Tag: russia

  • ಇಲ್ಲಿ ಬಟನ್ ಒತ್ತಿದರೆ ಉಕ್ರೇನ್‍ನಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ: ಸುಮಲತಾ ಅಂಬರೀಷ್

    ಇಲ್ಲಿ ಬಟನ್ ಒತ್ತಿದರೆ ಉಕ್ರೇನ್‍ನಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ: ಸುಮಲತಾ ಅಂಬರೀಷ್

    ಮೈಸೂರು: ಉಕ್ರೇನ್‍ನಿಂದ ಭಾರತೀಯ ಪ್ರಜೆಗಳನ್ನು ಕರೆದುಕೊಂಡು ಬರುವುದು ಸುಲಭದ ಪರಿಸ್ಥಿತಿ ಆಗಿರಲಿಲ್ಲ. ಇಲ್ಲಿ ಬಟನ್ ಒತ್ತಿದರೆ ಅಲ್ಲಿ ವಿಮಾನ ಇಳಿಸಲು ಸಾಧ್ಯವಿಲ್ಲ. ಈ ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಷ್ಯಾ ಉಕ್ರೇನ್ ಯುದ್ಧದ ಪರಿಸ್ಥಿತಿ ಅರ್ಥ ಮಾಡಿಕೊಂಡ ಮಾತನಾಡಬೇಕು. ವಿದೇಶಾಂಗ ಇಲಾಖೆ ಯಾವ ರೀತಿ ಕೆಲಸ ಮಾಡುತ್ತದೆ ಅನ್ನೋದು ಗೊತ್ತಿದೆ. ಈ ವಿಷಯದಲ್ಲಿ ಕೇಂದ್ರ ಸರ್ಕಾರ ಪ್ರಾಮಾಣಿಕವಾದ ಪ್ರಯತ್ನ ಮಾಡಿದೆ. ಬಹುತೇಕ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರಲಾಗಿದೆ ಎಂದು ಪ್ರಶಂಸಿದರು.

    ಜನ ವಿಶ್ವಾಸ ಇಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಕ್ರೆಡಿಟ್ ತೆಗೆದುಕೊಳ್ಳಲು ನಾನು ಯಾವ ಕೆಲಸವನ್ನು ಮಾಡಲ್ಲ. ನಿಜ ಹೇಳಲು ಭಯ ಏಕೆ. ಕ್ರೆಡಿಟ್ ವಾರ್ ಯಾರು ಆರಂಭಿಸುತ್ತಾರೋ ಅವರು ಅವರ ಜವಾಬ್ದಾರಿ ಬಗ್ಗೆ ನೋಡಿಕೊಳ್ಳಬೇಕು. ಸಂಸದರ ಕ್ರೆಡಿಟ್ ಪಡೆಯುವುದಕ್ಕೆ ಏಕೆ ಬರುತ್ತಿದ್ದಾರೋ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ

    ಶಿಂಷಾ ಸೇತುವೆ ವಿಚಾರ ನಾನು ಪ್ರತಿಭಟನಾ ಸ್ಥಳಕ್ಕೆ ಹೋಗಿದ್ದೇನೆ. ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದೇನೆ. ನಾಲ್ಕು ಬಾರಿ ಅವರನ್ನು ಭೇಟಿ ಮಾಡಿದ್ದೇನೆ. ಆಯಾ ಕ್ಷೇತ್ರದ ಸಂಸದ ಆಯಾ ಕ್ಷೇತ್ರದ ಬಗ್ಗೆ ಕೇಳಿದರೆ ಪ್ರತಿಕ್ರಿಯೆ ಸಿಗುತ್ತದೆ. ಯಾರು ಬೇಕಾದರೂ ಪತ್ರ ಬರೆದಿರಬಹುದು. ಮಾಜಿ ಪ್ರಧಾನಿ ಅಥವಾ ಬೇರೆಯವರು ಬರೆದಿರಬಹುದು. ಅವರು ಏನು ಬರೆದಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮತ್ತೆ 4 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದ್ದಾರಾ ವಿಶಾಲ್ ಗಾರ್ಗ್?

    Nitin Gadkari

    ನನ್ನ ಕ್ಷೇತ್ರದ ವಿಚಾರವಾಗಿ ನಾನು ಕೆಲಸ ಮಾಡುತ್ತೇನೆ. ನಾನು ಮಾಡಿದ ಕೆಲಸ ಮಾಡಿಲ್ಲ ಎಂದು ಹೇಳಿದರೆ ನಾನು ಸುಮ್ಮನಿರಲ್ಲ. ಟಾರ್ಗೆಟ್ ಮಾಡುವುದು ಮೊದಲ ದಿನದಿಂದಲೂ ನಡೆದಿದೆ. ನನ್ನ ಜಿಲ್ಲೆಗೆ ಸಂಬಂಧಪಟ್ಟ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ನಾನು ಏನೇ ಮಾಡಿದರು ವಿರೋಧ ಮಾಡಬೇಕೆಂದು ಅವರು ನಿರ್ಧರಿಸಿದ್ದಾರೆ. ಎಲ್ಲದರಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ನಾನು ಕೆಲಸ ಮಾಡುತ್ತೇನೆ ಜನ ನನ್ನ ಪರ ಮಾತನಾಡುತ್ತಾರೆ ಎನ್ನುವ ಭಯ ಎಂದು ಕಿಡಿಕಾರಿದರು.

  • ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ

    ಊಟಕ್ಕೆ ಹೊರಗೆ ಹೋದರೆ ವಾಪಸ್ ಬದುಕಿ ಬರುವ ನಂಬಿಕೆ ಇರಲಿಲ್ಲ: ಹಾಸನದ ವಿದ್ಯಾರ್ಥಿ

    ಹಾಸನ: ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್ ದೇಶದ ಖಾರ್ಕಿವ್‌ನಲ್ಲಿ ಕಟ್ಟಡಗಳು ನಾಶವಾಗಿದ್ದು, ನಾವು ವಿದ್ಯಾಭ್ಯಾಸ ಮಾಡಲು ಹೋಗಿದ್ದ ಉಕ್ರೇನ್ ಇದೇನಾ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸದ್ಯದ ಉಕ್ರೇನ್ ಸ್ಥಿತಿಯ ಬಗ್ಗೆ ಹಾಸನದ ಗಗನ್ ಗೌಡ ಆತಂಕ ಹೊರಹಾಕಿದ್ದಾರೆ.

    ಎಂಬಿಬಿಎಸ್ ಓದಲು ಹೋಗಿದ್ದ ಗಗನ್ ಗೌಡ ಯುದ್ಧ ನಡೆಯುತ್ತಿದ್ದ ಖಾರ್ಕಿವ್ ಪ್ರದೇಶದಲ್ಲಿ ಸಿಲುಕಿಕೊಂಡಿದ್ದರು. ಯುದ್ಧದ ಸಂದರ್ಭ ಬಂಕರ್‌ನಲ್ಲಿ ರಕ್ಷಣೆ ಪಡೆದಿದ್ದ ಗಗನ್ ಊಟ, ನೀರಿಲ್ಲದೆ ಕಾಲ ಕಳೆದಿದ್ದೆವು. ಊಟಕ್ಕೆ ಹೊರಗೆ ಹೋದರೆ ಮತ್ತೆ ವಾಪಸ್ ಬರುವ ನಂಬಿಕೆ ಇರಲಿಲ್ಲ. ಹೀಗಾಗಿ ಜೀವ ಇದ್ದರೆ ಅಲ್ಲವೆ ಬದುಕು ಎಂದು ಹಸಿವನ್ನು ಸಹಿಸಿಕೊಂಡು ಬಂಕರ್‌ನಲ್ಲೇ ಇದ್ದೆವು ಎಂದು ತಮ್ಮ ಅನುಭವವನ್ನು ಹಂಚಿಕೊಂಡರು. ಇದನ್ನೂ ಓದಿ: ಮತ್ತೆ 4 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲಿದ್ದಾರಾ ವಿಶಾಲ್ ಗಾರ್ಗ್?

    ಅಲ್ಲಿಯ ಪರಿಸ್ಥಿತಿ ಭಯಾನಕವಾಗಿತ್ತು. ನಾವು ಇದ್ದ ಸ್ಥಳದ ಸುತ್ತಮುತ್ತ ಬಾಂಬ್ ದಾಳಿಯಾಗುತ್ತಿದ್ದು, ಅದರ ಸದ್ದು ಆತಂಕ ಉಂಟುಮಾಡಿತ್ತು. ಅಂತಿಮವಾಗಿ ಕಾರ್ಕಿವ್ ಪ್ರದೇಶವನ್ನು ಕಾಲ್ನಡಿಗೆಯಲ್ಲಿ ತೊರೆದು, ರೈಲನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಂದೆವು ಎಂದು ತಿಳಿಸಿದರು. ಇದನ್ನೂ ಓದಿ: ಪುಟಿನ್‍ನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರಲ್ಲ: ಉಕ್ರೇನ್ ಅಧ್ಯಕ್ಷರ ಪತ್ನಿ

    ನಾವು ಭಾರತಕ್ಕೆ ವಾಪಸ್ ಬರುವಲ್ಲಿ ನಮ್ಮ ಸರ್ಕಾರ ನಮಗೆ ಮಾಡಿದ ಸಹಾಯಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

  • ಪುಟಿನ್‍ನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರಲ್ಲ: ಉಕ್ರೇನ್ ಅಧ್ಯಕ್ಷರ ಪತ್ನಿ

    ಪುಟಿನ್‍ನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರಲ್ಲ: ಉಕ್ರೇನ್ ಅಧ್ಯಕ್ಷರ ಪತ್ನಿ

    ಕೀವ್: ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರುವುದಿಲ್ಲ ಎಂದು ಉಕ್ರೇನ್ ಅಧ್ಯಕ್ಷರ ಪತ್ನಿ ಒಲೆನಾ ಝೆಲೆನ್ಸ್ಕಾ ತಿಳಿಸಿದರು.

    ಪುಟ್ಟ ರಾಷ್ಟ್ರ ಉಕ್ರೇನ್‍ನ ಮೇಲೆ ರಷ್ಯಾ ವೈಮಾನಿಕ ದಾಳಿ ಹಾಗೂ ಕ್ಷಿಪಣಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾವಿರಾರು ಜನರು ದೇಶ ತೊರೆಯುತ್ತಿದ್ದಾರೆ. ಈ ಬಗ್ಗೆ ಒಲೆನಾ ಝೆಲೆನ್ಸ್ಕಾ ಭಾವನಾತ್ಮಕ ಪತ್ರವನ್ನು ಬರೆದ ಅವರು, ಪರಮಾಣು ಯುದ್ಧವನ್ನು ಪ್ರಾರಂಭಿಸುವ ಬೆದರಿಕೆ ಹಾಕಿರುವ ಪುಟಿನ್ ಅವರನ್ನು ನಾವು ತಡೆಯದಿದ್ದರೆ, ನಮ್ಮಲ್ಲಿ ಯಾರಿಗೂ ಸುರಕ್ಷಿತ ಸ್ಥಳವಿಲ್ಲ ಎಂದು ಬರೆದಿದ್ದಾರೆ.

    ಯುದ್ಧದ ಸ್ಥಿತಿಗತಿಗಳ ಬಗ್ಗೆ ವಿವರಿಸಿದ ಅವರು, ಫೆಬ್ರವರಿ 24ರಂದು ರಷ್ಯಾದ ಆಕ್ರಮಣದ ಘೋಷಣೆಯಿಂದ ನಾವೆಲ್ಲರೂ ಎಚ್ಚರಗೊಂಡಿದ್ದೇವೆ. ರಷ್ಯಾ ಟ್ಯಾಂಕ್‍ಗಳು ಉಕ್ರೇನಿನ ಗಡಿಯನ್ನು ದಾಟಿದವು. ವಿಮಾನಗಳು ನಮ್ಮ ವಾಯುಪ್ರದೇಶವನ್ನು ಪ್ರವೇಶಿಸಿದವು. ಕ್ಷಿಪಣಿ ಲಾಂಚರ್‌ಗಳು ನಮ್ಮ ನಗರಗಳನ್ನು ಸುತ್ತುವರೆದವು. ಜೊತೆಗೆ ಉಕ್ರೇನಿನ ನಾಗರಿಕರ ಸಾಮೂಹಿಕ ಹತ್ಯೆಯೂ ನಡೆದಿದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಸೂರ್ಯಕಾಂತಿ ಮಾತ್ರ ಅಲ್ಲ ಬೇರೆ ಖಾದ್ಯ ತೈಲ ಖರೀದಿಗೆ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ: ನಿರ್ಮಲಾ ಸೀತಾರಾಮನ್

    ಬಾಂಬ್‍ನಿಂದ ರಕ್ಷಣೆ ಪಡೆಯಲು ಮಹಿಳೆಯರು ಮತ್ತು ಮಕ್ಕಳು ಬಂಕರ್‌ಗಳಲ್ಲಿ ದಿನದೂಡುತ್ತಿದ್ದಾರೆ. ಇದು ಯುದ್ಧದ ಭೀಕರ ಸನ್ನಿವೇಶ. ನಡುಗುವ ಭೂಮಿಯಲ್ಲಿ ಸಕ್ಕರೆ ಕಾಯಿಲೆ ಇರುವವರಿಗೆ ಭೂಗತ ಬಂಕರ್‌ಗಳಲ್ಲಿ ಇನ್‍ಸುಲಿನ್ ಕೊಡುವುದು, ಸತತ ಬಾಂಬ್‍ಗಳು ಭೋರ್ಗರೆಯುತ್ತಿದ್ದಾಗ ಅಸ್ತಮಾ ರೋಗಿಗಳಿಗೆ ಔಷಧಿ ಕೊಡುವುದು ಎಷ್ಟು ಕಷ್ಟ ಎನ್ನುವುದು ಅನುಭವಿಸಿದವರಿಗೇ ಗೊತ್ತು. ಕ್ಯಾನ್ಸರ್ ಪೀಡಿತರ ಕಿಮೊಥೆರಪಿ, ರೇಡಿಯೇಶನ್ ಚಿಕಿತ್ಸೆಗೆ ಅವಕಾಶವೇ ಆಗುತ್ತಿಲ್ಲ. ಇದನ್ನೂ ಓದಿ: ಕೋಲಾರದಲ್ಲಿ ತಪ್ಪಿತು ಮಹಾ ದುರಂತ – ಕೂದಲೆಳೆ ಅಂತರದಲ್ಲಿ ನೂರಾರು ಜನ ಪಾರು

    ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿ 14 ದಿನಗಳಾಗಿವೆ. ಎರಡೂ ದೇಶಗಳ ನಡುವೆ ಮೂರು ಬಾರಿ ಮಾತುಕತೆ ನಡೆದಿದ್ದರೂ ಈವರೆಗೆ ಯಾವುದೇ ಪ್ರಯೋಜನ ಸಿಕ್ಕಿಲ್ಲ. ಕೀವ್ ಮತ್ತು ಇತರ ಪ್ರಮುಖ ನಗರಗಳಿಂದ ಜನರನ್ನು ಸ್ಥಳಾಂತರಕ್ಕಾಗಿ ಅವಕಾಶ ಕಲ್ಪಿಸಲು ಕದನ ವಿರಾಮ ಘೋಷಿಸಿದೆ. ಯುದ್ಧದಿಂದಾಗಿ ನಾಗರಿಕರ ಸಂಚಾರಕ್ಕೆ ಹಲವು ನಿರ್ಬಂಧಗಳನ್ನು ಹೇರಲಾಗಿದೆ. ನಾಗರಿಕರ ಸಂಕಷ್ಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಉಕ್ರೇನಿನಿಂದ ವಾಪಸ್ ಬಂದ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ಡಾ.ಅಶ್ವತ್ಥನಾರಾಯಣ

    ಉಕ್ರೇನಿನಿಂದ ವಾಪಸ್ ಬಂದ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ಡಾ.ಅಶ್ವತ್ಥನಾರಾಯಣ

    ಬೆಂಗಳೂರು: ಯುದ್ಧಪೀಡಿತ ಉಕ್ರೇನಿನಿಂದ ಸುರಕ್ಷಿತವಾಗಿ ವಾಪಸ್ ಬಂದಿರುವ ಮಲ್ಲೇಶ್ವರಂ ಕ್ಷೇತ್ರದ ನಾಲ್ವರು ವಿದ್ಯಾರ್ಥಿನಿಯರನ್ನು ಈ ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಭೇಟಿ ಮಾಡಿ, ಭರವಸೆ ತುಂಬಿದರು.

    ಮಲ್ಲೇಶ್ವರಂನವರಾದ ಐಶ್ವರ್ಯಾ, ದಿವ್ಯಶ್ರೀ, ಲತಾಶ್ರೀ ಮತ್ತು ನಂದಿತಾ ಅವರು ಉಕ್ರೇನಿನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದರು. ಆದರೆ ಆ ರಾಷ್ಟ್ರದ ಮೇಲೆ ರಷ್ಯಾ ಯುದ್ಧ ಸಾರಿದ ಮೇಲೆ ಇವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದರು. ಕೊನೆಗೆ, ಕೇಂದ್ರ ಸರ್ಕಾರದ ಆಪರೇಷನ್ ಗಂಗಾ ಕಾರ್ಯಾಚರಣೆಯ ಮೂಲಕ ಇವರನ್ನೆಲ್ಲ ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಇದನ್ನೂ ಓದಿ: ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಮೋದಿಗೆ ಧನ್ಯವಾದ ತಿಳಿಸಿದ ಹಸೀನಾ

    ಬೆಂಗಳೂರನ್ನು ತಲುಪಿದ ಈ ನಾಲ್ವರು ವಿದ್ಯಾರ್ಥಿನಿಯರು ಮತ್ತು ಅವರ ಪೋಷಕರನ್ನು ಭೇಟಿಯಾದ ಸಚಿವರು, ಉಕ್ರೇನ್‍ನಿಂದ ಬಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮುಂದುವರಿಕೆಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ, ಉಕ್ರೇನಿನ ಪರಿಸ್ಥಿತಿಯ ಬಗ್ಗೆ ಕೇಳಿ, ತಿಳಿದುಕೊಂಡರು. ಈ ಸಂದರ್ಭದಲ್ಲಿ ಮಲ್ಲೇಶ್ವರ ಮಂಡಲದ ಬಿಜೆಪಿ ಅಧ್ಯಕ್ಷೆ ಕಾವೇರಿ ಕೇದಾರನಾಥ್ ಇತರರಿದ್ದರು. ಇದನ್ನೂ ಓದಿ: ಉಕ್ರೇನ್, ರಷ್ಯಾ ಯುದ್ಧಕ್ಕೂ, ಭಾರತದಲ್ಲಿ ಬೆಲೆ ಏರಿಕೆಗೂ ನಂಟೇನು?

  • ಉಕ್ರೇನ್, ರಷ್ಯಾ ಯುದ್ಧಕ್ಕೂ, ಭಾರತದಲ್ಲಿ ಬೆಲೆ ಏರಿಕೆಗೂ ನಂಟೇನು?

    ಉಕ್ರೇನ್, ರಷ್ಯಾ ಯುದ್ಧಕ್ಕೂ, ಭಾರತದಲ್ಲಿ ಬೆಲೆ ಏರಿಕೆಗೂ ನಂಟೇನು?

    ನವದೆಹಲಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಆರಂಭಿಸಿ 14ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಯುದ್ಧದ ಎಫೆಕ್ಟ್ ಮಾತ್ರ ಇತರ ದೇಶಗಳ ಮೇಲೆ ತಟ್ಟಿದೆ. ಅದರಲ್ಲೂ ಭಾರತದಲ್ಲಿ ತೈಲ ದರ ಭಾರೀ ಏರಿಕೆ ಕಾಣುತ್ತಿದೆ.

    ಭಾರತದಲ್ಲಿ ತೈಲ ದರದಲ್ಲಿ ಏರಿಕೆ ಪ್ರಮುಖ ಕಾರಣವೇನು ಎಂಬುದನ್ನು ಗಮನಿಸಿದರೆ, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ರಫ್ತು ಮಾಡುವ ಮೂರನೇ ಅತಿದೊಡ್ಡ ದೇಶ ರಷ್ಯಾ ಆಗಿದೆ. ಹಾಗಾಗಿ ಭಾರತದಲ್ಲಿ ತೈಲ ದರ ಏರಿಕೆಯತ್ತ ಮುಖಮಾಡಿದೆ. ಅಮೆರಿಕ ಮತ್ತು ಸೌದಿ ಹೊರತುಪಡಿಸಿದ್ರೆ ರಷ್ಯಾದಿಂದ ಕಚ್ಚಾ ತೈಲ ಹೆಚ್ಚು ರಫ್ತು ಆಗುತ್ತಿದೆ. ದಿನಕ್ಕೆ ಸುಮಾರು 5 ಮಿಲಿಯನ್ ಬ್ಯಾರೆಲ್‍ಗಳಷ್ಟು ಕಚ್ಚಾ ತೈಲವನ್ನು ರಷ್ಯಾ ರಫ್ತು ಮಾಡುತ್ತಿದೆ. ರಷ್ಯಾದ ಒಟ್ಟು ರಫ್ತಿನಲ್ಲಿ ಅರ್ಧದಷ್ಟು ಯುರೋಪ್ ದೇಶಗಳಿಗೆ ರಫ್ತಾದರೆ, 42% ಏಷ್ಯಾ ಮತ್ತು ಓಷಿಯಾನಿಯಾಕ್ಕೆ (ಪೆಸಿಫಿಕ್ ಸಾಗರದ ಬಳಿಯ ದೇಶಗಳೂ) ಭಾಗಕ್ಕೆ ರಫ್ತಾಗುತ್ತಿದೆ. ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

    ಭಾರತದಲ್ಲಿ ಬೆಲೆ ಏರಿಕೆ ಯಾಕೆ?
    ಭಾರತ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ 61.6%, ಆಫ್ರಿಕಾದಿಂದ 14.2%, ಉತ್ತರ ಅಮೆರಿಕಾದಿಂದ 12%, ದಕ್ಷಿಣ ಅಮೆರಿಕಾದಿಂದ ಮತ್ತು ರಷ್ಯಾದಿಂದ 5.8%, ಪ್ರಪಂಚದ ಇತರ ದೇಶಗಳಿಂದ 2.5% ಕಚ್ಚಾ ತೈಲಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಇದೀಗ ರಷ್ಯಾ, ಉಕ್ರೇನ್ ಯುದ್ಧದಿಂದಾಗಿ ಭಾರತಕ್ಕೆ ಬರುತ್ತಿದೆ ಕಚ್ಚಾ ತೈಲಗಳ ಪ್ರಮಾಣ ಕುಸಿತ ಕಂಡಿದೆ ಇರುವುದರಿಂದಾಗಿ ಬೆಲೆ ಏರಿಕೆ ಆಗುತ್ತಿದೆ. ಇದನ್ನೂ ಓದಿ: ರಷ್ಯಾದಲ್ಲಿ ವ್ಯಾಪಾರ ನಿಲ್ಲಿಸಿದ ಮೆಕ್‍ಡೋನಾಲ್ಡ್, ಸ್ಟಾರ್‌ಬಕ್ಸ್‌, ಪೆಪ್ಸಿ ಕಂಪನಿಗಳು

    ರಷ್ಯಾದಿಂದ ಏನು ಏಫೆಕ್ಟ್?
    ಉಕ್ರೇನ್, ರಷ್ಯಾ ಯುದ್ಧದಿಂದ ರಷ್ಯಾ ಮೇಲೆ ಯುರೋಪ್ ದೇಶಗಳು ಆರ್ಥಿಕ ನಿರ್ಬಂಧ ಹೇರಿದೆ. ಇದರ ಭಾಗವಾಗಿ ಕಚ್ಚಾತೈಲದ ಆಮದನ್ನು ಈಗಾಗಲೇ ಯುರೋಪಿಯನ್ ದೇಶಗಳು ನಿಲ್ಲಿಸಿವೆ. ಮೂರನೇ ಅತಿದೊಡ್ಡ ಕಚ್ಚಾತೈಲ ರಫ್ತು ದೇಶದಿಂದ ರಪ್ತು ನಿಂತಿರುವ ಹಿನ್ನೆಲೆ ಇತರೆ ಕಚ್ಚಾತೈಲ ಉತ್ಪಾದಕ ದೇಶಗಳಲ್ಲಿ ಡಿಮ್ಯಾಂಡ್ ಹೆಚ್ಚಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಕಚ್ಚಾತೈಲಕ್ಕೆ ಬೇಡಿಕೆ ಹೆಚ್ಚಿದ್ದು, ಉತ್ಪಾದನೆ ಕಡಿಮೆ ಇದೆ ಹಾಗಾಗಿ ಪೂರೈಕೆ ಒತ್ತಡ ಹೆಚ್ಚಿದ ಹಿನ್ನೆಲೆ ಬೆಲೆ ಏರಿಕೆ ಕಂಡುಬರುತ್ತಿದೆ. ಇದರಿಂದ ಸಹಜವಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರಲ್ ಬೆಲೆ ಏರಿಕೆ ಕಾಣುತ್ತಿದೆ. ಸದ್ಯ ಪ್ರತಿ ದೇಶಗಳು ತಮ್ಮಲ್ಲಿರುವ ಸ್ಟಾಕ್ ಬಳಸಿಕೊಳ್ಳುತ್ತಿದ್ದು, ಸ್ಟಾಕ್ ಖಾಲಿಯಾಗುವ ಹೊತ್ತಿಗೆ ಯುದ್ಧ ನಿಂತರೇ ಬೆಲೆ ಈಗಿರುವ ಬೆಲೆಗೆ ಸ್ಥಿರವಾಗಬಹುದು ಎಂಬ ನಿರೀಕ್ಷೆ ಇದೆ. ಯುದ್ಧ ಮುಂದುವರಿದರೆ ಕಚ್ಚಾತೈಲದ ಬೆಲೆ 200 ಡಾಲರ್ ಗಡಿ ದಾಟುವುದು ಖಚಿತ. ಇದರಿಂದ ಭಾರತವೂ ಸೇರಿದಂತೆ ಹಲವು ದೇಶಗಳು ದುಪ್ಪಟ್ಟು ಬೆಲೆ ತೆತ್ತು ಕಚ್ಚಾತೈಲ ಖರೀದಿ ಮಾಡಬೇಕಾಗುವ ಅನಿವಾರ್ಯತೆಗೆ ಬರಬಹುದು. ಇದನ್ನೂ ಓದಿ: ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌: ರಷ್ಯಾದ 2 ಷರತ್ತಿಗೆ ಒಪ್ಪಿಗೆ

  • ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್

    ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್

    ಕೀವ್: ರಷ್ಯಾದ ಶೇಲ್ ದಾಳಿ ವೇಳೆ ಉಕ್ರೇನ್‍ನ ನಟ ಪಾಶಾ ಲೀ ಸಾವನ್ನಪ್ಪಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಅವರ ಕೊನೆಯ ಪೋಸ್ಟ್‍ವೊಂದು ಸದ್ದು ಮಾಡುತ್ತಿದೆ.

    ಉಕ್ರೇನ್‍ನ ಮೇಲೆ ರಷ್ಯಾ ತೀವ್ರವಾಗಿ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ತನ್ನ ದೇಶವನ್ನು ರಕ್ಷಿಸಿಕೊಳ್ಳಲು ಉಕ್ರೇನ್‍ನ ನಟ ಪಾಶಾಲೀ ಸೇನೆ ಸೇರಿದ್ದರು. ಆದರೆ ಅವರು ಶೇಲ್ ದಾಳಿ ವೇಳೆ ಇರ್ಪಿನ್‍ನಲ್ಲಿ ಸಾವನ್ನಪ್ಪಿದ್ದರು.

    ಸಾಯುವ ಮೊದಲು ಇನ್‍ಸ್ಟಾಗ್ರಾಮ್‍ನಲ್ಲಿ ಹಾಕಿದ್ದ ಅವರ ಕೊನೆಯ ಪೋಸ್ಟ್ ವೈರಲ್ ಆಗುತ್ತಿದೆ. ಕಳೆದ 48 ಗಂಟೆಗಳ ಕಾಲ ನಾವು ಹೇಗೆ ಬಾಂಬ್ ದಾಳಿ ಮಾಡುತ್ತಿದ್ದೇವೆ ಎಂಬುದರ ಕುರಿತು ಚಿತ್ರ ತೆಗೆಯುವ ಅವಕಾಶವಿದೆ. ನಾವು ನಮ್ಮ ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ ಜೊತೆಗೆ ಎಲ್ಲವೂ ಉಕ್ರೇನ್ ಆಗಿರುತ್ತದೆ. ಇದರಿಂದಾಗಿ ನಾವು ನಗುತ್ತಿದ್ದೇವೆ ಎಂದು ಪೋಸ್ಟ್ ಮಾಡಿದ್ದಾರೆ.

    ಕಳೆದ ತಿಂಗಳು ಉಕ್ರೇನ್‍ನ ಮೇಲೆ ರಷ್ಯಾ ದಾಳಿ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಕ್ರೈಮಿಯಾ ಮೂಲದ ನಟ ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್‍ನ ರಕ್ಷಣಾ ಪಡೆಗೆ ಸೇರಿದ್ದರು. ಇದನ್ನೂ ಓದಿ: ಮಾ.11ರ 12:46 ವೇಳೆ ಸೇವ್ ಮಾಡ್ಕೊಳ್ಳಿ: ಕನ್ ಫ್ಯೂಸ್ ಮಾಡಿದ ಉಪೇಂದ್ರ

    ಉಕ್ರೇನ್‍ನ ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಸೆರ್ಗಿ ಟೊಮಿಲೆಂಕೊ ಮತ್ತು ಒಡೆಸ್ಸಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು ಪಾಶಾ ಲೀ ಅವರ ಸಾವಿನ ಸುದ್ದಿಯನ್ನು ದೃಢಪಡಿಸಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಮಹಿಳೆಯರಿಗೆ ಮಂಗನಕಾಯಿಲೆ ದೃಢ

  • ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ

    ಪ್ರಧಾನಿ, ಭಾರತದ ರಾಯಭಾರಿ ಕಚೇರಿಗೆ ಧನ್ಯವಾದ ತಿಳಿಸಿದ ಪಾಕ್ ಯುವತಿ

    ಕೀವ್: ಉಕ್ರೇನ್‍ನಲ್ಲಿ ಸಿಲುಕಿದ್ದ ಪಾಕಿಸ್ತಾನದ ಯುವತಿಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದವನ್ನು ತಿಳಿಸಿದ್ದಾರೆ.

    ಪಾಕಿಸ್ತಾನಿ ಯುವತಿ ಅಸ್ಮಾ ಶಫೀಕ್ ಅವರನ್ನು ಉಕ್ರೇನ್‍ನ ಕೀವ್‍ನಿಂದ ಸುರಕ್ಷಿತವಾಗಿ ಬೇರೆ ಸ್ಥಳಕ್ಕೆ ರಕ್ಷಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವೀಡಿಯೋವೊಂದನ್ನು ಮಾಡಿ ಧನ್ಯವಾದವನ್ನು ತಿಳಿಸಿದರು.

    ವೀಡಿಯೋದಲ್ಲಿ ಅವರು, ಉಕ್ರೇನ್‍ನಲ್ಲಿ ಬಹಳ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದೆ. ನಾವು ಅತ್ಯಂತ ಕಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿರುವಾಗ ಕೀವ್‍ನಲ್ಲಿ ಭಾರತೀಯ ರಾಯಭಾರಿ ಕಚೇರಿಯವರು ಎಲ್ಲಾ ರೀತಿಯ ಬೆಂಬಲ ನೀಡಿದ್ದಾರೆ. ನಮಗೆ ಕೀವ್‍ನಿಂದ ಪಾರಾಗಲು ಸಹಾಯ ಮಾಡಿದ ಭಾರತೀಯ ರಾಯಭಾರ ಕಚೇರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದವನ್ನು ತಿಳಿಸುತ್ತೇನೆ. ನಾವು ಸುರಕ್ಷಿತವಾಗಿ ಮನೆಗೆ ತಲುಪುತ್ತೇವೆ ಎಂದು ಭಾವಿಸುತ್ತೇವೆ ಎಂದು ಈ ವೀಡಿಯೋದಲ್ಲಿ ತಿಳಿಸಿದರು. ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

    ಅಸ್ಮಾ ಶಫೀಕ್ ಅವರು ಈಗ ಪಶ್ಚಿಮ ಉಕ್ರೇನ್‍ಗೆ ಹೋಗುತ್ತಿದ್ದಾರೆ. ಅಲ್ಲಿಂದ ಶೀಘ್ರದಲ್ಲೇ ಅವರು ತಮ್ಮ ಕುಟುಂಬದವರನ್ನು ಮತ್ತೆ ಸೇರಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 5 ಕೋಟಿಗೂ ಹೆಚ್ಚು ಅಕ್ರಮ ಆಸ್ತಿ – ಪ್ರಾಂಶುಪಾಲ ಅರೆಸ್ಟ್!

    ಉಕ್ರೇನ್-ರಷ್ಯಾ ನಡುವಿನ ಯುದ್ಧ 14ನೇ ದಿನ ಪೂರೈಸಿದೆ. ರಷ್ಯಾ ಪಡೆಗಳು ಮಾರಣಹೋಮವನ್ನೇ ಸೃಷ್ಟಿಸ್ತಿವೆ. ಯುದ್ಧದ ನಿಯಮಗಳನ್ನು ಉಲ್ಲಂಘಿಸಿ ಜನವಸತಿ ಪ್ರದೇಶಗಳ ಮೇಲೆ ಬಾಂಬ್‍ಗಳ ಸುರಿಮಳೆಗೈಯ್ಯುತ್ತಿದೆ.

  • ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

    ಕಚ್ಚಾ ತೈಲ ಬೆಲೆ ಬ್ಯಾರೆಲ್‍ಗೆ 300 ಡಾಲರ್‌ಗೆ ಏರಬಹುದು: ರಷ್ಯಾ ಎಚ್ಚರಿಕೆ

    ಮಾಸ್ಕೋ: ನಮ್ಮ ಕಚ್ಚಾ ತೈಲ ಆಮದಿಗೆ ನಿಷೇಧ ಹೇರಿದರೆ 1 ಬ್ಯಾರೆಲ್ ತೈಲದ ಬೆಲೆ 300 ಡಾಲರ್(ಅಂದಾಜು 23 ಸಾವಿರ ರೂ.)ಗೆ ಏರಿಕೆಯಾಗಬಹುದು ಎಂದು ರಷ್ಯಾ ವಿಶ್ವಕ್ಕೆ ಎಚ್ಚರಿಕೆ ನೀಡಿದೆ.

    ಪಾಶ್ಚಿಮಾತ್ಯ ದೇಶಗಳಿಂದ ರಷ್ಯಾದ ಪೆಟ್ರೋಲಿಯಂ ಉತ್ಪನ್ನಗಳ ಆಮದುಗಳ ಮೇಲಿನ ನಿಷೇಧವು ಜಾಗತಿಕ ಆರ್ಥಿಕತೆಗೆ ಕೆಟ್ಟ ಪರಿಣಾಮಗಳನ್ನು ಉಂಟುಮಾಡುತ್ತದೆ. ಇದರಿಂದ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‍ಗೆ ಡಾಲರ್ 300ಗೆ ಏರಬಹುದು ಎಂದು ರಷ್ಯಾದ ಉಪ ಪ್ರಧಾನಿ ಅಲೆಕ್ಸಾಂಡರ್ ನೊವಾಕ್ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಮೋದಿ ಸ್ಟ್ರಾಂಗ್: ಸೇನಾಬಲ ಬಳಸಿ ಪಾಕ್‍ಗೆ ತಿರುಗೇಟು ನೀಡುವ ಸಾಧ್ಯತೆ! 

    Russia, EU and Ukraine prepare draft agreement on gas — Novak - Business & Economy - TASS

    ರಷ್ಯಾದ ತೈಲ ಆಮದಿಗೆ ಅಮೆರಿಕ ನಿರ್ಬಂಧ ಹೇರಿದೆ. ಈ ಹಿನ್ನೆಲೆ ಸಿಟ್ಟಾಗಿರುವ ರಷ್ಯಾ, ಈ ನಿರ್ಧಾರ ವಿಶ್ವ ಮಾರುಕಟ್ಟೆಗೆ ದುರಂತ ಪರಿಣಾಮಗಳಿಗೆ ಕಾರಣವಾಗುತ್ತದೆ. ಈಗಾಗಲೇ ಮಾರುಕಟ್ಟೆಯಲ್ಲಿ ಬ್ಯಾರೆಲ್‍ಗೆ 130 ಡಾಲರ್(ಅಂದಾಜು 10 ಸಾವಿರ ರೂ.) ದಾಟಿದೆ. ಒಂದು ವೇಳೆ ರಷ್ಯಾ ಕಚ್ಚಾ ತೈಲದ ಮೇಲೆ ನಿಷೇಧ ಹೇರಿದರೆ ಕಚ್ಚಾ ತೈಲದ ಬೆಲೆ ಊಹೆಗೂ ಮೀರಿ ಏರಿಕೆಯಾಗುತ್ತೆ ಎಂದು ಖಡಕ್ ಎಚ್ಚರಿಕೆಯನ್ನು ರಷ್ಯಾ ಕೊಟ್ಟಿದೆ.

    ಯುರೋಪಿಯನ್ ಮಾರುಕಟ್ಟೆಯಲ್ಲಿ ರಷ್ಯಾದ ತೈಲದ ಪ್ರಮಾಣವನ್ನು ತ್ವರಿತವಾಗಿ ಬದಲಾಯಿಸುವುದು ಅಸಾಧ್ಯ. ಇದು ಒಂದು ವರ್ಷಕ್ಕಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಯುರೋಪಿಯನ್‍ಗೆ ಹೆಚ್ಚು ದುಬಾರಿಯಾಗುತ್ತೆ ಎಂದು ನೊವಾಕ್ ತಿಳಿಸಿದ್ದಾರೆ. ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್

  • ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌:  ರಷ್ಯಾದ 2 ಷರತ್ತಿಗೆ ಒಪ್ಪಿಗೆ

    ನ್ಯಾಟೋ ಸದಸ್ಯತ್ವಕ್ಕೆ ಪಟ್ಟು ಹಿಡಿಯಲ್ಲ ಎಂದ ಉಕ್ರೇನ್‌: ರಷ್ಯಾದ 2 ಷರತ್ತಿಗೆ ಒಪ್ಪಿಗೆ

    ಕಿವ್‌: ಮಹತ್ವದ ಬೆಳವಣಿಗೆಯಲ್ಲಿ ನ್ಯಾಟೋ(NATO) ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯುವುದಿಲ್ಲ ಎಂದು ಉಕ್ರೇನ್‌ ಅಧ್ಯಕ್ಷ ವೊಲೊದಿಮಿರ್‌ ಜೆಲೆನ್‌ಸ್ಕಿ ಹೇಳಿದ್ದಾರೆ.

    ಉಕ್ರೇನ್‌ನಿಂದ ಸ್ವಾಯತ್ತೆ ಬಯಸುತ್ತಿರುವ ಎರಡು ರಷ್ಯಾ-ಪರ ಪ್ರದೇಶಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ನಾನು ಸಿದ್ಧನಿದ್ದೇನೆ ಎಂದು ಮಂಗಳವಾರ ರಾತ್ರಿ ಪ್ರಕಟಿಸಿದ್ದಾರೆ.

    ರಷ್ಯಾ ವಿಧಿಸಿದ್ದ 4 ಪ್ರಮುಖ ಷರತ್ತುಗಳಲ್ಲಿ ಎರಡನ್ನು ಉಕ್ರೇನ್‌ ಒಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ಈಗ ಯುದ್ಧ ಅಂತ್ಯವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.

    ನಮ್ಮನ್ನು ನ್ಯಾಟೋ ಒಪ್ಪಿಕೊಳ್ಳಲು ತಯಾರಿಲ್ಲ. ರಷ್ಯಾ ವಿರುದ್ಧ ಯುದ್ಧ ಮಾಡಿ ಅಪಾಯ ತಂದುಕೊಳ್ಳಲು ನ್ಯಾಟೋಗೆ ಇಷ್ಟವಿಲ್ಲ. ರಷ್ಯಾ ವಿರುದ್ಧ ಯುದ್ಧ ಮಾಡಲು ನ್ಯಾಟೋ ಹೆದರುತ್ತದೆ. ಹೀಗಾಗಿ ನ್ಯಾಟೋ ಕುರಿತ ನಮ್ಮ ನಿಲುವಿನಿಂದ ನಾವು ಹಿಂದಕ್ಕೆ ಸರಿದಿದ್ದೇವೆ ಎಂದು ಎಬಿಸಿ ನ್ಯೂಸ್‌ಗೆ ನೀಡಿದ ಸಂದರ್ಶನದಲ್ಲಿ ಜೆಲೆನ್‌ಸ್ಕಿ ತಿಳಿಸಿದ್ದಾರೆ.‌ ಇದನ್ನೂ ಓದಿ: ಕಚ್ಚಾ ತೈಲ ಬೆಲೆ ಏರಿಕೆ ಬೆನ್ನಲ್ಲೇ ಭಾರತಕ್ಕೆ ರಷ್ಯಾದಿಂದ ಭಾರೀ ಆಫರ್

    ಉಕ್ರೇನ್‌ನಿಂದ ಸ್ವಾಯತ್ತೆ ಬಯಸುತ್ತಿರುವ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದೂ ಜೆಲೆನ್‌ಸ್ಕಿ ತಿಳಿಸಿದ್ದು ಯುದ್ಧ ಅಂತ್ಯವಾಗುವ ಸಾಧ್ಯತೆಯಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

    ಯುದ್ಧ ನಿಲ್ಲಿಸಬೇಕಾದರೆ ರಷ್ಯಾ 4 ಷರತ್ತನ್ನು ಉಕ್ರೇನ್‌ಗೆ ವಿಧಿಸಿತ್ತು. ಈ 4 ಷರತ್ತನ್ನು ಒಪ್ಪಿಕೊಳ್ಳುವವರೆಗೂ ಯುದ್ಧ ನಿಲ್ಲಿಸುವುದೇ ಇಲ್ಲ ಎಂದು ರಷ್ಯಾ ಸಂಧಾನ ಸಭೆಯಲ್ಲಿ ಖಡಕ್‌ ಆಗಿ ಹೇಳಿತ್ತು.

    ರಷ್ಯಾದ ಷರತ್ತು ಏನಿತ್ತು?
    1. ನ್ಯಾಟೋ ಸೇರಬಾರದು:
    ಅಮೆರಿಕ ನೇತೃತ್ವದ 30 ಪಾಶ್ಚಾತ್ಯ ದೇಶಗಳ ‘ನ್ಯಾಟೋ’ ಸಂಘಟನೆ ಸೇರಿದಂತೆ ಯಾವುದೇ ಗುಂಪುಗಳನ್ನು ಉಕ್ರೇನ್‌ ಸೇರಬಾರದು. ಉಕ್ರೇನ್‌ ತಟಸ್ಥವಾಗಿ ಉಳಿಯುವ ನಿರ್ಧಾರ ತೆಗೆದುಕೊಳ್ಳಬೇಕು. ಮುಂದೆ ಯಾವುದೇ ಕಾರಣಕ್ಕೂ ಹೊಸ ಸಂಘಟನೆಯನ್ನು ನಾನು ಸೇರುವುದಿಲ್ಲ ಎಂದು ಸಂವಿಧಾನಕ್ಕೆ ತಿದ್ದುಪಡಿ ತರಬೇಕು.

    2. ಕೂಡಲೇ ಸೇನಾ ಕಾರ್ಯಾಚರಣೆ ನಿಲ್ಲಿಸಬೇಕು:
    ನಾವು ಉಕ್ರೇನ್‌ ಅನ್ನು ಸಂಪೂರ್ಣ ನಿಶ್ಶಸ್ತ್ರೀಕರಣ ಮಾಡುತ್ತಿದ್ದೇವೆ. ಒಂದು ವೇಳೆ ಉಕ್ರೇನ್‌ ತನ್ನ ಸೇನಾ ಕಾರ್ಯಚರಣೆ ಸ್ಥಗಿತಗೊಳಿಸಿದರೆ ನಾವು ಒಂದೇ ಒಂದು ಗುಂಡನ್ನೂ ಹಾರಿಸುವುದಿಲ್ಲ.

    3. ರಾಜ್ಯಗಳಿಗೆ ಮಾನ್ಯತೆ ಬೇಕು:
    ಬಂಡುಕೋರರ ವಶದಲ್ಲಿರುವ ಪ್ರಾಂತ್ಯಗಳಾದ ಡೊನೆಟ್ಸ್ಕ್ ಮತ್ತು ಲುಹಾನ್ಸ್ಕ್ ಸ್ವತಂತ್ರ್ಯ ರಾಜ್ಯಗಳೆಂದು ಘೋಷಿಸಿ ಅವುಗಳಿಗೆ ಮಾನ್ಯತೆ ನೀಡಬೇಕು.

    4.ಕ್ರೆಮಿಯಾಕ್ಕೆ ಮಾನ್ಯತೆ:
    ಉಕ್ರೇನ್‌ ಮೇಲೆ ದಾಳಿ ನಡೆಸಿ 2014ರಲ್ಲಿ ವಶಪಡಿಸಿಕೊಂಡ ಕ್ರೆಮಿಯಾವನ್ನು ರಷ್ಯಾದ ಭಾಗವೆಂದು ಒಪ್ಪಬೇಕು. ಇವುಗಳಿಗೆ ಒಪ್ಪಿದರೆ ತಕ್ಷಣವೇ ನಾವು ಯುದ್ಧ ನಿಲ್ಲಿಸಲಿದ್ದೇವೆ. ಇದನ್ನೂ ಓದಿ: ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ರಷ್ಯಾ ಆತಂಕ ಏನು?
    ನ್ಯಾಟೋ ಸಂಕ್ಷಿಪ್ತ ರೂಪ ಉತ್ತರ ಅಟ್ಲಾಂಟಿಕ್ ಟ್ರೀಟಿ ಆರ್ಗನೈಸೇಶನ್ (ನ್ಯಾಟೋ). ಪ್ರಸ್ತುತ ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧಕ್ಕೆ ಮೂಲ ಕಾರಣವೇ ಈ ನ್ಯಾಟೋ.

    ಉಕ್ರೇನ್ ನ್ಯಾಟೋದ ಭಾಗವಾಗಲು ಬಯಸುತ್ತಿತ್ತು. ಆದರೆ ರಷ್ಯಾ ನ್ಯಾಟೋವನ್ನು ಬಲವಾಗಿ ವಿರೋಧಿಸುತ್ತಿದೆ. ತನ್ನ ವಿರುದ್ಧ ಹಣಿಯಲಾದ ದೇಶಗಳ ಒಕ್ಕೂಟ ಎಂದೇ ರಷ್ಯಾ ನ್ಯಾಟೋವನ್ನು ಕರೆಯುತ್ತಿದೆ. ಉಕ್ರೇನ್ ನ್ಯಾಟೋಗೆ ಸೇರಿದರೆ ಉಕ್ರೇನ್‌ ಮೂಲಕ ನ್ಯಾಟೋದ ಸೈನ್ಯ ತನ್ನ ಗಡಿಗೆ ಬರುತ್ತದೆ ಎಂಬ ಆತಂಕವನ್ನು ರಷ್ಯಾ ವ್ಯಕ್ತಪಡಿಸಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಸುತ್ತಿನ ಮಾತುಕತೆ ನಡೆದರೂ ಯಾವುದೇ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ರಷ್ಯಾ ಉಕ್ರೇನ್‌ ಮೇಲೆ ದಾಳಿ ಮಾಡಿತ್ತು.

    ನ್ಯಾಟೋ ರಚನೆಯಾದ ಆರಂಭದಲ್ಲಿ 12 ಸದಸ್ಯ ರಾಷ್ಟ್ರಗಳನ್ನು ಹೊಂದಿತ್ತು. ಇದು ಅಮೆರಿಕ, ಬ್ರಿಟನ್, ಫ್ರಾನ್ಸ್, ಕೆನಡಾ, ಇಟಲಿ, ನೆದರ್ಲ್ಯಾಂಡ್ಸ್, ಐಸ್‌ಲ್ಯಾಂಡ್‌, ಬೆಲ್ಜಿಯಂ, ಲಕ್ಸೆಂಬರ್ಗ್, ನಾರ್ವೆ, ಪೋರ್ಚುಗಲ್ ಮತ್ತು ಡೆನ್ಮಾರ್ಕ್ ಅನ್ನು ಒಳಗೊಂಡಿತ್ತು. ಇಂದು, ನ್ಯಾಟೋ ಅಡಿಯಲ್ಲಿ 30 ಸದಸ್ಯ ರಾಷ್ಟ್ರಗಳಿವೆ

    ನ್ಯಾಟೋ ಸಾಮಾನ್ಯ ಭದ್ರತಾ ನೀತಿಯ ಮೇಲೆ ಕಾರ್ಯನಿರ್ವಹಿಸುವ ಮಿಲಿಟರಿ ಮೈತ್ರಿಯಾಗಿದೆ. ನ್ಯಾಟೋ ಸದಸ್ಯ ರಾಷ್ಟ್ರವನ್ನು ಆಕ್ರಮಿಸಿದರೆ, ಇದನ್ನು ಎಲ್ಲಾ ನ್ಯಾಟೋ ಸದಸ್ಯ ರಾಷ್ಟ್ರಗಳ ಆಕ್ರಮಣ ಎಂದು ಪರಿಗಣಿಸಲಾಗುತ್ತದೆ. ಎಲ್ಲಾ ನ್ಯಾಟೋ ಸದಸ್ಯ ರಾಷ್ಟ್ರಗಳು ಆಕ್ರಮಣದ ವಿರುದ್ಧ ಒಗ್ಗಟ್ಟಾಗಿ ಕೆಲಸ ಮಾಡುತ್ತದೆ.

  • ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ರಷ್ಯಾದ ತೈಲ, ಅನಿಲ ಆಮದಿಗೆ ಅಮೆರಿಕ ನಿರ್ಬಂಧ

    ವಾಷಿಂಗ್ಟನ್: ಉಕ್ರೇನ್‌ ಮೇಲಿನ ರಷ್ಯಾ ಯುದ್ಧವನ್ನು ಖಂಡಿಸಿ ರಷ್ಯಾದ ಅನಿಲ, ತೈಲ ಸೇರಿ ಎಲ್ಲಾ ಬಗೆಯ ಆಮದುಗಳಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ತಿಳಿಸಿದ್ದಾರೆ.

    ನಮ್ಮ ಅನೇಕ ಯೂರೋಪಿಯನ್‌ ಮಿತ್ರರಾಷ್ಟ್ರಗಳು ಮತ್ತು ಪಾಲುದಾರರು ನಮ್ಮೊಂದಿಗೆ ಸೇರುವ ಸ್ಥಿತಿಯಲ್ಲಿ ಇಲ್ಲದಿರಬಹುದು. ಆದರೆ ನಾವು ಈ ನಿಷೇಧದ ತಿಳಿವಳಿಕೆಯೊಂದಿಗೆ ಮುಂದುವರಿಯುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುದ್ಧ ನಿಲ್ಲಿಸಲು 2 ಷರತ್ತುಗಳನ್ನು ಉಕ್ರೇನ್ ಮುಂದಿಟ್ಟ ರಷ್ಯಾ

    ನಾವು ಇತಿಹಾಸದಲ್ಲಿ ಆರ್ಥಿಕ ನಿರ್ಬಂಧಗಳ ಅತ್ಯಂತ ಮಹತ್ವದ ಪ್ಯಾಕೇಜ್‌ ಅನ್ನು ಜಾರಿಗೊಳಿಸುತ್ತಿದ್ದೇವೆ. ಇದು ರಷ್ಯಾದ ಆರ್ಥಿಕತೆಗೆ ಗಮನಾರ್ಹ ಹಾನಿಯನ್ನುಂಟುಮಾಡುತ್ತಿದೆ ಎಂದಿದ್ದಾರೆ.

    ನಾವು ರಷ್ಯಾದ ತೈಲ, ಅನಿಲ ಮತ್ತು ಇಂಧನ ಆಮದುಗಳನ್ನು ನಿಷೇಧಿಸುತ್ತಿದ್ದೇವೆ. ಯುಎಸ್‌ ಬಂದರುಗಳಲ್ಲಿ ರಷ್ಯಾದ ತೈಲವು ಇನ್ನು ಮುಂದೆ ಸ್ವೀಕಾರಾರ್ಹವಲ್ಲ. ಅಮೆರಿಕದ ಜನರು ಪುಟಿನ್‌ ಅವರಿಗೆ ಮತ್ತೊಂದು ಪ್ರಬಲ ಹೊಡೆತವನ್ನು ನೀಡುತ್ತಾರೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅಜ್ಜಿ ತವರು ಉಕ್ರೇನ್‌ಗೆ 77.07 ಕೋಟಿ ನೆರವು ನೀಡಿದ ʼಟೈಟಾನಿಕ್‌ʼ ಹೀರೋ