ಇತ್ತೀಚೆಗಷ್ಟೇ ರೋಶನ್ (Roshan) ಜೊತೆ ಮದುವೆಯಾದ ಆ್ಯಂಕರ್ ಅನುಶ್ರೀ (Anushree) ದಾಂಪತ್ಯ ಜೀವನದ ಖುಷಿಯಲ್ಲಿದ್ದಾರೆ. ಮದುವೆ ಬಳಿಕ ಪತಿ ಜೊತೆ ಪ್ರವಾಸ ಮಾಡ್ತಿರುವ ಫೋಟೋಗಳನ್ನ ಇತ್ತೀಚೆಗೆ ಅನುಶ್ರೀ ಹಂಚಿಕೊಂಡಿದ್ದರು. ಈಗ ಪತಿ ಅಡುಗೆ ಮಾಡಿ ತಮಗೆ ತಿನ್ನಿಸಿರುವ ವೀಡಿಯೋ ಹಂಚಿಕೊಂಡಿದ್ದಾರೆ.
ಮದುವೆ ಶಾಸ್ತ್ರದ ಬಳಿಕ ಮಾಧ್ಯಮದ ಜೊತೆ ಅನುಶ್ರೀ ಮಾತನಾಡುತ್ತಾ ಪತಿ ರೋಶನ್ ಚೆನ್ನಾಗಿ ಅಡುಗೆ ಮಾಡ್ತಾರೆ. ನಾನು ಆರಾಮಾಗಿ ತಿನ್ಕೊಂಡ್ ಇರ್ತೀನಿ ಎಂದು ಹೇಳಿ ನಕ್ಕಿದ್ದರು.
ಇದೀಗ ಅದೇ ಚಿತ್ರಣವನ್ನ ತೋರಿಸಿದ್ದಾರೆ. ರೋಶನ್ ತಮ್ಮ ಕೈಯಾರೇ ನುಗ್ಗೆಸೊಪ್ಪಿನ ಎಗ್ಬುರ್ಜಿ ಮಾಡಿ ದೋಸೆ ಜೊತೆ ಅನುಶ್ರೀಗೆ ತಿನ್ನಿಸಿದ್ದಾರೆ. ಈ ವೀಡಿಯೋವನ್ನ ಅನುಶ್ರೀ ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬಿಗ್ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!
ಕಳೆದ ಆಗಸ್ಟ್ 28 ರಂದು ಅನುಶ್ರೀ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ರೋಶನ್ ಜೊತೆ ವಿವಾಹವಾಗಿದ್ದರು. ಇದೀಗ ಮದುವೆಯ ನಂತರದ ಸುಖೀ ಜೀವನದ ದರ್ಶನವನ್ನ ಪ್ರಪಂಚದ ಮುಂದೆ ತೆರೆದಿಟ್ಟಿದ್ದಾರೆ.
– ಅನುಶ್ರೀಗಾಗಿ ಬಿರಿಯಾನಿ, ಫಿಶ್ ಫ್ರೈ ಮಾಡ್ತಾರಂತೆ ಪತಿ ರೋಷನ್
ನಟಿ ನಿರೂಪಕಿ, ಮಾತಿನ ಮಲ್ಲಿ ಅನುಶ್ರೀ (Anchor Anushree) ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನುಶ್ರೀ ಮದುವೆಯಾದ ಹುಡುಗ ರೋಷನ್ ಬಗ್ಗೆ ಈ ಹಿಂದೆ ಸಾಕಷ್ಟು ಸುದ್ದಿಗಳು ವೈರಲ್ ಆಗಿದ್ದವು. ಅದರಲ್ಲಿ ಪ್ರಮುಖವಾಗಿ ನಟಿ ಅನುಶ್ರೀ ಮದುವೆಯಾಗಿರುವ ರೋಷನ್ ನೂರಾರು ಕೋಟಿಯ ಒಡೆಯ. ದೊಡ್ಡ ಬ್ಯುಸಿನೆಸ್ ಮ್ಯಾನ್ ಎಂದೆಲ್ಲ ಸುದ್ದಿಯಾಗಿತ್ತು. ಈ ಬಗ್ಗೆ ಅನುಶ್ರಿಜ ಹಾಗೂ ರೋಷನ್ ಕ್ಲ್ಯಾರಿಟಿ ಕೊಟ್ಟಿದ್ದಾರೆ.
ಇಂದು ಆ.28 ರಂದು ಮದುವೆ ಬಳಿಕ ನವಜೋಡಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದೆ. ಈ ವೇಳೆ 300 ಕೋಟಿ, 600 ಕೋಟಿ ಒಡೆಯ ರೋಷನ್ ಅನ್ನೋ ವಿಚಾರದ ಬಗ್ಗೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ರೋಷನ್ ಅವರು ಐಟಿ ಉದ್ಯೋಗಿಯಾಗಿದ್ದು, ಸಾಮಾನ್ಯ ಕುಟುಂಬದಿಂದ ಬಂದವರು ಎಂದು ಹೇಳಿದ್ದಾರೆ. ಇನ್ನು ರೋಷನ್ ಮಾತಾಡಿ ನಿಮ್ಮ ಹರಕೆಯಿಂದ ನಾನು ಕೋಟಿ ಕೋಟಿ ಒಡೆಯ ಆಗಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಾತಿನ ಮಲ್ಲಿ ಅನುಶ್ರೀ ಹೊಸ ಗಾಯನ.. ನವಜೋಡಿಗೆ ಹಾರೈಸಿದ ತಾರಾಗಣ..!
ರೋಷನ್ ಮೂಲತಃ ಕೊಡಗಿನ ಕುಶಾಲನಗರದವರಾಗಿದ್ದು, ಬೆಂಗಳೂರಿನ ಐಟಿಬಿಟಿ ಕಂಪನಿಯ ಉದ್ಯೋಗಿಯಾಗಿದ್ದಾರೆ. ಅನುಶ್ರೀಗಾಗಿ ಬಿರಿಯಾನಿ, ಫಿಶ್ ಪ್ರೈ ಜೊತೆಗೆ ವಿವಿಧ ಖಾದ್ಯಗಳನ್ನ ಮಾಡಿ ಕೊಡ್ತಾರಂತೆ. ಈ ಬಗ್ಗೆ ಅನುಶ್ರೀ ಹೇಳಿಕೊಂಡಿದ್ದಾರೆ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿಯಾಗುವ ಹೊಸ ಮನ್ವಂತರಕ್ಕೆ ಅನುಶ್ರೀಯ ಉತ್ತರ ಸಿಕ್ಕಿದೆ. ಬೆಂಗಳೂರಿನ ಹೊರವಲಯದಲ್ಲಿ ಅನುಶ್ರೀ-ರೋಷನ್ ಮದುವೆ ಸರಳವಾಗಿ ನೆರವೇರಿದೆ.
ನಟಿ ನಿರೂಪಕಿ ಅನುಶ್ರೀ ಬಹುಕಾಲದ ಗೆಳೆಯ ರೋಷನ್ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನುಶ್ರೀ ಬಾಳಲ್ಲಿ ಏಕಾಂಗಿ ನಿರೂಪಣೆಯ ನಂತರ ಹೊಸ ಮನ್ವಂತರ ಶುರುವಾಗಿದೆ. ಅನುಶ್ರೀ-ರೋಷನ್ ಈ ಕ್ಷಣಕ್ಕೆ ಸ್ಯಾಂಡಲ್ ವುಡ್ ನ ನಟರು, ಆಪ್ತರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ. ಅನುಶ್ರೀ ಮದುವೆ ಸಂಭ್ರಮ ಸಡಗರ ತುಂಬಾ ಸರಳವಾಗಿ ನಡೆದಿದೆ.
ನಟಿ, ನಿರೂಪಕಿ ಮಾತಿನ ಮಲ್ಲಿ ಅನುಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅನುಶ್ರೀ ಬಾಳಲ್ಲಿ ಹೊಸ ಮನ್ವಂತರ ಶುರುವಾಗಿದೆ. ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದಾರೆ. ಕುಟುಂಬಸ್ಥರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ನವ ಜೋಡಿಗಳಿಗೆ ಶುಭ ಹಾರೈಸಿದ್ದಾರೆ. ತಾಳಿಕಟ್ಟುವ ಶುಭ ವೇಳೆ ಮಾತಿನಮಲ್ಲಿ ಅನುಶ್ರೀ ಭಾವುಕರಾಗಿದ್ದಾರೆ.ಇದನ್ನೂ ಓದಿ: ಯಾದಗಿರಿ | ಅಪಾಯ ಮಟ್ಟ ಮೀರಿದ ಯರಗೋಳ ಕೆರೆ – ಸೇತುವೆ ದಾಟುತ್ತಿದ್ದ ಹಸು ನೀರುಪಾಲು
ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಅನುಶ್ರೀ ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಹಳದಿ ಶಾಸ್ತ್ರ ಹಾಗೂ ಮೆಹಂದಿ ಶಾಸ್ತ್ರ ನೆರವೇರಿತ್ತು. ಈ ವೇಳೆ ಅನುಶ್ರೀ ಆಪ್ತರು ಕುಟುಂಬಸ್ಥರು ಭಾಗಿಯಾಗಿದ್ದರು. ಅನುಶ್ರೀ ಮದುವೆಗೆ ಆಗಮಿಸಿದ ಸ್ಯಾಂಡಲ್ ವುಡ್ ಮಂದಿ ಅನುಶ್ರೀ ಹಾಗೂ ರೋಷನ್ ಗೆ ಶುಭ ಹಾರೈಸಿದ್ದಾರೆ. ನಟ ಶರಣ್, ನಟಿ ಚೈತ್ರಾ ಆಚಾರ್, ರಾಜ್ ಬಿ ಶೆಟ್ಟಿ, ನಟಿ ಪ್ರೇಮಾ, ರಚಿತಾ ರಾಮ್, ಸಂತೋಷ್ ಆನಂದ್ ರಾಮ್, ಲವ್ಲಿಸ್ಟಾರ್ ಪ್ರೇಮ್, ತರುಣ್ ಸುಧೀರ್, ಸೋನಾಲ್ ಮಾಂಥೇರೊ, ತಾರಾ ಅನುಶ್ರೀ-ರೋಷನ್ ಜೋಡಿಗೆ ಹಾರೈಸಿದ್ದಾರೆ.
ನಮ್ಮಿಬ್ಬರನ್ನು ಒಂದು ಮಾಡಿದ್ದೇ ಅಪ್ಪು ಸರ್, ಒಂದು ಲೆಕ್ಕದಲ್ಲಿ ಹೇಳೋದಾದರೆ ಈ ಪ್ರೀತಿಗೆ ಅವರೇ ಕಾರಣ ಎಂದು ನಿರೂಪಕಿ ಅನುಶ್ರೀ (Anchor Anushree) ತಮ್ಮ ಲವ್ ಸ್ಟೋರಿ ಬಗ್ಗೆ ಹೇಳಿಕೊಂಡಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದನ್ನೂ ಓದಿ: ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದುವೆ ಸುಂದರ ಹಾಗೂ ಸರಳವಾಗಿ ನಡೆದಿದೆ, ಕಡಿಮೆ ಜನರನ್ನು ಸೇರಿಸಿ ಮದುವೆಯಾಗಬೇಕು ಅನ್ನೋದು ನಮ್ಮಿಬ್ಬರ ಆಸೆಯಾಗಿತ್ತು. ಜೊತೆಗೆ ತುಂಬಾ ಕಡೆಯಿಂದ ಬಹಳ ಜನರು ಬಂದಿದ್ದರು. ಆ ಎಲ್ಲಾ ಪ್ರೀತಿ-ಪಾತ್ರರಿಗೂ ಧನ್ಯವಾದಗಳು ಎಂದಿದ್ದಾರೆ.
ಇದೇ ವೇಳೆ ತಮ್ಮ ಲವ್ ಸ್ಟೋರಿ ಶುರುವಾದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ಸಿಂಪಲ್ ಲವ್ ಸ್ಟೋರಿ. ನಾವಿಬ್ಬರು ಮೊದಲು ಸ್ನೇಹಿತರಾದ್ವಿ. ಆಮೇಲೆ ಒಟ್ಟಿಗೆ ಕಾಫಿ ಕುಡಿದ್ವಿ. ಒಬ್ಬರಿಗೊಬ್ಬರು ಇಷ್ಟ ಆದ್ವಿ, ಲವ್ ಆಯ್ತು. ಇವಾಗ ಮದ್ವೆ ಆದ್ವಿ. ರೋಷನ್ ಕೂಡ ಅಪ್ಪು ಅವರ ಅಭಿಮಾನಿ. ಅಪ್ಪು ಸರ್ ಅವರ ʻಪುನೀತ್ ಪರ್ವʼ ಕಾರ್ಯಕ್ರಮದ ಮೂಲಕವೇ ನಮ್ಮಿಬ್ಬರ ಪರಿಚಯವಾಗಿದ್ದು. ಒಂದು ಲೆಕ್ಕದಲ್ಲಿ ಹೇಳೋದಾದರೆ ನಮ್ಮಿಬ್ಬರನ್ನು ಸೇರಿಸಿದ್ದೇ ಅಪ್ಪು ಸರ್ ಎಂದು ತಿಳಿಸಿದ್ದಾರೆ.
ಮದುವೆಗೆ ಶಿವಣ್ಣ, ಗೀತಕ್ಕ ಸೇರಿದಂತೆ ಹಲವರು ಬಂದು ಆಶೀರ್ವಾದ ಮಾಡಿದ್ದಾರೆ. ಶಿವಣ್ಣ ರೋಷನ್ ಅವರನ್ನ ಮುಂಚೆಯೇ ನೋಡಿದ್ರು. ರಚಿತಾ ಅವ್ರು ನಮ್ಮ ಮದುವೆಗೆ ಬಂದಿದ್ದು ಸಾಕಷ್ಟು ಖುಷಿ ಕೊಟ್ಟಿದೆ. ನನಗೆ ಮಂತ್ರ ಮಾಂಗಲ್ಯ ಆಗಬೇಕು ಅಂತ ಬಹಳ ಆಸೆ ಇತ್ತು. ಆದ್ರೆ ಅದರದ್ದು ಕೆಲವೊಂದು ರೂಲ್ಸ್ ಇದೆ ಹಾಗಾಗಿ ಕಷ್ಟ ಆಯ್ತು. ಇನ್ನೂ ಮದುವೆ ಅನ್ನೋದು ಒಂದು ಹೆಣ್ಣಿನ ಬಹು ದೊಡ್ಡ ಕನಸು. ನಾವು ಮದುವೆ ಹೇಗೆ ಆಗ್ತೀವಿ ಅನ್ನೋದು ಮುಖ್ಯ ಅಲ್ಲ, ಮದುವೆ ಬಳಿಕ ಹೇಗೆ ಬದುಕ್ತೀವಿ ಅನ್ನೋದು ಮುಖ್ಯ ಎಂದಿದ್ದಾರೆ.
ಇದೇ ವೇಳೆ ರೋಷನ್ ಮಾತನಾಡಿ, ಕಳೆದ 5 ವರ್ಷಗಳಿಂದ ನನಗೆ ಅನು ಪರಿಚಯವಿದೆ. 3 ವರ್ಷಗಳ ಹಿಂದೆ ನಾವಿಬ್ಬರು ಕ್ಲೋಸ್ ಆದ್ವಿ. ಯಾವತ್ತೂ ಆಕೆ ನನಗೆ ಸೆಲಿಬ್ರಿಟಿ ಅಂತ ಅನಿಸಿಲ್ಲ ಎಂದು ಹೇಳಿದ್ದಾರೆ.
ಇನ್ನೂ ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ.ಇದನ್ನೂ ಓದಿ: ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ
ಪುನೀತ್ ರಾಜಕುಮಾರ್ (Puneeth Rajkumar) ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ (Anushree) ಅವರು ತಾವು ಮದುವೆಯಾಗುತ್ತಿರುವ ಮಂಟಪದಲ್ಲಿ ಅಪ್ಪು ಫೋಟೋವನ್ನು ರಾರಾಜಿಸುವಂತೆ ಮಾಡಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಇಂದು (ಆ.28) ಕೊಡಗು ಮೂಲದ ರೋಷನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದನ್ನೂ ಓದಿ: ದಾವಣಗೆರೆ | ಶಿಕ್ಷಕನ ಬ್ಯಾಂಕ್ ಖಾತೆಯಿಂದ 22 ಲಕ್ಷ ಎಗರಿಸಿದ್ದ ಆರೋಪಿ ಅರೆಸ್ಟ್
ಅಪ್ಪು ಅವರ ಅಪ್ಪಟ ಅಭಿಮಾನಿಯಾಗಿರುವ ಅನುಶ್ರೀ ಮದುವೆ ಮಂಟಪದಲ್ಲಿ ಅಪ್ಪು ಫೋಟೋವೊಂದನ್ನು ಇರಿಸಿ, ಸುತ್ತಲೂ ಹೂವುಗಳಿಂದ ಅಲಂಕಾರ ಮಾಡಿದ್ದಾರೆ. ಈ ಮೂಲಕ ಅಪ್ಪು ಮೇಲಿನ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಹಿಂದೆಯೂ ಅಪ್ಪು ಬಗ್ಗೆ ನಟಿ ಅನುಶ್ರೀ ಮಾತನಾಡಿದ್ದರು. ಅಪ್ಪು ಸರ್ ನನಗೆ ತುಂಬಾ ಹತ್ತಿರ. ಸಿನಿಮಾ ಇಷ್ಟ ಪಡಲು ಶುರುವಾಗಿದ್ದ ದಿನದಿಂದ ಅವರು ನನಗೆ ತುಂಬಾ ಹತ್ತಿರವಾಗಿದ್ದಾರೆ. ನಾನು ಇಷ್ಟ ಪಡುವ ಏಕೈಕ ನಟ ಅಂದ್ರೆ ಅಪ್ಪು ಸರ್. ಅವರನ್ನು ಭೇಟಿಯಾದ ಮೇಲೆ ಅವರ ಗುಣ, ವ್ಯಕ್ತಿತ್ವಕ್ಕೆ ನಾನು ಅಭಿಮಾನಿಯಾದೆ ಎಂದು ಹಲವು ಭಾರೀ ಭಾವುಕರಾಗಿದ್ದರು.
ಗುರುವಾರ ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನೆರವೇರಿದ್ದು, ನಟ ಶರಣ್, ಹಿರಿಯ ನಟಿ ಪ್ರೇಮ, ಡಾಲಿ ಧನಂಜಯ್, ಚೈತ್ರಾ ಆಚಾರ್, ನಾಗಭೂಷಣ, ಗಾಯಕ ವಿಜಯಪ್ರಕಾಶ್, ನಟ ವಿಜಯ ರಾಘವೇಂದ್ರ ಸೇರಿದಂತೆ ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ.ಇದನ್ನೂ ಓದಿ: ಅಮೆರಿಕದ ಚರ್ಚ್ ಮೇಲೆ ಶೂಟೌಟ್ – ಗನ್ನಲ್ಲಿ ಬರೆದಿತ್ತು Nuke India
ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ (Anchor Anushree) ಇಂದು (ಆ.28) ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದನ್ನೂ ಓದಿ: ಬಹುಕಾಲದ ಗೆಳೆಯನ ಜೊತೆ ಸಪ್ತಪದಿ ತುಳಿಯಲಿರುವ ಅನುಶ್ರೀ
ಬೆಂಗಳೂರಿನ (Bengaluru) ಕಗ್ಗಲಿಪುರ (Kaggalipura) ಬಳಿಯ ಹೊರವಲಯದ ರೆಸಾರ್ಟ್ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಇನ್ನೂ ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿಬಿಟ್ಟಿದೆ.
ಮದುವೆಗೂ ಹಿಂದಿನ ದಿನ ಬುಧವಾರ (ಆ.27) ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್ ಸು ಫ್ರಂ ಸೋ ಚಿತ್ರದ `ಬಂದರೋ ಬಂದರೋ ಬಾವ ಬಂದರೋ’ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.ಇದನ್ನೂ ಓದಿ: ಅಮೆರಿಕದಲ್ಲಿ ಕುಳಿತು ಮುಧೋಳದ ಮನೆ ಕಳ್ಳತನ ತಪ್ಪಿಸಿದ ಟೆಕ್ಕಿ ಪುತ್ರಿ!
‘ತೂಫಾನ್’ (Toofan Film) ಕನ್ನಡ ಮತ್ತು ಹಿಂದಿ ಚಿತ್ರದ ಫಸ್ಟ್ ಗ್ಲಿಂಪ್ಸ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಪ್ರಶಂಸೆ ವ್ಯಕ್ತವಾಗಿದೆ. ಕಲಾವಿದರ ಸಂಘದಲ್ಲಿ ತುಣುಕುಗಳ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು. ಎಸ್.ಆರ್.ಮೂವೀಸ್ ಲಾಂಛನದಲ್ಲಿ ಬೆಳಗಾವಿ ಮೂಲದ ಕನ್ನಡ ಅಭಿಮಾನಿ ಷರೀಫ ಬೇಗಂ ನಡಾಫ್ ಬಂಡವಾಳ ಹೂಡುತ್ತಿದ್ದಾರೆ. ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವುದು ಆರ್.ಚಂದ್ರಕಾಂತ್. ಹೊಸ ಪ್ರತಿಭೆ ರೋಶನ್ ಕಥೆ ಬರೆದು ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ವಕೀಲ ನಾರಾಯಣಸ್ವಾಮಿ ಮತ್ತು ಮಿಲಿಟರಿ ನಿವೃತ್ತ ಅಧಿಕಾರಿಗಳು ಆಗಮಿಸಿ ತಂಡದ ಕೆಲಸವನ್ನು ಶ್ಲಾಘಿಸಿದರು. ಇದನ್ನೂ ಓದಿ:ಕಾನೂನಿಗಿಂತ ಯಾರು ಮೇಲಲ್ಲ, ಈ ಕೃತ್ಯ ಮಾಡುವ ವ್ಯಕ್ತಿತ್ವ ದರ್ಶನ್ದಲ್ಲ- ಮೌನ ಮುರಿದ ಸುಮಲತಾ
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಾಹಿತಿ ಕವಿರಾಜ್, ತಮ್ಮ ಶಿಷ್ಯ ಆರ್.ಚಂದ್ರಕಾಂತ್ ನಿರ್ದೇಶನ ಮಾಡಿರುವುದು ಸಂತಸ ತಂದಿದೆ. ಲೈಟಿಂಗ್, ಮೇಕಿಂಗ್ ಎಲ್ಲವನ್ನು ದೊಡ್ಡ ಪರದೆ ಮೇಲೆ ನೋಡುವುದೇ ಚೆಂದ. ಬೇರೆ ಲೋಕ ಸೃಷ್ಡಿಸುವಂತ ಮಾತು ಕೇಳಿ ಬರುತ್ತಿದೆ. ಅದೇ ರೀತಿ ಇದು ಆಗಲಿ. ನಿರ್ದೇಶಕರಿಗೆ ದೊಡ್ಡ ಮಟ್ಟದ ಯಶಸ್ಸು ಸಿಗಲೆಂದು ಶುಭ ಹಾರೈಸಿದರು. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ‘ಬಿಲ್ಲಾರಿ’ ಸಿನಿಮಾದ ಮುಹೂರ್ತ
ಈ ಸಂದರ್ಭದಲ್ಲಿ ಮಾತನಾಡಿದ ಆರ್.ಚಂದ್ರಕಾಂತ್, ಸಿನಿಮಾವು ನನ್ನದು ಅನ್ನುವುದಕ್ಕಿಂತ ರೋಷನ್ ಕನಸು ಎಂದು ಹೇಳಬೇಕು. ಅವರು ಕಥೆ ಹೇಳಿ ನಾನೇ ನಿರ್ದೇಶನ ಮಾಡಬೇಕೆಂದು ಕೋರಿಕೊಂಡರು. 1994ರಲ್ಲಿ ಮಗ ತಂದೆಗೋಸ್ಕರ ಸೇಡು ತೀರಿಸಿಕೊಳ್ಳುವ ಕಥೆ ಹೊಂದಿದೆ. ಶೇಕಡ 50ರಷ್ಟು ಚಿತ್ರೀಕರಣ ಮುಗಿದಿದೆ. ನಿರ್ಮಾಪಕರ ಒತ್ತಾಯದ ಮೇರೆಗೆ ಗ್ಲಿಂಪ್ಸ್ ತೋರಿಸಲಾಗಿದೆ. ಇದು ಟೀಸರ್, ಟ್ರೈಲರ್ ಅಲ್ಲ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾದ ‘ತೂಫಾನ್’ ಸ್ಪಾರ್ಕ್ ಎನ್ನಬಹುದು. ನಮ್ಮ ಚಿತ್ರ ಹೇಗೆ ಬರುತ್ತಿದೆ, ಯಾವ ತರಹದಲ್ಲಿ ಇದೆ ಎಂಬುದನ್ನು ತೋರಿಸಲು ಇದನ್ನು ಸಿದ್ಧಪಡಿಸಲಾಗಿದೆ. ಹಿಂದೆ ‘ಭೈರ್ಯ-07’ ಹೆಸರು ಇತ್ತು. ಭೈರ್ಯ ನಾಯಕನ ಹೆಸರು ಆಗಿದ್ದು, ಬೇರೆ ತಿರುವು ಇರಲಿ ಅಂತ ‘ತೂಫಾನ್’ ಟೈಟಲ್ ಇಡಲಾಗಿದೆ. ಮುಖ್ಯ ಖಳನಾಯಕನಾಗಿ ಭೀಷ್ಮ ರಾಮಯ್ಯ ಉಳಿದಂತೆ ರಂಗಾಯಣ ರಘು, ಅಶ್ವಿನ್ ಹಾಸನ್, ಸೂರ್ಯಪ್ರವೀಣ್, ಅಯ್ಯಪ್ಪ ಶರ್ಮ, ಬಿ.ಸುರೇಶ್, ಉಗ್ರಂ ರವಿ ರೋಲ್ನ್ನು ಗೌಪ್ಯವಾಗಿಡಲಾಗಿದೆ. ಮುಂದೆ ಎಲ್ಲವನ್ನು ತಿಳಿಸುತ್ತೇನೆಂದು ಹೇಳಿದರು.
ನಾಯಕ ರೋಶನ್ ಮಾತನಾಡಿ, ಅದಕ್ಕೂ ಇದಕ್ಕೂ ಸಂಬಂಧವಿಲ್ಲ. ಕನ್ನಡ ಸಿನಿಮಾಗಳನ್ನು ನೋಡಲು ಜನರು ಚಿತ್ರಮಂದಿರಕ್ಕೆ ಬರುತ್ತಿಲ್ಲವೆಂಬ ಆಪಾದನೆ ಇದೆ. ಪ್ರತಿಭೆ ಇರುವ ಇಂತಹ ನಿರ್ದೇಶಕರಿಗೆ ಅವಕಾಶ ಕೊಡಬೇಕು. ನಾನು ಯಶ್ ಗರಡಿಯಲ್ಲಿ ಪಳಗಿದವನು. ಅವರು ಸಿನಿಮಾದ ತುಣುಕುಗಳನ್ನು ನೋಡಿಲ್ಲ. ಖಂಡಿತವಾಗಿಯೂ ಅವರಿಗೆ ತೋರಿಸುತ್ತೇನೆ. ಸಿನಿಮಾದ ಒನ್ ಲೈನ್ ಕಥೆ ನನ್ನದಾಗಿದ್ರೂ, ಅದಕ್ಕೆ ಸುಂದರವಾದ ಆಕಾರ ಕೊಡುತ್ತಿರುವುದು ನಿರ್ದೇಶಕರು ಎಂದು ಮಾತನಾಡಿದ್ದಾರೆ.
ಮುಗ್ಧ ಹುಡುಗಿ, ಯಾರಿಗೂ ಹೆದರದ ಹಾಗೂ ಮಹಾರಾಜನ ಮಗಳು ಯುವರಾಣಿ ಹೀಗೆ ಮೂರು ಶೇಡ್ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆಂದು ನಾಯಕಿ ಅನುಷಾ ರೈ (Anusha Rai) ಪಾತ್ರದ ಕುರಿತು ಹಂಚಿಕೊಂಡರು.
ವಿಭಿನ್ನ ಕಥಾಹಂದರ ಹೊಂದಿರುವ “ಡವ್ ಮಾಸ್ಟರ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟ್ರೇಲರ್ ಅನಾವರಣ ಮಾಡಿದರು. ಹಾಡುಗಳನ್ನು ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಶಾಸಕ ಭೈರತಿ ಸುರೇಶ್, ನಾರಾಯಣ ಸ್ವಾಮಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಎಸ್ ಎ ಚಿನ್ನೇಗೌಡ, ಕೆ.ವಿ.ಚಂದ್ರಶೇಖರ್, ಹಾಲಿ ಅಧ್ಯಕ್ಷರಾದ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕರಾದ ಸಿದ್ದರಾಜು, ಭಾ.ಮ.ಗಿರೀಶ್ ಸೇರಿದಂತೆ ಹಲವು ಗಣ್ಯರು ಬಿಡುಗಡೆಗೊಳಿಸಿದರು.
“ಡವ್ ಮಾಸ್ಟರ್” ಚಿತ್ರ ನಾಯಿ ಹಾಗೂ ಮನುಷ್ಯನ ಸಂಬಂಧದ ನಡುವಿನ ಕಥಾಹಂದರ ಹೊಂದಿರುವ ಚಿತ್ರ ಎಂದು ತಿಳಿದು ಸಂತೋಷವಾಯಿತು. ಪ್ರಾಣಿಗಳಲ್ಲೇ ಹೆಚ್ಚು ನಿಯತ್ತಿನ ಪ್ರಾಣಿ ನಾಯಿ ಎನ್ನುತ್ತೇವೆ. “ರಾಕಿ” ಎಂಬ ಹೆಸರಿನ ನಾಯಿ ಈ ಚಿತ್ರದಲ್ಲಿ ಅಭಿನಯಿಸಿದೆ. ತಬಲನಾಣಿ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಆತ್ಮೀಯರಾದ ಚಾಂದ್ ಪಾಷ ಅವರ ಮಗ ರೋಷನ್ ಈ ಚಿತ್ರ ನಿರ್ಮಾಣ ಮಾಡಿರುವ ವಿಷಯ ತಿಳಿದು ಖುಷಿಯಾಯಿತು. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಎಲ್ಲರೂ ಈ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
ನಿರ್ದೇಶಕ ಆರ್ಯ ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆವು. ನಾನು ಇಪ್ಪತ್ತೈದು ವರ್ಷಗಳಿಂದ ಚಿತ್ರರಂಗದಲ್ಲಿ ವಿತರಕನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಈಗ ಚಿತ್ರ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ನನ್ನ ಮಗ ರೋಷನ್ ನೋಡಿಕೊಳ್ಳುತ್ತಿದ್ದಾನೆ. ಈ ಸಮಾರಂಭಕ್ಕೆ ಆಗಮಿಸಿರುವ ಸಿದ್ದರಾಮಯ್ಯ ಅವರು ಸೇರಿದಂತೆ ಎಲ್ಲಾ ಗಣ್ಯರಿಗೆ ನನ್ನ ಧನ್ಯವಾದ ಎಂದರು ಚಾಂದ್ ಪಾಷಾ. ಇದನ್ನೂ ಓದಿ:ಬಳ್ಳಾರಿಗೆ ಬರಲಿದ್ದಾರೆ ವಿಜಯ್ ಮತ್ತು ರಶ್ಮಿಕಾ ಮಂದಣ್ಣ
ನನ್ನ ಕಥೆ ಇಷ್ಟಪಟ್ಟು ನಿರ್ಮಾಣ ಮಾಡಿದ ನಿರ್ಮಾಪಕರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ. ಸಿದ್ದರಾಮಯ್ಯ ಅವರಿಂದ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಈಡೇರಿದೆ. ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಆರ್ಯ. ನನ್ನ ಅಭಿನಯದ ಚಿತ್ರವೊಂದಕ್ಕೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಆರ್ಯ ಈ ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಾಯಿ ಹಾಗೂ ನನ್ನ ನಡುವಿನ ಬಾಂಧವ್ಯದ ಸನ್ನಿವೇಶಗಳನ್ನು ನಿರ್ದೇಶಕರು ಮನಮುಟ್ಟುವಂತೆ ತೋರಿಸಿದ್ದಾರೆ. ರಾಕಿ(ನಾಯಿ) ನನಗಿಂತ ಚೆನ್ನಾಗಿ ನಟಿಸಿದೆ ಅಂತ ಹೇಳಬಹುದು ಎಂದು ತಬಲನಾಣಿ ತಿಳಿಸಿದರು.
ನಿರ್ಮಾಪಕ ಸಿ.ರೋಷನ್, ಸಂಗೀತ ನಿರ್ದೇಶಕ ಶಕೀಲ್ ಅಹ್ಮದ್, ಛಾಯಾಗ್ರಾಹಕ ಕಿರಣ್ ಕುಮಾರ್, ನಟಿ ಪಂಕಜ ಹಾಗೂ ಹಾಡು ಬರೆದಿರುವ ಸೌಮ್ಯ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಬಲ ನಾಣಿ, ಶಕೀಲ, ಕುರಿ ಪ್ರತಾಪ್, ಮಿತ್ರ, ನವೀನ್ ಪಡೀಲ್, ಪಂಕಜ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರಾಕಿ(ನಾಯಿ) ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದೆ.
Live Tv
[brid partner=56869869 player=32851 video=960834 autoplay=true]
ಡಾಲಿ ಧನಂಜಯ್ ನಟಿಸಿ, ನಿರ್ಮಾಣ ಮಾಡುತ್ತಿರುವ ಹೆಡ್ ಬುಷ್ ಸಿನಿಮಾದಲ್ಲಿ ಖ್ಯಾತ ನಟರ ದಂಡೇ ಇದೆ. ರವಿಚಂದ್ರನ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದೇವರಾಜ್, ರಘು ಮುಖರ್ಜಿ, ಶ್ರುತ ಹರಿಹರನ್ ಹೀಗೆ ಸಾಲು ಸಾಲು ಕಲಾವಿದರೇ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇವರೊಂದಿಗೆ ಮತ್ತೋರ್ವ ನಟ ಸಿನಿಮಾ ರಂಗ ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಬಚ್ಚನ್ ಅಲಿಯಾಸ್ ಸೈಯಾದ್ ಅಮಾನ್ ಬಚ್ಚನ್ ಪುತ್ರ ರೋಶನ್ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಹೆಡ್ ಬುಷ್ ಸಿನಿಮಾ ಬೆಂಗಳೂರಿನ ಭೂಗತ ಲೋಕದ ಡಾನ್ ಎಂದೇ ಕರೆಯಿಸಿಕೊಂಡಿದ್ದ ಜಯರಾಜ್ ಬದುಕನ್ನು ಆಧರಿಸಿದ ಸಿನಿಮಾ. ಈ ಸಿನಿಮಾದಲ್ಲಿ ಜಯರಾಜ್ ಆಗಿ ಡಾಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಬಚ್ಚನ್ ಪುತ್ರನ ಮಗನದ್ದು ಕೆ.ಕೆ.ರಾಜಾ ಎನ್ನುವ ಪಾತ್ರವಂತೆ. ತಮ್ಮ ತಂದೆಯು ಕೂಡ ಭೂಗತ ಜಗತ್ತಿನ ಚಟುವಟಿಕೆಯಲ್ಲಿ ಇದ್ದವರು. ಆ ಕಾಲದ ಕಥೆಯಲ್ಲಿ ರೋಶನ್ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ : ನಯನತಾರಾ ಒಂದಲ್ಲ, ಎರಡೆರಡು ಎಡವಟ್ಟು ತಿರುಪತಿ ದೇವಸ್ಥಾನದಿಂದ ಲೀಗಲ್ ನೋಟಿಸ್
ಬೆಂಗಳೂರಿನಲ್ಲಿ ಇಂಡಿಯನ್ ಅಥ್ಲೆಟಿಕ್ ಅಕಾಡಮಿ ಶುರು ಮಾಡಿ, ಆ ಮೂಲಕ ಮಕ್ಕಳಿಗೆ ಕ್ರೀಡಾ ತರಬೇತಿ ನೀಡುತ್ತಿದ್ದಾರೆ ರೋಶನ್, ಇದೇ ಮೊದಲ ಭಾರಿಗೆ ಅವರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಪಾತ್ರವನ್ನು ಅವರು ಮಾಡುವುದಕ್ಕೆ ಕಾರಣ ಅಗ್ನಿ ಶ್ರೀಧರ್. ಈ ಸಿನಿಮಾಗೆ ಅಗ್ನಿ ಶ್ರೀಧರ್ ಅವರೇ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಶೂನ್ಯ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ.