Tag: Roti

  • ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ಮದುವೆಯಾದ ವರ

    ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ಮದುವೆಯಾದ ವರ

    -ವರನ ವಿರುದ್ಧ ಮದುವೆಯಾಗಬೇಕಿದ್ದ ಯುವತಿ ದೂರು

    ಲಕ್ನೋ: ಮದುವೆಯಲ್ಲಿ ರೋಟಿ ಹಂಚಲು ತಡಮಾಡಿದ್ದಕ್ಕೆ ಬೇರೆ ಯುವತಿಯನ್ನು ವರ ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ (Uttar Pradesh) ಚಂದೌಲಿ ಜಿಲ್ಲೆಯ (Chandauli District) ಹಮೀದ್‌ಪುರ (Hamidpur) ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ.

    ಊಟ ಬಡಿಸಲು ತಡವಾದ ಕಾರಣಕ್ಕೆ ವರನು ತನ್ನ ಮದುವೆಯಿಂದ ಹೊರನಡೆದು ಬೇರೆ ಯುವತಿಯೊಂದಿಗೆ ಮದುವೆಯಾಗಿದ್ದಾನೆ. ಇದನ್ನು ತಿಳಿದ ವಧು ಆತನ ವಿರುದ್ಧ ದೂರು ದಾಖಲಿಸಿದ್ದಾಳೆ.ಇದನ್ನೂ ಓದಿ: Mandya | ಠಾಣೆಯಲ್ಲೇ ಪೊಲೀಸ್ ಪೇದೆ ಮೇಲೆ ವ್ಯಕ್ತಿಯಿಂದ ಹಲ್ಲೆ

    ಏಳು ತಿಂಗಳ ಹಿಂದೆ ಮೆಹ್ತಾಬ್ ಎಂಬ ಯುವಕನೊಂದಿಗೆ ವಧುವಿನ ವಿವಾಹ ನಿಶ್ಚಯವಾಗಿತ್ತು. ಡಿ.22 ರಂದು ಕಾರ್ಯಕ್ರಮಗಳು ಪ್ರಾರಂಭವಾಗಿದ್ದವು. ಈ ವೇಳೆ ವರನ ಕಡೆಯವರಿಗೆ ಊಟವನ್ನು ತಡವಾಗಿ ಬಡಿಸಿದ್ದಕ್ಕೆ ಗಲಾಟೆ ಮಾಡಿದ್ದಾರೆ. ವಧುವಿನ ಕಡೆಯವರು ವರನ ಕುಟುಂಬಸ್ಥರನ್ನು ಸಮಾಧಾನಪಡಿಸಲು ಪ್ರಯತ್ನಪಟ್ಟರು. 1.5 ಲಕ್ಷ ರೂ. ವರದಕ್ಷಿಣೆ ಸೇರಿದಂತೆ 7 ಲಕ್ಷ ರೂ. ಆರ್ಥಿಕ ನಷ್ಟವನ್ನು ಹೇಳಿಕೊಂಡರು. ಆದರೆ ವರನ ಕಡೆಯವರು ವಧುವಿನ ಮನೆಯವರನ್ನು ದೂಷಿಸುತ್ತಾ ಅಲ್ಲಿಂದ ಹೊರನಡೆದಿದ್ದಾರೆ.

    ಬಳಿಕ ವರ ಬೇರೆ ಯುವತಿಯನ್ನು ಮದುವೆಯಾಗಿರುವುದನ್ನು ತಿಳಿದು ವಧು ಇಂಡಸ್ಟ್ರಿಯಲ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಆದರೆ ವರನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಾಗ ಡಿ.24 ರಂದು ಪೊಲೀಸ್ ವರಿಷ್ಠಾಧಿಕಾರಿಗೆ ವಧು ಮನವಿ ಮಾಡಿಕೊಂಡಿದ್ದಾರೆ. ಆರ್ಥಿಕ ನಷ್ಟ ಹಾಗೂ ವರನ ಕಡೆಯ ಐದು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

    ಕ್ರಮ ಕೈಗೊಳ್ಳುವುದಾಗಿ ಎಸ್‌ಪಿ ಭರವಸೆ ನೀಡಿದ್ದು, ಪೊಲೀಸರಿಗೆ ವರನ ಕುಟುಂಬಸ್ಥರನ್ನು ಸಂಪರ್ಕಿಸುವAತೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ಮನಮೋಹನ್ ಸಿಂಗ್‌ಗೆ ಕೇಂದ್ರ ಸರ್ಕಾರದಿಂದ ಅವಮಾನ – ರಾಹುಲ್ ಗಾಂಧಿ ಆರೋಪ

  • ಪಂಜಾಬ್ ಫೇಮಸ್ ತವ ತಂದೂರಿ ರೋಟಿ ಮಾಡುವ ವಿಧಾನ

    ಪಂಜಾಬ್ ಫೇಮಸ್ ತವ ತಂದೂರಿ ರೋಟಿ ಮಾಡುವ ವಿಧಾನ

    ಪಾತಿ ನಂತರ ರೋಟಿ ಈಗ ಫುಲ್ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದು ಪಂಜಾಬಿ ಸ್ಟೈಲ್ ಆಗಿದ್ದು, ಎಲ್ಲ ಭಾರತೀಯರು ಇಷ್ಟಪಟ್ಟು ತಿನ್ನುವ ತಿನಿಸಿನಲ್ಲಿ ಇದು ಸಹ ಒಂದು. ಅದರಲ್ಲಿಯೂ ರೆಸ್ಟೋರೆಂಟ್ ಮತ್ತು ಹೋಟೆಲ್‍ನಲ್ಲಿ ಮಾಡುವ ತಂದೂರಿ ರೋಟಿ ಸ್ವಲ್ಪ ಹೆಚ್ಚು ಜನರು ಇಷ್ಟಪಡುತ್ತಾರೆ. ಅದಕ್ಕೆ ಇಂದು ತವಾ ಮೇಲೆ ಹೇಗೆ ತಂದೂರಿ ರೋಟಿ ಮಾಡಬಹುದು ಎಂದು ಸರಳ ವಿಧಾನದಲ್ಲಿ ಹೇಳಿಕೊಡುತ್ತಿದ್ದೇವೆ.

    ಬೇಕಾಗಿರುವ ಪದಾರ್ಥಗಳು:
    * ಗೋಧಿ ಹಿಟ್ಟು – 2ವರೆ ಕಪ್
    * ಸಕ್ಕರೆ – 1 ಟೀಸ್ಪೂನ್
    * ಬೇಕಿಂಗ್ ಪೌಡರ್ – 1 ಟೀಸ್ಪೂನ್
    * ಅಡಿಗೆ ಸೋಡಾ – ಅರ್ಧ ಟೀಸ್ಪೂನ್
    * ಉಪ್ಪು – ಅರ್ಧ ಟೀಸ್ಪೂನ್
    * ಮೊಸರು – ಅರ್ಧ ಕಪ್
    * ನೀರು – 1 ಕಪ್
    * ಎಣ್ಣೆ – 2 ಟೇಬಲ್ಸ್ಪೂನ್

    ಮಾಡುವ ವಿಧಾನ:
    * ಮೊದಲನೆಯದಾಗಿ, ದೊಡ್ಡ ಬಟ್ಟಲಿನಲ್ಲಿ ಗೋಧಿ ಹಿಟ್ಟು, ಸಕ್ಕರೆ, ಬೇಕಿಂಗ್ ಪೌಡರ್, ಅಡಿಗೆ ಸೋಡಾ ಮತ್ತು ಉಪ್ಪು ಹಾಕಿ ಸರಿಯಾಗಿ ಕಲಸಿ. * ನಂತರ ಅದಕ್ಕೆ ಮೊಸರು ಸೇರಿಸಿ ಹಿಟ್ಟನ್ನು ಬೆರೆಸಲು ಪ್ರಾರಂಭಿಸಿ. ಅಗತ್ಯವಿರುವಷ್ಟು ನೀರನ್ನು ಸೇರಿಸಿ, 5 ನಿಮಿಷಗಳ ಕಾಲ ಬೆರೆಸುವುದನ್ನು ಮುಂದುವರಿಸಿ.
    * ಈಗ 2 ಟೇಬಲ್ಸ್ಪೂನ್ ಎಣ್ಣೆಯನ್ನು ಸೇರಿಸಿ, ಹಿಟ್ಟು ನಯವಾಗಿ ಮತ್ತು ಮೃದುವಾಗುವವರೆಗೆ ನಾದಿಕೊಳ್ಳಿ. 1 ಗಂಟೆ ಮುಚ್ಚಿಡಿ.
    * 1 ಗಂಟೆಯ ನಂತರ, ಹಿಟ್ಟನ್ನು ಮೃದುವಾಗಿರುವುದನ್ನು ಖಚಿತಪಡಿಸಿಕೊಳ್ಳಿ.


    * ಚೆಂಡು ಗಾತ್ರದಲ್ಲಿ ಹಿಟ್ಟನ್ನು ತೆಗೆದು ಮತ್ತು ಗೋಧಿ ಹಿಟ್ಟಿನೊಂದಿಗೆ ಒತ್ತಿ ನಿಧಾನವಾಗಿ ರೋಲ್ ಮಾಡಿ. ರೋಟಿ ಸ್ವಲ್ಪ ದಪ್ಪವಾಗಿದೆಯೇ ಎಂದು ನೋಡಿ.
    * ಈಗ ಸ್ವಲ್ಪ ನೀರು/ಎಣ್ಣೆ ಹಾಕಿ ರೋಟಿಯನ್ನು ವೃತ್ತಕಾರವಾಗಿ ಒತ್ತಿ.
    * ಮಧ್ಯಮ ಉರಿಯಲ್ಲಿ ತವಾವನ್ನು ಬಿಸಿ ಮಾಡಿ, ರೋಟಿಯನ್ನು ತವಾಕ್ಕೆ ಹಾಕಿ. ಎರಡು ಕಡೆ ಸಮವಾಗಿ ಬೇಯಿಸಿ.

    – ಅಂತಿಮವಾಗಿ, ತಂದೂರಿ ರೋಟಿ ಮೇಲೆ ಬೆಣ್ಣೆಯಾಕಿ, ನಿಮಗಿಷ್ಟವಾದ ಕರಿಯೊಂದಿಗೆ ಆನಂದಿಸಿ.

    Live Tv
    [brid partner=56869869 player=32851 video=960834 autoplay=true]

  • ಬಿಸಿ ಬಿಸಿಯಾದ ಮಸಾಲೆ ರೊಟ್ಟಿ ಮಾಡುವ ವಿಧಾನ

    ಬಿಸಿ ಬಿಸಿಯಾದ ಮಸಾಲೆ ರೊಟ್ಟಿ ಮಾಡುವ ವಿಧಾನ

    ಬೆಳಗ್ಗಿನ ಉಪಹಾರಕ್ಕೆ ಏನು ಮಾಡುವುದು ಎಂದು ನೀವು ಯೋಚಿಸುತ್ತಿದ್ದಿರಾ? ಚಳಿ ಇರುವುದರಿಂದ ಬಿಸಿಯಾ ಟೀ, ಕಾಫಿ ಜೊತೆಗೆ ಮಸಾಲೆ ರೊಟ್ಟಿ ಮಾಡಿದರೆ ಸಖತ್ ರುಚಿಯಾಗಿರುತ್ತದೆ. ಈ ರೊಟ್ಟಿ ಎಷ್ಟು ಸುಲಭ ಅಷ್ಟೇ ರುಚಿಯಾಗಿದೆ. ಮಸಾಲೆ ರೊಟ್ಟಿ ಮಾಡುವ ಸರಳ ವಿಧಾನ ಈ ಕೆಳಗಿನಂತಿದೆ.

    ಬೇಕಾಗುವ ಸಾಮಗ್ರಿಗಳು
    * ಅಕ್ಕಿ ಹಿಟ್ಟು- 2 ಕಪ್
    * ರುಚಿಗೆ ತಕ್ಕಷ್ಟು ಉಪ್ಪು
    * ಅರಿಶಿಣ- 1 ಚಮಚ
    * ಜೀರಿಗೆ- 1 ಚಮಚ
    * ಈರುಳ್ಳಿ- 1
    * ಬೆಳ್ಳುಳ್ಳಿ- 1
    * ಸಬ್ಬಸಿಗೆ ಸೊಪ್ಪು- 1 ಕಟ್ಟು
    * ಹಸಿಮೆಣಸು- 3 ರಿಂದ 4
    * ಖಾರದ ಪುಡಿ- 1 ಚಮಚ
    * ಕ್ಯಾರೆಟ್- 1
    * ಕೊತ್ತಂಬರಿ ಸೊಪ್ಪು- ಸ್ವಲ್ಪ
    * ಕರಿಬೇವು- ಸ್ವಲ್ಪ
    * ಶುಂಠಿ- ಸ್ವಲ್ಪ
    * ತೆಂಗಿನಕಾಯಿ ತುರಿ- ಅರ್ಧ ಕಪ್

    ಮಾಡುವ ವಿಧಾನ:
    * ಒಂದು ಪಾತ್ರೆಗೆ ಅಕ್ಕಿ ಹಿಟ್ಟು, ಉಪ್ಪು, ಸಬ್ಬಸಿಗೆ ಎಲೆಗಳು, ತುರಿದ ಕ್ಯಾರೆಟ್, ಸಣ್ಣದಾಗಿ ಕೊಚ್ಚಿದ ಈರುಳ್ಳಿ, ಕೊತ್ತಂಬರಿ, ಕರಿಬೇವಿನ ಎಲೆಗಳು, ಹಸಿರು ಮೆಣಸಿನಕಾಯಿಗಳು, ಶುಂಠಿ, ತುರಿದ ತಾಜಾ ತೆಂಗಿನಕಾಯಿ ಮತ್ತು ಜೀರಿಗೆ ಸೇರಿಸಿ ಸರಿಯಾಗಿ ಮಿಶ್ರಣ ಮಾಡಿ.

    * ಈಗ ಮಿಶ್ರಣಕ್ಕೆ ನೀರನ್ನು ಕ್ರಮೇಣವಾಗಿ ಸೇರಿಸುತ್ತಾ ಮತ್ತು ಹಿಟ್ಟನ್ನು ಚೆನ್ನಾಗಿ ಕಲೆಸಿಕೊಳ್ಳಬೇಕು. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ
    * ನಂತರ ಒಂದು ತವಾ ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆ ಹಚ್ಚಿ ಕಾಯಲು ಬಿಡಿ. ಅದು ಕಾಯುವಾಗ ನೀವು ಈ ರೊಟ್ಟಿಯ ಹಿಟ್ಟನ್ನು ತಟ್ಟಿಕೊಂಡು ಇಟ್ಟುಕೊಂಡಿರಿ. ಅದನ್ನು ಕಾದ ತವಾ ಮೇಲೆ ಹಾಕಿ ಚನ್ನಾಗಿ ಬೇಯಿಸಿದರೆ ರುಚಿ ರುಚಿಯಾದ ಮಸಾಲೆ ರೊಟ್ಟಿ ಸಿದ್ಧವಾಗುತ್ತದೆ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

  • ಮದುವೆ ಮನೆಯಲ್ಲಿ ರೋಟಿಗೆ ಉಗುಳಿ ಬೇಯಿಸ್ತಿದ್ದ ವ್ಯಕ್ತಿಯ ವೀಡಿಯೋ ವೈರಲ್

    ಮದುವೆ ಮನೆಯಲ್ಲಿ ರೋಟಿಗೆ ಉಗುಳಿ ಬೇಯಿಸ್ತಿದ್ದ ವ್ಯಕ್ತಿಯ ವೀಡಿಯೋ ವೈರಲ್

    ಲಕ್ನೋ: ಮದುವೆ ಸಮಾರಂಭವೊಂದರಲ್ಲಿ ರೋಟಿ ಸಿದ್ಧಪಡಿಸುತ್ತಿದ್ದ ವ್ಯಕ್ತಿ ಲಟ್ಟಿಸಿದ್ದ ರೋಟಿಗೆ ಉಗುಳಿ ನಂತರ ಅದನ್ನು ಬೇಯಿಸಿದ್ದಾನೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

    ಆರೋಪಿ ನೌಶಾದ್ ಅಕಾ ಸೋಹೈಲ್ ಎಂದು ಗುರುತಿಸಲಾಗಿದ್ದು, ಈತ ಮೀರತ್ ನಿವಾಸಿಯಾಗಿದ್ದಾನೆ. ಘಟನೆ ವಿಚಾರವಾಗಿ ಮಾತನಾಡಿದ ಮೀರತ್ ಪೊಲೀಸರು, ಸದ್ಯ ಘಟನೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

    ವೀಡಿಯೋದಲ್ಲಿ ಆರೋಪಿ ಲಟ್ಟಿಸಿದ ರೋಟಿಗೆ ಉಗುಳಿ ನಂತರ ಅದನ್ನು ಬೇಯಲು ತಂದೂರಿ ಮೇಕರ್‍ನಲ್ಲಿ ಇಡುತ್ತಿರುವ ದೃಶ್ಯ ಕಾಣಿಸುತ್ತದೆ. ಈ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿಯೋರ್ವ ತನ್ನ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

  • ಯಾರೋ ಎಸೆದ ಚಪಾತಿಯನ್ನು ನೀರಿನಲ್ಲಿ ತೊಳೆದು ತಿಂದ ವೃದ್ಧ

    ಯಾರೋ ಎಸೆದ ಚಪಾತಿಯನ್ನು ನೀರಿನಲ್ಲಿ ತೊಳೆದು ತಿಂದ ವೃದ್ಧ

    – ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

    ವೃದ್ಧರೊಬ್ಬರು ನೀರಿನಲ್ಲಿ ಚಪಾತಿಯನ್ನು ತೊಳೆದು ತಿನ್ನುತ್ತಿರುವ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಸಚಿನ್ ಕೌಶಿಕ್ ಎಂಬವರು ಫೆಬ್ರವರಿ 20ರಂದು ತಮ್ಮ ಟ್ವಿಟ್ಟರಿನಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಹಾಕಿ ಅದಕ್ಕೆ, ಒಬ್ಬರಿಗೆ ಹೊಟ್ಟೆ ತುಂಬಿದೆ. ಇನ್ನೊಬ್ಬರಿಗೆ ಹಸಿವಾಗಿದೆ. ಯಾರೋ ಎಸೆದ ಚಪಾತಿಯನ್ನು ವೃದ್ಧ ತೊಳೆದು ತಿನ್ನುತ್ತಿದ್ದಾರೆ. ಇದು ಬಹಳ ಮನಕಲಕುವ ವಿಡಿಯೋ ಎಂದು ಟ್ವೀಟ್ ಮಾಡಿದ್ದಾರೆ.

    https://twitter.com/upcopsachin/status/1230553356701028354?ref_src=twsrc%5Etfw%7Ctwcamp%5Etweetembed%7Ctwterm%5E1230553356701028354&ref_url=https%3A%2F%2Fnavbharattimes.indiatimes.com%2Fviral-adda%2Ftrending%2Fold-man-wash-roti-before-eating-video-goes-viral-37012%2F

    ಈ ವಿಡಿಯೋ ಯಾವುದೋ ರೈಲ್ವೆ ಸ್ಟೇಶನ್‍ನಲ್ಲಿ ಸೆರೆ ಹಿಡಿಯಲಾಗಿದ್ದು, ಇದರಲ್ಲಿ ವೃದ್ಧರೊಬ್ಬರು ಚಪಾತಿಯನ್ನು ನೀರಿನಲ್ಲಿ ತೊಳೆದು ತಿನ್ನುತ್ತಿದ್ದಾರೆ. ಈ ವಿಡಿಯೋ ಎಲ್ಲಿ ಹಾಗೂ ಯಾವಾಗ ಸೆರೆ ಹಿಡಿಯಲಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

    ನೆಟ್ಟಿಗರು ಈ ವಿಡಿಯೋ ನೋಡಿ, ದಯವಿಟ್ಟು ಯಾರು ಊಟವನ್ನು ವ್ಯರ್ಥ ಮಾಡಬೇಡಿ. ಏಕೆಂದರೆ ಈ ಪ್ರಪಂಚದಲ್ಲಿ ಹಲವು ಮಂದಿಗೆ ದಿನಕ್ಕೆ ಎರಡು ಹೊತ್ತು ಊಟ ಸಿಗುವುದಿಲ್ಲ. ಹೀಗಿರುವಾಗ ಯಾರು ಸಹ ಊಟವನ್ನು ವ್ಯರ್ಥ ಮಾಡಬೇಡಿ ಎಂದು ರೀ-ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದಾರೆ.

    ಇದುವರೆಗೂ ಈ ವಿಡಿಯೋಗೆ 400ಕ್ಕೂ ಹೆಚ್ಚು ವ್ಯೂವ್ಸ್ ಬಂದಿದ್ದು, 108ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಇದರ ಹೊರತಾಗಿ ಹಲವು ಮಂದಿ ಈ ವಿಡಿಯೋಗೆ ರೀ-ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

    https://twitter.com/sahab_dhiman/status/1230675524680404994?ref_src=twsrc%5Etfw%7Ctwcamp%5Etweetembed%7Ctwterm%5E1230675524680404994&ref_url=https%3A%2F%2Fnavbharattimes.indiatimes.com%2Fviral-adda%2Ftrending%2Fold-man-wash-roti-before-eating-video-goes-viral-37012%2F

  • ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೆ- ನೂರಾರು ಮಹಿಳೆಯರಿಂದ ರೊಟ್ಟಿ ತಯಾರಿ

    ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೆ- ನೂರಾರು ಮಹಿಳೆಯರಿಂದ ರೊಟ್ಟಿ ತಯಾರಿ

    ಕೊಪ್ಪಳ: ದಕ್ಷಿಣ ಭಾರತ ಮಹಾ ಕುಂಭಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಕ್ಷಣಗಣನೇ ಆರಂಭವಾಗಿದೆ. ಜಾತ್ರೆಗೆ ಬರುವ ಲಕ್ಷಾಂತರ ಭಕ್ತರಿಗಾಗಿ ಪ್ರಸಾದದ ವ್ಯವಸ್ಥೆಗಾಗಿ ಜಿಲ್ಲೆಯ ಜನತೆ ರೊಟ್ಟಿ ತಯಾರಿಯಲ್ಲಿ ತೊಡಗಿದ್ದಾರೆ.

    ಮಹಾಕುಂಭ ಮೇಳವೆಂದೇ ಪ್ರಖ್ಯಾತಿ ಪಡೆದಂತ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗಾಗಿ ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮದಲ್ಲಿ ಮಹಿಳೆಯರು ರೊಟ್ಟಿ ತಯಾರಿಸುತ್ತಿದ್ದಾರೆ. ಈ ಜಾತ್ರೆ ಬಂತೆಂದೆರೆ ಸಾಕು ಕೊಪ್ಪಳದ ಮಹಿಳೆಯರಿಗೆ, ಮಕ್ಕಳಿಗೆ, ಎಲ್ಲಾ ಜನರಲ್ಲಿ ಎಲ್ಲಿಲ್ಲದ ಉತ್ಸಾಹ. ಅಜ್ಜನ ಜಾತ್ರೆಗಾಗಿ ಸರ್ವರು ಸೇವೆ ಸಲ್ಲಿಸುವುದು ಇಲ್ಲಿನ ವಿಶೇಷ. ಅದಕ್ಕಾಗಿ ಹಟ್ಟಿ ಗ್ರಾಮದ ಜನತೆ, ಈ ಜಾತ್ರೆಗಾಗಿ 2 ಕ್ವಿಂಟಾಲ್ ರೊಟ್ಟಿ ಮಾಡುತ್ತಿದ್ದಾರೆ.

    ಅಜ್ಜನ ಜಾತ್ರೆಗೆ ರೊಟ್ಟಿ ಮಾಡಬೇಕೆಂದರೆ ಪ್ರತಿಯೊಬ್ಬ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡು ರೊಟ್ಟಿ ಸೇವೆ ಸಲ್ಲಿಸುತ್ತಿದ್ದಾರೆ. ಕೊಪ್ಪಳದ ಹಟ್ಟಿ ಗ್ರಾಮಸ್ಥರು ಇಷ್ಟೊಂದು ಪ್ರಮಾಣದಲ್ಲಿ ರೊಟ್ಟಿ ಮಾಡುತ್ತಿರುವುದನ್ನು ಅರಿತ ಗವಿಸಿದ್ದೇಶ್ವರ ಅಜ್ಜರು ಗ್ರಾಮಕ್ಕೆ ಆಗಮಿಸಿ ಗ್ರಾಮದ ಮಹಿಳೆಯರು ಮತ್ತು ಮಕ್ಕಳ ಸೇವೆಯನ್ನು ನೋಡಿ ಆಶೀರ್ವಾದಿಸಿದರು.

    ಇದೇ ತಿಂಗಳ 12 ರಂದು ಗವಿಸಿದ್ದೇಶ್ವರ ಜಾತ್ರೆ ಇದೆ. ಹೀಗಾಗಿ ಪ್ರತಿವರ್ಷದಂತೆ ಈ ವರ್ಷವು ಕೂಡ ಜಾತ್ರೆಯ ಸಡಗರ ಸಂಭ್ರಮ ಜಿಲ್ಲೆಯಾದ್ಯಂತ ಮನೆ ಮಾಡಿದೆ. ಅಜ್ಜನ ಜಾತ್ರೆಗೆ ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿ ಗ್ರಾಮಸ್ಥರು ತಮ್ಮ ತಮ್ಮ ಕೈಲಾದ ಸೇವೆಯನ್ನು ಚಾಚು ತಪ್ಪದೇ ಮಠಕ್ಕೆ ಅರ್ಪಿಸುತ್ತಿದ್ದಾರೆ.

  • ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

    ಊಟಕ್ಕೆ ರೊಟ್ಟಿ ಮಾಡಿಲ್ಲವೆಂದು ಸಹೋದರಿಗೇ ಗುಂಡಿಕ್ಕಿ ಕೊಂದ

    ಲಕ್ನೋ: ಊಟಕ್ಕೆ ರೊಟ್ಟಿ ಮಾಡಿಲ್ಲ ಎಂಬ ಕಾರಣಕ್ಕೆ ಸಿಟ್ಟಿಗೆದ್ದ ಯುವಕನೊಬ್ಬ ತನ್ನ ಸಹೋದರಿಯನ್ನು ಗುಂಡಿಕ್ಕಿ ಕೊಂದು ವಿಕೃತಿ ಮೆರೆದಿರುವ ಘಟನೆ ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದಿದೆ.

    ಲಖಿಂಪುರ್ ಖೇರಿಯ ಬರ್ಖೇಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬರ್ಖೇಡಾ ಗ್ರಾಮದ ನಿವಾಸಿ ಸೋನು ಸಿಂಗ್ ತನ್ನ ಸೋದರ ಸಂಬಂಧಿ ಸುಮನ್‍ನನ್ನು ಗುಂಡಿಕ್ಕಿ ಕೊಲೆಗೈದಿದ್ದಾನೆ. ಎರಡು ದಿನಗಳ ಹಿಂದೆ ಸುಮನ್ ತನ್ನ ಅತ್ತೆಯ ಮನೆಗೆ ಬಂದಿದ್ದಳು. ಈ ವೇಳೆ ಸೋನುಗೆ ಅಡುಗೆ ಮಾಡಿ ಊಟ ಬಡಿಸುತ್ತಿದ್ದಳು. ಕುಡಿದು ಮನೆಗೆ ಬಂದಿದ್ದ ಸೋನುಗೆ ಆ ಅಡುಗೆ ಇಷ್ಟವಿರಲಿಲ್ಲ. ಆಗ ಆತ ರೊಟ್ಟಿ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ್ದನು. ಈ ಕಾರಣಕ್ಕೆ ಇಬ್ಬರ ನಡುವೆ ವಾಗ್ವಾದ ನಡೆದು, ಮಾತಿಗೆ ಮಾತು ಬೆಳೆದು ಜಗಳವಾಗಿದೆ.

    ಇಷ್ಟಕ್ಕೆ ಕೋಪಗೊಂಡ ಸೋನು ಮನೆಯಲಿದ್ದ ತನ್ನ ತಂದೆಯ ಲೈಸನ್ಸ್ ಇರುವ ಬಂದೂಕನ್ನು ತೆಗೆದುಕೊಂಡು ಸೋದರಿಯ ತಲೆಗೆ ಗುಂಡು ಹೊಡೆದಿದ್ದಾನೆ. ಪರಿಣಾಮ ಆಕೆ ಸ್ಥಳದಲ್ಲಿಯೇ ಪ್ರಾಣಬಿಟ್ಟಿದ್ದಾಳೆ. ಒಂದು ವರ್ಷದ ಹಿಂದೆಯಷ್ಟೇ ಸುಮನ್ ವಿವಾಹವಾಗಿದ್ದರು.

    ಕೆಲವು ವರ್ಷಗಳ ಹಿಂದೆ ಸುಮನ್ ತಂದೆ ತೀರಿಹೋಗಿದ್ದರು. ಆ ಬಳಿಕ ಸುಮನ್‍ ತನ್ನ ಸೋದರ ಸಂಬಂಧಿ ಸೋನುವನ್ನೇ ತನ್ನ ನಿಜವಾದ ಸಹೋದರನಂತೆ ನೋಡಿಕೊಳ್ಳುತ್ತಿದ್ದರು. ಆದರೆ ಸೋನು ಸುಮನ್‍ರನ್ನು ಹತ್ಯೆ ಮಾಡುವಷ್ಟು ಕಟುಕನಾಗುತ್ತಾನೆ ಎಂದು ಯಾರೂ ಊಹೆ ಕೂಡ ಮಾಡಿರಲಿಲ್ಲ.

    ಘಟನೆಯ ಬಳಿಕ ಆರೋಪಿ ಸೋನು ಪರಾರಿ ಆಗಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಸೋನು ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಸರ್ಪ್ರೈಸ್ ನೋಡಿ ದೊಡ್ಡ ವೇದಿಕೆಯಲ್ಲೇ ಕಣ್ಣೀರಿಟ್ಟ ಹನುಮಂತ

    ಸರ್ಪ್ರೈಸ್ ನೋಡಿ ದೊಡ್ಡ ವೇದಿಕೆಯಲ್ಲೇ ಕಣ್ಣೀರಿಟ್ಟ ಹನುಮಂತ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ “ಸರಿಗಮಪ ಸೀಸನ್ 15′ ರಲ್ಲಿ ಕುರಿಗಾಹಿ ಅಂತಲೇ ಖ್ಯಾತಿ ಪಡೆದಿರುವ ಹನುಮಂತನಿಗೆ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಆದರೆ ಆ ಸರ್ಪ್ರೈಸ್ ನೋಡಿ ಹನುಮಂತ ವೇದಿಯ ಮೇಲೆಯೇ ಕಣ್ಣೀರು ಹಾಕಿದ್ದಾರೆ.

    ಇದೇ ಭಾನುವಾರ ಖಾಸಗಿ ವಾಹಿನಿಯಲ್ಲಿ ‘ಜೀ ಕುಟುಂಬ ಅವಾರ್ಡ್ಸ್ ‘ಕಾರ್ಯಕ್ರಮ ಪ್ರಸಾರವಾಗಿದೆ. ಈ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಿರುತೆರೆಯಲ್ಲಿ ನಟಿಸಿ ಜನರ ಮೆಚ್ಚುಗೆಯನ್ನು ಪಡೆದಿರುವ ನಟ-ನಟಿ ಸೇರಿದಂತೆ ಕಲಾವಿದರಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗಿತ್ತು.

    ಇದೇ ಕಾರ್ಯಕ್ರಮದಲ್ಲಿ ಜನತೆ ಮೆಚ್ಚಿದೆ ಅಚ್ಚುಮೆಚ್ಚಿನ ಸ್ಪರ್ಧಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಗೆ 5 ಮಂದಿ ನಾಮಿನೇಟ್ ಆಗಿದ್ದರು. ಆದರೆ ಕೊನೆಯಲ್ಲಿ ಸರಿಗಮಪ ಸೀಸನ್ 5ರ ಸ್ಪರ್ಧಿ ಹನುಮಂತನಿಗೆ ಪ್ರಶಸ್ತಿ ಲಭಿಸಿದೆ. ಈ ಸಂದರ್ಭದಲ್ಲಿ ಹನುಮಂತ ವೇದಿಕೆಯ ಮೇಲೆ ಹೋಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಇದೇ ಸಂದರ್ಭದಲ್ಲಿ ಹನುಮಂತ್ ತಮ್ಮ ತಂದೆ-ತಾಯಿ ಇಬ್ಬರನ್ನು ಬಿಟ್ಟು ಬೆಂಗಳೂರಿಗೆ ಬಂದು 20 ದಿನಗಳಾಗಿತ್ತು.

    ಈ ಹಿಂದೆ ಸರಿಗಮಪ ವೇದಿಕೆಯಲ್ಲಿ ತಾಯಿಯನ್ನು ನೆನೆದು ಭಾವುಕರಾಗಿದ್ದರು. ಆದ್ದರಿಂದ ಪ್ರಶಸ್ತಿಯ ಜೊತೆ ಅವರ ತಾಯಿ ಶೀಲವ್ವ ಅವರನ್ನು ಕರೆಸಲಾಗಿತ್ತು. ಆಗ ವೇದಿಕೆಯ ಮೇಲೆ ತಾಯಿಯನ್ನು ನೋಡಿ ಒಂದು ಕ್ಷಣ ಹನುಮಂತ ಮೂಕರಾಗಿ ನಿಂತು ಕಣ್ಣೀರು ಹಾಕಿದ್ದಾರೆ. ಬಳಿಕ ಹನುಮಂತನ ಆಸೆಯಂತೆ ತಮ್ಮ ಮನೆಯಿಂದ ಜೋಳದ ರೊಟ್ಟಿ ತಂದು ತಾಯಿ ಕೈಯಿಂದ ವೇದಿಕೆಯ ಮೇಲೆಯೇ ತಿನ್ನಿಸಿದ್ದಾರೆ.

    ಹನುಮಂತ ಜೊತೆಗೆ ವೇದಿಕೆ ಮೇಲಿದ್ದ ನಿರೂಪಕರು ಕೂಡ ಸೇರಿ ಕುಳಿತು ಅವರ ಕೈಯಿಂದ ಕೈತ್ತುತ್ತು ತಿಂದಿದ್ದಾರೆ. ಹನುಮಂತ ಯಾವುದೇ ಸಂಗೀತ ತರಬೇತಿಗೂ ಹೋಗದೆ, ಕುರಿ ಕಾಯುತ್ತಾ, ಫೋನಿನಲ್ಲಿ ಹಾಡು ಕೇಳುತ್ತಾ ಬೆಳೆದಿದ್ದರು. ಇಂದು ಸರಿಗಮಪ ಕಾರ್ಯಕ್ರಮದ ಮೂಲಕ ಜನತೆಯ ಮೆಚ್ಚುಗೆಯನ್ನು ಪಡೆದು ಕುರಿಗಾಯಿ ಹನುಮಂತ ಎಂದು ಖ್ಯಾತಿ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv