Tag: Rohit Sharma

  • Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ

    Champions Trophy 2025 | ಆಲ್ ದಿ ಬೆಸ್ಟ್ ಟೀಂ ಇಂಡಿಯಾ – ನಾಡಿನಾದ್ಯಂತ ಅಭಿಮಾನಿಗಳಿಂದ ಶುಭ ಹಾರೈಕೆ

    ಹಾಸನ/ ಚಾಮರಾಜನಗರ/ ಚಿಕ್ಕಬಳ್ಳಾಪುರ: ಭಾರತ – ಪಾಕಿಸ್ತಾನ (Ind vs Pak) ನಡುವಿನ ಚಾಂಪಿಯನ್ಸ್‌ ಟ್ರೋಫಿ ಹೈವೋಲ್ಟೇಜ್‌ ಪಂದ್ಯಕ್ಕೆ ಕ್ಷಣಗಣನೆ ಬಾಕಿಯಿದೆ. ಬ್ಲಾಕ್‌ಬಸ್ಟರ್‌ ಸಂಡೇ (ಇಂದು)ಯಂದು ಮಧ್ಯಾಹ್ನ 2:30ರ ವೇಳೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಶುರುವಾಗಲಿದೆ. ಈ ರಣರೋಚಕ ಕದನಕ್ಕೆ ಕಾದು ಕುಳಿತಿರುವ ರಾಜ್ಯದ ಕ್ರೀಡಾ ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇ ಪೂಜೆ ಹಮ್ಮಿಕೊಂಡಿದ್ದರೆ, ಇನ್ನೂ ಕೆಲವರು ತಾವಿದ್ದಲ್ಲೇ ಗೆದ್ದು ಬಾ ಭಾರತ, ಆಲ್‌ ದಿ ಬೆಸ್ಟ್‌ ಟೀಂ ಇಂಡಿಯಾ ಅಂತ ಶುಭ ಹಾರೈಸಿದ್ದಾರೆ. ಯಾವ ಜಿಲ್ಲೆಯಲ್ಲಿ ಏನಾಗಿದೆ ಎಂಬುದನ್ನು ಮುಂದೆ ನೋಡೋಣ…

    ಹಾಸನ
    ಇಂದು ಭಾರತ-ಪಾಕಿಸ್ತಾನ ತಂಡಗಳ ನಡುವೆ ದುಬೈನಲ್ಲಿ ಹೈವೋಲ್ಟೇಜ್ ಪಂದ್ಯವಿದ್ದು ಟೀಂ ಇಂಡಿಯಾ ಗೆದ್ದೆ ಗೆಲ್ಲುತ್ತದೆ ಎಂದು ಹಾಸನದ ಕ್ರಿಕೆಟ್ ಅಭಿಮಾನಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ-ಪಾಕಿಸ್ತಾನ ಪಂದ್ಯವೆಂದರೆ ಯುದ್ಧದ ರೀತಿ ಇರುತ್ತದೆ. ಏನೇ ಆಗಲಿ ಭಾರತ ಗೆಲ್ಲಲಿ ಅಂತ ತಂಡಕ್ಕೆ ಶುಭಕೋರಿದ್ದಾರೆ.

    ಚಾಮರಾಜನಗರ
    ಪಾಕಿಸ್ತಾನದ ವಿರುದ್ಧ ಭಾರತದ ಗೆಲುವಿಗೆ ಚಾಮರಾಜನಗರದಲ್ಲಿ ಕ್ರಿಕೆಟ್ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ಚಾಮರಾಜನಗರದ ಜನಾರ್ಧನಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಭಾರತ ಜಯಗಳಿಸಲಿ ಎಂದು ಸಂಕಲ್ಪ ಮಾಡಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲ ಆಟಗಾರರ ಹೆಸರಿನಲ್ಲಿ ಅರ್ಚನೆ ಸಹ ಮಾಡಿಸಿದ್ದಾರೆ. ದೇವರ ಪಾದದ ಬಳಿ ಆಟಗಾರರ ಹೆಸರುಳ್ಳ ಕಾರ್ಡ್ ಇಟ್ಟು ಪೂಜೆ ಮಾಡಿಸಿದ್ದಾರೆ.

    ಚಿಕ್ಕಬಳ್ಳಾಪುರ
    ಬದ್ಧವೈರಿಗಳ ಕಾಳಗದಲ್ಲಿ ಭಾರತ ಗೆದ್ದು ಬೀಗಲಿ ಅಂತ ಚಿಕ್ಕಬಳ್ಳಾಪುರ ನಗರದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಪುಟಾಣಿ ಕ್ರಿಕೆಟಿಗರು ಶುಭ ಕೋರಿದ್ದಾರೆ.

    ದಾವಣಗೆರೆ
    ಇಂಡೋ ಪಾಕ್‌ ಹೈವೋಲ್ಟೇಜ್‌ ಪಂದ್ಯದಲ್ಲಿ ಟೀಂ ಇಂಡಿಯಾ ವಿಜಯಿಯಾಗಲಿ, ಟ್ರೋಫಿಯನ್ನೂ ಗೆಲ್ಲಲ್ಲಿ. 2017ರ ಸೋಲಿನ ಸೇಡು ತೀರಿಸಿಕೊಳ್ಳಲಿ ಅಂತ ದಾವಣಗೆರೆಯ ಕ್ರೀಡಾಭಿಮಾನಿಗಳು ಶುಭಕೋರಿದ್ದಾರೆ. ಭಾರತ ಖಂಡಿತಾ 2017ರ ಸೇಡು ತೀರಿಸಿಕೊಳ್ಳಲಿದೆ. ನಮ್ಮ ಆಟಗಾರರು ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಬೌಲಿಂಗ್ ಲೈನ್ ಆಪ್, ಬ್ಯಾಂಟಿಂಗ್‌ ಹಾಗೂ ಫಿಲ್ಡಿಂಗ್ ಲೈನ್ನಪ್ ಕೂಡ ಉತ್ತಮವಾಗಿದೆ ಎಂದು ಕ್ರಿಕೇಟ್ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

    ಧಾರವಾಡ
    ವಿದ್ಯಾಕಾಶಿ ಧಾರವಾಡದಲ್ಲೂ ಭಾರತದ ಕ್ರಿಕೆಟ್ ತಂಡಕ್ಕೆ ಅಭಿಮಾನಿಗಳು ವಿಶ್‌ ಮಾಡಿದ್ದಾರೆ. ಧಾರವಾಡ ಕರ್ನಾಟಕ ವಿವಿಯಲ್ಲಿ ಇವತ್ತು ಡಿಪಿಎಲ್ ಮ್ಯಾಚ್ ನಡೆಯುವ ಸ್ಥಳದಿಂದಲೇ ಆಲ್ ದಿ ಬೆಸ್ಟ್ ಇಂಡಿಯಾ ಎಂದು ಶುಭ ಕೊರಿರುವ ಅಭಿಮಾನಿಗಳು, ಇವತ್ತು ಬದ್ಧ ವೈರಿ ಪಾಕಿಸ್ತಾನದ ಹುಟ್ಟಡಗಿಸಲಿ ಎಂದು ಹಾರೈಸಿದ್ದಾರೆ.

  • ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ಪಂದ್ಯಕ್ಕೂ ಮುನ್ನವೇ ಪಾಕ್‌ ಹೈಡ್ರಾಮಾ – ಏನೇ ಆದ್ರೂ ಭಾರತವನ್ನು ಸೋಲಿಸಬೇಕು ಎಂದ ಪಿಸಿಬಿ ಮುಖ್ಯಸ್ಥ

    ದುಬೈ: ರೋಹಿತ್ ಶರ್ಮಾ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೊಫಿಯ (Champions Trophy) ʻಎʼ ಗುಂಪಿನ ತನ್ನ 2ನೇ ಪಂದ್ಯದಲ್ಲಿ ಭಾನುವಾರ (ಇಂದು) ಬದ್ಧ ವೈರಿ ಪಾಕಿಸ್ತಾನ ತಂಡದ ಸವಾಲು ಎದುರಿಸಲಿದೆ. ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇತ್ತ ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಳ್ಳುವ ಉತ್ಸಾಹದಲ್ಲಿ ಭಾರತ ಇದ್ದರೆ, ಮೊಹಮದ್ ರಿಜ್ವಾನ್ (Mohammad Rizwan) ನೇತೃತ್ವದ ಪಾಕಿಸ್ತಾನ, ಟೂರ್ನಿಯಿಂದ ಹೊರಗುಳಿಯುವುದನ್ನು ತಪ್ಪಿಸಬೇಕಾದ ಒತ್ತಡದಲ್ಲಿದೆ. ಈ ನಡುವೆ ಪಾಕ್‌ ತಂಡದಲ್ಲಿ ಹೈಡ್ರಾಮಾ ನಡೆದಿದೆ.

    ಪಾಕಿಸ್ತಾನದ (Pakistan) ಸ್ಟಾರ್‌ ಕ್ರಿಕೆಟರ್‌ ಬಾಬರ್‌ ಆಜಂ (Babar Azam) ಅಭ್ಯಾಸಕ್ಕೆ ಗೈರಾಗುತ್ತಿರುವುದು ಕಂಡುಬಂದಿದೆ. ಶನಿವಾರ ಪಾಕ್‌ ತಂಡದ ಅಭ್ಯಾಸ ವೇಳೆ ಬಾಬರ್‌ ಕಾಣದ ಹಿನ್ನೆಲೆಯಲ್ಲಿ ಅವರನ್ನು ಭಾನುವಾರದ ಪಂದ್ಯಕ್ಕೆ ಪರಿಗಣಿಸಲಾಗುವುದಿಲ್ಲ ಎಂಬ ವದಂತಿ ಹಬ್ಬಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬಾಬರ್‌ ಕಣಕ್ಕಿಳಿಯುತ್ತಾರೆ ಎನ್ನುವ ಬಗ್ಗೆ ಪಿಸಿಬಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದರ ಹೊರತಾಗಿ ʻಏನೇ ಆಗಲಿ ಭಾರತದ ವಿರುದ್ಧ ಗೆಲ್ಲಲೇಬೇಕುʼ ಎಂದು ಪಿಸಿಬಿ ಮುಖ್ಯಸ್ಥ ಮೊಹ್ಸಿನ್‌ ನಖ್ವಿ ಹೇಳಿದ್ದಾರೆ. ಇದನ್ನೂ ಓದಿ: `ಮಹಾ’ ಸಾರಿಗೆ ನಿಗಮಕ್ಕೆ `ಗ್ಯಾರಂಟಿ’ ಭಾರ; ಉಚಿತ ಯೋಜನೆಯಿಂದ ದಿನಕ್ಕೆ 3 ಕೋಟಿ ನಷ್ಟ: ಸಚಿವ ಪ್ರತಾಪ್

    ಬಾಬರ್ ಅಜಂ ಮೇಲೆ ಭಾರೀ ಒತ್ತಡ
    ಅತ್ತ ಪಾಕಿಸ್ತಾನ ಪ್ರಮುಖ ಬ್ಯಾಟರ್‌ಗಳ ಪೇಲವ ಪ್ರದರ್ಶನದಿಂದ ಚಿಂತಕ್ರಾಂತವಾಗಿದೆ. ತಂಡದ ಸ್ಟಾರ್ ಎನಿಸಿರುವ ಬಾಬರ್ ಅಜಂ, ಕಿವೀಸ್‌ ವಿರುದ್ಧ 90 ಎಸೆತಗಳಲ್ಲಿ 64 ರನ್ ಗಳಿಸಿ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಗಾಯದಿಂದಾಗಿ ಫಖರ್ ಜಮಾನ್ ಹೊರಗುಳಿದಿರುವುದು ಕೂಡ ಪಾಕ್‌ನ ಒತ್ತಡವನ್ನು ತೀವ್ರಗೊಳಿಸಿದೆ. ಇವರ ಬದಲಿಗೆ ಇಮಾಮ್ ಉಲ್ ಹಕ್ ತಂಡವನ್ನು ಸೇರ್ಪಡೆಗೊಂಡಿದ್ದು, ಅವರ ಸ್ಥಾನವನ್ನು ಎಷ್ಟರ ಮಟ್ಟಿಗೆ ತುಂಬಲಿದ್ದಾರೆ ಎಂಬುದು ಪ್ರಶ್ನೆಯಾಗಿದೆ.

    ನಿವೃತ್ತಿ ಅಂಚಿನಲ್ಲಿರುವ ರನ್ ಮಷಿನ್ ವಿರಾಟ್ ಕೊಹ್ಲಿ, ಇತ್ತೀಚಿಗೆ ಉತ್ತಮ ಆಟವಾಡುವಲ್ಲಿ ಎಡವಿದ್ದಾರೆ. ಆದರೆ ಪಾಕಿಸ್ತಾನ ವಿರುದ್ಧದ ತಮ್ಮ ಅಮೋಘ ಫಾರ್ಮ್ ಮರುಕಳಿಸುವ ಜಾಣ್ಮೆಯನ್ನು ಹೊಂದಿದ್ದಾರೆ. ಇದನ್ನೂ ಓದಿ: Publictv Explainer: ದತ್ತು ಸ್ವೀಕಾರದ ಬಗ್ಗೆ ನಿಮಗೆಷ್ಟು ಗೊತ್ತು? – ನಿಯಮ ಏನು, ಪ್ರಕ್ರಿಯೆ ಹೇಗೆ?

    ಬೌಲಿಂಗ್ ವಿಭಾಗದಲ್ಲಿ ಲಯ ಕಂಡುಕೊಂಡಿರುವ ವೇಗಿ ಮೊಹಮ್ಮದ್ ಶಮಿಗೆ ಹರ್ಷಿತ್ ರಾಣಾ ಉತ್ತಮ ಸಾಥ್ ನೀಡುತ್ತಿದ್ದಾರೆ. ಹಿಂದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದ ಶಮಿ, ಗಾಯಾಳು ಜಸ್‌ಪ್ರೀತ್ ಬುಮ್ರಾ ಅವರ ಅಲಭ್ಯತೆಯನ್ನು ಕಾಡದಂತೆ ನೋಡಿಕೊಂಡಿದ್ದರು. 2017ರ ಫೈನಲ್‌ನಲ್ಲಿ ಅರ್ಧ ಶತಕ ಗಳಿಸಿಯೂ ತಂಡವನ್ನು ಸೋಲಿನಿಂದ ಪಾರು ಮಾಡಲು ವಿಫಲಗೊಂಡ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಈ ಬಾರಿ ನಿರಾಸೆಯನ್ನು ಸರಿದೂಗಿಸುವ ವಿಶ್ವಾಸದಲ್ಲಿದ್ದಾರೆ. ಸದ್ಯ ಬದ್ಧವೈರಿಗಳ ನಡುವಿನ ಕಾದಾಟಕ್ಕೆ ದುಬೈ ಕ್ರೀಡಾಂಗಣ ಸಾಕ್ಷಿಯಾಗಲಿದ್ದು, ಕುತೂಹಲ ಹೇಗಿರಲಿದೆ ಎಂಬುದನ್ನು ಕಾದುನೋಡಬೇಕಿದೆ.  ಇದನ್ನೂ ಓದಿ: ಪಾಕ್ ವಿರುದ್ಧ ಭಾರತದ ಗೆಲುವುಗಾಗಿ ವಿಶೇಷ ಪೂಜೆ- ಬೆಂಗಳೂರು ಕ್ರೀಡಾಭಿಮಾನಿಗಳಿಂದ ಶುಭ ಹಾರೈಕೆ

  • ಏಕದಿನ ಕ್ರಿಕೆಟ್‌ನಲ್ಲಿ ತೆಂಡೂಲ್ಕರ್ ಹಿಂದಿಕ್ಕಿದ ರೋಹಿತ್ ಶರ್ಮಾ – 11,000 ರನ್ ಪೂರೈಸಿ ದಾಖಲೆ

    ಏಕದಿನ ಕ್ರಿಕೆಟ್‌ನಲ್ಲಿ ತೆಂಡೂಲ್ಕರ್ ಹಿಂದಿಕ್ಕಿದ ರೋಹಿತ್ ಶರ್ಮಾ – 11,000 ರನ್ ಪೂರೈಸಿ ದಾಖಲೆ

    ದುಬೈ: ಏಕದಿನ ಕ್ರಿಕೆಟ್‌ನಲ್ಲಿ (ODI) 11,000 ರನ್ ಗಳಿಸುವ ಮೂಲಕ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಹೊಸ ಮೈಲುಗಲ್ಲು ಸೃಷ್ಟಿಸಿದ್ದಾರೆ. ರೋಹಿತ್ 261ನೇ ಇನ್ನಿಂಗ್ಸ್‌ನಲ್ಲಿ 11,000 ರನ್ ಪೂರೈಸಿ ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ.

    ಗುರುವಾರ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಚಾಂಪಿಯನ್ಸ್ ಟ್ರೋಫಿ (Champions Trophy) ಪಂದ್ಯದಲ್ಲಿ ರೋಹಿತ್ ಶರ್ಮಾ ಈ ಮಹತ್ವದ ಮೈಲಿಗಲ್ಲು ತಲುಪಿದ್ದಾರೆ. ಈ ಪಂದ್ಯದಲ್ಲಿ 12 ರನ್‌ಗಳಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ 11,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 11,000 ರನ್ ವೇಗವಾಗಿ ಪೂರೈಸಿದ ಬ್ಯಾಟ್ಸ್‌ಮನ್ ಸಾಲಿನಲ್ಲಿ 2ನೇ ಸ್ಥಾನಕ್ಕೆ ಶರ್ಮಾ ಜಿಗಿದಿದ್ದಾರೆ. ಇದನ್ನೂ ಓದಿ: ಗಿಲ್‌ ಶತಕದಾಟ, ಶಮಿ ಬೆಂಕಿ ಬೌಲಿಂಗ್ – ಬಾಂಗ್ಲಾ ವಿರುದ್ಧ ಭಾರತಕ್ಕೆ 6 ವಿಕೆಟ್‌ಗಳ ಜಯ

    ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ 222 ಇನ್ನಿಂಗ್ಸ್‌ಗಳಲ್ಲಿ 11,000 ರನ್ ಪೂರೈಸುವ ಮೂಲಕ ಮೊದಲ ಸ್ಥಾನದಲ್ಲಿದ್ದಾರೆ. 276ನೇ ಇನ್ನಿಂಗ್ಸ್‌ನಲ್ಲಿ 11,000 ರನ್ ಪೂರೈಸಿ ಸಚಿನ್ ಎರಡನೇ ಸ್ಥಾನದಲ್ಲಿದ್ದರು. ಇದೀಗ ರೋಹಿತ್ ಶರ್ಮಾ ಅವರ ದಾಖಲೆ ಮುರಿದು ಎರಡನೇ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ: ಸ್ಟಾರ್ಕ್‌ ದಾಖಲೆ ಉಡೀಸ್‌ – ಕಡಿಮೆ ಎಸೆತಗಳಲ್ಲಿ 200 ವಿಕೆಟ್‌ ಪಡೆದು ಶಮಿ ರೆಕಾರ್ಡ್‌

    ಚಾಂಪಿಯನ್ಸ್ ಟ್ರೋಫಿಯ ಇಂದಿನ ಪಂದ್ಯದಲ್ಲಿ ನಾಲ್ಕನೇ ಓವರ್‌ನಲ್ಲಿ ಬೌಂಡರಿ ಬಾರಿಸುವ ಮೂಲಕ ಹಿಟ್‌ಮ್ಯಾನ್ ವಿಶೇಷ ಮೈಲಿಗಲ್ಲು ತಲುಪಿದರು. ಕೊಹ್ಲಿ 11,831 ಎಸೆತಗಳಲ್ಲಿ 11,000 ರನ್ ಪೂರೈಸಿದ್ದರೆ, ರೋಹಿತ್ ಶರ್ಮಾ 11,868 ಎಸೆತಗಳಲ್ಲಿ 11,000 ರನ್ ಕಲೆಹಾಕಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಹಗರಣ – ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಬಿಗ್ ರಿಲೀಫ್!

  • ಶಮಿಗೆ 5 ವಿಕೆಟ್‌; ಬಾಂಗ್ಲಾ ಆಲೌಟ್‌ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ

    ಶಮಿಗೆ 5 ವಿಕೆಟ್‌; ಬಾಂಗ್ಲಾ ಆಲೌಟ್‌ – ಟೀಂ ಇಂಡಿಯಾಗೆ 229 ರನ್‌ಗಳ ಗುರಿ

    – ಶತಕ ಸಿಡಿಸಿ ಬಾಂಗ್ಲಾಗೆ ನೆರವಾದ ತೋಹಿದ್ ಹೃದಯ್

    ದುಬೈ: ಇಲ್ಲಿ ನಡೆಯುತ್ತಿರುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಎರಡನೇ ಪಂದ್ಯದಲ್ಲಿ 228 ರನ್‌ಗಳಿಗೆ ಆಲೌಟ್‌ ಆದ ಬಾಂಗ್ಲಾದೇಶ ಟೀಂ ಇಂಡಿಯಾಗೆ 229 ರನ್‌ಗಳ ಗುರಿ ನೀಡಿದೆ. ಭಾರತ ಪರ ಮಹಮ್ಮದ್‌ ಶಮಿ 5 ವಿಕೆಟ್‌ ಕಿತ್ತು ಮಿಂಚಿದರು.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾ 49.4 ಬಾಲ್‌ಗಳಿಗೆ ಆಲೌಟ್‌ ಆಗಿ 228 ರನ್‌ ಗಳಿಸಿತು. ತೋಹಿದ್ ಹೃದಯ್ ಶತಕ ಸಿಡಿಸಿ ಗಮನ ಸೆಳೆದರು.

    ಜಾಕರ್ ಅಲಿ ಅರ್ಧಶತಕ (68), ತಾಂಜಿದ್ ಹಸನ್ 25, ರಿಷದ್ ಹೊಸೇನ್ 18 ರನ್‌ ಗಳಿಸಿದರು. ತಂಡದ ಕ್ಯಾಪ್ಟನ್‌ ನಜ್ಮುಲ್ ಹೊಸೇನ್ ಶಾಂತೊ ಸೇರಿದಂತೆ ಪ್ರಮುಖ ಆಟಗಾರರೇ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

    ಭಾರತದ ಬೌಲರ್‌ಗಳು ಬಾಂಗ್ಲಾ ಬ್ಯಾಟರ್‌ಗಳ ಬೆವರಿಳಿಸಿದರು. ಟೀಂ ಇಂಡಿಯಾ ಪರ ಮೊಹಮ್ಮದ್‌ ಶಮಿ 5 ವಿಕೆಟ್‌ ಕಿತ್ತು ಮಿಂಚಿದರು. ಹರ್ಷಿತ್‌ ರಾಣಾ 3 ವಿಕೆಟ್‌ ಕಬಳಿಸಿ ಗಮನ ಸೆಳೆದರು. ಅಕ್ಷರ್‌ ಪಟೇಲ್‌ 2 ವಿಕೆಟ್‌ ಕಿತ್ತರು.

  • Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್‌ಮ್ಯಾನ್‌ ಪಡೆಗೆ ಗೆಲುವಿನ ತವಕ

    Champions Trophy 2025 | ಇಂದು ಭಾರತ-ಬಾಂಗ್ಲಾ ಮುಖಾಮುಖಿ – ಹಿಟ್‌ಮ್ಯಾನ್‌ ಪಡೆಗೆ ಗೆಲುವಿನ ತವಕ

    ದುಬೈ: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರಿಕೆಟ್ ಟೂರ್ನಿಯಲ್ಲಿಂದು ಟೀಂ ಇಂಡಿಯಾ (Team India) ತನ್ನ ಮೊದಲ ಪಂದ್ಯ ಆಡಲಿದೆ. ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿರುವ ಮೆನ್ ಇನ್ ಬ್ಲ್ಯೂ, ಟೂರ್ನಿಯಲ್ಲಿ ಶುಭಾರಂಭದ ನಿರೀಕ್ಷೆಯಲ್ಲಿದೆ.

    ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡ ಇಂದು ತ‌ನ್ನ ಮೊದಲ ಪಂದ್ಯದೊಂದಿಗೆ ಚಾಂಪಿಯನ್ಸ್‌ ಟ್ರೋಫಿ ಅಭಿಯಾನ ಆರಂಭಿಸಲಿದೆ. ಬಾಂಗ್ಲಾದೇಶ (Bangladesh)ವಿರುದ್ಧ ಮೊದಲ ಪಂದ್ಯವಾಡಲಿರುವ ರೋಹಿತ್ ಪಡೆ, 2025ರ ಐಸಿಸಿ ಟೂರ್ನಿಯಲ್ಲಿ ಶುಭಾರಂಭದ ಕಾತುರತೆಯಲ್ಲಿದೆ. ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸರಣಿ ಗೆದ್ದು ಅದೇ ಜೋಶ್‌ನಲ್ಲಿ, ಚಾಂಪಿಯನ್ಸ್ ಟ್ರೋಫಿಗೆ ತೆರಳಿರೋ ಭಾರತ ತಂಡ 3ನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಇದುವರೆಗೂ ಭಾರತ ಮತ್ತು ಬಾಂಗ್ಲಾ ನಡುವೆ 41 ಪಂದ್ಯಗಳು ನಡೆದಿದ್ದು 32 ಪಂದ್ಯಗಳಲ್ಲಿ ಭಾರತ, 8ರಲ್ಲಿ ಬಾಂಗ್ಲಾ ಗೆಲುವು ಸಾಧಿಸಿದ್ದರೆ, 1 ಪಂದ್ಯ ಫಲಿತಾಂಶವಿಲ್ಲದೇ ರದ್ದಾಗಿದೆ.

    ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 2:30ಕ್ಕೆ ಪಂದ್ಯ ಆರಂಭವಾಗಲಿದೆ. ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಶತಕ ಸಿಡಿಸುವ ಮೂಲಕ ಫಾರ್ಮ್‌ ಸಾಬೀತುಪಡಿಸಿದ್ದರು. ಅದೇ ರೀತಿ ಸರಣಿಯ 3ನೇ ಪಂದ್ಯದಲ್ಲಿ ರನ್ ಮಿಷಿನ್ ಕೊಹ್ಲಿ ಕೂಡ ಅರ್ಧ ಶತಕದೊಂದಿಗೆ ಫಾರ್ಮ್ ಕಂಡುಕೊಂಡಿದ್ರು. ಇದನ್ನೂ ಓದಿ: Champions Trophy | ಯಾವ ವರ್ಷ – ಯಾರು ಚಾಂಪಿಯನ್ಸ್‌? – ಭಾರತ ಕೊನೇ ಬಾರಿ ಟ್ರೋಫಿ ಗೆದ್ದಿದ್ದು ಯಾವಾಗ?

    ಇನ್ನೂ ಭಾರತ ತಂಡದ ಬ್ಯಾಟಿಂಗ್ ನಲ್ಲಿ ಶುಭಮನ್ ಗಿಲ್ ಅಗ್ರ ಕ್ರಮಾಂಕದಲ್ಲಿ, ಕೆ.ಎಲ್ ರಾಹುಲ್, ಶ್ರೇಯಸ್ ಐಯರ್ ಮಧ್ಯಮ ಕ್ರಮಾಂಕದಲ್ಲಿ ಬಲ ತುಂಬಲಿದ್ದಾರೆ. ಇತ್ತ ಬೌಲಿಂಗ್‌ನಲ್ಲಿ ಬುಮ್ರಾ ಅನುಪಸ್ಥಿತಿ ಕೊಂಚ ಕಾಡುವ ಸಾಧ್ಯತೆ ಇದೆ. ಈಗಷ್ಟೇ ಗಾಯದ ಸಮಸ್ಯೆಯಿಂದ ವಾಪಸ್ ಆಗಿರೋ ಮೊಹಮ್ಮದ್ ಶಮಿ ಬೌಲಿಂಗ್ ಪಡೆ ಮುನ್ನಡಸಲಿದ್ದಾರೆ. ಶಮಿ ಜೊತೆ ಅರ್ಷ್‌ದೀಪ್‌ ಸಿಂಗ್‌ ಜೊತೆಯಾದ್ರೆ ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ, ರವೀಂದ್ರ ಜಡೇಜಾ ಕಮಾಲ್ ಮಾಡುವ ಸಾಧ್ಯತೆ ಇದೆ. ಜೊತೆಗೆ ಅಲ್ರೌಂಡರ್ ವಿಭಾಗದಲ್ಲಿ ಜಡ್ಡು, ಪಾಂಡ್ಯ ಹಾಗೂ ವಾಷಿಂಗ್ಟನ್‌ ಸುಂದರ್‌ ನೆರವಾಗಲಿದ್ದಾರೆ.

    ಇತ್ತ ಬಾಂಗ್ಲಾದೇಶ ತಂಡ ಕೂಡ ಬಲಿಷ್ಠವಾಗಿಯೇ ಇದೆ. ಐಸಿಸಿ ಟೂರ್ನಿಯಲ್ಲಿ ಭಾರತದ ವಿರುದ್ಧ ಉತ್ತಮ ಸಾಧನೆ ಇಲ್ಲದಿದ್ದರೂ, ತಂಡವನ್ನ ಕಡೆಗಣಿಸುವಂತಿಲ್ಲ. ಹಿರಿಯ ಮತ್ತು ಯುವ ಆಟಗಾರರ ಪಡೆಯೊಂದಿಗೆ ಟೂರ್ನಿ ಶುಭಾರಂಭಕ್ಕೆ ಬಾಂಗ್ಲಾ ಪಡೆ ಕೂಡ ಕಾತರೆಯಿಂದ ಎದುರು ನೋಡುತ್ತಿದೆ. ಇದನ್ನೂ ಓದಿ: Ind vs Pak ಬ್ಲಾಕ್‌ಬಸ್ಟರ್ ಪಂದ್ಯದ VIP ಟಿಕೆಟ್‌ 3.50 ಕೋಟಿಗೆ ಮಾರಿಕೊಂಡ ಪಿಸಿಬಿ ಅಧ್ಯಕ್ಷ

    ದಾಖಲೆಗಳ ಸನಿಹದಲ್ಲಿ ಕೊಹ್ಲಿ, ರೋಹಿತ್:‌
    ಏಕದಿನ ಪಂದ್ಯದಲ್ಲಿ ಕೊಹ್ಲಿ 14,000 ರನ್‌ಗಳ ಗಡಿ ಮುಟ್ಟಲು, 37 ರನ್‌ಗಳಷ್ಟೇ ಬಾಕಿ ಇದೆ. ಈ ಮೂಲಕ ಅತಿ ವೇಗವಾಗಿ ಈ ಸಾಧನೆ ಮಾಡಿದ ವಿಶ್ವದ 3ನೇ, ಭಾರತದ 2ನೇ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಲಿದ್ದಾರೆ‌. ಅಲ್ಲದೇ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿಂಡೀಸ್‌ನ ಕ್ರಿಸ್‌ ಗೇಲ್ ದಾಖಲೆ ಮುರಿದು ಅತಿ ಹೆಚ್ಚು ರನ್ ಹಾಗೂ ಟೂರ್ನಿಯಲ್ಲಿ ಅತಿ ಹೆಚ್ಚು ಅರ್ಧ ಶತಕ ದಾಖಲು ಮಾಡಿರೋ ರಾಹುಲ್ ದ್ರಾವಿಡ್ ದಾಖಲೆ ಮುರಿಯುವ ಅವಕಾಶ ಕೂಡ ಇದೆ. ಇದೇ ಕಾರಣಕ್ಕೆ ಟ್ರೋಫಿ ಜೊತೆಗೆ ದಾಖಲೆ ನಿರ್ಮಾಣಕ್ಕೆ ಕೊಹ್ಲಿಗೆ ಟೂರ್ನಿ ಮಹತ್ವದ್ದಾಗಲಿದೆ. ಇದನ್ನೂ ಓದಿ: ಲಾಥಮ್ – ಯಂಗ್ ಶತಕಗಳ ಅಬ್ಬರಕ್ಕೆ ಪಾಕ್ ಪಂಚರ್; ನ್ಯೂಜಿಲೆಂಡ್‌ಗೆ 60 ರನ್‌ಗಳ ಭರ್ಜರಿ ಜಯ

  • ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ಇಂದಿನಿಂದ ಚಾಂಪಿಯನ್ಸ್ ಟ್ರೋಫಿ – ಭಾರತದ ಮೂವರು ʻಚಾಂಪಿಯನ್ಸ್‌ʼಗೆ ಕೊನೇ ಟೂರ್ನಿ!

    ಇಸ್ಲಾಮಾಬಾದ್‌: 8 ರಾಷ್ಟ್ರಗಳು ಭಾಗವಹಿಸಿರುವ ಐಸಿಸಿ ಪ್ರಾಯೋಜಿತ ಚಾಂಪಿಯನ್ಸ್ ಟ್ರೋಫಿ (Champions Trophy 2025) ಕ್ರೀಡಾಕೂಟ ಇಂದಿನಿಂದ ಶುರುವಾಗುತ್ತಿದೆ. ಮೊದಲ ಪಂದ್ಯ ಆತಿಥೇಯ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ (Pak vs NZ) ವಿರುದ್ಧ ಕರಾಚಿ ಮೈದಾನದಲ್ಲಿ ಮಧ್ಯಾಹ್ನ 2:30ಕ್ಕೆ ಆರಂಭವಾಗಲಿದೆ.

    ಎ- ಗುಂಪಿನಲ್ಲಿ ಭಾರತ, ನ್ಯೂಜಿಲೆಂಡ್‌, ಪಾಕಿಸ್ತಾನ, ಬಾಂಗ್ಲಾದೇಶ ಇದ್ದರೆ, ಬಿ-ಗುಂಪಿನಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್‌ ತಂಡಗಳಿವೆ. ಭಾರತ ತನ್ನ ಮೊದಲ ಪಂದ್ಯವನ್ನು ದುಬೈನಲ್ಲಿ ಫೆ.20ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ ಮತ್ತು ಪಾಕಿಸ್ತಾನದ ವಿರುದ್ದದ ಹೈವೋಲ್ಟೇಜ್ ಪಂದ್ಯ ಫೆ.23ರ ಸೂಪರ್‌ ಸಂಡೇನಲ್ಲಿ ನಡೆಯಲಿದೆ.

    ನೇರ ಪ್ರಸಾರ ಎಲ್ಲಿ?
    ಸ್ಟಾರ್ ಸ್ಫೋಟ್ಸ್‌ ವಾಹಿನಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ನೇರ ಪ್ರಸಾರ ಮಾಡಲಿದೆ. ಜಿಯೋಹಾಟ್‌ಸ್ಟಾರ್ (ಆಪ್‌) ಚಾಂಪಿಯನ್ಸ್ ಟ್ರೋಫಿ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಮಾಡಲಿದೆ.

    ಭಾರತದ ಮೂವರಿಗೆ ಕೊನೆಯ ಆಟ?
    ಹೌದು. ಏಕದಿನ ಮಾದರಿಯ ಚಾಂಪಿಯನ್ಸ್‌ ಟ್ರೋಫಿ ಟೀಂ ಇಂಡಿಯಾ (Team India) ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರಿಗೆ ಕೊನೆಯ ಟೂರ್ನಿ ಆಗುವ ಎಲ್ಲಾ ಸಾಧ್ಯತೆಗಳೂ ಇವೆ. ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ಬಾರ್ಡರ್‌ ಗವಾಸ್ಕರ್‌ ಟೆಸ್ಟ್‌ ಟ್ರೋಫಿಯಲ್ಲಿ ಭಾರತ ಹೀನಾಯ ಸೋಲು ಕಂಡ ಬಳಿಕ ರೋಹಿತ್‌ ಟೆಸ್ಟ್‌, ಏಕದಿನ ಕ್ರಿಕೆಟ್‌ಗೂ ವಿದಾಯ ಹೇಳೋದಕ್ಕೆ ಮುಂದಾಗಿದ್ದರು. ಆದ್ರೆ ಬಿಸಿಸಿಐ ಒತ್ತಾಯದ ಮೇರೆಗೆ ಮುಂದುವರಿದಿದ್ದಾರೆ ಎಂದು ವರದಿಯಾಗಿದೆ. 2013ರಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಭಾರತ ಟ್ರೋಫಿಗೆ ಮುತ್ತಿಟ್ಟಾಗಲೂ ಈ ಮೂವರು ಟೂರ್ನಿಯಲ್ಲಿದ್ದರು. ಈ ಬಾರಿ ಟ್ರೋಫಿ ಗೆದ್ದು ಗೆಲುವಿನ ವಿದಾಯ ಹೇಳುವರೇ ಎಂಬುದನ್ನು ಕಾದುನೋಡಬೇಕಿದೆ.

    ಕೊಹ್ಲಿ, ರೋಹಿತ್‌ ಫಾರ್ಮ್‌ನದ್ದೇ ಚಿಂತೆ:
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ರೋಹಿತ್‌, ಕೊಹ್ಲಿ, ಜಡ್ಡು ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಆದ್ರೆ ಏಕದಿನ, ಟೆಸ್ಟ್‌ ಮಾದರಿಯ ಕ್ರಿಕೆಟ್‌ನಲ್ಲಿ ಮುಂದುವರಿದಿದ್ದಾರೆ. ಜಡೇಜಾ ಎಂದಿನಂತೆ ತಮ್ಮ ಬೌಲಿಂಗ್‌, ಬ್ಯಾಟಿಂಗ್‌ನಲ್ಲಿ ಸಾಮರ್ಥ್ಯ ಪ್ರದರ್ಶನ ತೋರಿದ್ದಾರೆ. ಆದ್ರೆ ಕಳೆದ ವರ್ಷಾಂತ್ಯದಲ್ಲಿ ಆಸೀಸ್‌ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಶತಕ ಸಿಡಿಸಿದ್ದ ಕೊಹ್ಲಿ ಬಳಿಕ ಕಳಪೆ ಫಾರ್ಮ್‌ ಮುಂದುವರಿಸಿದ್ರು. ರಣಜಿ ಕ್ರಿಕೆಟ್‌ನಲ್ಲೂ ತಮ್ಮ ಸಾಮರ್ಥ್ಯ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರು. ಮತ್ತೊಂದೆಡೆ ಆಸೀಸ್‌ ವಿರುದ್ಧದ ಟೆಸ್ಟ್‌ನಿಂದ ನಿರಂತರ ಕಳಪೆ ಫಾರ್ಮ್‌ ಮುಂದುವರಿಸಿದ್ದರು. ಆದ್ರೆ ಇಂಗ್ಲೆಂಡ್‌ ವಿರುದ್ಧ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ರು, ಅದೇ ರೀತಿ ಸರಣಿಯ 3ನೇ ಪಂದ್ಯದಲ್ಲಿ ಕೊಹ್ಲಿ ಕೂಡ ಅರ್ಧಶತಕ ಸಿಡಿಸಿ ಟೀಕೆಗಳಿಗೆ ಬ್ಯಾಟ್‌ ಮೂಲಕ ಉತ್ತರ ಕೊಟ್ಟರು. ಇದೀಗ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಅದೇ ಫಾರ್ಮ್‌ ಮುಂದುವರಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

    ಗಂಭೀರ್‌ ನಾಯಕತ್ವಕ್ಕೂ ಸವಾಲು:
    2024ರ ಟಿ20 ವಿಶ್ವಕಪ್‌ ಟೂರ್ನಿ ಬಳಿಕ ಟೀಂ ಇಂಡಿಯಾ ಮುಖ್ಯಕೋಚ್‌ ಆಗಿ ಗೌತಮ್‌ ಗಂಭೀರ್‌ ಅಧಿಕಾರ ವಹಿಸಿಕೊಂಡನಂತರ ಭಾರತ ಏಕದಿನ ಹಾಗೂ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಂಪೂರ್ಣ ನೆಲ ಕಚ್ಚಿತ್ತು. ಶ್ರೀಲಂಕಾ ವಿರುದ್ಧ ಏಕದಿನ ಸರಣಿ, ನ್ಯೂಜಿಲೆಂಡ್‌, ಆಸೀಸ್‌ ವಿರುದ್ಧದ ಸರಣಿಗಳನ್ನು ಸೋತಿತ್ತು. ಬಿಸಿಸಿಐ ಆಟಗಾರರಿಗೆ ಕಟ್ಟುನಿಟ್ಟಿನ ನಿಯಮಗಳನ್ನು ವಿಧಿಸಿದ ಬಳಿಕ ಇತ್ತೀಚೆಗೆ ಇಂಗ್ಲೆಂಡ್‌ ವಿರುದ್ಧ ನಡೆಸಿದ್ದ ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡಿಕೊಂಡಿತ್ತು. ಇನ್ನೂ ಗಂಭೀರ್‌ ನೇತೃತ್ವದಲ್ಲಿ ಭಾರತ ಎದುರಿಸುತ್ತಿರುವ ಮೊದಲ ಐಸಿಸಿ ಟೂರ್ನಿ ಇದಾಗಿದೆ. ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಲು ಟ್ರೋಫಿ ಗೆಲುವು ಅನಿವಾರ್ಯವೂ ಆಗಿದೆ.

  • 214 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ – ತವರಲ್ಲೇ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

    214 ರನ್‌ಗಳಿಗೆ ಇಂಗ್ಲೆಂಡ್‌ ಆಲೌಟ್‌ – ತವರಲ್ಲೇ ಸರಣಿ ಕ್ಲೀನ್ ಸ್ವೀಪ್ ಮಾಡಿದ ಭಾರತ

    – ಕೊನೆಯ ಪಂದ್ಯದಲ್ಲಿ ಭಾರತಕ್ಕೆ 142 ರನ್‌ಗಳ ಭರ್ಜರಿ ಗೆಲುವು

    ಅಹಮದಾಬಾದ್‌: ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ 142 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತವರಿನಲ್ಲೇ 3-0ನಲ್ಲಿ ಸರಣಿ ಕ್ಲೀನ್‌ ಸ್ವೀಪ್‌ ಮಾಡಿದೆ.

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 356 ರನ್‌ ಪೇರಿಸಿತ್ತು. 357 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು. ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ಫೆ.8 ರಂದು ಭಾರತ- ಶ್ರೀಲಂಕಾ ಕ್ರಿಕೆಟ್‌ ಮ್ಯಾಚ್‌

    ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 356 ರನ್‌ ಪೇರಿಸಿತ್ತು. 357 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಟೀಂ ಇಂಡಿಯಾ ಬೌಲರ್‌ಗಳ ಆರ್ಭಟಕ್ಕೆ ನಲುಗಿತು. 34.2 ಓವರ್‌ಗಳಲ್ಲೇ 214 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

    ಬೃಹತ್‌ ರನ್‌ ಟಾರ್ಗೆಟ್‌ ಬೆನ್ನತ್ತಿದ್ದ ಇಂಗ್ಲೆಂಡ್‌ ತಂಡಕ್ಕೆ ಭಾರತೀಯ ಬೌಲರ್‌ಗಳು ಆರಂಭದಲ್ಲೇ ಆಘಾತ ನೀಡಿದರು. ಇದರ ಹೊರತಾಗಿಯೂ ಇಂಗ್ಲೆಂಡ್‌ ಒಂದೆಡೆ ರನ್‌ ಗಳಿಸುತ್ತಿದ್ದರೆ, ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ಬಟ್ಲರ್‌, ಲಿವಿಂಗ್‌ಸ್ಟೋನ್‌, ರೂಟ್‌ ಹಾಗೂ ಹ್ಯಾರಿ ಬ್ರೂಕ್‌ ಅವರ ಬ್ಯಾಟಿಂಗ್‌ ವೈಫಲ್ಯ ಇಂಗ್ಲೆಂಡ್‌ಗೆ ದೊಡ್ಡ ಪೆಟ್ಟು ನೀಡಿತು. ಪರಿಣಾಮ 214 ರನ್‌ಗಳಿಗೆ ಆಲೌಟ್‌ ಆಯಿತು.

    ಇಂಗ್ಲೆಂಡ್‌ ಪರ ಟಾಮ್‌ ಬ್ಯಾನ್‌ಟನ್‌, ಗಸ್‌ ಅಟ್ಕಿನ್‌ಸನ್‌ ತಲಾ 38 ರನ್‌ ಗಳಿಸಿದ್ರೆ, ಬೆನ್‌ ಡಕೆಟ್‌ 34 ರನ್‌, ಜೋ ರೂಟ್‌ 24 ರನ್‌, ಫಿಲ್‌ ಸಾಲ್ಟ್‌ 23 ರನ್‌, ಬ್ರೂಕ್‌ 19 ರನ್‌ ಗಳಿಸಿದ್ರೆ ಉಳಿದವರು ಒಂದಂಕಿ ಮೊತ್ತಕ್ಕೆ ವಿಕೆಟ್‌ ಒಪ್ಪಿಸಿ ಪೆವಿಲಿಯನ್‌ಗೆ ಮರಳಿದರು. ಇದನ್ನೂ ಓದಿ: ಆಸೀಸ್‌ಗೆ ಬಹುದೊಡ್ಡ ಆಘಾತ – ಚಾಂಪಿಯನ್ಸ್‌ ಟ್ರೋಫಿಯಿಂದ ಹೊರಗುಳಿದ ಸ್ಟಾರ್ಕ್‌

    ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಭರ್ಜರಿ ಮೊತ್ತವನ್ನೇ ಪೇರಿಸಿತು. ಉಪನಾಯಕ ಶುಭಮನ್ ಗಿಲ್ ಅಮೋಘ ಶತಕ ಸಿಡಿಸುವ ಮೂಲಕ ತಂಡಕ್ಕೆ ಅಡಿಪಾಯ ಹಾಕಿದರು. ಇನ್ನೂ ಆರಂಭಿಕ ರೋಹಿತ್‌ ಒಂದೇ ರನ್ನಿಗೆ ಔಟಾಗುತ್ತಿದ್ದಂತೆ ಅಖಾಡಕ್ಕಿಳಿದ ಕೊಹ್ಲಿ ಬಹುದಿನಗಳ ಬಳಿಕ ಅರ್ಧಶತಕ ಸಿಡಿಸಿ ಗಮನ ಸೆಳೆದರು. ಇದರೊಂದಿಗೆ ಶ್ರೇಯಸ್‌ ಅಯ್ಯರ್‌ ಅವರ ಭರ್ಜರಿ ಬ್ಯಾಟಿಂಗ್‌ ಟೀಂ ಇಂಡಿಯಾ ಬೃಹತ್‌ ಮೊತ್ತ ಪೇರಿಸಲು ಕಾರಣವಾಯಿತು.

    ಟೀಂ ಇಂಡಿಯಾ ಪರ ಶುಭಮನ್‌ ಗಿಲ್‌ 112 ರನ್‌ (102 ಎಸೆತ, 14 ಬೌಂಡರಿ, 3 ಸಿಕ್ಸರ್)‌, ಶ್ರೇಯಸ್‌ ಅಯ್ಯರ್‌ 78 ರನ್‌ (64 ಎಸೆತ, 8 ಬೌಂಡರಿ, 2 ಸಿಕ್ಸರ್)‌, ವಿರಾಟ್‌ ಕೊಹ್ಲಿ 52 ರನ್‌ (55 ಎಸೆತ, 7 ಬೌಂಡರಿ, 1 ಸಿಕ್ಸರ್)‌, ಕೆ.ಎಲ್‌ ರಾಹುಲ್‌ 40 ರನ್‌ (29 ಎಸೆತ, 3 ಬೌಂಡರಿ, 1 ಸಿಕ್ಸರ್)‌, ಹಾರ್ದಿಕ್‌ ಪಾಂಡ್ಯ 17 ರನ್‌, ಅಕ್ಷರ್‌ ಪಟೇಲ್‌ 13 ರನ್‌, ವಾಷಿಂಗ್ಟನ್‌ ಸುಂದರ್‌ 14 ರನ್‌, ಹರ್ಷಿತ್‌ ರಾಣಾ 13 ರನ್‌, ಅರ್ಷ್‌ದೀಪ್‌ ಸಿಂಗ್‌ 2 ರನ್‌ ಹಾಗೂ ರೋಹಿತ್‌ ಶರ್ಮಾ 1 ರನ್‌ ಗಳಿಸಿದ್ರು,

    ಇಂಗ್ಲೆಂಡ್‌ ಪರ ಆದಿಲ್ ರಶೀದ್ 4 ವಿಕೆಟ್‌ಗಳನ್ನು ಪಡೆಯುವ ಮೂಲಕ ಭಾರತೀಯ ಬ್ಯಾಟರ್‌ಗಳನ್ನು ಕಾಡಿದರು. ಮಾರ್ಕ್‌ ವುಡ್ 2 ವಿಕೆಟ್ ಪಡೆದರು. ಉಳಿದಂತೆ ಶಕೀಬ್‌ ಮಸೂದ್, ಜೋ ರೂಟ್, ಗಸ್ ಅಟ್ಕಿನ್‌ಸನ್‌ ತಲಾ ಒಂದು ವಿಕೆಟ್ ಪಡೆದರು. ಇದನ್ನೂ ಓದಿ: ಇಂಗ್ಲೆಂಡ್‌ ವಿರುದ್ಧ ಫಿಫ್ಟಿ – ಕೊಹ್ಲಿ ಬ್ಯಾಟಿಂಗ್‌ ಮೋಡಿಗೆ ಸಚಿನ್‌, ಸಂಗಕ್ಕಾರ ದಾಖಲೆ ಉಡೀಸ್‌

  • IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    IND vs ENG, 2nd ODI: ರೋಹಿತ್‌ ಅಬ್ಬರದ ಶತಕ, ಜಡೇಜಾ ಸ್ಪಿನ್‌ ಜಾದು – ಆಂಗ್ಲರ ವಿರುದ್ಧ ಭಾರತಕ್ಕೆ 4 ವಿಕೆಟ್‌ಗಳ ಜಯ

    * 2-0 ಮುನ್ನಡೆಯೊಂದಿಗೆ ಸರಣಿ ಗೆದ್ದ ಟೀಂ ಇಂಡಿಯಾ

    ಕಟಕ್‌: ಕ್ಯಾಪ್ಟನ್‌ ರೋಹಿತ್‌ ಶರ್ಮಾ ಅಬ್ಬರದ ಬ್ಯಾಟಿಂಗ್‌, ಆಲ್‌ರೌಂಡರ್‌ ಜಡೇಜಾ ಸ್ಪಿನ್‌ ಮೋಡಿಗೆ ಇಂಗ್ಲೆಂಡ್‌ ತತ್ತರಿಸಿದೆ. ಇಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಟೀಂ ಇಂಡಿಯಾ 4 ವಿಕೆಟ್‌ಗಳ ಜಯ ಸಾಧಿಸಿದೆ. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 2-0 ಮುನ್ನಡೆಯೊಂದಿಗೆ ಸರಣಿ ಗೆದ್ದಿದೆ.

    ಕಟಕ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿತು. 49.5 ಓವರ್‌ಗಳಿಗೆ ಜೋಸ್‌ ಬಟ್ಲರ್‌ ಪಡೆ 304 ರನ್‌ಗಳಿಗೆ ಆಲೌಟ್‌ ಆಯಿತು. ಬೆನ್ ಡಕೆಟ್ 69, ಜೋ ರೂಟ್ 65, ಲಿಯಾಮ್ ಲಿವಿಂಗ್‌ಸ್ಟೋನ್ 41, ಜೋಸ್ ಬಟ್ಲರ್ 34, ಹ್ಯಾರಿ ಬ್ರೂಕ್ 31 ಹೊಡೆದು ಗಮನ ಸೆಳೆದರು. ಭಾರತಕ್ಕೆ ಇಂಗ್ಲೆಂಡ್‌ 305 ರನ್‌ಗಳ ಗುರಿ ನೀಡಿತು.

    ಟೀಂ ಇಂಡಿಯಾ ಪರ ಜಡೇಜಾ ಉತ್ತಮ ಬೌಲಿಂಗ್‌ ಪ್ರದರ್ಶನ ನೀಡಿದರು. ಜಡೇಜಾ 3, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಹಾರ್ದಿಕ್ ಪಾಂಡ್ಯ, ವರುಣ್ ಚಕ್ರವರ್ತಿ ತಲಾ 1 ವಿಕೆಟ್‌ ಕಬಳಿಸಿದ್ದಾರೆ.

    ಭಾರತ ಪರ ನಾಯಕ ರೋಹಿತ್‌ ಶರ್ಮಾ ಶತಕ ಸಿಡಿಸಿ ಅಬ್ಬರಿಸಿದರು. 90 ಬಾಲ್‌ಗೆ 119 ರನ್‌ (12 ಫೋರ್‌, 7 ಸಿಕ್ಸರ್‌) ಸಿಡಿಸಿ ಮಿಂಚಿದರು. ಶುಭಮನ್‌ ಗಿಲ್‌ 60, ಶ್ರೇಯಸ್‌ ಅಯ್ಯರ್‌ 44, ಅಕ್ಷರ್‌ ಪಟೇಲ್‌ 41 ರನ್‌ ಗಳಿಸಿ ತಂಡದ ಗೆಲುವಿಗೆ ಸಾಥ್‌ ನೀಡಿದರು.

    ಅಂತಿಮವಾಗಿ ಟೀಂ ಇಂಡಿಯಾ 44.3 ಓವರ್‌ಗಳಿಗೆ 308 ರನ್‌ ಗಳಿಸಿ 4 ವಿಕೆಟ್‌ಗಳ ಜಯ ಸಾಧಿಸಿತು.

  • ಭಾರತಕ್ಕೆ ರನ್‌ಗಳ ʻಅಭಿಷೇಕʼ – ಇಂಗ್ಲೆಂಡ್‌ ವಿರುದ್ಧ 4-1 ಅಂತರದಲ್ಲಿ ಸರಣಿ ಜಯ

    ಭಾರತಕ್ಕೆ ರನ್‌ಗಳ ʻಅಭಿಷೇಕʼ – ಇಂಗ್ಲೆಂಡ್‌ ವಿರುದ್ಧ 4-1 ಅಂತರದಲ್ಲಿ ಸರಣಿ ಜಯ

    – ಸರಣಿಯ ಕೊನೇ ಪಂದ್ಯದಲ್ಲಿ 150 ರನ್‌ಗಳ ಭರ್ಜರಿ ಗೆಲುವು

    ಮುಂಬೈ: ಸೂಪರ್‌ ಸಂಡೆ ವಾಂಖೆಡೆ ಕ್ರೀಡಾಂಗಣದಲ್ಲಿ ಇಂಗ್ಲೆಂಡ್‌ (England) ವಿರುದ್ಧ ನಡೆದ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ (Team India) 150 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಇದರೊಂದಿಗೆ 5 ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಲ್ಲಿ ಗೆದ್ದುಕೊಂಡಿದೆ. ಅಲ್ಲದೇ 2019ರ ಬಳಿಕ ಒಂದೇ ಒಂದು ಟಿ20 ಸರಣಿಯನ್ನೂ ಸೋಲದ ಭಾರತ ಗೆಲುವಿನ ಪರಂಪರೆಯನ್ನು ಮುಂದುವರಿಸಿದೆ.

    ಗೆಲುವಿಗೆ 248 ರನ್‌ಗಳ‌ ಬೃಹತ್‌ ಗುರಿ ಪಡೆದ ಇಂಗ್ಲೆಂಡ್‌ 10.3 ಓವರ್‌ಗಳಲ್ಲೇ 97 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿಕೊಂಡಿತು.

    ಬೃಹತ್‌ ಮೊತ್ತದ ಚೇಸಿಂಗ್‌ ಆರಂಭಿಸಿದ ಇಂಗ್ಲೆಂಡ್‌ ಮೊದಲ ಓವರ್‌ನಿಂದಲೇ ಪ್ರತಿದಾಳಿ ನಡೆಸಲು ಶುರು ಮಾಡಿತು. ಆರಂಭಿಕ ಆಟಗಾರ ಫಿಲ್‌ ಸಾಲ್ಟ್‌ 2 ಬೌಂಡರಿ, 1 ಸಿಕ್ಸರ್‌ನೊಂದಿಗೆ 17 ರನ್‌ ಚಚ್ಚಿದರು. ಇದರಿಂದ ಇಂಗ್ಲೆಂಡ್‌ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದ್ರೆ 4ನೇ ಓವರ್‌ನಲ್ಲಿ ಮೊದಲ ಎಸೆತದಲ್ಲೇ ಬೆನ್‌ ಡಕೆಟ್‌ ವಿಕೆಟ್‌ ಬೀಳುತ್ತಿದ್ದಂತೆ ಇಂಗ್ಲೆಂಡ್‌ ಆಟಗಾರರು ಪೆವಿಲಿಯನ್‌ ಪರೇಡ್‌ ನಡೆಸಿದರು.

    ಇಂಗ್ಲೆಂಡ್‌ ಪರ ಏಕಾಂಗಿ ಹೋರಾಟ ನಡೆಸಿದ ಫಿಲ್‌ ಸಾಲ್ಟ್‌ 23 ಎಸೆತಗಳಲ್ಲಿ 53 ರನ್‌ (3 ಸಿಕ್ಸರ್‌, 7 ಬೌಂಡರಿ) ಗಳಿಸಿದ್ರೆ ಉಳಿದೆಲ್ಲ ಆಟಗಾರರು ಅಲ್ಪ ಮೊತ್ತಕ್ಕೆ ನೆಲ ಕಚ್ಚಿದರು. ಇನ್ನೂ ಇಂಗ್ಲೆಂಡ್‌ ವಿರುದ್ಧ ಸಂಘಟಿತ ಬೌಲಿಂಗ್‌ ದಾಳಿ ನಡೆಸಿದ ಟೀಂ ಇಂಡಿಯಾ ಪರ ಮೊಹಮ್ಮದ್‌ ಶಮಿ 3 ವಿಕೆಟ್‌ ಕಿತ್ತರೆ, ವರುಣ್‌ ಚಕ್ರವರ್ತಿ, ಶಿವಂ ದುಬೆ, ಅಭಿಷೇಕ್‌ ಶರ್ಮಾ (Abhishek Sharma), ತಲಾ 2 ವಿಕೆಟ್‌ ಹಾಗೂ ರವಿ ಬಿಷ್ಣೋಯಿ ಒಂದು ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ, ಬೃಹತ್ ಮೊತ್ತವನ್ನೇ ಕಲೆ ಹಾಕಿತು. ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿದೆ. ಒಂದರ ಮೇಲೆ ಒಂದರಂತೆ ಲೀಲಾಜಾಲವಾಗಿ ಸಿಕ್ಸರ್ ಸಿಡಿಸಿದ ಅಭಿಷೇಕ್ ಶರ್ಮಾ, ಕೇವಲ 37 ಎಸೆತಗಳಲ್ಲಿ ಶತಕ ಸಿಡಿಸಿದರು.

    ಇದರೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ಅತೀ ವೇಗವಾಗಿ ಶತಕ ಸಿಡಿಸಿದ ಭಾರತ ತಂಡದ ಎರಡನೇ ಆಟಗಾರ ಎಂಬ ದಾಖಲೆ ತಮ್ಮದಾಗಿಸಿಕೊಂಡರು. ಜೊತೆಗೆ ಟಿ20 ಕ್ರಿಕೆಟ್‌ನಲ್ಲಿ ತಮ್ಮ 2ನೇ ಶತಕ ದಾಖಲಿಸಿದರು. ಅಭಿಷೇಕ್ ಶರ್ಮಾ ಭರ್ಜರಿ ಬ್ಯಾಟಿಂಗ್ ಕಂಡು ವಾಖೆಂಡೆ ಮೈದಾನದಲ್ಲಿ ನೆರೆದಿದ್ದ ಪ್ರೇಕ್ಷಕರು ಸಂಭ್ರಮಿಸಿದರು. ಮೊದಲ ಎಸೆತವನ್ನೇ ಸಿಕ್ಸರ್‌ಗೆ ಅಟ್ಟುವ ಮೂಲಕ ಸಂಜು ಸ್ಯಾಮ್ಸನ್‌ ಇಂಗ್ಲೆಂಡ್ ಬೌಲರ್‌ಗಳ ಮೇಲೆ ಪ್ರಹಾರ ನಡೆಸಿದರು.

    ಅಂತಿಮವಾಗಿ ಭಾರತ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 247 ರನ್ ಕಲೆಹಾಕಿತು. ಭಾರತದ ಪರ ಅಭಿಷೇಕ್‌ ಶರ್ಮಾ 135 ರನ್‌ (54 ಎಸೆತ, 13 ಸಿಕ್ಸರ್‌, 7 ಬೌಂಡರಿ), ಶಿವಂ ದುಬೆ 30 ರನ್‌, ತಿಲಕ್‌ ವರ್ಮಾ 24 ರನ್‌, ಸಂಜು ಸ್ಯಾಮ್ಸನ್‌ 16 ರನ್‌, ಅಕ್ಷರ್‌ ಪಟೇಲ್‌ 15 ರನ್‌, ಸೂರ್ಯಕುಮಾರ್‌ ಯಾದವ್‌ 2 ರನ್‌, ಹಾರ್ದಿಕ್‌ ಪಾಂಡ್ಯ ಮತ್ತು ರಿಂಕು ಸಿಂಗ್‌ ತಲಾ 9 ರನ್‌ ಗಳಿಸಿದ್ರು.

    ಇಂಗ್ಲೆಂಡ್ ಪರ ಬ್ರೇಯ್ಸನ್ ಕರ್ಸ್ ಮೂರು ವಿಕೆಟ್ ಹಾಗೂ ಮಾರ್ಕ್ ವುಡ್ ಎರಡು ವಿಕೆಟ್ ಕಿತ್ತರು. ಜೋಪ್ರಾ ಆರ್ಚರ್, ಜೇಮೀ ಓವರ್ಟನ್ ಮತ್ತು ಆದಿಲ್ ರಶೀದ್ ಒಂದೊಂದು ವಿಕೆಟ್ ಪಡೆದರು.

  • ಅಭಿಷೇಕ್‌ ಶತಕದ ಆರ್ಭಟ – ರೋಹಿತ್‌, ವಿರಾಟ್‌, ಗಿಲ್‌ ದಾಖಲೆ ಪುಡಿ ಪುಡಿ

    ಅಭಿಷೇಕ್‌ ಶತಕದ ಆರ್ಭಟ – ರೋಹಿತ್‌, ವಿರಾಟ್‌, ಗಿಲ್‌ ದಾಖಲೆ ಪುಡಿ ಪುಡಿ

    ಮುಂಬೈ: ಇಂಗ್ಲೆಂಡ್‌ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಸ್ಟಾರ್‌ ಅಭಿಷೇಕ್‌ ಶರ್ಮಾ (Abhishek Sharma) ಹಲವು ದಾಖಲೆಗಳನ್ನ ಪುಡಿ ಪುಡಿ ಮಾಡಿದ್ದಾರೆ.

    ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಡಿಸಿದ್ದಾರೆ. 250 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ಅಭಿ ಒಟ್ಟು 54 ಎಸೆತಗಳಲ್ಲಿ 135 ರನ್‌ (13 ಸಿಕ್ಸರ್‌, 7 ಬೌಂಡರಿ) ಚಚ್ಚಿದ್ದಾರೆ. ಇದರೊಂದಿಗೆ ದಿಗ್ಗಜರಾದ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಸೇರಿ ಶುಭಮನ್‌ ಗಿಲ್‌ ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಪುಡಿಪುಡಿ ಮಾಡಿದ್ದಾರೆ.

    ಈ ಮೂಲಕ ವೇಗದ ಶತಕ ಹಾಗೂ ಅರ್ಧಶತಕ ಸಿಡಿಸಿದ 2ನೇ ಭಾರತೀಯ ಬ್ಯಾಟರ್‌ ಎನಿಸಿಕೊಂಡಿರುವ ಅಭಿ, ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗಾರನಾಗಿ ಎಂಬ ವಿಶೇಷ ಸಾಧನೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಇನ್ನಿಂಗ್ಸ್‌ವೊಂದರಲ್ಲೇ ಅತಿಹೆಚ್ಚು ಸಿಕ್ಸರ್‌ ಸಿಡಿಸಿದ ಆಟಗಾರನೆಂಬ ಖ್ಯಾತಿಗೂ ಪಾತ್ರರಾಗಿದ್ದಾರೆ. ಇದನ್ನೂ ಓದಿ: ಸ್ಫೋಟಕ ಶತಕ – ಅಭಿಷೇಕ್‌ ಶರ್ಮಾ ಬೆಂಕಿ ಬ್ಯಾಟಿಂಗ್‌ಗೆ ಎರಡೆರಡು ದಾಖಲೆ ಉಡೀಸ್‌

    ಇನ್ನಿಂಗ್ಸ್‌ವೊಂದರಲ್ಲಿ ಅತಿಹೆಚ್ಚು ರನ್‌ ಗಳಿಸಿದ ಭಾರತೀಯರು
    * ಅಭಿಷೇಕ್‌ ಶರ್ಮಾ- 135 ರನ್‌ (54 ಎಸೆತ)
    * ಶುಭಮನ್‌ ಗಿಲ್‌ – 126 (63 ಎಸೆತ)
    * ರುತುರಾಜ್‌ ಗಾಯಕ್ವಾಡ್‌ – 123 ರನ್‌ (57 ಎಸೆತ)
    * ವಿರಾಟ್‌ ಕೊಹ್ಲಿ – 122 ರನ್‌ (61 ಎಸೆತ)
    * ರೋಹಿತ್‌ ಶರ್ಮಾ – 121 ರನ್‌ (69 ಎಸೆತ)

    2ನೇ ವೇಗದ ಅರ್ಧಶತಕ:
    ಮೊದಲ ಓವರ್‌ನಲ್ಲಿ 16 ರನ್‌ ಚಚ್ಚಿ ಸಂಜು ಸ್ಯಾಮ್ಸನ್‌ ಔಟಾಗುತ್ತಿದ್ದಂತೆ ಅಭಿಷೇಕ್‌ ಶರ್ಮಾ ಸ್ಪೋಟಕ ಇನ್ನಿಂಗ್ಸ್‌ ಕಟ್ಟಲು ಮುಂದಾದರು. ಬ್ಯಾಟಿಂಗ್‌ ಸ್ನೇಹಿಯಾದ ವಾಂಖೆಡೆ ಪಿಚ್‌ನಲ್ಲಿ ಸಿಕ್ಸರ್‌, ಬೌಂಡರಿಗಳ ಮಳೆ ಸುರಿಸಿದ ಅಭಿ, ಕೇವಲ 17 ಎಸೆತಗಳಲ್ಲೇ 3 ಬೌಂಡರಿ, 5 ಸಿಕ್ಸರ್‌ಗಳೊಂದಿಗೆ ವೇಗದ ಅರ್ಧಶತಕ ಸಿಡಿಸಿದರು. ಇದು ಟೀಂ ಇಂಡಿಯಾ ಪರ ದಾಖಲಾದ 2ನೇ ವೇಗದ ಅರ್ಧಶತಕವಾಗಿದೆ. 2007ರಲ್ಲಿ ಇಂಗ್ಲೆಂಡ್‌ ವಿರುದ್ಧವೇ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್‌ ಸಿಂಗ್‌ ಕೇವಲ 12 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದ್ದು, ಈವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

    ಸ್ಫೋಟಕ ಶತಕ ಸಿಡಿಸಿದ 2ನೇ ಭಾರತೀಯ:
    ಇನ್ನೂ ಕೇವಲ 37 ಎಸೆತಗಳಲ್ಲೇ 10 ಸಿಕ್ಸರ್‌, 5 ಬೌಂಡರಿಯೊಂದಿಗೆ ವೇಗದ ಶತಕ ದಾಖಲಿಸಿದ ಅಭಿಷೇಕ್‌ ಶರ್ಮಾ ಟೀಂ ಇಂಡಿಯಾ ಪರ ವೇಗದ ಶತಕ ಸಿಡಿಸಿದ 2ನೇ ಭಾರತೀಯ ಎಂಬ ಖ್ಯಾತಿಗೂ ಪಾತ್ರರಾದರು. 2017ರಲ್ಲಿ ಶ್ರೀಲಂಕಾ ವಿರುದ್ಧ ರೋಹಿತ್‌ ಶರ್ಮಾ ಕೇವಲ 35 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಭಾರತದ ಪಾಲಿನ ಈವರೆಗಿನ ದಾಖಲೆಯಾಗಿದೆ. ಇದನ್ನೂ ಓದಿ: U19 Women’s T20 World Cup: ಸತತ 2ನೇ ಬಾರಿಗೆ ಟೀಂ ಇಂಡಿಯಾ ಚಾಂಪಿಯನ್‌ 

    248 ರನ್‌ಗಳ ಗುರಿ:
    ಸದ್ಯ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿರುವ ಭಾರತ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 247 ರನ್‌ ಗಳಿಸಿ, ಎದುರಾಳಿ ಇಂಗ್ಲೆಂಡ್‌ ತಂಡಕ್ಕೆ 248 ರನ್‌ಗಳ ಗುರಿ ನೀಡಿದೆ. ಟೀಂ ಇಂಡಿಯಾ ಪರ ಅಭಿಷೇಕ್‌ ಶರ್ಮಾ ಹೊರತುಪಡಿಸಿ ಶಿವಂ ದುಬೆ, 30 ರನ್‌, ತಿಲಕ್‌ ವರ್ಮಾ 24 ರನ್‌, ಸಂಜು ಸ್ಯಾಮ್ಸನ್‌ 16 ರನ್‌, ಅಕ್ಷರ್‌ ಪಟೇಲ್‌ 15 ರನ್‌, ಸೂರ್ಯಕುಮಾರ್‌ ಯಾದವ್‌ 2 ರನ್‌, ಹಾರ್ದಿಕ್‌ ಪಾಂಡ್ಯ ಮತ್ತು ರಿಂಕು ಸಿಂಗ್‌ ತಲಾ 9 ರನ್‌ ಗಳಿಸಿದ್ರು. ಇದನ್ನೂ ಓದಿ: ರಣಜಿ ಟ್ರೋಫಿ ಪಂದ್ಯದ ವೇಳೆ ಮತ್ತೆ ಭದ್ರತಾ ಲೋಪ – ಕೊಹ್ಲಿಯತ್ತ ಧಾವಿಸಿದ ಮೂವರು ಅಭಿಮಾನಿಗಳು