Tag: russia

  • ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಉಕ್ರೇನ್‌ ಯುದ್ಧ ಭೀಕರತೆ ನಡುವೆಯೂ ಹಸೆಮಣೆ ಏರಿ ಜೋಡಿ ಸಂಭ್ರಮ

    ಕೀವ್‌: ಅತ್ತ ರಷ್ಯಾದ ದಾಳಿಯಿಂದ ಉಕ್ರೇನ್‌ ಕಂಗೆಟ್ಟಿದ್ದರೆ, ಇತ್ತ ಜೋಡಿಯೊಂದು ಮದುವೆ ಸಂಭ್ರಮದಲ್ಲಿದೆ. ಯುದ್ಧದ ಆತಂಕದ ನಡುವೆಯೇ ಉಕ್ರೇನ್‌ ರಾಜಧಾನಿ ಕೀವ್‌ನ ಕಲ್ಯಾಣ ಮಂಟಪವೊಂದರಲ್ಲಿ ಜೋಡಿಯೊಂದು ನವಜೀವನಕ್ಕೆ ಕಾಲಿಟ್ಟಿದೆ.

    ಹೌದು, ಕೀವ್‌ ಸಿಟಿ ಕೌನ್ಸಿಲ್‌ನ ಡೆಪ್ಯೂಟಿ ಆಗಿರುವ 21 ವರ್ಷದ ಅರಿವಾ, ಸಾಫ್ಟ್‌ವೇರ್‌ ಇಂಜಿನಿಯರ್ ಆಗಿರುವ ಫರ್ಸಿನ್‌ ಅವರನ್ನು ವಿವಾಹವಾಗಿದ್ದಾರೆ. ಯಾರಿನಾ ಅರಿವಾ ಮತ್ತು ಆಕೆಯ ಸಂಗಾತಿ ಸ್ವ್ಯಾಟೋಸ್ಲಾವ್‌ ಫರ್ಸಿನ್‌ ಮೇ ತಿಂಗಳಲ್ಲಿ ಉಕ್ರೇನ್‌ ರಾಜಧಾನಿ ಕೀವ್‌ನಲ್ಲಿರುವ ರೆಸ್ಟೋರೆಂಟ್‌ವೊಂದರಲ್ಲಿ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಉಕ್ರೇನ್‌ ಮೇಲೆ ರಷ್ಯಾ ಯುದ್ಧ ಘೋಷಿಸಿರುವ ಪರಿಣಾಮ ಅವರು ತಮ್ಮ ಯೋಜನೆಯನ್ನು ಬದಲಾಯಿಸಿಕೊಳ್ಳಬೇಕಾಯಿತು. ಯುದ್ಧದ ನಡುವೆಯೇ ಅವರು ಅವಸರದಲ್ಲಿ ಹಸೆಮಣೆ ಏರಿದ್ದಾರೆ. ಇದನ್ನೂ ಓದಿ: ಕಣ್ಣಲ್ಲಿ ನೀರು ತರಿಸುತ್ತಿದೆ 80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ!

    ರಷ್ಯಾ ಆಕ್ರಮಣದಿಂದಾಗಿ ಉಕ್ರೇನ್‌ ಯುದ್ಧದ ನೆಲೆಯಾಗಿ ಮಾರ್ಪಟ್ಟಿದೆ. ಎಲ್ಲೆಡೆ ಗುಂಡು, ಕ್ಷಿಪಣಿ, ಬಾಂಬ್‌ಗಳ ಸದ್ದು ಕೇಳುತ್ತಿದೆ. ಜನ ಪ್ರಾಣಭೀತಿಯಲ್ಲಿ ಸಮಯ ಕಳೆಯುತ್ತಿದ್ದಾರೆ. ಎಷ್ಟೋ ಮಂದಿ ವಿದೇಶಿಗರು ತಮ್ಮ ತವರುಗಳಿಗೆ ಕಾಲ್ಕಿತ್ತಿದ್ದಾರೆ. ಇಂತಹ ಸಂದಿಗ್ಧ ಸಂದರ್ಭದಲ್ಲೂ ಜೋಡಿಯೊಂದು ನಿರಾತಂಕವಾಗಿ ಮದುವೆ ಸಮಾರಂಭ ಏರ್ಪಡಿಸಿದ್ದು ಎಲ್ಲೆಡೆ ಚರ್ಚೆಯಾಗುತ್ತಿದೆ. ಮದುವೆ ಸಮಾರಂಭದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿದೆ.

    ರಷ್ಯಾ ಪಡೆಗಳು ಈಗಾಗಲೇ ಉಕ್ರೇನ್‌ ದೇಶದಲ್ಲಿ ಕಾಣಿಸಿಕೊಂಡಿವೆ. ಉಕ್ರೇನ್‌ನಲ್ಲಿ ಈಗ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಭವಿಷ್ಯ ಹೇಗಿರುತ್ತದೋ ಗೊತ್ತಿಲ್ಲ. ನಾವಿಬ್ಬರು ಈಗಲೇ ಮದುವೆಯಾಗೋಣ ಎಂದು ಯಾರಿನಾ ಅರಿವಾ ಮತ್ತು ಸ್ವ್ಯಾಟೋಸ್ಲಾವ್‌ ಫರ್ಸಿನ್‌ ಜೋಡಿ ನಿರ್ಧರಿಸಿ ಕ್ರೈಸ್ತ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಉಕ್ರೇನ್‌ ನಗರಗಳಿಂದ ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ. ರಸ್ತೆಗಳು ಮತ್ತು ಸುರಂಗ ಮಾರ್ಗಗಳಲ್ಲಿ ಜನರು ಉಸಿರುಗಟ್ಟಿ ಸಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸನ್ನಿವೇಶಗಳು ಈ ಜೋಡಿ ತರಾತುರಿಯಲ್ಲಿ ಮದುವೆಯಾಗಲು ಕಾರಣವಾಯಿತು.

    ಈ ಸಂದರ್ಭ ತುಂಬಾ ಭಯಾನಕವಾಗಿದೆ. ಆದರೂ ಪ್ರತಿಯೊಬ್ಬರ ಬದುಕಿನಲ್ಲೂ ಇದು ಸಂತೋಷದ ಕ್ಷಣ. ನಾವು ಹೊರಗೆ ಹೋದರೆ ಗುಂಡು ಸೈರನ್‌ ಶಬ್ದಗಳನ್ನು ಕೇಳುತ್ತೇವೆ. ನಮ್ಮ ಭೂಮಿಗಾಗಿ ಹೋರಾಡುವ ಕ್ಷಣವಿದು. ಈ ಸಂದರ್ಭದಲ್ಲಿ ನಾವು ಸಾಯಲೂಬಹುದು. ಅದೆಲ್ಲಕ್ಕಿಂತ ಮೊದಲು ನಾವು ಒಟ್ಟಿಗೆ ಇರಲು ಬಯಸಿದ್ದೇವೆ ಎಂದು ಅರಿವಾ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

  • ಕಣ್ಣಲ್ಲಿ ನೀರು ತರಿಸುತ್ತಿದೆ 80 ವರ್ಷದ ವ್ಯಕ್ತಿ ಉಕ್ರೇನ್ ಸೇನೆಗೆ ಸೇರಲು ನಿಂತಿರುವ ಫೋಟೋ!

    ಕೀವ್: ಉಕ್ರೇನ್ ಹಾಗೂ ರಷ್ಯಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಮಧ್ಯೆ ಸಾಮಾಜಿಕ ಮಾಧ್ಯಮದಲ್ಲಿ ಉಕ್ರೇನ್ ನಾಗರಿಕರ ಹೃದಯ ವಿದ್ರಾವಕ ಫೋಟೋಗಳೇ ತುಂಬಿ ತುಳುಕುತ್ತಿವೆ. ಉಕ್ರೇನ್‍ನ ಮೆಟ್ರೋ ಸುರಂಗಮಾರ್ಗದಲ್ಲಿ ದಂಪತಿ ವಿದಾಯ ಹೇಳುವ ವೈರಲ್ ಫೋಟೋದಿಂದ ಹಿಡಿದು ತಂದೆ ಹಾಗೂ ಮಗಳು ಅತ್ತು ಒಬ್ಬರನ್ನೊಬ್ಬರು ಅಪ್ಪಿಕೊಳ್ಳುವ ದೃಶ್ಯಗಳು ನೆಟ್ಟಿಗರನ್ನು ಬೆಚ್ಚಿಬೀಳಿಸಿವೆ.

    ಇದೀಗ ಉಕ್ರೇನ್ ಸೇನೆಗೆ ಸೇರಲು ಸರದಿ ಸಾಲಿನಲ್ಲಿ ನಿಂತಿರುವ 80 ವರ್ಷದ ವ್ಯಕ್ತಿಯೊಬ್ಬರ ಫೋಟೋ ವೈರಲ್ ಆಗುತ್ತಿದೆ. ಕೈಯಲ್ಲೊಂದು ಬ್ಯಾಗ್ ಹಿಡಿದು ಸೈನ್ಯಕ್ಕೆ ಸೇರಲು ಸಿದ್ಧರಾಗಿ ನಿಂತಿರುವ ಮುದಿ ಜೀವದ ಫೋಟೋ ಎಂತಹವರ ಕಣ್ಣಲ್ಲಿಯೂ ನೀರು ತರಿಸುವಂತಿದೆ. ಇದನ್ನೂ ಓದಿ: ಅಪ್ಪ, ಅಮ್ಮಾ ಐ ಲವ್ ಯೂ – ಯೋಧನ ಕರುಳು ಹಿಂಡುವ ಸಂದೇಶ

    ಸೈನ್ಯಕ್ಕೆ ಸೇರಲು ಸರದಿ ಸಾಲಿನಲ್ಲಿ ನಿಂತಿದ್ದ 80 ವರ್ಷದ ವ್ಯಕ್ತಿಯ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಲಾಗಿದೆ. ವ್ಯಕ್ತಿ ಹಿಡಿದುಕೊಂಡಿರುವ ಪುಟ್ಟ ಬ್ಯಾಗ್‍ನಲ್ಲಿ 2 ಟೀ-ಶರ್ಟ್‍ಗಳು, ಒಂದು ಜೊತೆ ಹೆಚ್ಚುವರಿ ಪ್ಯಾಂಟ್, ಟೂತ್ ಬ್ರಷ್ ಹಾಗೂ ಊಟಕ್ಕೆ ಒಂದಿಷ್ಟು ಸ್ಯಾಂಡ್‍ವಿಚ್‍ಗಳನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಮೊಮ್ಮಕ್ಕಳಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಟ್ವಿಟ್ಟರ್ ಪೋಸ್ಟ್‍ನಲ್ಲಿ ಬರೆಯಲಾಗಿದೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ರಷ್ಯಾದೊಂದಿಗೆ ಹೋರಾಡಲು ಬಯಸುವ ಎಲ್ಲಾ ನಾಗರಿಕರಿಗೂ ಶಸ್ತ್ರಾಸ್ತ್ರಗಳನ್ನು ಒದಗಿಸುವುದಾಗಿ ತಿಳಿಸಿದ್ದರು. ರಷ್ಯಾ ಬಗ್ಗೆ ಇನ್ನೂ ಆತ್ಮಸಾಕ್ಷಿ ಕಳೆದುಕೊಳ್ಳದ ಎಲ್ಲಾ ನಾಗರಿಕರಿಗೂ ಶಸ್ತ್ರಾಸ್ತ್ರಗಳನ್ನು ಒದಗಿಸುತ್ತಿದ್ದೇವೆ ಹಾಗೂ ಎಲ್ಲಾ ನಿರ್ಬಂಧವನ್ನೂ ತೆಗೆದು ಹಾಕುತ್ತಿದ್ದೇವೆ ಎಂದು ತಿಳಿಸಿದ್ದರು.

  • ಉಕ್ರೇನ್‍ನ ಧೀರ ಪ್ರಜೆಗಳೇ ರಷ್ಯಾ ವಿರುದ್ಧ ಹೋರಾಟ ಮಾಡಿ: ಉಕ್ರೇನ್ ಅಧ್ಯಕ್ಷ ಝೆಲೆನ್ಸಿ ಕರೆ

    ಉಕ್ರೇನ್‍ನ ಧೀರ ಪ್ರಜೆಗಳೇ ರಷ್ಯಾ ವಿರುದ್ಧ ಹೋರಾಟ ಮಾಡಿ: ಉಕ್ರೇನ್ ಅಧ್ಯಕ್ಷ ಝೆಲೆನ್ಸಿ ಕರೆ

    ಮಾಸ್ಕೋ: ರಷ್ಯಾ ವಿರುದ್ಧ ನಮ್ಮದು ಏಕಾಂಗಿ ಹೋರಾಟ. ಅಮೆರಿಕಾ, ನ್ಯಾಟೋ ದೇಶಗಳು ಕೈಕೊಟ್ಟಿವೆ ಹಾಗಂತಾ ನಾವು ಎದೆಗುಂದುವುದು ಬೇಡ. ನಮ್ಮ ದೇಶ ಉಳಿಸಿಕೊಳ್ಳಿಕೊಳ್ಳಲು ವಿರೋಚಿತ ಹೋರಾಟ ನಡೆಸೋಣ ಉಕ್ರೇನ್‍ನ ಧೀರ ಪ್ರಜೆಗಳೇ ರಷ್ಯಾ ವಿರುದ್ಧ ಹೋರಾಟ ಮಾಡಿ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕರೆ ನೀಡಿದ್ದಾರೆ.

    ರಷ್ಯಾ ಯುದ್ಧ ತೀವ್ರಗೊಳಿಸುತ್ತಿದ್ದಂತೆ ಉಕ್ರೇನ್ ಪ್ರಜೆಗಳಿಗೆ ಮನವಿ ಮಾಡಿದ ಝೆಲೆನ್ಸ್ಕಿ, ಧೀರ ಪ್ರಜೆಗಳೇ ಉಕ್ರೇನ್ ಧ್ವಜ ಹಿಡಿದು, ಶಸ್ತ್ರಾಸ್ತ್ರ ಹಿಡಿದು ರಷ್ಯಾ ವಿರುದ್ಧ ಸೆಣೆಸಾಡಿ. ನಾನು ನಿಮ್ಮೊಂದಿಗೆ ಇರುತ್ತೇನೆ. ನಿಮಗಿಂತ ಮುಂದೆ ಇರುತ್ತೇನೆ ಎಂದು ಉಕ್ರೇನ್‍ನ 10 ಸಾವಿರಕ್ಕೂ ಹೆಚ್ಚು ನಾಗರಿಕರ ಕೈಗೆ ಸೇನೆ ಶಸ್ತ್ರಾಸ್ತ್ರ ನೀಡಿದೆ. ಇದನ್ನೂ ಓದಿ: ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ಉಕ್ರೇನ್ ಹಿಂದೆ ನಾವಿದ್ದೇವೆ ಎಂದು ಪೋಸ್ ಕೊಟ್ಟಿದ್ದ ಅಮೆರಿಕಾ ಮತ್ತು ನ್ಯಾಟೋ ಪಡೆಗಳು ಈಗ ಕೈ ಎತ್ತಿಬಿಟ್ಟಿವೆ. ನ್ಯಾಟೋ ಸದಸ್ಯ ರಾಷ್ಟ್ರಗಳ ತಂಟೆಗೆ ಬಂದ್ರೆ ಸುಮ್ಮನಿರಲಿಕ್ಕಿಲ್ಲ ಎಂದು ಗುಡುಗಿವೆ. ಆದ್ರೆ, ಉಕ್ರೇನ್ ನ್ಯಾಟೋ ಸದಸ್ಯ ರಾಷ್ಟ್ರವಲ್ಲ ಎಂಬುದು ಕಟು ವಾಸ್ತವ. ಅಮೆರಿಕಾ, ನ್ಯಾಟೋ ಮಾತು ನಂಬಿ ಕೆಟ್ವಿದೆ ಎಂಬ ಸತ್ಯ ಈಗ ಉಕ್ರೇನ್ ಅರಿವಿಗೆ ಬಂದಂತೆ ಇದೆ. ನಮ್ಮನ್ನು ಎಲ್ಲಾ ದೇಶಗಳು ಒಂಟಿ ಮಾಡಿಬಿಟ್ವು. ನಾವು ತುಂಬಾ ದೇಶಗಳ ಜೊತೆ ಮಾತಾಡಿದ್ವಿ. ಆದ್ರೇ ಯಾರು ನಮ್ಮ ನೆರವಿಗೆ ಬರುತ್ತಿಲ್ಲ. ಅತ್ಯಂತ ಬಲಿಷ್ಠ ದೇಶವೊಂದು ಎಲ್ಲವನ್ನು ದೂರದಿಂದ ನೋಡುತ್ತಿದೆ. ನ್ಯಾಟೋ ನಂಬಿದಕ್ಕೂ ಪ್ರಯೋಜನವಾಗಿಲ್ಲ. ಇದಕ್ಕಾಗಿ ನಾನು ದೇಶದ ಜನತೆಯೊಂದಿಗೆ ಕ್ಷಮೆ ಕೋರುತ್ತಿದ್ದೇನೆ ಎಂದು ಝೆಲೆನ್ಸ್ಕಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಇತ್ತ ಉಕ್ರೇನ್ ಸರ್ಕಾರ ಪತನಗೊಳಿಸಿ. ಉಕ್ರೇನ್ ಅನ್ನು ತಮ್ಮ ವಶಕ್ಕೆ ತೆಗೆದುಕೊಳ್ಳಿ ಎಂದು ರಷ್ಯಾ ಸೈನಿಕರಿಗೆ ವಾಡ್ಲಿಮಿರ್ ಪುಟಿನ್ ಕಟ್ಟಾಜ್ಞೆ ಹೊರಡಿಸಿದ್ದಾರೆ. ಕೆಲವೇ ಕ್ಷಣಗಳ ಹಿಂದೆ ಕೀವ್ ನಗರಕ್ಕೆ ರಷ್ಯಾ ಸೇನೆ ಎಂಟ್ರಿಕೊಟ್ಟಿದ್ದು, ಯಾವುದೇ ಕ್ಷಣದಲ್ಲಿ ಉಕ್ರೇನ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಶರಣಾಗುವಂತೆ ಉಕ್ರೇನ್ ಅಧ್ಯಕ್ಷರಿಗೆ ರಷ್ಯಾ ವಾರ್ನಿಂಗ್ ನೀಡಿದೆ. ಜೀವ ರಕ್ಷಣೆಗೆ ಉಕ್ರೇನ್ ಅಧ್ಯಕ್ಷ ಬಂಕರ್ ಸೇರಿದ್ದು, ಇದೀಗ ಉಕ್ರೇನ್ ಅಧ್ಯಕ್ಷರು ಶರಣಾಗ್ತಾರಾ? ಪ್ರತಿರೋಧಿಸ್ತಾರಾ? ಎಂಬ ಕುತೂಹಲವಿದೆ.

  • ಬಂಕರ್, ಮೆಟ್ರೋ ಅಂಡರ್‌ಗ್ರೌಂಡ್‌ನಲ್ಲಿ ಆಶ್ರಯ ಪಡೆದಿರೋರನ್ನು ಕಂಡ್ರೆ ಆತಂಕವಾಗುತ್ತೆ: ಹೆಚ್‍ಡಿಕೆ

    ಬಂಕರ್, ಮೆಟ್ರೋ ಅಂಡರ್‌ಗ್ರೌಂಡ್‌ನಲ್ಲಿ ಆಶ್ರಯ ಪಡೆದಿರೋರನ್ನು ಕಂಡ್ರೆ ಆತಂಕವಾಗುತ್ತೆ: ಹೆಚ್‍ಡಿಕೆ

    ಬೆಂಗಳೂರು: ಉಕ್ರೇನ್‍ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರಿಕರನ್ನು ಸುರಕ್ಷಿತವಾಗಿ ಏರ್‍ಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಶುಕ್ರವಾರ ನಡೆದ ಜಾತ್ಯತೀತ ಜನತಾದಳ ಪಕ್ಷದ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ರಷ್ಯಾ ಆಕ್ರಮಣದಿಂದ ಉಕ್ರೇನ್‍ನಲ್ಲಿರುವ ಕನ್ನಡಿಗರು ಜೀವಭಯದಿಂದ ತತ್ತರಿಸಿದ್ದಾರೆ. ಈ ಕೂಡಲೇ ಅವರನ್ನು ರಕ್ಷಿಸಿ ಕರೆತರುವ ಕೆಲಸ ಆಗಬೇಕು ಎಂದರು. ಇದನ್ನೂ ಓದಿ: Russia-Ukraine War: ಉಕ್ರೇನ್ ಜೊತೆ ಮಾತುಕತೆಗೆ ಒಪ್ಪಿದ ರಷ್ಯಾ

    ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಕೇಂದ್ರ ಸರ್ಕಾರ ಎಲ್ಲಾ ರಾಜತಾಂ ತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್ ಕರೆತರಬೇಕು ಎಂದಿದ್ದಾರೆ.

    ರಷ್ಯಾ ದಾಳಿಯಿಂದ ತತ್ತರಿಸಿರುವ ಉಕ್ರೇನ್‍ನಲ್ಲಿ ರಾಜ್ಯದ ನೂರಾರು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿಯನ್ನು ಸರ್ಕಾರವೇ ನೀಡಿದೆ. ಆ ದೇಶದ ಕೀವ್ ನಗರ ಸೇರಿ ವಿವಿಧೆಡೆ ಕಷ್ಟದಲ್ಲಿರುವ ಕನ್ನಡಿಗರ ರಕ್ಷಣೆಗೆ ಎಲ್ಲಾ ತುರ್ತು ಕ್ರಮಗಳನ್ನು ತಕ್ಷಣವೇ ಕೈಗೊಳ್ಳಬೇಕು. ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಕರೆತರಬೇಕು ಎಂದಿದ್ದಾರೆ.

    ಶೆಲ್, ಕ್ಷಿಪಣಿ, ಬಾಂಬ್ ದಾಳಿ ಭೀತಿಯಿಂದ ವಿದ್ಯಾರ್ಥಿಗಳು ಬಂಕರ್‍ಗಳಲ್ಲಿ ಹಾಗೂ ಮೆಟ್ರೋ ರೈಲು ಅಂಡರ್ ಗ್ರೌಂಡ್‍ನಲ್ಲಿ ಆಶ್ರಯ ಪಡೆದಿದ್ದಾರೆ. ಆ ದೃಶ್ಯಗಳು ಕಳವಳಕಾರಿಯಾಗಿದೆ. ಸ್ಫೋಟದ ಸದ್ದು ಕೇಳಿಸಿಕೊಂಡು ಕ್ಷಣಕ್ಷಣಕ್ಕೂ ಭಯಭೀತಿಯಲ್ಲಿರುವ ಅವರೆಲ್ಲರನ್ನು ನೋಡಿದರೆ ಯುದ್ಧದ ಭೀಕರತೆ ಎಂಥದ್ದು ಎಂಬುದನ್ನು ಅರಿಯಬಹುದು ಎಂದರು. ಇದನ್ನೂ ಓದಿ: Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಅಲ್ಲಿ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದರೆ. ಇಲ್ಲಿ ಅವರ ತಂದೆ-ತಾಯಿ ತಮ್ಮ ಮಕ್ಕಳ ಬಗ್ಗೆ ತೀವ್ರ ಆತಂಕದಲ್ಲಿದ್ದಾರೆ. ಉಕ್ರೇನ್‍ನಲ್ಲಿ ಬಾಂಬ್‍ಗಳ ಮೊರೆತಕ್ಕೆ ಅವರು ಮತ್ತಷ್ಟು ಕಂಗಾಲಾಗುತ್ತಿದ್ದಾರೆ. ನಾನು ಕೂಡ ಕನ್ನಡಿಗರ ರಕ್ಷಣೆಗೆ ನೇಮಕಗೊಂಡಿರುವ ಉಸ್ತುವಾರಿ ಅಧಿಕಾರಿ ಜತೆ ನಿರಂತರ ಸಂಪರ್ಕದಲ್ಲಿದ್ದೇನೆ. ಕೇಂದ್ರ ಸರ್ಕಾರ ತನ್ನೆಲ್ಲಾ ರಾಜತಾಂತ್ರಿಕ ಮಾರ್ಗಗಳನ್ನು ಬಳಸಿಕೊಂಡು ಉಕ್ರೇನ್‍ನಲ್ಲಿರುವ ಎಲ್ಲಾ ಕನ್ನಡಿಗರನ್ನೂ ಏರ್‍ಲಿಫ್ಟ್ ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

  • ನಮ್ಮ ಮಗನನ್ನು ನೋಡ್ಬೇಕು ಅನಿಸುತ್ತಿದೆ- ಉಕ್ರೇನ್‍ನಲ್ಲಿ ಸಿಲುಕಿರುವ ಮಗನನ್ನು ನೆನೆದು ಕಣ್ಣೀರಾಕಿದ ತಂದೆ

    ನಮ್ಮ ಮಗನನ್ನು ನೋಡ್ಬೇಕು ಅನಿಸುತ್ತಿದೆ- ಉಕ್ರೇನ್‍ನಲ್ಲಿ ಸಿಲುಕಿರುವ ಮಗನನ್ನು ನೆನೆದು ಕಣ್ಣೀರಾಕಿದ ತಂದೆ

    ಬೀದರ್: ರಷ್ಯಾ ಹಾಗೂ ಉಕ್ರೇನ್ ನಡುವೆ ಯುದ್ಧ ನಡೆಯುತ್ತಿದ್ದು ಉಕ್ತಯನಲ್ಲಿ ಸಿಲುಕಿರುವ ಕನ್ನಡಿಗರು ಯಾವಾಗ ಏನಾಗುತ್ತೋ ಎಂಬ ಭಯದಲ್ಲಿ ಕಾಲ ಕಳೆಯುತ್ತಿದ್ದಾರೆ. ಅದರಲ್ಲೂ ಗಡಿ ಜಿಲ್ಲೆ ಬೀದರ್ ನ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು ಅವರ ಪೋಷಕರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

    ಮಕ್ಕಳಿಂದ ಪೋಷಕರು ಪ್ರತಿ ಕ್ಷಣದ ಮಾಹಿತಿ ಪಡೆಯುತ್ತಿದ್ದು ಸದ್ಯ ಪರಿಸ್ಥಿತಿ ಬಗ್ಗೆ ಪೋಷಕರು ಆಂತಕಗೊಂಡಿದ್ದಾರೆ. ಉಕ್ರೇನ್ ನೆಲ ಮಹಡಿಯಲ್ಲಿ ನಮ್ಮ ಮಕ್ಕಳು ವಾಸವಾಗಿದ್ದು, ಸದ್ಯ ಪರಿಸ್ಥಿತಿ ತಿಳಿಯಾಗಿದೆ. ಆದಷ್ಟು ಬೇಗ ಸರ್ಕಾರ ನಮ್ಮ ಮಗನನ್ನು ಭಾರತಕ್ಕೆ ಕರೆದುಕೊಂಡು ಬಂದ್ರೆ ಒಳ್ಳೆಯದು, ಯಾಕೆಂದರೆ ನಮ್ಮ ಮಕ್ಕಳನ್ನು ನೋಡಬೇಕು ಅನಿಸುತ್ತದೆ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಇತ್ತ ಉಕ್ರೇನ್ ನಲ್ಲಿ ಸಿಲುಕಿರುವ ವೈದ್ಯಕೀಯ ವಿದ್ಯಾರ್ಥಿನಿ ಜೊತೆ ಬಸವಕಲ್ಯಾಣ ತಹಶೀಲ್ದಾರ್ ವೀಡಿಯೋ ಕಾಲ್ ಮೂಲಕ ಮಾತನಾಡಿ ಅತ್ಮಸ್ಥೈರ್ಯ ತುಂಬಿದ್ದಾರೆ. ಬಸವಕಲ್ಯಾಣ ತಾಲೂಕಿನಲ್ಲಿ ನಾರಾಯಣಪೂರ್ ಗ್ರಾಮದ ವೈಷ್ಣವಿ ವಿಷ್ಣುರೆಡ್ಡಿ ಮನೆಗೆ ಭೇಟಿ ನೀಡಿದ ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗಾರ ವೈಷ್ಣವಿ ಜೊತೆ ವೀಡಿಯೋ ಕಾಲ್ ನಲ್ಲಿ ಮಾತನಾಡಿದ್ರು. ಇದನ್ನೂ ಓದಿ: ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ವೀಡಿಯೋ ಕಾಲ್ ಮಾಡಿದ ತಹಶೀಲ್ದಾರ್ ಗೆ ಉಕ್ರೇನ್ ನಲ್ಲಿರುವ ಸದ್ಯದ ಪರಿಸ್ಥಿತಿ ಬಗ್ಗೆ ವೈದ್ಯಕೀಯ ವಿದ್ಯಾರ್ಥಿನಿ ವೈಷ್ಣವಿ ವಿವರಣೆ ನೀಡಿದರು. ನೀವು ಒಂಥರಾ ಯೋಧರಿದ್ದಂತೆ, ಯಾವುದಕ್ಕೂ ಭಯಪಡೆಬೇಡಿ, ತಾಯ್ನಾಡಿಗೆ ನಿಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬರುತ್ತೆವೆ, ಯಾವ ಸಮಯದಲ್ಲಿ ಬೇಕಾದ್ರು ನನ್ನ ನಂಬರ್ ಗೆ ಫೋನ್ ಮಾಡಬಹುದು ಎಂದು ಹೇಳುವ ಮೂಲಕ ತಹಶೀಲ್ದಾರ್ ಧೈರ್ಯ ತುಂಬಿದ್ದಾರೆ.

  • Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    Russia-Ukraine Crisis: 4 ಬಸ್‍ಗಳಲ್ಲಿ 240 ವಿದ್ಯಾರ್ಥಿಗಳು ರೊಮೇನಿಯಾಗೆ ಶಿಫ್ಟ್

    ಕೀವ್: ಉಕ್ರೇನ್‍ನಲ್ಲಿ ಭಾರತೀಯರನ್ನು ಪಾರುಮಾಡುವ ಸಾಹಸಗಳು ನಡೆಯುತ್ತಿವೆ. ರಷ್ಯಾ- ಉಕ್ರೇನ್ ಮೇಲೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿರುವ ಭಾರತೀಯರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.

    ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರು ಇಲ್ಲಿಯವರೆಗೆ ತಮ್ಮ ಜೀವ ಉಳಿಸಿಕೊಳ್ಳಲು ಮೆಟ್ರೋ ಸುರಂಗಗಳಲ್ಲಿ ಅಡಗಿ ಕುಳಿತಿದ್ದರು. ಇದೀಗ ಅಡಗಿ ಕುಳಿತಿದ್ದ 240 ವಿದ್ಯಾರ್ಥಿಗಳನ್ನು 4 ಬಸ್‍ಗಳಲ್ಲಿ ಉಕ್ರೇನ್-ರೊಮೇನಿಯಾ ಗಡಿಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಾಚರಣೆ ಭಾಗವಾಗಿ 1 ಸಾವಿರಕ್ಕೂ ಹೆಚ್ಚು ಜನರನ್ನು ಭಾರತಕ್ಕೆ ಏರ್‌ಲಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ. ಉಕ್ರೇನ್‍ನಲ್ಲಿ ಎಲ್ಲಾ ನಾಗರಿಕ ವಿಮಾನಯಾನವನ್ನು ಸ್ಥಗಿತಗೊಳಿಸಿರುವುದರಿಂದ ನೇರವಾಗಿ ಉಕ್ರೇನ್‍ನಿಂದ ಭಾರತಕ್ಕೆ ಮರಳಿ ಬರುವುದು ಅಸಾಧ್ಯವಾಗಿದೆ. ಹೀಗಾಗಿ ಭಾರತೀಯರನ್ನು ಕರೆತರಲು ಮೊದಲು ಅವರನ್ನು ರೊಮೇನಿಯಾಗೆ ಸ್ಥಳಾಂತರಿಸುವ ಅಗತ್ಯವಿದೆ. ಅಲ್ಲಿಂದ 13 ಕಿ.ಮೀ ನಡಿಗೆಯ ಮೂಲಕ ಏರ್‌ಲಿಫ್ಟ್ ಮಾಡಲಾಗುವ ಜಾಗದವರೆಗೆ ಹೋಗಬೇಕಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ರೊಮೇನಿಯಾ ಸರ್ಕಾರದೊಂದಿಗೆ ಭಾರತೀಯ ವಿದೇಶಾಂಗ ಇಲಾಖೆ ಸತತ ಸಂಪರ್ಕದಲ್ಲಿದೆ. ಏರ್ ಇಂಡಿಯಾ ವತಿಯಿಂದ 2 ವಿಮಾನಗಳನ್ನು ಈಗಾಗಲೇ ಕಳುಹಿಸಲಾಗಿದೆ. ಸದ್ಯ ಭಾರತೀಯ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿರುವ ಬಸ್ಸುಗಳು ರೊಮೇನಿಯಾ ತಲುಪಲು 800 ಕಿ.ಮೀ ಪ್ರಯಾಣಿಸಬೇಕಿದೆ. ಮೊದಲ ಹಂತದ ಸ್ಥಳಾಂತರ ಮುಕ್ತಾಯವಾಗಲು ಶನಿವಾರ ಮಧ್ಯಾಹ್ನದವರೆಗೂ ಸಮಯ ತಗುಲಬಹುದು ಎಂದು ವರದಿಗಳು ತಿಳಿಸಿವೆ.

  • ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ನವಜಾತ ಶಿಶುಗಳಿಗೂ ಯುದ್ಧದ ಬಿಸಿ – ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ಹಾಲುಗಲ್ಲದ ಕಂದಮ್ಮಗಳು

    ಮಾಸ್ಕೋ: ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದ ಪರಿಣಾಮ ಆಗ ತಾನೇ ಹುಟ್ಟಿದ ಮಕ್ಕಳು ಕೂಡ ಭಯ ಪಡುವಂತಹ ಪರಿಸ್ಥಿತಿ ಬಂದಿದೆ. ಉಕ್ರೇನ್‍ನಲ್ಲಿ ಹಾಲುಗಲ್ಲದ ಕಂದಮ್ಮಗಳನ್ನು ಹಿಡಿದುಕೊಂಡು ತಾಯಂದಿರುವ ಪ್ರಾಣ ಭಯದಿಂದ ಬಾಂಬ್ ಶೆಲ್ಟರ್‌ಗಳಲ್ಲಿ ಆಶ್ರಯ ಪಡೆದ ದೃಶ್ಯ ಕರುಳು ಹಿಂಡುವಂತಿದೆ.

    ರಾತ್ರೋರಾತ್ರಿ ರಷ್ಯಾ ನಡೆಸಿದ ಬಾಂಬ್, ಕ್ಷಿಪಣಿ ದಾಳಿಯಿಂದ ಉಕ್ರೇನ್ ದೇಶ ತತ್ತರಿಸಿ ಹೋಗಿದೆ. ಮೊದಲು ಸೈನಿಕ ಸ್ಥಾವರಗಳನ್ನು ಟಾರ್ಗೆಟ್ ಮಾಡಿದ್ದ ರಷ್ಯಾ ಸೇನೆ ಇದೀಗ ಜನವಸತಿ ಪ್ರದೇಶಗಳ ಮೇಲೆಯೂ ದಾಳಿ ನಡೆಸುತ್ತಿದೆ. ಭಾರೀ ಸಂಖ್ಯೆಯಲ್ಲಿ ಕಟ್ಟಡಗಳು ನಾಶವಾಗಿವೆ. ನೂರಾರು ಸೈನಿಕರು, ಜನಸಾಮಾನ್ಯರು ಈ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಭೀಕರ ಶಬ್ಧದ ನಡುವೆ ಪ್ರಾಣ ಉಳಿಸಿಕೊಳ್ಳಲು ಸುರಕ್ಷಿತ ಪ್ರದೇಶಗಳಿಗೆ ಜನ ಓಡುತ್ತಿದ್ದಾರೆ. ಇದನ್ನೂ ಓದಿ: ಗಡಿ ಪ್ರವೇಶಿಸಿದ ಶಸ್ತ್ರಸಜ್ಜಿತ ರಷ್ಯಾ ಸೈನಿಕನಿಗೆ ಉಕ್ರೇನ್‌ ಮಹಿಳೆ ಛೀಮಾರಿ – ವೀಡಿಯೋ ವೈರಲ್‌

    ಕೆಲವರು ನಗರಗಳನ್ನು ಬಿಟ್ಟು ದೇಶದ ಗಡಿಯತ್ತ ತೆರಳುತ್ತಿದ್ದಾರೆ. ಮತ್ತೆ ಕೆಲವರು ಮೆಟ್ರೋ ಸುರಂಗಗಳಲ್ಲಿ, ಮನೆಗಳ ನೆಲಮಹಡಿಗಳಲ್ಲಿ ಅಡಗಿ ಕುಳಿತಿದ್ದಾರೆ. ಅದರಲ್ಲೂ ಹುಟ್ಟಿದ ಮೊದಲ ದಿನವೇ ಹಸುಕೂಸುಗಳನ್ನು ಹಿಡಿದುಕೊಂಡು ತಾಯಂದಿರು ನೆಲಮಹಡಿಯಲ್ಲಿ ಬಂಧಿಯಾಗಿರುವುದು ಆತಂಕ ಮೂಡಿಸಿದೆ. ಈಗ ತಾನೆ ಜಗತ್ತಿಗೆ ಕಾಲಿಟ್ಟ ಪುಟ್ಟ ಕಂದಮ್ಮಗಳ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

    https://twitter.com/incrediblind/status/1497069811288797186

    ಇತ್ತ ರಷ್ಯಾ ದಾಳಿಗೆ ಉಕ್ರೇನ್ ಸೇನೆ ಕೂಡ ತಿರುಗೇಟು ನೀಡಲು ಪ್ರಯತ್ನಿಸುತ್ತಿದೆ. ರಷ್ಯಾದ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿದೆ. ಆದರೆ ಆ ವಿಮಾನ ಕೀವ್‍ನ ಎರಡು ಕಟ್ಟಡಗಳ ಮೇಲೆ ಬಿದ್ದು ಎರಡು ಕಡೆಯೂ ಸಾವು ನೋವು ಉಂಟಾಗಿದೆ. ರಷ್ಯಾದ ಕೆಲವು ಸೈನಿಕರನ್ನು ವಶಕ್ಕೆ ಕೂಡ ಪಡೆದಿದೆ. ರಷ್ಯಾದ 1000ಕ್ಕೂ ಹೆಚ್ಚು ಸೈನಿಕರನ್ನು ಹೊಡೆದುರುಳಿಸಿರುವುದಾಗಿ ಉಕ್ರೇನ್ ಹೇಳಿಕೊಂಡಿದೆ. ಇದನ್ನೂ ಓದಿ:  ವೈದ್ಯ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಉಕ್ರೇನ್, ರಷ್ಯಾಗೇ ಹೆಚ್ಚಾಗಿ ಯಾಕೆ ಹೋಗ್ತಾರೆ ಗೊತ್ತಾ?

     

  • ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ಉಕ್ರೇನ್‌ನಲ್ಲಿ ಸಿಲುಕಿರುವ ಕಲಬುರಗಿಯ ಐವರು ವಿದ್ಯಾರ್ಥಿಗಳು

    ಕಲಬುರಗಿ: ಉಕ್ರೇನ್ ಮತ್ತು ರಷ್ಯಾ ನಡುವೆಯ ಯುದ್ಧದ ಹಿನ್ನೆಲೆಯಲ್ಲಿ ಕಲಬುರಗಿಯ ನಾಲ್ಕು ವಿದ್ಯಾರ್ಥಿಗಳು ಸಿಲುಕಿರುವ ಮಾಹಿತಿ ಬಂದಿದೆ.

    ಉಕ್ರೇನ ಕಾರ್ಕಿವ್‌ನಲ್ಲಿ ವಿದ್ಯಾರ್ಥಿಗಳಾದ ಮಲ್ಲಿನಾಥ, ಶಶಾಂಕ್ ಹಾಗೂ ಪ್ರಜ್ವಲ್ ಎಂಬ ಮೂರು ಜನ ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್. ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಅದೇ ರೀತಿ ಉಕ್ರೆನ್ ಕಿವ್‍ನಲ್ಲಿ ಇಬ್ಬರು ವಿದ್ಯಾರ್ಥಿಗಳು ಜೀವಿತಾ ಮತ್ತು ವಿದ್ಯಾಸಾಗರ ಎಂಬುವವರು ಸೇರಿದಂತೆ ಒಟ್ಟು ಐವರು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿರುವ ಮಾಹಿತಿ ದೊರೆತಿದೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಕಾ‌ರ್ಮಿಕ್‌ನ  ಮೂರು ಜನ ವಿದ್ಯಾರ್ಥಿಗಳು ಇರುವ ಪ್ರದೇಶದ ಕೂಗಳತೆಯ ದೂರದಲ್ಲೆ ಬಾಂಬ್ ಸ್ಪೋಟವಾಗಿದ್ದು, ಬಾಂಬ್ ಸ್ಫೋಟ ಶಬ್ದಕ್ಕೆ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ.  ಬಾಂಬ್ ಸ್ಫೋಟ ಶಬ್ದಕ್ಕೆ ಹಾಸ್ಟೆಲ್ ನಡುಗಿದ ಅನುಬವವಾಗಿದ್ದು, ಕಿಟಕಿ ಗಾಜುಗಳು ಬಿರುಕುಗೊಂಡು ಕೊಣೆಗಳು ಸಹ ನಡುಗಿದ ಅನುಭವವಾಗಿದೆ. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಕರ್ನಾಟಕದ 40ಕ್ಕೂ ಅಧಿಕ ವಿದ್ಯಾರ್ಥಿಗಳು ಇರುವ ಹಾಸ್ಟೆಲ್ ಇದಾಗಿದ್ದು, ಹಾಸ್ಟೆಲ್ ನಡುಗಿದ ಬೆನ್ನಲ್ಲೇ ಆತಂಕದಲ್ಲಿರುವ ವಿದ್ಯಾರ್ಥಿಗಳ ಗಂಟು ಮೂಟೆ ಕಟ್ಟಿಸಿ, ಹಾಸ್ಟೆಲ್‍ನ ಅಂಡರ್ ಗ್ರೌಂಡ್‍ನಲ್ಲಿರುವ ಬಾಂಬ್ ಶೆಲ್ಟರ್‌ ಶಿಫ್ಟ್ ಮಾಡಲಾಗಿದೆ.

  • ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ಉಕ್ರೇನ್‍ನಿಂದ ಭಾರತೀಯರನ್ನು ಕರೆತರಲು ರೊಮೇನಿಯಾಗೆ ವಿಮಾನ – ಏರ್ ಇಂಡಿಯಾ ಯೋಜನೆ

    ನವದೆಹಲಿ: ರಷ್ಯಾದ ಮಿಲಿಟರಿ ದಾಳಿಯಿಂದಾಗಿ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಏರ್ ಇಂಡಿಯಾ ಶುಕ್ರವಾರ ರೋಮೇನಿಯಾ ರಾಜಧಾನಿ ಬುಕಾರೆಸ್ಟ್‍ಗೆ 2 ವಿಮಾನಗಳನ್ನು ಕಳುಹಿಸಲು ಯೋಜಿಸಿದೆ.

    ಉಕ್ರೇನ್‍ನ ವಾಯುಪ್ರದೇಶವನ್ನು ಗುರುವಾರ ಮುಚ್ಚಲಾಗಿದೆ. ಹೀಗಾಗಿ ಉಕ್ರೇನ್‍ನಲ್ಲಿ ಭಾರತಿಯ ಪ್ರಯಾಣಿಕರು ಮಾತ್ರವಲ್ಲದೇ ಇತರ ದೇಶದ ಪ್ರಯಾಣಿಕರು ಸಿಲುಕಿಕೊಂಡಿದ್ದಾರೆ. ಇದನ್ನೂ ಓದಿ: ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ಪ್ರಯಾಣಿಕರು ರಸ್ತೆಯ ಮೂಲಕ ಉಕ್ರೇನ್-ರೊಮೇನಿಯಾ ಗಡಿ ತಲುಪಿದರೆ, ಅಲ್ಲಿಂದ ಭಾರತ ಸರ್ಕಾರ ಅಧಿಕಾರಿಗಳು ಅವರನ್ನು ಬುಕಾರೆಸ್ಟ್‍ಗೆ ಕರೆದೊಯ್ಯಲಿದ್ದಾರೆ. ಬಳಿಕ ವಿಮಾನದ ಮೂಲಕ ಭಾರತಕ್ಕೆ ಹಿಂದಿರುಗಿಸುವಂತೆ ಏರ್ ಇಂಡಿಯಾ ಯೋಜಿಸಿದೆ. ಶನಿವಾರ 2 ಏರ್ ಇಂಡಿಯಾ ವಿಮಾನಗಳು ಬುಕಾರೆಸ್ಟ್‍ನಿಂದ ಹೊರಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 20 ಸಾವಿರ ಭಾರತೀಯರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಸಿಲುಕಿಕೊಂಡಿದ್ದಾರೆ.

    ಉಕ್ರೇನ್ ರಾಜಧಾನಿ ಕೀವ್‍ನಿಂದ ರೊಮೇನಿಯಾ ಗಡಿಗೆ ಸುಮಾರು 600 ಕಿ.ಮೀ ದೂರ ಇದೆ. ರಸ್ತೆ ಮಾರ್ಗವಾಗಿ ಕೀವ್‍ನಿಂದ ರೊಮೇನಿಯಾ ಗಡಿ ತಲುಪಲು 8 ರಿಂದ 11 ಗಂಟೆ ತಗುಲಬಹುದು. ಉಕ್ರೇನ್-ರೊಮೇನಿಯಾ ಗಡಿಯಿಂದ ಬುಕಾರೆಸ್ಟ್ 500 ಕಿ.ಮೀ ಅಂತರದಲ್ಲಿದೆ. ಇದರ ಪ್ರಯಾಣಕ್ಕೆ ಸುಮಾರು 7 ರಿಂದ 9 ಗಂಟೆ ತಗುಲಬಹುದು. ಇದನ್ನೂ ಓದಿ: Russia-Ukraine War: ಉಕ್ರೇನ್ ಯೂನಿಫಾರ್ಮ್ ಧರಿಸಿ ರಷ್ಯಾ ಸೈನಿಕರ ಎಂಟ್ರಿ – ಸಿಕ್ಕ ಸಿಕ್ಕಲ್ಲಿ ರಕ್ತಪಾತ

    ಈಗಾಗಲೇ ಉಕ್ರೇನ್‍ನಲ್ಲಿ ರಷ್ಯಾ ಬಾಂಬುಗಳ ಸುರಿಮಳೆ ಹರಿಸಿದ್ದು, ನೂರಾರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವು ದೇಶಗಳು ರಷ್ಯಾಗೆ ಯುದ್ಧ ನಿಲ್ಲಿಸುವಂತೆ ಮನವಿ ಮಾಡಿದ್ದರೂ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ.

  • ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ನಾವು ಮಾತುಕತೆಗೆ ಸಿದ್ಧರಿದ್ದೇವೆ ಎಂದ ರಷ್ಯಾ!

    ವಾಷಿಂಗ್ಟನ್: ನಾವು ಉಕ್ರೇನ್ ಜೊತೆ ಮಾತುಕತೆಗೆ ಸಿದ್ಧರಾಗಿದ್ದೇವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ತಿಳಿಸಿದ್ದಾರೆ.

    ಉಕ್ರೇನ್ ಸೇನೆಯು ದಾಳಿಯನ್ನು ನಿಲ್ಲಿಸಿದ ನಂತರ, ನಾವು ಅವರ ಜೊತೆ ಮಾತುಕತೆಗೆ ಸಿದ್ಧರಿದ್ದೇವೆ. ಈ ವೇಳೆ ಪುಟಿನ್ ಅವರು ಸಶಸ್ತ್ರೀಕರಣದ ಕುರಿತು ಮಾತುಕತೆ ನಡೆಸಲು ಸಿದ್ಧರಾಗಿದ್ದಾರೆ ಎಂದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಹೇಳಿದ್ದಾರೆ. ಇದನ್ನೂ ಓದಿ:  ರಷ್ಯಾ ವಿರುದ್ಧ ವಿಶ್ವದ ಟೆಕ್ಕಿಗಳಿಂದ `ಸೈಬರ್ ವಾರ್’ ಘೋಷಣೆ!

    ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಹಿನ್ನೆಲೆ, ಖಾರ್ಕಿವ್ ಸಿಟಿಯಲ್ಲಿ ಮತ್ತೆ ಬಾಂಬ್ ಬ್ಲಾಸ್ಟ್ ಆರಂಭವಾಗಿದೆ. ಈ ಹಿನ್ನೆಲೆ ಸೈರನ್ ಹಾಕಿ ಜನರನ್ನ ಅಂಡರ್ ಗ್ರೌಂಡ್ ಹೋಗುವಂತೆ ಮಾಹಿತಿ ನೀಡಲಾಗಿದೆ. ಹೀಗಾಗಿ ಜನರು ಸೈರನ್ ಸೌಂಡ್ ಕೇಳಿ ಮತ್ತೆ ಅಂಡರ್ ಗ್ರೌಂಡ್ ಗೆ ವಾಪಸ್ ಆಗಿದ್ದಾರೆ.

    ಉಕ್ರೇನ್ ನ ಕೈವ್ ಭಾಗದಲ್ಲಿ ರಷ್ಯಾ ದಾಳಿ ಮುಂದುವರಿದಿದ್ದು, ಕಳೆದ 40 ನಿಮಿಷಗಳಲ್ಲಿ ಕೈವ್‍ನಲ್ಲಿ ಅತಿ ಹೆಚ್ಚಿನ ದಾಳಿ ನಡೆಯುದೆ. 40 ನಿಮಿಷ ಅಂತರದಲ್ಲಿ ಮೂರು ಡಜನ್ಗೂ ಅಧಿಕ ಕ್ಷಿಪಣಿಗಳನ್ನು ಹಾರಿಸಲಾಗಿದೆ. ಈ ಬಗ್ಗೆ ಯುಎಸ್ ಸೆನೆಟರ್ ರೂಬಿಯೊರಿಂದ ಮಾಹಿತಿ ಸಿಕ್ಕಿದೆ.

    ಇಂದು ರೊಮೇನಿಯಾದ ಬುಕಾರೆಸ್ಟ್ ಗೆ ಎರಡು ವಿಮಾನಗಳು, ನಾಳೆ ಹಂಗೇರಿಯ ಬುಡಾಪೆಸ್ಟ್ ಗೆ ಒಂದು ವಿಮಾನ ಕಳುಹಿಸಲು ನಿರ್ಧಾರ ಮಾಡಲಾಗಿದೆ. ಭಾರತ ಸರ್ಕಾರ ಕೂಡ ವಿಶೇಷ ವಿಮಾನಗಳನ್ನು ಕಳುಹಿಸಲಿದೆ ಇದನ್ನೂ ಓದಿ:  ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!