Tag: Rohit Sharma

  • ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ICC ODI Rankings | ನಿವೃತ್ತಿ ವದಂತಿ ನಡುವೆಯೂ ನಂ.1 ಪಟ್ಟಕ್ಕೇರಿದ ಹಿಟ್‌ಮ್ಯಾನ್‌

    ಮುಂಬೈ: ನಿವೃತ್ತಿಯ ವದಂತಿ ನಡುವೆ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ರೋಹಿತ್ ಶರ್ಮಾ (Rohit Sharma) ಹೊಸ ಮೈಲುಗಲ್ಲು ಸಾಧಿಸಿದ್ದಾರೆ. ತಮ್ಮ 38ನೇ ವಯಸ್ಸಿನಲ್ಲಿ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ನಂ.1 ಬ್ಯಾಟ್ಸ್‌ ಮನ್ ಆಗಿ ಹೊರಹೊಮ್ಮಿದ್ದಾರೆ.

    ಇಂದು ಬಿಡುಗಡೆಯಾದ ನೂತನ ಏಕದಿನ ರ‍್ಯಾಂಕಿಗ್‌ ಪಟ್ಟಿಯಲ್ಲಿ (ICC ODI Rankings) ಟೀಂ ಇಂಡಿಯಾ ನಾಯಕ ಶುಭಮನ್‌ ಗಿಲ್‌ರನ್ನ (Shubman Gill) ಹಿಂದಿಕ್ಕಿ ಹಿಂದಿಕ್ಕಿ ವಿಶ್ವದ ನಂ.1 ಬ್ಯಾಟರ್‌ ಆಗಿ ಮಿಂಚಿದ್ದಾರೆ. ಆದ್ರೆ 5ನೇ ಸ್ಥಾನದಲ್ಲಿದ್ದ ಕೊಹ್ಲಿ 6ನೇ ಸ್ಥಾನಕ್ಕೆ ಕುಸಿದಿರೋದು ಅಭಿಮಾನಿಗಳಿಗೆ ಬೇಸರ ತರಿಸಿದೆ. ಇದನ್ನೂ ಓದಿ: ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಇತ್ತೀಚೆಗೆ ಮುಕ್ತಾಯಗೊಂಡ ಆಸ್ಟ್ರೇಲಿಯಾ (Australia) ವಿರುದ್ಧದ ಏಕೆದಿನ ಸರಣಿಯಲ್ಲಿ ಹಿಟ್‌ ಮ್ಯಾನ್‌ ಗರಿಷ್ಠ ರನ್‌ ಗಳಿಸಿದ್ದರು. ಮೂರು ಪಂದ್ಯಗಳಲ್ಲಿ 1 ಶತಕ, 1 ಅರ್ಧಶತಕ ಸೇರಿ 202ರ ರನ್‌ಗಳಿಸಿ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ರು. ಇದನ್ನೂ ಓದಿ: 12 ವರ್ಷಗಳ ಬಳಿಕ ಆಸೀಸ್‌ ವಿರುದ್ಧ ಅಜೇಯ ಶತಕದ ಜೊತೆಯಾಟ; ಈಗಲೂ ಅದೇ ಜೋಶ್‌

    ಟಾಪ್‌-5ನಲ್ಲಿ ಇಬ್ಬರು ಇಂಡಿಯನ್ಸ್‌
    ನೂತನವಾಗಿ ಬಿಡುಗಡೆಯಾದ ಏಕದಿನ ರ‍್ಯಾಂಕಿಗ್‌ನಲ್ಲಿ 781 ಅಂಕಗಳೊಂದಿಗೆ ಹಿಟ್‌ಮ್ಯಾನ್ ಅಗ್ರಸ್ಥಾನದಲ್ಲಿದ್ದಾರೆ. ಅಫ್ಘಾನ್‌ನ ಇಬ್ರಾಹಿಂ ಜದ್ರಾನ್ 764, ಶುಭಮನ್‌ ಗಿಲ್‌ 745 ಅಂಕ, ಪಾಕ್‌ನ ಬಾಬರ್‌ ಆಜಂ 739 ಅಂಕ, ಕಿವೀಸ್‌ನ ಡೇರಿಲ್‌ ಮಿಚೆಲ್‌ 734 ಅಂಕಗಳೊಂದಿಗೆ ಕ್ರಮವಾಗಿ 2,3,4,5ನೇ ಸ್ಥಾನಗಳಲ್ಲಿದ್ದಾರೆ. ಇದನ್ನೂ ಓದಿ: Shreyas Iyer In ICU | ಪಕ್ಕೆಲುಬು ಗಾಯದಿಂದ ರಕ್ತಸ್ರಾವ – ಐಸಿಯುನಲ್ಲಿ ಶ್ರೇಯಸ್‌ ಅಯ್ಯರ್‌ಗೆ ಚಿಕಿತ್ಸೆ

    Rohit Kohli 4

    6ಕ್ಕೆ ಕುಸಿದ ಕೊಹ್ಲಿ
    ಆಸ್ಟ್ರೇಲಿಯಾ ವಿರುದ್ಧದ 3ನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮತ್ತೆ ಫಾರ್ಮ್‌ಗೆ ಮರಳಿದ್ದರು. ಆಸಿಸ್‌ವಿರುದ್ಧ 237 ಚೇಸಿಂಗ್‌ನಲ್ಲಿ ಅಜೇಯ 74 ರನ್ ಗಳಿಸಿದರು. ಆದ್ರೆ ಮೊದಲ 2 ಪಂದ್ಯಗಳಲ್ಲಿ ಶೂನ್ಯ ಸುತ್ತಿದರು. ಇದರಿಂದ 725 ಅಂಕಗಳಷ್ಟೇ ಪಡೆದುಕೊಂಡು 5 ರಿಂದ 6ನೇ ಸ್ಥಾನಕ್ಕೆ ಕುಸಿದಿದ್ದಾರೆ.

  • ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ವೈಯಕ್ತಿಕ ಹಗೆತನಕ್ಕೆ ಬಲಿಯಾಗ್ತಿದೆಯೇ ಟೀಂ ಇಂಡಿಯಾ – ಇನ್ನೂ ಮುಗಿದಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?

    ಇತ್ತೀಚೆಗೆ ಭಾರತೀಯ ಪುರುಷರ ಕ್ರಿಕೆಟ್‌ ತಂಡ ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನ 2-0 ಅಂತರದಲ್ಲಿ ಸೋಲನುಭವಿಸಿತು. ಈ ಸರಣಿಯೊಂದಿಗೆ ನಿವೃತ್ತಿಯ ಅಂಚಿನಲ್ಲಿರುವ ಸ್ಟಾರ್‌ ಕ್ರಿಕೆಟಿಗರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾ ಮಣ್ಣಿಗೆ ವಿದಾಯ ಹೇಳಿದರು. ಸರಣಿ ಸೋಲಿನ ಬೆನ್ನಲ್ಲೇ ಟೀಂ ಇಂಡಿಯಾ ಕೋಚ್‌ ಗೌತಮ್ ಗಂಭೀರ್ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಅವರ ವಿರುದ್ಧ ಅಭಿಮಾನಿಗಳು ಅಸಮಾಧಾನಗೊಂಡಿದ್ದಾರೆ. ತಂಡದ ಆಯ್ಕೆ ಮತ್ತು ತಂತ್ರಗಾರಿಕೆಯಲ್ಲಿ ಲೋಪಗಳಾಗಿವೆ ಎಂಬ ಆರೋಪಗಳು ಕೇಳಿಬರುತ್ತಿವೆ. ಹಿರಿಯ ಆಟಗಾರರ ಅನುಭವವನ್ನು ಬಳಸಿಕೊಳ್ಳದಿರುವುದು ಕೂಡ ಟೀಕೆಗೆ ಗುರಿಯಾಗಿದೆ. ಇಬ್ಬರೂ ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡರೆ ತಂಡದ ಭವಿಷ್ಯ ಸುಗಮವಾಗಲಿದೆ ಎಂಬುದು ಕೂಡ ಕ್ರಿಕೆಟ್‌ ತಜ್ಞರ ಅಭಿಪ್ರಾಯವಾಗಿದೆ.

    ಅಷ್ಟಕ್ಕೂ ಟೀಂ ಇಂಡಿಯಾದಲ್ಲಿ ಏನಾಗ್ತಿದೆ? ವಿರಾಟ್‌ ಕೊಹ್ಲಿ, ಗೌತಮ್‌ ಗಂಭೀರ್‌, ರೋಹಿತ್‌ ಶರ್ಮಾ ನಡುವಿನ ಮುನಿಸು ಇನ್ನೂ ಬಗೆಹರಿದಿಲ್ಲವೇ? ಆಯ್ಕೆಯಲ್ಲಿ ಅನುಭವಿಗಳನ್ನೇ ಕಡೆಗಣಿಸುತ್ತಿರುವುದು ಏಕೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ…

    ಗಂಭಿರ್‌ ಕೋಚ್‌ ಆದ ಆರಂಭದಲ್ಲೇ ವಿಘ್ನ!
    ಹೌದು.. 2024ರ ವರ್ಷ ಟೀಂ ಇಂಡಿಯಾಕ್ಕೆ ಅವಿಸ್ಮರಣೀಯ ಕ್ಷಣಗಳನ್ನ ತಂದುಕೊಟ್ಟಿತ್ತು. ಟೀಂ ಇಂಡಿಯಾ ಮಾಜಿ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರ ಮಾರ್ಗದರ್ಶನದಲ್ಲಿ ಭಾರತ ತಂಡ ಟಿ20 ವಿಶ್ವಕಪ್‌ ಗೆದ್ದು ಬೀಗಿತ್ತು. ಈ ವಿಶ್ವಕಪ್‌ನೊಂದಿಗೆ ರಾಹುಲ್‌ ದ್ರಾವಿಡ್‌ ಕೋಚ್‌ ಹುದ್ದೆಗೆ ಗುಡ್‌ಬೈ ಹೇಳಿದ್ರು. ಹಾಗೆಯೇ ಲೆಜೆಂಡ್‌ ಆಟಗಾರರಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದರು. 2024ರ ಜುಲೈ ಅಂತ್ಯದಿಂದ ಗೌತಮ್‌ ಗಂಭೀರ್‌ ಟೀಂ ಇಂಡಿಯಾ ಮುಖ್ಯಕೋಚ್‌ ಆಗಿ ಆಯ್ಕೆಯಾದರು. ಗಂಭೀರ್‌ ಸಾರಥ್ಯ ವಹಿಸಿಕೊಂಡ ನಂತರ ಟಿ20 ಸರಣಿಯಲ್ಲಿ ಸಾಲು ಸಾಲು ಗೆಲುವು ಸಾಧಿಸಿಸುತ್ತಿದ್ದ ಭಾರತ ನಿರ್ಣಾಯಕ ಏಕದಿನ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಹೀನಾಯ ಸೋಲು ಅನುಭವಿಸುತ್ತಲೇ ಬಂದಿತು.

    ಕೋಚ್‌ ಆದ ಆರಂಭದಲ್ಲೇ ಶ್ರೀಲಂಕಾ ವಿರುದ್ಧ ಏಕದಿನ ಸರಣಿ, ಬಳಿಕ ನ್ಯೂಜಿಲೆಂಡ್‌ ವಿರುದ್ಧ 3 ಪಂದ್ಯಗಳ ಟೆಸ್ಟ್‌ ಸರಣಿ ಸೋತಿತು. ಆ ಬಳಿಕ ಭಾರತಕ್ಕೆ ಪ್ರತಿಷ್ಠೆಯ ಸರಣಿಯಾಗಿದ್ದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲೂ ಭಾರತ 1-4 ಅಂತರದಲ್ಲಿ ಹೀನಾಯ ಸೋಲು ಕಂಡಿತು.

    ಗಂಭೀರ್‌ಗೆ ಬಲ ತುಂಬಿದ ʻಚಾಂಪಿಯನ್ಸ್‌ ಟ್ರೋಫಿʼ
    ಯೆಸ್‌. ಸಾಲು ಸಾಲು ಸರಣಿಗಳನ್ನ ಸೋತು ಭಾರೀ ಟೀಕೆಗೆ ಗುರಿಯಾಗಿದ್ದ ಗಂಭೀರ್‌ ಅವರ ನಾಯಕತ್ವಕ್ಕೆ ಬಲ ತುಂಬಿದ್ದು 2025ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿ. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಈ ಟೂರ್ನಿಯಲ್ಲಿ ಭಾರತ ಒಂದೇ ಒಂದು ಪಂದ್ಯವನ್ನೂ ಸೋಲದೇ ಟ್ರೋಫಿ ಎತ್ತಿ ಹಿಡಿಯಿತು. ಇದು ಗಂಭೀರ್‌ ನಾಯಕತ್ವದಲ್ಲಿ ಭಾರತ ಗೆದ್ದ ಮೊದಲ ಐಸಿಸಿ ಟ್ರೋಫಿ. ಅಲ್ಲದೇ ಕಳೆದ ತಿಂಗಳಷ್ಟೇ ನಡೆದ ಟಿ20 ಏಷ್ಯಾಕಪ್‌ ಟ್ರೋಫಿಯನ್ನು ಭಾರತ ತನ್ನದಾಗಿಸಿಕೊಂಡಿತು. ಇದ್ರ ಹೊರತಾಗಿಯೂ ಇತ್ತೀಚಿನ ಟೂರ್ನಿಗಳಲ್ಲಿ ಗೌತಮ್‌ ಗಂಭಿರ್‌ ಹಾಗೂ ಆಯ್ಕೆಯ ಸಮಿತಿ ನಿರ್ಧಾರಗಳು ಟೀಂ ಇಂಡಿಯಾ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿವೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಮೊದಲ ಎರಡು ಸ್ಥಾನಗಳಲ್ಲೇ ಇರುತ್ತಿದ್ದ ಟೀಂ ಇಂಡಿಯಾ ಈಗ ಐಸಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಕುಸಿದಿದೆ. ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ. ಟಿ20 ಕ್ರಿಕೆಟ್‌ನಲ್ಲಿ ನಂ.1 ರ‍್ಯಾಂಕಿಗ್‌ ಇದ್ದರೂ, ರೇಟಿಂಗ್ಸ್‌ ಕಡಿಮೆ ಅಂತರದಲ್ಲೇ ಇದೆ. ಇದಕ್ಕೆ ಅನುಭವಿಗಳನ್ನ ಕಡೆಗಣಿಸುತ್ತಿರುವುದೇ ಕಾರಣ ಅಂತ ಗಂಭೀರ್‌ ಹಾಗೂ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ಭುಗಿಲೆದ್ದಿದೆ.

    ಇನ್ನೂ ಕೊನೆಯಾಗಿಲ್ವಾ ಕೊಹ್ಲಿ-ಗಂಭೀರ್‌ ಮುನಿಸು?
    ಒಂದು ಕಾಲದಲ್ಲಿ ದೋಸ್ತಿಗಳಾಗಿದ್ದ ಗೌತಮ್‌ ಗಂಭೀರ್‌, ಕೊಹ್ಲಿ ನಡುವೆ ಈಗಲೂ ಮುಸುಕಿನ ಗುದ್ದಾಟ ನಡೆಯುತ್ತಿದೆ ಅನ್ನೋದು ಕೆಲವರ ಅಭಿಪ್ರಾಯ. 2009ರಲ್ಲಿ ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ಗೌತಮ್‌ ಗಂಭೀರ್‌ ತಮ್ಮ ಮ್ಯಾನ್‌ ಆಫ್‌ದಿ ಮ್ಯಾಚ್‌ (ಪಂದ್ಯಶ್ರೇಷ್ಠ) ಪ್ರಶಸ್ತಿಯನ್ನ ಕೊಹ್ಲಿಗೆ ಬಿಟ್ಟುಕೊಟ್ಟಿದ್ದರು. ಆದ್ರೆ 2013ರ ಐಪಿಎಲ್‌ ಟೂರ್ನಿವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುವ ವೇಳೆ ವಿರಾಟ್‌ ಹಾಗೂ ಗಂಭೀರ್‌ ನಡುವೆ ಫಸ್ಟ್‌ ಟೈಂ ವಾಗ್ವಾದ ಏರ್ಪಟ್ಟಿತು. ಬಳಿಕ ಇದು ದೊಡ್ಡಾಗುತ್ತಲೇ ಸಾಗಿತು. ಗಂಭೀರ್‌, ಕೊಹ್ಲಿ ಇರುವ ತಂಡಗಳು ಪರಸ್ಪರ ಮುಖಾಮುಖಿಯಾದಾಗೆಲ್ಲ ಪರಸ್ಪರ ಕೌಂಟರ್‌ಗಳು ಮುಂದುವರಿಯಿತು. 2023ರ ಐಪಿಎಲ್‌ನಲ್ಲಿ ಗಂಭೀರ್‌ ಲಕ್ನೋ ಸೂಪರ್‌ ಜೈಂಟ್ಸ್‌ ಮೆಂಟರ್‌ ಆಗಿದ್ದಾಗ ಕೊಹ್ಲಿ ಅಭಿಮಾನಿಗಳಿಗೆ ಟಾಂಗ್‌ ಕೊಟ್ಟಿದ್ದರು, ಇದಕ್ಕೆ ಕೊಹ್ಲಿಗೆ ನೀಡಿದ ಕೌಂಟರ್‌ ಕೊಟ್ಟಾಗ ವಿವಾದ ದೊಡ್ಡಾಗಿತ್ತು. ಇದು ಈ ಇಬ್ಬರ ವೈಮನಸ್ಯ ಮುಂದುವರಿಯಲು ಕಾರಣವಾಗಿದೆ ಎನ್ನಲಾಗ್ತಿದೆ. ಮೇಲ್ನೋಟಕ್ಕೆ ಕೊಹ್ಲಿ-ರೋಹಿತ್‌-ಗಂಭೀರ್‌ ನಡುವೆ ಹೊಂದಾಣಿಕೆ ಇದ್ದಂತೆ ಕಂಡುಬಂದರೂ ಮುಸುಕಿನ ಗುದ್ದಾಟ ನಿಂತಿಲ್ಲ ಎನ್ನುತ್ತಿವೆ ಆಪ್ತ ಮೂಲಗಳು. ಮತ್ತೊಂದೆಡೆ ಈಗಾಗಲೇ 38 ವರ್ಷ ವಯಸ್ಸಿನ ರೋಹಿತ್‌, 37 ವರ್ಷದ ಕೊಹ್ಲಿಗೆ 2027ರ ವಿಶ್ವಕಪ್‌ಗೆ ಅವಕಾಶ ಸಿಗಲಿದೆಯೇ ಎಂಬುದನ್ನ ಕಾದುನೋಡಬೇಕಿದೆ.

    ರಾಹುಲ್‌, ಅಯ್ಯರ್‌ ಬಿಟ್ಟು ಗಿಲ್‌ಗೆ ಮಣೆಹಾಕಿದ್ದೇಕೆ?
    ಯೆಸ್‌. ಮತ್ತೊಂದು ಕಡೆ ಶುಭಮನ್‌ ಗಿಲ್‌ ಅವರನ್ನ ಟೀಂ ಇಂಡಿಯಾ ಕ್ಯಾಪ್ಟನ್‌ ಆಗಿ ಮಾಡಿದ್ದು, ಕೆಲವರಲ್ಲಿ ಬೇಸರ ತರಿಸಿದೆ. ಏಕೆಂದ್ರೆ 33 ವರ್ಷದ ಕೆ.ಎಲ್‌ ರಾಹುಲ್‌, 30 ವರ್ಷದ ಶ್ರೇಯಸ್‌ ಅಯ್ಯರ್‌ ತಂಡದಲ್ಲಿ ಅನುಭವಿಗಳಿದ್ದಾರೆ. ಚಾಂಪಿಯನ್ಸ್‌ ಟ್ರೋಫಿಯಲ್ಲಿ ಶ್ರೇಯಸ್‌ ಅಯ್ಯರ್‌ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನದೊಂದಿಗೆ ಗರಿಷ್ಠ ರನ್‌ ಗಳಿಸಿದ್ರು. ಇನ್ನೂ ಕೆ.ಎಲ್‌ ರಾಹುಲ್‌ ಮ್ಯಾಚ್‌ ಫಿನಿಷರ್‌ ಆಗಿ ಅದ್ಭುತ ಪ್ರದರ್ಶನ ನೀಡಿದ್ದರು. ಅಲ್ಲದೇ 2023ರಲ್ಲೂ ರಾಹುಲ್‌ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲ್ಲಿಸಿ ಸೈ ಎನಿಸಿಕೊಂಡಿದ್ದರು. ಹೀಗಾಗಿ ಕೆಲವರು ಕೆ.ಎಲ್‌ ರಾಹುಲ್‌ಗೆ ನಾಯಕತ್ವ ಸಿಗುತ್ತೇ ಎಂದೇ ಭಾವಿಸಿದ್ದರು. ಇನ್ನೂ ಕೆಲವರು ಶ್ರೇಯಸ್‌ ಅಯ್ಯರ್‌ ಅವರಿಗೆ ಅವಕಾಶ ಸಿಗಲಿದೆ ಅಂದುಕೊಂಡಿದ್ದರು. ಏಕೆಂದ್ರೆ 26 ವರ್ಷದ ಗಿಲ್‌ಗೆ ಇನ್ನೂ 8-10 ವರ್ಷ ಆಡುವ ಅವಕಾಶವಿದೆ. ಆದ್ರೆ ಗಂಭೀರ್‌ ಅವರ ಮಾಸ್ಟರ್‌ ಪ್ಲ್ಯಾನ್‌ ಬೇರೆಯೇ ಇತ್ತು. ಏಕಾಏಕಿ ಗಿಲ್‌ ಅವರಿಗೆ ನಾಯಕತ್ವದ ಹಣೆಪಟ್ಟಿ ಕಟ್ಟಿದರು. ಇದು ರಾಹುಲ್‌, ಅಯ್ಯರ್‌ ಅಭಿಮಾನಿಗಳಲ್ಲಿ ತೀರ ಬೇಸರ ಮೂಡಿಸಿದೆ.

    ಆಸಿಸ್‌ ವಿರುದ್ಧ ಸರಣಿಯಲ್ಲಿ ಗಂಭೀರ್‌ ಮಾಡಿದ ತಪ್ಪುಗಳೇನು?
    SENA ದೇಶಗಳಲ್ಲಿ ಅಂದ್ರೆ ಇಂಗ್ಲೆಂಡ್, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದಕ್ಷಿಣ ಆಫ್ರಿಕಾ ದೇಶಗಳಲ್ಲಿನ ಕ್ರಿಕೆಟ್ ಪಿಚ್‌ಗಳು ಒಂದೇ ರೀತಿಯ ಭೌಗೋಳಿಕ – ಪ್ರಾಕೃತಿಕ ಮೂಲಗುಣಗಳನ್ನ ಹೊಂದಿರುತ್ತವೆ. ಹಾಗಾಗಿ, ಆ ದೇಶಗಳಲ್ಲಿ ನಡೆಯುವ ಕ್ರಿಕೆಟ್ ಸರಣಿಗಳಿಗೆ ಹೋಗುವ ಭಾರತ ತಂಡವನ್ನು ಅತ್ಯಂತ ಜಾಣತನದಿಂದ ಆಯ್ಕೆ ಮಾಡಬೇಕಾಗುತ್ತದೆ. ಆದರೆ, ಇದೇ ವರ್ಷ ನಡೆದಿರುವ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನೆಲದಲ್ಲಿ ನಡೆದಿರುವ ಸರಣಿಗಳಿಗಾಗಿ ಆಯ್ಕೆ ಮಾಡಿರುವ ಭಾರತ ತಂಡಕ್ಕೆ ಸೂಕ್ತ ಆಟಗಾರರನ್ನ ಆಯ್ಕೆ ಮಾಡದಿರುವುದು ಗೌತಮ್ ಗಂಭೀರ್ ಮೇಲಿರುವ ಪ್ರಮುಖವಾದ ಆಪಾದನೆಯಾಗಿದೆ. ಅಂಥ ತಪ್ಪುಗಳನ್ನು ಹೀಗೆ ಪಟ್ಟಿ ಮಾಡಬಹುದು.

    * ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಿದ್ದು,
    * ಇಂಗ್ಲೆಂಡ್ ವಿರುದ್ಧ ಕುಲ್‌ದೀಪ್‌ ಯಾದವ್ ಅವರ ಟ್ರ್ಯಾಕ್ ರೆಕಾರ್ಡ್ ಉತ್ತಮವಾಗಿದ್ದರೂ ಅವರನ್ನು ಇಂಗ್ಲೆಂಡ್ ವಿರುದ್ಧದ ಸರಣಿಯ‌ಲ್ಲಿ ಪ್ಲೇಯಿಂಗ್‌-11ನಿಂದ ಹೊರಗಿಟ್ಟಿದ್ದು,
    * ಆಸ್ಟ್ರೇಲಿಯಾದಲ್ಲಿನ ಗ್ರೀನ್-ಟಾಪ್ ಪಿಚ್ ಗಳಲ್ಲಿ ಇಬ್ಬರು ಸ್ಪಿನ್ನರ್ ಗಳನ್ನು ತಂಡದಲ್ಲಿ ಆಡಿಸಿದ್ದು,
    * ಆಸೀಸ್ ಪಿಚ್‌ಗಳಲ್ಲಿ ಇನ್ನೂ ನುರಿತಿರಲಾರದ ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ ಅವರನ್ನ ಕಣಕ್ಕಿಳಿಸಿದ್ದು.

    AUS vs IND 2nd ODI

    ಇದನ್ನು ಹೊರತುಪಡಿಸಿಯೂ, ಗಂಭೀರ್ ಅವರ ತಪ್ಪು ಆಯ್ಕೆಗಳಿಂದಾಗಿ ತಂಡದ ಪ್ರದರ್ಶನದ ಕಳಪೆಯಾದಾಗ ಯಾರಾದರೂ ಆ ಬಗ್ಗೆ ಮಾತನಾಡಿದರೆ ಅವರಿಗೆ ಧಿಮಾಕಿನ ಉತ್ತರ ಕೊಡುವುದು ಗಂಭೀರ್ ಅವರ ಮತ್ತೊಂದು ಗುಣ. ಕ್ರಿಸ್ ಶ್ರೀಕಾಂತ್ ಅವರು ಹಿಂದೆ ತಂಡದ ಪ್ರದರ್ಶನದ ಬಗ್ಗೆ ಮಾತನಾಡಿದಾಗ ಅವರು ಲೆಜೆಂಡ್ ಎಂಬುದನ್ನೂ ಕೇರ್ ಮಾಡದೇ ಒರಟಾಗಿ ಉತ್ತರ ಕೊಟ್ಟಿದ್ದರು ಗಂಭೀರ್. ಅದೂ ಅಲ್ಲದೆ, ಅವರ ಸೋಷಿಯಲ್ ಮೀಡಿಯಾ ಪೋಸ್ಟ್ ಗಳು, ಸರ್ಫರಾಜ್ ಖಾನ್ ಅವರ ವಿರುದ್ಧ ಧೋರಣೆ… ಇವೆಲ್ಲದರ ಬಗ್ಗೆಯೂ ಈಗ ಅಸಮಾಧಾನ ಭುಗಿಲೆದ್ದಿದೆ. ಇದಕ್ಕೆ ಬಿಸಿಸಿಐ ಯಾವ ರೀತಿ ಮದ್ದು ಅರೆಯುತ್ತದೆ ಎಂಬುದನ್ನ ಇನ್ನಷ್ಟೇ ಕಾದುನೋಡಬೇಕಿದೆ.

  • 12 ವರ್ಷಗಳ ಬಳಿಕ ಆಸೀಸ್‌ ವಿರುದ್ಧ ಅಜೇಯ ಶತಕದ ಜೊತೆಯಾಟ; ಈಗಲೂ ಅದೇ ಜೋಶ್‌

    12 ವರ್ಷಗಳ ಬಳಿಕ ಆಸೀಸ್‌ ವಿರುದ್ಧ ಅಜೇಯ ಶತಕದ ಜೊತೆಯಾಟ; ಈಗಲೂ ಅದೇ ಜೋಶ್‌

    ಸಿಡ್ನಿ: ಒಬ್ಬ ಕ್ರಿಕೆಟ್‌ ಲೋಕದ ಕಿಂಗ್‌ (King Of Cricket), ಮತ್ತೊಬ್ಬ ಎದುರಾಳಿಗಳ ಎದೆಯಲ್ಲಿ ನಡುಕ ಹುಟ್ಟಿಸುವ ಹಿಟ್‌ಮ್ಯಾನ್‌. ಯೆಸ್‌. ರೋ-ಕೊ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ? ಕ್ರಿಕೆಟ್‌ ಜಗತ್ತಿನಲ್ಲಿ ದಂತಕಥೆಗಳಾಗಿ ಉಳಿಯುವ ಈ ಜೋಡಿ ಅಭಿಮಾನಿಗಳಿಗೆ ಎಂದಿಗೂ ಅಚ್ಚುಮೆಚ್ಚು.

    ಆಸ್ಟ್ರೇಲಿಯಾ ವಿರುದ್ಧ ಸಿಡ್ನಿ ಕ್ರಿಕೆಟ್‌ ಅಂಗಳದಲ್ಲಿ ಇಂದು ನಡೆದ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ರೋಹಿತ್‌ ಶರ್ಮಾ (Rohit Sharma) ಹಾಗೂ ವಿರಾಟ್‌ ಕೊಹ್ಲಿ (Virat Kohli) ಜೋಡಿ ಅಮೋಘ ಶತಕದ ಜೊತೆಯಾಟ ನೀಡಿ ಅಭಿಮಾನಿಗಳನ್ನ ರಂಜಿಸಿದೆ. 13 ವರ್ಷಗಳ ಬಳಿಕ ಆಸ್ಟ್ರೇಲಿಯಾ ವಿರುದ್ಧವೇ ವಿಕೆಟ್‌ ಬಿಟ್ಟುಕೊಡದೇ ರೋ-ಕೊ ಜೋಡಿ ಗೆಲುವು ತಂದುಕೊಟ್ಟಿದೆ. ಆದ್ರೆ ಅಂದು ಇಬ್ಬರೂ ಶತಕ ಸಿಡಿಸಿ ಅಬ್ಬರಿಸಿದರು. ಇಂದು ರನ್‌ ಕೊರತೆಯಿಂದ ರೋಹಿತ್‌ ಒಬ್ಬರೇ ಶತಕಗಳಿಸಲು ಸಾಧ್ಯವಾಯಿತು.

    2013ರಲ್ಲಿ ಏನಾಗಿತ್ತು?
    2013ರಲ್ಲಿ ಭಾರತ ಮತ್ತು ಆಸೀಸ್‌ (Asutralia) ನಡುವೆ 7 ಪಂದ್ಯಗಳ ಏಕದಿನ ಸರಣಿ ಆಯೋಜನೆಗೊಂಡಿತ್ತು. ಭಾರತ 3ರಲ್ಲಿ ಗೆಲುವು ಸಾಧಿಸಿತ್ತು. ಆಸ್ಟ್ರೇಲಿಯಾ 2ರಲ್ಲಿ ಗೆದ್ದಿದ್ದರೆ. 2 ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೇ ರದ್ದಾಗಿತ್ತು. ಈ ಸರಣಿಯ 2ನೇ ಪಂದ್ಯ ಜೈಪುರದ ಸವಾಯಿ ಮಾನ್ಸಿಂಗ್‌ ಕ್ರೀಡಾಂಗಣದಲ್ಲಿ ನಡೆದಿತ್ತು. ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯಾ 5 ವಿಕೆಟ್‌ ನಷ್ಟಕ್ಕೆ 359 ರನ್‌ ಗಳಿಸಿ ಭಾರತಕ್ಕೆ 360 ರನ್‌ ಗುರಿ ನೀಡಿತ್ತು.

    ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಭಾರತ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾಗಿತ್ತು. ಆದ್ರೆ ಸ್ಫೋಟಕ ಪ್ರದರ್ಶನ ನೀಡುತ್ತಿದ್ದ ಶಿಖರ್‌ ಧವನ್‌ 86 ಎಸೆತಗಳಲ್ಲಿ 95 ರನ್‌ ಗಳಿಸಿದ್ದರು, ಶತಕದ ಅಂಚಿನಲ್ಲಿದ್ದಾಗಲೇ ವಿಕೆಟ್‌ ಒಪ್ಪಿಸಿ ನಿರಾಸೆ ಅನುಭವಿಸಿದ್ರು. ಬಳಿಕ ಕ್ರೀಸ್‌ಗಿಳಿದ ಕೊಹ್ಲಿ, ರೋಹಿತ್‌ ಶರ್ಮಾ ಜೊತೆಗೂಡಿ, ಇಬ್ಬರೂ ಅಬ್ಬರಿಸಲು ಶುರು ಮಾಡಿದರು. ಕೊಹ್ಲಿ 52 ಎಸೆತಗಳಲ್ಲಿ ಅಜೇಯ ಶತಕ ಗಳಿಸಿದ್ರೆ, ರೋಹಿತ್‌ ಅಜೇಯ 141 ರನ್‌ (123 ಎಸೆತ, 17 ಬೌಂಡರಿ, 4 ಸಿಕ್ಸರ್)‌ ಗಳಿಸುವ ಮೂಲಕ ಗೆಲುವು ತಂದುಕೊಟ್ಟಿದ್ದರು. ಅಂದು 104 ಎಸೆತಗಳಲ್ಲಿ 186 ರನ್‌ ಜೊತೆಯಾಟ ನೀಡಿದ ಈ ಜೋಡಿ 12 ವರ್ಷಗಳ ಬಳಿಕ ಶತಕದ ಜೊತೆಯಾಟ ನೀಡಿ (170 ಎಸೆ‌ತಗಳಲ್ಲಿ 168 ರನ್‌ಗಳ ಅಜೇಯ ಜೊತೆಯಾಟ) ಮತ್ತೊಮ್ಮೆ ಅಬ್ಬರಿಸಿದೆ.

    ಇಂದು ಏನಾಯ್ತು?
    ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಿಂದ ಬ್ಯಾಟಿಂಗ್‌ ಆಯ್ದುಕೊಂಡಿತು. ಮೊದಲ ವಿಕೆಟ್‌ಗೆ ಟ್ರಾವಿಸ್‌ ಹೆಡ್‌ ಹಾಗೂ ಮಿಚೆಲ್‌ ಮಾರ್ಷ್‌ ಜೋಡಿ 9.2 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಈ ವೇಳೆ ಡೇಂಜರಸ್‌ ಬ್ಯಾಟರ್‌ ಟ್ರಾವಿಸ್‌ ಆಟಕ್ಕೆ ಸಿರಾಜ್‌ ಬ್ರೇಕ್‌ ಹಾಕಿದರು. ನಂತರದಲ್ಲಿ ಮ್ಯಾಟ್ ರೆನ್ಶಾ ಅರ್ಧಶತಕ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಪೆವಿಲಿಯನ್‌ ಸೇರಿಕೊಂಡರು. ಹೀಗಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲೇ 236 ರನ್‌ಗಳಿಗೆ ಆಲೌಟ್‌ ಆಯಿತು.

    ಚೇಸಿಂಗ್‌ ಆರಂಭಿಸಿದ ಭಾರತ ಕೇವಲ 38.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 237 ರನ್‌ ಗಳಿಸಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆರಂಭಿಕನಾಗಿ ಕಣಕ್ಕಿಳಿದ 38 ವರ್ಷ ವಯಸ್ಸಿನ ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಅಜೇಯ 121‌ ರನ್‌ (125 ಎಸೆತ, 13 ಬೌಂಡರಿ, 3 ಸಿಕ್ಸರ್)‌ ಗಳಿಸಿದ್ರೆ, ವಿರಾಟ್‌ ಕೊಹ್ಲಿ ಅಜೇಯ 74 ರನ್‌ (81 ಎಸೆತ, 7 ಬೌಂಡರಿ) ಚಚ್ಚಿದರು. ನಿವೃತ್ತಿಯ ಅಂಚಿನಲ್ಲಿರುವ ಈ ಜೋಡಿ ಆಸ್ಟ್ರೇಲಿಯಾ ವಿರುದ್ಧ ದಶಕದ ಬಳಿಕ ಅಬ್ಬರಿಸಿದ್ದು ಅಭಿಮಾನಿಗಳನ್ನ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಈ ಜೋಡಿಯ ಹಳೆಯ ಫೋಟೋಗಳೆಲ್ಲವೂ ಈಗ ವೈರಲ್‌ ಆಗುತ್ತಿವೆ.

  • ಶತಕ ಸಿಡಿಸಿ ಕ್ರಿಕೆಟ್‌ ದೇವರ ದಾಖಲೆ ಸರಿಗಟ್ಟಿದ ಶರ್ಮಾ – ಕೊಹ್ಲಿ ದಾಖಲೆಯೂ ಉಡೀಸ್‌

    ಶತಕ ಸಿಡಿಸಿ ಕ್ರಿಕೆಟ್‌ ದೇವರ ದಾಖಲೆ ಸರಿಗಟ್ಟಿದ ಶರ್ಮಾ – ಕೊಹ್ಲಿ ದಾಖಲೆಯೂ ಉಡೀಸ್‌

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿಂದು ಮಾಜಿ ನಾಯಕ ರೋಹಿತ್‌ ಶರ್ಮಾ ಭರ್ಜರಿ ಶತಕ ಸಿಡಿಸಿದ್ದಾರೆ. ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದ ಶರ್ಮಾ 125 ಎಸೆತಗಳಲ್ಲಿ ಅಜೇಯ 121 ರನ್‌ ಸಿಡಿಸಿದ್ದಾರೆ. ಈ ಶತಕದೊಂದಿಗೆ ಕ್ರಿಕೆಟ್‌‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ಅಪರೂಪದ ದಾಖಲೆಯೊಂದನ್ನ ಸರಿಗಟ್ಟಿದ್ದಾರೆ. ಜೊತೆಗೆ ವಿರಾಟ್‌ ಕೊಹ್ಲಿ ಅಪರೂಪದ ದಾಖಲೆಯನ್ನೂ ಮುರಿದಿದ್ದಾರೆ.

    ಹೌದು. ಸರಣಿಯ ಕೊನೆಯ ಪಂದ್ಯದಲ್ಲಿ ಅಜೇಯ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ 9 ಶತಕ ಸಿಡಿಸಿದ್ದ ಸಚಿನ್‌ ತೆಂಡಲ್ಕೂರ್‌ ಅವರ ದಾಖಲೆಯನ್ನ ಸರಿಗಟ್ಟಿದರು. ಜೊತೆಗೆ 8 ಶತಕ ಸಿಡಿಸಿದ್ದ ಕಿಂಗ್‌ ಕೊಹ್ಲಿಯ ದಾಖಲೆಯನ್ನು ಮುರಿದರು. ಆಸೀಸ್‌ ವಿರುದ್ಧ ಕೊಹ್ಲಿ 51 ಇನ್ನಿಂಗ್ಸ್‌ಗಳಲ್ಲಿ 8 ಶತಕ ಸಿಡಿಸಿದ್ರೆ, ತೆಂಡೂಲ್ಕರ್‌ 70 ಇನ್ನಿಂಗ್ಸ್‌ಗಳಲ್ಲಿ 9 ಶತಕ ಸಿಡಿಸಿದ್ದರು. ಆದ್ರೆ ಹಿಟ್‌ ಮ್ಯಾನ್‌ ಶರ್ಮಾ ಕೇವಲ 49 ಇನ್ನಿಂಗ್ಸ್‌ಗಳಲ್ಲೇ ಆಸೀಸ್‌ ವಿರುದ್ಧ 9 ಶತಕ ಸಿಡಿಸಿ ದಾಖಲೆ ಬರೆದರು.

    ಆಸ್ಟ್ರೇಲಿಯಾ ವಿರುದ್ಧ ಅತಿಹೆಚ್ಚು ಶತಕ ಸಿಡಿಸಿದ ಟಾಪ್‌-5 ಬ್ಯಾಟರ್ಸ್‌
    * ರೋಹಿತ್‌ ಶರ್ಮಾ – 49 ಇನ್ನಿಂಗ್ಸ್‌ – 9 ಶತಕ
    * ಸಚಿನ್‌ ತೆಂಡೂಲ್ಕರ್‌ – 70 ಇನ್ನಿಂಗ್ಸ್‌ – 9 ಶತಕ
    * ವಿರಾಟ್‌ ಕೊಹ್ಲಿ – 53 ಇನ್ನಿಂಗ್ಸ್‌ – 8 ಶತಕ
    * ಡೆಸ್ಮಂಡ್ ಹೇನ್ಸ್ – 64 ಇನ್ನಿಂಗ್ಸ್‌ – 6 ಶತಕ
    * ವಿವಿಯನ್‌ ರಿಚರ್ಡ್ಸ್‌ – 54 ಇನ್ನಿಂಗ್ಸ್‌ – 3 ಶತಕ

    ರೋ-ಕೊ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು
    ಸಿಡ್ನಿ ಅಂಗಳದಲ್ಲಿಂದು ನಡೆದ ಏಕದಿನ ಸರಣಿಯ 3ನೇ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲಿ 236 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಕೇವಲ 38.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 237 ರನ್‌ ಗಳಿಸಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

    ರೊಹಿತ್‌ ಬೊಂಬಾಟ್‌ ಶತಕ
    ಆರಂಭಿಕನಾಗಿ ಕಣಕ್ಕಿಳಿದ 38 ವರ್ಷ ವಯಸ್ಸಿನ ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಅಜೇಯ 121‌ ರನ್‌ (125 ಎಸೆತ, 13 ಬೌಂಡರಿ, 3 ಸಿಕ್ಸರ್)‌ ಗಳಿಸಿದ್ರೆ, ವಿರಾಟ್‌ ಕೊಹ್ಲಿ ಅಜೇಯ 74 ರನ್‌ (81 ಎಸೆತ, 7 ಬೌಂಡರಿ) ಚಚ್ಚಿದರು. ಆಸೀಸ್‌ ಪರ ಜೋಶ್‌ ಹೇಜಲ್ವುಡ್‌ ಒಂದು ವಿಕೆಟ್‌ ಪಡೆದರು.

    ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಿಂದ ಬ್ಯಾಟಿಂಗ್‌ ಆಯ್ದುಕೊಂಡಿತು. ಮೊದಲ ವಿಕೆಟ್‌ಗೆ ಟ್ರಾವಿಸ್‌ ಹೆಡ್‌ ಹಾಗೂ ಮಿಚೆಲ್‌ ಮಾರ್ಷ್‌ ಜೋಡಿ 9.2 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಈ ವೇಳೆ ಡೇಂಜರಸ್‌ ಬ್ಯಾಟರ್‌ ಟ್ರಾವಿಸ್‌ ಆಟಕ್ಕೆ ಸಿರಾಜ್‌ ಬ್ರೇಕ್‌ ಹಾಕಿದರು. ನಂತರದಲ್ಲಿ ಮ್ಯಾಟ್ ರೆನ್ಶಾ ಅರ್ಧಶತಕ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಪೆವಿಲಿಯನ್‌ ಸೇರಿಕೊಂಡರು. ಹೀಗಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲೇ 236 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು.

    ಆಸ್ಟ್ರೇಲಿಯಾ ಪರ ನಾಯಕ ಮಿಚೆಲ್‌ ಮಾರ್ಷ್‌ 41 ರನ್‌, ಟ್ರಾವಿಸ್‌ ಹೆಡ್‌ 29 ರನ್‌, ಮ್ಯಾಥಿವ್‌ ಶಾರ್ಟ್‌ 30 ರನ್‌, ಮ್ಯಾಟ್‌ ರೆನ್‌ಶಾ 56 ರನ್‌ (58 ಎಸೆತ, 2 ಬೌಂಡರಿ), ಅಲೆಕ್ಸ್‌ ಕ್ಯಾರಿ 24 ರನ್‌, ಕೂಪರ್‌ ಕಾನ್ನೋಲ್ಲಿ 23 ರಮ್‌, ಮಿಚೆಲ್‌ ಓವೆನ್‌ 1 ರನ್‌, ಮಿಚೆಲ್‌ ಸ್ಟಾರ್ಕ್‌ 2 ರನ್‌, ನಥಾನ್‌ ಎಲ್ಲಿಸ್‌ 16 ರನ್‌, ಆಡಂ ಝಂಪಾ ಅಜೇಯ 2 ರನ್‌ ಗಳಿಸಿದ್ರೆ ಜೋಶ್‌ ಹ್ಯಾಜಲ್‌ವುಡ್‌ ಶೂನ್ಯ ಸುತ್ತಿದರು.

    ಟೀಂ ಇಂಡಿಯಾ ಪರ ಹರ್ಷಿತ್‌ ರಾಣಾ 4 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಸಿರಾಜ್‌, ಪ್ರಸಿದ್ಧ್‌ ಕೃಷ್ಣ, ಕುಲ್ದೀಪ್‌ ಯಾದವ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ರೋ-ಕೊ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು – ವೈಟ್‌ವಾಶ್‌ನಿಂದ ಪಾರು, ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

    ರೋ-ಕೊ ಆರ್ಭಟಕ್ಕೆ ಕಾಂಗರೂ ಪಡೆ ಕಂಗಾಲು – ವೈಟ್‌ವಾಶ್‌ನಿಂದ ಪಾರು, ಭಾರತಕ್ಕೆ 9 ವಿಕೆಟ್‌ಗಳ ಭರ್ಜರಿ ಜಯ

    ಸಿಡ್ನಿ: ಹಿಟ್‌ ಮ್ಯಾನ್‌ ರೋಹಿತ್‌ ಶರ್ಮಾ (Rohit Sharma) ಅಮೋಘ ಶತಕ, ಕಿಂಗ್‌ ಕೊಹ್ಲಿಯ (Virat Kohli) ಆಕರ್ಷಕ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಭಾರತ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ವೈಟ್‌ವಾಶ್‌ ಆಗುವುದನ್ನ ತಪ್ಪಿಸಿಕೊಂಡಿದೆ.

    ಸಿಡ್ನಿ ಅಂಗಳದಲ್ಲಿಂದು ನಡೆದ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟ್‌ಮಾಡಿದ ಆಸ್ಟ್ರೇಲಿಯಾ (Australia) 46.4 ಓವರ್‌ಗಳಲ್ಲಿ 236 ರನ್‌ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಭಾರತ ಕೇವಲ 38.3 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 237 ರನ್‌ ಗಳಿಸಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

    ಚೇಸಿಂಗ್‌ ಆಂಭಿಸಿದ ಭಾರತ 10.2 ಓವರ್‌ಗಳಲ್ಲಿ 69 ರನ್‌ ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಲ್ಲಿದ್ದ ಕ್ಯಾಪ್ಟನ್‌ ಶುಭಮನ್‌ ಗಿಲ್‌ 26 ಎಸೆತಗಳಲ್ಲಿ 24 ರನ್‌ ಗಳಿಸಿ ಪೆವಿಲಿಯನ್‌ ಸೇರಿಸಿಕೊಂಡರು. ಬಳಿಕ ಜೊತೆಗೂಡಿದ ವಿರಾಟ್‌ ಕೊಹ್ಲಿ – ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ತಂಡವನ್ನು ಗೆಲುವಿನ ದಡ ಸೇರಿಸಿದರು. ಮುರಿಯದ 2ನೇ ವಿಕೆಟ್‌ಗೆ ಈ ಜೋಡಿ 170 ಎಸೆತಗಳಲ್ಲಿ 168 ರನ್‌ ಕಲೆಹಾಕಿತು.

    ರೊಹಿತ್‌ ಬೊಂಬಾಟ್‌ ಶತಕ
    ಆರಂಭಿಕನಾಗಿ ಕಣಕ್ಕಿಳಿದ 38 ವರ್ಷ ವಯಸ್ಸಿನ ರೋಹಿತ್‌ ಶರ್ಮಾ ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಅಜೇಯ 121‌ ರನ್‌ (125 ಎಸೆತ, 13 ಬೌಂಡರಿ, 3 ಸಿಕ್ಸರ್)‌ ಗಳಿಸಿದ್ರೆ, ವಿರಾಟ್‌ ಕೊಹ್ಲಿ ಅಜೇಯ 74 ರನ್‌ (81 ಎಸೆತ, 7 ಬೌಂಡರಿ) ಚಚ್ಚಿದರು. ಆಸೀಸ್‌ ಪರ ಜೋಶ್‌ ಹೇಜಲ್ವುಡ್‌ ಒಂದು ವಿಕೆಟ್‌ ಪಡೆದರು.

    ಮೊದಲು ಟಾಸ್‌ ಗೆದ್ದ ಆಸ್ಟ್ರೇಲಿಯಾ ಬೃಹತ್‌ ಮೊತ್ತ ಪೇರಿಸುವ ಉತ್ಸಾಹದಿಂದ ಬ್ಯಾಟಿಂಗ್‌ ಆಯ್ದುಕೊಂಡಿತು. ಮೊದಲ ವಿಕೆಟ್‌ಗೆ ಟ್ರಾವಿಸ್‌ ಹೆಡ್‌ ಹಾಗೂ ಮಿಚೆಲ್‌ ಮಾರ್ಷ್‌ ಜೋಡಿ 9.2 ಓವರ್‌ಗಳಲ್ಲಿ 61 ರನ್‌ ಕಲೆಹಾಕಿತ್ತು. ಈ ವೇಳೆ ಡೇಂಜರಸ್‌ ಬ್ಯಾಟರ್‌ ಟ್ರಾವಿಸ್‌ ಆಟಕ್ಕೆ ಸಿರಾಜ್‌ ಬ್ರೇಕ್‌ ಹಾಕಿದರು. ನಂತರದಲ್ಲಿ ಮ್ಯಾಟ್ ರೆನ್ಶಾ ಅರ್ಧಶತಕ ಗಳಿಸಿದ್ದು ಬಿಟ್ಟರೆ, ಉಳಿದ ಆಟಗಾರರು ಅಲ್ಪಮೊತ್ತಕ್ಕೆ ಪೆವಿಲಿಯನ್‌ ಸೇರಿಕೊಂಡರು. ಹೀಗಾಗಿ ಆಸ್ಟ್ರೇಲಿಯಾ 46.4 ಓವರ್‌ಗಳಲ್ಲೇ 236 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡಿತು.

    ಆಸ್ಟ್ರೇಲಿಯಾ ಪರ ನಾಯಕ ಮಿಚೆಲ್‌ ಮಾರ್ಷ್‌ 41 ರನ್‌, ಟ್ರಾವಿಸ್‌ ಹೆಡ್‌ 29 ರನ್‌, ಮ್ಯಾಥಿವ್‌ ಶಾರ್ಟ್‌ 30 ರನ್‌, ಮ್ಯಾಟ್‌ ರೆನ್‌ಶಾ 56 ರನ್‌ (58 ಎಸೆತ, 2 ಬೌಂಡರಿ), ಅಲೆಕ್ಸ್‌ ಕ್ಯಾರಿ 24 ರನ್‌, ಕೂಪರ್‌ ಕಾನ್ನೋಲ್ಲಿ 23 ರಮ್‌, ಮಿಚೆಲ್‌ ಓವೆನ್‌ 1 ರನ್‌, ಮಿಚೆಲ್‌ ಸ್ಟಾರ್ಕ್‌ 2 ರನ್‌, ನಥಾನ್‌ ಎಲ್ಲಿಸ್‌ 16 ರನ್‌, ಆಡಂ ಝಂಪಾ ಅಜೇಯ 2 ರನ್‌ ಗಳಿಸಿದ್ರೆ ಜೋಶ್‌ ಹ್ಯಾಜಲ್‌ವುಡ್‌ ಶೂನ್ಯ ಸುತ್ತಿದರು.

    ಟೀಂ ಇಂಡಿಯಾ ಪರ ಹರ್ಷಿತ್‌ ರಾಣಾ 4 ವಿಕೆಟ್‌ ಕಿತ್ತರೆ, ಮೊಹಮ್ಮದ್‌ ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌, ಸಿರಾಜ್‌, ಪ್ರಸಿದ್ಧ್‌ ಕೃಷ್ಣ, ಕುಲ್ದೀಪ್‌ ಯಾದವ್‌, ಅಕ್ಷರ್‌ ಪಟೇಲ್‌ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಗಿಲ್‌ ಪಡೆ ಮೇಲೆ ಕ್ಲೀನ್‌ ಸ್ವೀಪ್‌ ತೂಗುಗತ್ತಿ – ಇಂದೇ ಗುಡ್‌ಬೈ ಹೇಳ್ತಾರಾ ರೋ-ಕೊ?

    ಗಿಲ್‌ ಪಡೆ ಮೇಲೆ ಕ್ಲೀನ್‌ ಸ್ವೀಪ್‌ ತೂಗುಗತ್ತಿ – ಇಂದೇ ಗುಡ್‌ಬೈ ಹೇಳ್ತಾರಾ ರೋ-ಕೊ?

    – ದಿಗ್ಗಜರಿಗೆ ಗೆಲುವಿನ ವಿದಾಯ ಸಿಗುತ್ತಾ?

    ಸಿಡ್ನಿ: ಮಾಜಿ ನಾಯಕರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಆಸೀಸ್ ನೆಲದಲ್ಲಿ ವೃತ್ತಿಜೀವನದ ಕೊನೇ ಪಂದ್ಯಕ್ಕೆ ಸಜ್ಜಾಗಿದ್ದು ಎಂಬ ಮಾತುಗಳು ಕೇಳಿಬಂದಿದ್ದು, ಇಂದೇ ನಿವೃತ್ತಿ ಘೋಷಿಸುವ ಸಾಧ್ಯತೆಗಳೂ ಇವೆ ಎನ್ನಲಾಗುತ್ತಿದೆ. ಈ ಇಬ್ಬರು ದಿಗ್ಗಜರಿಗೆ ಪಂದ್ಯವನ್ನು ಸ್ಮರಣೀಯವನ್ನಾಗಿಸುವ ಸವಾಲು ಶುಭಮಾನ್ ಗಿಲ್ ಬಳಗದ ಮುಂದಿದೆ.

    ಹಿಂದೆಂದೂ ಆಸೀಸ್‌ಗೆ ಕ್ಲೀನ್‌ಸ್ವೀಪ್ ಸಾಧಿಸಲು ಅವಕಾಶ ನೀಡದ ಭಾರತ ಈಗ ಆ ಭೀತಿಯಲ್ಲಿದೆ. ಸಿಡ್ನಿ (Sydney) ಅಂಗಳದಲ್ಲಿಂದು ನಡೆಯಲಿರುವ ಅತಿಥೇಯ ಆಸ್ಟ್ರೇಲಿಯಾ ವಿರುದ್ಧದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ತಂಡ, ಏಕದಿನ ಸರಣಿ (ODI series) ವೈಟ್‌ವಾಷ್‌ನಿಂದ ಪಾರಾಗುವ ಕಠಿಣ ಪರೀಕ್ಷೆ ಎದುರಿಸಲಿದೆ.

    ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸತತ 2 ಪಂದ್ಯ ಗೆದ್ದು ಸರಣಿ ತನ್ನದಾಗಿಸಿಕೊಂಡಿರುವ ಆಸಿಸ್‌ಗೆ ಇದು ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯವಾಗಿದೆ. ಚೊಚ್ಚಲ ಬಾರಿಗೆ ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಎದುರು ಕ್ಲೀನ್‌ ಸ್ವೀಪ್ ಸಾಧಿಸಲು ಹೋರಾಡಲಿದೆ. ರೋಹಿತ್- ಕೊಹ್ಲಿ ಆಸೀಸ್‌ನಲ್ಲಿ ಕೊನೆಯ ಬಾರಿಗೆ ಕಣಕ್ಕಿಳಿಯುವುದರ ಜೊತೆಗೆ ಸರಣಿ ಸೋಲಿನ ಅಂತರ ತಗ್ಗಿಸುವ ಒತ್ತಡ ಗಿಲ್ ಪಡೆಗಿದೆ.

    ಆಸ್ಟ್ರೇಲಿಯಾದಲ್ಲಿ ಮುಂದಿನ ಎರಡು ವರ್ಷ ಭಾರತ ಯಾವುದೇ ಏಕದಿನ ಸರಣಿ ಆಡದಿರುವುದರಿಂದ ರೋ-ಕೊ ಪಾಲಿಗೆ ಇದು ಆಸೀಸ್‌ನಲ್ಲಿ ಬಹುತೇಕ ಕೊನೇ ಪಂದ್ಯ ಎನಿಸಿದೆ.

    2007-08ರ ಕಾಮನ್ವೆಲ್ತ್ ಬ್ಯಾಂಕ್ ಸರಣಿಯಲ್ಲಿ ರೋಹಿತ್ ಮೊದಲ ಬಾರಿ ಅಸ್ಟ್ರೇಲಿಯಾ ಪ್ರವಾಸ ಕೈಗೊಂಡರೆ, ಕೊಹ್ಲಿ 2011-12ರ ಟೆಸ್ಟ್ ಸರಣಿಯ ಅಡಿಲೇಡ್ ಪಂದ್ಯದಲ್ಲಿ ಶತಕದೊಂದಿಗೆ ಗಮನಸೆಳೆದಿದ್ದರು. ಆಧುನಿಕ ಕ್ರಿಕೆಟ್‌ನ ದಿಗ್ಗಜ ಕೊಹ್ಲಿ ಸರಣಿಯ ಎರಡು ಪಂದ್ಯಗಳಲ್ಲಿ ಸತತ 2 ಶೂನ್ಯ ಸಂಪಾದನೆಯೊಂದಿಗೆ ನಿರಾಸೆ ಮೂಡಿಸಿದ್ದಾರೆ. ಟೆಸ್ಟ್ ನಾಯಕನಾಗಿ ಇಂಗ್ಲೆಂಡ್‌ನಲ್ಲಿ ರನ್ ಹೊಳೆ ಹರಿಸಿದ್ದ ಶುಭಮನ್ ಗಿಲ್, ಏಕದಿನದಲ್ಲಿ ವಿಲರಾಗಿದ್ದಾರೆ. ಎರಡು ಪಂದ್ಯಗಳಲ್ಲಿ ಕ್ರಮವಾಗಿ 10, 9 ರನ್ ಮಾತ್ರ ಕಲೆಹಾಕಿದ್ದಾರೆ. ಆರಂಭಿಕ ಸ್ಥಾನಕ್ಕೆ ಯಶಸ್ವಿ ಜೈಸ್ವಾಲ್‌ರಿಂದ ಪೈಪೋಟಿ ಎದುರಿಸುತ್ತಿರುವ ರೋಹಿತ್ ಶರ್ಮಾ, ಹಿಂದಿನ ಪಂದ್ಯದಲ್ಲಿ ಅರ್ಧಶತಕ ಸಿಡಿಸಿ ತುಸು ನಿರಾಳರಾಗಿದ್ದಾರೆ. ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ಕೆಎಲ್ ರಾಹುಲ್‌ರಿಂದ ಹೆಚ್ಚಿನ ರನ್‌ ಕೊಡುಗೆಯ ನಿರೀಕ್ಷೆ ಇದೆ.

    ಸಿಡ್ನಿಯಲ್ಲಿ ಭಾರತ ಇದುವರೆಗೆ ಅಡಿರುವ ಐದು ಪಂದ್ಯಗಳ ಪೈಕಿ 1ರಲ್ಲಿ ಮಾತ್ರ ಗೆದ್ದಿದೆ. ಇಂದಿನ ಪಂದ್ಯದಲ್ಲಿ ವೈಟ್‌ವಾಶ್‌ ತಪ್ಪಿಸಿಕೊಳ್ಳಲಾದ್ರೂ ಈ ಪಂದ್ಯ ಗೆಲ್ಲಲೇಬೇಕಿದೆ.

  • 2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    2027ರ ವಿಶ್ವಕಪ್‌ ಆಡೋದು ಡೌಟ್‌ – ಆಸೀಸ್‌ ಸರಣಿ ಬಳಿಕ ʻಹಿಟ್‌ಮ್ಯಾನ್‌, ಕ್ರಿಕೆಟ್‌ ಲೋಕದ ಕಿಂಗ್‌ ಯುಗ ಅಂತ್ಯ?

    ಭಾರತೀಯ ಕ್ರಿಕೆಟ್ ಲೋಕ ಎಂದೂ ನೆನಪಿಟ್ಟುಕೊಳ್ಳುವ ಸ್ಟಾರ್‌ ಆಟಗಾರ ಹಿಟ್‌ಮ್ಯಾನ್‌ ರೋಹಿತ್ ಶರ್ಮಾ (Rohit Sharma). ಇನ್ನೂ ಕೆಲ ವರ್ಷಗಳವರೆಗೆ ಟಾಪ್-10 ಕ್ರಿಕೆಟಿಗರ ಪಟ್ಟಿಯಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುವ ಹೆಸರೆಂದರೇ ಅದು ರೋಹಿತ್ ಶರ್ಮಾ. ಅವರಿಗೆ ತಮ್ಮ ಕ್ರೆಕೆಟ್‌ ಬದುಕಿಗೆ ತೆರೆ ಎಳೆಯುವ ಸನಿಹಕ್ಕೆ ಬಂದಿದ್ದಾರೆ. ಅಲ್ಲದೇ ಕ್ರಿಕೆಟ್‌ ಲೋಕದ ಕಿಂಗ್‌ ಆಗಿ ಮೆರೆದಾಡಿದ ವಿರಾಟ್‌ ಕೊಹ್ಲಿ (Virat kohli) ಕೂಡ ಆಸ್ಟ್ರೇಲಿಯಾ ಏಕದಿನ ಸರಣಿ ಬಳಿಕ ಕ್ರಿಕೆಟ್‌ ವೃತ್ತಿ ಜೀವನಕ್ಕೆ ಗುಡ್‌ಬೈ ಹೇಳುವ ಸಾಧ್ಯತೆಗಳಿವೆ.

    ರೋಹಿತ್ ಶರ್ಮಾ ಅವರು ಈ ಮಟ್ಟಕ್ಕೆ ಬೆಳೆಯಲು ಕಠಿಣಶ್ರಮವೇ ಕಾರಣ. ಯಶಸ್ಸಿಗೆ ಮತ್ತೇನಾದ್ರೂ ಸೂತ್ರ ಇದೆಯಾ ಅಂತ ರೋಹಿತ್ ಅವರನ್ನೊಮ್ಮೆ ಕೇಳಿ ನೋಡಿದ್ರೆ ಅವರು ಕೊಡುವ ಆನ್ಸರ್, `ಹಾರ್ಡ್ ವರ್ಕ್.. ಹಾರ್ಡ್ ವರ್ಕ್.. ಓನ್ಲಿ ಹಾರ್ಡ್ ವರ್ಕ್’. ಬಾಲ್ಯದಿಂದಲೇ ರೋಹಿತ್‌ಗೆ ಕ್ರಿಕೆಟ್ (Cricket) ಅಂದರೆ ಪ್ರಾಣ. ಮುಂಬೈಗೆ ಬಂದ ಮೇಲೆ ಗಲ್ಲಿಗಲ್ಲಿಗಳಲ್ಲಿ ಕ್ರಿಕೆಟ್ ಆಡಿಕೊಂಡಿದ್ದರು. 2006ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಹಿಟ್‌ಮ್ಯಾನ್‌ 2007ರ ಹೊತ್ತಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಪಡೆದುಕೊಂಡರು. 2007ರ ಜೂನ್‌ 23ರಂದು ಐರ್ಲೆಂಡ್‌ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ (International Cricket) ಪದಾರ್ಪಣೆ ಮಾಡಿದರು. ಇದೀಗ ತಮ್ಮ 18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನಕ್ಕೆ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಇದನ್ನೂ ಓದಿ: ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ರೋಹಿತ್‌ ಸಾಧನೆ
    ಭಾರತದ ಆತಿಥ್ಯದಲ್ಲಿ ನಡೆದ 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ 11 ಪಂದ್ಯಗಳ ಪೈಕಿ 10ರಲ್ಲಿ ಭಾರತ ವಿಜಯ ಸಾಧಿಸಿತ್ತು. ಈ ವೇಳೆ ರೋಹಿತ್‌ ಕ್ಯಾಪ್ಟನ್‌ ಆಗಿದ್ದರು. ಅಲ್ಲದೇ 2024ರಲ್ಲಿ ಭಾರತ ತಂಡಕ್ಕೆ ಟಿ20 ವಿಶ್ವಕಪ್‌, 2025ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಗೆದ್ದುಕೊಟ್ಟರು. ಸದ್ಯ ಟಿ20, ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿರುವ ರೋಹಿತ್‌, ವಿರಾಟ್‌ ಏಕದಿನ ಕ್ರಿಕೆಟ್‌ನಲ್ಲಿ ಮಾತ್ರ ಮುಂದುವರಿಯುತ್ತಿದ್ದಾರೆ.

    ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟವಾಗಿದ್ದು, ಯುವ ಆಟಾರ ಶುಭಮನ್‌ ಗಿಲ್ ಅವರಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಆದರೆ ರೋಹಿತ್‌ ಶರ್ಮಾ ಅವರಿಂದ ನಾಯಕತ್ವ ಕಸಿದುಕೊಂಡಿರುವ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಅವರ ಅಭಿಮಾನಿಗಳು ಕೆರಳಿದ್ದಾರೆ. ಈ ಮಧ್ಯೆ ಮಾಜಿ ಇಂಗ್ಲೆಂಡ್‌ ಆಟಗಾರ ಡೇವಿಡ್‌ ಗೋವರ್‌ ಅವರು, ರೋಹಿತ್‌ ಶರ್ಮಾ ಮತ್ತು ವಿರಾಟ್‌ ಕೊಹ್ಲಿ ಅವರು 2027ರ ಏಕದಿನ ವಿಶ್ವಕಪ್‌ ಹೊತ್ತಿಗೆ ಭಾರತ ತಂಡದ ಭಾಗವಾಗಿರುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.‌  

    ಡೇವಿಡ್‌ ಗೋವರ್‌ ಹೇಳಿದ್ದೇನು?
    ರೋ-ಕೊ (ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ) ಖ್ಯಾತಿಯ ಇಬ್ಬರು ಅನುಭವಿ ಆಟಗಾರರು 2027ರ ವಿಶ್ವಕಪ್‌ ಆಡುವುದಿಲ್ಲ. ಇದೇ ಕಾರಣಕ್ಕೆ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ನನ್ನ ಮಾತೃಭೂಮಿ, ಪಾಕಿಸ್ತಾನ ನನ್ನ ಜನ್ಮಭೂಮಿ – ಪಾಕ್‌ ಮಾಜಿ ಕ್ರಿಕೆಟಿಗ ಡ್ಯಾನಿಶ್ ಕನೇರಿಯಾ

    ಅಜಿತ್‌ ಅಗರ್ಕರ್‌ ಸಮರ್ಥನೆ
    ಇನ್ನೂ ಏಕದಿನ ಕ್ರಿಕೆಟ್‌ ಕ್ಯಾಪ್ಟನ್‌ ಆಗಿ ಶುಭಮನ್‌ ಗಿಲ್‌ ಅಯ್ಕೆಯನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್‌ ಅಗರ್ಕರ್‌ ಸಮರ್ಥಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರೂ 2027ರ ವಿಶ್ವಕಪ್ ಆಡುವ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಆಸೀಸ್‌ ಸರಣಿ ಬಳಿಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಅವರ ಒಂದು ಯುಗ ಅಂತ್ಯವಾಗಲಿದೆ ಎನ್ನೋದು ಕೋಟ್ಯಂತರ ಅಭಿಮಾನಿಗಳ ಬೇಸರ. ಇದನ್ನೂ ಓದಿ: ವಿಂಡೀಸ್‌ ವಿರುದ್ಧ ಇನ್ನಿಂಗ್ಸ್ & 140 ರನ್‌ಗಳ ಭರ್ಜರಿ ಗೆಲುವು – WTC ಅಂಕಪಟ್ಟಿಯಲ್ಲಿ 3ನೇ ಸ್ಥಾನ ಕಾಯ್ದುಕೊಂಡ ಭಾರತ

  • ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಆಸೀಸ್‌ ವಿರುದ್ಧ ಸರಣಿಗೆ ಭಾರತ ತಂಡ ಪ್ರಕಟ – ಏಕದಿನ ಕ್ರಿಕೆಟ್‌ಗೆ ಗಿಲ್‌ ಕ್ಯಾಪ್ಟನ್‌; ರೋಹಿತ್‌, ಕೊಹ್ಲಿ ನಿವೃತ್ತಿ ಬಯಸಿದ್ಯಾ ಬಿಸಿಸಿಐ?

    ಮುಂಬೈ: ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ ಹಾಗೂ 5 ಪಂದ್ಯಗಳ ಟಿ20 ಸರಣಿಗೆ ಬಿಸಿಸಿಐ ಟೀಂ ಇಂಡಿಯಾದ ಬಲಿಷ್ಠ ತಂಡವನ್ನ ಪ್ರಕಟಿಸಿದೆ.

    ಟಿ20 ಸರಣಿಗೆ ನಿರೀಕ್ಷೆಯಂತೆ ಸೂರ್ಯಕುಮಾರ್‌ ಯಾದವ್‌ ನಾಯಕನಾಗಿದ್ದಾರೆ. ಆದ್ರೆ ರೋಹಿತ್‌, ಕೊಹ್ಲಿ ತಂಡದಲ್ಲಿದ್ದರೂ ಏಕದಿನ ಕ್ರಿಕೆಟ್‌ಗೆ ನೂತನ ನಾಯಕನಾಗಿ ಶುಭಮನ್‌ ಗಿಲ್‌ ಅವರನ್ನ ಆಯ್ಕೆ ಮಾಡಿದೆ. ಹೀಗಾಗಿ ರೋಹಿತ್‌ ಶರ್ಮಾ ಹಾಗೂ ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.

    ಸರಣಿ ಬಳಿಕ ನಿವೃತ್ತಿ ಹೇಳ್ತಾರಾ ರೊ-ಕೊ?
    ಈಗಾಗಲೇ ಟೆಸ್ಟ್‌‌ ಹಾಗೂ ಟಿ20 ಕ್ರಿಕೆಟ್‌ಗೆ (T20 Cricket) ನಿವೃತ್ತಿ ಘೋಷಿಸಿರುವ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಇದೀಗ ಏಕದಿನ ಕ್ರಿಕೆಟ್‌ ವೃತ್ತಿ ಜೀವನಕ್ಕೂ ತೆರೆ ಎಳೆಯುವ ಸನಿಹದಲ್ಲಿದ್ದಾರೆ. ಮೂಲಗಳ ಹೇಳುವಂತೆ, 2027ರ ಏಕದಿನ ವಿಶ್ವಕಪ್‌ ತಂಡದಲ್ಲಿ ಈ ಜೋಡಿ ಸ್ಥಾನ ಪಡೆಯುವುದು ಖಚಿತವಿಲ್ಲ. ಏಕೆಂದ್ರೆ ಈಗಾಗಲೇ ಇಬ್ಬರೂ ದಿಗ್ಗಜರು ಟೆಸ್ಟ್‌ ಹಾಗೂ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಕಾರಣ ಮುಂಬರುವ ವರ್ಷಗಳಲ್ಲಿ ಪಂದ್ಯದ ಸಮಯವೂ ಸೀಮಿತವಾಗಿರಲಿದೆ. ಹೀಗಾಗಿ ಭಾರತೀಯ ಕ್ರಿಕೆಟ್‌ (Indian Cricket) ನಿಯಂತ್ರಣ ಮಂಡಳಿ ಕೂಡ ಇವರಿಬ್ಬರ ಆಯ್ಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಈ ಅಕ್ಟೋಬರ್‌ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಅತ್ಯಂತ ನಿರ್ಣಾಯಕವಾಗಿದೆ.

    ರೋಹಿತ್‌ ಮತ್ತು ಕೊಹ್ಲಿ 2027ರ ಏಕದಿನ ವಿಶ್ವಕಪ್‌ (World Cup 2027) ರೇಸ್‌ನಲ್ಲಿ ಉಳಿಯಬೇಕಾದ್ರೆ ಈ ವರ್ಷ ಡಿಸೆಂಬರ್‌ನಲ್ಲಿ ಶುರುವಾಗಲಿರುವ ದೇಸಿ ಕ್ರಿಕೆಟ್‌ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಬೇಕಾಗುತ್ತೆ. ಇಲ್ಲದಿದ್ದರೆ, ಬಹುತೇಕ ಏಕದಿನ ಕ್ರಿಕೆಟ್‌ನಿಂದಲೂ ಔಟ್‌ ಆಗಲಿದ್ದಾರೆ. ಇದಕ್ಕೆ ವಯಸ್ಸಿನ ಮಿತಿಯೂ ಒಂದು ಕಾರಣವಾಗಿರಲಿದೆ.

    ಅಯ್ಯರ್‌ ಕಂಬ್ಯಾಕ್‌
    ಇನ್ನೂ ಏಷ್ಯಾಕಪ್‌ ಟೂರ್ನಿಯಿಂದ ಕಡೆಗಣಿಸಲ್ಪಟ್ಟಿದ್ದ ಶ್ರೇಯಸ್‌ ಅಯ್ಯರ್‌ಗೆ ಮುಂಬರುವ ಟೂರ್ನಿಗಳನ್ನ ಗಮನದಲ್ಲಿಟ್ಟಿಕೊಂಡು ಉಪನಾಯಕನ ಸ್ಥಾನ ನೀಡಲಾಗಿದೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿ ಬಳಿಕ ಏಕದಿನ ಕ್ರಿಕೆಟ್‌ಗೆ ಕನ್ನಡಿಗ ಕೆ.ಎಲ್‌ ರಾಹುಲ್‌ ಕೂಡ ಕಂಬ್ಯಾಕ್‌ ಮಾಡಿದ್ದಾರೆ. ಇದರೊಂದಿಗೆ ಇದೇ ಮೊದಲಬಾರಿಗೆ ಏಕದಿನ ಕ್ರಿಕೆಟ್‌ಗೆ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಪದಾರ್ಪಣೆ ಮಾಡಲಿದ್ದಾರೆ. ಆದ್ರೆ ಯಾರ್ಕರ್‌ ಸ್ಪೆಷಲಿಸ್ಟ್‌ ಜಸ್ಪ್ರೀತ್‌ ಬುಮ್ರಾ ಅವರನ್ನು ಏಕದಿನ ತಂಡದಿಂದ ಕೈಬಿಟ್ಟು, ಟಿ20 ತಂಡಕ್ಕೆ ಮಾತ್ರ ಆಯ್ಕೆ ಮಾಡಿರೋದು ಅಚ್ಚರಿ ಮೂಡಿಸಿದೆ. ಅಲ್ಲದೇ ಧ್ರುವ್‌ ಜುರೆಲ್‌, ನಿತೀಶ್‌ ಕುಮಾರ್‌ ರೆಡ್ಡಿ ಹೊಸ ಮುಖಗಳಿಗೆ ಬಿಸಿಸಿಐ ಮಣೆ ಹಾಕಿದೆ.

    ಭಾರತ ಏಕದಿನ ತಂಡ
    ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಅಕ್ಷರ್‌ ಪಟೇಲ್, ಕೆ.ಎಲ್ ರಾಹುಲ್ (ವಿಕೆಟ್‌ ಕೀಪರ್‌), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಪ್ರಸಿದ್ಧ್‌ ಕೃಷ್ಣ, ಧ್ರುವ್‌ ಜುರೆಲ್ (ವಿಕೆಟ್‌ ಕೀಪರ್‌), ಯಶಸ್ವಿ ಜೈಸ್ವಾಲ್‌.

    ಭಾರತ ಟಿ20 ತಂಡ
    ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್‌), ವರುಣ್ ಚಕ್ರವರ್ತಿ, ಜಸ್ಪ್ರೀತ್‌ ಬುಮ್ರಾ, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್, ಹರ್ಷಿತ್ ರಾಣಾ, ಸಂಜು ಸ್ಯಾಮ್‌ಸನ್ (ವಿಕೆಟ್‌ ಕೀಪರ್‌), ವಾಷಿಂಗ್ಟನ್‌ ಸುಂದರ್‌.

    ಅ.19ರಿಂದ ನವೆಂಬರ್‌ 8ರ ವರೆಗೆ ಮೂರು ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳ ಸರಣಿ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಇದಕ್ಕಾಗಿ ಭಾರತ ತಂಡ ಶೀಘ್ರವೇ ಆಸ್ಟ್ರೇಲಿಯಾಕ್ಕೆ ಪ್ರವಾಸ ತೆರಳಲಿದ್ದು, ಅಭ್ಯಾಸ ಆರಂಭಿಸಲಿದೆ.

    ಗಿಲ್‌ ಮೇಲೆ ಹೆಚ್ಚಿದ ಭರವಸೆ
    ಕೆಲ ದಿನಗಳ ಹಿಂದೆ ಇಂಗ್ಲೆಂಡ್‌ನಲ್ಲಿ ನಡೆದ ʻಆಂಡರ್ಸನ್‌-ತೆಂಡೂಲ್ಕರ್‌ʼ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾದ ಯುವ ನಾಯಕನಾಗಿದ್ದ ಗಿಲ್‌ ಅವರ ಯಶಸ್ಸು ಆಯ್ಕೆ ಸಮಿತಿಗೆ ನಂಬಿಕೆ ತಂದುಕೊಟ್ಟಿದೆ. ಹೀಗಾಗಿ 2027ರ ವಿಶ್ವಕಪ್‌ಗೆ ಹೊಸ ಪ್ರತಿಭೆಗಳೊಂದಿಗೆ ಮುನ್ನಡೆಯಲು ಬಿಸಿಸಿಐ ನಿರ್ಧರಿಸಿದ್ದು, ಶುಭಮನ್‌ ಗಿಲ್‌ ಅವರನ್ನೇ ಟೀಂ ಇಂಡಿಯಾದ ದೀರ್ಘಾವಧಿ ನಾಯಕನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿದೆ. ಆದ್ದರಿಂದ ರೋಹಿತ್‌, ಕೊಹ್ಲಿ ಅಂತಹ ದಿಗ್ಗಜರು ಇರುವಾಗಲೇ ಗಿಲ್‌ಗೆ ನಾಯಕನ ಹೊಣೆ ನೀಡಲಾಗಿದೆ.

  • ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ರೋಹಿತ್‌ ಬಳಿಕ 25 ವರ್ಷದ ಗಿಲ್‌ ಟೀಂ ಇಂಡಿಯಾಕ್ಕೆ ಕ್ಯಾಪ್ಟನ್‌?

    ಮುಂಬೈ: ರೋಹಿತ್ ಶರ್ಮಾ (Rohit Sharma) ಬಳಿಕ ಮೂರು ಮಾದರಿಯ ಕ್ರಿಕೆಟ್‌ಗೆ ಟೀಂ ಇಂಡಿಯಾದ ಕ್ಯಾಪ್ಟನ್‌ ಯಾರಾಗ್ತಾರೆ ಅನ್ನೋ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಂತೆ ಕಾಣುತ್ತಿದೆ. ರೋಹಿತ್‌ ನಿವೃತ್ತಿ ಬಳಿಕ 25 ವರ್ಷದ ಯುವ ಆಟಗಾರ ಶುಭಮನ್‌ ಗಿಲ್‌ (Shubman Gill) ಅವರನ್ನೇ ಎಲ್ಲಾ ಮಾದರಿಯ ನಾಯಕನನ್ನಾಗಿ ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ (International Cricket) ರೋಹಿತ್‌, ವಿರಾಟ್‌ ಕೊಹ್ಲಿ ಅವರ ನಿವೃತ್ತಿಯ ವಿಚಾರಗಳು ಸೋಷಿಯಲ್‌ ಮೀಡಿಯಾದಲ್ಲಿ ಪದೇ ಪದೇ ಸದ್ದು ಮಾಡುತ್ತಿವೆ. ಇದೇ ಅಕ್ಟೋಬರ್‌ 19ರಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿ (ODI Series) ಬಳಿಕ ಇಬ್ಬರು ದಿಗ್ಗಜರು ನಿವೃತ್ತಿ ಘೋಷಿಸುವ ಎಲ್ಲಾ ಸಾಧ್ಯತೆಗಳಿವೆ. ಹಾಗಾಗಿ ರೋಹಿತ್‌ ಬಳಿಕ ಆಲ್‌ಫಾರ್ಮ್ಯಾಟ್‌ (ಎಲ್ಲಾ ಮಾದರಿ)ಗೆ ಗಿಲ್‌ ಅವರನ್ನು ನಾಯಕನನ್ನಾಗಿ ನೇಮಿಸುವ ಬಗ್ಗೆ ಬಿಸಿಸಿಐ ಆಯ್ಕೆ ಸಮಿತಿ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸೆ.9ರಿಂದ ಶುರುವಾಗಲಿರುವ ಟಿ20 ಏಷ್ಯಾ ಕಪ್‌ ಟೂರ್ನಿ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

    ವರದಿಗಳ ಪ್ರಕಾರ, ಶುಭಮನ್‌ ಗಿಲ್‌ ಅವರನ್ನು ಏಕದಿನ ನಾಯಕನನ್ನಾಗಿ ನೇಮಿಸುವ ಬಗ್ಗೆ ಯಾವುದೇ ಸಂಶಯ ಇಲ್ಲ. ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಗೆ ಇನ್ನಷ್ಟು ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ (BCCI) ಹೇಳಿದೆ. ರೋಹಿತ್‌ ಶರ್ಮಾ ಸದ್ಯ ಏಕದಿನ ಸ್ವರೂಪದಲ್ಲಿ ಮಾತ್ರ ಆಡುತ್ತಿದ್ದು, 2027ರ ಏಕದಿನ ವಿಶ್ವಕಪ್‌ ಗೆದ್ದು ತರುವ ಉತ್ಸಾಹದಲ್ಲಿದ್ದಾರೆ. ಆದ್ರೆ ಅಷ್ಟೊತ್ತಿಗೆ ಅವರ ವಯಸ್ಸು 40 ಸಮೀಪಿಸಲಿದೆ. ಹೀಗಾಗಿ ಆಯ್ಕೆ ಸಮಿತಿ ಅವರ ವಯೋಮಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಕೈಬಿಡುವ ನಿರ್ಧಾರದಲ್ಲಿದೆ. ಹೀಗಾಗಿ ಶುಭಮನ್‌ ಗಿಲ್‌ ಅವರನ್ನು ಆಸೀಸ್‌ ಸರಣಿ ಬಳಿಕ ಏಕದಿನ ನಾಯಕನನ್ನಾಗಿ ನೇಮಕ ಮಾಡುವ ಸಾಧ್ಯತೆಗಳಿವೆ ಎನ್ನಲಾಗ್ತಿದೆ.

    ಎಲ್ಲಾ ಫಾರ್ಮ್ಯಾಟ್‌ಗೆ ಒಬ್ಬನೇ ನಾಯಕ?
    ಸದ್ಯ ಬಿಸಿಸಿಐ ಆಯ್ಕೆ ಸಮಿತಿಯು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಒಬ್ಬನೇ ನಾಯಕನನ್ನ ಹುಡುಕುತ್ತಿದೆ. ಅದಕ್ಕಾಗಿ ಏಷ್ಯಾಕಪ್‌ ಬಳಿಕ 34 ವರ್ಷದ ಸೂರ್ಯಕುಮಾರ್‌ ಯಾದವ್‌ ಅವರನ್ನ ಟಿ20 ನಾಯಕತ್ವದಿಂದ ಬದಲಾಯಿಸುವ ಚಿಂತನೆಯಲ್ಲಿದೆ. ಅಕ್ಷರ್‌ ಪಟೇಲ್‌ ಅವರನ್ನು ಟಿ20I ಉಪನಾಯಕನ್ನಾಗಿ ನೇಮಿಸಲಾಗಿದೆ.

    ಈಗಾಗಲೇ ಟೆಸ್ಟ್‌ ಕ್ಯಾಪ್ಟನ್‌ ಆಗಿ ಸೈ ಎನಿಸಿಕೊಂಡಿರುವ ಶುಭಮನ್‌ ಗಿಲ್‌ ಅಕ್ಟೋಬರ್‌ ಬಳಿಕ ಏಕದಿನ ನಾಯಕನೂ ಆಗಲಿದ್ದಾರೆ. ಜೊತೆಗೆ 2026ರ ಟಿ0 ವಿಶ್ವಕಪ್‌ ಬಳಿಕ ಟಿ20 ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಆದರೆ ಬಿಸಿಸಿಐ ಈ ಕುರಿತು ಎಲ್ಲಿಯೂ ಅಧಿಕೃತ ಹೇಳಿಕೆ ನೀಡಿಲ್ಲ.

    ಆಸೀಸ್‌ ಸರಣಿ ಬಳಿಕ ರೋಹಿತ್- ಕೊಹ್ಲಿಗೆ ವಿದಾಯ?
    ಇನ್ನೂ ಮುಂದಿನ ಅಕ್ಟೋಬರ್‌ 19ರಿಂದ ಅ.25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿ ಬಳಿಕ ದಿಗ್ಗಜರಾದ ವಿರಾಟ್‌, ರೋಹಿತ್‌ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ವಿದಾಯ ಹೇಳಿರುವ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ.

  • ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    ಟೀಂ ಇಂಡಿಯಾಗೆ ಅಯ್ಯರ್ ಒನ್‌ಡೇ ಕ್ಯಾಪ್ಟನ್? – ವದಂತಿಗಳಿಗೆ ತೆರೆ ಎಳೆದ ಬಿಸಿಸಿಐ

    – ಶುಭಮನ್‌ ಗಿಲ್‌ಗೆ ನಾಯಕತ್ವ ನೀಡುವ ಸಾಧ್ಯತೆ

    ಮುಂಬೈ: 2025ರ ಟಿ20 ಏಷ್ಯಾ ಕಪ್‌ ಟೂರ್ನಿಗೆ ಆಯ್ಕೆಯಾದ ಶ್ರೇಯಸ್‌ ಅಯ್ಯರ್‌ (Shreyas Iyer) ಅವರನ್ನ ಟೀಂ ಇಂಡಿಯಾದ ಒನ್‌ಡೇ ಕ್ಯಾಪ್ಟನ್‌ ಆಗಿ ಮಾಡಲಾಗುತ್ತದೆ ಅನ್ನೋ ವದಂತಿಗೆ ಬಿಸಿಸಿಐ (BCCI) ತೆರೆ ಎಳೆದಿದೆ.

    ಹೌದು. ಏಷ್ಯಾಕಪ್‌ ಟೂರ್ನಿಗೆ ಶ್ರೇಯಸ್‌ ಅಯ್ಯರ್‌ ಅವರನ್ನು ಆಯ್ಕೆ ಮಾಡದ ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಕ್ರಿಕೆಟ್‌ ತಜ್ಞರು ವ್ಯಾಪಕ ಟೀಕೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕ ಚರ್ಚೆ ನಡೆಯುತ್ತಿದೆ. ಆದ್ರೆ ಒಂದು ದಿನದ ಹಿಂದಷ್ಟೇ ಅಯ್ಯರ್ ಅವರ ಬಗ್ಗೆ ಪ್ರತ್ಯೇಕ ಲೆಕ್ಕಾಚಾರ ಹಾಕಿದ್ದು, ಮಹತ್ತರ ಜವಾಬ್ದಾರಿ ನೀಡಲು ಚಿಂತನೆ ನಡೆಸುತ್ತಿದೆ ಎಂಬ ವದಂತಿ ಹಬ್ಬಿತ್ತು. ಇದನ್ನೂ ಓದಿ: Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಬಿಸಿಸಿಐ ಶ್ರೇಯಸ್ ಅಯ್ಯರ್ ಅವರಿಗೆ ಏಕದಿನ ತಂಡದ ನಾಯಕತ್ವ ನೀಡುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಈಗಾಗಲೇ 38 ವರ್ಷ ವಯಸ್ಸಿನ ರೋಹಿತ್ ಶರ್ಮಾ (Rohit Sharma) ಅವರು 2027ರ ವಿಶ್ವಕಪ್ ವರೆಗೆ ಲಭಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ಯಾವುದೇ ಖಚಿತತೆ ಇಲ್ಲ. ಹೀಗಾಗಿ ಹೊಸ ನಾಯಕನಿಗಾಗಿ ಹುಡುಕಾಟ ನಡೆಸುತ್ತಿದೆ. ಏಷ್ಯಾಕಪ್‌ ಮುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಲಿದ್ದು, ಅಯ್ಯರ್ ಅವರೇ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ವದಂತಿ ಎಲ್ಲೆಡೆ ಹಬ್ಬಿತ್ತು.

    ಈ ಸಂಬಂಧ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದು, ನಾಯಕನ ಆಯ್ಕೆ ವಿಷಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಇನ್ನೂ ಶ್ರೇಯಸ್‌ ಅಯ್ಯರ್‌ ಅವರನ್ನು ಟೂರ್ನಿಯಿಂದ ಕೈಬಿಟ್ಟ ಬಗ್ಗೆ ಪ್ರತಿಕ್ರಿಯಿಸಿ, ಇದರಲ್ಲಿ ಶ್ರೇಯಸ್‌ ತಪ್ಪು ಏನೂ ಇಲ್ಲ, ನಮ್ಮದೂ ತಪ್ಪಿಲ್ಲ. ಟೂರ್ನಿಗೆ 15 ಜನರನ್ನಷ್ಟೇ ಆಯ್ಕೆ ಮಾಡಲು ಅವಕಾಶವಿದೆ. ಅವಕಾಶ ಬರುವವರೆಗೆ ಕಾಯಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಈ ನಡುವೆ ಟೆಸ್ಟ್‌ ತಂಡದ ಯುವ ನಾಯಕ ಶುಭಮನ್‌ ಗಿಲ್‌ ಅವರಿಗೇ ಏಕದಿನ ಕ್ಯಾಪ್ಟೆನ್ಸಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

    ಆಸೀಸ್‌ ಸರಣಿ ಬಳಿಕ ರೋಹಿತ್- ಕೊಹ್ಲಿಗೆ ವಿದಾಯ?
    ಇನ್ನೂ ಮುಂದಿನ ಅಕ್ಟೋಬರ್‌ 19ರಿಂದ ಅ.25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ಭಾರತ 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ. ಈ ಸರಣಿ ಬಳಿಕ ದಿಗ್ಗಜರಾದ ವಿರಾಟ್‌, ರೋಹಿತ್‌ ನಿವೃತ್ತಿ ಘೋಷಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಟೆಸ್ಟ್ ಮತ್ತು ಟಿ20 ಮಾದರಿಗಳಿಗೆ ವಿದಾಯ ಹೇಳಿರುವ ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಪ್ರಸ್ತುತ ಏಕದಿನ ಮಾದರಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಇದನ್ನೂ ಓದಿ: 1,650 ಕೋಟಿ ವೆಚ್ಚ, 60,000 ಆಸನ ಸಾಮರ್ಥ್ಯ – ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಚಿನ್ನಸ್ವಾಮಿಗಿಂತಲೂ ಬೃಹತ್‌ ಸ್ಟೇಡಿಯಂ

    ಶ್ರೇಯಸ್ ನಾಯಕತ್ವದ ಅನುಭವ
    ಟೀಂ ಇಂಡಿಯಾ ಪರವಾಗಿ 70 ಏಕದಿನ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ ಅವರು ಒಟ್ಟು 2,845 ರನ್ ಗಳಿಸಿದ್ದಾರೆ. ಅದರಲ್ಲಿ 5 ಶತಕಗಳು ಸೇರಿವೆ. 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದರು. 2024ರಲ್ಲಿ ಶ್ರೇಯಸ್ ಅಯ್ಯರ್ ಅವರ ನಾಯಕತ್ವದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ IPL ಪ್ರಶಸ್ತಿ ಗೆದ್ದುಕೊಂಡಿತು. ನಂತರ ಪಂಜಾಬ್ ಕಿಂಗ್ಸ್ ಯುವ ಪಡೆಯನ್ನ ಮುನ್ನಡೆಸಿದ ಶ್ರೇಯಸ್‌ ಅಯ್ಯರ್‌ ಫೈನಲ್‌ಗೇರಿಸಿದ್ದರು.