ರಾತ್ರಿ 1 ಗಂಟೆ ಸುಮಾರಿಗೆ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಇಬ್ಬರು ಯುವಕರು ಬಿಇಎಲ್ ಕಡೆಯಿಂದ ಹೆಬ್ಬಾಳಕ್ಕೆ (Hebbal) ಬರುತ್ತಿದ್ದರು. ಒಬ್ಬ ಸೊಂಟಕ್ಕೆ ಟೂಲ್ಸ್ ಸಿಕ್ಕಿಸಿಕೊಂಡಿದ್ದ. ಔಟರ್ ರಿಂಗ್ ರೋಡ್ನ ದೇವಿನಗರ ಬಸ್ ನಿಲ್ದಾಣ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದು, ಸ್ಕೂಟಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಹೆಬ್ಬಾಳ ಪೊಲೀಸರು (Hebbal Police) ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ಮೃತ ಓರ್ವನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ. ಬಳಿಕ ಮೃತದೇಹವನ್ನು ಬ್ಯಾಪ್ಟಿಸ್ಟ್ ಆಸ್ಪತ್ರೆಗೆ (Baptist Hospital) ರವಾನಿಸಲಾಗಿದೆ.
ಚಾಕು ತೋರಿಸಿ ದರೋಡೆ ಮಾಡುತ್ತಿದ್ದ ಯುವಕರು ಎಂದು ಶಂಕೆ ವ್ಯಕ್ತವಾಗಿದ್ದು, ಸದ್ಯ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಇದನ್ನೂ ಓದಿ: ದಿನ ಭವಿಷ್ಯ: 17-10-2024
ಯಾದಗಿರಿ (Yadagiri) ಜಿಲ್ಲೆಯ ಸೈದಾಪುರದಿಂದ ಮಂತ್ರಾಲಯಕ್ಕೆ (Mantralaya) ಹೊರಟಿದ್ದ ಕ್ರೂಸರ್ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ 13 ಜನ ಪ್ರಯಾಣಿಸುತ್ತಿದ್ದರು. ರಾಯಚೂರು ತಾಲೂಕಿನ ಕೆರೆಬೂದೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿ ಹೊಡೆದು ರಸ್ತೆ ಪಕ್ಕಕ್ಕೆ ಉರುಳಿದೆ.
ಮಂತ್ರಾಲಯಕ್ಕೆ ತೆರಳುವಾಗ ಮಾರ್ಗಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದ್ದು, ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದ್ದು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ.
ಹುಬ್ಬಳ್ಳಿ: ಬೈಕ್ಗೆ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ನಡೆದಿದೆ.
ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅವಘಡ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
ಸಾವಿನ ಹೆದ್ದಾರಿಗೆ ಮತ್ತೆರಡು ಬಲಿಯಾಗಿದ್ದು, ಈ ಹೆದ್ದಾರಿಯಲ್ಲಿ ಪ್ರತಿದಿನವೂ ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕು. ಹೆದ್ದಾರಿ-1400 ಹಗಲೀಕರಣವಾಗಬೇಕು. ಕಾಮಗಾರಿಗೆ ಚಾಲನೆ ಸಿಕ್ಕಿ ಮೂರು ವರ್ಷ ಕಳೆದಿದ್ದರೂ, ಇದರಿಂದ ಇನ್ನೂ ಜನರಿಗೆ ಉಪಯೋಗವಾಗಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ದಿನೇ ದಿನೇ ಬಲಿ ಪಡೆದುಕೊಳ್ಳುತ್ತಿದೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್ಗೆ Y+ ಭದ್ರತೆ
ಬೆಂಗಳೂರು: ಬಾಲಕನ ತಲೆಯ ಮೇಲೆ ಟಾಟಾ ಏಸ್ ಹರಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಜಿ ಹಳ್ಳಿ (KG Halli) ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಆಟವಾಡುತ್ತಾ ಓಡುತ್ತಿದ್ದ ಬಾಲಕ ನಿಲ್ಲಿಸಿದ್ದ ಸ್ಕೂಟಿಗೆ ಅಕಸ್ಮಾತಾಗಿ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ. ಈ ವೇಳೆ ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್ ಬಾಲಕ ತಲೆಯ ಮೇಲೆ ಹರಿದಿದೆ, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದೆ. ಇದನ್ನೂ ಓದಿ: ಮಡಿಕೇರಿ ದಸರಾಕ್ಕೆ ಅದ್ದೂರಿ ತೆರೆ – ಮಂಜಿನ ನಗರಿಯಲ್ಲಿ ಧರೆಗಿಳಿದ ದೇವಲೋಕ!
ಏನಿದು ಘಟನೆ?
ಬಾಲಕ ತನ್ನ ಪಾಡಿಗೆ ಮನೆಯ ಎದುರುಗಡೆ ಓಡಾಡಿಕೊಂಡಿದ್ದ. ಯಾರನ್ನೂ ಕೂಗಿಕೊಂಡು ಓಡಿ ಹೋಗ್ತಿದ್ದ ಬಾಲಕನ ಕೈಗೆ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ತಾಗಿದೆ. ಈ ವೇಳೆ ಆಯತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಪಕ್ಕದಲ್ಲೇ ಬರುತ್ತಿದ್ದ ಟಾಟಾ ಏಸ್ ಬಾಲಕನ ತಲೆ ಮೇಲೆ ಹರಿದಿದೆ. ಸ್ಥಳದಲ್ಲೇ ಬಾಲಕ ಪ್ರಾಣ ಬಿಟ್ಟಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!
ರಾಯಚೂರು: ವಿಜಯದಶಮಿ (Vijayadashami) ದಿನ ತಮ್ಮ ತಾತನಿಗೆ ಬನ್ನಿ ಕೊಡಲು ಹೋದ ಮೊಮ್ಮಕ್ಕಳ ಬಾಳಲ್ಲಿ ದುರಂತ ನಡೆದಿದೆ. ರಾಯಚೂರು ನಗರದ (Raichur City) ಡಿಸಿ ಬಂಗಲೆ ಬಳಿ ಸ್ಕೂಟರ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಓರ್ವ ಯುವತಿ ಸಾವನ್ನಪ್ಪಿದ್ದಾಳೆ, ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾಳೆ.
ರಸ್ತೆ ಅಪಘಾತದಲ್ಲಿ (Road Accident 20 ವರ್ಷದ ಸಾಕ್ಷಿ ಸಾವನ್ನಪ್ಪಿದ್ದು, ಇನ್ನೋರ್ವ ಯುವತಿ ಸಂಜನಾಳಿಗೆ ಗಂಭೀರ ಗಾಯಗಳಾಗಿವೆ. ನಿನ್ನೆ (ಶನಿವಾರ) ರಾತ್ರಿ ತಾತನ ಮನೆಗೆ ಬನ್ನಿ ಕೊಡಲು ಸಂಜನಾ ಹಾಗೂ ಸಾಕ್ಷಿ ತೆರಳಿದ್ದರು. ಬನ್ನಿ ಕೊಟ್ಟು ವಾಪಸ್ ಬರುವ ವೇಳೆ ರಸ್ತೆ ಕ್ರಾಸ್ ಮಾಡುತ್ತಿದ್ದಾಗ ನಗರದ ಬಸವೇಶ್ವರ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಭಾಗಮತಿ ಎಕ್ಸ್ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ನಲ್ಲಿ ಹಿಂದೆ ಕುಳಿತಿದ್ದ ಸಾಕ್ಷಿ, ಕಾರಿನ ಮೇಲೆ ಬಿದ್ದು ಸಾವನ್ನಪ್ಪಿದ್ದಾಳೆ. ಸಂಜನಾಗೆ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಅಪಘಾತದ ಬಳಿಕ ಕಾರು ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ.
-ಕುಡಿದು ವಾಹನ ಚಲಾಯಿಸುವವರ ಲೈಸೆನ್ಸ್ ರದ್ದುಪಡಿಸಲು ಸಿಎಂ ಸೂಚನೆ
ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao) ಹೇಳಿದರು.
ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಪ್ರತಿ ವರ್ಷ 40 ಸಾವಿರ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರಾಸರಿ 10 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ. ಮುಂಬರುವ ವರ್ಷದಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಸಾರಿಗೆ ಇಲಾಖೆ, ಗೃಹ, ಒಳಾಡಳಿತ ಇಲಾಖೆಗಳ ಸಹಕಾರದೊಂದಿಗೆ ರೋಡ್ ಸುರಕ್ಷತೆ ನಿಧಿಯಡಿ ಯೋಜನೆಯನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಡುತ್ತಿದ್ದೇವೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬುಲೆನ್ಸ್ಗಳಲ್ಲಿ 26 ಅಡ್ವಾನ್ಸ್ಡ್ ಲೈಫ್ ಸಪೋರ್ಟ್ (Advanced Life Support) ತಂತ್ರಜ್ಞಾನವನ್ನು ಅಳವಡಿಸಲಾಗಿದೆ. 39 ಬೇಸಿಕ್ ಲೈಫ್ ಸಪೋರ್ಟ್ (Basic Life Support) ಅಂಬುಲೆನ್ಸ್ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಲಾಗಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಅಂಬುಲೆನ್ಸ್ಗಳನ್ನು ನೀಡಲಾಗಿದೆ ಎಂದರು.
ರಸ್ತೆ ಅಪಘಾತಗಳ ಸಂದರ್ಭದಲ್ಲಿ ಗಾಯಾಳುಗಳು ಸಾವಿಗೀಡಾಗುವುದನ್ನು ತಡೆಯಲು, ತುರ್ತು ಪರಿಸ್ಥಿತಿಯಲ್ಲಿ ಚಿಕಿತ್ಸೆಗೆ ನೆರವಾಗಲು “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ”ಯ ನೂತನ 65 ಆಂಬ್ಯುಲೆನ್ಸ್ಗಳನ್ನು ಸಾರ್ವಜನಿಕರ ಸೇವೆಗೆ ಲೋಕಾರ್ಪಣೆಗೊಳಿಸಲಾಗಿದೆ. ಸಂಪೂರ್ಣ ಉಚಿತ ಸೇವೆ ನೀಡುವ ಈ ಆಪತ್ಕಾಲಯಾನ ಸೇವೆಗಳ ವಿವರ ಇಲ್ಲಿದೆ.#HealthForAll… pic.twitter.com/ZlqSFygYp4
ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅಪಘಾತಗಳ ಪ್ರಕರಣಗಳಲ್ಲಿ ಸಾವುಗಳನ್ನು ತಡೆಯುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನ ಹಾಕಿಕೊಳ್ಳುತ್ತಿದೆ. ಆರೋಗ್ಯ ಇಲಾಖೆಯಿಂದ ಇಂದು 65 ಅಂಬುಲೆನ್ಸ್ಗಳನ್ನ ಜನಸೇವೆಗಾಗಿ ಮುಡಿಪಾಗಿಟ್ಟಿದ್ದೇವೆ. ರಾಜ್ಯದಾದ್ಯಂತ ಈ ಯೋಜನೆ ವಿಸ್ತರಿಸಲು ಬೇಕಾಗುವ ಹಣಕಾಸನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸರ್ಕಾರದ ಜೊತೆ ಸಾರ್ವಜನಿಕರು ಸಹಕರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳನ್ನ ಜನರು ಪಾಲಿಸಬೇಕು. ವೇಗವಾಗಿ ಚಲಿಸಿದರೆ ಅಪಘಾತ ಆಗಲಿದೆ ಎನ್ನುವುದು ಗೊತ್ತಿದ್ದರೂ ಕೆಲವರು ವೇಗವಾಗಿ ವಾಹನ ಚಲಾಯಿಸುತ್ತಾರೆ. ಇವನ್ನೆಲ್ಲ ಬಿಡಿ ಎಂದು ನಾಡಿನ ಜನರಿಗೆ ಕಿವಿಮಾತು ಹೇಳಿದರು. ಕುಡಿದು ವಾಹನ ಚಲಾಯಿಸುವವರು, ಅತಿ ವೇಗವಾಗಿ ಚಾಲನೆ ಮಾಡುವವರ ಲೈಸೆನ್ಸ್ ರದ್ದುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಿ ಎಂದು ಇದೇ ವೇಳೆ ಸಾರಿಗೆ ಸಚಿವರಿಗೆ ಸೂಚನೆ ನೀಡಿದರು.
ಇದೇ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಾತನಾಡಿ, ಈಗಾಗಲೇ ಯೋಜನೆಗೆ ರಸ್ತೆ ಸುರಕ್ಷತಾ ನಿಧಿಯಡಿ ನೆರವು ಒದಗಿಸಲಾಗಿದೆ. ಇನ್ನೂ ಹೆಚ್ಚಿನ ಅಂಬುಲೆನ್ಸ್ಗಳನ್ನ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡುವುದಾಗಿ ಘೋಷಿಸಿದರು. ರಸ್ತೆ ಸಂಚಾರದ ಅಪಘಾತಗಳಲ್ಲಿ ಗಾಯಾಳುಗಳು ಹಾಗೂ ಸಾವು ನೋವುಗಳನ್ನ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅಪಘಾತ ಪ್ರಕರಣಗಳಿಗಾಗಿಯೇ ಪ್ರತ್ಯೇಕ ಅಂಬುಲೆನ್ಸ್ಗಳನ್ನು ಆರೋಗ್ಯ ಇಲಾಖೆ ಒದಗಿಸಿರುವುದು ಅತ್ಯಂತ ಉತ್ತಮ ನಿರ್ಧಾರವಾಗಿದ್ದು, ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಅಂಬುಲೆನ್ಸ್ಗಳು ಹೇಗೆ ಕಾರ್ಯನಿರ್ವಹಿಸಲಿವೆ?
* ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಹತ್ತಿರದ ಆಸ್ಪತ್ರೆಗಳಲ್ಲಿ ಅಂಬುಲೆನ್ಸ್ಗಳು ತಂಗಲಿವೆ.
* 65 ಹಾಟ್ಸ್ಪಾಟ್ಗಳನ್ನ ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಅಂಬುಲೆನ್ಸ್ಗಳನ್ನು ನೀಡಲಾಗಿದೆ.
* ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ (ALS) ಅಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದೆ.
* ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಚಿಕಿತ್ಸೆ ಅಗತ್ಯವಾದಲ್ಲಿ ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್ನ್ನು ಅಂಬುಲೆನ್ಸ್ಗಳಿಗೆ ಡೆಪ್ಯೂಟ್ ಮಾಡಲಾಗುವುದು.
* ವೆಂಟೀಲೇಟರ್ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನ ಕರೆದೊಯ್ದು ಚಿಕಿತ್ಸೆ ಕೊಡಿಸುವ ಸೌಲಭ್ಯ ಒದಗಿಸಲಾಗಿದೆ.
ಕೋಲಾರ: ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಕೋಲಾರ (Kolar) ಜಿಲ್ಲೆಯ ಗಡಿ ಆಂಧ್ರಪ್ರದೇಶದ (Andrapradesh) ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು (Palamaner) ಬಳಿ ಈ ಅಪಘಾತ ಸಂಭವಿಸಿದ್ದು, ಬೆಂಗಳೂರು ಹಾಗೂ ಚಿತ್ತೂರು ರಾಷ್ಟೀಯ ಹೆದ್ದಾರಿಯ ಮೋಗಲಿ ಘಾಟ್ನಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಆಂಧ್ರ ಪೊಲೀಸರು ಭೇಟಿ ನೀಡಿದ್ದಾರೆ. ಸ್ಥಳೀಯರು ಮತ್ತು ಪೊಲೀಸರು ರಕ್ಷಣಾಕಾರ್ಯವನ್ನು ಕೈಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಕೇಜ್ರಿವಾಲ್ಗೆ ಜಾಮೀನು – 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ದೆಹಲಿ ಸಿಎಂ
ನೆಲಮಂಗಲ ಮೂಲಕ ತುಮಕೂರು ಕಡೆ ಸಾಗುವ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಟಿಪ್ಪರ್ ಲಾರಿ ಚಾಲಕನ ಅತೀ ವೇಗ ಅಪಘಾತಕ್ಕೆ ಕಾರಣವಾಗಿದ್ದು, ಲಾರಿ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಚಿಕ್ಕೋಡಿ: ವೇಗವಾಗಿ ಬಂದ ಸರ್ಕಾರಿ ಬಸ್ವೊಂದು (Government Bus) ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಹರಿದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ.
ಏನಿದು ಘಟನೆ?
ಸುನೀಲ್ ಬಂಡರಗರ್ ಎಂಬ ಬಾಲಕ ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದ. ಈ ವೇಳೆ ರಸ್ತೆ ದಾಟಲು ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ. ಇದೇ ಸಮಯಕ್ಕೆ ಅಥಣಿಯಿಂದ ಕಾರವಾರಕ್ಕೆ ಹೋಗುತ್ತಿದ್ದ ಸರ್ಕಾರಿ ಬಸ್ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಅಧಿಕೃತಗೊಳಿಸಿದ ಚುನಾವಣಾ ಆಯೋಗ
ದುಬೈಗೆ ತಾಯಿ, ಇಬ್ಬರು ಮಕ್ಕಳು ಹಾಗೂ ಅಳಿಯನೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಆ ಸಂದರ್ಭದಲ್ಲಿ ಹೈಮಾ ಪ್ರದೇಶದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳದಲ್ಲೇ ನಾಲ್ವರು ಸಜೀವ ದಹನಗೊಂಡಿದ್ದಾರೆ.
ಮೃತದೇಹಗಳನ್ನು ಭಾರತಕ್ಕೆ ತರಲು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತುಕತೆ ನಡೆಸುತ್ತಿದ್ದು, ವಿದೇಶಾಂಗ ಸಚಿವ ಎಸ್.ಜೈಶಂಕರ್ (S. Jaishankar) ಹಾಗೂ ಪ್ರಹ್ಲಾದ್ ಜೋಶಿಗೆ (Pralhad Joshi) ಮನವಿ ಸಲ್ಲಿಸಿದ್ದಾರೆ.ಇದನ್ನೂ ಓದಿ: ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ- ರೌಡಿಶೀಟರ್ ಕಾಲಿಗೆ ಪಿಎಸ್ಐ ಗುಂಡೇಟು