Tag: Rocking Star Yash

  • ದೇವರ ದಯೆಯಿಂದ ಜೀವನದಲ್ಲಿ ಮತ್ತೆ ಸಿಹಿ ಸುದ್ದಿ ಬಂದಿದೆ: ರಾಧಿಕಾ ಪಂಡಿತ್

    ದೇವರ ದಯೆಯಿಂದ ಜೀವನದಲ್ಲಿ ಮತ್ತೆ ಸಿಹಿ ಸುದ್ದಿ ಬಂದಿದೆ: ರಾಧಿಕಾ ಪಂಡಿತ್

    ಬೆಂಗಳೂರು: ದೇವರ ದಯೆಯಿಂದ ಜೀವನದಲ್ಲಿ ಮತ್ತೆ ಸಿಹಿ ಸುದ್ದಿ ಬಂದಿದೆ ನಟಿ ರಾಧಿಕಾ ಪಂಡಿತ್ ಹೇಳಿದ್ದಾರೆ.

    ಆದಿಲಕ್ಷ್ಮಿ ಪುರಾಣ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾಗ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ದೇವರ ದಯೆಯಿಂದ ಸಿಹಿ ಸುದ್ದಿ ಜೀವನದಲ್ಲಿ ಮತ್ತೆ ಬಂದಿದೆ. ಮತ್ತೊಂದು ಎಡಿಷನ್‍ಗೆ ಕಾಯುತ್ತಿದ್ದೇವೆ. ಎಲ್ಲದ್ದಕ್ಕೂ ಒಂದು ಹಣೆಬರಹ ಅಂತ ಒಂದು ಇರುತ್ತದೆ. ಆಯಿತಲ್ಲ ಇನ್ನೇನು ಎಂದು ಖುಷಿ ವ್ಯಕ್ತಪಡಿಸಿದರು.

    ಈ ವೇಳೆ ಯಾಕೆ ಐರಾ ಹೆಸರನ್ನೇ ಇರಿಸಿದ್ದು ಯಾಕೆ ಎಂದು ಕೇಳಿದ್ದಕ್ಕೆ, ಅಭಿಮಾನಿಗಳು ಅನೇಕ ಹೆಸರುಗಳನ್ನು ತಿಳಿಸಿದ್ದರು. ಆದರೆ ಐರಾ ಎನ್ನುವುದು ಐರಾವತಿ ಎಂಬ ದೇವಿಯ ಹೆಸರಾಗುತ್ತದೆ. ಇದು ನಮ್ಮ ಮಗಳಿಗೆ ಸರಿಯಾದ ಹೆಸರು ಅಂತ ಯೋಚನೆ ಮಾಡಿದ್ದೇವು ಎಂದು ಉತ್ತರಿಸಿದರು.

    ಮಗಳು ಹುಟ್ಟಿದಾಗ ಎಲ್ಲರೂ ಸಾಮಾನ್ಯವಾಗಿ ಮನೆಗೆ ಲಕ್ಷ್ಮಿ ಬಂದಳು ಅಂತ ಹೇಳುತ್ತಾರೆ. ಹೀಗಾಗಿ ಮಗಳಿಗೆ ಲಕ್ಷ್ಮಿಗೆ ಇರುವ ವಿವಿಧ ಹೆಸರಗಳನ್ನು ತಿಳಿಸಿದುಕೊಂಡು ಐರಾವತಿಯಲ್ಲಿರುವ ಐರಾವನ್ನು ಅಂತಿಮಗೊಳಿಸಿದ್ದೇವು. ಈ ಹೆಸರಿನ ಮೊದಲ ಹಾಗೂ ಕೊನೆಯ ಅಕ್ಷರ ಎ ಆಗಿದೆ. ಎ ಆರ್ ಮಧ್ಯೆ ವೈ ಹಾಗೂ ವೈ ಎ ಮಧ್ಯೆ ಆರ್ ಬರುತ್ತದೆ. ಅಷ್ಟೇ ಅಲ್ಲದೆ ಅಪ್ಪ ಯಶ್ (ಎವೈ), ರಾಧಿಕಾ ಅಮ್ಮ (ಆರ್ ಎ) ಅಂತ ಈ ಹೆಸರು ತಿಳಿಸುತ್ತದೆ ಎಂದರು.

    ನಾಮಕರಣಕ್ಕೆ ಹೆಚ್ಚು ಸಮಯ ತೆಗೆದುಕೊಂಡಿದ್ದು ಯಾಕೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ರಾಧಿಕಾ ಪಂಡಿತ್ ಅವರು, ಮಗಳು ಬೆಳೆದು ದೊಡ್ಡವಳಾದ ಮೇಲೆ ಏನು ಎಂತಹ ಹೆಸರು ಇಟ್ಟಿದ್ದೀರಿ ಅಂತ ಬೈಬಾರದು ಅದಕ್ಕೆ ಯೋಚಿಸಿ, ಮುದ್ದಾದ ಹೆಸರು ಇಟ್ಟಿದ್ದೇವೆ. ಈ ಹೆಸರಲ್ಲಿ ಅಪ್ಪ ಅಮ್ಮ ಇಬ್ಬರು ಇದ್ದೇವೆ. ಅಷ್ಟೇ ಅಲ್ಲ ಹೆಸರು ಶಾರ್ಟ್ ಆಂಡ್ ಸ್ವೀಟ್ ಆಗಿದೆ ಎಂದು ಹೇಳಿ ನಕ್ಕಿದರು.

    ರಾಧಿಕಾ ಪಂಡಿತ್ ಅವರು 4 ತಿಂಗಳ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಯಶ್ ಅವರೇ ಇಂದು ಸಂಜೆ ತಮ್ಮ ಮಗಳ ವಿಡಿಯೋ ಮೂಲಕ ತಂದೆಯಾಗುತ್ತಿರುವ ಖುಷಿಯನ್ನು ಹಂಚಿಕೊಂಡಿದ್ದಾರೆ.

    ಇದೇ 23ರಂದು ಯಶ್ ದಂಪತಿ ತಮ್ಮ ಮಗಳಿಗೆ ಐರಾ ಎಂದು ನಾಮಕರಣ ಮಾಡಿದ್ದಾರೆ. ಇದರ ಬೆನ್ನಲ್ಲೇ ಈಗ ತಮ್ಮ ಎರಡನೇ ಮಗುವಿನ ಆಗಮನದ ಬಗ್ಗೆ ಯಶ್ ಅವರು ಎಲ್ಲರಿಗೂ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸಿದ್ದಾರೆ.

    ವೈಜಿಎಫ್ ಚಾಪ್ಟರ್ 2, ಮತ್ತೊಂದು ಸಿಹಿ ಸುದ್ದಿ ನಿಮ್ಮ ಪ್ರೀತಿ ಹಾರೈಕೆ ನಮ್ಮ ಕುಟುಂಬದ ಮೇಲಿರಲಿ ಎಂದು ಬರೆದು ಮಗಳ ವಿಡಿಯೋ ಮೂಲಕ ಈ ಸಿಹಿ ಸುದ್ದಿಯನ್ನು ಯಶ್ ಹಂಚಿಕೊಂಡಿದ್ದಾರೆ.

    ಭಾನುವಾರ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‍ನಲ್ಲಿ ನಡೆದ ಅದ್ಧೂರಿ ನಾಮಕರಣ ಸಮಾರಂಭದಲ್ಲಿ ಯಶ್ ರಾಧಿಕಾ ದಂಪತಿ ತಮ್ಮ ಮುದ್ದಾದ ಮಗಳಿಗೆ `ಐರಾ’ ಎಂದು ಹೆಸರಿಟ್ಟಿದ್ದರು. ಯಶ್ ಹಾಗೂ ರಾಧಿಕಾ ಹೆಸರಿನ ಅಕ್ಷರಗಳನ್ನು ಜೋಡಿಸಿ ಈ ಹೆಸರಿಟ್ಟಿರುವುದು ಒಂದು ವಿಶೇಷವಾದರೆ ಇದರ ಅರ್ಥ ಇನ್ನೊಂದು ವಿಶೇಷತೆ ಹೊಂದಿದೆ. ಅರೇಬಿಕ್‍ನಲ್ಲಿ ‘ಐರಾ’ ಎಂದರೆ `ಕಣ್ಣು ತೆರೆಸುವವರು’ ಅಥವಾ `ಗೌರವಾನ್ವಿತರು’ ಎನ್ನುವ ಅರ್ಥ ಬರುತ್ತದೆ. ಕನ್ನಡದಲ್ಲಿ ‘ಭೂದೇವಿಯಲ್ಲಿ ಸನ್ನಿಹಿತಳಾದ ಲಕ್ಷ್ಮೀ’ ಎನ್ನುವ ಅರ್ಥ ಬರುತ್ತದೆ.

  • ಕೆಜಿಎಫ್-2 ಚಿತ್ರೀಕರಣ ಶುರು!

    ಕೆಜಿಎಫ್-2 ಚಿತ್ರೀಕರಣ ಶುರು!

    ನ್ನಡ ಚಿತ್ರಗಳ ಬಗ್ಗೆ ಪರಭಾಷೆಗಳಲ್ಲಿ ಎಂಥಾ ಅಸಡ್ಡೆಯಿತ್ತೋ ಆ ಜಾಗದಲ್ಲಿ ಬೆರಗೊಂದನ್ನು ಪ್ರತಿಷ್ಠಾಪಿಸುವಂಥಾ ಗೆಲುವು ಕಂಡಿರೋ ಚಿತ್ರ ಕೆಜಿಎಫ್. ಪ್ರಶಾಂತ್ ನೀಲ್ ಸಮರ್ಥ ಸಾರಥ್ಯ, ಪ್ರತಿಭಾವಂತ ತಂಡದ ಪರಿಶ್ರಮ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಅದ್ಭುತ ಅಭಿನಯವೂ ಸೇರಿದಂದಂತೆ ಒಂದಕ್ಕೊಂದು ಪೂರಕವಾಗಿದ್ದ ಕೆಜಿಎಫ್ ಬರೆದಿರೋದು ಸಾರ್ವಕಾಲಿಕ ದಾಖಲೆ. ಇಂಥಾ ಚಿತ್ರದ ಚಾಪ್ಟರ್ 2 ಶುರುವಾಗುತ್ತದೆಯೆಂದರೆ ಅದರತ್ತಲೂ ತೀವ್ರವಾದ ಕುತೂಹಲ ಹುಟ್ಟೋದು ಸಹಜವೇ.

    ಕೆಜಿಎಫ್ ಚಾಪ್ಟರ್ 2 ಬಗ್ಗೆಯೂ ಕೂಡಾ ಕನ್ನಡವೂ ಸೇರಿದಂತೆ ನಾನಾ ಭಾಷಾ ಪ್ರೇಕ್ಷಕರಲ್ಲಿ ಅಂಥಾದ್ದೇ ಕುತೂಹಲ ಹುಟ್ಟಿಕೊಂಡಿದೆ. ಕೆಜಿಎಫ್ ಸೃಷ್ಟಿಸಿದ್ದ ಹವಾದ ಬಿಸಿಯಲ್ಲಿಯೇ ಇಡೀ ಟೀಮು ಎರಡನೇ ಭಾಗಕ್ಕಾಗಿ ಸಜ್ಜುಗೊಂಡಿತ್ತು. ಆ ಹೊತ್ತಿಗಾಗಲೇ ಚಿತ್ರೀಕರಣ ಯಾವಾಗ ಶುರುವಾಗುತ್ತದೆ ಎಂಬ ಕುತೂಹಲ ಕೂಡಾ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಆದರೆ ಇತ್ತೀಚೆಗೆ ಆರಂಭವಾಗಲಿದ್ದ ಕ್ಷಣವೊಂದು ಕಾರಣಾಂತರಗಳಿಂದ ಮಿಸ್ ಆಗಿದ್ದರಿಂದ ಎಲ್ಲರಿಗೂ ನಿರಾಸೆಯಾಗಿದ್ದದ್ದು ನಿಜ. ಆದರೆ ಇದೀಗ ಕೆಜಿಎಫ್ ಚಾಪ್ಟರ್ 2 ಚಿತ್ರೀಕರಣಕ್ಕೆ ವಿಧ್ಯುಕ್ತ ಚಾಲನೆ ಸಿಕ್ಕಿದೆ.

    ಪ್ರಶಾಂತ್ ನೀಲ್ ಹಾಗೂ ಛಾಯಾಗ್ರಾಹಕ ಭುವನ್ ಗೌಡ ಬೆಂಗಳೂರಿನಲ್ಲಿ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕವೇ ಒಂದಷ್ಟು ಸಮುಯದಿಂದ ಕೆಜಿಎಫ್ ಅಲೆಯಲ್ಲಿಯೇ ಮಿಂದೇಳುತ್ತಾ ಮಗಳು ಹುಟ್ಟಿದ ಸಂಭ್ರಮವನ್ನು ಆಸ್ವಾದಿಸಿದ್ದ ರಾಕಿ ಭಾಯ್ ಕೂಡಾ ಮತ್ತೆ ಚಿತ್ರೀಕರಣದ ಪೆವಿಲಿಯನ್ನಿಗೆ ಮರಳಿದ್ದಾರೆ. ಇಡೀ ತಂಡ ಕೆಲ ತಿಂಗಳಿಂದ ದೂರವಿದ್ದ ಸೆಟ್ಟಿನಲ್ಲಿ ಮತ್ತೆ ಮುಖಾಮುಖಿಯಾಗಿ ಸಂಭ್ರಮಿಸಿದೆ.

    ಕಳೆದ ಬಾರಿ ಕಥೆಯೆಂಬುದೇ ಸಮಯ ಕೇಳುವಂತಿದ್ದುದರಿಂದ ಚಿತ್ರೀಕರಣ ಎರಡು ವರ್ಷಗಳ ಕಾಲ ಮುಂದುವರೆದಿತ್ತು. ಕೆಜಿಎಫ್ ನೋಡಿದ ಪ್ರತಿಯೊಬ್ಬರಿಗೂ ಅಷ್ಟು ಸಮಯ ತೆಗೆದುಕೊಂಡಿದ್ದದ್ದೇಕೆ ಎಂಬುದೂ ತಿಳಿದಿತ್ತು. ಆದರೆ ಈ ಬಾರಿ ಮಾತ್ರ ಪ್ರೇಕ್ಷಕರ ನಿರೀಕ್ಷೆಯನ್ನೂ ಮೀರಿ ಆದಷ್ಟು ಬೇಗನೆ ಚಿತ್ರೀಕರಣ ಮುಗಿಸಲು ಪ್ರಶಾಂತ್ ನೀಲ್ ನೀಲನಕ್ಷೆ ಸಿದ್ಧಪಡಿಸಿಕೊಂಡಿದ್ದಾರೆ.

    ಇದೀಗ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆಯಾದರೂ ಸದ್ಯದಲ್ಲಿಯೇ ಚಿತ್ರತಂಡ ಕರಾವಳಿಯ ಸುಂದರ ತಾಣಗಳತ್ತ ಹೊರಳಿಕೊಳ್ಳಲಿದೆ. ಇದೆಲ್ಲ ಏನೇ ಇದ್ದರೂ ಕೆಜಿಎಫ್ ಚಾಪ್ಟರ್ 2 ಆರಂಭವಾಗಿರೋದೇ ಪ್ರೇಕ್ಷಕರ ಪಾಲಿಗೆ ಶುಭ ಸಮಾಚಾರ.

  • ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

    ಕೆಜಿಎಫ್‍ನಲ್ಲಿ ಪತ್ನಿ ಪಾತ್ರವನ್ನು ಹೇಳಿ ಧನ್ಯವಾದ ಹೇಳಿದ ಅನಂತ್ ನಾಗ್!

    ಬೆಂಗಳೂರು: ಕೆಜಿಎಫ್ ಸಿನಿಮಾದ ಯಶಸ್ಸು ನನ್ನ ಪತ್ನಿ ಗಾಯತ್ರಿ ಅವರಿಗೂ ಸಲ್ಲುತ್ತದೆ. ಅವರಿಗೆ ನನ್ನ ವಿಶೇಷ ಧನ್ಯವಾದಗಳು ಎಂದು ಹಿರಿಯ ನಟ ಅನಂತ್ ನಾಗ್ ಹೇಳಿದ್ದಾರೆ.

    ನಗರದಲ್ಲಿ ನಡೆದ ಕೆಜಿಎಫ್ ಚಿತ್ರತಂಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅನಂತ್ ನಾಗ್ ಅವರು, ಕೆಜಿಎಫ್ ಸಿನಿಮಾದ ಡಬ್ಬಿಂಗ್ ಪೂರ್ಣಗೊಳಿಸಿ ನಾನು ವಿದೇಶಕ್ಕೆ ಹೋಗಿದ್ದೆ. ಇತ್ತ ಚಿತ್ರತಂಡ ನನ್ನ ಪಾತ್ರಕ್ಕೆ ಹಿಂದಿ ಡಬ್ಬಿಂಗ್ ನಡೆಸುತ್ತಿದ್ದರು. ನಾನು ವಿದೇಶದಿಂದ ಮರಳಿದ ಬಂದಾಗ ಯಶ್ ಹಾಗೂ ನಿರ್ದೇಶಕರು ನನ್ನ ಬಳಿಗೆ ಬಂದು, ನಿಮ್ಮ ಪಾತ್ರಕ್ಕೆ ಯಾರೋಬ್ಬರ ಧ್ವನಿ ಸರಿಯಾಗುತ್ತಿಲ್ಲ. ನೀವೇ ಹಿಂದಿ ಡಬ್ಬಿಂಗ್ ಮಾಡಬೇಕು ಅಂತ ಕೇಳಿಕೊಂಡರು. ಆದರೆ ನಾನು ಹಿಂದಿ ಮಾತನಾಡದೇ ಎಷ್ಟೋ ದಿನಗಳೇ ಕಳೆದು ಹೋಗಿತ್ತು. ಆಗ ನನಗೆ ಬೆಂಬಲ ನೀಡಿದ್ದು ನನ್ನ ಪತ್ನಿ ಗಾಯತ್ರಿ ಎಂದು ಅನಂತ್‍ನಾಗ್ ತಿಳಿಸಿದರು. ಇದನ್ನು ಓದಿ: ಈ ಸಕ್ಸಸ್ ನಮ್ಮೆಲ್ಲರ ಎದೆಯಲ್ಲಿದೆ, ಆ ಎದೆಯಲ್ಲಿ ನೀವು ಇದ್ದೀರಿ: ಯಶ್

    ಹಿಂದಿ ಡಬ್ಬಿಂಗ್ ವೇಳೆ ರಾಧಿಕಾ ಅವರಿಗೆ ಹೆಣ್ಣು ಮಗುವಾಗಿತ್ತು. ಬಾಣಂತಿ ವಿಶ್ರಾಂತಿಯ ಪಡೆಯಬೇಕಿತ್ತು. ಇತ್ತ ನನಗೆ ಕೊಂಕಣಿ ಭಾಷೆಯ ಶೈಲಿಯಲ್ಲಿಯೇ ಹಿಂದಿ ಮಾತನಾಡಿ ಬಿಡ್ತೀನಿ ಎನ್ನುವ ಭಯವಿತ್ತು. ಈ ವೇಳೆ ಉತ್ತರ ಪ್ರದೇಶ, ಪಂಜಾಬ್, ಮುಂಬೈನಲ್ಲಿ ಬೆಳೆದಿದ್ದ ಗಾಯತ್ರಿ ನನಗೆ ಹಿಂದಿ ಡೈಲಾಗ್‍ಗಳನ್ನು ಹೇಳಲು ಮುಂದಾದಳು. ಡಬ್ಬಿಂಗ್ ದಿನ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಕುಳಿತು ಹಿಂದಿ ಉಚ್ಛಾರಣೆ ತಪ್ಪಾಗದಂತೆ ಎಚ್ಚರವಹಿಸಿದಳು. ಆಕೆಯ ಸಹಾಯದಿಂದ ಹಿಂದಿ ಡಬ್ಬಿಂಗ್ ಮುಗಿಯಿತು. ಇದರಿಂದಾಗಿ ನಾನು ಗಾಯತ್ರಿ ಅವರಿಗೂ ಕೂಡ ವಿಶೇಷ ಧನ್ಯವಾದ ಹೇಳುತ್ತೇನೆ. ಈ ಚಿತ್ರದ ಯಶಸ್ಸಿಗೆ ಅವರ ಪಾತ್ರವೂ ಪ್ರಮುಖವಾಗಿದೆ ಎಂದು ಅನಂತ್ ನಾಗ್ ಹೇಳಿದರು.

    ಯಶ್ ಬಗ್ಗೆ ಹೊಗಳಿಕೆ:
    ರಾಕಿಂಗ್ ಸ್ಟಾರ್ ಯಶ್ 10 ವರ್ಷಗಳ ಹಿಂದೆ ‘ಪ್ರೀತಿ ಇಲ್ಲದೆ ಮೇಲೆ’ ಸಿನಿಮಾದಲ್ಲಿ ನನ್ನ ಮಗನ ಪಾತ್ರದಲ್ಲಿ ನಟಿಸಿದ್ದ. ಆಗಿನ್ನು ಯಶ್ ಹಾಲುಗೆನ್ನೆಯ ಹುಡುಗ. ಅಲ್ಲಿಂದ ಆತನ ಜೊತೆಗೆ ಉತ್ತಮ ಒಡನಾಟ ಆರಂಭವಾಯಿತು. ಯಶ್ ಚಿತ್ರೀಕರಣದ ವೇಳೆ ಕುತೂಹಲ ಮೂಡಿಸುವ ಪ್ರಶ್ನೆಗಳನ್ನು ಕೇಳುತ್ತಿದ್ದ. ಗೂಗ್ಲಿ ಸಿನಿಮಾ ಸೇರಿದಂತೆ ಒಟ್ಟು ನಾಲ್ಕು ಸಿನಿಮಾಗಳಲ್ಲಿ ಯಶ್ ಜೊತೆಗೆ ನಟಿಸಿದ್ದೇನೆ ಎಂದು ತಿಳಿಸಿದರು.

    ಕೆಜಿಎಫ್ ಸಿನಿಮಾ ಭಾರತ ಹಾಗೂ ವಿದೇಶಿ ಭಾಷೆಗಳಲ್ಲಿ ತೆರೆ ಕಂಡು, ಯಶಸ್ವಿಯಾಗಿದೆ. ಯಶ್ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಿದ್ದಾನೆ. ನಿರ್ದೇಶಕ ವಿಜಯ್ ಹಾಗೂ ಚಿತ್ರತಂಡದ ಪ್ರತಿಯೊಬ್ಬರಿಗೂ ಸಿನಿಮಾದ ಯಶಸ್ಸು ಸಲ್ಲುತ್ತವೆ ಎಂದರು.

    ಡಬ್ಬಿಂಗ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅನಂತ್‍ನಾಗ್ ಅವರು, ಪರಭಾಷೆ ಚಿತ್ರಗಳನ್ನು ಡಬ್ಬಿಂಗ್ ಮಾಡಬಾರದು ಎನ್ನುವ ವಿಚಾರವಿತ್ತು. ಆದರೆ ಈಗ ಕೆಜಿಎಫ್ ಚಿತ್ರ ಬೇರೆ ಭಾಷೆಗಳಲ್ಲಿ ಹೋದ ಮೇಲೆ ಅದರ ದೃಷ್ಟಿಕೋನ ಬದಲಾಗಿದೆ. ಇಂತಹ ಅನೇಕ ಚಿತ್ರಗಳು ಸ್ಯಾಂಡಲ್‍ವುಡ್‍ನಿಂದ ತೆರೆ ಕಾಣಬೇಕು ಅಂತ ಜನ ಬಯಸುತ್ತಿದ್ದಾರೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!

    ಮಂಡ್ಯದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ನೆನೆದು ಕಣ್ಣೀರಾದ ಅಭಿಮಾನಿಗಳು!

    ಮಂಡ್ಯ: ಸಕ್ಕರೆ ನಾಡು ಮಂಡ್ಯದ ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ರೆಬೆಲ್ ಸ್ಟಾರ್ ಅಂಬರೀಶ್ ಅವರನ್ನು ನೆನೆದು ಸ್ಯಾಂಡಲ್‍ವುಡ್ ಹಿರಿಯ ನಟ, ನಟಿಯರು, ನಿರ್ದೇಶಕರು, ಕಲಾವಿದರು ಸೇರಿದಂತೆ ಅಭಿಮಾನಿಗಳು ಕಣ್ಣೀರಾದರು.

    ಅಂಬರೀಶ್ ಅಭಿಮಾನಿಗಳ ಬಳಗವು ಅಂಬಿ ಸಾರ್ಥಕ ನುಡಿನಮನ ಹಾಗೂ ಕನಗನಮರಡಿ ಬಸ್ ದುರಂತದಲ್ಲಿ ಮಡಿದವವರ ಕುಟುಂಬಗಳಿಗೆ ಪರಿಹಾರ ವಿತರಣಾ ಕಾರ್ಯಕ್ರಮವು ವಿಶ್ವೇಶ್ವರಯ್ಯ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆಸಿತು. ಈ ಕಾರ್ಯಕ್ರಮದಲ್ಲಿ ಅಂಬರೀಶ್ ಪತ್ನಿ ಸುಮಲತಾ, ಪುತ್ರ ಅಭಿಷೇಕ್, ನಟ ಶಿವರಾಜ್‍ಕುಮಾರ್, ರಾಕಿಂಗ್ ಸ್ಟಾರ್ ಯಶ್, ನಿರ್ದೇಶಕ ಯೋಗರಾಜ್ ಭಟ್, ನಟ ಜಗ್ಗೇಶ್, ಸಾಧುಕೋಕಿಲಾ, ನಿರ್ಮಾಪಕ ರಾಕಲೈನ್ ವೆಂಕಟೇಶ್ ಸೇರಿದಂತೆ ಅನೇಕರು ಭಾಗಿಯಾಗಿ, ಅಂಬರೀಶ್ ಅವರನ್ನು ಸ್ಮರಿಸಿಕೊಂಡರು.

    ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬಹುತೇಕರ ಭಾಷಣ ಕೇಳಿ ಸುಮಲತಾ ಅಂಬರೀಶ್ ಅವರು ಭಾವುಕರಾಗಿ ಕಣ್ಣೀರು ಹಾಕಿದರು. ಬಳಿಕ ವೇದಿಕೆಗೆ ಆಗಮಿಸಿದ ಅವರು, ಕನಗನಮರಡಿ ಬಸ್ ದುರಂತದಲ್ಲಿ ಮಡಿದವರ 30 ಜನರ ಕುಟುಂಬಸ್ಥರಿಗೆ ಪರಿಹಾರ ನೀಡಿದರು. ಅದೇ ದಿನ ಅಂಬರೀಶ್ ಕೂಡ ಇಹಲೋಕ ತ್ಯಜಿಸಿದ್ದರು. ಎಲ್ಲವನ್ನೂ ನೆನೆದ ಸುಮಲತಾ  ಕಣ್ಣಲ್ಲಿ ನೀರು ತುಂಬಿ ಬಂತು.

    ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ಅಂಬರೀಶ್ ಅಣ್ಣನ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಮಂಡ್ಯ ಇಂಡಿಯಾಗೆ ಗೊತ್ತು ಅಂತಾರೆ. ಅದು ಅಂಬರೀಶ್ ಅಣ್ಣನ ಸ್ವತ್ತು. ಯಾರೇ ಬಂದ್ರು ಅದೇ ಗತ್ತು ಎಂದರು. ಬಳಿಕ ವೇದಿಕೆಯ ಮೇಲೆ ಅಭಿಷೇಕ್ ಅವರನ್ನು ತಬ್ಬಿಕೊಂಡು ಸಾಂತ್ವಾನ ಹೇಳಿದರು.

    ಅಂಬರೀಶ್ ಅಧಿಕಾರಕ್ಕಾಗಿ, ಹಣಕ್ಕಾಗಿ ಎಂದೂ ಆಸೆ ಪಟ್ಟವರಲ್ಲ. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಸರಳ ಜೀವಿ, ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಿದ್ದ ಅವರು ಒಂದು ಗತ್ತು ಹೊಂದಿದ್ದರು ಎಂದು ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್.ರಂಗನಾಥ್ ಹೇಳಿ, ಅಂಬಿ ಜೊತೆಗಿನ ಕ್ಷಣಗಳನ್ನು ಮೆಲುಕು ಹಾಕಿದರು.

    ಅಂಬರೀಶ್ ಅವರನ್ನು ಕರ್ಣನಿಗೆ ಹೋಲಿಸಿದ ಹಿರಿಯ ನಟ ದೊಡ್ಡಣ್ಣ ಅವರು, ಕಲಾವಿದರ ಸಂಘದ ಕಟ್ಟಡ ನಿರ್ಮಾಣಕ್ಕೆ ಅಂಬರೀಶ್ ಹೋರಾಡಿದ್ದನ್ನು ನೆನೆಪಿಸಿಕೊಂಡು ಕಣ್ಣೀರಿಟ್ಟರು. ಅಂಬರೀಶ್ ಅವರು ಕನಗನಮರಡಿ ಬಸ್ ದುರಂತ ಕೇಳಿ ಮಗುವಿನಂತೆ ತೊಳಲಾಡಿದರು. ನಾನು ಘಟನಾ ಸ್ಥಳಕ್ಕೆ ಹೋಗಬೇಕು ಎಂದು ಪಟ್ಟು ಹಿಡಿದಿದ್ದರು. ಆದರೆ ವಿಧಿ ಅವರನ್ನು ಅವತ್ತೇ ರಾತ್ರಿ ಕರೆದುಕೊಂಡುಬಿಟ್ಟಿತು ಎಂದು ಸ್ಮರಿಸಿದರು. ಈ ವೇಳೆ ಸ್ಟೇಡಿಯಂನಲ್ಲಿ ಮೌನ ಮನೆಮಾಡಿ, ಅಂಬಿ ಕುಟುಂಬಸ್ಥರು, ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹಾಗೂ ಅಭಿಮಾನಿಗಳು ಭಾವುಕರಾದರು.

    ನಿರ್ದೇಶಕ ಯೋಗರಾಜ್ ಭಟ್ ಮಾತನಾಡಿ, ಬೆಂಗಳೂರು ಮೊಬೈಲ್ ಇದ್ದಂತೆ, ಮಂಡ್ಯ ಚಾರ್ಜರ್ ಇದ್ದಂತೆ ಎಂದು ರೆಬೆಲ್ ಸ್ಟಾರ್ ಬಗ್ಗೆ ತಮ್ಮದೇ ಶೈಲಿಯಲ್ಲಿ ಡೈಲಾಗ್ ಹೊಡೆದರು. ರಾಜಾಹುಲಿ ಸಿನಿಮಾದ ‘ಗೊಂಬೆ ಆಡ್ಸೋನು’ ಹಾಡಿ ಶೂಟಿಂಗ್ ಮಾಡುವಾಗ ಮಂಡ್ಯದವರಿಗೊಬ್ಬರಿಗೆ ಕೈಮ ಉಂಡೆ, ಮುದ್ದೆ ತರಲು ಅಂಬರೀಶ್ ಹೇಳಿದ್ದರು. ಆದರೆ ಒಬ್ಬರಲ್ಲ ಇಬ್ಬರಲ್ಲ ಅನೇಕರು ಅಂಬರೀಶ್ ಅವರು ಶೂಟಿಂಗ್‍ಗೆ ಬಂದಿದ್ದನ್ನು ಕೇಳಿ ಊಟ ತಂದಿದ್ದರು ಅಂತ ನೆನಪಿಸಿಕೊಂಡರು.

    ರಕ್ತಕಣ್ಣಿರು ಚಿತ್ರದ ‘ವೇದಾಂತಗಳು, ಸಿದ್ಧಾಂತಗಳು ಯಾರೋ ಬರೆದಿಟ್ಟ ಕಟ್ಟು ಕಥೆ. ಜೀವನದ ರಸ ಸವಿಯೋಕೆ ನಾನೇ ನಿಮಗೆ ದಂತ ಕಥೆ ಎಂಬ ಹಾಡಿನ ಮೂಲಕ ಅಂಬಿ ಏನು ಎಂಬುದನ್ನು ನಟ, ನಿದೇರ್ಶಕ, ಸಂಗೀತ ನಿರ್ದೇಶಕ ಸಾಧುಕೋಕಿಲಾ ಕಟ್ಟಿಕೊಟ್ಟರು.

    ಹಿರಿಯ ನಟಿ ಬಿ.ಸರೋಜಾದೇವಿ ಮಾತನಾಡಿ, ಅಂಬಿ ಏನನ್ನೂ ಬಯಸಿದವನಲ್ಲ. ಎಲ್ಲವೂ ಆತನನ್ನೇ ಹುಡುಕಿಕೊಂಡು ಬಂದಂತಿದ್ದು. ಆದರೆ ಸುಮಲತಾ ಅವರನ್ನು ಹೆಚ್ಚು ಇಷ್ಟಪಟ್ಟ ಅಂಬಿ, ಮಡದಿಯಾಗಿ ಪಡೆದರು. ರಾಜನಾಗಿಯೇ ಬಂದ ರೆಬೆಲ್ ಸ್ಟಾರ್ ರಾಜನಾಗೇ ಹೋದ ಎಂದ ಅವರು, ನನ್ನ ಆಯಸ್ಸು ಕೊಡ್ತೀನಿ ಅಂದ್ರೆ ಯಾರಿಗೆ ಬೇಕು ನಿಮ್ಮ ನೆಕ್ಲೇಸ್ ಕೊಡಿ ಅಂತ ಅಂಬರೀಶ್ ಒಮ್ಮೆ ಹಾಸ್ಯ ಮಾಡಿದ್ದರು ಎಂದು ನೆನೆದು ಕಣ್ಣೀರಾದರು.

    ಅಂಬರೀಶ್ ಪುತ್ರ ಅಭಿಷೇಕ್ ಮಾತನಾಡಿ, ನಮ್ಮಪ್ಪನ ಬಗ್ಗೆ ಹೆಚ್ಚಾಗಿ ನಾನು ಏನು ಹೇಳಲ್ಲ. ಅಂಬರೀಶ್ ಅವರು ಹೇಗಿದ್ದರು, ಹೇಗೆ ಹೋದರು ಅಂತ ನಿಮಗೆ ಗೊತ್ತು. ಹಣ ಮುಖ್ಯ ಅಲ್ಲ ಮಗನೇ ಜನ ಮುಖ್ಯ ಅಂತ ಅಪ್ಪ ಯಾವಾಗ್ಲೂ ಹೇಳುತ್ತಿದ್ದರು. ಅಂತ್ಯಸಂಸ್ಕಾರದಲ್ಲಿಯೂ ಅಭಿಮಾನವನ್ನು ಮಂಡ್ಯ ಜನತೆ ಮೆರೆಯಿತು. ನಿಮಗೆ ನಾನು ಚಿರಋಣಿ ಎಂದರು.

    ಅಭಿಷೇಕ್ ಮಾತನಾಡುವಾಗ ಕೆಲ ಅಭಿಮಾನಿಗಳು ಕೂಗಾಡುತ್ತಿದ್ದರು. ಈ ವೇಳೆ ಅಂಬಿ ಸ್ಟೇಲ್‍ನಲ್ಲಿಯೇ ಅಭಿಷೇಕ್ ಕೂಗಾಡಿ ನಮ್ಮಪ್ಪನಿಗೂ ಕೇಳಲಿ ಎಂದು ಭಾವುಕರಾದರು. ನಮ್ಮ ತಾಯಿ ನಿಮ್ಮ ಪ್ರೀತಿಯಲ್ಲಿ ಒಂದಿಷ್ಟು ಭಾಗ ಮಗ ಅಭಿಷೇಕ್ ಕೊಡಿ ಅಂತ ಕೇಳಿದ್ದಾರೆ. ಅಪ್ಪ ನಡೆದ ದಾರಿಯಲ್ಲಿ ನಡೆದರೆ ಅಷ್ಟೇ ಪ್ರೀತಿ ನಮಗೆ ಕೊಡುತ್ತಾರೆ ಎಂದು ಸುಮಲತಾ ಅವರಿಗೆ ಅಭಿಷೇಕ್ ಇದೇ ವೇಳೆ ಹೇಳಿದರು.

    https://www.youtube.com/watch?v=vRxf0E_5PXE

    https://www.youtube.com/watch?v=tv9fwk6eo9Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟ ನಟ ಯಶ್

    ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟ ನಟ ಯಶ್

    ಬೆಂಗಳೂರು: ಸಿನಿಮಾ ರಂಗದಲ್ಲಿ ಅನೇಕ ದಾಖಲೆಗಳನ್ನು ಮುರಿದು, ದೇಶ ವಿದೇಶದಲ್ಲಿ ಭಾರೀ ಸದ್ದು ಮಾಡಿದ ಕೆಜಿಎಫ್ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಹೀಗಾಗಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ನಟ ರಾಕಿಂಗ್ ಸ್ಟಾರ್ ಯಶ್ ಎಲ್ಲರಿಗೂ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟಿದ್ದಾರೆ.

    ವಿಡಿಯೋವನ್ನು ಟ್ವೀಟ್ ಮಾಡಿರುವ ಯಶ್, ಜನವರಿ 8ರಂದು ನನ್ನ ಹುಟ್ಟುಹಬ್ಬ. ಕಳೆದ ಕೆಲವು ವರ್ಷಗಳಿಂದ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದಾರೆ. ಆದರೆ ಈ ವರ್ಷ ಜನ್ಮದಿನವನ್ನು ಆಚರಿಸುತ್ತಿಲ್ಲ. ಇದಕ್ಕೆ ಅಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

    ನಮ್ಮ ಕುಟುಂಬದ ಹಿರಿಯರಾದ ರೆಬಲ್ ಸ್ಟಾರ್ ಅಂಬರೀಷ್ ಅವರು ಕೆಲ ದಿನಗಳ ಹಿಂದಷ್ಟೇ ನಮ್ಮನ್ನ ಅಗಲಿದ್ದಾರೆ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ ಎಂದು ಕೇಳಿಕೊಂಡಿದ್ದಾರೆ.

    ಯಶೋ ಯಾತ್ರೆ ಮೂಲಕ ನಿಮ್ಮ ಗ್ರಾಮಗಳಿಗೆ, ನಗರಗಳಿಗೆ ಭೇಟಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ ಎಂದ ಅವರು, ನನ್ನ ಅಭಿಪ್ರಾಯ ಹಾಗೂ ಭಾವನೆಯನ್ನು ಗೌರವಿಸುತ್ತೀರಾ ಎಂದು ನಂಬಿರುವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷದಲ್ಲಿ ಸಾಧನೆಗಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಜಿಎಫ್ ಅರೆಹುಚ್ಚ ಪಾತ್ರಧಾರಿ ಲಕ್ಷ್ಮೀಪತಿ ಇನ್ನಿಲ್ಲ!

    ಕೆಜಿಎಫ್ ಅರೆಹುಚ್ಚ ಪಾತ್ರಧಾರಿ ಲಕ್ಷ್ಮೀಪತಿ ಇನ್ನಿಲ್ಲ!

    – ಚಿತ್ರ ನೋಡಿ ಸಂಭ್ರಮಿಸುವ ಮೊದಲೇ ಕೊನೆಯುಸಿರೆಳೆದ ಕೆಜಿಎಫ್ ಕಲಾವಿದ

    ಬೆಂಗಳೂರು: ಕೆಜಿಎಫ್ ನಿರೀಕ್ಷೆಗೂ ಮೀರಿದ ಗೆಲುವನ್ನು ಸಾಧಿಸಿದ್ದು, ಸಿನಿಮಾ ಲೋಕದಲ್ಲಿ ಅನೇಕ ದಾಖಲೆಗಳನ್ನು ಧೂಳೀಪಟ ಮಾಡಿರೋದರ ಬೆನ್ನಲ್ಲೇ ಕೆಜಿಎಫ್ ಅಭಿಮಾನಿಗಳಿಗೆ ಬೇಸರ ಮೂಡುವಂತಾ ಸುದ್ದಿ ಹೊರಬಿದ್ದಿದೆ. ಕೆಜಿಎಫ್ ಚಿತ್ರದಲ್ಲಿ ಕಾರ್ಮಿಕರ ನೋವನ್ನು ಬಿಚ್ಚಿಟ್ಟ ಕಲಾವಿದರೊಬ್ಬರು ತನ್ನ ಪಾತ್ರವನ್ನು ತೆರೆಯ ಮೇಲೆ ನೋಡಿ ಸಂಭ್ರಮಿಸುವ ಮೊದಲೇ ಕೊನೆಯುಸಿರೆಳೆದಿದ್ದಾರೆ.

    ನಿತ್ಯ ನೊಂದ ಕಾರ್ಮಿಕರ ಎದುರು ಭರವಸೆಯ ಕಥೆಗಳನ್ನು ಹೇಳಿ ಕ್ಷಣಕಾಲ ದುಃಖ ಮರೆಯುವಂತೆ ಮಾಡುವ ಹುಚ್ಚನ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಲಕ್ಷ್ಮೀಪತಿ ಅವರು ಚಿತ್ರ ತೆರೆಕಾಣುವ ಮುನ್ನವೇ ಮೃತಪಟ್ಟಿದ್ದಾರೆ. ನಿಧನದ ಸುದ್ದಿಯನ್ನು ಕೆಜಿಎಫ್ ತಂಡವು ಇದೀಗ ಬಹಿರಂಗಪಡಿಸಿದೆ.

    ಕೆಜಿಎಫ್ ಚಿತ್ರದ ಛಾಯಾಗ್ರಾಹಕ ಭುವನ್ ಗೌಡ ಅವರು, ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಲಕ್ಷ್ಮೀಪತಿ ನಿಧನದ ಸುದ್ದಿ ಹಾಗೂ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ. ಚಿತ್ರದಲ್ಲಿ ಹುಚ್ಚನ ಪಾತ್ರವನ್ನು ಅದ್ಭುತವಾಗಿ ನಿರ್ವಹಿಸಿದ ಲಕ್ಷ್ಮೀಪತಿ ಅವರು ನಿಧನರಾಗಿದ್ದಾರೆ. ಜಾಂಡೀಸ್ ನಿಂದ ಬಳಲುತ್ತಿದ್ದ ಅವರು ಚಿತ್ರ ತೆರೆಕಾಣುವುದಕ್ಕೂ ಮುನ್ನವೇ ನಮ್ಮನ್ನು ಅಗಲಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ.

    https://www.facebook.com/bhuvan.gowda.18/videos/2074427639262562/

    ಕೆಜಿಎಫ್ ಚಿತ್ರದಲ್ಲಿ ನರಾಚಿ ಕಾರ್ಖಾನೆಯ ಕಾರ್ಮಿಕರ ದುಗುಡ ದುಮ್ಮಾನಗಳನ್ನು ಲಕ್ಷ್ಮೀಪತಿ ವಿವರಿಸುತ್ತಿರುವ ದೃಶ್ಯ ಈಗ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಲಕ್ಷ್ಮೀಪತಿ ಅವರು ತಮ್ಮ ಪಾತ್ರದಲ್ಲಿ, ‘ಸುಡುವ ಬೆಂಕಿಯಲ್ಲಿ ಸುರಿವ ಮಳೆಯಂತೆ, ಮೃತ್ಯುವಿನ ಮನೆಯಲ್ಲಿ ಮೃತ್ಯುಂಜಯನಂತೆ, ದೌಲತ್ತಿನೆದುರು ದಂಗೆಯಾ ರೂಪದಲ್ಲಿ, ದಶಕಂಠನೆದುರು ಧನುಜಾರಿ ರೀತಿಯಲ್ಲಿ, ಉರಿವ ಜಮದಗ್ನಿಯ ಬೆದರಿಸಿ, ಸರ್ವವೂ ತಾನೆಂದು ಪರಮಾತ್ಮನನ್ನು ಪ್ರಶ್ನಿಸಿ, ಸಿಡಿಲಂತೆ ಸಿಡಿದ ಧೀರನೊಬ್ಬನ ಕಥೆ’ ಎನ್ನುತ್ತಾ ಪಾತ್ರಕ್ಕೆ ಜೀವ ತುಂಬಿದ್ದರು.

    ಭುವನ್ ಗೌಡ ಅವರು ಹಾಕಿರುವ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರು ಶೇರ್ ಮಾಡಿಕೊಂಡು ಕಲಾವಿದನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ಇತ್ತ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಕೂಡ ಲಕ್ಷ್ಮೀಪತಿ ಅವರ ವೀಡಿಯೋ ಟ್ವೀಟ್ ಮಾಡುವ ಮೂಲಕ ನಮನ ಸಲ್ಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಡುಗಡೆಯಾದ ಐದೇ ದಿನಕ್ಕೆ 100 ಕೋಟಿ ರೂ. ಗಳಿಸಿದ ಕೆಜಿಎಫ್

    ಬಿಡುಗಡೆಯಾದ ಐದೇ ದಿನಕ್ಕೆ 100 ಕೋಟಿ ರೂ. ಗಳಿಸಿದ ಕೆಜಿಎಫ್

    – ಕನ್ನಡ ಚಿತ್ರರಂಗದಲ್ಲೇ ಮಹತ್ವದ ಮೈಲಿಗಲ್ಲು ನಿರ್ಮಿಸಿದ ರಾಕಿ ಭಾಯ್

    ಬೆಂಗಳೂರು: ‘ಕೆಜಿಎಫ್’ ಚಿತ್ರದಿಂದಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಖದರೇ ಬದಲಾಗಿದೆ. ಒಂದು ಕನ್ನಡ ಸಿನಿಮಾ ಐದೇ ದಿನಕ್ಕೆ ನೂರು ಕೋಟಿ ಕಲೆಕ್ಷನ್ ಮಾಡಬಲ್ಲದು ಅನ್ನೋದನ್ನ ಕೆಜಿಎಫ್ ಸಿನಿಮಾ ತೋರಿಸಿಕೊಟ್ಟಿದೆ.

    ರಾಕಿ ಭಾಯ್ ಆರ್ಭಟಕ್ಕೆ ಬಾಕ್ಸಾಫೀಸ್ ಉಡೀಸ್ ಆಗಿದೆ. ಇಲ್ಲಿಯವರೆಗೂ ಕನ್ನಡ ಸಿನಿಮಾ ಇಂಡಸ್ಟ್ರಿ ಪಾಲಿಗೆ ನೂರು ಕೋಟಿ ಕ್ಲಬ್ ಲಿಸ್ಟ್ ಅನ್ನುವುದು ಮರೀಚಿಕೆಯಾಗಿತ್ತು. ಆದರೆ ‘ಕೆಜಿಎಫ್’ ಸಿನಿಮಾ ಐದೇ ದಿನಕ್ಕೆ ನೂರು ಕೋಟಿ ಕ್ಲಬ್ ಲಿಸ್ಟ್ ಸೇರಿದ ಕನ್ನಡದ ಮೊದಲ ಚಿತ್ರವಾಗುವುದರ ಮೂಲಕ ಸ್ಯಾಂಡಲ್‍ವುಡ್ ಅನ್ನು ಹೊಸ ದಿಕ್ಕಿಗೆ ಕರೆದುಕೊಂಡು ಹೋಗುತ್ತಿದೆ. ಇದನ್ನೂ ಓದಿ : ವಿಶ್ವಾದ್ಯಂತ ಕೆಜಿಎಫ್ ಚಿತ್ರದ 4 ದಿನದ ಕಲೆಕ್ಷನ್ ಎಷ್ಟು ಗೊತ್ತೆ?

    ಕೆಜಿಎಫ್ ರಿಲೀಸ್ ಆದ ಐದೇ ದಿನದಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ಚಿತ್ರದ ಮೂಲಗಳು ಮಾಹಿತಿ ನೀಡಿವೆ. 4 ದಿನಕ್ಕೆ 77 ಕೋಟಿಗೂ ಹೆಚ್ಚು ಕಲೆಕ್ಷನ್ ಆಗಿತ್ತು. ಈಗ ಸ್ಕ್ರೀನ್ ಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿರುವ ಜೊತೆಗೆ ಕ್ರಿಸ್‍ಮಸ್ ರಜೆ ಇರುವ ಕಾರಣ ಭರ್ಜರಿ ಕಲೆಕ್ಷನ್ ಮಾಡಿದೆ. ಒಟ್ಟಿನಲ್ಲಿ ಕನ್ನಡ ಚಿತ್ರವೊಂದು ಬಾಲಿವುಡ್ ಅಂಗಳದಲ್ಲಿಯೂ ಸದ್ದು ಮಾಡುವ  ಮೂಲಕ ತನ್ನ ಹಿರಿಮೆಯನ್ನು ಜಗತ್ತಿಗೆ ತೋರಿಸಿಕೊಟ್ಟಿದೆ. ಇದನ್ನೂ ಓದಿ : ತಮಿಳುನಾಡಲ್ಲೂ ಕೆಜಿಎಫ್ ಹವಾ – ತಮಿಳು ಚಿತ್ರಗಳನ್ನು ಹಿಂದಿಕ್ಕಿ ಸ್ಕ್ರೀನ್ ಹೆಚ್ಚಿಸಿಕೊಳ್ಳುತ್ತಿದ್ದಾನೆ ರಾಕಿ ಭಾಯ್

    ರಾಕಿ ಭಾಯ್ ಇಲ್ಲಿಯವರೆಗೆ ಗಳಿಸಿದ್ದೆಷ್ಟು?
    * ‘ಕೆಜಿಎಫ್’ ಚಿತ್ರದ ಮೊದಲ ದಿನದ ಕಲೆಕ್ಷನ್ ಸುಮಾರು 23 ಕೋಟಿ ರೂ.
    * ಎರಡನೇ ದಿನದ ಕೆಜಿಎಫ್ ಟೋಟಲ್ ಕಲೆಕ್ಷನ್ ಸುಮಾರು 40 ಕೋಟಿ ರೂ.
    * ಮೂರನೇ ದಿನಕ್ಕೆ ‘ಕೆಜಿಎಫ್’ ಒಟ್ಟಾರೆ ಕಲೆಕ್ಷನ್ 58 ಕೋಟಿ ರೂ.
    * ಕೆಜಿಎಫ್ ಚಿತ್ರ ನಾಲ್ಕನೇ ದಿನಕ್ಕೆ ದಾಟಿತ್ತು 77 ಕೋಟಿ ರೂ.
    * ಐದನೇ ದಿನ ನೂರು ಕೋಟಿ ರೂ. ಗಡಿ ದಾಟಿದ ಕೆಜಿಎಫ್

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಮಿಳುನಾಡಲ್ಲೂ ಕೆಜಿಎಫ್ ಹವಾ – ತಮಿಳು ಚಿತ್ರಗಳನ್ನು ಹಿಂದಿಕ್ಕಿ ಸ್ಕ್ರೀನ್ ಹೆಚ್ಚಿಸಿಕೊಳ್ಳುತ್ತಿದ್ದಾನೆ ರಾಕಿ ಭಾಯ್

    ತಮಿಳುನಾಡಲ್ಲೂ ಕೆಜಿಎಫ್ ಹವಾ – ತಮಿಳು ಚಿತ್ರಗಳನ್ನು ಹಿಂದಿಕ್ಕಿ ಸ್ಕ್ರೀನ್ ಹೆಚ್ಚಿಸಿಕೊಳ್ಳುತ್ತಿದ್ದಾನೆ ರಾಕಿ ಭಾಯ್

    ಚೆನ್ನೈ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ತಮಿಳುನಾಡಿನಾದ್ಯಂತ ಅದ್ಧೂರಿ ಪ್ರದರ್ಶನ ನೀಡುತ್ತಿದ್ದು, ದಿನದಿಂದ ದಿನಕ್ಕೆ ರಾಕಿ ಭಾಯ್ ತನ್ನ ಸ್ಕ್ರೀನ್ ಗಳನ್ನು ಹೆಚ್ಚಿಸಿಕೊಳ್ಳುತ್ತಾ ಹೋಗುತ್ತಿದ್ದಾನೆ.

    ಹೌದು, ತಮಿಳುನಾಡಿನಲ್ಲಿ ಪರಭಾಷಾ ಚಿತ್ರಗಳು ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವುದು ಸಾಮಾನ್ಯ. ಆದರೆ ಕನ್ನಡದ ಕೆಜಿಎಫ್ ತಮಿಳು ಅವತರಣೆಯ ಸಿನಿಮಾ ತಮಿಳು ಚಿತ್ರಗಳನ್ನೇ ಹಿಂದಿಕ್ಕಿ ತನ್ನ ಸ್ಕ್ರೀನ್ ಗಳ ಸಂಖ್ಯೆಯನ್ನು ಮೂರು ಪಟ್ಟು ಹೆಚ್ಚಳ ಮಾಡಿಕೊಂಡಿದೆ.

    ತಮಿಳುನಾಡಿನಲ್ಲಿ ಚಿತ್ರ ವಿತರಣೆ ಮಾಡುತ್ತಿರುವ ನಟ ವಿಶಾಲ್ ಮಾಲೀಕತ್ವದ ವಿಶಾಲ್ ಫಿಲ್ಮ್ ಫ್ಯಾಕ್ಟರಿ ಈ ಕುರಿತು ತನ್ನ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಟ್ವೀಟ್‍ನಲ್ಲಿ ತಮಿಳುನಾಡಿನಲ್ಲಿ ಕೆಜಿಎಫ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಕೆಜಿಎಫ್ ಸ್ಕ್ರೀನ್ ಗಳ ಸಂಖ್ಯೆ 3 ಪಟ್ಟು ಹೆಚ್ಚಳವಾಗಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ : ಹಿಂದಿಯಲ್ಲಿ ಕೆಜಿಎಫ್ ಕಮಾಲ್ – ಶುಕ್ರವಾರಕ್ಕಿಂತ ಸೋಮವಾರದ ಕಲೆಕ್ಷನ್ ಜಾಸ್ತಿ

    ಕೆಜಿಎಫ್ ಚಿತ್ರ ಡಿಸೆಂಬರ್ 21 ರಂದು ತಮಿಳುನಾಡಿನಲ್ಲಿ ಸುಮಾರು 100 ಸ್ಕ್ರೀನ್ ಗಳಲ್ಲಿ ತೆರೆ ಕಂಡಿತ್ತು. ಕೆಜಿಎಫ್ ಜೊತೆ ಜೊತೆಗೆ ನಟ ಧನುಷ್ ಅಭಿನಯದ ಮಾರಿ-2 ಮತ್ತು ಶಾರುಖ್ ಖಾನ್ ರ ಜೀರೋ ಚಿತ್ರಗಳೂ ಕೂಡ ಬಿಡುಗಡೆಯಾಗಿದ್ದವು. ಆದರೆ ಈಗ ಕೆಜಿಎಫ್ ಚಿತ್ರ ತಮಿಳುನಾಡು ಬಾಕ್ಸ್ ಆಫೀಸ್ ನಲ್ಲೂ ಧೂಳೆಬ್ಬಿಸುತ್ತಿದ್ದು, 100 ಸ್ಕ್ರೀನ್ ಗಳಲ್ಲಿದ್ದ ಕೆಜಿಎಫ್ ಚಿತ್ರ ತನ್ನ ವ್ಯಾಪ್ತಿಯನ್ನು ಇದೀಗ 300ಕ್ಕೂ ಅಧಿಕ ಸ್ಕ್ರೀನ್ ಗಳಿಗೆ ವಿಸ್ತರಿಸಿದೆ. ಆ ಮೂಲಕ ಗಲ್ಲಾ ಪೆಟ್ಟಿಗೆಯಲ್ಲಿ ತನ್ನ ದರ್ಬಾರ್ ಮುಂದುವರಿಸಿದೆ.

    ಪರಭಾಷಾ ಚಿತ್ರಗಳು ತಮಿಳುನಾಡಿನಲ್ಲಿ ಅಸ್ತಿತ್ವಕ್ಕಾಗಿ ಹೋರಾಡುವ ಸಂದರ್ಭದಲ್ಲಿ ತಮಿಳು ಹೊರತು ಪಡಿಸಿ ಅದರಲ್ಲಿಯೂ ಕನ್ನಡದ ಚಿತ್ರವೊಂದು ನಿರೀಕ್ಷೆ ಮೀರಿ ಯಶಸ್ಸು ಸಾಧಿಸುತ್ತಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಾಲ್ಯದ ಮೈಸೂರು ದಸರಾ ಮೆಲುಕು: ಯಶ್, ದರ್ಶನ್ ಮಾತಿನ ಮೋಡಿ ಹೀಗಿತ್ತು

    ಬಾಲ್ಯದ ಮೈಸೂರು ದಸರಾ ಮೆಲುಕು: ಯಶ್, ದರ್ಶನ್ ಮಾತಿನ ಮೋಡಿ ಹೀಗಿತ್ತು

    ಬೆಂಗಳೂರು: ದಸರಾ ವಿಶೇಷ ಸಂಚಿಕೆಯಾಗಿ ಪಬ್ಲಿಕ್ ಟಿವಿಯಲ್ಲಿ ಸಿನಿ ದಿಗ್ಗಜರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕಿಂಗ್ ಸ್ಟಾರ್ ಯಶ್ ಇಬ್ಬರ ಮಾತಿನ ಸಮಾಗಮಕ್ಕೆ ಪಬ್ಲಿಕ್ ಟಿವಿ ವೇದಿಕೆಯಾಗಿತ್ತು. ಇಬ್ಬರೂ ದೊಡ್ಡ ನಟರಾಗಿ ಇಂದು ಸಿನಿ ಅಭಿಮಾನಿಗಳನ್ನು ರಂಜಿಸುತ್ತಿದ್ದು, ದಸರಾ ಅಂಗವಾಗಿ ಇಬ್ಬರ ಹಳೆಯ ನೆನಪಿನ ಬುತ್ತಿಯನ್ನು ತೆರೆದಿಟ್ಟರು.

    90 ದಶಕದಲ್ಲಿ ಎಲ್ಲರ ಮನೆಯಲ್ಲೂ ದೇವರಿಗೆ ಪೂಜೆ ಮಾಡಿ ಭರ್ಜರಿ ಊಟ ನೀಡುತ್ತಿದ್ದರು, ಮೈಸೂರಿನ ಪ್ರಕಾಶ್ ಹೋಟೆಲ್ ಬಳಿಯ ವಠಾರದಲ್ಲಿ ನಮ್ಮ ಮನೆ ಇತ್ತು. ಆ ವೇಳೆ ದಸರಾ ನೋಡಲು ಮೊದಲು ಸ್ಥಳ ಕಾಯ್ದಿರಿಸಲು ಬೆಳಗ್ಗೆಯೇ ಮಕ್ಕಳು ತೆರಳುತ್ತಿದ್ದರು. ಆದರೆ ಇಂದು ತಂತ್ರಜ್ಞಾನದ ಫಲವಾಗಿ ಇವೆಲ್ಲ ಸುಲಭವಾಗಿದೆ. ಗರುಡಗಂಬ ಆರಂಭವಾದಾಗ ದಸರಾ ಆರಂಭವಾಗುತ್ತಿದೆ ಎಂದು ನಮಗೆ ಗೊತ್ತಾಗುತಿತ್ತು. ಆದರೆ ಇಂದು ದಸರಾ ನೀಡುವ ವೇಳೆ ಆ ನಿರಂತರತೆ ಮಿಸ್ ಆಗುತ್ತಿದೆ. ಪ್ರತಿವರ್ಷ ಮೈಸೂರು ದಸರಾಗೆ ಹಾಜರಾಗುತ್ತೇನೆ. ಅಂದು ದಸರಾ ಮೆರವಣಿಗೆ ನಡೆದ ಬಳಿಕ ಜಂಬೂ ಸವಾರಿ ಬಿಟ್ಟು ಮಿಕ್ಕ ಎಲ್ಲವೂ ವಾಪಸ್ ಮೆರವಣಿಗೆಯಲ್ಲೇ ಬರುತ್ತಿತ್ತು. ಅದು ರಾತ್ರಿ 1 ಗಂಟೆಯವರೆಗೂ ಸಾಗುತ್ತಿತ್ತು. ರಾತ್ರಿಯಾದರೂ ಅದನ್ನು ನೋಡಲು ನಾವು ತಪ್ಪದೇ ಹಾಜರು ಹಾಕುತ್ತಿದ್ದೇವು ಎಂದು ದರ್ಶನ್ ಹಳೆ ನೆನಪು ಮೆಲಕು ಹಾಕಿದರು.

    ನಟ ಯಶ್ ಅವರು ದಸರಾ ಕುಸ್ತಿ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ದರ್ಶನ್, ಕುಸ್ತಿಯಲ್ಲಿ ದೇಹದ ತೂಕಕ್ಕೆ ತಕ್ಕಂತೆ ಸ್ಪರ್ಧೆ ನಡೆಯುತ್ತದೆ. ಈ ವೇಳೆ ಕುಸ್ತಿ ಜಟ್ಟಿಗಳ ತೂಕ ಒಂದು ಗ್ರಾಂ ಹೆಚ್ಚಾದರೂ ಅವರು ಆ ತೂಕ ಕಡಿಮೆ ಮಾಡಿಕೊಳ್ಳಲು ಧರಿಸಿದ್ದ ಚಡ್ಡಿ ಬಿಚ್ಚಿ ನಿಲ್ಲುತ್ತಿದ್ದರು. ಆ ದೃಶ್ಯ ಈಗಲೂ ನೆನಪಿದೆ. ಆದರೆ ಸದ್ಯ ಅಂದಿನಂತೆ ಈಗ ಒಬ್ಬನೇ ಭೇಟಿ ನೀಡಿ ದಸರಾ ನೋಡುವ ಅವಕಾಶ ಕೈತಪ್ಪಿದೆ. ಅದ್ದರಿಂದ ಒಬ್ಬನೇ ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಬನ್ನಿ ಮಂಟಪದವರೆಗೂ ಹೋಗುತ್ತೇನೆ ಎಂದು ತಮ್ಮ ದಸರಾ ಭೇಟಿಯ ಹಿಂದಿನ ರಹಸ್ಯ ಬಿಚ್ಚಿಟ್ಟರು.

    ಯಶ್, ದರ್ಶನ್ ಬೈಕ್ ರೈಡ್: ಈ ವೇಳೆ ಮೈಸೂರು ಭೇಟಿ ಆಸೆ ತೆರೆದಿಟ್ಟ ನಟ ಯಶ್ ಹಾಗೂ ದರ್ಶನ್ ಅವರು ಮುಂದಿನ ದಿನಗಳಲ್ಲಿ ರೈಡ್ ಮಾಡುವ ಕುರಿತು ತಿಳಿಸಿದಸರು. ಇದೇ ವೇಳೆ ಯಶ್ ಸಿನಿಮಾಗಳಿಗೆ ಶುಭಕೋರಿದ ಅವರು ದರ್ಶನ್ ಅವರು ಮುಂದಿನ ಚಿತ್ರಗಳು ಯಶಸ್ವಿಯಾಗಲಿ, ಆ ನವದುರ್ಗೆಯರ ಆರ್ಶೀವಾದ ಅವರಿಗೆ ಇರಲಿ ಎಂದು ಶುಭ ಕೋರಿದರು.

    ತಮ್ಮ ಆರೋಗ್ಯ ಕುರಿತ ಪ್ರಶ್ನೆಗೆ ಉತ್ತರಿಸಿದ ದರ್ಶನ್, 10 ದಿನಗಳಲ್ಲಿ ಮತ್ತೆ ನಾನು ಚಿತ್ರೀಕರಣದಲ್ಲಿ ಭಾಗವಹಿಸುತ್ತೇನೆ ಎಂದರು. ಈ ವೇಳೆ ಯಶ್ ಅವರು ಮೈಸೂರು ಚಿತ್ರ ಮಂದಿರದಲ್ಲಿ ದರ್ಶನ್ ಸಿನಿಮಾ ನೋಡಿದ ನೆನಪು ಮಾಡಿ ತಮ್ಮ ಹಿಂದಿನ ಹಾದಿಯನ್ನ ಬಿಚ್ಚಿಟ್ಟರು. ಬಳಿಕ ದರ್ಶನ್ ಅಭಿಮಾನಿಗಳಿಗೆ ಯಶ್ ಅವರು ಬೇಗ ಸಿಹಿ ಸುದ್ದಿ ನೀಡಲಿ ಶುಭವಾಗಲಿ ಎಂದರು.

    ನಮ್ಮೂರ ಹುಡುಗ: ದರ್ಶನ್ ಅವರ ಜೀವನ ನನಗೆ ಆರಂಭದಿಂದಲೂ ಸ್ಫೂರ್ತಿಯಾಗಿತ್ತು. ಏಕೆಂದರೆ ನಾನು ಸಿನಿಮಾ ನೋಡಲು ಆರಂಭಿಸಿದ ವೇಳೆ ದರ್ಶನ್ ಅವರು ದೊಡ್ಡ ಸ್ಟಾರ್. ನಮ್ಮೂರಿನವರಾದ ಕಾರಣ ಅಭಿಮಾನ ಮತ್ತಷ್ಟು ಜಾಸ್ತಿ. ಅವರ ಸಿನಿಮಾದಲ್ಲಿ ಮೈಸೂರು ಶೈಲಿಯ ನ್ಯಾಚುರಲ್ ಮಾತು ನನಗೆ ಇಷ್ಟ. ಅಲ್ಲದೇ ಅವರು ದೇಹದ ದಂಡನೆ ಮಾಡಿರುವ ರೀತಿಯೂ ಅದ್ಭುತ. ದರ್ಶನ್ ಅವರು ಬೆಳೆದ ಪ್ರತಿ ಹಂತವನ್ನು ನಾನು ಸಂಪೂರ್ಣವಾಗಿ ನೋಡಿದ್ದೇನೆ. ಅವರ ಪ್ರತಿ ಹಂತದ ಬೆಳವಣಿಗೆಯಲ್ಲೂ ನನಗೆ ಖುಷಿ ಆಗುತ್ತಿತ್ತು. ಪುನೀತ್ ರಾಜ್‍ಕುಮಾರ್, ಉಪೇಂದ್ರ ಅವರು ನನಗೆ ಸಿನಿಮಾಗೆ ಬರಲು ಸ್ಫೂರ್ತಿಯಾದರು ಎಂದು ದರ್ಶನ್ ಅವರ ಬಗ್ಗೆ ತಮ್ಮ ಮನಸ್ಸಿನ ಮಾತನ್ನು ಹಂಚಿಕೊಂಡರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

     

  • ಯುವ ದಸರಾಗೆ ಪಾಸ್ ಕೇಳುತ್ತಿದ್ದ ನಾನಿಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ: ಯಶ್

    ಯುವ ದಸರಾಗೆ ಪಾಸ್ ಕೇಳುತ್ತಿದ್ದ ನಾನಿಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ: ಯಶ್

    ಮೈಸೂರು: ರಾಕಿಂಗ್ ಸ್ಟಾರ್ ಯಶ್ ಮೈಸೂರಿನ ಯುವ ದಸರಾ ಕಾರ್ಯಕ್ರಮದಲ್ಲಿ ತಮ್ಮ ಹಳೆಯ ಕಾಲದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಯುವ ದಸರಾದ ಕಡೆಯ ದಿನದ ಸ್ಯಾಂಡಲ್ ವುಡ್ ನೈಟ್ಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯಶ್ ತಾನು ಹುಡುಗನಾಗಿದ್ದ ಕಾಲಕ್ಕೆ ಜಾರಿಕೊಂಡು ಹಿಂದಿನ ಕಾಲದ ಎಲ್ಲ ನೆನಪುಗಳನ್ನು ಸ್ಮರಿಸಿಕೊಂಡರು.

    ಹುಡುಗನಾಗಿದ್ದಾಗ ಯುವ ದಸರಾದ ಪಾಸ್ ಬೇಕು ಎನ್ನುತ್ತಿದ್ದ ನಾನು, ಇಂದು ಅದೇ ವೇದಿಕೆ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲಾ ನಿಮ್ಮ ಪ್ರೀತಿ ಪ್ರೋತ್ಸಾಹವೇ ಕಾರಣ ಎಂದಿದ್ದಾರೆ.

    ಯಶ್ ವೇದಿಕೆ ಏರುತ್ತಿದ್ದಂತೆ, ನಾನ್ ಸ್ಟಾಪ್ ಶಿಳ್ಳೆ, ಚಪ್ಪಾಳೆಗಳ ಸುರಿಮಳೆಯಾಯಿತು. ಸಿಂಪಲ್ಲಾಗಿ ಕುರ್ತಾ ಧರಿಸಿ ಬಂದಿದ್ದ ಅವರು ಎಲ್ಲರ ಗಮನ ಸೆಳೆದರು. ಯಶ್ ವೇದಿಕೆ ಬರುತ್ತಿದ್ದಂತೆ, ಅವರನ್ನು ಮಾತನಾಡಲು ಬಿಡದೆ ಯುವಜನತೆ ಸೌಂಡ್ ಹೆಚ್ಚಿಸಿ, ಕುಣಿದು ಕುಪ್ಪಳಿಸಿದರು.

    ಈ ವೇಳೆ ಮಾತನಾಡಿದ ಅವರು, ನಾನು ಹುಡುಗನಾಗಿದ್ದಾಗ ಇದೇ ಯುವ ದಸರಾದ ಪಾಸ್ ಬೇಕು ಎಂದು ಕೇಳಿಕೊಳ್ಳುತ್ತಿದ್ದೆ. ಆದರೆ ಇಂದು ಇದೇ ವೇದಿಕೆಯ ಮೇಲೆ ನಿಂತಿದ್ದೇನೆ. ಇದಕ್ಕೆಲ್ಲ ನಿಮ್ಮ ಪ್ರೀತಿ, ಪ್ರೋತ್ಸಾಹವೇ ಕಾರಣ. ನನಗೆ ಮೈಸೂರಿಗೆ ಬರುವುದೆಂದರೆ ತುಂಬಾ ಖುಷಿ. ಸಾಕಷ್ಟು ಊರು, ದೇಶ ನೋಡಿದ್ದೇನೆ, ಆದರೆ ಮೈಸೂರಂತ ಊರನ್ನು ಎಲ್ಲಿಯೂ ಇಲ್ಲ. ನನಗೆ ಮೈಸೂರಿಗೆ ಬಂದ್ರೆ ನನ್ನ ಹಳೆಯ ನೆನಪುಗಳು ಕಣ್ಣ ಮುಂದೆ ಬರುತ್ತವೆ ಎಂದು ತಮ್ಮ ಸಂತೋಷ ಹಂಚಿಕೊಂಡರು.

    ನನ್ನ ಹೆಂಡತಿಗೆ ಯಾವಾಗಲೂ ನಮ್ಮೂರು ದಸರಾದಲ್ಲಿ ಸಿಂಗಾರಗೊಂಡಿರುತ್ತೆ ಅಂತಾ ಹೇಳುತ್ತಿದ್ದೆ. ಅಂತ ದಸರಾದಲ್ಲಿ ಭಾಗಿಯಾಗಿರುವುದಕ್ಕೆ ತುಂಬಾ ಖುಷಿಯಾಗಿದೆ. ಈ ಬಾರಿಯ ದಸರಾ ಅದ್ಧೂರಿಯಾಗಿದೆ. ಎಲ್ಲಾ ವ್ಯವಸ್ಥೆ ಸೂಪರ್. ಸಚಿವರಾದ ಸಾ.ರಾ.ಮಹೇಶ್‍ರವರು 6 ತಿಂಗಳ ಮೊದಲೇ ನನಗೆ ಬನ್ನಿ ಎಂದು ಆಹ್ವಾನ ಮಾಡಿದ್ದರು. ನಮ್ಮದೇ ಸರ್ಕಾರ ಬರುತ್ತೆ ಎಂದೂ ಹೇಳಿದ್ದರು ಎಂದು ವಿವರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv