Tag: RPN singh

  • ಕಾಂಗ್ರೆಸ್‌ ತಾರಾ ಪ್ರಚಾರಕರಾಗಿದ್ದ ಆರ್‌ಪಿಎನ್‌ ಸಿಂಗ್‌ ಬಿಜೆಪಿ ಸೇರ್ಪಡೆ

    ಲಕ್ನೋ: ಕೇಂದ್ರದ ಮಾಜಿ ಸಚಿವ, ಈ ಬಾರಿ ಚುನಾವಣೆಯ ತಾರಾ ಪ್ರಚಾರಕರಾಗಿದ್ದ ಆರ್‌ಪಿನ್‌ ಸಿಂಗ್‌ ಇಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ.

    ಸಿಂಗ್‌ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತಮ್ಮ ಭದ್ರಕೋಟೆಯಾದ ಪದ್ರೌನಾದಿಂದ ಯುಪಿ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆ ಇದೆ. ಇದನ್ನೂ ಓದಿ: UP Election: ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಆರ್‌ಪಿಎನ್ ಸಿಂಗ್ – ಬಿಜೆಪಿ ಸೇರ್ಪಡೆ ಸಾಧ್ಯತೆ

    ದೆಹಲಿಯಲ್ಲಿ ಬಿಜೆಪಿ ಸೇರಿದ ಸಿಂಗ್‌, ಕಳೆದ 32 ವರ್ಷಗಳಿಂದ ಒಂದೇ ಪಕ್ಷದಲ್ಲಿ ಇದ್ದೆ. ಆದರೆ ಈಗ ಆ ಪಕ್ಷ (ಕಾಂಗ್ರೆಸ್) ಮೊದಲಿನಂತಿಲ್ಲ.‌ ಈಗ ಎಲ್ಲರಿಗೂ ತಿಳಿದಿರುವಂತೆ ಬಿಜೆಪಿ ಜನಹಿತಕ್ಕಾಗಿ ದುಡಿಯುತ್ತಿದೆ. ರಾಷ್ಟ್ರವನ್ನು ಕಟ್ಟುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

    ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್‌ ಸೋಮವಾರ ಘೋಷಿಸಿದ್ದ ತಾರಾ ಪ್ರಚಾರಕರ ಪಟ್ಟಿಯಲ್ಲಿ ಆರ್‌ಪಿಎನ್‌ ಸಿಂಗ್‌ ಕೂಡ ಸ್ಥಾನ ಪಡೆದುಕೊಂಡಿದ್ದರು. ಆದರೆ ಅವರು ಪಕ್ಷದ ವಿಚಾರವಾಗಿ ಅಸಮಾಧಾನ ಹೊಂದಿದ್ದರು. ಯುಪಿಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದ ಪ್ರಚಾರದಿಂದ ದೂರ ಉಳಿದಿದ್ದರು. ಇದನ್ನೂ ಓದಿ: ರಾಷ್ಟ್ರೀಯತೆಗಾಗಿ ಬಿಜೆಪಿಯನ್ನು ಸೇರಿದ್ದೇನೆ: ಅಪರ್ಣಾ ಯಾದವ್

  • UP Election: ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಆರ್‌ಪಿಎನ್ ಸಿಂಗ್ – ಬಿಜೆಪಿ ಸೇರ್ಪಡೆ ಸಾಧ್ಯತೆ

    UP Election: ಕಾಂಗ್ರೆಸ್‌ಗೆ ಗುಡ್ ಬೈ ಹೇಳಿದ ಆರ್‌ಪಿಎನ್ ಸಿಂಗ್ – ಬಿಜೆಪಿ ಸೇರ್ಪಡೆ ಸಾಧ್ಯತೆ

    ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದ್ದು ಬಿಜೆಪಿ, ಎಸ್ಪಿಯ ಬಳಿಕ ಈಗ ಕಾಂಗ್ರೆಸ್‌ಗೆ ಬಿಗ್ ಶಾಕ್ ಎದುರಾಗಿದೆ. CWC ಸದಸ್ಯ ಮತ್ತು ಎಐಸಿಸಿ ಪದಾಧಿಕಾರಿಯೂ ಆಗಿದ್ದ ಆರ್‌ಪಿಎನ್ ಸಿಂಗ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

    ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಗಣರಾಜೋತ್ಸವದ ಆಚರಣೆ ಹೊತ್ತಲ್ಲಿ ನಾನು ರಾಜಕೀಯ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದ್ದೇನೆ ಎಂದು ಹೇಳಿದ್ದಾರೆ. ಈ ಟ್ವೀಟ್‌ನಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ನೀಡಿದ ರಾಜೀನಾಮೆ ಪತ್ರವನ್ನು ಅವರು ಲಗತ್ತಿಸಿದ್ದಾರೆ. ಮೂಲಗಳ ಪ್ರಕಾರ ಅವರು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆಗಳಿವೆ.

    ಚುನಾವಣೆ ದೃಷ್ಟಿಯಿಂದ ಇದು ಕಾಂಗ್ರೆಸ್ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರದು ಎನ್ನಲಾಗುತ್ತಿದೆ. ಆರ್‌ಪಿಎನ್ ಸಿಂಗ್ 2009 ರಲ್ಲಿ ಅವರು ಗೋರಖ್‌ಪುರದ ಪಕ್ಕದಲ್ಲಿರುವ ಕುಶಿ ನಗರದಿಂದ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. 1996 ರಿಂದ 2009 ರವರೆಗೆ ಮೂರು ಬಾರಿ ಪದ್ರೌನಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದರು‌. ಆದರೆ ಭಾರಿ ಪ್ರಬಲ ನಾಯಕರಲ್ಲದಿದ್ದರೂ ಹೈಕಮಾಂಡ್ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.

    ಇದನ್ನೂ ಓದಿ: ಪಂಜಾಬ್‍ನಲ್ಲಿ AAP ಅಧಿಕಾರಕ್ಕೆ ಬಂದ್ರೆ ಜನರ ಸಲಹೆ ಮೇರೆಗೆ ಬಜೆಟ್: ಅರವಿಂದ್ ಕೇಜ್ರಿವಾಲ್

    ಆರ್‌ಪಿಎನ್ ಸಿಂಗ್ ರಾಜೀನಾಮೆ ಚುನಾವಣೆಗೆ ನಷ್ಟವಾಗದಿದ್ದರೂ ಪಕ್ಷದ ಮಟ್ಟಿಗೆ ನಷ್ಟ ಎನ್ನಲಾಗಿದೆ. ‌ಅವರು ಯುಪಿಎ 2 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿದ್ದರು. ರಾಹುಲ್ ಗಾಂಧಿ ಒಡನಾಡಿಯಾಗಿದ್ದ ಹಿನ್ನೆಲೆ ಭವಿಷ್ಯದ ಯುವ ನಾಯಕರ ಪೈಕಿ ಇವರು ಒಬ್ಬರಾಗಿದ್ದರು. ಒಬಿಸಿ ಕುರ್ಮಿ ​​ಸಮುದಾಯಕ್ಕೆ ಸೇರಿದ ಸಿಂಗ್, ಕೆಲ ವರ್ಷಗಳ ಹಿಂದೆ ಜಾರ್ಖಂಡ್‌ನ ಎಐಸಿಸಿ ಉಸ್ತುವಾರಿಯಾಗಿದ್ದರು.

    ಈ ರಾಜೀನಾಮೆಯಿಂದ ಪ್ರಭಾವಿ ಕುಟುಂಬದ ಹಿನ್ನೆಲೆಯ ನಾಯಕನನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಆರ್‌ಪಿಎನ್‌ ಸಿಂಗ್ ತಂದೆ ಕುನ್ವರ್ ಚಂದ್ರ ಪ್ರತಾಪ್ ನಾರಾಯಣ್ ಅವರು ಶಾಸಕರಾಗಿದ್ದರು ಮತ್ತು ಎರಡು ಬಾರಿ ಸಂಸದರಾಗಿದ್ದರು. 1980 ರಲ್ಲಿ ಇಂದಿರಾ ಗಾಂಧಿ ಸರ್ಕಾರದಲ್ಲಿ ಸಚಿವರಾಗಿದ್ದರು.

    ಕಳೆದ ವರ್ಷ ರಾಹುಲ್‌ ಗಾಂಧಿ ಆಪ್ತ ಜಿತಿನ್‌ ಪ್ರಸಾದ್‌ ಅವರನ್ನು ಕಾಂಗ್ರೆಸ್ ಕಳೆದುಕೊಂಡಿತು. ಅವರು ಬಿಜೆಪಿ ಸೇರಿ ನಂತರ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ಸಚಿವರಾದರು. ಇದನ್ನೂ ಓದಿ: ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ