Tag: Rocky

  • ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

    ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

    – ಪಾನಿಪುರಿ ಕಿಟ್ಟಿ ಹೊಸ ಪ್ರಯತ್ನಕ್ಕೆ ಶುಭ ಹಾರೈಸಿದ ರಾಕಿಂಗ್ ಸ್ಟಾರ್
    – ‘ರಾಕಿ’ ಸಿನಿಮಾ ಆದಾಗಿನಿಂದ ಜೊತೆಲಿದ್ದಾರೆ

    ಬೆಂಗಳೂರು: ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಎಂಬುದು ನನ್ನ ಅಭಿಪ್ರಾಯ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದರು.

    ಯಶ್ ಸಿನಿಜರ್ನಿಯ ಆರಂಭದಿಂದ ಜೊತೆ ಇರೋ ಸ್ನೇಹಿತ ಮತ್ತು ಜಿಮ್‍ಟ್ರೈನರ್ ಪಾನಿಪುರಿ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ‘ರಿಚ್ಚಿ ಗ್ರಿಲ್ಸ್ ರೆಸ್ಟೋರೆಂಟ್’ ಪ್ರಾರಂಭಿಸಿದ್ದು, ಈ ಪ್ರಯತ್ನಕ್ಕೆ ಯಶ್ ಆಗಮಿಸಿ ಶುಭ ಹಾರೈಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಡಿ.31 ಬಂದ್ ಕುರಿತು ಮಾತನಾಡಿದರು. ಇದನ್ನೂ ಓದಿ: ನಮ್ಮ ಭೂಮಿ ಹೋದರೂ ಪರವಾಗಿಲ್ಲ, ಮೇಕೆದಾಟು ಯೋಜನೆ ಬೇಗ ಆರಂಭವಾಗಬೇಕು: ಡಿಕೆಶಿ

    ಎಂಇಎಸ್ ಪುಂಡಾಟ ವಿಚಾರ ಕುರಿತು ಮಾತನಾಡಿದ ಅವರು, ಕನ್ನಡಿಗರಾಗಿ ಎಲ್ಲರ ಅಭಿಪ್ರಾಯ ಒಂದೇ ರೀತಿ ಇರುತ್ತೆ. ನೋವಾಗುತ್ತೆ, ಕೋಪ ಬರುತ್ತೆ. ಇನ್ನೊಂದು ಸಾಂಸ್ಕøತಿಗೆ ನೋವು ಮಾಡಬಾರದು. ಇಂತಹ ಘಟನೆ ನಡೆಯಬಾರದು. ತಪ್ಪು, ಇದು ಖಂಡನೀಯ. ನಮ್ಮ ವೃತ್ತಿಯಲ್ಲಿ ನಾಡು, ನುಡಿ ರಕ್ಷಣೆ ಮಾಡುತ್ತೇವೆ. ಬಂದ್ ವಿಚಾರವಾಗಿ ದೊಡ್ಡವರು ಏನ್ ನಿರ್ಧಾರ ಮಾಡ್ತಾರೆ ಮಾಡಲಿ. ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಅನ್ನೋದು ನನ್ನ ಅಭಿಪ್ರಾಯ ಎಂದರು.

    ಗೆಳೆಯನ ಬಗ್ಗೆ ಮಾತನಾಡಿದ ಅವರು, ನಮ್ಮ ಈ ಲುಕ್‍ಗೆಲ್ಲಾ ಪಾನಿಪುರಿ ಕಿಟ್ಟಿನೇ ಕಾರಣ. ಪಾನಿಪುರಿ ಬ್ಯುಸಿನೆಸ್ ನಿಂದ ಕಿಟ್ಟಿ ಅವರ ಕೆರಿಯರ್ ಶುರುವಾಗಿತ್ತು. ಇವತ್ತು ಸಾಧನೆ ಮಾಡಿ ಒಂದು ರೆಸ್ಟೋರೆಂಟ್ ಮಾಡಿದ್ದಾರೆ. ಕಿಟ್ಟಿ ‘ರಾಕಿ’ ಸಿನಿಮಾ ಆದಾಗಿನಿಂದ ಜೊತೆಯಲ್ಲಿದ್ದಾರೆ ಎಂದು ಹಿಂದಿನ ದಿನಗಳನ್ನು ಮೆಲುಕು ಹಾಕಿದರು.

    ಈ ವರ್ಷನೂ ಕೊರೊನಾದಿಂದ ಗ್ರ್ಯಾಂಡ್ ಬರ್ತ್ ಡೇ ಬೇಡ ಎಂದ ಯಶ್, ಕೆಜಿಎಫ್ 2 ಟ್ರೇಲರ್ ನನ್ನ ಹುಟ್ಟುಹಬ್ಬಕ್ಕೆ ಬರಲ್ಲ. ಇನ್ನೂ ತಡವಾಗಿ ಬರುತ್ತೆ ಎಂದು ತಿಳಿಸಿದರು. ಇದನ್ನೂ ಓದಿ: ನಾಮಫಲಕದಲ್ಲಿ ಪುನೀತ್ ರಾಜ್‍ಕುಮಾರ್ ಹೆಸರು ಅಳಿಸಿ ವಿಕೃತಿ ಮೆರೆದ ಕಿಡಿಗೇಡಿಗಳು

    ಕಿಟ್ಟಿ ಅವರು ಸ್ಯಾಂಡಲ್‍ವುಡ್ ಹಲವು ಸೆಲೆಬ್ರೆಟಿಗಳಿಗೆ ಜಿಮ್ ಟ್ರೈನರ್ ಆಗಿದ್ದು, ಈ ಕಾರ್ಯಕ್ರಮಕ್ಕೆ ಅಜಯ್ ರಾವ್ ಹಾಗು ನೆನಪಿರಲಿ ಪ್ರೇಮ್ ಸಹ ಭಾಗವಹಿಸಿದ್ದರು.

  • ಒಂದು ಚೆಂಡಿನಿಂದ ರಾಕಿಯ ಜೀವನವೇ ಬದಲಾಯ್ತು

    ಒಂದು ಚೆಂಡಿನಿಂದ ರಾಕಿಯ ಜೀವನವೇ ಬದಲಾಯ್ತು

    ಬೆಂಗಳೂರು: ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಆರು ದಿನ ಕಳೆದ್ರೂ ಚಿತ್ರದ ಜ್ವರ ಮಾತ್ರ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ವೀಕೆಂಡ್ ದಿನಗಳಲ್ಲಿ ಮಾತ್ರ ಚಿತ್ರಮಂದಿರ ತುಂಬಿರುತ್ತದೆ ಎಂಬ ಮಾತಿದೆ. ಈ ಮಾತನ್ನು ಕೆಜಿಎಫ್ ಸುಳ್ಳಾಗಿಸಿದ್ದು, ಇಂದಿಗೂ ಥಿಯೇಟರ್ ನತ್ತ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ. ಹಲವು ವಿಶೇಷತೆಗಳನ್ನು ಈ ಸಿನಿಮಾ ಒಳಗೊಂಡಿದ್ದು, ಎಲ್ಲರೂ ಸಲಾಂ ರಾಕಿ ಭಾಯ್ ಎಂದು ಹೇಳುತ್ತಿದ್ದಾರೆ.

    ಕೆಜಿಎಫ್ ನಲ್ಲಿ ಹುಟ್ಟಿದ್ದ ಹುಡುಗ ಮುಂದೊಂದು ದಿನ ಬಾಂಬೆ ಲೋಕದ ಅಧಿಪತಿಯಾಗ್ತಾನೆ. ಅಧಿಪತಿಯಾದ ರಾಕಿ ಆಕಸ್ಮಿಕವಾಗಿ ಕೆಜಿಎಫ್ ಎಂಬ ಅಮಾನುಷ ಲೋಕಕ್ಕೆ ಹಿಂದಿರುಗುತ್ತಾನೆ. ಗುರಿ ಇಟ್ಟುಕೊಂಡು ಕೆಜಿಎಫ್ ಸೇರುವ ರಾಕಿ ತನ್ನ ಸಾಧನೆಗಾಗಿ ಕಾಯುತ್ತಿರುತ್ತಾನೆ. ಅಲ್ಲಿ ನಡೆಯುವ ಅಮಾನುಷ ಕೃತ್ಯಗಳನ್ನು ಕಂಡರೂ ಎದೆಯ ಮೇಲೊಂದು ಕಲ್ಲು ಇಟ್ಟುಕೊಂಡು ಸುಮ್ಮನಿರುತ್ತಾನೆ. ಆದ್ರೆ ಒಂದು ಚೆಂಡು ರಾಕಿಯ ಜೀವನವನ್ನೇ ಬದಲಾವಣೆ ಮಾಡುತ್ತದೆ. ಆ ಒಂದು ಘಟನೆಯಿಂದಾಗಿ ರಾಕಿ ಅಲ್ಲಿಯ ಜನರೊಂದಿಗೆ ಬೆರೆತುಕೊಳ್ಳುತ್ತಾನೆ. ಹಾಗಾದ್ರೆ ಆ ಘಟನೆ ಏನು ಅಂತೀರಾ, ಅದನ್ನು ನೀವು ಬಿಗ್ ಸ್ಕ್ರೀನ್ ಮೇಲೆ ನೋಡಿದರೆ ಚೆಂದ. ಹಾಗಾಗಿ ರಾಕಿಯನ್ನು ಬದಲಾಯಿಸಿದ ಆ ಚೆಂಡಿನ ಕಥೆಯನ್ನು ನೀವು ಸಿನಿಮಾದಲ್ಲೇ ನೋಡಿ.

    ಸಿನಿಮಾದಲ್ಲಿ ಲಾಜಿಕ್ ಹುಡುಕದೇ ಮ್ಯಾಜಿಕ್ ನೋಡಿ. ಪ್ರತಿಯೊಂದು ಸನ್ನಿವೇಶಗಳ ಪಾತ್ರಗಳಲ್ಲಿ ನೀವು ಕಾಣಿಸಿಕೊಳ್ಳುತ್ತೀರಿ. ಪ್ರಶಾಂತ್ ನೀಲ್ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, ಮುಂದಿನ ಭಾಗ ಹೇಗಿರುತ್ತೆ? ಅಲ್ಲಿ ನಡೆಯುವುದಾದ್ರೂ ಏನು? ಕೆಜಿಎಫ್ ಘಟನೆಗಳು ರಾಕಿಯ ಮೇಲೆ ಯಾವ ಪರಿಣಾಮ ಬೀರುತ್ತಾ? ತಾಯಿಗೆ ಕೊಟ್ಟ ಮಾತಿನಂತೆ ಪವರ್ ಹುಡುಕಿ ಹೊರಟವನ ಜೀವನದಲ್ಲಿ ಹೊರಟ ಮಗನ ಜೀವನ ಮುಂದೇನು ಎಂಬಿತ್ಯಾದಿ ಪ್ರಶ್ನೆಗಳು ಸಿನಿಮಾ ನೋಡಿ ಹೊರ ಬರುವವರಲ್ಲಿ ಹುಟ್ಟಿಕೊಳ್ಳುವುದು ಸತ್ಯ. ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಬೇಕಾದ್ರೆ ಚಾಪ್ಟರ್-2 ಗಾಗಿ ಕಾಯಲೇಬೇಕು.

    ಸಿನಿಮಾದುದ್ದಕ್ಕೂ ಅನಂತ್ ನಾಗ್ ಅವರ ಧ್ವನಿ ನಿಮ್ಮನ್ನು ಮೋಡಿ ಮಾಡುತ್ತೆ. ಸಿನಿಮಾದ ಹಿನ್ನೆಲೆ ಸಂಗೀತ ಚಿತ್ರದ ಪ್ರತಿಯೊಂದು ಸನ್ನಿವೇಶಗಳನ್ನು ರಗಢ್ ಲುಕ್ ನಲ್ಲಿ ತೋರಿಸಲು ಯಶಸ್ವಿಯಾಗಿದೆ. ಕೆಲ ನಿಮಿಷ ಬಂದು ಹೋಗುವ ತಮನ್ನಾ ಭಾಟಿಯಾ ಅಭಿಮಾನಿಗಳನ್ನು ರಂಜಿಸುವಲ್ಲಿ ನಾನೇನು ಕಡಿಮೆ ಇಲ್ಲ ಎಂಬುದನ್ನು ತೋರಿಸಿದ್ದಾರೆ. ಚಿತ್ರದ ಬಹುಪಾಲು ಕಲಾವಿದರ ಧ್ವನಿಯೇ ಕೆಜಿಎಫ್ ಸಿನಿಮಾದ ಪ್ಲಸ್ ಪಾಯಿಂಟ್ ಆಗಿದೆ. ಕನ್ನಡದ ಕಿರೀಟ ಅಂತಾ ಕೆಜಿಎಫ್ ಕರೆಸಿಕೊಳ್ಳುತ್ತಿದ್ದು, 100 ಕೋಟಿಯ ಕ್ಲಬ್ ಸೇರಿದ ಮೊದಲ ಚಂದನವನದ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಇನ್ನು ನೀವು ಸಿನಿಮಾ ನೋಡಿಲ್ವಾ? ಹಾಗಾದ್ರೆ ನೋಡಿ. ನಿಮಗೆ ಸಿನಿಮಾದ ಯಾವ ಭಾಗ, ದೃಶ್ಯ, ಕಲಾವಿದ ಇಷ್ಟ ಆದ್ರು? ಸಿನಿಮಾ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮೂಲಕ ಹಂಚಿಕೊಳ್ಳಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv