Tag: Rope

  • ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್

    ಶವಸಂಸ್ಕಾರದ ವೇಳೆ ಕೊಲೆ ಶಂಕೆ ಪ್ರಕರಣಕ್ಕೆ ಟ್ವಿಸ್ಟ್ – ಪತ್ನಿಯೇ ಮಾಸ್ಟರ್‌ಮೈಂಡ್

    ರಾಯಚೂರು: ಶವಸಂಸ್ಕಾರದ ವೇಳೆ ಶಂಕೆ ಮೂಡಿ ದೂರು ದಾಖಲಿಸಲಾಗಿದ್ದ ಲಾಲ್ ಸಾಬ್ ಕೊಲೆ ಪ್ರಕರಣದಲ್ಲಿ ಪತ್ನಿಯೇ ಮಾಸ್ಟರ್‌ಮೈಂಡ್ ಆಗಿರುವುದು ಬೆಳಕಿಗೆ ಬಂದಿದೆ.

    ಈ ಸಂಬಂಧ ಮೃತ ಲಾಲ್ ಸಾಬ್ ಪತ್ನಿ ಹಾಗೂ ಆಕೆಯ ಪ್ರಿಯಕರ ಅನ್ವರ್ ಭಾಷನನ್ನು ಗಬ್ಬೂರು ಠಾಣೆಯ ಪೊಲೀಸರು (Gabbur Police Station) ಬಂಧಿಸಿದ್ದಾರೆ. ತನಿಖೆ ವೇಳೆ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ತಾನೇ ಸಂಚು ರೂಪಿಸಿರುವುದಾಗಿ ಬಾಯ್ಬಿಟ್ಟಿದ್ದಾಳೆ. ಈ ವಿಚಾರವಾಗಿ ಸಂಬಂಧದಲ್ಲಿ ಸಹೋದರನಾಗುವ ಪ್ರಿಯಕರನಿಗೆ ಪತಿಯ ಚಲನವಲನದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಳು. ಇದನ್ನೇ ಆಧರಿಸಿ ಮದ್ಯಪಾನ ಮಾಡಿಸಿ ಕುತ್ತಿಗೆಗೆ ಹಗ್ಗ (Rope) ಬಿಗಿದು ಕೊಲೆ ಮಾಡಿದ್ದಾಗಿ ಅನ್ವರ್ ಭಾಷ ಕೂಡ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಶವ ಸಂಸ್ಕಾರದ ವೇಳೆ ಕುತ್ತಿಗೆಯಲ್ಲಿ ಹಗ್ಗದ ಗುರುತು ಪತ್ತೆ – ಈಗ ಕೊಲೆ ಕೇಸ್ ದಾಖಲು

    ಏನಿದು ಪ್ರಕರಣ?
    ಮೇ 24 ರಂದು ದೇವದುರ್ಗದ (Devadurga) ಸುಂಕೇಶ್ವರಹಾಳದ (Sunkeshwarhal) ರಸ್ತೆಯಲ್ಲಿ ಲಾಲ್ ಸಾಬ್ ಮೃತ ದೇಹ ಪತ್ತೆಯಾಗಿತ್ತು. ಎಲ್ಲರೂ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎಂದು ಶವಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಶವಸಂಸ್ಕಾರದ ವೇಳೆ ಕತ್ತಿನಲ್ಲಿ ಹಗ್ಗದ ಗುರುತು ಪತ್ತೆಯಾಗಿತ್ತು. ಬಳಿಕ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

    ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸೈಟ್ ವಿಚಾರಕ್ಕೆ ಗ್ರಾಮಪಂಚಾಯ್ತಿ ಸಿಬ್ಬಂದಿಯಿಂದ ಮಹಿಳೆಗೆ ಚಾಕು ಇರಿತ

  • 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ಸೇತುವೆಯನ್ನು ಅಲುಗಾಡಿಸಿದ್ದೆ ದುರಂತಕ್ಕೆ ಕಾರಣ: ಪ್ರತ್ಯಕ್ಷದರ್ಶಿ

    ಗಾಂಧಿನಗರ: ಸುಮಾರು 15-20 ಹುಡುಗರು ಉದ್ದೇಶಪೂರ್ವಕವಾಗಿ ಮೋರ್ಬಿ ತೂಗುಸೇತುವೆ (Morbi Bridge) ಅಲುಗಾಡಿಸಿದ್ದರಿಂದ ಅವಘಡ ಸಂಭವಿಸಿದೆ ಎಂದು ಘಟನೆಯಲ್ಲಿ ಬದುಕುಳಿದವರು ಆರೋಪಿಸಿದ್ದಾರೆ.

    ಭಾನುವಾರ ಸಂಜೆ 6:30ರ ಸುಮಾರಿಗೆ ಸೇತುವೆ ಕುಸಿದು 132 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೋರ್ಬಿ ಸೇತುವೆ ಕುಸಿತದಿಂದ ಗಾಯಗೊಂಡು ಬದುಕುಳಿದವರೆಲ್ಲರನ್ನು ಜಿಎಂಇಆರ್‌ಎಸ್ (GMERS) ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಹೇಗಾಯ್ತು ಎಂಬುದರ ಬಗ್ಗೆ ಪ್ರತ್ಯಕ್ಷದರ್ಶಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಅಜ್ಜಿಯ ಅಖಂಡ ಭಾರತದ ಕನಸನ್ನು ಈಡೇರಿಸುತ್ತೇನೆ: ರಾಹುಲ್ ಗಾಂಧಿ ಭಾವನಾತ್ಮಕ ಪೋಸ್ಟ್

    ಸುಮಾರು 15-20 ಕಿಡಿಗೇಡಿಗಳು ಸೇತುವೆಯ ಹಗ್ಗಗಳನ್ನು ಉದ್ದೇಶಪೂರ್ವಕವಾಗಿ ಅಲುಗಾಡಿಸುತ್ತಿದ್ದರು. ಹೀಗಾಗಿ ಸೇತುವೆ ಕುಸಿಯುವ ಮುನ್ನ ಮೂರು ಬಾರಿ ಜೋರಾಗಿ ಶಬ್ದ ಕೇಳಿ ಬಂತು. ನಾನೂ ಕೆಳಗೆ ಬಿದ್ದೆ. ಆದರೆ ನಾನು ಬೀಳುವಾಗ ಸೇತುವೆಯ ಸುತ್ತಲೂ ಇದ್ದ ರೋಪ್ ಹಿಡಿದಿದ್ದೆ. ನನ್ನ ಜೊತೆಯಲ್ಲಿ ನನ್ನ ಸ್ನೇಹಿತನೂ ಇದ್ದ. ಸುಮಾರು ಏಳು ಜನ ರೋಪ್ ಅನ್ನು ಹಿಡಿದು ಮೇಲಕ್ಕೆ ಏರಲು ಆರಂಭಿಸಿದರು. ಘಟನೆ ವೇಳೆ ನನ್ನ ಕಾಲು ಮತ್ತು ಬೆನ್ನಿಗೆ ಗಾಯಗಳಾಗಿದ್ದು, ಇದೀಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅಶ್ವಿನ್ ಮೆಹ್ರಾ ಎಂಬವರು ಹೇಳಿದ್ದಾರೆ.

    ಅಹಮದಾಬಾದ್ (Ahlahabad) ನಿವಾಸಿ ವಿಜಯ್ ಗೋಸ್ವಾಮಿ ಮತ್ತು ಅವರ ಕುಟುಂಬಸ್ಥರು ಸಹ ತೂಗು ಸೇತುವೆಗೆ ಭೇಟಿ ನೀಡಿದ್ದರು. ಆದರೆ ಕೆಲವು ಯುವಕರು ಉದ್ದೇಶಪೂರ್ವಕವಾಗಿ ಸೇತುವೆಯನ್ನು ಅಲುಗಾಡಿಸಿದ್ದರಿಂದ ಅರ್ಧದಾರಿಯಲ್ಲೇ ಹಿಂತಿರುಗಿದರು. ಬ್ರಿಟಿಷರ ಕಾಲದ ಈ ಸೇತುವೆಯನ್ನು ನವೀಕರಣಗೊಳಿಸಿ ಕಳೆದ ನಾಲ್ಕು ದಿನಗಳ ಹಿಂದೆಯಷ್ಟೇ ಸಾರ್ವಜನಿಕರಿಗಾಗಿ ಪುನಃ ತೆರೆಯಲಾಗಿತ್ತು. ಇದನ್ನೂ ಓದಿ: ಪೊಲೀಸರೇ ಪ್ಲೀಸ್ ನಮ್ಮನ್ನು ಕಳ್ಳರಿಂದ ಕಾಪಾಡಿ – ಕುರಿಗಳಿಂದ ವಿನೂತನ ಪ್ರತಿಭಟನೆ

    ಖಾಸಗಿ ಕಂಪನಿಯೊಂದು ಸೇತುವೆ ದುರಸ್ತಿ ಕಾರ್ಯ ನಡೆಸಿತ್ತು. ನವೀಕರಣ ಕಾಮಗಾರಿ ಮುಗಿದ ಬಳಿಕ ಸಾರ್ವಜನಿಕರು ಓಡಾಟಕ್ಕೆ ತೆರಯಲಾಗಿತ್ತು. ಆದರೆ ಸ್ಥಳೀಯ ಪುರಸಭೆ ನವೀಕರಣ ಕಾರ್ಯದ ನಂತರ ಯಾವುದೇ ಫಿಟ್‍ನೆಸ್ ಪ್ರಮಾಣಪತ್ರವನ್ನು ನೀಡಿರಲಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು

    ಕೊಚ್ಚಿ ಹೋಗುತ್ತಿದ್ದಾಗ ಹಗ್ಗ ನೀಡಿದ್ರೂ ಬಾರದ ಯುವಕ – ಹೃದಯಾಘಾತದಿಂದ ಸಾವು

    ಕಲಬುರಗಿ: ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಯುವನೋರ್ವ ಭಯಗೊಂಡು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಕೂಕಿನ ಚಂದನಲ್ಲಿ ಗ್ರಾಮದ ಬಳಿ ನಡೆದಿದೆ.

    ಸಾವನ್ನಪ್ಪಿದ ಯುವಕನನ್ನು ಪೀರಶೆಟ್ಟಿ (29) ಎಂದು ಗುರುತಿಸಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆ ನೀರಿನಿಂದ ಹಳ್ಳ ಕೊಳ್ಳಗಳು ತುಂಬಿ ರಭಸದಿಂದ ಹರಿಯುತ್ತಿವೆ. ಈ ಸಮಯದಲ್ಲಿ ಹಳ್ಳ ದಾಟಲು ಹೋದ ಪೀರಶೆಟ್ಟಿ ನೀರನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ.

    ಆದರೆ ಹಳ್ಳಕ್ಕೆ ಆಡಲಾಗಿ ಹಾಕಿದ್ದ ಕಂಬವನ್ನು ಹಿಡಿದು ಪೀರಶೆಟ್ಟಿ ನೀರಿನ ಮಧ್ಯದಲ್ಲಿ ನಿಂತುಕೊಂಡಿದ್ದಾನೆ. ಈ ವೇಳೆ ಆತನಿಗೆ ಸ್ಥಳದಲ್ಲಿದ್ದ ಕೆಲವರು ಹಗ್ಗ ನೀಡಿದ್ದಾರೆ. ನೀರಿನ ರಭಸಕ್ಕೆ ಭಯಗೊಂಡ ಯುವಕ ಹಗ್ಗ ಹಿಡಿದು ಮೇಲೆ ಬಂದಿಲ್ಲ. ಆದರೆ ಕೆಲ ಸಮಯದ ನಂತರ ಭಯದಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾನೆ. ಈ ವೇಳೆ ಯುವಕನನ್ನು ರಕ್ಷಿಸಲು ಆತನ ಸಹೋದರ ಕೂಡ ನೀರಿಗೆ ಇಳಿದಿದ್ದಾರೆ. ಆದರೆ ನೀರಿನ ರಭಸಕ್ಕೆ ಅವರು ಕೊಚ್ಚಿಹೋಗಿದ್ದು, ನಂತರ ಕಷ್ಟಪಟ್ಟು ಈಜಿ ದಡ ಸೇರಿದ್ದಾರೆ.

    ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಹಗ್ಗ ತಂದ ಸಾವು- ನೀರಿನಲ್ಲಿ ಕೊಚ್ಚಿಹೋದ ಯುವಕ

    ಹಗ್ಗ ತಂದ ಸಾವು- ನೀರಿನಲ್ಲಿ ಕೊಚ್ಚಿಹೋದ ಯುವಕ

    ಕಾರವಾರ: ಜಾನುವಾರು ಮೈತೊಳೆಯಲು ಹೋದ ಯುವಕನೊಬ್ಬ ಎತ್ತಿಗೆ ಕಟ್ಟಿದ್ದ ಹಗ್ಗ ಕಾಲಿಗೆ ಸಿಲುಕಿದನ್ನು ಬಿಡಿಸಿಕೊಳ್ಳಲು ಹೋಗಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಯರೆಬೈಲಿನ ಬೇಡ್ತಿ ಹಳ್ಳದಲ್ಲಿ ಈ ಘಟನೆ ನಡೆದಿದೆ.

    ದ್ಯಾಮಣ್ಣ ನೀರುಪಾಲಾದ ಯುವಕ. ದ್ಯಾಮಣ್ಣ ಇಂದು ಜಾನುವಾರುಗಳನ್ನು ಮೇಯಿಸಲು ಹಳ್ಳದ ಬಳಿ ಹೋಗಿದ್ದರು. ಈ ವೇಳೆ ತನ್ನ ಎತ್ತುಗಳನ್ನು ನೀರಿನಲ್ಲಿ ನಿಲ್ಲಿಸಿಕೊಂಡು ಎತ್ತಿನ ಮೈ ತೊಳೆಯುತ್ತಿರುವಾಗ ಎತ್ತಿಗೆ ಕಟ್ಟಿದ ಹಗ್ಗವು ಕಾಲಿಗೆ ಸಿಲುಕಿಕೊಂಡಿದೆ. ಹಗ್ಗವನ್ನು ಬಿಡಿಸಿಕೊಳ್ಳುವಾಗ ಆಯತಪ್ಪಿ ನೀರಿನೊಳಗೆ ಬಿದ್ದಿದ್ದು, ಹಳ್ಳದ ನೀರಿನ ಹರಿವು ಹೆಚ್ಚಾಗಿದ್ದರಿಂದ ಕೊಚ್ಚಿ ಹೋಗಿದ್ದಾರೆ.

    ಮಳೆ ಬಂದಾಗ ಹಳ್ಳ ತುಂಬಿ ಹರಿಯುತ್ತಿರುವ ವೇಳೆ ದ್ಯಾಮಣ್ಣ ಸೆಲ್ಫಿ ತೆಗೆದುಕೊಂಡಿದ್ದರು. ಇಂದು ಅದೇ ಹಳ್ಳದಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ಯುವಕನ ಶವವನ್ನು ಹೊರ ತೆಗೆದಿದ್ದಾರೆ. ಈ ಸಂಬಂಧ ಮುಂಡಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 245 ಮಂದಿ ಸೇತುವೆಯಿಂದ ಜಿಗಿಯೋ ವಿಡಿಯೋ ನೋಡಿ

    245 ಮಂದಿ ಸೇತುವೆಯಿಂದ ಜಿಗಿಯೋ ವಿಡಿಯೋ ನೋಡಿ

    ರಿಯೋ ಡಿ ಜನೈರೋ: ಬ್ರೆಜಿಲ್ ನಲ್ಲಿ 245 ಜನರು ಏಕಕಾಲದಲ್ಲಿ ಸೇತುವೆಯಿಂದ ಜಿಗಿದು ವಿಶ್ವದಾಖಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ.

    ಹೊರ್ಟೊಲ್ಯಾಂಡ್ ಎಂಬಲ್ಲಿ ಪುರುಷರು, ಮಹಿಳೆಯರು ಸೇರಿ ಒಟ್ಟು 245 ಮಂದಿ 30 ಮೀಟರ್ ಎತ್ತರದ ಸೇತುವೆಯನ್ನು ಏಕ ಕಾಲದಲ್ಲಿ ಹಗ್ಗದ ಮೂಲಕ ಜಿಗಿದು ಸಾಹಸ ಮೆರೆದಿದ್ದಾರೆ.

    ಈ ಹಿಂದೆ 2016 ಏಪ್ರಿಲ್ ನಲ್ಲಿ ಇದೇ ಸೇತುವೆಯಿಂದ 149 ಜನರು ಏಕಕಾಲದಲ್ಲಿ ಜಿಗಿದು ಗಿನ್ನಿಸ್ ದಾಖಲೆ ನಿರ್ಮಿಸಿದ್ದರು. ಆ ದಾಖಲೆಯನ್ನು ಈಗ 245 ಮಂದಿ ಮುರಿದಿದ್ದಾರೆ.