Tag: RTO

  • ಒಂದೇ ನಂಬರ್, ಒಂದೇ ಕಲರ್ – ವರ್ಷಕ್ಕೆ 41 ಲಕ್ಷ ತೆರಿಗೆ ವಂಚಿಸಿದ್ದ ಬಸ್ ಮಾಲೀಕರು

    ಒಂದೇ ನಂಬರ್, ಒಂದೇ ಕಲರ್ – ವರ್ಷಕ್ಕೆ 41 ಲಕ್ಷ ತೆರಿಗೆ ವಂಚಿಸಿದ್ದ ಬಸ್ ಮಾಲೀಕರು

    – 3 ರಾಜ್ಯದಲ್ಲಿ ಅನಧಿಕೃತವಾಗಿ ಚಲಿಸುತ್ತಿದ್ದ 7 ಬಸ್‍ಗಳು ವಶ

    ಬೆಂಗಳೂರು: ಸರ್ಕಾರಕ್ಕೆ ತೆರಿಗೆ ಕಟ್ಟದೇ ವಂಚಿಸಿ ಓಡಾಡುತ್ತಿದ್ದ 7 ಅಕ್ರಮ ಐಶಾರಾಮಿ ಬಸ್‍ಗಳನ್ನು ಕರ್ನಾಟಕ ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಅನಧಿಕೃತವಾಗಿ ಸಂಚರಿಸುತಿದ್ದ ಬಸ್ಸುಗಳನ್ನು ಆರ್.ಟಿ.ಓ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಎರಡು ಬಸ್ಸುಗಳು ಒಂದೇ ನಂಬರ್, ಒಂದೇ ಕಲ್ಲರ್, ಒಂದೇ ಬಸ್ ವಿನ್ಯಾಸ ಹೊಂದಿದ್ದು, ಸರ್ಕಾರಕ್ಕೆ ಲಕ್ಷ ಲಕ್ಷ ವಂಚನೆ ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಬಸ್‍ಗಳನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

    ನೆಲಮಂಗಲ ಹಾಗೂ ಯಶವಂತಪುರ ಆರ್.ಟಿ.ಓ ಅಧಿಕಾರಿಗಳ ಜಂಟಿ ಕಾರ್ಯಚರಣೆ ಮಾಡಿ ರಾಜ್ಯದಲ್ಲಿ ಅನಧಿಕೃತವಾಗಿ ಓಡಾಡುತ್ತಿದ್ದ ಏಳು ಬಸ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜೊತೆಗೆ ಈ ಬಸ್ ಮಾಲೀಕರು ಒಂದು ವರ್ಷಕ್ಕೆ ಸರ್ಕಾರಕ್ಕೆ 41 ಲಕ್ಷ ತೆರಿಗೆ ವಂಚಿಸುತ್ತಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಸಾರಿಗೆ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.

  • ರ‍್ಯಾಶ್ ಡ್ರೈವಿಂಗ್ ಮಾಡಿದ್ರೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

    ರ‍್ಯಾಶ್ ಡ್ರೈವಿಂಗ್ ಮಾಡಿದ್ರೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ

    ಬೆಂಗಳೂರು: 4 ವರ್ಷ ಮೇಲ್ಪಟ್ಟ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ. ಇಲ್ಲದಿದ್ರೆ ದಂಡದ ಜೊತೆ ಡಿಎಲ್ ಸಸ್ಪೆಂಡ್ ಮಾಡುವ ಆದೇಶ ಹೊರಡಿಸಿದ್ದ ಸಾರಿಗೆ ಇಲಾಖೆ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ರ‍್ಯಾಶ್ ಡ್ರೈವಿಂಗ್ ಮಾಡುವವರಿಗೆ ಭಾರೀ ದಂಡದ ಜೊತೆ ಜೈಲು ಶಿಕ್ಷೆ ವಿಧಿಸುವ ಸಂಬಂಧ ಆದೇಶ ಹೊರಡಿಸಿದೆ.

    ವೀಲಿಂಗ್, ಸೈಲೆನ್ಸರ್ ಅಲ್ಟ್ರೇಷನ್, ಅಡ್ಡಾದಿಡ್ಡಿ ಚಾಲನೆ, ಅಪಾಯಕಾರಿ ಚಾಲನೆ ಮಾಡಿದರೆ ಅಪರಾಧ ದಂಡ ಸಂಹಿತೆ(ಸಿಆರ್‌ಪಿಸಿ) ಸೆಕ್ಷನ್ 107ರ ಆಡಿ ಕೇಸ್ ದಾಖಲಿಸಲಾಗುತ್ತಿದೆ. ಮೊದಲ ಬಾರಿ ನಿಯಮ ಉಲ್ಲಂಘನೆ ಮಾಡಿದರೆ 50 ಸಾವಿರದಿಂದ 2 ಲಕ್ಷ ಮೊತ್ತದ ಬಾಂಡ್ ಬರೆದು ಕೊಡಬೇಕಾಗುತ್ತದೆ. ಆರು ತಿಂಗಳ ಒಳಗೆ ಮತ್ತೆ ನಿಯಮ ಉಲ್ಲಂಘಿಸಿದರೆ ಈ ಮೊತ್ತ ಭರಿಸಬೇಕು. ಜೊತೆಗೆ ಜೈಲು ಸೇರಬೇಕಾಗುತ್ತದೆ. ಇದನ್ನೂ ಓದಿ: ಬೆಂಗಳೂರಲ್ಲಿ ದಂಡ ದಂಡ – ಪೊಲೀಸ್ , ಮಾರ್ಷಲ್ ಆಯ್ತು ಈಗ ಆರ್‌ಟಿಒ ಸರದಿ

    ಸಿಆರ್‌ಪಿಸಿ 107ರ ಆಡಿ ಕೇಸ್ ದಾಖಲು ಮಾಡಿದರೆ ಪಾಸ್ ಪೋರ್ಟ್ ಕ್ಲಿಯರ್ ಆಗುವುದಿಲ್ಲ. ವಿದ್ಯಾಭ್ಯಾಸ, ವಿದೇಶಿ ಪ್ರಯಾಣಕ್ಕೆ ಕುತ್ತು ಬರಲಿದೆ. ಕಳೆದು ಒಂದು ವಾರದಲ್ಲಿ 14 ಮಂದಿ ವಾಹನ ಸವಾರರ ಮೇಲೆ ಸಿಆರ್‌ಪಿಸಿ 107ರ ಅಡಿ ಕೇಸ್ ದಾಖಲಾಗಿದೆ.

  • ಬೆಂಗಳೂರಲ್ಲಿ ದಂಡ ದಂಡ – ಪೊಲೀಸ್ , ಮಾರ್ಷಲ್ ಆಯ್ತು ಈಗ ಆರ್‌ಟಿಒ ಸರದಿ

    ಬೆಂಗಳೂರಲ್ಲಿ ದಂಡ ದಂಡ – ಪೊಲೀಸ್ , ಮಾರ್ಷಲ್ ಆಯ್ತು ಈಗ ಆರ್‌ಟಿಒ ಸರದಿ

    ಬೆಂಗಳೂರು: ಇಲ್ಲಿಯವರೆಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಟ್ರಾಫಿಕ್‌ ಪೊಲೀಸರು ದಂಡ ಹಾಕುತ್ತಿದ್ದರು. ಇದಾದ ಬಳಿಕ ಕೊರೊನಾ ಅವಧಿಯಲ್ಲಿ ಮಾಸ್ಕ್‌ ಹಾಕದಿದ್ದರೆ ನಗರದಲ್ಲಿ ಮಾರ್ಷಲ್‌ಗಳು 250 ರೂ. ದಂಡ ಹಾಕುತ್ತಿದ್ದಾರೆ. ಈಗ ರಸ್ತೆ ಮತ್ತು ಸಾರಿಗೆ ಇಲಾಖೆ(ಆರ್‌ಟಿಒ) ಅಧಿಕಾರಿಗಳು ವಾಹನಗಳನ್ನು ಅಡ್ಡಗಟ್ಟಿ ದಂಡ ಹಾಕುತ್ತಿದ್ದಾರೆ.

    ನಂಬರ್ ಪ್ಲೇಟ್ ,  ಅಂತರ್‌ ರಾಜ್ಯ ತೆರಿಗೆ,  ಲಗೇಜ್ ಸರಿಯಾಗಿಲ್ಲ, ಫಿಟ್ ನೆಸ್ ಸರ್ಟಿಫಿಕೇಟ್ ಇಲ್ಲದವರಿಗೆ ದಂಡ ಹಾಕಲಾಗುತ್ತಿದೆ.  ಅಷ್ಟೇ ಅಲ್ಲದೇ  ಪದೇ ರೂಲ್ಸ್ ಬ್ರೇಕ್ ಮಾಡಿದ್ದರೆ ಅವರ ಡಿಎಲ್ ಸಹ‌ ರದ್ದಾಗಲಿದೆ.

    ಹೆಲ್ಮೆಟ್ ಧರಿಸದ ಸವಾರರ ಚಾಲನಾ ಪರವಾನಗಿಯನ್ನು (ಡಿಎಲ್‌) ಮೂರು ತಿಂಗಳು ಅಮಾನತು ಮಾಡುವ ಸರ್ಕಾರದ ಅದೇಶ ಹೊರಬಿದ್ದ ಬೆನ್ನಲ್ಲೇ ವಿಶೇಷ ಕಾರ್ಯಾಚರಣೆಯನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಆರಂಭಿಸಿದ್ದಾರೆ.

    ಟಿನ್ ಫ್ಯಾಕ್ಟರಿ ಸಮೀಪ, ಗೊರಗುಂಟೆಪಾಳ್ಯ, ಫೋರಂ ಮಾಲ್‌, ಸುಮನಹಳ್ಳಿ ಜಂಕ್ಷನ್, ಕನಕಪುರ ರಸ್ತೆ, ಮೈಸೂರು ರಸ್ತೆ, ಬನ್ನೇರುಘಟ್ಟ ರಸ್ತೆ, ಡೈರಿ ವೃತ್ತ, ಭಟ್ಟರಹಳ್ಳಿ, ಚಂದಾಪುರ ಸರ್ಕಲ್, ದೇವನಹಳ್ಳಿ ಸೇರಿ 21 ‍ಪ್ರಮುಖ ಜಂಕ್ಷನ್‌ಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ.

    ಸಾರಿಗೆ ಇಲಾಖೆಯ ನಗರ ವಿಭಾಗದ ಜಂಟಿ ಆಯುಕ್ತ ಕೆ.ಟಿ. ಹಾಲಸ್ವಾಮಿ ಪ್ರತಿಕ್ರಿಯಿಸಿ, ವಾಹನಗಳನ್ನು ತಡೆದು ತಪಾಸಣೆ  ಮಾಡಲು ಸಾರಿಗೆ ಇಲಾಖೆಗೆ ಮೊದಲೇ ಅಧಿಕಾರ ಇತ್ತು. ದ್ವಿಚಕ್ರ ವಾಹನ ಸವಾರರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮತ್ತು ಸರ್ಕಾರದ ಆದೇಶದಂತೆ ಸದ್ಯ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

  • 0001 ಫ್ಯಾನ್ಸಿ ಸಂಖ್ಯೆಗೆ ಬರೋಬ್ಬರಿ 10.75 ಲಕ್ಷ ಬಿಡ್‌

    0001 ಫ್ಯಾನ್ಸಿ ಸಂಖ್ಯೆಗೆ ಬರೋಬ್ಬರಿ 10.75 ಲಕ್ಷ ಬಿಡ್‌

    – ಪೈಪೋಟಿಗೆ ಬಿದ್ದು ಫ್ಯಾನ್ಸಿ ನಂಬರ್‌ ಖರೀದಿಸಿದ ಮಾಲೀಕರು

    ಬೆಂಗಳೂರು: ವ್ಯಕ್ತಿಯೊಬ್ಬರು ‘0001ʼ ಫ್ಯಾನ್ಸಿ ಸಂಖ್ಯೆಯ ನಂಬರನ್ನು ಬರೋಬ್ಬರಿ 10.75 ಲಕ್ಷ ರೂ.ಗೆ ಬಿಡ್‌ ಮಾಡಿ ಖರೀದಿಸಿದ್ದಾರೆ.

    ಶಾಂತಿನಗರದಲ್ಲಿನ ಸಾರಿಗೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಕೋರಮಂಗಲ ಪ್ರಾದೇಶಿಕ ಸಾರಿಗೆ ಕಚೇರಿ ವ್ಯಾಪ್ತಿಯ ಲಘು ಮೋಟಾರು ವಾಹನಗಳಿಗೆ ಪ್ರಾರಂಭಿಸಿರುವ ‘ಕೆಎ-01 ಎಂವಿʼ ಮುಂಗಡ ಶ್ರೇಣಿಯ ಫ್ಯಾನ್ಸಿ ನಂಬರ್‌ಗಳ ಹರಾಜು ನಡೆಯಿತು.

    ಈ ಹರಾಜಿನಲ್ಲಿ ಕಾರು ಮಾಲೀಕರು ಪೈಪೋಟಿಗೆ ಬಿದ್ದು ತಮ್ಮ ಅದೃಷ್ಟದ ಫ್ಯಾನ್ಸಿ ನಂಬರ್‌ಗಳನ್ನು ಖರೀದಿ ಮಾಡಿದ್ದಾರೆ.

    ನಗರ ಗುಮಾಲ್‌ ಮುಸ್ತಾಪ ಎಂಬವರು ತಮ್ಮ ಹೊಸ ಬೆಂಜ್‌ ಕಾರಿಗೆ 0001 ಸಂಖ್ಯೆಯನ್ನು 10.75 ಲಕ್ಷ ರೂ.ಗೆ ಬಿಡ್‌ ಮಾಡಿ ಖರೀದಿಸಿದ್ದಾರೆ. ಸಾರಿಗೆ ಇಲಾಖೆಯ ಇತಿಹಾಸದಲ್ಲಿ ಇಷ್ಟೊಂದು ದುಬಾರಿ ಬಿಡ್‌ಗೆ ಒಂದು ನಂಬರ್‌ ಹರಾಜು ಆಗಿರುವುದು ಇದೇ ಮೊದಲು.

    ಒಟ್ಟು 50 ಫ್ಯಾನ್ಸಿ ನಂಬರ್‌ಗಳ ಪೈಕಿ 15 ಸಂಖ್ಯೆಗಳನ್ನು ಸಾರಿಗೆ ಇಲಾಖೆ ಬಹಿರಂಗ ಹರಾಜಿಗೆ ಇರಿಸಿತ್ತು. ನಿಗದಿತ ಶುಲ್ಕದಿಂದ 11.25 ಲಕ್ಷ ರೂ. ಮತ್ತು ಹರಾಜಿನಿಂದ 18.30 ಲಕ್ಷ ರೂ. ಸೇರಿ ಒಟ್ಟು 29.55 ಲಕ್ಷ ರೂ. ಆದಾಯ ಬಂದಿದೆ ಎಂದು ಅಪರ ಸಾರಿಗೆ ಆಯುಕ್ತ ಎನ್‌ ನರೇಂದ್ರ ಹೋಳ್ಕರ್‌ ತಿಳಿಸಿದ್ದಾರೆ.

     

    ಪ್ರಕ್ರಿಯೆ ಹೇಗೆ?
    ಸಾಧಾರಣವಾಗಿ ಸಿನಿಮಾ ಕಲಾವಿದರು, ರಾಜಕಾರಣಿಗಳು, ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಫ್ಯಾನ್ಸಿ ನಂಬರ್‌ ಹೆಚ್ಚು ಖರೀದಿ ಮಾಡುತ್ತಾರೆ. ಕರ್ನಾಟಕ ಸಾರಿಗೆ ಇಲಾಖೆ 2015 ರಿಂದ 0001 ರಿಂದ 9999 ವರೆಗಿನ ಸಂಖ್ಯೆಯನ್ನು ಹರಾಜು ಹಾಕುತ್ತಿದೆ. ತಮ್ಮ ಇಷ್ಟವಾದ ಸಂಖ್ಯೆ ಬೇಕಾದಲ್ಲಿ ಮರುಪಾವತಿಸಲಾಗದ 20 ಸಾವಿರ ರೂ. ಠೇವಣಿ ಇಡಬೇಕಾಗುತ್ತದೆ. ಅಷ್ಟೇ ಅಲ್ಲದೇ ಮುಂಗಡವಾಗಿ 75 ಸಾವಿರ ರೂ. ಹಣವನ್ನು ಪಾವತಿಸಬೇಕಾಗುತ್ತದೆ. ಒಂದು ವೇಳೆ ಆ ಸಂಖ್ಯೆಗೆ ಹಲವು ಮಾಲೀಕರು ಅರ್ಜಿ ಹಾಕಿದರೆ ಬಹಿರಂಗ ಹರಾಜು ಹಾಕಿ ಮಾರಾಟ ಮಾಡಲಾಗುತ್ತದೆ.

    ಸಾರಿಗೆ ಇಲಾಖೆ ಆನ್‌ಲೈನ್‌ ಮೂಲಕ ಫ್ಯಾನ್ಸಿ ನಂಬರ್‌ ಹರಾಜು ಹಾಕಲು ಮುಂದಾಗಿದ್ದರೂ ಈ ಪ್ರಸ್ತಾಪ ಇನ್ನೂ ಕಾರ್ಯಗತವಾಗಿಲ್ಲ. ಈಗಾಗಲೇ ಆಂಧ್ರ ಪ್ರದೇಶ, ಹರ್ಯಾಣ, ಪಂಜಾಬ್‌ ಸರ್ಕಾರ ಈಗಾಗಲೇ ಆನ್‌ಲೈನ್‌ ಮೂಲಕ ಫ್ಯಾನ್ಸಿ ನಂಬರ್‌ಗಳನ್ನು ಹರಾಜು ಹಾಕುತ್ತಿದೆ.

     

    ಯಾವ ಸಂಖ್ಯೆಗೆ ಎಷ್ಟು ಹಣ?
    0001 ಸಂಖ್ಯೆ 10.75 ಲಕ್ಷ ರೂ.
    9999 ಸಂಖ್ಯೆ 4.15 ಲಕ್ಷ ರೂ.
    0009 ಸಂಖ್ಯೆ 3.75 ಲಕ್ಷ ರೂ.
    0999 ಸಂಖ್ಯೆ 2.05 ಲಕ್ಷ ರೂ.
    0555 ಸಂಖ್ಯೆ 1.16 ಲಕ್ಷ ರೂ.
    0011 ಸಂಖ್ಯೆ 85 ಸಾವಿರ ರೂ.
    0005, 5555, 1989, 1111, 3333, 0003, 1459, 0777, 0099ಗೆ ತಲಾ 76 ಸಾವಿರ ರೂ.

  • ಸಿಎಂ ಜಿಲ್ಲೆಯಲ್ಲೇ ಆಟೋ, ಟ್ಯಾಕ್ಸಿ ಚಾಲಕರಿಗೆ ಆರ್‌ಟಿಒ ಅಧಿಕಾರಿಗಳಿಂದ ಪಂಗನಾಮ

    ಸಿಎಂ ಜಿಲ್ಲೆಯಲ್ಲೇ ಆಟೋ, ಟ್ಯಾಕ್ಸಿ ಚಾಲಕರಿಗೆ ಆರ್‌ಟಿಒ ಅಧಿಕಾರಿಗಳಿಂದ ಪಂಗನಾಮ

    – ಕೊರೊನಾ ಪರಿಹಾರದಲ್ಲೂ ವಸೂಲಿಗಿಳಿದ ಆಫೀಸರ್ಸ್

    ಶಿವಮೊಗ್ಗ: ಕೊರೊನಾ ವೈರಸ್ ಕಾಣಿಸಿಕೊಂಡ ದಿನದಿಂದಲೂ ಒಬ್ಬೊಬ್ಬರು ಒಂದೊಂದು ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ. ಅದರಲ್ಲಿಯೂ ಅತೀ ಹೆಚ್ಚು ಸಮಸ್ಯೆಗೆ ಒಳಗಾದವರು ಅಂದ್ರೆ ದಿನ ದುಡಿಮೆಯ ಕಾರ್ಮಿಕರು. ಹೀಗಾಗಿ ರಾಜ್ಯ ಸರ್ಕಾರ ಇವರ ನೆರವಿಗೆ ನಿಂತಿದೆ. ಅದರಲ್ಲೂ ವಸೂಲಿ ಶುರುವಾಗಿದೆ.

    ಹೌದು. ಮುಖ್ಯಮಂತ್ರಿ ತವರು ಜಿಲ್ಲೆ ಶಿವಮೊಗ್ಗದಲ್ಲಿ ಆಟೋ ಚಾಲಕರು ಅಧಿಕಾರಿಗಳಿಗೆ ಧಿಕ್ಕಾರ ಹಾಕಿದ್ದಾರೆ. ಕೊರೊನಾದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ. ಇದರಲ್ಲೂ ಲಾಭ ಮಾಡೋಕೆ ಹೊರಟಿರೋ ಆರ್‌ಟಿಒ ಬ್ರೋಕರ್ ಗಳು ಸುಲಿಗೆಗೆ ಇಳಿದಿದ್ದಾರೆ.

    ಹಣ ಪಡೆಯಲು ಆನ್‍ಲೈನ್‍ನಲ್ಲಿ ಅರ್ಜಿ ಹಾಕುತ್ತೇವೆ. ಒಂದು ಅರ್ಜಿ ಹಾಕಲು 120 ರೂಪಾಯಿ ಕೊಡಬೇಕು ಅಂತೇಳಿ ನಂಬಿಸಿದ್ದಾರೆ. 5 ಸಾವಿರ ಬರುತ್ತಲ್ಲ ಅಂತ ಶಿವಮೊಗ್ಗ ನಗರವೊಂದರಲ್ಲೇ ಸುಮಾರು 300 ರಿಂದ 400 ಮಂದಿ ಚಾಲಕರು ಈ ರೀತಿ ಹಣ ನೀಡಿ ಕಳೆದುಕೊಂಡಿದ್ದಾರೆ ಎಂದು ಆಟೋ ಚಾಲಕರ ಸಂಘದ ಅಧ್ಯಕ್ಷ ಅಲ್ಲಾಭಕ್ಷಿ ಅಳಲು ತೋಡಿಕೊಂಡಿದ್ದಾರೆ.

    ಇದೆಲ್ಲಾ ಗೊಂದಲಗಳನ್ನು ನೋಡಿಯೇ ಶುಕ್ರವಾರ ಸಾರಿಗೆ ಆಯುಕ್ತರು ಇದಕ್ಕೆ ತೆರೆಯೆಳೆದು ಪರಿಹಾರದ ಹಣವನ್ನು ಆನ್‍ಲೈನ್ ಮೂಲಕವೇ ತಲುಪಿಸುತ್ತೇವೆಂದು ಪ್ರಕಟಣೆ ಹೊರಡಿಸಿದ್ದಾರೆ. ಈ ಅನುದಾನ ಸುಮಾರು 7 ಲಕ್ಷ ಆಟೋ ಹಾಗೂ ಟ್ಯಾಕ್ಸಿ ಡ್ರೈವರ್‍ಗಳಿಗೆ ಸಿಗಲಿದೆ.

    ಒಟ್ಟಾರೆ ಸರ್ಕಾರ ಒಳ್ಳೆಯ ಉದ್ದೇಶದಿಂದ ಯೋಜನೆ ಜಾರಿಗೊಳಿಸಿದರೆ, ಅದನ್ನು ದುರುಪಯೋಗ ಮಾಡಿಕೊಳ್ಳುವವರು, ಬಂಡವಾಳ ಮಾಡಿಕೊಳ್ಳುವವರು ಹಲವು ಮಂದಿ ಹುಟ್ಟಿಕೊಳ್ಳುತ್ತಾರೆ ಎಂಬುದಕ್ಕೆ ಇದು ಜ್ವಲಂತ ಉದಾಹರಣೆ. ಹೀಗಾಗಿಯೇ ಚಾಲಕರು ಇಂತಹ ಮೋಸಕ್ಕೆ ಒಳಗಾಗಿ ಹಣ ಕಳೆದುಕೊಳ್ಳಬೇಡಿ ಎಂದು ಆಟೋ ಚಾಲಕರ ಸಂಘದ ಮುಖಂಡರು ಚಾಲಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಅರ್ಜಿ ಹೆಸರಿನಲ್ಲಿ ಚಾಲಕರಿಂದ ಹಣ ವಸೂಲಿಗೆ ಇಳಿದಿದ್ದ ಬ್ರೋಕರ್ ಗಳ ವಿರುದ್ದ ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  • ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್

    ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್

    ಬೆಂಗಳೂರು: ಡಿಎಲ್/ಎಲ್‍ಎಲ್ ಪರೀಕ್ಷೆಗೆ ಕಾಯುತ್ತಿರುವ ಮಂದಿಗೆ ಗುಡ್‍ನ್ಯೂಸ್. ಮೇ 7ರ ಗುರುವಾರದಿಂದ ಹಸಿರು ವಲಯದಲ್ಲಿ ಈ ಪರೀಕ್ಷೆಗಳು ಆರಂಭವಾಗಲಿದೆ.

    ಡಿಎಲ್/ ಎಲ್‍ಎಲ್ ಲೈಸೆನ್ಸ್ ಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆದ್ಯತೆ ಮೇರೆಗೆ ಈ ಪರೀಕ್ಷೆ ನಡೆಯಲಿದೆ. ಪ್ರತಿದಿನ ಶೇ.50 ರಷ್ಟು ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ದಿನಾಂಕವನ್ನು ಆರ್‌ಟಿಒ ಅಭ್ಯರ್ಥಿಗಳ ಮೊಬೈಲ್‍ಗೆ ಸಂದೇಶ ಕಳುಹಿಸಿದೆ.

    ಹಸಿರು ವಲಯದಲ್ಲಿರುವ 14 ಜಿಲ್ಲೆಗಳಲ್ಲಿ ಮಾತ್ರ ಈ ಪರೀಕ್ಷೆ ನಡೆಯಲಿದ್ದು, ಉಳಿದ ಕಿತ್ತಳೆ ಮತ್ತು ಕೆಂಪು ವಲಯದಲ್ಲಿ ಲೈಸೆನ್ಸ್ ಹೊರತು ಪಡಿಸಿ ವಾಹನ್-4 ತಂತ್ರಾಶದ ಅಡಿಯಲ್ಲಿ ವಾಹನಗಳ ನೋಂದಣಿ, ವಾಹನದ ವರ್ಗಾವಣೆ ಅರ್ಹತಾ ಪತ್ರ ನವೀಕರಣ ಇತ್ಯಾದಿ ಸೇವೆಗಳು ಲಭ್ಯವಾಗಲಿದೆ ಎಂದು ಸಾರಿಗೆ ಮತ್ತು ಸುರಕ್ಷತೆ ಆಯುಕ್ತರು ಆದೇಶ ಪ್ರಕಟಿಸಿದ್ದಾರೆ.

    ಕಚೇರಿಗೆ ಹಾಜರಾಗುವ ಸಂದರ್ಭದಲ್ಲಿ ಕೋವಿಡ್ 19 ಮಾರ್ಗಸೂಚಿಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಸರ್ ಬಳಕೆ, ಥರ್ಮಲ್ ಸ್ಕ್ರೀನಿಂಗ್ ಒಳಪಡಬೇಕಾಗುತ್ತದೆ.

  • ಎಂ.ಸ್ಯಾಂಡ್, ಮರಳು ಲಾರಿಗಳಿಗೆ ತಾರ್ಪಲ್ ಕಡ್ಡಾಯ: ಮೋಟಾರು ನಿರೀಕ್ಷಕ ಡಾ.ಧನ್ವಂತರಿ ಒಡೆಯರ್

    ಎಂ.ಸ್ಯಾಂಡ್, ಮರಳು ಲಾರಿಗಳಿಗೆ ತಾರ್ಪಲ್ ಕಡ್ಡಾಯ: ಮೋಟಾರು ನಿರೀಕ್ಷಕ ಡಾ.ಧನ್ವಂತರಿ ಒಡೆಯರ್

    ಬೆಂಗಳೂರು: ಎಂ.ಸ್ಯಾಂಡ್ ಹಾಗೂ ಮರಳು ಸಾಗಿರುವ ಲಾರಿಗಳಿಗೆ ತಾರ್ಪಲ್ ಹಾಕುವುದು ಕಡ್ಡಾಯ, ಟಾರ್ಪಲ್ ಹಾಕದ ಲಾರಿ ಮಾಲೀಕರಿಗೆ ಮತ್ತು ಚಾಲಕರಿಗೆ ನೆಲಮಂಗಲ ಪ್ರಾದೇಶಿಕ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿಯ ಲಕ್ಕೂರು ಸೇತುವೆ ಬಳಿ ಲಾರಿ ಚಾಲಕರಿಗೆ ಎಚ್ಚರಿಕೆ ನೀಡಿ, ಸ್ಥಳದಲ್ಲೇ ತಾರ್ಪಲ್ ಹಾಕಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುವ ಲಾರಿಗಳಿಂದ ಬೇರೆ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಿ ಅಪಘಾತಗಳಿಗೆ ಕಾರಣವಾಗುತಿತ್ತು. ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರಿಗೆ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡುತ್ತಿದ್ದಾರೆ.

    ನೆಲಮಂಗಲ ಸಾರಿಗೆ ಇಲಾಖೆಯ ಮೋಟಾರು ನಿರೀಕ್ಷಕ ಡಾ.ಧನ್ವಂತರಿ ಒಡೆಯರ್ ಸ್ಥಳದಲ್ಲೇ ಎಚ್ಚರಿಕೆ ನೀಡಿ, ಮರಳು ಹಾಗೂ ಎಂ ಸ್ಯಾಂಡ್ ಲಾರಿಗಳಿಗೆ ತಾರ್ಪಲ್ ಹಾಕದಿದ್ದಲ್ಲಿ ದಂಡ ವಿಧಿಸಲಾಗುವುದು. ಇದೀಗ ಮೊದಲ ಎಚ್ಚರಿಕೆ ನೀಡಿದ್ದೇವೆ, ಇದೇ ರೀತಿ ಮುಂದುವರಿದರೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

    ತಾರ್ಪಲ್ ಹಾಕದಿದ್ದಲ್ಲಿ ಹತ್ತು ಸಾವಿರದವರೆಗೆ ದಂಡ ವಿಧಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು. ತಾರ್ಪಲ್ ಹಾಕದೆ ಮರಳು ಸಾಗಿಸಿದರೆ ಹಿಂಬದಿ ವಾಹನ ಸವಾರರಿಗೆ ತುಂಬಾ ತೊಂದರೆಯಾಗುತ್ತದೆ. ಇದರಿಂದಾಗಿ ಅಪಘಾತಗಳು ಹೆಚ್ಚುತ್ತವೆ ಎಂದು ತಿಳಿಸಿದರು.

  • ವಾಹನಗಳ ನಂಬರ್ ಪ್ಲೇಟ್ ಮೇಲೆ ಸಂಘ, ಸಂಸ್ಥೆಗಳ ಹೆಸರು – ಅಧ್ಯಕ್ಷರಿಗೆ ಆರ್‌ಟಿಓ ನೋಟಿಸ್

    ವಾಹನಗಳ ನಂಬರ್ ಪ್ಲೇಟ್ ಮೇಲೆ ಸಂಘ, ಸಂಸ್ಥೆಗಳ ಹೆಸರು – ಅಧ್ಯಕ್ಷರಿಗೆ ಆರ್‌ಟಿಓ ನೋಟಿಸ್

    ಚಿತ್ರದುರ್ಗ: ಕೆಲ ಸಂಘ, ಸಂಸ್ಥೆಗಳ ಅಧ್ಯಕ್ಷರು ಹಾಗೂ ಮುಖಂಡರು ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತ ಚಿಹ್ನೆ, ಲಾಂಛನ ಹಾಗೂ ಅವರ ಸಂಘ ಸಂಸ್ಥೆಗಳ ಹೆಸರುಗಳನ್ನು ನಿಯಮಬಾಹಿರವಾಗಿ ಅಳವಡಿಸಿಕೊಂಡಿದ್ದು, ಇಂತಹ ವಾಹನಗಳ ವಿರುದ್ಧ ಆರ್‌ಟಿಓ ಅಧಿಕಾರಿಗಳು ಸಮರ ಸಾರಿದ್ದಾರೆ.

    ಚಿತ್ರದುರ್ಗ ಜಿಲ್ಲೆಯಾದ್ಯಂತ ವಿಶೇಷ ವಾಹನ ತಪಾಸಣಾ ಅಭಿಯಾನ ಪ್ರಾರಂಭಿಸಲಾಗಿದ್ದು, ಅಂತಹ ಹಲವು ವಾಹನಗಳನ್ನು ಗುರುತಿಸಿ, ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲು ಆರ್‌ಟಿಓ ಅಧಿಕಾರಿಗಳು ಮುಂದಾಗಿದ್ದಾರೆ. ಹಲವು ವರ್ಷಗಳಿಂದಲೂ ಖಾಸಗಿ ವೈಯುಕ್ತಿಕ ವಾಹನಗಳ ಮೇಲೆ ಸಂಘ, ಸಂಸ್ಥೆಗಳ ಹೆಸರು ಹಾಕಿಕೊಂಡು ಓಡಾಡುವವರಿಗೆ ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ ಬಿಸಿ ಮುಟ್ಟಿಸಿದ್ದಾರೆ.

    ವಾಹನಗಳ ನೊಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ವಿವಿಧ ಆಯೋಗಗಳ ಹೆಸರನ್ನು ಹೋಲುವಂತಹ ರಾಷ್ಟ್ರೀಯ, ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರು, ಚಿಹ್ನೆ, ಲಾಂಛನಗಳನ್ನು ಹಾಗೂ ಇತರೆ ಸಂಘ ಸಂಸ್ಥೆಗಳ ಹೆಸರು ಬರೆಸಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಮೋಟಾರು ವಾಹನಗಳ 1989ರ ನಿಯಮ 50 ಮತ್ತು 51ರ ಲಾಂಛನ ಹಾಗೂ ಹೆಸರು ಕಾಯ್ದೆ 1950 ಕಲಂ 3, 4 ಮತ್ತು 5 ರನ್ವಯ ನಿಯಮಬಾಹಿರವಾಗಿದ್ದು, ಅಂತಹ ವಾಹನಗಳನ್ನು ಗುರುತಿಸಿ, ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಸಾರಿಗೆ ಆಯುಕ್ತರು ಸೂಚಿಸಿದ್ದಾರೆ.

    ಒನಕೆ ಓಬವ್ವ ವೃತ್ತದ ಬಳಿ, ವಾಹನಗಳ ವಿಶೇಷ ತಪಾಸಣೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಅಭಿಯಾನವನ್ನು ಜಿಲ್ಲೆಯಾದ್ಯಂತ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು. ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆಗಳನ್ನು ಹಾಕಿಸುವುದು ಅಪರಾಧವಾಗಿದ್ದು, ಇನ್ನು 7 ದಿನಗಳ ಒಳಗಾಗಿ ತೆರವುಗೊಳಿಸದಿದ್ದರೆ ಅಂತಹ ವಾಹನಗಳ ಮಾಲೀಕರನ್ನು ದಂಡನೆಗೆ ಗುರಿಪಡಿಸಲಾಗುವುದು ಎಂದು ಆರ್‌ಟಿಓ ಅಧಿಕಾರಿಗಳು ಎಚ್ಚರಿಸಿದ್ದಾರೆ.

    ಸರ್ಕಾರಿ ಇಲಾಖೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ಪಡೆಯುವ ಖಾಸಗಿ ವಾಹನಗಳೂ ನೊಂದಣಿ ಫಲಕದ ಮೇಲೆ ಕರ್ನಾಟಕ ಸರ್ಕಾರದ ಲಾಂಛನವುಳ್ಳ ಫಲಕ ಬಳಸುವಂತಿಲ್ಲ. ಅಲ್ಲದೆ ವಿವಿಧ ವಿಮಾ ಕಂಪನಿಗಳು ತಮ್ಮ ವಾಹನಗಳ ಮೇಲೆ ಭಾರತ ಸರ್ಕಾರದ ಲಾಂಛನವನ್ನು ಬಳಸುತ್ತಿರುವುದು ಕಂಡುಬಂದಿದ್ದು, ಅದನ್ನೂ ನಿಯಮಗಳ ಉಲ್ಲಂಘನೆ ಎಂದು ಪರಿಗಣಿಸಲಾಗುವುದು. ನಗರದ ಒನಕೆ ಓಬವ್ವ ವೃತ್ತ ಬಳಿ ಗುರುವಾರ ನಡೆಸಿದ ವಾಹನಗಳ ತಪಾಸಣೆ ಸಂದರ್ಭದಲ್ಲಿ ಇಂತಹ ಹಲವಾರು ವಾಹನಗಳನ್ನು ಪತ್ತೆಮಾಡಿ, ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎರಡು ದಿನಗಳ ಒಳಗಾಗಿ ಇಂತಹ ನಾಮಫಲಕಗಳನ್ನು ತೆರವುಗೊಳಿಸಿ, ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಯ ಆವರಣದಲ್ಲಿ ಹಾಜರುಪಡಿಸುವಂತೆ ಎಚ್ಚರಿಸಲಾಗಿದೆ.

  • ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಚಿಹ್ನೆಗಳಿಗೆ ಬ್ರೇಕ್

    ವಾಹನಗಳ ನಂಬರ್ ಪ್ಲೇಟ್ ಮೇಲೆ ಹೆಸರು, ಚಿಹ್ನೆಗಳಿಗೆ ಬ್ರೇಕ್

    ಬೆಂಗಳೂರು: ಟ್ರಾಫಿಕ್ ನಿಯಮಗಳನ್ನು ಬ್ರೇಕ್ ಮಾಡುವವರಿಗೆ ಬಿಸಿ ಮುಟ್ಟಿಸಲು ದಂಡ ಹೆಚ್ಚಳ, ಫಾಸ್ಟ್ ಟ್ಯಾಗ್ ಹೀಗೆ ನಾನಾ ಸುಧಾರಣೆ ಬಳಿಕ ಇದೀಗ ಕೇಂದ್ರ ಸಾರಿಗೆ ಇಲಾಖೆ ಮತ್ತೊಂದು ಐತಿಹಾಸಿಕ ನಿರ್ಧಾರಕ್ಕೆ ಮುಂದಾಗಿದೆ.

    ವಾಹನಗಳ ನಂಬರ್ ಪ್ಲೇಟ್ ಮೇಲೆ ನಂಬರ್ ಮಾತ್ರ ಇರಬೇಕು. ಅದನ್ನ ಹೊರತುಪಡಿಸಿ ಹೆಸರು, ಚಿಹ್ನೆಗಳಿಗೆ ಇರಬಾರದು ಎಂಬುದು ಕೇಂದ್ರ ಸಾರಿಗೆ ಇಲಾಖೆ ನಿಯಮ ಮಾಡಿದೆ. ಹೀಗಾಗಿ ನೆಲಮಂಗಲ ಆರ್‌ಟಿಓ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

    ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ನಿಯಮ, 50 ಮತ್ತು 51ರ ಪ್ರಕಾರ ಎಲ್ಲಾ ವಾಹನಗಳು ನೋಂದಣಿ ಫಲಕಗಳನ್ನು ಅಳವಡಿಸಿಕೊಳ್ಳಬೇಕು. ವಾಹನಗಳ ನೋಂದಣಿ ಫಲಕದ ಮೇಲೆ ಚಿತ್ರಗಳಗನ್ನು, ವಿವಿಧ ದೇವರಗಳ ಹೆಸರುಗಳನ್ನು, ಸಂಘ ಸಂಸ್ಥೆಗಳ ಹೆಸರಗಳನ್ನು ಬರೆಸುವುದು ಕಾನೂನಿಗೆ ವಿರುದ್ಧವಾಗಿದೆ. ಹೀಗಾಗಿ ಇದನ್ನು ಸರಿಪಡಿಸಿಕೊಳ್ಳದಿದ್ದಲ್ಲಿ ಮೋಟಾರು ವಾಹನಗಳ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ನೆಲಮಂಗಲ ಆರ್‌ಟಿಓ ಅಧಿಕಾರಿ ಒಡೆಯರ್ ವಾಹನ ಸವಾರರಿಗೆ ತಿಳಿಸಿದ್ದಾರೆ.

    ಆರ್‌ಟಿಓ ಕಚೇರಿಯ ಮೋಟಾರು ವಾಹನಗಳ ಹಿರಿಯ ನಿರೀಕ್ಷಕರು, ಚಾಲನಾ ಅನುಜ್ಞಾ ಪತ್ರ ಪಡೆಯಲು ಬಂದ ಸುಮಾರು 200 ಅಭ್ಯರ್ಥಿಗಳಲ್ಲಿ ಕಾನೂನು ಜಾಗೃತಿ ಮೂಡಿಸಿದ್ದಾರೆ. ನಿಮ್ಮ ವಾಹನಗಳ ನೋಂದಣಿ ಫಲಕದಲ್ಲಿ ಯಾವುದೇ ಚಿಹ್ನೆ, ಹೆಸರುಗಳನ್ನು ಹಾಕುವುದು ತಪ್ಪು. ಹೀಗೆ ಮಾಡಬೇಡಿ ಎಂದು ಕೇಂದ್ರ ಮೋಟಾರು ವಾಹನಗಳ ನಿಯಮವನ್ನು ಅಭ್ಯರ್ಥಿಗಳಿಗೆ ತಿಳಿಸಿಕೊಟ್ಟಿದ್ದಾರೆ.

  • ಹೊಸ ನಿಯಮಕ್ಕೂ ಮುಂಚೆಯೇ 6.53 ಲಕ್ಷ ದಂಡ ಕಟ್ಟಿದ್ದ ಟ್ರಕ್ ಮಾಲೀಕ

    ಹೊಸ ನಿಯಮಕ್ಕೂ ಮುಂಚೆಯೇ 6.53 ಲಕ್ಷ ದಂಡ ಕಟ್ಟಿದ್ದ ಟ್ರಕ್ ಮಾಲೀಕ

    ಭುವನೇಶ್ವರ: ಟ್ರಕ್ ಮಾಲೀಕನೊಬ್ಬ ಹೊಸ ಮೋಟಾರು ವಾಹನಗಳ ಕಾಯ್ದೆ ಬರುವ ಮೊದಲೇ 6.53 ಲಕ್ಷ ದಂಡ ಕಟ್ಟಿರುವ ಘಟನೆ ಒಡಿಶಾದ ಸಂಬಲ್ಪುರದಲ್ಲಿ ನಡೆದಿದೆ.

    ನಾಗಾಲ್ಯಾಂಡ್ ನೋಂದಾಯಿತ ಟ್ರಕ್ಕೊಂದು ಏಳು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ 6.53 ಲಕ್ಷ ದಂಡವನ್ನು ಮಾಲೀಕ ಕಟ್ಟಿದ್ದಾರೆ. ಈ ಮಾಹಿತಿ ತಡವಾಗಿ ಬೆಳಕಿಗೆ ಬಂದಿದ್ದು, ಹೊಸ ಸಂಚಾರಿ ನಿಯಮ ಸೆಪ್ಟಂಬರ್ 1 ರಿಂದ ಜಾರಿಗೆ ಬಂದಿದ್ದರೆ ಈ ಟ್ರಕ್ ಮಾಲೀಕನಿಗೆ ಆಗಸ್ಟ್ 10 ರಂದೇ ಹಳೆಯ ಕಾಯ್ದೆಯ ಅಡಿ ಬರೋಬ್ಬರಿ 6.53 ಲಕ್ಷ ರೂ. ದಂಡ ವಿಧಿಸಲಾಗಿದೆ.

    ಸಂಬಲ್ಪುರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ (ಆರ್.ಟಿ.ಒ) ಟ್ರಕ್ ಚಾಲಕ ದಿಲೀಪ್ ಕಾರ್ತಾ ಮತ್ತು ಲಾರಿ ಮಾಲೀಕ ಶೈಲೇಶ್ ಶಂಕರ್ ಲಾಲ್ ಗುಪ್ತ ಅವರ ಲಾರಿಗೆ ಒಡಿಶಾ ಮೋಟಾರು ವಾಹನಗಳ ತೆರಿಗೆ (ಒಎಂವಿಟಿ) ಕಾಯ್ದೆಯಡಿ ರಸ್ತೆ ತೆರೆಗೆ ಪಾವತಿಸದ್ದಕ್ಕೆ 6,40,500 ರೂ ದಂಡ ಹಾಕಲಾಗಿದೆ.

    ಶೈಲೇಶ್ ಶಂಕರ್ ಲಾಲ್ ಗುಪ್ತ ಲಾರಿಯನ್ನು 2014ರ ಜುಲೈ 21 ರಂದು ಖರೀದಿಸಿದ ನಂತರ ರಸ್ತೆ ತೆರಿಗೆಯನ್ನು ಪಾವತಿಸಿರಲಿಲ್ಲ. ಸೆ.30 ರಂದು ದಂಡವನ್ನು ಪಾವತಿ ಮಾಡಲು ತೆರಳಿದ್ದಾರೆ. ಹೀಗಾಗಿ 5 ವರ್ಷ ತೆರಿಗೆ ಪಾವತಿ ಮಾಡದೇ ಲಾರಿ ಚಾಲನೆ ಮಾಡಿದಕ್ಕೆ ಅವರಿಗೆ 6,40,500 ದಂಡ ಹಾಕಿದ್ದರೆ ಇತರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದಕ್ಕೆ ಉಳಿದ 12,500 ರೂ. ದಂಡವನ್ನು ವಿಧಿಸಲಾಗಿದೆ.

    ಮಾಲೀಕನಿಗೆ ನೀಡಿರುವ ಚಲನ್ ಪ್ರತಿ ಪ್ರಕಾರ, ರಸ್ತೆ ತೆರಿಗೆ ದಂಡದ ಜೊತೆಗೆ, ಸಾಮಾನ್ಯ ಅಪರಾಧಕ್ಕೆ 100 ರೂ. ಹಾಗೂ ಆದೇಶಗಳ ಅವಿಧೇಯತೆ ಮತ್ತು ಅಡಚಣೆಗೆ 500 ರೂ, ವಾಯು ಮತ್ತು ಶಬ್ದ ಮಾಲಿನ್ಯ ಮಾಡಿದ್ದಕ್ಕೆ 1,000 ರೂ. ಮತ್ತು ಸರಕು ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸಿದ್ದಕ್ಕೆ 5,000 ರೂ., ಇದಲ್ಲದೆ ಪರವಾನಗಿ ಇಲ್ಲದೆ ವಾಹನವನ್ನು ಬಳಸಿದ್ದಕ್ಕಾಗಿ ಅಥವಾ ಪರವಾನಗಿ ಷರತ್ತುಗಳನ್ನು ಉಲ್ಲಂಘಿಸಿದ್ದಕ್ಕಾಗಿ 5,000 ರೂ. ವಿಮೆಯಿಲ್ಲದೆ ಲಾರಿ ಚಲಿಸಿದಕ್ಕೆ 1,000 ರೂ. ಸೇರಿ ಒಟ್ಟು 6.53 ಲಕ್ಷ ರೂ. ದಂಡವನ್ನು ವಿಧಿಸಲಾಗಿದೆ.