Tag: russia ukraine

  • ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

    ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾರೂ ಗೆದ್ದಿಲ್ಲ: ಮೋದಿ

    ಬರ್ಲಿನ್: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಯಾರೂ ಕೂಡ ಗೆದ್ದಿಲ್ಲ. ಯುದ್ಧವನ್ನು ಶಾಂತಿಯುತವಾಗಿ ಪರಿಹರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬರ್ಲಿನ್‍ನಲ್ಲಿ ತಿಳಿಸಿದ್ದಾರೆ.

    ಈ ಯುದ್ಧದಲ್ಲಿ ಯಾರು ವಿಜೇತರಾಗಿರುವುದಿಲ್ಲ ಮತ್ತು ಇದರಿಂದಾಗಿ ಎಲ್ಲರೂ ನಷ್ಟವನ್ನು ಅನುಭವಿಸಿರುತ್ತಾರೆ. ಆದ್ದರಿಂದ ನಾವು ಶಾಂತಿ ಪರವಾಗಿದ್ದೇವೆ ಎಂದು ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗಿನ ಸಭೆಯ ನಂತರ ಹೇಳಿದ್ದಾರೆ.

    ಉಕ್ರೇನ್ ಸಂಘರ್ಷದಿಂದಾಗಿ ತೈಲ ಬೆಲೆಗಳು ಗಗನಕ್ಕೇರುತ್ತಿವೆ ಮತ್ತು ವಿಶ್ವದ ಅನೇಕ ಭಾಗಗಳಲ್ಲಿ ಆಹಾರ ಧಾನ್ಯಗಳು ಮತ್ತು ರಸಗೊಬ್ಬರಗಳ ಕೊರತೆಯಾಗುತ್ತಿದೆ. ಇದು ಅಭಿವೃದ್ಧಿಶೀಲ ಮತ್ತು ಬಡ ರಾಷ್ಟ್ರಗಳ ಬೆಳವಣಿಗೆಗಳ ಮೇಲೆ ಹೆಚ್ಚು ಪರಿಣಾಮ ಬೀರುವ ಗಂಭೀರ ವಿಚಾರವಾಗಿದೆ ಎಂದಿದ್ದಾರೆ. ಇದನ್ನೂ ಓದಿ:  ಇಂದು ಕಂಠೀರವದಲ್ಲಿ ಖೇಲೋ ಇಂಡಿಯಾಗೆ ತೆರೆ – ಬೆಂಗಳೂರಿಗರೇ ಪರ್ಯಾಯ ಮಾರ್ಗ ಬಳಸಿ

    60ಕ್ಕೂ ಹೆಚ್ಚು ದಿನಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಮೋದಿ ಅವರು ಕಳವಳ ವ್ಯಕ್ತಪಡಿಸಿದರು. ಫೆಬ್ರವರಿ 24ರಂದು ರಷ್ಯಾ, ಉಕ್ರೇನ್ ಮೇಲೆ ದಾಳಿಯನ್ನು ಆರಂಭಿಸಿದ್ದರಿಂದ ಸಾವಿರಾರು ನಾಗರಿಕರು ಸಾವನ್ನಪ್ಪಿದರು ಮತ್ತು ಲಕ್ಷಾಂತರ ಮಂದಿ ಸ್ಥಳಾಂತರಗೊಂಡರು. ಉಕ್ರೇನ್‍ನಲ್ಲಿ ಆರ್ಥಿಕ ಬಿಕ್ಕಟ್ಟು ಆರಂಭವಾದಗಲಿಂದಲೂ, ನಾವು ತಕ್ಷಣ ಕದನ ವಿರಾಮಕ್ಕೆ ಕರೆ ನೀಡಿದ್ದೆವು. ವಿವಾದವನ್ನು ಪರಿಹರಿಸಲು ಮಾತುಕತೆಯೇ ಏಕೈಕ ಮಾರ್ಗವಾಗಿದೆ ಎಂದು ತಿಳಿಸಿದ್ದೆವು ಎಂದು ಹೇಳಿದ್ದಾರೆ. ಇದನ್ನೂ ಓದಿ: ನಿನ್ನಿಂದ್ಲೇ ಎಲ್ಲಾ ಆಗಿದ್ದು ನಿನ್ನಿಂದ ಅಪ್ಪ ಜೈಲಿಗೆ ಹೋಗಿದ್ದು – ದಿವ್ಯಾ ಹಾಗರಗಿಯನ್ನು ತರಾಟೆಗೆ ತೆಗೆದುಕೊಂಡ ಪುತ್ರ

    ಪ್ರಧಾನಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ 3 ವಿದೇಶಗಳ ಪ್ರವಾಸ ಕೈಗೊಂಡಿದ್ದಾರೆ. ಜರ್ಮನಿಯ ಚಾನ್ಸಲರ್ ಓಲಾಫ್ ಸ್ಕೋಲ್ಜ್ ಅವರ ಆಮಂತ್ರಣದ ಮೇರೆಗೆ ಮೋದಿ ಮೇ. 2 ರಂದು ಬರ್ಲಿನ್‍ಗೆ ಭೇಟಿ ನೀಡಿದ್ದಾರೆ. ಅಲ್ಲಿ 6 ನೇ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆಯಲ್ಲಿ ಮೋದಿ ಸಹ ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಅಲ್ಲದೇ ವಾಣಿಜ್ಯ ದುಂಡುಮೇಜಿನ ಸಭೆಯಲ್ಲಿ ಕೈಗಾರಿಕಾ ಸಹಕಾರದ ಮೂಲಕ ಕೋವಿಡ್ ನಂತರದ ಸಮಯದಲ್ಲಿ ಉಭಯ ದೇಶಗಳ ಆರ್ಥಿಕತೆಯ ಪುನಶ್ಚೇತನದ ಹಿನ್ನೆಲೆಯಲ್ಲಿ ಮಾತುಕತೆ ನಡೆಸಲಿದ್ದಾರೆ.

  • ರಷ್ಯಾ-ಉಕ್ರೇನ್ ವಾರ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೈನಿಕ

    ರಷ್ಯಾ-ಉಕ್ರೇನ್ ವಾರ್ ನಡುವೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೈನಿಕ

    ಕೀವ್: ರಷ್ಯಾ ಹಾಗೂ ಉಕ್ರೇನ್ ನಡುವೆ ಸಂಘರ್ಷ ಆರಂಭವಾಗಿ 11 ದಿನಗಳು ಕಳೆದಿದೆ. ಈ ಬಿಕ್ಕಟ್ಟಿನ ಪರಿಸ್ಥಿತಿ ನಡುವೆ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಪ್ರಾದೇಶಿಕ ರಕ್ಷಣೆಯ 112 ಬ್ರಿಗೇಡ್‍ನ ಲೆಸ್ಯಾ ಮತ್ತು ವ್ಯಾಲೆರಿ ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಇವರಿಬ್ಬರ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.  ಇದನ್ನೂ ಓದಿ: ನಿಮ್ಮ ಎವ್ರಿಡೇ ಮೇಕಪ್ ಕಿಟ್‌ನಲ್ಲಿರಲಿ ಈ ವಸ್ತುಗಳು

    ಕೀವಿ ಎಂಬ ಟ್ವಿಟ್ಟರ್ ಖಾತೆಯಲ್ಲಿ ಈ ಫೋಟೋವನ್ನು ಪೋಸ್ಟ್ ಮಾಡಲಾಗಿದ್ದು, ಕ್ಯಾಪ್ಷನ್‍ನಲ್ಲಿ ಇಂದು ಪ್ರಾದೇಶಿಕ ರಕ್ಷಣೆಯ 112 ಬ್ರಿಗೇಡ್‍ನ ಉಕ್ರೇನ್ ರಷ್ಯಾ ಯುದ್ಧದ ಪ್ರದೇಶದ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಲೆಸ್ಯಾ ಮತ್ತು ವ್ಯಾಲೆರಿ ವಿವಾಹವಾದರು ಎಂದು ಬರೆಯಲಾಗಿದೆ.

    ಈ ಮುನ್ನ ಕೆಲವು ದಿನಗಳ ಹಿಂದೆ ಇದೇ ರೀತಿ ಕ್ಲೆವೆಟ್ಸ್ ಮತ್ತು ನಟಾಲಿಯಾ ವ್ಲಾಡಿಸ್ಲೇವ್ ಎಂಬ ಮತ್ತೊಂದು ಜೋಡಿ ಉಕ್ರೇನ್‍ನ ಒಡೆಸ್ಸಾದಲ್ಲಿನ ಬಾಂಬ್ ಶೆಲ್ಟರ್​​ನಲ್ಲಿ ವಿವಾಹವಾಗಿದ್ದರು. ಈ ದಂಪತಿಯ ಮದುವೆ ಫೋಟೋಗಳು ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಫೋಟೋದಲ್ಲಿ ವೇಳೆ ವರ ಸಮವಸ್ತ್ರ ಧರಿಸಿದ್ದರು ಮತ್ತು ವಧು ಹೂಗುಚ್ಛವನ್ನು ಹಿಡಿದುಕೊಂಡಿರುವುದನ್ನು ಕಾಣಬಹುದಾಗಿತ್ತು. ಇದನ್ನೂ ಓದಿ: ನಿಮ್ಮ ಬಜೆಟ್‌ನಲ್ಲಿ ಚಂದಕಾಣಿಸುವ ಟಿಪ್ಸ್

    ಸದ್ಯ ರಷ್ಯಾದ ಮಿಲಿಟರಿ ಉಕ್ರೇನ್‍ನ ವಿನ್ನಿಟ್ಸಿಯಾ ವಿಮಾನ ನಿಲ್ದಾಣವನ್ನು ನಾಶಪಡಿಸಿದೆ. ಅಧ್ಯಕ್ಷ ಝೆಲೆನ್ಸ್ಕಿ ಅವರು ಉಕ್ರೇನ್‍ನಲ್ಲಿ ವಿಮಾನ ಹಾರಾಟದ ಮೇಲೆ ನಿಷೇಧ ಹೇರಲು ವಿದೇಶಗಳಿಗೆ ಒತ್ತಾಯಿಸಿದ್ದಾರೆ. ಆದರೆ ಈ ಪ್ರಸ್ತಾವನೆಯನ್ನು ನ್ಯಾಟೋ ತಿರಸ್ಕರಿಸಿದೆ.

  • ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೈಕೊಟ್ಟಿತೆ ನ್ಯಾಟೋ- ರಷ್ಯಾ ಬಾಂಬ್‌ ದಾಳಿ ತಡೆಗೆ ಉಕ್ರೇನ್‌ ಮನವಿ ತಿರಸ್ಕಾರ

    ಕೀವ್: ರಷ್ಯಾದ ಬಾಂಬ್‌ ದಾಳಿಯನ್ನು ತಡೆಗಟ್ಟಲು ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಮಾಡಿದ್ದ ಮನವಿಯನ್ನು ನ್ಯಾಟೋ ತಿರಸ್ಕರಿಸಿದ್ದು, ನ್ಯಾಟೋ ನಿಲುವನ್ನು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಖಂಡಿಸಿದ್ದಾರೆ.

    ಮುಷ್ಕರ, ಸಾವುನೋವುಗಳು ಅನಿವಾರ್ಯವೆಂದು ತಿಳಿದಿದ್ದ ನ್ಯಾಟೋ ಉದ್ದೇಶಪೂರ್ವಕವಾಗಿ ಉಕ್ರೇನ್‌ನ ಆಕಾಶ ವಲಯವನ್ನು ಮುಚ್ಚದಿರಲು ನಿರ್ಧರಿಸಿದೆ ಎಂದು ವೀಡಿಯೋ ಮೂಲಕ ನ್ಯಾಟೋ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಹಿಂತಿರುಗಿದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅನುಮತಿ ನೀಡಿ – ಪ್ರಧಾನಿಗೆ ಐಎಂಎ ಪತ್ರ

    ಮೈತ್ರಿಕೂಟದ ನಾಯಕತ್ವವು ಉಕ್ರೇನಿಯನ್‌ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್‌ ದಾಳಿಗೆ ಹಸಿರು ನಿಶಾನೆ ತೋರಿಸಿದೆ. ಹಾರಾಟ ನಿಷೇಧ ವಲಯವನ್ನು ಮಾಡಲು ನಿರಾಕರಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಬಾಂಬ್‌ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಉಕ್ರೇನ್‌ನಲ್ಲಿ ಹಾರಾಟ ನಿಷೇಧ ವಲಯ ರೂಪಿಸುವಂತೆ ಉಕ್ರೇನ್‌ ಮನವಿ ಮಾಡಿತ್ತು. ಆದರೆ ನ್ಯಾಟೋ ಇದನ್ನು ತಿರಸ್ಕರಿಸಿತ್ತು. ಆದರೆ ಮತ್ತೊಂದೆಡೆ ರಷ್ಯಾ ತನ್ನ ಯುದ್ಧವನ್ನು ನಿಲ್ಲಿಸದಿದ್ದರೆ ಹೊಸ ನಿರ್ಬಂಧಗಳನ್ನು ವಿಧಿಸುವುದಾಗಿ ಪಾಶ್ಚಿಮಾತ್ಯ ಮಿತ್ರ ರಾಷ್ಟ್ರಗಳು ಎಚ್ಚರಿಕೆ ನೀಡಿವೆ. ಇದನ್ನೂ ಓದಿ: ತಮ್ಮ ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

    ಈ ಸಂಘರ್ಷದ ವಿಚಾರವಾಗಿ ಮೈತ್ರಿಕೂಟವು ಮಧ್ಯಪ್ರವೇಶಿಸುವುದಿಲ್ಲ. ಒಂದು ವೇಳೆ ಮಧ್ಯಪ್ರವೇಶಿಸಿದರೆ ವ್ಯಾಪಕ ಸಂಘರ್ಷಕ್ಕೆ ತಿರುಗಬಹುದು ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್‌ ಸ್ಟೋಲ್ಟೆನ್‌ಬರ್ಗ್‌ ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಟೋ ಯುದ್ಧ ವಿಮಾನಗಳನ್ನು ಉಕ್ರೇನ್‌ನ ವಾಯುಮಾರ್ಗಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಹಾರಾಟ ನಿಷೇಧ ವಲಯವನ್ನು ಹೇರಬಹುದು. ಹಾರಾಟ ನಿಷೇಧ ವಲಯ ಕಾರ್ಯಗತಗೊಳಿಸುವುದಕ್ಕೆ ಇರುವುದು ಅದೊಂದೇ ಮಾರ್ಗ ಎಂದು ಸ್ಟೋಲ್ಟೆನ್‌ಬರ್ಗ್‌ ತಿಳಿಸಿದ್ದಾರೆ. ಇದನ್ನೂ ಓದಿ: 16 ಗಂಟೆ ಟ್ರಾನ್‍ನಲ್ಲೇ ನಿಂತುಕೊಂಡೆ ಪ್ರಯಾಣ ಮಾಡಿದ್ದೇವೆ: ನೋವು ಹಂಚಿಕೊಂಡ ವಿದ್ಯಾರ್ಥಿಗಳು!

  • ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್‌ ಸಚಿವ ಆರೋಪ

    ಮಹಿಳೆಯರ ಮೇಲೆ ರಷ್ಯಾ ಸೈನಿಕರಿಂದ ಅತ್ಯಾಚಾರ: ಉಕ್ರೇನ್‌ ಸಚಿವ ಆರೋಪ

    ಲಂಡನ್‌: ರಷ್ಯಾ ಸೈನಿಕರು ಯುದ್ಧದ ನಡುವೆಯೇ ಉಕ್ರೇನಿಯನ್ನರ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಉಕ್ರೇನ್‌ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಗಂಭೀರ ಆರೋಪ ಮಾಡಿದ್ದಾರೆ.

    ನಗರಗಳ ಮೇಲೆ ಬಾಂಬ್‌ಗಳು ಬಿದ್ದಾಗ, ಆಕ್ರಮಿತ ನಗರಗಳಲ್ಲಿ ಸೈನಿಕರು ಮಹಿಳೆಯರನ್ನು ಅತ್ಯಾಚಾರ ಮಾಡಿದಾಗ, ದುರದೃಷ್ಟವಶಾತ್ ರಷ್ಯಾದ ಸೈನಿಕರು ಉಕ್ರೇನಿಯನ್ ನಗರಗಳಲ್ಲಿ ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವುದಕ್ಕೆ ಸಂಬಂಧಿಸಿದ ಹಲವಾರು ಪ್ರಕರಣಗಳು ನಮ್ಮಲ್ಲಿವೆ. ಆದರೆ ಅಂತಾರಾಷ್ಟ್ರೀಯ ಕಾನೂನಿನ ದಕ್ಷತೆಯ ಬಗ್ಗೆ ಮಾತನಾಡುವುದು ಕಷ್ಟ ಎಂದು ಲಂಡನ್‌ನಲ್ಲಿ ಕುಲೆಬಾ ಹೇಳಿದ್ದಾರೆ. ಇದನ್ನೂ ಓದಿ: ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಈ ಯುದ್ಧವನ್ನು ಸಾಧ್ಯವಾಗಿಸಿದ ಎಲ್ಲರನ್ನೂ ನ್ಯಾಯಾಂಗದ ವ್ಯಾಪ್ತಿಗೆ ತರಲು ನನಗೆ ಲಭ್ಯವಿರುವ ಏಕೈಕ ಸಾಧನ ನಾಗರಿಕರು ಎಂದು ಕುಲೆಬಾ ಮಾತನಾಡಿದ್ದಾರೆ.

    ಉಕ್ರೇನ್‌ ವಿರುದ್ಧ ರಷ್ಯಾ ಕಳೆದ ವಾರದಿಂದ ನಿರಂತರವಾಗಿ ಯುದ್ಧವನ್ನು ನಡೆಸುತ್ತಿದೆ. ಈಗಾಗಲೇ ಹಲವು ನಗರಗಳನ್ನು ರಷ್ಯಾ ಸೇನಾ ಪಡೆ ತನ್ನ ವಶಕ್ಕೆ ತೆಗೆದುಕೊಂಡಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು, ಸೈನಿಕರು ಮರಣವನ್ನಪ್ಪಿದ್ದಾರೆ. ರಷ್ಯಾ ಮತ್ತು ಉಕ್ರೇನ್‌ ನಡುವೆ ಈವರೆಗೆ ನಡೆದಿರುವ ಮಾತುಕತೆಗಳು ಸಫಲವಾಗಿಲ್ಲ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

  • ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಯುದ್ಧ ಬೇಡ: ಲೈವ್‌ನಲ್ಲೇ ರಷ್ಯಾ ಟಿವಿ ಚಾನೆಲ್‌ ಸಿಬ್ಬಂದಿ ಸಾಮೂಹಿಕ ರಾಜೀನಾಮೆ

    ಮಾಸ್ಕೊ: ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ವಿರೋಧಿಸಿ ರಷ್ಯಾದ ಟಿವಿ ಚಾನೆಲ್‌ವೊಂದರ ಎಲ್ಲಾ ಸಿಬ್ಬಂದಿ ನೇರ ಪ್ರಸಾರದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ʼಯುದ್ಧ ಬೇಡʼ ಎಂಬ ಶೀರ್ಷಿಕೆಯಡಿ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲರೂ ಲೈವ್‌ನಲ್ಲೇ ರಾಜೀನಾಮೆ ನೀಡಿ ಕಚೇರಿಯಿಂದ ಹೊರನಡೆದಿದ್ದಾರೆ. ಉಕ್ರೇನ್‌ ವಿರುದ್ಧದ ರಷ್ಯಾ ಯುದ್ಧವನ್ನು ಪ್ರಸಾರ ಮಾಡದಂತೆ ರಷ್ಯಾ ಅಧಿಕಾರಿಗಳು ಸ್ಥಗಿತಗೊಳಿಸಿದ್ದರಿಂದ ಸಿಬ್ಬಂದಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

    ಸುದ್ದಿ ವಾಹಿನಿಯ ಸಂಸ್ಥಾಪಕ ನಟಾಲಿಯಾ ಸಿಂಡೇವಾ ಈ ಕುರಿತು ಪ್ರತಿಕ್ರಿಯಿಸಿದ್ದು, ʼಯುದ್ಧ ಬೇಡʼ ಎಂಬ ಸುದ್ದಿಯನ್ನು ಕೊನೆಯದಾಗಿ ಪ್ರಸಾರ ಮಾಡಿ ಎಲ್ಲಾ ಸಿಬ್ಬಂದಿ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಅನಿರ್ದಿಷ್ಟಾವಧಿವರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    https://twitter.com/AfricaUnitNow/status/1499552939232403456

    ಸ್ವತಂತ್ರ ಸುದ್ದಿವಾಹಿನಿಗಳನ್ನು ನಿರ್ಬಂಧಿಸುವ ಮೂಲಕ ಮತ್ತು ಉಕ್ರೇನ್ ಆಕ್ರಮಣದ ಸುದ್ದಿಯನ್ನು ರಷ್ಯನ್ನರು ಕೇಳದಂತೆ ತಡೆಯುವ ಮೂಲಕ ರಷ್ಯಾವು ʼಮಾಧ್ಯಮ ಸ್ವಾತಂತ್ರ್ಯ ಮತ್ತು ಸತ್ಯದ ಮೇಲೆ ಯುದ್ಧʼ ಪ್ರಾರಂಭಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಬುಧವಾರ ಆರೋಪಿಸಿತ್ತು. ಇದನ್ನೂ ಓದಿ: ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ರಷ್ಯಾದ ನಾಗರಿಕರು ಮಾಹಿತಿ ಮತ್ತು ಅಭಿಪ್ರಾಯಗಳನ್ನು ಪಡೆಯಲು ಅವಲಂಬಿಸಿರುವ ಟ್ವಿಟ್ಟರ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ವೇದಿಕೆಗಳನ್ನು ಸಹ ರಷ್ಯಾ ಸರ್ಕಾರ ತಡೆಯುತ್ತಿದೆ ಎಂದು ಸ್ಟೇಟ್ ಡಿಪಾರ್ಟ್‌ಮೆಂಟ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

  • ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ರಷ್ಯಾ ಯುದ್ಧ ಇಡೀ ಯೂರೋಪ್‌ ಭದ್ರತೆಗೆ ಪೆಟ್ಟು ನೀಡಿದೆ: ಬ್ರಿಟಿಷ್‌ ಪ್ರಧಾನಿ ಕಳವಳ

    ಲಂಡನ್‌: ಉಕ್ರೇನ್‌ ವಿರುದ್ಧದ ರಷ್ಯಾ ಅಜಾಗರೂಕ ಕಾರ್ಯಾಚರಣೆಯು ಇಡೀ ಯೂರೋಪ್‌ ಭದ್ರತೆಗೆ ಕೊಟ್ಟ ಹೊಡೆತವಾಗಿದೆ ಎಂದು ಬ್ರಿಟಿಷ್ ಪ್ರಧಾನಿ ಬೋರಿಸ್‌ ಜಾನ್ಸನ್‌ ಕಳವಳ ವ್ಯಕ್ತಪಡಿಸಿದ್ದಾರೆ.

    ರಷ್ಯಾದ ಪಡೆಗಳು ಉಕ್ರೇನಿಯನ್ ಪರಮಾಣು ವಿದ್ಯುತ್ ಸ್ಥಾವರವನ್ನು ಆಕ್ರಮಿಸಿದೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಯುರೋಪಿನಾದ್ಯಂತ ಅಪಾಯವನ್ನುಂಟುಮಾಡುತ್ತಿದ್ದಾರೆ ಎಂದು ಬೋರಿಸ್ ಜಾನ್ಸನ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ರಷ್ಯಾ ಅಧ್ಯಕ್ಷ ಪುಟಿನ್ ಅವರ ಅಜಾಗರೂಕ ಕ್ರಮಗಳು ಈಗ ನೇರವಾಗಿ ಯುರೋಪ್‌ನ ಸುರಕ್ಷತೆಗೆ ಬೆದರಿಕೆ ಹಾಕಬಹುದು. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ತುರ್ತು ಸಭೆ ಅಗತ್ಯವಿದೆ ಎಂದು ಜಾನ್ಸನ್‌ ಆಶಯ ವ್ಯಕ್ತಪಡಿಸಿದ್ದಾರೆ.

    ನ್ಯಾಟೋ ಒಕ್ಕೂಟಕ್ಕೆ ಸೇರುವ ಉಕ್ರೇನ್‌ ನಿರ್ಧಾರವನ್ನು ವಿರೋಧಿಸಿ ಉಕ್ರೇನ್‌ ಮೇಲೆ ರಷ್ಯಾ ಯುದ್ಧವನ್ನು ನಡೆಸುತ್ತಿದೆ. ಆದರೆ ಯೂರೋಪ್‌ ರಾಷ್ಟ್ರಗಳು ರಷ್ಯಾ ಕ್ರಮವನ್ನು ಖಂಡಿಸಿವೆ. ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆ, ಸಾಮಾನ್ಯ ಸಭೆಯಲ್ಲಿ ಬ್ರಿಟನ್‌ ಸೇರಿದಂತೆ 141 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

  • ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ: ಮೋದಿ

    ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ: ಮೋದಿ

    ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ.

    ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ರಕ್ಷಿಸುವಂತೆ ವೀಡಿಯೋ ಮಾಡಿ ಸಂಕಷ್ಟಕ್ಕೆ ಸಿಲುಕಿದ ಗ್ರಾ.ಪಂ. ಅಧ್ಯಕ್ಷೆ

    ಉಕ್ರೇನ್‌ನಿಂದ ಸ್ಥಳಾಂತರಿಸಲು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಭಾರತೀಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ಈ ವಿಚಾರವನ್ನೂ ಉಲ್ಲೇಖಿಸಿದ ಪ್ರಧಾನಿ ಮೋದಿ, ಬಿಕ್ಕಟ್ಟಿನ ಸನ್ನಿವೇಶದಲ್ಲಿ ಆಕ್ರೋಶಕ್ಕೆ ಒಳಗಾಗುವುದು ಸಹಜ ಎಂದು ತಿಳಿಸಿದ್ದಾರೆ.

    ಚಿಕ್ಕ ವಯಸ್ಸಿನಲ್ಲೇ ನೀವು ಸಂಕಷ್ಟದ ಸಂದರ್ಭಗಳನ್ನು ಅನುಭವಿಸಿದ್ದೀರಿ ಎಂದು ವಿದ್ಯಾರ್ಥಿಗಳ ಬಗ್ಗೆ ಪ್ರಧಾನಿ ಮೋದಿ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ. ಇಂತಹ ಸಂದಿಗ್ಧತೆಗಳಿಗೆ ಬಲಿಷ್ಠ ಭಾರತವೇ ಉತ್ತರವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ಹಿಂದಿನ ಸರ್ಕಾರಗಳ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳು ಸರಿಯಾಗಿದ್ದರೆ, ನೀವು ಶಿಕ್ಷಣಕ್ಕಾಗಿ ವಿದೇಶಗಳಿಗೆ ಹೋಗುವ ಅಗತ್ಯವಿರುತ್ತಿರಲಿಲ್ಲ. ಹಿಂದಿನ ಎಲ್ಲಾ ಲೋಪಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದು ವಿದ್ಯಾರ್ಥಿಗಳಿಗೆ ಮೋದಿ ಭರವಸೆ ನೀಡಿದ್ದಾರೆ.

    ಈ ಹಿಂದೆ 300, 400 ಇದ್ದ ವೈದ್ಯಕೀಯ ಕಾಲೇಜುಗಳ ಸಂಖ್ಯೆಯನ್ನು ನಮ್ಮ ಅವಧಿಯಲ್ಲಿ 700ಕ್ಕೆ ಹೆಚ್ಚಿಸಲಾಗಿದೆ. ಆ ಮೂಲಕ 80,000ದಿಂದ 90,000 ಇದ್ದ ವೈದ್ಯಕೀಯ ಸೀಟ್‌ಗಳ ಸಂಖ್ಯೆಯನ್ನು 1.5 ಲಕ್ಷಕ್ಕೆ ಏರಿಸಲಾಗಿದೆ ಎಂದು ಮೋದಿ ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಈ ಸಲಹೆ ಪಾಲಿಸಿ- ಕೇಂದ್ರ ವಿದೇಶಾಂಗ ಇಲಾಖೆ

    ಪ್ರತಿ ಜಿಲ್ಲೆಯೂ ಒಂದೊಂದು ವೈದ್ಯಕೀಯ ಕಾಲೇಜನ್ನು ಸ್ಥಾಪಿಸುವ ನಿಟ್ಟಿನಲ್ಲಿ ನಾವು ಶ್ರಮವಹಿಸುತ್ತೇವೆ. ಕಳೆದ 70 ವರ್ಷಗಳಿಗೆ ಹೋಲಿಸಿದರೆ ನಮ್ಮ 10 ವರ್ಷದ ಆಡಳಿತಾವಧಿಯಲ್ಲಿ ಹೆಚ್ಚಿನ ವೈದ್ಯರು ಹೊರಹೊಮ್ಮುವಂತೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.

  • ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ಬಾಹ್ಯಾಕಾಶ ರಾಕೆಟ್‌ನಿಂದ ಅಮೆರಿಕ, ಜಪಾನ್‌ ಧ್ವಜ ತೆಗೆದು ಭಾರತ ಧ್ವಜ ಉಳಿಸಿಕೊಂಡ ರಷ್ಯಾ- Video Viral

    ಮಾಸ್ಕೋ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಹಾಗೂ ಸಾಮಾನ್ಯ ಸಭೆಯಲ್ಲಿ ತನ್ನ ವಿರುದ್ಧ ನಿರ್ಣಯ ಮಂಡಿಸಿರುವ ಅಮೆರಿಕ ಹಾಗೂ ಜಪಾನ್‌ ಸೇರಿದಂತೆ ಅನೇಕ ರಾಷ್ಟ್ರಗಳ ರಾಷ್ಟ್ರೀಯ ಧ್ವಜವನ್ನು ತೆರವುಗೊಳಿಸಿರುವ ರಷ್ಯಾ ಸರ್ಕಾರದ ಬಾಹ್ಯಾಕಾಶ ಸಂಸ್ಥೆಯು ಭಾರತದ ಧ್ವಜವನ್ನು ಮಾತ್ರ ಹಾಗೆಯೇ ಉಳಿಸಿಕೊಂಡಿದೆ.

    ಬೈಕೊನೂರ್ ಬಾಹ್ಯಾಕಾಶ ನಿಲ್ದಾಣದಲ್ಲಿ ಬೃಹತ್ ರಾಕೆಟ್ ಮೇಲೆ ಹಲವು ರಾಷ್ಟ್ರಗಳ ರಾಷ್ಟ್ರೀಯ ಧ್ವಜವನ್ನು ಚಿತ್ರಿಸಲಾಗಿತ್ತು. ಇದು ಬಾಹ್ಯಾಕಾಶ ಕ್ಷೇತ್ರದಲ್ಲಿ ರಷ್ಯಾ ಮತ್ತು ಇತರ ರಾಷ್ಟ್ರಗಳ ನಡುವಿನ ಸಂಬಂಧದ ಸಂಕೇತವಾಗಿತ್ತು. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

    ಬೈಕೊನೂರ್‌ನಲ್ಲಿರುವ ಉಡಾವಣಾ ಕೇಂದ್ರವು ಕೆಲವು ದೇಶಗಳ ಧ್ವಜಗಳಿಲ್ಲದೆಯೇ ನಮ್ಮ ರಾಕೆಟ್‌ ಹೆಚ್ಚು ಸುಂದರವಾಗಿ ಕಾಣುತ್ತದೆ ಎಂದು ನಿರ್ಧರಿಸಿದರು ಎಂದು ರೋಸ್ಕೊಸ್ಮಾಸ್‌ ಮಹಾನಿರ್ದೇಶಕ ಡಿಮಿಟ್ರಿ ಒಲೆಗೊವಿಚ್ ರೊಗೊಜಿನ್ ಟ್ವೀಟ್ ಮಾಡಿದ್ದಾರೆ.

    https://twitter.com/Rogozin/status/1499043075586469900?ref_src=twsrc%5Etfw%7Ctwcamp%5Etweetembed%7Ctwterm%5E1499043075586469900%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Fworld-news%2Fvideo-russia-removes-flags-of-us-japan-from-space-rocket-keeps-indias-2801675

    ಅನೇಕ ರಾಷ್ಟ್ರಗಳ ಧ್ವಜಗಳನ್ನು ಅಳಿಸಿ ಹಾಕುತ್ತಿರುವ ಸಂಬಂಧದ ವೀಡಿಯೋ ಎಲ್ಲೆಡೆ ವೈರಲ್‌ ಆಗಿದೆ. ವೀಡಿಯೋದಲ್ಲಿ ಅಮೆರಿಕ, ಜಪಾನ್‌ ರಾಷ್ಟ್ರ ಧ್ವಜಗಳನ್ನು ಅಳಿಸಿ, ಭಾರತದ ಧ್ವಜದ ಚಿತ್ರವನ್ನು ಮಾತ್ರ ಹಾಗೆಯೇ ಬಿಡಲಾಗಿದೆ. ಇದನ್ನೂ ಓದಿ: ನಾನೇನು ಕಚ್ಚುವುದಿಲ್ಲ, ಮತ್ತೇಕೆ ನಿಮಗೆ ಭಯ? – ಪುಟೀನ್‍ಗೆ ವ್ಯಂಗ್ಯ ಮಾಡಿದ ಉಕ್ರೇನ್ ಅಧ್ಯಕ್ಷ

    ರಷ್ಯಾದ ಫೆಡರಲ್ ಸ್ಪೇಸ್ ಏಜೆನ್ಸಿ ಎಂದು ಕರೆಯಲ್ಪಡುವ ರೋಸ್ಕೊಸ್ಮಾಸ್ ಅನ್ನು ಯುನೈಟೆಡ್ ರಾಕೆಟ್ ಮತ್ತು ಸ್ಪೇಸ್ ಕಾರ್ಪೊರೇಷನ್‌ನೊಂದಿಗೆ ವಿಲೀನಗೊಳಿಸಿದ ನಂತರ 1992ರಲ್ಲಿ ರಚಿಸಲಾಯಿತು. ಇದು ಬಾಹ್ಯಾಕಾಶ ವಲಯವನ್ನು ಉತ್ತೇಜಿಸುವ ಉದ್ದೇಶದ ಜಂಟಿ-ಸ್ಟಾಕ್ ಘಟಕವಾಗಿದೆ.

    ಪಾಶ್ಚಿಮಾತ್ಯ ರಾಷ್ಟ್ರಗಳ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ನ್ಯಾಟೋ ಒಕ್ಕೂಟಕ್ಕೆ ಉಕ್ರೇನ್‌ ಸೇರುವುದನ್ನು ರಷ್ಯಾ ಹಿಂದಿನಿಂದಲೂ ವಿರೋಧಿಸಿತ್ತು. ಆದರೆ ಉಕ್ರೇನ್‌ ತನ್ನ ನಿಲುವಿನಿಂದ ಹಿಂದೆ ಸರಿಯದ ಕಾರಣ, ರಷ್ಯಾ ಯುದ್ಧ ನಡೆಸುತ್ತಿದೆ. ಇದನ್ನೂ ಓದಿ: ಗಡಿಗಳಲ್ಲಿ ಹೆಣ್ಮಕ್ಕಳ ಮೇಲೆ ಸೈನಿಕರಿಂದ ಹಲ್ಲೆ – ಕರಾಳತೆ ಬಿಚ್ಚಿಟ್ಟ ವಿದ್ಯಾರ್ಥಿನಿಯರು

    ಉಕ್ರೇನ್‌ನ ಪ್ರಮುಖ ನಗರಗಳ ಮೇಲೆ ರಷ್ಯಾ ಸೇನಾ ಪಡೆ ದಾಳಿಯನ್ನು ನಡೆಸುತ್ತಿದೆ. ರಷ್ಯಾ ಯುದ್ಧವನ್ನು ವಿರೋಧಿಸಿ ನ್ಯಾಟೋ ಒಕ್ಕೂಟದ ಸದಸ್ಯ ರಾಷ್ಟ್ರಗಳಾದ ಫ್ರಾನ್ಸ್‌, ಜರ್ಮನಿ, ಯುಕೆ, ಯುಎಸ್‌, ಜಪಾನ್‌ ಸೇರಿದಂತೆ ಅನೇಕ ರಾಷ್ಟ್ರಗಳು ರಷ್ಯಾಗೆ ಅನೇಕ ನಿರ್ಬಂಧಗಳನ್ನು ವಿಧಿಸಿವೆ.

    ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆ ಮತ್ತು ಸಾಮಾನ್ಯ ಸಭೆಯಲ್ಲಿ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಖಂಡಿಸುವ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ, ಉಕ್ರೇನ್‌ ಯಾವುದೇ ರಾಷ್ಟ್ರದ ಪರವಹಿಸದೇ ತಟಸ್ಥ ಧೋರಣೆ ಅನುಸರಿಸಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಅತೀ ದೊಡ್ಡ ಅಣುಸ್ಥಾವರದ ಮೇಲೆ ರಷ್ಯಾ ದಾಳಿ

  • ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿದ ಉಕ್ರೇನ್‌ ಸೇನೆ

    ಕೀವ್:‌ ಉಕ್ರೇನ್‌ ಮೇಲಿನ ರಷ್ಯಾ ದಾಳಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‌ ರಾಜಧಾನಿ ಕೀವ್‌ ಮೇಲೆ ರಷ್ಯಾ ಸೈನಿಕರು ದಾಳಿ ಮುಂದುವರಿಸಿದ್ದಾರೆ. ಈ ವೇಳೆ ರಷ್ಯಾದ ಇಬ್ಬರು ಸೈನಿಕರನ್ನು ಸೆರೆ ಹಿಡಿಯಲಾಗಿದೆ ಎಂದು ಉಕ್ರೇನ್‌ ಸೇನೆ ತಿಳಿಸಿದೆ.

    ಉಕ್ರೇನ್‌ನ ಸಶಸ್ತ್ರ ಪಡೆಗಳ ಜನರಲ್‌ ಸ್ಟಾಫ್‌, ರಷ್ಯಾದ ಇಬ್ಬರು ಸೈನಿಕರ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದಾರೆ. ಅವರು ಯಾಂಪೋಲ್‌ ಮೋಟಾರೈಸ್ಡ್‌ ರೈಫಲ್‌ನ 91701ನೇ ಘಟಕದಿಂದ ಬಂದವರು ಎಂದು ಹೇಳುತ್ತಿದ್ದಾರೆಂದು ತಿಳಿಸಿದ್ದಾರೆ. ಅಲ್ಲದೆ ಉಕ್ರೇನ್‌ ಸೇನೆಯಲ್ಲಿರುವ ರಷ್ಯಾ ಯೋಧರಿಗೆ ತಮ್ಮ ಕುಟುಂಬದವರ ಜೊತೆ ಪೋನಿನಲ್ಲಿ ಮಾತಾಡಲು ಅವಕಾಸ ಕೊಟ್ಟಿದ್ದಾರೆ. ಈ ವೇಳೆ ರಷ್ಯಾ ಯೋಧರು, ತಾವು ಉಕ್ರೇನ್‌ ಯೋಧರ ಸೆರೆಯಲ್ಲಿರುವುದಾಗಿ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ವಿಶ್ವವೇ ನಮ್ಮೊಂದಿಗಿದೆ, ಜಯ ನಮ್ಮದೆ: ಉಕ್ರೇನ್ ಅಧ್ಯಕ್ಷ

    ಉಕ್ರೇನ್‌ ವಿರುದ್ಧ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ಯುದ್ಧ ಘೋಷಿಸಿದ್ದಾರೆ. ರಷ್ಯಾ ಸೈನಿಕರು ಆಕ್ರಮಣ ಮುಂದುವರಿಸಿದ್ದು, ಉಕ್ರೇನ್‌ ರಾಜಧಾನಿ ಕೀವ್‌ ವಶಕ್ಕೆ ಮುಂದಾಗಿದ್ದಾರೆ.

    ರಷ್ಯಾದ ಆಕ್ರಮಣ ನೀತಿಗೆ ಅಮೆರಿಕ ಸೇರಿದಂತೆ ವಿಶ್ವದ ಅನೇಕ ರಾಷ್ಟ್ರಗಳು ವಿರೋಧ ವ್ಯಕ್ತಪಡಿಸಿವೆ. ಇದೇ ವೇಳೆ ರಷ್ಯಾ ಮೇಲೆ ಪಾಶ್ಚಿಮಾತ್ಯ ಹಣಕಾಸು ನಿರ್ಬಂಧವನ್ನು ಅಮೆರಿಕ ಘೋಷಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ