Tag: russia

  • ಯುದ್ಧ ಪರಿಸ್ಥಿತಿ ತಿಳಿಯಾದ್ರೆ ಮತ್ತೆ ಉಕ್ರೇನ್ ಹೋಗುತ್ತೇನೆ: ವೈದ್ಯಕೀಯ ವಿದ್ಯಾರ್ಥಿ

    ಯುದ್ಧ ಪರಿಸ್ಥಿತಿ ತಿಳಿಯಾದ್ರೆ ಮತ್ತೆ ಉಕ್ರೇನ್ ಹೋಗುತ್ತೇನೆ: ವೈದ್ಯಕೀಯ ವಿದ್ಯಾರ್ಥಿ

    ಚಾಮರಾಜನಗರ: ಯುದ್ದಗ್ರಸ್ತ ಉಕ್ರೇನ್‍ನಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಒಡೆಯರ ಪಾಳ್ಯದ ಸಿದ್ದೇಶ್ ಸುರಕ್ಷಿತವಾಗಿ ತವರಿಗೆ ಮರಳಿ ಬಂದಿದ್ದಾರೆ. ಉಕ್ರೇನ್‍ನ ಕೀವ್ ನಗರದಲ್ಲಿ ದ್ವಿತೀಯ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ಸಿದ್ದೇಶ್ ಹಂಗೇರಿ ಮೂಲಕ ದೆಹಲಿಗೆ ಬಂದು ಅಲ್ಲಿಂದ ಹುಟ್ಟೂರಿಗೆ ಆಗಮಿಸಿದ್ದಾರೆ.

    ಈ ವೇಳೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸಿದ್ದೇಶ್ ಯುದ್ಧದ ಪರಿಸ್ಥಿತಿ ತಿಳಿಯಾದರೆ ಮತ್ತೆ ವಿದ್ಯಾಭ್ಯಾಸಕ್ಕೆ ಉಕ್ರೇನ್‍ಗೆ ಹೋಗುತ್ತೇನೆ ಎಂದಿದ್ದಾರೆ.

    ನಾನು 3-4 ದಿನ ಹಾಸ್ಟೆಲ್‍ನ ಬಂಕರ್‍ನಲ್ಲಿದ್ದೆ. ನಾವು ಇದ್ದ ಸ್ಥಳದಿಂದ 30 ಕಿ.ಮೀ ದೂರದಲ್ಲೇ ಬಾಂಬ್ ಬೀಳುತ್ತಿದ್ದವು. ಯುದ್ದದಿಂದ ಎಲ್ಲಾ ವಿದ್ಯಾರ್ಥಿಗಳು ಹೆದರಿದ್ದೆವು. ಕೀವ್‍ನಿಂದ ರೈಲು ಹಾಗೂ ಬಾಡಿಗೆ ಕಾರಿನ ಮೂಲಕ ಹಂಗೇರಿಯ ಬುಡಾಪೆಸ್ಟ್ ನಗರ ತಲುಪಿ ಅಲ್ಲಿನ ಭಾರತೀಯ ರಾಯಭಾರಿ ಕಚೇರಿ ನೆರವಿನಿಂದ ವಿಮಾನದಲ್ಲಿ ದೆಹಲಿಗೆ ಬಂದೆವು ಎಂದು ವಿವರಿಸಿದರು. ಇದನ್ನೂ ಓದಿ: ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!

    ಯುದ್ದ ನಡೆಯುವ ಬಗ್ಗೆ ಒಂದು ವಾರ ಮುಂಚೆಯೇ ಮಾಹಿತಿ ಬಂದಿತ್ತು. ಅದರೆ ಆಫ್‍ಲೈನ್ ಕ್ಲಾಸ್ ಮುಂದುವರಿಸಿದ್ದರಿಂದ ಅಲ್ಲಿಯೇ ಇರಬೇಕಾಯ್ತು ಎಂದು ಅಲ್ಲಿದ್ದ ಪರಿಸ್ಥಿತಿ ಬಗ್ಗೆ ವಿವರಿಸಿದರು.

    ಸಿದ್ದೇಶ್ ಆಗಮನದಿಂದ ಸಂತಸಗೊಂಡಿರುವ ಪೋಷಕರು ದೇವರ ದಯೆಯಿಂದ ಮಗ ಮನೆಗೆ ಬಂದಿದ್ದಾನೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ಕೊಡಿಸೋಕೆ ಒಂದರಿಂದ ಒಂದೂವರೆ ಕೋಟಿ ರೂ. ಬೇಕು. ಅಲ್ಲಿ 30 ಲಕ್ಷ ರೂ. ಯಲ್ಲಿ ವೈದ್ಯಕೀಯ ಶಿಕ್ಷಣ ಮುಗಿಯುತ್ತೆ. ನಮ್ಮ ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಸರಿಯಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?

    ಯುದ್ಧ ನಿಂತ ಬಳಿಕ ಮತ್ತೆ ಓದಲು ಉಕ್ರೇನ್‍ಗೆ ಹೋಗುತ್ತೇನೆ ಎಂದು ಮಗ ಹೇಳುತ್ತಿದ್ದಾನೆ. ಈ ವಿಚಾರ ಅವನ ಧೈರ್ಯಕ್ಕೆ ಬಿಟ್ಟಿದ್ದು. ನಮ್ಮ ಆಶೀರ್ವಾದ ಸದಾ ಇರುತ್ತದೆ. ಸರ್ಕಾರ ಹಾಗೂ ಹನೂರಿನ ಬಿಜೆಪಿ ಮುಖಂಡ ವೆಂಕಟೇಶ್ ನಮ್ಮ ಜೊತೆಯಲ್ಲಿದ್ದುಕೊಂಡು ಮಗನನ್ನು ಕರೆತರುವಲ್ಲಿ ಪ್ರಯತ್ನ ಪಟ್ಟಿದ್ದಾರೆ. ಅವರಿಗೆಲ್ಲ ಧನ್ಯವಾದ ತಿಳಿಸುತ್ತೇವೆ ಎಂದು ಸಿದ್ದೇಶ್ ಪೋಷಕರು ಹೇಳಿದ್ದಾರೆ.

  • ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!

    ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೆ ಹಾಕಿ ಎಂದಿದ್ದ ಚೀನಾ!

    ವಾಷಿಂಗ್ಟನ್: ರಷ್ಯಾ 1 ತಿಂಗಳ ಹಿಂದೆಯೇ ಉಕ್ರೇನ್ ಮೇಲೆ ಯುದ್ಧ ಸಾರಲು ಯೋಜಿಸಿತ್ತು. ಆದರೆ ಚಳಿಗಾಲದ ಒಲಿಂಪಿಕ್ಸ್ ಮುಗಿಯುವವರೆಗೆ ಯುದ್ಧವನ್ನು ಮುಂದೂಡುವಂತೆ ಚೀನಾ ರಷ್ಯಾಗೆ ಮನವಿ ಮಾಡಿತ್ತು ಎಂಬ ವಿಚಾರವನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ.

    ಫೆಬ್ರವರಿ ಫ್ರಾರಂಭದಲ್ಲಿಯೇ ಚೀನಾ ರಷ್ಯಾದ ಅಧಿಕಾರಿಗಳಿಗೆ ಚಳಿಗಾಲದ ಒಲಿಂಪಿಕ್ಸ್ ಮುಕ್ತಾಯವಾಗುವವರೆಗೆ ಯುದ್ಧ ಪ್ರಾರಂಭಿಸಬಾರದೆಂದು ಮನವಿ ಮಾಡಿದ್ದಾಗಿ ವರದಿ ಹೇಳಿದೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಕಳೆದ ವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಉಕ್ರೇನ್ ಮೇಲೆ ಯುದ್ಧ ಘೋಷಿಸುವುದಕ್ಕೂ ಮೊದಲು ಚೀನಾದ ಅಧಿಕಾರಿಗಳಿಗೆ ರಷ್ಯಾದ ಯೋಜನೆ ಹಾಗೂ ಉದ್ದೇಶಗಳ ಬಗ್ಗೆ ತಿಳಿದಿತ್ತು ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?

    ರಷ್ಯಾ ಉಕ್ರೇನ್ ಮೇಲೆ ಯುದ್ಧ ಸಾರುವ ಬಗ್ಗೆ ಮೊದಲೇ ಸುಳಿವು ಪಡೆದಿದ್ದ ಚೀನಾ ಯುದ್ಧವನ್ನು ಮುಂದೆ ಹಾಕುವಂತೆ ಮನವಿ ಮಾಡಿತ್ತು. ಆದರೆ ಈ ಬಗ್ಗೆ ಚೀನಾ ಎಲ್ಲಿಯೂ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ ಎಂಬುದಾಗಿ ವರದಿಗಳು ತಿಳಿಸಿವೆ.

  • ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಲಕ್ನೋ: ಉಕ್ರೇನ್‍ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ ತರಾಟೆಗೆ ತೆಗೆದುಕೊಂಡರು.

    ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‍ಪಿ) ಪರವಾಗಿ ಪ್ರಚಾರ ಮಾಡುವಾಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಉಕ್ರೇನ್‍ನಲ್ಲಿರುವ ಭಾರತೀಯರನ್ನು ಯುದ್ಧದ ಮಧ್ಯೆ ತಮ್ಮಷ್ಟಕ್ಕೆ ಬಿಡುತ್ತಿದೆ. ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

    ಇದೀಗ ಏನಾಗುತ್ತಿದೆ ನೋಡಿ. ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಮೋದಿ ಇಲ್ಲಿ(ಯುಪಿ) ಸಭೆಗಳನ್ನು ಮಾಡುತ್ತಿದ್ದಾರೆ. ಯಾವುದು ಮುಖ್ಯ? ನಮ್ಮ ಭಾರತೀಯರನ್ನು ಮತ್ತು ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‍ನಿಂದ ಏಕೆ ಮರಳಿ ಕರೆತರಲಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಲುನೋವು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡ!

  • ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?

    ರಷ್ಯಾ ಆಯ್ತು ಭಾರತದ ಮೇಲೆ ನಿರ್ಬಂಧ ಹೇರುತ್ತಾ ಅಮೆರಿಕ?

    ನವದೆಹಲಿ: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾ ಮೇಲೆ ಈಗಾಗಲೇ ಹಲವು ನಿರ್ಬಂಧಗಳನ್ನು ಅಮೆರಿಕ ವಿಧಿಸಿದೆ. ಅಂತೆಯೇ ರಷ್ಯಾದೊಂದಿಗೆ ಈ ಹಿಂದೆಯೇ ಭಾರತ ಮಾಡಿಕೊಂಡಿದ್ದ ರಕ್ಷಣಾ ಒಪ್ಪಂದಕ್ಕೂ ಅಮೆರಿಕ ನಿರ್ಬಂಧ ಹಾಕಲಿದೆಯೇ ಎಂಬ ವಿಚಾರ ಚರ್ಚೆಯನ್ನು ಹುಟ್ಟುಹಾಕಿದೆ.

    ಎಸ್-400 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಗಳ ಐದು ಘಟಕಗಳನ್ನು ಖರೀದಿಸಲು 2018ರ ಅಕ್ಟೋಬರ್‌ನಲ್ಲಿ ರಷ್ಯಾದೊಂದಿಗೆ ಭಾರತವು ಒಪ್ಪಂದಕ್ಕೆ ಸಹಿ ಹಾಕಿತ್ತು. ಇದನ್ನು ಖರೀದಿಸಲು ಭಾರತಕ್ಕೆ ಅಮೆರಿಕ ನಿರ್ಬಂಧ ಹಾಕುತ್ತಾ ಎಂಬ ವಿಚಾರ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆಗುತ್ತಿದೆ. ಇದನ್ನೂ ಓದಿ: ಇರಾಕ್‍ನಿಂದ ತೈಲ ಖರೀದಿಗೆ ನಿರ್ಬಂಧ- ಭಾರತಕ್ಕೆ ಅಮೆರಿಕದಿಂದ ಗುಡ್‍ನ್ಯೂಸ್

    ಎಸ್-400 ಮಿಸೈಲ್ ಡಿಫೆನ್ಸ್ ಸಿಸ್ಟಮ್‌ ಖರೀದಿಸಲು ಕಾಟ್ಸಾ ಕಾನೂನಿನಡಿಯಲ್ಲಿ ಅಮೆರಿಕವು ತನ್ನ ಪ್ರಮುಖ ಪಾಲುದಾರರಲ್ಲಿ ಒಂದಾದ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಬೇಕೆ ಅಥವಾ ನಿರ್ಬಂಧವನ್ನು ಮನ್ನಾ ಮಾಡಬೇಕೆ ಎಂಬುದನ್ನು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಿರ್ಧರಿಸುತ್ತಾರೆ ಎಂದು ಹಿಡಿಯ ಆಡಳಿತ ಅಧಿಕಾರಿ ಡೊನಾಲ್ಡ್ ಲೂ ತಿಳಿಸಿದ್ದಾರೆ.

    ಆಡಳಿತವು ಕಾಟ್ಸಾ ಕಾನೂನನ್ನು ಅನುಸರಿಸುತ್ತದೆ. ಆ ಕಾನೂನನ್ನು ಸಂಪೂರ್ಣವಾಗಿ ಕಾರ್ಯಗತಗೊಳಿಸುತ್ತದೆ. ಆದರೆ ರಷ್ಯಾ ಮತ್ತು ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಕಾಟ್ಸಾ ಕಾನೂನಿನ ಅಡಿಯಲ್ಲಿ ನಿರ್ಬಂಧಗಳನ್ನು ವಿಧಿಸುವ ಮತ್ತು ಮನ್ನಾ ಮಾಡುವ ಬಗ್ಗೆ ಯುಎಸ್ ಅಧ್ಯಕ್ಷರ ನಿರ್ಧಾರದ ಬಗ್ಗೆ ನಾನು ಏನನ್ನೂ ಹೇಳಲು ಸಾಧ್ಯವಾಗುವುದಿಲ್ಲ ಎಂದು ಡೊನಾಲ್ಡ್ ಲೂ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

    ಭಾರತವು ಈಗ ನಮ್ಮ ಪ್ರಮುಖ ಭದ್ರತಾ ಪಾಲುದಾರ. ಆ ಪಾಲುದಾರಿಕೆಯನ್ನು ಮುಂದುವರಿಸುವುದನ್ನು ನಾವು ಗೌರವಿಸುತ್ತೇವೆ ಎಂದು ಲೂ ಹೇಳಿದ್ದಾರೆ.

    ಏನಿದು ಕಾಟ್ಸಾ?:
    ರಕ್ಷಣಾ ಹಾಗೂ ಆರ್ಥಿಕ ಒಪ್ಪಂದಗಳನ್ನು ಭದ್ರಪಡಿಸಲು ಅಮೆರಿಕ ಕಾಟ್ಸಾ(ಕೌಂಟರಿಂಗ್ ಅಮೆರಿಕಾಸ್ ಅಡ್ವರ್ಸರೀಸ್ ಥ್ರೂ ಸ್ಯಾಂಕ್ಷನ್ಸ್ ಆಕ್ಟ್) ಕಾಯ್ದೆಯನ್ನು ತಂದಿದೆ. ವಿಶ್ವದ ದೊಡ್ಡಣ್ಣನಾಗಿರುವ ಅಮೆರಿಕ ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಜೊತೆ ಉತ್ತಮ ಬಾಂಧವ್ಯಕ್ಕಾಗಿ ದ್ವಿಪಕ್ಷೀಯ ಮಾತುಕತೆ ನಡೆಸುತ್ತದೆ. ದ್ವಿಪಕ್ಷೀಯ ಸಂಬಂಧ ಹೊಂದಿರುವ ದೇಶಗಳು ಅಮೆರಿಕ ನಿರ್ಬಂಧ ಹೇರಿದ ದೇಶಗಳೊಂದಿಗೆ ರಕ್ಷಣಾ ವ್ಯವಹಾರ ನಡೆಸಿದರೆ ಆ ದೇಶಗಳ ಮೇಲೆ ನಿರ್ಬಂಧ ಹೇರುವ ಅಧಿಕಾರ ಈ ಕಾಯ್ದೆಯಲ್ಲಿದೆ.

    ಹಿಂದೆಯೂ ನಿರ್ಬಂಧ ವಿಧಿಸಲಾಗಿತ್ತು:
    ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ ಎಂದು 2018ರಲ್ಲಿ ಇರಾನ್‌ಗೆ ಅಮೆರಿಕ ಹಲವು ನಿರ್ಬಂಧಗಳನ್ನು ವಿಧಿಸಿತ್ತು. ಈ ವೇಳೆ ಭಾರತ ಸೇರಿದಂತೆ 8 ರಾಷ್ಟ್ರಗಳು ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳಬಾರದು ಎಂದು ನಿರ್ಬಂಧಿಸಿತ್ತು. ಆದರೆ ತೈಲ ಖರೀದಿಗೆ ಅವಕಾಶ ಮಾಡಿಕೊಡಬೇಕು ಎಂದು ಆ ರಾಷ್ಟ್ರಗಳು ಒತ್ತಾಯಿಸಿದ ನಂತರ ನಿರ್ಬಂಧವನ್ನು ತೆರವುಗೊಳಿಸಲಾಗಿತ್ತು. ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ – ಚರ್ಚೆಯಾಗುತ್ತಿದೆ ಭಾರತದ ಐತಿಹಾಸಿಕ ಕೊಹಿನೂರು ವಜ್ರ

    ವಿಶ್ವಸಂಸ್ಥೆಯ ಕಾಯ್ದೆಯಲ್ಲ:
    ರಷ್ಯಾದಿಂದ ಟ್ರಯಂಫ್ ಖರೀದಿಗೆ ಅಮೆರಿಕದಿಂದ ವಿರೋಧ ವ್ಯಕ್ತವಾಗುತ್ತಿದ್ದ ಬೆನ್ನಲ್ಲೇ 2018ರಲ್ಲಿ ಆಗಿನ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯಿಸಿ, ಕಾಟ್ಸಾ ಕಾಯ್ದೆ ಅಮೆರಿಕದ್ದು ಹೊರತು ವಿಶ್ವಸಂಸ್ಥೆಯದ್ದಲ್ಲ. ಇದು ಭಾರತ ಮತ್ತು ರಷ್ಯಾದ ಆಂತರಿಕ ವಿಚಾರ ಎಂದು ಹೇಳಿ ತಿರುಗೇಟು ನೀಡಿದ್ದರು.

  • ಉಕ್ರೇನ್ ವಿರುದ್ಧ ಯುದ್ಧ – ಚರ್ಚೆಯಾಗುತ್ತಿದೆ ಭಾರತದ ಐತಿಹಾಸಿಕ ಕೊಹಿನೂರು ವಜ್ರ

    ಉಕ್ರೇನ್ ವಿರುದ್ಧ ಯುದ್ಧ – ಚರ್ಚೆಯಾಗುತ್ತಿದೆ ಭಾರತದ ಐತಿಹಾಸಿಕ ಕೊಹಿನೂರು ವಜ್ರ

    ಬೆಂಗಳೂರು: ಉಕ್ರೇನ್ ವಿರುದ್ಧದ ರಷ್ಯಾ ಯುದ್ಧ ಸಂಬಂಧ ಭಾರೀ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಬ್ರಿಟನ್ ಮೂಲದ ಸುದ್ದಿ ನಿರೂಪಕನೊಬ್ಬನ ಟ್ವೀಟ್‍ನಿಂದ ಭಾರತದ ಕೊಹಿನೂರು ವಜ್ರದ ಬಗ್ಗೆ ಈಗ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಆರಂಭವಾಗಿದೆ.

    ಉಕ್ರೇನ್ ವಿರುದ್ಧ ರಷ್ಯಾ ನಡೆಸುತ್ತಿರುವ ಯುದ್ಧದ ಬಗ್ಗೆ ಬುಧವಾರ ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನ ನಡೆದಿದೆ. ಈ ಅಧಿವೇಶನದಲ್ಲಿ ಭಾರತ ಉಕ್ರೇನ್ ಅಥವಾ ರಷ್ಯಾದ ಪರವಾಗಿ ಮತ ಚಲಾಯಿಸದೇ ದೂರ ಉಳಿದಿದ್ದು, ಇದಕ್ಕೆ ಬ್ರಿಟನ್ ಮೂಲದ ಸುದ್ದಿ ನಿರೂಪಕನೊಬ್ಬ ಭಾರತದ ವಿರುದ್ಧವಾಗಿ ಟ್ವೀಟ್ ಮಾಡಿದ್ದ.

    ಭಾರತ ಹಾಗೂ ಪಾಕಿಸ್ತಾನ ವಿಶ್ವಸಂಸ್ಥೆಯಲ್ಲಿ ನಡೆದ ಅಧಿವೇಶನದಲ್ಲಿ ಯಾವ ದೇಶಕ್ಕೂ ಮತ ಹಾಕದೇ ಇರುವಾಗ ಜಿಬಿ ನ್ಯೂಸ್‍ನ ನಿರೂಪಕ ಯಾವುದೇ ದೇಶಕ್ಕೆ ಮತ ಹಾಕದೇ ಇರುವ ಭಾರತ ಹಾಗೂ ಪಾಕಿಸ್ತಾನ ನಾಚಿಕೆಯಿಂದ ನೇಣು ಹಾಕಿಕೊಳ್ಳಬೇಕು. ಈ ಎರಡೂ ದೇಶಗಳು ಬ್ರಿಟನ್‍ನಿಂದ ಸ್ವಲ್ಪವೂ ಸಹಾಯ ಕೇಳಲು ಅರ್ಹವಲ್ಲ ಎಂದು ಟ್ವಿಟ್ಟರ್‌ನಲ್ಲಿ ಬರೆದಿದ್ದ. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ – ದಕ್ಷಿಣ ಏಷ್ಯಾ ರಾಷ್ಟ್ರಗಳು ಯಾರ ಪರ?

    ಈ ಹೇಳಿಕೆಗೆ ಭಾರತೀಯ ಟ್ವಿಟ್ಟರ್ ಬಳಕೆದಾರರು ಕೊಹಿನೂರು ವಿಚಾರವನ್ನು ಎಳೆದು ಹಾಕಿದ್ದಾರೆ. ಈ ಮೂಲಕ ಬ್ರಿಟನ್ ಸುದ್ದಿ ನಿರೂಪಕನೊಂದಿಗೆ ಟ್ಟಿಟ್ಟರ್‌ನಲ್ಲಿ ಯುದ್ಧ ಪ್ರಾರಂಭಿಸಿದ್ದಾರೆ. ಬ್ರಿಟನ್ ಸುದ್ದಿ ಸಂಸ್ಥೆಯ ನಿರೂಪಕನ ಟ್ವೀಟ್‍ಗೆ ಕಿಡಿಯಾದ ಭಾರತೀಯರು ಕಾಲ್ಕಿತ್ತು ಕೊಹಿನೂರು ವಿಚಾರವಾಗಿ ವಾಗ್ದಾಳಿ ಪ್ರಾರಂಭಿಸಿದ್ದಾರೆ.

    ಭಾರತದ ಆರ್ಥಿಕತೆ ನಿಮಗಿಂತಲೂ ದೊಡ್ಡದಾಗಿದೆ. ಇದೀಗ ನೀವು ಕದ್ದುಕೊಂಡು ಹೋಗಿರುವ ಕೊಹಿನೂರು ವಜ್ರವನ್ನು ಹಿಂದಿರುಗಿಸಬೇಕಾಗಿರುವುದಷ್ಟೇ ಬಾಕಿ ಎಂದು ಕೆಲವರು ಟ್ವಿಟ್ಟರ್‌ನಲ್ಲಿ ಕಾಲೆಳೆದಿದ್ದಾರೆ.

    ನಾವು ಸಹಾಯ ಕೇಳುವುದಕ್ಕೂ ಮೊದಲು ಭಾರತವನ್ನು ಲೂಟಿ ಮಾಡಿರುವ ನಮ್ಮ 45 ಟ್ರಿಲಿಯನ್ ಡಾಲರ್‍ಅನ್ನು ಹಿಂದಿರುಗಿಸಿ. ನಮ್ಮ ಎಲ್ಲಾ ಅಮೂಲ್ಯ ಸಂಪತ್ತು, ಐತಿಹಾಸಿಕ ಕಲಾಕೃತಿಗಳು ಹಾಗೂ ಕೊಹಿನೂರು ವಜ್ರವನ್ನು ಹಿಂದಿರುಗಿಸಿ ಎಂದು ಇನ್ನೊಬ್ಬರು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಬ್ರಿಟಿಷರು ಕೇವಲ ಕೊಹಿನೂರನ್ನಷ್ಟೇ ಕದ್ದುಕೊಂಡು ಹೋಗಿಲ್ಲ. ಕೊಡಗಿನ ರಾಜಕುಮಾರಿ ಗೌರಮ್ಮನನ್ನು ಕೂಡಾ ಹೊತ್ತೊಯ್ದಿದ್ದಾರೆ. ಆಕೆಯ ಮತಾಂತರ ಮಾಡಿ ಕರೆದುಕೊಂಡು ಹೋಗಲಾಗಿತ್ತು ಎಂದಿದ್ದಾರೆ.

    ನಿಮ್ಮ ವಸ್ತು ಸಂಗ್ರಹಾಲಯಗಳಲ್ಲಿ ವಿದೇಶದಿಂದ ಕದ್ದಿರುವ ವಸ್ತುಗಳೇ ತುಂಬಿ ತುಳುಕುತ್ತಿವೆ. ಕೊಹಿನೂರು ಕೂಡಾ ಅವುಗಳಲ್ಲೊಂದು ಎಂದು ವ್ಯಂಗ್ಯ ಮಾಡಿದ್ದಾರೆ. ನಾವು ನೇಣು ಹಾಕಿಕೊಳ್ಳುವುದಕ್ಕೂ ಮೊದಲು ನೀವು ನಮ್ಮ ಕೊಹಿನೂರು ಹಾಗೂ ಲೂಟಿ ಮಾಡಿರುವ ಎಲ್ಲಾ ಹಣವನ್ನು ಹಿಂದಿರುಗಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಹೆಣ ಬಿದ್ದ ಜಾಗದಲ್ಲಿ ಮತ್ತೊಬ್ಬ ಹೋಗಿ ಹೆಣ ಆಗಲು ಯಾರೂ ತಯಾರಿಲ್ಲ: ಶಿವರಾಮ್ ಹೆಬ್ಬಾರ್

    ಹೆಣ ಬಿದ್ದ ಜಾಗದಲ್ಲಿ ಮತ್ತೊಬ್ಬ ಹೋಗಿ ಹೆಣ ಆಗಲು ಯಾರೂ ತಯಾರಿಲ್ಲ: ಶಿವರಾಮ್ ಹೆಬ್ಬಾರ್

    ಧಾರವಾಡ: ಉಕ್ರೇನ್ ದೇಶದಲ್ಲಿ ರಷ್ಯಾ ನಡೆಸಿದ ದಾಳಿಯಿಂದಾಗಿ ಮೃತಪಟ್ಟಿರುವ ಹಾವೇರಿ ಜಿಲ್ಲೆಯ ನವೀನ್ ಶೇಖರಪ್ಪನ  ಶವವನ್ನು ತರಲು ಸರ್ಕಾರ ಎಲ್ಲ ರೀತಿಯಿಂದಲೂ ಪ್ರಯತ್ನ ಮಾಡುತ್ತಿದೆ. ಆದರೆ, ಹೆಣ ಬಿದ್ದ ಜಾಗಕ್ಕೆ ಹೋಗಿ ಮತ್ತೊಬ್ಬ ಹೆಣವಾಗಲು ಯಾರೂ ಸಿದ್ಧರಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

    ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಆಪರೇಷನ್ ಗಂಗಾ ಹೆಸರಿನಡಿ 42 ವಿಮಾನಗಳನ್ನು ಉಕ್ರೇನ್ ಪಕ್ಕದ ದೇಶಗಳಿಗೆ ಕಳುಹಿಸಿ, ಆ ಮೂಲಕ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ರಕ್ಷಣೆಗೆ ಮುಂದಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಪಕ್ಕದ ದೇಶಗಳಿಗೆ ಬಂದು ಮುಟ್ಟಬೇಕಿದೆ. ಯುದ್ಧದ ತೀವ್ರತೆ ಉಕ್ರೇನ್‍ನಲ್ಲಿ ಹೆಚ್ಚಾಗಿರುವುದರಿಂದ ಅಲ್ಲಿ ವಿಮಾನಗಳು ಲ್ಯಾಂಡ್ ಆಗಲು ಸಾಧ್ಯವಿಲ್ಲ. ಆದರೂ ಭಾರತ ಸರ್ಕಾರದ ನಾಲ್ಕು ಜನ ಮಂತ್ರಿಗಳು ನಾಲ್ಕು ದಿಕ್ಕಿನಲ್ಲಿ ನಿಂತು ರಕ್ಷಣಾ ಕಾರ್ಯ ಪರಿಶೀಲಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ದುರದೃಷ್ಟವಶಾತ್ ನಮ್ಮ ನಾಡಿನ ನವೀನ್ ಈ ಯುದ್ಧದಲ್ಲಿ ಅಸುನೀಗಿದ್ದಾನೆ. ನಾನು ಹಾವೇರಿ ಜಿಲ್ಲೆಯ ಉಸ್ತುವಾರಿಯನ್ನು ಹೊಂದಿದ್ದೇನೆ. ನವೀನ್ ಮನೆಗೆ ಭೇಟಿ ನೀಡಿ ಬಂದಿದ್ದೇನೆ. ಆತನ ಶವ ತರಲು ಸರ್ವ ಪ್ರಯತ್ನ ನಡೆದಿದೆ. ನವೀನ್‍ನ್ನು ಜೀವಂತವಾಗಿ ಮನೆಗೆ ಕರೆ ತರಲು ಆಗಲಿಲ್ಲ. ಕಡೆ ಪಕ್ಷ ಆತನ ಪೋಷಕರಿಗೆ ಕೊನೆಯ ಬಾರಿಗೆ ನವೀನ್‍ನ ಮುಖವನ್ನಾದರೂ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಯುದ್ಧ ಮನುಕುಲದ ಶತ್ರು, ಸದ್ಯ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ: ಬಸವಾನಂದ ಶ್ರೀ

  • ಕೊಡಗಿನ ವಿದ್ಯಾರ್ಥಿ ಶಾರುಖ್ ಸುರಕ್ಷಿತವಾಗಿ ಇದ್ದಾನೆ: ಅಧಿಕಾರಿ

    ಕೊಡಗಿನ ವಿದ್ಯಾರ್ಥಿ ಶಾರುಖ್ ಸುರಕ್ಷಿತವಾಗಿ ಇದ್ದಾನೆ: ಅಧಿಕಾರಿ

    ಮಡಿಕೇರಿ: ಕೊಡಗಿನ ವಿದ್ಯಾರ್ಥಿ ಶಾರುಖ್ ಸುರಕ್ಷಿತವಾಗಿ ಇದ್ದಾನೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.

    ಓರ್ವ ವಿದ್ಯಾರ್ಥಿಯೊಬ್ಬರು ಸಂಪರ್ಕಕ್ಕೆ ಸಿಗದೇ ಅವರ ಕುಟುಂಬ ವರ್ಗದವರು ಕಂಗಾಲಾಗಿದ್ದರು. ಈ ಬಗ್ಗೆ ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಕೊಡಗು ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಅಧಿಕಾರಿ ಹೈ  ಅಲರ್ಟ್‌ ಆಗಿದ್ದರು. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

    ಮೂರು ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಸಿಗದೆ ಇರುವ ವಿದ್ಯಾರ್ಥಿ ಶಾರುಖ್ ಅವರನ್ನು ಸಂಪರ್ಕ ಮಾಡಿ ತೊಂದರೆಯಲ್ಲಿ ಸಿಲುಕಿದ್ದೀರಾ ಎಂದು ಕೇಳಿದ್ದಾರೆ. ಬಳಿಕ ಶಾರುಖ್ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ. ನಾವು ಉಕ್ರೇನ್ ಗಡಿಭಾಗವನ್ನು ದಾಟಿ ಬರುತ್ತಿದ್ದೇವೆ. ಯಾರು ಅತಂಕ ಪಡುವ ಅವಶ್ಯಕತೆ ಇಲ್ಲ ಎಂದು ಅಧಿಕಾರಿಗೆ ಶಾರುಖ್ ತಿಳಿಸಿದ್ದಾರೆ. ಇದನ್ನೂ ಓದಿ: ನಮಗೆ ಇನ್ನೂ ಐದು ವರ್ಷ ಕೊಡಿ : ಅಮಿತ್ ಶಾ

    ಮಗ ಸಂಪರ್ಕಕ್ಕೆ ಸಿಕ್ಕಿ ಮಾತಾನಾಡಿರುವುದರಿಂದ ಸ್ಪಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತೆ ಅಗಿದೆ ಎಂದು ಪೋಷಕರು ತಿಳಿಸಿದ್ದಾರೆ.

  • ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ – ರಷ್ಯನ್ ಉದ್ಯಮಿ ಘೋಷಣೆ!

    ಮಾಸ್ಕೋ: ಉಕ್ರೇನ್ ಮೇಲಿನ ದಾಳಿಯನ್ನು ವಿಶ್ವದ ಇತರ ದೇಶಗಳು ಮಾತ್ರವಲ್ಲದೇ ರಷ್ಯಾ ಕೂಡಾ ವಿರೋಧಿಸುತ್ತಿದೆ. ಯುದ್ಧ ಘೋಷಿಸಿದ ದೇಶದ ಒಳಗಿನವರೇ ಅಧ್ಯಕ್ಷನ ವಿರುದ್ಧ ಟೀಕೆ ಮಾಡಿದ್ದಾರೆ. ರಷ್ಯಾದ ಸಾಮಾನ್ಯ ಜನರು, ಕ್ರೀಡಾ ಪಟುಗಳು ಸೆಲೆಬ್ರಿಟಿಗಳು ಎನ್ನದೇ ಬಹುತೇಕ ಜನರು ಯುದ್ಧ ಬೇಡ ಎಂದೇ ಹೇಳಿದ್ದಾರೆ.

    ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಯಾರ ಮಾತನ್ನೂ ಕೇಳದೇ ಯುದ್ಧವನ್ನು ಮುಂದುವರಿಸುತ್ತಿರುವಾಗ ರಷ್ಯಾದ ಉದ್ಯಮಿಯೊಬ್ಬರು ಪುಟಿನ್‍ನನ್ನು ಬಂಧಿಸಿದವರಿಗೆ 7.5 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್‌ ರಷ್ಯಾದವನಲ್ಲ ಎಂದ ನಾವೆಲ್ನಿ

    ರಷ್ಯಾದ ಮಾಸ್ಕೋ ಮೂಲದ ಉದ್ಯಮಿ ಅಲೆಕ್ಸ್ ಕೋನನಿಖಿನ್ ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಪುಟಿನ್ ಅವರನ್ನು ರಷ್ಯಾದ ಹಾಗೂ ಅಂತಾರಾಷ್ಟ್ರೀಯ ಕಾನೂನುಗಳ ಅಡಿಯಲ್ಲಿ ಯುದ್ಧ ಅಪರಾಧಿ ಎಂದು ಬಂಧಿಸಿದ ಅಧಿಕಾರಿಗೆ ನಾನು 10 ಲಕ್ಷ ಡಾಲರ್(7.5 ಕೋಟಿ ರೂ.) ನೀಡುವುದಾಗಿ ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 7000 ರಷ್ಯಾ ಯೋಧರ ಸಾವು: ಉಕ್ರೇನ್ ಅಧ್ಯಕ್ಷ

    ಪುಟಿನ್ ರಷ್ಯಾದ ಅಧ್ಯಕ್ಷನಲ್ಲ. ಅವರು ವಿಶೇಷ ಕಾರ್ಯಾಚರಣೆಯ ಭಾಗವಾಗಿ ರಷ್ಯಾದಲ್ಲಿ ಅನೇಕ ಅಪಾರ್ಟ್‍ಮೆಂಟ್ ಹಾಗೂ ಕಟ್ಟಡಗಳನ್ನು ಧ್ವಂಸ ಮಾಡಿದ್ದಾರೆ. ಇದಾದ ಬಳಿಕ ಚುನಾವಣೆಗಳನ್ನೂ ನಡೆಸಿಲ್ಲ. ಸಂವಿಧಾನವನ್ನು ಹಾಳುಮಾಡಿದ್ದಾರೆ. ತಮ್ಮ ವಿರೋಧಿಗಳನ್ನೂ ಕೊಂದಿದ್ದಾರೆ ಎಂದು ಬರೆದಿದ್ದಾರೆ.

  • ಯುದ್ಧ ಮನುಕುಲದ ಶತ್ರು, ಸದ್ಯ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ: ಬಸವಾನಂದ ಶ್ರೀ

    ಯುದ್ಧ ಮನುಕುಲದ ಶತ್ರು, ಸದ್ಯ ನಡೆಯುತ್ತಿರುವುದು ದುರದೃಷ್ಟಕರ ಸಂಗತಿ: ಬಸವಾನಂದ ಶ್ರೀ

    ಧಾರವಾಡ: ಯುದ್ಧ ಮನುಕುಲದ ಶತ್ರು, ಸದ್ಯ ಯುದ್ಧ ನಡೆಯುತ್ತಿರುವದು ದುರದೃಷ್ಟಕರ ಸಂಗತಿ ಎಂದು ಧಾರವಾಡದ ಮಹಾಮನೆ ಮಠದ ಬಸವಾನಂದ ಶ್ರೀ ಅಭಿಪ್ರಾಯಪಟ್ಟಿದ್ದಾರೆ.

    ರಷ್ಯಾ, ಉಕ್ರೇನ್ ಯುದ್ಧ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮನುಷ್ಯನಲ್ಲಿ ಹಣ, ಶಸಾಸ್ತ್ರ ಜಾಸ್ತಿ ಆದಾಗ ಯುದ್ಧ ಆಗಿಯೇ ಆಗುತ್ತವೆ, ಯುದ್ಧಗಳು ನಡೆಯಬಾರದು ಎನ್ನುವುದು ಎಲ್ಲರ ಅಪೇಕ್ಷೆ. ಯಾವ ಯಾವುದೋ ನೆಪದಲ್ಲಿ ಯುದ್ಧಗಳು ನಡೆಯುತ್ತಲೇ ಇರುತ್ತವೆ, ಇದೀಗ ರಷ್ಯಾ, ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಆದಷ್ಟು ಬೇಗ ನಿಲ್ಲಲಿ. ವಿಶ್ವ ಸಂಸ್ಥೆ ಯುದ್ಧದ ವಿಚಾರವಾಗಿ ಮಧ್ಯಪ್ರವೇಶಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ ಎಂದರು. ಇದನ್ನೂ ಓದಿ: ನಮ್ಮ ಮಕ್ಕಳು ಎಲ್ಲಿದ್ದಾರೆಂಬ ಮಾಹಿತಿಯಾದರೂ ಕೊಡಿ: ಐಡಾ ಮೆಲ್ವಿನ್ ಕಣ್ಣೀರು

    ಉಕ್ರೇನ್‍ನಲ್ಲಿ ಅನೇಕ ವಿದ್ಯಾರ್ಥಿಗಳು ಸಿಳುಕಿಕೊಂಡಿದ್ದಾರೆ, ಅವರನ್ನು ಮತ್ತೆ ತಾಯ್ನಾಡಿಗೆ ಮತ್ತೆ ಕರೆ ತರಲು ಭಾರತ ಸರ್ಕಾರ ಒಳ್ಳೆ ವ್ಯವಸ್ಥೆ ಮಾಡಿದೆ. ಕೆಲದಿನಗಳ ಹಿಂದೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಸರ್ಕಾರ ಸಿದ್ಧವಿತ್ತು, ಆದರೆ ಯುದ್ಧ ಆಗುತ್ತೋ, ಇಲ್ಲವೋ ಅನ್ನೋ ಗೊಂದಲವಿತ್ತು. ಹಾಗಾಗಿ ಸ್ವಲ್ಪ ಹಿಂಜರಿದು ಬಿಟ್ಟರು. ಅಲ್ಲಿ ಓದಲು ಹೋದ ಕರ್ನಾಟಕದ ಹುಡುಗ ಜೀವ ಕಳೆದುಕೊಂಡಿದ್ದಾನೆ ಇದು ನೋವಿನ ಸಂಗತಿ. ಇದೀಗ ಉಕ್ರೇನ್‍ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಆದಷ್ಟು ಬೇಗ ಕರೆ ತರಲಿ. ಈ ನಷ್ಟ, ಜೀವ ಹಾನಿ ಬೇಗ ನಿಲ್ಲುವಂತಾಗಲಿ ಎಂದು ನುಡಿದರು. ಇದನ್ನೂ ಓದಿ: ಹೂ ತಗೊಂಡು ನಾವೇನು ಮಾಡ್ಬೇಕು- ಕೇಂದ್ರದ ವಿರುದ್ಧ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳು ಗರಂ

  • ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್‌ ರಷ್ಯಾದವನಲ್ಲ ಎಂದ ನಾವೆಲ್ನಿ

    ಯುದ್ಧ ವಿರೋಧಿ ರಷ್ಯನ್ನರ ಬಂಧನ- ಪುಟಿನ್‌ ರಷ್ಯಾದವನಲ್ಲ ಎಂದ ನಾವೆಲ್ನಿ

    ಮಾಸ್ಕೋ: ಉಕ್ರೇನ್‌ ಮೇಲೆ ತನ್ನ ದೇಶ ಸಾರಿರುವ ಯುದ್ಧವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರಷ್ಯನ್ನರನ್ನು ಸರ್ಕಾರ ಬಂಧಿಸಿದೆ.

    ಉಕ್ರೇನ್‌ ವಿರುದ್ಧ ಮಿಲಿಟರಿ ಕಾರ್ಯಾಚರಣೆಗೆ ಕರೆ ನೀಡಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ವಿರುದ್ಧ ನೂರಾರು ಸಂಖ್ಯೆಯಲ್ಲಿ ರಷ್ಯನ್ನರು ಮಾಸ್ಕೋ ಮತ್ತು ಸಂತ ಪೀಟರ್ಸ್‌ಬರ್ಗ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಾನು ಮತ್ತೆ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್‌ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್‌

    ಜೈಲಿನಲ್ಲಿರುವ ಕ್ರೆಮ್ಲಿನ್ ವಿಮರ್ಶಕ ಹಾಗೂ ವಿಪಕ್ಷ ನಾಯಕ ಅಲೆಕ್ಸಿ ನಾವೆಲ್ನಿ ರಷ್ಯಾದಲ್ಲಿ ಯುದ್ಧ ವಿರೋಧಿ ಪ್ರತಿಭಟನೆಗಳಿಗೆ ಕರೆ ನೀಡಿದ್ದಾರೆ. ಪುಟಿನ್ ಅವರನ್ನು ʼನಿಸ್ಸಂಶಯವಾಗಿ ಹುಚ್ಚು ತ್ಸಾರ್ʼ ಎಂದು ಕರೆದಿರುವ ನಾವೆಲ್ನಿ, ರಷ್ಯನ್ನರು ಯುದ್ಧವನ್ನು ಬೆಂಬಲಿಸುವುದಿಲ್ಲ ಎಂದು ಜಗತ್ತಿಗೆ ಹೇಳಬೇಕು ಎಂದು ಕರೆ ನೀಡಿದ್ದಾರೆ.

    ರಷ್ಯಾದ ಪಡೆಗಳು ಉಕ್ರೇನ್ ಮೇಲೆ ತಮ್ಮ ದಾಳಿಯನ್ನು ವಿಸ್ತರಿಸುತ್ತಿರುವಂತೆ, ಬ್ಯಾಕ್ ಹೋಮ್ ಪ್ರದರ್ಶನಕಾರರು ಯುದ್ಧವನ್ನು ಖಂಡಿಸುವ ಪೋಸ್ಟರ್‌ಗಳನ್ನು ಹಿಡಿದು ‘ಯುದ್ಧ ಬೇಡ’ ಎಂದು ಘೋಷಣೆ ಕೂಗುತ್ತಾ ನಗರಗಳಲ್ಲಿ ಮೆರವಣಿಗೆ ನಡೆಸುತ್ತಿದ್ದಾರೆ. ಸ್ವತಂತ್ರ ಮೇಲ್ವಿಚಾರಣಾ ಗ್ರೂಪ್ OVD-ಇನ್ಫೋ ಪ್ರಕಾರ, ರಷ್ಯಾದಲ್ಲಿ ಒಟ್ಟು 7,000 ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ಪುಟಿನ್ ಅವರ ವಿರೋಧಿಗಳಲ್ಲಿ ಪ್ರಮುಖರಾದ ನಾವೆಲ್ನಿ ಅವರು ಜರ್ಮನಿಯಿಂದ ಹಿಂದಿರುಗಿದ ನಂತರ ಕಳೆದ ವರ್ಷ ಜೈಲಿನಲ್ಲಿದ್ದಾರೆ. ಶಾಂತಿ ಸ್ಥಾಪನೆಗಾಗಿ ನಾವು ಬೀದಿಗಿಳಿದು ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.

    ಉಕ್ರೇನ್‌ ವಿರುದ್ಧ ಯುದ್ಧ ಘೋಷಿಸಿರುವ ಪುಟಿನ್‌ ವಿರುದ್ಧ ರಷ್ಯನ್ನರಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪುಟಿನ್‌ ನಡೆಗೆ ರಷ್ಯಾ ತಾರಾಗಣ, ಕ್ರೀಡಾಪಟುಗಳು, ಚಿಂತಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ನಾನು ಯುಎಸ್‌ಎಸ್‌ಆರ್‌ನವನು. ನಾನು ಹುಟ್ಟಿದ್ದೇ ಇಲ್ಲಿ. ಬಾಲ್ಯದಿಂದಲೂ ಈ ನೆಲದಲ್ಲಿ ಆಡಿ ಬೆಳೆದಿದ್ದೇನೆ. ಶಾಂತಿಗಾಗಿ ಬೀದಿಗಿಳಿದು ಹೋರಾಡಲು ಕರೆ ನೀಡುತ್ತೇನೆ. ಆದರೆ ಪುಟಿನ್‌ ರಷ್ಯಾದವನಲ್ಲ ಎಂದು ನಾವೆಲ್ನಿ ತಿಳಿಸಿದ್ದಾರೆ.