Tag: russia

  • ಪುಟಿನ್‌ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?

    ಪುಟಿನ್‌ ತಪ್ಪು ಹೆಜ್ಜೆಗಳು – ರಷ್ಯಾ ಹಿನ್ನಡೆಗೆ ಕಾರಣ ಏನು?

    ಕೀವ್‌: ಉಕ್ರೇನ್-ರಷ್ಯಾ ಯುದ್ಧ 8ನೇ ದಿನ ಪೂರೈಸಿದೆ. ಆದರೆ ಈವರೆಗೂ ಉಕ್ರೇನ್ ಮೇಲೆ ರಷ್ಯಾ ಪೂರ್ಣ ಪ್ರಮಾಣದಲ್ಲಿ ಅಧಿಪತ್ಯ ಸ್ಥಾಪಿಸಿಲ್ಲ. ರಷ್ಯಾ ತನ್ನ ಆಧುನಿಕ ಯುದ್ಧ ವಿಮಾನಗಳನ್ನು ಸಂಪೂರ್ಣವಾಗಿ ಯುದ್ಧರಂಗಕ್ಕೆ ಇಳಿಸಿಲ್ಲ. ಇದರ ಬದಲಿಗೆ ಸೈಬಿರಿಯಾದಲ್ಲಿ ಸೈನಿಕ ಡ್ರಿಲ್ಸ್‌ಗೆ ಪುಟಿನ್ ಆದೇಶ ನೀಡಿದ್ದಾರೆ.

    ಬಾರೆಂಟ್ಸ್ ಸಮುದ್ರದಲ್ಲಿ ಅಣು ಸಬ್ ಮೆರಿನ್ ಕ್ಷಿಪಣಿ ಲಾಂಚರ್‌ಗಳು ಕಾಣಿಸಿಕೊಂಡಿವೆ. ಈ ಮಧ್ಯೆ ರಷ್ಯಾ ಅಂದ್ರೆ ಪುಟಿನ್ ಮಾತ್ರವಲ್ಲ ಎಂದು ಜೈಲಿನಿಂದಲೇ ವಿಪಕ್ಷ ನಾಯಕ ಅಲೆಕ್ಸಿ ನಾವೆಲ್ನಿ ಗುಡುಗಿದ್ದಾರೆ. ರಷ್ಯಾದ ಹೊರಗೆ, ಒಳಗೆ ಪ್ರತಿಘಟನೆ ನಡೆಸಲು ಕರೆ ನೀಡಿದ್ದಾರೆ. ರಷ್ಯಾ ವಿಜ್ಞಾನಿಗಳಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿವೆ.

    ಹಿನ್ನಡೆಗೆ ಕಾರಣ ಏನು?
    ಒಂದು ದೇಶದ ಮೇಲೆ ದಂಡೆತ್ತಿ ಹೋಗುವ ಸೈನ್ಯ ಮೊದಲು ಅಲ್ಲಿನ ವೈಮಾನಿಕ, ಕ್ಷಿಪಣಿ ರಕ್ಷಣಾ ವ್ಯವಸ್ಥೆಗಳನ್ನು ಗಮನದಲ್ಲಿ ಇರಿಸಿಕೊಂಡು ದಾಳಿ ನಡೆಸುತ್ತದೆ. ಈ ಮೂಲಕ ಆ ದೇಶದ ವಾಯುಪ್ರದೇಶದ ಮೇಲೆ ಹಿಡಿತ ಸಾಧಿಸುತ್ತದೆ. ಈ ಮೂಲಕ ಭೂಸೇನೆ ಸಮರ್ಥವಾಗಿ ಹೋರಾಟ ಸಾಗಿಸಲು ಅನುಕೂಲ ಕಲ್ಪಿಸುತ್ತದೆ. ಆದರೆ ಇದು ರಷ್ಯಾ ಕಡೆಯಿಂದ ಆಗಿಲ್ಲ. ಪರಿಣಾಮ, ಉಕ್ರೇನ್ ಯುದ್ಧ ವಿಮಾನಗಳು ಆರ್ಭಟಿಸುತ್ತಿವೆ. ಕಡಿಮೆ ಎತ್ತರದಲ್ಲಿ ಹಾರುತ್ತಾ ರಷ್ಯಾದ ಹೆಲಿಕಾಪ್ಟರ್‌ಗಳನ್ನು ಟಾರ್ಗೆಟ್ ಮಾಡುತ್ತಿವೆ. ಸ್ಟಿಂಗರ್ ಕ್ಷಿಪಣಿ ಮೂಲಕವೂ ರಷ್ಯಾದ ಹೆಲಿಕಾಪ್ಟರ್ ನಾಶ ಮಾಡಲಾಗುತ್ತಿದೆ.  ಇದನ್ನೂ ಓದಿ: ರಷ್ಯಾ- ಉಕ್ರೇನ್‌ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

    ಯುದ್ಧಕ್ಕೆ ರಷ್ಯಾ ಸೈನಿಕರ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ. ರಷ್ಯಾದ ಯುವ ಸೈನಿಕರಿಗೆ ಸರಿಯಾದ ಶಿಕ್ಷಣ ಸಿಕ್ಕಿಲ್ಲ. ಆತ್ಮಸ್ಥೈರ್ಯ ಕಡಿಮೆ. ಆಹಾರ, ಇಂಧನ ಕೊರತೆ ಕಾಡುತ್ತಿದೆ. ತಮ್ಮ ವಾಹನಗಳನ್ನು ತಾವೇ ಉದ್ದೇಶಪೂರ್ವಕವಾಗಿ ಪಂಕ್ಚರ್ ಮಾಡುತ್ತಿದ್ದಾರೆ. ಉಕ್ರೇನ್ ನಗರಗಳ ಮೇಲೆ ದಾಳಿಗೆ ರಷ್ಯನ್ ಸೈನಿಕರು ಹಿಂದೇಟು ಹಾಕುತ್ತಿದ್ದಾರೆ. ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದ್ದಾರೆ ಎಂದು ಅಮೆರಿಕದ ಪೆಂಟಗಾನ್ ವರದಿ ಮಾಡಿದೆ.

    ಉಕ್ರೇನ್ ಸೇನೆ ಬೇಗ ಶರಣಾಗಿ ಕೀವ್ ತಮ್ಮ ವಶವಾಗುತ್ತದೆ. ಅದೇ ಉತ್ಸಾಹದಲ್ಲಿ ದಕ್ಷಿಣ ಪ್ರಾಂತ್ಯ ವಶಕ್ಕೆ ತೆಗೆದುಕೊಳ್ಳಬಹುದು. ಇದಕ್ಕೆ ಉಕ್ರೇನ್‍ನ ವಾಯು ಪ್ರದೇಶದ ಮೇಲೆ ಅಧಿಪತ್ಯ ಸಾಧಿಸುವ ಅಗತ್ಯವಿಲ್ಲ ಎಂದು ಪುಟಿನ್ ಅಂದಾಜಿಸಿದ್ದರು. ಇದೇ ಲೆಕ್ಕದಲ್ಲಿ ರಷ್ಯಾ ಸೈನಿಕ ಕಾರ್ಯಾಚರರಣೆ ಕೈಗೊಂಡಿರಬಹುದು. ಆದ್ರೇ ಈವರೆಗೂ ರಷ್ಯಾದ ಈ ಯುದ್ಧ ತಂತ್ರ ಫಲ ಕೊಟ್ಟಿಲ್ಲ. ಇದನ್ನೂ ಓದಿ: 3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ

    ವಾಯುಪ್ರದೇಶದ ರಕ್ಷಣೆ ನೀಡದೇ ರಷ್ಯಾ ಯುದ್ಧ ಟ್ಯಾಂಕ್ ಕಣಕ್ಕಿಳಿಸಿದೆ. ಉಕ್ರೇನ್‍ಗೆ ಸೇರಿದ ಬೆರಕ್ತಿಯಾರ್ ಟಿಬಿ-62ಯಂತಂಹ ಶಸ್ತ್ರಾಸ್ತ್ರ ಡ್ರೋನ್‍ಗಳು ರಷ್ಯಾದ ಯುದ್ಧ ಟ್ಯಾಂಕ್‍ಗಳಿಗೆ ಅಪಾರ ಹಾನಿ ಉಂಟು ಮಾಡುತ್ತಿವೆ.

    ಶಸ್ತ್ರಾಸ್ತ್ರ ಕಾಪಾಡಿಕೊಳ್ಳುವಲ್ಲಿ ಉಕ್ರೇನ್ ಜಾಣ ನಡೆ ಅನುಸರಿಸುತ್ತಿದೆ. ರಷ್ಯಾ ಎಷ್ಟೇ ದಾಳಿ ಮಾಡಿದರೂ ತಮ್ಮ ಯುದ್ಧ ವಿಮಾನ, ಹೆಲಿಕಾಪ್ಟರ್ ಸೇರಿ ಹಲವು ಈಗಲೂ ವಿನಿಯೋಗಿಸುವ ಸ್ಥಿತಿಯಲ್ಲೇ ಇವೆ.

    ರಷ್ಯಾದ 300 ಅತ್ಯಾಧುನಿಕ ಯುದ್ಧ ವಿಮಾನ ಇನ್ನೂ ಗಡಿಯಲ್ಲೇ ನಿಂತಿದೆ. ಯುದ್ಧ ವಿಮಾನಗಳಿಂದ ಕೆಳಗೆ ಹಾಕುವ ಪಿಜಿಎಂ ಬಾಂಬ್‍ಗಳ ಕೊರತೆ ಎದುರಿಸುತ್ತಿದೆ. ವಿಮಾನ ವಿಧ್ವಂಸದ ಕ್ಷಿಪಣಿ ದಾಳಿಗೆ ರಷ್ಯಾ ಹಿಂದೇಟು ಹಾಕುತ್ತಿದೆ. ಒಂದು ವೇಳೆ ಈ ರೀತಿಯ ದಾಳಿ ನಡೆಸಿದರೆ ನಮ್ಮ ವಿಮಾನಗಳಿಗೆ ಕಂಟಕವಾಗುವ ಭೀತಿ ಎದುರಿಸುತ್ತಿದೆ. ಎರಡು ವಿಭಾಗಗಳಲ್ಲಿ ಗರಿಷ್ಠ ಸಮನ್ವಯ ಅಗತ್ಯ. ಆದರೆ ಇದು ರಷ್ಯಾ ಬಳಿ ಇರುವುದು ಅಷ್ಟಕ್ಕಷ್ಟೇ.

    ಪಶ್ಚಿಮ ದೇಶಗಳಿಗೆ ಹೋಲಿಸಿದರೆ ರಷ್ಯಾ ಪೈಲಟ್‍ಗಳ ಶಿಕ್ಷಣ ಗುಣಮಟ್ಟ ಕಡಿಮೆ. ವಾರ್ಷಿಕ ಸರಾಸರಿ 100 ಗಂಟೆ ಹಾರಾಟದ ಅನುಭವ ಇದ್ದರೆ ಅಮೆರಿಕದಲ್ಲಿ 180 ಗಂಟೆ ಹಾರಾಟದ ಅನುಭವ ಹೊಂದಿದ್ದರು. ಯುದ್ಧ ವಿಮಾನದಲ್ಲಿನ ತಂತ್ರಜ್ಞಾನ, ಏವಿಯಾನಿಕ್ಸ್‌ ಎಷ್ಟು ಮುಖ್ಯವೋ ಅಷ್ಟೇ ಪೈಲಟ್‌ನ ಸಾಮರ್ಥ್ಯ ಮುಖ್ಯವಾಗುತ್ತದೆ. ಉದಾಹರಣೆ ವಿಂಗ್‌ ಕಮಾಂಡರ್‌ ಅಭಿನಂದವ್‌ ವರ್ಧಮಾನ್‌ ಮಿಗ್‌ 21 ಬೈಸನ್‌ ವಿಮಾನದ ಮೂಲಕ ಡಾಗ್‌ ಫೈಟ್‌( ಶತ್ರು ರಾಷ್ಟ್ರಗಳ ಯುದ್ಧ ವಿಮಾನಗಳ ಕಾದಾಟ) ನಡೆಸಿ ತನ್ನ ಕ್ಷಿಪಣಿ ಮೂಲಕ ಪಾಕಿಸ್ತಾನದ ಎಫ್‌ 16 ವಿಮಾನವನ್ನು ಬೀಳಿಸಿದ್ದರು. ಎಫ್‌ 16 ವಿಮಾನದ ಸಾಮರ್ಥ್ಯದ ಮುಂದೆ ಮಿಗ್‌ ವಿಮಾನ ಸಾಮರ್ಥ್ಯ ಏನೂ ಇಲ್ಲ. ಹೀಗಿದ್ದರೂ ಅಭಿನಂದನ್‌ ತನ್ನ ಕೌಶಲದಿಂದ ಎಫ್‌ 16 ವಿಮಾನವನ್ನು ಬೀಳಿಸಿದ್ದ ವಿಚಾರ ಕೇಳಿ ಇಡೀ ವಿಶ್ವವೇ ಬೆರಗಾಗಿತ್ತು.

  • ಭಾರತೀಯರನ್ನು ಒದೆಯುತ್ತಿದ್ದಾರೆ – ದುಃಸ್ವಪ್ನವಾಯ್ತು ಉಕ್ರೇನ್‍ನಿಂದ ಸ್ಥಳಾಂತರಿಸುವ ಆದೇಶ

    ಭಾರತೀಯರನ್ನು ಒದೆಯುತ್ತಿದ್ದಾರೆ – ದುಃಸ್ವಪ್ನವಾಯ್ತು ಉಕ್ರೇನ್‍ನಿಂದ ಸ್ಥಳಾಂತರಿಸುವ ಆದೇಶ

    ಕೀವ್: ಭಾರತ ಸರ್ಕಾರ ಭಾರತೀಯರನ್ನು ಉಕ್ರೇನ್ ನಿಂದ ಬೇರೆಕಡೆ ಸ್ಥಳಾಂತರಿಸಲು ಆದೇಶವನ್ನು ಹೊರಡಿಸಿದೆ. ಈ ಪರಿಣಾಮ ಭಾರತೀಯರು ರೈಲ್ವೆ ನಿಲ್ದಾಣಕ್ಕೆ ಬಂದ್ದಿದರು ಏನು ಪ್ರಯೋಜನವಾಗಿಲ್ಲ.

    ಉಕ್ರೇನ್‍ನ ಅತಿದೊಡ್ಡ ಕೀವ್ ನಗರವನ್ನು ತಕ್ಷಣವೇ ತೊರೆಯುವಂತೆ ಭಾರತ ಸರ್ಕಾರವು ತನ್ನ ನಾಗರಿಕರಿಗೆ ತುರ್ತು ಆಲ್-ಕ್ಯಾಪ್ಸ್ ಮನವಿಯನ್ನು ಹೊರಡಿಸಿದೆ. ಈ ಹಿನ್ನೆಲೆ ರೈಲು ನಿಲ್ದಾಣಕ್ಕೆ ಭಾರತೀಯ ವಿದ್ಯಾರ್ಥಿಗಳು ಬಂದಿದ್ದಾರೆ. ಆದರೆ ಭಾರೀ ಶೆಲ್ ದಾಳಿಯ ಕಾರಣ ರೈಲುಗಳಲ್ಲಿ ಹೊರಡಲು ಅನುಮತಿಸಲಾಗಿಲ್ಲ. ಇದರಿಂದ ಹತಾಶರಾದ ವಿದ್ಯಾರ್ಥಿಗಳು ವೀಡಿಯೋವೊಂದನ್ನು ಮಾಡಿ ತಮ್ಮ ದುಃಖವನ್ನು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    Students: Latest News, Photos, Videos on Students - NDTV.COM

    ಕೀವ್ ನಿಲ್ದಾಣದಲ್ಲಿ ಮೂರು ಗಂಟೆಗಳ ಕಾಲ ಭಾರತೀಯರು ರೈಲಿಗಾಗಿ ಕಾಯುತ್ತಿದ್ದರೂ, ಭಾರೀ ಶೆಲ್ ದಾಳಿಯ ಕಾರಣ ರೈಲುಗಳಲ್ಲಿ ಹೊರಡಲು ಅನುಮತಿಸಲಾಗಿಲ್ಲ. ಈ ಹಿನ್ನೆಲೆ ಭಾರತೀಯ ವಿದ್ಯಾರ್ಥಿ ಪ್ರಗುನ್, ಇದೀಗ ನಾವು ಇರುವ ಕಡೆ ಶೆಲ್ ಹೊಡೆಯಲಾಗುತ್ತಿದೆ. ಕೆಲವೊಂದು ಶೆಲ್ ನಮ್ಮ ತಲೆ ಮೇಲೆ ಹೋಗುತ್ತಿದೆ. ಇದು ತುಂಬಾ ಕೆಟ್ಟ ಪರಿಸ್ಥಿತಿ. ನಮ್ಮ ಹತ್ತಿರದಲ್ಲಿ ಯಾವುದೇ ಬಂಕರ್ ಇಲ್ಲ. ನಮ್ಮ ಮುಂದೆ ರೈಲು ಇದ್ದರೂ ಅದನ್ನು ಹತ್ತುವ ಅವಕಾಶವನ್ನು ಇಲ್ಲಿನ ಜನರು ನೀಡುತ್ತಿಲ್ಲ. ಉಕ್ರೇನಿಯನ್ ಜನರಿಗೆ ಮಾತ್ರ ಒಂದು ಮತ್ತು ಎರಡನೇ ಗೇಟ್‍ಗಳನ್ನು ತೆರೆಯಲಾಗಿದೆ. ನಮಗೆ ಬಂದೂಕು, ಬುಲೆಟ್‍ಗಳಿವೆ, ಆದರೆ ರೈಲುಗಳಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಸಾಕಷ್ಟು ಅಪಾಯಗಳನ್ನು ಎದುರಿಸಿ ಇಲ್ಲಿಗೆ ನಾವು ತಲುಪಿದ್ದೇವೆ. 1,000 ಕ್ಕೂ ಹೆಚ್ಚು ಭಾರತೀಯರು ರೈಲು ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದಾರೆ. ನಾವು ರೈಲುಗಳಿಗಾಗಿ ಕಾಯುತ್ತಿದ್ದೇವೆ. ಉಕ್ರೇನಿಯನ್ ಗಾರ್ಡ್‍ಗಳು ಗುಂಡು ಹಾರಿಸುತ್ತಿದ್ದಾರೆ. ಅವರು ನಮ್ಮನ್ನು ಒದೆಯುತ್ತಿದ್ದಾರೆ. ಅವರು ನಮ್ಮನ್ನು ಒಳಗೆ ಪ್ರವೇಶಿಸಲು ಬಿಡುತ್ತಿಲ್ಲ. ನಾನು ಭಾರತ ಸರ್ಕಾರಕ್ಕೆ ಒಂದು ವಿಷಯ ಹೇಳಲು ಬಯಸುತ್ತೇನೆ. ಇಲ್ಲಿ ನಮಗೆ ಏನಾದರೂ ತೊಂದರೆಯಾದರೆ ದಯವಿಟ್ಟು ನಮ್ಮ ಕುಟುಂಬವನ್ನು ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಕೊಡಗಿನ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು

    ಇನ್ನೋರ್ವ ವಿದ್ಯಾರ್ಥಿ, ಮೂರು ಗಂಟೆಗಳ ಕಾಲ ನಿಲ್ದಾಣದಲ್ಲಿ ಕಾಯುತ್ತಿದ್ದರೂ, ರೈಲುಗಳನ್ನು ಪ್ರವೇಶಿಸಲು ನಮಗೆ ಅನುಮತಿಸಲಾಗುತ್ತಿಲ್ಲ ಎಂದು ದುಃಖವನ್ನು ತೋಡಿಕೊಂಡಿದ್ದಾರೆ.

  • ಈ ಕೂಡಲೇ ಖಾರ್ಕಿವ್ ತೊರೆಯಿರಿ: ಭಾರತೀಯರಿಗೆ ರಾಯಭಾರ ಕಚೇರಿಯಿಂದ ತುರ್ತು ಸಂದೇಶ

    ಕೀವ್: ಉಕ್ರೇನ್‍ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ತಕ್ಷಣವೇ ಖಾರ್ಕಿವ್ ತೊರೆಯುವಂತೆ ತುರ್ತು ಸಲಹೆ ನೀಡಿದೆ. ಇಂದು ಸಂಜೆ 6 ಗಂಟೆ(ಭಾರತೀಯ ಕಾಲಮಾನ ರಾತ್ರಿ 9:30) ಒಳಗಾಗಿ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾ ವಸಾಹತುಗಳನ್ನು ತಲುಪುವಂತೆ ರಾಯಭಾರ ಕಚೇರಿ ತಿಳಿಸಿದೆ.

    ಖಾರ್ಕಿವ್‍ನಲ್ಲಿರುವ ಭಾರತೀಯರು ತಮ್ಮ ಸುರಕ್ಷತೆ ಹಾಗೂ ಭದ್ರತೆಗೆ ಈ ಕೂಡಲೇ ಖಾರ್ಕಿವ್ ಅನ್ನು ತೊರೆಯಬೇಕು. ಆದಷ್ಟು ಬೇಗ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾಗೆ ತಲುಪಿ ಎಂದು ಭಾರತೀಯ ರಾಯಭಾರಿ ಕಚೇರಿ ಟ್ವಿಟ್ಟರ್‍ನಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು

    ಈ ಹಿಂದೆ ಪೋಲೆಂಡ್‍ನಲ್ಲಿರುವ ರಾಯಭಾರಿ ಕಚೇರಿ ಉಕ್ರೇನ್‍ನಲ್ಲಿರುವ ಭಾರತೀಯರಿಗೆ ತುರ್ತು ಸಲಹೆ ನೀಡಿತ್ತು. ಪೋಲೆಂಡ್‍ಗೆ ತ್ವರಿತವಾಗಿ ಪ್ರವೇಶಿಸಲು ಬುಡೋಮಿಯಾರ್ಜ್ ಗಡಿಗೆ ತಕ್ಷಣ ಬರುವಂತೆ ಸಲಹೆ ನೀಡಿತ್ತು. ಇದನ್ನೂ ಓದಿ: ರಷ್ಯಾ- ಉಕ್ರೇನ್‌ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ

    ಈಗಾಗಲೇ ರಷ್ಯಾ ಉಕ್ರೇನ್‍ನ ಮುಖ್ಯ ನಗರಗಳಾದ ಕೀವ್ ಹಾಗೂ ಖಾರ್ಕಿವ್ ನಗರಗಳನ್ನು ಮುತ್ತಿಗೆ ಹಾಕಿ ನಿರಂತರ ದಾಳಿ ನಡೆಸುತ್ತಿದೆ. ರಷ್ಯಾದ ಅಟ್ಟಹಾಸಕ್ಕೆ ಉಕ್ರೇನ್‍ನ 6 ಸಾವಿರ ಸೈನಿಕರು ಹಾಗೂ ಸ್ಥಳೀಯರು ಪ್ರಾಣ ಬಿಟ್ಟಿದ್ದು, ಅದರಲ್ಲಿ ಒಬ್ಬ ಕರ್ನಾಟಕದ ವಿದ್ಯಾರ್ಥಿಯೂ ಕೊನೆಯುಸಿರೆಳೆದಿದ್ದಾರೆ.

  • ರಷ್ಯನ್ನರ ವಿರುದ್ಧ ಹೋರಾಡಲು ಸ್ಥಳೀಯರಿಂದ ಪೆಟ್ರೋಲ್ ಬಾಂಬ್ ದಾಳಿ

    ರಷ್ಯನ್ನರ ವಿರುದ್ಧ ಹೋರಾಡಲು ಸ್ಥಳೀಯರಿಂದ ಪೆಟ್ರೋಲ್ ಬಾಂಬ್ ದಾಳಿ

    ಕೀವ್: ರಷ್ಯಾದ ವಿರುದ್ಧ ಹೋರಾಡಲು ಉಕ್ರೇನ್ ಪ್ರಜೆಗಳು ಪೆಟ್ರೋಲ್ ಬಾಂಬ್‍ಗಳ ದಾಳಿ ನಡೆಸುತ್ತಿದ್ದಾರೆ.

    ಕೀವ್‍ನ ಚೆಕ್‍ಪಾಯಿಂಟ್‍ನಲ್ಲಿ ಉಕ್ರೇನ್‍ನ ಸ್ಥಳೀಯರು ಪೆಟ್ರೋಲ್ ಬಾಂಬ್‍ಗಳನ್ನು ತಾವೇ ತಯಾರಿಸಿ ರಷ್ಯನ್ನರ ವಿರುದ್ಧ ಹೋರಾಡಲು ಸಿದ್ಧ ಎನ್ನುತ್ತ ತಮ್ಮ ರೋಷವನ್ನು ತೋಸಿಕೊಳ್ಳುತ್ತಿದ್ದಾರೆ.

    ಈಗಾಗಲೇ ಉಕ್ರೇನ್‍ನ 6 ಸಾವಿರ ಸೈನಿಕರನ್ನು ಬಲಿ ತೆಗೆದುಕೊಂಡಿರುವ ರಷ್ಯಾ ವಿರುದ್ಧ ಹೋರಾಡಲು ಸ್ಥಳೀಯರೂ ಎದೆಗುಂದದೆ ನಿಂತಿದ್ದಾರೆ. ಪೆಟ್ರೋಲ್ ಬಾಂಬುಗಳನ್ನು ತಯಾರಿಸಿ ರಷ್ಯಾದ ಸೈನ್ಯವನ್ನು ಎದುರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು

    ನಾವು ನಮ್ಮ ಮಾತೃಭೂಮಿಗಾಗಿ ಹೋರಾಡುತ್ತಿದ್ದೇವೆ. ನಾವು ರಷ್ಯನ್ನರಿಗೆ ಹೆದರುವುದಿಲ್ಲ. ನಮ್ಮಲ್ಲೂ ಉತ್ತಮ ಹೋರಾಟಗಾರರು ಇದ್ದಾರೆ. ಶಸ್ತ್ರಾಸ್ತ್ರ ಅಥವಾ ಪೆಟ್ರೋಲ್ ಬಾಂಬ್‍ಗಳಿಲ್ಲದಿದ್ದರೂ ಅವರೊಂದಿಗೆ ನಾವು ಹೋರಾಡಲು ಸಿದ್ಧರಾಗಿದ್ದೇವೆ ಎಂದು ಉಕ್ರೇನ್ ಪ್ರಜೆಗಳು ಆವೇಶ ಭರಿತ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: 3ನೇ ವಿಶ್ವ ಯುದ್ಧದಲ್ಲಿ ಪರಮಾಣ ಶಸ್ತ್ರಾಸ್ತ್ರ ಇರುತ್ತೆ: ರಷ್ಯಾ ಸಚಿವ

    ಉಕ್ರೇನ್‍ನಲ್ಲಿ ಸೈನಿಕರು, ನಾಗರಿಕರು, ಹಿರಿಯರು, ಮಹಿಳೆಯರು ಎನ್ನದೇ ಎಲ್ಲರೂ ಒಗ್ಗೂಡಿ ರಷ್ಯಾದ ವಿರುದ್ಧ ಹೋರಾಡುತ್ತಿದ್ದಾರೆ. ಶಸ್ತ್ರಾಸ್ತ್ರಗಳ ಕೊರತೆಯಿದ್ದರೂ ಒಂದೆರಡು ದಿನಗಳಲ್ಲಿ ಉಕ್ರೇನ್ ಸರ್ಕಾರ ಶಸ್ತ್ರಾಸ್ತ್ರ ಒದಗಿಸಲಿದೆ ಎಂಬ ಭರವಸೆಯಲ್ಲಿ ಕಾಯುತ್ತಿದ್ದಾರೆ. ತಮ್ಮ ತೋಳುಗಳಲ್ಲಿ ಹಳದಿ ಬಣ್ಣದ ಬ್ಯಾಂಡ್‍ಗಳನ್ನು ಧರಿಸಿ ತಮ್ಮನ್ನು ತಾವು ಕೀವ್‍ನ ರಕ್ಷಕರು ಎಂದು ಕರೆಯುತ್ತಿದ್ದಾರೆ.

  • ಉಕ್ರೇನ್‍ನಲ್ಲಿ ಸಂಪರ್ಕಕ್ಕೆ ಸಿಗದ ಮುಂಡಗೋಡದ ವಿದ್ಯಾರ್ಥಿನಿ

    ಉಕ್ರೇನ್‍ನಲ್ಲಿ ಸಂಪರ್ಕಕ್ಕೆ ಸಿಗದ ಮುಂಡಗೋಡದ ವಿದ್ಯಾರ್ಥಿನಿ

    ಕಾರವಾರ: ರಷ್ಯಾ-ಉಕ್ರೇನ್ ಯುದ್ದ ಪ್ರಾರಂಭವಾಗಿ ಇಂದಿಗೆ ಏಳು ದಿನಗಳಾಗಿದ್ದು, ಇದೀಗ ಹಾವೇರಿಯ ನವೀನ್ ಸಾವಿನ ನಂತರ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರ ಜೀವಕ್ಕೆ ಕಂಟಕ ತಂದಿದೆ. ಓರ್ವ ವಿದ್ಯಾರ್ಥಿನಿಯೊಬ್ಬರು ಸಂಪರ್ಕಕ್ಕೆ ಸಿಗದೇ ಅವರ ಕುಟುಂಬ ವರ್ಗದಲ್ಲಿ ಆತಂಕ ಸೃಷ್ಟಿಯಾಗಿದೆ.

    ಉತ್ತರ ಕನ್ನಡ ಜಿಲ್ಲೆಯ ನಾಲ್ಕುಜನ ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿದ್ದು ಓರ್ವ ವಿದ್ಯಾರ್ಥಿ ಮರಳಿ ಭಾರತಕ್ಕೆ ಆಗಮಿಸಿದ್ದಾರೆ. ಬನವಾಸಿಯ ಇಮ್ರಾನ್, ಸ್ನೇಹಾ, ರೊಮೇನಿಯಾ ಗಡಿಯಲ್ಲಿ ಆರಾಮವಾಗಿದ್ದಾರೆ. ಆದರೇ ಖಾರ್ಕಿವ್ ನಲ್ಲಿ ಸಿಲುಕಿರುವ ಮುಂಡಗೋಡ ಮೂಲದ ನಾಝಿಯಾರಿಗೆ ಓನ್ ರಿಸ್ಕ್‍ನಲ್ಲಿ ರೊಮೇನಿಯಾಕ್ಕೆ ಬರುವಂತೆ ಕೇಂದ್ರ ಗೃಹ ಇಲಾಖೆ ಸೂಚನೆ ನೀಡಿತ್ತು. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ಸೂಚನೆಯ ಹಿನ್ನೆಯಲ್ಲಿ ಅನಿವಾರ್ಯವಾಗಿ ಯುದ್ಧ ನಡೆಯುತ್ತಿರುವ ಖಾರ್ಕಿವ್‍ನನ್ನು ತೊರೆದಿದ್ದಾರೆ. ಆದರೇ ಇದೀಗ ಇವರ ಸಂಪರ್ಕ ಕಡಿತವಾಗಿದ್ದು ಇವರ ಬಗ್ಗೆ ಕೇಂದ್ರ ಹಾಗೂ ಜಿಲ್ಲಾಡಳಿತಕ್ಕೆ ಯಾವುದೇ ಮಾಹಿತಿ ದೊರೆಯುತಿಲ್ಲ. ಸದ್ಯ ಅವರ ಕುಟುಂಬದ ಸಂಪರ್ಕದಲ್ಲಿ ಜಿಲ್ಲಾಡಳಿತ ಅಧಿಕಾರಿಗಳಿದ್ದು ಯಾವುದೇ ತೊಂದರೆಗಳಾಗದೇ ರೊಮೇನಿಯಾ ಗಡಿ ತಲುಪುತ್ತಾರೆ ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಭಾರತ್‍ಪೇ ಎಂಡಿ ಸ್ಥಾನಕ್ಕೆ ಅಶ್ನೀರ್ ಗ್ರೋವರ್ ರಾಜೀನಾಮೆ

    ಉತ್ತರ ಕನ್ನಡ ಜಿಲ್ಲೆಯ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ. ಆದರೇ ಖಾರ್ಕಿವ್‍ನಿಂದ ಹೊರಟ ನಾಝಿಯಾ ಈವರೆಗೂ ಸಂಪರ್ಕಕ್ಕೆ ಸಿಗದಿರುವುದು ಕುಟುಂಬ ವರ್ಗಕ್ಕೆ ಆತಂಕ ಎದುರಾಗುವಂತೆ ಮಾಡಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತಮ್ಮ ಮಗಳನ್ನು ಸುರಕ್ಷಿತವಾಗಿ ಕರೆತರುವಂತೆ ಕುಟುಂಬವು ಮನವಿ ಮಾಡಿಕೊಂಡಿದೆ. ಕಾರವಾರದಲ್ಲಿ ಸಹ ಜನಶಕ್ತಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ತಮ್ಮ ಜಿಲ್ಲೆಯವರನ್ನು ಸುರಕ್ಷಿತವಾಗಿ ಕರೆತರುವಂತೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದ್ದಾರೆ.

  • ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಕೊಡಗಿನ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು

    ಉಕ್ರೇನ್‍ನಿಂದ ಸುರಕ್ಷಿತವಾಗಿ ಬಂದ ಕೊಡಗಿನ ಮೊದಲ ವಿದ್ಯಾರ್ಥಿನಿ – ನಿಟ್ಟುಸಿರು ಬಿಟ್ಟ ಪೋಷಕರು

    ಮಡಿಕೇರಿ: ಉಕ್ರೇನ್ ಮತ್ತು ರಷ್ಯಾ ದೇಶದ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಪೋಷಕರು ನಮ್ಮ ಮಕ್ಕಳು ಸುರಕ್ಷಿತವಾಗಿ ಬಂದ್ರೆ ಸಾಕು ಎಂದು ಕೇಲಿಕೊಳ್ಳುತ್ತಿದ್ದಾರೆ. ಈ ನಡುವೆ ಕೊಡಗಿನ ವಿದ್ಯಾರ್ಥಿನಿ ಸುರಕ್ಷಿತವಾಗಿ ಬಂದಿದ್ದು, ಆಕೆಯ ಪೋಷಕರು ನಿಟ್ಟುಸಿರುಬಿಟ್ಟಿದ್ದಾರೆ.

    ಯುದ್ಧದಿಂದ ಉಕ್ರೇನ್‍ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ನವೀನ್ ಮೃತಪಟ್ಟ ಹಿನ್ನೆಲೆ ಪೋಷಕರ ಆತಂಕ ಇನ್ನೂ ಹೆಚ್ಚಾಗುತ್ತಿದೆ. ಹೀಗಾಗಿ ತಮ್ಮ ಮಕ್ಕಳು ಸುರಕ್ಷಿತವಾಗಿ ತಾಯ್ನಾಡಿಗೆ ಬರಬೇಕು ಎಂದು ಪೋಷಕರ ಪ್ರಾರ್ಥನೆ ಮಾಡುತ್ತಿದ್ರೆ. ಇತ್ತ ಕೊಡಗು ಜಿಲ್ಲೆಯ 16 ವಿದ್ಯಾರ್ಥಿಗಳ ಪೈಕಿ ವಿದ್ಯಾರ್ಥಿನಿಯೊಬ್ಬಳು ಕೊಡಗು ಜಿಲ್ಲೆಗೆ ಅಗಮಿಸಿದ್ದಾರೆ. ಇದರಿಂದ ಅತಂಕದಲ್ಲಿ ಇದ್ದ ಪೋಷಕರು ನಿಟ್ಟುಸಿರು ಬಿಡುವಂತೆ ಅಗಿದೆ. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲಿನ ಮದೀಹ(21) ಇಂದು ಬೆಳಗಿನ ಜಾವ ಗೋಣಿಕೊಪ್ಪಲುವಿಗೆ ಆಗಮಿಸಿದ್ದಾರೆ. ಉಕ್ರೇನ್‍ನಲ್ಲಿ ನಡೆಯುತ್ತಿದ್ದ ಘಟನೆ ಅಷ್ಟಾಗಿ ತಮ್ಮ ಗಮನಕ್ಕೆ ಬಾರದೆ ಇದ್ರು ಪೋಷಕರು ತುಂಬಾ ಅತಂಕಕ್ಕೆ ಒಳಗಾಗಿದ್ರು. ಉಕ್ರೇನ್‍ನಲ್ಲಿ ಮೆಡಿಕಲ್ ವಿದ್ಯಾಭ್ಯಾಸಕ್ಕೆ ಎರಡು ತಿಂಗಳ ಹಿಂದೆ ಹೋಗಿದೆ. ಆದರೆ ಈ ರೀತಿಯ ಘಟನೆಗಳು ಅಗುತ್ತದೆ ಎಂದು ನಮ್ಮಗೆ ಗೊತ್ತಿರಲಿಲ್ಲ. ಅದ್ರೂ ರಕ್ಷಣೆಯ ಬಳಿಕ ನನಗೆ ಮರು ಜನ್ಮ ಸಿಕ್ಕಂತಾಗಿದೆ. ಭಾರತೀಯ ರಾಯಭಾರ ಕಚೇರಿಗೆ ಈ ಮೂಲಕ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

    ಈ ವೇಳೆ ಮದೀಹ ಉಕ್ರೇನ್‍ನಲ್ಲಿ ರಷ್ಯಾ ಸೈನಿಕರ ದಾಳಿಗೆ ಕರ್ನಾಟಕ ಮೂಲದ ನವೀನ್ ಮೃತ ಪಟ್ಟಿರುವುದು ತುಂಬಾ ಬೇಸರ ತಂದಿದೆ. ಅದಷ್ಟು ಬೇಗಾ ಕೇಂದ್ರ ಸರ್ಕಾರ ಉಳಿದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.  ಇದನ್ನೂ ಓದಿ: ನವೀನ್ ವ್ಯಕ್ತಿತ್ವ ಪ್ರಶಂಸಿದ ಚಂದನವನದ ಮೋಹಕತಾರೆ

  • ನವೀನ್ ವ್ಯಕ್ತಿತ್ವ ಪ್ರಶಂಸಿಸಿದ ಚಂದನವನದ ಮೋಹಕತಾರೆ

    ನವೀನ್ ವ್ಯಕ್ತಿತ್ವ ಪ್ರಶಂಸಿಸಿದ ಚಂದನವನದ ಮೋಹಕತಾರೆ

    ಮೋಹಕತಾರೆ ರಮ್ಯಾ ಉಕ್ರೇನ್‍ನಲ್ಲಿ ಮೃತಪಟ್ಟ ನವೀನ್ ಶೇಖರಪ್ಪ ವ್ಯಕ್ತಿತ್ವದ ಬಗ್ಗೆ ಪ್ರಶಂಸಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ.

    ನಿನ್ನೆ ನವೀನ್ ಶೇಖರಪ್ಪ ಉಕ್ರೇನ್-ರಷ್ಯಾ ದಾಳಿಯಿಂದ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆ ಚಂದನವನ ಸೇರಿದಂತೆ ಅನೇಕ ಗಣ್ಯರು ನವೀನ್ ಸಾವಿನ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಇನ್‍ಸ್ಟಾಗ್ರಾಮ್ ನಲ್ಲಿ ರಮ್ಯಾ ಅವರು ನವೀನ್ ತನ್ನ ಸ್ನೇಹಿತನ ಜೊತೆ ಚಾಟ್ ಮಾಡಿದ್ದ ಫೋಟೋ ಶೇರ್ ಮಾಡಿದ್ದಾರೆ. ಈ ಪೋಸ್ಟ್ ಗೆ, ಕರ್ನಾಟಕದ ಹಾವೇರಿಯ 21 ವರ್ಷ ವಯಸ್ಸಿನ ನವೀನ್ ಶೇಖರಪ್ಪ 4ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ. ನಿನ್ನೆ ಉಕ್ರೇನ್‍ನಲ್ಲಿ ಪ್ರಾಣ ಕಳೆದುಕೊಂಡಿದ್ದಾನೆ. ಅವನು ಮತ್ತು ಅವನ ಸ್ನೇಹಿತರು ದಿನಗಟ್ಟಲೆ ಊಟ ಮತ್ತು ನೀರಿಲ್ಲದೆ ಬಂಕರ್‌ಗಳಲ್ಲಿ ಇದ್ದರು. ನವೀನ್ ಮತ್ತು ಆತನ ಸ್ನೇಹಿತ(ಚಾಟ್‍ನಲ್ಲಿ) ಎಲ್ಲರಿಗೂ ಆಹಾರವನ್ನು ತರಲು ಸ್ವಯಂಪ್ರೇರಿತರಾಗಿ ಹೊರ ಹೋಗಲು ನಿರ್ಧರಿಸಿದ್ದಾರೆ. ಆಹಾರವನ್ನು ತರಬೇಕು ಎಂದು ಹೊರಟಾಗ ನವೀನ್ ಸ್ನೇಹಿತ ಜಾಕೆಟ್ ಧರಿಸಿರಲಿಲ್ಲ. ಉಕ್ರೇನ್ ನಲ್ಲಿ ಹೆಚ್ಚು ಚಳಿಯಾಗಿದ್ದರಿಂದ ನವೀನ್ ತನ್ನ ಸ್ನೇಹಿತನನ್ನು ಬಂಕರ್‍ಗೆ ಹಿಂತಿರುಗಲು ಹೇಳಿದರು. ಅವರು ತನ್ನ ಸ್ನೇಹಿತರಿಗೆ ಆಹಾರವನ್ನು ತರಲು ಕಿರಾಣಿ ಅಂಗಡಿಗೆ ಒಬ್ಬನೇ ಹೋದನು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

     

    View this post on Instagram

     

    A post shared by Ramya/Divya Spandana (@divyaspandana)

    ನಮ್ಮೆಲ್ಲರಿಗಿಂತ ಹೆಚ್ಚು ಮಾನವೀಯತೆ ನವೀನ್ ಅವರಲ್ಲಿ ಇತ್ತು. ಅವರು ಬೇರೆಯವರ ಬಗ್ಗೆ ಕಾಳಜಿ ವಹಿಸಿದ್ದರಿಂದ ಅವರೊಬ್ಬರೇ ಹೊರಬಂದರು. ಅವರಿಗೆ ಸಹಾನುಭೂತಿ ಇತ್ತು. ಅವರು ಧೈರ್ಯಶಾಲಿಯಾಗಿದ್ದರು. ಯುದ್ಧದಿಂದ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಆಡಳಿತವು ವೇಗವಾಗಿ ಪ್ರತಿಕ್ರಿಯಿಸದ ಕಾರಣ ಈ ಸಾವು ಸಂಭವಿಸಿದೆ. ಪ್ರಜ್ಞೆಯಿಲ್ಲದ ಯುದ್ಧದಿಂದ ಉಂಟಾದ ಸಾವಿಗೆ ಟ್ರೋಲ್‍ಗಳು ಈ ಹುಡುಗನನ್ನು ದೂಷಿಸುತ್ತಿದೆ. ಅನೇಕ ಜನರ ಜೀವಗಳನ್ನು ಉಳಿಸಿದ ಹುಡುಗನ ಬಗ್ಗೆ ಅವರು ತುಂಬಾ ದ್ವೇಷವನ್ನು ಹೊಂದಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    RAMYA

    ಹುಡುಗ ಮೃತಪಟ್ಟ ಕಾರಣ ನಾನು ಈ ಪೋಸ್ಟ್ ಮಾಡುತ್ತಿದ್ದೇನೆ. ಇದರಿಂದ ಅವನ ಸ್ನೇಹಿತರು ಮತ್ತು ಕುಟುಂಬಕ್ಕೆ ಹೆಚ್ಚು ಕಷ್ಟಕೊಡಬೇಡಿ. ಅವರನ್ನು ಶಾಂತಿಯಿಂದ ಇರಲು ಬಿಡಿ. ನವೀನ್ ಸ್ನೇಹಿತರು ಮತ್ತು ಕುಟುಂಬದವರು ನಿಮ್ಮ ಸಹಾನುಭೂತಿ ಮತ್ತು ಪ್ರೀತಿಗೆ ಅರ್ಹರು ಎಂದು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಉಕ್ರೇನ್‍ನಲ್ಲಿ ಬೆಳಗಾವಿ 19 ವಿದ್ಯಾರ್ಥಿಗಳು ಸಿಲುಕಿದ್ದು, ಇಬ್ಬರು ವಾಪಸ್ ಆಗಿದ್ದಾರೆ: ಜಿಲ್ಲಾಧಿಕಾರಿ

    ನವೀನ್ ನಮ್ಮನ್ನು ಕ್ಷಮಿಸಿ. ನಾವು ನಿಮ್ಮನ್ನು ಉಳಿಸಿಕೊಳ್ಳಲು ವಿಫಲಗೊಂಡಿದ್ದೇವೆ. ನಿಮ್ಮಿಂದ ನಾವು ತುಂಬಾ ಕಲಿಯ ಬೇಕು. ಜಗತ್ತಿಗೆ ನಿಮ್ಮಂತಹ ವ್ಯಕ್ತಿಗಳು ಹೆಚ್ಚು ಅಗತ್ಯವಿದೆ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕೋರಿಕೊಂಡಿದ್ದಾರೆ. ನವೀನ್ ಮತ್ತು ಅವರ ಒಳ್ಳೆಯತನವನ್ನು ಹೇಗೆ ಪ್ರಶಂಸಿಸಬೇಕೆಂದು ನಿಮಗೆ ಸಾಧ್ಯವಾಗದಿದ್ದರೆ ಮತ್ತು ತಿಳಿದಿಲ್ಲದಿದ್ದರೆ ದಯವಿಟ್ಟು ಕಾಮೆಂಟ್ ಮಾಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.

  • ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ಅಸಹಾಯಕ ಸ್ಥಿತಿಗೆ ಕೇಂದ್ರವೇ ಕಾರಣ: ಸಿದ್ದರಾಮಯ್ಯ

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರ ಅಸಹಾಯಕ ಸ್ಥಿತಿಗೆ ಕೇಂದ್ರವೇ ಕಾರಣ: ಸಿದ್ದರಾಮಯ್ಯ

    ಬೆಂಗಳೂರು: ಉಕ್ರೇನ್‍ನಲ್ಲಿ ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರು ಮುಖ್ಯವಾಗಿ ವಿದ್ಯಾರ್ಥಿಗಳು ಸಾವು-ಬದುಕಿನ ಹೋರಾಟ ನಡೆಸುತ್ತಿರುವಂತಹ ಅಸಹಾಯಕ ಸ್ಥಿತಿಗೆ ತಲುಪಲು ಕೇಂದ್ರ ಸರ್ಕಾರದ ಅನಿಶ್ಚಿತತೆ ಮತ್ತು ಬೇಜವಾಬ್ದಾರಿ ನೀತಿ-ನಿಲುವುಗಳೇ ಕಾರಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.

    ಕಳೆದ ಕೆಲವು ತಿಂಗಳುಗಳಿಂದ ಉಕ್ರೇನ್ ಮತ್ತು ರಷ್ಯಾಗಳ ನಡುವೆ ಯಾವುದೇ ಕ್ಷಣದಲ್ಲಿ ಆದರೂ ಯುದ್ಧ ನಡೆಯಬಹುದು ಎಂಬ ವರದಿಗಳಿತ್ತು. ಈ ಹಿನ್ನೆಲೆಯಲ್ಲಿ ವಿಶ್ವದ ಹಲವಾರು ದೇಶಗಳು ಅಲ್ಲಿರುವ ತಮ್ಮ ಪ್ರಜೆಗಳನ್ನು ಸುರಕ್ಷಿತವಾಗಿ ವಾಪಸ್ ಕರೆಸಿಕೊಳ್ಳುವ ಪ್ರಯತ್ನ ಪ್ರಾರಂಭಿಸಿದ್ದರು. ಆದರೆ ಭಾರತ ಮಾತ್ರ ಯುದ್ಧ ಪ್ರಾರಂಭವಾಗುವವರೆಗೆ ಭಾರತೀಯರ ಸುರಕ್ಷತೆ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ತನ್ನನ್ನು ವಿಶ್ವಗುರು ಎಂದು ಕೊಂಡಾಡುತ್ತಾ ಭಕ್ತರು ನಡೆಸುತ್ತಿರುವ ಬೋಪರಾಕ್ ಭಜನೆಗೆ ಪ್ರಧಾನಿಯವರು ತಲೆ ತೂಗುತ್ತಾ ಕಾಲಹರಣ ಮಾಡಿದರೇ ವಿನಃ ಉಕ್ರೇನ್‍ನಲ್ಲಿ ಸಿಲುಕಿರುವ ಸಾವಿರಾರು ಭಾರತೀಯರ ಸುರಕ್ಷತೆ ಬಗ್ಗೆ ಗಮನ ನೀಡಲೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.

    ಕೇಂದ್ರದ ನಿರ್ಲಕ್ಷ್ಯದಿಂದ ನವೀನ್ ಸಾವು: ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿಯೇ ಕರ್ನಾಟಕದ ವಿದ್ಯಾರ್ಥಿ ನವೀನ್ ಪ್ರಾಣ ಕಳೆದುಕೊಂಡಿದ್ದು, ಆತನ ಹೆತ್ತವರು ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ. ಆ ವಿದ್ಯಾರ್ಥಿಯ ಸಹಪಾಠಿಗಳು ಮತ್ತು ಹೆತ್ತವರ ಹೇಳಿಕೆಗಳು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಪ್ರಧಾನಿ ಮೋದಿ ಮತ್ತು ವಿದೇಶಾಂಗ ವ್ಯವಹಾರ ಸಚಿವರು ಸಕಾಲದಲ್ಲಿ ಈ ವಿದ್ಯಾರ್ಥಿಗಳ ನೆರವಿಗೆ ಧಾವಿಸಿ ಅವರನ್ನು ಭಾರತಕ್ಕೆ ಕರೆತಂದಿದ್ದರೆ ಅಮೂಲ್ಯವಾದ ಜೀವವೊಂದು ಉಳಿಯುತ್ತಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

    ಕೇಂದ್ರವನ್ನು ಬೆಂಬಲಿಸುವೆ: ನಮ್ಮೊಳಗಿನ ರಾಜಕೀಯ ಭಿನ್ನಾಭಿಪ್ರಾಯಗಳು, ಸೈದ್ಧಾಂತಿಕ ವ್ಯತ್ಯಾಸಗಳು ಏನೇ ಇದ್ದರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರವನ್ನು ಬೆಂಬಲಿಸುವುದು ನಮ್ಮ ಕರ್ತವ್ಯವಾಗಿದೆ. ಈ ಕರ್ತವ್ಯ ಪ್ರಜ್ಞೆಯಿಂದಾಗಿ ಕೇಂದ್ರ ಸರ್ಕಾರದ ವೈಫಲ್ಯಗಳ ಪಟ್ಟಿಯನ್ನು ಪೂರ್ಣವಾಗಿ ನೀಡಲು ನಾನು ಬಯಸುವುದಿಲ್ಲ. ಉಕ್ರೇನ್ ಮತ್ತು ರಷ್ಯಾ ನಡುವಿನ ಈಗಿನ ಯುದ್ಧಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಲೇಬೇಕಾಗುತ್ತದೆ ಎಂದರು. ಇದನ್ನೂ ಓದಿ: ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ: ನವೀನ್ ಅತ್ತಿಗೆ ಕಣ್ಣೀರು

    ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾಥಿಗಳ ಮೇಲೆ ಹಲ್ಲೆ: ಉಕ್ರೇನ್‍ನ ಬಹಳಷ್ಟು ಪ್ರದೇಶಗಳಲ್ಲಿ ಆ ದೇಶದ ಜನ ಮತ್ತು ಸೈನಿಕರು ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ-ದೌರ್ಜನ್ಯಗಳನ್ನು ನಡೆಸುತ್ತಿರುವುದು ಮಾತ್ರವಲ್ಲ, ಅಪಹರಿಸಿಕೊಂಡು ಹೋಗಿರುವ ಘಟನೆಗಳು ಕೂಡಾ ವರದಿಯಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ನರೇಂದ್ರ ಮೋದಿ ಸರ್ಕಾರ ಯುಕ್ರೇನ್‍ನಿಂದ ಭಾರತೀಯರನ್ನು ಕರೆತರುವ ಕಾರ್ಯಾಚರಣೆಗೂ ಗಂಗಾ ನದಿಯ ಹೆಸರು ಕೊಟ್ಟು ಅದನ್ನು ಉತ್ತರ ಪ್ರದೇಶದ ಚುನಾವಣೆಯ ಪ್ರಚಾರದಲ್ಲಿ ಬಳಸಲು ಹೊರಟಿದೆ ಎಂದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಕೇಂದ್ರ ಸರ್ಕಾರದ ಜೊತೆ ನಿರಂತರ ಸಂಪರ್ಕವಿಟ್ಟುಕೊಂಡು ಯುಕ್ರೇನ್‍ನಲ್ಲಿ ಸಂಕಷ್ಟದಲ್ಲಿರುವ ಭಾರತೀಯರನ್ನು ವಾಪಸ್ಸು ಕರೆತರುವ ಪ್ರಯತ್ನವನ್ನು ಮಾಡಬೇಕು. ಇದೇ ವೇಳೆ ಕೇಂದ್ರ ಸರ್ಕಾರ ಯುಕ್ರೇನ್ ಮತ್ತು ರಷ್ಯಾ ದೇಶಗಳ ಜೊತೆ ಮಾತುಕತೆ ನಡೆಸಿ ಭಾರತೀಯರ ಸುರಕ್ಷತೆಯನ್ನು ಖಾತರಿ ಪಡಿಸಬೇಕು ಎಂದು ಒತ್ತಾಯಿಸಿದರು.

  • ಉಕ್ರೇನ್‍ನಲ್ಲಿ ಬೆಳಗಾವಿ 19 ವಿದ್ಯಾರ್ಥಿಗಳು ಸಿಲುಕಿದ್ದು, ಇಬ್ಬರು ವಾಪಸ್ ಆಗಿದ್ದಾರೆ: ಜಿಲ್ಲಾಧಿಕಾರಿ

    ಉಕ್ರೇನ್‍ನಲ್ಲಿ ಬೆಳಗಾವಿ 19 ವಿದ್ಯಾರ್ಥಿಗಳು ಸಿಲುಕಿದ್ದು, ಇಬ್ಬರು ವಾಪಸ್ ಆಗಿದ್ದಾರೆ: ಜಿಲ್ಲಾಧಿಕಾರಿ

    ಬೆಳಗಾವಿ: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಬೆಳಗಾವಿ ಜಿಲ್ಲೆಯ 19 ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿದ್ದು, ಅದರಲ್ಲಿ ಇಬ್ಬರು ವಾಪಸ್ ಆಗಿದ್ದಾರೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್ ಹೇಳಿದರು.

    ಉಕ್ರೇನ್‍ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಎಂ.ಜಿ.ಹಿರೇಮಠ್ ಅವರು, ರಾಜ್ಯ ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ನಮಗೆ ಪಟ್ಟಿ ನೀಡಿದ್ದಾರೆ. ಆ ಪ್ರಕಾರ ಉಕ್ರೇನ್‍ನಲ್ಲಿ ಬೆಳಗಾವಿಯ 19 ವಿದ್ಯಾರ್ಥಿಗಳು ಇದ್ದರು. ಅದರಲ್ಲಿ ಈಗಾಗಲೇ ಇಬ್ಬರು ವಿದ್ಯಾರ್ಥಿಗಳು ವಾಪಸ್ ಬಂದಿದ್ದಾರೆ. 17 ಜನರ ಪಟ್ಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್ ಗಳಿಗೆ ಕೊಟ್ಟಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ವಿದ್ಯಾರ್ಥಿಗಳ ಪಾಲಕರ ಮನೆಗೆ ಹೋಗಿ ಧೈರ್ಯ, ಆತ್ಮವಿಶ್ವಾಸ ತುಂಬುವ ಕೆಲಸ ನೀಡಿದ್ದೇವೆ. ನಾನೂ ಸಹ ಇಂದು ಕೆಲವು ವಿದ್ಯಾರ್ಥಿಗಳ ಪಾಲಕರನ್ನು ಭೇಟಿಯಾಗುವೆ. ರಾಯಭಾಗ ಮೂಲದ ವಿದ್ಯಾರ್ಥಿ ಪಾಲಕರ ಜೊತೆ ನಾನು ಮಾತನಾಡಿದ್ದೇನೆ. ಉಕ್ರೇನ್‍ನ ಪೂರ್ವ ಭಾಗದಲ್ಲೇ ಹೆಚ್ಚಿನ ಜನ ಇದ್ದಾರೆ. ಅಲ್ಲದೆ ಕೇಂದ್ರ ಸಚಿವರ ತಂಡ ಸಹ ಉಕ್ರೇನ್‍ಗೆ ಹೋಗಿದೆ ಎಂದು ವಿವರಿಸಿದರು.

    ನಾವೆಲ್ಲರೂ ಸೇರಿ ಪೋಷಕರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸ ಮಾಡಬೇಕು. ಪಾಲಕರು ನೀಡಿದ ಮಾಹಿತಿ ರಾಜ್ಯ ನೋಡಲ್ ಅಧಿಕಾರಿಗಳಿಗೆ ನೀಡಿದ್ದೇವೆ. ಸ್ಮಾರ್ಟ ಸಿಟಿ ಎಂ.ಡಿ.ಪ್ರವೀಣ್ ಬಾಗೇವಾಡಿ, ಎ.ಸಿ.ರವಿ ಕರಲಿಂಗಣ್ಣವರ ಮುಂಬೈ ಏರ್ ಏರ್ ಪೋರ್ಟ್ ನಲ್ಲಿದ್ದಾರೆ. ರಾಜ್ಯದ ವಿದ್ಯಾರ್ಥಿಗಳ ಮಾಹಿತಿ ಪಡೆದು ಟಿಕೆಟ್ ಬುಕ್ ಮಾಡಿ ಸ್ವಂತ ಊರಿಗೆ ಕಳಿಸುವ ವ್ಯವಸ್ಥೆ ಮಾಡ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

  • ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ

    ಕಾಂಗ್ರೆಸ್ ಸೂಕ್ಷ್ಮತೆ ಕಳೆದುಕೊಂಡ ಪಕ್ಷ: ಅಶ್ವಥ್ ನಾರಾಯಣ

    ಬೆಂಗಳೂರು: ಯಾವ ಸಮಯದಲ್ಲಿ ಏನು ಮಾತಾಡಬೇಕು ಅನ್ನೋ ಸೂಕ್ಷ್ಮತೆಯನ್ನು ಕಾಂಗ್ರೆಸ್ ಪಕ್ಷ ಕಳೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಉಕ್ರೇನ್‍ನಲ್ಲಿರುವ ಕನ್ನಡಿಗರ ರಕ್ಷಣೆ ಮಾಡುವುದರಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎನ್ನುವ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅಶ್ವಥ್ ನಾರಾಯಣ ಕಾಂಗ್ರೆಸ್ ಯಾವಾಗಲೂ ರಾಜಕೀಯ ಪ್ರೇರಿತ ಹೇಳಿಕೆ ಕೊಡುವುದು ಅವರ ಕೆಲಸ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಪಕ್ಷ ಯಾವಾಗಲೂ ಜವಾಬ್ದಾರಿಯ ಹೇಳಿಕೆ ಕೊಡುವುದಿಲ್ಲ. ಯಾವಾಗ ಏನು ಹೇಳಿಕೆ ಕೊಡಬೇಕು ಅನ್ನೋ ಸೂಕ್ಷ್ಮತೆ ಕೂಡಾ ಕಾಂಗ್ರೆಸ್ ಕಳೆದುಕೊಂಡಿದೆ. ಭಾರತ ಸರ್ಕಾರ ಉತ್ತಮವಾಗಿ ಕಾರ್ಯಾಚರಣೆ ಮಾಡುತ್ತಿದೆ. ಭಾರತ ಸರ್ಕಾರ ಸುತ್ತಮುತ್ತಲ ದೇಶಗಳ ಜೊತೆ ಮಾತುಕತೆ ನಡೆಸುತ್ತಿದೆ. 2 ಸಾವಿರ ಭಾರತೀಯರನ್ನು ಈಗಾಗಲೇ ವಾಪಸ್ ಕರೆ ತಂದಿದೆ ಎಂದು ಕಾಂಗ್ರೆಸ್‍ಗೆ ತಿರುಗೇಟು ಕೊಟ್ಟರು. ಇದನ್ನೂ ಓದಿ: ನೀಟ್ ವ್ಯವಸ್ಥೆ ಬಡವರ ವೈದ್ಯ ಶಿಕ್ಷಣದ ಕನಸು ನುಚ್ಚುನೂರು ಮಾಡುತ್ತಿದೆ: ಕುಮಾರಸ್ವಾಮಿ

    ರಷ್ಯಾ-ಉಕ್ರೇನ್ ಪ್ರಧಾನಿಗಳ ಜೊತೆಯೂ ನಮ್ಮ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದಾರೆ. ಭಾರತೀಯರ ರಕ್ಷಣೆಗೆ ಎಲ್ಲಾ ಕ್ರಮವಹಿಸುತ್ತಿದ್ದಾರೆ. ಭಾರತೀಯರ ರಕ್ಷಣೆಗೆ 4 ಕೇಂದ್ರ ಮಂತ್ರಿಗಳು ಹೋಗಿದ್ದಾರೆ. ಪ್ರಧಾನಿಗಳು ಖುದ್ದು ಮೇಲ್ ಉಸ್ತುವಾರಿ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೈದುನನ ಮೃತದೇಹವನ್ನಾದರೂ ನಮಗೆ ನೀಡಿ: ನವೀನ್ ಅತ್ತಿಗೆ ಕಣ್ಣೀರು

    ಸದ್ಯ ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಹೀಗಾಗಿ ರಕ್ಷಣೆಗೆ ಸಮಸ್ಯೆಯಾಗುತ್ತಿದೆ. ಎಲ್ಲರ ಜೀವ ಉಳಿಸಲು ನಮ್ಮ ಸರ್ಕಾರ ಆದ್ಯತೆ ನೀಡಿದೆ ಎಂದು ತಿಳಿಸಿದರು.

    ನಮ್ಮ ರಾಜ್ಯದಲ್ಲೂ ನೋಡಲ್ ಅಧಿಕಾರಿ ನೇಮಕ ಮಾಡಲಾಗಿದೆ. ಸಿಎಂ ಕೂಡಾ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲ್ಲರನ್ನು ಕರೆದುಕೊಂಡು ಬರುವ ಕೆಲಸ ನಮ್ಮ ಸರ್ಕಾರ ಮಾಡಲಿದ್ದು, ಕಾಂಗ್ರೆಸ್ ರಾಜಕೀಯ ಮಾಡುವುದು ಬಿಡಲಿ ಎಂದು ವಾಗ್ದಾಳಿ ನಡೆಸಿದರು.