Tag: russia

  • ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್

    ರಾಷ್ಟ್ರಗೀತೆ ಹಾಡಿದ ಉಕ್ರೇನ್ ಮಹಿಳೆಯ ವೀಡಿಯೋ ವೈರಲ್

    ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ತತ್ತರಿಸಿದೆ. ಇದರ ಮಧ್ಯೆ ಉಕ್ರೇನ್ ಪ್ರಜೆಗಳು ರಾಷ್ಟ್ರಗೀತೆಯನ್ನು ಹಾಡಿ ತಮ್ಮ ರಾಷ್ಟ್ರಭಕ್ತಿಯನ್ನು ತೋರಿಸುತ್ತಿರವ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

    ರಷ್ಯಾ, ಉಕ್ರೇನ್‍ನ ಮೇಲೆ ಕ್ಷೀಪಣಿ ದಾಳಿ ನಡೆಸಿದ ಪರಿಣಾಮ ಉಕ್ರೇನಿನ ಕಟ್ಟಡಕ್ಕೆ ಹಾನಿಯಾಗಿತ್ತು. ಈ ವೇಳೆ ಮಹಿಳೆಯೊಬ್ಬಳು ಉಕ್ರೇನ್‍ನ ರಾಷ್ಟ್ರಗೀತೆ ಹಾಡುತ್ತಾ ಮನೆ ಸ್ವಚ್ಛಗೊಳಿಸುತ್ತಿರುವ ಮನಮಿಡಿಯುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ವೀಡಿಯೋದಲ್ಲಿ ಮಹಿಳೆಯು ಕಣ್ಣೀರಿಡುತ್ತಾ ಉಕ್ರೇನ್ ರಾಷ್ಟ್ರಗೀತೆ ಹಾಡುತ್ತಿದ್ದಾಳೆ. ನಂತರ ಕ್ಷಿಪಣಿಯಿಂದ ಹಾನಿಗೊಳಗಾದ ಕಿಟಕಿಯ ಗಾಜಿನ ಚೂರನ್ನು ತೆಗೆಯುತ್ತಿರುವುದನ್ನು ಕಾಣಬಹುದಾಗಿದೆ. ನಿನ್ನೆ ರಾಜಧಾನಿ ಕೈವ್‍ನ ಹೊರವಲಯದಲ್ಲಿ ಉಕ್ರೇನಿಯನ್ ರಾಷ್ಟ್ರಗೀತೆಯನ್ನು ಕಹಳೆಯಲ್ಲಿ ನುಡಿಸುತ್ತಿದ್ದರು. ನೆರೆಹೊರೆಯ ಜನರು ಉಕ್ರೇನ್‍ನ ವೈಭವ ಎಂದು ಕೂಗುವುದರ ವೀಡಿಯೋವೊಂದು ವೈರಲ್ ಆಗಿತ್ತು. ಇದನ್ನೂ ಓದಿ: ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಉಕ್ರೇನ್‍ನ ರಸ್ತೆಗಳಲ್ಲಿ ಬಾಂಬ್ ದಾಳಿ, ಅಪಾರ್ಟ್‍ಮೆಂಟ್‍ಗಳ ಮೇಲೆ ರಷ್ಯಾ ಸೈನಿಕರು ಮಿಸೈಲ್ ದಾಳಿ ಮಾಡುತ್ತಿದ್ದಾರೆ. ಬಂಕರ್‌ಗಳ ಹೊರಗೆ ಬಾಂಬ್ ಸದ್ದು ಕೇಳಿಸುತ್ತಿದ್ದು, ಜನ ಜೀವ ಭಯದಲ್ಲಿದ್ದಾರೆ. ಉಕ್ರೇನ್‍ನ ಕಾರ್ಕೀವ್ ಹಾಗೂ ಕೀವ್‍ನಲ್ಲಿ ರಾತ್ರಿಯೂ ಗುಂಡಿನ ಮೊರೆತ ಕೇಳಿಸಿತ್ತು. ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

  • ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಉಕ್ರೇನ್‍ನ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ- ಬಾಲಕಿ ಸೇರಿ 6 ಮಂದಿ ಸಾವು

    ಕೀವ್: ಉಕ್ರೇನ್‍ನ ಶಿಶುಪಾಲನಾ ಕೇಂದ್ರ ಸೇರಿದಂತೆ ಅನಾಥಾಶ್ರಮಗಳ ಮೇಲೆ ರಷ್ಯಾ ದಾಳಿ ನಡೆಸಿದ್ದು, 7 ವರ್ಷದ ಬಾಲಕಿ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ.

    ಉಕ್ರೇನ್‍ನ ಈಶಾನ್ಯ ನಗರದ ಓಖ್ಟಿರ್ಕಾದಲ್ಲಿ ರಷ್ಯಾದ ದಾಳಿ ನಡೆಸಿದ ಪರಿಣಾಮವಾಗಿ ಏಳು ವರ್ಷದ ಬಾಲಕಿ ಸೇರಿದಂತೆ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ. ವರದಿಗಳ ಪ್ರಕಾರ ಶಿಶುವಿಹಾರ ಶಾಲೆ ಮತ್ತು ಅನಾಥಾಶ್ರಮದಲ್ಲಿ ಘಟನೆ ನಡೆದಿದೆ ಎಂದು ಗವರ್ನರ್ ಡಿಮಿಟ್ರಿ ಝಿವಿಟ್ಸ್ಕಿ ತಿಳಿಸಿದರು.

    ಉಕ್ರೇನ್, ರಷ್ಯಾ ಯುದ್ಧ 4ನೇ ದಿನಕ್ಕೆ ಕಾಲಿಟ್ಟಿದ್ದು, ದಿನೇ ದಿನೇ ಉಗ್ರಸ್ವರೂಪ ಪಡೆದುಕೊಳ್ಳುತ್ತಿದೆ. ಉಕ್ರೇನ್‍ನಲ್ಲಿ ಅಪಾರ ಸಾವು, ನೋವುಗಳು ಆಗುತ್ತಿವೆ. ಈಗ ಶಿಶು ಪಾಲನಾಕೇಂದ್ರ, ಅನಾಥಾಶ್ರಮಗಳ ಮೇಲೆ ರಷ್ಯಾ ಬಾಂಬ್ ದಾಳಿ ನಡೆಸಿದ್ದಾರೆ. ಇದರಲ್ಲಿ ರಷ್ಯಾ ಬಾಂಬ್ ದಾಳಿಗೆ 7 ವರ್ಷದ ಬಾಲಕಿ ಸೇರಿ 6 ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಅಂತಾರಾಷ್ಟ್ರೀಯ ತನಿಖೆಗೆ ಉಕ್ರೇನ್ ಒತ್ತಾಯಿಸುತ್ತಿದೆ. ಇದನ್ನೂ ಓದಿ: ಯುದ್ಧಪೀಡಿತ ಉಕ್ರೇನ್‍ನಿಂದ ಗ್ರೌಂಡ್ ರಿಪೋರ್ಟ್ ಮಾಡಿದ ವಿದ್ಯಾರ್ಥಿಗಳು

    ನಿನ್ನೆ ಬಂಕರ್‌ಗಳಲ್ಲಿ ರಷ್ಯಾ ಬಾಂಬ್ ದಾಳಿಯನ್ನು ನಡೆಸಿತ್ತು. ಇದೀಗ ಶಿಶುಪಾಲನಾ ಕೇಂದ್ರದಲ್ಲಿ ದಾಳಿ ನಡೆಸಿದೆ. ಈ ಮೊದಲು ಕೈವಾದ ಜೂಲಿಯಾನಿ ವಿಮಾನ ನಿಲ್ದಾಣದ ಪಕ್ಕ ರಷ್ಯಾ ಕ್ಷಿಪಣಿ ದಾಳಿ ನಡೆಸಿತ್ತು. ಉಕ್ರೇನ್‍ನ ಹಲವು ಪ್ರದೇಶಗಳನ್ನು ರಷ್ಯಾ ಮಿಲಿಟರಿ ಪಡೆ ಸುತ್ತುವರಿದಿದ್ದು, ಅಲ್ಲಲ್ಲಿ ಬಾಂಬ್‍ಗಳ ದಾಳಿ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಈವರೆಗೆ 300ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಇದನ್ನೂ ಓದಿ: ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

  • ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕರ್ಕಿವ್‍ನಲ್ಲಿ ಗ್ಯಾಸ್ ಪೈಪ್‍ಲೈನ್ ಸ್ಫೋಟಿಸಿದ ರಷ್ಯಾ ಸೇನೆ..!

    ಕೀವ್: ಉಕ್ರೇನ್ ಮೇಲೆ ರಷ್ಯಾ ಸೈನಿಕರ ಆಕ್ರಮಣ ದಾಳಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಉಕ್ರೇನ್‍ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್‍ನಲ್ಲಿರುವ ಗ್ಯಾಸ್ ಪೈಪ್‍ಲೈನ್ ಅನ್ನು ರಷ್ಯಾ ಸೇನೆ ಸ್ಫೋಟಿಸಿದೆ.

    ಈ ವಿಚಾರವನ್ನು ಉಕ್ರೇನ್ ಅಧ್ಯಕ್ಷರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಸ್ಫೋಟದ ಪರಿಣಾಮ ಆಯಿಲ್ ಟ್ಯಾಂಕ್ ಸ್ಫೋಟಗೊಂಡು ಆಗಸದಲ್ಲಿ ದೊಡ್ಡ ಅಣಬೆಯಾಕಾರದ ಮೋಡ ಆವರಿಸಿಕೊಂಡಿದೆ. ಇದು ಪರಿಸರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿ ಉಂಟು ಮಾಡಲಿದೆ ಎಂದು ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

    https://twitter.com/WW32022/status/1497721984339349512

    ನಗರದಲ್ಲಿ ವಾಸಿಸುತ್ತಿರುವ ನಿವಾಸಿಗಳು ಮನೆ ಕಿಟಕಿಗಳನ್ನು ಬಟ್ಟೆಯಲ್ಲಿ ಮುಚ್ಚಬೇಕು. ಜೊತೆಗೆ ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ದ್ರವ ಪದಾರ್ಥಗಳನ್ನು ಹೆಚ್ಚು ಸೇವಿಸುವಂತೆ ಉಕ್ರೇನ್ ಸರ್ಕಾರ ಸೂಚಿಸಿದೆ. ಇದನ್ನೂ ಓದಿ: ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    https://twitter.com/WW32022/status/1497758655407665165

    ಕರ್ಕಿವ್ ನಗರದಲ್ಲಿ ಉಕ್ರೇನ್ ಹಾಗೂ ರಷ್ಯಾ ಸೇನೆಗಳ ನಡುವೆ ಭಾರೀ ಯುದ್ಧ ನಡೆಯುತ್ತಿದೆ ಎಂದು ತಿಳಿದುಬಂದಿದೆ. ರಷ್ಯಾ ಗಡಿಯಿಂದ ಈ ನಗರ 40 ಕಿಲೋ ಮೀಟರ್ ದೂರದಲ್ಲಿದ್ದು, ಇಲ್ಲಿ ಸುಮಾರು 15 ಲಕ್ಷ ಜನರು ವಾಸಿಸುತ್ತಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

  • ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಅಪ್ಪ-ಅಮ್ಮ ನಿಮ್ಮ ಆರೋಗ್ಯದ ಬಗ್ಗೆ ಗಮನಕೊಡಿ, ನನ್ನ ಬಗ್ಗೆ ಯೋಚಿಸ್ಬೇಡಿ- ಯೋಧನ ಭಾವುಕ ವೀಡಿಯೋ ವೈರಲ್

    ಕೀವ್: ರಷ್ಯಾ ರಣೋತ್ಸಾಹ 4ನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಪುಟ್ಟ ದೇಶವಾಗಿರುವ ಉಕ್ರೇನ್ ಪತರಗುಟ್ಟಿದೆ. ಇದರ ಮಧ್ಯೆ ಉಕ್ರೇನ್ ಸೈನಿಕರೊಬ್ಬರು ತಮ್ಮ ಪೋಷಕರನ್ನು ನೆನಪು ಮಾಡಿಕೊಂಡು ಭಾವುಕರಾದ ವೀಡಿಯೋ ಇದೀಗ ವೈರಲ್ ಆಗುತ್ತಿದೆ.

    ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ್ದು, ಈಗಾಗಲೇ ಉಭಯ ದೇಶಗಳ ಹಲವಾರು ಸೈನಿಕರು ಹತರಾಗಿದ್ದಾರೆ. ಉಕ್ರೇನ್ ರಾಜಧಾನಿ ಕೀವ್‍ನ ಫೋಟೋಬ್ರಿಡ್ಜ್ ನಲ್ಲಿ ಏಕಾಂಗಿಯಾಗಿ ಗಡಿ ರಕ್ಷಣೆ ಮಾಡುತ್ತಿರುವ 21 ವರ್ಷದ ಸೆರ್ಗಿ ಪೆಟ್ರೋಶೆಂಕೊ ಯೋಧ ಇದೀಗ ತನ್ನ ಪೋಷಕರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ಇದನ್ನೂ ಓದಿ:‌ ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ಯೋಧನ ಪೋಷಕರು ವಾಸವಾಗಿರುವ ಸ್ಥಳದಲ್ಲಿ ರಷ್ಯಾ ಯೋಧರು ದಾಳಿ ನಡೆಸಿದ್ದಾರೆ. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಯೋಧ ತಮ್ಮ ಹೆತ್ತವರನ್ನು ನೆನೆದು ಗದ್ಗದಿತರಾಗಿದ್ದಾರೆ. ನಾನು ಜೀವಂತವಾಗಿ ಉಳಿಯುತ್ತೇನೋ ಇಲ್ಲವೋ ಗೋತ್ತಿಲ್ಲ. ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನ ನೀಡಿ, ನನ್ನ ಬಗ್ಗೆ ಯಾವುದೇ ಕಾರಣಕ್ಕೂ ಯೋಚನೆ ಮಾಡಬೇಡಿ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ:‌ ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    https://twitter.com/Yashika1Keswani/status/1497555000314445828

    ಇತ್ತ ಉಕ್ರೇನ್‍ನ ರಸ್ತೆಗಳಲ್ಲಿ ಬಾಂಬ್ ದಾಳಿ, ಅಪಾರ್ಟ್‍ಮೆಂಟ್‍ಗಳ ಮೇಲೆ ರಷ್ಯಾ ಸೈನಿಕರು ಮಿಸೈಲ್ ದಾಳಿ ಮಾಡುತ್ತಿದ್ದಾರೆ. ಬಂಕರ್‍ಗಳ ಹೊರಗೆ ಬಾಂಬ್ ಸದ್ದು ಕೇಳಿಸುತ್ತಿದ್ದು, ಜನ ಜೀವ ಭಯದಲ್ಲಿದ್ದಾರೆ. ಉಕ್ರೇನ್‍ನ ಕಾರ್ಕೀವ್ ಹಾಗೂ ಕೀವ್‍ನಲ್ಲಿ ರಾತ್ರಿಯೂ ಗುಂಡಿನ ಮೊರೆತ ಕೇಳಿಸಿತ್ತು. ಕಗ್ಗತ್ತಲ ರಾತ್ರಿಯಲ್ಲಿ ಆಗಸದಲ್ಲಿ ಬಾಂಬ್, ಮಿಸೈಲ್‍ಗಳ ಆರ್ಭಟ ಇತ್ತು. ಉಕ್ರೇನ್ ರಕ್ಷಣೆ ಮಾಡಲು ಸಾವಿರಾರು ಯೋಧರು ರಷ್ಯಾ ವಿರುದ್ಧ ತೊಡೆ ತಟ್ಟಿ ನಿಂತಿದ್ದಾರೆ. ಇದನ್ನೂ ಓದಿ:‌ ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

  • ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ಪ್ರಧಾನಿಗೆ ಕರೆ ಮಾಡಿ ರಾಜಕೀಯ ಬೆಂಬಲ ಕೋರಿದ ಉಕ್ರೇನ್ ಅಧ್ಯಕ್ಷ

    ನವದೆಹಲಿ: ಉಕ್ರೇನ್‍ನ ಮೇಲೆ ರಷ್ಯಾ ದಾಳಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‍ಸ್ಕಿ ಟ್ವೀಟ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಸಹಾಯವನ್ನು ಕೋರಿದ್ದಾರೆ.

    ವಿಶ್ವಸಂಸ್ಥೆಯಲ್ಲಿ ಉಕ್ರೇನ್ ವಿರುದ್ಧ ರಷ್ಯಾದ ಆಕ್ರಮಣವನ್ನು ಖಂಡಿಸುವ ನಿರ್ಣಯದಿಂದ ದೂರವುಳಿದ ನಿರ್ಧಾರವನ್ನು ರಷ್ಯಾ ಶ್ಲಾಘಿಸಿತ್ತು. ಇದಾದ ಬಳಿಕ ಉಕ್ರೇನ್ ಅಧ್ಯಕ್ಷ ಅವರು ಪ್ರಧಾನಿ ಅವರೊಂದಿಗೆ ಮಾತನಾಡಿ ರಾಜಕೀಯ ಬೆಂಬಲ ಕೋರಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

    1 ಲಕ್ಷಕ್ಕೂ ಹೆಚ್ಚು ಸೈನಿಕರಿಂದ ರಷ್ಯಾ ದಾಳಿ ಮಾಡುತ್ತಿದೆ. ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಿಸಿದ್ದೇನೆ. ಜೊತೆಗೆ ಶಾಂತಿಯುತ ಪ್ರಯತ್ನಗಳಿಗೆ ಭಾರತ ಸರ್ಕಾರ ಸಹಕರಿಸಲು ಸಿದ್ಧ ಎಂದು ತಿಳಿಸಿದೆ ಎಂದು ಉಕ್ರೇನ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.

    ಈ ಬಗ್ಗೆ ಪ್ರಧಾನಿ ಕಚೇರಿ ಪ್ರಕಟನೆ ಹೊರಡಿಸಿದ್ದು, ಉಕ್ರೇನ್ ರಷ್ಯಾ ನಡುವಿನ ಯುದ್ಧದಲ್ಲಿ ಉಂಟಾದ ಸಾವು, ನೋವು ಆಸ್ತಿ-ಪಾಸ್ತಿ ಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದರು. ಉಕ್ರೇನ್‍ನಲ್ಲಿರುವ ವಿದ್ಯಾರ್ಥಿಗಳು ಸೇರಿದಂತೆ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಕಾಳಜಿ ವ್ಯಕ್ತಪಡಿಸಿ, ಅವರನ್ನು ತವರಿಗೆ ಕರೆತರಲು ಉಕ್ರೇನ್ ಅಧಿಕಾರಿಗಳ ಸಹಾಯವನ್ನು ಕೋರಿದರು ಎಂದು ತಿಳಿಸಿದೆ.

    ಉಕ್ರೇನ್ ವಿರುದ್ಧದ ರಷ್ಯಾ ಆಕ್ರಮಣವನ್ನು ಖಂಡಿಸುವ ಯುಎನ್‍ಎಸ್‍ಸಿ ನಿರ್ಣಯದಿಂದ ಭಾರತ ದೂರ ಉಳಿದಿದೆ. ರಷ್ಯಾ ವಿರುದ್ಧ 11 ರಾಷ್ಟ್ರಗಳು ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದರೆ, ಭಾರತ ಸೇರಿ ಮೂರು ರಾಷ್ಟ್ರಗಳು ನಿರ್ಣಯದಿಂದ ದೂರ ಉಳಿದು ತಟಸ್ಥ ನೀತಿ ಅನುಸರಿಸಿವೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ನಿರ್ಣಯ ಮಂಡಿಸಲಾಗಿತ್ತು. ಭಾರತ, ಚೀನಾ, ಯುಎಇ ಈ ಮೂರು ರಾಷ್ಟ್ರಗಳು ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದಿವೆ. ಆದರೆ 11 ರಾಷ್ಟ್ರಗಳು ರಷ್ಯಾ ವಿರುದ್ಧ ಮತ ಚಲಾಯಿಸಿವೆ. ಈ ವೇಳೆ ರಷ್ಯಾ ತನ್ನ ವಿಟೋ ಅಧಿಕಾರವನ್ನು ಬಳಸಿದೆ. ಇದನ್ನೂ ಓದಿ: ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    ಯುಎನ್‍ಎಸ್‍ಸಿ ನಿರ್ಣಯದಿಂದ ದೂರ ಉಳಿದ ಭಾರತ ಸೇರಿ ಮೂರು ರಾಷ್ಟ್ರಗಳಿಗೆ ರಷ್ಯಾ ಧನ್ಯವಾದ ತಿಳಿಸಿದೆ. ರಷ್ಯಾ ವಿರುದ್ಧದ ಮತದಾನದಿಂದ ಭಾರತ, ಚೀನಾ, ಯುಎಇ ದೂರ ಉಳಿದಿದ್ದು, ತಟಸ್ಥವಾಗಿವೆ. ಹೀಗಾಗಿ ರಷ್ಯಾ ಕೃತಜ್ಞತೆ ಸಲ್ಲಿಸಿದೆ.

  • ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    ಶೀಘ್ರವೇ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲಿರುವ ಜರ್ಮನಿ

    ಕೀವ್: ರಷ್ಯಾ ವಿರುದ್ಧ ತನ್ನ ರಾಜಧಾನಿಯನ್ನು ಉಳಿಸಿಕೊಳ್ಳಲು ಹೋರಾಡುತ್ತಿರುವ ಉಕ್ರೇನ್‍ಗೆ ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳು ಮತ್ತು ಇತರೆಗಳನ್ನು ಕಳುಹಿಸಲು ಮತ್ತು ರಷ್ಯಾಕ್ಕೆ ಸ್ವಿಫ್ಟ್ ಜಾಗತಿಕ ಬ್ಯಾಂಕಿಂಗ್ ವ್ಯವಸ್ಥೆಯ ಮೇಲೆ ಕೆಲವು ನಿರ್ಬಂಧಗಳನ್ನು ಹೇರಲು ಜರ್ಮನಿ ಸಿದ್ಧವಾಗಿದೆ ಎಂದು ಜರ್ಮನ್ ಸರ್ಕಾರ ತಿಳಿಸಿದೆ.

    ಶನಿವಾರ ಸಂಜೆ ಜರ್ಮನಿಯ ಆರ್ಥಿಕ ಮತ್ತು ಹವಾಮಾನ ಸಚಿವಾಲಯವು 1,000 ಟ್ಯಾಂಕ್ ವಿರೋಧಿ ಶಸ್ತ್ರಾಸ್ತ್ರಗಳನ್ನು ಮತ್ತು 500 ಸ್ಟಿಂಗರ್‌ಗಳನ್ನು ಉಕ್ರೇನ್‍ಗೆ ಸಾಧ್ಯವಾದಷ್ಟು ಬೇಗ ರವಾನಿಸುವುದಾಗಿ ಘೋಷಿಸಿದೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ಈ ವಿಚಾರವಾಗಿ ಪ್ರತಿಕ್ರಿಯಿಸಿದ ಜರ್ಮನ್ ಓಲಾಫ್ ಸ್ಕೋಲ್ಜ್ ಅವರು, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಒಂದು ಮಹತ್ವದ ತಿರುವನ್ನು ಸೂಚಿಸುತ್ತದೆ. ಇದು ನಮ್ಮ ಸಂಪೂರ್ಣ ಯುದ್ಧಾನಂತರದ ಆದೇಶಕ್ಕೆ ಧಕ್ಕೆ ತರುತ್ತದೆ. ಈ ಪರಿಸ್ಥಿತಿಯಲ್ಲಿ, ವ್ಲಾಡಿಮಿರ್ ಪುಟಿನ್ ಅವರ ಆಕ್ರಮಣಕಾರಿ ಸೈನ್ಯದ ವಿರುದ್ಧ ಉಕ್ರೇನ್ ತನ್ನನ್ನು ರಕ್ಷಿಸಿಕೊಳ್ಳಲು ನಮ್ಮ ಕೈಲಾದಷ್ಟು ಸಹಾಯ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.

    ಉಕ್ರೇನ್ ಸೇರಿದಂತೆ ಸಂಘರ್ಷ ವಲಯಗಳಿಗೆ ಮಾರಣಾಂತಿಕ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡದಿರುವ ನೀತಿಗೆ ಜರ್ಮನಿ ದೀರ್ಘಕಾಲವಾಗಿ ಅಂಟಿಕೊಂಡಿದ್ದು, ಈ ನೀತಿಗೆ ಬದ್ಧರಾಗಿರುವುದಾಗಿ ಶುಕ್ರವಾರ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ:  ರಷ್ಯಾ ಜಾಗತಿಕ ಪಾವತಿ ವ್ಯವಸ್ಥೆ ಕಡಿತ – ಯುಎಸ್, ಮಿತ್ರರಾಷ್ಟ್ರಗಳ ಒಪ್ಪಿಗೆ

    Ukraine

    ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಉಕ್ರೇನ್‍ಗೆ ಸಹಾಯ ಮಾಡಲು ಸಾಕಷ್ಟು ಮಿತ್ರದೇಶಗಳು ಮುಂದೆ ಬಂದಿದ್ದು, ಈಗಾಗಲೇ ಜರ್ಮನಿ ಉಕ್ರೇನ್ ಸೈನಿಕರ ರಕ್ಷಣೆಗೆ 5,000 ಹೆಲ್ಮೆಟ್‍ಗಳನ್ನು ಕೊಡುಗೆಯಾಗಿ ನೀಡಿದೆ. ಇದಲ್ಲದೆ, ಜರ್ಮನಿ 14 ಶಸ್ತ್ರಸಜ್ಜಿತ ವಾಹನಗಳು ಮತ್ತು 10,000 ಟನ್‍ಗಳಷ್ಟು ಇಂಧನವನ್ನು ಉಕ್ರೇನ್‍ಗೆ ಕಳುಹಿಸುವುದಾಗಿ ಹೇಳಿದೆ.

    ರಷ್ಯಾದ ದಾಳಿಯಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಶಕ್ತವಾಗಿರಬೇಕು. ಹಾಗಾಗಿ ತುರ್ತಾಗಿ ಅಗತ್ಯವಿರುವ ವಸ್ತುಗಳನ್ನು ಒದಗಿಸುವಲ್ಲಿ ಫೆಡರಲ್ ಸರ್ಕಾರ ಉಕ್ರೇನ್‍ಗೆ ಬೆಂಬಲ ನೀಡುತ್ತದೆ ಎಂದು ವಿದೇಶಾಂಗ ಸಚಿವ ಅನ್ನಾಲೆನಾ ಬೇರ್ಬಾಕ್ ಮತ್ತು ಆರ್ಥಿಕ ಸಚಿವ ರಾಬರ್ಟ್ ಹ್ಯಾಬೆಕ್ ಹೇಳಿದ್ದಾರೆ.

  • ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

    ಅಪ್ಪ-ಅಮ್ಮ ಬಳಿ ಸುಳ್ಳು ಹೇಳಿದ್ದೆವು- ಉಕ್ರೇನ್ ಅನುಭವ ಹಂಚಿಕೊಂಡ ವಿದ್ಯಾರ್ಥಿನಿ

    ನವದೆಹಲಿ: ಉಕ್ರೇನ್ ನಲ್ಲಿ ರಷ್ಯಾ ಸೈನಿಕರ ಆಕ್ರಮಣ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಉಕ್ರೇನ್ ನಲ್ಲಿ ನೆಲೆಸಿದ್ದ ವಿದ್ಯಾರ್ಥಿಗಳನ್ನು ಭಾರತಕ್ಕೆ ಕರೆತರುವಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಕರೆತರಲಾಗಿದೆ. ಹೀಗೆ ಬಂದಿರುವ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ತಾವು ಎದುರಿಸಿದ ಕಷ್ಟಗಳನ್ನು ಎಳೆಎಳೆಯಾಗಿ ಬಿಚ್ಚಿಡುತ್ತಿದ್ದಾರೆ.

    ವಿದ್ಯಾರ್ಥಿನಿಯೊಬ್ಬಳು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ಉಕ್ರೇನ್ ಕರಾಳತೆಯನ್ನು ಬಿಚ್ಚಿಟ್ಟಿದ್ದಾಳೆ. ಅಪ್ಪ-ಅಮ್ಮಂಗೆ ಸುಳ್ಳು ಹೇಳುತ್ತಿದ್ದೆವು. ಅಲ್ಲಿ ಇದ್ದ ಆಹಾರದಲ್ಲಿ ಅಲ್ಪ-ಸ್ವಲ್ಪ ತಿಂದು ಬದುಕುತ್ತಿದ್ದೆವು. ಪ್ರತಿ ಕ್ಷಣ ನಮ್ಮಲ್ಲಿ ಆತಂಕ ಇತ್ತು. ಯಾವಾಗ ಎಲ್ಲಿ ಬಾಂಬ್ ಬೀಳುತ್ತೋ ಅನ್ನೋ ಭೀತಿ ಇತ್ತು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಉಕ್ರೇನ್‍ನಿಂದ 2ನೇ ವಿಮಾನದಲ್ಲಿ ದೆಹಲಿಗೆ ಬಂದ 250 ಭಾರತೀಯರು

    ಸದ್ಯ ಕರ್ನಾಟಕದ 13 ವಿದ್ಯಾರ್ಥಿಗಳು ಸೇರಿ ಒಟ್ಟು 250 ಮಂದಿ ರೊಮೇನಿಯಾದಿಂದ ದೆಹಲಿ ತಲುಪಿದ್ದಾರೆ. ರಾತ್ರಿ 3:30ಕ್ಕೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಜೋತಿರಾಧಿತ್ಯಸಿಂದ್ಯಾ ಸ್ವಾಗತಿಸಿದರು. ಬಳಿಕ ಮಾತನಾಡಿದ ಅವರು, ಎರಡನೇ ವಿಮಾನದಲ್ಲಿ 250 ವಿದ್ಯಾರ್ಥಿಗಳು ಬಂದಿದ್ದಾರೆ. ಇಂದು ಮತ್ತೆರಡು ವಿಮಾನಗಳ ಮೂಲಕ ಭಾರತೀಯರು ಬರಲಿದ್ದಾರೆ. ನಾಲ್ಕು ದೇಶಗಳ ಸಹಕಾರದಲ್ಲಿ ಕಾರ್ಯಚರಣೆ ಮಾಡುತ್ತಿದ್ದೇವೆ. ಪರಿಸ್ಥಿತಿ ಆಧರಿಸಿ ಮತ್ತಷ್ಟು ವೇಗವಾಗಿ ಭಾರತೀಯರನ್ನು ಕರೆ ತರಲಾಗುವುದು ಎಮದು ತಿಳಿಸಿದರು.

  • ರಷ್ಯಾದ SWIFT ಜಾಗತಿಕ ಪಾವತಿ ವ್ಯವಸ್ಥೆ ಕಡಿತ – ಯುಎಸ್, ಮಿತ್ರರಾಷ್ಟ್ರಗಳ ಒಪ್ಪಿಗೆ

    ರಷ್ಯಾದ SWIFT ಜಾಗತಿಕ ಪಾವತಿ ವ್ಯವಸ್ಥೆ ಕಡಿತ – ಯುಎಸ್, ಮಿತ್ರರಾಷ್ಟ್ರಗಳ ಒಪ್ಪಿಗೆ

    ಕೀವ್: ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವನ್ನು ತಡೆಯುವ ಉದ್ದೇಶದಿಂದ ಜರ್ಮನಿ ಮತ್ತು ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳು SWIFT ಜಾಗತಿಕ ಪಾವತಿ ವ್ಯವಸ್ಥೆಯಿಂದ ರಷ್ಯಾವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ ಎಂದು ಜರ್ಮನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

    ಯುನೈಟೆಡ್ ಸ್ಟೇಟ್ಸ್, ಫ್ರಾನ್ಸ್, ಕೆನಡಾ, ಇಟಲಿ, ಗ್ರೇಟ್ ಬ್ರಿಟನ್ ಮತ್ತು ಯುರೋಪಿಯನ್ ಕಮಿಷನ್‍ಗಳು ಈ ನಿರ್ಧಾರವನ್ನು ಒಪ್ಪಿಕೊಂಡಿದ್ದು, ರಷ್ಯಾದ ಕೇಂದ್ರ ಬ್ಯಾಂಕ್‍ಗಳ ಮೇಲೆ ನಿರ್ಬಂಧ ಹೇರಲಾಗುತ್ತದೆ. ಇದು ಶ್ರೀಮಂತ ರಷ್ಯನ್ನರು ಮತ್ತು ಅವರ ಕುಟುಂಬಗಳಿಗೆ ನೀಡಿರುವ ಗೋಲ್ಡನ್ ಪಾಸ್‌ಪೋರ್ಟ್‌ಗಳನ್ನು ರದ್ದುಗೊಳಿಸಲಾಗುತ್ತದೆ ಮತ್ತು ಉಕ್ರೇನ್ ವಿರುದ್ಧ ಯುದ್ಧವನ್ನು ಮಾಡುತ್ತಿರುವ ರಷ್ಯಾವನ್ನು ಬೆಂಬಲಿಸುವ ವ್ಯಕ್ತಿಗಳು ಮತ್ತು ಸಂಸ್ಥೆಗಳನ್ನು ಗುರಿಯಾಗಿಸುತ್ತದೆ.  ಇದನ್ನೂ ಓದಿ: ಉಕ್ರೇನ್‌ಗೆ 4,503 ಕೋಟಿ ರೂ. ಭದ್ರತಾ ನೆರವು ಘೋಷಿಸಿದ ಅಮೆರಿಕ

    ಉಕ್ರೇನ್ ಮತ್ತು ಯುರೋಪಿಯನ್ ಶಾಂತಿ ಸುವ್ಯವಸ್ಥೆಯ ಮೇಲೆ ರಷ್ಯಾ ತನ್ನ ದಾಳಿಯನ್ನು ಕೊನೆಗೊಳಿಸದಿದ್ದರೆ, ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಇತರೆ ದೇಶಗಳು ವಾರ್ನ್ ಮಾಡಿದೆ. ಇದನ್ನೂ ಓದಿ: ಉಕ್ರೇನ್‌ಗೆ ಸಹಕಾರ ನೀಡುತ್ತೇವೆ ಎಂದಿದ್ದ ಅಮೆರಿಕ ಸೇನೆಯನ್ನು ಕಳುಹಿಸಿಲ್ಲ ಯಾಕೆ?

  • ಉಕ್ರೇನ್‌ಗೆ ಸಹಕಾರ ನೀಡುತ್ತೇವೆ ಎಂದಿದ್ದ ಅಮೆರಿಕ ಸೇನೆಯನ್ನು ಕಳುಹಿಸಿಲ್ಲ ಯಾಕೆ?

    ಉಕ್ರೇನ್‌ಗೆ ಸಹಕಾರ ನೀಡುತ್ತೇವೆ ಎಂದಿದ್ದ ಅಮೆರಿಕ ಸೇನೆಯನ್ನು ಕಳುಹಿಸಿಲ್ಲ ಯಾಕೆ?

    ವಾಷಿಂಗ್ಟನ್‌: ಉಕ್ರೇನ್‌ ಜೊತೆ ನಾವಿದ್ದೇವೆ ಎಂದು ಭಾಷಣ ಮೂಲಕ ಧೈರ್ಯ ತುಂಬಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ತನ್ನ ಸೈನ್ಯವನ್ನು ಯಾಕೆ ಕಳುಹಿಸಿಲ್ಲ ಎಂಬ ವಿಚಾರ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

    ತನ್ನ ಎದುರಾಳಿಯಿಂದ ಬೇರೊಂದು ದೇಶಕ್ಕೆ ಅಪಾಯವಾದಾಗ ಕೂಡಲೇ ಸೈನ್ಯವನ್ನು ಕಳುಹಿಸಿ ಬೆದರಿಕೆ ಹುಟ್ಟಿಸುತ್ತಿದ್ದ ವಿಶ್ವದ ದೊಡ್ಡಣ್ಣ ಅಮೆರಿಕ ರಷ್ಯಾ ಉಕ್ರೇನ್‌ ವಿಚಾರದಲ್ಲಿ ಬಹಳ ಎಚ್ಚರಿಕೆ ಹೆಜ್ಜೆಯನ್ನು ಇಡುತ್ತಿದೆ. ಆರ್ಥಿಕವಾಗಿ ರಷ್ಯಾಗೆ ದಿಗ್ಭಂದನ ಹೇರಿದ ಅಮೆರಿಕ ಇಂದು 350 ಮಿಲಿಯನ್ ಡಾಲರ್ ನೆರವನ್ನು ಉಕ್ರೇನ್‌ಗೆ ನೀಡುವುದಾಗಿ ಘೋಷಿಸಿದೆ. ಇದನ್ನೂ ಓದಿ: ಉಕ್ರೇನ್‌ಗೆ 4,503 ಕೋಟಿ ರೂ. ಭದ್ರತಾ ನೆರವು ಘೋಷಿಸಿದ ಅಮೆರಿಕ

     

    ಯಾಕೆ ಸೈನ್ಯ ಕಳುಹಿಸಲ್ಲ?
    ಅಮೆರಿಕ ಏನೇ ಮಾಡಿದರೂ ಅದರಿಂದ ತನಗೇನು ಲಾಭ ಎಂದು ನೋಡುತ್ತದೆ. ಎಷ್ಟು ಬಿಸಿನೆಸ್‌ ಆಗುತ್ತದೆ ಎಂಬ ಲೆಕ್ಕಾಚಾರ ಹಾಕುತ್ತದೆ. ಆದರೆ ಈಗಾಗಲೇ ಹಲವು ದೇಶಗಳಲ್ಲಿ ಸೈನಿಕ ಕಾರ್ಯಾಚರಣೆಗಳನ್ನು ಮಾಡಿ ಕೈಸುಟ್ಟಿಕೊಂಡಿರುವ ಅಮೆರಿಕ ಈಗ ರಷ್ಯಾ ವಿಚಾರದಲ್ಲಿ ಬಹಳ ಆಲೋಚನೆ ಮಾಡಿ ನಿರ್ಧಾರ ಪ್ರಕಟಿಸುತ್ತದೆ.

    ಉಕ್ರೇನ್‌ಗೆ ಸೇನೆ ಕಳುಹಿಸಿದರೆ ರಾಷ್ಟ್ರೀಯ ಪ್ರಯೋಜನಗಳಿಲ್ಲ. ಬೇರೆ ದೇಶದಲ್ಲಿ ಸೈನ್ಯ ಹೋರಾಡಿದರೆ ಲಾಭಕ್ಕಿಂತ ನಷ್ಟವೇ ಜಾಸ್ತಿ ಎನ್ನುವ ಪಾಠವನ್ನು ಅಮೆರಿಕ ಈಗಾಗಲೇ ಕಲಿತುಕೊಂಡಿದೆ. ಒಂದು ವೇಳೆ ತಾನು ಯುದ್ಧಕ್ಕೆ ಕೈ ಹಾಕಿದರೆ ರಷ್ಯಾ ಮತ್ತಷ್ಟು ಆಕ್ರಮಣಕಾರಿಯಾಗಬಹುದು ಎನ್ನುವುದು ಅಮೆರಿಕಕ್ಕೆ ಗೊತ್ತಿದೆ. ರಷ್ಯಾ ಬಳಿ ಇರುವ ಶಸ್ತ್ರಾಸ್ತ್ರಗಳ ಅರಿವು ಅಮೆರಿಕಕ್ಕೆ ತಿಳಿದಿದೆ. ಉಕ್ರೇನ್ ನ್ಯಾಟೋ ಸದಸ್ಯ ದೇಶವಲ್ಲ ಅಷ್ಟೇ ಅಲ್ಲದೇ ಯಾವುದೇ ಒಪ್ಪಂದಗಳು ಇಲ್ಲ.  ಇದನ್ನೂ ಓದಿ: Russia-Ukraine War – ಏನಿದು ರಷ್ಯಾ ಟ್ಯಾಂಕರ್‌ಗಳ ಮೇಲೆ Z ಮಾರ್ಕ್?

    ತಾಲಿಬಾನ್‌ ಹಿಮ್ಮೆಟ್ಟಿಸುವುದಾಗಿ ಶಪಥಗೈದ ಅಮೆರಿಕ ಕೊನೆಗೆ ತಾಲಿಬಾನ್‌ ಜೊತೆಗೆ ಮಾತುಕತೆ ನಡೆಸಿ ಸೈನ್ಯವನ್ನು ಅಫ್ಘಾನಿಸ್ತಾನದಿಂದ ಹಿಂದಕ್ಕೆ ಪಡೆದುಕೊಂಡಿದೆ. ಸೈನ್ಯವನ್ನು ಕಳುಹಿಸಿ ರಷ್ಯಾ ವಿರುದ್ಧ ಗೆದ್ದರೂ ಉಕ್ರೇನ್‌ನಲ್ಲಿ ಮತ್ತೆ ಅಮೆರಿಕ ಯೋಧರು ಇರಲೇಬೇಕಾಗುತ್ತದೆ. ಈಗಾಗಲೇ ಕೋವಿಡ್‌ನಿಂದಾಗಿ ಅಮೆರಿಕದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಿರುವಾಗ ಮತ್ತೆ ಸಮಸ್ಯೆ ಎದುರಿಸಲು ಅಮೆರಿಕಕ್ಕೆ ಇಷ್ಟವಿಲ್ಲ.

  • ರಷ್ಯಾ ಅಧ್ಯಕ್ಷ ಪುಟಿನ್‌ಗೆ ವೈಯಕ್ತಿಕ ನಿರ್ಬಂಧ ಹೇರಲು ಮುಂದಾದ ಅಮೆರಿಕ

    ರಷ್ಯಾ ಅಧ್ಯಕ್ಷ ಪುಟಿನ್‌ಗೆ ವೈಯಕ್ತಿಕ ನಿರ್ಬಂಧ ಹೇರಲು ಮುಂದಾದ ಅಮೆರಿಕ

    ವಾಷಿಂಗ್ಟನ್: ಉಕ್ರೇನ್ ಮೇಲಿನ ದಾಳಿ ಖಂಡಿಸಿ ರಷ್ಯಾ ಮೇಲೆ ಆರ್ಥಿಕ ಯುದ್ಧ ಸಾರಿರುವ ಅಮೆರಿಕಾ ಮತ್ತೊಂದು ಪ್ರಮುಖ ನಿರ್ಣಯ ತೆಗೆದುಕೊಂಡಿದೆ. ರಷ್ಯಾ ಸರ್ಕಾರದ ವಿರುದ್ಧ ದಿಗ್ಬಂಧನದ ಅಸ್ತ್ರ ಝಳಪಿಸಿದ್ದ ಅಮೆರಿಕಾ ಈಗ ನೇರವಾಗಿ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಮತ್ತು ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಮೇಲೆ ವೈಯಕ್ತಿಕ ನಿರ್ಬಂಧಗಳ ಹೇರಿ ಶಾಕ್ ನೀಡಲು ಮುಂದಾಗಿದೆ.

    ಪುಟಿನ್, ಲಾವ್ರೋವ್ ಆಸ್ತಿಗಳನ್ನು ಫ್ರೀಜ್ ಮಾಡುವ ಐರೋಪ್ಯ ಒಕ್ಕೂಟದ ನಿರ್ಧಾರವನ್ನು ಬೆಂಬಲಿಸಿದೆ. ಈ ಹಿಂದೆ ಉತ್ತರ ಕೋರಿಯಾದ ಕಿಮ್ ಜಾಂಗ್ ಉನ್, ಬೆಲಾರಸ್‍ನ ಲುಕಷೆಂಕೋ, ಸಿರಿಯಾದ ಬಷರ್ ಮೇಲೆ ಆರ್ಥಿಕ ದಿಗ್ಬಂಧನ ವಿಧಿಸಿದ ಮಾದರಿಯಲ್ಲೇ ಪುಟಿನ್, ಲಾವ್ರೋವ್ ಸೇರಿ 11 ಪ್ರಮುಖರ ಮೇಲೆ ಮೇಲೆ ನಿರ್ಬಂಧಗಳನ್ನು ಹೇರಲಾಗಿದೆ. ಈ ದಿಗ್ಬಂಧನದಿಂದಾಗಿ ಅವರ ಪ್ರಯಾಣಕ್ಕೆ, ಆರ್ಥಿಕ ಚಟುವಟಿಕೆಗೆ ಬ್ರೇಕ್ ಬಿದ್ದಂತಾಗಿದೆ. ಇದನ್ನೂ ಓದಿ: ಪುಟಿನ್ ನಡೆಗೆ ರಷ್ಯಾ ಪ್ರಜೆಗಳಿಂದಲೇ ಖಂಡನೆ – ಉಕ್ರೇನ್‍ನಲ್ಲಿ ರಷ್ಯಾದ ಬಾವುಟ ಹಾರಾಟ

    ಆದರೆ ಇದರ ಪ್ರಭಾವ ಪುಟಿನ್ ಮೇಲೆ ಬೀಳುವ ಸಾಧ್ಯತೆ ಕಡಿಮೆ. ಯಾಕೆಂದರೆ ಈ ಬಗ್ಗೆ ಮೊದಲೇ ಚಿಂತಿಸಿರುವ 200 ಬಿಲಿಯನ್‍ಗಳ ಒಡೆಯ ಪುಟಿನ್ ಸಾಕಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಎಲ್ಲದರ ನಡುವೆ ಅಂತರಾಷ್ಟ್ರೀಯ ನಗದು ವ್ಯವಹಾರಗಳ ಸಂಸ್ಥೆ ಸ್ವಿಫ್ಟ್ ಪೇಮೆಂಟ್ ನೆಟ್‍ವರ್ಕ್‍ನಿಂದ ರಷ್ಯಾವನ್ನು ಹೊರಗಿಡಲು ಬ್ರಿಟನ್ ಪ್ರಯತ್ನ ಆರಂಭಿಸಿದೆ. ಜೊತೆಗೆ ನಿಮ್ಮ ಇಷ್ಟಾನುಸಾರ ನಿರ್ಬಂಧಗಳನ್ನು ಹೇರತೊಡಗಿದ್ರೆ ಸುಮ್ಮನಿರಲ್ಲ ಎಂದು ರಷ್ಯಾ ಎಚ್ಚರಿಸಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ಅಮೆರಿಕಾ, ಯುರೋಪ್ ದೇಶಗಳ ಮೇಲೆ ಬೀಳಿಸೋದಾಗಿ ಧಮ್ಕಿ ಹಾಕಿದೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ