Tag: Rupali Naik

  • ಹೆಗಡೆ ಮುಂದೆ ಅಸಮಾಧಾನ ಹೊರಹಾಕಿದ ಶಾಸಕಿ ರೂಪಾಲಿ ನಾಯ್ಕ!

    ಕಾರವಾರ : ನಾನು ಸೋತಿದ್ದಕ್ಕೆ ನೋವಾಗಲಿಲ್ಲ, ಅನಂತಕುಮಾರ್ ಹೆಗಡೆ (Anant Kumar Hegde) ಪ್ರಚಾರಕ್ಕೆ ಬಾರದೇ ಇರುವುದಕ್ಕೆ ನೋವಾಗಿದೆ ಎಂದು ಮಾಜಿ ಶಾಸಕಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ (Rupali Naik) ಅವರು ಸಂಸದರ ವಿರುದ್ಧ ‌ ಬಹಿರಂಗವಾಗಿ ಅಸಮಾಧಾನ ಹೊರಹಾಕಿದರು.

    ಇಂದು ಕಾರವಾರದ ಬಿಜೆಪಿ (BJP) ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಒಂದು ಬಾರಿ ಸಂಸದರು ಬಂದು ಹೋಗಿದ್ರೆ ಕಾರವಾರದಲ್ಲಿ ಬಿಜೆಪಿ ಗೆಲ್ಲುತ್ತಿತ್ತು. ಈ ಮಾತನ್ನ ನಾನು ಹೇಳುತ್ತಿಲ್ಲ ಇಡೀ ಕಾರವಾರದ ಜನ ಹೇಳುತ್ತಿದ್ದಾರೆ. ಅನಂತ ಕುಮಾರ್ ಹೆಗಡೆ ಹಿಂದೆ ಅವರದ್ದೇ ಆದ ಕಾರ್ಯಕರ್ತರ ಪಡೆ ಇದೆ ಎಂದರು.

    ವಿಧಾನಸಭಾ ಚುನಾವಣೆಯ (Vidhana Sabha Election) ಸಂದರ್ಭದಲ್ಲಿ ಸಂಸದರು ಪ್ರಚಾರಕ್ಕೆ ಬರದಿದ್ದರಿಂದ ನಮಗೆ ಹಿನ್ನಡೆ ಆಯ್ತು. ಈಗಲಾದರೂ ನಮ್ಮ ಪಕ್ಷದ ಕಚೇರಿ ಬಂದು ಕಾರ್ಯಕರ್ತರ ಸಭೆಗೆ ಕರೆದಿದ್ದಕ್ಕೆ ಅಭಿನಂದನೆ ಎಂದರು. ಇದನ್ನೂ ಓದಿ: ದೇಶದ ನೀತಿ, ನಿಯತ್ತನ್ನ‌ ಕುಲಗೆಡಿಸಿದ್ದೇ ಕಾಂಗ್ರೆಸ್ – ನಾನು ಇರೋವರೆಗೆ ಅವ್ರಿಗೆ ನೆಮ್ಮದಿ ಕೊಡಲ್ಲ: ಅನಂತಕುಮಾರ್

    ಅನಂತಕುಮಾರ್ ಹೆಗಡೆ ಸಕ್ರಿಯರಾಗಿದ್ದಕ್ಕೆ ನಾನು ಆಕಾಂಕ್ಷಿ ಆಗಿದ್ದೆ. ಆದರೆ ಈಗ ಅವರು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ನಾನು ಆಕಾಂಕ್ಷಿ ಅಲ್ಲ. ನಾನು ಯಾವತ್ತೂ ಅನಂತ ಕುಮಾರ್ ಹೆಗಡೆಗೆ ಟಿಕೆಟ್ ತಪ್ಪಿಸುವ ಪ್ರಯತ್ನ ಮಾಡಿಲ್ಲ. ಅವರು ಮತ್ತೆ ಸಕ್ರಿಯ ರಾಜಕಾರಣಕ್ಕೆ ಬಂದಿರುವುದು ಖುಷಿ ಆಗಿದೆ ಎಂದರು.

  • ಕಾರಿನಲ್ಲಿ ಫಾಲೋ ಮಾಡ್ತಾರೆ, ಟ್ರಕ್ ಹತ್ತಿಸಲು ಬರ್ತಾರೆ- ಶಾಸಕಿ ರೂಪಾಲಿ ನಾಯ್ಕ್‌ಗೆ ಜೀವ ಬೆದರಿಕೆ

    ಕಾರಿನಲ್ಲಿ ಫಾಲೋ ಮಾಡ್ತಾರೆ, ಟ್ರಕ್ ಹತ್ತಿಸಲು ಬರ್ತಾರೆ- ಶಾಸಕಿ ರೂಪಾಲಿ ನಾಯ್ಕ್‌ಗೆ ಜೀವ ಬೆದರಿಕೆ

    ಕಾರವಾರ: ಚುನಾವಣೆ (Election) ಸಮೀಪಿಸುತಿದ್ದಂತೆ ಆರೋಪ ಪ್ರತ್ಯಾರೋಪಗಳು ಸಾಮಾನ್ಯ. ಆದರೆ ಕಾರವಾರದಲ್ಲಿ ಬಿಜೆಪಿ ಮಹಿಳಾ ಶಾಸಕಿ ರೂಪಾಲಿ ನಾಯ್ಕ್(Rupali Naik), ತಮಗೆ ಜೀವ ಬೆದರಿಕೆ ಇರುವ ಬಗ್ಗೆ ಹೇಳಿಕೆ ನೀಡುವ ಮೂಲಕ ಮತ್ತೆ ವಿರೋಧಿಗಳ ಎದುರು ಹೊಸ ಬಾಂಬ್ ಸಿಡಿಸಿದ್ದಾರೆ.

    ಹೌದು. ಕಾರವಾರದಲ್ಲಿ ಈ ಹಿಂದೆ ಮಾಜಿ ಶಾಸಕ ಸತೀಶ್ ಸೈಲ್((Sathish Sail) , ಹಾಲಿ ಶಾಸಕಿ ರೂಪಾಲಿ ನಾಯ್ಕ್ ಕಿತ್ತಾಟ ಠಾಣೆ ಮೆಟ್ಟಿಲೇರಿ ದೂರು ಪ್ರತಿದೂರುಗಳು ದಾಖಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಕಾರವಾರ ಶಾಸಕಿ ತಮಗೆ ಜೀವ ಬೆದರಿಕೆ ಇದೆ ಎಂದು ಹೇಳಿಕೆ ನೀಡಿದ್ದು ರಾಜಕೀಯ ಬಣ್ಣ ರಂಗೇರಿದೆ.

    ತಮ್ಮ ಮನೆಯ ಮುಂದಿರುವ ಬೀದಿ ದೀಪ ತೆಗೆದು ಹೆದರಿಸುತ್ತಾರೆ. ಟ್ರಕ್ ಮೂಲಕ ನನ್ನ ವಾಹನಕ್ಕೆ ಡಿಕ್ಕಿಯಾಗಿಸಲು ಬರುತ್ತಾರೆ. ಕಾರಿನಲ್ಲಿ ಫಾಲೋ ಮಾಡುತ್ತಾರೆ. ನನ್ನ ಮತ್ತು ನನ್ನ ಅಕ್ಕನ ಮಗನ ಕಿಡ್ನಾಪ್ ಮಾಡಲು ಪ್ರಯತ್ನಿಸಿದ್ರು. ಈ ಹಿಂದೆಯೂ ಮಾಡಿದ್ರು, ಈಗಲೂ ಮಾಡ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ದಶಪಥ ವೀಕ್ಷಣೆಯ ಪ್ರವಾಸ ದಿಢೀರ್‌ ರದ್ದು

    ಜೊತೆಗೆ ಜೀವ ಬೆದರಿಕೆ (Threat For Rupali Naik) ಹಾಕುತ್ತಿರುವವರು ಯಾರು ಏನು ಗೊತ್ತಾಗುತ್ತಿಲ್ಲ. ನನಗೆ ಅನೇಕ ಮಂದಿ ವಿರೋಧಿಗಳು ಇದ್ದಾರೆ. ತಮಗೆ ಅಧಿಕಾರ ಸಿಕ್ಕಿಲ್ಲ ಎಂದು ಹತಾಶರಾದವರೂ ಇದ್ದಾರೆ. ಮಹಿಳೆಯ ಮುಂದೆ ಬರುವುದನ್ನು ನೋಡಕ್ಕಾಗದೆ, ಅಭಿವೃದ್ಧಿ ಸಹಿಸದೇ ಇರುವವರು ಇದ್ದಾರೆ. ಈ ಬಗ್ಗೆ ಹಿಂದಿನ ಎಸ್.ಪಿ ಯವರಿಗೂ ತಿಳಿಸಿದ್ದೆ. ಈಗಿನ ಎಸ್.ಪಿಯವರಿಗೂ ತಿಳಿಸಿದ್ದೇನೆ. ಭದ್ರತೆ ನೀಡಿದ್ದಾರೆ. ಈಗಲೂ ಮತ್ತೆ ದೂರು ಕೊಡುತ್ತಿದ್ದೇನೆ. ನನಗೆ ಬೆದರಿಕೆ ನೀಡಿದ್ರೆ ಹೆದರಿಕೊಂಡು ದೂರ ಸರೀತಾರೆ ಎಂದು ಅಂದುಕೊಂಡಿದ್ದಾರೆ. ನಾನು ರಾಜಕೀಯ ಕ್ಷೇತ್ರದಿಂದ ಹಿಂದೆ ಸರಿಯುವುದೂ ಇಲ್ಲ, ನಾನು ಏನು ಕೆಲಸ ಮಾಡಬೇಕೋ ಆ ಕೆಲಸ ಮಾಡಿ ಸಾಯುತ್ತೇನೆ ಎಂದು ರೂಪಾಲಿ ನಾಯ್ಕ್ ಹೇಳಿದ್ದಾರೆ.

    ಶಾಸಕಿ ರೂಪಾಲಿ ನಾಯ್ಕ್ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಮಾತನಾಡಿದ್ದು, ಇದೀಗ ರಾಜಕೀಯ ಚರ್ಚೆಗೂ ಕಾರಣವಾಗಿದೆ. ಶಾಸಕರಿಗೆ ಯಾರು ಹೆದರಿಸಿದ್ದಾರೋ ಗೊತ್ತಿಲ್ಲ, ಆದರೆ ಈ ಬೆಳವಣಿಗೆ ಸರಿಯಲ್ಲ. ಇಬ್ಬರೂ ಸ್ಟೇಟ್ಮೆಂಟ್ ಕೊಡೋದನ್ನ ಕಡಿಮೆ ಮಾಡಬೇಕು, ಯಾರೂ ಏನೇ ಹೇಳಲಿ ಮುಂಬರುವ ಚುನಾವಣೆಯಲ್ಲಿ ಜನರೇ ಉತ್ತರ ನೀಡುತ್ತಾರೆ ಎಂದು ಅವರದ್ದೇ ಪಕ್ಷದ ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಲಿ-ಮಾಜಿಗಳಿಗೆ ಟಾಂಗ್ ನೀಡಿದ್ದಾರೆ.

    ಶಾಸಕಿ ರೂಪಾಲಿ ನಾಯ್ಕ್ ಬೆದರಿಕೆ ಕುರಿತು ಹೇಳಿಕೆ ನೀಡುತ್ತಿದ್ದಂತೆ ಪೊಲೀಸ್ ಇಲಾಖೆಯಿಂದಲೂ ಭದ್ರತೆ ಹೆಚ್ಚಿಸಲಾಗಿದೆ. ಇವುಗಳ ನಡುವೆ ಕಾರವಾರದಲ್ಲಿ ಮಾಜಿ-ಹಾಲಿಗಳ ಜಗಳ ಅತಿರೇಕಕ್ಕೆ ಹೋಗುತ್ತಿದ್ದು ಚುನಾವಣೆ ಸಂದರ್ಭದಲ್ಲಿ ಯಾವ ಹಂತಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

  • ಕಾರವಾರದಲ್ಲಿ PDO ವರ್ಗಾವಣೆ ಕಿರಿಕ್ – ಕಚೇರಿಯಲ್ಲೇ ಹಾಲಿ, ಮಾಜಿ ಶಾಸಕರ ಫೈಟ್

    ಕಾರವಾರದಲ್ಲಿ PDO ವರ್ಗಾವಣೆ ಕಿರಿಕ್ – ಕಚೇರಿಯಲ್ಲೇ ಹಾಲಿ, ಮಾಜಿ ಶಾಸಕರ ಫೈಟ್

    ಕಾರವಾರ: ವಿಧಾನಸಭಾ ಚುನಾವಣೆ (Vidhanasabha Elections) ಸಮೀಪಿಸುತ್ತಿದ್ದಂತೆ ಕರಾವಳಿ ಜಿಲ್ಲೆ ಕಾರವಾರದಲ್ಲಿ ರಾಜಕೀಯ ಕಿತ್ತಾಟಗಳು ಬೀದಿಗೆ ಬರತೊಡಗಿದೆ. ಪಿಡಿಓ ವರ್ಗಾವಣೆ ವಿಷಯದಲ್ಲಿ ಕಾರವಾರ ಕ್ಷೇತ್ರದ ಹಾಲಿ ಶಾಸಕಿ ರೂಪಾಲಿ ನಾಯ್ಕ್ (Rupali Naik) ಹಾಗೂ ಮಾಜಿ ಶಾಸಕ ಸತೀಶ್ ಸೈಲ್ (Sathish Sail) ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲೇ ಕಿತ್ತಾಟ ಮಾಡಿಕೊಂಡಿದ್ದು, ಇದೀಗ ಈ ಪ್ರಕರಣ ಠಾಣೆಯ ಮೆಟ್ಟಿಲೇರಿದೆ.

    ಸತೀಶ್ ಸೈಲ್‍ಗೆ ಕುಡುಕ ಎಂದ ಶಾಸಕಿ: ಚುನಾವಣೆ ಸಮೀಪಿಸುತ್ತಿದ್ದಂತೆ ಕಾರವಾರ ಕ್ಷೇತ್ರದಲ್ಲಿ ರಾಜಕೀಯ ಕಿತ್ತಾಟ ರಂಗೇರಿದೆ. ಕಾರವಾರ ನಗರದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾಜಾಳಿ ಪಂಚಾಯತ್‍ನಲ್ಲಿ PDO ಸಾಧನಾ ಚಂಡೇಕರ್ ಎಂಬವರ ವರ್ಗಾವಣೆ ವಿಚಾರಕ್ಕೆ ಸಂಘರ್ಷ ಶುರುವಾಗಿದೆ. ಇದೇ ವಿಷಯಕ್ಕೆ ಮಾಜಿ ಶಾಸಕ ಸತೀಶ್ ಸೈಲ್ ಹಾಗೂ ಹಾಲಿ ಶಾಸಕಿ ರೂಪಾಲಿ ನಾಯ್ಕ ಮಧ್ಯೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಶಾಸಕರ ದಾವಣಗೆರೆಯ ಮನೆ ಮೇಲೂ ರೇಡ್- ಇಂದು ಬೇನಾಮಿ ಆಸ್ತಿ ಮೇಲೂ ದಾಳಿ ಸಾಧ್ಯತೆ

    ಘಟನೆ ಬಳಿಕ ಇಬ್ಬರೂ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ. ಶಾಸಕಿ ರೂಪಾಲಿ ನಾಯ್ಕ್ ತನ್ನ ಮೇಲೆ ಪೇಪರ್ ವೇಯ್ಟರ್‍ನಲ್ಲಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ತನಗೆ ಅವ್ಯಾಚ್ಯ ಶಬ್ದದಿಂದ ನಿಂದಿಸಿದ್ದು, ಶಾಸಕಿ ವಿರುದ್ಧ ದೂರು ದಾಖಲಿಸಿ ಕ್ರಮಕೈಗೊಳ್ಳಿ ಎಂದು ಮಾಜಿ ಶಾಸಕ ಸತೀಶ್ ಸೈಲ್ ದೂರು ಕೊಟ್ಟಿದ್ರೆ, ಅತ್ತ ಶಾಸಕಿ ರೂಪಾಲಿ ನಾಯ್ಕ್ ಕೂಡ ಮಾಜಿ ಶಾಸಕರು ಕುಡಿತು ಬಂದು ಅಮಲಿನಲ್ಲಿ ಜಗಳ ಮಾಡುತ್ತಿದ್ದಾರೆ. ಕ್ರಮ ಕೈಗೊಳ್ಳುವಂತೆ ಕೇಸ್ ದಾಖಲಿಸಿದ್ದಾರೆ.

    ಒಟ್ಟಿನಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಪಿಡಿಓ ವರ್ಗಾವಣೆ ವಿಷಯದಲ್ಲಿ ಹೀಗೆ ಹಾಲಿ ಹಾಗೂ ಮಾಜಿ ಶಾಸಕರು ಠಾಣೆ ಮೆಟ್ಟಿಲೇರಿದ್ದು ಮಾತ್ರ ದುರಂತ. ಸದ್ಯ ಈ ವಿಚಾರ ಮುಂದೆ ಯಾವ ತಿರುವು ಪಡೆದುಕೊಳ್ಳಲಿದೆ ಅನ್ನೋದನ್ನ ಕಾದುನೋಡಬೇಕಿದೆ.

  • ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಆರ್ಥಿಕ ಇಲಾಖೆ ಕೊಕ್ಕೆ – ಸರ್ಕಾರದ ವಿರುದ್ಧ ಉತ್ತರ ಕನ್ನಡಿಗರಿಂದ ಭಾರೀ ಆಕ್ರೋಶ

    ಬೆಂಗಳೂರು: ಉತ್ತರ ಕನ್ನಡದ ಮಂದಿಗೆ ಮತ್ತೆ ನಿರಾಸೆಯಾಗಿದ್ದು, ಕನಸಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆರ್ಥಿಕ ಇಲಾಖೆ ಕೊಕ್ಕೆ ಹಾಕಿದೆ. ಸರ್ಕಾರದಿಂದ ಈ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಉತ್ತರ ಕನ್ನಡ ಮಂದಿ ಆಕ್ರೋಶಗೊಂಡು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

    ಉತ್ತರ ಕನ್ನಡ(Uttara Kannada) ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(Super Specialty Hospital) ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸದನದಲ್ಲಿ ಕಾರವಾರ(Karwar) ಶಾಸಕಿ ರೂಪಾಲಿ ನಾಯಕ್(Rupali Naik) ಯಾವಾಗ ಆಸ್ಪತ್ರೆ ಮಂಜೂರು ಮಾಡಿಕೊಡುತ್ತೀರಿ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಆರೋಗ್ಯ ಇಲಾಖೆಯು ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿಲ್ಲ ಎಂದು ಉತ್ತರಿಸಿದೆ.

    ಇಂದಿನ ಸದನದಲ್ಲಿ(Session) ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂದು ರೂಪಾಲಿ ನಾಯಕ್ ಬೇಡಿಕೆ ಇಟ್ಟರು. ಅಷ್ಟೇ ಅಲ್ಲದೇ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿಳಂಬ ಹಿನ್ನೆಲೆಯಲ್ಲಿ ಬೇಸರ ವ್ಯಕ್ತಪಡಿಸಿದರು. ಉತ್ತರ ಕನ್ನಡ ಜಿಲ್ಲೆಗೆ ಇನ್ನೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಟ್ಟಿಲ್ಲ. ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲಾ ದೂರದ ಮಣಿಪಾಲ್, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದಾಗಿ ತುಂಬಾ ಸಮಸ್ಯೆ ಆಗುತ್ತಿದೆ ಎಂದು ತಮ್ಮ ಜಿಲ್ಲೆಯ ಜನತೆ ಅನುಭವಿಸುತ್ತಿರುವ ಯಾತನೆಯನ್ನು ತೆರೆದಿಟ್ಟರು.

    ಆಸ್ಪತ್ರೆ ಮಂಜೂರಾತಿ ವಿಳಂಬ ಆಗುತ್ತಿದೆ. ಆದಷ್ಟು ಬೇಗ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಿಕೊಡಿ ಎಂದು ರೂಪಾಲಿ ನಾಯಕ್ ಆಗ್ರಹಿಸಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರೋಗ್ಯ ಸಚಿವರು ನಿಮ್ಮ ಪ್ರಶ್ನೆಗೆ ಉತ್ತರಿಸಬೇಕು. ಆದರೆ ಸಚಿವರಿಗೆ ಅನಾರೋಗ್ಯ ಹಿನ್ನೆಲೆ ಬಂದಿಲ್ಲ. ಸೋಮವಾರ ಉತ್ತರ ಕೊಡಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಇದರಿಂದ ಸಿಟ್ಟಾದ ರೂಪಾಲಿ ನಾಯಕ್ ಅವರು, ಆರೋಗ್ಯ ಸಚಿವರಿಗೆ ಆರೋಗ್ಯ ಸರಿ ಇಲ್ಲ ಅಂತ ಬಂದಿಲ್ಲ. ನಮ್ಮ ಜಿಲ್ಲೆಯ ಜನರಿಗೆ ಆರೋಗ್ಯ ಕೆಟ್ರೆ ಎಲ್ಲಿಗೆ ಹೋಗಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಿಕೆ ಹರಿಪ್ರಸಾದ್‌ ಕ್ರಿಶ್ಚಿಯನ್‌ ಆದ್ರೆ ನಮ್ಮದೇನೂ ತಕರಾರಿಲ್ಲ: ಮಾಧುಸ್ವಾಮಿ

    ಸದನದಲ್ಲಿ ಮಂಡನೆಯಾದ ಲಿಖಿತ ಉತ್ತರಲ್ಲಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ಕೊಟ್ಟಿಲ್ಲ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಹಣಕಾಸು ವೆಚ್ಚದ ಬಗ್ಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಹೀಗಾಗಿ ಮತ್ತೊಮ್ಮೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಆರ್ಥಿಕ ಇಲಾಖೆಯಿಂದ ಅನುಮತಿ ಸಿಕ್ಕಿದರೆ ಮಾತ್ರ ಜಿಲ್ಲೆಗೆ ಆಸ್ಪತ್ರೆ ಮಂಜೂರು ಮಾಡುತ್ತೇವೆ ಎಂದು ತಿಳಿಸಿದೆ.

    ಕಾರವಾರದಲ್ಲಿ ಹೊಸದಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವ ಬಗ್ಗೆ ಈ ಹಿಂದೆ ಸ್ವೀಕರಿಸಲಾದ ಪ್ರಸ್ತಾವನೆಗೆ ಸಂಬಧಿಸಿದಂತೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯಕ್ಕಾಗಿ ಅಗತ್ಯವಿರುವ ಜಾಗ, ಸಿಬ್ಬಂದಿ, ಉಪಕರಣ ಹಾಗೂ ಇತ್ಯಾದಿ ಮೂಲ ಸೌಲಭ್ಯಗಳು ಹಾಗೂ ಅದಕ್ಕೆ ತಗಲುವ ಆರ್ಥಿಕ ಹೊರೆಯ ವಿವರಗಳನ್ನು ನಿರ್ದೇಶಕರು, ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ಪಡೆದು ಸದರಿ ಪ್ರಸ್ತಾವನೆಯ ಮಂಜೂರಾತಿಗಾಗಿ ಆರ್ಥಿಕ ಇಲಾಖೆಯ ಸಹಮತಿಯನ್ನು ಕೋರಲಾಗಿತ್ತು. ಆದರೆ, ಆರ್ಥಿಕ ಇಲಾಖೆಯು ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿಲ್ಲ. ಇದನ್ನೂ ಓದಿ: ಮತ್ತೆ ಮುಖ್ಯಮಂತ್ರಿಯಾಗಿ – ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ 70ಕ್ಕೂ ಹೆಚ್ಚು ಅರ್ಚಕರು

    Live Tv
    [brid partner=56869869 player=32851 video=960834 autoplay=true]

  • ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

    ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

    – ಪ್ರವಾಸೋದ್ಯಮ ಇಲಾಖೆಯಿಂದ ಆಹ್ವಾನ ನೀಡದೇ ನಿರ್ಲಕ್ಷ್ಯ

    ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆಯುತ್ತಿದ್ದ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲೇ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಎದುರು ಶಾಸಕಿ ರೂಪಾಲಿ ನಾಯ್ಕ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

    ಕಾರವಾರದ ಶಾಸಕಿಯಾಗಿರುವ ರೂಪಾಲಿ ನಾಯ್ಕ್, ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ, ಶಾಸಕಿಯಾಗಿರುವ ನನಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳನ್ನು ಕಾರ್ಯಕ್ರಮ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

    2018ರಿಂದ ಕಾರವಾರ ಕ್ಷೇತ್ರಕ್ಕೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಪ್ರವಾಸೋದ್ಯಮ ಇಲಾಖೆಯವರು ನನ್ನ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕಾರ್ಯ ನಡೆಸಿದರೂ ಅದರ ಯಾವುದೇ ಮಾಹಿತಿ ನೀಡುವುದಿಲ್ಲ. ನಾನೊಬ್ಬಳು ಕ್ಷೇತ್ರದ ಶಾಸಕಿ ಎಂಬುದನ್ನು ಮರೆತು ಆಧಿಕಾರಿಗಳು ತಮ್ಮ ಇಚ್ಛೆಗೆ ತಾವು ನಡೆದುಕೊಳ್ಳುತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

    ನನ್ನ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಹಣ ಹಾಕಿ ನಿರ್ಮಿಸಿದ ಗಾರ್ಡನ್‍ಗಳು ಸೇರಿದಂತೆ ಇತರೆ ಕಾಮಗಾರಿಗಳ ಕಾರ್ಯ ನಿಂತುಹೋಗಿದೆ. ಇದಕ್ಕೆಲ್ಲಾ ಅಧಿಕಾರಿಗಳು ಕಾರಣ ಎಂದು ಕಿಡಿಕಾರಿದರು.

     

  • ಗಾಯಾಳುಗಳನ್ನ ಶಾಸಕರೇ ಕರೆತಂದ್ರೂ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗದ ಚಿಕಿತ್ಸೆ

    ಗಾಯಾಳುಗಳನ್ನ ಶಾಸಕರೇ ಕರೆತಂದ್ರೂ ಸರ್ಕಾರಿ ಆಸ್ಪತ್ರೆಯಲ್ಲಿ ಸಿಗದ ಚಿಕಿತ್ಸೆ

    – ವೈದ್ಯರನ್ನ ತರಾಟೆ ತೆಗದುಕೊಂಡ ಶಾಸಕಿ ರೂಪಾಲಿ ನಾಯ್ಕ್
    – ಬರದ 108 ಅಂಬುಲೆನ್ಸ್
    – ಖಾಸಗಿ ಅಂಬುಲೆನ್ಸ್ ನಲ್ಲಿ ಗಾಯಾಳುಗಳ ರವಾನೆ

    ಕಾರವಾರ: ಅಪಘಾತದಲ್ಲಿ ಗಾಯಗೊಂಡ ಗಾಯಾಳುಗಳನ್ನ ಶಾಸಕಿ ರೂಪಾಲಿ ನಾಯ್ಕ್ ಕರೆ ತಂದರೂ ಸರ್ಕಾರಿ ಆಸ್ಪತ್ರೆ ಸಮರ್ಪಕ ಚಿಕಿತ್ಸೆ ಸಿಗದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ.

    ಇಂದು ಅಂಕೋಲಾದಿಂದ ಕಾರವಾರಕ್ಕೆ ಬರುತ್ತಿದ್ದ ಶಾಸಕರ ವಾಹನದ ಎದುರೇ ಬಿಣಗಾದ ಬಳಿ ಬೈಕ್ ಮೀನಿನ ಲಾರಿಗೆ ಡಿಕ್ಕಿ ಹೊಡೆದು ಅಪಘಾತಗೊಂಡಿತ್ತು. ಬೈಕ್ ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ಇದನ್ನು ಗಮನಿಸಿದ ಶಾಸಕಿ 108ಕ್ಕೆ ಕರೆ ಮಾಡಿದ್ದಾರೆ. ಆದರೆ ಎಷ್ಟು ಕಾದರೂ ಅಂಬುಲೆನ್ಸ್ ಬರಲೇ ಇಲ್ಲ. ಹೀಗಾಗಿ ಖಾಸಗಿ ಅಂಬುಲೆನ್ಸ್ ತರಿಸಿ ಕಾರವಾರದ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನ ಕರೆತಂದಿದ್ದರು.

    ಗಾಯಾಳುಗಳನ್ನ ಕರೆ ತಂದ ಸಂದರ್ಭದಲ್ಲಿ ವೈದ್ಯರು ಕರ್ತವ್ಯದಲ್ಲಿರಲಿಲ್ಲ. ಆಕ್ಸಿಜನ್ ಸಹ ವ್ಯವಸ್ಥೆ ಮಾಡಲಿಲ್ಲ. ಇದರಿಂದ ಕುಪಿತಗೊಂಡ ಶಾಸಕಿ ಆರ್.ಎಂ.ಓ ವೆಂಕಟೇಶ್ ರವರನ್ನು ಕರೆಸಿ ವೈದ್ಯರು ಸೇರಿದಂತೆ ಸಿಬ್ಬಂದಿಯನ್ನ ತರಾಟೆ ತೆಗೆದುಕೊಂಡರು.

    ಉತ್ತರ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಚತುಷ್ಪತ ಕಾಮಗಾರಿ ನಡೆಯುತ್ತಿರುವುದರಿಂದ ಕರಾವಳಿ ಭಾಗದಲ್ಲಿ ಅಪಘಾತಗಳು ಸರ್ವೇ ಸಾಮಾನ್ಯವಾಗಿದೆ. ಆದ್ರೆ ಗಾಯಾಳುಗಳನ್ನ 108 ವಾಹನದಲ್ಲಿ ಸಾಗಿಸುವ ಮೊದಲೇ ಪ್ರಾಣ ಪಕ್ಷಿ ಹಾರಿ ಹೊಗಿರುತ್ತೆ. ಅಪಘಾತಗೊಂಡರೆ ವ್ಯಕ್ತಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳು ಬರುವುದೇ ಇಲ್ಲ. ಬಂದರೂ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆಗಳಿಲ್ಲ. ಜೊತೆಗೆ ಹಲವು ವೈದ್ಯರು ಚಿಕಿತ್ಸೆ ನೀಡದೇ ಗೋವಾ ಅಥವಾ ಮಣಿಪಾಲಿಗೆ ಕಳುಹಿಸಿಕೊಡುತ್ತಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.