Tag: Rotti

  • ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್

    ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡಿದವನು ಸೇರಿ 5 ಜನ ಅರೆಸ್ಟ್

    ಲಕ್ನೋ: ಬೀದಿ ವ್ಯಾಪಾರಿಯೊಬ್ಬ ಹಿಟ್ಟಿನ ಮೇಲೆ ಉಗುಳಿ ರೊಟ್ಟಿ ಮಾಡುತ್ತಿದ್ದ ವೀಡಿಯೋ ವೈರಲ್ ಆಗಿದ್ದು, ಆರೋಗ್ಯ ದೃಷ್ಟಿಯಿಂದ ಅಂಗಡಿಯವನನ್ನು ಸೇರಿ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ.

    ಲಕ್ನೋದ ಹೊರವಲಯದಲ್ಲಿರುವ ಕಾಕೋರಿಯ ರಸ್ತೆಬದಿಯಲ್ಲಿ ಉಪಾಹಾರ ಗೃಹವಿತ್ತು. ಆ ಅಂಗಡಿಯವನು ರೊಟ್ಟಿಯನ್ನು ತಯಾರಿಸಲು ಹಿಟ್ಟಿನ ಮೇಲೆ ಉಗುಳುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ 22 ಸೆಕೆಂಡಿನ ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿದ್ದು, ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ಪರಿಣಾಮ ಅಂಗಡಿಯವನನ್ನು ಸೇರಿ ಐದು ಸಹಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘನೆ – ಪ್ರಭು ಚವ್ಹಾಣ್ ವಿರುದ್ಧ ದೂರು

    ಈ ಕುರಿತು ಪ್ರತಿಕ್ರಿಯಿಸಿದ ಕಕೋರಿ ಸಹಾಯಕ ಪೊಲೀಸ್ ಕಮಿಷನರ್ ಅಶುತೋಷ್ ಕುಮಾರ್, ಧಾಬಾ ಮಾಲೀಕ ಯಾಕೂಬ್ ಮತ್ತು ಡ್ಯಾನಿಶ್, ಹಫೀಜ್, ಮುಖ್ತಾರ್, ಫಿರೋಜ್ ಮತ್ತು ಅನ್ವರ್‍ರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

    ಆರೋಪಿಗಳ ವಿರುದ್ಧ ರೋಗ ಹರಡಿಸುವ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕೋವಿಡ್ ಸಮಯದಲ್ಲಿ ಈ ರೀತಿಯ ಕೃತ್ಯ ಮಾಡಿದರುವುದು ದೊಡ್ಡ ಅಪರಾಧವಾಗಿದೆ. ಈ ರೀತಿ ರೊಟ್ಟಿ ಮಾಡುವುದರಿಂದ ಸೋಂಕು ಹೆಚ್ಚುತ್ತೆ. ಇವರ ನಿರ್ಲಕ್ಷ್ಯ ಸೋಂಕು ಹರಡಲು ದಾರಿಯಾಗುತ್ತೆ. ಇವರು ಸೋಂಕನ್ನು ಹರಡಲು ಮಾರಣಾಂತಿಕ ಕೃತ್ಯ ಎಸಗಿದ್ದಾರೆ ಎಂದರು. ಇದನ್ನೂ ಓದಿ: ನೆಟ್ಟಿಗರ ಆಕ್ರೋಶಕ್ಕೆ ಮಣಿದು ಸೈನಾ ಬಳಿ ಕ್ಷಮೆಯಾಚಿಸಿದ ಸಿದ್ದಾರ್ಥ್

    POLICE JEEP

    ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಸುಶೀಲ್ ರಜಪೂತ್ ಅಪ್ಲೋಡ್ ಮಾಡಿದ್ದಾನೆ. ವೀಡಿಯೋವನ್ನು ದೂರದಿಂದ ಚಿತ್ರೀಕರಿಸಲಾಗಿದೆ. ಅಡುಗೆಯವರು ನಿಜವಾಗಿಯೂ ಉಗುಳಿದ್ದಾರೋ ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ. ಅದಕ್ಕೆ ನಾವು ಈ ಆರೋಪವನ್ನು ಖಚಿತಪಡಿಸಿಕೊಳ್ಳಲು ತಾಂತ್ರಿಕ ನೆರವು ಪಡೆಯುತ್ತೇವೆ ಎಂದು ವಿವರಿಸಿದರು.

  • ಸಾಲಮನ್ನಾ ಮಾಡಿದ ಹೆಚ್‍ಡಿಕೆಗೆ ಜೋಳದ ರೊಟ್ಟಿ, ಚಟ್ನಿ ಪುಡಿ ಗಿಫ್ಟ್ ಕೊಟ್ಟ ರೈತ

    ಸಾಲಮನ್ನಾ ಮಾಡಿದ ಹೆಚ್‍ಡಿಕೆಗೆ ಜೋಳದ ರೊಟ್ಟಿ, ಚಟ್ನಿ ಪುಡಿ ಗಿಫ್ಟ್ ಕೊಟ್ಟ ರೈತ

    ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಆಗಿದ್ದಾಗ ಸಾಲಮನ್ನಾ ಕಾರ್ಯಕ್ರಮವನ್ನ ಜಾರಿಗೆ ತಂದಿದ್ದರು. ನೂರಾರು ರೈತರು ಇದರ ಪ್ರಯೋಜನವನ್ನು ಪಡೆದರು. ವಿಶೇಷ ಅಂದ್ರೆ ಸಾಲಮನ್ನಾದಿಂದ ಸಹಾಯ ಪಡೆದ ರೈತರೊಬ್ಬರು ಮಾಜಿ ಸಿಎಂ ಕುಮಾರಸ್ವಾಮಿಗೆ ಪ್ರೀತಿಯ ಊಡುಗೊರೆ ಕೊಟ್ಟಿದ್ದಾರೆ.

    ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕು ಕಿರೇಸೂರು ಗ್ರಾಮದ ಗೋವಿಂದಪ್ಪನಿಂದ ಸಾಲಮನ್ನಾ ಮಾಡಿದ ಕುಮಾರಸ್ವಾಮಿ ಅವರಿಗೆ ಪ್ರೀತಿಯ ಉಡುಗೊರೆ ಕಳಿಸಿದ್ದಾರೆ. ಕುಮಾರಸ್ವಾಮಿ ಸಿಎಂ ಅಗಿದ್ದಾಗ ಸಾಲ ಭಾದೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಗೋವಿಂದಪ್ಪ ನಿರ್ಧಾರ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಅಳಲು ತೋಡಿಕೊಂಡಿದ್ದರು. ಪತ್ರಕ್ಕೆ ಸ್ಪಂದಿಸಿದ್ದ ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ದರು. ಬಳಿಕ ಫೋನ್ ಮೂಲಕ ಗೋವಿಂದಪ್ಪಗೆ ಧೈರ್ಯ ತುಂಬಿದ್ದರು. ಬಳಿಕ ಸಾಲಮನ್ನಾ ಆಗಿ ರೈತ ಗೋವಿಂದಪ್ಪ ಜೀವನ ರೂಪಿಸಿಕೊಂಡಿದ್ದಾರೆ. ಸಾಲಮನ್ನಾ ಮಾಡಿದ್ದಕ್ಕೆ ತನ್ನ ಹೊಲದಲ್ಲಿ ಬೆಳೆದ ಬೆಳೆಯಿಂದ ಜೋಳದ ರೊಟ್ಟಿ, ಶೇಂಗಾ ಚಟ್ನಿಪುಡಿ, ಪಲ್ಯವನ್ನ ತಯಾರಿಸಿ ಕುಮಾರಸ್ವಾಮಿ ಅವರಿಗೆ ಕಳುಹಿಸಿದ್ದಾರೆ.

    ಕೊರಿಯರ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ನಿವಾಸಕ್ಕೆ ಉಡುಗೊರೆ ಕಳಿಸಿದ್ದಾರೆ. ಕೊರಿಯರ್ ಬಾಕ್ಸ್ ನೋಡಿ ಮೊದಲು ಆತಂಕಗೊಂಡ ಭದ್ರತಾ ಸಿಬ್ಬಂದಿ, ಅಮೇಲೆ ತೆಗೆದು ನೋಡಿದಾಗ ಜೋಳದ ರೊಟ್ಟಿ, ಚಟ್ನಿ ಪುಡಿ ಇದೆ. ಅಲ್ಲದೆ ಒಂದು ಪತ್ರವನ್ನು ಬರೆದು ತಮ್ಮ ಗಿಫ್ಟ್ ಸ್ವೀಕಾರ ಮಾಡಬೇಕು ಅಂತ ಮನವಿ ಮಾಡಿದ್ದಾರೆ. ರೈತ ಗೋವಿಂದಪ್ಪನ ಪ್ರೀತಿಯ ಉಡುಗೊರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಭಾವುಕರಾಗಿದ್ದಾರೆ.