Tag: rowdies

  • ರಾತ್ರಿ ರೋಮಿಯೋಗಳಿಗೆ ಪೊಲೀಸರಿಂದ ಶಾಕ್

    ರಾತ್ರಿ ರೋಮಿಯೋಗಳಿಗೆ ಪೊಲೀಸರಿಂದ ಶಾಕ್

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರಿ ರೋಮಿಯೋಗಳಿಗೆ ಬೆಂಗಳೂರಿನ ಪೊಲೀಸರು ಶಾಕ್ ನೀಡಿದ್ದಾರೆ.

    ದಾರಿಯಲ್ಲಿ ನಿಂತು ಹುಡುಗಿಯರನ್ನ ಚುಡಾಯಿಸೋರ ಮೇಲೆ ಮತ್ತು ಅಕ್ಕ ಪಕ್ಕದವರಿಗೆ ತೊಂದರೆ ಕೊಡುವವರ ಮೇಲೆ ಖಾಕಿ ಕಣ್ಣು ಹಾಕಿದೆ. ಬೆಂಗಳೂರಿಗರ ರಕ್ಷಣೆಗೆ ಪೊಲೀಸರು ಹೊಸ ಕಾರ್ಯಾಚರಣೆಯನ್ನು ಶುರು ಮಾಡಿದ್ದು, ಡಿಸಿಪಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ಈ ಸ್ಪೆಷಲ್ ಕಾರ್ಯಾಚರಣೆ ಮಾಡಲಾಗಿದೆ.

    ಹೆಬ್ಬಾಳ ಠಾಣಾ ಪೊಲೀಸರು ಕಾರ್ಯಾಚರಣೆ ಮಾಡಿದ್ದು, ರಾತ್ರಿ ಹೊತ್ತು ಆಟೋ ಸ್ಟ್ಯಾಂಡ್, ಬಸ್‍ಸ್ಟ್ಯಾಂಡ್ ಮತ್ತು ರೈಲ್ವೆ ಸ್ಟೇಷನ್ ಬಳಿ ಯುವತಿ ಮತ್ತು ಮಹಿಳೆಯರನ್ನು ಚುಡಾಯಿಸುತ್ತಿದ್ದ 210 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ.

    ವಶಕ್ಕೆ ಪಡೆದವರಲ್ಲಿ ಹಲವರು ರೌಡಿಶೀಟರ್ ಗಳೂ ಇದ್ದಾರೆ. ಸ್ಟೇಷನ್‍ಗೆ ಕರೆದುಕೊಂಡು ಹೋಗಿ ಹೆತ್ತವರನ್ನ ಕರೆಸಿ ಅವರ ಎದುರಲ್ಲೇ ಬುದ್ಧಿ ಹೇಳಿ ಮನೆಗೆ ಕಳುಹಿಸಿದ್ದಾರೆ. ಡಿಸಿಪಿ ಎನ್ ಶಶಿಕುಮಾರ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

  • ಬೆಳಗಿನ ಜಾವ ಕನಸು ಕಾಣ್ತಿದ್ದ ರೌಡಿಗಳಿಗೆ ಶಾಕ್ ಕೊಟ್ಟ ಡಿಸಿಪಿ ರವಿಚನ್ನಣ್ಣನವರ್

    ಬೆಳಗಿನ ಜಾವ ಕನಸು ಕಾಣ್ತಿದ್ದ ರೌಡಿಗಳಿಗೆ ಶಾಕ್ ಕೊಟ್ಟ ಡಿಸಿಪಿ ರವಿಚನ್ನಣ್ಣನವರ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಗಳ ಮನೆಗಳ ಮೇಲೆ ದಾಳಿ ಮಾಡುವ ಮೂಲಕ ಚಳಿ ಬಿಡಿಸಿದ್ದಾರೆ.

    ಪಶ್ಚಿಮ ವಿಭಾಗದ ಪೊಲೀಸರು ತಮ್ಮ ವ್ಯಾಪ್ತಿಗೆ ಬರುವ ಎಲ್ಲಾ ಪೊಲೀಸ್ ಠಾಣಾ ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಡಿಸಿಪಿ ರವಿ ಚನ್ನಣ್ಣನವರ್ ಅವರ ನೇತೃದಲ್ಲಿ ಮುಂಜಾನೆ ನಾಲ್ಕು ಗಂಟೆಗೆ ಪೊಲೀಸರು ದಾಳಿ ಮಾಡಿದ್ದಾರೆ.

    ಇನ್ನೂ ಕೆಲವು ದಿನಗಳಲ್ಲಿ ಲೋಕಸಭಾ ಚುನಾವಣಾ ದಿನಾಂಕ ಫೋಷಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಡಿಸಿಪಿ ರವಿ ಚನ್ನಣ್ಣನವರ್ ಅವರು ರೌಡಿಶೀಟರ್ ಗಳಿಗೆ ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾಗಬಾರದೆಂದು ಎಚ್ಚರಿಸಲು ಸೂಚಿಸಿದ್ದರು. ಅವರ ಸೂಚನೆ ಮೇರೆಗೆ ಪೊಲೀಸರು ರೌಡಿಗಳು ಮಲಗಿದ್ದಾಗಲೇ ಅವರ ಮನೆಯ ಮೇಲೆ ದಾಳಿ ನಡೆಸಿದ್ದಾರೆ.

    ದಾಳಿಯ ವೇಳೆ ಕೆಲ ರೌಡಿಗಳ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿದ್ದವು. ಅವುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 150 ಮಂದಿ ರೌಡಿಶೀಟರ್ ಗಳ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

    ಪಾರ್ಟಿ ಬಳಿಕ ಸ್ನೇಹಿತರ ಮೇಲೆ ಲಾಂಗು, ಮಚ್ಚಿನಿಂದ ಹಲ್ಲೆ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂತಹದ್ದೇ ಪ್ರಕರಣವೊಂದು ಯಶವಂತಪುರ ರೈಲ್ವೇ ನಿಲ್ದಾಣ ಬಳಿ ಗುರುವಾರ ಸಂಜೆ 6.30 ಗಂಟೆಗೆ ಸುಮಾರು ನಡೆದಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

    ಗೌತಮ್, ರಘು ಹಾಗೂ ಸಲ್ಲು ಹಲ್ಲೆ ಮಾಡಿದ ಆರೋಪಿಗಳು. ಈ ಮೂವರು ಸೇರಿ ತಮ್ಮ ಸ್ನೇಹಿತರಾದ ವಿನೋದ್ ಕುಮಾರ್ ಹಾಗೂ ಮಾರುತಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಆಗಿದ್ದೇನು?:
    ಹಲ್ಲೆ ಮಾಡಿದ ಹಾಗೂ ಹಲ್ಲೆಗೆ ಒಳಗಾದ ಐವರು ಸ್ನೇಹಿತರಾಗಿದ್ದು, ಒಟ್ಟಾಗಿ ಗುರುವಾರ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಪರಸ್ಪರ ಜಗಳವಾಡಿದ್ದಾರೆ. ಈ ವೇಳೆ ಗೌತಮ್, ರಘು ಹಾಗೂ ಸಲ್ಲು ಲಾಂಗ್, ಮಚ್ಚು ಹಿಡಿದು ವಿನೋದ್ ಕುಮಾರ್ ಮತ್ತು ಮಾರುತಿ ಮೇಲೆ ಹಲ್ಲೆ ಮಾಡಿದ್ದಾರೆ. ಇದನ್ನು ಸ್ಥಳೀಯರು ನೋಡುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾರೆ.

    ಈ ಕುರಿತು ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ ಕ್ವಾಟರ್ಸ್ ನಲ್ಲಿ ಪೇದೆ, ರೌಡಿಗಳಿಂದ ಎಣ್ಣೆ ಪಾರ್ಟಿ?

    ಪೊಲೀಸ್ ಕ್ವಾಟರ್ಸ್ ನಲ್ಲಿ ಪೇದೆ, ರೌಡಿಗಳಿಂದ ಎಣ್ಣೆ ಪಾರ್ಟಿ?

    ಶಿವಮೊಗ್ಗ: ಪೊಲೀಸ್ ಕ್ವಾಟರ್ಸ್ ನಲ್ಲಿ ಓರ್ವ ಪೇದೆ ಹಾಗೂ ರೌಡಿಗಳು ಸ್ನೇಹಿತರಂತೆ ಒಟ್ಟಿಗೆ ಎಣ್ಣೆ ಪಾರ್ಟಿ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ.

    ಇಲ್ಲಿನ ವಿನೋಬಾ ನಗರದ ಮೊದಲನೇ ತಿರುವಿನಲ್ಲಿರುವ ಸಿವಿಲ್ ಪೊಲೀಸ್ ಕ್ವಾಟರ್ಸ್ ನ 101ನೇ ಮನೆಯಲ್ಲಿ ಸಂಚಾರ ಪೊಲೀಸ್ ಠಾಣೆಯ ಪೇದೆ ಪುನೀತ್ ವಾಸವಾಗಿದ್ದಾರೆ. ಪುನೀತ್ ಅವರು ಕೆಲ ದಿನಗಳ ಹಿಂದೆ ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದ ಕುಖ್ಯಾತ ರೌಡಿ ನವುಲೆ ಆನಂದ್, ಕೊಕ್ಕರೆ ಶಾಮ ಸೇರಿದಂತೆ ಕೆಲವು ರೌಡಿಗಳ ಜೊತೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿದ ಎಸ್‍ಪಿ ಅಭಿನವ್ ಖರೆ ಅವರು, ರೌಡಿಗಳು ಕಳೆದ ನಾಲ್ಕೈದು ದಿನಗಳಿಂದ ಪುನೀತ್ ಅವರ ಮನೆಗೆ ಬಂದು ನಡುರಾತ್ರಿವರೆಗೂ ಪಾರ್ಟಿ ಮಾಡಿದ್ದಾರೆ ಅಂತ ಸ್ಥಳೀಯರು ದೂರು ನೀಡಿದ್ದರು. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ನಾನು ಪರಿಶೀಲನೆ ನಡೆಸಿದ್ದೇನೆ. ಆಗ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಸರ್ಕಲ್ ಇನ್‍ಸ್ಪೆಕ್ಟರ್ ನೇತೃತ್ವದಲ್ಲಿ ತಂಡ ರಚಿಸಿ, ತಪ್ಪಿತಸ್ಥರನ್ನು ಪತ್ತೆ ಹಚ್ಚುವಂತೆ ಸೂಚನೆ ನೀಡುವೆ ಎಂದು ಮಾಹಿತಿ ನೀಡಿದರು.

    ರೌಡಿಗಳು ಯಾಕೆ ಬಂದಿದ್ದರು ಎನ್ನುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಕೆಲವೊಮ್ಮೆ ಕ್ರೈಂ ಪೊಲೀಸರನ್ನು ರೌಡಿಗಳು ಭೇಟಿ ಆಗುತ್ತಾರೆ. ಒಂದು ವೇಳೆ ಸರ್ಕಾರಿ ಕ್ವಾಟರ್ಸ್ ನಲ್ಲಿ ಹಾಗೂ ಸ್ವಂತ ಮನೆಯಲ್ಲಿ ರೌಡಿಗಳ ಜೊತೆಗೆ ಪಾರ್ಟಿ ಮಾಡಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬೆಂಗಳೂರು ಪೊಲೀಸರ ವಿರುದ್ಧ ರೌಡಿಗಳ ಸ್ಕೆಚ್!

    ಬೆಂಗಳೂರು: ರೌಡಿಗಳ ಸಭೆ ಕೇಳಿದ್ರಾ? ಇಲ್ಲದ್ರೆ ಕೇಳಿ. ರೌಡಿಗಳ ಮೇಲೆ ಪೊಲೀಸ್ ದಾಳಿ ನಡೆಸಿದ್ದಕ್ಕೆ ಈಗ ಬೆಂಗಳೂರಿನ ರೌಡಿಗಳು ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದು ಭಯಂಕರ ಅಪರಾಧಗಳನ್ನು ನಡೆಸಲು ಮುಂದಾಗಿದ್ದಾರೆ.

    ಹೌದು. ಸೈಲೆಂಟ್ ಸುನಿಲ್, ಒಂಟೆ ರೋಹಿತನ ಬಂಧನ ಹಿನ್ನೆಲೆಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ನಗರದ ಅಪಾರ್ಟ್ ಮೆಂಟ್‍ನಲ್ಲಿ ರೌಡಿಗಳು ಸಭೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಸಿಕ್ಕಿದೆ.

    ನಿರ್ದಾಕ್ಷಿಣ್ಯವಾಗಿ ರೌಡಿಗಳನ್ನು ಬಂಧನ ಮಾಡುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲಲು ರೌಡಿಗಳು ಪ್ಲಾನ್ ಮಾಡಿದ್ದಾರೆ. ಭಯಂಕರವಾಗಿ ಅಪರಾಧ ನಡೆಸಿ ಪೊಲೀಸರಿಗೆ ರೌಡಿ ಚಟುವಟಿಕೆ ಬಿಸಿ ಮುಟ್ಟಿಸೋಕೆ ಸಭೆ ನಡೆಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

    ಬುಧವಾರ ಸುದ್ದಿಗೋಷ್ಠಿ ನಡೆಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್, ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಹೇಳಿದ್ದರು.

    ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನಮ್ಮ ಹೊಣೆ. ಕಾನೂನು ಸುವ್ಯವಸ್ಥೆ ವಿರುದ್ಧವಾಗಿದ್ದವರನ್ನು ಸುಮ್ಮನೇ ಬಿಡುವುದಿಲ್ಲ. ಸಾರ್ವಜನಿಕರು ಧೈರ್ಯವಾಗಿ ಮುಂದೆ ಬಂದು ದೂರು ನೀಡಿ. ಸ್ಥಳೀಯ ಠಾಣೆಗಳಿಗೆ ದೂರು ನೀಡಿ, ಇಲ್ಲವಾದಲ್ಲಿ ನಮ್ಮ ಬಳಿ ಬನ್ನಿ ಎಂದು ಅವರು ತಿಳಿಸಿದ್ದರು.

    ಬೆಂಗಳೂರಿನಲ್ಲಿ ಅಂಡರ್ ವಲ್ರ್ಡ್ ಮಾಫಿಯಾ, ರಿಯಲ್ ಎಸ್ಟೇಟ್, ಪುಡಿ ರೌಡಿಗಳ ಉಪಟಳ ಹೆಚ್ಚಾಗಿದೆ. ಗುಂಪಿನಲ್ಲಿದ್ದರೆ ಮಾತ್ರ ಅವರು ರೌಡಿಗಳು, ಒಬ್ಬರೆ ಇದ್ದರೆ ಇವರು ಪುಕ್ಕಲರು. ಭೂಮಾಫಿಯಾ, ಗಾರ್ಬೆಜ್ ಮಾಫಿಯಾ, ಸಂಬಂಧ ವಿಲ್ಲದ ವಿಚಾರಗಳಿಗೆ ತಲೆಹಾಕುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಮಂತ್ ನಿಂಬಾಳ್ಕರ್ ಎಚ್ಚರಿಕೆ ನೀಡಿದ್ದರು.

  • ಇನ್ನು ಮುಂದೆ ರೌಡಿಗಳ ಆಕ್ರಮ ಆಸ್ತಿಯನ್ನು ಕಲೆ ಹಾಕಲಿದ್ದಾರೆ ಪೊಲೀಸರು

    ಬೆಂಗಳೂರು: ಇಲ್ಲಿಯವರೆಗೆ ರೌಡಿ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆವು. ಇನ್ನು ಮುಂದೆ ರೌಡಿಗಳ ಅಕ್ರಮ ಆಸ್ತಿಗಳನ್ನು ಕಲೆ ಹಾಕಲಾಗುವುದು ಎಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಬಾಳ್ಕರ್ ಹೇಳಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾರ್ವಜನಿಕರ ಹಿತಾಸಕ್ತಿ ಕಾಪಾಡುವುದು ನಮ್ಮ ಹೊಣೆ. ಕಾನೂನು ಸುವ್ಯವಸ್ಥೆ ವಿರುದ್ಧವಾಗಿದ್ದವರನ್ನು ಸುಮ್ಮನೇ ಬಿಡುವುದಿಲ್ಲ. ಸಾರ್ವಜನಿಕರು ಧೈರ್ಯವಾಗಿ ಮುಂದೆ ಬಂದು ದೂರು ನೀಡಿ. ಸ್ಥಳೀಯ ಠಾಣೆಗಳಿಗೆ ದೂರು ನೀಡಿ, ಇಲ್ಲವಾದಲ್ಲಿ ನಮ್ಮ ಬಳಿ ಬನ್ನಿ ಎಂದು ಅವರು ಹೇಳಿದರು.

    ಬೆಂಗಳೂರಿನಲ್ಲಿ ಅಂಡರ್ ವರ್ಲ್ಡ್ ಮಾಫಿಯಾ, ರಿಯಲ್ ಎಸ್ಟೇಟ್, ಪುಡಿ ರೌಡಿಗಳ ಉಪಟಳ ಹೆಚ್ಚಾಗಿದೆ. ಗುಂಪಿನಲ್ಲಿದ್ದರೆ ಮಾತ್ರ ಅವರು ರೌಡಿಗಳು, ಒಬ್ಬರೆ ಇದ್ದರೆ ಇವರು ಪುಕ್ಕಲರು. ಭೂಮಾಫಿಯಾ, ಗಾರ್ಬೆಜ್ ಮಾಫಿಯಾ, ಸಂಬಂಧ ವಿಲ್ಲದ ವಿಚಾರಗಳಿಗೆ ತಲೆಹಾಕುವವರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ಟಾಟಾ ರಮೇಶ ನೀಡಿದ ದೂರಿನನ್ವಯ ಮಂಗಳವಾರ ಅಗ್ನಿ ಶ್ರೀಧರ್ ನಿವಾಸದ ಮೇಲೆ 150 ಕೂ ಹೆಚ್ಚು ಅಧಿಕಾರಿ ಹಾಗು ಸಿಬ್ಬಂದಿಯಿಂದ ದಾಳಿ ನಡೆಸಿದ್ದೆವು. ದಾಳಿ ನಡೆಸಿದ್ದ ಸಂದರ್ಭದಲ್ಲಿ ಅಕ್ರಮ ಶಸ್ತ್ರಸ್ತ್ರಗಳು ಪತ್ತೆಯಾಗಿವೆ. ಶ್ರೀಧರ್‍ಗೆ ಲಘು ಹೃದಯಘಾತವಾಗಿದ್ದು, ಪೊಲೀಸ್ ಭದ್ರತೆಯಲ್ಲಿ ಚಿಕಿತ್ಸೆ ನಡೆಸಲಾಗ್ತಿದೆ.

    ಏಳು ಮಂದಿ ಆರೋಪಿಗಳ ಮೇಲೆ ಕುಮಾರಸ್ವಾಮಿ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ರೋಹಿತ್ ಅಲಿಯಾಸ್ ಒಂಟೆ ಮತ್ತು ಸೈಲೆಂಟ್ ಸುನಿಲನ್ನು ಟಾಟಾ ರಮೇಶ್ ಕೊಲೆ ಬೆದರಿಕೆ ಮೇಲೆ ವಿಚಾರಣೆ ನಡೆಸಲಾಗ್ತಿದೆ. ಕಬಡಗೆರೆ ಶ್ರೀನಿವಾಸ್ ಶೂಟೌಟ್ ಪ್ರಕರಣದಲ್ಲಿ ಇವರು ಶಾಮೀಲಾಗಿರುವ ಶಂಕೆ ಇದ್ದು ವಿಚಾರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದರು.