Tag: route change

  • ಜ.19ರಂದು ಬೆಂಗಳೂರಿಗೆ ಮೋದಿ – ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

    ಜ.19ರಂದು ಬೆಂಗಳೂರಿಗೆ ಮೋದಿ – ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿರ್ಬಂಧ

    ಬೆಂಗಳೂರು: ಶುಕ್ರವಾರ ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಆಗಮನ ಹಿನ್ನೆಲೆ ಸಾರ್ವಜನಿಕರ ಸಂಚಾರ ಮಾರ್ಗಗಳಲ್ಲಿ ಬದಲಾವಣೆ ಆಗಲಿದೆ.

    ಪ್ರಧಾನಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆ ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6ಗಂಟೆಯವರೆಗೆ ಸಂಚಾರ ಮಾರ್ಗದ ಹಲವೆಡೆ ನಿರ್ಬಂಧ ಹೇರಲಾಗಿದೆ. ಗೊಲ್ಲರಹಳ್ಳಿ ಗೇಟ್-ಹುಣಸೂರು ಗ್ರಾಮ (ಕೆಐಎಡಿಬಿ ಕೈಗಾರಿಕ ಪ್ರದೇಶ), ಡಾಬಾ ಗೇಟ್‌ನಿಂದ (ಎನ್‌ಹೆಚ್ 648) ವಿಮಾನ ನಿಲ್ದಾಣದ ಕಡೆಗೆ, ಹೆಣ್ಣೂರು ಬಾಗಲೂರು ಮುಖ್ಯರಸ್ತೆಯಿಂದ ವಿಮಾನ ನಿಲ್ದಾಣದ ಕಡೆಗೆ, ಚಿಕ್ಕಜಾಲ ಕೋಟೆ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣದವರೆಗೆ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ನೀಡಿದ್ದ SC ಒಳಮೀಸಲಾತಿಯನ್ನ ಪುನರ್ ಪರಿಶೀಲನೆ ಮಾಡ್ತೀವಿ: ಪರಮೇಶ್ವರ್

    ಇನ್ನು ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಕೆಐಎಡಿಬಿ ಕೈಗಾರಿಕಾ ಪ್ರದೇಶಕ್ಕೆ ತೆರಳುವ ವಾಹನಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಶುಕ್ರವಾರ ಬೆಳಗ್ಗೆ 9:35ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. 9:40 ಕ್ಕೆ ಕಲಬುರಗಿಯಿಂದ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 12:10ಕ್ಕೆ ಹೆಲಿಕಾಪ್ಟರ್ ಮೂಲಕ ಸೊಲ್ಲಾಪುರದಿಂದ ನಿರ್ಗಮಿಸಿ, ಮಧ್ಯಾಹ್ನ 1 ಗಂಟೆಗೆ ಕಲಬುರಗಿ ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಇದನ್ನೂ ಓದಿ: ಭಾರತ ಚುನಾವಣಾ ಆಯೋಗದಿಂದ ಕರ್ನಾಟಕಕ್ಕೆ ಎರಡು ಪ್ರತಿಷ್ಠಿತ ಪ್ರಶಸ್ತಿ ಘೋಷಣೆ

    1:05 ಕ್ಕೆ ವಿಶೇಷ ವಿಮಾನದ ಮೂಲಕ ಕಲಬುರಗಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2:10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. 2:15 ಕ್ಕೆ ಕೆಐಎಎಲ್ ನಿಂದ ರಸ್ತೆ ಮಾರ್ಗವಾಗಿ ದೇವನಹಳ್ಳಿ ತಾಲೂಕಿನ ಭಟ್ಟರ ಮಾರನಹಳ್ಳಿಗೆ ಪ್ರಯಾಣ ಮಾಡಲಿದ್ದಾರೆ. 2:45 ಕ್ಕೆ ಭಟ್ಟರಮಾರನಹಳ್ಳಿಗೆ ತಲುಪಲಿದ್ದಾರೆ. ಬಿಐಇಟಿಸಿ ಉದ್ಘಾಟನೆ ಮತ್ತು ಬೋಯಿಂಗ್ ಸುಕನ್ಯಾ ಕಾರ್ಯಕ್ರಮ ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಬೆಸ್ಕಾಂ ವ್ಯಾಪ್ತಿಯ ಕೆಲವೆಡೆ ಇಂದು ವಿದ್ಯುತ್ ವ್ಯತ್ಯಯ – ಎಲ್ಲೆಲ್ಲಿ?

  • ತುಮಕೂರು ನಗರ ಪ್ರವೇಶದ ಮಾರ್ಗ ಬದಲಾವಣೆ

    ತುಮಕೂರು ನಗರ ಪ್ರವೇಶದ ಮಾರ್ಗ ಬದಲಾವಣೆ

    ಬೆಂಗಳೂರು: ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ಶಿವೈಕ್ಯರಾದ ಸುದ್ದಿ ತಿಳಿಯುತ್ತಿದ್ದಂತೆ ಸಿದ್ದಗಂಗಾ ಮಠಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ತುಮಕೂರಿಗೆ ಬರುವವರ ಹಾಗೂ ತುಮಕೂರು ಮೂಲಕ ಬೆಂಗಳೂರು, ಉತ್ತರ ಕರ್ನಾಟಕದ ಕಡೆಗೆ ಹೋಗುವ ಮಾರ್ಗವನ್ನು ಬದಲಿಸಲಾಗಿದೆ.

    ರಾಷ್ಟ್ರೀಯ ಹೆದ್ದಾರಿ-04 ಮಾರ್ಗದಲ್ಲಿ ಕ್ಯಾತ್ಸಂದ್ರದಿಂದ ಸರ್ಕಲ್‍ವರೆಗೂ ಎಲ್ಲ ರೀತಿಯ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಕೆಲವು ಮಾರ್ಗವನ್ನು ಬದಲಾವಣೆ ಮಾಡಲಾಗಿದೆ. ಸಿದ್ದಗಂಗಾ ಮಠಕ್ಕೆ ಬರುವ ಭಕ್ತರ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಗಣ್ಯರು ಹೆಲಿಕಾಪ್ಟರ್ ಮೂಲಕ ಮಠಕ್ಕೆ ಭೇಟಿ ನೀಡುವ ಹಿನ್ನಲೆಯಲ್ಲಿ ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಅಂತ್ಯಸಂಸ್ಕಾರಕ್ಕೆ ಶಿವಣ್ಣನಾಗಿ ಬಂದವರು ಶಿವಕುಮಾರ ಸ್ವಾಮೀಜಿಯಾದ್ರು!

    ಮಾರ್ಗ ಬದಲಾವಣೆ ಹೇಗಿದೆ?:
    ಶಿರಾ ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ವಾಹನಗಳು ಮಧುಗಿರಿ, ಕೊರಟಗೆರೆ, ದಾಬಸಪೇಟೆ ಮಾರ್ಗವಾಗಿ ತೆರಳಲಿವೆ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ವಾಹನಗಳು ಗುಬ್ಬಿ ಗೇಟ್ ರಿಂಗ್ ರಸ್ತೆ ಮೂಲಕ ಕುಣಿಗಲ್ ಜಂಕ್ಷನ್ ಬಳಿ ಬಲಕ್ಕೆ ತಿರುಗಿ ಗೂಳೂರು ಮೂಲಕ ಸಾಗುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ. ಬೆಂಗಳೂರಿನಿಂದ ತುಮಕೂರಿಗೆ ಆಗಮಿಸುವ ವಾಹನಗಳು ಗುಬ್ಬಿ ರಿಂಗ್ ರಸ್ತೆ ಮುಖಾಂತರ ನಗರವನ್ನು ಪ್ರವೇಶಿಸುವ ವ್ಯವಸ್ಥೆ ಕಲ್ಪಿಸಲಾಗಿದೆ.

    ಶಿರಾ ಕಡೆಯಿಂದ ತುಮಕೂರು ನಗರಕ್ಕೆ ಬರುವ ಸಾರ್ವಜನಿಕರು ರಂಗಾಪುರ ಬ್ರಿಡ್ಜ್ ಬಳಿ ಸರ್ವಿಸ್ ರಸ್ತೆ, ಶ್ರೀದೇವಿ ಕಾಲೇಜ್ ಮುಖಾಂತರ ತುಮಕೂರು ತಲುಪಬಹುದು.

    https://youtu.be/jtctwPaRF7o

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv