Tag: romance

  • ನೀರೊಳಗೂ ರೊಮ್ಯಾನ್ಸ್ ಮಾಡಿದ ಚಂದನ್ ಶೆಟ್ಟಿ-ನಿವ್ವಿ

    ನೀರೊಳಗೂ ರೊಮ್ಯಾನ್ಸ್ ಮಾಡಿದ ಚಂದನ್ ಶೆಟ್ಟಿ-ನಿವ್ವಿ

    ಗಾಯಕ ಚಂದನ್ ಶೆಟ್ಟಿ (Chandan Shetty) ಮತ್ತು ಕಿರುತೆರೆ ನಟಿ ಹಾಗೂ ಚಂದನ್ ಪತ್ನಿ ನಿವೇದಿತಾ ಗೌಡ (Nivedita Gowda) ಹಾಲಿಡೇ ಮೂಡ್ ನಲ್ಲಿದ್ದಾರೆ. ಪ್ರವಾಸದಲ್ಲಿ ವಿಡಿಯೋವೊಂದನ್ನು ಮಾಡಿದ್ದು, ಆ ವಿಡಿಯೋ ಸಖತ್ ವೈರಲ್ ಆಗಿದೆ. ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಅಂಡರ್ ವಾಟರ್ ಶೂಟ್ ಮಾಡಿದ್ದು, ನೀರಿನೊಳಗೆ ರೊಮ್ಯಾನ್ಸ್ (Romance) ಮಾಡಿದ್ದಾರೆ.

    ಅಂಡರ್ ವಾಟರ್ (Underwater) ನಲ್ಲಿ ತುಟಿಗೆ ತುಟಿ ಬೆರೆಸಿ ರೊಮ್ಯಾಂಟಿಕ್ ಆಗಿ ವಿಡಿಯೋ ಶೂಟ್ ಮಾಡಿದ್ದು, ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಚಂದನ್ ಶೆಟ್ಟಿ. ಈ ವಿಡಿಯೋಗೆ ನಾನಾ ರೀತಿಯಲ್ಲಿ ಕಾಮೆಂಟ್ಸ್ ಬರುತ್ತಿವೆ. ಕೆಲವರು ಸಪೋರ್ಟ್ ಮಾಡಿದರೆ ಇನ್ನೂ ಕೆಲವರು ಖಾಸಗಿ ಸಂಗತಿಗಳನ್ನು ಬಹಿರಂಗವಾಗಿ ತೋರಿಸುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:ಸಮಂತಾ ನಟನೆಯ ಹಾಲಿವುಡ್ ಸಿನಿಮಾಗೆ ಟೈಟಲ್ ಫಿಕ್ಸ್

    ಕಾಮೆಂಟ್ ಗಳು ಏನೇ ಇರಲಿ ಚಂದನ್ ಮತ್ತು ನಿವೇದಿತಾ ಕೆಲ ಹೊತ್ತು ನೀರಿನೊಳಗೆ ರೊಮ್ಯಾನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಉಚಿತ ಮನರಂಜನೆ ನೀಡಿದ್ದಾರೆ. ದಾಂಪತ್ಯದ ಅನ್ಯೋನ್ಯತೆಗೆ ಸಾಕ್ಷಿ ಎನ್ನುವಂತೆ ವಿಡಿಯೋ ಮಾಡಿದ್ದಾರೆ. ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

  • ರಾಶಿ ಖನ್ನಾಗೆ ಕಾಮಿಡಿಗಿಂತ ಹೀರೋಗಳ ಜೊತೆ ರೊಮ್ಯಾನ್ಸ್ ಸಲೀಸಂತೆ

    ರಾಶಿ ಖನ್ನಾಗೆ ಕಾಮಿಡಿಗಿಂತ ಹೀರೋಗಳ ಜೊತೆ ರೊಮ್ಯಾನ್ಸ್ ಸಲೀಸಂತೆ

    ಬಾಲಿವುಡ್ ನಲ್ಲಿ ಅನೇಕ ಚಿತ್ರಗಳನ್ನು ಮಾಡಿರುವ ರಾಶಿ ಖನ್ನಾ ಇದೀಗ ಪಕ್ಕಾ ಕಮರ್ಷಿಯಲ್ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರವು ಇಂದು ರಿಲೀಸ್ ಆಗಿದೆ. ಈ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ಅವರು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಆ ಹೇಳಿಕೆ ಸಖತ್ ವೈರಲ್ ಕೂಡ ಆಗಿದೆ. ರಾಶಿ ಅವರ ಸ್ವಅನುಭವದ ಪ್ರಕಾರ ಕಾಮಿಡಿ ಮಾಡುವುದಕ್ಕಿಂತ ಸಲೀಸಾಗಿ ಹೀರೋಗಳ ಜೊತೆ ರೋಮ್ಯಾನ್ಸ್ ಮಾಡಬಹುದು ಎಂದಿದ್ದಾರೆ.

    ಅಂದರೆ, ಕಾಮಿಡಿ ಪಾತ್ರಗಳನ್ನು ಮತ್ತು ಕಾಮಿಡಿ ಮಾಡುವ ಹೀರೋಗಳ ಜೊತೆ ನಟಿಸುವುದು ತೀರಾ ಕಷ್ಟ. ಅದು ಅಸಾಧ್ಯದ ಮಾತೂ ಕೂಡ. ಆದರೆ, ಹೀರೋಗಳ ಜೊತೆ ರೋಮ್ಯಾನ್ಸ್ ಮಾಡುವಂತಹ ದೃಶ್ಯಗಳಲ್ಲಿ ನಾನು ಸಲೀಸಾಗಿ ನಟಿಸಬಲ್ಲೆ ಎಂದು ಹೇಳಿದ್ದಾರೆ. ಹಾಗಾಗಿ ತಾವು ಕಾಮಿಡಿ ಪಾತ್ರಗಳನ್ನು ಒಪ್ಪಿಕೊಳ್ಳುವಾಗ ಹಿಂದೆಮುಂದೆ ನೋಡುತ್ತೇನೆ ಎಂದೂ ಅವರು ತಿಳಿಸಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

    ಮದ್ರಾಸ್ ಕೆಫೆ ಸಿನಿಮಾದ ಮೂಲಕ ಬಾಲಿವುಡ್ ಗೆ ಕಾಲಿಟ್ಟ ರಾಶಿ ಖನ್ನಾ, ಹಲವಾರು ಚಿತ್ರಗಳನ್ನು ಮಾಡಿದ್ದಾರೆ. ಬಹುತೇಕ ಚಿತ್ರಗಳಲ್ಲಿ ಅವರು ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಚಿತ್ರದಲ್ಲೂ ಅವರು ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಈ ಪಾತ್ರದ ಬಗ್ಗೆ ಅವರು ಕನಸು ಕೂಡ ಕಟ್ಟಿಕೊಂಡಿದ್ದಾರಂತೆ.

    Live Tv

  • ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಜೊತೆ ಪ್ರಿನ್ಸಿಪಾಲ್ ರೋಮ್ಯಾನ್ಸ್ -ಗ್ರಾಮಸ್ಥರು ಆಕ್ರೋಶ

    ಶಾಲಾ ಕೊಠಡಿಯಲ್ಲೇ ಶಿಕ್ಷಕಿ ಜೊತೆ ಪ್ರಿನ್ಸಿಪಾಲ್ ರೋಮ್ಯಾನ್ಸ್ -ಗ್ರಾಮಸ್ಥರು ಆಕ್ರೋಶ

    ಛತ್ತೀಸ್‍ಗಢ: ಶಾಲೆಯ ಪ್ರಾಂಶುಪಾಲರು ಶಿಕ್ಷಕಿ ಜೊತೆಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಂಡಿರುವ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪರಿಣಾಮ ಪ್ರಾಂಶುಪಾಲರನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ.

    ಛತ್ತೀಸ್‍ಗಢದಲ್ಲಿ ಸರ್ಕಾರಿ ಸಾಲೆಯಲ್ಲಿ ಪ್ರಾಂಶುಪಾಲ ತನ್ನ ಲೈಂಗಿಕ ಆಸೆಯನ್ನು ಈಡೆರಿಸಿಕೊಳ್ಳಲು ಶಾಲೆಯಲ್ಲಿದ ಇತರ ಶಿಕ್ಷಕಿಯರನ್ನು ಬಳಸಿಕೊಳ್ಳುತ್ತಿರುವುದು ಗ್ರಾಮಸ್ಥರಿಗೆ ತಿಳಿದುಬಂದಿದೆ. ಈ ಕುರಿತು ಸ್ಥಳಿಯರೆ ಪ್ರಾಂಶುಪಾಲ ರಾಸಲೀಲೆಯನ್ನು ಸೆರೆ ಹಿಡಿದಿದ್ದಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿಯೂ ಹರಿ ಬಿಟ್ಟಿದ್ದಾರೆ. ವಿಷಯ ತಿಳಿದ ಶಾಲೆಯ ಆಡಳಿತ ಪ್ರಾಂಶುಪಾಲನ ವಿರುದ್ಧ ಕ್ರಮ ತೆಗೆದುಕೊಂಡಿದ್ದು, ಶಾಲೆಯಿಂದ ಅಮಾನತು ಮಾಡಿದ್ದಾರೆ. ಪ್ರಾಥಮಿಕ ತನಿಖೆಯ ನಂತರ ಶಾಲೆಯ ಪ್ರಾಂಶುಪಾಲರನ್ನು ಆಡಳಿತವು ಅಮಾನತುಗೊಳಿಸಿದೆ. ಇದನ್ನೂ ಓದಿ:  ಮದ್ಯದಿಂದ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ – ವೀಡಿಯೋ ವೈರಲ್ 

    ನಡೆದಿದ್ದೇನು?
    ಈ ಅಸಂಬಂಧ ಘಟನೆ ಛತ್ತೀಸ್‍ಗಢದ ಕಂಕೇರ್‌ನ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಪ್ರಾಂಶುಪಾಲನಿಗೆ ಮದುವೆಯಾಗಿದ್ದರೂ ಸಹ ಶಾಲೆಯಲಿ ಶಿಕ್ಷಕಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದ. ತನ್ನ ಕಾಮಚೇಷ್ಟೆ ನಡೆಸಲು ಶಾಲೆಯ ಕೊಠಡಿಯನ್ನೆ ಬಳಸಿಕೊಳ್ಳುತ್ತಿದ್ದ. ಈ ಹಿನ್ನೆಲೆ ಪ್ರಾಂಶುಪಾಲನನ್ನು ನೇರವಾಗಿ ಹಿಡಿಯಬೇಕೆಂದು ಗ್ರಾಮದ ಜನರು ನಿರ್ಧರಿಸಿದ್ದಾರೆ.

    ಈ ಹಿನ್ನೆಲೆ ಪ್ರಾಂಶುಪಾಲ ಶಿಕ್ಷಕಿ ಜೊತೆ ಲೈಂಗಿಕ ಕ್ರಿಯೆಯಲ್ಲಿ ನಡೆಸುತ್ತಿದ್ದಾಗ ಅವರಿಗೆ ಗೊತ್ತಾಗದಂತೆ ಗ್ರಾಮಸ್ಥರು ವೀಡಿಯೋ ಮಾಡಿದ್ದಾರೆ. ನಂತರ ಈ ವೀಡಿಯೋವನ್ನು ಶಾಲೆಯ ಆಡಳಿತ ಮಂಡಳಿಗೆ ಕೊಟ್ಟಿದ್ದು, ಪ್ರಾಂಶುಪಾಲರನ್ನು ಅಮಾನತ್ತು ಮಾಡಿಸಿದ್ದಾರೆ. ಇದನ್ನೂ ಓದಿ: ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್ 

    ಪ್ರಾಂಶುಪಾಲ ಮತ್ತು ಶಿಕ್ಷಕಿ ನಡುವೆ ಕೊರೊನಾ ಸಮಯದಲ್ಲಿ ಅನೈತಿಕ ಸಂಬಂಧ ಬೆಳೆದಿತ್ತು. ಅವರ ಖಾಸಗಿ ವಿಚಾರಕ್ಕೆ ಶಾಲೆಯ ಆವರಣ ಬಳಸಿಕೊಳ್ಳುತ್ತಿರುವುದು ಸರಿಯಲ್ಲವೆಂದು ಎಂದು ದೂರಿನಲ್ಲಿ ಗ್ರಾಮದ ಜನರು ಆಕ್ರೋಶ ವ್ಯಕ್ತಪಡಿಸಿದರು. ವೀಡಿಯೋ ರೆಕಾರ್ಡ್ ಮಾಡಿದ ಮೇಲೆ ಪ್ರಾಂಶುಪಾಲರಿಗೆ ಈ ವೀಡಿಯೋ ತೋರಿಸಿದಾಗ ರೆಕಾರ್ಡ್ ಮಾಡಿದವರಿಗೆ ಹಣದ ಆಮಿಷವನ್ನು ಒಡ್ಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

  • ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್ – ಹುಡುಗಿ ವಿಚಾರಕ್ಕೆ ಹತ್ಯೆ

    ಯುಗಾದಿ ಹಬ್ಬಕ್ಕೆಂದು ಬಂದಿದ್ದ ಲೈಟ್ ಬಾಯ್ – ಹುಡುಗಿ ವಿಚಾರಕ್ಕೆ ಹತ್ಯೆ

    ಚಾಮರಾಜನಗರ: ಪ್ರೇಮ ವಿಚಾರಕ್ಕೆ ಲೈಟ್ ಬಾಯ್ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

    boy, dark and light - image #5141808 on Favim.com

    ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿ ಪ್ರೇಮ ವಿಚಾರಕ್ಕೆ ಜಗಳ ಅತಿರೇಕಕ್ಕೆ ಹೋಗಿದ್ದು, ಹೊಸೂರು ಬಡಾವಣೆಯ ಚಿಕ್ಕರಾಜು(30) ಕೊಲೆಯಾಗಿದ್ದಾನೆ. ಬೆಂಗಳೂರಿನಲ್ಲಿ ಲೈಟ್ ಬಾಯ್ ಆಗಿದ್ದ ಚಿಕ್ಕರಾಜು ಹಬ್ಬಕ್ಕೆ ಮನೆಗೆ ಬಂದಿದ್ದಾಗ ಈ ಘಟನೆ ನಡೆದಿದೆ.  ಇದನ್ನೂ ಓದಿ: ದೃಢಸಂಕಲ್ಪ, ಜಾಣ್ಮೆ, ತಾಳ್ಮೆ ಇವು ಯಶಸ್ಸಿನ ಸೂತ್ರಗಳು: ಆನಂದ್ ಮಹೀಂದ್ರಾ

    ಗುಂಡ್ಲುಪೇಟೆಯ ಹೊಸೂರು ಬಡಾವಣೆಯಲ್ಲಿದ್ದ ಯುವತಿಯನ್ನು ಚಿಕ್ಕರಾಜು ಪ್ರೀತಿ ಮಾಡುತ್ತಿದ್ದ. ಈ ವಿಚಾರ ಯುವತಿಯ ಸಂಬಂಧಿಕರಿಗೆ ತಿಳಿದಿದ್ದು, ಇದನ್ನು ವಿರೋಧಿಸಿ ಚಿಕ್ಕರಾಜುನನ್ನು ಪ್ರಶ್ನಿಸಿದ್ದಾರೆ. ಆದರೆ ಚಿಕ್ಕರಾಜು ಇದನ್ನು ವಿರೋಧಿಸಿದ್ದಾನೆ.

    POLICE JEEP

    ಪರಿಣಾಮ ವೀರಭದ್ರನಾಯ್ಕ, ಯುವತಿ ತಂದೆ ಮಹದೇವನಾಯ್ಕ, ಸಹೋದರರಾದ ಕಿರಣ್, ಅಭಿಷೇಕ್ ಆತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಕೃತ್ಯ ಮಾಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಪ್ರಸ್ತುತ ಈ ಪ್ರಕರಣ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಕೆಲಸ ಮಾಡುತ್ತಿದ್ದ ವೇಳೆ ಮೆಷಿನ್‍ಗೆ ವೇಲ್ ಸಿಲುಕಿ ಯುವತಿ ಸಾವು

    ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಅವರಿಗಾಗಿ ಶೋಧ ಕಾರ್ಯ ಮಾಡುತ್ತಿದ್ದಾರೆ.

  • ವಿದ್ಯಾರ್ಥಿನಿ ಜೊತೆ ಶಿಕ್ಷಕನ  ರೊಮ್ಯಾನ್ಸ್ – ವೀಡಿಯೋ ವೈರಲ್

    ವಿದ್ಯಾರ್ಥಿನಿ ಜೊತೆ ಶಿಕ್ಷಕನ ರೊಮ್ಯಾನ್ಸ್ – ವೀಡಿಯೋ ವೈರಲ್

    ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಭಾರತೀಯ ಪರಂಪರೆಯಲ್ಲಿ ಪೂಜ್ಯ ಸ್ಥಾನವಿದೆ. ಶಿಕ್ಷಕನನ್ನು ದೇವರು ಎಂದು ಕೂಡ ಪರಿಗಣಿಸಲಾಗುತ್ತದೆ. ಆದರೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ

    ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ವೀಡಿಯೋ ವೈರಲ್ ಆದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆಯನ್ನು ಬಿಇಓ ನೀಡಿದ್ದಾರೆ. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್

  • ಲವ್ವರ್ಸ್ ರೊಮ್ಯಾನ್ಸ್ ಮಾಡ್ತಿರೋದು ನೋಡಿದ್ರೆ ಕಲ್ಲು ಹೊಡೀಬೇಕು ಅನ್ಸುತ್ತೆ: ರಶ್ಮಿಕಾ

    ಲವ್ವರ್ಸ್ ರೊಮ್ಯಾನ್ಸ್ ಮಾಡ್ತಿರೋದು ನೋಡಿದ್ರೆ ಕಲ್ಲು ಹೊಡೀಬೇಕು ಅನ್ಸುತ್ತೆ: ರಶ್ಮಿಕಾ

    ಬೆಂಗಳೂರು: ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರೋದು ನೋಡಿದರೆ ನನಗೆ ಕಲ್ಲು ಹೊಡೆಯಬೇಕು ಅನ್ನಿಸುತ್ತದೆ ಎಂದು ನಟಿ ರಶ್ಮಿಕಾ ಮಂದಣ್ಣ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ನಾಯಿ ಬಿಸ್ಕೆಟ್ ತಿಂದಿದ್ದ ರಶ್ಮಿಕಾ – ಸೀಕ್ರೆಟ್ ಬಿಚ್ಚಿಟ್ಟ ನಿತಿನ್

    ರಶ್ಮಿಕಾ ಮಂದಣ್ಣ ಮತ್ತು ತೆಲುಗು ನಟ ನಿತಿನ್ ಅಭಿನಯದ ‘ಭೀಷ್ಮ’ ಸಿನಿಮಾ ಫೆಬ್ರವರಿ 21ರಂದು ರಿಲೀಸ್ ಆಗುತ್ತಿದೆ. ಸದ್ಯಕ್ಕೆ ಇಬ್ಬರು ಸಿನಿಮಾ ಪ್ರಚಾರದ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೆ ರಶ್ಮಿಕಾ ಮತ್ತು ನಿತಿನ್ ಮಾಧ್ಯಮಕ್ಕೆ ಸಂದರ್ಶನವೊಂದನ್ನು ನೀಡಿದ್ದಾರೆ. ಈ ಸಂದರ್ಶನದಲ್ಲಿ ರಶ್ಮಿಕಾ ಲವ್, ಮದುವೆ, ಕ್ರಶ್ ಬಗ್ಗೆ ಮಾತನಾಡಿರೋದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಮೊದಲಿಗೆ ನಿರೂಪಕಿ ರಶ್ಮಿಕಾ ಮದುವೆ ಬಗ್ಗೆ ಪ್ರಶ್ನೆ ಕೇಳಿದ್ದಾರೆ. ನಾನು ಅರೇಂಜ್ ಮ್ಯಾರೇಜ್ ಆಗುತ್ತೇನೆ. ಆದರೆ ಎಂಟು ವರ್ಷ ನಾನು ಮದುವೆಯಾಗೋದಿಲ್ಲ. ಇದೇ ಗುಣ ಆಗಬೇಕು ಎಂಬ ಡಿಮ್ಯಾಂಡ್ ಇಲ್ಲ. ಆದರೆ ಒಳ್ಳೆಯ ಹುಡುಗ ಸಿಕ್ಕಿದರೆ ಮದುವೆಯಾಗುತ್ತೇನೆ ಎಂದಿದ್ದಾರೆ.

    ಹೀರೋಯಿನ್ ಆಗುವ ಮೊದಲು ಮತ್ತು ನಂತರ ನಿಮಗೆ ಪ್ರೇಮಿಗಳ ದಿನ ಹೇಗೆ ಅನ್ನಿಸುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ನನಗೆ ವ್ಯಾಲೆಂಟೈನ್ಸ್ ಡೇ ಅಂದರೆ ಇಷ್ಟ ಇಲ್ಲ. ಪ್ರೇಮಿಗಳು ಕೈ ಕೈ ಹಿಡಿದುಕೊಂಡು ಹೋಗುವುದನ್ನು ನೋಡಿದರೆ ಕೋಪ ಬರುತ್ತೆ. ಅದರಲ್ಲೂ ಪ್ರೇಮಿಗಳು ರೊಮ್ಯಾನ್ಸ್ ಮಾಡುತ್ತಿರುವುದನ್ನು ನೋಡಿದರೆ ಕಲ್ಲಲ್ಲಿ ಹೊಡಿಯಬೇಕು ಎನ್ನಿಸುತ್ತದೆ. ಯಾಕೆ ಅಂತ ಗೊತ್ತಿಲ್ಲ ಎಂದು ರಶ್ಮಿಕಾ ಹೇಳಿದ್ದಾರೆ.

    ನಾನು ಪ್ರೇಮಿಗಳ ದಿನಾಚರಣೆ ಸೆಲೆಬ್ರೆಷನ್ ಮಾಡಿಲ್ಲ. ನನಗೆ ಯಾರೂ ಪ್ರಪೋಸ್ ಮಾಡಿಲ್ಲ ಎಂದರು. ಇನ್ನೂ ಯಾರ ಮೇಲೆ ಕ್ರಶ್ ಆಗಿದೆ ಎಂಬುದರ ಬಗ್ಗೆ ಕೇಳಿದಾಗ, ನನಗೆ ಚಿಕ್ಕ ವಯಸ್ಸಿನಲ್ಲಿದ್ದಾಗ ದಳಪತಿ ವಿಜಯ್ ಮೇಲೆ ಕ್ರಶ್ ಆಗಿತ್ತು ಎಂದರು.

  • ಸ್ನೇಹಿತನ ಎದುರೇ, ಹಗ್ & ಕಿಸ್- ಕಾಲೇಜಿಗೆ ಚಕ್ಕರ್ ಸ್ಟೇಡಿಯಂನಲ್ಲಿ ಹಾಜರ್

    ಸ್ನೇಹಿತನ ಎದುರೇ, ಹಗ್ & ಕಿಸ್- ಕಾಲೇಜಿಗೆ ಚಕ್ಕರ್ ಸ್ಟೇಡಿಯಂನಲ್ಲಿ ಹಾಜರ್

    ಶಿವಮೊಗ್ಗ: ಸಾಮಾನ್ಯವಾಗಿ ಕ್ರೀಡಾಂಗಣದಲ್ಲಿ ಆಟಗಾರರು ತರಬೇತಿಗೆ ಬರುತ್ತಾರೆ. ಆದರೆ ನಗರದ ನೆಹರು ಕ್ರೀಡಾಂಗಣದಲ್ಲಿ ಪ್ರೇಮಿಗಳು ಬಂದು ಹಾಡಹಾಗಲೇ ಕಿಸ್ ಮಾಡಿ, ತಬ್ಬಿಕೊಂಡು ರೊಮ್ಯಾನ್ಸ್ ಮಾಡಿರುವ ಘಟನೆ ನಡೆದಿದೆ. ಇದನ್ನೂ ಓದಿ:  ಪ್ರಯಾಣಿಕರಿದ್ರೂ ಸರ್ಕಾರಿ ಬಸ್‍ನಲ್ಲಿ ಪ್ರೇಮಿಗಳ ರೊಮ್ಯಾನ್ಸ್- ದೃಶ್ಯ ಕ್ಯಾಮೆರಾದಲ್ಲಿ ಸೆರೆ

    ಕ್ರೀಡಾಂಗಣದಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಪ್ರಾಧಿಕಾರದ ಕಚೇರಿಯ ಅಣತಿ ದೂರದಲ್ಲಿ ಯುವ ಜೋಡಿಯೊಂದು ರೊಮ್ಯಾಂಟಿಕ್ ಮೂಡ್‍ನಲ್ಲಿ ಹಾಡಹಗಲೇ, ಸಾರ್ವಜನಿಕ ಸ್ಥಳದಲ್ಲಿ ಅಪ್ಪಿಕೊಂಡು ಮುತ್ತು ಕೊಡುತ್ತಾ ಮೈ ಮರೆತಿದೆ. ಕಾಲೇಜಿಗೆ ಚಕ್ಕರ್ ಹಾಕಿ ಸ್ಟೇಡಿಯಂನಲ್ಲಿ ಹಾಜರಾಗಿ, ಸ್ನೇಹಿತನ ಎದುರೇ ಹಗ್ ಆ್ಯಂಡ್ ಕಿಸ್ ಕೊಡುತ್ತಾ, ಯಾರ ಭಯವೂ ಇಲ್ಲದೇ ಮೈಮರೆತಿದ್ದಾರೆ.

    ಇದು ಇಲ್ಲಿನ ಕ್ರೀಡಾಂಗಣದಲ್ಲಿ ಸೂಕ್ತ ಸೆಕ್ಯುರಿಟಿ ವ್ಯವಸ್ಥೆ ಇಲ್ಲದೇ ಇರುವುದು ತೋರ್ಪಡಿಸುತ್ತದೆ. ಸ್ಟೇಡಿಯಂನಲ್ಲಿ ಸಾರ್ವಜನಿಕರು ವಾಕಿಂಗ್ ಮಾಡುವ ಜಾಗದಲ್ಲಿ, ಅದರಲ್ಲೂ ಕಾಲೇಜು ಸಮವಸ್ತ್ರದಲ್ಲಿಯೇ ರೊಮ್ಯಾನ್ಸ್ ಮಾಡಿದ ಪ್ರೇಮಿಗಳ ವರ್ತನೆಯನ್ನು ಸಾರ್ವಜನಿಕರೊಬ್ಬರು ವಿಡಿಯೋ ಮಾಡಿದ್ದಾರೆ.

    ಅಲ್ಲದೇ ಕ್ರೀಡಾಪಟುಗಳು ದೇವಾಲಯವೆಂದು ಪೂಜಿಸುವ ಕ್ರೀಡಾಂಗಣದಲ್ಲಿ ಈ ರೀತಿ ಪ್ರೇಮಿಗಳ ಅಸಭ್ಯ ವರ್ತನೆಗೆ ಇಲ್ಲಿನ ವಾಯುವಿಹಾರಿಗಳು ಮತ್ತು ಕ್ರೀಡಾಪಟುಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

  • ಪಬ್ಲಿಕ್ ಪ್ಲೇಸ್‍ನಲ್ಲಿ ಕಿಸ್, ಹಗ್ ಮಾಡ್ತಾರೆ ಪ್ರೇಮಿಗಳು!

    ಪಬ್ಲಿಕ್ ಪ್ಲೇಸ್‍ನಲ್ಲಿ ಕಿಸ್, ಹಗ್ ಮಾಡ್ತಾರೆ ಪ್ರೇಮಿಗಳು!

    – ಪ್ರವಾಸಿಗರಿಗೆ ಮುಜುಗರ ತರ್ತಿರೋ ಪ್ರೇಮಿಗಳ ಹುಚ್ಚಾಟ

    ಚಿಕ್ಕಬಳ್ಳಾಪುರ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ಹೋಗುವ ಕೆಲ ಪ್ರೇಮಿಗಳು, ಮನಸ್ಸೊಇಚ್ಛೆ ಅಶ್ಲೀಲ ಹಾಗೂ ಅನೈತಿಕ ಚಟುವಟಿಕೆಗಳಲ್ಲಿ ತೊಡುಗುತ್ತಾರೆ ಎಂದು ಸರ್ಕಾರ ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ. ಆದರೂ ಕ್ಯಾಮೆರಾಗಳಿವೆ ಎಂಬ ಪರಿಜ್ಞಾನವಿಲ್ಲದ ಕೆಲ ಜೋಡಿಗಳು ಸಾರ್ವಜನಿಕರ ಸಮ್ಮುಖದಲ್ಲೇ ರೊಮ್ಯಾನ್ಸ್‌ನಲ್ಲಿ ತೊಡಗುವುದರ ಮೂಲಕ ಪ್ರವಾಸಿಗರಿಗೆ ಕಿರಿಕಿರಿಯನ್ನುಂಟು ಮಾಡುತ್ತಿದ್ದಾರೆ.

    ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದಲ್ಲಿ ಪ್ರೇಮಿಗಳು ಸಾರ್ವಜನಿಕ ಸ್ಥಳದಲ್ಲಿಯೇ ಅಶ್ಲೀಲವಾಗಿ ವರ್ತಿಸುತಿದ್ದಾರೆ. ನೂರಾರು ಎಕರೆ ವಿಶಾಲವಾಗಿ ಹರಡಿರುವ ನಂದಿಗಿರಿಧಾಮದಲ್ಲಿ ಹಿಂದೊಮ್ಮೆ ಅಶ್ಲೀಲ ಅನೈತಿಕ ಚಟುವಟಿಕೆಗಳು ಹೆಚ್ಚಾಗಿದ್ದ ಕಾರಣ ರಾಜ್ಯ ತೋಟಗಾರಿಕೆ ಇಲಾಖೆ ಗಿರಿಧಾಮದ ವಿವಿಧೆಡೆ ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಿದೆ.

    ಕೆಲವು ಜೋಡಿಗಳು ಈಗಲೂ ಸಹ ಸಿಸಿಟಿವಿ ಕ್ಯಾಮೆರಾಗಳಿದ್ದರೂ ಸಾರ್ವಜನಿಕವಾಗಿಯೇ ಒಬ್ಬರಿಗೊಬ್ಬರು ಕೀಸ್ ಮಾಡ್ತಾ, ತಬ್ಬಿಕೊಂಡು ಮುದ್ದು ಮಾಡುತ್ತಾ, ರೊಮ್ಯಾನ್ಸ್ ಮಾಡುವ ಘಟನೆಗಳು ಪದೇ ಪದೇ ಮರುಕಳಿಸುತ್ತಿವೆ. ಹೀಗಾಗಿ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರಿಗೆ ಮುಜುಗರ ಉಂಟು ಮಾಡುತ್ತಿದ್ದಾರೆ ಎಂದು ನಂದಿಗಿರಿಧಾಮದ ಅಧಿಕಾರಿ ರವಿಕುಮಾರ್ ಬೇಸರದಿಂದ ಹೇಳಿದ್ದಾರೆ.

    ಸಿಸಿಟಿವಿ ಭಯದಿಂದ ನಂದಿಗಿರಿಧಾಮಕ್ಕೆ ಬರೋ ಕೆಲ ಜೋಡಿಗಳು ಗಿರಿಧಾಮದಲ್ಲಿನ ಪೊದೆಗಳ ಮರೆಗೆ ಹೋಗಿ ರೊಮ್ಯಾನ್ಸ್‌ನಲ್ಲಿ ತೊಡಗುತ್ತಾರೆ. ಹೀಗಾಗಿ ಎಚ್ಚೆತ್ತ ತೋಟಗಾರಿಕೆ ಇಲಾಖೆ ಈ ಹಿಂದೆ ಬೆಟ್ಟದ ಮೇಲಿರುವ ದಟ್ಟವಾದ ಪೊದೆಗಳನ್ನು ಸಹ ಕಟಾವು ಮಾಡಿಸಿದೆ. ಆದರೂ ಪ್ರೇಮಿಗಳ ಈ ತುಂಟಾಟ ಮಾತ್ರ ನಿಲ್ಲುತ್ತಿಲ್ಲ. ಒಂದೆಡೆ ಪ್ರಕೃತಿ ಸೊಬಗು ಸವಿಯೋಣ ಎಂದು ಬರುವ ಪ್ರವಾಸಿಗರು, ಮತ್ತೊಂದೆಡೆ ಬೆಟ್ಟದ ಮೇಲೆ ಇರೋ ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಇದು ಇರುಸು ಮುರುಸು ಉಂಟುಮಾಡುತ್ತಿದೆ ಎಂದು ಪ್ರವಾಸಿಗ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.

    ಪ್ರೇಮಿಗಳ ತಾಣ ನಂದಿಗಿರಿಧಾಮದಲ್ಲಿ ಹೆಜ್ಜೆ ಹೆಜ್ಜೆಗೂ ಸಿಸಿಟಿವಿ ಅಳವಡಿಸಲಾಗಿದೆ. ಆದರೆ ಸಕಾಲಕ್ಕೆ ಕ್ಯಾಮೆರಾಗಳ ಮಾನಿಟರಿಂಗ್ ವ್ಯವಸ್ಥೆ ಇಲ್ಲದೆ ಇಲ್ಲದಿರುವುದರಿಂದ ಬೆಟ್ಟದಲ್ಲಿ ಕೆಲವು ಪ್ರೇಮಿ ಜೋಡಿಗಳು ಆಡಿದ್ದೆ ಆಟ, ಮಾಡಿದ್ದೆ ಕಾಯಕವಾಗಿದೆ. ಇನ್ನೂ ಮುಂದಾದರು ಗಿರಿಧಾಮದ ವಿಶೇಷಾಧಿಕಾರಿಗಳು ನಂದಿಬೆಟ್ಟದಲ್ಲಿ ಅಶ್ಲೀಲ ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.

     

  • ಜನ್ರ ಸಮ್ಮುಖದಲ್ಲೇ ಜೋಡಿ ಲಿಪ್‍ಲಾಕ್ – ಪೊಲೀಸ್ರು ನಿಯೋಜನೆ ಮಾಡಿದ್ದ ರಸ್ತೆಯಲ್ಲೇ ಪ್ರೇಮಿಗಳು ಅರೆಬೆತ್ತಲೆ

    ಜನ್ರ ಸಮ್ಮುಖದಲ್ಲೇ ಜೋಡಿ ಲಿಪ್‍ಲಾಕ್ – ಪೊಲೀಸ್ರು ನಿಯೋಜನೆ ಮಾಡಿದ್ದ ರಸ್ತೆಯಲ್ಲೇ ಪ್ರೇಮಿಗಳು ಅರೆಬೆತ್ತಲೆ

    ಬೆಂಗಳೂರು: ಒಂದುಕಡೆ 2020ರ ಹೊಸ ವರ್ಷವನ್ನು ತುಂಬಾ ಸಂತೋಷದಿಂದ ಜನರು ಬರಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಹೊಸ ವರ್ಷದ ಸಂಭ್ರಮದಲ್ಲಿ ಜನರು ನೈತಿಕತೆಯನ್ನು ಮರೆತು ರಸ್ತೆಯಲ್ಲಿ ಅಸಭ್ಯವಾಗಿ ನಡೆದುಕೊಂಡಿದ್ದಾರೆ.

    ನಗರದ ಚರ್ಚ್ ಸ್ಟ್ರೀಟ್‍ನ ರಸ್ತೆಯಲ್ಲಿ ಮದ್ಯದ ಅಮಲಿನಲ್ಲಿ ಎಲ್ಲಿದ್ದೇವೆ ಅನ್ನೋದನ್ನೇ ಮರೆತ ಜೋಡಿಯೊಂದು ಅರೆಬೆತ್ತಲೆಯಾಗಿ ರೊಮ್ಯಾನ್ಸ್ ಮಾಡಿದ್ದಾರೆ. ಚರ್ಚ್ ಸ್ಟ್ರೀಟ್ ನಲ್ಲಿ ಸೆಕ್ಯೂರಿಟಿಗಾಗಿ ಪೊಲೀಸರನ್ನು ನಿಯೋಜನೆ ಮಾಡಿದ್ದರು. ಪೊಲೀಸರು ನಿಯೋಜನೆ ಮಾಡಿರುವ ರಸ್ತೆಯಲ್ಲಿ ಪ್ರೇಮಿಗಳು ಅರೆಬೆತ್ತಲೆ ಸ್ಥಿತಿಯಲ್ಲಿದ್ದರು. ಅಲ್ಲದೇ ಯುವತಿ- ಯುವಕ ರೊಮ್ಯಾನ್ಸ್ ಕೂಡ ಮಾಡಿದ್ದಾರೆ. ಹೊಸ ವರ್ಷ ಎಂಬ ಕಾರಣಕ್ಕೆ ಪೊಲೀಸರು ಪ್ರಶ್ನೆ ಮಾಡಲ್ಲ, ರೊಮ್ಯಾನ್ಸ್ ಮಾಡೋರನ್ನು ಕಳಿಸುವುದಿಲ್ಲ ಎಂದು ಈ ರೀತಿ ನಡೆದುಕೊಂಡಿದ್ದಾರೆ.

    ಹೊಸ ವರ್ಷದ ಪಾರ್ಟಿ ಮುಗಿಸಿ ಪ್ರೇಮಿಗಳು ಚರ್ಚ್ ಸ್ಟ್ರೀಟ್‍ನ ಪಬ್ ನಿಂದ ಹೊರ ಬಂದಿದ್ದಾರೆ. ನಂತರ ರಸ್ತೆ ಮಧ್ಯದಲ್ಲಿ ನಿಂತುಕೊಂಡು ಜನರ ಸಮ್ಮುಖದಲ್ಲಿಯೇ ಲಿಪ್‍ಲಾಕ್ ಮಾಡಿದ್ದಾರೆ. ಈ ಮೂಲಕ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದ್ದಾರೆ. ಇದರಿಂದ ಪೊಲೀಸರು ಕೊಡುವ ಸೆಕ್ಯೂರಿಟಿ ಇದೆನಾ ಎಂಬ ಪ್ರಶ್ನೆ ಮೂಡಿ ಬರುತ್ತಿದೆ.

    ಚರ್ಚ್ ಸ್ಟ್ರೀಟ್ ಎಂಪೇರ್ ಹೋಟೆಲ್ ಮುಂಭಾಗ ಪಾರ್ಟಿ ಮುಗಿಸಿ ಪ್ರಿಯಕರನ ಜೊತೆ ಯುವತಿ ವಾಪಸ್ ಹೋಗುತ್ತಿದ್ದಳು. ಈ ವೇಳೆ ನಡು ಬೀದಿಯಲ್ಲಿ ಯುವತಿಯ ಖಾಸಗಿ ಅಂಗವನ್ನ ಯುವಕ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಹಿಂಬದಿಯಿಂದ ಬಂದು ಖಾಸಗಿ ಅಂಗ ಮುಟ್ಟುವ ಯುವಕನಿಗೆ ಯುವತಿ ತಲೆಗೆ ಹೊಡೆದಿದ್ದಾಳೆ. ಬಳಿಕ ಏನು ತಿಳಿಯದಂತೆ ಯುವಕ ಪರಾರಿಯಾಗಿದ್ದಾನೆ.

  • ಸಹೋದ್ಯೋಗಿಯನ್ನು ಅಪ್ಪಿಕೊಂಡು ಪ್ರಿನ್ಸಿಪಾಲ್ ರೊಮ್ಯಾನ್ಸ್..!

    ಸಹೋದ್ಯೋಗಿಯನ್ನು ಅಪ್ಪಿಕೊಂಡು ಪ್ರಿನ್ಸಿಪಾಲ್ ರೊಮ್ಯಾನ್ಸ್..!

    – ಕೊಠಡಿಯಲ್ಲಿ ವಿಡಿಯೋ ರೆಕಾರ್ಡ್

    ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳೂರು ಗ್ರಾಮದಲ್ಲಿ ಮಕ್ಕಳಿಗೆ ನೈತಿಕತೆಯ ಪಾಠ ಮಾಡಬೇಕಾದ ಪ್ರಾಂಶುಪಾಲನೊಬ್ಬ ಸಹೋದ್ಯೋಗಿ ಜೊತೆ ಚಕ್ಕಂದವಾಡುತ್ತಿದ್ದಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ಮೊರಾರ್ಜಿ ವಸತಿ ಶಾಲೆಯ ಪ್ರಿನ್ಸಿಪಾಲ್ ಚಂದ್ರಪ್ಪ ಈ ರೀತಿ ಶಾಲೆಯಲ್ಲೇ ರೊಮ್ಯಾನ್ಸ್ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಈ ವಸತಿ ಶಾಲೆಯಲ್ಲಿ ಆರನೇ ತರಗತಿಯಿಂದ ಹತ್ತನೇ ತರಗತಿವರೆಗೆ ಸುಮಾರು 250 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಶಿಕ್ಷಕರು, ಶಿಕ್ಷಕಿಯರು, ಅಡುಗೆಯವರು ಮತ್ತು ಅಡುಗೆ ಸಹಾಯಕರು ಸೇರಿ 20 ಮಂದಿ ಇಲ್ಲಿನ ಕ್ವಾರ್ಟರ್ಸ್ ಗಳಲ್ಲಿ ವಾಸವಾಗಿದ್ದಾರೆ.

    ಸುಪ್ರೀಂಕೋರ್ಟ್ ಆದೇಶವಿದೆ ಎಂದ:
    ಈ ವಸತಿ ಶಾಲೆಯ ಉದ್ಯೋಗಿಯಾಗಿ ಬಂದ ಮಹಿಳೆಯೊಬ್ಬರ ಜೊತೆ ಪ್ರಿನ್ಸಿಪಾಲ್ ಚಂದ್ರಪ್ಪ ಚಕ್ಕಂದ ಶುರು ಮಾಡಿದ್ದಾನೆ. ಕದ್ದುಮುಚ್ಚಿ ನಡೆಯುತ್ತಿದ್ದ ಇವರಿಬ್ಬರ ಪ್ರೀತಿ ಶಾಲೆಯ ಇನ್ನಿತರ ಶಿಕ್ಷಕರು ಹಾಗೂ ಮಕ್ಕಳಿಗೂ ಗೊತ್ತಾಗಿದೆ. ಈ ಬಗ್ಗೆ ಗ್ರಾಮಸ್ಥರು ಆಕ್ಷೇಪ ಮಾಡಿದಾಗ, ಸುಪ್ರೀಂಕೋರ್ಟ್ ಆದೇಶ ಇದೆ. ಯಾರು ಯಾರ ಜೊತೆ ಬೇಕಾದರೂ ಸಂಬಂಧ ಇಟ್ಟುಕೊಳ್ಳಬಹುದು ಎಂದು ಅವಾಜ್ ಹಾಕಿದ್ದಾನೆ.

    ಅಷ್ಟೇ ಅಲ್ಲದೆ ಇವರಿಬ್ಬರು ಇತ್ತೀಚೆಗೆ ಅಡುಗೆ ಸಾಮಾಗ್ರಿಗಳಿದ್ದ ರೂಮಿನಲ್ಲಿ ಅಪ್ಪಿಕೊಂಡು ರೊಮ್ಯಾನ್ಸ್ ಮಾಡಿದ್ದಾರೆ. ಇದನ್ನು ಅವರಿಗೆ ಗೊತ್ತಾಗದೇ ರೀತಿಯಲ್ಲಿ ಕಿಟಕಿಯಿಂದ ವಿಡಿಯೋ ಮಾಡಲಾಗಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸಮಾಜ ಕಲ್ಯಾಣ ಇಲಾಖೆ ಸುಪರ್ದಿಯಲ್ಲಿರುವ ಈ ಶಾಲೆಯ ಪ್ರಿನ್ಸಿಪಾಲ್ ರೊಮ್ಯಾನ್ಸ್ ವಿಷಯ ಹಿರಿಯ ಅಧಿಕಾರಿಗಳಿಗೆ ತಿಳಿದಿದ್ದರೂ, ಸೂಕ್ತ ಕ್ರಮ ಕೈಗೊಳ್ಳದೆ ಸಂಬಂಧವೇ ಇಲ್ಲವೇನು ಎಂಬಂತೆ ಇದ್ದಾರೆ. ಇಂತಹ ವಿಷಯದಿಂದ ಮಕ್ಕಳ ಮೇಲಾಗುವ ಪರಿಣಾಮಗಳ ಬಗ್ಗೆ ಇಲಾಖೆ ಗಂಭೀರವಾಗಿ ಯೋಚಿಸಬೇಕು ಎಂದು ಪೋಷಕರು ಆಗ್ರಹಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv