Tag: russia

  • ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಪುಟಿನ್ ಆದೇಶ ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದ್ರೆ ಪ್ರತೀ ಸೈನಿಕರೊಂದಿಗೆ ಸೆಕ್ಸ್‌ಗೆ ಸಿದ್ಧಳಿದ್ದೇನೆ: ಮಾಡೆಲ್

    ಕೀವ್: ಉಕ್ರೇನ್‍ನಲ್ಲಿ ನಡೆಯುತ್ತಿರುವ ಯುದ್ಧವನ್ನು ತಡೆಯಲು ವಿದೇಶಿ ಮಾಡೆಲ್ ಒಬ್ಬರು ರಷ್ಯಾದ ಅಧ್ಯಕ್ಷ ಪುಟಿನ್ ಅವರ ಆದೇಶಗಳನ್ನು ನಿರಾಕರಿಸಿ ಉಕ್ರೇನ್‍ನಿಂದ ಹಿಂದಿರುಗಿದರೆ ಅವರ ಪ್ರತಿಯೊಬ್ಬ ಸೈನಿಕರೊಂದಿಗೆ ಸಂಭೋಗಿಸಲು ಸಿದ್ಧಳಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾಳೆ.

    ಮಾಡೆಲ್, ಟ್ವಿಟ್ಟರ್‌ನಲ್ಲಿ ಅಭಿಮಾನಿಗಳಿಗೋಸ್ಕರ ಫೋನ್ಸ್ ವೆಬ್‍ಸೈಟ್‍ವೊಂದನ್ನು ಹೊಂದಿದ್ದು, ಇನ್‍ಸ್ಟಾಗ್ರಾಮ್‍ನಲ್ಲಿ ಲಿಲ್ಲಿ ಸಮ್ಮರ್ಸ್ ಎಂಬ ಖಾತೆಯೊಂದನ್ನು ಹೊಂದಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಬರೆಯುತ್ತಿದ್ದಾರೆ. ಈಗ ಅವರು ಉಕ್ರೇನ್‍ನಲ್ಲಿ ನಡೆಯುತ್ತಿರುವ ರಕ್ತಪಾತವನ್ನು ತಡೆಯಲು ರಷ್ಯಾದ ಸೈನಿಕರಿಗೆ ಲೈಂಗಿಕತೆಯ ಆಯ್ಕೆಯೊಂದನ್ನು ನೀಡಿದ್ದಾರೆ. ‘ಉಕ್ರೇನ್‍ಗಾಗಿ ತನ್ನ ಶಸ್ತ್ರಾಸ್ತ್ರಗಳನ್ನು ಮತ್ತು ದ್ವೇಷವನ್ನು ತ್ಯಜಿಸಲು ಸಿದ್ಧವಾಗಿರುವ ಪ್ರತಿಯೊಬ್ಬ ರಷ್ಯಾದ ಸೈನಿಕನೊಂದಿಗೆ ನಾನು ಲೈಂಗಿಕತೆ ಹೊಂದಲು ಸಿದ್ಧಳಿದ್ದೇನೆ’ ಎಂದು ಬರೆದುಕೊಂಡು ಪೋಸ್ಟ್ ಮಾಡಿದ್ದಾರೆ.  ಇದನ್ನೂ ಓದಿ: ಡಬ್ಲ್ಯುಹೆಚ್‍ಒನಿಂದ ಎಚ್ಚರಿಕೆ- ಯುದ್ಧ ಬಿಕ್ಕಟ್ಟಿನ ಮಧ್ಯೆ ಉಕ್ರೇನ್‍ಗೆ ಮತ್ತೊಂದು ಆತಂಕ

    ಕೇವಲ ರಷ್ಯಾ ಅಲ್ಲದೇ ಪ್ರತಿಯೊಬ್ಬ ಸೈನಿಕನಿಗೂ ಒಂದು ಕೊಡುಗೆ ಇದೆ. ಲಿಲ್ಲಿ ಸಮ್ಮರ್ಸ್ ಮೊದಲಿನಿಂದಲೂ ಉಕ್ರೇನ್ ಅನ್ನು ಬೆಂಬಲಿಸುತ್ತಿದ್ದಾರೆ. ಉಕ್ರೇನಿಯನ್ ಧ್ವಜದೊಂದಿಗೆ ಅನೇಕ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಶಾಂತಿಗಾಗಿ ಮನವಿ ಮಾಡಿದ್ದಾರೆ. ರಷ್ಯಾದ ಪಡೆಗಳು ತಮ್ಮ ಅಧ್ಯಕ್ಷರ ಆದೇಶಗಳನ್ನು ಪಾಲಿಸಲು ನಿರಾಕರಿಸಬೇಕು ಮತ್ತು ಉಕ್ರೇನ್ ಬಿಟ್ಟು ಹಿಂದಿರುಗಬೇಕು ಎಂದಿದ್ದರು. ಹಾಗೇನಾದರೂ ಮಾಡಿದರೆ, ನಾನು ಅವರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ಸಿದ್ಧಳಿದ್ದೇನೆ. ನನ್ನ ಕೊಡುಗೆ ಪ್ರತಿ ರಷ್ಯಾದ ಸೈನಿಕನಿಗೆ ಎಂದು ಟ್ವೀಟ್‍ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ:  ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

    ಟ್ವೀಟ್‍ನಲ್ಲಿ ಏನಿದೆ?
    ‘ಯಾರಾದರೂ ಒಬ್ಬ ರಷ್ಯನ್ ಸತ್ತರೆ, ನಾನು ನಗ್ನ ಫೋಟೋವನ್ನು ಹಂಚಿಕೊಳ್ಳುತ್ತೇನೆ. ಅದೇ ರೀತಿ, ರಷ್ಯಾದ ಟ್ಯಾಂಕ್ ನಾಶವಾದಾಗ, ಅನುಯಾಯಿಗಳು ನನ್ನ ಮಾದಕ ವೀಡಿಯೋವನ್ನು ಪಡೆಯುತ್ತಾರೆ. ಯಾರಾದರೂ ರಷ್ಯಾದ ವಿಮಾನವನ್ನು ಹೊಡೆದುರುಳಿಸಿದರೆ, ನಾನು ಅವನಿಗೆ ನನ್ನೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಅವಕಾಶವನ್ನು ನೀಡುತ್ತೇನೆ  ಎಂದಿದ್ದಾರೆ.

    ವ್ಲಾಡಿಮಿರ್ ಪುಟಿನ್ ಅವರ ಉಕ್ರೇನ್ ವಿರುದ್ಧದ ಯುದ್ಧದ ನಿರ್ಧಾರಕ್ಕೆ ಸಾಕಷ್ಟು ವಿರೋಧವಿದೆ. ರಷ್ಯಾದ ಅನೇಕ ಸೆಲೆಬ್ರಿಟಿಗಳು ಕೂಡ ತಮ್ಮ ಕೋಪವನ್ನು ವ್ಯಕ್ತಪಡಿಸಿದ್ದಾರೆ.

  • ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಖಾರ್ಕಿವ್‍ನ ಆಡಳಿತ ಕಚೇರಿ ಮೇಲೆ ಬಾಂಬ್ ದಾಳಿ- ಕಟ್ಟಡ ಸಂಪೂರ್ಣ ಧ್ವಂಸ

    ಕೀವ್: ರಷ್ಯಾ ದಾಳಿಗೆ ಉಕ್ರೇನ್ ತತ್ತರಿಸಿದ್ದು, ಇಂದು ಖಾರ್ಕಿವ್‍ನ ಸೆಂಟ್ರಲ್ ಸ್ಕ್ವೇರ್ ಮೇಲೆ ರಷ್ಯಾ ದಾಳಿ ನಡೆಸಿದ್ದು, ಕಟ್ಟಡ ಸಂಪೂರ್ಣ ನಾಶವಾಗಿದೆ.

    ನಿನ್ನೆ ರಾತ್ರಿಯಿಡೀ ಕೀವ್ ಮೇಲೆ ರಷ್ಯಾ ದಾಳಿ ನಡೆಸಿದೆ. ರಷ್ಯಾ ದಾಳಿಗೆ ಉಕ್ರೇನ್‍ನ ಬೃಹತ್ ಕಟ್ಟಗಳು ಧ್ವಂಸವಾಗಿದೆ. ರಷ್ಯಾ ಜನವಸತಿ ಕೇಂದ್ರಗಳ ಮೇಲೂ ದಾಳಿ ಮಾಡುತ್ತಿದ್ದು, ಈಗ ಖಾರ್ಕಿವ್‍ನ ಕೇಂದ್ರದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಸ್ಥಳೀಯ ಆಡಳಿತ ಕಚೇರಿ ಮೇಲೆ ರಷ್ಯಾ ದಾಳಿ ನಡೆಸಿದೆ. ಕೀವ್ ಮತ್ತು ಖಾರ್ಕಿವ್‍ನಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ.

    ರಷ್ಯಾದಿಂದ ಉಕ್ರೇನ್‍ನ ಮೇಲೆ ವ್ಯಾಕ್ಯೂಮ್ ಬಾಂಬ್ ಪ್ರಯೋಗವಾಗುತ್ತಿದೆ. ನಿನ್ನೆ ರಾತ್ರಿಯಿಡೀ ದಾಳಿ ನಡೆಸಿದೆ. ಉಕ್ರೇನ್‍ನಲ್ಲಿ ಕ್ಷಿಪಣಿ ದಾಳಿ ನಿರಂತರವಾಗಿ ನಡೆಸುತ್ತಿದ್ದು, ಜನರು ಕ್ಷಣ ಕ್ಷಣಕ್ಕೂ ಭಯದಲ್ಲೇ ಜೀವನ ಸಾಗಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ರಷ್ಯಾ ಪಡೆಗಳು ನಗರಗಳ ಮೇಲೆ ಫಿರಂಗಿಗಳನ್ನು ಬಳಸುತ್ತಿವೆ. ಇದನ್ನೂ ಓದಿ: ಜಾರ್ಖಂಡ್ ದೋಣಿ ದುರಂತದಲ್ಲಿ 14 ಮಂದಿ ಸಾವು – ಸಿಎಂನಿಂದ 4 ಲಕ್ಷ ಪರಿಹಾರ ಘೋಷಣೆ

    ವ್ಯಾಕ್ಯೂಮ್ ಬಾಂಬ್ ಅಪ್ಪಳಿಸಿದರೆ ವಾತಾವರಣದ ಆಮ್ಲಜನಕ ಗ್ರಹಿಸಿ ಹೆಚ್ಚಿನ ಅನಾಹುತವಾಗುತ್ತದೆ. 300ಮೀ ದೂರಕ್ಕೆ ಭಾರೀ ಹಾನಿ ಉಂಟು ಮಾಡಬಲ್ಲದು. ಇದನ್ನು ಕೀವ್ ಮೇಲೆ ಪ್ರಯೋಗಿಸಲಾಗಿದೆ ಜೊತೆಗೆ ರಷ್ಯಾದಿಂದ ಪರಮಾಣು ರಹಿತ ಅತ್ಯಾಧುನಿಕ ಬಾಂಬ್‍ಗಳನ್ನು ಪ್ರಯೋಗ ಮಾಡಲಾಗುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

    ಉಕ್ರೇನ್ ಮೇಲೆ 6ನೇ ದಿನ ಇನ್ನಷ್ಟು ಭೀಕರ ದಾಳಿಗೆ ರಷ್ಯಾ ಸನ್ನದ್ಧವಾಗಿದೆ. ರಾಜಧಾನಿ ಕೀವ್ ಹೊರಭಾಗದಲ್ಲಿ 40 ಮೈಲಿಯಷ್ಟು ಮಿಲಿಟರಿ ವಾಹನಗಳ ಸಾಲು ನಿಂತಿವೆ. 40 ಮೈಲಿ ದೂರದಷ್ಟು ಮಿಲಿಟರಿ ವಾಹನಗಳನ್ನು ರಷ್ಯಾ ಸನ್ನದ್ಧಗೊಳಿಸಿದೆ. ಯಾವುದೇ ಕ್ಷಣದಲ್ಲಾದರೂ ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿ ನಿರೀಕ್ಷೆಯಿದೆ. ಇದನ್ನೂ ಓದಿ: ರಷ್ಯಾ ಅಧ್ಯಕ್ಷನಿಂದ ಬ್ಲ್ಯಾಕ್ ಬೆಲ್ಟ್ ವಾಪಸ್ ಪಡೆದ ವಿಶ್ವ ಟೇಕ್ವಾಂಡೋ

  • ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಮಾತಾಡಿ ಧೈರ್ಯ ತುಂಬಿದ ಗೋಪಾಲಯ್ಯ

    ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳೊಂದಿಗೆ ಮಾತಾಡಿ ಧೈರ್ಯ ತುಂಬಿದ ಗೋಪಾಲಯ್ಯ

    ಬೆಂಗಳೂರು: ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಸಿಲುಕಿರುವ ಹಾಸನ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಇಂದು ಮುಂಜಾನೆ ವೀಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು.

    ಹಾಸನ ಜಿಲ್ಲೆಯ ಬೆಂಗಳೂರಿನ ನಿವಾಸಿ ಪೂರ್ಣ ಅವರೊಂದಿಗೆ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಮಾತನಾಡಿದ ಗೋಪಾಲಯ್ಯ ಅವರು, ಯಾವುದೇ ರೀತಿಯ ಸಂದರ್ಭ ಬಂದರೂ ಧೈರ್ಯಗೆಡದೆ ಆತ್ಮಸ್ಥೈರ್ಯದಿಂದ ಎಲ್ಲ ಕಷ್ಟಗಳನ್ನು ಎದುರಿಸಲು ಸಲಹೆ ನೀಡಿದರು. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!

    ಯುದ್ಧ ಪೀಡಿತ ನಗರದಲ್ಲಿ ನೀರು, ಆಹಾರ, ರಕ್ಷಣೆ ಇತರೆ ಮೂಲಭೂತ ಸೌಕರ್ಯಗಳ ಲಭ್ಯತೆ ಕುರಿತು ಮಾಹಿತಿ ಪಡೆದ ಸಚಿವರು, ಅವಕಾಶ ಸಿಕ್ಕಾಗ ಸಾಧ್ಯವಾದಷ್ಟು ಹೆಚ್ಚು ನೀರು ಮತ್ತು ಆಹಾರ ಪದಾರ್ಥಗಳನ್ನು ಸಂಗ್ರಹಿಸಿ ಇಟ್ಟುಕೊಳ್ಳುವಂತೆ ತಿಳಿಸಿದರು. ಇದರ ಜೊತೆಗೆ ಯಾವುದೇ ಸಮಯದಲ್ಲಾದರೂ ಕೂಡ ತಮ್ಮ ದೂರವಾಣಿ ಸಂಖ್ಯೆಗೆ ಕರೆ ಮಾಡಲು ತಿಳಿಸಿದರು.

    ಕೇಂದ್ರ ಮತ್ತು ಕರ್ನಾಟಕ ರಾಜ್ಯ ಸರ್ಕಾರಗಳು ಯುಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ಮತ್ತು ಭಾರತೀಯ ನಾಗರೀಕರನ್ನು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸುರಕ್ಷಿತವಾಗಿ ಕರೆ ತಂದಿದೆ. ಉಳಿದವರನ್ನು ಕರೆತರುವ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ನಿಮ್ಮನ್ನು ಕೂಡ ಶೀಘ್ರವೇ ಕರೆ ತರಲು ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಪುರುಷನ ವೇಷಧರಿಸಿ ಕಳ್ಳತನ ಮಾಡಲು ಬಂದ ಯುವತಿ ಅರೆಸ್ಟ್!

    ಇದೇ ವೇಳೆ ಬೆಳಗಾವಿ ಜಿಲ್ಲೆಯ ಅಥಣಿ ರಕ್ಷಿತ್ ವಿದ್ಯಾರ್ಥಿಯೊಂದಿಗೂ ಕೂಡ ಮಾತನಾಡಿದ ಸಚಿವರು, ನಿಮ್ಮ ಜೊತೆಯಲ್ಲಿರುವ ಎಲ್ಲರಿಗೂ ಧೈರ್ಯದಿಂದ ಇರಲು ತಿಳಿಸಿದರು. ಬೆಂಗಳೂರಿನ ಮಾಗಡಿ ರಸ್ತೆಯ ಕಾರ್ತಿಕ್ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳ ವಿದ್ಯಾರ್ಥಿಗಳ ಜೊತೆ ಮಾತನಾಡಿದರು.

  • ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ

    ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾದಿಂದ ಫಿರಂಗಿ ದಾಳಿ

    ಕೀವ್: ಉಕ್ರೇನ್ ಮೇಲೆ ರಷ್ಯಾ ದಾಳಿ 6ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಯುದ್ಧದ ತೀವ್ರವಾಗಿದೆ. ಉಕ್ರೇನ್‍ನ ಶಾಲಾ- ಕಾಲೇಜುಗಳ ಮೇಲೆ ರಷ್ಯಾ ಫಿರಂಗಿ ದಾಳಿ ನಡೆಸಿದೆ.

    ರಷ್ಯಾ ಉಕ್ರೇನ್‍ನ ನಾಗರಿಕ ಪ್ರದೇಶಗಳನ್ನು ಹೆಚ್ಚು ಗುರಿಯಾಗಿಸಿಕೊಂಡಿದೆ. ಈಗಾಗಲೇ ಉಕ್ರೇನ್‍ನ ಮಿಲಿಟರಿ ನೆಲೆಗಳ ರಷ್ಯಾ ಫಿರಂಗಿ ದಾಳಿ ನಡೆಸಿದೆ. ಈ ವೇಳೆ ಉಕ್ರೇನ್‍ನ 70 ಸೈನಿಕರ ಹತ್ಯೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಶಾಲಾ- ಕಾಲೇಜುಗಳ ಮೇಲೂ ದಾಳಿ ನಡೆಸಿದೆ. ಇದರಲ್ಲಿ 10 ಮಕ್ಕಳ ಸಾವನ್ನಪ್ಪಿದ್ದು, ಉಕ್ರೇನ್‍ನ 6 ಶಾಲೆಗಳು ಧ್ವಂಸವಾಗಿದೆ.

    ರಾಜಧಾನಿ ಕೀವ್‍ನಲ್ಲಿ ರಷ್ಯಾದಿಂದ ವ್ಯಾಕ್ಯೂಮ್ ಬಾಂಬ್ ಪ್ರಯೋಗ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ. ವ್ಯಾಕ್ಯೂಮ್ ಬಾಂಬ್ ಅಪ್ಪಳಿಸಿದರೆ ವಾತಾವರಣದ ಆಮ್ಲಜನಕ ಗ್ರಹಿಸಿ ಹೆಚ್ಚಿನ ಅನಾಹುತವಾಗುತ್ತದೆ. 300ಮೀ ದೂರಕ್ಕೆ ಭಾರೀ ಹಾನಿ ಉಂಟು ಮಾಡಬಲ್ಲದು. ಇದನ್ನು ಕೀವ್ ಮೇಲೆ ಪ್ರಯೋಗಿಸಲಾಗಿದೆ ಜೊತೆಗೆ ರಷ್ಯಾದಿಂದ ಪರಮಾಣು ರಹಿತ ಅತ್ಯಾಧುನಿಕ ಬಾಂಬ್‍ಗಳನ್ನು ಪ್ರಯೋಗ ಮಾಡಲಾಗುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

    ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿಗೆ ರಷ್ಯಾ ಸನ್ನದ್ಧವಾಗಿದೆ. ರಾಜಧಾನಿ ಕೀವ್ ಹೊರಭಾಗದಲ್ಲಿ 40 ಮೈಲಿಯಷ್ಟು ಮಿಲಿಟರಿ ವಾಹನಗಳ ಸಾಲು ನಿಂತಿವೆ. 40 ಮೈಲಿ ದೂರದಷ್ಟು ಮಿಲಿಟರಿ ವಾಹನಗಳನ್ನು ರಷ್ಯಾ ಸನ್ನದ್ಧಗೊಳಿಸಿದೆ. ಯಾವುದೇ ಕ್ಷಣದಲ್ಲಾದರೂ ಉಕ್ರೇನ್ ಮೇಲೆ ಇನ್ನಷ್ಟು ಭೀಕರ ದಾಳಿ ನಿರೀಕ್ಷೆಯಿದೆ. ಇದನ್ನೂ ಓದಿ: ಅನ್ನ, ನೀರು, ಮೊಬೈಲ್ ಚಾರ್ಜಿಂಗ್ ಮಾಡಲಾಗದೆ ವಿದ್ಯಾರ್ಥಿಗಳ ಪರದಾಟ

    ಈ ಬಗ್ಗೆ ಅಮೆರಿಕ ಗುಪ್ತಚರ ಮತ್ತು ರಕ್ಷಣಾ ಸಚಿವಾಲಯದಿಂದ ಮಾಹಿತಿ ಹೊರಡಿಸಿದ್ದು, ಉಕ್ರೇನ್‍ನಲ್ಲಿ ಇನ್ನಷ್ಟು ಭೀಕರ ರಕ್ತಸಿಕ್ತ ಯುದ್ಧ ಆಗಬಹುದು. ಕೀವ್‍ನಲ್ಲಿ ಇನ್ನಷ್ಟು ರಕ್ತಸಿಕ್ತ, ದೀಘಕಾಲದ ದಾಳಿ ಆಗಲಿದೆ ಎಂದು ಅಮೆರಿಕ ಸಂಸದರಿಗೆ ವಿವರಣೆ ನೀಡಿದೆ. ಇದನ್ನೂ ಓದಿ: ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ಬಯಲು- 1000 ಕೋಟಿಗೂ ಅಧಿಕ ಅಕ್ರಮ ಪತ್ತೆ

  • ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ

    ಉಕ್ರೇನ್ ಬಂಕರ್‌ನ ಕರಾಳ ಪರಿಸ್ಥಿತಿ ಬಿಚ್ಚಿಟ್ಟ ರಾಯಚೂರು ವಿದ್ಯಾರ್ಥಿ

    ರಾಯಚೂರು: ಉಕ್ರೇನ್ ರಷ್ಯಾ ಯುದ್ಧ ಹಿನ್ನೆಲೆ ಉಕ್ರೇನ್‍ನಲ್ಲಿ ಸಿಲುಕಿರುವ ಜಿಲ್ಲೆಯ ಒಟ್ಟು 14 ವಿದ್ಯಾರ್ಥಿಗಳು ಕಷ್ಟದ ಸಮಯ ಎದುರಿಸುತ್ತಿದ್ದಾರೆ.

    ರಾಯಚೂರು ಜಿಲ್ಲೆಯ ಲಿಂಗಸುಗೂರಿನ ವಿದ್ಯಾರ್ಥಿ ಪ್ರಜ್ವಲ್ ಕುಮಾರ್ ಉಕ್ರೇನ್ ಬಂಕರ್‍ನಲ್ಲಿನ ಕರಾಳ ಪರಿಸ್ಥಿತಿ ಬಿಚ್ಚಿಟ್ಟಿದ್ದಾರೆ. ಆದಷ್ಟು ಬೇಗ ಭಾರತಕ್ಕೆ ಕರೆಸಿಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ಉಕ್ರೇನ್‍ನ ಕಾರ್ಕೀವ್‍ನಲ್ಲಿಯೇ ರಷ್ಯನ್ ಸೇನೆ ಬಂದಿಳಿದಿದೆ. ಕಫ್ರ್ಯೂ ಜಾರಿಯಾಗಿದ್ದು ನಾವು ಬಂಕರ್ ಒಳಗಡೆಯೇ ಕಾಲ ಕಳೆಯುತ್ತಿದ್ದೇವೆ. ಊಟ ನೀರಿಗೆ ಸಮಸ್ಯೆಯಾಗಿದೆ. ಹೊರಗಡೆ ಹೋದರೆ ಅಪಾಯವಿದೆ. ಒಳಗಡೆಯೇ ಇದ್ದರೆ ಆರೋಗ್ಯದ ಸಮಸ್ಯೆ ಕಾಡುತ್ತಿದೆ. ಏನು ಮಾಡಬೇಕು ಅನ್ನೋದು ತಿಳಿಯುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ- ಕಲಬೆರಕೆ ಸೇಂದಿ ಜಪ್ತಿ

    ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದು, ನಿರಂತರವಾಗಿ ವಿವರ ಪಡೆಯುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಅರ್ಜಿಗಳನ್ನ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗುತ್ತಿಲ್ಲ. ಗಡಿ ಪ್ರದೇಶದಿಂದ ಸುಮಾರು 1,400 ಕಿ.ಮೀ ದೂರದಲ್ಲಿ ನಾವಿದ್ದೇವೆ. ಇಲ್ಲಿ ತುಂಬಾ ಭಯವಾಗುತ್ತಿದೆ ಎಂದು ಪ್ರಜ್ವಲ್ ಕುಮಾರ್ ವಿಡಿಯೋ ಕಾಲ್ ಮೂಲಕ ಪೋಷಕರಿಗೆ ತಮ್ಮ ಕರಾಳ ಪರಿಸ್ಥಿತಿ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಮೆಟ್ರೋ ನಿಲ್ದಾಣದ ಗ್ರಿಲ್‍ನಲ್ಲಿ ಸಿಲುಕಿದ್ದ ಬಾಲಕಿ ರಕ್ಷಿಸಿದ CISF ಸಿಬ್ಬಂದಿ!

  • ರಷ್ಯಾದ ವಿಮಾನ, ಹಡಗುಗಳನ್ನು ಜಾಗತಿಕವಾಗಿ ನಿಷೇಧಿಸಿ: ಉಕ್ರೇನ್ ಒತ್ತಾಯ

    ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿದ ದಾಳಿಗೆ ಶಿಕ್ಷೆಯಾಗಿ ವಿದೇಶಿ ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ರಷ್ಯಾದ ವಿಮಾನ ಹಾಗೂ ಹಡಗುಗಳನ್ನು ಜಾಗತಿಕವಾಗಿ ನಿಷೇಧಿಸಬೇಕು ಎಂದು ಉಕ್ರೇನ್‍ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಒತ್ತಾಯಿಸಿದರು.

    ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ ಅವರು, ನಾವು ಎಲ್ಲಾ ಬಂದರು, ಕಾಲುವೆ ಹಾಗೂ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ರಷ್ಯಾ ಪ್ರವೇಶಿಸದಂತೆ ಮುಚ್ಚಬೇಕು ಎಂದು ಒತ್ತಾಯಿಸಿದ ಅವರು, ರಷ್ಯಾದ ಕ್ಷಿಪಣಿಗಳು, ವಿಮಾನಗಳು ಮತ್ತು ಹೆಲಿಕಾಪ್ಟರ್‌ಗಳು ಸಂಚರಿಸದಂತೆ ನಿರ್ಬಂಧ ಹೇರಬೇಕು ಎಂದು ಅಂತಾರಾಷ್ಟ್ರೀಯ ಸಮುದಾಯವನ್ನು ಒತ್ತಾಯಿಸಿದರು.

    ರಷ್ಯಾ ಕದನ ವಿರಾಮದ ನೆಪದಲ್ಲಿ ಮಾತುಕತೆ ನಡೆಸುತ್ತಿದ್ದಾಗ ಕೀವ್‍ನ್ನು ಅತಿಕ್ರಮಿಸಲು ಉಕ್ರೇನ್ ಮೇಲೆ ಬಾಂಬ್ ದಾಳಿ ಹಾಗೂ ಗುಂಡಿನ ದಾಳಿ ಮಾಡಿದೆ ಎಂದು ಆರೋಪಿಸಿದ ಅವರು, ನಿಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ ಎಂದು ಝೆಲೆನ್ಸ್ಕಿ ರಷ್ಯಾ ನಾಯಕರಿಗೆ ವೀಡಿಯೋ ಸಂದೇಶದಲ್ಲಿ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆ- ಇಂದು, ನಾಳೆ ಬೆಂಗಳೂರು ಲಾಕ್ ಪಕ್ಕಾ

    ರಷ್ಯಾದ ನಾಯಕ ವ್ಲಾಡಿಮಿರ್ ಪುಟಿನ್ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗಿನ ಫೋನ್‌ ಸಂವಾದ ನಡೆಸಿದರು. ಈ ವೇಳೆ ರಷ್ಯಾದ ಗಡಿಯ ಸಮೀಪವಿರುವ ಉಕ್ರೇನ್‍ನ ಎರಡನೇ ಅತಿದೊಡ್ಡ ನಗರವಾದ ಖಾರ್ಕಿವ್‍ನಲ್ಲಿ ರಷ್ಯಾದ ದಾಳಿಯಿಂದ ಕನಿಷ್ಠ 11 ಜನರು ಸಾವನ್ನಪ್ಪಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಉದ್ಯೋಗ ನೀಡಲು ಸಮಾಜವಾದಿ ಪಕ್ಷ ಬದ್ಧ : ಅಖಿಲೇಶ್ ಯಾದವ್

    ರಷ್ಯಾದ ದಾಳಿಗೆ ಉಕ್ರೇನ್‌ ತತ್ತರಿಸಿದ್ದು, ಈವರೆಗೆ 14 ಮಕ್ಕಳು ಸೇರಿದಂತೆ ರಷ್ಯಾ ದಾಳಿಯಲ್ಲಿ 350ಕ್ಕೂ ಅಧಿಕ ನಾಗರಿಕರು ಸಾವನ್ನಪ್ಪಿದ್ದಾರೆ.

  • ಉಕ್ರೇನ್‍ನಿಂದ ಬಂದವರಿಗೆ ಕೋವಿಡ್-19 ರೂಲ್ಸ್ ನಿಂದ ವಿನಾಯಿತಿ

    ನವದೆಹಲಿ: ಉಕ್ರೇನ್ ಸಂಕಷ್ಟದ ಸಂದರ್ಭದಲ್ಲಿ ಭಾರತಕ್ಕೆ ಮರಳಿ ಬರುತ್ತಿರುವ ಪ್ರಯಾಣಿಕರಿಗೆ ಕೋವಿಡ್-19 ನಿರ್ಬಂಧಗಳಲ್ಲಿ ವಿನಾಯಿತಿ ನೀಡಲಾಗುವುದು ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

    ರಷ್ಯಾ ಉಕ್ರೇನ್ ಮೇಲೆ ದಾಳಿ ಮಾಡಲು ಪ್ರಾರಂಭಿಸಿದಾಗಿನಿಂದ ಯುದ್ಧಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರು ತಾಯ್ನಾಡಿಗೆ ಮರಳಲು ಹಾತೊರೆಯುತ್ತಿದ್ದಾರೆ. ಈಗಾಗಲೇ ಭಾರತ ಸರ್ಕಾರ ಸಾವಿರಾರು ಭಾರತೀಯರನ್ನು ಕರೆ ತರುವ ಕೆಲಸ ಮಾಡುತ್ತಿದೆ. ಇದೇ ವೇಳೆ ಆರೋಗ್ಯ ಸಚಿವಾಲಯ ಕೋವಿಡ್ ನಿಯಮಾವಳಿಗಳಿಗೆ ಕೊಂಚ ಬ್ರೇಕ್ ನೀಡಿದೆ. ಇದನ್ನೂ ಓದಿ: ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಅರ್ಜಿ ಹಾಕಿದ ಉಕ್ರೇನ್

    ತುರ್ತು ಪರಿಸ್ಥಿತಿಯಲ್ಲಿ ಉಕ್ರೇನ್‍ನಿಂದ ಭಾರತಕ್ಕೆ ಮರಳುವವರಿಗೆ ಪ್ರೀ-ಬೋರ್ಡಿಂಗ್ ಆರ್‍ಟಿಪಿಸಿಆರ್ ಪರೀಕ್ಷೆ ಹಾಗೂ ಲಸಿಕಾ ಪ್ರಮಾಣ ಪತ್ರವನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಸೋಮವಾರ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಮೂಲಕ ಕೋವಿಡ್ ನಿಯಮಾವಳಿಗೆ ಸ್ವಲ್ಪ ಮಟ್ಟಿನ ವಿನಾಯಿತಿ ದೊರಕಿದೆ. ಇದನ್ನೂ ಓದಿ: ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ಫೆಬ್ರವರಿ 28ರ ವರೆಗೆ 6 ವಿಮಾನಗಳು ಉಕ್ರೇನ್‍ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆ ತಂದಿದ್ದು, ಅದರಲ್ಲಿ ಸುಮಾರು 1,400 ಪ್ರಯಾಣಿಕರಿದ್ದರು. 1 ವಿಮಾನ ಮುಂಬೈಗೆ ಮರಳಿದ್ದು, ಉಳಿದ ವಿಮಾನಗಳು ದೆಹಲಿಗೆ ಬಂದಿಳಿದಿವೆ. ಆದರೆ ಇಲ್ಲಿ ವರೆಗೆ ಯಾರೊಬ್ಬರನ್ನೂ ಪ್ರತ್ಯೇಕವಾಗಿ ಇರಿಸಲಾಗಿಲ್ಲ ಎಂದು ಸರ್ಕಾರ ತಿಳಿಸಿದೆ.

  • ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಅರ್ಜಿ ಹಾಕಿದ ಉಕ್ರೇನ್

    ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಅರ್ಜಿ ಹಾಕಿದ ಉಕ್ರೇನ್

    ಕೀವ್: ರಷ್ಯಾ-ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ಸೇರ್ಪಡೆಗೊಳ್ಳಲು ಅರ್ಜಿ ಸಲ್ಲಿಸಿದ್ದಾರೆ.

    ಝೆಲೆನ್ಸ್ಕಿ ಯುರೋಪಿಯನ್ ಒಕ್ಕೂಟದ ಸದಸ್ಯತ್ವ ಸೇರ್ಪಡೆ ಸಹಿ ಹಾಕಿದ್ದಾರೆ ಎಂದು ಉಕ್ರೇನ್‍ನ ಪಾರ್ಲಿಮೆಂಟ್‍ನಲ್ಲಿ ಘೋಷಣೆ ಮಾಡಲಾಯಿತು. ಈ ಮೂಲಕ ರಷ್ಯಾ ತೀವ್ರ ವಿರೋಧದ ನಡುವೆ ಯುರೋಪಿಯನ್ ಒಕ್ಕೂಟಕ್ಕೆ ಸೇರುವ ನಿರ್ಧಾರವನ್ನು ಝೆಲೆನ್ಸ್ಕಿ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ಉಕ್ರೇನ್‍ಗೆ ಯುರೋಪಿಯನ್ ಒಕ್ಕೂಟದ ಶಾಶ್ವತ ಸದಸ್ಯತ್ವಕ್ಕೆ ರಷ್ಯಾ ವಿರೋಧ ವ್ಯಕ್ತಪಡಿಸಿ ಯುದ್ಧ ಸಾರಿತ್ತು. ಇದೀಗ ರಷ್ಯಾ, ಉಕ್ರೇನ್ ಯುದ್ಧದ ನಡುವೆಯೇ ಉಕ್ರೇನ್‍ಗೆ ಸದಸ್ಯತ್ವಕ್ಕೆ ಅರ್ಜಿ ಹಾಕಿರುವುದು ರಷ್ಯಾವನ್ನು ಇನ್ನಷ್ಟು ಕೆರಳಿಸಿದೆ. ಉಕ್ರೇನ್ ಯುರೋಪಿಯನ್ ಒಕ್ಕೂಟಕ್ಕೆ ಸೇರಬಾರದರು ಎಂದು ರಷ್ಯಾ ಪಟ್ಟು ಹಿಡಿದಿತ್ತು. ಇದನ್ನೂ ಓದಿ: ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

  • ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ರಷ್ಯಾದಿಂದ ಶೆಲ್, ರಾಕೆಟ್ ದಾಳಿ – ಉಕ್ರೇನ್‍ನಿಂದ 4 ಲಕ್ಷ ಮಂದಿ ಮಹಾವಲಸೆ?

    ಕೀವ್: ರಷ್ಯಾ ಮೂರೂ ವಿಭಾಗಗಳಲ್ಲಿ ಶೆಲ್, ರಾಕೆಟ್, ಬಾಂಬ್ ದಾಳಿ ಮಾಡುತ್ತಿರುವ ಕಾರಣ ಉಕ್ರೇನ್‍ನಲ್ಲಿ ಮಹಾವಲಸೆ 5ನೇ ದಿನ ಇಂದು ಕೂಡ ಮುಂದುವರಿದಿದೆ.

    ಇಲ್ಲಿವರೆಗೆ 4 ಲಕ್ಷ ಜನ ಉಕ್ರೇನ್ ತೊರೆದಿದ್ದು, ಪರಿಸ್ಥಿತಿ 7 ಲಕ್ಷದವರೆಗೆ ಮುಂದುವರಿಯಲಿದೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಹೈಕಮಿಷನರ್ ಆತಂಕ ವ್ಯಕ್ತಪಡಿಸಿದ್ದಾರೆ. ಈಗಾಗಲೇ, ಪೋಲೆಂಡ್ -2,81,000, ಹಂಗೇರಿ – 84,586, ಮಾಲ್ಡೋವಾ – 36,398, ಯೂರೋಪ್ – 34,600, ರೊಮೇನಿಯಾ – 32,517, ಸ್ಲೋವಾಕಿಯಾ – 30,000, ಬೆಲಾರಸ್ – 311, ಲ್ಯಾಟಿವಿಯಾ – 163 ಜನ ವಲಸೆ ಹೋಗಿರುವುದಾಗಿ ವರದಿಯಾಗಿದೆ. ಇದನ್ನೂ ಓದಿ: ಉಕ್ರೇನ್‍ಗೆ ಭಾರತದಿಂದ ವೈದ್ಯಕೀಯ ನೆರವು: ಅರಿಂದಮ್ ಬಾಗ್ಚಿ

    ಅಧಃಪತನ ತಲುಪಿದ ರಷ್ಯಾದ ಆರ್ಥಿಕತೆ:
    ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಷ್ಯಾದ ಆರ್ಥಿಕತೆ ಅಧಃಪತನ ತಲುಪುತ್ತಿದೆ. ರಷ್ಯಾದ ಯುದ್ಧ ನಡೆ ಖಂಡಿಸಿ ಅಮೆರಿಕ, ಇಂಗ್ಲೆಂಡ್, ಜರ್ಮನಿ, ಜಪಾನ್, ಯೂರೋಪಿಯನ್ ಒಕ್ಕೂಟ ಸೇರಿದಂತೆ ಹಲವು ದೇಶಗಳು ವಿವಿಧ ಧಿಗ್ಬಂಧನ ವಿಧಿಸಿರೋದ್ರಿಂದ ರಷ್ಯಾಗೆ ಹೊಡೆತ ಬಿದ್ದಿದೆ. ರುಬೆಲ್ ಮೌಲ್ಯ ದಾಖಲೆಯ ಶೇ.30ರಷ್ಟು ಕುಸಿತಕಂಡಿದ್ದು, ರಫ್ತು ಕಂಪನಿಗಳಿಗೆ ವಿದೇಶಿ ಹಣ ಮಾರಾಟಕ್ಕೆ ಸಿದ್ಧವಾಗುವಂತೆ ಸೂಚನೆ ನೀಡಲಾಗಿದೆ. ಹಣದುಬ್ಬರದ ಏಕಾಏಕಿ ಜಿಗಿತ ಕಂಡಿದ್ದು, ರಷ್ಯಾ ಸೆಂಟ್ರಲ್ ಬ್ಯಾಂಕ್‍ನ ಬಡ್ಡಿದರ ದಿಢೀರ್ ಏರಿಕೆ ಆಗಿದೆ. ಶೇ. 9.5 ರಿಂದ ಶೇ.20 ರಷ್ಟು ಏರಿಕೆ (ಕೀ ಇಂಟರೆಸ್ಟ್ ರೇಟ್) ಏರಿಕೆ ಕಂಡಿದೆ.ಇದನ್ನೂ ಓದಿ: ದಿಢೀರ್‌ ಭಾರೀ ಪ್ರಮಾಣದಲ್ಲಿ ಬಡ್ಡಿದರ ಏರಿಸಿದ ರಷ್ಯನ್‌ ಬ್ಯಾಕ್‌

    ಪುಟಿನ್ ನಡೆಗೆ ಕಿಡಿ:
    ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ನಡೆಗೆ ಪ್ರಪಂಚದ ಹಲವು ದೇಶಗಳು ಕೆಂಡಾಮಂಡಲವಾಗಿವೆ. ಝೆಕ್ ರಿಪಬ್ಲಿಕ್‍ನ ರಾಜಧಾನಿ ಪ್ರಾಗ್ಯುನಲ್ಲಿ ಬೃಹತ್ ಪ್ರತಿಭಟನೆ ನಡೀತು. ಲಕ್ಷಾಂತರ ಮಂದಿ ಕೂಡಲೇ ಯುದ್ಧವನ್ನು ನಿಲ್ಲಿಸಿ ಎಂದು ಒತ್ತಾಯಿಸಿದ್ರು. ಉಕ್ರೇನ್ ರಾಷ್ಟ್ರಧ್ವಜ ಹಿಡಿದು ಉಕ್ರೇನ್ ಪರ ಘೋಷಣೆ ಕೂಗಿದ್ರು. ಟೋಕಿಯೋದ ಶಿಬುಯಾದಲ್ಲೂ ಪ್ರತಿಭಟನೆ ನಡೆಸಿ ಪುಟಿನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇತ್ತ ರಷ್ಯಾದ ಮಾಸ್ಕೋದಲ್ಲೂ ಪುಟಿನ್ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ. ಸಾವಿರಾರು ಮಂದಿ ರಷ್ಯನ್ನರು ಯುದ್ಧ ನಿಲ್ಲಿಸುವಂತೆ ಪುಟಿನ್‍ಗೆ ಒತ್ತಾಯಿಸುತ್ತಿದ್ದಾರೆ. ಬೆಲಾರಸ್‍ನ ಅಪಾರ್ಟ್‍ಮೆಂಟ್‍ಗಳನ್ನೂ ಉಕ್ರೇನ್ ಪರ ಘೋಷಣೆ ಕೇಳಿ ಬಂತು. ಯುದ್ಧವನ್ನು ಖಂಡಿಸಿ ಯುರೋಪಿಯನ್ ದೇಶಗಳಲ್ಲಿರುವ ರಷ್ಯನ್ನರು ತಮ್ಮ ಪಾಸ್‍ಪೋರ್ಟ್‍ಗಳನ್ನು ಸುಟ್ಟು ಆಕ್ರೋಶ ಹೊರಹಾಕಿದ್ರು. ನೆದರ್‌ಲೆಂಡ್ ರಾಜಧಾನಿ ಅಮ್‍ಸ್ಟರ್‍ಡ್ಯಾಮ್‍ನಲ್ಲೂ ಉಕ್ರೇನ್ ಬೆಂಬಲಿಸಿ ಬೃಹತ್ ಪ್ರತಿಭಟನೆ ನಡೀತು. ಯುದ್ಧ ನಿಲ್ಲಿಸುವಂತೆ ಪ್ರತಿಭಟನಾಕಾರರು ಘೋಷಣೆ ಕೂಗಿದ್ರು.

  • ರಷ್ಯಾ, ಉಕ್ರೇನ್ ಸಂಘರ್ಷ ಕೃಷಿ ರಫ್ತಿನ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ

    ರಷ್ಯಾ, ಉಕ್ರೇನ್ ಸಂಘರ್ಷ ಕೃಷಿ ರಫ್ತಿನ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ

    ನವದೆಹಲಿ: ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ಅದರಲ್ಲೂ ವಿಶೇಷವಾಗಿ ಕೃಷಿ ವಲಯದ ರಫ್ತಿನ ಮೇಲೆ ಪರಿಣಾಮ ಬೀರುವ ಬಗ್ಗೆ ಸರ್ಕಾರ ಚಿಂತಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆತಂಕ ವ್ಯಕ್ತಪಡಿಸಿದ್ದಾರೆ.

    ತಮಿಳುನಾಡಿನ ವ್ಯಾಪಾರ ಮತ್ತು ಉದ್ಯಮದ ನಾಯಕರೊಂದಿಗಿನ ಸಭೆ ನಡೆಸಿದ ನಂತರ ಸೀತಾರಾಮನ್ ಅವರು, ರಷ್ಯಾ-ಉಕ್ರೇನ್ ದೇಶಗಳ ಸಂಘರ್ಷ ದಿನದಿಂದ ದಿನಕ್ಕೆ ಹೇಗೆ ಭಾರತದ ಮೇಲೆ ಪರಿಣಾಮ ಬೀರುತ್ತಿದೆ ಎಂಬುದನ್ನು ಚರ್ಚೆ ಮಾಡಿದ್ದಾರೆ. ನಂತರ ಈ ಕುರಿತು ಮಾತನಾಡಿದ ಅವರು, ರಷ್ಯಾ-ಉಕ್ರೇನ್ ದೇಶಗಳ ಸಂಘರ್ಷವನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದು ದೇಶದ ವ್ಯಾಪಾರದ ಮೇಲೆ ಕೆಟ್ಟ ಪರಿಣಾಮವನ್ನು ಬೀರುವ ಸಾಧ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಆರ್ಮಿ ಪಬ್ಲಿಕ್ ಶಾಲೆಯಲ್ಲಿ 1,300 ಸಸಿ ನೆಟ್ಟಿದ ಕಮಾಂಡಿಂಗ್ ಮೇಜರ್ ಜನರಲ್!

    ಉಕ್ರೇನ್ ನಲ್ಲಿ ಸಿಲುಕಿರುವವರ ಬಗ್ಗೆ ನಾವು ಚಿಂತಿತರಾಗಿದ್ದೇವೆ. ಅವರನ್ನು ನಾವು ಕರೆದುಕೊಂಡು ಬರುತ್ತೇವೆ. ಆದರೆ ಉಕ್ರೇನ್ ಮತ್ತು ರಷ್ಯಾಕ್ಕೆ ವಿಶೇಷವಾಗಿ ಕೃಷಿ ವಲಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ರಫ್ತುದಾರರಿಗೆ ಏನಾಗಲಿದೆ ಎಂಬುದರ ಕುರಿತು ನಾನು ಹೆಚ್ಚು ಚಿಂತಿತನಾಗಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

    ಸರ್ಕಾರವು ಈಗಾಗಲೇ ಉದ್ಭವಿಸಿರುವ ಪರಿಸ್ಥಿತಿಯನ್ನು ನೋಡುತ್ತಿದೆ. ಆದರೆ ನಾನು ವಿವಿಧ ಸಂಬಂಧಿತ ಸಚಿವಾಲಯಗಳ ಮೂಲಕ ಸಂಪೂರ್ಣ ಮೌಲ್ಯಮಾಪನವನ್ನು ಹೊಂದಿರಬೇಕು. ಆಗ ಮಾತ್ರ ನಾನು ಅದರ ಬಗ್ಗೆ ಪ್ರತಿಕ್ರಿಯಿಸುವ ಸ್ಥಿತಿಯಲ್ಲಿರುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹರಿಪ್ರಿಯಾ ಟೆಂಪಲ್ ರನ್: ಉಡುಪಿ ಮಠದ ಆನೆಯೊಂದಿಗೆ ಸಮಯ ಕಳೆದ ನಟಿ

    ಉಕ್ರೇನ್ ಸೂರ್ಯಕಾಂತಿ ಎಣ್ಣೆ ಬೀಜಗಳು ಮತ್ತು ರಸಗೊಬ್ಬರಗಳ ಪ್ರಮುಖ ಪೂರೈಕೆದಾರ ಆಗಿದೆ. ಈ ಯುದ್ಧದಿಂದ ಪೂರೈಕೆಯಲ್ಲಿನ ಅಡಚಣೆಯು ಖಾದ್ಯ ತೈಲದಂತಹ ಅಗತ್ಯ ಸರಕುಗಳ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೆ ಅಗತ್ಯ ವಸ್ತುಗಳ ಮೇಲೆ ಪರಿಣಾಮ ಬೀರುತ್ತದೆ ಎಂದರು.