Tag: Roadmap

  • ಸಂಚಾರದ ವೇಳೆ ಉಗುಳಿದರೂ ಬೀಳುತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಸಂಚಾರದ ವೇಳೆ ಉಗುಳಿದರೂ ಬೀಳುತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

    covid guidelines

    ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ನೂತನ ಮಾರ್ಗಸೂಚಿಯನ್ನು ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಶಾಲೆಯ ತರಗತಿಯಲ್ಲಿ ಹಾಜರಾಗಿ ಪಾಠ ಕೇಳಿದ ಕೇಜ್ರಿವಾಲ್, ಭಗವಂತ್ ಮಾನ್

    covid

    ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಸಲಹೆ ಆದೇಶ ಹೊರಡಿಸಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಅಂತರ ಪಾಲನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಬೇಕು. ಒಂದು ವೇಳೆ ಉಗುಳುವುದು ಕಂಡರೆ ಸ್ಥಳೀಯ ಆಡಳಿತಾಧಿಕಾರಿಗಳು ದಂಡ ವಿಧಿಸುವಂತೆ ನಿಯಮ ಜಾರಿಗೊಳಿಸಬೇಕು ಎಂದು ಪಿ.ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

  • ಕೊಡಗಿನ ಮಾರ್ಗಸೂಚಿಯಲ್ಲಿ ಮಂಗಳವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಕೊಡಗಿನ ಮಾರ್ಗಸೂಚಿಯಲ್ಲಿ ಮಂಗಳವಾರ, ಶುಕ್ರವಾರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

    ಮಡಿಕೇರಿ: ರಾಜ್ಯದಲ್ಲಿ ಕೋವಿಡ್ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವುದಕ್ಕಾಗಿ ರಾಜ್ಯ ಸರ್ಕಾರ ಮೇ10 ರಿಂದ 24ರವರೆಗೆ ಲಾಕ್‍ಡೌನ್ ಘೋಷಿಸಿ ಮಾರ್ಗಸೂಚಿಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಆದೇಶಿಸಿತ್ತು. ಈ ಆದೇಶದಿಂದ ಜಿಲ್ಲೆಯ ಜನರಲ್ಲಿ ಕೊಂಚ ಗೊಂದಲ ಉಂಟಾಗಿತ್ತು. ಈ ನಿಟ್ಟಿನಲ್ಲಿ ಇದೀಗಾ ಜಿಲ್ಲಾಡಳಿತ ಜನ ಸಾಮಾನ್ಯರಿಗೆ ಗೊಂದಲ ಅಗಬರದು ಎಂದು ಕೊಡಗಿನಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಕಠಿಣ ನಿಯಮಾವಳಿಗಳೇ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

    ರಾಜ್ಯ ಸರ್ಕಾರದ ಆದೇಶದಂತೆ ರಾಜ್ಯ ವ್ಯಾಪಿ ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆಯಾದರೂ ಕೊಡಗು ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ವಸ್ತುಗಳ ಖರೀದಿಗೆ ಅವಕಾಶವಿದೆ. ಇತರ ದಿನಗಳಲ್ಲಿ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಹಾಲು ಮತ್ತು ಪತ್ರಿಕೆಗಳ ವಿತರಣೆಗೆ ಅವಕಾಶ ಕಲ್ಪಿಸಲಾಗಿದೆ.

    ಮಂಗಳವಾರ ಮತ್ತು ಶುಕ್ರವಾರ ಜನಜಂಗುಳಿಯಾಗದಂತೆ ಸಾರ್ವಜನಿಕರು ಸಹಕಾರ ನೀಡುವ ಮೂಲಕ ಮಾಸ್ಕ್ ಕಡ್ಡಾಯವಾಗಿ ಧರಿಸಿ ಅಂತರ ಕಾಯ್ದುಕೊಳ್ಳಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಸ್ಥಳೀಯವಾಗಿ ಇರುವ ಅಂಗಡಿಗಳಿಂದಲೇ ವಸ್ತುಗಳನ್ನು ಖರೀದಿ ಮಾಡಿ, ದೂರದ ಪ್ರದೇಶಕ್ಕೆ ಹೋಗಬೇಡಿ, ವಾಹನಗಳನ್ನು ಬಳಸಬೇಡಿ ಎಂದು ಸಲಹೆ ನೀಡಿದು ಕೊಡಗಿನ ಜನರ ಗೊಂದಲ ಕ್ಕೆ ಜಿಲ್ಲಾಡಳಿತ ತೇರೆ ಎಳೆದಿದೆ.

  • ಕೊರೊನಾ ಸ್ಫೋಟ – ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ಬಿಬಿಎಂಪಿಯಿಂದ ಹೊಸ ರೂಲ್ಸ್

    ಕೊರೊನಾ ಸ್ಫೋಟ – ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ಬಿಬಿಎಂಪಿಯಿಂದ ಹೊಸ ರೂಲ್ಸ್

    – 103 ಮಂದಿಗೆ ಕೊರೊನಾ
    – ಬಿಳೇಕಳ್ಳಿ ಅಪಾರ್ಟ್‍ಮೆಂಟ್ ನಿವಾಸಿಗಳಿಗೆ ಮಾತ್ರ ನಿಯಮ

    ಬೆಂಗಳೂರು: ಒಂದೇ ಅಪಾರ್ಟ್‍ಮೆಂಟ್‍ನಲ್ಲಿದ್ದ 103 ಮಂದಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಈಗ ಹೊಸ ನಿಯಮ ಜಾರಿ ಮಾಡಿದೆ.

    ಫೆ.6 ರಂದು 40 ಜನ ಬೊಮ್ಮನಹಳ್ಳಿ ಬಿಳೇಕಳ್ಳಿಯ ಖಾಸಗಿ ಅಪಾರ್ಟ್‍ಮೆಂಟ್‍ನಲ್ಲಿ ನಡೆದ ಪಾರ್ಟಿ ಮಾಡಿದ್ದರು. ಈ ಪಾರ್ಟಿಗೆ ಡೆಹ್ರಾಡೂನ್‍ನಿಂದ ಬಂದವರು ಭಾಗಿಯಾಗಿದ್ದರು.

    ಅಪಾರ್ಟ್‍ಮೆಂಟ್‍ನಲ್ಲಿ 435 ಫ್ಲ್ಯಾಟ್‍ಗಳಿವೆ. 1052 ಮಂದಿ ಟೆಸ್ಟ್ ಕೊರೋನಾ ಪರೀಕ್ಷೆ ಮಾಡಲಾಗಿದೆ. ಈವರೆಗೂ 103 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಹೊಸ ರೂಲ್ಸ್ ಮಾಡಿದೆ.

    ಅಪಾರ್ಟ್‍ಮೆಂಟ್‍ಗೆ ಹೊರಗಿನವರು ಪ್ರವೇಶ ಮಾಡುವಂತಿಲ್ಲ. ಹೋಂ ಕ್ವಾರಂಟೈನ್ ಅವಧಿ ಮುಗಿಸಿಯೇ ನಿವಾಸಿಗಳು ಹೊರಗೆ ಬರಬೇಕು. ಅಪಾರ್ಟ್‍ಮೆಂಟ್ ಒಳಗಡೆ ಯಾವುದೇ ಪಾರ್ಟಿಗಳು, ಸಭೆ ಮಾಡುವಂತಿಲ್ಲ. ತಂತ್ರಜ್ಞಾನ ಬಳಸಿ ಮೀಟಿಂಗ್ ಮಾಡಬೇಕೆಂದು ಸೂಚನೆ ನೀಡಲಾಗಿದೆ. ಸೊಂಕು ಹರಡಿದ ಅಪಾರ್ಟ್ ಮೆಂಟ್ ಕಾಮನ್ ಏರಿಯಾ ಬಳಕೆಗೂ ಹಲವು ನಿಬರ್ಂಧಗಳನ್ನು ಹೇರಲಾಗಿದೆ.

    50 ವರ್ಷ ಮೇಲ್ಪಟ್ಟವರು 96 ಜನರಿಗೆ ಕೊರೋನಾ ಪಾಸಿಟಿವ್ ಹಾಗೂ ಡಯಾಬಿಟಿಕ್ ಇರುವ 43 ಮಂದಿಗೂ ಬಂದಿದೆ ಎಂದು ಎಂದು ಬಿಬಿಎಂಪಿ ಆರೋಗ್ಯಾಧಿಕಾರಿ ವಿಜಯೇಂದ್ರ ಹೇಳಿದ್ದಾರೆ.

    ಜ್ವರ, ಕೆಮ್ಮು ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡುವಂತೆ ಅಪಾರ್ಟ್‍ಮೆಂಟ್‍ನಿಂದ ಕರೆ ಬಂದಿತ್ತು. ಕರೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿದಾಗ ಸೋಂಕು ಬಂದಿರುವುದು ದೃಢಪಟ್ಟಿದೆ. ಒಟ್ಟು 2 ಸಾವಿರ ಮಂದಿ ಅಪಾರ್ಟ್‍ಮೆಂಟ್‍ನಲ್ಲಿಲ್ಲಿದ್ದಾರೆ.

    ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಅಪಾರ್ಟ್‍ಮೆಂಟ್‍ನ ನಿವಾಸಿಗಳಿಗೆ ಆರೋಗ್ಯ ಸಿಬ್ಬಂದಿ ಸೋಮವಾರದಿಂದ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಈ ವೇಳೆ 103 ಮಂದಿಗೆ ಸೋಂಕು ಇರುವುದು ತಿಳಿದುಬಂದಿದೆ.

  • ಬಸ್ ಸಂಚಾರ ಆರಂಭ- ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಗದಗ ಸಾರಿಗೆ ಅಧಿಕಾರಿಗಳು

    ಬಸ್ ಸಂಚಾರ ಆರಂಭ- ಸರ್ಕಾರದ ಮಾರ್ಗಸೂಚಿಗಾಗಿ ಕಾಯುತ್ತಿರುವ ಗದಗ ಸಾರಿಗೆ ಅಧಿಕಾರಿಗಳು

    ಗದಗ: ಜಿಲ್ಲೆನಲ್ಲಿ ಬಸ್ ಸಂಚಾರಕ್ಕೆ ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸರ್ಕಾರದ ಮಾರ್ಗಸೂಚಿಗಾಗಿ ಸಾರಿಗೆ ಅಧಿಕಾರಿಗಳು ಕಾಯುತ್ತಿದ್ದಾರೆ.

    ಜಿಲ್ಲೆಯ ಒಟ್ಟು 7 ಘಟಕಗಳಿಂದ 136 ಬಸ್ ಬಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕಾಗಿ ವಿಭಾಗಿಯ ಘಟಕದಲ್ಲಿ ಸಿಬ್ಬಂದಿಗಳ ಸ್ಕ್ರೀನಿಂಗ್, ಬಸ್ ಗಳಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಇಲಾಖೆಯಲ್ಲಿ ಕೆಲಸ ಮಾಡುವ ಮೆಕ್ಯಾನಿಕ್, ಚಾಲಕ, ನಿರ್ವಾಹಕ ಹಾಗೂ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮಾಡಿದ್ದಾರೆ.

    ಬಸ್ ಆಸನಗಳಲ್ಲೂ ನಿಯಮಗಳ ಪಾಲನೆ ಕಡ್ಡಾಯವಾಗಿದೆ. ಅದಕ್ಕಾಗಿ ಬಸ್‍ನ ಆಸನಗಳಿಗೆ ಕೆಂಪು ಬಣ್ಣದಿಂದ ಮಾರ್ಕ್ ಮಾಡಲಾಗುತ್ತಿದೆ. ಮಾರ್ಕ್ ಮಾಡಿದ ಸ್ಥಳದಲ್ಲಿ ಕೂರದೆ ಅಂತರ ಕಾಯ್ದುಕೊಳ್ಳಲು ಒಂದು ಬಸ್‍ನಲ್ಲಿ 28 ಜನರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಇನ್ನು ಬಸ್ ನಿಲ್ದಾಣದಲ್ಲೂ ಒಂದೇ ಗೇಟ್ ಮೂಲಕ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ. 3 ಗೇಟ್ ಗಳ ಪೈಕಿ, 2 ಗೇಟ್ ಗೆ ಮುಳ್ಳಿನ ಬೇಲಿ ಹಾಕಿ ಮುಚ್ಚಲಾಗಿದೆ. ಒಂದೇ ಗೇಟ್ ತೆರೆಯಲಾಗಿದೆ. ಇದರಿಂದಾಗಿ ಪ್ರಯಾಣಿಕರ ಆರೋಗ್ಯ ತಪಾಸಣೆ ಅನುಕೂಲವಾಗತ್ತದೆ. ಸರ್ಕಾರದ ಮಾರ್ಗಸೂಚಿ ನೋಡಿಕೊಂಡು ಬಸ್ ಬಿಡುವುದಾಗಿ ಗದಗ ಸಾರಿಗೆ ಅಧಿಕಾರಿಗಳು ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.