Tag: russia

  • ಜೀವ ಭಯದಲ್ಲಿ 40ಕಿ.ಮೀ ಯುದ್ಧಭೂಮಿಯಲ್ಲೇ ನಡೆದುಕೊಂಡು ಹೋದ ವಿದ್ಯಾರ್ಥಿಗಳು

    ಜೀವ ಭಯದಲ್ಲಿ 40ಕಿ.ಮೀ ಯುದ್ಧಭೂಮಿಯಲ್ಲೇ ನಡೆದುಕೊಂಡು ಹೋದ ವಿದ್ಯಾರ್ಥಿಗಳು

    ಬೀದರ್ : ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ನವೀನ್ ಸಾವಿನ ಬೆನ್ನಲ್ಲೇ ಉಕ್ರೇನ್‍ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದ್ದು ಬೀದರ್ ಮೂಲದ ಶಶಾಂಕ್ ಹಾಗೂ ವಿವೇಕ್ ಇನ್ನೂ ಖಾರ್ಕಿವ್‍ನಲ್ಲೇ ಸಿಲುಕಿರುವುದು ಆತಂಕಕ್ಕೆ ಕಾರಣವಾಗಿದೆ.

    ಆತಂಕದಲ್ಲಿ ನಿನ್ನೆ ಖಾರ್ಕಿವ್‍ನಿಂದ ರೈಲ್ವೆ ಸ್ಟೇಷನ್‍ಗೆ ಹೋಗಿ ರೈಲು ಸಿಗದ ಕಾರಣ ಅಲ್ಲಿಂದ ಖಾರ್ಕಿವ್‍ನ ಪಿಶೋಚಿನ್‍ಗೆ ನಡೆದುಕೊಂಡು ಹೋಗಿ ತಂಗಿದ್ದಾರೆ. ಕ್ಷಿಪಣಿ, ಮಿಸೈಲ್ ಗಳ ಸ್ಫೋಟ, ಟ್ಯಾಂಕರ್ ಸದ್ದಿನ ನಡುವೆ ಜೀವ ಭಯದಲ್ಲಿಯೇ 40 ಕಿಲೋ ಮೀಟರ್ ನಡೆದುಕೊಂಡು ಹೋಗುತ್ತಾ ವಿದ್ಯಾರ್ಥಿಗಳು ಪಿಶೋಚಿನ್ ನಗರ ತಲುಪಿದ್ದಾರೆ. ಇದನ್ನೂ ಓದಿ: ನಮಗೆ ಇನ್ನೂ ಐದು ವರ್ಷ ಕೊಡಿ : ಅಮಿತ್ ಶಾ

    ಯುದ್ಧದ ನಡುವೆ ನಡೆಯುತ್ತಾ ಸಾಗಿದ ರೋಚಕದ ಬಗ್ಗೆ ವೀಡಿಯೋ ಕಾಲ್‍ನಲ್ಲಿ ತಾಯಿ ಜೊತೆ ಶಶಾಂಕ್ ಹಂಚಿಕೊಂಡಿದ್ದಾರೆ. ಇನ್ನೂ ಉಳಿದ ಅಮಿತ್  ಬಹುತೇಕ ಸೇಫಾಗಿದ್ದು ಖಾರ್ಕಿವ್‍ನಿಂದ ರೈಲು ಮೂಲಕ ಲ್ವಿವ್, ಲ್ವಿವ್ ಟೂ ಪೋಲ್ಯಾಂಡ್ ಕಡೆಯಿಂದ ಬರುತ್ತಿದ್ದಾರೆ. ಇದನ್ನೂ ಓದಿ: ವೆಲ್ ಕಮ್ ಬ್ಯಾಕ್! ನಿಮ್ಮ ಕುಟುಂಬಗಳು ನಿಮಗಾಗಿ ಉಸಿರು ಬಿಗಿಹಿಡಿದು ಕಾಯುತ್ತಿವೆ: ಸ್ಮೃತಿ ಇರಾನಿ

    ಬಸವಕಲ್ಯಾಣದ ವೈಷ್ಣವಿ ಕೂಡಾ ಖಾರ್ಕಿವ್ ನಿಂದ ರೈಲು ಮೂಲಕ ಹಂಗೇರಿಗೆ ಬಂದು ಸೇಫಾಗಿದ್ದು ಖಾರ್ಕಿವ್‍ನಲ್ಲಿಯೇ ಉಳಿದಿದ್ದಾರೆ. ಇದರಿಂದ ಇಬ್ಬರು ವಿದ್ಯಾರ್ಥಿಗಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

  • 7000 ರಷ್ಯಾ ಯೋಧರ ಸಾವು: ಉಕ್ರೇನ್ ಅಧ್ಯಕ್ಷ

    7000 ರಷ್ಯಾ ಯೋಧರ ಸಾವು: ಉಕ್ರೇನ್ ಅಧ್ಯಕ್ಷ

    ಕೀವ್: ರಷ್ಯಾ ಉಕ್ರೇನ್ ಮೇಲೆ ಯುದ್ಧವನ್ನು ಸಾರಿ ವಾರವೇ ಕಳೆದಿದೆ. ಯುದ್ಧ ಸಾರಿದ ದೇಶವೇ 7,000 ಯೋಧರನ್ನು ಕಳೆದುಕೊಂಡಿದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ.

    ರಷ್ಯಾ ಪಡೆ ಉಕ್ರೇನ್ ಪ್ರಮುಖ ನಗರಗಳನ್ನು ವಷಕ್ಕೆ ಪಡೆದುಕೊಂಡಿದ್ದರೂ ಅವರು ದಿಕ್ಕು ದೆಸೆ ಇಲ್ಲದವರಂತೆ ವರ್ತಿಸುತ್ತಿದ್ದಾರೆ. ಇದೀಗ ನಾವು ಅವರಿಗೆ ತಿರುಗೇಟು ನೀಡುತ್ತಿದ್ದೇವೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

    ನಾವು ಕೇವಲ 1 ವಾರದಲ್ಲಿ ಶತ್ರುಗಳ ಯೋಜನೆಯನ್ನು ಬುಡಮೇಲು ಮಾಡಿದ್ದೇವೆ. ನಮ್ಮದೇ ಜನರ ಮೇಲೆ ವಿಷ ಬೀಜ ಬಿತ್ತಿ ದೇಶದ ವಿರುದ್ಧ ನಿಲ್ಲುವಂತೆ ರಷ್ಯಾ ಮಾಡಿತ್ತು. ನಮ್ಮ ಜನರಲ್ಲಿ ಸಹೃದಯತೆ ಹಾಗೂ ಸ್ವತಂತ್ರತೆಗಳೆಂಬ ಎರಡು ವಿಚಾರಗಳಿವೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕ್ ಇನ್ ಇಂಡಿಯಾದಲ್ಲಿ ಇನ್ನೂ ದೊಡ್ಡದಾಗಿ ಯೋಚಿಸಬೇಕಿದೆ: ಮೋದಿ

    ನಾವೀಗ ರಷ್ಯಾದ ಸೈನಿಕರನ್ನು ನಿಯಂತ್ರಿಸುತ್ತಿದ್ದೇವೆ. ಭದ್ರತಾ ಪಡೆ, ಸಿಬ್ಬಂದಿ, ಸ್ಥಳೀಯರು ಎಲ್ಲರೂ ಸೇರಿ ಅವರನ್ನು ಸೆರೆ ಹಿಡಿದು ಅವರಿಗೆ ನಾವು ತಿರುಗೇಟು ನೀಡುತ್ತಿದ್ದೇವೆ. ಅವರು ಏಕೆ ಇಲ್ಲಿದ್ದಾರೆ ಎಂಬ ಬಗ್ಗೆ ಗೊಂದಲ ಹೊಂದಿದ್ದಾರೆ. ಅವರು ಸಂಖ್ಯೆಯಲ್ಲಿ ನಮಗಿಂತ 10 ಪಟ್ಟು ಹೆಚ್ಚಿದ್ದರೂ ಅವರಲ್ಲಿ ಶಕ್ತಿಯಿಲ್ಲ ಎಂದು ಝೆಲೆನ್ಸ್ಕಿ ರಷ್ಯಾದ ಯೋಧರನ್ನು ವ್ಯಂಗ್ಯ ಮಾಡಿದ್ದಾರೆ.

  • ಉಕ್ರೇನ್‍ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ನಿಂತ ಸೋನು ಸೂದ್

    ಉಕ್ರೇನ್‍ನಲ್ಲಿ ಸಿಲುಕಿದ ವಿದ್ಯಾರ್ಥಿಗಳ ರಕ್ಷಣೆಗೆ ನಿಂತ ಸೋನು ಸೂದ್

    ಮುಂಬೈ: ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಬಾಲಿವುಡ್ ನಟ ಸೋನು ಸೂದ್ ಮುಂದಾಗಿದ್ದಾರೆ.

    ಉಕ್ರೇನ್ ಮೇಲೆ ರಷ್ಯಾ ತನ್ನ ದಾಳಿಯನ್ನು ಮುಂದುವರಿಸಿದೆ. ರಷ್ಯಾ ಹಾಗೂ ಉಕ್ರೇನ್ ಸಂಘರ್ಷದ ನಡುವೆ ಸಾವಿರಾರು ಭಾರತೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ. ಈ ಮಧ್ಯೆ ನಟ ಸೋನು ಸೂದ್ ಆಪತ್ಭಂದವನಂತೆ ಅನೇಕ ವಿದ್ಯಾರ್ಥಿಗಳನ್ನು ರಕ್ಷಿಸಲು ಹೆಜ್ಜೆ ಮುಂದಿಟ್ಟಿದ್ದಾರೆ. ಇನ್ನೂ ಹಲವಾರು ವಿದ್ಯಾರ್ಥಿಗಳು ಸೋನು ಸೂದ್ ಚಾರಿಟಿ ಸಂಸ್ಥೆಯಿಂದ ಸಹಾಯ ಪಡೆದಿರುವ ಬಗ್ಗೆ ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಸುರಕ್ಷಿತವಾಗಿ ಮನೆಗೆ ತೆರಳಲು ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ಈ ಮುನ್ನ ಕೋವಿಡ್-19 ಲಾಕ್‍ಡೌನ್ ವೇಳೆ ವಲಸಿಗರಿಗೆ ತಮ್ಮ ಮನೆಗಳಿಗೆ ತೆರಳಲು ಸಹಾಯ ಮಾಡುವ ಮೂಲಕ ಸೋನುಸೂದ್ ಪ್ರಶಂಸೆ ಪಡೆದಿದ್ದರು. ಇದೀಗ ಯುದ್ಧ ಪೀಡಿತ ಉಕ್ರೇನ್‍ನ ಖಾರ್ಕಿವ್ ನಗರದಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ವಿದ್ಯಾರ್ಥಿಗಳು ತಮ್ಮ ತಾಯ್ನಾಡಿಗೆ ಸುರಕ್ಷಿತವಾಗಿ ತಲುಪಲು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿರುವ ಸೋನು ಸೂದ್ ಕುರಿತಂತೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಇದೇ ವಿಚಾರವಾಗಿ ಈ ಮುನ್ನ ಸೋನು ಸೂದ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಸ್ಥಳೀಯ ಟ್ಯಾಕ್ಸಿಗಳನ್ನು ವಿದ್ಯಾರ್ಥಿಗಳಿರುವ ಸ್ಥಳಕ್ಕೆ ಕಳುಹಿಸಲಾಗುತ್ತದೆ. ಅಲ್ಲಿಂದ ಅವರನ್ನು ಖಾರ್ಕಿವ್‍ನ ರೈಲು ನಿಲ್ದಾಣಕ್ಕೆ ಕರೆದೊಯ್ಯಲಾಗುತ್ತದೆ. ನಂತರ ಅವರನ್ನು ರೈಲಿನಲ್ಲಿ ಎಲ್ವಿವ್ ನಗರದ ಸುರಕ್ಷಿತ ಪ್ರದೇಶಕ್ಕೆ ಕರೆದೊಯ್ಯಲಾಗುತ್ತದೆ. ಅವರನ್ನು ಪೋಲಿಷ್ ಗಡಿಗೆ ಸಾಗಿಸಲು ಬಸ್‍ಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಯುದ್ಧದ ನಡುವೆ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

    ಉಕ್ರೇನ್‍ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು ಗಡಿ ದಾಟಿ ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋಗಲು ಸಹಾಯ ಮಾಡಿದ್ದೇವೆ. ಹೀಗೆ ಸಹಾಯ ಮಾಡಲು ಪ್ರಯತ್ನಿಸುತ್ತಿರೋಣ, ಅವರಿಗೆ ನಮ್ಮ ಅವಶ್ಯಕತೆ ಇದೆ. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.

    ವಿದ್ಯಾರ್ಥಿಯೊಬ್ಬರು ಸೋನು ಸೂದ್ ಸಹಾಯ ಕುರಿತಂತೆ ವೀಡಿಯೋವೊಂದನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಇದಕ್ಕೆ ಸೋನು ಸುದ್ ಅವರು, ಅದು ನನ್ನ ಕೆಲಸ. ನಾನು ನನ್ನ ಕೆಲಸವನ್ನು ಮಾಡಿದ್ದೇನೆ. ಇದರಿಂದ ನನಗೆ ಸಂತಸವಾಗಿದೆ. ನಿಮ್ಮೆಲ್ಲರ ಬೆಂಬಲಕ್ಕೆ, ಭಾರತ ಸರ್ಕಾರದಕ್ಕೆ ದೊಡ್ಡ ಧನ್ಯವಾದ ಎಂದು ಪ್ರತಿಕ್ರಿಯಿಸಿದ್ದಾರೆ.

  • ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ: ಪ್ರತಾಪ್ ಸಿಂಹ

    ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ: ಪ್ರತಾಪ್ ಸಿಂಹ

    ಮೈಸೂರು: ತನ್ನ ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಕೋನದಲ್ಲಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ಹೀಗಾಗಿ ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

    ಸುದ್ದಿಗಾರರೊಂದಿಎಗ ಮಾತನಾಡಿದ ಅವರು, ನೆಹರು ಕಾಂಗ್ರೆಸ್ ನವರು ನಮಗೆ ವಿದೇಶಾಂಗ ನೀತಿ ಬಗ್ಗೆ ಪಾಠ ಹೇಳುತ್ತಿದ್ದಾರೆ. ಅವರ ಆಡಳಿತದ ವಿದೇಶಾಂಗ ನೀತಿ ಹೇಗೆ ಇತ್ತು. ಅದರಿಂದ ದೇಶಕ್ಕೆ ಆದ ನಷ್ಟ ಎಷ್ಟು ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಕಾಂಗ್ರೆಸ್ ನವರಿಗೆ ವಿದೇಶಾಂಗ ನೀತಿಯೇ ಗೊತ್ತಿಲ್ಲ. ಚೀನಾ ಟಿಬೆಟ್ ಕಬಳಿಸಿದ್ದಾಗ ಸುಮ್ಮನೆ ಇದ್ದ ಕಾಂಗ್ರೆಸ್ ಈಗ ವಿದೇಶಾಂಗ ನೀತಿಯ ಪಾಠ ನಮಗೆ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ರಷ್ಯಾದ ವಿರೋಧ ನಾವು ಹೋಗಲು ಕಷ್ಟವಿದೆ. ತನ್ನ ಭದ್ರತೆ, ಸುರಕ್ಷತೆ ದೃಷ್ಟಿಕೋನದಲ್ಲಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ರಷ್ಯಾದ ಮೇಲೆ ಭಾರತ ಅತಿ ಹೆಚ್ಚು ಅವಲಂಬಿತವಾಗಿದೆ. ಈ ಅವಲಂಬನೆಗೆ ಸೃಷ್ಟಿಸಿದ್ದು ಕಾಂಗ್ರೆಸ್. ರಷ್ಯಾವನ್ನು ಎದುರು ಹಾಕಿಕೊಂಡರೆ ಮುಂದೆ ನಮಗೆ ಯುದ್ಧದಂತಹ ಸಂದರ್ಭ ಸೃಷ್ಟಿಯಾದರೆ ರಷ್ಯಾ ನಮ್ಮ ನೆರವಿಗೆ ಬರುತ್ತಾ?. ಹೀಗಾಗಿ ಪ್ರಧಾನಿಗಳು ಈಗ ತಟಸ್ಥ ನಿಲುವಿಗೆ ಬಂದಿದ್ದಾರೆ.ಅಲ್ಲಿನ ಎಲ್ಲಾ ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯ ವ್ಯವಸ್ಥಿತವಾಗಿ ಸಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡರು.

    ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ನೀಟ್ ಬ್ಯಾನ್ ಕ್ಯಾಂಪೈನ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ನೀಟ್ ತರಲಾಗಿದೆ. 138 ಕೋಟಿ ಜನಸಂಖ್ಯೆ ದೇಶಕ್ಕೆ, ಒಂದೂವರೆ ಲಕ್ಷ ಮೆಡಿಕಲ್ ಸೀಟ್ ಇದೆ. ಇದರಿಂದ ಪೈಪೋಟಿ ಹೆಚ್ಚಾಗಿದೆ. ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜ್ ಬರಬೇಕು. ಆಗ ಸೀಟ್ ಹೆಚ್ಚಾಗುತ್ತೆ. ಎಲ್ಲರಿಗೂ ಅವಕಾಶ ಸಿಗುತ್ತೆ. ಉಕ್ರೇನ್‍ನಲ್ಲಿ ಓದುವುದಕ್ಕೆ ಹೋಗಿರುವವರು ಕೂಡ ಬುದ್ಧಿವಂತರು ಎಂದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

    ನವೀನ್ ಸಾವಿನ ಹಿನ್ನೆಲೆಯಲ್ಲಿ ಕೆಲವರು ಮೀಸಲಾತಿ ವಿರುದ್ಧ ಕೆಲವರು ಮಾತಾಡುತ್ತಿದ್ದಾರೆ. ಪ.ಜಾತಿ, ಪ. ಪಂಗಡ ಎಷ್ಟೋ ವರ್ಷ ಶೋಷಣೆಗೆ ಒಳಗಾಗಿದೆ. ಅವರಿಗೆ ಮೀಸಲಾತಿ ಕೊಟ್ಟಿರುವುದರಲ್ಲಿ ಯಾವ ತಪ್ಪು ಇಲ್ಲ. ಜಾತಿ ತಾರತಮ್ಯ ನಿವಾರಣೆಯಾಗಿ ಸಮಾಜ ಜಾತಿ ಬಂಧನದಿಂದ ಹೊರ ಬರುವವರೆಗೂ ಮೀಸಲಾತಿ ಇರುತ್ತೆ. ಮೀಸಲಾತಿ ಇವತ್ತು ಇರುತ್ತೆ ಮುಂದೆಯೂ ಇರುತ್ತೆ. ಯಾರದ್ದೋ ಮನೆಯ ಗಂಟು ತಂದು ಅವರಿಗೆ ಕೊಡುತ್ತಿದ್ದೇವೆ ಎನ್ನುವ ರೀತಿ ಮಾತಾಡಬೇಡಿ. ಶೋಷಣೆ ಒಳಗಾದ ಸಹೋದರರಿಗೆ ಮೀಸಲಾತಿ ಕೊಡುತ್ತಿದ್ದೇವೆ. ಇದರಲ್ಲಿ ತಪ್ಪು ಏನಿದೆ ಎಂದು ಸಂಸದರು ಪ್ರಶ್ನಿಸಿದರು.

  • ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಜೀವಂತ ಇದ್ದವ್ರನ್ನೇ ತರೋದು ಕಷ್ಟವಿದ್ದು, ನವೀನ್ ಶವ ತರುವುದು ಇನ್ನೂ ಡಿಫಿಕಲ್ಟ್: ಬೆಲ್ಲದ್

    ಧಾರವಾಡ: ಜೀವಂತವಾಗಿರುವವರನ್ನೇ ಭಾರತಕ್ಕೆ ವಾಪಸ್ ಕರೆತರುವುದು ಕಷ್ಟವಿದೆ. ಹೀಗಿರುವಾಗ ನವೀನ್ ಮೃತದೇಹ ತರುವುದು ಇನ್ನೂ ಕಷ್ಟವಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಮಾನದಲ್ಲಿ ಶವ ತರಲು ಹೆಚ್ಚು ಜಾಗಬೇಕು. ಶವ ಇರುವ ಜಾಗದಲ್ಲೇ 8 ಜನ ತರಬಹುದು. ಭಾರತ ಸರ್ಕಾರದ ವಿದೇಶಾಂಗ ಇಲಾಖೆ ಎಂಬಿಬಿಎಸ್ ವಿದ್ಯಾರ್ಥಿ ಶವ ತರಲು ಪ್ರಯತ್ನ ಮಾಡುತ್ತಿದೆ. ಸ್ವತಃ ಪ್ರಧಾನಿ ಮೋದಿ ಅವರೇ ಮುತುವರ್ಜಿ ವಹಿಸಿದ್ದಾರೆ. ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನ ನಡೆದಿದೆ. ಅಲ್ಲಿ ಯುದ್ದ ಭೂಮಿ ಇದೆ. ಮಾಧ್ಯಮದವರೇ ಅದನ್ನ ತೊರಿಸುತ್ತಿದ್ದಾರೆ. ಸಾಧ್ಯವಾದರೆ ಮೃತದೇಹ ತರುವ ಕೆಲಸ ಆಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧ ನಿಲ್ಲಿಸಿ ಅಂತ ಪುಟಿನ್‌ಗೆ ನಾವು ಹೇಳಬಹುದೇ: ಸಿಜೆಐ ಪ್ರಶ್ನೆ

    ಅಲ್ಲಿ ಇದ್ದವರು ಒತ್ತಡದಲ್ಲಿ ಇದ್ದಾರೆ. ರೊಮೇನಿಯಾಗೆ ಬಂದಿದ್ದಾರೆ ಅಂದರೆ ಸೇಫ್ ಆಗಿದ್ದಾರೆ ಎಂದರ್ಥ. ಅಲ್ಲಿ ನಮ್ಮ ವಿದೇಶಾಂಗ ಇಲಾಖೆ ಅವರಿಗೆ ಊಟ ಹಾಗೂ ವಸತಿ ವ್ಯವಸ್ಥೆ ಮಾಡಿದೆ. ಅವರನ್ನು ತರುವ ಕೆಲಸ ಬೇಗ ಆಗಲಿದೆ. ನಮ್ಮ ವಿದ್ಯಾರ್ಥಿಗಳು ಇಷ್ಟು ದೊಡ್ಡ ಪ್ರಮಾಣದಲ್ಲಿ ಅಲ್ಲಿ ಯಾಕೆ ಎಂಬಿಬಿಎಸ್ ಗೆ ಹೋಗುತ್ತಿದ್ದಾರೆ. ಅದಕ್ಕೆ ಕಾರಣ ನಮ್ಮಲ್ಲಿ ವೈದ್ಯಕೀಯ ಕಲಿಯುವುದು ದೊಡ್ಡ ಖರ್ಚು ಎಂದು ಅಸಮಾಧಾನ ಹೊರಹಾಕಿದರು. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ನಮ್ಮಲ್ಲ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಇದೆ. ಇದೊಂದು ಖಾಸಗಿ ಸಂಸ್ಥೆ. ಇವರು ಎಂಬಿಬಿಎಸ್ ಸಿಟ್ ಅಭಾವ ಸೃಷ್ಟಿ ಮಾಡಿದ್ದಾರೆ. ಹೆಚ್ಚು ಮೆಡಿಕಲ್ ಸಿಟ್ ಕೊಡುವಂತೆ ಇಲ್ಲ. ಅದರಲ್ಲೂ ಭ್ರಷ್ಟಾಚಾರ ಇರುತ್ತೆ. ಈ ಎಂಸಿಐ ಮೇಲೆ ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕಿದೆ. ಇದನ್ನ ಬೈಪಾಸ್ ಮಾಡಬೇಕು. ಅದಕ್ಕೆ ಇರುವ ಅಧಿಕಾರ ಕಟ್ ಮಾಡಬೇಕು. ಬೇರೆ ರಾಷ್ಟ್ರ ದಂತೆಯೇ ನಮ್ಮಲ್ಲಿ ಕಡಿಮೆ ಖರ್ಚಿನಲ್ಲಿ ಮೆಡಿಕಲ್ ಯಾಕೆ ಮಾಡಬಾರದು ಎಂದು ಶಾಸಕರು ಪ್ರಶ್ನಿಸಿದರು. ಇದನ್ನೂ ಓದಿ: ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

  • ಯುದ್ಧದ ನಡುವೆ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

    ಯುದ್ಧದ ನಡುವೆ ಬಾಂಬ್ ಶೆಲ್ಟರ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ

    ಕೀವ್: ಉಕ್ರೇನ್‍ನ ಒಡೆಸಾ ನಗರದ ಬಾಂಬ್ ಶೆಲ್ಟರ್‌ನಲ್ಲಿ ಜೋಡಿಯೊಂದು ವಿವಾಹವಾಗಿದ್ದು, ಮದುವೆಯ ವೇಳೆ ಘಂಟೆ ಬದಲಿಗೆ ವೈಮಾನಿಕ ದಾಳಿಯ ಸೈರನ್ ರಿಂಗಣಿಸಲಾಯಿತು.

    ಉಕ್ರೇನ್‍ನ ಕೆಲವು ಭಾಗಗಳಲ್ಲಿ ರಷ್ಯಾ ಪಡೆ ಕ್ಷಿಪಣಿ ದಾಳಿ ಮತ್ತು ಶೆಲ್ ದಾಳಿಯನ್ನು ನಡೆಸುತ್ತಿರುವ ನಡುವೆಯೂ ದಂಪತಿಗಳು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫೋಟೋದಲ್ಲಿ ವಧು ನಗುತ್ತಾ ಕೈಯಲ್ಲಿ ಹೂವು ಹಿಡಿದುಕೊಂಡಿದ್ದರೆ, ವರ ಡಾಕ್ಯುಮೆಂಟ್‍ಗೆ ಸಹಿ ಹಾಕುತ್ತಿರುವುದನ್ನು ಕಾಣಬಹುದಾಗಿದೆ.

    ಬುಧವಾರ ಉಕ್ರೇನಿಯನ್ ಅಧಿಕಾರಿಗಳು ರಷ್ಯಾದ ಸೈನಿಕರು 8ನೇ ದಿನದಂದು ದಕ್ಷಿಣ ನಗರವಾದ ಖೆರ್ಸನ್ ಅನ್ನು ವಶಪಡಿಸಿಕೊಂಡಿದ್ದಾರೆ ಮತ್ತು ಖೆರ್ಸನ್ ನಗರ ಇದೀಗ ರಷ್ಯಾದ ನಿಯಂತ್ರಣಕ್ಕೆ ಒಳಗಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ನವೀನ್ ಸಾವು – ಬಿಜೆಪಿ ನಾಯಕರ ವಿರುದ್ಧ ಸ್ಟಾಲಿನ್ ಕಿಡಿ

    ಉಕ್ರೇನ್‍ನ ಕೆಲವು ಭಾಗಗಳಲ್ಲಿ ಭಾರೀ ಶೆಲ್ ದಾಳಿ, ಬಾಂಬ್ ದಾಳಿ ಮತ್ತು ಸಂಘರ್ಷದ ನಡುವೆ 2,000ಕ್ಕೂ ಹೆಚ್ಚು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್‍ನ ರಾಜ್ಯ ತುರ್ತು ಸೇವೆ ತಿಳಿಸಿದೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

  • ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ

    ಕಳೆದ 4 ದಿನಗಳಿಂದ ಮಗ ಸಂಪರ್ಕಕ್ಕೆ ಸಿಗುತ್ತಿಲ್ಲ: ಪೋಷಕರು ಆತಂಕ

    ಮಡಿಕೇರಿ: ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗಿ ಇಂದಿಗೆ ಎಂಟು ದಿನಗಳಾಗಿದ್ದು, ಹಾವೇರಿಯ ನವೀನ್ ಸಾವಿನಪ್ಪಿದ ನಂತರ ಇದೀಗ ಪೋಷಕರಲ್ಲಿ ಅತಂಕ ಮನೆ ಮಾಡಿದೆ. ಅದರಲ್ಲೂ ಕೊಡಗಿನ ಓರ್ವ ವಿದ್ಯಾರ್ಥಿಯೊಬ್ಬರು ಸಂಪರ್ಕಕ್ಕೆ ಸಿಗದೇ ಅವರ ಕುಟುಂಬ ವರ್ಗದಲ್ಲಿ ಆತಂಕ ಸೃಷ್ಟಿಯಾಗಿದೆ.

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮದ ಮೊಹಮ್ಮದ್ ಯೂಸುಫ್ ಅವರ ಪುತ್ರ ಶಾರುಖ್ ಅವರು, ಕಳೆದ ನಾಲ್ಕು ದಿನಗಳಿಂದ ಸಂಪರ್ಕಕ್ಕೆ ಸಿಗದೇ ಇರುವುದರಿಂದ ಮನೆಯಲ್ಲಿ ಇರುವ ಕುಟುಂಬಸ್ಥರು ಕಂಗಾಲಾಗಿದ್ದಾರೆ. ಇದನ್ನೂ ಓದಿ: ನಮಗೆ ಇನ್ನೂ ಐದು ವರ್ಷ ಕೊಡಿ : ಅಮಿತ್ ಶಾ

    ನಮ್ಮ ಮಗ ನಾಲ್ಕು ದಿನಗಳ ಕಾಲ ಬಂಕರ್‌ನಲ್ಲಿ ಆಸರೆ ಪಡೆದಿದ್ದ ಶಾರುಖ್ ಸೇರಿ 20 ಯುವಕರು ಬಂಕರ್‌ನಲ್ಲಿ ಆಶ್ರಯ ಪಡೆದಿದ್ದರು. ಬಂಕರ್‌ನಲ್ಲಿ ಉಸಿರಾಟಕ್ಕೆ ತೊಂದರೆ ಆಗುತ್ತಿದ್ದ ಹಿನ್ನೆಲೆಯಲ್ಲಿ ಯುವಕರು ಬಂಕರ್‌ನಿಂದ ಹೊರಬಂದು ರೈಲ್ವೇ ನಿಲ್ದಾಣದ ಕಡೆಗೆ ನಡೆದು ಹೊರಟಿದ್ದಾರೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರುವ ಪ್ರಯತ್ನ ನಿಲ್ಲಲ್ಲ: ಮೋದಿ

    ಸೋಮವಾರ ಸಂಜೆಯಿಂದ ಇದುವರೆಗೆ ಸಂಪರ್ಕಕ್ಕೆ ತಮ್ಮ ಮಗ ಬಂದಿಲ್ಲ. ಏನಾದರೂ ಮಾಡಿ ಪ್ರಾಣ ಉಳಿಸಿಕೊಂಡು ಬಂದರೆ ಸಾಕು ಎಂದು ಬೇಡುತ್ತಿರುವ ವಿದ್ಯಾರ್ಥಿಯ ತಂದೆ, ತಾಯಿ ದೇವರ ಮೇಲೆ ಭಾರ ಹಾಕಿ ಕಾಯುತ್ತಿದ್ದಾರೆ.

  • ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

    ಉಕ್ರೇನ್ ಮೇಲೆ ರಷ್ಯಾ ಮಾಡಿದ್ದ ಆರೋಪ ನಿರಾಕರಿಸಿದ ಭಾರತ!

    ನವದೆಹಲಿ: ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂಬ ರಷ್ಯಾದ ಗಂಭೀರ ಆರೋಪವನ್ನು ಭಾರತ ನಿರಾಕರಿಸಿದೆ.

    ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ವಿದ್ಯಾರ್ಥಿಗಳ ಒತ್ತೆಯಾಳಾಗಿರುವ ಕುರಿತು ಇದುವರೆಗೆ ಯಾವುದೇ ವರದಿಗಳೂ ಬಂದಿಲ್ಲ ಎಂದು ಸ್ಪಷ್ಟನೆ ನೀಡಿದೆ. ಖಾರ್ಕೀವ್‍ನಿಂದ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ದೇಶದ ಪಶ್ಚಿಮ ಭಾಗದ ಕಡೆಯಿಂದ ವಿದ್ಯಾರ್ಥಿಗಳನ್ನು ಹೊರಗೆ ಸಾಗಿಸಲು ವಿಶೇಷ ರೈಲುಗಳ ವ್ಯವಸ್ಥೆ ಕಲ್ಪಿಸುವಂತೆ ನಾವು ಉಕ್ರೇನ್ ಅಧಿಕಾರಿಗಳ ನೆರವು ಕೋರಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದ ಯುದ್ಧನೌಕೆಗಳು ಕ್ರೈಮಿಯಾವನ್ನು ಬಿಟ್ಟು ಒಡೆಸ್ಸಾದತ್ತ ಹೋಗುತ್ತಿವೆ: ಅಮೇರಿಕ

    ಉಕ್ರೇನ್‍ನಲ್ಲಿನ ನಮ್ಮ ರಾಯಭಾರ ಕಚೇರಿಯು ಅಲ್ಲಿರುವ ಭಾರತೀಯ ಪ್ರಜೆಗಳ ಜೊತೆ ನಿರಂತರ ಸಂಪರ್ಕದಲ್ಲಿದೆ. ಉಕ್ರೇನ್ ಅಧಿಕಾರಿಗಳ ಸಹಕಾರದೊಂದಿಗೆ ಅನೇಕ ವಿದ್ಯಾರ್ಥಿಗಳು ನಿನ್ನೆ ಖಾರ್ಕೀವ್ ತೊರೆದಿದ್ದಾರೆ. ರಷ್ಯಾ, ರೊಮೇನಿಯಾ, ಪೋಲ್ಯಾಂಡ್, ಹಂಗೆರಿ, ಸ್ಲೊವೇಕಿಯಾ ಮತ್ತು ಮಾಲ್ಡೋವಾ ಸೇರಿದಂತೆ ಈ ಪ್ರದೇಶದ ದೇಶಗಳ ಜೊತೆಗೆ ಪರಿಣಾಮಕಾರಿಯಾಗಿ ಸಮನ್ವಯ ಸಾಧಿಸುತ್ತಿದ್ದೇವೆ. ಇದನ್ನೂ ಓದಿ: ನಾನು ಮತ್ತೆ ಅಧ್ಯಕ್ಷನಾಗಿದ್ದರೆ ರಷ್ಯಾ-ಉಕ್ರೇನ್‌ ಯುದ್ಧ ನಡೆಯುತ್ತಿರಲಿಲ್ಲ: ಟ್ರಂಪ್‌

    ಈ ಹಿಂದೆ ರಷ್ಯಾ ರಕ್ಷಣಾ ಸಚಿವಾಲಯವು ಉಕ್ರೇನ್ ವಿರುದ್ಧ ಗಂಭೀರ ಆರೋಪ ಮಾಡಿತ್ತು. ಖಾರ್ಕೀವ್‍ನಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಒತ್ತೆಯಾಳುಗಳನ್ನಾಗಿ ಇಡಲಾಗಿದೆ. ಖಾರ್ಕಿವ್ ನಲ್ಲಿ ದಾಳಿಯಾಗುತ್ತಿದ್ದ ಸಂದರ್ಭದಲ್ಲಿ ಭಾರತೀಯರನ್ನು ಅಲ್ಲಿಂದ ಸ್ಥಳಾಂತರ ಮಾಡಲು ಮುಂದಾದ ರಷ್ಯಾವನ್ನು ಉಕ್ರೇನ್ ತಡೆಹಿಡಿದಿತ್ತು. ಅಲ್ಲದೆ ಭಾರತೀಯರನ್ನು ವಾಪಸ್ ಕರೆದುಕೊಂಡು ಹೋಗಿ ಒತ್ತೆಯಾಳಾಗಿರಿಸಿಕೊಂಡಿತು ಎಂದು ಆರೋಪಿಸಿತ್ತು. ಈ ಆರೋಪಕ್ಕೆ ಉಕ್ರೇನ್ ಪ್ರತ್ಯಾರೋಪ ಮಾಡಿದ್ದು, ರಷ್ಯಾ ಸೇನೆ ಭಾರತ, ಪಾಕಿಸ್ತಾನ, ಚೀನಾ ಮತ್ತು ಇನ್ನಿತರ ದೇಶಗಳ ವಿದ್ಯಾರ್ಥಿಗಳನ್ನು ಸೆರೆಯಾಳುಗಳನ್ನಾಗಿ ಇಟ್ಟುಕೊಂಡಿದೆ ಎಂದಿತ್ತು.

  • ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಒಂದು ವಾರದೊಳಗೆ 1 ಮಿಲಿಯನ್ ಜನ ಉಕ್ರೇನ್‍ನಿಂದ ಪಲಾಯನ: ವಿಶ್ವಸಂಸ್ಥೆ

    ಜಿನೆವಾ: ರಷ್ಯಾದ ಆಕ್ರಮಣದಿಂದ ತತ್ತರಿಸಿ ಹೋಗಿರುವ ಉಕ್ರೇನ್‍ನಿಂದ ಕೇವಲ ಒಂದು ವಾರದಲ್ಲಿ 1 ಮಿಲಿಯನ್ ಜನರು ಪಲಾಯನ ಮಾಡಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದು ಈ ಶತಮಾನದ ಅತಿದೊಡ್ಡ ನಿರಾಶ್ರಿತರ ಬಿಕ್ಕಟ್ಟಾಗಿ ಪರಿಣಮಿಸುವ ಪರಿಸ್ಥಿತಿಯನ್ನು ತೋರಿಸುತ್ತದೆ.

    ವಿಶ್ವ ಬ್ಯಾಂಕ್ 2020ರ ಅಂತ್ಯದಲ್ಲಿ ನಡೆಸಿದ ಎಣಿಕೆಯಲ್ಲಿ ಉಕ್ರೇನ್ ಸುಮಾರು 44 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ ಎಂದು ತಿಳಿಸಿತ್ತು. ಆದರೆ ಒಂದು ವಾರದೊಳಗೆ ಉಕ್ರೇನ್‍ನಿಂದ ಶೇಕಡ 2ಕ್ಕಿಂತ ಹೆಚ್ಚು ಮಂದಿ ಪಲಾಯಾನ ಮಾಡುತ್ತಿದ್ದಾರೆ. ಅಲ್ಲದೇ ಮುಂದೆ 4 ಮಿಲಿಯನ್ ಜನರು ಅಂತಿಮವಾಗಿ ಉಕ್ರೇನ್ ತೊರೆಯಬಹುದು ಎಂದು ವಿಶ್ವಸಂಸ್ಥೆ ಭವಿಷ್ಯ ನುಡಿದಿದೆ. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ

    ಇಮೇಲ್ ಮೂಲಕ ವಿಶ್ವಸಂಸ್ಥೆ ವಕ್ತಾರ ಜೌಂಗ್-ಆಹ್ ಘೆಡಿನಿ-ವಿಲಿಯಮ್ಸ್ ಅವರು, ರಾಷ್ಟ್ರೀಯ ಅಧಿಕಾರಿಗಳು ಸಂಗ್ರಹಿಸಿದ ಎಣಿಕೆಗಳ ಆಧಾರದ ಮೇಲೆ ಮಧ್ಯ ಯೂರೋಪ್‍ನಲ್ಲಿ ಸುಮಾರು 1ಮಿಲಿಯನ್ ಮಂದಿ ದೇಶ ತೊರೆದಿದ್ದಾರೆ ಎಂದು ನಮ್ಮ ಡೇಟಾವು ಸೂಚಿಸುತ್ತಿದೆ.

    ಮತ್ತೊಂದೆಡೆ ವಿಶ್ವಸಂಸ್ಥೆ ಹೈ ಕಮಿಷನರ್ ಫಿಲಿಪ್ಪೊ ಗ್ರಾಂಡಿ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಕೇವಲ ಏಳು ದಿನಗಳಲ್ಲಿ ಉಕ್ರೇನ್‍ನಿಂದ ನೆರೆಯ ದೇಶಗಳಿಗೆ ಒಂದು ಮಿಲಿಯನ್ ನಿರಾಶ್ರಿತರು ವಲಸೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

  • ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ – ರಷ್ಯಾ ಆರೋಪ

    ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿರಿಸಿಕೊಂಡಿದೆ – ರಷ್ಯಾ ಆರೋಪ

    ಕೀವ್: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ತನ್ನ ನಾಗರಿಕರನ್ನು ಸ್ಥಳಾಂತರಿಸಲು ಭಾರತವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಈ ನಡುವೆ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಆರೋಪಿಸಿದೆ.

    ಖಾರ್ಕಿವ್‍ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ರಷ್ಯಾ ಪ್ರಯತ್ನಿಸುತ್ತಿರುವಾಗ ಉಕ್ರೇನ್ ಪಡೆಗಳು ಭಾರತೀಯರನ್ನು ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾದ ರಕ್ಷಣಾ ಸಚಿವಾಲಯ ಬ್ರೀಫಿಂಗ್‍ನಲ್ಲಿ ತಿಳಿಸಿದೆ. ಇದನ್ನು ಓದಿ: ಅಕ್ರಮ ಶಸ್ತ್ರಾಸ್ತ್ರಗಳ ಬದಲಿಗೆ, ಯುಪಿ ಈಗ ಕ್ಷಿಪಣಿಗಳನ್ನು ತಯಾರಿಸುತ್ತಿದೆ: ಅಮಿತ್ ಶಾ

    ಈ ಕುರಿತಂತೆ ಮಾತನಾಡಿದ ಮೇಜರ್ ಜನರಲ್ ಇಗೊರ್ ಕೊನಾಶೆಂಕೋವ್, ನಮ್ಮ ತಿಳಿದುಬಂದಿರುವ ಮಾಹಿತಿಯ ಪ್ರಕಾರ ಖಾರ್ಕಿವ್‍ನಲ್ಲಿ, ಉಕ್ರೇನಿಯನ್ ಅಧಿಕಾರಿಗಳು ಉಕ್ರೇನಿಯನ್ ಪ್ರದೇಶವನ್ನು ತೊರೆದು ಬೇರೆಡೆಗೆ ಹೋಗಲು ಪ್ರಯತ್ನಿಸಿದ ಭಾರತೀಯ ವಿದ್ಯಾರ್ಥಿಗಳ ದೊಡ್ಡ ಗುಂಪನ್ನು ಬಲವಂತವಾಗಿ ಬಂಧಿಸುತ್ತಿದ್ದಾರೆ.

    ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಶಸ್ತ್ರ ಪಡೆಗಳು ಸಿದ್ಧವಾಗಿವೆ ಮತ್ತು ಭಾರತದ ಕಡೆಯವರು ಪ್ರಸ್ತಾಪಿಸಿದಂತೆ ಅವರನ್ನು ತಮ್ಮ ಮಿಲಿಟರಿ ಸಾರಿಗೆ ವಿಮಾನಗಳು ಅಥವಾ ಭಾರತೀಯ ವಿಮಾನಗಳೊಂದಿಗೆ ರಷ್ಯಾದ ಪ್ರದೇಶದಿಂದ ಮನೆಗೆ ಕಳುಹಿಸಲಾಗುತ್ತದೆ ಎಂದಿದ್ದಾರೆ.

    ಮತ್ತೊಂದೆಡೆ ಉಕ್ರೇನ್ ಎಂಎಫ್‍ಎ ಕೂಡ ಭಾರತ, ಪಾಕಿಸ್ತಾನ, ಚೀನಾ ಮತ್ತು ಇತರ ದೇಶಗಳ ವಿದ್ಯಾರ್ಥಿಗಳನ್ನು ರಷ್ಯಾ ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎಂದು ಆರೋಪಿಸಿದೆ. ಇದನ್ನು ಓದಿ: ಪುಟಿನ್‌ ಜೊತೆ 2ನೇ ಬಾರಿ ಮೋದಿ ಮಾತುಕತೆ