Tag: Rules

  • ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

    ಲೇಡಿ ಸೂಪರ್ ಸ್ಟಾರ್ ನಯನತಾರಾ ಮೇಲೆ ಮುನಿಸಿಕೊಂಡ ತಮಿಳು ನಿರ್ಮಾಪಕರು

    ಮಿಳು ಸಿನಿಮಾ ರಂಗದ ಲೇಡಿ ಸೂಪರ್ ಸ್ಟಾರ್ ಎಂದೇ ಖ್ಯಾತರಾಗಿರುವ ನಯನತಾರಾ (Nayantara) ಮೇಲೆ ಅಲ್ಲಿನ ನಿರ್ಮಾಪಕರು ಕೋಪಗೊಂಡಿದ್ದಾರೆ. ತಮಗೊಂದು ಬೇರೆಯವರಿಗೊಂದು ರೂಲ್ಸ್ ಮಾಡಿಕೊಳ್ಳುವ ನಯನತಾರಾ ಅವರ ಇಬ್ಬಂದಿತನವನ್ನು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ಕೋಪ ಎಲ್ಲಿಗೆ ತಿರುಗುತ್ತದೆಯೋ ಕಾದು ನೋಡಬೇಕಿದೆ. ಅಷ್ಟಕ್ಕೂ ನಯನತಾರಾ ಮೇಲೆ ನಿರ್ಮಾಪಕರು ಮುನಿಸಿಕೊಳ್ಳುವುದಕ್ಕೆ ಕಾರಣವಿದೆ.  ಆ ಕಾರಣವನ್ನು ಕೆಲವರು ಬಹಿರಂಗವಾಗಿಯೇ ಪ್ರಶ್ನೆ ಮಾಡಿದ್ದಾರೆ.

    ನಯನತಾರಾ ತಮ್ಮ ಬದುಕಿನಲ್ಲಿ ಒಂದು ಬದ್ಧತೆಯನ್ನು ಮಾಡಿಕೊಂಡಿದ್ದರು. ಅದನ್ನು ಈಗ ಅವರು ತಮ್ಮ ಗಂಡನಿಗಾಗಿ ಮುರಿದಿದ್ದಾರೆ. ಇದೇ ನಿರ್ಮಾಪಕರ ಕೋಪಕ್ಕೆ ಕಾರಣವಾಗಿದೆ. ನಯನತಾರಾ ಸಿನಿಮಾಗಳನ್ನು ಒಪ್ಪಿಕೊಂಡರೆ, ಅಲ್ಲೊಂದು ನಿಬಂಧನೆ ಹಾಕುತ್ತಿದ್ದರು. ತಮ್ಮ ಕೆಲಸ ಕೇವಲ ನಟಿಸುವುದು ಮಾತ್ರ. ಯಾವುದೇ ಕಾರಣಕ್ಕೂ ಸಿನಿಮಾ ಪ್ರಚಾರಕ್ಕೆ ಬರುವುದಿಲ್ಲ ಎಂದು ಅಗ್ರಿಮೆಂಟ್ ಹಾಕಿಕೊಳ್ಳುತ್ತಿದ್ದರು. ಈವರೆಗೂ ಅದನ್ನು ಪಾಲಿಸಿಕೊಂಡು ಬಂದಿದ್ದಾರೆ. ಆದರೆ, ಈ ಬಾರಿ ಅವರು ಅದನ್ನು ಮುರಿದಿದ್ದಾರೆ. ಇದನ್ನೂ ಓದಿ: ಡೇಂಜರ್ ಝೋನ್‌ನಲ್ಲಿ 8 ಸ್ಪರ್ಧಿಗಳು, ಯಾರ ಆಟಕ್ಕೆ ಬ್ರೇಕ್ ಹಾಕಲಿದ್ದಾರೆ ಬಿಗ್ ಬಾಸ್

    ನಯನತಾರಾ ಪತಿ ವಿಘ್ನೇಶ್ ಶಿವನ್ (Vignesh Sivan) ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಕನೆಕ್ಟ್’ (Connect) ಸಿನಿಮಾ ಇದೇ ತಿಂಗಳು 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ನಯನತಾರಾ ನಟಿಸಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಅವರು ತೊಡಗಿದ್ದಾರೆ. ಚಿತ್ರಮಂದಿರಗಳಿಗೆ ಭೇಟಿ ನೀಡಿ ಪ್ರಚಾರ ಮಾಡುತ್ತಿದ್ದಾರೆ. ಈ ಕೆಲಸವೇ ನಿರ್ಮಾಪಕರನ್ನು ಕೆಣಕಿದೆ. ತಮಗೊಂದು ರೂಲ್ಸ್ ಬೇರೆಯವರಿಗೊಂದು ರೂಲ್ಸ್ ನಯನತಾರಾ ಮಾಡುವುದು ಯಾಕೆ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

    ತಮಿಳು ಸಿನಿಮಾ ರಂಗದಲ್ಲಿ ಈ ರೀತಿ ರೂಲ್ಸ್ (Rules) ಮಾಡಿಕೊಳ್ಳುವುದು ಹೊಸದೇನೂ ಅಲ್ಲ. ಅಜಿತ್ ಅವರು ಇದನ್ನು ಪಾಲಿಸಿಕೊಂಡು ಬಂದಿದ್ದಾರೆ. ಅಜಿತ್ ಯಾವುದೇ ಸಿನಿಮಾದ ಪ್ರಮೋಷನ್ ಮಾಡುವುದಿಲ್ಲ. ನಟಿಸಿ ಹಿಂದಕ್ಕೆ ಸರಿದು ಬಿಡುತ್ತಾರೆ. ನಯನತಾರಾ ಇದನ್ನೇ ಪಾಲಿಸಿಕೊಂಡು ಬಂದಿದ್ದರು. ಆದರೆ, ಇದೀಗ ಗಂಡನ ಸಿನಿಮಾಗಾಗಿ ಆ ರೂಲ್ಸ್ ಅನ್ನು ಬ್ರೇಕ್ ಮಾಡಿದ್ದಾರೆ. ಈ ನಡೆಯೇ ಚರ್ಚೆಗೆ ಕಾರಣವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ಗಣೇಶ ಹಬ್ಬ – ಪೊಲೀಸ್‌ ಇಲಾಖೆಯ ನಿಯಮಗಳೇನು?

    ಬೆಂಗಳೂರಿನಲ್ಲಿ ಗಣೇಶ ಹಬ್ಬ – ಪೊಲೀಸ್‌ ಇಲಾಖೆಯ ನಿಯಮಗಳೇನು?

    ಬೆಂಗಳೂರು: ಮೂರು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಗಣೇಶೋತ್ಸವ ಕಳೆಗಟ್ಟಿತ್ತು. ಆದರೆ ಈ ಬಾರಿ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಅನೇಕರು ನಿರ್ಧರಿಸಿದ್ದಾರೆ. ಆದರೆ ಗಣೇಶನನ್ನು ಕೂರಿಸಲು ಪೊಲೀಸ್‌ ಇಲಾಖೆಯಿಂದ ಹತ್ತಾರು ನಿಬಂಧನೆಗಳು ಸಿದ್ಧವಾಗಿದ್ದು, ಆಯೋಜಕರು ಕಟ್ಟುನಿಟ್ಟಿನ ನಿಬಂಧನೆಗಳನ್ನ ಫಾಲೋ ಮಾಡಬೇಕು. ಗಣೇಶನನ್ನು ಕೂರಿಸಲು ಇರುವ ನಿಬಂಧನೆಗಳು ಈ ರೀತಿಯಾಗಿವೆ.

    ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಬಿಬಿಎಂಪಿಯ ಏಕಗವಾಕ್ಷಿಯಲ್ಲಿ ಅನುಮತಿ ಪಡೆಯಬೇಕು. ಸದೃಢವಾಗಿ ಶಾಮಿಯಾನ ನಿರ್ಮಿಸಬೇಕು. ಶಾಮಿಯಾನಗೆ ಫ್ಲೇಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಸಬಹುದು‌. ಆದರೆ ಶಾಮಿಯಾನ ಹೊರತುಪಡಿಸಿ ಬೇರೆಡೆ ಫ್ಲೇಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗೆ ಪ್ರತ್ಯೇಕ ಅನುಮತಿ ಪಡೆಯಬೇಕು. ಯಾವುದೇ ಕಾರಣಕ್ಕೂ ವಿವಾದಿತ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವಂತಿಲ್ಲ. ಹಾಗೂ ಸ್ಥಳ ಮಾಲೀಕರು ಮತ್ತು ಬಿಬಿಎಂಪಿ ಏಕಗವಾಕ್ಷಿ ಅನುಮತಿ ಪಡೆಯಬೇಕು.

    ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು 24 ಗಂಟೆ ಆಯೋಜಕ ಕಾರ್ಯಕರ್ತರು ಇರಬೇಕು. ಅವರ ವಿವರಗಳನ್ನು ಪೊಲೀಸರಿಗೆ ಕೊಡಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಪೊಲೀಸ್ ಹಾಗೂ ಬಿಬಿಎಂಪಿ ನಿಯಮದಂತೆ ಸಿಸಿಟಿವಿಗಳ ಅಳವಡಿಕೆ ಮಾಡಬೇಕು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಬೆಂಕಿ ನಂದಿಸುವ ಉಪಕರಣಗಳು ಇರಬೇಕು. ಮರಳು ತುಂಬಿದ ಬಕೆಟ್, ನೀರಿನ ವ್ಯವಸ್ಥೆ ಇರಬೇಕು.

    ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಅಡುಗೆ ಮಾಡುವ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಇಡಬಾರದು. ಗಣೇಶ ಪ್ರತಿಷ್ಠಾಪನೆ ಸ್ಥಳದಲ್ಲಿ ಓರ್ವ ಎಲೆಕ್ಟ್ರಿಷಿನ್ ಇರಬೇಕು, ಸಮರ್ಪಕ ಬೆಳಕು, ವಿದ್ಯುತ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಶಾರ್ಟ್ ಸರ್ಕ್ಯೂಟ್, ಇತರ ಅವಘಡ ತಡೆಯಲು ಸನ್ನದ್ಧರಾಗಿರಬೇಕು. ಸಾರ್ವಜನಿಕರು ಬರಲು ಹೋಗಲು ಸಮರ್ಪಕ ಆಗಮನ ನಿರ್ಗಮನ ವ್ಯವಸ್ಥೆ ಇರಬೇಕು. ಬ್ಯಾರಿಕೇಡ್ ನಿರ್ಮಿಸಿ, ಸ್ವಯಂ ಸೇವಕರು ಇರಬೇಕು. ಜನ ಹೆಚ್ಚಾದರೆ ಖಾಸಗಿ ಭದ್ರತಾ ವ್ಯವಸ್ಥೆ ಮಾಡಿಕೊಳ್ಳುವುದು.

    ಗಣೇಶ ವಿಸರ್ಜನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ನೀಡದಂತೆ ಆಯೋಜಕರು ಕ್ರಮ ವಹಿಸುವುದು. ಮನರಂಜನಾ ಕಾರ್ಯಕ್ರಮ, ಮೆರವಣಿಗೆ, ವಿಸರ್ಜನೆ ವೇಳೆ ಹೆಣ್ಣು ಮಕ್ಕಳಿಗೆ ಚುಡಾಯಿಸುವುದು ಕೀಟಲೆ ಮಾಡಿದಾಗ ಕೂಡಲೇ ಪೊಲೀಸರ ಸಂಪರ್ಕಿಸುವುದು. ಸರ್ಕಾರ ಮತ್ತು ಹೈಕೋರ್ಟ್ ಆದೇಶದಂತೆ ಹಿರಿಯ ನಾಗರಿಕರು, ರೋಗಿಗಳಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಯಮಿತವಾಗಿ ಬಳಸುವುದು. ಇದನ್ನೂ ಓದಿ: ರಾಷ್ಟ್ರೀಯ ಭದ್ರತಾ ಸಮೂಹಕ್ಕೆ `ಡ್ರೋನ್ ಸಮೂಹ’ ಸೇರ್ಪಡೆ – ಏನಿದರ ವಿಶೇಷತೆ?

    ಗಣೇಶ ಪ್ರತಿಷ್ಠಾಪನೆ ಮಂಡಳಿಯ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ತಮ್ಮ ವಿಳಾಸ ಮತ್ತು ಫೋನ್ ನಂಬರ್ ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ನೀಡುವುದು ಹಾಗೂ ಸ್ಥಳದಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸುವುದು. ಯಾವುದೇ ರೀತಿಯ ಲೇಸರ್‌ ಪ್ರೊಜೆಕ್ಷನ್ ಮಾಡಬಾರದು. ಮೆರವಣಿಗೆ ಸೂಕ್ಷ್ಮ ಸ್ಥಳ, ಅತಿ ಸೂಕ್ಷ್ಮ ಸ್ಥಳದಲ್ಲಿ ಸಾಗುವಾಗ ಸಿಡಿಮದ್ದು ಪಟಾಕಿ ಸಿಡಿಸದಂತೆ ನೋಡಿಕೊಳ್ಳಬೇಕು.

    ಗಣೇಶ ಪ್ರತಿಷ್ಠಾಪನೆ ಮತ್ತು ಕಾರ್ಯಕ್ರಮಕ್ಕೆ ಬಲವಂತವಾಗಿ ವಂತಿಗೆ ವಸೂಲಿ ಮಾಡಿದರೆ ಕಠಿಣ ಕ್ರಮ. ಆಯೋಜಕರು ಸ್ವಯಂ ಸೇವಕರಿಗೆ ಟೀ ಶರ್ಟ್ ಮತ್ತು ಗುರುತಿನ ಚೀಟಿ, ಕ್ಯಾಪ್ ಕೊಟ್ಟು ಅವರನ್ನ ಗುರುತಿಸಲು ಸಾಧ್ಯವಾಗಬೇಕು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

    Live Tv
    [brid partner=56869869 player=32851 video=960834 autoplay=true]

  • ಕ್ರೆಡಿಟ್‌, ಡೆಬಿಟ್‌ ಕಾರ್ಡ್‌ ಬಳಕೆದಾರರಿಗೆ ಜುಲೈ 1 ರಿಂದ ಸಿಗಲಿದೆ ಗುಡ್‌ನ್ಯೂಸ್‌

    ಕ್ರೆಡಿಟ್‌, ಡೆಬಿಟ್‌ ಕಾರ್ಡ್‌ ಬಳಕೆದಾರರಿಗೆ ಜುಲೈ 1 ರಿಂದ ಸಿಗಲಿದೆ ಗುಡ್‌ನ್ಯೂಸ್‌

    ನವದೆಹಲಿ: ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌ ಬಳಕೆದಾರರಿಗೆ ಗುಡ್‌ನ್ಯೂಸ್‌. ಜುಲೈ 1 ರಿಂದ ಕಂಪನಿಗಳು ಗ್ರಾಹಕರ ಕಾರ್ಡ್‌ ಡೇಟಾವನ್ನು ಸ್ಟೋರ್‌ ಮಾಡುವಂತಿಲ್ಲ.

    ಆರ್‌ಬಿಐ ಕಳೆದ ವರ್ಷ ಗ್ರಾಹಕರ ರಕ್ಷಣೆ ಸಂಬಂಧ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ ನಿಯಮವನ್ನು ರೂಪಿಸಿತ್ತು. ಈ ನಿಯಮದ ಪ್ರಕಾರ ಕಂಪನಿಗಳು ಗ್ರಾಹಕರ ಕಾರ್ಡ್‌ ಡೇಟಾವನ್ನು ಸಂರಕ್ಷಣೆ ಮಾಡುವಂತಿಲ್ಲ. ಈ ಟೋಕನೈಸೇಶನ್ ನಿಯಮ ಈ ವರ್ಷದ ಜುಲೈ 1 ರಿಂದ ಜಾರಿಗೆ ಬರಲಿದೆ.

    ದೇಶದ ಒಳಗಡೆ ಆನ್‌ಲೈನ್‌ ಮೂಲಕ ನಡೆಯುವ ಖರೀದಿಗೆ ಟೋಕನೈಸೇಷನ್‌ ನಿಯಮವನ್ನು ಆರ್‌ಬಿಐ ಕಡ್ಡಾಯ ಮಾಡಿದೆ. ಈ ನಿಯಮ ಜನವರಿ 1 ರಿಂದ ಜಾರಿಯಾಗಬೇಕಿತ್ತು. ಆದರೆ ಕಂಪನಿಗಳಿಗೆ 6 ತಿಂಗಳು ಕಾಲಾವಕಾಶ ವಿಸ್ತರಿಸಿದ್ದರಿಂದ ಜುಲೈನಿಂದ ಈ ನಿಯಮ ಜಾರಿಯಾಗುತ್ತಿದೆ.

    ಈ ನಿಯಮದ ಪ್ರಕಾರ ವ್ಯವಹಾರ ನಡೆದ ಬಳಿಕ ಗ್ರಾಹಕರ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಡೇಟಾಗಳನ್ನು ಡಿಲೀಟ್‌ ಮಾಡಬೇಕಾಗುತ್ತದೆ. ಇದನ್ನೂ ಓದಿ: ಎಲೋನ್ ಮಸ್ಕ್ ನಡವಳಿಕೆ ಮುಜುಗರ ತಂದಿದೆ ಎಂದ ಉದ್ಯೋಗಿಗಳನ್ನೇ ಕಂಪನಿಯಿಂದ ಕಿತ್ತೊಗೆದ ಸ್ಪೇಸ್‌ಎಕ್ಸ್

    RBI

    ಈ ಟೋಕನೈಸೇಷನ್‌ ನಿಯಮ ಕಡ್ಡಾಯವೇನಲ್ಲ. ಟೋಕನೈಸೇಷನ್‌ ನಿಯಮಕ್ಕೆ ಯಾರು ಅನುಮತಿ ನೀಡುವುದಿಲ್ಲವೋ ಆ ಗ್ರಾಹಕರು ವ್ಯವಹಾರ ನಡೆಯುವ ಮುನ್ನ ಕಾರ್ಡ್‌ನಲ್ಲಿರುವ ಹೆಸರು, ಕಾರ್ಡ್‌ ನಂಬರ್‌, ವ್ಯಾಲಿಡಿಟಿ, ಸಿವಿವಿ ಎಲ್ಲವನ್ನು ಎಂಟ್ರಿ ಮಾಡಿದ ಬಳಿಕ ವ್ಯವಹಾರ ಮಾಡಬೇಕಾಗುತ್ತದೆ.

    ಯಾರು ಕಾರ್ಡ್‌ ಟೋಕನೈಸೇಷನ್‌ ನಿಯಮಕ್ಕೆ ಒಪ್ಪಿಗೆ ನೀಡುತ್ತಾರೋ ಅವರು ಸಿವಿವಿ ಅಥವಾ ಒಟಿಪಿಯನ್ನು ದಾಖಲಿಸಿ ವ್ಯವಹಾರ ಮಾಡಬೇಕಾಗುತ್ತದೆ.

    Live Tv

  • ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

    ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

    VIDHAN SHOUDHA

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್‌ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

    ಜಾಮರ್ ಜೊತೆಗೆ ವಿಚಕ್ಷಣಾ ದಳವನ್ನೂ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಾಲು ಸಾಲು ಅಕ್ರಮಗಳಿಂದ ಬಿಜೆಪಿ ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದು, ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಕೂಡ ಕೆಂಡಕಾರಿತ್ತು. ಪರೀಕ್ಷಾ ವ್ಯವಸ್ಥೆ ಸುಧಾರಿಸಲು ಮುಂದಾಗುವಂತೆ ಆರ್‌ಎಸ್‌ಎಸ್ ಕೂಡ ತಾಕೀತು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ

  • ಅಪ್ಪು ಸಾವಿನ ಬೆನ್ನಲ್ಲೇ ಎಚ್ಚೆತ್ತ ಕೇರಳ ಸರ್ಕಾರ

    ಅಪ್ಪು ಸಾವಿನ ಬೆನ್ನಲ್ಲೇ ಎಚ್ಚೆತ್ತ ಕೇರಳ ಸರ್ಕಾರ

    ತಿರುವನಂತಪುರಂ: ಸ್ಯಾಂಡಲ್‍ವುಡ್‍ನ ಯುವರತ್ನ, ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಬೆನ್ನಲ್ಲೇ ಕೇರಳ ಸರ್ಕಾರ ಜಿಮ್‍ಗಳಲ್ಲಿ ಎಇಡಿ ಕಡ್ಡಾಯ ಮಾಡುವಂತೆ ನಿರ್ಧಾರ ತೆಗೆದುಕೊಂಡಿದೆ.

    ಕೇರಳ ಸರ್ಕಾರ ರಾಜ್ಯಾದ್ಯಂತ ಇರುವ ಎಲ್ಲ ಜಿಮ್ನಾಷಿಯಂಗಳು, ಕ್ರೀಡಾಂಗಣಗಳು, ಒಳಾಂಗಣಗಳಲ್ಲಿ ಮೂಲಭೂತ ಪ್ರಥಮ ಚಿಕಿತ್ಸಾ ಕಿಟ್‍ಗಳು ಸೇರಿದಂತೆ ಸ್ವಯಂಚಾಲಿತ ಬಾಹ್ಯ ಡಿಫಿಬ್ರಿಲೇಟರ್(ಎಇಡಿ-ಆಟೋಮೇಟೆಡ್ ಎಕ್ಸ್ಟರ್ನಲ್ ಟಿಫಿಬ್ರಿಲೇಟರ್)ಗಳನ್ನು ಬಳಕೆಗೆ ಸಿದ್ಧವಾಗಿಟ್ಟುಕೊಳ್ಳುವ ಅವಶ್ಯಕತೆಯನ್ನು ಎತ್ತಿಹಿಡಿದಿದೆ. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ

    ನಗರದ ರಾಯಲ್ ಬ್ಯಾಡ್ಮಿಂಟನ್ ಕೋರ್ಟ್‍ನಲ್ಲಿ ಶನಿವಾರ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಾರಿಗೆ ಸಚಿವ ಅಂಟೋನಿ ರಾಜು, ಕೇರಳದ ಕ್ರೀಡಾ ಸಚಿವ ವಿ. ಆಬ್ದುರೆಹಮಾನ್ ಅವರೊಂದಿಗೆ ಚರ್ಚಿಸಿ ರಾಜ್ಯದಲ್ಲಿ ಇದನ್ನು ತುರ್ತಾಗಿ ಜಾರಿಗೆ ತರುವ ಭರವಸೆಯನ್ನು ನೀಡಿದರು. ನಟ ಪುನೀತ್ ಅಕಾಲ ನಿಧನದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಪುನೀತ್ ಸಾವು ದೊಡ್ಡ ಅನ್ಯಾಯ: ಸೃಜನ್ ಲೋಕೇಶ್ 

    ಹೃದಯ ಸ್ತಂಭನದಿಂದ ಮೃತಪಟ್ಟ ನಟ ಪುನೀತ್ ರಾಜ್‍ಕುಮಾರ್ ಅವರ ಅಂತ್ಯಕ್ರಿಯೆ ಈಡಿಗ ಸಂಪ್ರದಾಯದಂತೆ ನೆರವೇರಿದೆ. ಅಭಿಮಾನಿಗಳು ಪ್ರೀತಿಯ ಅಪ್ಪುನನ್ನು ಕಳೆದುಕೊಂಡಿರುವ ದುಃಖದಲ್ಲಿದ್ದಾರೆ.

  • ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

    ಶಾಲೆ ಆರಂಭಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

    – ಹಾಜರಾತಿ ಕಡ್ಡಾಯ ಅಲ್ಲ

    ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ ಶಾಲೆಗಳು ಆರಂಭ ಮಾಡುವ ವಿಚಾರವಾಗಿ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

    ಆಗಸ್ಟ್ 23 ರಿಂದ ರಾಜ್ಯಾದ್ಯಂತ 9 ರಿಂದ 10ನೇ ತರಗತಿ ವರೆಗಿನ ಮಕ್ಕಳಿಗೆ ಶಾಲೆ ಆರಂಭಗೊಳಿಸಲು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ನಿತ್ಯ ಅರ್ಧ ದಿನ ಮಾತ್ರ ತರಗತಿ ನಡೆಸಲು ಸರ್ಕಾರ ಸೂಚಿಸಿದೆ. ಸೋಮವಾರ ದಿಂದ ಶುಕ್ರವಾರ 10 ರಿಂದ 1.30 ತರಗತಿ ಮಾಡಬೇಕು, ಶನಿವಾರ 10 ರಿಂದ 12.50 ವರೆಗೆ ಕ್ಲಾಸ್ ಮಾಡಬೇಕು, ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ಶಾಲೆಗಳಲ್ಲಿ ಪಡೆದುಕೊಳ್ಳಬೇಕು ಎಂದು ತಿಳಿಸಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದ ಸ್ಥಿತಿ ಘನಘೋರ – ವಿಮಾನದಿಂದ ಬಿದ್ದು ಮೂವರು ಸಾವು

    ಮಕ್ಕಳು ಮನೆಯಿಂದ ನೀರು, ಉಪಹಾರ ತರಲು ಅವಕಾಶವಿದ್ದು, ಶಾಲೆಗಳಲ್ಲಿ ಕುಡಿಯುವ ಬಿಸಿ ನೀರು ವ್ಯವಸ್ಥೆ ಮಾಡಬೇಕು. ಹಾಜರಾತಿ ಕಡ್ಡಾಯ ಅಲ್ಲ, ಆನ್‍ಲೈನ್ ನಲ್ಲಿ ಬೇಕಾದರು ಕೂಡ ಹಾಜರಾತಿ ಆಗಬಹುದು. ಒಂದು ತಂಡದಲ್ಲಿ 15-20 ವಿದ್ಯಾರ್ಥಿಗಳು ಮಾತ್ರ ಇರಬೇಕು. ವಿದ್ಯಾರ್ಥಿಗಳು ಪೆನ್ನು, ಪುಸ್ತಕ, ರಬ್ಬರ್ ಸೇರಿದಂತೆ ಯಾವ ವಸ್ತುಗಳನ್ನು ಹಂಚಿಕೊಳ್ಳಬಾರದು ಎಂದು ಮಾರ್ಗಸೂಚಿಯಲ್ಲಿ ತಿಳಿಸಿದೆ.

    ಮಾರ್ಗಸೂಚಿಯಲ್ಲಿ ಏನಿದೆ?

    ನಿತ್ಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ತಾಪಮಾನ ಪರಿಶೀಲನೆ ಮಾಡಬೇಕು. ಡೆಸ್ಕ್ ನಲ್ಲಿ ಕೂರಿಸುವುದು, ವಿದ್ಯಾರ್ಥಿಯಗಳ ಆಗಮನ ಮತ್ತು ನಿರ್ಗಮದ ವೇಳೆ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು. ಶಾಲಾ-ಕಾಲೇಜು ಕೊಠಡಿಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು. ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸ್ಯಾನಿಟೈಸ್ ವ್ಯವಸ್ಥೆ ಶಾಲಾ-ಕಾಲೇಜುಗಳಲ್ಲಿ ಮಾಡಬೇಕು. ಇದನ್ನೂ ಓದಿ: ಕೊಟ್ಟ ಮಾತಿನಂತೆ ಸಿಂಧು ಜೊತೆ ಐಸ್‍ಕ್ರೀಂ ಸವಿದ ಮೋದಿ

    ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಶಾಲೆ ಪ್ರವೇಶ ಇಲ್ಲ. ಪ್ರಾರ್ಥನೆ ಸಮಯ, ಊಟದ ಸಮಯದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಗುಂಪು ಕ್ರೀಡೆಗಳ ಆಯೋಜನೆ ಮಾಡುವಾಗ ಎಚ್ಚರವಹಿಸಬೇಕು. ಕಾಲೇಜುಗಳಲ್ಲಿ ಸ್ವಿಮ್ಮಿಂಗ್ ಪೂಲ್ ಇದ್ದರೆ ಕಡ್ಡಾಯವಾಗಿ ಅದನ್ನ ಕ್ಲೋಸ್ ಮಾಡಬೇಕು. ಶಾಲಾ-ಕಾಲೇಜು ಕ್ಯಾಂಪಸ್ ಗೆ ಸಾರ್ವಜನಿಕ ನಿಷೇಧ ಹೇರಬೇಕು. ವಿದ್ಯಾರ್ಥಿಗಳು ಲೈಬ್ರರಿಗಳಲ್ಲಿ ಕುಳಿತು ಓದಲು ನಿಷೇಧ. ಪುಸ್ತಕ ಪಡೆದು ಮನೆಯಲ್ಲಿ ಓದುವ ನಿಯಮ ಪಾಲನೆ ಮಾಡಬೇಕು. ಶಾಲಾ-ಕಾಲೇಜುಗಳ ಹಂತದ ಕ್ರೀಡಾ ಕೂಟಗಳ ಆಯೋಜನೆ ಮಾಡಬಾರದು.

    ಬಿಸಿಯೂಟ ಬದಲಾಗಿ ದಿನಸಿ ಪದಾರ್ಥಗಳನ್ನು ವಿದ್ಯಾರ್ಥಿಗಳಿಗೆ ಕೊಡುವ ನಿಯಮ ಮುಂದುವರೆಸಬೇಕು. ತರಗತಿಗಳು ಮುಗಿದ ಮೇಲೆ ನಿತ್ಯ ಕೊಠಡಿಗಳನ್ನ ಸ್ಯಾನಿಟೈಸ್ ಮಾಡಲು ಅಗತ್ಯ ಕ್ರಮವಹಿಸಬೇಕು. ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳಿಗೆ ಶಾಲೆಗೆ ಪ್ರವೇಶ ನೀಡಬಾರದು. ಪ್ರತಿ ಶಾಲೆಯಲ್ಲಿ ಐಸೋಲೇಷನ್ ಕೊಠಡಿ ತೆರೆಯಬೇಕು. ಆರೋಗ್ಯ ವ್ಯತ್ಯಾಸ ಕಂಡು ಬರೋ ವಿದ್ಯಾರ್ಥಿಗೆ ಈ ಕೊಠಡಿ ಕೂರಿಸಲು ಕ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸ್ ವ್ಯವಸ್ಥೆ ಮಾಡಲು ಕ್ರಮವಹಿಸಬೇಕು.

  • ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ

    ಸರ್ಕಾರ ಸಾರ್ವಜನಿಕ ಗಣೇಶೋತ್ಸವದ ನಿಷೇಧವನ್ನು ಹಿಂಪಡೆಯಬೇಕು: ಶ್ರೀರಾಮಸೇನೆ

    ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿಯಿಂದ ರಾಜ್ಯ ಸರ್ಕಾರ ಹಿಂದೂ ಧಾರ್ಮಿಕ ಆಚರಣೆಗಳಲ್ಲಿ ಒಂದಾಗಿರುವ ಗಣೇಶೋತ್ಸವವನ್ನು ಈ ಬಾರಿಯೂ ಸಾರ್ವಜನಿಕವಾಗಿ ಆಚರಣೆ ಮಾಡದಂತೆ ಆದೇಶ ಹೊರಡಿಸಿದನ್ನು ಶ್ರೀರಾಮಸೇನೆ ಖಂಡಿಸಿದೆ.

    ಮಾನ್ಯ ಮುಖ್ಯಮಂತ್ರಿಗಳೇ ಸ್ವಾತಂತ್ರ್ಯಪೂರ್ವದಲ್ಲಿ ಸ್ವಾತಂತ್ರ್ಯ ಸೇನಾನಿ ಬಾಲ ಗಂಗಾಧರನಾಥ್ ತಿಲಕರು ಸಾರ್ವಜನಿಕರನ್ನು ಒಟ್ಟುಗೂಡಿಸುವ ದೂರದೃಷ್ಟಿಯಿಂದ ಸಾರ್ವಜನಿಕ ಗಣೇಶೋತ್ಸವ ಪ್ರಾರಂಭಿಸಿದರು. ಈ ಮುಖಾಂತರ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೆಚ್ಚಿಸಿದ್ದರು. ಇಂತಹ ಐತಿಹಾಸಿಕ ಮಹತ್ವವುಳ್ಳ ಸಾರ್ವಜನಿಕ ಗಣೇಶೋತ್ಸವವನ್ನು ನಿಷೇಧಿಸಿರುವುದು ಖಂಡನೀಯ. ಈ ವಿಷಯವನ್ನು ಹಿಂದೂಗಳು ಮತ್ತು ಹಿಂದೂ ಸಂಘಟನೆಗಳು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಕೂಡಲೇ ಸಾರ್ವಜನಿಕ ಗಣೇಶೋತ್ಸವದ ನಿರ್ಬಂಧವನ್ನು ದಯವಿಟ್ಟು ತೆರವು ಮಾಡಬೇಕು ಎಂದು ಶ್ರೀರಾಮಸೇನೆಯ ರಾಜ್ಯ ಕಾರ್ಯದರ್ಶಿ ಹರೀಶ್ ಒತ್ತಾಯ ಮಾಡಿದ್ದಾರೆ.ಇದನ್ನೂ ಓದಿ: ಗಣೇಶ ಚತುರ್ಥಿ, ಮೊಹರಂ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ

    ಒಂದು ಕಡೆ ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದು ಶಾಲೆಗಳನ್ನು ಪ್ರಾರಂಭಮಾಡಿ ಮಕ್ಕಳನ್ನು ಗೊಂದಲಕ್ಕೀಡು ಮಾಡಿದ್ದೀರಿ. ಇನ್ನೊಂದು ಕಡೆ ಹಲವು ಮಾರ್ಗಸೂಚಿಗಳನ್ನು ಹೊರಡಿಸುತ್ತಿದ್ದಿರಿ, ಈ ನಿಮ್ಮ ಗೊಂದಲದ ನಿರ್ಧಾರದಿಂದ ದಯವಿಟ್ಟು ಹಿಂದೆ ಸರಿಯಿರಿ. ಇಲ್ಲದೆ ಇದ್ದಲ್ಲಿ ರಾಜ್ಯಾದ್ಯಂತ ಹಿಂದೂ ಸಂಘಟನೆಗಳಿಂದ ಭಾರೀ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.

  • ಕೊರೊನಾ ಮಾರ್ಗಸೂಚಿ ಉಲ್ಲಂಘನೆ – 24 ಲಕ್ಷ ದಂಡ ವಿಧಿಸಿದ ಪೊಲೀಸರು

    ಕೊರೊನಾ ಮಾರ್ಗಸೂಚಿ ಉಲ್ಲಂಘನೆ – 24 ಲಕ್ಷ ದಂಡ ವಿಧಿಸಿದ ಪೊಲೀಸರು

    ಕೊಪ್ಪಳ: ಜಿಲ್ಲಾದ್ಯಂತ ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿ ರಸ್ತೆಗಿಳಿದ ವಾಹನ ಸವಾರರಿಗೆ ಜಿಲ್ಲಾ ಪೊಲೀಸ್ ಇಲಾಖೆ ಶಾಕ್ ನೀಡಿದ್ದು, ಕಳೆದ 27 ದಿನದಲ್ಲಿ ದಾಖಲೆ ಪ್ರಮಾಣದ 24,49,160 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ.

    ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ದಿನದಿಂದ ದಿನಕ್ಕೆ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂಬ ಆದೇಶದನ್ವಯ ಪೊಲೀಸ್ ಇಲಾಖೆ ದಾಖಲೆ ಪ್ರಮಾಣದಲ್ಲಿ ಪ್ರಕರಣ ದಾಖಲಿಸಿ, ವಾಹನ ಸವಾರರಿಗೆ ದಂಡ ವಿಧಿಸಿದೆ. ಜಿಲ್ಲಾದ್ಯಂತ ರಸ್ತೆ ನಿಯಮ ಉಲ್ಲಂಘಿಸಿ ಸಂಚರಿಸುವ ವಾಹನ ಸವಾರರು, ಮಾಸ್ಕ್ ಧರಿಸದೇ ಇರುವವರು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಇರುವವರನ್ನು ಹಿಡಿದು ಮೇ.10ರಿಂದ ಜೂ.7ರವರೆಗೆ ಬರೋಬ್ಬರಿ 13,608 ಪ್ರಕರಣ ದಾಖಲಿಸಿ 24,49,160 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಸೋಂಕಿತರು ಐಸೋಲೇಶನ್, ಕ್ವಾರಂಟೈನ್ ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿದ ಪರಿಣಾಮ ಅವರ ಮೇಲೂ ಕರ್ನಾಟಕ ಸೋಂಕು ಪ್ರತಿಬಂಧಕ ಕಾಯಿದೆ ಅಡಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಕೊರೊನಾದಿಂದ ಸಾವನ್ನಪ್ಪಿದವರ ಸದ್ಗತಿಗಾಗಿ ತ್ರಿಮತಸ್ಥರಿಂದ ಹೋಮ

    ಜಿಲ್ಲಾದ್ಯಂತ 1,866 ವಾಹನ ಜಪ್ತಿ: ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾದ್ಯಂತ ಲಾಕ್‍ಡೌನ್ ಘೋಷಣೆ ಮಾಡಿದ್ದರೂ, ಸಹ ಅನೇಕ ಜನರು ಅನಗತ್ಯವಾಗಿ ರಸ್ತೆಗಿಳಿದು ಗೊಂದಲ ಸೃಷ್ಟಿಸುತ್ತಿದ್ದರು. ಅಲ್ಲದೇ ಕೆಲವರು ಪೊಲೀಸರಿಗೆ ಸುಳ್ಳು ನೆಪ ಹೇಳಿ ನಗರದಲ್ಲಿ ತಿರುಗಾಡುತ್ತಿದ್ದರು. ಹೀಗಾಗಿ ಪೊಲೀಸರು
    ಕಟ್ಟು ನಿಟ್ಟಿನ ಕ್ರಮ ಕೈಗೊಂಡು ಅನಗತ್ಯವಾಗಿ ರಸ್ತೆಗೆ ಇಳಿದು ಸಂಚರಿಸುವ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ ವಶಪಡಿಸಿಕೊಂಡು, ದಂಡ ವಿಧಿಸಿದ್ದಾರೆ. ಜಿಲ್ಲೆಯಲ್ಲಿ ಮೇ.10ರಿಂದ ಜೂ.7ರವೆರೆಗ 1,866 ವಾಹನಗಳನ್ನು ಜಪ್ತಿಪಡಿಸಿಕೊಳ್ಳಲಾಗಿದೆ.

    ವಾಹನ ಪಡೆಯಲು ಪರದಾಟ: ಜಪ್ತಿಗೊಂಡ ವಾಹನ ಮರಳಿ ಪಡೆಯಲು ವಾಹನ ಸವಾರರು ವಕೀಲರು ಮತ್ತು ನ್ಯಾಯಾಲಯಕ್ಕೆ ಎಡತಾಕುತ್ತಿದ್ದಾರೆ. ಅಲ್ಲದೇ ಕೆಲವರು ಪ್ರಭಾವಿ ವ್ಯಕ್ತಿಗಳ ಮುಖಾಂತರ ಪೊಲೀಸರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಾಹನ ಬಿಡುಗಡೆಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದನ್ನೂ ಓದಿ:  ಲಾಕ್ ವಿಸ್ತರಣೆಯಾದ ಜಿಲ್ಲೆಗಳಲ್ಲಿ ಕಂಟ್ರೋಲ್‍ಗೆ ಬಾರದ ಪಾಸಿಟಿವಿಟಿ ರೇಟ್

  • ಲಾಕ್‍ಡೌನ್ ನಿಯಮ ಪಾಲನೆಗೆ ಡ್ರೋಣ್ ಕ್ಯಾಮೆರಾ ಕಣ್ಗಾವಲು- ಎಸ್‍ಪಿ ರಾಧಿಕಾ

    ಲಾಕ್‍ಡೌನ್ ನಿಯಮ ಪಾಲನೆಗೆ ಡ್ರೋಣ್ ಕ್ಯಾಮೆರಾ ಕಣ್ಗಾವಲು- ಎಸ್‍ಪಿ ರಾಧಿಕಾ

    ಚಿತ್ರದುರ್ಗ: ಕೊರೊನಾ ಎರಡನೇ ಹಿನ್ನೆಲೆ ಜಿಲ್ಲೆಯಾದ್ಯಂತ 12 ದಿನ ಕಠಿಣ ಲಾಕ್‍ಡೌನ್ ಜಾರಿಗೊಳಿಸಿದರೂ ಜನ ಮಾತ್ರ ಡೋಂಟ್‍ಕೇರ್ ಎನ್ನುತಿದ್ದಾರೆ. ಅನಗತ್ಯವಾಗಿ ಓಡಾಡುತ್ತ ಹಳ್ಳಿಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಿಸುತಿದ್ದಾರೆ. ಹೀಗಾಗಿ ಎಚ್ಚೆತ್ತಿರುವ ಚಿತ್ರದುರ್ಗ ಪೊಲೀಸ್ ಎಸ್‍ಪಿ ರಾಧಿಕಾ ಡ್ರೋಣ್ ಕ್ಯಾಮೆರಾ ಮೂಲಕ ಲಾಕ್‍ಡೌನ್ ಉಲ್ಲಂಘನೆಯ ದೃಶ್ಯಗಳನ್ನು ಸೆರೆ ಹಿಡಿಯುವ ಕಾರ್ಯಕ್ಕೆ ಇಂದು ಚಾಲನೆ ನೀಡಿದ್ದಾರೆ.

    ಲಾಕ್‍ಡೌನ್ ವೇಳೆ ಅನಾವಶ್ಯಕವಾಗಿ ರಸ್ತೆಗಿಳಿದು, ಕೊರೊನಾ ಹರಡಲು ಕಾರಣರಾಗುವವರ ಚಲನವಲನವನ್ನು ಡ್ರೋಣ್ ಕ್ಯಾಮೆರಾ ಮೂಲಕ ಸೆರೆ ಹಿಡಿದು, ದಂಡ ವಿಧಿಸಿ, ಕೇಸ್ ಧಾಖಲಿಸುವ ಕ್ರಮಕ್ಕೆ ಮುಂದಾಗಿದ್ದಾರೆ. ಈ ಡ್ರೋಣ್ ಕ್ಯಾಮೆರಾ ಸುಮಾರು 5 ಕಿ.ಮೀ. ವರೆಗೆ ನಡೆಯುವ ಎಲ್ಲ ಚಲನವಲನಗಳನ್ನು ಸೆರೆ ಹಿಡಿಯಲಿದ್ದು, ಉತ್ತಮ ಗುಣಮಟ್ಟದ ದೃಶ್ಯಗಳನ್ನು ಸೆರೆ ಹಿಡಿಯಲಿದೆ. ಇದರಿಂದಾಗಿ ಲಾಕ್‍ಡೌನ್ ಉಲ್ಲಂಘನೆಗೆ ಬ್ರೇಕ್ ಹಾಕಲು ಇದೊಂದು ಉತ್ತಮ ತಂತ್ರಜ್ಞಾನವಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿವೆ, ಲಾಕ್‍ಡೌನ್ ಅವಶ್ಯವಿಲ್ಲ: ಸೋಮಣ್ಣ

    ಅನವಶ್ಯಕವಾಗಿ ಓಡಾಡುವವರು, ಜೂಜುಕೋರರು ಹಾಗೂ ಲಾಕ್‍ಡೌನ್ ಉಲ್ಲಂಘಿಸುವವರಿಗೆ ಬ್ರೇಕ್ ಹಾಕಲು ಈ ಡ್ರೋಣ್ ಮೂಲಕ ವೀಡಿಯೋ ರೆಕಾರ್ಡ್ ಮಾಡಿ ಮತ್ತೊಮ್ಮೆ ತಪ್ಪಿ ಮಾಡದಂತೆ ಮೊದಲು ಎಚ್ಚರಿಕೆ ನೀಡಲಾಗುವುದು. ಒಮ್ಮೆ ಎಚ್ಚರಿಸಿದ ಬಳಿಕವೂ ಮತ್ತೆ ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

  • ಅಗತ್ಯ ವಸ್ತು ಖರೀದಿಗೆ ಬಳಸಬಹುದು ವಾಹನ – ಒಂದೇ ದಿನಕ್ಕೆ ರೂಲ್ಸ್ ಚೇಂಜ್

    ಅಗತ್ಯ ವಸ್ತು ಖರೀದಿಗೆ ಬಳಸಬಹುದು ವಾಹನ – ಒಂದೇ ದಿನಕ್ಕೆ ರೂಲ್ಸ್ ಚೇಂಜ್

    ಬೆಂಗಳೂರು: ಸರ್ಕಾರದ ಕಠಿಣ ಲಾಕ್‍ಡೌನ್‍ನ ಎರಡನೇ ದಿನ ಆರಂಭವಾಗಿದ್ದು, ಅಗತ್ಯ ವಸ್ತು ಖರೀದಿಗೆ ವಾಹನ ಬಳಸಲು ಅವಕಾಶ ನೀಡಲಾಗಿದೆ.

    ಲಾಕ್‍ಡೌನ್‍ನ ಮೊದಲ ದಿನವೇ ನಿಯಮ ಬದಲಾಗಿದೆ. ದಿನಸಿ, ಹಣ್ಣು ಸೊಪ್ಪು ತರಕಾರಿ ಖರೀದಿಗೆ ವಾಹನ ಬಳಸಬಹುದು. ಆದರೆ ನಿಮ್ಮ ನಿಮ್ಮ ಏರಿಯಾಗಳಲ್ಲಷ್ಟೇ ಖರೀದಿಗೆ ಅವಕಾಶ ಇದೆ. ಅನಗತ್ಯವಾಗಿ ಏರಿಯಾದಿಂದ ಏರಿಯಾಗೆ ವಾಹನಗಳಲ್ಲಿ ಬರುವಂತಿಲ್ಲ. ಗ್ರಾಮಾಂತರ ಪ್ರದೇಶಗಳಲ್ಲಿ ಹತ್ತಿರದ ಅಂಗಡಿಗೆ ತೆರಳಲು ಗಾಡಿ ಬಳಸಬಹುದು.

    ಅಗತ್ಯ ವಸ್ತು ಖರೀದಿಗೆ ವಾಹನ ಬಳಸಬಹುದು ಅಂತ ಅಡ್ಡಾಡಬೇಡಿ. ಯಾಕಂದರೆ ಬೆಂಗಳೂರಿನ ಗಲ್ಲಿಗಲ್ಲಿಯಲ್ಲೂ ಖಾಕಿ ಗಸ್ತು ತಿರುಗುತ್ತಿದೆ. ಮುಖ್ಯ ರಸ್ತೆಗಳಲ್ಲಿ ಎಂದಿನಂತೆ ಚೆಕ್ಕಿಂಗ್ ನಡೆಯುತ್ತದೆ. ಅನಗತ್ಯವಾಗಿ ಓಡಾಡಿದ್ರೆ, ವಾಹನಗಳ ಸೀಜ್ ಆಗೋದು ಪಕ್ಕಾ ಆಗಿದೆ. ಹೀಗಾಗಿ ನೆಪ ಹೇಳಿಕೊಂಡು ತಿರುಗಾಡೋದು ಬಿಡಿ. ಮನೆಯಲ್ಲೇ ಇದ್ದು ಲಾಕ್‍ಡೌನ್‍ಗೆ ಸಹಕರಿಸಿ, ಕೊರೊನಾ ಚೈನ್ ಬ್ರೇಕ್ ಮಾಡಿ.