾನ್ ಪರಾಗ್ ಸಹ ಆಟಗಾರ ರಾಹುಲ್ ತೆವಾಟಿಯರೊಂದಿಗೆ ವಿಶಿಷ್ಟ ಸಂಭ್ರಮಾಚರಣೆ ಮಾಡುವ ಮೂಲಕ ಎಲ್ಲರ ಮುಖದಲ್ಲೂ ಮಂದಹಾಸ ತರಿಸಿದ್ದಾರೆ.

    ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಕೋಲ್ಕತ್ತಾ ತಂಡ ವಿಕೆಟ್ ಕಳೆದುಕೊಂಡು ಸಾಗಿತ್ತು. ಆದರೂ ಕೂಡ ಬಿಗ್ ಹಿಟ್ಟರ್ ಪ್ಯಾಟ್ ಕಮಿನ್ಸ್ ಕಡೆಯಲ್ಲಿ ಸಿಡಿಯಬಹುದೆಂದು ಎಲ್ಲರು ಅಂದುಕೊಂಡಿದ್ದರು. ಆದರೆ ಕಡೆಯ ಓವರ್ ಎಸೆಯಲು ಬಂದ ಕ್ರಿಸ್ ಮೋರಿಸ್ ಅವರ ಎರಡನೇ ಎಸೆತದಲ್ಲಿ ಕೊಲ್ಕತ್ತಾ ತಂಡದ ಬ್ಯಾಟ್ಸ್ ಮ್ಯಾನ್ ಪ್ಯಾಟ್ ಕಮಿನ್ಸ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಅದರೆ ಬೌಂಡರಿ ಲೈನ್ ಬಳಿ ರಿಯಾನ್ ಪರಾಗ್ ಹಿಡಿದ ಅದ್ಭುತ ಕ್ಯಾಚ್‍ಗೆ ಕಮಿನ್ಸ್ ಔಟ್ ಅದರು. ಈ ಕ್ಯಾಚ್ ಹಿಡಿದ ಬಳಿಕ ಮೈದಾನದಲ್ಲಿ ಪರಾಗ್ ಸಹಆಟಗಾರ ತೆವಾಟಿಯರೊಂದಿಗೆ ಮೊಬೈಲ್‍ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಂತೆ ಬೌಂಡರಿ ಲೈನ್ ಬರಿ ಪೋಸ್ ನೀಡಿದರು. ಇದೀಗ ಈ ವೀಡಿಯೋ ವೈರಲ್ ಅಗತೊಡಗಿದೆ. ಅಭಿಮಾನಿಗಳು ಕೂಡ ಈ ಸಂಭ್ರಮಾಚರಣೆ ಕಂಡು ಫಿದಾ ಆಗಿದ್ದಾರೆ.

    ಪರಾಗ್ ಕಳೆದ ವರ್ಷ ದುಬೈನಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿ ರಾಜಸ್ಥಾನ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಆ ಬಳಿಕ ಅಸ್ಸಾಂ ಮೂಲದ ಬಿಹು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದ್ದರು.

    ಐಪಿಎಲ್‍ನಲ್ಲಿ ಕ್ರಿಕೆಟ್ ರಸದೌತಣದೊಂದಿಗೆ ಕ್ರಿಕೆಟಿಗರ ಸಂಭ್ರಮಾಚರಣೆ ಕೂಡ ಇದೀಗ ಬಾರಿ ಸುದ್ದಿ ಮಾಡುತ್ತಿದೆ. ಕಳೆದ ಸೀಸನ್‍ಗಳಲ್ಲಿ ಹಲವು ಆಟಗಾರರು ವಿವಿಧ ಬಗೆಯ ಸಂಭ್ರಮಾಚರಣೆ ಮಾಡುವ ಮೂಲಕ ಐಪಿಎಲ್‍ನ ಕಳೆ ಹೆಚ್ಚಿಸಿದ್ದರು.