Tag: roof

  • ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

    ವಿಜಯಪುರ | ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಗೃಹಿಣಿ ಸಾವು

    ವಿಜಯಪುರ: ರಾತ್ರಿಯಿಡಿ ಭಾರೀ ಮಳೆ (Heavy Rain) ಸುರಿದ ಪರಿಣಾಮ ಮನೆಯ ಮೇಲ್ಛಾವಣಿ (Roof) ಕುಸಿದು ಮನೆಯಲ್ಲಿ ಮಲಗಿದ್ದ ಗೃಹಿಣಿ ಸಾವನ್ನಪ್ಪಿದ ಘಟನೆ ವಿಜಯಪುರದಲ್ಲಿ ನಡೆದಿದೆ.

    ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ಘಟನೆ ನಡೆದಿದೆ. ಸಂಗೀತಾ ಗಂಡ ಬಾಳಾಸಾಹೇಬ ಪಾಟೀಲ್ (30) ಮೃತ ಮಹಿಳೆ. ಇದನ್ನೂ ಓದಿ: ಹನಿಮೂನ್‌ಗೆ ತೆರಳಿದ್ದ ದಂಪತಿ ನಾಪತ್ತೆ ಕೇಸ್ – ಪತ್ನಿ ಅರೆಸ್ಟ್

    ಭಾನುವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದಾಗ ಅವಘಡ ಸಂಭವಿಸಿದೆ. ಮಳೆಯಿಂದಾಗಿ ಮನೆ ಸೋರುತ್ತಿದ್ದ ವೇಳೆ ಮನೆಯಿಂದ ಎದ್ದು ಹೊರ ಬಂದು ಪತಿ ಹಾಗೂ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಆದರೆ ಗೃಹಿಣಿ ಸಂಗೀತಾ ಮೇಲೆ ಮೇಲ್ಛಾವಣಿ ಬಿದ್ದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತದನಂತರ ಸ್ಥಳೀಯರು ಮಣ್ಣಲ್ಲಿ ಮುಚ್ಚಿಹೋಗಿದ್ದ ಸಂಗೀತಾ ಮೃತದೇಹವನ್ನು ಹೊರತೆಗೆದಿದ್ದಾರೆ. ಇದನ್ನೂ ಓದಿ: ಎಕ್ಸ್‌ಪ್ರೆಸ್ ವೇಯಲ್ಲಿ ಕಾರುಗಳ ನಡುವೆ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

    ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಿಕೋಟ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ತಿಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹಾಸನ| ನಿಲ್ಲಿಸಿದ್ದ ಕಾರಿನ ಡೋರ್‌ ತೆಗೆದು 6.30 ಲಕ್ಷ ಹಣ ಎಗರಿಸಿದ ಕಳ್ಳ

  • ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ- ಮೃತನ ಕುಟುಂಬ, ಗಾಯಾಳುಗಳಿಗೆ ಪರಿಹಾರ

    ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ- ಮೃತನ ಕುಟುಂಬ, ಗಾಯಾಳುಗಳಿಗೆ ಪರಿಹಾರ

    ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ (Delhi Airport Terminal-1) ನಡೆದ ಛಾವಣಿ ಕುಸಿತದಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ.

    ಘಟನಾ ಸ್ಥಳಕ್ಕೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು (Ram Mohan Naidu) ಅವರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಿಗೆ 20 ಲಕ್ಷ ರೂ. ಅಲ್ಲದೇ ಗಾಯಾಳುಗಳಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಘೊಷಿಸಿದರು.

    ನಡೆದಿದ್ದೇನು..?: ರಾಷ್ಟ್ರ ರಾಜಧಾನಿ ದೇಹಲಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಇಂದು ಮುಂಜಾನೆ 5.30ರ ಸುಮಾರಿಗೆ ಟರ್ಮಿನಲ್‌ 1 ರಲ್ಲಿ ಛಾವಣಿ ಕುಸಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಯಿತು. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ಪ್ರಕರಣದ ಕುರಿತು ತನಿಖೆ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ ಒಂದರಲ್ಲಿ ಸಂಭವಿಸಿದ ಅವಘಡದ ತನಿಖೆಗಾಗಿ ನಾಗರಿಕ ವಿಮಾನಯಾನ ಸಚಿವಾಲಯವು ತಂಡವನ್ನು ರಚಿಸಿದೆ. ಇಂದು ಬೆಳಗ್ಗೆ ಸಂಭವಿಸಿದ ಘಟನೆ ಬಗ್ಗೆ ಸ್ವತಃ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಣ್ಣಿಟ್ಟಿದ್ದಾರೆ. ಮೇಲ್ಛಾವಣಿ ಕುಸಿದು ಕೆಲವು ಕಾರುಗಳಿಗೂ ಹಾನಿಯಾಗಿದೆ.

    28 ವಿಮಾನಗಳ ಸಂಚಾರ ರದ್ದು: ಘಟನೆಯಿಂದಾಗಿ ದೆಹಲಿಯ ಟರ್ಮಿನಲ್ ಒಂದರ 28 ವಿಮಾನಗಳ ಸಂಚಾರ ರದ್ದಾಗಿದೆ. ದೆಹಲಿ ವಿಮಾನ ನಿಲ್ದಾಣಕ್ಕೆ ಬರುವ 12, ಹೊರಡುವ 16 ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ. ಟರ್ಮಿನಲ್- 2 ಮತ್ತು 3 ರಲ್ಲಿ ಎಂದಿನಂತೆ ವಿಮಾನಗಳ ಸಂಚಾರ ಮುಂದುವರಿಕೆಯಾಗಿದೆ.

    ಕುಸಿದಿರುವ ಛಾವಣಿ ಭಾಗವನ್ನು 2009 ರಲ್ಲಿ ನಿರ್ಮಿಸಲಾಗಿದೆ. ಈ ವರ್ಷದ ಮಾರ್ಚ್ ನಲ್ಲಿ ನವೀಕರಣ ಮಾಡಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ನವೀಕರಣಗೊಂಡ ಟರ್ಮಿನಲ್ ಉದ್ಘಾಟಿಸಿದ್ದರು. ಇದಾದ ಮೂರೇ ತಿಂಗಳಿಗೆ ಮೊದಲ ಮಳೆಗೆ ಛಾವಣಿ ಕುಸಿದು ಬಿದ್ದಿದೆ.

  • ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ದೆಹಲಿ ಏರ್‌ಪೋರ್ಟ್‌ನ ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿಗೆ ಗಾಯ

    ನವದೆಹಲಿ: ದೆಹಲಿ ವಿಮಾನ ನಿಲ್ದಾಣದ (Delhi Airport) ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದು 6 ಮಂದಿ ಗಾಯಗೊಂಡ ಘಟನೆ ನಡೆದಿದೆ.

    ಇಂದು ಮುಂಜಾನೆ 5.30ಕ್ಕೆ ಈ ಅವಘಡ ಸಂಭವಿಸಿದೆ. ಭಾರೀ ಮಳೆಯ ಪರಿಣಾಮ ಈ ದುರಂತ ನಡೆದಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಾವೇರಿ ಬಳಿ ಭೀಕರ ಅಪಘಾತ- 13 ಮಂದಿ ದುರ್ಮರಣ

    ಘಟನೆ ನಡೆದ ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು,  ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ತಿಳಿಸಿದ್ದಾರೆ.

    ಸದ್ಯ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಛಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ.

    ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಎಕ್ಸ್‌ ಮಾಡಿ, ಟಿ1 ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ಘಟನೆಯ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಅಗ್ನಿಶಾಮ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಬರೆದುಕೊಂಡಿದ್ದಾರೆ.‌

     

  • ಚಿತ್ರದುರ್ಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 7 ಮನೆಗಳ ಮೇಲ್ಛಾವಣಿ ಕುಸಿತ

    ಚಿತ್ರದುರ್ಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 7 ಮನೆಗಳ ಮೇಲ್ಛಾವಣಿ ಕುಸಿತ

    ಚಿತ್ರದುರ್ಗ: ಚಿತ್ರದುರ್ಗ (Chitradurga) ಜಿಲ್ಲೆಯ ಹಲವೆಡೆ ಗುರುವಾರ ಬಿರುಗಾಳಿ ಸಹಿತ ಭಾರೀ ಮಳೆ (Rain) ಸುರಿದಿದ್ದು, ಮಿಡ್ಲುಗಟ್ಟೆ ಪಿಂಜಾರಹಟ್ಟಿ ಗ್ರಾಮದಲ್ಲಿ 7 ಮನೆಗಳ ಮೇಲ್ಛಾವಣಿ ಕುಸಿದಿವೆ.

    ತಡರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಚಳ್ಳಕೆರೆ (Challakere) ತಾಲೂಕಿನ ಮಿಡ್ಲುಗಟ್ಟೆ ಪಿಂಜಾರಹಟ್ಟಿ ಗ್ರಾಮದಲ್ಲಿ 7 ಮನೆಗಳ ಮೇಲ್ಛಾವಣಿ (Roof) ಕುಸಿದು ಬಿದ್ದಿದೆ. ಗಾಳಿಯ ರಭಸಕ್ಕೆ ಮೇಲ್ಛಾವಣಿಯ ಶೀಟುಗಳು, ಹೆಂಚುಗಳು ಪುಡಿಪುಡಿಯಾಗಿ ಬಿದ್ದಿದೆ. ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ಬಿಪೊರ್‌ಜೊಯ್‌ ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ

    ಈ ಮನೆಗಳು ಗ್ರಾಮದ ರುಸೂಬಿ ಕಾಸಿಂಸಾಬ್, ರೇಷ್ಮ ಷರೀಫ್, ಬಿ.ದಾದು, ರುದ್ರಪ್ಪ, ಮಹಬೂಬ್ ಸಾಬ್, ಖಾಸಿಂಪೀರ್ ಎಂಬವರಿಗೆ ಸೇರಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಹಿ ಸುದ್ದಿ – ಕೇರಳಕ್ಕೆ ಮುಂಗಾರು ಪ್ರವೇಶ

  • ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

    ಲಕ್ನೋ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ (Potato Cold Storage) ಮೇಲ್ಛಾವಣಿ (Roof) ಕುಸಿದು ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ (Uttar Pradesh) ಸಂಭಾಲ್ ಚಂದೌಸಿ ಪ್ರದೇಶದಲ್ಲಿ ನಡೆದಿದೆ.

    ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮಾಲೀಕರನ್ನು ಅಂಕುರ್ ಅಗರ್ವಾಲ್ ಮತ್ತು ರೋಹಿತ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಹಿಂದೆಯೇ ಕೋಲ್ಡ್ ಸ್ಟೋರೇಜ್‍ ಶಿಥಿಲಾವಸ್ಥೆಯಲ್ಲಿದೆ ಎಂದು ವರದಿಯಾಗಿತ್ತು. ಆದರೆ ಕಟ್ಟಡ ಕುಸಿತಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಮೊರಾಬಾದ್ ಡಿಐಜಿ ಶಲಭ್ ಮಾಥುರ್ ಮಾತನಾಡಿ, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 11 ಮಂದಿಯನ್ನು ರಕ್ಷಿಸಲಾಗಿದೆ. ಕಟ್ಟಡದಲ್ಲಿ ನೆಲಮಾಳಿಗೆಯಿದ್ದು, ಅಲ್ಲಿಯೂ ಯಾರಾದರೂ ಸಿಲುಕಿಕೊಂಡಿದ್ದಾರಾ ಎಂದು ಹುಡುಕುವ ಪ್ರಯತ್ನ ನಡೆಸುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮದುವೆಯಾಗಿ ಮೂರೇ ದಿನಕ್ಕೆ ಪರಾರಿ – ಇದು ಫೋಟೋಶೂಟ್ ಮದ್ವೆ ಎಂದ ಪತಿ

    ಅವಶೇಷಗಳಡಿ ಸಿಲುಕಿರುವ ಜನರನ್ನು ಹುಡುಕಲು ಅಧಿಕಾರಿಗಳು ಸ್ನಿಫರ್ ಡಾಗ್‍ಗಳನ್ನು ಬಳಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿ ಕೋಲ್ಡ್ ಸ್ಟೋರೇಜ್‍ನ ಮಾಲೀಕ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಜೊತೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

  • ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿತ – 2 ಸಾವು, 12 ಮಂದಿ ಸಿಲುಕಿರುವ ಭೀತಿ

    ಗುರ್‌ಗಾಂವ್: ಅಪಾರ್ಟ್ಮೆಂಟ್‌ನ ಮೇಲ್ಛಾವಣಿ ಕುಸಿದು ಇಬ್ಬರು ಸಾವನ್ನಪ್ಪಿ, 12 ಮಂದಿ ಸಿಲುಕಿಕೊಂಡಿರುವ ಘಟನೆ ಗುರುಗ್ರಾಮದ ಸೆಕ್ಟರ್ 109 ರಲ್ಲಿನ ಚಿಂಟೆಲ್ಸ್ ಪ್ಯಾರಾಡಿಸೊ ವಸತಿ ಸಂಕೀರ್ಣದಲ್ಲಿ ನಡೆದಿದೆ.

    ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಆರು ಮಂದಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಮತ್ತು ಇತರ ಜಿಲ್ಲಾ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: 6 ವರ್ಷಗಳ ಕಾಲ ಕುತ್ತಿಗೆಯಲ್ಲಿ ಟೈರ್ ಸಿಕ್ಕಿಸಿಕೊಂಡಿದ್ದ ಮೊಸಳೆಗೆ ಕೊನೆಗೂ ಸಿಕ್ತು ಮುಕ್ತಿ!

    ಮೊದಲ ಮಾಹಿತಿ ಪ್ರಕಾರ, 17 ಅಂತಸ್ತಿನ ಕಟ್ಟಡದ 6 ಮಹಡಿಗಳು ಕುಸಿದಿವೆ. ಕಟ್ಟಡದಲ್ಲಿ ವಾಸವಾಗಿರುವ ಕೆಲವು ಕುಟುಂಬಗಳು ಕೂಡ ಸಿಕ್ಕಿಬಿದ್ದಿರುವ ಆತಂಕವಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ಹಲವು ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಅಪಾರ್ಟ್ಮೆಂಟ್‌ನಲ್ಲಿರುವ 4 ಕುಟುಂಬಗಳು ಅವಶೇಷಗಳಡಿ ಸಿಲುಕಿವೆ ಎನ್ನಲಾಗಿತ್ತು. ಇದನ್ನೂ ಓದಿ: ಕೇಸರಿ ಶಾಲು, ಹಿಜಬ್ ಧರಿಸುವಂತಿಲ್ಲ : ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಏನಿದೆ?

    ಗುರುಗ್ರಾಮ ಕಟ್ಟಡ ಕುಸಿತದ ಬಗ್ಗೆ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಗಮನಿಸುತ್ತಿದ್ದಾರೆ ಅಂತ ಹರಿಯಾಣ ಸರ್ಕಾರ ತಿಳಿಸಿದೆ.

    ಗುರುಗ್ರಾಮ ಸೆಕ್ಟರ್ 109 ರಲ್ಲಿ ಚಿಂಟೆಲ್ಸ್ ಪ್ಯಾರಾಡಿಸೊ ವಸತಿ ಸಂಕೀರ್ಣದ ಡಿ ಟವರ್‍ನ ಆರನೇ ಮಹಡಿಯ ಛಾವಣಿಯ ಒಂದು ಭಾಗವು ಕುಸಿದಿದೆ. ಆಡಳಿತ ಅಧಿಕಾರಿಗಳು, ಎನ್‍ಡಿಆರ್‍ಎಫ್, ಎಸ್‍ಡಿಆರ್‍ಎಫ್ ತಂಡಗಳು ಘಟನಾ ಸ್ಥಳದಲ್ಲಿಯೇ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದೆ.

  • ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರ ಸಾವು

    ಕಲ್ಲಿದ್ದಲು ಗಣಿಯ ಮೇಲ್ಛಾವಣಿ ಕುಸಿದು ನಾಲ್ವರ ಸಾವು

    ಹೈದರಾಬಾದ್: ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್)ನ ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ.

    Coal Mine

    ಶ್ರೀರಾಂಪುರ ಪ್ರದೇಶದಲ್ಲಿ ಮೇಲ್ಛಾವಣಿ ಹೊದಿಸುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ. ಮೇಲ್ಛಾವಣಿಯ ಒಂದು ಭಾಗ 32 ಮತ್ತು 60 ವರ್ಷ ವಯಸ್ಸಿನ ನಾಲ್ವರು ಕಾರ್ಮಿಕರ ಮೇಲೆ ಬಿದ್ದಿದ್ದು, ಅವರು ಅವಶೇಷಗಳಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕಾನ್ಪುರದಲ್ಲಿ ಝಿಕಾ ವೈರಸ್ ಪತ್ತೆ – ಮತ್ತೆ 3 ಪ್ರಕರಣ, ಸೋಂಕಿತರ ಸಂಖ್ಯೆ 91ಕ್ಕೆ ಏರಿಕೆ

    ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಪ್ಪು ಪ್ರೇರಣೆ – ಸಪ್ತಪದಿಗೂ ಮುನ್ನವೇ ನವ ದಂಪತಿ ನೇತ್ರದಾನದ ಶಪಥ!

    ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ.

  • ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

    ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

    ಚಿತ್ರದುರ್ಗ: ಕೆಲ ದಿನಗಳಿಂದ ತುಂತುರು ಮಳೆಯಿಂದಾಗಿ, ನೆನೆದಿದ್ದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

    ಹೊಳಲ್ಕೆರೆಯ ಟಿಪ್ಪು ನಗರದ 1ನೇ ಕ್ರಾಸ್ ನಲ್ಲಿರುವ ಮುಮ್ತಾಜ್ ಅವರ ಮನೆ ದಿಡೀರ್ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಮಮ್ತಾಜ್ ಹಾಗೂ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೋರಮಂಗಲದಲ್ಲಿ ಭೀಕರ ಅಪಘಾತ – ಹೊಸೂರು ಶಾಸಕನ ಪುತ್ರ ಸಾವು

    ಮನೆ ಕಳೆದುಕೊಂಡು ಕಂಗಾಲಾಗಿರುವ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ನಮಗೆ ಶೀಘ್ರ ಪರಿಹಾರ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮುಮ್ತಾಜ್ ಆಗ್ರಹಿಸಿದ್ದಾರೆ. ಹೊಳಲ್ಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಹಾವೇರಿಯಲ್ಲಿ ಧಾರಾಕಾರ ಮಳೆ- 30ಕ್ಕೂ ಹೆಚ್ಚು ಗುಡಿಸಲು, ಶೆಡ್‍ಗಳಿಗೆ ಹಾನಿ

    ಹಾವೇರಿಯಲ್ಲಿ ಧಾರಾಕಾರ ಮಳೆ- 30ಕ್ಕೂ ಹೆಚ್ಚು ಗುಡಿಸಲು, ಶೆಡ್‍ಗಳಿಗೆ ಹಾನಿ

    ಹಾವೇರಿ: ಜಿಲ್ಲೆಯಲ್ಲಿ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ರಟ್ಟೀಹಳ್ಳಿ ತಾಲೂಕಿನ ಖಂಡೇಬಾಗೂರು ಗ್ರಾಮದಲ್ಲಿ ಬಿರುಗಾಳಿ ಮಳೆಗೆ 30ಕ್ಕೂ ಅಧಿಕ ಗುಡಿಸಲು ಹಾಗೂ ತಗಡಿನ ಶೆಡ್‍ನ ಮೇಲ್ಛಾವಣಿಗಳು ಹಾರಿ ಹೋಗಿವೆ.

    ಹಿರೇಕೆರೂರು ಪಟ್ಟಣ ಮತ್ತು ಭೋಗಾವಿ ಗ್ರಾಮದಲ್ಲೂ ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. 30ಕ್ಕೂ ಅಧಿಕ ಗುಡಿಸಲು ಹಾಗೂ ಶೆಡ್ಡಿನ ಮೇಲ್ಛಾವಣಿಗಳು ಹಾರಿ ಹೋಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.

    ಮೇಲ್ಛಾವಣಿ ಹಾರಿ ಹೋಗಿದ್ದರಿಂದ ಉಳಿದುಕೊಳ್ಳಲು ಸೂರಿಲ್ಲದೆ ಕುಟುಂಬದ ಸದಸ್ಯರು ದಿಕ್ಕು ತೋಚದಂತೆ ಕುಳಿತಿದ್ದಾರೆ. ತಾಲೂಕು ಹಾಗೂ ಜಿಲ್ಲಾಡಳಿತ 30 ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಶಾಶ್ವತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಮೇಲ್ಛಾವಣಿ ಕುಸಿತ – ವ್ಯಕ್ತಿ ಬಲಿ, ಮೂವರಿಗೆ ಗಾಯ

    ಮೇಲ್ಛಾವಣಿ ಕುಸಿತ – ವ್ಯಕ್ತಿ ಬಲಿ, ಮೂವರಿಗೆ ಗಾಯ

    ನವದೆಹಲಿ: ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದು ವ್ಯಕ್ತಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ದೇಹಲಿಯ ಪೂರ್ವ ಭಾಗ ಸರಿಟಾ ವಿಹಾರ್ ಪ್ರದೇಶದಲ್ಲಿ ನಡೆದಿದೆ.

    ಮೂರು ಅಂತಸ್ತಿನ ಮನೆ ಕಟ್ಟಡದ ಮೇಲಿನ ಮೂರನೇ ಮಹಡಿಯ ಟೆರೇಸ್‍ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ವೇಳೆ ಈ ಮೇಲ್ಛಾಣಿ ಕುಸಿದಿದೆ. ಘಟನೆಯಲ್ಲಿ ಧರ್ಮ್ ಭೀರ್ ಎಂಬಾತ ಸಿಲುಕಿಕೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ಘಟನಾಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳವನ್ನು ಕರೆಸಲಾಗಿತ್ತು ಎಂದು ಅಗ್ನಿ ಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆ ಕುರಿತಂತೆ ತನಿಖೆ ನಡೆಸಿದಾಗ ಮಧ್ಯಾಹ್ನ 12.05ಕ್ಕೆ ಮನೆಯ ಮೇಲ್ಛಾವಣಿಯ ಒಂದು ಭಾಗ ಕುಸಿದಿದೆ. ಕಟ್ಟಡದ ಟೇರಸ್‍ನಲ್ಲಿ ವೆಲ್ಡಿಂಗ್ ಕೆಲಸಗಳಿಗೆ ಸಂಬಂಧಿಸಿದ ವಸ್ತುಗಳು ಬಿದ್ದಿದ್ದವು ಎಂದು ತಿಳಿದು ಬಂದಿದೆ.

    ಮದನ್ಪುರ್ ಖಾದರ್ ನಿವಾಸಿಯಾದ ಧರ್ಮ್‍ಬೀರ್ ಮೇಲ್ಛಾಣಿ ಕುಸಿದ ಸ್ಥಳದಲ್ಲಿಯೇ ಸಿಲುಕಿಕೊಂಡು ಪ್ರಾಣಬಿಟ್ಟಿದ್ದಾರೆ ಮತ್ತು ಹರೀಶ್ ರೊಟೆಲ್ಲಾ(ಮಾಲೀಕ), ಖಲೀಲ್ ಮತ್ತು ಶಿವಂ ಅವರನ್ನು ಹತ್ತಿರದ ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಆರ್.ಪಿ ಮೀನಾ ಹೇಳಿದರು.