Tag: Rock Line Venkatesh

  • ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ಶೀಘ್ರದಲ್ಲೇ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾ ಶುರು : ಯೋಗರಾಜ್ ಭಟ್ ನಿರ್ದೇಶಕ

    ದೇ ಮೊದಲ ಬಾರಿಗೆ ಇಬ್ಬರೂ ಡಾನ್ಸಿಂಗ್ ಸ್ಟಾರ್ಸ್ ಒಂದಾಗುತ್ತಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದಲ್ಲಿ ಸದ್ಯದಲ್ಲೇ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ನಟಿಸುತ್ತಿದ್ದು, ಈ ಚಿತ್ರವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಾಣ ಮಾಡಲಿದ್ದಾರೆ. ಇದನ್ನೂ ಓದಿ: ವೀಲ್‍ಚೇರ್ ರೋಮಿಯೋಗೆ ಮಯೂರಿ ಜೂಲಿಯಟ್ – ‘ಆ’ ಸವಾಲಿನ ಪಾತ್ರ ಒಪ್ಪಿಕೊಂಡಿದ್ದರ ಹಿಂದಿದೆ ಒಂದು ಕಥಾನಕ!

    ಈ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಯೋಗರಾಜ್ ಭಟ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಚಾಲನೆ ಸಿಗಲಿದೆ ಎಂದು ಕುತೂಹಲ ಮೂಡಿಸಿದ್ದಾರೆ. ಅಲ್ಲದೇ ಶಿವರಾಜ್ ಕುಮಾರ್ ಮನೆಯಲ್ಲಿ ಎಲ್ಲರೂ ಭೇಟಿಯಾದ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ನಂದಮೂರಿ ಬಾಲಕೃಷ್ಣ ಸಿನಿಮಾದಲ್ಲಿ `ಕಿಸ್’ ಬ್ಯೂಟಿ ಶ್ರೀಲೀಲಾ

    ಸದ್ಯ ಯೋಗರಾಜ್ ಭಟ್ ಗರಡಿ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಅ‍ಲ್ಲದೇ ಇವರ ನಿರ್ದೇಶನದ ಗಾಳಿಪಟ 2 ಸಿನಿಮಾ ರಿಲೀಸ್ ಆಗಬೇಕಿದೆ. ಶಿವರಾಜ್ ಕುಮಾರ್ ಕೂಡ ತಮ್ಮದೇ ನಿರ್ಮಾಣದ ವೇದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಎರಡೂ ಸಿನಿಮಾಗಳ ಕೆಲಸಗಳ ಮುಂದಿನ ತಿಂಗಳು ಮಧ್ಯಕ್ಕೆ ಒಂದು ಹಂತಕ್ಕೆ ಬರುವುದರಿಂದ ಜೂನ್ ನಲ್ಲಿ ಹೊಸ ಸಿನಿಮಾದ ಶೂಟಿಂಗ್ ಶುರುವಾಗಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಅಂತಿಂಥ ಹೆಣ್ಣು ಇವಳಲ್ಲಾ ಎಂದು ಪತ್ನಿಯನ್ನು ಹೊಗಳಿದ ನವರಸ ನಾಯಕ ಜಗ್ಗೇಶ್

    ಶಿವರಾಜ್ ಕುಮಾರ್ ಮತ್ತು ಪ್ರಭುದೇವ ಕಾಂಬಿನೇಷನ್ ಸಿನಿಮಾ ಇದಾಗಿದ್ದರಿಂದ ಹೊಸ ರೀತಿಯ ಕಥೆಗಳನ್ನೇ ಯೋಗರಾಜ್ ಭಟ್ ಬರೆದಿದ್ದಾರಂತೆ. ಇದೊಂದು ಸಾಹಸ ಪ್ರಧಾನ ಸಿನಿಮಾವಾಗಿದ್ದು, ನೃತ್ಯಕ್ಕೂ ಪ್ರಾಧಾನ್ಯತೆ ನೀಡಲಾಗಿದೆಯಂತೆ.

  • ಸಂಗೀತ ದಂತಕಥೆ ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ : ರಾಕ್‌ಲೈನ್ ವೆಂಕಟೇಶ್ ನಿರ್ಮಾಪಕ

    ಸಂಗೀತ ದಂತಕಥೆ ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ : ರಾಕ್‌ಲೈನ್ ವೆಂಕಟೇಶ್ ನಿರ್ಮಾಪಕ

    ಈ ಹಿಂದೆ ಬಾಲಿವುಡ್ ನ ಖ್ಯಾತ ನಟಿ ವಿದ್ಯಾ ಬಾಲನ್ ಅವರು ಸಂಗೀತ ದಂತಕಥೆ, ಭಾರತ ರತ್ನ ಎಂ.ಎಸ್.ಸುಬ್ಬಲಕ್ಷ್ಮಿ ಅವರ ಜೀವನವನ್ನು ಆಧರಿಸಿದ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ವಿಷಯವನ್ನು ಸ್ವತಃ ವಿದ್ಯಾ ಬಾಲನ್ ಅವರು ಖಚಿತ ಪಡಿಸಿದ್ದರು. ಈಗ ಕನ್ನಡ ಸಿನಿಮಾ ರಂಗದಿಂದ ಮತ್ತೊಂದು ಹೊಸ ಸುದ್ದಿ ಬಂದಿದೆ. ಕನ್ನಡದ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ಎಂ.ಎಸ್.ಸುಬ್ಬಲಕ್ಷ್ಮೀ ಬಯೋಪಿಕ್ ಅನ್ನು ಸಿನಿಮಾ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ : ಕನ್ನಡ ಚಿತ್ರರಂಗವನ್ನು ರಾಷ್ಟ್ರಮಟ್ಟಕ್ಕೆ ತಗೆದುಕೊಂಡು ಹೋದ ಮೊದಲಿಗರಾರು? ಹೀಗಿದೆ ನಟ ಜಗ್ಗೇಶ್ ಉತ್ತರ

    ವಿದ್ಯಾ ಬಾಲನ್ ನಟಿಸಬೇಕಿದ್ದ ಸಿನಿಮಾ ಮತ್ತು ರಾಕ್ ಲೈನ್ ವೆಂಕಟೇಶ್ ಮಾಡುತ್ತಿರುವ ಈ ಸಿನಿಮಾ ಒಂದೇನಾ? ಅನ್ನುವ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ. ಆದರೆ, ಎಲ್ಲವೂ ಒಂದು ಹಂತದಲ್ಲಿ ಬರುವವರೆಗೂ ಈ ಸಿನಿಮಾದ ಬಗ್ಗೆ ಏನೂ ಹೇಳಲಾರೆ ಎಂದಿದ್ದಾರೆ ರಾಕ್ ಲೈನ್ ವೆಂಕಟೇಶ್. ಆದರೆ, ಎಂ.ಎಸ್.ಸುಬ್ಬಲಕ್ಷ್ಮೀ ಅವರ ಕುರಿತಾಗಿ ಸಿನಿಮಾ ಮಾಡುತ್ತಿರುವ ಕುರಿತು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ :  ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ನಿರ್ದೇಶಕನ ವಿರುದ್ಧ ಕಿಡಿಕಾರಿದ ಸಿಖ್ ಸಂಘ

    ಸದ್ಯ ಸ್ಕ್ರಿಪ್ಟ್ ಹಂತದಲ್ಲೇ ಸಿನಿಮಾ ಇರುವುದರಿಂದ ಯಾವುದೇ ಮಾಹಿತಿ ಕೊಡಲಾರೆ ಅಂದಿದ್ದಾರಂತೆ ರಾಕ್ ಲೈನ್ ವೆಂಕಟೇಶ್. ‘ಕಥೆ ಓಕೆ ಆಗಿದೆ. ಚಿತ್ರಕಥೆ ರೆಡಿಯಾಗುತ್ತಿದೆ. ಸೂಕ್ತ ಕಲಾವಿದರ ಆಯ್ಕೆಯಾಗಬೇಕು. ಇದೆಲ್ಲವೂ ಆದ ನಂತರ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ : ನಟಿ ಮಂದನಾ ಕರೀಮಿಗೆ ಮೋಸ ಮಾಡಿದ್ರಾ ನಿರ್ದೇಶಕ ಅನುರಾಗ್ ಕಶ್ಯಪ್?

    ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದಕ್ಕೆ ತಕ್ಕಂತೇ ಕಲಾವಿದರು ಮತ್ತು ತಂತ್ರಜ್ಞರು ಈ ಸಿನಿಮಾಗಾಗಿ ಕೆಲಸ ಮಾಡಲಿದ್ದಾರೆ. ಹಲವು ಭಾಷೆಗಳಲ್ಲೂ ಈ ಸಿನಿಮಾ ಮೂಡಿ ಬರಲಿದೆ ಎನ್ನಲಾಗುತ್ತಿದೆ. ಸದ್ಯಕ್ಕೆ ಸಿನಿಮಾ ಸ್ಕ್ರಿಪ್ಟ್ ಹಂತದಲ್ಲಿ ಇರುವುದರಿಂದ ವಿದ್ಯಾ ಬಾಲನ್ ಮಾಡಬೇಕಿದ್ದ ಸಿನಿಮಾ ಇದೆನಾ? ಎನ್ನುವ ಪ್ರಶ್ನೆಗೆ ಉತ್ತರ ಸಿಗಲಿದೆ.

  • ಡಾ.ರಾಜ್ ಸಿನಿಮಾದ ಸಾಂಗ್ ಶಿವಣ್ಣನ ಸಿನಿಮಾಗೆ ಟೈಟಲ್

    ಡಾ.ರಾಜ್ ಸಿನಿಮಾದ ಸಾಂಗ್ ಶಿವಣ್ಣನ ಸಿನಿಮಾಗೆ ಟೈಟಲ್

    ಯೋಗರಾಜ್ ಭಟ್ ನಿರ್ದೇಶನದ ಚಿತ್ರದಲ್ಲಿ ಶಿವರಾಜ್ ಕುಮಾರ್ ಮತ್ತು ಪ್ರಭುದೇವ್ ಒಟ್ಟಾಗಿ ನಟಿಸಲಿದ್ದಾರೆ ಎನ್ನುವ ಸುದ್ದಿಯನ್ನು ನಿನ್ನೆಯಷ್ಟೇ ಪಬ್ಲಿಕ್ ಟಿವಿ ಡಿಜಿಟಲ್ ನಲ್ಲಿ ಓದಿದ್ದೀರಿ. ಈ ಸುದ್ದಿಯ ಮುಂದುವರೆದ ಅಪ್ ಡೇಟ್ ಅಂದರೆ, ಈ ಚಿತ್ರಕ್ಕೆ ವಿಭಿನ್ನವಾಗಿರುವ ಟೈಟಲ್ ಇಡಲಾಗಿದೆ. ಅದೂ ಡಾ.ರಾಜ್ ಕುಮಾರ್ ನಟನೆಯ ಸಿನಿಮಾದ ಸಾಲು ಎನ್ನುವುದು ವಿಶೇಷ. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಣ್ಣಾವ್ರ ನಟನೆಯ ‘ಸತ್ಯ ಹರಿಶ್ಚಂದ್ರ’ ಸಿನಿಮಾ ಇನ್ನೂ ನೂರು ವರ್ಷಕ್ಕೂ ಅದು ಎವರ್ ಗ್ರೀನ್ ಸಿನಿಮಾಗಳ ಸಾಲಿನಲ್ಲಿ ಇರಲಿದೆ. ಈ ಚಿತ್ರದ ಕುಲದಲ್ಲಿ ಕೀಳಾವುದೋ ಹುಚ್ಚಪ್ಪ ಹಾಡು ಫೇಮಸ್. ಈ ಹೊತ್ತಿಗೂ ಆರ್ಕೆಸ್ಟ್ರಾಗಳಲ್ಲಿ ಈ ಹಾಡು ಹೇಳಿಯೇ ಮುಕ್ತಾಯ ಮಾಡುತ್ತಾರೆ. ಈ ಹಾಡಿನ ಒಂದು ಸಾಲನ್ನು ಚಿತ್ರದ ಟೈಟಲ್ ಆಗಿ ಬಳಕೆಯಾಗುತ್ತಿದ್ದೆ. ಯೋಗರಾಜ್ ಭಟ್ ನಿರ್ದೇಶನದ ಹೊಸ ಚಿತ್ರಕ್ಕೆ ‘ಕುಲದಲ್ಲಿ ಕೀಳಾವುದೋ’ ಎಂದು ಟೈಟಲ್ ಇಡಲಾಗಿದೆ. ಇದನ್ನೂ ಓದಿ: ಮಗಳ ಮದುವೆಯ ಫೋಟೋ ಶೇರ್ ಮಾಡಿ ಭಾವುಕರಾದ ಆಲಿಯಾ ತಾಯಿ

    ಈ ಸಿನಿಮಾದ ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಮತ್ತು ಪ್ರಭುದೇವ ನಟಿಸುತ್ತಿದ್ದಾರೆ. ಕೆಲ ತಿಂಗಳ ಹಿಂದೆಷ್ಟೇ ಪ್ರಭುದೇವ್ ನಟನೆಯ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಪಾತ್ರ ಮಾಡಿದ್ದರು. ಇದೀಗ ಪುನೀತ್ ಅವರ ಸಹೋದರ ಶಿವರಾಜ್ ಕುಮಾರ್ ಜತೆ ಪ್ರಭದೇವ ನಟಿಸಲಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಅದ್ಧೂರಿಯ ತಾರಾಗಣವೇ ಸಿನಿಮಾದಲ್ಲಿ ಇರಲಿದೆಯಂತೆ. ರಾಕ್ ಲೈನ್ ವೆಂಕಟೇಶ್ ಅವರ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಭಾರೀ ಬಜೆಟ್ ನಲ್ಲಿಯೇ ತಯಾರು ಆಗಲಿದೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ ಬಿಡುಗಡೆಗೆ ರೆಡಿಯಾಗಿದೆ. ಗರಡಿ ಅರ್ಧಕರ್ಧ ಶೂಟಿಂಗ್ ಮುಗಿಸಿದೆ. ಈ ಎರಡೂ ಚಿತ್ರಗಳು ತೆರೆಗೆ ಬಂದ ಮೇಲೆ ಹೊಸ ಸಿನಿಮಾದ ಕೆಲಸ ಶುರುವಾಗಲಿದೆಯಂತೆ. ಈಗಾಗಲೇ ಪ್ಯಾನ್ ಇಂಡಿಯಾ ಪ್ರೇಕ್ಷಕರನ್ನು ಗಮನದಲ್ಲಿಟ್ಟುಕೊಂಡು ಯೋಗರಾಜ್ ಭಟ್ ಅವರು ಕಥೆ ಬರೆದಿದ್ದು. ಏಕಕಾಲಕ್ಕೆ ಹಲವು ಭಾಷೆಗಳಲ್ಲಿ ಈ ಚಿತ್ರವನ್ನು ಮಾಡಲಿದ್ದಾರಂತೆ ಭಟ್.