Tag: Rs.75 Coin

  • ಸೆಂಟ್ರಲ್ ವಿಸ್ತಾ ಉದ್ಘಾಟನೆಯ ಸವಿನೆನಪಿಗೆ ವಿಶೇಷ ಅಂಚೆ ಚೀಟಿ, 75 ರೂ. ನಾಣ್ಯ ಬಿಡುಗಡೆ

    ಸೆಂಟ್ರಲ್ ವಿಸ್ತಾ ಉದ್ಘಾಟನೆಯ ಸವಿನೆನಪಿಗೆ ವಿಶೇಷ ಅಂಚೆ ಚೀಟಿ, 75 ರೂ. ನಾಣ್ಯ ಬಿಡುಗಡೆ

    ನವದೆಹಲಿ: ನೂತನ ಸಂಸತ್ (New Parliament) ಭವನದ ಉದ್ಘಾಟನೆಯ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಭಾನುವಾರ ವಿಶೇಷ ಅಂಚೆ ಚೀಟಿ (Postage Stamp) ಮತ್ತು 75 ರೂ. ನಾಣ್ಯವನ್ನು (Rs 75 Coin) ಬಿಡುಗಡೆ ಮಾಡಿದ್ದಾರೆ.

    ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸವನ್ನು ಹೊಂದಿದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಬಳಸಿ ನಾಣ್ಯ ತಯಾರಿಸಲಾಗಿದೆ. ಅಲ್ಲದೆ ಇದು 35 ಗ್ರಾಂ. ತೂಕ ಹೊಂದಿದೆ. ಇದನ್ನೂ ಓದಿ: ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಮುದ್ರೆಯ ಚಿತ್ರವನ್ನು ಹೊಂದಿದೆ. ಅದರ ಸುತ್ತಲೂ ದೇವನಾಗರಿ ಲಿಪಿಯಲ್ಲಿ `ಭಾರತ್’ ಮತ್ತು ಇಂಗ್ಲಿಷ್‍ನಲ್ಲಿ `ಇಂಡಿಯಾ’ ಎಂದು ಬರೆಯಲಾಗಿದೆ. ಸಿಂಹದ ಮುದ್ರೆಯ ಕೆಳಗೆ ಅಂತಾರಾಷ್ಟ್ರೀಯ ಅಂಕಿಗಳಲ್ಲಿ 75 ಎಂದು ಮುದ್ರಿಸಲಾಗಿದೆ. ಅಲ್ಲದೆ ರೂ. ಚಿಹ್ನೆಯನ್ನು ಸಹ ಇರಿಸಲಾಗಿದೆ.

    ನಾಣ್ಯದ ಇನ್ನೊಂದು ಬದಿಯಲ್ಲಿ ಪಾರ್ಲಿಮೆಂಟ್‍ನ ಚಿತ್ರ ಮತ್ತು 2023ರ ಇಸವಿಯ ಉಲ್ಲೇಖ ಮಾಡಲಾಗಿದೆ. ಈ ವಿಶೇಷ ನಾಣ್ಯವನ್ನು ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥವಾಗಿ ಬಿಡುಗಡೆಗೊಳಿಸುತ್ತಿರುವುದು ಮಾತ್ರವಲ್ಲದೇ, ಇದು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವದ ಸಂಕೇತವೂ ಆಗಿರಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ. ಇದನ್ನೂ ಓದಿ: ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ

  • ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ನವದೆಹಲಿ: ನೂತನ ಸಂಸತ್ ಭವನ (New Parliament Building) ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು (Rs.75 Coin) ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

    75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ಎಂದು ತಿಳಿಸಿದೆ.

    ನಾಣ್ಯದ ಇನ್ನೊಂದು ಬದಿಯಲ್ಲಿ ನೂತನ ಸಂಸತ್ತಿನ ಸಂಕೀರ್ಣದ ಚಿತ್ರವನ್ನು ಹೊಂದಿರಲಿದೆ. ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.

    ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸವನ್ನು ಹೊಂದಿರಲಿದೆ. ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಬಳಸಿ ನಾಣ್ಯ ತಯಾರಿಸಲಾಗುತ್ತಿದ್ದು, ಇದು 35 ಗ್ರಾಂ ತೂಗಲಿದೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    ಈ ವಿಶೇಷ ನಾಣ್ಯವನ್ನು ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥವಾಗಿ ಬಿಡುಗಡೆಗೊಳಿಸುತ್ತಿರುವುದು ಮಾತ್ರವಲ್ಲದೇ ಇದು 75 ವರ್ಷಗಳ ಸ್ವತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವದ ಸಂಕೇತವೂ ಆಗಿರಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

    ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ 20ಕ್ಕೂ ಅಧಿಕ ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ, ಸಮಾಜವಾದಿ ಪಾರ್ಟಿ ಸೇರಿದಂತೆ ಹಲವು ಪಕ್ಷಗಳು ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಇದನ್ನೂ ಓದಿ: New Parliament Building ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಜೋರು – ವಿಪಕ್ಷಗಳ ಬಹಿಷ್ಕಾರ ಅಸ್ತ್ರಕ್ಕೆ ಪ್ರಧಾನಿ ಮೋದಿ ಕೌಂಟರ್

  • 75 ರೂ. ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ ಮೋದಿ

    75 ರೂ. ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆ ಮಾಡಿದ ಮೋದಿ

    ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್‍ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

    ಇದೇ ವೇಳೆ ಅಭಿವೃದ್ಧಿ ಪಡಿಸಿದ 17 ಹೊಸ ಜೈವಿಕ ಬಲವರ್ಧಿತ ಬೆಳೆಗಳನ್ನು ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿ, ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ನೀಡಿ ಖರೀದಿಸುವ ಬಗ್ಗೆ ಸರ್ಕಾರದ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

    ಎಂಎಸ್‍ಪಿ ಮತ್ತು ಸರ್ಕಾರದ ಸಂಗ್ರಹಣೆ ದೇಶದ ಆಹಾರ ಸುರಕ್ಷತೆಯ ಪ್ರಮುಖ ಭಾಗವಾಗಿದೆ. ಆದರೆ ಇದನ್ನು ಉತ್ತಮ ಸೌಲಭ್ಯಗಳೊಂದಿಗೆ ಮತ್ತು ವೈಜ್ಞಾನಿಕ ರೀತಿಯಲ್ಲಿ ಕಾರ್ಯನಿರ್ವಹಿಸುವಂತೆ ಮುಂದುವರಿಸುವುದು ಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ನಾವು ಬದ್ಧರಾಗಿದ್ದೇವೆ. ದೇಶದಲ್ಲಿ ಅಪೌಷ್ಟಿಕತೆಯನ್ನು ನಿವಾರಿಸಲು ರಾಗಿ ಮತ್ತು ಹೆಚ್ಚಿನ ಪೌಷ್ಠಿಕಾಂಶದ ಬೆಳೆಗಳಿಗೆ ಕೇಂದ್ರ ಉತ್ತೇಜನ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.

    ಇತ್ತೀಚೆಗೆ ಸರ್ಕಾರ ಜಾರಿ ಮಾಡಿದ್ದ ನೂತನ ಕೃಷಿ ತಿದ್ದುಪಡಿಗಳಿಂದ ರೈತರು ಮತ್ತಷ್ಟು ಲಾಭ ಪಡೆಯಲಿದ್ದಾರೆ. ಮತ್ತೊಂದೆಡೆ ಮದುವೆ ವಯಸ್ಸು ಎಷ್ಟಿರಬೇಕು ಎಂದು ನಿರ್ಧರಿಸಲು ಚರ್ಚೆಗಳು ನಡೆಯುತ್ತಿದೆ. ಈ ಕುರಿತು ರಚಿಸಿರುವ ಕಮಿಟಿ ವರದಿಯನ್ನು ನೀಡಿದ ಬಳಿಕ ನೂತನ ನಿಯಮಗಳನ್ನು ರೂಪಿಸಲಾಗುವುದು. ಹೆಣ್ಣು ಮಕ್ಕಳ ಮದುವೆಗೆ ಸರಿಯಾದ ವಯಸ್ಸಿನ ನಿರ್ಧಾರವನ್ನು ಏಕೆ ನೀಡಲಿಲ್ಲ ಎಂದು ದೇಶಾದ್ಯಂತ ಹೆಣ್ಣು ಮಕ್ಕಳು ನನಗೆ ಪತ್ರ ಬರೆಯುತ್ತಾರೆ. ಆದರೆ ತಜ್ಞರ ವರದಿ ಬಂದ ಕೂಡಲೇ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.