Tag: Roopa Rao

  • ‘ಕೆಂಡ’ ಟ್ರೈಲರ್‌ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು!

    ‘ಕೆಂಡ’ ಟ್ರೈಲರ್‌ನಲ್ಲಿ ಕಂಡು ಕೇಳರಿಯದ ಕಥೆಯ ಸುಳಿವು!

    ಹದೇವ್ ಕೆಲವಡಿ ನಿರ್ದೇಶನದ ‘ಕೆಂಡ’ (Kenda Film) ಚಿತ್ರ ಇದೇ ತಿಂಗಳ 26ರಂದು ಬಿಡುಗಡೆಗೊಳ್ಳಲಿದೆ. ಈಗಾಗಲೇ ಈ ಚಿತ್ರ ಅಂತಾರಾಷ್ಟ್ರೀಯ ಸಿನಿಮಾ ಫೆಸ್ಟಿವಲ್‌ಗಳಲ್ಲಿ ಬಿಡುಗಡೆಗೊಂಡಿದೆ. ಹಲವಾರು ಪ್ರಶಸ್ತಿಗಳನ್ನೂ ಪಡೆದುಕೊಂಡಿದೆ. ಭಾರತದಲ್ಲಿ ಇಂಥಾ ಸಿನಿಮಾಗಳನ್ನೂ ರೂಪಿಸ್ತಾರಾ ಎಂಬಂಥಾ ಬೆರಗೊಂದನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಂಡ ಪ್ರತಿಷ್ಠಾಪಿಸಿ ಬಿಟ್ಟಿದೆ. ಇಷ್ಟೆಲ್ಲ ಖುಷಿಯ ಪುಳಕಗಳೊಂದಿಗೆ ಚಿತ್ರತಂಡವೀಗ ಪ್ರೇಕ್ಷಕರ ಮುಂದೆ ಪ್ರತ್ಯಕ್ಷವಾಗಿದೆ. ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯ ಮೂಲಕ ಕೆಂಡದ ಟ್ರೈಲರ್ ಅನ್ನು ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್ ಲೋಕಾರ್ಪಣೆಗೊಳಿಸಿದ್ದಾರೆ. ಇದೇ ಹೊತ್ತಿನಲ್ಲಿ ಕೆಂಡದ ಬಗೆಗಿನ ಒಂದಷ್ಟು ಬೆರಗಿನ ವಿಚಾರಗಳನ್ನು ಚಿತ್ರತಂಡ ಹಂಚಿಕೊಂಡಿದೆ.

    ಸೂಕ್ಷ್ಮ ಮನಃಸ್ಥಿತಿಯ ನಿರ್ದೇಶಕನ ಕೈಗೆ ಭೂಗತ ಜಗತ್ತಿನ ಕಥೆ ಸಿಕ್ಕರೆ, ಅಲ್ಲಿ ಬೇರೊಂದು ಆಯಾಮದ ದೃಷ್ಯಕಾವ್ಯ ರೂಪುಗೊಳ್ಳೋದು ಖಚಿತ. ಕೆಂಡದಲ್ಲಿರೋದೂ ಕೂಡಾ ಅಂಥಾದ್ದೇ ರೌಡಿಸಮ್ಮಿನ ಸುತ್ತ ಜರುಗುವ ಕಥನ. ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡೋ ಯುವಕನೋರ್ವ, ಪರಿಸ್ಥಿತಿಗಳ ಸೆಳವಿಗೆ ಸಿಕ್ಕು ಭೂಗತದ ತೆಕ್ಕೆಗೆ ಬೀಳುವ ಕಥೆ ಇಲ್ಲಿದೆ. ಹಾಗಂತ ಅದು ಸಿದ್ಧ ಸೂತ್ರಗಳ ಸುತ್ತ ಗಿರಕಿ ಹೊಡೆಯುವಂಥಾದ್ದಲ್ಲ. ಕೈಗೆ, ಮೈ ಮನಸಿಗೆ ಮೆತ್ತಿಕೊಂಡ ರಕ್ತದ ಕಲೆಗಳನ್ನ ಕಲಾತ್ಮಕವಾಗಿ ತೋರಿಸಲು ಸಾಧ್ಯವಾ? ಸುಡುವ ಕ್ರೌರ್ಯವನ್ನು ಸೂಕ್ಷ್ಮ ಸಂವೇದನೆಯ ಒಳಗಣ್ಣಿನಿಂದ ನೋಡಲು ಹೇಗೆ ಸಾಧ್ಯ? ಇದು ಸಿನಿಮಾಸಕ್ತರನ್ನು ಕಾಡುವ ಗೊಂದಲ ಬೆರೆತ ಅಚ್ಚರಿ. ಅಂಥಾ ಅಚ್ಚರಿಗಳೇ ಬೆರಗುಗೊಳ್ಳುವಂತೆ `ಕೆಂಡ’ ಚಿತ್ರ ಮೂಡಿ ಬಂದಿದೆ ಎಂಬ ಮುನ್ಸೂಚನೆ ಈ ಟ್ರೈಲರ್‌ನಲ್ಲಿ ಸ್ಪಷ್ಟವಾಗಿ ಸಿಕ್ಕಿಬಿಟ್ಟಿದೆ.

    ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ದೇಶಕ ಸಹದೇವ್ ಕೆಲವಡಿ, ನಿರ್ಮಾಪಕಿ ರೂಪಾ ರಾವ್ (Roopa Rao), ಸಂಗೀತ ನಿರ್ದೇಶಕ ರಿತ್ವಿಕ್ ಕಾಯ್ಕಿಣಿ, ರಂಗಭೂಮಿಯಿಂದ ಬಂದಿರುವ, ಈ ಚಿತ್ರದ ನಾಯಕ ಬಿ.ವಿ ಭರತ್, ಪ್ರಣವ್ ಶ್ರೀಧರ್, ಹಿರಿಯ ರಂಗಭೂಮಿ ಕಲಾವಿದ ವಿನೋದ್ ರವೀಂದ್ರನ್, ಸತೀಶ್, ಫೃಥ್ವಿ, ದೀಪ್ತಿ ಮುಂತಾದವರು ಪಾಲ್ಗೊಂಡಿದ್ದರು. ಮೊದಲಿಗೆ ಮಾತಾಡಿದ ರೂಪಾ ರಾವ್ ಕೆಂಡ ಚಿತ್ರ ರೂಪುಗೊಂಡ ಬಗ್ಗೆ, ಅದರ ಕಥೆಯ ಬಗ್ಗೆ ಹಾಗೂ ಅಮೇಯುಕ್ತಿ ಸ್ಟುಡಿಯೋಸ್ ಹುಟ್ಟಿನ ವಿಚಾರವಾಗಿ ಒಂದಷ್ಟು ವಿಚಾರಗಳನ್ನ ಹಂಚಿಕೊಂಡರು. ನಿರ್ದೇಶಕ ಸಹದೇವ್ ಕೆಲವಡಿ ಕೆಂಡ ರೂಪುಗೊಂಡಿದ್ದರ ಹಿಂಚುಮುಂಚಿನ ರಸವತ್ತಾದ ವಿವರಗಳನ್ನು ಹಂಚಿಕೊಂಡರು.

    ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ‘ಕೆಂಡ’ ಶೀಘ್ರದಲ್ಲೇ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ, ರೇಖಾ ಕೂಡ್ಲಿಗಿ, ಪ್ರಭಾಕರ್ ಜೋಶಿ ಮುಂತಾದವರ ತಾರಾಗಣವಿದೆ.

  • ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ ‘ಕೆಂಡ’ ಸಿನಿಮಾ

    ವಿಶ್ವಮಟ್ಟದಲ್ಲಿ ದಾಖಲೆ ಬರೆದ ಕನ್ನಡದ ‘ಕೆಂಡ’ ಸಿನಿಮಾ

    ಕಂಟೆಂಟು ಗಟ್ಟಿಯಾಗಿದ್ದರೆ ಯಾವುದೇ ಹೈಪು, ಪ್ರಚಾರದ ಪಟ್ಟುಗಳಿಲ್ಲದೆಯೇ ಚಿತ್ರವೊಂದು ಸದ್ದು ಮಾಡಬಲ್ಲದು. ಈ ಮಾತಿಗೆ ಉದಾಹರಣೆಯಂತೆ ಅನೇಕ ಚಿತ್ರಗಳು ಪ್ರೇಕ್ಷಕರನ್ನು ಸೆಳೆದಿವೆ. ದೊಡ್ಡ ಮಟ್ಟದಲ್ಲಿ ಗೆದ್ದಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಎಲ್ಲ ಲಕ್ಷಣಗಳಿರುವ ಚಿತ್ರ ‘ಕೆಂಡ’ (Kenda Film) ಸಿನಿಮಾ. ಸಹದೇವ್ ಕೆಲವಡಿ ನಿರ್ದೇಶನದ ಈ ಚಿತ್ರ ಹೆಜ್ಜೆ ಹೆಜ್ಜೆಗೂ ಸುದ್ದಿ ಕೇಂದ್ರದಲ್ಲಿದೆ. ಸಿನಿಮೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳನ್ನೂ ಬಾಚಿಕೊಂಡಿದೆ. ಇದೀಗ ಮಾರ್ಟಿನ್ ಸ್ಕಾರ್ಸೆಸೆ, ಆಂಗ್ ಲೀ, ಜಿಮ್ ಜರ್ಮುಷ್, ಸ್ಟೈಕ್‌ಲೀ ಕೋಯೆನ್ ಬ್ರದರ್ಸ್ ಮುಂತಾದ ಘಟಾನುಘಟಿ ನಿರ್ದೇಶಕರಿಗೆ ತರಬೇತಿ ಕೊಟ್ಟಿರುವ ನ್ಯೂಯಾರ್ಕ್‌ನ ಟಿಶ್ ಸ್ಕೂಲ್ ಆಫ್ ಆರ್ಟ್‌ನಲ್ಲಿ ಜೂನ್ 28ರಂದು ಪ್ರದರ್ಶನಗೊಳ್ಳಲಿದೆ. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ಸಲ್ಮಾನ್ ಖಾನ್, ರಶ್ಮಿಕಾ ನಟನೆಯ ಸಿನಿಮಾ ಮುಹೂರ್ತ

    ಕನ್ನಡದಲ್ಲಿ ತಯಾರುಗೊಂಡಿದ್ದ ಈ ಚಿತ್ರವೀಗ ತಾನೇತಾನಾಗಿ ವಿಶ್ವ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿದೆ. ಕನ್ನಡದ `ತಿಥಿ’ ಸಿನಿಮಾದ ಹಾದಿಯಲ್ಲಿ ಮುಂದುವರೆದು, ಜೂನ್ 29ರಂದು ಸ್ವಿಜರ್‌ಲ್ಯಾಂಡಿನಲ್ಲಿಯೂ ಕೆಂಡ ಪ್ರದರ್ಶನಗೊಳ್ಳಲಿದೆ. ಇದೇನು ಸಲೀಸಾದ ಹಾದಿಯಲ್ಲ. ತನ್ನ ಕಂಟೆಂಟಿನ ಅಸಲೀ ಕಸುವಿನ ಕಾರಣದಿಂದಲೇ ಅದೆಲ್ಲ ಸಾಧ್ಯವಾಗಿದೆ. ನ್ಯೂಯಾರ್ಕ್‌ನ ಟಿಶ್ ಸ್ಕೂಲ್ ಆಫ್ ಆರ್ಟ್‌ನಲ್ಲಿ ಪ್ರದರ್ಶನ ಕಂಡ ಮೊಟ್ಟ ಮೊದಲ ಕನ್ನಡ ಚಿತ್ರವಾಗಿಯೂ ‘ಕೆಂಡ’ ದಾಖಲೆ ಬರೆದಿದೆ. ಈ ಹಿಂದೆ ದಾದಾ ಸಾಹೇಬ್ ಫಾಲ್ಕೆ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡಿದ್ದ ಈ ಚಿತ್ರ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಅನ್ನು ಪಡೆದುಕೊಂಡಿತ್ತು. ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನ ಕಾಣುವ ಮೂಲಕ ಮತ್ತೊಂದು ದಾಖಲೆ ಕೆಂಡದ ಖಾತೆಗೆ ಜಮೆಯಾಗಿದೆ.

    ಈ ಹಿಂದೆ ‘ಗಂಟುಮೂಟೆ’ ಎಂಬ ಚಿತ್ರ ನಿರ್ದೇಶನ ಮಾಡಿ ಸೈ ಅನ್ನಿಸಿಕೊಂಡಿದ್ದ ರೂಪಾ ರಾವ್ ‘ಕೆಂಡ’ವನ್ನು ನಿರ್ಮಾಣ ಮಾಡಿದ್ದಾರೆ. ಬದುಕಿಗೆ ಹತ್ತಿರಾದ, ಬರಿಗಣ್ಣಿಗೆ ನಿಲುಕದ ಸೂಕ್ಷ್ಮ ಕಥಾನಕದೊಂದಿಗೆ ಸಹದೇವ್ ಕೆಲವಡಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಯ ಹೊಸ್ತಿಲಿನಲ್ಲಿರುವಾಗಲೇ ಕನ್ನಡದ ಕೆಂಡದ ಹವಾ ವಿಶ್ವಾದ್ಯಂತ ಹಬ್ಬಿಕೊಂಡಿದೆ. ಈ ಎಲ್ಲ ಕಾರಣಗಳಿಂದಾಗಿ ಕೆಂಡ ವಿಶಿಷ್ಟ ಚಿತ್ರವಾಗಿ ಪ್ರೇಕ್ಷಕರನ್ನು ಬಹುವಾಗಿ ಸೆಳೆಯುತ್ತಿದೆ.

    ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ (Roopa Rao) ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೆಂಡ ಶೀಘ್ರದಲ್ಲೇ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

  • ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್: ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್

    ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್: ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್

    ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ (Kenda) ನಿರ್ದೇಶಕ ಸಹದೇವ್ ಕೆಲವಡಿ (Sahadev Kelavadi)  ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ (Phalke Film Award) ಗೆ ಪ್ರವೇಶ ಪಡೆದಿರುವ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಇದೀಗ ಮತ್ತೊಂದು ಸಂಭ್ರಮದ ಸಂಗತಿಯನ್ನು ಚಿತ್ರ ತಂಡ ಹಂಚಿಕೊಂಡಿದೆ. ಈ ಚಿತ್ರಕ್ಕೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಲಭಿಸಿದೆ. ಈ ಮೂಲಕ ಸಹದೇವ್ ಕೆಲವಡಿ ಮೊದಲ ಪ್ರಯತ್ನದಲ್ಲಿಯೇ ತಮ್ಮ ನಿರ್ದೇಶನದ ಕಸುವನ್ನು ಸಾಬೀತುಪಡಿಸಿದ್ದಾರೆ. ಈ ಸುದ್ದಿಯೊಂದಿಗೆ ಕೆಂಡದ ಸುತ್ತ ಹಬ್ಬಿಕೊಂಡಿರುವ ನಿರೀಕ್ಷೆಗಳಿಗೆ ಮತ್ತೊಂದಷ್ಟು ಆವೇಗ ಬಂದಂತಾಗಿದೆ.

    ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ ಕೆಂಡ ಪ್ರವೇಶ ಪಡೆದುಕೊಂಡಿತ್ತು. ಈ ಹಂತದಲ್ಲಿ ಅಟತ್ಯಂತ ಕ್ಲಿಷ್ಟಕರ ಸ್ಪರ್ಧೆಯನ್ನು ದಾಟಿಕೊಂಡಿದ್ದ `ಕೆಂಡ’ ಚಿತ್ರ ಕಡೆಗೂ ಅತ್ಯುತ್ತಮ ಚೊಚ್ಚಲ ನಿರ್ದೇಶನ ವಿಭಾಗದ ಜ್ಯೂರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಸುತ್ತಿನಲ್ಲಿ ನಾನಾ ಭಾಷೆಗಳ: ಚಿತ್ರಗಳ ನಡುವೆ ಕನ್ನಡ ಚಿತ್ರ ಕೆಂಡ ಸ್ಪರ್ಧೆಗೆ ಒಡ್ಡಿಕೊಂಡಿತ್ತು. ಅಂತಿಮವಾಗಿ ಈ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆರ ಮತ್ತೊಂದು ಗರಿ ಮೂಡಿಸಿರೋದಂತೂ ಸತ್ಯ.

    ಈ ಫಿಲಂ ಫೆಸ್ಟಿವಲ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಘನತೆ ಪ್ರತಿಷ್ಠೆಯನ್ನು ಉಳಿಸಿಕೊಂಡಿದೆ. ಇದಕ್ಕೆ ಪ್ರವೇಶ ಪಡೆದುಕೊಳ್ಳೋದೇ ದೊಡ್ಡ ಸಂಗತಿ ಎಂಬಂಥಾ ವಾತಾವರಣವಿಒದೆ. ಹಾಗೊಂದು ವೇಳೆ ಪ್ರವೇಶ ಸಿಕ್ಕರೂ ಕೂಡಾ ಸ್ಪರ್ಧೆಯಲ್ಲಿ ಉಳಿದುಕೊಳ್ಳುವುದು ಸಾಮಾನ್ಯದ ಸಂಗತಿಯಲ್ಲ. ಅದೆಲ್ಲವನ್ನೂ ದಾಟಿಕೊಂಡು ಸದರಿ ಮಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರೋದೇ ಕೆಂಡದ ಅಸಲೀ ಕಸುವಿಗೊಂದು ಸಾಕ್ಷಿ. ಅದರಲ್ಲಿಯೇ ನಿರ್ದೇಶನದಲ್ಲಿ ಮೊದಲ ಹೆಜ್ಜೆಯಲ್ಲಿಯೇ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಸಹದೇವ್ ಕೆಲವಡಿ ಅಚ್ಚರಿ ಮೂಡಿಸಿದ್ದಾರೆ.

     

    ಹೀಗೆ ಸದ್ದು ಮಾಡುತ್ತಿರುವ ಈ ಚಿತ್ರವನ್ನು ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ (Roopa Rao) ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೆಂಡ ಇದೇ ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

  • ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್ ಗೆ ‘ಕೆಂಡ’ ಚಿತ್ರ ಆಯ್ಕೆ

    ದಾದಾ ಸಾಹೇಬ್ ಫಾಲ್ಕೆ ಫಿಲ್ಮ್ ಫೆಸ್ಟಿವಲ್ ಗೆ ‘ಕೆಂಡ’ ಚಿತ್ರ ಆಯ್ಕೆ

    ಹದೇವ್ ಕೆಲವಡಿ ನಿರ್ದೇಶನದ `ಕೆಂಡ’ (Kenda) ಚಿತ್ರವೀಗ ಬಿಡುಗಡೆಯ ಹೊಸ್ತಿಲಿನಲ್ಲಿದೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್ (Roopa Rao) ನಿರ್ಮಾಣ ಮಾಡಿರುವ ಈ ಸಿನಿಮಾ ಭಿನ್ನ ಜಾಡಿನ ಕಥಾನಕವನ್ನು ಒಳಗೊಂಡಿದೆ. ಈ ಹೊತ್ತಿನಲ್ಲಿ ಕೆಂಡದ ಬಗೆಗಿನ ಮತ್ತೊಂದು ಖುಷಿಯ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಕೆಂಡ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ (Phalke Film Festival)ಗೆ ಆಯ್ಕೆಯಾಗಿದೆ.

    ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ ಕೆಂಡ ಪ್ರವೇಶ ಪಡೆದಿದೆ. ಕೇವಲ ಚಿತ್ರತಂಡಕ್ಕೆ ಮಾತ್ರವಲ್ಲದೇ, ಕನ್ನಡ ಚಿತ್ರರಂಗದ ಪಾಲಿಗೂ ಖುಷಿಯ ಸಂಗತಿ. ಈ ಫಿಲಂ ಫೆಸ್ಟಿವಲ್ ಪ್ರತಿಷ್ಠೆಯನ್ನು ಕಾಯ್ದುಕೊಂಡು ಬಂದಿದೆ. ಇದಕ್ಕೆ ಆಯ್ಕೆಯಾಗಬೇಕೆಂದು ಅದೆಷ್ಟೋ ಸಿನಿಮಾ ಮಂದಿಯ ಕನಸಾಗಿರುತ್ತದೆ. ಹಾಗಂತ, ಅದೇನೂ ಸಲೀಸಿನ ಸಂಗತಿಯಲ್ಲ. ಅಲ್ಲಿ ನಾನಾ ಪರೀಕ್ಷೆಗಳಿಗೆ ಎದುರಾಗಿ ಜೈ ಎನಿಸಿಕೊಂಡರೆ ಮಾತ್ರವೇ ಸಿನಿಮಾವೊಂದು ಆಯ್ಕೆಯಾಗಲು ಸಾಧ್ಯ. ಎಲ್ಲ ರೀತಿಯಿಂದಲೂ ಗುಣಮಟ್ಟ ಕಾಯ್ದುಕೊಂಡ ಸಿನಿಮಾಗಳಿಗೆ ಮಾತ್ರವೇ ಆ ಅವಕಾಶ ಸಿಗುತ್ತದೆ. ಅಂಥಾದ್ದನ್ನೆಲ್ಲ ದಾಟಿಕೊಂಡು ಆಯ್ಕೆಯಾಗಿದೆಯೆಂದರೆ, ಕೆಂಡದ ಅಸಲೀ ಕಸುವಿನ ಬಗ್ಗೆ ಹೆಚ್ಚೇನೂ ಬಿಡಿಸಿ ಹೇಳುವಂತಿಲ್ಲ.

    ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆಯಲ್ಲಿಯೇ ಸಹದೇವ್ ಕೆಲವಡಿ ಗೆಲುವಿನ ಮೆಟ್ಟಿಲೊಂದನ್ನು ಹತ್ತಿದ್ದಾರೆ. ಅಂದಹಾಗೆ, ಈ ಚಿತ್ರ ಇದೇ ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ.

     

    ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀರ್ಶ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

  • ದಾರಿಯಲ್ಲಿ ಧೂಳು: ‘ಕೆಂಡ’ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ದಾರಿಯಲ್ಲಿ ಧೂಳು: ‘ಕೆಂಡ’ ಚಿತ್ರದ ಲಿರಿಕಲ್ ವಿಡಿಯೋ ಸಾಂಗ್ ರಿಲೀಸ್

    ರೂಪಾ ರಾವ್ (Roopa Rao) ನಿರ್ಮಾಣ ಮತ್ತು ಸಹದೇವ್ ಕೆಲವಡಿ (Sahdev Kelavadi) ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ  ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ (Kenda) ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವಿಡಿಯೋ (Lyrical Video) ಸಾಂಗ್ ಅನಾವರಣಗೊಂಡಿದೆ.

    ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ಧ್ವನಿಯೊಂದಿಗೆ ಮೆಲ್ಲಗೆ ಮನಸಿಗಿಳಿಯುವಂತಿದೆ. ವಿಶೇಷವೆಂದರೆ, ರಿತ್ವಿಕಕ್ ಕಾಯ್ಕಿಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡನ್ನು, ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ. ಪ್ರತಿಯೊಂದರಲ್ಲಿಯೂ ಹೊಸತನ, ಪ್ರಯೋಗಾತ್ಮಕ ಗುಣಗಳೊಂದಿಗೆ ಮುಂದುವರೆಯುತ್ತಿರುವ ಚಿತ್ರತಂಡ, ಈ ವಿಚಾರದಲ್ಲಿಯೂ ಗಮನ ಸೆಳೆದಿದೆ.

    ಜಯಂತ್ ಕಾಯ್ಕಿಣಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದಕ್ಕೆ ಅವರ ಪುತ್ರ ರಿತ್ವಿಕ್ ಮೆಲುವಾದ ಸಂಗೀತ ಸ್ಪರ್ಶ ನೀಡಿದ್ದಾರೆ. ಮೊದಲ ಹಾಡಿನ ಮೂಲಕ ಗಮನ ಸೆಳೆದಿದ್ದ ರಿತ್ವಿಕ್ ಕಾಯ್ಕಿಣಿ, ಎರಡನೇ ಈ ಹಾಡಿನ ಮೂಲಕ ಮತ್ತಷ್ಟು ಭರವಸೆ ಮೂಡಿಸಿರೋದು ಸತ್ಯ. ಮತ್ತೆ ಮತ್ತೆ ಕೇಳಿಸಿಕೊಂಡು, ವಿವರಿಸಲಾಗದಂಥಾ ಧ್ಯಾನಕ್ಕೆ ದೂಡುವ ಗುಣದ ಈ ಹಾಡು ಕೇಳುಗರನ್ನೆಲ್ಲ ಆವರಿಸಿಕೊಳ್ಳುವಂತೆ ಮೂಡಿ ಬಂದಿದೆ. ಹೀಗೆ ಹಾಡುಗಳ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಕೆಂಡ ಇದೇ ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ.

     

    ಈಗಾಗಲೇ ಗಂಟುಮೂಟೆ ಚಿತ್ರದ ಮೂಲಕ ನಿರ್ದೇಶಕಿಯಾಗಿ ನೆಲೆ ಕಂಡುಕೊಂಡಿರುವವರು ರೂಪಾ ರಾವ್. ಅವರು ಕೆಂಡದ ಮೂಲಕ ನಿರ್ಮಾಪಕಿಯಾಗಿ ರೂಪಾಂತರಗೊಂಡಿದ್ದಾರೆ. ಗಂಟುಮೂಟೆಯ ಭಾಗವಾಗಿದ್ದ ಸಹದೇವ್ ಕೆಲವಡಿ ಕೆಂಡದೊಂದಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಸಹದೇವ್ ಒಂದೊಳ್ಳೆ ಕಥೆಗೆ ಪರಿಣಾಮಕಾರಿಯಾಗಿ ದೃಷ್ಯರೂಪ ನೀಡಿರುವ ಸ್ಪಷ್ಟ ಲಕ್ಷಣಗಳು ಗೋಚರಿಸಿವೆ. ಇದೀಗ ಕೆಂಡದ ಎರಡನೇ ಹಾಡು ಬಿಡುಗಡೆಗೊಂಡಿದೆ. ಅದರ ಬೆನ್ನಲ್ಲಿಯೇ ಮತ್ತೊಂದಷ್ಟು ವಿಚಾರಗಳೊಂದಿಗೆ ಕೆಂಡದ ನಿಖರವಾದ ಬಿಡುಗಡೆ ದಿನಾಂಕ ಜನಾಹೀರಾಗುವ ಸಾಧ್ಯತೆಗಳಿದ್ದಾವೆ.

  • ‘ಕೆಂಡ’ ಚಿತ್ರದ ಆಡಿಯೋ ರೈಟ್ಸ್ ಡಿ ಬೀಟ್ಸ್ ತೆಕ್ಕೆಗೆ

    ‘ಕೆಂಡ’ ಚಿತ್ರದ ಆಡಿಯೋ ರೈಟ್ಸ್ ಡಿ ಬೀಟ್ಸ್ ತೆಕ್ಕೆಗೆ

    ಹದೇವ್ ಕೆಲವಡಿ (Sahadev Kelavadi) ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ (Kenda) ಚಿತ್ರದ ಕಡೆಯಿಂದ ಹಂತ ಹಂತವಾಗಿ ಒಂದಷ್ಟು ಅಚ್ಚರಿಯ ಸುದ್ದಿಗಳು ಜಾಹೀರಾಗುತ್ತಲೇ ಬರುತ್ತಿವೆ. ಗಂಟುಮೂಟೆ ಖ್ಯಾತಿಯ ರೂಪಾ ರಾವ್  (Roopa Rao) ನಿರ್ಮಾಣದ ಈ ಸಿನಿಮಾ ಎಲ್ಲ ರೀತಿಯತಿಂದಲೂ ಭಿನ್ನ ಜಾಡಿನದ್ದೆಂಬ ವಿಚಾರ ಈಗಾಗಲೇ ಪ್ರೇಕ್ಷಕ ವಲಯಕ್ಕೆ ದಾಟಿಕೊಂಡಿದೆ. ಇದೀಗ ಕೆಂಡದ ಆಡಿಯೋ ಹಕ್ಕುಗಳ ವಿಚಾರದಲ್ಲಿ ಖುಷಿಯ ಸಂಗತಿಯೊಂದನ್ನು ಚಿತ್ರತಂಡ ಹಂಚಿಕೊಂಡಿದೆ.

    ಹೆಸರಲ್ಲೇ ನಿಗಿನಿಗಿಸುವ ಆವೇಗವೊಂದನ್ನು ಬಚ್ಚಿಟ್ಟುಕೊಂಡಂತಿರೋ ಸಿನಿಮಾ `ಕೆಂಡ’. ಇದರ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರ ಸಂಗೀತ ನೀಡಿರುವ ಹಾಡಿಗಳ ಆಡಿಯೋ ರೈಟ್ಸ್ ಅನ್ನು ಡಿ ಬೀಟ್ಸ್ ಪಡೆದುಕೊಂಡಿದೆ. ಸಿನಿಮಾ ಮ್ಯೂಸಿಕ್ ವಲಯದಲ್ಲಿ ದೊಡ್ಡ ಹೆಸರು ಮಾಡಿರುವ ಸಂಸ್ಥೆ ಡಿ ಬೀಟ್ಸ್. ಖುದ್ದು ಸಂಗೀತ ನಿರ್ದೇಶಕ ಕಂ ಈ ಸಂಸ್ಥೆಯ ಮುಖ್ಯಸ್ಥರಾದ ವಿ. ಹರಿಕೃಷ್ಣ ಅವರೇ ಕೆಂಡದ ಹಾಡುಗಳನ್ನು ಕೇಳಿ, ಬಹುವಾಗಿ ಮೆಚ್ಚಿಕೊಂಡು ಆಡಿಯೋ ಹಕ್ಕುಗಳನ್ನು ಖರೀದಿಸಿದ್ದಾರೆ.

     

    ಈ ಸಂದರ್ಭದಲ್ಲಿ ಹರಿಕೃಷ್ಣ ಅವರ ಕಡೆಯಿಂದ ಬಂದಿರುವ ಮೆಚ್ಚುಗೆಯ ಮಾತುಗಳು ಚಿತ್ರತಂಡಕ್ಕೆ ಮತ್ತಷ್ಟು ಹುರುಪು ತುಂಬಿವೆ. ಎಲ್ಲ ರೀತಿಯಿಂದಲೂ ಈ ಹಾಡುಗಳು ಅದ್ಭುತವಾಗಿ ಮೂಡಿ ಬಂದಿವೆ ಎಂಬ ಅಭಿಪ್ರಾಯ ಹರಿಕೃಷ್ಣರ ಕಡೆಯಿಂದ ರವಾನೆಯಾಗಿದೆ. ಈ ಮೂಲಕ ಮೊದಲ ಹೆಜ್ಜೆಯಲ್ಲಿಯೇ ರಿತ್ವಿಕ್ ಕಾಯ್ಕಿಣಿ ಗಮನ ಸೆಳೆದಿದ್ದಾರೆ. ಅಂದಹಾಗೆ, ಕೆಂಡ ಹಾಡುಗಳಿಗೆ ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಅದರಲ್ಲೊಂದು ಹಾಡನ್ನು ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿರೋದು ವಿಶೇಷ. ಅದಿತಿ ಸಾಗರ್ ಕೂಡಾ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸದ್ಯಕ್ಕೆ ಇವಿಷ್ಟು ಮಾಹಿತಿಯನ್ನಷ್ಟೇ ಚಿತ್ರತಂಡ ಜಾಹೀರು ಮಾಡಿದೆ. ಮಿಕ್ಕುಳಿದ ಮಾಹಿತಿಗಳು ಇಷ್ಟರಲ್ಲಿಯೇ ಪ್ರೇಕ್ಷಕರನ್ನು ತಲುಪಿಕೊಳ್ಳಲಿವೆ.

  • ‘ಗ್ಯಾಂಗ್‌ಸ್ಟರ್’ ಸಿನಿಮಾ ನಿರ್ಮಿಸಿದ ಮೊದಲ ಮಹಿಳಾ ನಿರ್ಮಾಪಕಿ ರೂಪಾ ರಾವ್!

    ‘ಗ್ಯಾಂಗ್‌ಸ್ಟರ್’ ಸಿನಿಮಾ ನಿರ್ಮಿಸಿದ ಮೊದಲ ಮಹಿಳಾ ನಿರ್ಮಾಪಕಿ ರೂಪಾ ರಾವ್!

    ರೂಪಾ ರಾವ್ ಈ ಹೆಸರು ನಿಮ್ಮೆಲ್ಲರಿಗೂ ಚಿರಪರಿಚಿತವೇ. ಮೂಲತಃ ಬೆಂಗಳೂರಿನವರಾದ ರೂಪಾ ರಾವ್ ಮಹಿಳಾ ನಿರ್ದೇಶಕಿಯಾಗಿ ಗುರ್ತಿಸಿಕೊಂಡಿದ್ದಾರೆ. ಇಂಗ್ಲೀಷ್, ಹಿಂದಿ, ಜರ್ಮನ್ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ಶಾರ್ಟ್ಫಿಲ್ಮ್, ಡಾಕ್ಯೂಮೆಂಟರಿ, ವೆಬ್ ಸೀರೀಸ್ ಡೈರೆಕ್ಟ್ ಮಾಡಿ ಹೆಸರು ಮಾಡಿದ್ದಾರೆ. ಈ ಹಿಂದೆ ಕನ್ನಡದಲ್ಲಿ ‘ಗಂಟುಮೂಟೆ’ ಹೆಸರಲ್ಲೊಂದು ಸಿನಿಮಾ ಮಾಡಿದ್ದರು. ವಿಭಿನ್ನ ಕಥಾಹಂದರವುಳ್ಳ ಈ ಸಿನಿಮಾ ಕನ್ನಡಿಗರ ಮನಸೂರೆಗೊಂಡು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ಚಿತ್ರೋತ್ಸವಗಳಲ್ಲಿ ಸ್ಪರ್ಧೆ ಮಾಡಿತ್ತು. ಒಂದಿಷ್ಟು ಅವಾರ್ಡ್‌ಗಳನ್ನು ಕೊಳ್ಳೆಹೊಡೆಯೋ ಮೂಲಕ ನಿರ್ದೇಶಕಿ ರೂಪಾ ರಾವ್‌ಗೆ ಜನಪ್ರಿಯತೆಯ ಕಿರೀಟ ತೊಡಿಸಿತ್ತು. ಇದೀಗ ರೂಪಾ ರಾವ್ (Roopa Rao) ಮತ್ತೆ ಕನ್ನಡ ಕಲಾಭಿಮಾನಿಗಳನ್ನು ಎದುರುಗೊಳ್ಳಲು ರೆಡಿಯಾಗಿದ್ದಾರೆ. ಆದರೆ, ನಿರ್ದೇಶಕಿಯಾಗಿ ಅಲ್ಲ ಬದಲಾಗಿ ನಿರ್ಮಾಪಕಿಯಾಗಿ ಎಂಬುದು ವಿಶೇಷ.

    ಸಿನಿಮಾ ನಿರ್ಮಾಣ ಸುಲಭದ ಕೆಲಸವಲ್ಲ. ಚಿತ್ರಕ್ಕಾಗಿ ತಮ್ಮ ಮನೆಯ ಖಜಾನೆಯನ್ನೆಲ್ಲಾ ಖಾಲಿ ಮಾಡಿಕೊಳ್ಳುವುದು ಇದೆಯಲ್ಲ ಅದಕ್ಕೆ ಬಂಢ ಧೈರ್ಯ ಬೇಕು. ಆ ಎದೆಗಾರಿಕೆ ಒನ್ ಟು ಡಬ್ಬಲ್ ಇರುವುದರಿಂದಲೇ ನಿರ್ದೇಶಕಿ ರೂಪಾ ರಾವ್ ಗ್ಯಾಂಗ್‌ಸ್ಟರ್ (Gangstar) ಸಿನಿಮಾಗೆ ಕೈ ಹಾಕಿದ್ದಾರೆ. ಒಬ್ಬ ಮಹಿಳಾ ನಿರ್ಮಾಪಕಿಯಾಗಿ ನಯಾ ಸವಾಲೊಂದನ್ನು ಸ್ವೀಕರಿಸಿರುವ ರೂಪಾ ರಾವ್, ಭಾರತೀಯ ಚಿತ್ರರಂಗದಲ್ಲೇ ಗ್ಯಾಂಗ್ ಸ್ಟರ್ ಸಿನಿಮಾ ನಿರ್ಮಿಸ್ತಿರುವ ಮೊದಲ ಮಹಿಳಾ ನಿರ್ಮಾಪಕಿ ಎನ್ನುವ ಖ್ಯಾತಿಗೆ ಪಾತ್ರರಾಗಲು ಹೊರಟಿದ್ದಾರೆ. ಸಹದೇವ್ ಕೆಲವಡಿ ನಿರ್ದೇಶನದ ಪಕ್ಕಾ ಗ್ಯಾಂಗ್ ಸ್ಟರ್ ಕಥೆಯುಳ್ಳ ‘ಕೆಂಡ’ ಸಿನಿಮಾಗೆ ಬಂಡವಾಳ ಸುರಿದಿದ್ದಾರೆ. ವಿಶೇಷ ಅಂದರೆ ಈ ಸಿನಿಮಾ ಶೀರ್ಷಿಕೆಯಿಂದಲೇ ಸಿನಿದುನಿಯಾದಲ್ಲಿ ಸಾಕಷ್ಟು ಸದ್ದು ಮಾಡ್ತಿದೆ. ಮೋಷನ್ ಪೋಸ್ಟರ್‌ನಿಂದ ಸ್ಯಾಂಡಲ್‌ವುಡ್ ಅಂಗಳದಲ್ಲಿ ಸುದ್ದಿಯಾದ ‘ಕೆಂಡ’ ಈಗ ಕ್ಯಾರೆಕ್ಟರ್ ಟೀಸರ್‌ನಿಂದ ಸಮಸ್ತ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ.

    ಹೌದು, ಇತ್ತೀಚೆಗಷ್ಟೇ ‘ಕೆಂಡ’ (Kenda Film) ಕ್ಯಾರೆಕ್ಟರ್ ಟೀಸರ್ ಹೊರಬಿದ್ದಿದೆ. ಸಚ್ಚಾ, ಶರತ್ ಗೌಡ, ಪ್ರಣವ್ ಶ್ರೀಧರ್, ಬಿ.ವಿ ಭರತ್ ಅವರ ಮೊದಲ ನೋಟಕ್ಕೆ ಭರ್ಜರಿ ರೆಸ್ಪಾನ್ಸ್ ವ್ಯಕ್ತವಾಗ್ತಿದೆ. ಈ ಹುಡುಗರು ಹೊಸಬರಾದ್ರೂ ಕೂಡ ರಂಗಭೂಮಿಯಲ್ಲಿ ಪಳಗಿರುವುದರಿಂದ ಕನ್ನಡ ಕಲಾಭಿಮಾನಿಗಳ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ದುಗದಲವಿಲ್ಲದೇ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿ ಬ್ಯುಸಿಯಾಗಿರುವ ‘ಕೆಂಡ’ ಚಿತ್ರವನ್ನ ಈ ಹುಡುಗರು ಅದ್ದೂರಿಯಾಗಿ ಪ್ರಮೋಟ್ ಮಾಡ್ತಿದ್ದಾರೆ. ಕೆಂಪೇಗೌಡ್ರ ಕಣದಲ್ಲಿ ಅಖಾಡಕ್ಕಿಳಿದು ಕರಪತ್ರ ಹಂಚುವ ಮೂಲಕ ‘ಕೆಂಡ’ ಸಿನಿಮಾವನ್ನ ಕರುನಾಡಿನ ಮೂಲೆಮೂಲೆಗೆ ತಲುಪಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

    ವಿಶೇಷ ಅಂದರೆ ‘ಕೆಂಡ’ ಅಖಾಡ ಹೊಸಬರಿಂದಲೇ ಕೂಡಿದೆ. ರಂಗಭೂಮಿ ಪ್ರತಿಭೆಗಳು ಪ್ರಧಾನ ಪಾತ್ರ ವಹಿಸಿರುವುದರಿಂದ ‘ಕೆಂಡ’ ಕಣ ರಣರಣ ರಂಗೇರಿದೆ. ಬೆಂಗಳೂರಿನಂತಹ ಮಹಾನಗರಿಯಲ್ಲಿ ನಾನಾ ನಿರಾಸೆಗೊಳಗಾದ ಯುವ ಸಮೂಹ ವ್ಯವಸ್ಥೆಯ ವಿಷವ್ಯೂಹಕ್ಕೆ ಸಿಲುಕಿ ಹೇಗೆ ನರಳುತ್ತಿದೆ ಎಂಬುದನ್ನು, ರಾಜಕೀಯ ಹಾಗೂ ಅಪರಾಧದ ತನಿಖೆ ಮೂಲಕ ಜಗತ್ತಿನ ಮುಂದೆ ಹರವಿಡಲು ಸಹದೇವ್ ಕೆಲವಡಿಯವರು ‘ಕೆಂಡ’ ಚಿತ್ರ ಆಯ್ಕೆ ಮಾಡಿಕೊಂಡಿದ್ದಾರೆ. ನಿರ್ದೇಶಕ ಸಹದೇವ್ ಕೆಲವಡಿಯವರು ವಿದೇಶಗಳಲ್ಲಿ ಸಿನಿಮಾ ಬಗ್ಗೆ ಅಧ್ಯಯನ ನಡೆಸಿ ಬಂದು, ತನ್ನ ಮಾತೃ ಭಾಷೆಯಲ್ಲಿಯೇ ಸಿನಿಮಾ ಮಾಡಬೇಕೆಂಬ ಬಯಕೆ ಹೊಂದಿದ್ದವರು . ಅದರ ಆರಂಭಿಕ ಹೆಜ್ಜೆಯಾಗಿ ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರ್ ಹುಟ್ಟುಹಾಕಿದರು. ರೂಪಾ ರಾವ್ ನಿರ್ದೇಶನದ ‘ಗಂಟುಮೂಟೆ’ ಚಿತ್ರಕ್ಕೆ ಬಂಡವಾಳ ಹೂಡೋದ್ರ ಜೊತೆಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ನಿರ್ವಹಿಸಿದರು. ಆ ಚಿತ್ರ ಇಬ್ಬರಿಗೂ ಹೆಸರು ತಂದುಕೊಟ್ಟಿತ್ತು. ಇದೀಗ ಮತ್ತೊಮ್ಮೆ ಇವರಿಬ್ಬರು ‘ಕೆಂಡ’ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾದ ಮೂಲಕ ಸಹದೇವ್ ಕೆಲವಡಿ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಅಮೇಯುಕ್ತಿ ಬ್ಯಾನರ್ ಅಡಿಯಲ್ಲಿ ‘ಕೆಂಡ’ ತಯಾರಾಗಿದ್ದು, ಈ ಭಾರಿ ನಿರ್ಮಾಪಕಿಯಾಗಿ ರೂಪಾ ರಾವ್ (Roopa Rao) ಸಾಥ್ ಕೊಟ್ಟಿದ್ದಾರೆ.

    ಈ ಸಿನಿಮಾ ಮೂಲಕ ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ (Jayanth Kaikini) ಅವರ ಪುತ್ರ ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂತಹ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಸದ್ದಿಲ್ಲದೇ ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ನಲ್ಲಿ ತೊಡಗಿಸಿಕೊಂಡಿರುವ ‘ಕೆಂಡ’ ರೂವಾರಿಗಳು, ಸದ್ಯದಲ್ಲಿಯೇ ಟೀಸರ್ ಲಾಂಚ್ ಮಾಡಲು ತಯಾರಾಗುತ್ತಿದ್ದಾರೆ.ಅಚ್ಚರಿ ಅಂದರೆ ‘ಕೆಂಡ’ ಹಲವಾರು ಅಂತಾರಾಷ್ಟ್ರೀಯ ಫಿಲ್ಮ್ಂ ಫೆಸ್ಟಿವಲ್‌ಗಳಲ್ಲಿ ಮಿಂಚಲು ಅಣಿಗೊಳ್ಳುತ್ತಿದೆ. ಇದೇ ಹೊತ್ತಿನಲ್ಲಿ ನಿರ್ದೇಶಕಿಯಾಗಿಯೂ ಕ್ರಿಯಾಶೀಲರಾಗಿರುವ ರೂಪಾ ರಾವ್, ಸಣ್ಣ ಗ್ಯಾಪಿನಲ್ಲಿ ‘ಆಸ್ಮಿನ್’ ಎಂಬ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಅದು ಇಷ್ಟರಲ್ಲಿಯೇ ಓಟಿಟಿಯಲ್ಲಿ ಬಿಡುಗಡೆಗೊಳ್ಳಲಿದೆ. ಕೆಂಡ ಬಿಡುಗಡೆಯಾದ ಬೆನ್ನಲ್ಲೇ ರೂಪಾ ರಾವ್ ನಿರ್ದೇಶನದ ಬಿಗ್ ಬಜೆಟ್ ಚಿತ್ರ ಶುರು ಆಗಲಿದೆ.

  • ‘ಕೆಂಡ’ದಂತಹ ಸಿನಿಮಾ ಮಾಡಿದ ಸಹದೇವ್-ರೂಪಾ ರಾವ್

    ‘ಕೆಂಡ’ದಂತಹ ಸಿನಿಮಾ ಮಾಡಿದ ಸಹದೇವ್-ರೂಪಾ ರಾವ್

    ಕೆಂಡ, ಕೆಂಡದಂತಹ ಸಿನಿಮಾ ಮಾಡಬೇಕು, ಬೆಳ್ಳಿಭೂಮಿ ಮೇಲೆ ನಮ್ಮ ಸಿನಿಮಾ ಧಗಧಗಿಸಬೇಕು. ನಮ್ಮ ಮೂವೀ ಹಚ್ಚುವ ಕಿಚ್ಚಿಗೆ ಬಾಕ್ಸ್ ಆಫೀಸ್ ಖಲ್ಲಾಸ್ ಆಗ್ಬೇಕು ಅಂತ ಸಾಕಷ್ಟು ಸಿನಿಮಾಮಂದಿ ಕನಸು ಕಾಣ್ತಾರೆ. ಆದರೆ, ಇಲ್ಲೊಂದು ಚಿತ್ರತಂಡ `ಕೆಂಡ’ (Kenda) ಅಂತಾನೇ ಟೈಟಲ್ ಇಟ್ಕೊಂಡು ಕಣಕ್ಕಿಳಿದಿದೆ. ಬರೀ ಶೀರ್ಷಿಕೆಯಿಂದಲೇ ಕುತೂಹಲ ಕೆರಳಿಸುವಲ್ಲಿ, ಗಾಂಧಿನಗರದ ತುಂಬೆಲ್ಲಾ ಸದ್ದು ಸುದ್ದಿ ಮಾಡುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಮೂಲ ಕಾರಣ `ಕೆಂಡ’ ರೂವಾರಿಗಳಾದ ರೂಪಾ (Roopa Rao) ರಾವ್ ಹಾಗೂ ಸಹದೇವ್ ಕೆಲವಡಿ.

    ರೂಪಾ ರಾವ್ ಹಾಗೂ ಸಹದೇವ್ ಕೆಲವಡಿ (Sahadev Kelavadi) ಜೊತೆಗೂಡಿ ಕನ್ನಡದಲ್ಲಿ `ಗಂಟುಮೂಟೆ’ ಹೆಸರಿನ ಸಿನಿಮಾ ಮಾಡಿದ್ದರು. ನಿರ್ದೇಶನ ಮತ್ತು ನಿರ್ಮಾಣದ ಜವಾಬ್ದಾರಿ ಹೊತ್ತಿದ್ದ ರೂಪಾ ರಾವ್ ಜೊತೆ ಸಹದೇವ್ ಕೈ ಜೋಡಿಸಿದ್ದರು. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಚಿತ್ರಕ್ಕೆ ಬಂಡವಾಳ ಹೂಡುವುದರ ಜೊತೆಗೆ `ಗಂಟುಮೂಟೆ’ಗೆ ಕ್ಯಾಮೆರಾ ಕೈಚಳಕ ತೋರಿದ್ದರು. ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುವುದರ ಜೊತೆಗೆ ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್‍ನಲ್ಲಿ ಬೆಸ್ಟ್ ಸ್ಕ್ರೀನ್ ಪ್ಲೇ ಅವಾರ್ಡ್ ಮುಡಿಗೇರಿಸಿಕೊಂಡಿತ್ತು. ಈಗ ಎರಡನೇ ಪ್ರಯೋಗವೆಂಬಂತೆ ರೂಪಾ ರಾವ್ ಮತ್ತು ಸಹದೇವ್ ಕೆಲವಡಿ `ಕೆಂಡ’ದ ಮೂಲಕ ಅಖಾಡಕ್ಕಿಳಿಯಲು ರೆಡಿಯಾಗಿದ್ದಾರೆ.

    ವಿದೇಶಗಳಲ್ಲಿ ಸಿನಿಮಾ ಬಗ್ಗೆ ಅಧ್ಯಯನ ನಡೆಸಿ ಬಂದು, ತನ್ನ ಮಾತೃ ಭಾಷೆಯಲ್ಲಿಯೇ ಸಿನಿಮಾ ಮಾಡಬೇಕೆಂಬ ಬಯಕೆ ಹೊಂದಿದ್ದವರು ಸಹದೇವ್ ಕೆಲವಡಿ. ಅದರ ಆರಂಭಿಕ ಹೆಜ್ಜೆಯಾಗಿ ರೂಪಾ ರಾವ್ ಅವರ ಜೊತೆಗೂಡಿ ನಿರ್ಮಾಣ ಸಂಸ್ಥೆಗೆ ಚಾಲನೆ ನೀಡಿದ್ದರು. ಇದೀಗ ಅವರೇ ಕೆಂಡದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಇಂಗ್ಲಿಷ್, ಹಿಂದಿ, ಜರ್ಮನ್ ಹೀಗೆ ಪರಭಾಷೆಯಲ್ಲಿ ಶಾರ್ಟ್‍ಫಿಲ್ಮ್, ಡಾಕ್ಯೂಮೆಂಟರಿ, ವೆಬ್‍ಸೀರೀಸ್‍ಗಳನ್ನು ಮಾಡಿ ಸೈ ಎನಿಸಿಕೊಂಡು `ಗಂಟುಮೂಟೆ’ ಮೂಲಕ ಕನ್ನಡಿಗರಿಂದ ಭೇಷ್ ಎನಿಸಿಕೊಂಡ, ಬೆಂಗಳೂರು ಮೂಲದ ಮಹಿಳಾ ನಿರ್ದೇಶಕಿ ರೂಪಾ ರಾವ್ ಸಹದೇವ್‍ಗೆ ಸಾಥ್ ನೀಡಿದ್ದಾರೆ. ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲೇ `ಕೆಂಡ’ ಚಿತ್ರ ತಯ್ಯಾರಾಗಿದ್ದು, ಈಗಾಗಲೇ ಶೂಟಿಂಗ್ ಕಂಪ್ಲೀಟ್ ಆಗಿದೆ. ಗೌರಿ-ಗಣೇಶ ಹಬ್ಬಕ್ಕೆ ಸ್ಪೆಷಲ್ಲಾಗಿ ರಿಲೀಸ್ ಆಗಿರುವ ಮೋಷನ್ ಪೋಸ್ಟರ್ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದೆ. ಮತ್ತೊಂದು ಭಿನ್ನ ಕಥಾನಕದ ಚಿತ್ರ ಕನ್ನಡದ ಸಿನಿಮಾ ಪ್ರೇಮಿಗಳ ಮುಂದೆ ಬರಲು ಸಜ್ಜಾಗಿ ನಿಂತಿದೆ.

    ಬೆಂಗಳೂರಿನಂಥಾ ಮಹಾನಗರಿಯಲ್ಲಿ ನಾನಾ ನಿರಾಸೆಗೊಳಗಾದ ಯುವ ಸಮೂಹ, ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳನ್ನಿಟ್ಟುಕೊಂಡು ಈ ಚಿತ್ರ ತಯಾರುಗೊಂಡಿದೆ. ಫೌಂಡ್ರಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಹೇಗೆ ಈ ವ್ಯವಸ್ಥೆಯ ವಿಷ ವ್ಯೂಹಕ್ಕೆ ಸಿಲುಕುತ್ತಾನೆ, ಆತನನ್ನು ಪಟ್ಟಭದ್ರರು ಹೇಗೆಲ್ಲ ಬಳಸಿಕೊಳ್ಳುತ್ತಾರೆ,  ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಿತ್ಯಾದಿ ಕುತೂಹಲಕರ ತಿರುವುಗಳೊಂದಿಗೆ ‘ಕೆಂಡ’ ಚಿತ್ರ  ಕೆಂಡದಂತಾಗಿದೆ. ಒಟ್ಟಾರೆಯಾಗಿ, ಇದೊಂದು ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆ ಎಂಬಂಥಾ ತುಂಬು ಭರವಸೆ ಚಿತ್ರತಂಡದಲ್ಲಿದೆ.

    ವಿಶೇಷವೆಂದರೆ, ತಾರಾಗಣವೆಲ್ಲ ಹೊಸಬರಿಂದಲೇ ತುಂಬಿಕೊಂಡಿದೆ. ರಂಗಭೂಮಿ ಪ್ರತಿಭೆಗಳಿಲ್ಲಿ ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ರವೀಂದ್ರನ್, ಗೋಪಾಲ್ ಕೃಷ್ಣ ದೇಶಪಾಂಡೆ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಖ್ಯಾತ ಸಾಹಿತಿ ಜಯಂತ್ ಕಾಯ್ಕಿಣಿ ಅವರ ಪುತ್ರ ರಿತ್ವಿಕ್ ಕಾಯ್ಕಿಣಿ (Rithvik Kaykini) ಈ ಸಿನಿಮಾ ಮೂಲಕ ಸಂಗೀತ ನಿರ್ದೇಶಕರಾಗುತ್ತಿದ್ದಾರೆ. ಕಥೆಯೊಂದಿಗೇ ಹೊಸೆದುಕೊಂಡಂತಹ ಎರಡು ಹಾಡುಗಳಿಗೆ ಖುದ್ದು ಜಯಂತ್ ಕಾಯ್ಕಿಣಿ ಸಾಹಿತ್ಯ ಬರೆದಿದ್ದಾರೆ.

     

    ಆಸ್ಕರ್ ಪ್ರಶಸ್ತಿ ವಿಜೇತ ಎಲಿಫೆಂಟ್ ವಿಸ್ಪರರ್ಸ್ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್ ನಂಜಪ್ಪ ಕೆಂಡ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಗಂಟುಮೂಟೆಯಂಥಾ ಚೆಂದದ ಸಿನಿಮಾ ಕೊಟ್ಟಿದ್ದ ತಂಡವೇ ಕೆಂಡದ ಸಾರಥ್ಯ ವಹಿಸಿರೋದರಿಂದಾಗಿ, ಈ ಚಿತ್ರ ಒಂದಷ್ಟು ಕುತೂಹಲ ಮೂಡಿಸಿದೆ. ಯುವ ಸಮೂಹದ ಕನಸು, ನಿರಾಸೆ, ತವಕ ತಲ್ಲಣಗಳನ್ನು ಹೊಂದಿರುವ ಈ ಚಿತ್ರ ಈಗಾಗಲೇ ಚಿತ್ರೀಕರಣ ಮುಗಿಸಿಕೊಂಡಿದೆ. ಪೋಸ್ಟ್ ಪ್ರೊಡಕ್ಷನ್ ಕಾರ್ಯವೂ ಅಂತಿಮ ಘಟ್ಟದಲ್ಲಿದೆ. ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆಯ ದಿನಾಂಕ ಅನೌನ್ಸ್ ಆಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಗಂಟುಮೂಟೆ’ ನೋಡಿ ರಕ್ಷಿತ್ ಶೆಟ್ಟಿ ಹೇಳಿದ್ದೇನು?

    ‘ಗಂಟುಮೂಟೆ’ ನೋಡಿ ರಕ್ಷಿತ್ ಶೆಟ್ಟಿ ಹೇಳಿದ್ದೇನು?

    ಬೆಂಗಳೂರು: ರೂಪಾ ರಾವ್ ನಿರ್ದೇಶನದ ಚೊಚ್ಚಲ ಚಿತ್ರವಾದ ಗಂಟುಮೂಟೆಯೀಗ ರಾಜ್ಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಬಾಯಿಂದ ಬಾಯಿಗೆ ಹರಡಿಕೊಂಡ ಸದಾಭಿಪ್ರಾಯಗಳೇ ಹೊಸಬರ ಹೊಸಾ ಪ್ರಯತ್ನವಾಗಿ ಮೂಡಿ ಬಂದಿರೋ ಈ ಚಿತ್ರ ಮ್ಯಾಜಿಕ್ಕು ಮಾಡಲು ಪ್ರೇರೇಪಣೆ ನೀಡಿದೆ. ಇದೀಗ ಎಲ್ಲೆಡೆ ಪಾಸಿಟಿವ್ ಟಾಕ್ ಕ್ರಿಯೇಟ್ ಮಾಡಿರೋ ಈ ಚಿತ್ರದತ್ತ ನಟ ನಟಿಯರೂ ಚಿತ್ರ ಹರಿಸುತ್ತಿದ್ದಾರೆ. ಸದ್ಯ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಗಂಟುಮೂಟೆಯನ್ನು ಕಣ್ತುಂಬಿಕೊಂಡಿದ್ದಾರೆ. ಒಂದು ಅಪರೂಪದ ಮಹಿಳಾ ಪ್ರಧಾನ ಚಿತ್ರವನ್ನು ನೋಡಿದ ಖುಷಿ ಅನುಭವಿಸಿರೋ ರಕ್ಷಿತ್ ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ‘ಗಂಟುಮೂಟೆ ಅತ್ಯಂತ ವಿರಳ ಕಥಾ ಹಂದರದ ಮಹಿಳಾ ಪ್ರಧಾನ ಕಥೆಯನ್ನೊಳಗೊಂಡಿರುವ ಚಿತ್ರ. ಇದು ನಮಗೆ ಅಪರಿಚಿತ ಎನ್ನಬಹುದಾದ ಜಗತ್ತನ್ನ ನಮ್ಮೆದುರು ಬಿಚ್ಚಿಡುವ ಪರಿಯೇ ಅಚ್ಚರಿಯಂಥಾದ್ದು. ಗಂಟುಮೂಟೆ ಅಭಿವ್ಯಕ್ತಗೊಳಿಸಲು ಅಸಾಧ್ಯವಾದಂಥಾ ಅಂಶಗಳ ಮೂಲಕ ಅದ್ಭುತ ಕವಿತೆಯಂತೆಯೇ ರೂಪುಗೊಂಡಿದೆ. ಇದರೊಳಗಿನ ಪ್ರತೀ ಪಾತ್ರಗಳೂ ಅದ್ಭುತ ಲೋಕದೊಳಗೆ ಕರೆದೊಯ್ಯುತ್ತದೆ. ಇದು ನೀವೆಲ್ಲ ನೋಡಲೇ ಬೇಕಾದ ಚಿತ್ರ’ ಎಂದು ರಕ್ಷಿತ್ ಶೆಟ್ಟಿ ಅಭಿಪ್ರಾಯ ಪಟ್ಟಿದ್ದಾರೆ.

    ರಕ್ಷಿತ್ ಶೆಟ್ಟಿ ಭಿನ್ನ ಅಭಿರುಚಿ ಹೊಂದಿರುವ ನಟ. ಅವರೊಳಗೊಬ್ಬ ಅದೇ ನೆಲೆಯ ನಿರ್ದೇಶಕನಿದ್ದಾನೆ. ಅಂಥಾ ರಕ್ಷಿತ್ ಶೆಟ್ಟಿಯವರೇ ಗಂಟುಮೂಟೆಯನ್ನು ನೋಡಿ ಬೆರಗಾಗಿದ್ದಾರೆಂದರೆ ಈ ಸಿನಿಮಾದ ನಿಜವಾದ ಕಸುವೇನೆಂಬುದು ಯಾರಿಗಾದರೂ ಅರ್ಥವಾಗದಿರೋದಿಲ್ಲ. ಇದೀಗ ಅವನೇ ಶ್ರೀಮನ್ನಾರಾಯಣ ಚಿತ್ರದ ಕೆಲಸ ಕಾರ್ಯದಲ್ಲಿ ಬ್ಯುಸಿಯಾಗಿರೋ ರಕ್ಷಿತ್, ಅದರ ನಡುವೆಯೂ ಈ ಚಿತ್ರವನ್ನು ನೋಡಿ ಖುಷಿಗೊಂಡಿದ್ದಾರೆ. ಗಂಟುಮೂಟೆ ನೋಡಿದ ಪ್ರತೀ ಪ್ರೇಕ್ಷಕರೂ ಕೂಡಾ ಇದೇ ರೀತಿ ಥ್ರಿಲ್ ಆಗಿದ್ದಾರೆ. ನಿರ್ದೇಶಕಿ ರೂಪಾ ರಾವ್ ಈ ಚಿತ್ರವನ್ನು ರೂಪಿಸಿರೋ ರೀತಿಯೇ ಅಂಥಾದ್ದಿದೆ. ಅಂತೂ ಈ ಸಿನಿಮಾ ಅಪರೂಪದ ಕಥನದೊಂದಿಗೆ ಅಚ್ಚರಿದಾಯಕ ಗೆಲುವನ್ನು ತನ್ನದಾಗಿಸಿಕೊಂಡಿದೆ.

  • ಗಂಟುಮೂಟೆ: ಇಂಥಾ ಕಥೆಯನ್ನು ನೀವೆಂದೂ ನೋಡಿರಲು ಸಾಧ್ಯವಿಲ್ಲ!

    ಗಂಟುಮೂಟೆ: ಇಂಥಾ ಕಥೆಯನ್ನು ನೀವೆಂದೂ ನೋಡಿರಲು ಸಾಧ್ಯವಿಲ್ಲ!

    ವಾರವೇ ಬಿಡುಗಡೆಗೊಳ್ಳುತ್ತಿರುವ ರೂಪಾ ರಾವ್ ನಿರ್ದೇಶನದ ಚಿತ್ರ ಗಂಟುಮೂಟೆ. ಈಗಾಗಲೇ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿ ಮತ್ತು ಮೆಚ್ಚುಗೆ ಪಡೆದುಕೊಂಡಿರೋ ಈ ಚಿತ್ರವನ್ನು ಈಗಾಗಲೇ ಚಿತ್ರರಂಗದ ಅನೇಕ ಗಣ್ಯರಿಗೂ ತೋರಿಸಲಾಗಿದೆ. ಹಾಗೆ ನೋಡಿದವರ ಕಣ್ಣುಗಳಲ್ಲಿ ಇದುವರೆಗೂ ನೋಡಿರದಿದ್ದ ಶೈಲಿಯ ಚಿತ್ರವೊಂದನ್ನು ಕಣ್ತುಂಬಿಕೊಂಡ ಖುಷಿಯೇ ಲಾಸ್ಯವಾಡಿದೆ. ಇದನ್ನು ನೋಡಿದ ಕನ್ನಡದ ಕೆಲ ಯಶಸ್ವಿ ನಿರ್ದೇಶಕರಂತೂ ಇಂಥಾ ಕಥೆ ಮತ್ತು ನಿರೂಪಣೆಯ ಚಿತ್ರವನ್ನು ತಾವೆಂದೂ ನೋಡಿಲ್ಲ ಎಂದು ಮನಸಾರೆ ಹೊಗಳಿದ್ದಾರೆ.

    ತೀರಾ ನುರಿತ ನಿರ್ದೇಶಕರೇ ಈ ಪಾಟಿ ಮೆಚ್ಚಿಕೊಳ್ಳುತ್ತಾರೆಂದರೆ ಗಂಟುಮೂಟೆಯೊಳಗೆ ಎಂತೆಂಥಾ ತಾಜಾ ಸರಕುಗಳಿರಬಹುದೆಂದು ಯಾರಿಗಾದರೂ ಅಂದಾಜು ಸಿಗುತ್ತದೆ. ಇದೆಲ್ಲವೂ ರೂಪಾ ರಾವ್ ಮತ್ತು ಚಿತ್ರತಂಡಕ್ಕೆ ಗೆಲುವಿನ ಭರವಸೆಯನ್ನೂ ಮೂಡಿಸಿವೆ. ರೂಪಾ ರಾವ್ ಪಾಲಿಗಿದು ಮೊದಲ ಚಿತ್ರ. ಈವರೆಗೆ ನಿರ್ದೇಶನ ವಿಭಾಗದಲ್ಲಿ ಸಾಕಷ್ಟು ಪಳಗಿಕೊಂಡಿರುವ ಇವರು ವೆಬ್ ಸೀರೀಸ್, ಕಿರುಚಿತ್ರಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಗಂಟುಮೂಟೆಯೊಂದಿಗೆ ನಿರ್ದೇಶಕಿಯಾಗಿ ಆಗಮಿಸಿರುವ ಅವರ ಮುಂದೀಗ ಎಲ್ಲ ದಿಕ್ಕಿನಲ್ಲಿಯೂ ಸದಾಭಿಪ್ರಾಯಗಳೇ ಬಂದು ಮುತ್ತಿಕೊಳ್ಳುತ್ತಿವೆ.

    ರೂಪಾ ರಾವ್ ಗಂಟುಮೂಟೆಯಲ್ಲಿ ಅಚ್ಚರಿಗೊಳ್ಳುವಂಥಾ ಅಂಶಗಳನ್ನು ಕಟ್ಟಿಟ್ಟಿದ್ದಾರೆಂಬುದು ಈಗಾಗಲೇ ಎಲ್ಲರಿಗೂ ಗೊತ್ತಾಗಿದೆ. ಅದರ ಕೆಲ ಚಹರೆಗಳು ಮಾತ್ರವೇ ಟ್ರೇಲರ್ ಮೂಲಕ ಕಾಣಿಸಿದೆ. ಹೈಸ್ಕೂಲು ದಿನಗಳನ್ನು ಹಾದು ಬಂದ ಬಹುತೇಕರ ಎದೆಯಲ್ಲಿ ಒಂದು ನವಿರು ಪ್ರೇಮದ ಭಾವವಿರುತ್ತೆ. ಆ ನೆನಪುಗಳೂ ಇರುತ್ತವೆ. ಇದರಲ್ಲಿ ಘಟಿಸೋ ತೊಂಭತ್ತರ ದಶಕದ ಪ್ರೇಮಕಥೆ ಅದೆಲ್ಲವನ್ನೂ ಬಡಿದೆಬ್ಬಿಸೋದು ಗ್ಯಾರೆಂಟಿ. ಹದಿಹರೆಯದ ಹೊಸ್ತಿಲ ಪ್ರೀತಿ, ಪ್ರೇಮ, ಭ್ರಮೆ, ವಾಸ್ತವಗಳ ಚಿತ್ರಣ ಹೊಂದಿರೋ ಈ ಚಿತ್ರ ಕಮರ್ಶಿಯಲ್ ಫಾರ್ಮುಲಾಗಳನ್ನೂ ಲೇಪಿಸಿಕೊಂಡೇ ತಯಾರಾಗಿದೆ. ಇದು ಈ ವಾರವೇ ತೆರೆಗಾಣುತ್ತಿದೆ.