Tag: RoadBlock

  • ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಧಾರವಾಡ: ಧಾರವಾಡದಲ್ಲಿ (Dharawada) ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವು ಅವಾಂತರ ಸೃಷ್ಟಿಯಾಗಿದ್ದು, ಹುಬ್ಬಳ್ಳಿ (Hubballi) ಧಾರವಾಡ ಬೈಪಾಸ್ ರಸ್ತೆಯಲ್ಲಿ 24 ಗಂಟೆಯಾದರೂ ನೀರಿನ ಪ್ರಮಾಣ ಕಡಿಮೆಯಾಗಲಿಲ್ಲ.

    ರಸ್ತೆ ಮೇಲೆ ನೀರು ಹರಿದು ಬಂದ ಹಿನ್ನೆಲೆ ವಾಹನ ಸವಾರರು ಪರದಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ಹುಬ್ಬಳ್ಳಿ-ಧಾರವಾಡ ಯರಿಕೊಪ್ಪ ಗ್ರಾಮದ ಬಳಿಯ ಮನಸೂರ ಹಳ್ಳಕ್ಕೆ ಮಳೆಯಿಂದಾಗಿ ದೊಡ್ಡ ಪ್ರಮಾಣದಲ್ಲಿ ನೀರು ಬಂದಿದೆ. ಇದನ್ನೂ ಓದಿ: ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್

    ರಸ್ತೆ ಮೇಲೆಯೇ ನೀರು ಹರಿಯುತ್ತಿರುವ ಹಿನ್ನೆಲೆ, ರಾತ್ರಿ ಎಲ್ಲಾ ಬೈಪಾಸ್ ರಸ್ತೆ ಸ್ಥಗಿತಗೊಂಡಿತ್ತು. ಬೆಳಿಗ್ಗೆ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಲಾರಿಗಳು ಮಾತ್ರ ದಾಟಲು ಅವಕಾಶ ನೀಡಲಾಗಿದೆ. ಮತ್ತೆ ಮಳೆಯಾದರೆ ರಸ್ತೆ ಕಡಿತ ಆಗುವ ಸಾಧ್ಯತೆ ಇದೆ. ನಗರದ ಬಹುತೇಕ ನೀರು ಬೈಪಾಸ್ ರಸ್ತೆಯಿಂದ ಮನಸೂರ ಹಳ್ಳಕ್ಕೆ ಬರುತ್ತಿರುವುದರಿಂದ ರಸ್ತೆ ಸಂಪೂರ್ಣ ಜಲಾವೃತಗೊಂಡಿದೆ. ಇದನ್ನೂ ಓದಿ: ಟಾಟಾ ಅವರ ಅಂತ್ಯಕ್ರಿಯೆ ವೇಳೆ ಅಂತಿಮ ನಮನ ಸಲ್ಲಿಸಿದ ʻಗೋವಾʼ!

  • ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

    ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರೀ ಮಳೆ, ಹಲವೆಡೆ ರಸ್ತೆ ಸಂಚಾರ ಬಂದ್

    ಚಿಕ್ಕಬಳ್ಳಾಪುರ: ತಡರಾತ್ರಿ ಜಿಲ್ಲೆಯಾದ್ಯಾಂತ ಧಾರಕಾರ ಮಳೆಯಾಗಿದ್ದು (Heavy Rain), ಹಲವೆಡೆ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

    ಜಿಲ್ಲೆಯ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು ಭಾಗದಲ್ಲಿ ಅತಿ ಹೆಚ್ಚಿನ ಮಳೆಯಾಗಿದೆ. ಗುಡಿಬಂಡೆ ಅಮಾನಿ ಬೈರಸಾಗರ ಕೆರೆ ಅಪಾಯದ ಮಟ್ಟ ಮೀರಿ ಕೋಡಿ ಹರಿಯುತ್ತಿದೆ. ಇದನ್ನೂ ಓದಿ: ಮುರುಘಾ ಶ್ರೀಗೆ ಮತ್ತೆ ಸಂಕಷ್ಟ – ಮೈಸೂರಿನಲ್ಲಿ ಮತ್ತೊಂದು FIR ದಾಖಲು

    ಎಲ್ಲೆಲ್ಲಿ ಸಂಚಾರ ಬಂದ್?
    ಗುಡಿಬಂಡೆ-ಪೇರೇಸಂದ್ರ ಮಾರ್ಗ, ಗುಡಿಬಂಡೆ ಹಂಪಸಂದ್ರ-ಬಾಗೇಪಲ್ಲಿ ಮಾರ್ಗ, ಗುಡಿಬಂಡೆ-ಲಕ್ಕೇನಹಳ್ಳಿ ಮಾರ್ಗ, ರಾಮಪಟ್ಟಣ ನವಿಲುಗುರ್ಕಿ ಮಾರ್ಗ, ಗುಡಿಬಂಡೆ ಅಮಾನಿ ಭೈರಸಾಗರ ಮಾರ್ಗಗಳಲ್ಲಿ ರಸ್ತೆಯಲ್ಲೇ ನೀರು ಹರಿಯುತ್ತಿರುವುದರಿಂದ ಜಲದಿಗ್ಬಂಧನವಾಗಿದೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿರುವ ಮಾರ್ಗಗಳಲ್ಲೂ ಸಂಚಾರ ಕಷ್ಟಕರವಾಗಿದೆ. ಇದನ್ನೂ ಓದಿ: ಪ್ರಹ್ಲಾದ್‌ ಜೋಶಿ ಕಾರ್ಯವೈಖರಿ ಹೊಗಳಿದ ಕಾಂಗ್ರೆಸ್ ನಾಯಕ, ರಾಜಸ್ಥಾನ ಸಿಎಂ ಗೆಹ್ಲೋಟ್

    ಚಿಕ್ಕಬಳ್ಳಾಪುರ (Chikkaballapur) ಜಿಲ್ಲಾಕೇಂದ್ರಕ್ಕೆ ಬರಲು ಗೌರಿಬಿದನೂರು ಮಾರ್ಗ ಬಳಸಬೇಕಿದೆ. ಬಾಗೇಪಲ್ಲಿಯಲ್ಲೂ ಭರ್ಜರಿ ಮಳೆಯಾಗಿರುವುದರಿಂದ ಪಟ್ಟಣದ ಟಿಬಿ ಕ್ರಾಸ್ ಬಳಿ ಅಂಡರ್ ಪಾಸ್ ಜಲಾವೃತವಾಗಿ ವಾಹನ (Vehicle) ಸವಾರರು ಪರದಾಡುತ್ತಿದ್ದಾರೆ. ಇದರಿಂದ ಬಾಗೇಪಲ್ಲಿಗೆ ತೆರಳಲು ಎಲ್ಲೋಡು ಮಾರ್ಗ ಕಲ್ಪಿಸಲಾಗಿದೆ. ಕಾರೊಂದು ಜಲಾವೃತವಾಗಿ ಅಂಡರ್ ಪಾಸ್‌ನಲ್ಲೇ ಕೆಟ್ಟುನಿಂತಿದೆ. ಬಾಗೇಪಲ್ಲಿ-ಪುಟ್ಟಪರ್ತಿ ಮಾರ್ಗದಲ್ಲಿ ಕುಶಾವತಿ ಮೈದುಂಬಿ ಹರಿಯುತ್ತಿದ್ದು, ಪುಟ್ಟಪರ್ತಿ ಮಾರ್ಗದ ಸಂಚಾರ ಬಂದ್ ಆಗಿದೆ. ಗುಡಿಬಂಡೆ ತಾಲ್ಲೂಕು ನಿಲಗುಂಬ ಗ್ರಾಮ ಸೇರಿ ಹಲವೆಡೆ ಮನೆಗಳು ಕುಸಿದಿರುವ ಮಾಹಿತಿಯಿದೆ.

    Live Tv
    [brid partner=56869869 player=32851 video=960834 autoplay=true]