Tag: RTI Activists

  • ಟೋಲ್ ಬಳಿ ಲಾರಿ ಹರಿಸಿ RTI ಕಾರ್ಯಕರ್ತನ ಹತ್ಯೆಗೆ ಯತ್ನ!

    ಟೋಲ್ ಬಳಿ ಲಾರಿ ಹರಿಸಿ RTI ಕಾರ್ಯಕರ್ತನ ಹತ್ಯೆಗೆ ಯತ್ನ!

    ಬೆಂಗಳೂರು: ಕೊಬ್ಬರಿ ಹಗರಣ ಬಯಲಿಗೆಳೆದಿದ್ದ ಆರ್ ಟಿಐ ಕಾರ್ಯಕರ್ತ ರವಿಕುಮಾರ್ ಹತ್ಯೆಗೆ ಸಂಚು ನಡೆಸಲಾಗಿದೆ. ದಾಖಲೆ ಇಲ್ಲದೆ ಕೊಬ್ಬರಿಯನ್ನ ಹೊರರಾಜ್ಯಕ್ಕೆ ಅಕ್ರಮವಾಗಿ ಸಾಗಾಟದ ಬಗ್ಗೆ ವಾಣಿಜ್ಯ ತೆರಿಗೆ ಆಯುಕ್ತರಿಗೆ ತುಮಕೂರು ಮೂಲದ ರವಿ ದೂರು ನೀಡಿದ್ರು. ಅಲ್ಲದೆ ಅದಕ್ಕೆ ಬೇಕಾದ ಎಲ್ಲಾ ಆಡಿಯೋ, ವಿಡಿಯೋ ಸಾಕ್ಷ್ಯ ಕೂಡಾ ಒದಗಿಸಿದ್ದರು.

    ಇದರ ಮಧ್ಯೆ ರವಿ ಕುಮಾರ್ ಕಾರ್ ಮೇಲೆ ಲಾರಿ ಹರಿಸಿ ಹತ್ಯೆಗೆ ಸಂಚು ರೂಪಿಸಲಾಗಿದೆಯಂತೆ. ನೆಲಮಂಗಲ ಪಟ್ಟಣದ ನವಯುಗ ಟೋಲ್ ಬಳಿ ತಮಿಳುನಾಡು ರಿಜಿಸ್ಟ್ರೇಷನ್ ಲಾರಿ ರವಿ ಕಾರಿಗೆ ಡಿಕ್ಕಿ ಹೊಡೆದಿದೆ. ಚಾಲಕ ಇದು ಬ್ರೆಕ್ ಫೇಲ್ಯೂರ್‍ನಿಂದ ಆಗಿರುವ ಅಪಘಾತ ಎಂದು ಹೇಳಿದ್ರೂ, ಲಾರಿ ಬ್ರೇಕ್ ಫೇಲ್ಯೂರ್ ಆಗಿರಲಿಲ್ಲ ಅನ್ನೋದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರವಿಕುಮಾರ್ ದೂರು ಕೊಟ್ಟು ಒಂದೂವರೆ ತಿಂಗಳಾದ್ರೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ತಿಪಟೂರು ಎಪಿಎಂಸಿ ಕಾರ್ಯದರ್ಶಿಯನ್ನು ಕೇಳಿದ್ರೆ, ಈ ವಿಚಾರವಾಗಿ ದೂರು ನೀಡಿದ್ರೆ ಯಾವುದೇ ಪ್ರಯೋಜನ ಇಲ್ಲ. 29 ಮಂದಿ ಕೆಲಸಗಾರರ ಜಾಗದಲ್ಲಿ ಇರೋದು ಇಬ್ಬರು ಮಾತ್ರ. ಹೀಗಿದ್ದಾಗ ಅಕ್ರಮ ತಡೆಗಟ್ಟಲು ಹೇಗೆ ಸಾಧ್ಯ ಅಂತಿದ್ದಾರೆ ಎಂದು ರವಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಡವರ ಸಾಲಕ್ಕೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಸುಮ್ಮನಿದ್ದಾರೆ ಯಾಕೆ: ಟಿ.ಜೆ ಅಬ್ರಹಂ

    ಬಡವರ ಸಾಲಕ್ಕೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಸುಮ್ಮನಿದ್ದಾರೆ ಯಾಕೆ: ಟಿ.ಜೆ ಅಬ್ರಹಂ

    ಉಡುಪಿ: ದಾವೂದ್ ಯಾವತ್ತೂ ನಗು ನಗ್ತಾ ಇರ್ತಾನೆ. ಆತ ಅಳೋದನ್ನು ನಾನು ನೋಡಿಲ್ಲ. ಸಚಿವ ಪ್ರಮೋದ್ ಮಧ್ವರಾಜ್ ಕೂಡಾ ದಾವುದ್ ರೀತಿ ನಗ್ತಾರೆ ಎಂದು ಆರ್‍ಟಿಐ ಹೋರಾಟಗಾರ ಟಿ.ಜೆ ಅಬ್ರಹಂ ಹೇಳಿಕೆ ನೀಡಿದ್ದಾರೆ.

    ಮಲ್ಪೆ ಸಿಂಡಿಕೇಟ್ ಬ್ಯಾಂಕ್ ಶಾಖೆಯಲ್ಲಿ 1.1 ಕೋಟಿ ರೂಪಾಯಿ ಆಸ್ತಿಪತ್ರ ಅಡವಿಟ್ಟು 193 ಕೋಟಿ ರೂಪಾಯಿ ಸಚಿವರು ಸಾಲ ಪಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಗರಣ ಮಾಡಿದ್ದಾರೆ ಅಂತ ದಾಖಲೆ ಕೊಟ್ಟರೂ ಮಾಧ್ಯಮದ ಮುಂದೆ ನಗ್ತಾರೆ ಅಂತ ಟೀಕಿಸಿದರು.

    ಪ್ರಮೋದ್ ಮಧ್ವರಾಜ್ ಅವರೇ ನೀವು ನಿರಪರಾಧಿ ಎಂದು ದಾಖಲೆ ಬಿಡುಗಡೆ ಮಾಡಿ. ಮುಚ್ಚುಮರೆ ಮಾಡುವುದ್ಯಾಕೆ? ನಾನು ಸವಾಲು ಹಾಕುತ್ತಿದ್ದೇನೆ. ದಾಖಲೆ ಕೊಡಿ ಎಂದು ಒತ್ತಾಯಿಸಿದ್ದಾರೆ. ಸತ್ಯ ಹೊರ ತೆಗೆಯಲು ಹೊರಟರೆ ನಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲು ಹೊರಡ್ತಾರೆ. ನಾನು ಯಾವುದನ್ನೂ ಕೇರ್ ಮಾಡಲ್ಲ ಅಂತ ತಿರುಗೇಟು ನೀಡಿದರು. ಇದನ್ನೂ ಓದಿ: 193 ಕೋಟಿ ರೂ. ವಂಚನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದೂರು ದಾಖಲು

    ಸಿಂಡಿಕೇಟ್ ಬ್ಯಾಂಕ್ ಸಚಿವ ಪ್ರಮೋದ್ ಪರವಾಗಿ ನಿಂತಿದೆ. ಬ್ಯಾಂಕ್ ಅಧಿಕಾರಿಗಳು ಕಾನೂನು ಬಾಹಿರವಾಗಿ ಸಾಲ ನೀಡಿದ್ದಾರೆ. ರಾಜ್ಯದಲ್ಲಿ ಸಾಲ ಮಾಡಿ ಸತ್ತಿರೋ ರೈತರು ಎರಡು ಲಕ್ಷಕ್ಕೆ ಹೆಚ್ಚು ಬ್ಯಾಂಕಿಂದ ತೆಗೆದುಕೊಂಡಿಲ್ಲ. ಶ್ರೀಮಂತರಿಗೆ ಕೋಟಿ ಕೋಟಿ, ರೈತರು ಲಕ್ಷ ಸಾಲ ಮಾಡಿದ್ರೆ ಬ್ಯಾಂಕುಗಳು ಬೆನ್ನತ್ತುತ್ತದೆ. ಬಡವರು ಸಾಲ ಪಡೆದರೆ ಸತಾಯಿಸುವ ಬ್ಯಾಂಕ್ ಅಧಿಕಾರಿಗಳು ಈಗ ಯಾಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದರು.

    ಬ್ಯಾಂಕ್ ಡಿಜಿಎಂ ಮಾಧ್ಯಮಗಳ ಮೂಲಕ ಜನರಿಗೆ ಸುಳ್ಳು ಹೇಳುತ್ತಿದ್ದಾರೆ. ಬ್ಯಾಂಕ್ ಮೇಲೆ ಐದು ಕೋಟಿ ರೂ. ಮಾನ ನಷ್ಟ ಮೊಕದ್ದಮೆ ಹಾಕುತ್ತೇನೆ. ಕೇಂದ್ರ ಸರ್ಕಾರ ಸರಿಯಾಗಿಯೇ ತನಿಖೆ ಮಾಡುತ್ತದೆ ಎಂದು ಹೇಳಿದರು.

    ಚುನಾವಣೆಗೂ ಈ ಕೇಸಿಗೂ ಸಂಬಂಧವಿಲ್ಲ. ಯಡಿಯೂರಪ್ಪನವರ ಮೇಲೂ ಕೇಸು ಹಾಕಿದ್ದೇನೆ. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಮೇಲೂ ಕೇಸ್ ಇದೆ ಎಂದು ಸ್ಪಷ್ಟನೆ ನೀಡಿದರು.

  • 193 ಕೋಟಿ ರೂ. ವಂಚನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದೂರು ದಾಖಲು

    193 ಕೋಟಿ ರೂ. ವಂಚನೆ: ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ದೂರು ದಾಖಲು

    ಉಡುಪಿ: ಕೇಂದ್ರ ಹಣಕಾಸು ಸಚಿವಾಲಯದ ಹಣಕಾಸು ಸೇವಾ ವಿಭಾಗದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಮೇಲೆ ದೂರು ದಾಖಲಾಗಿದೆ.

    ಮಧ್ವರಾಜ್ ಅವರು ಸಿಂಡಿಕೇಟ್ ಬ್ಯಾಂಕಿನ ಮಲ್ಪೆ ಶಾಖೆಯಲ್ಲಿ ಕೇವಲ 1.01 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳ ದಾಖಲೆ ನೀಡಿ 193 ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ. ಈ ಅಕ್ರಮಕ್ಕೆ ಬ್ಯಾಂಕ್ ಅಧಿಕಾರಿಗಳು ಕುಮ್ಮಕ್ಕು ನೀಡಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದ ಹಣಕಾಸು ಸೇವಾ ವಿಭಾಗದಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

    ಕಡಿಮೆ ಮೊತ್ತದ ದಾಖಲೆ ನೀಡಿ ನೂರಾರು ಕೋಟಿ ರೂಪಾಯಿ ಸಾಲ ಪಡೆದಿದ್ದಾರೆ ಎಂದು ದೆಹಲಿಯಲ್ಲಿರುವ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಆರ್‍ಟಿಐ ಕಾರ್ಯಕರ್ತ ಟಿ ಜೆ ಆಬ್ರಹಂ ದೂರು ನೀಡಿದ್ದಾರೆ.

    ಈ ಆರೋಪವನ್ನು ಸಚಿವ ಪ್ರಮೋದ್ ಮಧ್ವರಾಜ್ ತಳ್ಳಿ ಹಾಕಿದ್ದಾರೆ. ಈ ಆರೋಪ ನೂರಕ್ಕೆ ನೂರು ಸುಳ್ಳು. ಬ್ಯಾಂಕಿಗೆ ಎಷ್ಟು ಆಸ್ತಿ ಇಡಬೇಕೋ ಅದನ್ನು ಇಟ್ಟಿದ್ದೇನೆ. ನಾನು ಸೂಕ್ತ ದಾಖಲೆ ಕೊಟ್ಟು ಸಾಲ ಪಡೆದಿದ್ದೇನೆ. ಸಿಂಡಿಕೇಟ್ ಬ್ಯಾಂಕ್ ಅವರನ್ನೇ ಬೇಕಾದ್ರೆ ಕೇಳಿ ಎಂದಿದ್ದಾರೆ.

    ಬ್ಯಾಂಕಿನ ಸಾಲ ನಾನು ಕೊಟ್ಟ ಆಸ್ತಿ ಮೇಲೆ ನೀಡಲಾಗಿದೆ. ಸಿಂಡಿಕೇಟ್ ಬ್ಯಾಂಕ್ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ಯಾವ ತನಿಖೆ ಬೇಕಾದ್ರೂ ನಡೆಸಬಹುದು. ನನ್ನಿಂದ ಯಾವ ವಂಚನೆಯೂ ಆಗಿಲ್ಲ. ವಂಚನೆ ಮಾಡಿದರೆ ನಾನು ಹೀಗೆ ಎಲ್ಲಾಕಡೆ ಸಂತೋಷದಿಂದ ತಿರುಗುತ್ತಿರಲಿಲ್ಲ. ಸುಳ್ಳು ಆರೋಪವನ್ನು ಮಾಧ್ಯಮ ಮತ್ತು ಜನ ನಂಬುತ್ತಾರೆ ಎಂದರೆ ನಾನು ಹೆಲ್ಪ್ ಲೆಸ್. ಮಲ್ಪೆ ಬ್ಯಾಂಕಲ್ಲಿ ನನ್ನ ಖಾತೆಯಿದೆ. ಯಾರು ಬೇಕಾದ್ರೂ ಪರೀಕ್ಷಿಸಬಹುದು ಎಂದು ಪ್ರಮೋದ್ ಮಧ್ವರಾಜ್ ಸ್ಪಷ್ಟನೆ ಕೊಟ್ಟಿದ್ದಾರೆ.