Tag: russia

  • ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ರಷ್ಯಾದಿಂದ ತೈಲ ಆಮದನ್ನು ಭಾರತ ಸಂಪೂರ್ಣವಾಗಿ ನಿಲ್ಲಿಸಲಿದೆ: ಟ್ರಂಪ್ ಅದೇ ರಾಗ

    ವಾಷಿಂಗ್ಟನ್‌: ಭಾರತವು (India) ರಷ್ಯಾದಿಂದ (Russia) ತೈಲ (Oil) ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಪುನರುಚ್ಚರಿಸಿದ್ದಾರೆ.

    ಏರ್ ಫೋರ್ಸ್ ಒನ್‌ನಲ್ಲಿ ವರದಿಗಾರರೊಂದಿಗೆ ಟ್ರಂಪ್ ಮಾತನಾಡಿದ್ದಾರೆ. ಈ ವೇಳೆ, ಭಾರತವು ತನ್ನ ರಷ್ಯಾದ ತೈಲ ಖರೀದಿಯನ್ನು ಕಡಿತಗೊಳಿಸುತ್ತಿದೆ. ಚೀನಾ ರಷ್ಯಾದ ತೈಲ ಖರೀದಿಯನ್ನು ಗಣನೀಯವಾಗಿ ಕಡಿತಗೊಳಿಸುತ್ತಿದೆ ಎಂದಿದ್ದಾರೆ. ಇದೇ ವೇಳೆ ರಷ್ಯಾದ ತೈಲ ಕಂಪನಿಗಳಾದ ರೋಸ್ನೆಫ್ಟ್ ಮತ್ತು ಲುಕೋಯಿಲ್ ಮೇಲಿನ ಹೊಸ ನಿರ್ಬಂಧಗಳನ್ನು ಅವರು ಉಲ್ಲೇಖಿಸಿ ಮಾತನಾಡಿದ್ದಾರೆ. ಇದನ್ನೂ ಓದಿ: ವ್ಯಾಪಾರ ಬೆದರಿಕೆ ಹಾಕಿ ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದೆ: ಟ್ರಂಪ್‌

    ವ್ಯಾಪಾರ, ತಂತ್ರಜ್ಞಾನ ಮತ್ತು ಕಚ್ಚಾ ವಸ್ತುಗಳ ಪ್ರವೇಶದ ಕುರಿತು ವಾಷಿಂಗ್ಟನ್ ಮತ್ತು ಚೀನಾ ನಡುವೆ ಘರ್ಷಣೆ ನಡೆಯುತ್ತಿದೆ. ಇದರ ನಡುವೆ ಏಷ್ಯಾ ಪ್ರವಾಸದ ಭಾಗವಾಗಿ ದಕ್ಷಿಣ ಕೊರಿಯಾದಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಟ್ರಂಪ್ ಭೇಟಿಯಾಗಲಿದ್ದಾರೆ. ಅವರ ನಿಗದಿತ ಭೇಟಿಗೂ ಮನ್ನವೇ ಟ್ರಂಪ್‌ ಈ ಹೇಳಿಕೆ ನೀಡಿದ್ದಾರೆ.

    ಇತ್ತೀಚೆಗೆ ಟ್ರಂಪ್‌ ವರದಿಗಾರರೊಂದಿಗೆ ಮಾತನಾಡುತ್ತಾ, ವರ್ಷಾಂತ್ಯದ ವೇಳೆಗೆ ರಷ್ಯಾದೀಂದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಭಾರತ ಭರವಸೆ ನೀಡಿದೆ. ಈ ಪ್ರಕ್ರಿಯೆಗೆ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದಿದ್ದರು.

    ಇದರ ನಡುವೆ ಟ್ರಂಪ್ ಹೇಳಿಕೆಗಳನ್ನು ಭಾರತ ನಿರಂತರವಾಗಿ ತಿರಸ್ಕರಿಸುತ್ತಾ ಬಂದಿದೆ. ಅಲ್ಲದೇ ನಮ್ಮ ಇಂಧನ ನೀತಿಯು ಸ್ವತಂತ್ರವಾಗಿ ಉಳಿದಿದೆ. ಕಚ್ಚಾ ತೈಲ ಆಮದಿನ ಬಗ್ಗೆ ನಿರ್ಧಾರಗಳನ್ನು ರಾಷ್ಟ್ರೀಯ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಒತ್ತಿ ಹೇಳಿದೆ. ಇದನ್ನೂ ಓದಿ: ʻಒಂದ್‌ ಸಲ ಕಮಿಟ್‌ ಆದ್ರೆ ತನ್ನ ಮಾತ್‌ ತಾನೇ ಕೇಳಲ್ಲʼ – ಜಾಹೀರಾತಿನಿಂದ ಸಿಟ್ಟಿಗೆದ್ದ ಟ್ರಂಪ್‌, ಕೆನಡಾ ಮೇಲೆ ಹೆಚ್ಚುವರಿ 10% ಸುಂಕ

  • ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ರಷ್ಯಾದಿಂದ ಶೀಘ್ರದಲ್ಲೇ ಇನ್ನಷ್ಟು S-400 ಭಾರತಕ್ಕೆ – 10,000 ಕೋಟಿ ಡೀಲ್‌ ಫೈನಲ್‌

    ನವದೆಹಲಿ: ರಷ್ಯಾದಿಂದ ಶೀಘ್ರದಲ್ಲೇ S-400 ವಾಯು ರಕ್ಷಣಾ ವ್ಯವಸ್ಥೆಗಾ0 (S 400 Air Defence)ಗಿ ಹೆಚ್ಚಿನ ಸಂಖ್ಯೆಯ ಕ್ಷಿಪಣಿಗಳನ್ನ ಖರೀದಿಸಲು ಭಾರತ ಸಿದ್ಧತೆ ನಡೆಸುತ್ತಿದೆ. ಅದಕ್ಕಾಗಿ 10,000 ಕೋಟಿ ರೂ. ಒಪ್ಪಂದ ಅಂತಿಮಗೊಳಿಸಲಾಗಿದೆ.

    ವಾಯುಪಡೆಯ (Indian Air Force) ಗೇಮ್‌ ಚೇಂಜರ್‌ ಎಂದೇ ಗುರುತಿಸಿಕೊಂಡಿರುವ S-400 ವಾಯುರಕ್ಷಣಾ ವ್ಯವಸ್ಥೆ ಈಗಾಗಲೇ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ತನ್ನ ಸಾಮರ್ಥ್ಯವನ್ನು ಸಾಬೀತು ಮಾಡಿದೆ. ಆದ್ದರಿಂದ ವಾಯುರಕ್ಷಣಾ ಸಾಮರ್ಥ್ಯವನ್ನು ಇನ್ನಷ್ಟು ಬಲಪಡಿಸಲು ಎಸ್‌-400 ಖರೀದಿಗೆ ಭಾರತ ಮುಂದಾಗಿದೆ.

    ಈ ಒಪ್ಪಂದದ ಕುರಿತು ಭಾರತ ಮತ್ತು ರಷ್ಯಾದ ನಡುವೆ ಮಾತುಕತೆ ಅಂತಿಮಗೊಂಡಿದೆ. ಅ.23ರಂದು ರಕ್ಷಣಾ ಸಚಿವಾಲಯದ ರಕ್ಷಣಾ ಸ್ವಾಧೀನ ಮಂಡಳಿಯು ಸಭೆ ಸೇರಲಿದ್ದು, ಅಧಿಕೃತ ಹೇಳಿಕೆಯನ್ನು ಪ್ರಕಟಿಸಲಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಭಾರತೀಯ ಸೇನೆಗೆ ಬ್ರಹ್ಮೋಸ್ ಕ್ಷಿಪಣಿ ಬ್ರಹ್ಮಾಸ್ತ್ರ – ಶೀಘ್ರದಲ್ಲೇ ಮಿಸೈಲ್ ಸಾಮರ್ಥ್ಯ 800 ಕಿಮೀಗೆ ಹೆಚ್ಚಳ

    2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ (China) ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ. ಇದನ್ನೂ ಓದಿ: ಆರ್‌ಜಿ ಕರ್ ಅತ್ಯಾಚಾರ ಅಪರಾಧಿಯ ಅಪ್ರಾಪ್ತ ಸೊಸೆ ಶವ ಮನೆ ಕಪಾಟಿನಲ್ಲಿ ಪತ್ತೆ

    ಆಪರೇಷನ್‌ ಸಿಂಧೂರದಲ್ಲಿ ಯಶಸ್ವಿ ಕಾರ್ಯಾಚರಣೆ
    ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನು ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿತ್ತು. ಪಾಕ್‌ ಕೂಡ ಭಾರತಕ್ಕೆ ನೀಡಿರುವ ವಾಯು ರಕ್ಷಣಾ ವ್ಯವಸ್ಥೆಯನ್ನ ತಮಗೆ ಕೊಡುವಂತೆ ಮನವಿ ಮಾಡಿಕೊಂಡಿತ್ತು.

    ಸುದರ್ಶನ ಚಕ್ರ ವಿಶೇಷತೆ ಏನು?
    IAF ಸೇವೆಯಲ್ಲಿ ಸುದರ್ಶನ ಚಕ್ರ ಎಂದು ಕರೆಯಲ್ಪಡುವ S-400 ಟ್ರಯಂಫ್, ವಿಶ್ವದ ಅತ್ಯಂತ ಮುಂದುವರಿದ ದೀರ್ಘ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾಗಿದೆ. ರಷ್ಯಾ ನಿರ್ಮಿತ ಮತ್ತು ಭಾರತದ ಕಾರ್ಯತಂತ್ರದ ವಾಯು ರಕ್ಷಣಾ ಕಮಾಂಡ್‌ಗೆ ಇದು ಸಂಯೋಜಿಸಲ್ಪಟ್ಟದೆ. ರಹಸ್ಯ ವಿಮಾನಗಳು, ಕ್ರೂಸ್ ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಯುದ್ಧತಂತ್ರದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಾಯುಗಾಮಿ ಬೆದರಿಕೆಗಳನ್ನು ಪತ್ತೆಹಚ್ಚುವ ಮತ್ತು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಏಕಕಾಲಕ್ಕೆ 80 ಗುರಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಇದಕ್ಕಿದೆ.

  • ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿಸಲ್ಲ – ಮೋದಿ ಭರವಸೆ ಕೊಟ್ಟಿದ್ದಾರೆ ಎಂದ ಟ್ರಂಪ್‌ಗೆ ತಿರುಗೇಟು

    ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿಸಲ್ಲ – ಮೋದಿ ಭರವಸೆ ಕೊಟ್ಟಿದ್ದಾರೆ ಎಂದ ಟ್ರಂಪ್‌ಗೆ ತಿರುಗೇಟು

    * ಮೋದಿ-ಟ್ರಂಪ್ ಮಧ್ಯೆ ದೂರವಾಣಿ ಸಂಭಾಷಣೆ ನಡೆದಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆ

    ನವದೆಹಲಿ: ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿಸಲ್ಲ ಅಂತ ಪ್ರಧಾನಿ ಮೋದಿ (PM Modi) ಭರವಸೆ ಕೊಟ್ಟಿದ್ದಾರೆಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿಕೆಗೆ ಭಾರತ ತಿರುಗೇಟು ನೀಡಿದೆ.

    ಶ್ವೇತಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಡೊನಾಲ್ಡ್ ಟ್ರಂಪ್, ರಷ್ಯಾದಿಂದ ಭಾರತ ಕಚ್ಚಾತೈಲ ಖರೀದಿಸಲ್ಲ ಅಂತ ಮೋದಿ ಭರವಸೆ ಕೊಟ್ಟಿದ್ದಾರೆ. ಇದೊಂದು ದೊಡ್ಡ ಹೆಜ್ಜೆಯಾಗಿದೆ ಎಂದಿದ್ದರು. ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಮೋದಿ-ಟ್ರಂಪ್ ಮಧ್ಯೆ ಯಾವುದೇ ದೂರವಾಣಿ ಸಂಭಾಷಣೆ ನಡೆದಿಲ್ಲ ಎಂದು ತಿಳಿಸಿದೆ. ಇದನ್ನೂ ಓದಿ: ಭಾರತದ ಆರ್ಥಿಕತೆಗೆ ರಷ್ಯಾದ ತೈಲ ಮುಖ್ಯ, ನಮ್ಮ ಸಂಬಂಧ ನಂಬಿಕೆ ಮೇಲೆ ಕಟ್ಟಿರುವ ಸೇತುವೆ: ರಷ್ಯಾ

    ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯೆ ನೀಡಿದ್ದು, ಭಾರತದ ಆಮದು ನೀತಿಗಳು ದೇಶದ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ ಮಾರ್ಗದರ್ಶಿಸಲ್ಪಡುತ್ತವೆ. ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಸರ್ಕಾರದ ಸ್ಥಿರ ಆದ್ಯತೆಯಾಗಿದೆ ಎಂದಿದ್ದಾರೆ.

    ರಷ್ಯಾದ ರಾಯಭಾರಿ ಡೆನಿಸ್ ಅಲಿಪೋವ್ ಪ್ರತಿಕ್ರಿಯಿಸಿ, ಮಾಸ್ಕೋ ಜೊತೆಗಿನ ಭಾರತದ ಇಂಧನ ಸಹಕಾರವು ಅದರ ರಾಷ್ಟ್ರೀಯ ಹಿತಾಸಕ್ತಿಗಳಿಗೆ ಅನುಗುಣವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ ಇನ್ಮುಂದೆ ರಷ್ಯಾದಿಂದ ತೈಲ ಖರೀದಿಸಲ್ಲ, ಮೋದಿ ನನಗೆ ಭರವಸೆ ನೀಡಿದ್ದಾರೆ: ಟ್ರಂಪ್‌

    ಈ ಮಧ್ಯೆ, ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಟ್ರಂಪ್‌ಗೆ ಹೆದರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವುದಿಲ್ಲ ಎಂದು ಟ್ರಂಪ್‌ಗೆ ಭರವಸೆ ನೀಡಿದ್ದಕ್ಕೆ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದು, ಟ್ರಂಪ್ ಹೇಳಿಕೆಗಳಿಗೆ ಮೋದಿ ಏಕೆ ಖಂಡನೆ ವ್ಯಕ್ತಪಡಿಸುವುದಿಲ್ಲ ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ.

  • ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ರಷ್ಯಾ ಮಿಲಿಟರಿ ಸೇರಿದ್ದ ಭಾರತ ಮೂಲದ ಸೈನಿಕ ಉಕ್ರೇನ್ ಸೇನೆ ಮುಂದೆ ಶರಣು

    ಕೈವ್: ರಷ್ಯಾ ಮಿಲಿಟರಿಯಲ್ಲಿ ( Russian Army) ಸೇವೆ ಸಲ್ಲಿಸುತ್ತಿದ್ದ ಭಾರತ ಮೂಲದ ಸೈನಿಕ ಉಕ್ರೇನ್ (Ukraine) ಮುಂದೆ ಶರಣಾಗಿದ್ದಾರೆ ಎಂದು ಉಕ್ರೇನ್ ಸೇನೆ ತಿಳಿಸಿದೆ. ಉಕ್ರೇನಿಯನ್ ಮಿಲಿಟರಿ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಈ ವೀಡಿಯೋವನ್ನು ಬಿಡುಗಡೆ ಮಾಡಿದೆ.

    ಗುಜರಾತ್‌ನ (Gujarat) 22 ವರ್ಷದ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಉಕ್ರೇನ್ ಪಡೆ ಮುಂದೆ ಶರಣಾದ ಸೈನಿಕ. ಈ ವಿಷಯದ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕೈವ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ವರದಿಯ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಇದುವರೆಗೆ ಉಕ್ರೇನ್ ಅಧಿಕಾರಿಗಳಿಂದ ಯಾವುದೇ ಔಪಚಾರಿಕ ಮಾಹಿತಿ ಬಂದಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಹುಸೇನ್ ಹೆಚ್ಚಿನ ಅಧ್ಯಯನಕ್ಕೆಂದು ರಷ್ಯಾಗೆ ಹೋಗಿದ್ದರು. ಅಲ್ಲಿ ಮಾದಕವಸ್ತು ಸಂಬಂಧಿತ ಪ್ರಕರಣದಲ್ಲಿ ಸಿಲುಕಿ 7 ವರ್ಷಗಳ ಶಿಕ್ಷೆಯನ್ನು ವಿಧಿಸಲಾಯಿತು. ಜೈಲು ಶಿಕ್ಷೆ ತಪ್ಪಿಸಲು ರಷ್ಯಾದ ಮಿಲಿಟರಿ ಒಪ್ಪಂದಕ್ಕೆ ಸಹಿ ಹಾಕುವ ಅವಕಾಶವನ್ನು ಹುಸೇನ್‌ಗೆ ನೀಡಲಾಯಿತು. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

    ನನಗೆ ಜೈಲಿನಲ್ಲಿರಲು ಇಷ್ಟವಿರಲಿಲ್ಲ, ಆದ್ದರಿಂದ ನಾನು ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ. ಆದರೆ ನಾನು ಅಲ್ಲಿಂದ ಹೊರಬರಲು ಬಯಸಿದ್ದೆ ಎಂದು ಹುಸೇನ್ ಹೇಳಿದ್ದಾರೆ. ಕೇವಲ 16 ದಿನಗಳ ತರಬೇತಿಯ ನಂತರ, ನನ್ನನ್ನು ಅಕ್ಟೋಬರ್ 1 ರಂದು ಮೂರು ದಿನಗಳ ಕಾಲ ನಡೆದ ಮೊದಲ ಯುದ್ಧ ಕಾರ್ಯಾಚರಣೆಗೆ ಕಳುಹಿಸಲಾಯಿತು. ತಮ್ಮ ಕಮಾಂಡರ್ ಜೊತೆಗಿನ ಘರ್ಷಣೆಯ ನಂತರ ಉಕ್ರೇನ್ ಸೇನೆ ಮುಂದೆ ಶರಣಾಗಲು ನಿರ್ಧರಿಸಿದೆ ಎಂದು ಹುಸೇನ್ ವೀಡಿಯೋದಲ್ಲಿ ವಿವರಿಸಿದ್ದಾರೆ. ಇದನ್ನೂ ಓದಿ: ಉ.ಕರ್ನಾಟಕದಲ್ಲಿ ಪ್ರವಾಹ – ಕೇಂದ್ರದಿಂದ ನೆರೆಪೀಡಿತ ಜಿಲ್ಲೆಗಳಿಗೆ ಪರಿಹಾರ ನೀಡುವಂತೆ ಮೋದಿಗೆ ಯತ್ನಾಳ್ ಪತ್ರ

  • ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಉಕ್ರೇನ್‌ನ ರೈಲು ನಿಲ್ದಾಣದ ಮೇಲೆ ರಷ್ಯಾ ಡ್ರೋನ್ ದಾಳಿ, 30 ಮಂದಿ ಸಾವು – ಭಯೋತ್ಪಾದನಾ ಕೃತ್ಯ ಎಂದ ಝೆಲೆನ್ಸ್ಕಿ

    ಕೈವ್‌: ಉಕ್ರೇನ್‌ನ (Ukraine) ಸುಮಿಯಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಕೈವ್‌ಗೆ ಹೋಗುವ ರೈಲನ್ನು ಗುರಿಯಾಗಿಸಿಕೊಂಡು ರಷ್ಯಾ (Russia) ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಿಂದ 30 ಜನ ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelenskyy) ತಿಳಿಸಿದ್ದಾರೆ.

    ರಷ್ಯಾ ದಾಳಿಯ ವೀಡಿಯೋವನ್ನು ಝೆಲೆನ್ಸ್ಕಿ X ನಲ್ಲಿ ಪೋಸ್ಟ್ ಮಾಡಿದ್ದಾರೆ. ವೀಡಿಯೋದಲ್ಲಿ ಹಾನಿಗೊಳಗಾದ ರೈಲಿನಲ್ಲಿ ಬೆಂಕಿಯ ಜ್ಯಾಲೆಗಳು ಬರುತ್ತಿರುವುದು ಸೆರೆಯಾಗಿದೆ. ಘಟನಾ ಸ್ಥಳದಲ್ಲಿ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳ ಬಗ್ಗೆ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯವರೆಗೆ, ಕನಿಷ್ಠ 30 ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ʻತುಂಬಾ ಅಪಾಯಕಾರಿʼ ದೂರವಿರಿ – ರಷ್ಯಾ ಸೇನೆ ಸೇರುತ್ತಿರುವ ಭಾರತೀಯರಿಗೆ MEA ವಾರ್ನಿಂಗ್‌

    ರಷ್ಯಾದೊಂದಿಗಿನ ಶಾಂತಿ ಮಾತುಕತೆ ವಿಫಲದಿಂದ ಹತಾಶೆಗೊಳಗಾಗಿರುವ ಝೆಲೆನ್ಸ್ಕಿ, ರಷ್ಯಾ ವಿರುದ್ಧ ಬಲವಾದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೇ ರಷ್ಯನ್ನರಿಗೆ ತಾವು ನಾಗರಿಕರನ್ನು ಕೊಲ್ಲುತ್ತಿದ್ದೇವೆ ಎಂದು ತಿಳಿದಿರಲು ಸಾಧ್ಯವಿಲ್ಲ. ಪ್ರತಿದಿನ ರಷ್ಯಾ ಮುಗ್ದ ಜನರ ಜೀವಗಳನ್ನು ತೆಗೆದುಕೊಳ್ಳುತ್ತಿದೆ. ಇದನ್ನು ಜಗತ್ತು ನಿರ್ಲಕ್ಷಿಸಬಾರದು, ಇದೊಂದು ಭಯೋತ್ಪಾದನಾ ಕೃತ್ಯ ಎಂದು ಕರೆದಿದ್ದಾರೆ.

    ಗವರ್ನರ್ ಹ್ರೈಹೊರೊವ್ ಎಕ್ಸ್‌ನಲ್ಲಿ ಉರಿಯುತ್ತಿರುವ ರೈಲು ಬೋಗಿಯ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ವೈದ್ಯರು ಮತ್ತು ರಕ್ಷಣಾ ಅಧಿಕಾರಿಗಳು ಇದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

    ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ರಷ್ಯಾ ದಾಳಿಯನ್ನು ಖಂಡಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಉಕ್ರೇನ್‌ನೊಂದಿಗೆ ಯುರೋಪಿಯನ್ ಕಮಿಷನ್ ನಿಂತಿದೆ. ರಷ್ಯಾ ಅಂತಿಮವಾಗಿ ಶಾಶ್ವತ ಶಾಂತಿಯನ್ನು ಒಪ್ಪುವವರೆಗೂ ಅದರ ಮೇಲೆ ಒತ್ತಡವನ್ನು ಹೆಚ್ಚಿಸುವುದನ್ನು ಮುಂದುವರಿಸಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಕೌಂಟರ್‌ ಅಟ್ಯಾಕ್‌ – ರಷ್ಯಾದ ಆಯಿಲ್‌ ಪೈಪ್‌ಲೈನ್‌ ಮೇಲೆ ದಾಳಿ

  • ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ: ಅಮೆರಿಕ ಟ್ಯಾರಿಫ್‌ಗೆ ಪುಟಿನ್‌ ಟಾಂಗ್‌

    ಭಾರತ ಯಾರ ಮುಂದೆಯೂ ಅವಮಾನಕ್ಕೆ ಒಳಗಾಗಲು ರಷ್ಯಾ ಬಿಡಲ್ಲ: ಅಮೆರಿಕ ಟ್ಯಾರಿಫ್‌ಗೆ ಪುಟಿನ್‌ ಟಾಂಗ್‌

    ಮಾಸ್ಕೋ: ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಟೀಕಿಸಿದ್ದಾರೆ.

    ಭಾರತ (India) ಎಂದಿಗೂ ಅಂತಹ ಬೇಡಿಕೆಗಳಿಗೆ ಮಣಿಯುವುದಿಲ್ಲ. ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಪುಟಿನ್ ಹೇಳಿದ್ದಾರೆ. ಸೋಚಿಯಲ್ಲಿ ನಡೆದ ವಾಲ್ಡೈ ಚರ್ಚಾ ಕ್ಲಬ್‌ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ರಷ್ಯಾದ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರನ್ನು ಸಮತೋಲಿತ ಮತ್ತು ಬುದ್ಧಿವಂತ ನಾಯಕ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌

    ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು ಬದಲಾಗುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.

    ಭಾರತದಂತಹ ದೇಶದ ಜನರು ನನ್ನನ್ನು ನಂಬಿರಿ. ರಾಜಕೀಯ ನಾಯಕತ್ವವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ಯಾರ ಮುಂದೆಯೂ ಯಾವುದೇ ಅವಮಾನವನ್ನು ಎಂದಿಗೂ ಸಹಿಸಲ್ಲ. ನನಗೆ ಪ್ರಧಾನಿ ಮೋದಿ ಗೊತ್ತು. ಅವರು ಸ್ವತಃ ಈ ರೀತಿಯ ಯಾವುದೇ ಕ್ರಮಗಳನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ. ಅಮೆರಿಕದ ದಂಡನಾತ್ಮಕ ಸುಂಕಗಳಿಂದಾಗಿ ಭಾರತ ಎದುರಿಸುತ್ತಿರುವ ನಷ್ಟಗಳನ್ನು ರಷ್ಯಾದಿಂದ ಕಚ್ಚಾ ತೈಲ ಆಮದುಗಳಿಂದ ಸಮತೋಲನಗೊಳಿಸಲಾಗುತ್ತದೆ. ಜೊತೆಗೆ ಅದು ಸಾರ್ವಭೌಮ ರಾಷ್ಟ್ರವಾಗಿ ಪ್ರತಿಷ್ಠೆಯನ್ನು ಪಡೆಯುತ್ತದೆ ಎಂದು ಪುಟಿನ್‌ ತಿಳಿಸಿದ್ದಾರೆ. ಇದನ್ನೂ ಓದಿ: ಟ್ರಂಪ್‌ ದಿಟ್ಟತನದಿಂದ ಭಾರತದ ಜೊತೆ ಕದನ ವಿರಾಮ ಸಾಧ್ಯವಾಯ್ತು: ಹಾಡಿ ಹೊಗಳಿದ ಪಾಕ್‌ ಪ್ರಧಾನಿ

    ಎರಡು ವಾರಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ, ಉಕ್ರೇನ್ ಯುದ್ಧಕ್ಕೆ ಚೀನಾ ಮತ್ತು ಭಾರತ ಪ್ರಾಥಮಿಕ ನಿಧಿದಾರರು ಎಂದು ಕರೆದಿದ್ದರು. ರಷ್ಯಾದ ತೈಲವನ್ನು ಖರೀದಿಸುವುದನ್ನು ಮುಂದುವರೆಸುವ ಮೂಲಕ ಅವರು ಉಕ್ರೇನ್ ಯುದ್ಧಕ್ಕೆ ರಷ್ಯಾಗೆ ಹಣಕಾಸು ಒದಗಿಸುತ್ತಿದ್ದಾರೆ ಎಂದು ಆರೋಪಿಸಿದ್ದರು. ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ಶಿಕ್ಷೆಯಾಗಿ ಅಮೆರಿಕ, ಭಾರತದ ಮೇಲೆ ಹೆಚ್ಚುವರಿಯಾಗಿ ಶೇ.25 ರಷ್ಟು ಸುಂಕವನ್ನು ವಿಧಿಸಿದ್ದು, ಆಗಸ್ಟ್‌ನಲ್ಲಿ ಭಾರತದ ರಫ್ತಿನ ಮೇಲಿನ ಒಟ್ಟು ತೆರಿಗೆಯನ್ನು ಶೇ. 50 ಕ್ಕೆ ಹೆಚ್ಚಿಸಿದೆ.

  • ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

    ಮಾಸ್ಕೋ: ರಷ್ಯಾದ (Russia Earthquake) ಪೂರ್ವ ಕಮ್ಚಟ್ಕಾ ಪರ್ಯಾಯ ದ್ವೀಪದ ಕರಾವಳಿಯಲ್ಲಿ ಶುಕ್ರವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಅಧಿಕಾರಿಗಳು ಸುನಾಮಿ ಎಚ್ಚರಿಕೆ ಹೊರಡಿಸಿದ್ದಾರೆ.

    ರಷ್ಯಾದ ಸಾಮಾಜಿಕ ಮಾಧ್ಯಮದಲ್ಲಿ ಭೂಕಂಪಕ್ಕೆ ಸಂಬಂಧಿಸಿದ ವೀಡಿಯೋಗಳು ವೈರಲ್‌ ಆಗಿವೆ. ಮನೆಗಳಲ್ಲಿನ ಪೀಠೋಪಕರಣಗಳು, ವಸ್ತುಗಳು ಅಲುಗಾಡುತ್ತಿರುವ ಹಾಗೂ ಪಾರ್ಕ್‌ ಮಾಡಿದ ಕಾರುಗಳು ಹಿಂದಕ್ಕೆ ಮತ್ತು ಮುಂದಕ್ಕೆ ತೂಗಾಡುತ್ತಿರುವ ದೃಶ್ಯಗಳು ವೀಡಿಯೋದಲ್ಲಿ ಕಂಡುಬಂದಿವೆ. ಇದನ್ನೂ ಓದಿ: ನ.30 ರ ನಂತರ ಭಾರತದ ಮೇಲಿನ ಶೇ.25 ರಷ್ಟು ದಂಡ ಸುಂಕವನ್ನು ಅಮೆರಿಕ ತೆಗೆಯಬಹುದು: CEA

    ಪ್ರದೇಶದ ರಾಜಧಾನಿ ಪೆಟ್ರೋಪಾವ್ಲೋವ್ಸ್ಕ್-ಕಾಮ್ಚಾಟ್ಸ್ಕಿಯಿಂದ ಪೂರ್ವಕ್ಕೆ 128 ಕಿಲೋಮೀಟರ್ (80 ಮೈಲು) ದೂರದಲ್ಲಿ ಮತ್ತು 10 ಕಿಲೋಮೀಟರ್ (ಆರು ಮೈಲು) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್ಜಿಎಸ್) ವರದಿ ಮಾಡಿದೆ. ಅಮೆರಿಕದ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಹತ್ತಿರದ ಕರಾವಳಿಯಲ್ಲಿ ಅಪಾಯಕಾರಿ ಅಲೆಗಳು ಏಳಬಹುದು ಎಂದು ಎಚ್ಚರಿಕೆ ನೀಡಿದೆ.

    ಪ್ರಸ್ತುತ ಯಾವುದೇ ಹಾನಿಯ ವರದಿಗಳಿಲ್ಲ. ಎಲ್ಲರೂ ಶಾಂತವಾಗಿರಲು ನಾನು ಕೇಳಿಕೊಳ್ಳುತ್ತೇನೆ. ಪರ್ಯಾಯ ದ್ವೀಪದ ಪೂರ್ವ ಕರಾವಳಿಗೆ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗುತ್ತಿದೆ ಎಂದು ಪ್ರದೇಶದ ಗವರ್ನರ್ ವ್ಲಾಡಿಮಿರ್ ಸೊಲೊಡೊವ್ ತಿಳಿಸಿದ್ದಾರೆ.

    ಜುಲೈನಲ್ಲಿ ಈ ಪ್ರದೇಶದ ಕರಾವಳಿಯಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪವು ಸಂಭವಿಸಿತ್ತು. ಇದು ಸುನಾಮಿಗೆ ಕಾರಣವಾಗಿತ್ತು. ಪರಿಣಾಮವಾಗಿ ಕರಾವಳಿ ಹಳ್ಳಿಯ ಒಂದು ಭಾಗ ಸಮುದ್ರಕ್ಕೆ ಕೊಚ್ಚಿಕೊಂಡು ಹೋಗಿತ್ತು. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ ಕೇಸ್;‌ ಬೋಯಿಂಗ್‌, ಹನಿವೆಲ್‌ ವಿರುದ್ಧ ಮೃತರ ಕುಟುಂಬಗಳಿಂದ ಮೊಕದ್ದಮೆ

  • ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ಚೀನಾ ಮೇಲೆ 50-100% ಸುಂಕ ವಿಧಿಸಲು ಟ್ರಂಪ್‌ ಕರೆ

    ವಾಷಿಂಗ್ಟನ್‌: ರಷ್ಯಾದ ಆರ್ಥಿಕ ಪ್ರಾಬಲ್ಯವನ್ನು ದುರ್ಬಲಗೊಳಿಸಲು ಚೀನಾದ (China) ಮೇಲೆ 50 ರಿಂದ 100% ರಷ್ಟು ಸುಂಕಗಳನ್ನು ವಿಧಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump), ನ್ಯಾಟೋಗೆ ಕರೆ ನೀಡಿದ್ದಾರೆ.

    ಶನಿವಾರ ಟ್ರಂಪ್ ನ್ಯಾಟೋ ರಾಷ್ಟ್ರಗಳಿಗೆ ಪತ್ರವೊಂದನ್ನು ಬರೆದಿದ್ದು, ರಷ್ಯಾದ (Russia) ತೈಲ ಖರೀದಿಯನ್ನು ನಿಲ್ಲಿಸುವಂತೆ ಮತ್ತು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಖರೀದಿ ರಾಷ್ಟ್ರಗಳ ಮೇಲೆ ಸುಂಕ ವಿಧಿಸಲು G7 ದೇಶಗಳಿಗೆ ಅಮೆರಿಕ ಕರೆ

    ಎಲ್ಲಾ ನ್ಯಾಟೋ ರಾಷ್ಟ್ರಗಳು ಒಪ್ಪಿಕೊಂಡು ಅದೇ ರೀತಿ ಮಾಡಲು ಪ್ರಾರಂಭಿಸಿದಾಗ ಮತ್ತು ಎಲ್ಲಾ ನ್ಯಾಟೋ ರಾಷ್ಟ್ರಗಳು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಿದಾಗ, ನಾನು ರಷ್ಯಾದ ಮೇಲೆ ಪ್ರಮುಖ ನಿರ್ಬಂಧಗಳನ್ನು ವಿಧಿಸಲು ಸಿದ್ಧನಿದ್ದೇನೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

    ರಷ್ಯಾ ಮತ್ತು ಉಕ್ರೇನ್ ಜೊತೆಗಿನ ಯುದ್ಧ ಮುಗಿದ ನಂತರ ಚೀನಾದ ಮೇಲಿನ 50 ರಿಂದ 100% ಸುಂಕಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬಹುದು. ಆದರೆ, ಈಗ ವಿಧಿಸಬಹುದಾದ ಸುಂಕವು ಯುದ್ಧವನ್ನು ಕೊನೆಗೊಳಿಸುವಲ್ಲಿ ಹೆಚ್ಚಿನ ಸಹಾಯ ಮಾಡುತ್ತದೆ ಎಂದು ಟ್ರಂಪ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: 50% ತೆರಿಗೆ ಹಾಕುವುದು ಸುಲಭವಾಗಿರಲಿಲ್ಲ, ಇದರಿಂದಾಗಿಯೇ ಭಾರತದ ಜೊತೆ ಭಿನ್ನಾಭಿಪ್ರಾಯ ಶುರುವಾಯ್ತು: ಟ್ರಂಪ್‌

    ಚೀನಾ ಮತ್ತು ಭಾರತದ ನಂತರ NATO ಸದಸ್ಯ ಟರ್ಕಿ, ರಷ್ಯಾದ ತೈಲದ ಮೂರನೇ ಅತಿದೊಡ್ಡ ಖರೀದಿದಾರರಾಗಿದ್ದಾರೆ. ಇಂಧನ ಮತ್ತು ಶುದ್ಧ ಗಾಳಿಯ ಸಂಶೋಧನಾ ಕೇಂದ್ರದ ಪ್ರಕಾರ, ರಷ್ಯಾದ ತೈಲ ಖರೀದಿಯಲ್ಲಿ ತೊಡಗಿರುವ 32 ರಾಷ್ಟ್ರಗಳ ಮೈತ್ರಿಕೂಟದ ಇತರ ಸದಸ್ಯರಲ್ಲಿ ಹಂಗೇರಿ ಮತ್ತು ಸ್ಲೋವಾಕಿಯಾ ಸೇರಿವೆ.

    ಉಕ್ರೇನ್‌ನಲ್ಲಿನ ಯುದ್ಧವನ್ನು ಕೊನೆಗೊಳಿಸಲು ಯಾವುದೇ ಪ್ರಗತಿ ಸಾಧಿಸದಿದ್ದರೆ ರಷ್ಯಾ ಮೇಲೆ ನಿರ್ಬಂಧಗಳು ಮತ್ತು ಅದರ ತೈಲವನ್ನು ಖರೀದಿಸುವ ಪ್ರಮುಖ ಖರೀದಿದಾರರಾದ ಚೀನಾ ಮತ್ತು ಭಾರತದಂತಹ ದೇಶಗಳ ಮೇಲೆ ದ್ವಿತೀಯ ನಿರ್ಬಂಧಗಳನ್ನು ವಿಧಿಸುವುದಾಗಿ ಟ್ರಂಪ್ ಈ ಹಿಂದೆ ಬೆದರಿಕೆ ಹಾಕಿದ್ದರು.

    ಕಳೆದ ತಿಂಗಳು, ಅಮೆರಿಕದ ಅಧ್ಯಕ್ಷರು ರಷ್ಯಾದ ತೈಲವನ್ನು ನಿರಂತರವಾಗಿ ಆಮದು ಮಾಡಿಕೊಳ್ಳುತ್ತಿರುವುದನ್ನು ಉಲ್ಲೇಖಿಸಿ ಭಾರತೀಯ ಸರಕುಗಳ ಮೇಲೆ ಹೆಚ್ಚುವರಿಯಾಗಿ 25% ಸುಂಕವನ್ನು ವಿಧಿಸಿದ್ದರು. ಆದರೆ, ಚೀನಾ ವಿರುದ್ಧ ಅಂತಹ ಕ್ರಮವನ್ನು ತೆಗೆದುಕೊಂಡಿಲ್ಲ.

  • ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    ಅಮೆರಿಕ ಒತ್ತಡದ ನಡುವೆ ಭಾರತಕ್ಕೆ ರಷ್ಯಾ ಗಿಫ್ಟ್‌; ಇನ್ನಷ್ಟು S-400 ವಾಯು ರಕ್ಷಣಾ ವ್ಯವಸ್ಥೆ ಪೂರೈಕೆಗೆ ನಿರ್ಧಾರ

    – ಮತ್ತಷ್ಟು ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಗೆ ಭಾರತ ನಿರ್ಧಾರ

    ಮಾಸ್ಕೋ: ಅಮೆರಿಕ ಸುಂಕ ಸಮರದ ನಡುವೆಯೂ ಹೆಚ್ಚಿನ S-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ (S-400 Air Defence Systems) ರಷ್ಯಾ, ಭಾರತ ಮಾತುಕತೆ ನಡೆಸುತ್ತಿವೆ ಎಂದು ವರದಿಯಾಗಿದೆ. ಇದು ಭಾರತ ಮತ್ತು ರಷ್ಯಾ (India – Russia) ನಡುವಿನ ಸಂಬಂಧ ಬಲಗೊಳ್ಳುತ್ತಿರುವುದಕ್ಕೆ ಉದಾಹರಣೆಯಾಗಿದೆ.

    S-400 ವಾಯು ರಕ್ಷಣಾ ವ್ಯವಸ್ಥೆಗಳ ಪೂರೈಕೆಯನ್ನು ಹೆಚ್ಚಿಸಲು ರಷ್ಯಾ ಮತ್ತು ಭಾರತ ಮಾತುಕತೆ ನಡೆಸುತ್ತಿವೆ. ಭಾರತ ಈಗಾಗಲೇ ಎಸ್‌-400 (ಸುದರ್ಶನ ಚಕ್ರ) ಹೊಂದಿದ್ದರೂ ಇದರ ಪೂರೈಕೆ ಇನ್ನಷ್ಟು ಹೆಚ್ಚಿಸಲು ಮಾತುಕತೆ ನಡೆಯುತ್ತಿದೆ ಎಂದು ರಷ್ಯಾ ಮಿಲಿಟರಿ ವಿಭಾಗದ ಹಿರಿಯ ಅಧಿಕಾರಿ ಡಿಮಿಟ್ರಿ ಶುಗಾಯೆವ್‌ ತಿಳಿಸಿದ್ದಾರೆ.

    2018ರಲ್ಲಿ ಭಾರತ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳಿಗಾಗಿ ರಷ್ಯಾದೊಂದಿಗೆ 5.5 ಶತಕೋಟಿ ಡಾಲರ್‌ ಒಪ್ಪಂದಕ್ಕೆ ಸಹಿ ಹಾಕಿತ್ತು. ಚೀನಾದ (China) ಮಿಲಿಟರಿ ಶಕ್ತಿಯನ್ನು ಎದುರಿಸುವ ಉದ್ದೇಶದಿಂದ ಅಂದು ಭಾರತ, ರಷ್ಯಾ ಜೊತೆ ಈ ಒಪ್ಪಂದಕ್ಕೆ ಸಹಿ ಹಾಕಿತ್ತು. ಆದ್ರೆ ಈವರೆಗಿನ ಪೂರೈಕೆಯಲ್ಲಿ ವಿಳಂಬವಾಗಿತ್ತು. ಇದೀಗ ಈ ಒಪ್ಪಂದದ ಅಡಿಯಲ್ಲಿ ಕೊನೆಯ 2 ಘಟಕಗಳು 2026 ಮತ್ತು 2027ರ ವೇಳೆ ಭಾರತಕ್ಕೆ ಲಭ್ಯವಾಗಲಿದೆ ಎಂದು ವರದಿಗಳು ತಿಳಿಸಿವೆ.

    ಆಪರೇಷನ್‌ ಸಿಂಧೂರದಲ್ಲಿ ಯಶಸ್ವಿ ಕಾರ್ಯಾಚರಣೆ
    ಆಪರೇಷನ್ ಸಿಂಧೂರ ಸಮಯದಲ್ಲಿ ಎಸ್-400 ವಾಯು ರಕ್ಷಣಾ ವ್ಯವಸ್ಥೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದ್ದವು. ದೀರ್ಘ-ಶ್ರೇಣಿಯ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವ್ಯವಸ್ಥೆಯು ಪಾಕ್‌ನ ಮಿಸೈಲ್‌, ಡ್ರೋನ್‌ಗಳನ್ನು ಹೊಡೆದುರುಳಿಸಿದ್ದವು. ಇದಾದ ಬಳಿಕ ವಿಶ್ವದ ಬೇರೆ ಬೇರೆ ರಾಷ್ಟ್ರಗಳಿಂದಲೂ ಎಸ್‌-400 ಗೆ ಬೇಡಿಕೆ ಹೆಚ್ಚಾಗಿತ್ತು. ಪಾಕ್‌ ಕೂಡ ಭಾರತಕ್ಕೆ ನೀಡಿರುವ ವಾಯು ರಕ್ಷಣಾ ವ್ಯವಸ್ಥೆಯನ್ನ ತಮಗೆ ಕೊಡುವಂತೆ ಮನವಿ ಮಾಡಿಕೊಂಡಿತ್ತು.

    ಸುದರ್ಶನ ಚಕ್ರ ವಿಶೇಷತೆ ಏನು?
    IAF ಸೇವೆಯಲ್ಲಿ ಸುದರ್ಶನ ಚಕ್ರ ಎಂದು ಕರೆಯಲ್ಪಡುವ S-400 ಟ್ರಯಂಫ್, ವಿಶ್ವದ ಅತ್ಯಂತ ಮುಂದುವರಿದ ದೀರ್ಘ-ಶ್ರೇಣಿಯ ವಾಯು ರಕ್ಷಣಾ ವ್ಯವಸ್ಥೆಗಳಲ್ಲಿ ಒಂದಾಗಿದೆ. ರಷ್ಯಾ ನಿರ್ಮಿತ ಮತ್ತು ಭಾರತದ ಕಾರ್ಯತಂತ್ರದ ವಾಯು ರಕ್ಷಣಾ ಕಮಾಂಡ್‌ಗೆ ಇದು ಸಂಯೋಜಿಸಲ್ಪಟ್ಟದೆ. ರಹಸ್ಯ ವಿಮಾನಗಳು, ಕ್ರೂಸ್ ಕ್ಷಿಪಣಿಗಳು, ಡ್ರೋನ್‌ಗಳು ಮತ್ತು ಯುದ್ಧತಂತ್ರದ ಬ್ಯಾಲಿಸ್ಟಿಕ್ ಕ್ಷಿಪಣಿಗಳು ಸೇರಿದಂತೆ ವ್ಯಾಪಕ ಶ್ರೇಣಿಯ ವಾಯುಗಾಮಿ ಬೆದರಿಕೆಗಳನ್ನು ಪತ್ತೆಹಚ್ಚುವ ಮತ್ತು ಹೊಡೆದುರುಳಿಸುವ ಸಾಮರ್ಥ್ಯವನ್ನು ಹೊಂದಿದೆ. ಅಲ್ಲದೇ ಏಕಕಾಲಕ್ಕೆ 80 ಗುರಿಗಳನ್ನು ಪತ್ತೆಹಚ್ಚುವ ಸಾಮರ್ಥ್ಯ ಇದಕ್ಕಿದೆ.

    ರಿಯಾಯಿತಿ ದರದಲ್ಲಿ ಕಚ್ಚಾತೈಲ ಖರೀದಿಗೆ ನಿರ್ಧಾರ
    ಇನ್ನೂ ಟ್ರಂಪ್‌ ಸುಂಕದ ಬೆದರಿಕೆಗೆ ಡೋಂಟ್‌ ಕೇರ್‌ ಎಂದಿರುವ ಭಾರತ, ರಷ್ಯಾದಿಂದ ಇನ್ನಷ್ಟು ರಿಯಾಯಿತಿ ದರದಲ್ಲಿ‌ ಹೆಚ್ಚಿನ ಪ್ರಮಾಣದ ಕಚ್ಚಾತೈಲ ಖರೀದಿಗೆ ನಿರ್ಧರಿಸಿದೆ. ಇದರಿಂದ ಭಾರತಕ್ಕೆ ಹೆಚ್ಚಿನ ಉಳಿತಾಯ ಆಗಲಿದೆ ಎಂದು ತಿಳಿದುಬಂದಿದೆ.

  • ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    ಮುಂದುವರಿದ ಅಮೆರಿಕ ಸುಂಕ ಸಮರ; ತೈಲ ಖರೀದಿಗೆ ಭಾರತಕ್ಕೆ ದೊಡ್ಡ ಡಿಸ್ಕೌಂಟ್‌ ಕೊಟ್ಟ ರಷ್ಯಾ

    ನವದೆಹಲಿ: ಟ್ಯಾರಿಫ್‌ (Tariff) ವಿಚಾರವಾಗಿ ಅಮೆರಿಕದ (US) ಮುನಿಸಿನ ನಡುವೆ ಭಾರತಕ್ಕೆ (India) ಹೆಚ್ಚಿನ ರಿಯಾಯಿತಿಯಲ್ಲಿ ತೈಲ ಪೂರೈಸಲು ರಷ್ಯಾ ಮುಂದಾಗಿದೆ.

    ಅಮೆರಿಕದ ಸುಂಕದ ಹೊರೆಯನ್ನು ಭಾರತ ಇನ್ನೂ ಎದುರಿಸುತ್ತಿದೆ. ಇದನ್ನು ಮನಗಂಡಿರುವ ರಷ್ಯಾದ (Russia) ತೈಲ ಬೆಲೆ ಭಾರತಕ್ಕೆ ಪ್ರತಿ ಬ್ಯಾರಲ್‌ಗೆ 3 ರಿಂದ 4 ಡಾಲರ್‌ ನಷ್ಟು ಕಡಿಮೆಯಾಗಿದೆ. ಸೆಪ್ಟೆಂಬರ್ ಅಂತ್ಯ ಮತ್ತು ಅಕ್ಟೋಬರ್‌ನಲ್ಲಿ ಲೋಡ್ ಆಗುವ ಸರಕುಗಳಿಗೆ ರಷ್ಯಾದ ಉರಲ್ ದರ್ಜೆಯ ಬೆಲೆಯನ್ನು ಕಡಿಮೆಗೆ ನೀಡಲಾಗುತ್ತಿದೆ. ಇದನ್ನೂ ಓದಿ: ಭಾರತ ಈಗ ಸುಂಕ ಕಡಿಮೆ ಮಾಡೋಕೆ ಮುಂದಾಗಿದೆ – ಭಾರತದ ಜೊತೆಗಿನ ಸಂಬಂಧವನ್ನ ವಿಪತ್ತು ಎಂದ ಟ್ರಂಪ್‌

    ರಷ್ಯಾದ ತೈಲವನ್ನು ಖರೀದಿಸಿ ಉಕ್ರೇನ್ ಯುದ್ಧಕ್ಕೆ ಉತ್ತೇಜನ ನೀಡಿದ್ದಕ್ಕಾಗಿ ಶಿಕ್ಷಿಸಲು ಟ್ರಂಪ್ ಆಡಳಿತ ಕಳೆದ ವಾರ ಭಾರತದ ಮೇಲಿನ ಸುಂಕವನ್ನು ಶೇ.50 ಕ್ಕೆ ದ್ವಿಗುಣಗೊಳಿಸಿತು. 2022 ರಲ್ಲಿ, ರಷ್ಯಾ-ಉಕ್ರೇನ್ ಯುದ್ಧದ ಆರಂಭದಲ್ಲಿ ಭಾರತವು ರಷ್ಯಾದ ಕಚ್ಚಾ ತೈಲದ ಪ್ರಮುಖ ಆಮದುದಾರನಾಗಿತ್ತು. ಇದೀಗ ಅಮೆರಿಕದಿಂದ ಪದೇ ಪದೇ ಟೀಕೆಗೊಳಗಾದ ನಂತರ, ಭಾರತವು ಸಂಬಂಧದಲ್ಲಿ ರಷ್ಯಾ ಮತ್ತು ಚೀನಾಗೆ ಮತ್ತಷ್ಟು ಹತ್ತಿರವಾಗಿದೆ.

    ಚೀನಾದಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿಯೂ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಮತ್ತು ಭಾರತ ವಿಶೇಷ ಸಂಬಂಧವನ್ನು ಹಂಚಿಕೊಳ್ಳುತ್ತವೆ ಎಂದು ಹೇಳಿದ್ದರು. ಅದೇ ರೀತಿ ಅವರು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸಹ ಭೇಟಿಯಾದರು. ಎರಡೂ ದೇಶಗಳು ಪ್ರತಿಸ್ಪರ್ಧಿಗಳಲ್ಲ, ಪಾಲುದಾರರಾಗಲು ಪ್ರತಿಜ್ಞೆ ಮಾಡಿವೆ. ಇದನ್ನೂ ಓದಿ: ಭಯೋತ್ಪಾದನೆ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ ಸರಿಯಲ್ಲ: ಪಾಕ್ ಪ್ರಧಾನಿ ಮುಂದೆಯೇ ಪಹಲ್ಗಾಮ್ ದಾಳಿ ವಿಚಾರ ಪ್ರಸ್ತಾಪಿಸಿದ ಮೋದಿ

    ಪುಟಿನ್ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಮೊದಲು ಭಾರತವು ರಷ್ಯಾದ ತೈಲವನ್ನು ಬಹಳ ಕಡಿಮೆ ಪ್ರಮಾಣದಲ್ಲಿ ಖರೀದಿಸುತ್ತಿತ್ತು. ಈಗ ಏನಾಯಿತು? ರಷ್ಯಾದ ಸಂಸ್ಕರಣಾಗಾರರು ರಿಯಾಯಿತಿಗಳನ್ನು ನೀಡುತ್ತಾರೆ. ಭಾರತ ಅದನ್ನು ಸಂಸ್ಕರಿಸುತ್ತದೆ. ನಂತರ ಯುರೋಪ್, ಆಫ್ರಿಕಾ ಮತ್ತು ಏಷ್ಯಾಕ್ಕೆ ಪ್ರೀಮಿಯಂನಲ್ಲಿ ಮಾರಾಟ ಮಾಡುತ್ತದೆ. ಇದು ರಷ್ಯಾದ ಯುದ್ಧ ತಂತ್ರವನ್ನು ಉತ್ತೇಜಿಸಿದಂತಿದೆ ಎಂದು ಶ್ವೇತಭವನದ ಸಲಹೆಗಾರ ಪೀಟರ್ ನವರೊ ಭಾರತದ ವಿರುದ್ಧ ಕಟುವಾದ ಟೀಕೆಯನ್ನು ಮಾಡಿದ್ದರು.