ಹಾಸನ: ನಾನು ಕಾನೂನು ಪದವೀಧರನಾಗಿದ್ದು ನನಗೆ ಕಾನೂನು ಗೊತ್ತಿದೆ. ನಾನು ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂದು ಪಶು ಸಂಗೋಪನಾ ಸಚಿವ ಎ ಮಂಜು ಹೇಳಿದ್ದಾರೆ.
ಅರಕಲಗೂಡು ತಾಲೂಕಿನ ಕೊಣನೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನ ಮಗಳ ಸಮಾನ. ನನಗೆ ಅವರ ವಯಸ್ಸಿನ ಮಗಳಿದ್ದಾಳೆ. ಯಾರದೋ ಕುಮ್ಮಕ್ಕಿನಿಂದ ಅವರು ಹೀಗೆಲ್ಲಾ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ:ಸಚಿವ ಎ.ಮಂಜು ವಿರುದ್ಧ ಡಿಸಿ ರೋಹಿಣಿ ಸೆಡ್ಡು – ಹಾಸನದ ಮಂತ್ರಿಗಳ ಕಚೇರಿಗೆ ಬೀಗ
ಬಗರ್ ಹುಕುಂ ಸಾಗುವಳಿ ಪತ್ರಗಳನ್ನು ಕಾನೂನು ಬದ್ಧವಾಗಿಯೇ ಹಂಚಿಕೆ ಮಾಡಿದ್ದೇನೆ. ಅವರ ವಿರುದ್ಧ ಹಗೆತನ ಸಾಧಿಸುತ್ತಿಲ್ಲ. ಅವರೇ ದುರುದ್ದೇಶದಿಂದ ಹೀಗೆ ನಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಚುನಾವಣಾ ಆಯೋಗಕ್ಕೆ ಸವಿವರ ದೂರು ನೀಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್ಐಆರ್ ದಾಖಲು
ಚುನಾವಣೆಯಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು ಹಿಂದೆ ಅವರು ಮಾಡಿರುವ ತಪ್ಪನ್ನು ನನಗೆ ಹೇಳುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಹಾಸನ: ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಆರೋಪಿಸಿ ಎ. ಮಂಜು ಅವರಿಗೆ ನೋಟಿಸ್ ಜಾರಿಯಾಗಿದ್ದು, ಈ ಕುರಿತು ಸಚಿವರು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ್ದಾರೆ.
ಅರಕಲಗೂಡು ತಾಲೂಕಿನ ತಮ್ಮ ಸ್ವಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಮಾಧ್ಯಮಗಳಲ್ಲಿ ಬಂದ ಬಳಿಕ ನನ್ನ ಸ್ನೇಹಿತರು ಕರೆ ಮಾಡಿ ಡಿಸಿ ಕಚೇರಿಯಿಂದ ನೋಟಿಸ್ ಬಂದಿರುವುದಾಗಿ ನನ್ನ ಗಮನಕ್ಕೆ ತಂದ್ರು. ಆದ್ರೆ ಇಲ್ಲಿಯವರೆಗೂ ನನಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ನೋಟಿಸ್ ಕೊಡೋಕೆ ಸಮರ್ಥರ ಎಂಬುದನ್ನು ಮೊದಲು ಅವರು ಅರ್ಥ ಮಾಡಿಕೊಳ್ಳಬೇಕು. ಯಾಕಂದ್ರೆ ಆ ಕಚೇರಿ ಎ ಮಂಜು ಕಚೇರಿಯಲ್ಲ. ಬದಲಾಗಿ ಹಾಸನ ಜಿಲ್ಲೆಯ ಉಸ್ತುವಾರಿ ಮಂತ್ರಿ ಕಚೇರಿಯಾಗಿದೆ. ಹೀಗಾಗಿ ನಾನು ಸರ್ಕಾರದ ಓರ್ವ ಪ್ರತಿನಿಧಿಯಾಗಿ ಜನಸಾಮಾನ್ಯರು ಬಂದಾಗ ಅವರ ಕಷ್ಟ-ಸುಖಗಳನ್ನು ಆಲಿಸಲೆಂದು ಸರ್ಕಾರ ಕೊಟ್ಟಿರುವ ಕಚೇರಿಯನ್ನು ಬಳಸಿಕೊಂಡಿದ್ದೇನೆ. ಅದನ್ನು ದುರುಪಯೋಗಪಡಿಸಿಕೊಳ್ಳಬಾರದೆಂದು ನನಗೆ ಅರಿವಿದೆ ಅಂದ್ರು. ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ: ಸಚಿವ ಎ.ಮಂಜು ವಿರುದ್ಧ ಎಫ್ಐಆರ್ ದಾಖಲು
ನಾನು ಕೂಡ ಎರಡು ಪದವಿಗಳನ್ನು ಪಡೆದಿದ್ದೇನೆ. ಕಾನೂನು ನನಗೂ ತಿಳಿದಿದೆ. ನೋಟಿಸ್ ಬಂದಿದೆ ಅಂತ ಸ್ನೇಹಿತರಿಂದ ತಿಳಿಯಿತು. ಹೀಗಾಗಿ ಆ ನೋಟಿಸ್ ನನ್ನ ಕೈಸೇರಿದ ಬಳಿಕ ಅದರಲ್ಲೇನಿದೆ ಅಂತ ತಿಳಿದು ಆಮೇಲೆ ಪ್ರತಿಕ್ರಿಯಿಸುತ್ತೇನೆ ಅಂತ ಹೇಳಿದ್ರು.
ಚುನಾವಣೆಯಲ್ಲಿ ಜನ ನನ್ನನ್ನು ಗೆಲ್ಲಿಸಿ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದದಿಂದ ಕಾಂಗ್ರೆಸ್ ಸರ್ಕಾರ ನನ್ನನ್ನು ಮಂತ್ರಿಯನ್ನಾಗಿ ಮಾಡಿದೆ. ಮಂತ್ರಿಯಾದ ಬಳಿಕ ಜನಪರ ಕೆಲಸ ಮಾಡುವುದರ ಸಲುವಾಗಿ ಸರ್ಕಾರ ಕಚೇರಿ ನೀಡುತ್ತದೆ. ನಾನು ನನ್ನ ಕಚೇರಿಯನ್ನು ಸಾರ್ವಜನಿಕರ ಕೆಲಸಗಳನ್ನು ಆಲಿಸಲು ಮಾತ್ರ ಉಪಯೋಗಿಸುತ್ತೇನೆ ಹೊರತು ಯಾವುದೇ ರೀತಿಯ ರಾಜಕೀಯ ಪ್ರೇರಿತವಾಗಿ ಆ ಕಚೇರಿಯನ್ನು ಉಪಯೋಗಿಸಿಕೊಳ್ಳುವುದಿಲ್ಲ. ಅದು ನನಗೆ ತಿಳಿದಿದೆ. ಸೋ ಐ ಆ್ಯಮ್ ಎ ಎಜುಕೇಟೆಡ್. ಐ ನೋ ವಾಟ್ ಐ ಆ್ಯಮ್, ವಾಟ್ ಐ ಡಿಡ್ ಅಂತ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ.
ಹಾಸನ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶುಸಂಗೋಪನಾ ಹಾಗೂ ರೇಷ್ಮೆ ಸಚಿವ ಎ. ಮಂಜು ವಿರುದ್ಧ ಎಫ್ಐಆರ್ ದಾಖಲಾಗಿದೆ.
ನೀತಿಸಂಹಿತೆ ಜಾರಿ ಬಳಿಕವೂ ಎ ಮಂಜು ಅವರು ಸರ್ಕಾರಿ ಕಟ್ಟಡ ಬಳಸಿದ್ದಾರೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಸೂಚನೆಯ ಮೇರೆಗೆ ಚುನಾವಣಾಧಿಕಾರಿ ರಾಜೇಶ್ ದೂರು ನೀಡಿದ್ದರು.
ಮಾರ್ಚ್ 26 ರಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಅಂದೇ ನೀತಿ ಸಂಹಿತೆ ಜಾರಿಯಾಗಿತ್ತು. ಹೀಗಾಗಿ ನೀತಿ ಸಂಹಿತೆ ಉಲ್ಲಂಘಿಸಿದ್ದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರಾಗಿರುವ ಮಂಜು ವಿರುದ್ಧ ಹಾಸನ ನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರು ಏನಿತ್ತು?
ಸಚಿವರ ಕಚೇರಿ ಇದ್ದ ಕಟ್ಟಡದಲ್ಲಿ ಅನಧಿಕೃತವಾಗಿ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನೀತಿಸಂಹಿತೆ ಜಾರಿ ಬಳಿಕವೂ ಕಚೇರಿಯ ಬಾಗಿಲನ್ನು ಹೊರಗಿನಿಂದ ಬಂದ್ ಮಾಡಿ ಕೆಲ ಸಿಬ್ಬಂದಿ ಒಳಗೆ ಕೆಲಸಮಾಡುತ್ತಿದ್ದಾರೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ರೋಹಿಣಿ ಸಿಂಧೂರಿ ಅವರು ನೋಟೀಸ್ ನೀಡಿದ್ದರು.
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮಾರ್ಚ್ 21ಕ್ಕೆ ಆದೇಶ ಕಾಯ್ದಿರಿಸಿದೆ.
ಇಂದು ಕಲಾಪದಲ್ಲಿ ರೋಹಿಣಿ ಪರ ಹಿರಿಯ ವಕೀಲ ಜೋಯಿಸ್ ವಾದ ಮಂಡಿಸಿದರೆ, ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎಎಸ್ ಪೊನ್ನಣ್ಣ ವಾದ ಮಾಡಿದರು. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರಂದೀಪ್ ಅವರ ವರ್ಗಾವಣೆಗೆ ಸಿಎಟಿ ತಡೆ ನೀಡಿದ್ದು, ಮುಂದಿನ ಆದೇಶ ಪ್ರಕಟವಾಗುವರೆಗೆ ಅಲ್ಲಿಯೇ ಮುಂದುವರಿಯುವಂತೆ ಸೂಚಿಸಿದೆ.
ಸಾರ್ವಜನಿಕ ಉದ್ದೇಶಕ್ಕಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಇದರಲ್ಲಿ ಕನಿಷ್ಠ ಎರಡು ವರ್ಷದ ನಿಯಮ ಅನ್ವಯವಾಗುವುದಿಲ್ಲ. ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಯಾವುದೇ ರೀತಿಯ ಮಂಡಳಿ ಇಲ್ಲ. ಮಂಡಳಿ ಇದ್ದರೆ ಮಾತ್ರ ನಿಯಮಗಳು ಅನ್ವಯ ಆಗುತ್ತವೆ. ಸಾರ್ವಜನಿಕ ಹಿತಾಸಕ್ತಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಪೊನ್ನಣ್ಣ ವಾದಿಸಿದರು.
ಈ ವೇಳೆ ನ್ಯಾಯಪೀಠ, ಯಾವ ಸಾರ್ವಜನಿಕ ಹಿತಾಸಕ್ತಿ ಈ ವರ್ಗಾವಣೆಯಲ್ಲಿದೆ ತಿಳಿಸಿ ಎಂದು ಪ್ರಶ್ನಿಸಿದರು. ಇದಕ್ಕೆ ಪೊನ್ನಣ್ಣ, ಆ ವಿಚಾರವನ್ನು ಇಲ್ಲಿ ಬಹಿರಂಗ ಪಡಿಸುವ ಅಗತ್ಯವಿಲ್ಲ. ಕಾರ್ಯಾಂಗದ ಮುಖ್ಯಸ್ಥರಾಗಿ ಸಿಎಂ ಸಿಎ ಆದೇಶ ಮಾಡಿದ್ದಾರೆ ಎಂದು ಉತ್ತರಿಸಿದರು.
ರೋಹಿಣಿ ಪರ ಹಿರಿಯ ವಕೀಲ ಜೋಯಿಸ್, ರಾಜ್ಯದ ಮುಖ್ಯಮಂತ್ರಿಗಳಾಗಿ ನಿಯಮಗಳನ್ನು ಮೀರುವಂತಿಲ್ಲ. ಇಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಎಲ್ಲಾ ವೈಯಕ್ತಿಕ ಹಿತಾಸಕ್ತಿಯಿಂದ ಕೂಡಿದ ವರ್ಗಾವಣೆ ಇದು. ಅವಧಿಗಿಂತ ಮುಂಚೆ ವರ್ಗಾವಣೆ ಮಾಡಿದರೆ ಅದಕ್ಕೆ ಸೂಕ್ತ ಕಾರಣಗಳನ್ನು ನೀಡಲೇಬೇಕು. ಕಾರಣಗಳಿಲ್ಲದೆ ವರ್ಗಾವಣೆ ಮಾಡುವಂತಿಲ್ಲ. ವರ್ಗಾವಣೆಗೂ ಮುನ್ನ ನೋಟಿಸ್ ನೀಡಬೇಕು ಎಂದು ವಾದಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಯಾರು? ಈ ಹಿಂದೆ ಅವರು ಮಾಡಿದ್ದ ಕೆಲಸಗಳು ಏನು?
ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿತ್ತು.
ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಾ.6 ರಂದು ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಮಾ.7 ರಂದು ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು.
ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು. ಇದನ್ನೂ ಓದಿ:ಸರ್ಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗ- ಕೊಪ್ಪಳ ಎಸ್ಪಿ ಅನೂಪ್ ಶೆಟ್ಟಿ ವರ್ಗಾವಣೆಗೂ ಸಿಎಟಿ ತಡೆ
ಮೈಸೂರು: ಆಡಳಿತಾತ್ಮಕ ವಿಚಾರವನ್ನ ಬೀದಿಯಲ್ಲಿ ನಿಂತು ಮಾತನಾಡೋಲ್ಲ ಎಂದು ಹಾಸನ ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ, ಜೆಡಿಎಸ್ ಮೋದಿ ಎಲ್ಲರಿಗೂ ನಾನೇ ಟಾರ್ಗೆಟ್ ಆಗಿದ್ದೇನೆ. ಚುನಾವಣೆ ವೇಳೆ ದೇವೇಗೌಡರು ಬಂದು ಅಳ್ತಾರೆ ಅವರ ಮಾತು ಕೇಳಬೇಡಿ. ಕುಮಾರಸ್ವಾಮಿ ಬಂದು ಏನೇನೋ ಹೇಳ್ತಾರೆ ಅವರ ಮಾತು ನಂಬಬೇಡಿ. ಯಡಿಯೂರಪ್ಪ, ಶೋಭ ಕರಂದ್ಲಾಜೆ, ಅಮಿತ್ ಶಾ ಇವರೆಲ್ಲರಿಗೂ ನಾನೆ ಟಾರ್ಗೆಟ್ ಆಗಿದ್ದೀನಿ. ಹೀಗಾಗಿ ನೀವು ನನ್ನ ಕೈ ಹಿಡಿಯಬೇಕು. ಚುನಾವಣೆಯಲ್ಲಿ ನನ್ನ ಜೊತೆ ಇರಬೇಕು ಎಂದು ತಿಳಿಸಿದ್ದಾರೆ.
ಮೋದಿಯಂತಹ ಸುಳ್ಳಗಾರ ಇನ್ನೊಬ್ಬರಿಲ್ಲ. 60 ವರ್ಷದಲ್ಲಿ ಇಂತಹ ಸುಳ್ಳು ಹೇಳುವ ಪ್ರಧಾನಿ ದೇಶಕ್ಕೆ ಸಿಕ್ಕಿರಲಿಲ್ಲ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಲೆವೆಲ್ಗೆ ಮೋದಿ ಇಳಿದಿದ್ದಾರೆ. ಮೋದಿ ಡೀಲ್ ಮಾಡಿಕೊಂಡಿದ್ದಾರೆ. ಹೀಗಾಗಿ ನೀರವ್ ಮೋದಿ, ಮಲ್ಯ ದೇಶ ಬಿಟ್ಟು ಓಡಿ ಹೋಗಿದ್ದಾರೆ. ಮೋದಿ ಕುಮ್ಮಕ್ಕಿನಿಂದ ಇವರು ದೇಶ ಬಿಟ್ಟಿದ್ದಾರೆ ಎಂದಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಸಂಬಂಧ ಮಾತನಾಡಿದ ಅವರು, ಸಂಪುಟದಲ್ಲಿ ವಿಚಾರ ಚರ್ಚೆಗೆ ಬಂತು. ಸಮಯದ ಅಭಾವದಿಂದ ಚರ್ಚೆ ಮುಗಿದಿಲ್ಲ. ಈ ವಿಚಾರದಲ್ಲಿ ಯಾವುದೇ ಭಿನ್ನಾಭಿಪ್ರಾಯ ಸಂಪುಟದಲ್ಲಿ ಇಲ್ಲ. ಎಲ್ಲರು ಚರ್ಚೆಗೆ ಮಾಡಿದ್ರು. ಆದರೆ ಇನ್ನಷ್ಟು ಚರ್ಚೆಗೆ ಸಮಯ ಇರಲಿಲ್ಲ. ಹಾಗಾಗಿ ಲಿಂಗಾಯತ ಧರ್ಮದ ವಿಚಾರವನ್ನ ಮುಂದೂಡಿದ್ದೇವೆ ಅಂದ್ರು.
ನಾಡಧ್ವಜವೇ ಬೇರೆ, ಕನ್ನಡ ಬಾವುಟವೇ ಬೇರೆ. ಕನ್ನಡ ಧ್ವಜ ಬಳಸುವಂತೆ ನಾಡಧ್ವಜ ಬಳಸುವಂತಿಲ್ಲ. ನಾಡ ಧ್ವಜಕ್ಕೆ ರಾಷ್ಟ್ರಧ್ವಜದಂತೆ ನೀತಿ ನಿಯಮ ಇರಲಿವೆ. ಹೋರಾಟಗಾರರು ಎಂದಿನಂತೆ ಕನ್ನಡ ಧ್ವಜ ಬಳಸಬಹುದು. ಆದ್ರೆ ನಾಡಧ್ವಜ ಬಳಕೆಯನ್ನ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ರಾಜ್ಯೋತ್ಸವದಲ್ಲಿ ಬಳಸಬೇಕು. ಈ ಬಗ್ಗೆ ಕೇಂದ್ರ ಒಪ್ಪಿಗೆ ಕೊಟ್ಟ ಮೇಲೆ ಎಲ್ಲಾ ನೀತಿ ನಿಯಮ ಜಾರಿಯಾಗಲಿದೆ. ನಾಡಧ್ವಜಕ್ಕೆ ವಾಟಾಳ್ ನಾಗರಾಜ್ ಬಿಟ್ಟು ಇನ್ಯಾರ ವಿರೋಧವು ಇಲ್ಲ. ಎಲ್ಲರು ನಾಡಧ್ವಜವನ್ನ ಒಪ್ಪಿದ್ದಾರೆ ಅಂತ ಸಿಎಂ ತಿಳಿಸಿದ್ರು.
ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ.
ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ ಆದೇಶದಿಂದಾಗಿ ಸಿಂಧೂರಿ ಅವರು ಹಾಸನ ಡಿಸಿ ಆಗಿ ಮುಂದುವರಿಯಲಿದ್ದಾರೆ.
ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶವನ್ನು ಮಂಗಳವಾರ ಹಿಂದಕ್ಕೆ ಪಡೆದಿದ್ದ ರಾಜ್ಯ ಸರ್ಕಾರ ಬುಧವಾರ ವರ್ಗಾವಣೆ ಮಾಡಿತ್ತು. ಒಟ್ಟು 12 ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರನ್ನಾಗಿ ನೇಮಿಸಿ ವರ್ಗಾವಣೆ ಆದೇಶ ಹೊರಡಿಸಿತ್ತು.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಜ.22 ರಂದು ರೋಹಿಣಿ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ(ಕೆಎಸ್ಐಐಡಿಸಿ) ಆಡಳಿತ ನಿರ್ದೇಶಕಿಯನ್ನಾಗಿ ನೇಮಿಸಿ ಹಠಾತ್ ವರ್ಗಾವಣೆ ಮಾಡಿದ್ದ ಸರ್ಕಾರದ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಸರ್ಕಾರದ ಕ್ರಮಕ್ಕೆ ಸಾರ್ವಜನಿಕ ವಲಯದಿಂದಲೂ ಟೀಕೆ ಕೇಳಿ ಬಂದಿತ್ತು. ಈಗ ಮತ್ತೊಮ್ಮೆ ವರ್ಗಾವಣೆ ಆದೇಶ ಹೊರಡಿಸಿ ಎರಡನೇ ಬಾರಿ ಮುಖಭಂಗವಾಗಿದೆ.
ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಚುನಾವಣಾ ಆಯೋಗ ಈ ಹಿಂದೆ ಸೂಚನೆ ನೀಡಿತ್ತು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಾರ್ಯಕ್ಕೆ ಸಿಎಂ ಅಭಿನಂದನೆ
ಯಾರು ರೋಹಿಣಿ ಸಿಂಧೂರಿ?:
ಈ ಹಿಂದೆ ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಹಲವಾರು ಜನೋಪಯೋಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದರು. ರಾಜ್ಯದಲ್ಲಿ ಮೊದಲ ಬಾರಿಗೆ ಭೂ ದಾಖಲೆಗಳ ಕುರಿತಂತೆ ವಿನ್ಯಾಸಗೊಂಡಿರುವ ಎಂ-ಆಸ್ತಿ ಅಪ್ಲಿಕೇಷನ್ ತಂದಿದ್ದರು. ಬಯಲು ಶೌಚಾಲಯ ಮುಕ್ತ ಜಿಲ್ಲೆಯನ್ನಾಗಿ ರೂಪಿಸಲು ಪಣ ತೊಟ್ಟಿದ್ದ ರೋಹಿಣಿ ಸಿಂಧೂರಿ ಅವರು ಹಳ್ಳಿ ಹಳ್ಳಿಗೆ ಹೋಗಿ, ಬಯಲು ಶೌಚಕ್ಕೆ ಹೋಗುವವರಿಗೆ ಶೌಚಾಲಯ ಬಳಸುವಂತೆ ತಿಳುವಳಿಕೆ ಹೇಳುವ ಮೂಲಕ ವಿಶೇಷ ಅಭಿಯಾನ ಮಾಡುತ್ತಿದ್ದರು.
ನಿರ್ಮಲ್ ಭಾರತ್ ಯೋಜನೆಯಡಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಶೌಚಾಲಯ ನಿರ್ಮಾಣ ಗುರಿ ಸಾಧಿಸಿದ್ದ ಇವರ ಅಧಿಕಾರ ಅವಧಿಯಲ್ಲಿ ಶೌಚಾಲಯ ನಿರ್ಮಾಣದಲ್ಲಿ ಮಂಡ್ಯ ಜಿಲ್ಲೆ ಭಾರತದಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಕರ್ನಾಟಕದಲ್ಲಿ ಪ್ರಥಮ ಸ್ಥಾನ ಪಡೆದಿತ್ತು. ಸಿಇಓ ಅವರ ಕಾರ್ಯ ವೈಖರಿಯನ್ನು ನೋಡಿ ಮಂಡ್ಯದ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದರು.
2015ರ ಸೆಪ್ಟೆಂಬರ್ ನಲ್ಲಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿ ನೇಮಿಸಿ ವರ್ಗಮಾಡಿತ್ತು. ಈಗ ಅಲ್ಲಿಂದ ಮೊದಲ ಬಾರಿಗೆ ಜಿಲ್ಲಾಧಿಕಾರಿಯಾಗಿ ಹಾಸನಕ್ಕೆ ಬಂದಿದ್ದರು. ಕಳೆದ 2017ರ ಜುಲೈ 14ರಿಂದ ಹಾಸನದ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ಅಲ್ಪಾವಧಿಯಲ್ಲಿ ದಕ್ಷ ಆಡಳಿತಾಧಿಕಾರಿ ಎಂದು ಹೆಸರು ಪಡೆದುಕೊಂಡಿದ್ದರು. ತಮ್ಮ ಕೆಲಸದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಪ್ರಶಸ್ತಿಯನ್ನು ಪಡೆದಿದ್ದರು. ಶ್ರವಣಬೆಳಗೋಳ ಮಹಾಮಸ್ತಕಾಭಿಷೇಕ ಸೇರಿದಂತೆ ಹಾಸನದ ಹಲವು ಯೋಜನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು ಕ್ರಿಯಾಶೀಲರಾಗಿದ್ದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ಎತ್ತಂಗಡಿ ಕೇಸ್ನಲ್ಲಿ ಟ್ವಿಸ್ಟ್- ಡಿಸಿ ವರ್ಗಾವಣೆಗೆ ನಾನೇ ಕಾರಣ ಎಂದ `ಕೈ’ ನಾಯಕ!
ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಹಾಸನ ಡಿಸಿ ರೋಹಿಣಿ ಸಿಂಧೂರಿ, ಮೈಸೂರು ಡಿಸಿ ರಂದೀಪ್, ಬೆಂಗಳೂರು ನಗರ ಡಿಸಿ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರೋಹಿಣಿ ಸಿಂಧೂರಿಯವರನ್ನು ಉದ್ಯೋಗ ತರಬೇತಿ ಆಯುಕ್ತೆಯಾಗಿ ವರ್ಗ ಮಾಡಲಾಗಿದ್ದು, ಹಾಸನ ಡಿಸಿಯಾಗಿ ಮೈಸೂರಿನ ಡಿಸಿಯಾಗಿದ್ದ ರಂದೀಪ್ರನ್ನು ನೇಮಿಸಲಾಗಿದೆ.
ಮೈಸೂರಿಗೆ ನೂತನ ಡಿಸಿಯಾಗಿ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ಜಿಲ್ಲಾಧಿಕಾರಿಯಾಗಿ ದಯಾನಂದ, ವಿಜಯಪುರ ಜಿಲ್ಲಾಧಿಕಾರಿಯಾಗಿ ಶೆಟ್ಟಣ್ಣನವರ್, ರಾಮನಗರ ಜಿಲ್ಲಾಧಿಕಾರಿಯಾಗಿ ಕ್ಯಾಪ್ಟನ್ ರಾಜೇಂದ್ರ, ಯುವಜನ ಸೇವೆ ಆಯುಕ್ತೆಯಾಗಿ ಮಮತಾ, ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಕಾವೇರಿ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ಚಿತ್ರದುರ್ಗ: ಕಾಂಗ್ರೆಸ್ ನಲ್ಲಿ ಅಲ್ಲಾ ಮತ್ತು ರಾಮ ಇಬ್ಬರೂ ಇದ್ದಾರೆ ಎಂದು ಹೇಳುವ ಮೂಲಕ ಸಮಾಜಕಲ್ಯಾಣ ಸಚಿವ ಹೆಚ್. ಆಂಜನೇಯ ಅಚರು ಕಾರ್ಕಳದ ಬಿಜೆಪಿ ಶಾಸಕ ವಿ.ಸುನಿಲ್ ಕುಮಾರ್ ಅವರಿಗೆ ಟಾಂಗ್ ನೀಡಿದ್ದಾರೆ.
ಆರೋಪ ಮಾಡೋದಕ್ಕೆ ಬಿಜೆಪಿಯವರು ಹುಟ್ಟಿದ್ದು. ಮಹದಾಯಿ ವಿಚಾರವಾಗಿ ನಡೆಯುತ್ತಿರೋ ಬಂದ್ ಶಾಂತಿಯುತವಾಗಿ ನಡೆಯಬೇಕಿದೆ. ಮಹದಾಯಿ ವಿಚಾರವಾಗಿ ಬಿಜೆಪಿ ಮಾಡುವ ಆರೋಪಗಳಲ್ಲಿ ಹುರುಳಿಲ್ಲ. ಅವರವರ ರಾಜ್ಯಕ್ಕೆ ಅವರೇನು ಮಾಡ್ಕೋತಾರೋ, ಅವರಂತೆ ನಾವು ನಮ್ ರಾಜ್ಯಕ್ಕೆ ಮಾಡಿಕೊಳ್ಳಬೇಕು. ಅವರವರ ರಾಜ್ಯದ ಹಿತ ಕಾಯಲು ಎಲ್ಲರಿಗೂ ಸ್ವತಂತ್ರವಿದೆ. ಇದೇನು ಪಾಕಿಸ್ತಾನವೇ ಎಂದು ಬಿಜೆಪಿ ನಾಯಕರನ್ನು ಸಚಿವರು ಪ್ರಶ್ನಿಸಿದರು.
ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ನಾವು ಬೇಡ ಅಂದ್ರೆ ಬಿಜೆಪಿಯವರು ಬೇಕು ಅಂತಾರೆ. ವರ್ಗಾವಣೆ ವಿಚಾರದಲ್ಲಿ ರಾಜಕೀಯವಿದೆ ಅಂತಾ ಹೇಳೋದು ತಪ್ಪಾಗುತ್ತದೆ. ಆಡಳಿತದಲ್ಲಿ ವೇಗದ ದೃಷ್ಟಿಯಿಂದ ವರ್ಗಾವಣೆ ಮಾಡೋದು ಸಹಜ ಮತ್ತು ವರ್ಗಾವಣೆ ನಿರಂತರ ಪ್ರಕ್ರಿಯೆಯಾಗಿದೆ. ದಲಿತರಿಗೆ ಸ್ಮಶಾನ ನೀಡೋ ವಿಚಾರದಲ್ಲಿ ನಿರ್ಲಕ್ಷ್ಯ ತೋರಿರೊ ಜಿಲ್ಲಾಧಿಕಾರಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಹೀಗಾಗಿ ಸ್ಥಳೀಯರ ವಿರೋಧದಿಂದ ಇದೆಲ್ಲ ಆಗಿದೆ ಅಂತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಯನ್ನು ಸಚಿವರು ಸಮರ್ಥಿಸಿಕೊಂಡರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್
ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆಗೆ ನಾನೇ ಕಾರಣ ಅಂತ ಹಾಸನದ ಕಾಂಗ್ರೆಸ್ ನಾಯಕರೊಬ್ಬರು ಮಾತನಾಡಿರುವ ಆಡಿಯೋ ಕ್ಲಿಪ್ ಇದೀಗ ವಾಟ್ಸಪ್ ಮುಖಾಂತರ ಹರಿದಾಡುತ್ತಿದೆ.
ಬೇಲೂರು ತಾಲೂಕಿನ ಪಕ್ಷದ ಕಾರ್ಯಕರ್ತರೊಬ್ಬರೊಂದಿಗೆ ಸಂಭಾಷಣೆ ನಡೆಸಿರುವುದು ಮಾಜಿ ಸಚಿವ ಬಿ ಶಿವರಾಂ ಎನ್ನಲಾಗಿದೆ. ಬೇಲೂರು ಕನಾಯಕನ ಹಳ್ಳಿಯ ಸ್ಮಶಾನಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಶಿವರಾಂ, ಜಿಲ್ಲಾಧಿಕಾರಿ ವಿರುದ್ಧ ಅಸಮಾಧಾನದಿಂದ ಮಾತನಾಡಿದ್ದಾರೆ. ಆಯಮ್ಮನ ವರ್ಗಾವಣೆಯವರೆಗೆ ನಿನ್ನ ವಿಚಾರ ಹೋಗಿದೆ ನೋಡು ಎಂದು ಹೇಳುವ ಶಿವರಾಂ ಅವರ ಆಡಿಯೋ ಕ್ಲಿಪ್ ನಿಂದಾಗಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಇನ್ನೊಂದು ಕಾರಣ ಸಿಕ್ಕಂತಾಗಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್
ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಬಿ ಶಿವರಾಮ್ ಅವರು, ನಾವು ಸಮಾಜದಲ್ಲಿ ತುಳಿತಕ್ಕೆ ಒಳಗಾದವರಿಗೆ, ಧ್ವನಿ ಇಲ್ಲದವರಿಗೆ ಧ್ವನಿ ಕೊಡಬೇಕಾದಂತವರು. ಈ ರೀತಿಯ ದಲಿತರ ಮೇಲೆ ದೌರ್ಜನ್ಯ ನಡೆದಂತಹ ಘಟನೆಗಳಾದಾಗ ಸರ್ಕಾರದ ಮೇಲೆ ಯಾವ ಪರಿಣಾಮ ಬೀರುತ್ತೆ ಎನ್ನುವುದನ್ನು ನಾವು ಯೋಚನೆ ಮಾಡಬೇಕಾಗುತ್ತದೆ ಅಂದ್ರು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಸಿಎಂ ಸಮರ್ಥನೆ
ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಅಂತ ನಾನು ಅಲ್ಲಿ ಪ್ರಸ್ತಾಪ ಮಾಡಿಲ್ಲ. ಜಿಲ್ಲೆಯಲ್ಲಿಯ ಸಮಸ್ಯೆಗಳನ್ನು ತೆಗೆದುಕೊಂಡಾಗ ಇಟ್ ಈಸ್ ಎ ಮ್ಯಾಟರ್ ಆಫ್ ಸೆನ್ಸಿಟೀವ್. ಆ ಸಮಸ್ಯೆಗಳು ಯಾವ ತಿರುವು ಪಡೆದುಕೊಳ್ಳುತ್ತದೆ ಎಂಬುದನ್ನು ರಾಜಕಾರಣಿಗಳು ಯೋಚನೆ ಮಾಡಬೇಕಾಗುತ್ತದೆ ಅಂದ್ರು. ಇದನ್ನೂ ಓದಿ: ಕೈ ನಾಯಕರ ದೂರಿನ ಬೆನ್ನಲ್ಲೇ ಹಾಸನ ಡಿಸಿ ರೋಹಿಣಿ ಸಿಂಧೂರಿ ಎತ್ತಂಗಡಿ
ಇದಕ್ಕೆಲ್ಲಾ ವರ್ಗಾವಣೆಯೇ ದಾರಿ ಅಂತ ಹೇಳುತ್ತಿಲ್ಲ. ತಿದ್ದಿಕೊಳ್ಳಬೇಕಾದುದು ಅನಿವಾರ್ಯ. ಮುಖ್ಯಮಂತ್ರಿಗಳು ತಿದ್ದಿಕೊಂಡು ಹೋಗಬೇಕು ಅಂತಾ ಹೇಳಿರ್ತಾರೆ. ಅದನ್ನು ನೋಡಿಕೊಂಡು ಅವರು ಮುಂದಿನ ಹೆಜ್ಜೆ ಇಟ್ಟಿರ್ತಾರೆ. ಇದು ಆಡಳಿತಾತ್ಮಕವಾದ ವಿಚಾರ. ಆದ್ರೆ ಸಮಸ್ಯೆ ಇತ್ತಲ್ಲ. ಅದು ಒಂದೇ ಅಲ್ಲ. ಅದರ ಜೊತೆಗೆ ಚೆನ್ನಪಟ್ಟಣದಲ್ಲಿ ನಡೆದಂತಹ ಜಗಜೀವನ್ ರಾವ್ ಸಂಘದವರ ನಿವೇಶನದ ಬೇಡಿಕೆಗೆ ಇವರು ಅವರ ಜೊತೆ ಯಾವ ರೀತಿಯಾಗಿ ನಡೆದುಕೊಂಡಿದ್ದಾರೆ ಅಂತ ಹೇಳಿದ್ರು. ಇದನ್ನೂ ಓದಿ: ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್ಡಿಡಿ
ಅಧಿಕಾರಿಗಳು ಜನರ ಜೊತೆ ಯಾವ ರೀತಿ ಇರಬೇಕು? ಯಾವುದಕ್ಕೆ ಸ್ಪಂದಿಸಬೇಕು? ಸಾಮಾಜಿಕ ನ್ಯಾಯ ಕಾಪಾಡಬೇಕು. ನಾನಾ ಸಮಸ್ಯೆಗಳು ಇಂದು ಜಿಲ್ಲೆಯಲ್ಲಿವೆ. ಜಮೀನುಗಳ ಮಂಜೂರಾತಿ ಆಗಿಲ್ಲ. ಒಂದು ದಿನ ಜನತಾ ದರ್ಶನ ಮಾಡಲ್ಲ. ಅವರ ಪ್ರಮುಖವಾದ ಗೇಟಿಗೆ ಬೀಗ ಹಾಕಿರ್ತಾರೆ. ಜನರನ್ನು ನೇರವಾಗಿ ಮಾತನಾಡಿಸಿ ಅವರಿಗೆ ಸ್ಪಂದಿಸಿ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿಲ್ಲ ಅಂತ ಆರೋಪಿಸಿದ್ರು. ಇದನ್ನೂ ಓದಿ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಬಗ್ಗೆ ಸಿಎಂಗೆ ದೂರು ಹೇಳಿದ ಕಾಂಗ್ರೆಸ್ ನಾಯಕರು