Tag: RohitSharma

  • 3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

    3ನೇ ಪಂದ್ಯದಲ್ಲಿ ಮುಗ್ಗರಿಸಿದ ಭಾರತ – ಆಸ್ಟ್ರೇಲಿಯಾಗೆ 9 ವಿಕೆಟ್‌ಗಳ ಭರ್ಜರಿ ಜಯ

    ಇಂದೋರ್: ಆಸ್ಟ್ರೇಲಿಯಾ ಆಟಗಾರ ಟ್ರಾವಿಸ್ ಹೆಡ್ (Travis Head) ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಆಸ್ಟ್ರೇಲಿಯಾ (Australia), ಟೀಂ ಇಂಡಿಯಾ (Team India) ವಿರುದ್ಧ 3ನೇ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 4 ಪಂದ್ಯಗಳ ಬಾರ್ಡರ್ ಗಾವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಮೊದಲ ಜಯ ಸಾಧಿಸಿದೆ.

    2ನೇ ದಿನದಾಟದ ಅಂತ್ಯಕ್ಕೆ 60.3 ಓವರ್‌ಗಳಲ್ಲಿ 163 ರನ್‌ಗಳಿಸಿದ್ದ ಭಾರತ 2ನೇ ಇನ್ನಿಂಗ್ಸ್‌ನಲ್ಲೂ ಒಂದೇ ದಿನಕ್ಕೆ ಸರ್ವಪತನ ಕಂಡಿತ್ತು. ಈ ಮೂಲಕ ಹೆಚ್ಚುವರಿ 75 ರನ್ ಗಳಿಸಿ ಆಸ್ಟ್ರೇಲಿಯಾಗೆ ಕೇವಲ 76 ರನ್‌ಗಳ ಗುರಿ ನೀಡಿತ್ತು. ಅಲ್ಪ ಮೊತ್ತದ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 78 ರನ್ ಗಳಿಸುವ ಮೂಲಕ ಸುಲಭ ಜಯ ಸಾಧಿಸಿತು. ಇದನ್ನೂ ಓದಿ: ಎರಡನೇ ದಿನ 16 ವಿಕೆಟ್ ಪತನ – ಆಸೀಸ್ ಗೆಲುವಿಗೆ ಬೇಕು 76 ರನ್

    INDvsAUS

    ಆರಂಭಿಕರಾದ ಉಸ್ಮಾನ್ ಖವಾಜ ಆರಂಭದಲ್ಲಿ ಅಶ್ವಿನ್ ಸ್ಪಿನ್ ದಾಳಿಗೆ ತುತ್ತಾದರು. ಮತ್ತೊಬ್ಬ ಆರಂಭಿಕನಾಗಿದ್ದ ಟ್ರಾವಿಸ್ ಹೆಡ್ ಏಕದಿನ ಶೈಲಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆದರು. 53 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ನೊಂದಿಗೆ 49 ರನ್ ಚಚ್ಚಿದರು. ಇದರೊಂದಿಗೆ ಸಾಥ್ ನೀಡಿದ ಮಾರ್ನಸ್ ಲಾಬುಶೇನ್ 58 ಎಸೆತಗಳಲ್ಲಿ 28 ರನ್ ಗಳಿಸಿ ಅಜೇಯರಾಗುಳಿದರು. ಅಂತಿಮವಾಗಿ ಆಸ್ಟ್ರೇಲಿಯಾ 18.5 ಓವರ್‌ಗಳಲ್ಲಿ 78 ರನ್‌ಗಳಿಸಿ ಜಯ ಸಾಧಿಸಿತು.

    Australia 6

    ಟೀಂ ಇಂಡಿಯಾ ಪರ ಅಶ್ವಿನ್ (Ravichandran Ashwin) 1 ವಿಕೆಟ್ ಪಡೆದರು. ಇದನ್ನೂ ಓದಿ: ಮೊದಲ ದಿನವೇ 14 ವಿಕೆಟ್‌ ಪತನ – ಪಿಚ್‌ ವಿರುದ್ಧ ಭಾರೀ ಟೀಕೆ

    ಮೂರೇ ದಿನಕ್ಕೆ 31 ವಿಕೆಟ್ ಪತನ: ಇಂದೋರ್ ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಎರಡೂ ತಂಡಗಳಿಂದ ಮೂರೇ ದಿನಗಳಲ್ಲಿ 31 ವಿಕೆಟ್ ಪತನಗೊಂಡಿತು. ಮೊದಲ ದಿನ 14 ವಿಕೆಟ್, 2ನೇ ದಿನ 16 ವಿಕೆಟ್ ಹಾಗೂ 3ನೇ ದಿನ 1 ವಿಕೆಟ್ ಪತನಗೊಂಡಿತು.

    ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದ್ದ ಭಾರತ ಸರಣಿ ಗೆಲ್ಲುವ ತವಕದಲ್ಲಿತ್ತು. ಭಾರತದ ಸರಣಿ ಗೆಲುವಿನ ಕನಸಿಗೆ ಕಾಂಗರೂ ಪಡೆ ತಣ್ಣೀರು ಎರಚಿದೆ. ಇದರಿಂದ ಮಾರ್ಚ್‌ 9 ರಿಂದ 13ರ ವರೆಗೆ ಗುಜರಾತ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯ ನಿರ್ಣಾಯಕವಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ.

    Australia

    ಸಂಕ್ಷಿಪ್ತ ಸ್ಕೋರ್:
    ಭಾರತ ಮೊದಲ ಇನ್ನಿಂಗ್ಸ್ 109/10
    ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ 197/10
    ಭಾರತ ಎರಡನೇ ಇನ್ನಿಂಗ್ಸ್ 163/10
    ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್ 78/1

  • ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ರಿಷಭ್ ಪಂತ್‌ನ ಆ ಆಟ ಅಗತ್ಯವಿರಲಿಲ್ಲ – ಗೌತಮ್ ಗಂಭೀರ್ ಅಸಮಾಧಾನ

    ಮುಂಬೈ: ಏಷ್ಯಾಕಪ್ ಟೂರ್ನಿಯ ಸೂಪರ್ ಫೋರ್ ಲೀಗ್‌ನಲ್ಲಿ ಭಾರತ, ಪಾಕಿಸ್ತಾನದ ಎದುರು ಸೋಲನ್ನು ಅನುಭವಿಸಿತು.

    ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ 10 ಓವರ್‌ಗಳವರೆಗೂ ಉತ್ತಮ ರನ್‌ಗಳನ್ನೇ ಕಲೆಹಾಕಿತ್ತು. 9.4 ಓವರ್‌ಗಳಿದ್ದಾಗ ತಂಡದ ಮೊತ್ತ 3 ವಿಕೆಟ್‌ಗೆ 91 ರನ್‌ಗಳಿತ್ತು. ಈ ವೇಳೆ ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ರಿಷಭ್ ಪಂತ್ 12 ಎಸೆತಗಳಲ್ಲಿ 2 ಬೌಂಡರಿಯೊಂದಿಗೆ ಕೇವಲ 14 ರನ್ ಗಳಿಸಿದರು. ರಿವರ್ಸ್ ಸ್ವೀಪ್ ಶಾಟ್ ಮೂಲಕ ಮತ್ತೊಂದು ಬೌಂಡರಿ ಎತ್ತುವ ಪ್ರಯತ್ನ ಮಾಡಿದ ಪಂತ್ ಎದುರಾಳಿ ತಂಡದ ಆಸಿಫ್ ಅಲಿ ಕೈಗೆ ಸುಲಭ ಕ್ಯಾಚ್ ನೀಡಿದರು. ಇದನ್ನೂ ಓದಿ: ವಿದೇಶಿ ಲೀಗ್‌ನತ್ತ ಕಣ್ಣು – ಐಪಿಎಲ್‌ಗೆ ರೈನಾ ಗುಡ್‌ಬೈ

    ನಂತರದಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಟೀಂ ಇಂಡಿಯಾ 7 ವಿಕೆಟ್‌ಗಳ ನಷ್ಟಕ್ಕೆ 181 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಈ ರನ್‌ಗಳ ಗುರಿ ಬೆನ್ನತ್ತಿದ್ದ ಪಾಕಿಸ್ತಾನ 19.5 ಓವರ್‌ಗಳಲ್ಲಿ 182 ರನ್ ಗಳಿಸಿ ಟೀಂ ಇಂಡಿಯಾ ವಿರುದ್ಧ ಗೆಲುವು ಸಾಧಿಸಿತು.

    ಸೂಪರ್ ಲೀಗ್‌ನಲ್ಲಿ ರಿಷಭ್ ಪಂತ್ ಅವರ ಬ್ಯಾಟಿಂಗ್ ಬಗ್ಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಅಸಮಾಧಾನ ಹೊರಹಾಕಿದ್ದಾರೆ. ಪಾಕಿಸ್ತಾನದ ಮಾಜಿ ವೇಗಿ ವಾಸಿಂ ಅಕ್ರಮ್ ಕೂಡ ಗಂಭೀರ್ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಸುಷ್ಮಿತಾ ಸೇನ್ ಜೊತೆ ಬ್ರೇಕ್ ಅಪ್ ಘೋಷಿಸಿಕೊಂಡ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ

    `ಸೂಪರ್ ಫೋರ್ ಲೀಗ್‌ನ ಆ ಹಂತದಲ್ಲಿ ಪಂತ್ ಅಂತಹ ಶಾಟ್ ಆಡುವ ಅಗತ್ಯವಿರಲಿಲ್ಲ. ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ರಿವರ್ಸ್ ಸ್ವೀಪ್ ಆಡುತ್ತಾರೆ ಎಂಬುದು ನನಗೆ ತಿಳಿದಿದೆ. ಅಂತಾರಾಷ್ಟ್ರೀಯ ಕ್ರಿಕೆಟ್‌ನ ಅಗ್ರ ಆಟಗಾರರಲ್ಲಿ ಒಬ್ಬರಾಗಿದ್ದಾರೆ ಎಂಬುದೂ ಗೊತ್ತಿದೆ. ಆದರೆ ಈ ಹಂತದಲ್ಲಿ ಆ ಹೊಡೆತ ಅಗತ್ಯವಿರಲಿಲ್ಲ ಎಂದು ಹೇಳಿದ್ದಾರೆ.

    ರಿವರ್ಸ್ ಸ್ವೀಪ್ ಹೊಡೆಯುವುದು ಪಂತ್ ಅವರ ಶಾಟ್ ಅಲ್ಲ. ಲಾಂಗ್ ಆನ್ ಅಥವಾ ಡೀಪ್ ಮಿಡ್‌ವಿಕೆಟ್ ಅವರ ಪಕ್ಕಾ ಶಾಟ್. ಅದೇ ಅವರ ಶಕ್ತಿ. ಆ ಸಂದರ್ಭದಲ್ಲಿ ರಿವರ್ಸ್ ಸ್ವೀಪ್ ಅಗತ್ಯವಿರಲಿಲ್ಲ. ಅದು ಅವರ ಶಕ್ತಿಯೂ ಅಲ್ಲ ಎಂದು ಗಂಭೀರ್ ಅಸಮಾಧಾನ ಹೊರಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ

    ಅಂದು ಗಾಯಾಳು, ಇಂದು ಮ್ಯಾಚ್ ವಿನ್ನರ್ – ಹಳೆಯ ಘಟನೆ ಬಿಚ್ಚಿಟ್ಟ ಪಾಂಡ್ಯ

    ದುಬೈ: ಸ್ಫೋಟಕ ಬ್ಯಾಟಿಂಗ್ ಹಾಗೂ ಬೌಲಿಂಗ್ ಮೂಲಕ ಮತ್ತೊಮ್ಮೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ತಾನು ಉತ್ತಮ ಆಲ್‌ರೌಂಡರ್ ಎಂಬುದನ್ನು ಸಾಬೀತು ಮಾಡಿದ್ದಾರೆ.

    ನಿನ್ನೆ ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಅಬ್ಬರಿಸುವ ಮೂಲಕ ಬದ್ಧವೈರಿ ಪಾಕಿಸ್ತಾನದ ವಿರುದ್ಧ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾಕ್ಕೆ 5 ವಿಕೆಟ್‌ಗಳ ರೋಚಕ ಜಯ ತಂದುಕೊಟ್ಟರು. ಇದನ್ನೂ ಓದಿ: AsiaCup: ಜಡೇಜಾ ಜಾದು, ಪಾಂಡ್ಯ ಪರಾಕ್ರಮ – ಪಾಕಿಸ್ತಾನದ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ

    ಕೊನೆಯ ಓವರ್‌ನಲ್ಲಿ ಟೀಂಡಿಯಾಕ್ಕೆ 7 ರನ್‌ಗಳ ಅಗತ್ಯವಿತ್ತು. ಈ ವೇಳೆ ಪಾಕ್ ಪರ ಬೌಲಿಂಗ್ ಮಾಡಿದ ಸ್ಪಿನ್ನರ್ ಮೊಹಮ್ಮದ್ ನವಾಝ್ ಮೊದಲ ಎಸೆತದಲ್ಲೇ ಆಲ್‌ರೌಂಡರ್ ರವೀಂದ್ರ ಜಡೇಜಾರನ್ನು ಕ್ಲೀನ್ ಬೌಲ್ಡ್ ಮಾಡಿದ್ದರು. ಸಂದಿಗ್ಧ ಪರಿಸ್ಥಿತಿಯಲ್ಲಿ ಕ್ರೀಸ್‌ಗಿಳಿದ ದಿನೇಶ್ ಕಾರ್ತಿಕ್ ಒಂದು ರನ್ ಕದಿಯುವ ಮೂಲಕ ಪಾಂಡ್ಯಗೆ ಕ್ರೀಸ್ ಬಿಟ್ಟುಕೊಟ್ಟರು.

    ಕೊನೆಯ ಓವರ್ 3ನೇ ಎಸೆತದಲ್ಲಿ ಬೌಂಡರಿ ಬಾರಿಸುವ ಪ್ರಯತ್ನ ಮಾಡಿದ ಹಾರ್ದಿಕ್ ಪಾಂಡ್ಯ ಡಾಟ್‌ಬಾಲ್ ಮಾಡಿಕೊಂಡರು. ಉಳಿದ ಮೂರು ಎಸೆತಗಳಲ್ಲಿ 6 ರನ್ ಬೇಕಿದ್ದ ಟೀಂ ಇಂಡಿಯಾ ಮತ್ತಷ್ಟು ಒತ್ತಡಕ್ಕೆ ಸಿಲುಕಿತ್ತು. ಅದರೂ ಆತ್ಮವಿಶ್ವಾಸ ಕಳೆದುಕೊಳ್ಳದ ಪಾಂಡ್ಯ ಬ್ಯಾಟಿಂಗ್ ಮುಂದುವರಿಸಿ, ನಾಲ್ಕನೇ ಎಸೆತವನ್ನು ಲಾಂಗ್ ಆನ್‌ಕಡೆಗೆ ಸಿಕ್ಸರ್ ಬಾರಿಸುವ ಮೂಲಕ ಟೀಂ ಇಂಡಿಯಾ ಅವಿಸ್ಮರಣೀಯ ಗೆಲುವಿಗೆ ಕಾರಣರಾದ್ರು. ಇದನ್ನೂ ಓದಿ: ಇಂಡಿಯಾ, ಪಾಕ್ ಹೈವೋಲ್ಟೇಜ್ ಕ್ರಿಕೆಟ್- ಭಾರತ ಗೆಲುವಿಗೆ ಮುಸ್ಲಿಮರಿಂದ ವಿಶೇಷ ಪೂಜೆ

    ಬಳಿಕ ಗೆಲುವಿನ ಸಂಭ್ರಮ ಹಂಚಿಕೊಂಡ ಪಾಂಡ್ಯ, ಬೌಲಿಂಗ್ ವೇಳೆ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುವ ಮೂಲಕ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಬೌಲ್ ಮಾಡಬೇಕಾಗುತ್ತದೆ. ಹಾಗೆಯೇ ಶಾರ್ಟ್ ಪಿಚ್ ಮತ್ತು ಹಾರ್ಡ್ ಲೆನ್ತ್ ಬೌಲಿಂಗ್ ನನ್ನ ಸಾಮರ್ಥ್ಯ. ಇದನ್ನು ಸರಿಯಾದ ರೀತಿಯಲ್ಲಿ ಸೂಕ್ತ ಬ್ಯಾಟರ್‌ಗಳ ಎದುರು ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ.

    ಅಲ್ಲದೇ ಪಾಕಿಸ್ತಾನ ವಿರುದ್ಧದ ಗೆಲುವನ್ನು ಸಂಭ್ರಮಿಸುತ್ತಿರುವ ವೇಳೆಯಲ್ಲೇ ಹಾರ್ದಿಕ್ ಪಾಂಡ್ಯ ತಮ್ಮ ಫೇಸ್‌ಬುಕ್ ಪುಟದಲ್ಲಿ ಎರಡು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದಿನ ಪಂದ್ಯವೊಂದರಲ್ಲಿ ತಾವು ಕೈಗೆ ಪೆಟ್ಟುಮಾಡಿಕೊಂಡು ಅರ್ಧಕ್ಕೆ ನಿರ್ಗಮಿಸುತ್ತಿರುವುದು ಹಾಗೂ ಪಾಕ್ ಗೆಲುವನ್ನು ಸಂಭ್ರಮಿಸುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    ಪಾಕ್ ವಿರುದ್ಧ ಕಹಿ ಘಟನೆ ನೆನಪಿಸಿಕೊಂಡ ಪಾಂಡ್ಯ: 2018ರ ಏಷ್ಯಾಕಪ್ ನಲ್ಲಿ ಪಾಕ್ ವಿರುದ್ಧ ಸೆಣಸಾಡುತ್ತಿದ್ದ ವೇಳೆ ತಮ್ಮ ಕೊನೆಯ ಓವರ್ ಬೌಲಿಂಗ್ ಮಾಡುತ್ತಿದ್ದ ವೇಳೆ ಕೈಗೆ ಪೆಟ್ಟುಮಾಡಿಕೊಂಡು ಅರ್ಧಕ್ಕೆ ಪಂದ್ಯದಿಂದ ನಿರ್ಗಮಿಸಿದ್ದರು. ನಿನ್ನೆ ಪಾಕ್ ವಿರುದ್ಧ ಅಬ್ಬರಿಸಿ ಗೆಲುವು ಸಾಧಿಸಿದ್ದ ಬೆನ್ನಲ್ಲೇ ಮತ್ತೊಮ್ಮೆ ಪಾಂಡ್ಯ ತಮಗಾದ ಕಹಿ ಘಟನೆಯನ್ನೂ ನೆನಪಿಸಿಕೊಂಡಿದ್ದಾರೆ.

    ಇದರೊಂದಿಗೆ `ಹಿನ್ನಡೆಗಿಂತ ಪುನರ್ ಆಗಮನವೇ ಹೆಚ್ಚು’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: AsiaCup 2022: ಮೊದಲ ಪಂದ್ಯದಲ್ಲೇ ಮುಗ್ಗರಿಸಿದ ಲಂಕಾ – ಆಫ್ಘನ್‌ಗೆ 8 ವಿಕೆಟ್‌ಗಳ ಸುಲಭ ಜಯ

    ಈ ರೀತಿಯ ರನ್ ಚೇಸ್ ಮಾಡುವಾಗ ಪ್ರತಿ ಓವರ್‌ಗೆ ಪ್ರತ್ಯೇಕ ಯೋಜನೆ ಹೊಂದಿರಬೇಕಾಗುತ್ತದೆ. ಹಾಗೆಯೇ ಎದುರಾಳಿ ತಂಡದಿಂದ ಎಡಗೈ ಸ್ಪಿನ್ನರ್ ಇರುವುದು ನನಗೆ ಗೊತ್ತಿತ್ತು. ಕೊನೇ ಓವರ್‌ನಲ್ಲಿ 7 ರನ್ ಮಾತ್ರ ಗಳಿಸಬೇಕಿತ್ತು. ಒಂದು ವೇಳೆ 15 ರನ್‌ಗಳು ಬೇಕಿದ್ದರೂ ಪಂದ್ಯ ಗೆದ್ದುಕೊಡುವ ವಿಶ್ವಾಸ ನನ್ನಲ್ಲಿ ಇತ್ತು. ಏಕೆಂದರೆ ನನ್ನೆದುರು ಬೌಲಿಂಗ್ ಮಾಡುವ ಬೌಲರ್ ಸಹ ಒತ್ತಡದಲ್ಲಿ ಇರುತಾನೆ ಎಂಬುದು ನಗೆ ಗೊತ್ತಿತ್ತು ಎಂಬ ವಿಶ್ವಾಸದ ಮಾತುಗಳನ್ನು ಆಡಿದ್ದಾರೆ.

    147 ರನ್‌ಗಳ ಗುರಿಯನ್ನು ಪಡೆದ ಭಾರತ 49.4 ಓವರ್‌ಗಳಲ್ಲಿ 148 ರನ್ ಹೊಡೆಯುವ ಮೂಲಕ ಜಯ ಸಾಧಿಸಿತು. ಬೌಲಿಂಗ್‌ನಲ್ಲಿ 25 ರನ್ ನೀಡಿ 3 ವಿಕೆಟ್ ಪಡೆದಿದ್ದ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್‌ನಲ್ಲಿ 35 ರನ್(17 ಎಸೆತ, 4 ಬೌಂಡರಿ, 1 ಸಿಕ್ಸ್) ಹೊಡೆಯುವ ಮೂಲಕ ಅರ್ಹವಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

    Live Tv
    [brid partner=56869869 player=32851 video=960834 autoplay=true]